CCL 2024: ಅಮ್ಮನಿಗೆ ಮುತ್ತಿಟ್ಟು. ಮಕ್ಕಳಿಗೆ ಫ್ರೆಂಚ್ ಫ್ರೈಸ್‌ ತಿನ್ನಿಸಿದ ಸಲ್ಮಾನ್‌ ಖಾನ್‌! - Vistara News

ಸ್ಯಾಂಡಲ್ ವುಡ್

CCL 2024: ಅಮ್ಮನಿಗೆ ಮುತ್ತಿಟ್ಟು. ಮಕ್ಕಳಿಗೆ ಫ್ರೆಂಚ್ ಫ್ರೈಸ್‌ ತಿನ್ನಿಸಿದ ಸಲ್ಮಾನ್‌ ಖಾನ್‌!

CCL 2024: ಸೊಹೈಲ್ ಮುಂಬೈ ಹೀರೋಸ್‌ ತಂಡದ ಮಾಲೀಕರಾಗಿದ್ದರೆ, ಸಲ್ಮಾನ್ ಖಾನ್ ತಂಡದ ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆ. ಮತ್ತು ರಿತೇಶ್ ದೇಶಮುಖ್ ತಂಡದ ನಾಯಕರಾಗಿದ್ದಾರೆ.

VISTARANEWS.COM


on

Salman Khan Kisses Mother Salma Khan, Enjoys Fries With Nephew
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL 2024) ಪ್ರಾರಂಭಗೊಂಡಿದೆ. ಸಲ್ಮಾನ್ ಖಾನ್ ಅವರು ಸಹೋದರ ಸೋಹೈಲ್ ಖಾನ್ ಇರುವ ಮುಂಬೈ ಹೀರೋಸ್ ತಂಡವನ್ನು ಬೆಂಬಲಿಸಲು ಭಾಗಿಯಾಗಿದ್ದರು. ಈ ವೇಳೆ ಸಲ್ಮಾನ್‌ ಅವರ ಇಡೀ ಕುಟುಂಬ ಮ್ಯಾಚ್‌ ನೋಡಲು ನೆರೆದಿತ್ತು. ಸಲ್ಮಾನ್ ಖಾನ್, ಸಲ್ಮಾ ಖಾನ್, ಹೆಲೆನ್, ಅರ್ಪಿತಾ ಖಾನ್, ಅರ್ಪಿತಾ ಅವರ ಮಕ್ಕಳು, ಸೀಮಾ ಸಜ್ದೇಹ್ ಮತ್ತು ಲುಲಿಯಾ ವಂತೂರ್ ಸೊಹೈಲ್ ತಂಡವನ್ನು ಬೆಂಬಲಿಸಿದರು. ಸಲ್ಮಾನ್ ಹಂಚಿಕೊಂಡ ವೀಡಿಯೊದಲ್ಲಿ ತಾಯಿ, ಸೋದರಳಿಯ ಮತ್ತು ಸೊಸೆಯೊಂದಿಗೆ ಅದ್ಭುತ ಕ್ಷಣಗಳನ್ನು ಹಂಚಿಕೊಂಡರು. ತಾಯಿ ಸಲ್ಮಾಳ ಮುಖಕ್ಕೆ ಮುದ್ದಾಗಿ ಮುತ್ತಿಟ್ಟಿದ್ದಾರೆ ಸಲ್ಲು.

ಸಲ್ಮಾನ್ ಖಾನ್ ಇನ್‌ಸ್ಟಾದಲ್ಲಿ ಈ ಕ್ಯೂಟ್‌ ವಿಡಿಯೊ ಶೇರ್‌ ಮಾಡಿಕೊಂಡಿದ್ದಾರೆ. ಮುಂಬೈ ಹೀರೋಸ್ ಜೆರ್ಸಿಯನ್ನು ಹಾಕಿಕೊಂಡು ತಮ್ಮ ತಂಡದೊಂದಿಗೆ ಸ್ಥಳಕ್ಕೆ ಪ್ರವೇಶಿಸಿದ್ದಾರೆ. ಬಳಿಕ ತಾಯಿ ಸಲ್ಮಾಳ ಮುಖಕ್ಕೆಲ್ಲ ಮುತ್ತಿಟ್ಟರು. ಸೋದರಳಿಯ ಮತ್ತು ಸೊಸೆಗೆ ಫ್ರೆಂಚ್ ಫ್ರೈಗಳನ್ನು ತಿನ್ನಿಸಿ ಮುದ್ದು ಮಾಡಿದ್ದಾರೆ.

ಸಲ್ಮಾನ್ ಖಾನ್ ಈ ವೇಳೆ ಮಾಧ್ಯಮದ ಜತೆ ಮಾತನಾಡಿ, “ಕ್ರಿಕೆಟ್ ನಮಗೆ ಒಂದು ಧರ್ಮ. ನಾವೆಲ್ಲರೂ ಅದನ್ನು ಪ್ರೀತಿಸುತ್ತೇವೆ. ಅದಕ್ಕಾಗಿಯೇ ನಾವು ಸಿಸಿಎಲ್‌ನಲ್ಲಿದ್ದೇವೆ. 10 ವರ್ಷಗಳಿಂದ ಸಿಸಿಎಲ್‌ ಮಾಡಿಕೊಂಡು ಬಂದಿದ್ದೇವೆ. ವರ್ಷದಿಂದ ವರ್ಷಕ್ಕೆ ನಾವು ಇದನ್ನು ಮುಂದುವರಿಸಿಕೊಂಡು ಹೋಗುತ್ತೇವೆʼʼಎಂದು ಹೇಳಿದ್ದಾರೆ.

ಸೊಹೈಲ್ ಮುಂಬೈ ಹೀರೋಸ್‌ ತಂಡದ ಮಾಲೀಕರಾಗಿದ್ದರೆ, ಸಲ್ಮಾನ್ ಖಾನ್ ತಂಡದ ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆ. ಮತ್ತು ರಿತೇಶ್ ದೇಶಮುಖ್ ತಂಡದ ನಾಯಕರಾಗಿದ್ದಾರೆ.

ಇದನ್ನೂ ಓದಿ: Cricket Fraud: ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಹೆಸರಿನಲ್ಲಿ ಮಹಿಳೆಯಿಂದ 1.5 ಕೋಟಿ ರೂ. ದೋಚಿದ ಗ್ಯಾಂಗ್, 4 ವರ್ಷದ ಬಳಿಕ ಕೇಸ್!

ವೈರಲ್‌ ವಿಡಿಯೊ

ಯಾವ ತಂಡಕ್ಕೆ ಯಾರು ನಾಯಕರು?:

