Shiva Rajkumar: ಶಿವರಾಜ್ ಕುಮಾರ್ ಜನುಮದಿನಕ್ಕೆ 131ನೇ ಸಿನಿಮಾದ ಮೊದಲ ಝಲಕ್ ರಿಲೀಸ್! - Vistara News

ಸ್ಯಾಂಡಲ್ ವುಡ್

Shiva Rajkumar: ಶಿವರಾಜ್ ಕುಮಾರ್ ಜನುಮದಿನಕ್ಕೆ 131ನೇ ಸಿನಿಮಾದ ಮೊದಲ ಝಲಕ್ ರಿಲೀಸ್!

Shiva Rajkumar: ಶಿವಣ್ಣನ ಜನ್ಮದಿನದ ಅಂಗವಾಗಿ 131ನೇ ಚಿತ್ರದ ಮೊದಲ ತುಣುಕು ಬಿಡುಗಡೆ ಮಾಡಲಾಗಿದೆ. 3 ನಿಮಿಷ 49 ಸೆಕೆಂಡ್ ಇರುವ ವಿಡಿಯೋ ತುಣುಕಿನಲ್ಲಿ ಪೊಲೀಸ್ ಸ್ಟೇಷನ್ ನಲ್ಲಿ ರಗಡ್ ಡೈಲಾಗ್ ಮೂಲಕ ಹೀರೋ ಇಂಟ್ರೂಡ್ಯೂಸ್ ಮಾಡಲಾಗುತ್ತದೆ. ಶಿವಣ್ಣನನ್ನು ಅಚ್ಯುತ್ ಕುಮಾರ್ ವರ್ಣನೆ ಮಾಡುವ ರೀತಿ ಅದ್ಭುತವಾಗಿದೆ.

VISTARANEWS.COM


on

Shiva Rajkumar 131 cinema Look out
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ (Shiva Rajkumar) ಹುಟ್ಟುಹಬ್ಬದ ಸಂಭ್ರಮದಲ್ಲಿ ಹಲವಾರು ಪೋಸ್ಟರ್‌ಗಳು ಔಟ್‌ ಆಗಿವೆ. ಶಿವಣ್ಣನ ಜನ್ಮದಿನದ ವಿಶೇಷವಾಗಿ ರಾಶಿ ರಾಶಿ ಉಡುಗೊರೆಗಳು ಶಿವಸೈನ್ಯಕ್ಕೆ ಸಿಕ್ಕಿದೆ. ಆ ಸ್ಪೆಷಲ್ ಗಿಫ್ಟ್ ಗಳಲ್ಲಿ ತುಂಬಾನೇ ಸ್ಪೆಷಲ್ ಎನಿಸಿಕೊಂಡಿರುವುದು ಶಿವಣ್ಣನ 131ನೇ ಚಿತ್ರದ ಝಲಕ್…ಯಾಕೆ ವಿಶೇಷ ಅಂದರೆ ಈ ಹಿಂದೆ ಕನ್ನಡ ಚಿತ್ರರಂಗಕ್ಕೆ ರಾಮ್ ಗೋಪಾಲ್ ವರ್ಮಾ ಕರೆ ತಂದು ಶಿವಣ್ಣನಿಗೆ ಕಿಲ್ಲಿಂಗ್ ವೀರಪ್ಪನ್ ಸಿನಿಮಾ ಮಾಡಿಸಿದ್ದ ಸುಧೀರ್ ಮತ್ತೊಮ್ಮೆ ಕರುನಾಡ ಕಿಂಗ್ ಗೆ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಜೊತೆಗೆ ತಮಿಳಿನ ಯುವ ನಿರ್ದೇಶಕ ಕಾರ್ತಿಕ್ ಅದ್ವೈತ್ ದೊಡ್ಮನೆ ದೊರೆಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರದ ಮೊದಲ ಝಲಕ್ ಶಿವಣ್ಣನ ಹುಟ್ಟುಹಬ್ಬಕ್ಕೆ ಅನಾವರಣಗೊಂಡಿದೆ.

ಶಿವಣ್ಣನ ಜನ್ಮದಿನದ ಅಂಗವಾಗಿ 131ನೇ ಚಿತ್ರದ ಮೊದಲ ತುಣುಕು ಬಿಡುಗಡೆ ಮಾಡಲಾಗಿದೆ. 3 ನಿಮಿಷ 49 ಸೆಕೆಂಡ್ ಇರುವ ವಿಡಿಯೋ ತುಣುಕಿನಲ್ಲಿ ಪೊಲೀಸ್ ಸ್ಟೇಷನ್ ನಲ್ಲಿ ರಗಡ್ ಡೈಲಾಗ್ ಮೂಲಕ ಹೀರೋ ಇಂಟ್ರೂಡ್ಯೂಸ್ ಮಾಡಲಾಗುತ್ತದೆ. ಶಿವಣ್ಣನನ್ನು ಅಚ್ಯುತ್ ಕುಮಾರ್ ವರ್ಣನೆ ಮಾಡುವ ರೀತಿ ಅದ್ಭುತವಾಗಿದೆ. ಆದ್ರೆ ಶಿವಣ್ಣ ವಿಡಿಯೋದಲ್ಲಿ ಕಾಣಿಸಿಕೊಳ್ಳಲ್ಲ. ಐ ಆಮ್ ಕಮಿಂಗ್ ಎನ್ನುವ ಕರುನಾಡ ಕಿಂಗ್ ನ ಫೋಟೋ ಬಿಟ್ಟು ಚಿತ್ರತಂಡ ಥ್ರಿಲ್ ಹೆಚ್ಚಿಸಿದೆ. ಚಂಡಮಾರುತ ಮೊದಲ ಮೌನ ಎಂಬ ಅಡಿಬರಹದೊಂದಿಗೆ ಶಿವಣ್ಣನ 131ನೇ ಚಿತ್ರದ ವಿಡಿಯೋ ಝಲಕ್ ಬಿಡುಗಡೆ ಮಾಡಲಾಗಿದ್ದು, ಅಚ್ಯುತ್ ಕುಮಾರ್, ರವೀಂದ್ರ ವಿಜಯ್ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: Shiva Rajkumar: ಶಿವಣ್ಣನ ಬರ್ತ್‌ಡೇ ದಿನ, ಬರೋಬ್ಬರಿ 4 ತಿಂಗಳ ಬಳಿಕ ಒಟಿಟಿಗೆ ʻಕರಟಕ ದಮನಕʼ ಎಂಟ್ರಿ!

