Prajwal Devaraj: ಮೊದಲ ಬಾರಿಗೆ ಹಾರರ್ ಸಿನಿಮಾದಲ್ಲಿ ಡೈನಾಮಿಕ್‌ ಪ್ರಿನ್ಸ್ `ಪ್ರಜ್ವಲ್ ದೇವರಾಜ್` - Vistara News

ಸ್ಯಾಂಡಲ್ ವುಡ್

Prajwal Devaraj: ಮೊದಲ ಬಾರಿಗೆ ಹಾರರ್ ಸಿನಿಮಾದಲ್ಲಿ ಡೈನಾಮಿಕ್‌ ಪ್ರಿನ್ಸ್ `ಪ್ರಜ್ವಲ್ ದೇವರಾಜ್`

Prajwal Devaraj: ರಾಕ್ಷಸʼ ಸಿನಿಮಾ ಮೂಲಕ ಪ್ರಜ್ವಲ್ ಹಾಗೂ ಲೋಹಿತ್ ಹೊಸ ದಾಖಲೆ ಬರೆಯಲು ಸಿದ್ದರಾಗಿದ್ದಾರೆ. ಹೌದು ಇದೇ ಮೊದಲ ಬಾರಿಗೆ ವರ್ಲ್ಡ್ ಸಿನಿಮಾದಲ್ಲಿ ಹಾರಾರ್ ಟೈಂಲೂಪ್ ವರ್ಷನ್ ಟ್ರೈ ಮಾಡಿದ್ದಾರೆ ನಿರ್ದೇಶಕ ಲೋಹಿತ್.
ಇನ್ನು ಶಾನ್ವಿ ಎಂಟರ್ಪ್ರೈಸಸ್ ಅಡಿಯಲ್ಲಿ ಪ್ರದೀಪ್ ಮಹೀಶಿ ಪ್ರಸೆಂಟ್ಸ್ ನಲ್ಲಿ ದೀಪು ಬಿ ಎಸ್ ಮತ್ತು ನವೀನ್ ಗೌಡ ಹಾಗೂ ಮಾನಸ ಜಂಟಿಯಾಗಿ ರಾಕ್ಷಸ ಸಿನಿಮಾ ನಿರ್ಮಾಣ ಮಾಡಿದ್ದಾರೆ.

VISTARANEWS.COM


on

Prajwal Devaraj New Movie Rakshasa
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ನಟ ಪ್ರಜ್ವಲ್ ದೇವರಾಜ್ ವಿಭಿನ್ನ ರೀತಿಯ ಸಿನಿಮಾಗಳನ್ನ ಆಯ್ಕೆ ಮಾಡಿಕೊಳ್ಳುವದರಲ್ಲಿ ಮುಂದಿದ್ದಾರೆ. ಇದೇ ಮೊದಲ ಬಾರಿಗೆ ಪ್ರಜ್ವಲ್ ದೇವರಾಜ್ ಹಾರಾರ್ ಸಿನಿಮಾದಲ್ಲಿ ಕಾಣಿಸಿಕೊಳುತ್ತಿದ್ದಾರೆ. ಹಾರರ್ ಸಿನಿಮಾ ಮೂಲಕವೇ ಪ್ರಖ್ಯಾತಿ ಗಳಿಸಿರುವ ನಿರ್ದೇಶಕ ಲೋಹಿತ್ ಈ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ.

ʻರಾಕ್ಷಸʼ ಸಿನಿಮಾ ಮೂಲಕ ಪ್ರಜ್ವಲ್ ಹಾಗೂ ಲೋಹಿತ್ ಹೊಸ ದಾಖಲೆ ಬರೆಯಲು ಸಿದ್ದರಾಗಿದ್ದಾರೆ. ಹೌದು ಇದೇ ಮೊದಲ ಬಾರಿಗೆ ವರ್ಲ್ಡ್ ಸಿನಿಮಾದಲ್ಲಿ ಹಾರಾರ್ ಟೈಂಲೂಪ್ ವರ್ಷನ್ ಟ್ರೈ ಮಾಡಿದ್ದಾರೆ ನಿರ್ದೇಶಕ ಲೋಹಿತ್.
ಇನ್ನು ಶಾನ್ವಿ ಎಂಟರ್ಪ್ರೈಸಸ್ ಅಡಿಯಲ್ಲಿ ಪ್ರದೀಪ್ ಮಹೀಶಿ ಪ್ರಸೆಂಟ್ಸ್ ನಲ್ಲಿ ದೀಪು ಬಿ ಎಸ್ ಮತ್ತು ನವೀನ್ ಗೌಡ ಹಾಗೂ ಮಾನಸ ಜಂಟಿಯಾಗಿ ರಾಕ್ಷಸ ಸಿನಿಮಾ ನಿರ್ಮಾಣ ಮಾಡಿದ್ದಾರೆ.

ನೋಬಿನ್ ಪೌಲ್ ಸಂಗೀತ ನಿರ್ದೇಶನ ಜೇಬಿನ್ ಪಿ ಜೋಕಬ್ ಕ್ಯಾಮೆರಾ ವರ್ಕ್ ಸಿನಿಮಾಗಿದೆ. ಸುಮಾರು 55 ದಿನಗಳ ಕಾಲ ರಾಕ್ಷಸ ಸಿನಿಮಾ ಚಿತ್ರೀಕರಣ ಮಾಡಲಾಗಿದ್ದು ಸಂಪೂರ್ಣ ಸಿನಿಮಾ ಚಿತ್ರೀಕರಣ ರಾಮೋಜಿ ರಾವ್ ಫಿಲ್ಮಂ ಸಿಟಿಯಲ್ಲಿ ಮಾಡಿರೋದು ವಿಶೇಷ.

ಇದನ್ನೂ ಓದಿ: Prajwal Devaraj: ಪ್ರಜ್ವಲ್ ದೇವರಾಜ್‌ ಬರ್ತ್‌ಡೇ; ‘ಕರಾವಳಿ’ಯಿಂದ ಸಿಕ್ತು ಭರ್ಜರಿ ಗಿಫ್ಟ್!

ಪ್ರಜ್ವಲ್ ಜೊತೆಯಾಗಿ ಅರುಣ್ ರಾಥೋಡ್, ಶ್ರೀಧರ್,ಗೌತಮ್, ಸೋಮಶೇಖರ್, ವಿಹಾನ್ ಕೃಷ್ಣ ಜಯಂತ್ ಇನ್ನು ಅನೇಕರು ಅಭಿನಯಿಸಿದ್ದಾರೆ. ಸದ್ಯ ಚಿತ್ರೀಕರಣ ಮುಗಿಸಿ ತೆರೆಗೆ ಬರಲು ಸಿದ್ದವಾಗಿರೋ ರಾಕ್ಷಸ ಸಿನಿಮಾ.

