Site icon Vistara News

Puneeth Rajkumar: ಇಂದು ಪುನೀತ್‌ ಜನುಮದಿನ: ಅಪ್ಪು ಸಮಾಧಿ ಬಳಿ ಜನಸಾಗರ

Puneeth Rajkumar spoorthi dina

ಬೆಂಗಳೂರು: ಇಂದು (ಮಾ.17) ಪುನೀತ್‌ ರಾಜ್‌ಕುಮಾರ್‌ (Puneeth Rajkumar) ಅವರ ಜನುಮದಿನ. ಮುಂಜಾನೆಯಿಂದಲೇ ಅವರ ಸ್ಮಾರಕದ ಬಳಿ ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದಾರೆ. ಪುನೀತ್ ಸ್ಮಾರಕಕ್ಕೆ ಹೂವುಗಳಿಂದ ಅಲಂಕಾರಗೊಂಡಿದೆ. ಇಂದು 1 ಲಕ್ಷ ಜನಕ್ಕೆ ಯುವರಾಜ್ ಕುಮಾರ್ ಅನ್ನದಾನ ವ್ಯವಸ್ಥೆ ಮಾಡಿದ್ದಾರೆ. ಅಭಿಮಾನಿಗಳಿಗೆ ಸಮಾಧಿ ಬಳಿ ಚಿಕನ್ ಬಿರಿಯಾನಿ ಹಂಚಿಕೆ ಕೂಡ ಆಗಲಿದೆ. ಅಭಿಮಾನಿಗಳಿಂದ
ಅನ್ನದಾನ,ರಕ್ತದಾನ, ನೇತ್ರದಾನ ಶಿಬಿರ ಕೂಡ ನೆರವೇರಲಿದೆ. ಮಧ್ಯರಾತ್ರಿಯಿಂದಲೇ ಬರ್ತಡೆ ಸೆಲೆಬ್ರೇಷನ್ ಶುರು ಆಗಿದೆ.

ಬೆಳಗ್ಗೆ ಹತ್ತು ಗಂಟೆಗೆ ಕುಟುಂಬದಿಂದ ಸಮಾಧಿ ಪೂಜೆ ನೆರವೇರಲಿದೆ. ಯುವ ಮತ್ತು ವಿನಯ್ ಸೇರಿದಂತೆ ಇಡೀ ದೊಡ್ಮನೆ ಭಾಗಿಯಾಗಲಿದೆ. ಮಧ್ಯರಾತ್ರಿಯಿಂದಲೇ ಹಲವು ರೀತಿಯ ಕಾರ್ಯಕ್ರಮಗಳು ಕಂಠೀರವ ಸ್ಟುಡಿಯೋನಲ್ಲಿನ ಅಪ್ಪು ಸ್ಮಾರಕ ಬಳಿ ಪ್ರಾರಂಭವಾಗಿವೆ. ರಾತ್ರಿಯೇ ಕೇಕ್ ಕತ್ತರಿಸಿ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಅಂದಹಾಗೆ ಅಪ್ಪುವಿನ ಈ ಹುಟ್ಟುಹಬ್ಬವನ್ನು ‘ಸ್ಫೂರ್ತಿಯ ಹಬ್ಬ’ವನ್ನಾಗಿ ಆಚರಿಸುತ್ತಿರುವುದು ವಿಶೇಷ.

ಇದನ್ನೂ ಓದಿ: Puneeth Rajkumar: ಜಾಕಿ ರಿ-ರೀಲಿಸ್: ಥಿಯೇಟರ್‌ ಮುಂದೆ ಫ್ಯಾನ್ಸ್ ಸಖತ್‌ ಸೆಲೆಬ್ರೇಷನ್!

ಕೆಲವು ಕಲಾ ತಂಡಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು ಸಹ ಮಾಡಲಾಗಿವೆ. ಅಪ್ಪು ಸಿನಿಮಾದ ಹಾಡುಗಳು ಇಂದು ಸ್ಮಾರಕದ ಬಳಿ ಕೇಳಿ ಬರಲಿವೆ. ಬೆಂಗಳೂರಿನಲ್ಲಿ ಮಾತ್ರವೇ ಅಲ್ಲದೆ ಇಡೀ ರಾಜ್ಯದೆಲ್ಲೆಡೆ ಇಂದು ಅಪ್ಪು ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ರಾಜ್ಯದ ಹಲವು ನಗರಗಳಲ್ಲಿ ಅಭಿಮಾನಿಗಳು ಇಂದು ಅಪ್ಪು ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸುತ್ತಿದ್ದಾರೆ.

ನೃತ್ಯ ನಮನ

ಮಾರ್ಚ್ 17, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬ. ಪುನೀತ್ ಅವರ ಹುಟ್ಟುಹಬ್ಬಕ್ಕೆ “ಗೌರಿ” ತಂಡದಿಂದ ವಿಶೇಷ ಗೀತೆಯೊಂದು ಬರಲಿದೆ. ಈ ವಿಶೇಷ ಗೀತೆಗೆ ಸಮರ್ಜಿತ್ ಲಂಕೇಶ್ ಜತೆ ದಕ್ಷಿಣ ಭಾರತದ ಖ್ಯಾತ ನಟಿ ತಾನ್ಯಾ ಹೋಪ್ ಹೆಜ್ಜೆ ಹಾಕಲಿದ್ದಾರೆ. ಮೋಹನ್ ಈ ಹಾಡಿಗೆ ನೃತ್ಯ ನಿರ್ದೇಶನ ಮಾಡುತ್ತಿದ್ದಾರೆ.

Exit mobile version