ಸೆಲೆಬ್ರಿಟಿ ಕ್ರಿಕೆಟ್‌ ಲೀಗ್‌ನ ಮುಂಬೈ ಹೀರೋಸ್ ತಂಡಕ್ಕೆ ಸಲ್ಮಾನ್‌ ಖಾನ್‌ ಬ್ರಾಂಡ್ ಅಂಬಾಸಿಡರ್‍ ಆಗಿದ್ದಾರೆ. ರಿತೇಶ್‌ ದೇಶಮುಖ್ ಈ ತಂಡದ ನಾಯಕ. ಸೋಹೈಲ್ ಖಾನ್, ಮುಂಬೈ ಹೀರೊಸ್ ತಂಡದ ಮಾಲೀಕರಾಗಿದ್ದಾರೆ. ‘ತೆಲುಗು ವಾರಿಯರ್ಸ್‌’ ತಂಡಕ್ಕೆ ವೆಂಕಟೇಶ್‌ ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆ. ಅಖಿಲ್ ಅಕ್ಕಿನೇನಿ ‘ತೆಲುಗು ವಾರಿಯರ್ಸ್‌’ ತಂಡದ ನಾಯಕ. ‘ಕರ್ನಾಟಕ ಬುಲ್ಡೋಜರ್ಸ್‌’ ತಂಡಕ್ಕೆ ಕಿಚ್ಚ ಸುದೀಪ್‌ ನಾಯಕನಾಗಿದ್ದಾರೆ. ಬಿಗ್‌ಬಾಸ್‌ ಕನ್ನಡ ಸೀಸನ್‌ 10 ಅನ್ನು ಈಗಷ್ಟೇ ಮುಗಿಸಿರುವ ಸುದೀಪ್‌, ಮತ್ತೊಮ್ಮೆ ಸಿಸಿಎಲ್‌ 10 ಮೂಲಕ ಜಿಯೊಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮೋಹನ್‌ಲಾಲ್‌ ಸಹಮಾಲೀಕರಾಗಿರುವ ‘ಕೇರಳ ಸ್ಟ್ರೈಕರ್ಸ್‌’ ತಂಡಕ್ಕೆ ಇಂದ್ರಜಿತ್ ನಾಯಕರಾಗಿದ್ದಾರೆ. ‘ಭೋಜಪುರಿ ದಬಾಂಗ್ಸ್‌’ ತಂಡಕ್ಕೆ ಮನೋಜ್‌ ತಿವಾರಿ ನಾಯಕರಾಗಿದ್ದಾರೆ. ‘ಪಂಜಾಬ್‌ ದೆ ಶೇರ್’ ತಂಡಕ್ಕೆ ಸೋನು ಸೂದ್‌ ನಾಯಕರಾಗಿದ್ದಾರೆ. ಬೋನಿ ಕಪೂರ್ ಮಾಲೀಕರಾಗಿರುವ ‘ಬೆಂಗಾಲ್ ಟೈಗರ್ಸ್‌’ ತಂಡಕ್ಕೆ ಜಿಸ್ಸು ಸೆನ್‌ಗುಪ್ತ ನಾಯಕರಾಗಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಸ್ಯಾಂಡಲ್ ವುಡ್

Kannada New Movie: ‘ ರಂಗಸ್ಥಳ’ ಸಿನಿಮಾಗೆ ಮಲಯಾಳಂನ ಖ್ಯಾತ ನಟ ಎಂಟ್ರಿ

Kannada New Movie: ಇನ್ನು ಈ ಚಿತ್ರ ನಿರ್ದೇಶನ ಮಾಡುತ್ತಿರುವ ಯುವ ಪ್ರತಿಭೆ ಈಶ್ವರ್ ನಿತಿನ್ ಪ್ರಥಮ ಪ್ರಯತ್ನ ಇದಾಗಿದೆ. ಡೆಂಟಲ್ ವಿದ್ಯಾರ್ಥಿ ಆಗಿದ್ದ ನಿತಿನ್ , ಎಲ್. ವಿ. ಪ್ರಸಾದ್ ಫಿಲಂ ಇನ್ಸ್ಟಿಟ್ಯೂಟ್ ನಲ್ಲಿ ತರಬೇತಿ ಪಡೆದು ಒಂದಷ್ಟು ಕಿರು ಚಿತ್ರ , ಹ್ಯಾಡ್ ಫಿಲಂ ನಲ್ಲಿ ವರ್ಕ್ ಮಾಡುವ ಮೂಲಕ ಪೂರ್ಣ ಪ್ರಮಾಣದ ಸಿನಿಮಾ ಮಾಡಲು ಮುಂದಾಗಿದ್ದಾರೆ. ಈ ಚಿತ್ರದಲ್ಲಿ ನಾಯಕನ ಒಬ್ಬ ಯಕ್ಷಗಾನ ಕಲಾವಿದ ಹಾಗೂ ನಾಯಕಿ ವೈಲ್ಡ್ ಲೈಫ್ ಫೋಟೋಗ್ರಾಫರ್. ಹಾಗೆಯೇ ಮಲಯಾಳಂನ ಖ್ಯಾತ ನಟ ಮನೋಜ್. ಕೆ. ಜಯನ್ ಒಂದು ನೆಗೆಟಿವ್ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.

VISTARANEWS.COM


on

Kannada New Movie Rangasthala movie
Koo

ಬೆಂಗಳೂರು: ಚಂದನವನಕ್ಕೆ ಯುವಕರ ಬಳಗವು ಪೂರ್ವ ತಯಾರಿಯೊಂದಿಗೆ ಒಂದು ಕಂಪನಿಯ ಮಾದರಿಯಲ್ಲಿ ತಂಡವನ್ನು ಕಟ್ಟಿಕೊಂಡು ಚಿತ್ರ (Kannada New Movie) ನಿರ್ಮಾಣಕ್ಕೆ ಮುಂದಾಗಿದೆ. ಜೀವನವೇ ಒಂದು ರಂಗ ಪ್ರಪಂಚ ಅಲ್ಲಿ ಎಲ್ಲಾ ರೀತಿಯ ಏಳು, ಬೀಳುಗಳು, ಪಾತ್ರಧಾರಿಗಳು ಕಣ್ಣ ಮುಂದೆ ಹಾದು ಹೋಗುತ್ತಾರೆ. ಅಂತಹದ್ದೇ ಒಂದು ವಿಭಿನ್ನ ಕಥೆಯ ಮೂಲಕ ʻಅಘೋರ್ ಮೋಶನ್ ಪಿಚ್ಚರ್ಸ್ʼ ಅಡಿಯಲ್ಲಿ ಡಾ. ರೇವಣ್ಣ ನಿರ್ಮಾಣದ ‘ರಂಗಸ್ಥಳ ‘ ಎಂಬ ನೂತನ ಚಿತ್ರದ ಟೈಟಲ್ ಲಾಂಚ್ ಬಿಡುಗಡೆ ಮಾಡಲಾಯಿತು. ಈ ಕಾರ್ಯಕ್ರಮಕ್ಕೆ ರಾಜಕೀಯ ಮುಖಂಡ ಮಂಜುನಾಥ್ , ಸಂತೋಷ್ ಸೇರಿದಂತೆ ಹಲವರು ಹಾಜರಿದ್ದರು. ಬಹುತೇಕ (manoj jayan) ಯುವ ಪ್ರತಿಭೆಗಳ ತಂಡ ಸೇರಿಕೊಂಡು ಸಿದ್ಧಪಡಿಸುತ್ತಿರುವ ಈ ಚಿತ್ರದ ಪತ್ರಿಕಾಗೋಷ್ಠಿಯನ್ನ MMB ಲೆಗೆಸಿ ಆಯೋಜಿಸಲಾಗಿದ್ದು , ಮಾಧ್ಯಮದವರ ಮುಂದೆ ಚಿತ್ರ ತಂಡ ಮಾಹಿತಿಯನ್ನು ಹಂಚಿಕೊಳ್ಳಲು ಮುಂದಾದರು.