ಪ್ರಜ್ವಲ್ ಹುಟ್ಟುಹಬ್ಬದ ವಿಶೇಷವಾಗಿ ಫಸ್ಟ್ ಲುಕ್ ಬಿಡುಗಡೆ ಮಾಡುವ ಮೂಲಕ ಸಿನಿಮಾತಂಡ ಚಿತ್ರದ ಪ್ರಚಾರದ ಕೆಲಸ ಶುರು ಮಾಡಿದೆ..ಇಷ್ಟು ದಿನಗಳ ಕಾಲ ಕಮರ್ಷಿಯಲ್ ಚಿತ್ರಗಲ್ಲಿ ಕಾಣಿಸಿಕೊಳ್ತಿದ್ದ ಪ್ರಜ್ವಲ್ ಇದೇ ಮೊದಲ ಬಾರಿಗೆ ವಿಭಿನ್ನವಾಗಿ ಹಾರಾರ್ ಲುಕ್ ನಲ್ಲಿ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Tharun Sudhir: ಮದುವೆ ಬಗ್ಗೆ ಬಿಗ್‌ ಅಪ್‌ಡೇಟ್‌ ಕೊಟ್ಟ ತರುಣ್ ಸುಧೀರ್; ಹುಡುಗಿ ಹೇಗಿರಬೇಕು ಅಂದ್ರೆ….

Tharun Sudhir: ಮದುವೆ ಬಗ್ಗೆ ತರುಣ್ ಸುಧೀರ್ ತಾಯಿ ಮಾಲತಿ ಸುಧೀರ್ ಈ ಹಿಂದೆ ಮಾತನಾಡಿ ʻʻಮದುವೆಯಾಗತ್ತೆ. ಡೇಟ್‌ ಎಲ್ಲ ಫಿಕ್ಸ್‌ ಆಗಿಲ್ಲ. ಸೋನಲ್‌ ರಿಲೇಶನ್‌ ಎಲ್ಲ ದುಬೈನಲ್ಲಿ ಇದ್ದಾರೆ. ಅವರು ಎಲ್ಲ ಬರಬೇಕು. ಮಾತನಾಡಬೇಕು. ಎಲ್ಲ ಆದ ಮೇಲೆನೆ ಫೈನಲ್‌ ಆಗೋದು. ನಮ್ಮ ಮನೆಗೆ ಯಾರು ಬಂದರು ಸಂತೋಷ್.‌ ಮೊದಲಿಂದಲೂ ನನ್ನ ಮಗನಿಗೆ ಮದುವೆ ಆಗಬೇಕು ಎಂದಿತ್ತು.

VISTARANEWS.COM


on

Tharun Sudhir Bigg update marriage
Koo

ಬೆಂಗಳೂರು: ನಟಿ ಸೋನಾಲ್ ಮಂಥೆರೊ (sonal monteiro) ಹಾಗೂ ನಿರ್ದೇಶಕ ತರುಣ್ ಸುಧೀರ್ (Tharun Sudhir) ಮದುವೆಯಾಗಲಿದ್ದಾರೆ ಎಂದು ಬಹಳ ದಿನಗಳಿಂದ ಸುದ್ದಿ ಆಗುತ್ತಲೇ ಇದೆ. ಈ ಮುಂಚೆ ತರುಣ್‌ ಸುಧೀರ್‌ ಅವರ ತಾಯಿ ಮದುವೆಯ ದಿನಾಂಕ ಇನ್ನೂ ನಿಗದಿಯಾಗಿಲ್ಲ ಎಂದಿದ್ದಾರೆ. ಈಗ ಆಷಾಢ ಬಂತು. ಮಾತಾಡಲು ಆಗಲ್ಲ. ಆಷಾಢ ಮುಗಿದ್ಮೇಲೆ ಮಾತುಕತೆ ಮಾಡಬೇಕು ಅಂದಿದ್ದರು. ಇದೀಗ ಮದುವೆ ಬಗ್ಗೆ ತರುಣ್‌ ಅವರು ಮೌನ ಮುರಿದಿದ್ದಾರೆ. ʻನನಗೆ ಮದುವೆ ಆಗಬಾರದು ಅಂತೇನೂ ಇಲ್ಲ. ಇದರ ಕುರಿತು ಡಿಸಿಷನ್ ನಾನು ಮಾಡಿಲ್ಲʼʼಎಂದು ಕಾರ್ಯಕ್ರಮದಲ್ಲಿ ಹೇಳಿಕೊಂಡಿದ್ದಾರೆ.

ಈ ಬಗ್ಗೆ ಮಾಧ್ಯಮವೊಂದು ವರದಿ ಮಾಡಿ ʻʻಇಷ್ಟ ಪಟ್ಟ ಹುಡುಗಿ ಸಿಕ್ಕರೆ ಖಂಡಿತ ಮದುವೆ ಆಗುವೆ. ನನಗೆ ಮದುವೆ ಅಗಬಾರದು ಅಂತ ಏನಿಲ್ಲ. ಮೊದಲು ನನ್ನ ಕೆಲಸವನ್ನು ಗೌರವಿಸಬೇಕು. ಇನ್ನೊಂದು ನನಗೆ ಅಮ್ಮನೇ ಎಲ್ಲ. ಆದ್ದರಿಂದ ಅವರನ್ನು ಚೆನ್ನಾಗಿ ನೋಡಿಕೊಳ್ಳಬೇಕು. ಇಷ್ಟು ಇದ್ದರೆ ಸಾಕು. ಅಂಥ ಹುಡುಗಿಯನ್ನು ನಾನು ಮದುವೆಯಾಗುತ್ತೇನೆ. ಬೇಕಿದ್ದರೆ ನಾಲ್ಕು ಗೋಡೆಗಳ ನಡುವೆ ಕಾಲು ಹಿಡಿದುಕೊಳ್ಳಲೂ ರೆಡಿ ಎಂದು ತಮಾಷೆ ಮಾಡಿದ್ದಾರೆʼʼ ತರುಣ್ ಸುಧೀರ್. ಆದರೆ ಎಲ್ಲೂ ಸೋನಾಲ್ ಹೆಸರು ಬಳಸದೇ ಮಾತನಾಡಿದ್ದಾರೆ.

ಮದುವೆ ಬಗ್ಗೆ ತರುಣ್ ಸುಧೀರ್ ತಾಯಿ ಮಾಲತಿ ಸುಧೀರ್ ಈ ಹಿಂದೆ ಮಾತನಾಡಿ ʻʻಮದುವೆಯಾಗತ್ತೆ. ಡೇಟ್‌ ಎಲ್ಲ ಫಿಕ್ಸ್‌ ಆಗಿಲ್ಲ. ಸೋನಲ್‌ ರಿಲೇಶನ್‌ ಎಲ್ಲ ದುಬೈನಲ್ಲಿ ಇದ್ದಾರೆ. ಅವರು ಎಲ್ಲ ಬರಬೇಕು. ಮಾತನಾಡಬೇಕು. ಎಲ್ಲ ಆದ ಮೇಲೆನೆ ಫೈನಲ್‌ ಆಗೋದು. ನಮ್ಮ ಮನೆಗೆ ಯಾರು ಬಂದರು ಸಂತೋಷ್.‌ ಮೊದಲಿಂದಲೂ ನನ್ನ ಮಗನಿಗೆ ಮದುವೆ ಆಗಬೇಕು ಎಂದಿತ್ತು. ಇನ್ನೂ ನಾನಿರುವಾಗಲೇ ಮಗನಿಗೆ ಮದುವೆ ಮಾಡಬೇಕು ಅನ್ನುವುದು ನನ್ನ ಆಸೆಯಾಗಿತ್ತು ಎಂದಿರುವ ಮಾಲತಿ ಸುಧೀರ್‌, ಆಗಸ್ಟ್‌ನಲ್ಲಿ ಮದುವೆ ಅನ್ನೋದು ಸುಳ್ಳು. ಡೇಟ್ ಇನ್ನೂ ಫಿಕ್ಸ್ ಆಗಿಲ್ಲ. ಇನ್ನೂ ಕನ್‌ಫರ್ಮ್ ಆಗಿಲ್ಲ ಎಂದು ಹೇಳಿದ್ದರು.

