SIIMA 2024: ಸೈಮಾ ನಾಮಿನೇಷನ್ ರೇಸ್‌ನಲ್ಲಿ ʻಕಾಟೇರʼ, ʻಸಪ್ತ ಸಾಗರದಾಚೆ ಎಲ್ಲೋ ಸೈಡ್-ಎʼ! - Vistara News

ಸ್ಯಾಂಡಲ್ ವುಡ್

SIIMA 2024: ಸೈಮಾ ನಾಮಿನೇಷನ್ ರೇಸ್‌ನಲ್ಲಿ ʻಕಾಟೇರʼ, ʻಸಪ್ತ ಸಾಗರದಾಚೆ ಎಲ್ಲೋ ಸೈಡ್-ಎʼ!

SIIMA 2024:ಸ್ಯಾಂಡಲ್‌ವುಡ್‌ನಿಂದ ದರ್ಶನ್ ನಟಿಸಿದ ‘ಕಾಟೇರ’ ಹಾಗೂ ‘ಸಪ್ತಸಾಗರದಾಚೆ ಎಲ್ಲೋ ಸೈಡ್-ಎ’ ಸಿನಿಮಾಗಳು ಸೈಮಾ ಪ್ರಶಸ್ತಿಯ ನಾಮನಿರ್ದೇಶನಗೊಂಡ ಪಟ್ಟಿಯಲ್ಲಿವೆ. ತರುಣ್ ಸುಧೀರ್ ನಿರ್ದೇಶಿಸಿದ್ದ ‘ಕಾಟೇರ’ ಸಿನಿಮಾ ಸುಮಾರು 8 ವಿಭಾಗಗಗಳಲ್ಲಿ ನಾಮನಿರ್ದೇಶನಗೊಂಡಿದೆ.

VISTARANEWS.COM


on

SIIMA 2024 nomination list announced kaatera
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪ್ರತಿಷ್ಠಿತ ಸೈಮಾ ಪ್ರಶಸ್ತಿ (SIIMA 2024) ಮತ್ತೆ ಬಂದಿದೆ. ಈ ಅವಾರ್ಡ್ ತನ್ನದೇ ಆದ ಪ್ರಾಮುಖ್ಯತೆಯನ್ನು ಹೊಂದಿದೆ. ಸೈಮಾ ಎಂದರೆ, ‘ಸೌತ್ ಇಂಡಿಯನ್ ಇಂಟರ್‌ನ್ಯಾಷನಲ್ ಅವಾರ್ಡ್’ ಎಂದು. ಈ ಪ್ರಶಸ್ತಿಯನ್ನು ಪ್ರಮುಖವಾಗಿ ಸೌತ್ ಸಿನಿಮಾರಂಗದಲ್ಲಿ ತಯಾರಾಗುವ ಸಿನಿಮಾಗಳಿಗೆ ಮಾತ್ರವೇ ಕೊಡಲಾಗುತ್ತದೆ. ಪ್ರತಿ ಬಾರಿ ಈ ಪ್ರಶಸ್ತಿ ಪಡದುಕೊಳ್ಳುವ ಸಿನಿಮಾ ಯಾವುವು, ಕಲಾವಿದರು ಯಾರು ಎನ್ನುವ ಕುತೂಹಲ ಇದ್ದೇ ಇರುತ್ತದೆ. 2024ರ ಸೈಮಾ ನಾಮೀಷನ್ ಪಟ್ಟಿ ಬಿಡುಗಡೆಯಾಗಿದ್ದು, ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂನ ಯಾವ ಸಿನಿಮಾಗಳು ರೇಸ್ ನಲ್ಲಿವೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

SIIMA ನ ಅಧ್ಯಕ್ಷರಾದ ಬೃಂದಾ ಪ್ರಸಾದ್ ಅವರು 2023ರ SIIMA ನಾಮನಿರ್ದೇಶನ ಸಿನಿಮಾ ಪಟ್ಟಿ ಘೋಷಿಸಿದ್ದಾರೆ. ನಾಮನಿರ್ದೇಶನ ಸಿನಿಮಾ ಬಗ್ಗೆ ಮಾತನಾಡುತ್ತಾ ಬೃಂದಾ ಪ್ರಸಾದ್ “ಕಳೆದ ಎರಡು ವರ್ಷಗಳಲ್ಲಿ ದಕ್ಷಿಣ ಭಾರತದ ಸಿನಿಮಾದ ಪ್ರಾದೇಶಿಕ ಸಿನಿಮಾಗಳು ಭಾಷೆಯನ್ನು ಮೀರಿ ರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿವೆ. ಹೀಗಾಗಿ SIIMA 2024 ಪ್ರಬಲ ಸ್ಪರ್ಧಿಗಳ ಪಟ್ಟಿಯನ್ನು ಹೊಂದಿರುತ್ತದೆ” ಎಂದಿದ್ದಾರೆ.