ತಮಿಳಿನಲ್ಲಿ ವಿಕ್ರಂ ಪ್ರಭು ಅಭಿನಯದ ಪಾಯುಮ್ ಒಲಿ ನೀ ಎನಕ್ಕು ಚಿತ್ರವನ್ನು ನಿರ್ದೇಶಿಸಿದ್ದ ಕಾರ್ತಿಕ್ ಅದ್ವೈತ್, ಈ ಚಿತ್ರದ ಮೂಲಕ ಸ್ಯಾಂಡಲ್ವುಡ್ ಅಂಗಳಕ್ಕೆ ಎಂಟ್ರಿ ಕೊಡುತ್ತಿದ್ದಾರೆ, ಅಂದಹಾಗೇ ಇವರಿಗೆ ಇದು ನಿರ್ದೇಶಕನಾಗಿ ಎರಡನೇ ಸಿನಿಮಾ. ಇದೊಂದು ಆ್ಯಕ್ಷನ್ ಥ್ರಿಲ್ಲರ್ ಸಿನಿಮಾವಾಗಿದ್ದು, ಶಿವಣ್ಣ ಡಿಫ್ರೆಂಟ್ ಲುಕ್ನಲ್ಲಿ, ವಿಭಿನ್ನ ಪಾತ್ರದಲ್ಲಿ ಕಾಣಸಿಕೊಳ್ಳಲಿದ್ದಾರೆ. ಆಗಸ್ಟ್ ತಿಂಗಳಲ್ಲಿ ಮುಹೂರ್ತ ನಡೆಯಲಿದೆ. ಇತರ ಕಲಾವಿದರ ಆಯ್ಕೆ ಪ್ರಕ್ರಿಯೆ ಮುಗಿದಿದ್ದು, ಚಿತ್ರೀಕರಣಕ್ಕೆ ತೆರಳು ಎದುರು ನೋಡುತ್ತಿದೆ ಚಿತ್ರತಂಡ. ಸ್ಯಾಮ್ ಸಿ.ಎಸ್ ಸಂಗೀತ ಒದಗಿಸಲಿದ್ದಾರೆ. ಎ.ಜೆ ಶೆಟ್ಟಿ ಛಾಯಾಗ್ರಹಣ ನಿರ್ವಹಿಸಲಿದ್ದಾರೆ. ದೀಪು ಎಸ್ ಕುಮಾರ್ ಅವರ ಸಂಕಲನ ಹಾಗೂ ರವಿ ಸಂತೆಹಕ್ಲು ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿರಲಿದೆ. ಭುವನೇಶ್ವರಿ ಪ್ರೊಡಕ್ಷನ್ ನಡಿ ಎಸ್ ಎನ್ ರೆಡ್ಡಿ ಹಾಗೂ ಸುಧೀರ್ ಪಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

MAX Teaser: ಬಹುನಿರೀಕ್ಷಿತ ʼಮ್ಯಾಕ್ಸ್ʼ ಚಿತ್ರದ ಟೀಸರ್‌ ಔಟ್‌; ರೌಡಿಗಳ ಅಡ್ಡದಲ್ಲಿ ನಿಂತು ಲಾಂಗ್‌ ಬೀಸಿದ ಸುದೀಪ್‌

MAX Teaser: ಬಹು ನಿರೀಕ್ಷಿತ ಪ್ಯಾನ್‌ ಇಂಡಿಯಾ ಚಿತ್ರ ʼಮ್ಯಾಕ್ಸ್ʼನ ಟೀಸರ್ ರಿಲೀಸ್‌ ಆಗಿದೆ. ಈ‌ ಆ್ಯಕ್ಷನ್‌ ಚಿತ್ರದಲ್ಲಿ ಕಿಚ್ಚ ಸುದೀಪ್‌ ಮತ್ತೊಮ್ಮೆ ಮಾಸ್‌ ಅವತಾರದಲ್ಲಿ ಮಿಂಚಿದ್ದಾರೆ. ಟೀಸರ್‌ನಲ್ಲಿ ಭರಪೂರ ಆ್ಯಕ್ಷನ್‌ ದೃಶ್ಯಗಳು ಕಂಡು ಬಂದಿದ್ದು ಅಭಿಮಾನಿಗಳು ಮನಸೋತಿದ್ದಾರೆ. ಮಾಸ್- ಗಾಡ್ ಅವತಾರದಲ್ಲಿ ಕಾಣಿಸಿಕೊಂಡಿರುವ ಕಿಚ್ಚ ಸುದೀಪ್ ಅವರನ್ನು ನೋಡಿದ ಅಭಿಮಾನಿಗಳ ನಿರೀಕ್ಷೆ ಇನ್ನೂ ಹೆಚ್ಚಾಗಿದೆ. ವಿಜಯ್ ಕಾರ್ತಿಕೇಯ ನಿರ್ದೇಶನದ ಆಕ್ಷನ್ ಥ್ರಿಲ್ಲರ್ ʼಮ್ಯಾಕ್ಸ್ʼ ಚಿತ್ರದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಜತೆಗೆ ವರಲಕ್ಷ್ಮೀ ಶರತ್ ಕುಮಾರ್, ಸಂಯುಕ್ತ ಹೊರನಾಡು, ಪ್ರಮೋದ್ ಶೆಟ್ಟಿ, ಸುನೀಲ್‌ ಮುಂತಾದವರು ಬಣ್ಣ ಹಚ್ಚಿದ್ದಾರೆ.

VISTARANEWS.COM


on

MAX Teaser
Koo

ಬೆಂಗಳೂರು: ಬಹು ನಿರೀಕ್ಷಿತ ಪ್ಯಾನ್‌ ಇಂಡಿಯಾ ಚಿತ್ರ ʼಮ್ಯಾಕ್ಸ್ʼನ ಟೀಸರ್ (MAX Teaser) ರಿಲೀಸ್‌ ಆಗಿದೆ. ಈ‌ ಆ್ಯಕ್ಷನ್‌ ಚಿತ್ರದಲ್ಲಿ ಕಿಚ್ಚ ಸುದೀಪ್‌ (Kiccha Sudeep) ಮತ್ತೊಮ್ಮೆ ಮಾಸ್‌ ಅವತಾರದಲ್ಲಿ ಮಿಂಚಿದ್ದಾರೆ. ಟೀಸರ್‌ನಲ್ಲಿ ಭರಪೂರ ಆ್ಯಕ್ಷನ್‌ ದೃಶ್ಯಗಳು ಕಂಡು ಬಂದಿದ್ದು ಅಭಿಮಾನಿಗಳು ಮನಸೋತಿದ್ದಾರೆ. ʼವಿಕ್ರಾಂತ್‌ ರೋಣʼ ಚಿತ್ರದ ಬಳಿಕ ಸುಮಾರು 2 ವರ್ಷಗಳ ತರುವಾಯ ಈ ಸಿನಿಮಾ ತರೆಕಾಣಲಿದ್ದು, ಕುತೂಹಲ ಕೆರಳಿಸಿದೆ.

