Ramana Avatara: ಬಿಡುಗಡೆ ದಿನಾಂಕ ಘೋಷಣೆ ಮಾಡಿದ ರಿಷಿ ಅಭಿನಯದ 'ರಾಮನ ಅವತಾರ' ಸಿನಿಮಾ - Vistara News

ಸ್ಯಾಂಡಲ್ ವುಡ್

Ramana Avatara: ಬಿಡುಗಡೆ ದಿನಾಂಕ ಘೋಷಣೆ ಮಾಡಿದ ರಿಷಿ ಅಭಿನಯದ ‘ರಾಮನ ಅವತಾರ’ ಸಿನಿಮಾ

Ramana Avatara: ʻರಾಮನ ಅವತಾರʼ ಸಿನಿಮಾದಲ್ಲಿ ಪ್ರಣೀತಾ ಸುಭಾಷ್ ಹಾಗೂ ಶುಭ್ರ ಅಯ್ಯಪ್ಪ ನಾಯಕಿಯರಾಗಿ ನಟಿಸಿದ್ದಾರೆ. ಪ್ರತಿಭಾನ್ವಿತ ನಟ ಅರುಣ್ ಸಾಗರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ವಿಕಾಸ್ ಪಂಪಾಪತಿ ‘ರಾಮನ ಅವತಾರ’ ಸಿನಿಮಾ ನಿರ್ದೇಶಿಸಿದ್ದಾರೆ. ಇದು ಇವರ ಚೊಚ್ಚಲ ಸಿನಿಮಾವಾಗಿದೆ.

VISTARANEWS.COM


on

Ramana Avatara Release Date announced
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭಾ ಚುನಾವಣೆ ಕಾವು ರಂಗೇರಿದ್ದು, ಹೀಗಾಗಿ ಒಂದಷ್ಟು ಸಿನಿಮಾಗಳ ಬಿಡುಗಡೆ ತಡವಾಗಿದೆ. ಇದೀಗ ʻರಾಮನ ಅವತಾರʼ (Ramana Avatara) ಸಿನಿಮಾವು ಮೇ 10ರಂದು ಬಿಡುಗಡೆಯಾಗಲಿದೆ. ರಿಷಿ, ಪ್ರಣೀತಾ ಸುಭಾಷ್, ಶುಭ್ರ ಅಯ್ಯಪ್ಪ ನಟಿಸಿರುವ ಈ ಸಿನಿಮಾಕ್ಕೆ ವಿಕಾಸ್ ಪಂಪಾಪತಿ ಆಕ್ಷನ್‌ ಕಟ್‌ ಹೇಳಿದ್ದಾರೆ.

ರಿಷಿ ರಾಮನ ಅವತಾರದಲ್ಲಿ ಸ್ಯಾಂಡಲ್‌ವುಡ್‌ ಚಿತ್ರಮಂದಿರಗಳಿಗೆ ಎಂಟ್ರಿ ನೀಡಲು ಸಿದ್ಧತೆ ನಡೆಸಿದ್ದಾರೆ. ʻರಾಮನ ಅವತಾರʼ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ.‌‌ ಮೇ‌ 10ರಂದು ಚಿತ್ರ ರಾಜ್ಯಾದ್ಯಂತ ತೆರೆಗೆ ಬರಲಿದೆ.

ʻರಾಮನ ಅವತಾರʼ ಸಿನಿಮಾದಲ್ಲಿ ಪ್ರಣೀತಾ ಸುಭಾಷ್ ಹಾಗೂ ಶುಭ್ರ ಅಯ್ಯಪ್ಪ ನಾಯಕಿಯರಾಗಿ ನಟಿಸಿದ್ದಾರೆ. ಪ್ರತಿಭಾನ್ವಿತ ನಟ ಅರುಣ್ ಸಾಗರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ವಿಕಾಸ್ ಪಂಪಾಪತಿ ‘ರಾಮನ ಅವತಾರ’ ಸಿನಿಮಾ ನಿರ್ದೇಶಿಸಿದ್ದಾರೆ. ಇದು ಇವರ ಚೊಚ್ಚಲ ಸಿನಿಮಾವಾಗಿದೆ. ಈ ಚಿತ್ರದ ಮೂಲಕ ವಿಕಾಸ್ ನಿರ್ದೇಶಕರಾಗಿ ಬಡ್ತಿ ಪಡೆಯುತ್ತಿದ್ದಾರೆ. ಟೀಸರ್ ಹಾಗೂ ಹಾಡುಗಳ ಮೂಲಕ ರಾಮನ ಅವತಾರ ಸಿನಿಮಾ ಸಿನಿಪ್ರೇಕ್ಷಕರಲ್ಲಿ ಕುತೂಹಲ ಕೆರಳಿಸಿದೆ.

ಇದನ್ನೂ ಓದಿ: Actor Rishi: ರಿಷಿ ‘ರಾಮನ ಅವತಾರ’ ದರ್ಶನಕ್ಕೆ ಮುಹೂರ್ತ ಫಿಕ್ಸ್!

ಸ್ಟಾರ್ ಫ್ಯಾಬ್ ಪ್ರೊಡಕ್ಷನ್ನಡಿ ‘ಆಪರೇಷನ್ ಅಲಮೇಲಮ್ಮ’ ಸಿನಿಮಾ ನಿರ್ಮಾಣ ಮಾಡಿದ್ದ ಅಮರೇಜ್ ಸೂರ್ಯವಂಶಿ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ರೊಮ್ಯಾಂಟಿಕ್ ಕಾಮಿಡಿ ಜಾನರ್‌ನ ಈ ಚಿತ್ರಕ್ಕೆ ಸಿನಿಮಾಗೆ ವಿಷ್ಣುಪ್ರಸಾದ್ ಹಾಗೂ ಸಮೀರ್ ದೇಶ್ ಪಾಂಡೇ ಕ್ಯಾಮೆರಾ ಹಿಡಿದಿದ್ದಾರೆ. ಜೂಡಾ ಸ್ಯಾಂಡಿ ಟ್ಯೂನ್ ಹಾಕಿದ್ದು, ಅಮರನಾಥ್ ಸಂಕಲನವಿದೆ. ರಾಮನ ಅವತಾರ ಸಿನಿಮಾದ ಶೂಟಿಂಗ್‌ ಅನ್ನು ಉಡುಪಿ, ಬೆಂಗಳೂರು ಸುತ್ತಮುತ್ತ ಮಾಡಲಾಗಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Covishield vaccine: ಕೋವಿಶೀಲ್ಡ್‌ ‌ ತಗೋಬೇಡಿ, ಒಳ್ಳೆಯದಲ್ಲ ಎಂದು ಅಪ್ಪುಗೆ ಮನವಿ ಮಾಡಿದ್ದ ಅಭಿಮಾನಿ: ಪೋಸ್ಟ್‌ ವೈರಲ್‌!