ಇದನ್ನೂ ಓದಿ: Tharun Sudhir: ಸೋನಾಲ್-ತರುಣ್ ಮದುವೆ ಯಾವಾಗ? ಭಾವಿ ಸೊಸೆ ಬಗ್ಗೆ ಡೈರೆಕ್ಟರ್ ಅಮ್ಮ ಏನಂದ್ರು?

ರಾಬರ್ಟ್’ ಚಿತ್ರದಲ್ಲಿ ಸೋನಲ್ ಕಾಣಿಸಿಕೊಂಡಿದ್ದರು. ಈ ಸಿನಿಮಾ ಶೂಟಿಂಗ್ ಸಮಯದಲ್ಲೇ ತರುಣ್- ಸೋನಲ್ ನಡುವೆ ಪ್ರೀತಿ ಹುಟ್ಟಿತ್ತು ಎಂದು ಹೇಳಲಾಗುತ್ತಿದೆ. ಇನ್ನು ದರ್ಶನ್‌ ಕೂಡ ಆಗಾಗ ತರುಣ್‌ಗೆ ಮದುವೆ ಮಾಡಿಸಬೇಕು ಎನ್ನುತ್ತಿದ್ದರಂತೆ. ಹಾಗಾಗಿ ಶೂಟಿಂಗ್‌ ಸೆಟ್‌ನಲ್ಲಿ ತರುಣ್- ಸೋನಲ್ ಇಬ್ಬರನ್ನು ತಮಾಷೆಯಾಗಿ ರೇಗಿಸುತ್ತಿದ್ದರು, ಇದೇ ಸಮಯದಲ್ಲಿ ಇಬ್ಬರ ನಡುವೆ ಪ್ರೀತಿ ಮೂಡಿರಬಹುದು ಎನ್ನಲಾಗಿದೆ.

ತರುಣ್ ನಿರ್ದೇಶನದ ‘ರಾಬರ್ಟ್’ ಚಿತ್ರದಲ್ಲಿ ರಾಘವ ವಿನೋದ್ ಪ್ರಭಾಕರ್ ಜೋಡಿ ತನು ಆಗಿ ಸೋನಲ್ ಮಿಂಚಿದ್ದರು. ಮಂಗಳೂರಿನಲ್ಲಿ ಹುಟ್ಟಿ ಬೆಳೆದ ಸೋನಲ್ ಮೊದಲಿಗೆ ತುಳು ಸಿನಿಮಾಗಳಲ್ಲಿ ನಟಿಸಿದ್ದರು. ‘ಅಭಿಸಾರಿಕೆ’ ಸಿನಿಮಾ ಮೂಲಕ ಸ್ಯಾಂಡಲ್‌ವುಡ್ ಪ್ರವೇಶಿಸಿದರು. ಇದೀಗ ಈ ಜೋಡಿ ಸಪ್ತಪದಿ ತುಳಿಯಲಿದೆ ಎನ್ನಲಾಗಿದೆ. ತರುಣ್‌ ಹಾಗೂ ಸೋನಲ್‌ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.

ಚೌಕ’ ಚಿತ್ರದ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದ ತರುಣ್ ಮುಂದೆ ಒಂದರ ಹಿಂದೆಯಂತೆ ಎರಡು ಹಿಟ್ ಸಿನಿಮಾಗಳನ್ನು ಕೊಟ್ಟರು. ಇದೀಗ ತರುಣ್ 4ನೇ ಸಿನಿಮಾ ತಯಾರಿಯಲ್ಲಿದ್ದಾರೆ. ಖಳನಟ ಸುಧೀರ್ ಕಿರಿಯಪುತ್ರ ತರುಣ್ ಮದುವೆ ಬಗ್ಗೆ ಸಾಕಷ್ಟು ವದಂತಿಗಳು ಹಬ್ಬಿವೆ. ಈಗಾಗಲೇ ತರುಣ್‌ ಅವರ ಮದುವೆ ಫಿಕ್ಸ್‌ ಆಗಿದ್ದು, ಎರಡು ತಿಂಗಳಲ್ಲಿ ಮದುವೆ ಫಿಕ್ಸ್‌ ಎನ್ನುವ ವದಂತಿ ಹಬ್ಬಿದೆ.

ಮಂಗಳೂರಿನಲ್ಲಿ ಹುಟ್ಟಿ ಬೆಳೆದ ಸೋನಲ್ ಕಾಲೇಜು ದಿನಗಳಲ್ಲೇ ಮಾಡೆಲಿಂಗ್ ಆರಂಭಿಸಿದ್ದರು. ‘ಎಕ್ಕಾ ಸಕ್ಕಾ’ ಎನ್ನುವ ತುಳು ಚಿತ್ರದಲ್ಲಿ ಮೊದಲಿಗೆ ನಟಿಸಿದರು. ಬಳಿಕ ಮತ್ತೆರಡು ತುಳು ಸಿನಿಮಾ ಅವಕಾಶ ಸಿಕ್ಕಿತ್ತು. ನಂತರ ‘ಅಭಿಸಾರಿಕ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು.

‘ಎಂಎಲ್‌ಎ’, ‘ಮದುವೆ ದಿಬ್ಬಣ’, ‘ಪಂಚತಂತ್ರ’, ‘ಡೆಮೊ ಪೀಸ್’ ಹೀಗೆ ಸಾಲು ಸಾಲು ಸಿನಿಮಾಗಳಲ್ಲಿ ಸೋನಲ್ ಮಿಂಚಿದರು.ರಾಬರ್ಟ್’ ಬಳಿಕ ‘ಶಂಭೋ ಶಿವ ಶಂಕರ’, ‘ಗರಡಿ’, ‘ಶುಗರ್ ಫ್ಯಾಕ್ಟರಿ’ ಸಿನಿಮಾಗಳಲ್ಲಿ ಸೋನಲ್ ನಟಿಸಿದ್ದಾರೆ. ‘ಬುದ್ಧಿವಂತ-2’ ಹಾಗೂ ‘ಮಾರ್ಗರೆಟ್ ಲವರ್ ಆಫ್ ರಾಮಾಚಾರಿ’ ಸಿನಿಮಾಗಳಲ್ಲಿ ನಟಿಸಿದ್ದು ಇನ್ನಷ್ಟೇ ಈ ಸಿನಿಮಾಗಳು ತೆರೆಗೆ ಬರಬೇಕಿದೆ.