ಸ್ಯಾಂಡಲ್‌ವುಡ್‌ನಿಂದ ದರ್ಶನ್ ನಟಿಸಿದ ‘ಕಾಟೇರ’ ಹಾಗೂ ‘ಸಪ್ತಸಾಗರದಾಚೆ ಎಲ್ಲೋ ಸೈಡ್-ಎ’ ಸಿನಿಮಾಗಳು ಸೈಮಾ ಪ್ರಶಸ್ತಿಯ ನಾಮನಿರ್ದೇಶನಗೊಂಡ ಪಟ್ಟಿಯಲ್ಲಿವೆ. ತರುಣ್ ಸುಧೀರ್ ನಿರ್ದೇಶಿಸಿದ್ದ ‘ಕಾಟೇರ’ ಸಿನಿಮಾ ಸುಮಾರು 8 ವಿಭಾಗಗಗಳಲ್ಲಿ ನಾಮನಿರ್ದೇಶನಗೊಂಡಿದೆ. ಇದರೊಂದಿಗೆ ರಕ್ಷಿತ್ ಶೆಟ್ಟಿ ನಟಿಸಿ, ಹೇಮಂತ್ ರಾವ್ ನಿರ್ದೇಶಿಸಿದ ‘ಸಪ್ತಸಾಗರದಾಚೆ ಎಲ್ಲೋ ಸೈಡ್-ಎ’ ಸಿನಿಮಾ ಸುಮಾರು 7 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದೆ.

ಇದನ್ನೂ ಓದಿ: Paris Olympics 2024 : ಜಿಯೋಸಿನಿಮಾದಲ್ಲಿ ಪ್ಯಾರಿಸ್​ ಒಲಿಂಪಿಕ್ಸ್​​ ಉಚಿತ ನೇರಪ್ರಸಾರ

ಇದನ್ನೂ ಓದಿ : Kannada New Movie: ಸೆಟ್ಟೇರಿತು ‘ಆಕಾಶ್’, ‘ಅರಸು’ ಚಿತ್ರಗಳ ಡೈರೆಕ್ಟರ್ ಹೊಸ ಸಿನಿಮಾ; ಕಿರುತೆರೆಯ ಈ ಪ್ರತಿಭೆ ನಾಯಕ

ಸೈಮಾ ರೇಸ್‌ನಲ್ಲಿರುವ ಸಿನಿಮಾಗಳು

ಕನ್ನಡ-ಕಾಟೇರ
ತೆಲುಗು-ದಸರಾ
ತಮಿಳು-ಜೈಲರ್
ಮಲಯಾಳಂ-2018

ಕಾಟೇರ ಹಾಗೂ ಸಪ್ತಸಾಗರದಾಚೆ ಎಲ್ಲೋ ಸೈಡ್-ಎ ಸಿನಿಮಾಗಳು ಸೈಮಾ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿವೆ. ತರುಣ್ ಸುಧೀರ್ ನಿರ್ದೇಶನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಕಾಟೇರ ಚಿತ್ರ 8 ವಿಭಾಗಗಗಳಲ್ಲಿ ನಾಮಿನೇಟ್ ಆಗಿದೆ. ಅತ್ತ ರಕ್ಷಿತ್ ಶೆಟ್ಟಿ ನಟನೆಯ, ಹೇಮಂತ್ ರಾವ್ ನಿರ್ದೇಶನದ ಸಪ್ತಸಾಗರದಾಚೆ ಎಲ್ಲೋ ಸೈಡ್-ಎ ಚಿತ್ರ 7 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದೆ.

ತೆಲುಗಿನಲ್ಲಿ, ನಾನಿ ಮತ್ತು ಕೀರ್ತಿ ಸುರೇಶ್ ಅಭಿನಯದ ಶ್ರೀಕಾಂತ್ ಒಡೆಲಾ ನಿರ್ದೇಶನದ ‘ದಸರಾ’ ಚಿತ್ರ 11 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದ್ದು, ನಾನಿ ಮತ್ತು ಮೃಣಾಲ್ ಠಾಕೂರ್ ಅಭಿನಯದ ‘ಹಾಯ್ ನಾನ್ನ’ 10 ವಿಭಾಗಗಳಲ್ಲಿ ನಾಮಿನೇಷನ್ ಗೊಂಡಿದೆ.