Covishield vaccine: ಕೋವಿಶೀಲ್ಡ್ ತೆಗೆದುಕೊಂಡಿದ್ದರಿಂದಲೇ ಪುನೀತ್​ಗೆ ಹೃದಯಾಘಾತ ಆಯಿತು ಎಂದು ಕೆಲವರು ಆರೋಪಿಸಿದ್ದಾರೆ. ಏಕೆಂದರೆ ಈ ಕುರಿತ ಹಳೆಯ ಟ್ವೀಟ್‌ವೊಂದು ವೈರಲ್‌ ಆಗಿದೆ. ಬ್ರಿಟನ್‌ನ ಮಾಧ್ಯಮ ವರದಿಗಳು ಉಲ್ಲೇಖಿಸಿರುವ ನ್ಯಾಯಾಲಯದ ದಾಖಲೆಗಳ ಪ್ರಕಾರ, ತನ್ನ ಕೋವಿಡ್ ಲಸಿಕೆ ಅಪರೂಪವಾಗಿ ರಕ್ತ ಹೆಪ್ಪುಗಟ್ಟುವಿಕೆಯನ್ನು ಒಳಗೊಂಡ ಅಡ್ಡ ಪರಿಣಾಮಕ್ಕೆ ಕಾರಣವಾಗಬಹುದು ಎಂದು ಒಪ್ಪಿಕೊಂಡಿದೆ.

VISTARANEWS.COM


on

Covishield vaccine Puneeth Rakumar
Koo

ಬೆಂಗಳೂರು: ಭಾರತದಲ್ಲಿ ಕೊರೊನಾ ವೈರಸ್‌ (Corona Virus) ಎದುರಿಸಲು ಕೋವಿಶೀಲ್ಡ್‌ ಲಸಿಕೆ (Covishield vaccine) ತೆಗೆದುಕೊಂಡವರಲ್ಲಿ ರಕ್ತ ಹೆಪ್ಪುಗಟ್ಟುವ (blood clotting) ಅಡ್ಡ ಪರಿಣಾಮದ (Side effects) ಅಪಾಯದ ಸಾಧ್ಯತೆಗಳು ತೀರಾ ಕಡಿಮೆ ಎಂದು ಭಾರತದ ಹಿರಿಯ ಸಾಂಕ್ರಾಮಿಕ ರೋಗಶಾಸ್ತ್ರಜ್ಞ, (Covishield vaccine) ಮಾಜಿ ICMR ವಿಜ್ಞಾನಿ ಡಾ. ರಾಮನ್ ಗಂಗಾಖೇಡ್ಕರ್ ಹೇಳಿಕೆ ನೀಡಿದ್ದಾರೆ. ಆದರೂ ಕೊರೊನಾ ಲಸಿಕೆ ತೆಗೆದುಕೊಂಡ ಬಳಿಕ ದೇಶದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿವೆ ಎಂಬ ವರದಿಗಳೂ ಇವೆ. ಇದೀಗ ಪುನೀತ್‌ ರಾಜ್‌ಕುಮಾರ್‌ (Puneeth Rajkumar) ಅವರ ಕುರಿತು ಪೋಸ್ಟ್‌ ವೊಂದು ವೈರಲ್‌ ಆಗುತ್ತಿದೆ. ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಕೋವಿಶೀಲ್ಡ್ ತೆಗೆದುಕೊಂಡಿದ್ದರಿಂದಲೇ ಪುನೀತ್​ಗೆ ಹೃದಯಾಘಾತ ಆಯಿತು ಎಂದು ಕೆಲವರು ಆರೋಪಿಸಿದ್ದಾರೆ.

ಪುನೀತ್ ರಾಜ್‌ಕುಮಾರ್‌ ಅವರು 2021ರ ಅಕ್ಟೋಬರ್‌ 29ರಂದು ಹೃದಯಾಘಾತದಿಂದ ನಿಧನರಾದರು. ಇದೀಗ ಕೋವಿಶೀಲ್ಡ್ ತೆಗೆದುಕೊಂಡಿದ್ದರಿಂದಲೇ ಪುನೀತ್​ಗೆ ಹೃದಯಾಘಾತ ಆಯಿತು ಎಂದು ಕೆಲವರು ಆರೋಪಿಸಿದ್ದಾರೆ. ಏಕೆಂದರೆ ಈ ಕುರಿತ ಹಳೆಯ ಟ್ವೀಟ್‌ವೊಂದು ವೈರಲ್‌ ಆಗಿದೆ. ಬೃಂದಾವನಾ ಹೆಸರಿ ಖಾತೆಯಿಂದ ಅಭಿಮಾನಿಯೊಬ್ಬರು ʻʻ‘ನೀವು 45 ವರ್ಷ ಮೇಲ್ಪಟ್ಟಿದ್ದರೆ ವ್ಯಾಕ್ಸಿನ್ ಹಾಕಿಸಿಕೊಳ್ಳಿ. ಕೋವಿಶೀಲ್ಡ್ ತೆಗೆದುಕೊಳ್ಳಬೇಡಿ. 45 ವರ್ಷ ಮೇಲ್ಪಟ್ಟವರಿಗೆ ಇದು ಒಳ್ಳೆಯದಲ್ಲ’ ಎಂದು ಬರೆಯಲಾಗಿತ್ತುʼʼಸದ್ಯ ಈ ಪೋಸ್ಟ್ ಮತ್ತೆ ವೈರಲ್ ಆಗುತ್ತಿದೆ.