Continue Reading

ಸಿನಿಮಾ

Rishab Shetty: ನನ್ನ ಜೀವನದ ಆಧಾರಸ್ತಂಭ ಎಂದು ರಿಷಬ್ ಶೆಟ್ಟಿ ಹುಟ್ಟುಹಬ್ಬಕ್ಕೆ ಪತ್ನಿ ಕ್ಯೂಟ್‌ ವಿಶ್

Rishab Shetty: ರಿಕ್ಕಿ ಸಿನಿಮಾ ಮಾಡಿ ಗುರುತಿಸಿಕೊಂಡಿದ್ದರೂ ಖ್ಯಾತಿ ಗಳಿಸಲು ಅವರಿಗೆ ಸಾಧ್ಯವಾಗಿರಲಿಲ್ಲ. ʻಉಳಿದವರು ಕಂಡಂತೆʼ ಸಿನಿಮಾ ಮೂಲಕ ಅವರು ಹೆಚ್ಚು ಮಂದಿಗೆ ಪರಿಚಿತರಾದರು. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಿನಿಮಾ ಮೂಲಕ ಅವರು ಸಿನಿಮಾ ಕ್ಷೇತ್ರದಲ್ಲಿ ಹೆಸರು ಮಾಡಿದರು. ʻಬೆಲ್​ಬಾಟಂʼ ಸಿನಿಮಾದ ಮೂಲಕ ನಟನೆಗೂ ಸೈ ಎನಿಸಿಕೊಂಡರು.

VISTARANEWS.COM


on

Rishab Shetty Birthday pragati shetty cute wish
Koo

ಬೆಂಗಳೂರು: ಇಂದು (ಜುಲೈ 7)ರಂದು ರಿಷಬ್‌ ಶೆಟ್ಟಿ (Rishab Shetty) ಅವರ ಜನುಮದಿನ. 41ನೇ ವಸಂತಕ್ಕೆ ರಿಷಬ್‌ ಕಾಲಿಟ್ಟಿದ್ದಾರೆ. ಈ ದಿನದಂದು ಪತ್ನಿ ಪ್ರಗತಿ ಶೆಟ್ಟಿ ಅವರು ʻನನ್ನ ಜೀವನದ ಆಧಾರಸ್ತಂಭʼ ಎಂದು ಶುಭಕೋರಿದ್ದಾರೆ. ರಿಷಬ್‌ಗೆ ಫ್ಯಾನ್ಸ್‌ ಶುಭಕೋರುತ್ತಿದ್ದಾರೆ.

ಪ್ರಗತಿ ಶೆಟ್ಟಿ ಪೋಸ್ಟ್‌ ಮಾಡಿ ʻʻನನ್ನ ಜೀವನದ ಆಧಾರಸ್ತಂಭಕ್ಕೆ ಜನ್ಮದಿನದ ಶುಭಾಶಯಗಳು. ನೀವು ಎಂತಹ ಅದ್ಭುತ ವ್ಯಕ್ತಿ ಎಂದು ನಾನು ಜೋರಾಗಿ ಜಗತ್ತಿಗೆ ಹೇಳಲು ಬಯಸುತ್ತೇನೆ. ನಿಮ್ಮನ್ನು ನಿಜವಾಗಿಯೂ ತಿಳಿದಿರುವವರು ಅದೃಷ್ಟವಂತರು.ನಿಮ್ಮ ಶಕ್ತಿ, ಬುದ್ಧಿವಂತಿಕೆ ಮತ್ತು ಪ್ರೀತಿ ಪ್ರತಿದಿನ ನಮಗೆಲ್ಲರಿಗೂ ಸ್ಫೂರ್ತಿ ನೀಡುತ್ತದೆ. ನಾವು ಒಟ್ಟಿಗೆ ಇರುವುದಕ್ಕಾಗಿ ನಾನು ಪ್ರತಿದಿನ ದೇವರಿಗೆ ಕೃತಜ್ಞನಾಗಿದ್ದೇನೆ. ನಿಮಗೆ ಸಂತೋಷ, ಯಶಸ್ಸು ಮತ್ತು ಪ್ರಪಂಚದ ಎಲ್ಲಾ ಸಂತೋಷದಿಂದ ತುಂಬಿದ ವರ್ಷವಾಗಲಿ. ಹುಟ್ಟು ಹಬ್ಬದ ಹಾರ್ದಿಕ ಶುಭಶಯಗಳು” ಎಂದು ಬರೆದುಕೊಂಡಿದ್ದಾರೆ.

ಸಣ್ಣ ಪುಟ್ಟ ಪಾತ್ರಗಳನ್ನು ಮಾಡುತ್ತ ಚಿತ್ರರಂಗದಲ್ಲಿ ಅವಕಾಶಕ್ಕಾಗಿ ಕಾಯುತ್ತಿದ್ದರು. ನಟನೆಯ ಜತೆ ಡೈರೆಕ್ಷನ್ ಕೂಡ ಆಸಕ್ತಿಯಿದ್ದ ಕಾರಣ, 2016ರಲ್ಲಿ ಅವರು ‘ರಿಕ್ಕಿ’ ಸಿನಿಮಾ ನಿರ್ದೇಶನ ಮಾಡಿದರು. ಅದೇ ವರ್ಷ ರಿಲೀಸ್ ಆದ ರಿಷಬ್ ನಿರ್ದೇಶನದ ‘ಕಿರಿಕ್ ಪಾರ್ಟಿ’ ಸಿನಿಮಾ ಸೂಪರ್ ಹಿಟ್ ಆಯಿತು.

ಕುಂದಾರಪುರದ ಕೆರಾಡಿ ಗ್ರಾಮದಲ್ಲಿ 1983ರಲ್ಲಿ ರಿಷಬ್​ ಶೆಟ್ಟಿ ಜನಿಸಿದ್ದಾರೆ. ಬಾಲ್ಯದಿಂದಲೇ ಸಿನಿಮಾ ಆಸಕ್ತಿ ಬೆಳೆಸಿಕೊಂಡಿದ್ದ ಅವರು ಕನ್ನಡದ ಸಿನಿಮಾ ದಿಗ್ಗಜರ ಚಲನಚಿತ್ರಗಳನ್ನು ನೋಡಿದ್ದರು. ಸಿನಿಮಾಕ್ಕಾಗಿಯೇ ಬೆಂಗಳೂರಿಗೆ ಬಂದಿದ್ದ ಅವರು ತಮ್ಮ ಸಾಧನೆಗಾಗಿ ನಾನಾ ಕೆಲಸಗಳನ್ನು ಮಾಡಿದ್ದರು. ಆರಂಭದಲ್ಲಿ ಸಾಕಷ್ಟು ನಿರಾಸೆ ಎದುರಿಸಿದ್ದ ಅವರು ಸಣ್ಣ ಪುಟ್ಟ ಪಾತ್ರಗಳಿಗೆ ತೃಪ್ತಿಪಡಬೇಕಾಗಿತ್ತು. ರಿಕ್ಕಿ ಸಿನಿಮಾ ಮಾಡಿ ಗುರುತಿಸಿಕೊಂಡಿದ್ದರೂ ಖ್ಯಾತಿ ಗಳಿಸಲು ಅವರಿಗೆ ಸಾಧ್ಯವಾಗಿರಲಿಲ್ಲ. ʻಉಳಿದವರು ಕಂಡಂತೆʼ ಸಿನಿಮಾ ಮೂಲಕ ಅವರು ಹೆಚ್ಚು ಮಂದಿಗೆ ಪರಿಚಿತರಾದರು. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಿನಿಮಾ ಮೂಲಕ ಅವರು ಸಿನಿಮಾ ಕ್ಷೇತ್ರದಲ್ಲಿ ಹೆಸರು ಮಾಡಿದರು. ʻಬೆಲ್​ಬಾಟಂʼ ಸಿನಿಮಾದ ಮೂಲಕ ನಟನೆಗೂ ಸೈ ಎನಿಸಿಕೊಂಡರು.