ಮಾಸ್- ಗಾಡ್ ಅವತಾರದಲ್ಲಿ ಕಾಣಿಸಿಕೊಂಡಿರುವ ಕಿಚ್ಚ ಸುದೀಪ್ ಅವರನ್ನು ನೋಡಿದ ಅಭಿಮಾನಿಗಳ ನಿರೀಕ್ಷೆ ಇನ್ನೂ ಹೆಚ್ಚಾಗಿದೆ. ವಿಜಯ್ ಕಾರ್ತಿಕೇಯ ನಿರ್ದೇಶನದ ಆಕ್ಷನ್ ಥ್ರಿಲ್ಲರ್ ʼಮ್ಯಾಕ್ಸ್ʼ ಚಿತ್ರದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಜತೆಗೆ ವರಲಕ್ಷ್ಮೀ ಶರತ್ ಕುಮಾರ್, ಸಂಯುಕ್ತ ಹೊರನಾಡು, ಪ್ರಮೋದ್ ಶೆಟ್ಟಿ, ಸುನೀಲ್‌ ಮುಂತಾದವರು ಬಣ್ಣ ಹಚ್ಚಿದ್ದಾರೆ. ʼವಿಕ್ರಾಂತ್‌ ರೋಣʼ ಬಳಿಕ ಸುದೀಪ್‌ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡುವ ಅವಕಾಶ ಅಜನೀಶ್ ಲೋಕನಾಥ್‌ಗೆ ಸಿಕ್ಕಿದ್ದು, ಹಾಡುಗಳ ಬಗ್ಗೆಯೂ ಕುತೂಹಲ ಗರಿಗೆದರಿದೆ. ತನು ವಿ‌ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಕಲೈಪುಲಿ ಎಸ್. ಹಾಗೂ ಕಿಚ್ಚ ಸುದೀಪ್ ಕಿಚ್ಚ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಟೀಸರ್‌ನಲ್ಲಿ ಏನಿದೆ?

ಕಿಚ್ಚ ಸುದೀಪ್‌ ʼಮ್ಯಾಕ್ಸ್‌ʼ ಡಬ್ಬಿಂಗ್‌ ಮುಗಿಸಿರುವ ಫೋಟೊ ಇತ್ತೀಚೆಗೆ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ಇದೀಗ ಚಿತ್ರತಂಡ ʼಮ್ಯಾಕ್ಸ್‌ʼ ಟೀಸರ್‌ ಬಿಟ್ಟು ಪ್ರೇಕ್ಷಕರು ಸಿನಿಮಾ ರಿಲೀಸ್‌ಗಾಗಿ ತುದಿಗಾಲಿನಲ್ಲಿ ಕಾಯುವಂತೆ ಮಾಡಿದೆ. ರೌಡಿಗಳ ಅಖಾಡದಲ್ಲಿ ನಿಂತು ಎರಡು ಕೈಗಳಿಂದ ಮಚ್ಚು ಬೀಸುವ ಮಾಸ್‌ ಲುಕ್‌ನಲ್ಲಿ ಕಿಚ್ಚ ಸುದೀಪ್‌ ಮಿಂಚು ಹರಿಸಿದ್ದಾರೆ. ಹಿನ್ನಲೆ ಸಂಗೀತವೂ ಗಮನ ಸೆಳೆಯುವಂತಿದೆ.

ʼಮ್ಯಾಕ್ಸ್ʼ ಸಿನಿಮಾದಲ್ಲಿ ಸುದೀಪ್ ಪೊಲೀಸ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ʻಅರ್ಜುನ್ ಮಹಾಕ್ಷಯ್ʼ ಹೆಸರಿನ ಸುದೀಪ್ ಪಾತ್ರ ಸ್ಪೆಷಲ್ ಆಗಿಯೇ ಇರಲಿದೆ ಎಂದು ಮೂಲಗಳು ತಿಳಿಸಿವೆ. ʻಮ್ಯಾಕ್ಸ್ʼ ಸಿನಿಮಾದಲ್ಲಿ ಸುದೀಪ್ ಭರ್ಜರಿ ಸಾಹಸಗಳನ್ನ ಮಾಡಿದ್ದಾರೆ. ಸಾಹಸ ನಿರ್ದೇಶಕ ಚೇತನ್ ಡಿಸೋಜಾ ಈ ಸಾಹಗಳನ್ನ ಕಂಪೋಸ್ ಮಾಡಿದ್ದಾರೆ. ವಿಶೇಷವಾಗಿ ಚಿತ್ರದ ಕ್ಲೈಮ್ಯಾಕ್ಸ್‌ನಲ್ಲಿ ಭರ್ಜರಿ ಆ್ಯಕ್ಷನ್‌ಗಳೇ ಇವೆ ಎನ್ನಲಾಗಿದೆ. ಅದರ ಸೂಚನೆ ಈ ಟೀಸರ್‌ನಲ್ಲಿ ಲಭಿಸಿದೆ.

ಇದನ್ನೂ ಓದಿ: Kiccha Sudeep: ಕಿಚ್ಚ ಸುದೀಪ್ ಸಿನಿಮಾಗೆ ‘ಜೈಲರ್’ ಸ್ಟಂಟ್ ಮಾಸ್ಟರ್ ಎಂಟ್ರಿ!

ಮತ್ತೆ ಖಾಕಿ ತೊಟ್ಟ ಸುದೀಪ್‌

ಸುದೀಪ್‌ ಖಡಕ್‌ ಪೊಲೀಸ್‌ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡ ʼವಿಕ್ರಾಂತ್‌ ರೋಣʼ ಚಿತ್ರ 2022ರ ಜುಲೈ 28ರಂದು ತೆರೆಕಂಡಿತ್ತು. ʼರಂಗಿತರಂಗʼ ನಿರ್ದೇಶಕ ಅನೂಪ್‌ ಭಂಡಾರಿ ಆ್ಯಕ್ಷನ್‌ ಕಟ್‌ ಹೇಳಿದ್ದ ʼವಿಕ್ರಾಂತ್‌ ರೋಣʼ ಬಾಕ್ಸ್‌ ಆಫೀಸ್‌ನಲ್ಲಿ ಕಮಾಲ್‌ ಮಾಡಿತ್ತು. ಈ ಥ್ರಿಲ್ಲರ್‌ ಚಿತ್ರ 100 ಕೋಟಿ ರೂ. ಕ್ಲಬ್‌ ಸೇರಿ ಸುದೀಪ್‌ ವೃತ್ತಿ ಜೀವನಕ್ಕೆ ಹೊಸ ಮೈಲೇಜ್‌ ನೀಡಿತ್ತು. ನಿರೂಪ್‌ ಭಂಡಾರಿ, ಮಿಲನಾ ನಾಗರಾಜ್‌, ನೀತಾ ಅಶೋಕ್‌ ಮತ್ತಿತರರು ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಂಡ ಈ ಸಿನಿಮಾದಲ್ಲಿ ಬಾಲಿವುಡ್‌ ಬೆಡಗಿ ಜ್ವಾಕಲಿನ್‌ ಫೆರ್ನಾಂಡೀಸ್‌ ಹೆಜ್ಜೆ ಹಾಕಿದ ʼರಾ ರಾ ರಕ್ಕಮ್ಮʼ ಹಾಡು ಜನಪ್ರಿಯವಾಗಿತ್ತು. ಇದಾಗಿ ಎರಡು ವರ್ಷಗಳ ಬಳಿಕ ಸುದೀಪ್‌ ಮತ್ತೆ ಖಾಕಿ ವೇಷದಲ್ಲಿ ಪ್ರೇಕ್ಷಕರ ಎದುರು ಬರುತ್ತಿರುವುದರಿಂದ ಸಹಜವಾಗಿಯೇ ನಿರೀಕ್ಷೆ ಹೆಚ್ಚಾಗಿದೆ. ರಿಲೀಸ್‌ ದಿನಾಂಕವನ್ನು ಚಿತ್ರತಂಡ ಶೀಘ್ರದಲ್ಲಿಯೇ ಘೋಷಿಸಲಿದೆ.