ಇದನ್ನೂ ಓದಿ: Ashwini Puneeth Rajkumar: ಐಶಾರಾಮಿ ಆಡಿ ಕ್ಯೂ7 ಕಾರು ಖರೀದಿಸಿದ ಅಶ್ವಿನಿ ಪುನೀತ್​ರಾಜ್​ಕುಮಾರ್

ಕೋವಿಶೀಲ್ಡ್ ಅನ್ನು ಸ್ವೀಕರಿಸುವ 10 ಲಕ್ಷ ಜನರಲ್ಲಿ ಏಳರಿಂದ ಎಂಟು ವ್ಯಕ್ತಿಗಳು ಮಾತ್ರ ಥ್ರಂಬೋಸಿಸ್ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ (ಟಿಟಿಎಸ್) ಎಂದು ಕರೆಯಲ್ಪಡುವ ಅಪರೂಪದ ಅಡ್ಡ ಪರಿಣಾಮವನ್ನು ಅನುಭವಿಸುತ್ತಾರೆ. ಭಾರತದಲ್ಲಿ ಇದರ ಪ್ರಮಾಣ ಇನ್ನೂ ಕಡಿಮೆ ಇದೆ ಎಂದು ವರದಿಯಾಗಿದೆ. ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ರಕ್ತ ಹೆಪ್ಪುಗಟ್ಟುವಿಕೆಯ ಅಡ್ಡ ಪರಿಣಾಮ ಕಾಣಿಸಿಕೊಳ್ಳಬಹುದು ಎಂದು ಮೊನ್ನೆ ಅದರ ತಯಾರಿಕಾ ಕಂಪನಿ ಅಸ್ಟ್ರಾಜೆನೆಕಾ ಯುಕೆ ನ್ಯಾಯಾಲಯದಲ್ಲಿ ಒಪ್ಪಿಕೊಂಡ ಬಳಿಕ ಈ ಬಗ್ಗೆ ಆತಂಕ ಮೂಡಿತ್ತು.

ಬ್ರಿಟನ್‌ನ ಮಾಧ್ಯಮ ವರದಿಗಳು ಉಲ್ಲೇಖಿಸಿರುವ ನ್ಯಾಯಾಲಯದ ದಾಖಲೆಗಳ ಪ್ರಕಾರ, ತನ್ನ ಕೋವಿಡ್ ಲಸಿಕೆ ಅಪರೂಪವಾಗಿ ರಕ್ತ ಹೆಪ್ಪುಗಟ್ಟುವಿಕೆಯನ್ನು ಒಳಗೊಂಡ ಅಡ್ಡ ಪರಿಣಾಮಕ್ಕೆ ಕಾರಣವಾಗಬಹುದು ಎಂದು ಒಪ್ಪಿಕೊಂಡಿದೆ. ಈ ಲಸಿಕೆಯನ್ನು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (SII) ಸಹ ಉತ್ಪಾದಿಸಿದೆ. ಇದನ್ನು ಕೋವಿಶೀಲ್ಡ್ ಎಂದು ಕರೆಯಲಾಗುತ್ತದೆ. ಭಾರತೀಯ ಜನಸಂಖ್ಯೆಯ ಕನಿಷ್ಠ 90 ಪ್ರತಿಶತದಷ್ಟು ಜನರು ಈ ಲಸಿಕೆಯನ್ನು ಪಡೆದಿದ್ದಾರೆ. ಭಾರತದಲ್ಲಿ ಸುಮಾರು 175 ಕೋಟಿ ಕೋವಿಶೀಲ್ಡ್‌ ಲಸಿಕೆ ಡೋಸ್‌ ನೀಡಲಾಗಿದೆ.

Continue Reading

ಸ್ಯಾಂಡಲ್ ವುಡ್

Kiccha Sudeep: ಕಿಚ್ಚ ಸುದೀಪ್ ಸಿನಿಮಾಗೆ ‘ಜೈಲರ್’ ಸ್ಟಂಟ್ ಮಾಸ್ಟರ್ ಎಂಟ್ರಿ!

Kiccha Sudeep: ʻಮ್ಯಾಕ್ಸ್ʼ ಸಿನಿಮಾಕ್ಕೆ ಕನ್ನಡದ ತಾರೆಯರು ಇದ್ದಾರೆ. ಕನ್ನಡದ ಟೆಕ್ನಿಷನ್‌ಗಳೂ ಇದ್ದಾರೆ. ಹಾಗೆ ಅಜನೀಶ್ ಲೋಕನಾಥ್ ಈ ಚಿತ್ರಕ್ಕೆ ಸಂಗೀತ ಕೊಟ್ಟಿದ್ದಾರೆ. ಶೇಖರ್ ಚಂದ್ರ ಕ್ಯಾಮೆರಾ ವರ್ಕ್ ಮಾಡಿದ್ದಾರೆ. ಸಂಯುಕ್ತಾ ಹೊರನಾಡು, ಸುಕೃತಾ ವಾಗ್ಲೆ ಕೂಡ ಈ ಸಿನಿಮಾದಲ್ಲಿ ಇದ್ದಾರೆ.ವರಲಕ್ಷ್ಮಿ ಶರತ್ ಕುಮಾರ್ ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ. ವಿಜಯ್ ಕಾರ್ತಿಕೇಯ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ತಮಿಳು ನಿರ್ಮಾಪಕ ಕಲೈಪುಲಿ ಎಸ್. ತನು ಜೊತೆ ಸೇರಿ ಕಿಚ್ಚ ಕ್ರಿಯೇಷನ್ಸ್ ಬ್ಯಾನರ್‌ನಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ.

VISTARANEWS.COM


on

Kiccha Sudeep jailer fame kevin has composed stunt in max
Koo

ಬೆಂಗಳೂರು: ʻವಿಕ್ರಾಂತ್ ರೋಣ’ ಬಳಿಕ ಕಿಚ್ಚ ಸುದೀಪ್ (Kiccha Sudeep) ಒಪ್ಪಿಕೊಂಡಿರುವ ಸಿನಿಮಾ ಮ್ಯಾಕ್ಸ್ (MAX). ಹೀಗಾಗಿ ಈ ಸಿನಿಮಾ ಬಗ್ಗೆ ಅವರ ಅಭಿಮಾನಿಗಳಲ್ಲಿ ಬಹಳಷ್ಟು ನಿರೀಕ್ಷೆಯಿದೆ. ವಿಜಯ್ ಕಾರ್ತಿಕೇಯನ್ ನಿರ್ದೇಶನದ ಈ ಸಿನಿಮಾ ಶೀಘ್ರದಲ್ಲೇ ತೆರೆಗೆ ಬರಲಿದೆ. ಸುದೀಪ್ ಮ್ಯಾಕ್ಸ್ ಚಿತ್ರಕ್ಕೆ ಹೊಸ ಸ್ಟಂಟ್ಸ್ ಮಾಸ್ಟರ್ ಬಂದಿದ್ದಾರೆ. ಕಳೆದ ವರ್ಷ ಸೂಪರ್ ಹಿಟ್ ಆಗಿದ್ದ ರಜನಿ ‘ಜೈಲರ್’ ಚಿತ್ರಕ್ಕೆ ಸ್ಟಂಟ್ಸ್ ಕಂಪೋಸ್ ಮಾಡಿದ್ದ ಕೆವಿನ್ ಇದೀಗ ‘ಮ್ಯಾಕ್ಸ್’ ತಂಡ ಸೇರಿದ್ದಾರೆ.