ಇದನ್ನೂ ಓದಿ: Rishab Shetty: ಕುಂದಾಪುರಕ್ಕೆ ಆಗಮಿಸಿದ ʼಕಲ್ಕಿʼಯ ಬುಜ್ಜಿ; ಪ್ರಭಾಸ್‌ ಕಾರು ರೈಡ್‌ ಮಾಡಿದ ರಿಷಬ್‌ ಶೆಟ್ಟಿ ಹೇಳಿದ್ದೇನು?

ಬದುಕು ಬದಲಿಸಿದ ಕಾಂತಾರ

ತಾವು ಹುಟ್ಟಿದ ಮಣ್ಣಿನ ಕತೆಯೊಂದನ್ನು ಹುಡುಕಿ ತೆಗೆದು ಕಾಂತಾರ ಸಿನಿಮಾ ಮಾಡಿದ ಬಳಿಕ ಅವರ ಪೂರ್ಣ ಸಾಮರ್ಥ್ಯ ಜಗತ್ತಿಗೆ ಪರಿಚಯವಾಯಿತು. ಸಿನಿಮಾ ಬ್ಲಾಕ್​ಬಸ್ಟರ್​ ಹಿಟ್​ ಆಗುವ ಮೂಲಕ ರಿಷಬ್​ ಶೆಟ್ಟಿ ಎಂಬ ಕೆರಾಡಿ ಪ್ರತಿಭೆ ಜಗದ್ವಿಖ್ಯಾತಿ ಪಡೆಯಿತು. ಬಳಿಕ ಡಿವೈನ್​ ಸ್ಟಾರ್​ ಎಂಬ ಹೆಸರಿನಿಂದ ಕರೆಸಿಕೊಳ್ಳುತ್ತಿರುವ ಅವರು ಕಾಂತಾರ ಮೂಲಕ ಲಕ್ಷಾಂತರ ಅಭಿಮಾನಿಗಳನ್ನು ಗಿಟ್ಟಿಸಿಕೊಂಡಿದ್ದಾರೆ. ಅವರೀಗ ಎಲ್ಲೇ ಹೋದರೂ ಅಭಿಮಾನಿಗಳು ಅವರನ್ನು ಸುತ್ತುವರಿಯುತ್ತಾರೆ.

Continue Reading

ಸಿನಿಮಾ

Kannada New Movie: ಶಿವಣ್ಣನ ಪುತ್ರಿ ಜತೆ ಕೈ ಜೋಡಿಸಿದ ಅಚ್ಯುತ್ ಕುಮಾರ್!

Kannada New Movie: ಅಚ್ಯುತ್ ಕುಮಾರ್ ಇಲ್ಲಿ ನಾಯಕನ ತಂದೆ ಪಾತ್ರ ನಿಭಾಯಿಸಲಿದ್ದಾರೆ. ಅವರಿಗೆ ಜೋಡಿಯಾಗಿ ಸುಧಾರಾಣಿ ಸಾಥ್ ಕೊಡುತ್ತಿದ್ದಾರೆ.‌ಫೈರ್ ಫ್ಲೈ’ ಸಿನಿಮಾದಲ್ಲಿ ವಂಶಿ ಅವರು ಹೀರೋ ಆಗಿ ಅಭಿನಯಿಸುತ್ತಿದ್ದಾರೆ. ಅಲ್ಲದೇ, ಅವರೇ ನಿರ್ದೇಶನ ಕೂಡ ಮಾಡುತ್ತಿದ್ದಾರೆ. ‘ಹ್ಯಾಟ್ರಿಕ್​ ಹೀರೋ’ ಶಿವರಾಜ್​ಕುಮಾರ್​ ಅವರ ಪುತ್ರಿ ನಿವೇದಿತಾ ಅವರು ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರದ ಮೂಲಕ ವಂಶಿ ಅವರು ಸ್ವತಂತ್ರ ನಿರ್ದೇಶಕರಾಗಿ ಹಾಗೂ ಪೂರ್ಣಪ್ರಮಾಣದ ಹೀರೋ ಆಗಿ ಪ್ರೇಕ್ಷಕರರ ಮುಂದೆ ಬರಲಿದ್ದಾರೆ.

VISTARANEWS.COM


on

Kannada New Movie Firefly movie entry by achyuth kumar
Koo

ಬೆಂಗಳೂರು: ʻಫೈರ್ ಫ್ಲೈʼ ಸಿನಿಮಾ ತಾರಾಬಳಗದ ಮೂಲಕವೇ ಸದ್ದು ಸುದ್ದಿಯಾಗುತ್ತಿದೆ. ಕಳೆದ ವಾರವಷ್ಟೇ ಸುಧಾರಾಣಿ ಚಿತ್ರತಂಡ ಸೇರಿಕೊಂಡಿದ್ದರು. ಇದೀಗ ಹಿರಿಯ ನಟ ಅಚ್ಯುತ್ ಕುಮಾರ್ ಫೈರ್ ಫ್ಲೈನಲ್ಲಿ ಅಭಿನಯಿಸುತ್ತಿರುವ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಅಚ್ಯುತ್ ಕುಮಾರ್ ಇಲ್ಲಿ ನಾಯಕನ ತಂದೆ ಪಾತ್ರ ನಿಭಾಯಿಸಲಿದ್ದಾರೆ. ಅವರಿಗೆ ಜೋಡಿಯಾಗಿ ಸುಧಾರಾಣಿ ಸಾಥ್ ಕೊಡುತ್ತಿದ್ದಾರೆ.‌