ಈ ಚಿತ್ರದ ನಿರ್ಮಾಪಕ ಡಾ. ರೇವಣ್ಣ ಮಾತನಾಡಿ ʻʻನಾನು ಮೂಲತಃ ರೈತ ಕುಟುಂಬದಿಂದ ಬಂದವನು, ವಿದ್ಯಾಭ್ಯಾಸದಲ್ಲಿ ಹೆಚ್ಚು ಗಮನ ಇಲ್ಲದಿದ್ದರೂ ಮನೆಯವರ ಒತ್ತಾಯದ ಮೇರೆಗೆ ಮುಗಿಸಿ ಡಿಗ್ರಿ ಮುಗಿಸಿಕೊಂಡೆ. ಭದ್ರಾವತಿಯ ಉಕ್ಕಿನ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ನನ್ನ ಎತ್ತರವನ್ನು ಗಮನಿಸಿದಂತಹ ಹಿರಿಯರೊಬ್ಬರು ನನಗೆ ವಾಲಿಬಾಲ್ ತಂಡಕ್ಕೆ ಸೇರಿಸಿದರು. ನಂತರ ನಾನು ಜಿಲ್ಲಾ ಮಟ್ಟದಿಂದ ರಾಜ್ಯಮಟ್ಟಕ್ಕೂ ಆಡಿ ಪ್ರಶಸ್ತಿಯನ್ನು ಪಡೆದೆ. ನನ್ನ ಸೇವೆಯನ್ನು ಗುರುತಿಸಿ ಡಾಕ್ಟರೇಟ್ ಪದವಿಯು ಸಿಕ್ಕಿತು. ಸಿನಿಮಾ ಬಗ್ಗೆ ನಮಗೇನು ಹೆಚ್ಚು ಒಲವಿಲ್ಲ ಆದರೆ ನನ್ನ ಇಬ್ಬರು ಮಕ್ಕಳಾದ ವಿನೋದ್ ಕುಮಾರ್ ಜೈ ಕೀರ್ತಿ ಹಾಗೂ ವಿನಯ್ ಕುಮಾರ್ ಜೈ ಕೀರ್ತಿ ಅಮೇರಿಕಾದಲ್ಲಿ ಸ್ವಂತ ಉದ್ಯೋಗವನ್ನು ಆರಂಭಿಸಿದರು , ಅದು ಹಂತ ಹಂತವಾಗಿ ದೊಡ್ಡ ಮಟ್ಟಕ್ಕೆ ಬೆಳೆದಿದೆ. ಅವರ ಜೊತೆ ನಾನು ನನ್ನ ಮಡಿದಿ ಕೂಡ ಈಗ ಕೈಜೋಡಿಸಿದ್ದೇವೆ. ಈ ಒಂದು ಚಿತ್ರವನ್ನ ಸಾಫ್ಟ್ವೇರ್ ಕಂಪನಿಯ ಕಾರ್ಯ ವೈಖರಿಯಂತೆ ಬಹಳ ಅಚ್ಚುಕಟ್ಟಾಗಿ ಆರಂಭಿಸಿದ್ದೇವೆ, ಕಲಾವಿದರು , ತಂತ್ರಜ್ಞಾನರ ಆಯ್ಕೆಯ ಜೊತೆಗೆ ವಿಶೇಷವಾಗಿ ಮಲಯಾಳಂನ ಖ್ಯಾತ ನಟ ಮನೋಜ್. ಕೆ.ಜಯನ್ ಆಯ್ಕೆಯನ್ನು ನನ್ನ ಸುಪುತ್ರ ವಿನೋದ್ ಫೈನಲ್ ಮಾಡಿದ್ರು. ಈಗಾಗಲೇ ಚಿತ್ರೀಕರಣ ಶುರುವಾಗಿದೆ. ತಂಡ ಅಚ್ಚುಕಟ್ಟಾಗಿ ಕೆಲಸ ಮಾಡ್ತಿದೆ. ನಮ್ಮಿಂದ 150 ಕುಟುಂಬಗಳಿಗೆ ಅನುಕೂಲವಾದರೆ ಸಾಕು , ನಮಗೆ ಲಾಭ ಬೇಡ ಹಾಕಿದ ಹಣ ಬಂದರೆ ಸಾಕು , ನಮ್ಮ ಸಂಸ್ಥೆಯಿಂದ ಹೊಸಬರಿಗೆ ಮುಂದೆಯೂ ಅವಕಾಶ ಕೊಡುವ ಉದ್ದೇಶವಿದೆ. ಹಾಗೆಯೇ ವಾಲಿಬಾಲ್ ಗೆ ಸಂಬಂಧಪಟ್ಟ ಚಿತ್ರವನ್ನು ನಿರ್ಮಿಸುವ ಆಸೆಯೂ ನನಗಿದೆʼʼ ಎಂದು ಹೇಳಿಕೊಂಡರು.

ಇದನ್ನೂ ಓದಿ: Mallikarjuna Kharge: ಪ್ರಧಾನಿ ಮೋದಿ ವಡೋದರಾ ಬಿಟ್ಟು ವಾರಣಾಸಿಗೆ ಓಡಲಿಲ್ಲವೇ?; ಖರ್ಗೆ ಕಿಡಿ

ಇನ್ನು ಈ ಚಿತ್ರದಲ್ಲಿ ಬಹಳ ಪ್ರಮುಖ ಪಾತ್ರದಲ್ಲಿ ಮಲಯಾಳಂನ ಖ್ಯಾತ ನಟ ಮನೋಜ್. ಕೆ .ಜಯನ್ ಅಭಿನಯಿಸುತ್ತಿದ್ದಾರೆ. ಮಲಯಾಳಂ , ತಮಿಳು , ತೆಲುಗು ಸೇರಿದಂತೆ ಸುಮಾರು 200ಕ್ಕೂಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಮಲಯಾಳಂ ಚಿತ್ರದಲ್ಲಿ ಎರಡು ಬಾರಿ ಉತ್ತಮ ನಟ ಪ್ರಶಸ್ತಿಯನ್ನು ಪಡೆದಿದ್ದಾರೆ. ಸುಮಾರು 2005ರಲ್ಲಿ ಉಗ್ರ ನರಸಿಂಹ ಚಿತ್ರದಲ್ಲಿ ಅಭಿನಯಿಸಿದ್ದ ಮನೋಜ್ ಸುಮಾರು 18 ವರ್ಷಗಳ ನಂತರ ಮತ್ತೊಮ್ಮೆ ರಂಗಸ್ಥಳ ಮೂಲಕ ವಿಲನ್ ಪಾತ್ರದಲ್ಲಿ ಕಾಡಿಸಿಕೊಂಡಿದ್ದಾರೆ. ಮಲಯಾಳಂ ವ್ಯಕ್ತಿಯಾಗಿ ಪಾತ್ರವನ್ನು ನಿರ್ವಹಿಸಿದ್ದು , ಚಿತ್ರದ ಕಥೆಗೆ ಪೂರಕವಾಗಿ ಮೂಡಿ ಬರ್ತಿದೆಯಂತೆ. ಮಲಯಾಳಂ ಭಾಷೆಯಲ್ಲಿ ಮಾತನಾಡುತ್ತಾ ʻʻಕನ್ನಡ ಭಾಷೆಗೆ ದೈವಿಕ ಶಕ್ತಿ ಇದೆ. ನಾನು ಡಾ. ರಾಜ್ ಕುಮಾರ್ ಅವರ ಅಭಿಮಾನಿ. ಅವರು ತಮ್ಮ ಚಿತ್ರಗಳಲ್ಲಿ ತಾವೇ ಹಾಡುತ್ತಾ ಅಭಿನಯಿಸುತ್ತಿದ್ದು ನನಗೆ ಬಹಳ ಸಂತೋಷವಾಗುತ್ತಿತ್ತು.ನನಗೆ ಮತ್ತೊಮ್ಮೆ ಕನ್ನಡ ಚಿತ್ರದಲ್ಲಿ ಅಭಿನಯಿಸಲು ಅವಕಾಶ ನೀಡಿದಂತಹ ನಿರ್ಮಾಪಕ , ನಿರ್ದೇಶಕ ಹಾಗೂ ನನ್ನ ಸ್ನೇಹಿತರಿಗೆ ಧನ್ಯವಾದ ತಿಳಿಸುತ್ತೇನೆʼʼ ಎಂದು ಹೇಳಿದರು.