ಖ್ಯಾತ ಫೈಟ್ ಮಾಸ್ಟರ್ ಸ್ಟಂಟ್‌ ಶಿವ ಪುತ್ರ ಕೆವಿನ್. ಮಾರ್ಷಲ್ ಆಟ್ಸ್ ಸೇರಿದಂತೆ ಹಲವು ಕಲೆಗಳನ್ನು ಕಲಿತಿದ್ದ ಕೆವಿನ್ ಸದ್ಯ ಕಾಲಿವುಡ್‌ನಲ್ಲಿ ಗಮನ ಸೆಳೆದಿದ್ದಾರೆ. ರಜನಿಕಾಂತ್ ನಟನೆಯ ‘ಜೈಲರ್’ ಚಿತ್ರದ ಮೂಲಕ ಸ್ಟಂಟ್ ಮಾಸ್ಟರ್ ಆಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ಕೆವಿನ್ ಇದೀಗ ಕಿಚ್ಚನಿಗೆ ಫೈಟ್ ಕಂಪೋಸ್ ಮಾಡಿದ್ದಾರೆ. ನಾಲ್ಕೈದು ದಿನಗಳ ಕಾಲ ಆ ಆಕ್ಷನ್ ಸೀಕ್ವೆನ್ಸ್ ಚಿತ್ರೀಕರಣ ನಡೆದಿದೆ ಎಂದು ವರದಿಯಾಗಿದೆ. ಕನ್ನಡ ಸಿನಿಮಾಗಳಲ್ಲಿ ಇತ್ತೀಚೆಗೆ ಚೇತನ್ ಡಿಸೋಜಾ ಸ್ಟಂಟ್ಸ್ ಹೈಲೆಟ್ ಆಗುತ್ತಿದೆ. ‘ಮ್ಯಾಕ್ಸ್’ ಚಿತ್ರದಲ್ಲಿ ಕೆವಿನ್ ಒಂದು ಫೈಟ್ ಮಾತ್ರ ಕಂಪೋಸ್ ಮಾಡಿದ್ದಾರೆ. ಇನ್ನುಳಿದ ಆಕ್ಷನ್ ಸೀಕ್ವೆನ್ಸ್ ಚೇತನ್ ಡಿಸೋಜಾ ಮಾರ್ಗದರ್ಶನದಲ್ಲಿ ಬಂದಿದೆ ಎಂದು ವರದಿಯಾಗಿದೆ. ಮಹಾಬಲಿಪುರಂನಲ್ಲಿ ಸೆಟ್ ಹಾಕಿ ‘ಮ್ಯಾಕ್ಸ್’ ಚಿತ್ರದ ಬಹುತೇಕ ಚಿತ್ರೀಕರಣ ನಡೆಸಲಾಗುತ್ತಿದೆ.

ಇದನ್ನೂ ಓದಿ: Kiccha Sudeep: ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ ಕೊಟ್ಟ ಕಿಚ್ಚ ಸುದೀಪ್‌!

ಮ್ಯಾಕ್ಸ್ ಸಿನಿಮಾದಲ್ಲಿ ಸುದೀಪ್ ಪೊಲೀಸ್‌ ಪಾತ್ರದಲ್ಲಿ ಮಿಂಚಲಿದ್ದಾರೆ. ಪಾತ್ರದ ಹೆಸರು ವಿಭಿನ್ನವಾಗಿಯೇ ಇದೆ. ʻಅರ್ಜುನ್ ಮಹಾಕ್ಷಯ್ʼ ಹೆಸರಿನ ಸುದೀಪ್ ಪಾತ್ರ ಸ್ಪೆಷಲ್ ಆಗಿಯೇ ಇರಲಿದೆ ಎಂದು ವರದಿಯಾಗಿದೆ. ʻಮ್ಯಾಕ್ಸ್ʼ ಸಿನಿಮಾದಲ್ಲಿ ಸುದೀಪ್ ಭರ್ಜರಿ ಸಾಹಸಗಳನ್ನ ಮಾಡಿದ್ದಾರೆ. ಸಾಹಸ ನಿರ್ದೇಶಕ ಚೇತನ್ ಡಿಸೋಜಾ ಈ ಸಾಹಗಳನ್ನ ಕಂಪೋಸ್ ಮಾಡಿದ್ದಾರೆ. ವಿಶೇಷವಾಗಿ ಚಿತ್ರದ ಕ್ಲೈಮ್ಯಾಕ್ಸ್‌ನಲ್ಲಿ ಭರ್ಜರಿ ಆ್ಯಕ್ಷನ್‌ಗಳೇ ಇವೆ ಎನ್ನಲಾಗಿದೆ.

ʻಮ್ಯಾಕ್ಸ್ʼ ಸಿನಿಮಾಕ್ಕೆ ಕನ್ನಡದ ತಾರೆಯರು ಇದ್ದಾರೆ. ಕನ್ನಡದ ಟೆಕ್ನಿಷನ್‌ಗಳೂ ಇದ್ದಾರೆ. ಹಾಗೆ ಅಜನೀಶ್ ಲೋಕನಾಥ್ ಈ ಚಿತ್ರಕ್ಕೆ ಸಂಗೀತ ಕೊಟ್ಟಿದ್ದಾರೆ. ಶೇಖರ್ ಚಂದ್ರ ಕ್ಯಾಮೆರಾ ವರ್ಕ್ ಮಾಡಿದ್ದಾರೆ. ಸಂಯುಕ್ತಾ ಹೊರನಾಡು, ಸುಕೃತಾ ವಾಗ್ಲೆ ಕೂಡ ಈ ಸಿನಿಮಾದಲ್ಲಿ ಇದ್ದಾರೆ.