ತಮಿಳಿನಲ್ಲಿ, ರಜನಿಕಾಂತ್ ಅಭಿನಯದ ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ‘ಜೈಲರ್’ 11 ವಿಭಾಗದಲ್ಲಿ ನಾಮನಿರ್ದೇಶನಗಳೊಂದಿಗೆ ಮುಂಚೂಣಿಯಲ್ಲಿದ್ದರೆ, ಉದಯನಿಧಿ ಸ್ಟಾಲಿನ್ ಮತ್ತು ಕೀರ್ತಿ ಸುರೇಶ್ ಅಭಿನಯದ ‘ಮಾಮಣ್ಣನ್’ ಸಿನಿಮಾ 9 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದೆ.

ಮಲಯಾಳಂನಲ್ಲಿ, ಟೋವಿನೋ ಥಾಮಸ್ ಮತ್ತು ಆಸಿಫ್ ಅಲಿ ಅಭಿನಯದ ಜೂಡ್ ಆಂಥನಿ ಜೋಸೆಫ್ ನಿರ್ದೇಶನದ ‘2018’ ಸಿನಿಮಾ 8 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದೆ, ಮಮ್ಮುಟ್ಟಿ ಮತ್ತು ಜ್ಯೋತಿಕಾ ಅಭಿನಯದ ‘ಕಾತಲ್ – ದಿ ಕೋರ್’ 7 ವಿಭಾಗಗಳಲ್ಲಿ ನಾಮಿನೇಷನ್ ಆಗಿದೆ.

ಆನ್‌ಲೈನ್ ವೋಟಿಂಗ್ ಮೂಲಕ ವಿಜೇತರನ್ನು ಆಯ್ಕೆ ಮಾಡಲಾಗುತ್ತದೆ.
ಅಭಿಮಾನಿಗಳು ತಮ್ಮ ನೆಚ್ಚಿನ ತಾರೆಯರು ಮತ್ತು ಚಲನಚಿತ್ರಗಳಿಗೆ www.siima.in ಮತ್ತು SIIMA ನ ಫೇಸ್‌ಬುಕ್ ಪುಟದಲ್ಲಿ ವೋಟ್ ಮಾಡಬಹುದು. ದುಬೈನಲ್ಲಿ ಸೆಪ್ಟಂಬರ್ 14 ಮತ್ತು 15ರಂದು 2024ರ ಸೈಮಾ ನಡೆಯಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Director Arrest: ಕೊಲೆ ಕೇಸ್​​ನಲ್ಲಿ 20 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಸ್ಯಾಂಡಲ್​ವುಡ್ ನಿರ್ದೇಶಕ ಅರೆಸ್ಟ್​!

Director Arrest: 2004ರಲ್ಲಿ ಬೆಂಗಳೂರಿನ ವಿಲ್ಸನ್ ಗಾರ್ಡನ್​ನಲ್ಲಿ ರೌಡಿ ಶೀಟರ್ ಕೊತ್ತರವಿ ಕೊಲೆಯಾಗಿತ್ತು. ಕೊಲೆ ಕೇಸ್​ನಲ್ಲಿ ಬಂಧಿತನಾಗಿದ್ದ ಗಜೇಂದ್ರಗೆ ಕೋರ್ಟ್ 1 ವರ್ಷ ಶಿಕ್ಷೆ ಕೂಡ ವಿಧಿಸಿತ್ತು. ಒಂದು ವರ್ಷ ಜೈಲುವಾಸ ಅನುಭವಿಸಿದ ಗಜೇಂದ್ರ ಬಳಿಕ ಜಾಮೀನು ಪಡೆದು ಹೊರಬಂದಿದ್ದ.

VISTARANEWS.COM


on

Director Arrest gajendra in murder case
Koo

ಬೆಂಗಳೂರು: ಕೊಲೆ ಕೇಸ್‌ನಲ್ಲಿ 20 ವರ್ಷಗಳಿಂದ ತಲೆ ಮರೆಸಿಕೊಂಡು, ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ (Director Arrest) ಸಿನಿಮಾ ನಿರ್ದೇಶಕನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಿಸಿಬಿ ಪೊಲೀಸರು (CCB Police) ಗಜೇಂದ್ರ ಅಲಿಯಾಸ್ ಗಜನನ್ನು ಅರೆಸ್ಟ್‌ ಮಾಡಿದ್ದಾರೆ. ಗಜೇಂದ್ರ ಕನ್ನಡ ಚಿತ್ರರಂಗದಲ್ಲಿ (Kannada Film Industry) ಮಾತ್ರವಲ್ಲದೆ ಕಾಲಿವುಡ್ (Kollywood) ಇಂಡಸ್ಟ್ರಿಯಲ್ಲೂ ಒಂದೆರಡು ಸಿನಿಮಾ ಮಾಡಿದ್ದ. 2004ರಲ್ಲಿ ಬೆಂಗಳೂರಿನ ವಿಲ್ಸನ್ ಗಾರ್ಡನ್​ನಲ್ಲಿ ರೌಡಿ ಶೀಟರ್ ಕೊತ್ತರವಿ ಕೊಲೆಯಾಗಿತ್ತು. ಈ ಕೊಲೆ ಕೇಸ್​​ನಲ್ಲಿ ಚಂದ್ರಪ್ಪ, ಅಲ್ಯೂಮಿನಿಯಂ ಬಾಬು ಜೊತೆಗೆ ನಿರ್ದೇಶಕ ಗಜೇಂದ್ರ ಎಂಟನೇ ಆರೋಪಿಯಾಗಿದ್ದ.