ಇನ್ನು ಈ ಚಿತ್ರ ನಿರ್ದೇಶನ ಮಾಡುತ್ತಿರುವ ಯುವ ಪ್ರತಿಭೆ ಈಶ್ವರ್ ನಿತಿನ್ ಪ್ರಥಮ ಪ್ರಯತ್ನ ಇದಾಗಿದೆ. ಡೆಂಟಲ್ ವಿದ್ಯಾರ್ಥಿ ಆಗಿದ್ದ ನಿತಿನ್ , ಎಲ್. ವಿ. ಪ್ರಸಾದ್ ಫಿಲಂ ಇನ್ಸ್ಟಿಟ್ಯೂಟ್ ನಲ್ಲಿ ತರಬೇತಿ ಪಡೆದು ಒಂದಷ್ಟು ಕಿರು ಚಿತ್ರ , ಹ್ಯಾಡ್ ಫಿಲಂ ನಲ್ಲಿ ವರ್ಕ್ ಮಾಡುವ ಮೂಲಕ ಪೂರ್ಣ ಪ್ರಮಾಣದ ಸಿನಿಮಾ ಮಾಡಲು ಮುಂದಾಗಿದ್ದಾರೆ. ಇದೊಂದು ಗ್ರಾಮೀಣ ಸೊಗಡಿನ ಕಥೆಯಾಗಿದ್ದು , ನಮ್ಮ ಪುತ್ತೂರು , ಸುಳ್ಯ , ಭಾಗದ ಭಾಷೆ , ಸೊಗಡು , ಆಚಾರ , ವಿಚಾರ , ಕಲೆ, ಬದುಕಿನ ಸುತ್ತ ನೈಜಕ್ಕೆ ಪೂರಕ ಎನ್ನುವಂತಹ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದು, ರಂಗಸ್ಥಳ ಎಂದರೆ ನನ್ನ ಪ್ರಕಾರ ಒಂದು ವೇದಿಕೆ , ರಂಗ ಕಲೆಗಳ ಪ್ರದರ್ಶನ ನಡೆಯುವ ಸ್ಥಳ. ಅದೇ ರೀತಿ ನನ್ನ ಕಥೆಗೆ ಬರುವ ಪಾತ್ರಧಾರಿಗಳ ಒಬ್ಬೊಬ್ಬರದು ಒಂದೊಂದು ರೀತಿಯ ಮನಸ್ಥಿತಿ. ಅದು ಹೇಗೆ , ಯಾವ ರೀತಿ , ಏನೆಲ್ಲಾ ತೊಂದರೆಗಳನ್ನು ನೀಡುತ್ತದೆ. ಈ ರಂಗ ಮಂಟಪದಲ್ಲಿ ಏನೆಲ್ಲಾ ನಡೆಯುತ್ತದೆ ಎಂಬುದನ್ನು ಹೇಳುವ ಪ್ರಯತ್ನ ಮಾಡಿದ್ದೇನೆ.

ಈ ಚಿತ್ರದಲ್ಲಿ ನಾಯಕನ ಒಬ್ಬ ಯಕ್ಷಗಾನ ಕಲಾವಿದ ಹಾಗೂ ನಾಯಕಿ ವೈಲ್ಡ್ ಲೈಫ್ ಫೋಟೋಗ್ರಾಫರ್. ಹಾಗೆಯೇ ಮಲಯಾಳಂನ ಖ್ಯಾತ ನಟ ಮನೋಜ್. ಕೆ. ಜಯನ್ ಒಂದು ನೆಗೆಟಿವ್ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಬಹಳಷ್ಟು ಹೊಸಬರು ಹಾಗೂ ಅನುಭವಿ ಕಲಾವಿದರು ಅಭಿನಯಿಸುತ್ತಿದ್ದು , ಈಗಾಗಲೇ 25 ದಿನಗಳ ಕಾಲ ಚಿತ್ರೀಕರಣ ಮಾಡಿದ್ದು , 40% ಕೆಲಸ ಮುಗಿದಿದೆ. ಇಂದು ಚಿತ್ರದ ಟೈಟಲ್ ಬಿಡುಗಡೆ ಮಾಡಿದ್ದೇವೆ ಎಂದು ಹೇಳಿಕೊಂಡರು.

ನಾಯಕನಾಗಿ ಅಭಿನಯಿಸುತ್ತಿರುವ ವಿಲೋಕ್ ರಾಜ್ ಚಿತ್ರರಂಗದಲ್ಲಿ ಬಹಳಷ್ಟು ವರ್ಷ ಕೆಲಸ ಮಾಡಿದ್ದು , ಸುಮಾರು 9 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಗಿರ್ಕಿ ಚಿತ್ರದ ನಂತರ ಈ ‘ರಂಗಸ್ಥಳ’ ವಿಲೋಕ್ ಚಿತ್ರ ಜೀವನಕ್ಕೆ ಒಂದು ತಿರುವು ನೀಡುವಂತಹ ಸಿನಿಮಾ ವಾಗಲಿದೆಯಂತೆ. ಈ ಚಿತ್ರದಲ್ಲಿ ಒಬ್ಬ ಯಕ್ಷಗಾನ ಕಲಾವಿದನಾಗಿ ಅಭಿನಯಿಸುತ್ತಿದ್ದು , ಇದಕ್ಕಾಗಿ ಮೂರು ತಿಂಗಳ ತರಬೇತಿಯನ್ನು ಕೂಡ ಪಡೆದಿದ್ದಾರಂತೆ. ಹಾಗೆಯೇ ಭಾಷೆಯ ವಿಚಾರವಾಗಿಯೂ ಬಹಳ ಸೂಕ್ಷ್ಮವಾಗಿ ಗಮನಹರಿಸುತ್ತಿದ್ದು , ನಿರ್ದೇಶಕರು ಹೇಳಿದಂತೆ ಬಹಳ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇನೆ. ನಿರ್ಮಾಪಕ ಡಾ. ರೇವಣ್ಣ ಈ ಚಿತ್ರವನ್ನು ದೊಡ್ಡ ಮಟ್ಟದಲ್ಲಿ ನಿರ್ಮಿಸುತ್ತಿದ್ದಾರೆ. ನಾವು ಮೊದಲು ಸಣ್ಣ ಬಜೆಟ್ ಪ್ಲಾನ್ ಮಾಡಿಕೊಂಡಿದ್ದೇವು, ಆದರೆ ನಿರ್ಮಾಪಕರ ಪುತ್ರ ವಿನೋದ್ ಸಹಕಾರದೊಂದಿಗೆ ಈ ಚಿತ್ರ ಬೇರೆದೇ ರೂಪ ಪಡೆಯುತ್ತಿದೆ. ನಮ್ಮಂತ ಪ್ರತಿಭೆಗಳನ್ನು ಪ್ರೋತ್ಸಾಹಿಸಿ , ಬೆಳೆಸಿ ಎಂದು ಕೇಳಿಕೊಂಡರು.
ಇನ್ನು ಮಂಗಳೂರು ಮೂಲದ ಬೆಡಗಿ ಶಿಲ್ಪ ಕಾಮತ್ ಶಾರ್ಟ್ ಮೂವೀಸ್ ನಲ್ಲಿ ಅಭಿನಯಿಸಿದ್ದು , ಆಡಿಷನ್ ಮೂಲಕ ಈ ಚಿತ್ರ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಈ ಚಿತ್ರದಲ್ಲಿ ಒಬ್ಬ ವೈಲ್ಡ್ ಲೈಫ್ ಫೋಟೋಗ್ರಾಫರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರಂತೆ. ಈ ಚಿತ್ರದಲ್ಲಿ ಮನೋಜ್ ಜೆಬೆ ಎಂಬ ಮಲಯಾಳಂ ಪ್ರತಿಭೆ ಕಾಮಿಡಿ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಹಾಗೆ ಮತ್ತೊಬ್ಬ ಪ್ರತಿಭೆ ಸಂಧ್ಯಾ ಅರ್ಕೆರೆ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.

ಈ ಚಿತ್ರಕ್ಕೆ ಎನಾಷ್ ಒಲಿವೇರ ಛಾಯಾಗ್ರಹಣ ಮಾಡುತ್ತಿದ್ದು , ಜೂಡೋ ಸ್ಯಾಂಡಿ ಆರು ಹಾಡುಗಳಿಗೆ ಸಂಗೀತವನ್ನು ನೀಡುತ್ತಿದ್ದು , ಪ್ರಭಾಕರನ್ ರಾಮು ಕಲಾ ನಿರ್ದೇಶನ ಈ ಚಿತ್ರಕ್ಕೆ ಇದೆ.

Continue Reading

ಸ್ಯಾಂಡಲ್ ವುಡ್

Covishield vaccine: ಕೋವಿಶೀಲ್ಡ್‌ ‌ ತಗೋಬೇಡಿ, ಒಳ್ಳೆಯದಲ್ಲ ಎಂದು ಅಪ್ಪುಗೆ ಮನವಿ ಮಾಡಿದ್ದ ಅಭಿಮಾನಿ: ಪೋಸ್ಟ್‌ ವೈರಲ್‌!