ವರಲಕ್ಷ್ಮಿ ಶರತ್ ಕುಮಾರ್ ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ. ವಿಜಯ್ ಕಾರ್ತಿಕೇಯ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ತಮಿಳು ನಿರ್ಮಾಪಕ ಕಲೈಪುಲಿ ಎಸ್. ತನು ಜೊತೆ ಸೇರಿ ಕಿಚ್ಚ ಕ್ರಿಯೇಷನ್ಸ್ ಬ್ಯಾನರ್‌ನಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ.

Continue Reading

ಸ್ಯಾಂಡಲ್ ವುಡ್

Actor Darshan: ಗೆದ್ದ ಎತ್ತಿನ ಬಾಲ ಹಿಡಿಯಬಾರದು ಎಂದ ದರ್ಶನ್‌! ಕಾಟೇರ 2 ಬರತ್ತಾ?

Actor Darshan: ‘ಕಾಟೇರ 2’ (Kaatera 2) ಸಿನಿಮಾದ ಘೋಷಣೆ ಆಗಲಿದೆ ಎಂದು ಕೆಲವರು ಊಹಿಸಿದ್ದರು. ಇದೀಗ ಈ ಬಗ್ಗೆ ದರ್ಶನ್‌ ಅವರು ನೇರವಾಗಿ ಉತ್ತರ ನೀಡಿದ್ದಾರೆ. ಕನ್ನಡದಲ್ಲಿ ಮಾತ್ರ ʻಕಾಟೇರʼ ಸಿನಿಮಾ ರಿಲೀಸ್‌ ಆಗಿದ್ದು, ಇಷ್ಟು ದೊಡ್ಡ ಮಟ್ಟದಲ್ಲಿ ಕಲೆಕ್ಷನ್‌ ಮಾಡಿದ್ದು ಹೆಮ್ಮೆಯ ವಿಚಾರ ಎನ್ನುತ್ತಿದ್ದಾರೆ ಫ್ಯಾನ್ಸ್‌. 72 ಮಲ್ಟಿಪ್ಲೆಕ್ಸ್‌ಗಳು ಹಾಗೂ 406 ಸಿಂಗಲ್ ಸ್ಕ್ರೀನ್‌ ಚಿತ್ರಮಂದಿರಗಳಲ್ಲಿ ಒಂದು ವಾರಕ್ಕೆ ಸಿನಿಮಾ 100 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿತ್ತು.

VISTARANEWS.COM


on

Actor Darshan React about Kaatera 2
Koo

ಬೆಂಗಳೂರು: `ಕಾಟೇರ’ ಸಿನಿಮಾಗೆ ಕಥೆ ಬರೆದ ಜಡೇಶ್​ ಕುಮಾರ್​ ಹಂಪಿ, ಸಂಭಾಷಣೆ ಬರೆದ ಮಾಸ್ತಿ ಹಾಗೂ ಒಂದು ಪಾತ್ರದಲ್ಲಿ ನಟಿಸಿದ ಸೂರಜ್​ ಅವರಿಗೆ ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್​ (Rockline Venkatesh) ಹಾಗೂ ನಟ ದರ್ಶನ್ (Actor Darshan)​ ಅವರು ಕಾರು ಗಿಫ್ಟ್‌ ಮಾಡಿದ್ದಾರೆ. ಕಾಟೇರದ ಈ ಸಂಭ್ರವನ್ನು ಶೇರ್‌ ಮಾಡಿಕೊಳ್ಳಲು ರಾಕ್​ಲೈನ್​ ವೆಂಕಟೇಶ್ ಏಕಾಏಕಿ ಸುದ್ದಿಗೋಷ್ಠಿ ನಡೆಸಿದ್ದರು. ‘ಕಾಟೇರ 2’ (Kaatera 2) ಸಿನಿಮಾದ ಘೋಷಣೆ ಆಗಲಿದೆ ಎಂದು ಕೆಲವರು ಊಹಿಸಿದ್ದರು. ಇದೀಗ ಈ ಬಗ್ಗೆ ದರ್ಶನ್‌ ಅವರು ನೇರವಾಗಿ ಉತ್ತರ ನೀಡಿದ್ದಾರೆ.

ದರ್ಶನ್‌ ಅವರು ಕಾಟೇರ ‘ಪಾರ್ಟ್​ 2’ ಮಾಡಲು ಅ ಸಿದ್ಧರಿಲ್ಲ. ಈ ಬಗ್ಗೆ ನಟ ಮಾತನಾಡಿ ʻʻನಾನು ಸೀಕ್ವೆಲ್‌ ಮಾಡಲ್ಲ. ಕಾಟೇರ ಅಲ್ಲಿಗೆ ಮುಗಿಯಿತು. ನನಗೆ ಇಷ್ಟವಾಗಲ್ಲ. ಗೆದ್ದ ಎತ್ತಿನ ಬಾಲ ಹಿಡಿಯಬಾರದು. ಕಾಟೇರ ಕಥೆಯನ್ನು ಇನ್ನೂ ಎಳೆಯಬಾರದು’ ಎಂದು ದರ್ಶನ್​ ಹೇಳಿದ್ದಾರೆ.

ಇದನ್ನೂ ಓದಿ: Kaatera  Movie: `ಕಾಟೇರ’ ಸಿನಿಮಾಗೆ 100 ದಿನ: ಕೇಕ್‌ ಕತ್ತರಿಸಿ ಸಂಭ್ರಮಿಸಿದ ಚಿತ್ರತಂಡ!