2004ರಲ್ಲಿ ಬೆಂಗಳೂರಿನ ವಿಲ್ಸನ್ ಗಾರ್ಡನ್​ನಲ್ಲಿ ರೌಡಿ ಶೀಟರ್ ಕೊತ್ತರವಿ ಕೊಲೆಯಾಗಿತ್ತು. ಕೊಲೆ ಕೇಸ್​ನಲ್ಲಿ ಬಂಧಿತನಾಗಿದ್ದ ಗಜೇಂದ್ರಗೆ ಕೋರ್ಟ್ 1 ವರ್ಷ ಶಿಕ್ಷೆ ಕೂಡ ವಿಧಿಸಿತ್ತು. ಒಂದು ವರ್ಷ ಜೈಲುವಾಸ ಅನುಭವಿಸಿದ ಗಜೇಂದ್ರ ಬಳಿಕ ಜಾಮೀನು ಪಡೆದು ಹೊರಬಂದಿದ್ದ.

ಇದನ್ನೂ ಓದಿ: Kannada New Movie: ಸೆಟ್ಟೇರಿತು ‘ಆಕಾಶ್’, ‘ಅರಸು’ ಚಿತ್ರಗಳ ಡೈರೆಕ್ಟರ್ ಹೊಸ ಸಿನಿಮಾ; ಕಿರುತೆರೆಯ ಈ ಪ್ರತಿಭೆ ನಾಯಕ

ಜಾಮೀನು ಪಡೆದ ಬಳಿಕ ಹಲವು ವರ್ಷಗಳಿಂದ ಕೋರ್ಟ್​ಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ. 20 ವರ್ಷಗಳಿಂದ ಪೊಲೀಸರ ಕೈಗೆ ಸಿಕ್ಕಿಲ್ಲ. ಈ ಹಿಂದೆ ಪುಟಾಣಿ ಪವರ್ ಹಾಗೂ ರುದ್ರ ಎಂಬ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ. ಅಷ್ಟೇ ಅಲ್ಲದೇ ತಮಿಳಿನಲ್ಲಿ ಒಂದೆರಡು ಸಿನಿಮಾ ಮಾಡಿರೋದಾಗಿ ಹೇಳಿಕೊಂಡಿದ್ದಾನೆ. ಸದ್ಯ ಸಿಸಿಬಿ ಪೊಲೀಸರು ಇದೀಗ ಗಜೇಂದ್ರನನ್ನು ಬಂಧಿಸಿ ಕೋರ್ಟ್‌ಗೆ ಹಾಜರು ಪಡಿಸಿದ್ದಾರೆ.

Continue Reading

ಸ್ಯಾಂಡಲ್ ವುಡ್

Samarjit Lankesh: ‘ಮೊನಾಲಿಸಾ’ ಚಿತ್ರಕ್ಕೆ 20 ವರ್ಷಗಳ ಸಂಭ್ರಮ: ರಿಲೀಸ್ ಆಯ್ತು ‘ಗೌರಿ’ ಚಿತ್ರದ ಹಾಡುಗಳು

Samarjit Lankesh: “ಮೊನಾಲಿಸಾ” ಚಿತ್ರ ತೆರೆಕಂಡು ಇಪ್ಪತ್ತು ವರ್ಷಗಳಾಗಿದೆ. ಚಿತ್ರತಂಡದ ಸದಸ್ಯರೊಡನೆ ಕೇಕ್ ಕಟ್ ಮಾಡುವ ಮೂಲಕ “ಮೊನಾಲಿಸಾ” ಚಿತ್ರದ ಇಪ್ಪತ್ತರ ಸಂಭ್ರಮವನ್ನು ಆಚರಿಸಲಾಯಿತು. ನಿರ್ದೇಶಕ ಇಂದ್ರಜಿತ್ ಲಂಕೇಶ್, ನಾಯಕ ಧ್ಯಾನ್, ನಾಯಕಿ ಸದಾ, ನಟ ಶರಣ್, ಸಂಭಾಷಣೆ ಬರೆದಿದ್ದ ಬಿ.ಎ.ಮಧು, ಸ್ಥಿರ ಛಾಯಾಗ್ರಾಹಕ ಗುಂಡ್ಲುