Site icon Vistara News

Rakshak Bullet: ಅಜ್ಜಿ-ತಂದೆಯ ಸಮಾಧಿ ತೊಳೆದು ವಿಶೇಷ ವಿಡಿಯೊ ಮಾಡಿದ ರಕ್ಷಕ್ ಬುಲೆಟ್

Rakshak Bullet Washed His Father grave

ಬೆಂಗಳೂರು: ಬಿಗ್‌ಬಾಸ್ʼ ಕನ್ನಡ ಸೀಸನ್‌ 10ರಲ್ಲಿ (BBK SEASON 10) ನಟ ಬುಲೆಟ್‌ ಪ್ರಕಾಶ್‌ ಅವರ ಪುತ್ರ ರಕ್ಷಕ್‌ ಬುಲೆಟ್‌ ಒಂದು ತಿಂಗಳ ಕಾಲ ಬಿಗ್‌ಬಾಸ್‌ನಲ್ಲಿದ್ದು ಎಲಿಮಿನೇಟ್‌ ಆಗಿಯೂ ಹೊರಬಂದಿದ್ದರು. ಸುದೀಪ್‌ ಬಗ್ಗೆ ಹೇಳಿಕೆಯಿಂದಾಗಿ (Rakshak Bullet) ಟ್ರೋಲ್‌ ಆಗಿ ಕ್ಷಮೆಯೂ ಕೇಳಿದ್ದರು. ಆಗಾಗ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಉತ್ತಲೇ ಇರುತ್ತಾರೆ. ಈಗ ಅವರ ಹೊಸ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ತಂದೆ ಬುಲೆಟ್ ಪ್ರಕಾಶ್ ಹಾಗೂ ಅಜ್ಜಿ ಗೌರಮ್ಮ ಅವರ ಸಮಾಧಿಯನ್ನು ತೊಳೆದಿದ್ದಾರೆ.

ವಿಡಿಯೊದಲ್ಲಿ ರಕ್ಷಕ್‌ ಮಾತನಾಡಿ ʻʻಈ ಜಾಗ ನನಗೆ ಒಂಥರ ಸ್ಪೆಷಲ್‌. ಯಾಕಂದರೆ ನನಗೆ ಎಷ್ಟೇ ಖುಷಿ , ಬೇಜಾರು ಆದರೂ ಇಲ್ಲಿ ಬಂದು 5 ನಿಮಿಷ ಕೂತು ನನ್ನ ಮನಸಲ್ಲಿ ಇರೋದು ಹೇಳ್ಕೊಂಡಾಗ ತುಂಬ ಖುಷಿ ಆಗುತ್ತೆ. ನೆಮ್ಮದಿ ಕೂಡ ಆಗತ್ತೆ. ನಾವು ಕ್ಲೀನ್ ಆಗಿದ್ದಂತೆ, ಇವರು ಕ್ಲೀನ್ ಆಗಿರಬೇಕು. ಹೀಗಾಗಿ, ವಾರಕ್ಕೆ ಒಮ್ಮೆ ಬಂದು ಇಲ್ಲಿ ಸಮಾಧಿ ತೊಳೆದು ಹೋಗುತ್ತೇನೆ. ಎಲ್ಲರೂ ಕೇಲ್ತಾರೆ 3 ವರ್ಷದಲ್ಲಿ ರಕ್ಷಕ್‌ ಹೆಂಗೆ ಬೇಳೆದುಬಿಟ್ಟ ಅಂತ. ಈ ಮೂರು ವರ್ಷದ ಹಿಂದೆ ಶ್ರಮ ಇದೆ. ನಮ್ಮ ಅಜ್ಜಿ, ತಂದೆನ ತುಂಬಾ ಚೆನ್ನಾಗಿ ನೋಡಿಕೊಂಡಿದ್ದೇನೆ. ಮಗು ರೀತಿ ನೋಡಿಕೊಂಡಿದ್ದೇನೆ. ಊದಿನಕಡ್ಡಿ ಹಚ್ಚಿ, ಅವರಿಷ್ಟದ ತಿಂಡಿನ ಇಟ್ಟು ಹೋಗುತ್ತೇನೆ. ನಮಸ್ಕಾರ ಮಾಡಿ ಹೋಗುತ್ತೇನೆ. ದೊಡ್ಡವರ ಆಶೀರ್ವಾದ ಇದ್ದರೆ ಬೆಳೆಯುತ್ತೀರಾ. ದೊಡ್ಡವರ ಆಶೀರ್ವಾದವೇ ಇದಕ್ಕೆ ಕಾರಣ’ ಎಂದಿದ್ದಾರೆ ರಕ್ಷಕ್.