ತಮ್ಮ ಪಾತ್ರದ ಬಗ್ಗೆ ಮಾತನಾಡಿದ ಅಚ್ಯುತ್ ಕುಮಾರ್, “ನಾನು ಹೀರೋ ತಂದೆಯ ಪಾತ್ರ ಮಾಡುತ್ತಿದ್ದೇನೆ. ಪಾತ್ರ ತುಂಬಾ ಇಂಟ್ರೆಸ್ಟಿಂಗ್ ಆಗಿದೆ. ಒಬ್ಬ ತಂದೆ ಮಗನ ಬಾಂಧವ್ಯ ಮತ್ತು ಅವರಿಬ್ಬರು ಫ್ರೆಂಡ್ಸ್ ಆಗಿದ್ರೆ ಹೇಗೆ ಮಜವಾಗಿರುತ್ತೆ ಅಂತ ಈ ಸಿನೆಮಾದಲ್ಲಿ ನೋಡಬಹುದು. ನನ್ನ ಕೋಸ್ಟಾರ್ ಆಗಿ ಸುಧಾರಾಣಿಯವರು ನಟಿಸುತ್ತಿದ್ದಾರೆ. ಮುಂಚೆ ನಾವು ಬೇರೆ ಸಿನೆಮಾಗಳಲ್ಲಿ ನಮ್ಮ ಜೋಡಿಯನ್ನು ನೋಡಿ ಜನ ಮೆಚ್ಚಿದ್ದರು. ಆದ್ರೆ ಈ ಸಿನೆಮಾದಲ್ಲಿ ನಮ್ಮಿಬ್ಬರ ಜೋಡಿ ಹಿಂದಿನ ಸಿನೆಮಾಗಳಿಗಿಂತ ವಿಭಿನ್ನವಾಗಿರುತ್ತದೆ. ಅದನ್ನು ನೀವು ಸ್ಕ್ರೀನ್ ಮೇಲೆ ನೋಡಬೇಕು. ಫೈರ್ ಫ್ಲೈ ತುಂಬಾ ಕಲರ್ ಫುಲ್ ಆಗಿ ಮೂಡಿ ಬಂದಿದೆ ಮತ್ತು ತುಂಬಾ ಮನರಂಜನೆಯಿಂದ ಕೂಡಿದೆ. ನೀವುಗಳು ಮಿಸ್ ಮಾಡದೆ ದೀಪಾವಳಿಗೆ ಈ ಚಿತ್ರವನ್ನು ಚಿತ್ರಮಂದಿರದಲ್ಲೇ ನೋಡಿ.
ನಮ್ಮ ಶಿವಣ್ಣನ ಮಗಳು ನಿವೇದಿತಾ ಸಿನೆಮಾ ಮಾಡುತ್ತಿರುವುದು ತುಂಬಾ ಖುಷಿಯಾಗುತ್ತಿದೆ. ಶ್ರೀಮುತ್ತು ಸಿನಿ ಸರ್ವಿಸ್ ನಡಿ ತುಂಬಾ ಪ್ರೊಪೆಷನಲ್ ಆಗಿ ಮುನ್ನೆಡೆಯುತ್ತಿರುವುದು ನೋಡಿದ್ರೆ ಇಂತಹದೊಂದು ನಿರ್ಮಾಣ ಸಂಸ್ಥೆ ಮತ್ತು ನಿರ್ಮಾಪಕಿ ನಮ್ಮ ಚಿತ್ರರಂಗಕ್ಕೆ ಬೇಕಿತ್ತು ಮತ್ತು ಹೊಸಬರಿಗೆ ಅವಕಾಶ ಕೊಡುತ್ತಿರುವುದರಿಂದ ಹೊಸ ತಲೆಮಾರಿನ ಫಿಲ್ಮಂಮೇಕರ್ ಗೆ ಅನುಕೂಲವಾಗುತ್ತದೆ. ಇವರು ಆಯ್ಕೆ ಮಾಡಿಕೊಂಡಿರುವ ಕಥೆ ಕುಟುಂಬ ಕೂತು ನೋಡಬಹುದು. ಮತ್ತೆ ಮತ್ತೆ ಈ ತರ ಹೊಸಬರಿಗೆ ಅವಕಾಶ ಕೊಟ್ಟಿ ನಮ್ಮ ಇಂಡಸ್ಟ್ರೀ ಮುಂದಿನ ಹೆಜ್ಜೆಗಳಿಗೆ ಇವರ ನಿರ್ಮಾಣ ಸಂಸ್ಥೆ ಮೆಟ್ಟಿಲುಗಳಾಗಲಿ ಎಂದು ಆಶಿಸುತ್ತೇನೆ” ಎಂದಿದ್ದಾರೆ.

ಇದನ್ನೂ ಓದಿ: Dolly Dhananjay: ಐತಿಹಾಸಿಕ ‘ಹಲಗಲಿ’ ಸಿನಿಮಾದಲ್ಲಿ ‘ಡಾಲಿ’ ಧನಂಜಯ ಹೀರೊ!

‘ಫೈರ್ ಫ್ಲೈ’ ಸಿನಿಮಾದಲ್ಲಿ ವಂಶಿ ಅವರು ಹೀರೋ ಆಗಿ ಅಭಿನಯಿಸುತ್ತಿದ್ದಾರೆ. ಅಲ್ಲದೇ, ಅವರೇ ನಿರ್ದೇಶನ ಕೂಡ ಮಾಡುತ್ತಿದ್ದಾರೆ. ‘ಹ್ಯಾಟ್ರಿಕ್​ ಹೀರೋ’ ಶಿವರಾಜ್​ಕುಮಾರ್​ ಅವರ ಪುತ್ರಿ ನಿವೇದಿತಾ ಅವರು ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರದ ಮೂಲಕ ವಂಶಿ ಅವರು ಸ್ವತಂತ್ರ ನಿರ್ದೇಶಕರಾಗಿ ಹಾಗೂ ಪೂರ್ಣಪ್ರಮಾಣದ ಹೀರೋ ಆಗಿ ಪ್ರೇಕ್ಷಕರರ ಮುಂದೆ ಬರಲಿದ್ದಾರೆ.

‘ಫೈರ್ ಫ್ಲೈ’ ಸಿನಿಮಾಗೆ ಪಾತ್ರವರ್ಗದ ಮೂಲಕ ಗಮನ ಸೆಳೆಯುತ್ತಿದೆ. ಇತ್ತೀಚೆಗೆ ನಟಿ ಶೀತಲ್ ಶೆಟ್ಟಿ, ನಟ ಮೂಗು ಸುರೇಶ್ , ಸುಧಾರಾಣಿ ಈ ಸಿನಿಮಾಗೆ ಸೇರ್ಪಡೆ ಆಗಿದ್ದರು. ಈಗ ಸುಧಾರಾಣಿ ಅಚ್ಯುತ್ ಕುಮಾರ್ ಎಂಟ್ರಿ ಕೊಟ್ಟಿದ್ದಾರೆ. ಜಯ್ ರಾಮ್ ಅವರು ಸಹ-ನಿರ್ದೇಶಕನ ಮಾಡುತ್ತಿದ್ದಾರೆ. ಅಭಿಲಾಷ್ ಕಳತ್ತಿ ಅವರ ಛಾಯಾಗ್ರಹಣ, ಚರಣ್ ರಾಜ್ ಅವರ ಸಂಗೀತ ನಿರ್ದೇಶನ, ರಘು ನಿಡುವಳ್ಳಿ ಅವರ ಸಂಭಾಷಣೆ ಈ ಸಿನಿಮಾಗಿದೆ. ಬೆಳಕಿನ ಹಬ್ಬ ದೀಪಾವಳಿಗೆ ಫೈರ್ ಫ್ಲೈ ಸಿನಿಮಾ ಥಿಯೇಟರ್ ಬೆಳಗಲಿದೆ.