Continue Reading

ಸ್ಯಾಂಡಲ್ ವುಡ್

Actor Mithra: ಖಡಕ್‌ ವಿಲನ್‌ ಆಗಿ ʼಕರಾವಳಿʼಯಲ್ಲಿ ಅಬ್ಬರಿಸಲಿದ್ದಾರೆ ಕಾಮಿಡಿ ಸ್ಟಾರ್ ಮಿತ್ರ; ಕಾಲಿವುಡ್‌ಗೂ ಎಂಟ್ರಿ

Actor Mithra: ಸ್ಯಾಂಡಲ್‌ವುಡ್‌ ನಟ ಮಿತ್ರ ಅವರ ಖದರ್ ಬದಲಾಗಿದೆ. ಹೌದು, ಮಿತ್ರ ಅವರು ಪ್ರಜ್ವಲ್ ದೇವರಾಜ್ ಅಭಿನಯದ ʼಕರಾವಳಿʼ ಸಿನಿಮಾದಲ್ಲಿ ಮುಖ್ಯಪಾತ್ರವೊಂದರಲ್ಲಿ ಅಭಿನಯಿಸುತ್ತಿದ್ದಾರೆ. ಅದಕ್ಕಾಗಿ ಗೆಟಪ್ ಕೂಡ ಚೇಂಜ್ ಮಾಡಿಕೊಂಡಿದ್ದಾರೆ. ಕಾಮಿಡಿ ಜತೆಗೆ ಎಮೋಷನ್ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದ ಅವರು ಕರಾವಳಿಯಲ್ಲಿ ಖಡಕ್‌ ವಿಲನ್‌ ಆಗಿದ್ದಾರೆ. ಜತೆಗೆ ಇನ್ನೆರಡು ಚಿತ್ರಗಳ ಖಳನಾಯಕನ ಪಾತ್ರಕ್ಕೆ ಆಯ್ಕೆಯಾಗಿದ್ದಾರೆ. ಸದ್ಯ ಅವರ ಫೋಟೊ ಶೂಟ್‌ ಗಮನ ಸೆಳೆಯುತ್ತಿದೆ.

VISTARANEWS.COM


on

Actor Mithra
Koo

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಮಿತ್ರ (Actor Mithra) ಕನ್ನಡ ಸಿನಿ ಪ್ರೇಕ್ಷಕರಿಗೆ ಚಿರ ಪರಿಚಿತ ಮುಖ. ಕಳೆದ ಎರಡು ದಶಕಗಳಿಂದ ಮಿತ್ರ ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಪಾತ್ರಗಳ ಮೂಲಕ ಮಿಂಚುತ್ತಿದ್ದಾರೆ. ಅದರಲ್ಲಿಯೂ ಅವರು ಕಾಮಿಡಿ ಪಾತ್ರಗಳಿಂದ ಅಭಿಮಾನಿಗಳಿಗೆ ಕಚಗುಳಿ ಇಡುತ್ತ ಬಂದಿದ್ದಾರೆ. ಜತೆಗೆ ಹಿರಿತೆರೆ-ಕಿರುತೆರೆ ಸೇರಿದಂತೆ ಎಲ್ಲೆಡೆ ಭಿನ್ನ ವಿಭಿನ್ನ ಪಾತ್ರಗಳ ಮೂಲಕ ಪ್ರೇಕ್ಷಕರನ್ನ ರಂಜಿಸುತ್ತಿದ್ದಾರೆ. ಇತ್ತೀಚೆಗೆ ಕಾಮಿಡಿ ಜತೆಗೆ ಎಮೋಷನ್ ಹೀಗೆ ಎಲ್ಲ ರೀತಿಯ ಪಾತ್ರಕ್ಕೂ ತಮ್ಮನ್ನ ತಾವು ಒಗ್ಗಿಸಿಕೊಂಡು ಪ್ರೇಕ್ಷಕರಿಂದ ಚಪ್ಪಾಳೆ ಗಿಟ್ಟಿಸಿಕೊಂಡಿರುವ ಅವರು ಇದೀಗ ಖಡಕ್‌ ವಿಲನ್‌ ಆಗಿ ಅಬ್ಬರಿಸಲು ಮುಂದಾಗಿದ್ದಾರೆ.

ಈಗ ನಟ ಮಿತ್ರ ಅವರ ಖದರ್ ಬದಲಾಗಿದೆ. ಲುಕ್ ಬೇರೆಯದ್ದೇ ರೀತಿ ಇದೆ. ಹೌದು, ಮಿತ್ರ ಅವರು ಪ್ರಜ್ವಲ್ ದೇವರಾಜ್ ಅಭಿನಯದ ʼಕರಾವಳಿʼ ಸಿನಿಮಾದಲ್ಲಿ ಮುಖ್ಯಪಾತ್ರವೊಂದರಲ್ಲಿ ಅಭಿನಯಿಸುತ್ತಿದ್ದಾರೆ. ಅದಕ್ಕಾಗಿ ಗೆಟಪ್ ಕೂಡ ಚೇಂಜ್ ಮಾಡಿಕೊಂಡಿದ್ದಾರೆ. ಬದಲಾದ ಲುಕ್ ಅವರ ಕೆರಿಯರ್‌ಗೆ ಟರ್ನಿಂಗ್ ಪಾಯಿಂಟ್ ಆಗುವ ಎಲ್ಲ ಸಾಧ್ಯತೆ ಇದೆ.

ಖಡಕ್ ವಿಲನ್

ಇಷ್ಟು ದಿನಗಳ ಕಾಲ ಕಾಮಿಡಿ ಸ್ಟಾರ್ ಆಗಿ ಮಿಂಚುತ್ತಿದ್ದ ಮಿತ್ರ ಇನ್ನು ಮುಂದೆ ಸ್ಯಾಂಡಲ್‌ವುಡ್‌ನ ಖಡಕ್ ವಿಲನ್ ಆಗಲಿದ್ದಾರೆ. ಗಡ್ಡ ಬಿಟ್ಟು ಲುಕ್ ಬದಲಾಯಿಸಿಕೊಂಡ ಮೇಲೆ ಬೇರೆ ರೀರಿಯ ಪಾತ್ರಗಳು ಹುಡುಕಿ ಬರುತ್ತಿವೆ ಎಂದು ಸ್ವತಃ ಅವರೇ ತಿಳಿಸಿದ್ದಾರೆ. ಸದ್ಯ ಅದಕ್ಕಾಗಿ ಒಂದು ಸ್ಟೈಲಿಷ್ ವಿಲನ್ ಲುಕ್‌ನಲ್ಲಿ ಫೋಟೋಶೂಟ್ ಮಾಡಿಸಿದ್ದಾರೆ.