Covishield vaccine: ಕೋವಿಶೀಲ್ಡ್ ತೆಗೆದುಕೊಂಡಿದ್ದರಿಂದಲೇ ಪುನೀತ್​ಗೆ ಹೃದಯಾಘಾತ ಆಯಿತು ಎಂದು ಕೆಲವರು ಆರೋಪಿಸಿದ್ದಾರೆ. ಏಕೆಂದರೆ ಈ ಕುರಿತ ಹಳೆಯ ಟ್ವೀಟ್‌ವೊಂದು ವೈರಲ್‌ ಆಗಿದೆ. ಬ್ರಿಟನ್‌ನ ಮಾಧ್ಯಮ ವರದಿಗಳು ಉಲ್ಲೇಖಿಸಿರುವ ನ್ಯಾಯಾಲಯದ ದಾಖಲೆಗಳ ಪ್ರಕಾರ, ತನ್ನ ಕೋವಿಡ್ ಲಸಿಕೆ ಅಪರೂಪವಾಗಿ ರಕ್ತ ಹೆಪ್ಪುಗಟ್ಟುವಿಕೆಯನ್ನು ಒಳಗೊಂಡ ಅಡ್ಡ ಪರಿಣಾಮಕ್ಕೆ ಕಾರಣವಾಗಬಹುದು ಎಂದು ಒಪ್ಪಿಕೊಂಡಿದೆ.

VISTARANEWS.COM


on

Covishield vaccine Puneeth Rakumar
Koo

ಬೆಂಗಳೂರು: ಭಾರತದಲ್ಲಿ ಕೊರೊನಾ ವೈರಸ್‌ (Corona Virus) ಎದುರಿಸಲು ಕೋವಿಶೀಲ್ಡ್‌ ಲಸಿಕೆ (Covishield vaccine) ತೆಗೆದುಕೊಂಡವರಲ್ಲಿ ರಕ್ತ ಹೆಪ್ಪುಗಟ್ಟುವ (blood clotting) ಅಡ್ಡ ಪರಿಣಾಮದ (Side effects) ಅಪಾಯದ ಸಾಧ್ಯತೆಗಳು ತೀರಾ ಕಡಿಮೆ ಎಂದು ಭಾರತದ ಹಿರಿಯ ಸಾಂಕ್ರಾಮಿಕ ರೋಗಶಾಸ್ತ್ರಜ್ಞ, (Covishield vaccine) ಮಾಜಿ ICMR ವಿಜ್ಞಾನಿ ಡಾ. ರಾಮನ್ ಗಂಗಾಖೇಡ್ಕರ್ ಹೇಳಿಕೆ ನೀಡಿದ್ದಾರೆ. ಆದರೂ ಕೊರೊನಾ ಲಸಿಕೆ ತೆಗೆದುಕೊಂಡ ಬಳಿಕ ದೇಶದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿವೆ ಎಂಬ ವರದಿಗಳೂ ಇವೆ. ಇದೀಗ ಪುನೀತ್‌ ರಾಜ್‌ಕುಮಾರ್‌ (Puneeth Rajkumar) ಅವರ ಕುರಿತು ಪೋಸ್ಟ್‌ ವೊಂದು ವೈರಲ್‌ ಆಗುತ್ತಿದೆ. ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಕೋವಿಶೀಲ್ಡ್ ತೆಗೆದುಕೊಂಡಿದ್ದರಿಂದಲೇ ಪುನೀತ್​ಗೆ ಹೃದಯಾಘಾತ ಆಯಿತು ಎಂದು ಕೆಲವರು ಆರೋಪಿಸಿದ್ದಾರೆ.

ಪುನೀತ್ ರಾಜ್‌ಕುಮಾರ್‌ ಅವರು 2021ರ ಅಕ್ಟೋಬರ್‌ 29ರಂದು ಹೃದಯಾಘಾತದಿಂದ ನಿಧನರಾದರು. ಇದೀಗ ಕೋವಿಶೀಲ್ಡ್ ತೆಗೆದುಕೊಂಡಿದ್ದರಿಂದಲೇ ಪುನೀತ್​ಗೆ ಹೃದಯಾಘಾತ ಆಯಿತು ಎಂದು ಕೆಲವರು ಆರೋಪಿಸಿದ್ದಾರೆ. ಏಕೆಂದರೆ ಈ ಕುರಿತ ಹಳೆಯ ಟ್ವೀಟ್‌ವೊಂದು ವೈರಲ್‌ ಆಗಿದೆ. ಬೃಂದಾವನಾ ಹೆಸರಿ ಖಾತೆಯಿಂದ ಅಭಿಮಾನಿಯೊಬ್ಬರು ʻʻ‘ನೀವು 45 ವರ್ಷ ಮೇಲ್ಪಟ್ಟಿದ್ದರೆ ವ್ಯಾಕ್ಸಿನ್ ಹಾಕಿಸಿಕೊಳ್ಳಿ. ಕೋವಿಶೀಲ್ಡ್ ತೆಗೆದುಕೊಳ್ಳಬೇಡಿ. 45 ವರ್ಷ ಮೇಲ್ಪಟ್ಟವರಿಗೆ ಇದು ಒಳ್ಳೆಯದಲ್ಲ’ ಎಂದು ಬರೆಯಲಾಗಿತ್ತುʼʼಸದ್ಯ ಈ ಪೋಸ್ಟ್ ಮತ್ತೆ ವೈರಲ್ ಆಗುತ್ತಿದೆ.

ಇದನ್ನೂ ಓದಿ: Ashwini Puneeth Rajkumar: ಐಶಾರಾಮಿ ಆಡಿ ಕ್ಯೂ7 ಕಾರು ಖರೀದಿಸಿದ ಅಶ್ವಿನಿ ಪುನೀತ್​ರಾಜ್​ಕುಮಾರ್

ಕೋವಿಶೀಲ್ಡ್ ಅನ್ನು ಸ್ವೀಕರಿಸುವ 10 ಲಕ್ಷ ಜನರಲ್ಲಿ ಏಳರಿಂದ ಎಂಟು ವ್ಯಕ್ತಿಗಳು ಮಾತ್ರ ಥ್ರಂಬೋಸಿಸ್ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ (ಟಿಟಿಎಸ್) ಎಂದು ಕರೆಯಲ್ಪಡುವ ಅಪರೂಪದ ಅಡ್ಡ ಪರಿಣಾಮವನ್ನು ಅನುಭವಿಸುತ್ತಾರೆ. ಭಾರತದಲ್ಲಿ ಇದರ ಪ್ರಮಾಣ ಇನ್ನೂ ಕಡಿಮೆ ಇದೆ ಎಂದು ವರದಿಯಾಗಿದೆ. ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ರಕ್ತ ಹೆಪ್ಪುಗಟ್ಟುವಿಕೆಯ ಅಡ್ಡ ಪರಿಣಾಮ ಕಾಣಿಸಿಕೊಳ್ಳಬಹುದು ಎಂದು ಮೊನ್ನೆ ಅದರ ತಯಾರಿಕಾ ಕಂಪನಿ ಅಸ್ಟ್ರಾಜೆನೆಕಾ ಯುಕೆ ನ್ಯಾಯಾಲಯದಲ್ಲಿ ಒಪ್ಪಿಕೊಂಡ ಬಳಿಕ ಈ ಬಗ್ಗೆ ಆತಂಕ ಮೂಡಿತ್ತು.

ಬ್ರಿಟನ್‌ನ ಮಾಧ್ಯಮ ವರದಿಗಳು ಉಲ್ಲೇಖಿಸಿರುವ ನ್ಯಾಯಾಲಯದ ದಾಖಲೆಗಳ ಪ್ರಕಾರ, ತನ್ನ ಕೋವಿಡ್ ಲಸಿಕೆ ಅಪರೂಪವಾಗಿ ರಕ್ತ ಹೆಪ್ಪುಗಟ್ಟುವಿಕೆಯನ್ನು ಒಳಗೊಂಡ ಅಡ್ಡ ಪರಿಣಾಮಕ್ಕೆ ಕಾರಣವಾಗಬಹುದು ಎಂದು ಒಪ್ಪಿಕೊಂಡಿದೆ. ಈ ಲಸಿಕೆಯನ್ನು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (SII) ಸಹ ಉತ್ಪಾದಿಸಿದೆ. ಇದನ್ನು ಕೋವಿಶೀಲ್ಡ್ ಎಂದು ಕರೆಯಲಾಗುತ್ತದೆ. ಭಾರತೀಯ ಜನಸಂಖ್ಯೆಯ ಕನಿಷ್ಠ 90 ಪ್ರತಿಶತದಷ್ಟು ಜನರು ಈ ಲಸಿಕೆಯನ್ನು ಪಡೆದಿದ್ದಾರೆ. ಭಾರತದಲ್ಲಿ ಸುಮಾರು 175 ಕೋಟಿ ಕೋವಿಶೀಲ್ಡ್‌ ಲಸಿಕೆ ಡೋಸ್‌ ನೀಡಲಾಗಿದೆ.