Continue Reading

ಸ್ಯಾಂಡಲ್ ವುಡ್

Dolly Dhananjay: ʻಜೀಬ್ರಾʼ ತಂಡದಿಂದ ಹೊರ ಬಿತ್ತು ʻಸತ್ಯದೇವ್ʼ ಫಸ್ಟ್‌ ಲುಕ್‌!

Dolly Dhananjay: ಈ ಸಿನಿಮಾದಲ್ಲಿ ಡಾಲಿ ಧನಂಜಯ್ ಜೊತೆಗೆ ಸತ್ಯ ದೇವ್ ಸಹ ಮುಖ್ಯ ಪಾತ್ರದಲ್ಲಿರಲಿದ್ದಾರೆ. ಪದ್ಮಜಾ ಫಿಲಂಸ್ ಪ್ರೈವೇಟ್ ಲಿಮಿಟೆಡ್ ಮತ್ತು ಓಲ್ಡ್ ಟೌನ್ ಪಿಕ್ಚರ್ಸ್ ಬ್ಯಾನರ್‌ಗಳ ಅಡಿಯಲ್ಲಿ ಎಸ್‌ಎನ್ ರೆಡ್ಡಿ, ಎಸ್ ಪದ್ಮಜಾ, ಬಾಲ ಸುಂದರಂ ಮತ್ತು ದಿನೇಶ್ ಸುಂದರಂ ನಿರ್ಮಾಣ ಮಾಡುತ್ತಿದ್ದಾರೆ.

VISTARANEWS.COM


on

Dolly Dhananjay zebra movie look out
Koo

ಬೆಂಗಳೂರು: ಈಶ್ವರ್ ಕಾರ್ತಿಕ್ ನಿರ್ದೇಶನದ ಬಹುತಾರಾಗಣದ ಚಿತ್ರ `ಜೀಬ್ರಾ’ ಅನೌನ್ಸ್‌ ಮಾಡಿದ್ದು ಗೊತ್ತೇ ಇದೆ. ಈ ಸಿನಿಮಾಗೆ ಸತ್ಯದೇವ್ ನಾಯಕನಾಗಿ ನಟಿಸುತ್ತಿದ್ದಾರೆ. ಮಾತ್ರವಲ್ಲ ಸ್ಯಾಂಡಲ್‌ವುಡ್‌ ಸ್ಟಾರ್ ಡಾಲಿ ಧನಂಜಯ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿರುವುದು ವಿಶೇಷ. ಡಾಲಿ ಧನಂಜಯ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವ ಈ ತೆಲುಗಿನ ಪ್ಯಾನ್ ಇಂಡಿಯಾ ಸಿನಿಮಾ, ಸತ್ಯದೇವ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಫಸ್ಟ್ ಲುಕ್ ರಿವೀಲ್‌ ಮಾಡಿದೆ.

ಈ ಸಿನಿಮಾದಲ್ಲಿ ಡಾಲಿ ಧನಂಜಯ್ ಜೊತೆಗೆ ಸತ್ಯ ದೇವ್ ಸಹ ಮುಖ್ಯ ಪಾತ್ರದಲ್ಲಿರಲಿದ್ದಾರೆ. ಪದ್ಮಜಾ ಫಿಲಂಸ್ ಪ್ರೈವೇಟ್ ಲಿಮಿಟೆಡ್ ಮತ್ತು ಓಲ್ಡ್ ಟೌನ್ ಪಿಕ್ಚರ್ಸ್ ಬ್ಯಾನರ್‌ಗಳ ಅಡಿಯಲ್ಲಿ ಎಸ್‌ಎನ್ ರೆಡ್ಡಿ, ಎಸ್ ಪದ್ಮಜಾ, ಬಾಲ ಸುಂದರಂ ಮತ್ತು ದಿನೇಶ್ ಸುಂದರಂ ನಿರ್ಮಾಣ ಮಾಡುತ್ತಿದ್ದಾರೆ. ಇದೀಗ ಜೀಬ್ರಾ ತಂಡ ಫಸ್ಟ್‌ ಲುಕ್‌ ಅನಾವರಣಗೊಳಿಸಿದೆ.

ಪೋಸ್ಟರ್‌ನಲ್ಲಿ ಸತ್ಯದೇವ್ ಅತ್ಯಂತ ಸ್ಟೈಲಿಶ್ ಅವತಾರ ತಾಳಿದ್ದಾರೆ. ಸೂಟ್‌ ಧರಿಸಿ ಅತ್ಯಂತ ಖಡಕ್‌ ಲುಕ್‌ನಲ್ಲಿ ಕಂಡಿದ್ದಾರೆ. ತುಂಬಾ ಗಂಭೀರವಾಗಿ ಕಂಡಿದ್ದಾರೆ ಸತ್ಯದೇವ್‌. ಭುಜದ ಮೇಲೆ ಚೀಲವನ್ನು ಹೊತ್ತುಕೊಂಡು ಬಹಳ ಗಭೀರದಿಂದ ನಡೆಯುತ್ತಿರುವ ಲುಕ್‌ನಲ್ಲಿ ಕಂಡಿದ್ದಾರೆ. ಇನ್ನೊಂದು ಕೈಯಲ್ಲಿ ಪೆನ್ನು ಇದೆ. ಪೋಸ್ಟರ್‌ ಬ್ಯಾಕ್‌ರೌಂಡ್‌ನಲ್ಲಿ ನೋಟುಗಳು ಚೆಲ್ಲಾಪಿಲ್ಲಿಯಾಗಿವೆ. ʻಜೀಬ್ರಾ’ ಸಿನಿಮಾದಲ್ಲಿ ಡಾಲಿ ಧನಂಜಯ್ ಜೊತೆಗೆ ಸತ್ಯದೇವ್, ನಟಿ ಅಮೃತಾ ಐಯ್ಯಂಗಾರ್, ಪ್ರಿಯಾ ಭವಾನಿ ಶಂಕರ್, ತೆಲುಗಿನ ಜನಪ್ರಿಯ ಹಾಸ್ಯನಟ ಸುನಿಲ್, ಕಟ್ಟಪ್ಪ ಖ್ಯಾತಿಯ ಸತ್ಯರಾಜ್, ಊರ್ವಶಿ ರೌಟೆಲ್ಲಾ ಇನ್ನೂ ಕೆಲವು ಪ್ರತಿಭಾವಂತ ನಟರು ಇರಲಿದ್ದಾರೆ. ಸಿನಿಮಾವನ್ನು ಈಶ್ವರ್ ಕಾರ್ತಿಕ್ ನಿರ್ದೇಶನ ಮಾಡಿದ್ದು, ಕತೆ-ಚಿತ್ರಕತೆ ಅವರದ್ದೇ.