ಸುದ್ದಿಗೋಷ್ಠಿಯಲ್ಲಿ ರಾಕ್​ಲೈನ್​ ವೆಂಕಟೇಶ್​, ನಟ ದರ್ಶನ್​,ನಿರ್ದೇಶಕ ತರುಣ್​ ಸುಧೀರ್​, . ‘ಕಾಟೇರ’ ಚಿತ್ರದ ಸಂಭಾಷಣೆಕಾರ ಮಾಸ್ತಿ, ಕಥೆಗಾರ ಜಡೇಶ್​ ಕುಮಾರ್​ ಹಂಪಿ ಹಾಗೂ ನಟ ಸೂರಜ್​ ಇದ್ದರು. ಇದೇ ವೇಳೆ ಕಾಟೇರ’ ಸಿನಿಮಾಗೆ ಕಥೆ ಬರೆದ ಜಡೇಶ್​ ಕುಮಾರ್​ ಹಂಪಿ, ಸಂಭಾಷಣೆ ಬರೆದ ಮಾಸ್ತಿ ಹಾಗೂ ಒಂದು ಪಾತ್ರದಲ್ಲಿ ನಟಿಸಿದ ಸೂರಜ್​ ಅವರಿಗೆ ಕಾರು ನೀಡಲಾಗಿದೆ. ಮುಖ್ಯವಾಗಿ ನಿರ್ದೇಶಕ ತರುಣ್ ಸುಧೀರ್ ಜತೆ ಸೇರಿ ಜಡೇಶ್ ಹಂಪಿ ರಚಿಸಿದ ಕಥೆ, ಚಿತ್ರಕಥೆ ಹಾಗೂ ಮಾಸ್ತಿ ಸಂಭಾಷಣೆ ಚಿತ್ರದಲ್ಲಿ ಹೈಲೆಟ್ ಆಗಿತ್ತು. ಸಿನಿಮಾ ನೋಡಿದ ಪ್ರತಿಯೊಬ್ಬರು ಇವರಿಬ್ಬರ ಶ್ರಮದ ಬಗ್ಗೆ ಮಾತನಾಡಿದ್ದರು. ಇನ್ನು ನಟ ಸೂರಜ್ ಅಭಿನಯಕ್ಕೂ ಮೆಚ್ಚುಗೆ ವ್ಯಕ್ತವಾಗಿತ್ತು. ಕೆಲ ದಿನಗಳ ಹಿಂದೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸೂರಜ್, ನೋವಿನ ನಡುವೆಯೂ ಕ್ಲೈಮ್ಯಾಕ್ಸ್‌ನಲ್ಲಿ ನಟಿಸಿದ್ದರು. ಸದ್ಯ ಮೂವರಿಗೆ ನಿರ್ಮಾಪಕರ ರಾಕ್‌ಲೈನ್ ವೆಂಕಟೇಶ್ ಕಾರುಗಳನ್ನು ಉಡುಗೊರೆಯಾಗಿ ನೀಡಿದ್ದಾರೆ.

ಕನ್ನಡದಲ್ಲಿ ಮಾತ್ರ ʻಕಾಟೇರʼ ಸಿನಿಮಾ ರಿಲೀಸ್‌ ಆಗಿದ್ದು, ಇಷ್ಟು ದೊಡ್ಡ ಮಟ್ಟದಲ್ಲಿ ಕಲೆಕ್ಷನ್‌ ಮಾಡಿದ್ದು ಹೆಮ್ಮೆಯ ವಿಚಾರ ಎನ್ನುತ್ತಿದ್ದಾರೆ ಫ್ಯಾನ್ಸ್‌. 72 ಮಲ್ಟಿಪ್ಲೆಕ್ಸ್‌ಗಳು ಹಾಗೂ 406 ಸಿಂಗಲ್ ಸ್ಕ್ರೀನ್‌ ಚಿತ್ರಮಂದಿರಗಳಲ್ಲಿ ಒಂದು ವಾರಕ್ಕೆ ಸಿನಿಮಾ 100 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿತ್ತು.

ದರ್ಶನ್ ಅವರಿಗೆ ಈ ಹಿಂದೆ ತರುಣ್​ ಸುಧೀರ್​ ರಾಬರ್ಟ್ ಸಿನಿಮಾ ನಿರ್ದೇಶಿಸಿದ್ದರು. ಇದೀಗ ಅವರು ಮತ್ತೊಮ್ಮೆ ದರ್ಶನ್ ಆ್ಯಕ್ಷನ್​ ಕಟ್ ಹೇಳಿದ್ದಾರೆ. ದರ್ಶನ್​ಗೆ ಜೋಡಿಯಾಗಿ ಹಿರಿಯ ನಟಿ ಮಾಲಾಶ್ರೀ ಮಗಳು ಆರಾಧನಾ ಕಾಣಿಸಿಕೊಂಡಿದ್ದಾರೆ. ಹಿರಿಯ ನಟಿ ಶ್ರುತಿ ಕುಮಾರ್ ಗೋವಿಂದ್, ವೈಜನಾಥ್ ಬಿರಾದಾರ, ಜಗಪತಿ ಬಾಬು ಸೇರಿದಂತೆ ಇನ್ನೂ ಅನೇಕರು ಮಿಂಚಿದ್ದರು.

Continue Reading

ಸ್ಯಾಂಡಲ್ ವುಡ್

Kaatera  Movie:  ಕಾಟೇರ ಗೆಲುವು: ಮೂವರಿಗೆ ಉಡುಗೊರೆಯಾಗಿ ಸಿಕ್ತು ಕಾರುಗಳು!

Kaatera  Movie:  ಕಾಟೇರ’ ಸಿನಿಮಾಗೆ ಕಥೆ ಬರೆದ ಜಡೇಶ್​ ಕುಮಾರ್​ ಹಂಪಿ, ಸಂಭಾಷಣೆ ಬರೆದ ಮಾಸ್ತಿ ಹಾಗೂ ಒಂದು ಪಾತ್ರದಲ್ಲಿ ನಟಿಸಿದ ಸೂರಜ್​ ಅವರಿಗೆ ಕಾರು ನೀಡಲಾಗಿದೆ. ಇನ್ನು ನಟ ಸೂರಜ್ ಅಭಿನಯಕ್ಕೂ ಮೆಚ್ಚುಗೆ ವ್ಯಕ್ತವಾಗಿತ್ತು. ಕೆಲ ದಿನಗಳ ಹಿಂದೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸೂರಜ್, ನೋವಿನ ನಡುವೆಯೂ ಕ್ಲೈಮ್ಯಾಕ್ಸ್‌ನಲ್ಲಿ ನಟಿಸಿದ್ದರು. ಸುದ್ದಿಗೋಷ್ಠಿ ವೇಳೆ ರಾಕ್​ಲೈನ್​ ವೆಂಕಟೇಶ್​ ಹಾಗೂ ದರ್ಶನ್ ಈ ಬಗ್ಗೆ ಮಾಹಿತಿ ಹಂಚಿಕೊಂಡರು.