ವಿಲನ್ ಲುಕ್‌ನಲ್ಲಿ ಮಿತ್ರ ಅವರು ಸಾಕಷ್ಟು ವಿಭಿನ್ನ ಶೇಡ್‌ನಲ್ಲಿ ಮಿತ್ರ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ. ಈ ಫೋಟೊ ಶೂಟ್ ಮಾಡಿದ್ದು ʼಕರಾವಳಿʼ ಸಿನಿಮಾದ ಸಿನಿಮಾಟೋಗ್ರಾಫರ್ ಅಭಿಮನ್ಯು ಸದಾನಂದ್. ಮಿತ್ರ ಅವರ ಲುಕ್ ಅನ್ನು ಡೀಸೈನ್‌ ಮಾಡಿದ್ದು ಕಾಲಿವುಡ್‌ನ ಸ್ಟೈಲಿಷ್ ಕಣ್ಮಣಿ.

ಸದ್ಯ ಮಿತ್ರ ಅವರು ʼಕರಾವಳಿʼ ಸಿನಿಮಾ ಬಿಟ್ಟು ಕನ್ನಡದ ದೊಡ್ಡ ಎರಡು ಸ್ಟಾರ್ ಸಿನಿಮಾಗಳಲ್ಲಿ ಖಡಕ್ ವಿಲನ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಅದರ ಜತೆಗೆ ತಮಿಳಿನ ಒಂದು ಸಿನಿಮಾಗೆ ವಿಲನ್ ಆಗಿ ಆಯ್ಕೆ ಆಗಿದ್ದಾರೆ. ಕಲಾವಿದರು ಎಂದಿಗೂ ಒಂದೇ ಪಾತ್ರಕ್ಕೆ ಅಂಟಿಕೊಳ್ಳಬಾರದು. ವಯಸ್ಸಿಗೆ ತಕ್ಕಂತೆ ತಮ್ಮನ್ನ ನಾವು ಬದಲಾಯಿಸಿಕೊಳ್ಳಬೇಕು ಎನ್ನುವ ಪಾಲಿಸಿಯನ್ನು ಮಿತ್ರ ಫಾಲೋ ಮಾಡುವಂತೆ ಕಾಣಿಸುತ್ತಿದೆ. ಸದ್ಯ ಅವರ ಈ ಸಾಲ್ಟ್ & ಪೆಪ್ಪರ್ ಲುಕ್ ಹಾಗೂ ಮಿಲನ್ ಖದರ್‌ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ಕಾಮಿಡಿಯನ್‌, ಪೋಷಕ ಪಾತ್ರಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದ ಮಿತ್ರ 2017ರಲ್ಲಿ ತೆರೆಕಂಡ ʼರಾಗʼ ಚಿತ್ರದಲ್ಲಿ ಕುರುಡನ ಪಾತ್ರದ ಮೂಲಕ ಗಮನ ಸೆಳೆದಿದ್ದರು. ನಾಯಕನಾಗಿ ಕಾಣಿಸಿಕೊಂಡಿದ್ದ ಅವರಿಗೆ ಜೋಡಿಯಾಗಿ ಮಲಯಾಳಂ ನಟಿ ಭಾಮಾ ಅಭಿನಯಿಸಿದ್ದರು. ಇಬ್ಬರು ಕಣ್ಣು ಕಾಣದ ವ್ಯಕ್ತಿಗಳ ಲವ್‌ಸ್ಟೋರಿ ಇದಾಗಿತ್ತು. ಬಾಕ್ಸ್‌ ಆಫೀಸ್‌ನಲ್ಲಿ ಅಷ್ಟೇನೂ ಸದ್ದು ಮಾಡದಿದ್ದರೂ ಮಿತ್ರ ಅಭಿನಯಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು. ಇದೀಗ ಅವರು ಮತ್ತೊಮ್ಮೆ ಪ್ರಯೋಗಾತ್ಮಕ ಪಾತ್ರಕ್ಕೆ ಮುಂದಾಗಿದ್ದಾರೆ.

ಇದನ್ನೂ ಓದಿ: Karavali Movie: ಪ್ರಜ್ವಲ್‌ ನಟನೆಯ ʼಕರಾವಳಿʼ ಚಿತ್ರಕ್ಕೆ ಇವರೇ ನಾಯಕಿ; ಪೋಸ್ಟರ್‌ ರಿಲೀಸ್‌

Continue Reading

ಸ್ಯಾಂಡಲ್ ವುಡ್

Kannada New Movie: ಸೆಟ್ಟೇರಿತು ‘ಆಕಾಶ್’, ‘ಅರಸು’ ಚಿತ್ರಗಳ ಡೈರೆಕ್ಟರ್ ಹೊಸ ಸಿನಿಮಾ; ಕಿರುತೆರೆಯ ಈ ಪ್ರತಿಭೆ ನಾಯಕ

Kannada New Movie: ಪವರ್‌ ಸ್ಟಾರ್‌ ಪುನೀತ್‌ ರಾಜ್‌ ಕುಮಾರ್‌ ಅಭಿನಯದ ʼಆಕಾಶ್ʼ, ʼಅರಸುʼ ಮುಂತಾದ ಹಿಟ್ ಸಿನಿಮಾಗಳ ನಿರ್ದೇಶಕ ಮಹೇಶ್ ಬಾಬು ಹೊಸ ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ಈ ಬಾರಿ ಅವರು ಕಿರುತೆರೆ ನಟ ಸ್ಮೈಲ್ ಗುರು ರಕ್ಷಿತ್ ಅವರನ್ನು ನಾಯಕನಾಗಿ ಕನ್ನಡ ಬೆಳ್ಳಿಪರದೆಗೆ ಕರೆದುಕೊಂಡು ಬರುತ್ತಿದ್ದಾರೆ. ಶೀರ್ಷಿಕೆ ಅಂತಿಮವಾಗದ ಈ ಸಿನಿಮಾದ ಮುಹೂರ್ತ ಬೆಂಗಳೂರಿನ ಅಭಯ ಹಸ್ತ ಬಲಮುರಿ ದೇಗುಲದಲ್ಲಿ ನಡೆದಿದೆ.

VISTARANEWS.COM


on

Kannada New Movie
Koo

ಬೆಂಗಳೂರು: ಪವರ್‌ ಸ್ಟಾರ್‌ ಪುನೀತ್‌ ರಾಜ್‌ ಕುಮಾರ್‌ (Puneeth Rajkumar) ಅಭಿನಯದ ʼಆಕಾಶ್ʼ, ʼಅರಸುʼ, ಪ್ರಜ್ವಲ್‌ ದೇವರಾಜ್‌ ನಟನೆಯ ʼಮೆರವಣಿಗೆʼಯಂತಹ ಹಿಟ್ ಸಿನಿಮಾಗಳ ನಿರ್ದೇಶಕ ಮಹೇಶ್ ಬಾಬು (Mahesh Babu) ಹೊಸ ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ಹೊಸ ಪ್ರತಿಭೆಗಳನ್ನು ಪರಿಚಯಿಸುವ ಅವರು ಇದೀಗ ಈ ಚಿತ್ರದ ಮೂಲಕ ಕಿರುತೆರೆ ನಟ ಸ್ಮೈಲ್ ಗುರು ರಕ್ಷಿತ್ ಅವರನ್ನು ನಾಯಕನಾಗಿ ಕನ್ನಡ ಬೆಳ್ಳಿಪರದೆಗೆ ಕರೆದುಕೊಂಡು ಬರುತ್ತಿದ್ದಾರೆ. ಮಹೇಶ್ ಬಾಬು ಹಾಗೂ ರಕ್ಷಿತ್ ಹೊಸ ಸಿನಿಮಾ ಇತ್ತೀಚೆಗೆ ಸೆಟ್ಟೇರಿದೆ. ಬೆಂಗಳೂರಿನ ಅಭಯ ಹಸ್ತ ಬಲಮುರಿ ದೇಗುಲದಲ್ಲಿ ಮುಹೂರ್ತ ನೆರವೇರಿದೆ (Kannada New Movie).