Continue Reading

ಸ್ಯಾಂಡಲ್ ವುಡ್

Kiccha Sudeep: ಕಿಚ್ಚ ಸುದೀಪ್ ಸಿನಿಮಾಗೆ ‘ಜೈಲರ್’ ಸ್ಟಂಟ್ ಮಾಸ್ಟರ್ ಎಂಟ್ರಿ!

Kiccha Sudeep: ʻಮ್ಯಾಕ್ಸ್ʼ ಸಿನಿಮಾಕ್ಕೆ ಕನ್ನಡದ ತಾರೆಯರು ಇದ್ದಾರೆ. ಕನ್ನಡದ ಟೆಕ್ನಿಷನ್‌ಗಳೂ ಇದ್ದಾರೆ. ಹಾಗೆ ಅಜನೀಶ್ ಲೋಕನಾಥ್ ಈ ಚಿತ್ರಕ್ಕೆ ಸಂಗೀತ ಕೊಟ್ಟಿದ್ದಾರೆ. ಶೇಖರ್ ಚಂದ್ರ ಕ್ಯಾಮೆರಾ ವರ್ಕ್ ಮಾಡಿದ್ದಾರೆ. ಸಂಯುಕ್ತಾ ಹೊರನಾಡು, ಸುಕೃತಾ ವಾಗ್ಲೆ ಕೂಡ ಈ ಸಿನಿಮಾದಲ್ಲಿ ಇದ್ದಾರೆ.ವರಲಕ್ಷ್ಮಿ ಶರತ್ ಕುಮಾರ್ ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ. ವಿಜಯ್ ಕಾರ್ತಿಕೇಯ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ತಮಿಳು ನಿರ್ಮಾಪಕ ಕಲೈಪುಲಿ ಎಸ್. ತನು ಜೊತೆ ಸೇರಿ ಕಿಚ್ಚ ಕ್ರಿಯೇಷನ್ಸ್ ಬ್ಯಾನರ್‌ನಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ.

VISTARANEWS.COM


on

Kiccha Sudeep jailer fame kevin has composed stunt in max
Koo

ಬೆಂಗಳೂರು: ʻವಿಕ್ರಾಂತ್ ರೋಣ’ ಬಳಿಕ ಕಿಚ್ಚ ಸುದೀಪ್ (Kiccha Sudeep) ಒಪ್ಪಿಕೊಂಡಿರುವ ಸಿನಿಮಾ ಮ್ಯಾಕ್ಸ್ (MAX). ಹೀಗಾಗಿ ಈ ಸಿನಿಮಾ ಬಗ್ಗೆ ಅವರ ಅಭಿಮಾನಿಗಳಲ್ಲಿ ಬಹಳಷ್ಟು ನಿರೀಕ್ಷೆಯಿದೆ. ವಿಜಯ್ ಕಾರ್ತಿಕೇಯನ್ ನಿರ್ದೇಶನದ ಈ ಸಿನಿಮಾ ಶೀಘ್ರದಲ್ಲೇ ತೆರೆಗೆ ಬರಲಿದೆ. ಸುದೀಪ್ ಮ್ಯಾಕ್ಸ್ ಚಿತ್ರಕ್ಕೆ ಹೊಸ ಸ್ಟಂಟ್ಸ್ ಮಾಸ್ಟರ್ ಬಂದಿದ್ದಾರೆ. ಕಳೆದ ವರ್ಷ ಸೂಪರ್ ಹಿಟ್ ಆಗಿದ್ದ ರಜನಿ ‘ಜೈಲರ್’ ಚಿತ್ರಕ್ಕೆ ಸ್ಟಂಟ್ಸ್ ಕಂಪೋಸ್ ಮಾಡಿದ್ದ ಕೆವಿನ್ ಇದೀಗ ‘ಮ್ಯಾಕ್ಸ್’ ತಂಡ ಸೇರಿದ್ದಾರೆ.

ಖ್ಯಾತ ಫೈಟ್ ಮಾಸ್ಟರ್ ಸ್ಟಂಟ್‌ ಶಿವ ಪುತ್ರ ಕೆವಿನ್. ಮಾರ್ಷಲ್ ಆಟ್ಸ್ ಸೇರಿದಂತೆ ಹಲವು ಕಲೆಗಳನ್ನು ಕಲಿತಿದ್ದ ಕೆವಿನ್ ಸದ್ಯ ಕಾಲಿವುಡ್‌ನಲ್ಲಿ ಗಮನ ಸೆಳೆದಿದ್ದಾರೆ. ರಜನಿಕಾಂತ್ ನಟನೆಯ ‘ಜೈಲರ್’ ಚಿತ್ರದ ಮೂಲಕ ಸ್ಟಂಟ್ ಮಾಸ್ಟರ್ ಆಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ಕೆವಿನ್ ಇದೀಗ ಕಿಚ್ಚನಿಗೆ ಫೈಟ್ ಕಂಪೋಸ್ ಮಾಡಿದ್ದಾರೆ. ನಾಲ್ಕೈದು ದಿನಗಳ ಕಾಲ ಆ ಆಕ್ಷನ್ ಸೀಕ್ವೆನ್ಸ್ ಚಿತ್ರೀಕರಣ ನಡೆದಿದೆ ಎಂದು ವರದಿಯಾಗಿದೆ. ಕನ್ನಡ ಸಿನಿಮಾಗಳಲ್ಲಿ ಇತ್ತೀಚೆಗೆ ಚೇತನ್ ಡಿಸೋಜಾ ಸ್ಟಂಟ್ಸ್ ಹೈಲೆಟ್ ಆಗುತ್ತಿದೆ. ‘ಮ್ಯಾಕ್ಸ್’ ಚಿತ್ರದಲ್ಲಿ ಕೆವಿನ್ ಒಂದು ಫೈಟ್ ಮಾತ್ರ ಕಂಪೋಸ್ ಮಾಡಿದ್ದಾರೆ. ಇನ್ನುಳಿದ ಆಕ್ಷನ್ ಸೀಕ್ವೆನ್ಸ್ ಚೇತನ್ ಡಿಸೋಜಾ ಮಾರ್ಗದರ್ಶನದಲ್ಲಿ ಬಂದಿದೆ ಎಂದು ವರದಿಯಾಗಿದೆ. ಮಹಾಬಲಿಪುರಂನಲ್ಲಿ ಸೆಟ್ ಹಾಕಿ ‘ಮ್ಯಾಕ್ಸ್’ ಚಿತ್ರದ ಬಹುತೇಕ ಚಿತ್ರೀಕರಣ ನಡೆಸಲಾಗುತ್ತಿದೆ.

ಇದನ್ನೂ ಓದಿ: Kiccha Sudeep: ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ ಕೊಟ್ಟ ಕಿಚ್ಚ ಸುದೀಪ್‌!

ಮ್ಯಾಕ್ಸ್ ಸಿನಿಮಾದಲ್ಲಿ ಸುದೀಪ್ ಪೊಲೀಸ್‌ ಪಾತ್ರದಲ್ಲಿ ಮಿಂಚಲಿದ್ದಾರೆ. ಪಾತ್ರದ ಹೆಸರು ವಿಭಿನ್ನವಾಗಿಯೇ ಇದೆ. ʻಅರ್ಜುನ್ ಮಹಾಕ್ಷಯ್ʼ ಹೆಸರಿನ ಸುದೀಪ್ ಪಾತ್ರ ಸ್ಪೆಷಲ್ ಆಗಿಯೇ ಇರಲಿದೆ ಎಂದು ವರದಿಯಾಗಿದೆ. ʻಮ್ಯಾಕ್ಸ್ʼ ಸಿನಿಮಾದಲ್ಲಿ ಸುದೀಪ್ ಭರ್ಜರಿ ಸಾಹಸಗಳನ್ನ ಮಾಡಿದ್ದಾರೆ. ಸಾಹಸ ನಿರ್ದೇಶಕ ಚೇತನ್ ಡಿಸೋಜಾ ಈ ಸಾಹಗಳನ್ನ ಕಂಪೋಸ್ ಮಾಡಿದ್ದಾರೆ. ವಿಶೇಷವಾಗಿ ಚಿತ್ರದ ಕ್ಲೈಮ್ಯಾಕ್ಸ್‌ನಲ್ಲಿ ಭರ್ಜರಿ ಆ್ಯಕ್ಷನ್‌ಗಳೇ ಇವೆ ಎನ್ನಲಾಗಿದೆ.

ʻಮ್ಯಾಕ್ಸ್ʼ ಸಿನಿಮಾಕ್ಕೆ ಕನ್ನಡದ ತಾರೆಯರು ಇದ್ದಾರೆ. ಕನ್ನಡದ ಟೆಕ್ನಿಷನ್‌ಗಳೂ ಇದ್ದಾರೆ. ಹಾಗೆ ಅಜನೀಶ್ ಲೋಕನಾಥ್ ಈ ಚಿತ್ರಕ್ಕೆ ಸಂಗೀತ ಕೊಟ್ಟಿದ್ದಾರೆ. ಶೇಖರ್ ಚಂದ್ರ ಕ್ಯಾಮೆರಾ ವರ್ಕ್ ಮಾಡಿದ್ದಾರೆ. ಸಂಯುಕ್ತಾ ಹೊರನಾಡು, ಸುಕೃತಾ ವಾಗ್ಲೆ ಕೂಡ ಈ ಸಿನಿಮಾದಲ್ಲಿ ಇದ್ದಾರೆ.

ವರಲಕ್ಷ್ಮಿ ಶರತ್ ಕುಮಾರ್ ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ. ವಿಜಯ್ ಕಾರ್ತಿಕೇಯ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ತಮಿಳು ನಿರ್ಮಾಪಕ ಕಲೈಪುಲಿ ಎಸ್. ತನು ಜೊತೆ ಸೇರಿ ಕಿಚ್ಚ ಕ್ರಿಯೇಷನ್ಸ್ ಬ್ಯಾನರ್‌ನಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ.

Continue Reading

ಸ್ಯಾಂಡಲ್ ವುಡ್

Actor Darshan: ಗೆದ್ದ ಎತ್ತಿನ ಬಾಲ ಹಿಡಿಯಬಾರದು ಎಂದ ದರ್ಶನ್‌! ಕಾಟೇರ 2 ಬರತ್ತಾ?

Actor Darshan: ‘ಕಾಟೇರ 2’ (Kaatera 2) ಸಿನಿಮಾದ ಘೋಷಣೆ ಆಗಲಿದೆ ಎಂದು ಕೆಲವರು ಊಹಿಸಿದ್ದರು. ಇದೀಗ ಈ ಬಗ್ಗೆ ದರ್ಶನ್‌ ಅವರು ನೇರವಾಗಿ ಉತ್ತರ ನೀಡಿದ್ದಾರೆ. ಕನ್ನಡದಲ್ಲಿ ಮಾತ್ರ ʻಕಾಟೇರʼ ಸಿನಿಮಾ ರಿಲೀಸ್‌ ಆಗಿದ್ದು, ಇಷ್ಟು ದೊಡ್ಡ ಮಟ್ಟದಲ್ಲಿ ಕಲೆಕ್ಷನ್‌ ಮಾಡಿದ್ದು ಹೆಮ್ಮೆಯ ವಿಚಾರ ಎನ್ನುತ್ತಿದ್ದಾರೆ ಫ್ಯಾನ್ಸ್‌. 72 ಮಲ್ಟಿಪ್ಲೆಕ್ಸ್‌ಗಳು ಹಾಗೂ 406 ಸಿಂಗಲ್ ಸ್ಕ್ರೀನ್‌ ಚಿತ್ರಮಂದಿರಗಳಲ್ಲಿ ಒಂದು ವಾರಕ್ಕೆ ಸಿನಿಮಾ 100 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿತ್ತು.

VISTARANEWS.COM


on

Actor Darshan React about Kaatera 2
Koo

ಬೆಂಗಳೂರು: `ಕಾಟೇರ’ ಸಿನಿಮಾಗೆ ಕಥೆ ಬರೆದ ಜಡೇಶ್​ ಕುಮಾರ್​ ಹಂಪಿ, ಸಂಭಾಷಣೆ ಬರೆದ ಮಾಸ್ತಿ ಹಾಗೂ ಒಂದು ಪಾತ್ರದಲ್ಲಿ ನಟಿಸಿದ ಸೂರಜ್​ ಅವರಿಗೆ ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್​ (Rockline Venkatesh) ಹಾಗೂ ನಟ ದರ್ಶನ್ (Actor Darshan)​ ಅವರು ಕಾರು ಗಿಫ್ಟ್‌ ಮಾಡಿದ್ದಾರೆ. ಕಾಟೇರದ ಈ ಸಂಭ್ರವನ್ನು ಶೇರ್‌ ಮಾಡಿಕೊಳ್ಳಲು ರಾಕ್​ಲೈನ್​ ವೆಂಕಟೇಶ್ ಏಕಾಏಕಿ ಸುದ್ದಿಗೋಷ್ಠಿ ನಡೆಸಿದ್ದರು. ‘ಕಾಟೇರ 2’ (Kaatera 2) ಸಿನಿಮಾದ ಘೋಷಣೆ ಆಗಲಿದೆ ಎಂದು ಕೆಲವರು ಊಹಿಸಿದ್ದರು. ಇದೀಗ ಈ ಬಗ್ಗೆ ದರ್ಶನ್‌ ಅವರು ನೇರವಾಗಿ ಉತ್ತರ ನೀಡಿದ್ದಾರೆ.

ದರ್ಶನ್‌ ಅವರು ಕಾಟೇರ ‘ಪಾರ್ಟ್​ 2’ ಮಾಡಲು ಅ ಸಿದ್ಧರಿಲ್ಲ. ಈ ಬಗ್ಗೆ ನಟ ಮಾತನಾಡಿ ʻʻನಾನು ಸೀಕ್ವೆಲ್‌ ಮಾಡಲ್ಲ. ಕಾಟೇರ ಅಲ್ಲಿಗೆ ಮುಗಿಯಿತು. ನನಗೆ ಇಷ್ಟವಾಗಲ್ಲ. ಗೆದ್ದ ಎತ್ತಿನ ಬಾಲ ಹಿಡಿಯಬಾರದು. ಕಾಟೇರ ಕಥೆಯನ್ನು ಇನ್ನೂ ಎಳೆಯಬಾರದು’ ಎಂದು ದರ್ಶನ್​ ಹೇಳಿದ್ದಾರೆ.

ಇದನ್ನೂ ಓದಿ: Kaatera  Movie: `ಕಾಟೇರ’ ಸಿನಿಮಾಗೆ 100 ದಿನ: ಕೇಕ್‌ ಕತ್ತರಿಸಿ ಸಂಭ್ರಮಿಸಿದ ಚಿತ್ರತಂಡ!

ಸುದ್ದಿಗೋಷ್ಠಿಯಲ್ಲಿ ರಾಕ್​ಲೈನ್​ ವೆಂಕಟೇಶ್​, ನಟ ದರ್ಶನ್​,ನಿರ್ದೇಶಕ ತರುಣ್​ ಸುಧೀರ್​, . ‘ಕಾಟೇರ’ ಚಿತ್ರದ ಸಂಭಾಷಣೆಕಾರ ಮಾಸ್ತಿ, ಕಥೆಗಾರ ಜಡೇಶ್​ ಕುಮಾರ್​ ಹಂಪಿ ಹಾಗೂ ನಟ ಸೂರಜ್​ ಇದ್ದರು. ಇದೇ ವೇಳೆ ಕಾಟೇರ’ ಸಿನಿಮಾಗೆ ಕಥೆ ಬರೆದ ಜಡೇಶ್​ ಕುಮಾರ್​ ಹಂಪಿ, ಸಂಭಾಷಣೆ ಬರೆದ ಮಾಸ್ತಿ ಹಾಗೂ ಒಂದು ಪಾತ್ರದಲ್ಲಿ ನಟಿಸಿದ ಸೂರಜ್​ ಅವರಿಗೆ ಕಾರು ನೀಡಲಾಗಿದೆ. ಮುಖ್ಯವಾಗಿ ನಿರ್ದೇಶಕ ತರುಣ್ ಸುಧೀರ್ ಜತೆ ಸೇರಿ ಜಡೇಶ್ ಹಂಪಿ ರಚಿಸಿದ ಕಥೆ, ಚಿತ್ರಕಥೆ ಹಾಗೂ ಮಾಸ್ತಿ ಸಂಭಾಷಣೆ ಚಿತ್ರದಲ್ಲಿ ಹೈಲೆಟ್ ಆಗಿತ್ತು. ಸಿನಿಮಾ ನೋಡಿದ ಪ್ರತಿಯೊಬ್ಬರು ಇವರಿಬ್ಬರ ಶ್ರಮದ ಬಗ್ಗೆ ಮಾತನಾಡಿದ್ದರು. ಇನ್ನು ನಟ ಸೂರಜ್ ಅಭಿನಯಕ್ಕೂ ಮೆಚ್ಚುಗೆ ವ್ಯಕ್ತವಾಗಿತ್ತು. ಕೆಲ ದಿನಗಳ ಹಿಂದೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸೂರಜ್, ನೋವಿನ ನಡುವೆಯೂ ಕ್ಲೈಮ್ಯಾಕ್ಸ್‌ನಲ್ಲಿ ನಟಿಸಿದ್ದರು. ಸದ್ಯ ಮೂವರಿಗೆ ನಿರ್ಮಾಪಕರ ರಾಕ್‌ಲೈನ್ ವೆಂಕಟೇಶ್ ಕಾರುಗಳನ್ನು ಉಡುಗೊರೆಯಾಗಿ ನೀಡಿದ್ದಾರೆ.

ಕನ್ನಡದಲ್ಲಿ ಮಾತ್ರ ʻಕಾಟೇರʼ ಸಿನಿಮಾ ರಿಲೀಸ್‌ ಆಗಿದ್ದು, ಇಷ್ಟು ದೊಡ್ಡ ಮಟ್ಟದಲ್ಲಿ ಕಲೆಕ್ಷನ್‌ ಮಾಡಿದ್ದು ಹೆಮ್ಮೆಯ ವಿಚಾರ ಎನ್ನುತ್ತಿದ್ದಾರೆ ಫ್ಯಾನ್ಸ್‌. 72 ಮಲ್ಟಿಪ್ಲೆಕ್ಸ್‌ಗಳು ಹಾಗೂ 406 ಸಿಂಗಲ್ ಸ್ಕ್ರೀನ್‌ ಚಿತ್ರಮಂದಿರಗಳಲ್ಲಿ ಒಂದು ವಾರಕ್ಕೆ ಸಿನಿಮಾ 100 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿತ್ತು.

ದರ್ಶನ್ ಅವರಿಗೆ ಈ ಹಿಂದೆ ತರುಣ್​ ಸುಧೀರ್​ ರಾಬರ್ಟ್ ಸಿನಿಮಾ ನಿರ್ದೇಶಿಸಿದ್ದರು. ಇದೀಗ ಅವರು ಮತ್ತೊಮ್ಮೆ ದರ್ಶನ್ ಆ್ಯಕ್ಷನ್​ ಕಟ್ ಹೇಳಿದ್ದಾರೆ. ದರ್ಶನ್​ಗೆ ಜೋಡಿಯಾಗಿ ಹಿರಿಯ ನಟಿ ಮಾಲಾಶ್ರೀ ಮಗಳು ಆರಾಧನಾ ಕಾಣಿಸಿಕೊಂಡಿದ್ದಾರೆ. ಹಿರಿಯ ನಟಿ ಶ್ರುತಿ ಕುಮಾರ್ ಗೋವಿಂದ್, ವೈಜನಾಥ್ ಬಿರಾದಾರ, ಜಗಪತಿ ಬಾಬು ಸೇರಿದಂತೆ ಇನ್ನೂ ಅನೇಕರು ಮಿಂಚಿದ್ದರು.

Continue Reading
Advertisement
Amith Shah
ದೇಶ2 mins ago

Amit Shah: ತೆಲಂಗಾಣದಲ್ಲಿ ಗೃಹಸಚಿವ ಅಮಿತ್ ಶಾ ವಿರುದ್ಧ FIR ದಾಖಲು

Porbandar Tour
ಪ್ರವಾಸ6 mins ago

Porbandar Tour: ಪೋರ್ ಬಂದರಿನಲ್ಲಿ ನೋಡಲೇಬೇಕಾದ ಅದ್ಭುತ ಸ್ಥಳಗಳಿವು

hd revanna prajwal revanna case
ಪ್ರಮುಖ ಸುದ್ದಿ27 mins ago

Prajwal Revanna Case: ಕಾಣದಂತೆ ಮಾಯವಾದ ಎಚ್‌ಡಿ ರೇವಣ್ಣ ! ಇಂದು ಜಾಮೀನು ಸಿಗದೇ ಹೋದರೆ….

Cocoa Price
ಕೃಷಿ30 mins ago

Cocoa Price: ಅಡಿಕೆ ಮರದೆತ್ತರಕ್ಕೆ ಕೋಕೋ ಬೆಳೆಯ ಧಾರಣೆ! 800% ಏರಿಕೆ!

IPL 2024 POINTS TABLE
ಕ್ರೀಡೆ48 mins ago

IPL 2024 POINTS TABLE: ಕೆಕೆಆರ್​ ಗೆಲುವಿನ ಬಳಿಕ ಅಂಕಪಟ್ಟಿ ಹೇಗಿದೆ?

prajwal revanna case hassan MP home
ಕ್ರೈಂ56 mins ago

Prajwal Revanna Case: ಹಾಸನ ಸಂಸದರ ನಿವಾಸದ ಗೇಟಿಗೆ ಬೀಗ; ನಿವಾಸದ ಕೀ ನಾಪತ್ತೆ! ಎಚ್‌ಡಿ ರೇವಣ್ಣ ಕೂಡ ಗಾಯಬ್!‌

Robbery Case
ಕ್ರೈಂ1 hour ago

Robbery Case: ಕಾರು ತಪಾಸಣೆ ನೆಪದಲ್ಲಿ ಸುಲಿಗೆ; ಪೊಲೀಸರ ವಿರುದ್ಧವೇ ಕೇಳಿ ಬಂತು ಗಂಭೀರ ಆರೋಪ

Food Cleaning Tips Kannada
ಲೈಫ್‌ಸ್ಟೈಲ್1 hour ago

Food Cleaning Tips Kannada: ಹಣ್ಣು, ತರಕಾರಿಗಳಿಂದ ರಾಸಾಯನಿಕ ಅಂಶ ಸ್ವಚ್ಛಗೊಳಿಸುವ 5 ವಿಧಾನಗಳಿವು

Viral Video
ವೈರಲ್ ನ್ಯೂಸ್1 hour ago

Viral Video: ರೆಸ್ಟೋರೆಂಟ್‌ನಲ್ಲಿ ಪತ್ನಿಯನ್ನು ಹೊಡೆದು ಕೊಂದ ಮಾಜಿ ಸಚಿವ; ಶಾಕಿಂಗ್‌ ವಿಡಿಯೋ ಎಲ್ಲೆಡೆ ವೈರಲ್‌

Salaar Movie Fails To Get Expected TRP Star Suvarna
ಸಿನಿಮಾ1 hour ago

Salaar Movie: ಕಿರುತೆರೆಯಲ್ಲಿ ‘ಸಲಾರ್’ಗೆ ಕಡಿಮೆ ಟಿಆರ್‌ಪಿ: ಪ್ಲಾಪ್‌ ಆಗಲು ಕಾರಣವೇನು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ6 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ19 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ1 day ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