ʻಲಕ್ ಫೇವರ್ಸ್ ದಿ ಬ್ರೇವ್ʼ ಎಂದು ಅಡಿಬರಹ ಕೂಡ ಇದೆ. ಈಗಾಗಲೇ ಸಿನಿಮಾದ ಚಿತ್ರೀಕರಣ ಮುಗಿದಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಸದ್ಯ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ಆಗುತ್ತಿವೆ. ಶೀಘ್ರದಲ್ಲೇ ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಿಸಲಿದೆ.

ಇದನ್ನೂ ಓದಿ: Dolly Dhananjay: ಐತಿಹಾಸಿಕ ‘ಹಲಗಲಿ’ ಸಿನಿಮಾದಲ್ಲಿ ‘ಡಾಲಿ’ ಧನಂಜಯ ಹೀರೊ!

ಈಶ್ವರ್ ಕಾರ್ತಿಕ್ ನಿರ್ದೇಶನದ ಈ ಕ್ರೈಮ್ ಆಕ್ಷನ್ ಎಂಟರ್‌ಟೈನರ್‌ನಲ್ಲಿ ಪ್ರಿಯಾ ಭವಾನಿ ಶಂಕರ್ ಮತ್ತು ಜೆನ್ನಿಫರ್ ಪಿಕ್ಕಿನಾಟೊ ಪ್ರಮುಖ ಪಾತ್ರ ನಿಭಾಯಿಸುತ್ತಿದ್ದಾರೆ. ಸತ್ಯ ಅಕಾಲ ಮತ್ತು ಸುನಿಲ್ ಇತರ ಪ್ರಮುಖ ಪಾತ್ರಧಾರಿಗಳು. ಕೆಜಿಎಫ್ ಮತ್ತು ಸಲಾರ್ ಖ್ಯಾತಿಯ ರವಿ ಬಸ್ರೂರ್ ಚಿತ್ರಕ್ಕೆ ಸಂಗೀತ ನೀಡಿದ್ದು, ಸತ್ಯ ಪೊನ್ಮಾರ್ ಅವರ ಛಾಯಾಗ್ರಹಣವಿದೆ. ಎಸ್ ಶ್ರೀಲಕ್ಷ್ಮಿ ರೆಡ್ಡಿ ಸಹ ನಿರ್ಮಾಪಕಿ. ಅನಿಲ್ ಕ್ರಿಶ್ ಸಂಕಲನ,ಮೀರಾಖ್ ಸಂಭಾಷಣೆ ಇದೆ. ಅಶ್ವಿನಿ ಮುಲ್ಪುರಿ, ಗಂಗಾಧರ ಬೊಮ್ಮರಾಜು ಕಾಸ್ಟ್ಯೂಮ್ ಡಿಸೈನರ್ ಆಗಿದ್ದಾರೆ. ಚಿತ್ರ ಸತ್ಯದೇವ್, ಡಾಲಿ ಧನಂಜಯ, ಸತ್ಯರಾಜ್, ಪ್ರಿಯಾ ಭವಾನಿ ಶಂಕರ್, ಜೆನ್ನಿಫರ್ ಪಿಕ್ಕಿನಾಟೊ, ಸತ್ಯ ಅಕಾಲ, ಸುನಿಲ್ ಹೀಗೆ ಬಹು ತಾರಾಗಣ ಹೊಂದಿದೆ.

Continue Reading
Advertisement
School Principal
ದೇಶ3 hours ago

School Principal: ಶಾಲೆಯಲ್ಲೇ ಮಹಿಳಾ ಟೀಚರ್‌ ಜತೆ ಪ್ರಿನ್ಸಿಪಾಲ್‌ ರೊಮ್ಯಾನ್ಸ್;‌ ವೈರಲ್‌ ಫೋಟೊ ಇಲ್ಲಿದೆ

WCPL 2024
ಪ್ರಮುಖ ಸುದ್ದಿ3 hours ago

WCPL 2024 : ಸಿಪಿಎಲ್​​ನ ಟ್ರಿನ್​ಬ್ಯಾಗೊ ರೈಡರ್ಸ್​ ತಂಡಕ್ಕೆ ಜೆಮಿಮಾ, ಶಿಖಾ ಸೇರ್ಪಡೆ

KRS Inflow
ದೇಶ4 hours ago

KRS Inflow: ಕೆಆರ್‌ಎಸ್‌ಗೆ ದಾಖಲೆಯ 11 ಸಾವಿರ ಕ್ಯುಸೆಕ್‌ ನೀರು ಒಳಹರಿವು; ಸೋಮವಾರದಿಂದ ನಾಲೆಗಳಿಗೆ ನೀರು

Abhishek Sharma
ಕ್ರೀಡೆ4 hours ago

Abhishek Sharma : 47 ಎಸೆತಕ್ಕೆ ಶತಕ ಬಾರಿಸಿ ಹಲವಾರು ದಾಖಲೆ ಮುರಿದಿ ಅಭಿಷೇಕ್​ ಶರ್ಮಾ

Dengue Scare
ಕರ್ನಾಟಕ4 hours ago

Dengue Scare: ಸರ್ಕಾರದಿಂದಲೇ ಉಚಿತವಾಗಿ ಡೆಂಗ್ಯೂ ಪರೀಕ್ಷೆ ಮಾಡಿಸಲಿ; ಆರ್.‌ ಅಶೋಕ್‌ ಆಗ್ರಹ

World Biryani Day:
ಪ್ರಮುಖ ಸುದ್ದಿ5 hours ago

World Biryani Day : ಕೋಲ್ಕತಾ, ಹೈದರಾಬಾದ್ ಬಿರಿಯಾನಿ ತಿಂದಿರಬಹುದು; ಇವುಗಳ ಹಿನ್ನೆಲೆ ಗೊತ್ತಾ?

Accident
Latest5 hours ago

Accident: ಟೆರೇಸ್ ಮೇಲೆ ನಿಂತು ಜಗಳ ನೋಡುತ್ತಿದ್ದ ಮಹಿಳೆಗೇ ಬಿತ್ತು ಗುಂಡೇಟು!

Puri Jagannath Rath Yatra
ಪ್ರಮುಖ ಸುದ್ದಿ5 hours ago

Puri Jagannath Rath Yatra: ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಒಬ್ಬನ ಸಾವು, 400 ಭಕ್ತರಿಗೆ ಗಾಯ!

NIA Arrest
ದೇಶ5 hours ago

NIA Arrest: ಹಿಜ್ಬುಲ್‌, LeT ಉಗ್ರ ಸಂಘಟನೆಗಳ ಜೊತೆ ನಂಟು; ಪ್ರಮುಖ ಆರೋಪಿ ಅರೆಸ್ಟ್‌

Elephant attack car in Kodagu‌ four people escape
ಕೊಡಗು5 hours ago

Elephant attack :ಕಾರಿನ ಮೇಲೆ ಕಾಡಾನೆ ದಾಳಿ; ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ7 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ10 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ10 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ21 hours ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ1 day ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ1 day ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ2 days ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು2 days ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ2 days ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ2 days ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

ಟ್ರೆಂಡಿಂಗ್‌