ಮಹೇಶ್ ಬಾಬು ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಈ ಸಿನಿಮಾದ ಶೀರ್ಷಿಕೆ ಏನು ಎಂಬುದು ಇನ್ನೂ ಬಹಿರಂಗಗೊಂಡಿಲ್ಲ. ಸದ್ಯಕ್ಕೆ ಇದನ್ನು ‘ಪ್ರೊಡಕ್ಷನ್ ನಂ 2’ ಎಂದು ಕರೆಯಲಾಗುತ್ತಿದೆ. ʼನೆನಪಿರಲಿʼ ಪ್ರೇಮ್ ಈ ಸಿನಿಮಾದ ಮುಹೂರ್ತ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿ ಮೊದಲ ದೃಶ್ಯಕ್ಕೆ ಅವರು ಆರಂಭ ಫಲಕ ತೋರಿದರು. ಬಳಿಕ ಚಿತ್ರತಂಡಕ್ಕೆ ಅವರು ಶುಭ ಹಾರೈಸಿದರು.

ಎ ಕ್ಲಾಸ್ ಸಿನಿ ಫಿಲ್ಮ್ಸ್ ಪ್ರೊಡಕ್ಷನ್ ಸಂಸ್ಥಾಪಕ ಅನುರಾಗ್ ಆರ್ ತಾಯಿ ಕ್ಯಾಮೆರಾ ಚಾಲನೆ ಮಾಡುವ ಮೂಲಕ ಶುಭ ಕೋರಿದರು. ಈ ಸಿನಿಮಾದಲ್ಲಿ ಸ್ಮೈಲ್ ಗುರು ರಕ್ಷಿತ್‌ಗೆ ಜೋಡಿಯಾಗಿ ಸುದೀಪ್‌ ಅಭಿನಯದ ‘ವೀರ ಮದಕರಿ’ಯಲ್ಲಿ ಬಾಲನಟಿಯಾಗಿ ಕಾಣಿಸಿಕೊಂಡಿದ್ದ ಜೆರುಶಾ ನಟಿಸಲಿದ್ದಾರೆ. ಮತ್ತೊಬ್ಬ ನಾಯಕಿಯ ಹೆಸರನ್ನು ಚಿತ್ರತಂಡ ಶೀಘ್ರದಲ್ಲಿಯೇ ರಿವೀಲ್ ಮಾಡಲಿದೆ.

ಎಂಎಂಎಂ ಪಿಕ್ಚರ್ಸ್ ಹಾಗೂ ಎ ಕ್ಲಾಸ್ ಸಿನಿ ಫಿಲ್ಮ್ಸ್‌ ಜಂಟಿಯಾಗಿ ಈ ಚಿತ್ರ ನಿರ್ಮಾಣ ಮಾಡುತ್ತಿದೆ. ಈ ನಿರ್ಮಾಣ ಸಂಸ್ಥೆಯಡಿ ಅನುರಾಗ್ ಆರ್. ಹಾಗೂ ಮಿಥುನ್ ಕೆಎಸ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಸತ್ಯ ಛಾಯಾಗ್ರಹಣ, ಸತೀಶ್ ಚಂದ್ರಯ್ಯ ಸಂಕಲನ ಚಿತ್ರಕ್ಕಿದೆ. ನಾಯಕ ಸ್ಮೈಲ್ ಗುರು ರಕ್ಷಿತ್ ಕಥೆ ಬರೆದಿದ್ದು, ವಿಜಯ್ ಈಶ್ವರ್ ಸಂಭಾಷಣೆ ಒದಗಿಸಲಿದ್ದಾರೆ. ಶೀಘ್ರದಲ್ಲಿಯೇ ಚಿತ್ರತಂಡ ಅದ್ಧೂರಿಯಾಗಿ ಟೈಟಲ್ ರಿವೀಲ್ ಮಾಡುವ ಯೋಜನೆ ಹಾಕಿಕೊಂಡಿದೆ. ಮೊದಲ ಹಂತದ ಚಿತ್ರೀಕರಣವನ್ನು ಬೆಂಗಳೂರಿನಲ್ಲಿ ಮುಗಿಸಲಿರುವ ಚಿತ್ರತಂಡ ಎರಡನೇ ಹಂತದ ಶೂಟಿಂಗ್‌ಗಾಗಿ ಮಲೆನಾಡಿನತ್ತ ಹೆಜ್ಜೆ ಹಾಕಲಿದೆ.

ಇದನ್ನೂ ಓದಿ: Kannada New Movie: ಕಣ್ಮನ ಸೆಳೆಯುತ್ತಿದೆ ”ಕಡಲೂರ ಕಣ್ಮಣಿ” ಚಿತ್ರದ ಟ್ರೇಲರ್

ಮಹೇಶ್‌ ಬಾಬು ಅವರು 2005ರಲ್ಲಿ ತೆರೆಕಂಡ ʼಆಕಾಶ್‌ʼ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿದರು. ಪುನೀತ್‌ ರಾಜ್‌ಕುಮಾರ್‌-ರಮ್ಯಾ ಅಭಿನಯದ ಈ ಸಿನಿಮಾ ಸೂಪರ್‌ ಹಿಟ್‌ ಎನಿಸಿಕೊಂಡಿತ್ತು. ಬಳಿಕ 2007ರಲ್ಲಿ ಮತ್ತೆ ಪುನೀತ್‌ ರಾಜ್‌ಕುಮಾರ್‌-ರಮ್ಯಾ ಕಾಂಬಿನೇಷನ್‌ನಲ್ಲಿ ಮಹೇಶ್‌ ಬಾಬು ʼಅರಸುʼ ಸಿನಿಮಾ ತೆರೆಗೆ ತಂದರು. ಈ ಚಿತ್ರದಲ್ಲಿ ಮಲಯಾಳಂ ನಟಿ, ರಾಷ್ಟ್ರಪ್ರಶಸ್ತಿ ಪುರಸ್ಕೃತೆ ಮೀರಾ ಜಾಸ್ಮಿನ್‌ ಕೂಡ ಅಭಿನಯಿಸಿದ್ದರು. ಈ ಚಿತ್ರವೂ ಸೂಪರ್‌ ಹಿಟ್‌ ಆಗಿತ್ತು. ಅದಾದ ಬಳಿಕ ಮಹೇಶ್‌ ಬಾಬು ಅವರು ಶಿವರಾಜ್‌ ಕುಮಾರ್‌ ಅವರ ʼಪರಮೇಶ ಪಾನ್‌ವಾಲಾʼ, ʼಮೆರವಣಿಗೆʼ ಮೊದಲದ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಮಾತ್ರವಲ್ಲ ದರ್ಶನ್‌ ಅಭಿನಯದ ʼಅಭಯ್‌ʼ ಚಿತ್ರಕ್ಕೂ ಮಹೇಶ್‌ ಬಾಬು ಆ್ಯಕ್ಷನ್‌ ಕಟ್‌ ಹೇಳಿದ್ದಾರೆ. ಹೀಗೆ ಒಂದೂವರೆ ದಶಕಗಳಿಂದ ಸ್ಯಾಂಡಲ್‌ವುಡ್‌ನಲ್ಲಿ ಸಕ್ರಿಯರಾಗಿವ ಅವರು ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

Continue Reading

ಸಿನಿಮಾ

Iti Acharya: ಬಾಲಿವುಡ್‌ಗೆ ಕಾಲಿಟ್ಟ ಮತ್ತೊಬ್ಬ ಕನ್ನಡತಿ; ದಕ್ಷಿಣ ಭಾರತದ ಚಿತ್ರಗಳ ಬಳಿಕ ಹಿಂದಿಯಲ್ಲೂ ಅಭಿನಯ

Iti Acharya: ನಟಿ, ಮಾಡೆಲ್‌ ಇತಿ ಆಚಾರ್ಯ ಇದೀಗ ಬಾಲಿವುಡ್‌ನತ್ತ ಮುಖ ಮಾಡಿದ್ದಾರೆ. ದಕ್ಷಿಣ ಭಾರತದ ಚಿತ್ರಗಳಲ್ಲಿ ನಟಿಸಿರುವ ಈ ಕನ್ನಡತಿ ಇದೀಗ ʼದಿ ಶೂಸ್ ಐ ವೋರ್ʼ ಎಂಬ ಹೊಸ ಹಿಂದಿ ಚಿತ್ರದಲ್ಲಿ ಇತಿ ನಾಯಕಿಯಾಗಿ ಬಣ್ಣ ಹಚ್ಚುತ್ತಿದ್ದಾರೆ. ಯುವ ಪ್ರತಿಭೆ ಸಂಜಯ್ ಚರಣ್ ನಿರ್ದೇಶನದ ಈ ಸಿನಿಮಾದಲ್ಲಿ ʼಇನ್ನಮುಲ್ಕ್ʼ ಮತ್ತು ʼಸ್ಕ್ಯಾಮ್ʼ ಖ್ಯಾತಿಯ ಫೈಸಲ್ ರಶೀದ್‌ಗೆ ಜೋಡಿಯಾಗಿ ಅವರು ಅಭಿನಯಿಸಲಿದ್ದಾರೆ. ಇತಿ ಆಚಾರ್ಯ ಕನ್ನಡದ ʼಕವಚʼ, ʼಧ್ವನಿʼ, ʼಡೀಲ್‌ ರಾಜಾʼ, ʼಪಂಗನಾಮʼ ಸಿನಿಮಾಗಳಲ್ಲಿ ನಟಿಸಿದ್ದಾರೆ.

VISTARANEWS.COM


on

Iti Acharya
Koo

ಮುಂಬೈ: ಕಿರಿಕ್‌ ಪಾರ್ಟಿ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ ಪ್ರವೇಶಿಸಿ ಬಳಿಕ ಟಾಲಿವುಡ್‌ನಲ್ಲಿ ಮಿಂಚಿ ಕಾಲಿವುಡ್‌ನಲ್ಲೂ ಛಾಪು ಮೂಡಿಸಿದ ಕನ್ನಡತಿ ರಶ್ಮಿಕಾ ಮಂದಣ್ಣ (Rashmika Mandanna) ಇದೀಗ ಬಾಲಿವುಡ್‌ನಲ್ಲಿ ಗಟ್ಟಿಯಾಗಿ ನೆಲೆಯೂರುವ ಸೂಚನೆ ನೀಡಿದ್ದಾರೆ. ಸ್ಟಾರ್‌ ನಟರ ಬ್ಯಾಕ್‌ ಟು ಬ್ಯಾಕ್‌ ಚಿತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಇವರ ಜತೆಗೆ ಇನ್ನೊಬ್ಬ ಸ್ಯಾಂಡಲ್‌ವುಡ್‌ ನಟಿಯೂ ಇದೀಗ ಬಾಲಿವುಡ್‌ನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಅವರೇ ನಟಿ, ಮಾಡೆಲ್‌ ಇತಿ ಆಚಾರ್ಯ (Iti Acharya).

ಇತಿ ಆಚಾರ್ಯ ನಟನೆ ಜತೆಗೆ ಮಾಡೆಲಿಂಗ್‌ನಲ್ಲಿಯೂ ಮಿಂಚುತ್ತಿದ್ದಾರೆ. 2016ರ ಮಿಸ್ ಸೌತ್ ಇಂಡಿಯಾ ವಿನ್ನರ್ ಕಿರೀಟ ಮುಡಿಗೇರಿಸಿಕೊಂಡಿರುವ ಈ ಕನ್ನಡತಿ ಆರ್.ವಿ.ಎಸ್.ಪಿ. ಪ್ರೊಡಕ್ಷನ್ ಹೌಸ್ ಮೂಲಕ ನಿರ್ಮಾಪಕಿ ಆಗಿಯೂ ಗುರುತಿಸಿಕೊಂಡಿದ್ದಾರೆ. ಕನ್ನಡ ಮಾತ್ರವಲ್ಲದೇ ಹಿಂದಿ, ತಮಿಳು, ಮಲಯಾಳಂ ಸಿನಿಮಾಗಳಲ್ಲೂ ಇತಿ ಆಚಾರ್ಯ ಬ್ಯುಸಿಯಾಗಿದ್ದಾರೆ. ಟೈಮ್ಸ್ ಸ್ಕ್ವೇರ್ ಬಿಲ್ ಬೋರ್ಡ್ ಹೋರ್ಡಿಂಗ್ಸ್‌ನಲ್ಲಿ ಕಾಣಿಸಿಕೊಂಡ ಹಿರಿಮೆ ಅವರದ್ದು. ಅಮೇರಿಕಾದ ಖ್ಯಾತ ಗಾಯಕ ಹಾಗೂ ಸಂಗೀತ ನಿರ್ದೇಶಕ ಮೆರ್ಲಿನ್ ಬಾಬಾಜಿ ಸಾಂಗ್‌ನಲ್ಲಿ ಕಾಣಿಸಿಕೊಳ್ಳುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಇತಿ ಆಚಾರ್ಯ ಅವರು ಜನಪ್ರಿಯತೆ ಪಡೆದಿದ್ದಾರೆ.