VISTARANEWS.COM


on

Kaatera  Movie Rockline Venkatesh Gifts Car To Jadesh K Hampi Maasthi And Suraj
Koo

ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ `ಕಾಟೇರ’ ಸಿನಿಮಾ (Kaatera Movie) ಬಾಕ್ಸಾಫೀಸ್‌ನಲ್ಲಿ 200 ಕೋಟಿ ರೂ.ಅಧಿಕ ಕಲೆಕ್ಷನ್ ಮಾಡಿದೆ. ಒಟಿಟಿ ಮಾತ್ರವಲ್ಲದೇ ಕಿರುತೆರೆಯಲ್ಲಿಯೂ ಮೆಚ್ಚುಗೆಗೆ ಪಾತ್ರವಾಗಿದೆ.ಈ ಸಂಭ್ರಮದಲ್ಲಿ ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್​ (Rockline Venkatesh) ಹಾಗೂ ನಟ ದರ್ಶನ್​ ಅವರು ‘ಕಾಟೇರ’ ಸಿನಿಮಾ ತಂಡದ ಮೂವರಿಗೆ ಕಾರು ಗಿಫ್ಟ್​ ನೀಡಿದ್ದಾರೆ. ಸುದ್ದಿಗೋಷ್ಠಿ ವೇಳೆ ರಾಕ್​ಲೈನ್​ ವೆಂಕಟೇಶ್​ ಹಾಗೂ ದರ್ಶನ್ ಈ ಬಗ್ಗೆ ಮಾಹಿತಿ ಹಂಚಿಕೊಂಡರು.

ಕಾಟೇರ’ ಸಿನಿಮಾಗೆ ಕಥೆ ಬರೆದ ಜಡೇಶ್​ ಕುಮಾರ್​ ಹಂಪಿ, ಸಂಭಾಷಣೆ ಬರೆದ ಮಾಸ್ತಿ ಹಾಗೂ ಒಂದು ಪಾತ್ರದಲ್ಲಿ ನಟಿಸಿದ ಸೂರಜ್​ ಅವರಿಗೆ ಕಾರು ನೀಡಲಾಗಿದೆ. ಮುಖ್ಯವಾಗಿ ನಿರ್ದೇಶಕ ತರುಣ್ ಸುಧೀರ್ ಜತೆ ಸೇರಿ ಜಡೇಶ್ ಹಂಪಿ ರಚಿಸಿದ ಕಥೆ, ಚಿತ್ರಕಥೆ ಹಾಗೂ ಮಾಸ್ತಿ ಸಂಭಾಷಣೆ ಚಿತ್ರದಲ್ಲಿ ಹೈಲೆಟ್ ಆಗಿತ್ತು. ಸಿನಿಮಾ ನೋಡಿದ ಪ್ರತಿಯೊಬ್ಬರು ಇವರಿಬ್ಬರ ಶ್ರಮದ ಬಗ್ಗೆ ಮಾತನಾಡಿದ್ದರು. ಇನ್ನು ನಟ ಸೂರಜ್ ಅಭಿನಯಕ್ಕೂ ಮೆಚ್ಚುಗೆ ವ್ಯಕ್ತವಾಗಿತ್ತು. ಕೆಲ ದಿನಗಳ ಹಿಂದೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸೂರಜ್, ನೋವಿನ ನಡುವೆಯೂ ಕ್ಲೈಮ್ಯಾಕ್ಸ್‌ನಲ್ಲಿ ನಟಿಸಿದ್ದರು. ಸದ್ಯ ಮೂವರಿಗೆ ನಿರ್ಮಾಪಕರ ರಾಕ್‌ಲೈನ್ ವೆಂಕಟೇಶ್ ಕಾರುಗಳನ್ನು ಉಡುಗೊರೆಯಾಗಿ ನೀಡಿದ್ದಾರೆ.

ಇದನ್ನೂ ಓದಿ: Kaatera  Movie: `ಕಾಟೇರ’ ಸಿನಿಮಾಗೆ 100 ದಿನ: ಕೇಕ್‌ ಕತ್ತರಿಸಿ ಸಂಭ್ರಮಿಸಿದ ಚಿತ್ರತಂಡ!

ರಾಕ್​ಲೈನ್​ ವೆಂಕಟೇಶ್ ಮಾತನಾಡಿ ʻʻಸಿನಿಮಾದಲ್ಲಿ ಎಲ್ಲರೂ ಅದ್ಭುತವಾಗಿ ನಟಿಸಿದ್ದಾರೆ.ಸೂರಜ್​ ಕೂಡ ಒಳ್ಳೆಯ ಪಾತ್ರ ಮಾಡಿದರು. ಜಡೇಶ್​, ಮಾಸ್ತಿ ಮತ್ತು ಸೂರಜ್​ ಅವರನ್ನು ಗಮನದಲ್ಲಿ ಇಟ್ಟುಕೊಂಡು ನಾನು, ದರ್ಶನ್​ ಮತ್ತು ತರುಣ್​ ಈ ನಿರ್ಧಾರಕ್ಕೆ ಬಂದೆವು. ಈ ಮೂವರಿಗೂ ಕಾರು ಕೊಡಬೇಕು ಎನಿಸಿತುʼʼಎಂದು ಹೇಳಿಕೊಂಡಿದ್ದಾರೆ. ಮೂವರಿಗೂ 10 ಲಕ್ಷ ರೂ. ಮೌಲ್ಯದ ಸ್ವಿಫ್ಟ್ ಕಾರುಗಳನ್ನು ನಿರ್ಮಾಪಕರ ರಾಕ್‌ಲೈನ್‌ ವೆಂಕಟೇಶ್ ಉಡುಗೊರೆಯಾಗಿ ನೀಡಿದ್ದಾರೆ. ಮಾಸ್ತಿ, ಜಡೇಶ್, ಸೂರಜ್ ಮೂವರಿಗೆ ಇದರ ಬಗ್ಗೆ ಯಾವುದೇ ಸುಳಿವು ಇರಲಿಲ್ಲ.

ʻʻಕನ್ನಡ ಚಿತ್ರರಂಗದಲ್ಲಿ ಬರಹಗಾರರ ಕೊರತೆ ಇದೆ. ಮಲಯಾಳಂ ಸಿನಿಮಾಗಳನ್ನು ಚೆನ್ನಾಗಿ ಓಡುತ್ತವೆ. ಅದಕ್ಕೆ ಕಥೆಯೇ ಕಾರಣ. ನಮ್ಮ ಚಿತ್ರರಂಗದಲ್ಲಿ ಕಥೆಗಾರರನ್ನು ಪ್ರೋತ್ಸಾಹಿಸಬೇಕು. ಆ ಉದ್ದೇಶದಿಂದ ನಾವು ಕಾರು ನೀಡುವ ನಿರ್ಧಾರಕ್ಕೆ ಬಂದೆವು. ಎಂದಿದ್ದಾರೆ ದರ್ಶನ್​.

ಕನ್ನಡದಲ್ಲಿ ಮಾತ್ರ ʻಕಾಟೇರʼ ಸಿನಿಮಾ ರಿಲೀಸ್‌ ಆಗಿದ್ದು, ಇಷ್ಟು ದೊಡ್ಡ ಮಟ್ಟದಲ್ಲಿ ಕಲೆಕ್ಷನ್‌ ಮಾಡಿದ್ದು ಹೆಮ್ಮೆಯ ವಿಚಾರ ಎನ್ನುತ್ತಿದ್ದಾರೆ ಫ್ಯಾನ್ಸ್‌. 72 ಮಲ್ಟಿಪ್ಲೆಕ್ಸ್‌ಗಳು ಹಾಗೂ 406 ಸಿಂಗಲ್ ಸ್ಕ್ರೀನ್‌ ಚಿತ್ರಮಂದಿರಗಳಲ್ಲಿ ಒಂದು ವಾರಕ್ಕೆ ಸಿನಿಮಾ 100 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿತ್ತು.

ದರ್ಶನ್ ಅವರಿಗೆ ಈ ಹಿಂದೆ ತರುಣ್​ ಸುಧೀರ್​ ರಾಬರ್ಟ್ ಸಿನಿಮಾ ನಿರ್ದೇಶಿಸಿದ್ದರು. ಇದೀಗ ಅವರು ಮತ್ತೊಮ್ಮೆ ದರ್ಶನ್ ಆ್ಯಕ್ಷನ್​ ಕಟ್ ಹೇಳಿದ್ದಾರೆ. ದರ್ಶನ್​ಗೆ ಜೋಡಿಯಾಗಿ ಹಿರಿಯ ನಟಿ ಮಾಲಾಶ್ರೀ ಮಗಳು ಆರಾಧನಾ ಕಾಣಿಸಿಕೊಂಡಿದ್ದಾರೆ. ಹಿರಿಯ ನಟಿ ಶ್ರುತಿ ಕುಮಾರ್ ಗೋವಿಂದ್, ವೈಜನಾಥ್ ಬಿರಾದಾರ, ಜಗಪತಿ ಬಾಬು ಸೇರಿದಂತೆ ಇನ್ನೂ ಅನೇಕರು ಮಿಂಚಿದ್ದರು.

Continue Reading
Advertisement
Rain News
ಕರ್ನಾಟಕ1 hour ago

Rain News: ಪ್ರತ್ಯೇಕ ಮಳೆ ಅವಘಡ; ಸಿಡಿಲು ಬಡಿದು ನವ ವಿವಾಹಿತ ಸಾವು, ಕಾರ್ಮಿಕನ ಸ್ಥಿತಿ ಗಂಭೀರ

ಪ್ರಮುಖ ಸುದ್ದಿ1 hour ago

IPL 2024 : ಮುಂಬೈ ವಿರುದ್ಧ ಕೆಕೆಆರ್​ಗೆ 24 ರನ್​ ಗೆಲುವು; ಪಾಂಡ್ಯಾ ಬಳಗಕ್ಕೆ ಮತ್ತೊಂದು ಆಘಾತ

Nijjar Killing
ವಿದೇಶ1 hour ago

Nijjar Killing: ಖಲಿಸ್ತಾನಿ ಉಗ್ರ ನಿಜ್ಜರ್‌ ಹತ್ಯೆಯ ಆರೋಪಿಗಳನ್ನು ಬಂಧಿಸಿದ ಕೆನಡಾ ಪೊಲೀಸರು; ಯಾರಿವರು?

Rohith Vemula
ದೇಶ1 hour ago

Rohith Vemula: ರೋಹಿತ್‌ ವೇಮುಲ ದಲಿತನಲ್ಲ ಎಂದ ಪೊಲೀಸರು; ಮರು ತನಿಖೆಗೆ ‘ಕೈ’ ಸರ್ಕಾರ ಆದೇಶ!

Rinku Singh
ಪ್ರಮುಖ ಸುದ್ದಿ2 hours ago

Rinku Singh : ಕೊಹ್ಲಿಯ ಬ್ಯಾಟ್​ನಲ್ಲಿ ರಿಂಕು ಚೆನ್ನಾಗಿ ಆಡುತ್ತಿಲ್ಲ; ನೆಟ್ಟಿಗರಿಂದ ಟ್ರೋಲ್​!

honour killing
ವಿಜಯಪುರ2 hours ago

Honor Killing: ಮರ್ಯಾದೆಗಾಗಿ ಗರ್ಭಿಣಿಯನ್ನು ಸುಟ್ಟು ಕೊಂದ ಇಬ್ಬರಿಗೆ ಗಲ್ಲು ಶಿಕ್ಷೆ, 6 ಮಂದಿಗೆ ಜೀವಾವಧಿ‌ ಶಿಕ್ಷೆ

Pakistan
ವಿದೇಶ2 hours ago

ಚೀನಾ ದಯೆಯಿಂದ ಮೊದಲ ಚಂದ್ರಯಾನ ಕೈಗೊಂಡ ಪಾಕಿಸ್ತಾನ; ಆದರೂ ಭಾರತಕ್ಕಿಂತ 16 ವರ್ಷ ಹಿಂದೆ!

T20 World Cup
ಪ್ರಮುಖ ಸುದ್ದಿ2 hours ago

T20 World Cup : ಉನ್ಮುಕ್ತ್​ ಚಾಂದ್​ಗೆ ತೆರೆಯದ ಭಾಗ್ಯದ ಬಾಗಿಲು; ಯುಎಸ್​ ತಂಡದಲ್ಲಿ ಇಲ್ಲ ಚಾನ್ಸ್​!

Health Tips Kannada
ಆರೋಗ್ಯ3 hours ago

Health Tips Kannada : ಉತ್ತಮ ಆರೋಗ್ಯಕ್ಕಾಗಿ ಎಷ್ಟು ಗಂಟೆ ಕುಳಿತುಕೊಳ್ಳಬೇಕು, ನಿಂತುಕೊಳ್ಳಬೇಕು, ಮಲಗಬೇಕು?

Meeting with representatives of various political parties about MLC election in Hosapete
ವಿಜಯನಗರ3 hours ago

Vijayanagara News: ವಿಧಾನ ಪರಿಷತ್ ಪದವೀಧರ ಕ್ಷೇತ್ರದ ಚುನಾವಣೆ; ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru Rains
ಮಳೆ9 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ20 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ1 day ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

ಟ್ರೆಂಡಿಂಗ್‌