ಇದನ್ನೂ ಓದಿ: Rakshak Bullet: ಇನ್ಮುಂದೆ ನಂದೇ ರೌಂಡು, ನಂದೇ ಸೌಂಡು ಎಂದ ಮರಿ ಬುಲೆಟ್‌!

ಈಗ ಅವರು ಹಂಚಿಕೊಂಡಿರೋ ಈ ವಿಡಿಯೋಗೆ ಎಲ್ಲ ಕಡೆಗಳಿಂದ ಭರ್ಜರಿ ಮೆಚ್ಚುಗೆ ಸಿಗುತ್ತಿದೆ. ಎಲ್ಲರೂ ಪಾಸಿಟಿವ್ ಆಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ.

ಸುದೀಪ್‌ ವಿಚಾರವಾಗಿ ಸುದ್ದಿಯಾಗಿದ್ದ ರಕ್ಷಕ್‌

ಇತ್ತೀಚೆಗಷ್ಟೇ ಸಂದರ್ಶನವೊಂದರಲ್ಲಿ ʻʻಸುದೀಪಣ್ಣ ಬಂದ ಬಳಿಕ, ದೇವರು ನಿಂತಿದ್ದಾರೆ. ನಾವೆಲ್ಲ ಭಕ್ತಾದಿಗಳು. ಅವರು ಹೆಂಗೆ ವರ ಕೊಡ್ತಾರೋ, ಹಂಗೆ ತೆಗೋಬೇಕು ಅನ್ನೋ ಥರ ಎಲ್ಲರೂ ಇರ್ತಾರೆʼʼಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಸುದೀಪ್‌ ಫ್ಯಾನ್ಸ್‌ ಕೂಡ ರಕ್ಷಕ್‌ ಅವರು ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದರು. ಅದರಂತೆ ರಕ್ಷಕ್‌ ಕ್ಷಮೆ ಕೇಳಿದ್ದರು.

ರಕ್ಷಕ್‌ ಹೇಳಿದ್ದೇನು?

ಮಾಧ್ಯಮವೊಂದರ ಸಂದರ್ಶನವೊಂದರಲ್ಲಿ ರಕ್ಷಕ್‌ ಅವರು ಮಾತನಾಡಿʻʻ ಬಿಗ್ ಬಾಸ್ ಮನೆಯಲ್ಲಿ ಎಲ್ಲ ಸ್ಪರ್ಧಿಗಳು ಡ್ರಾಮಾ ಮಾಡ್ತಾರೆ. ಕಳಪೆ ಉತ್ತಮ ಅಂತ ಕೊಟ್ಟಮೇಲೆ ಆ ಮಾತಿನ ಮೇಲೆ ಯಾರೂ ನಿಲ್ಲುವುದಿಲ್ಲ. ಸುದೀಪ್‌ ಅವರು ಬಂದ ಮೇಲೆ ಎಲ್ಲವೂ ಬದಲಾಗುತ್ತದೆ. ಸುದೀಪಣ್ಣ ಬಂದ ಬಳಿಕ, ದೇವರು ನಿಂತಿದ್ದಾರೆ. ನಾವೆಲ್ಲ ಭಕ್ತಾದಿಗಳು.. ಅವರು ಹೆಂಗೆ ವರ ಕೊಡ್ತಾರೋ, ಹಂಗೆ ತೆಗೋಬೇಕು ಎನ್ನುವ ಥರ ಎಲ್ಲರೂ ಇರ್ತಾರೆ” ಎಂದು ಸಂದರ್ಶನದಲ್ಲಿ ಹೇಳಿಕೊಂಡಿದ್ದರು. ಈ ಹೇಳಿಕೆ ಭಾರಿ ಟೀಕೆಗೆ ಗುರಿಯಾಗಿತ್ತು.

Exit mobile version