ಜುಲೈ 15ರಂದು ಹುಟ್ಟುಹಬ್ಬ ಆಚರಿಸಿಕೊಂಡ ಇತಿ ಆಚಾರ್ಯ ಹೊಸ ಸಿನಿಮಾದ ಅಪ್‌ಡೇಟ್ ಹಂಚಿಕೊಂಡಿದ್ದಾರೆ. ʼದಿ ಶೂಸ್ ಐ ವೋರ್ʼ ಎಂಬ ಹೊಸ ಹಿಂದಿ ಚಿತ್ರದಲ್ಲಿ ಇತಿ ನಾಯಕಿಯಾಗಿ ಬಣ್ಣ ಹಚ್ಚುತ್ತಿದ್ದಾರೆ. ಯುವ ಪ್ರತಿಭೆ ಸಂಜಯ್ ಚರಣ್ ನಿರ್ದೇಶನದ ಈ ಸಿನಿಮಾದಲ್ಲಿ ʼಇನ್ನಮುಲ್ಕ್ʼ ಮತ್ತು ʼಸ್ಕ್ಯಾಮ್ʼ ಖ್ಯಾತಿಯ ಫೈಸಲ್ ರಶೀದ್‌ಗೆ ಜೋಡಿಯಾಗಿ ಅವರು ಅಭಿನಯಿಸಲಿದ್ದಾರೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಇತಿ ಆಚಾರ್ಯ, ʼʼನಾನು ಈ ಸಿನಿಮಾದ ಭಾಗವಾಗಿರುವುದಕ್ಕೆ ಖುಷಿ ಇದೆ. ತುಂಬಾ ಉತ್ಸುಕಳಾಗಿದ್ದೇನೆ. ಈ ಪಯಣದಲ್ಲಿ ಸಾಕಷ್ಟು ಕಲಿಯುವುದು ಇದೆ. ವಿಭಿನ್ನ ಕಥೆಯಾಗಿದ್ದು, ಇದೊಂದು ಟೆಕ್ನಿಕಲ್ ಸಿನಿಮಾʼʼ ಎಂದಿದ್ದಾರೆ.

ಇದನ್ನೂ ಓದಿ: Rakshit Shetty: ರಕ್ಷಿತ್‌ ಶೆಟ್ಟಿಗೆ ತಪ್ಪದ ಸಂಕಷ್ಟ; ಮತ್ತೊಂದು ದೂರು ದಾಖಲು!

ಇತಿ ಆಚಾರ್ಯ ಕನ್ನಡದ ʼಕವಚʼ, ʼಧ್ವನಿʼ, ʼಡೀಲ್‌ ರಾಜಾʼ, ʼಪಂಗನಾಮʼ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅದೇ ರೀತಿ ಮಲಯಾಳಂ, ತೆಲುಗು ಮತ್ತು ತಮಿಳಿನ ಸಿನಿಮಾಗಳಲ್ಲಿಯೂ ಅಭಿನಯಿಸಿದ್ದಾರೆ. ಇದೀಗ ಬಾಲಿವುಡ್‌ಗೆ ತೆರಳಿ ಬಹುಭಾಷಾ ನಟಿ ಎನಿಸಿಕೊಂಡಿದ್ದಾರೆ.

Continue Reading
Advertisement
2nd Puc Result
ಪ್ರಮುಖ ಸುದ್ದಿ3 mins ago

‌2nd PUC Exam Result: ದ್ವಿತೀಯ ಪಿಯುಸಿ ಪರೀಕ್ಷೆ- 3 ಫಲಿತಾಂಶ ಪ್ರಕಟ, 23.73% ವಿದ್ಯಾರ್ಥಿಗಳು ಪಾಸ್

Stuck in Lift
Latest10 mins ago

Stuck in Lift: ಫ್ಯಾನಿಲ್ಲ, ಲೈಟಿಲ್ಲ, ಆಹಾರವಿಲ್ಲ; 2 ದಿನ ಲಿಫ್ಟ್‌ನಲ್ಲಿ ಸಿಲುಕಿದ್ದವನ ಸ್ಥಿತಿ ಹೇಗಿರಬಹುದು ಊಹಿಸಿ!

7th Pay Commission
ಕರ್ನಾಟಕ25 mins ago

7th Pay Commission: ಸರ್ಕಾರಿ ನೌಕರರ ವೇತನ, ಪಿಂಚಣಿ 58% ಹೆಚ್ಚಳ; ಸಂಪೂರ್ಣ ಲೆಕ್ಕ ಕೊಟ್ಟ ಸಿದ್ದರಾಮಯ್ಯ

Viral Video
Latest28 mins ago

Viral Video: ಸ್ಟ್ರೆಚರ್‌ ಇಲ್ಲದ ಸರ್ಕಾರಿ ಆಸ್ಪತ್ರೆ; ಪತಿಯನ್ನು ಬೆನ್ನ ಮೇಲೆ ಹೊತ್ತು ನಡೆದ ಪತ್ನಿ! ಮನಮಿಡಿಯುವ ವಿಡಿಯೊ

7th Pay Commission
ಕರ್ನಾಟಕ39 mins ago

7th Pay Commission: ಆ.1ರಿಂದ ನೌಕರರ ವೇತನ ಹೆಚ್ಚಳ; ಸರ್ಕಾರಕ್ಕೆ ವಾರ್ಷಿಕ 20,208 ಕೋಟಿ ಹೆಚ್ಚುವರಿ ಹೊರೆ ಎಂದ ಸಿಎಂ

Sexual Abuse
Latest40 mins ago

Sexual Abuse: ಹೆಣ್ಣು ಮಕ್ಕಳಿಗೆ ಈಗ ಶಾಲೆ ಕೂಡ ಸುರಕ್ಷಿತವಲ್ಲ! ಶಾಲಾ ಶೌಚಾಲಯದಲ್ಲಿ ಬಾಲಕಿ ಮೇಲೆ ಬಾಲಕನಿಂದ ಅತ್ಯಾಚಾರ

MAX Teaser
ಸ್ಯಾಂಡಲ್ ವುಡ್46 mins ago

MAX Teaser: ಬಹುನಿರೀಕ್ಷಿತ ʼಮ್ಯಾಕ್ಸ್ʼ ಚಿತ್ರದ ಟೀಸರ್‌ ಔಟ್‌; ರೌಡಿಗಳ ಅಡ್ಡದಲ್ಲಿ ನಿಂತು ಲಾಂಗ್‌ ಬೀಸಿದ ಸುದೀಪ್‌

Soldier 2
ಸಿನಿಮಾ49 mins ago

Soldier 2: ಮುಂದಿನ ವರ್ಷ ‘ಸೋಲ್ಜರ್ 2’ ಶೂಟಿಂಗ್; ಮತ್ತೆ ಒಂದಾಗಲಿದ್ದಾರೆಯೇ ಬಾಬಿ ಡಿಯೋಲ್-ಪ್ರೀತಿ ಜಿಂಟಾ?

Rain Effect
ಮಳೆ1 hour ago

Rain Effect : ಭಾರಿ ಮಳೆಗೆ ಶಿರೂರು ಗುಡ್ಡ ಕುಸಿತ; ಮಣ್ಣಿನಡಿ ಸಿಲುಕಿದ್ದ ಮಹಿಳೆ ಮೃತದೇಹ ಪತ್ತೆ

RCB
ಕ್ರೀಡೆ1 hour ago

RCB: ಆರ್​ಸಿಬಿ ಕಪ್​ ಗೆಲ್ಲದಿರಲು ನೈಜ ಕಾರಣ ತಿಳಿಸಿದ ತಂಡದ ಮಾಜಿ ಆಟಗಾರ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 hours ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ3 hours ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ21 hours ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 day ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ1 day ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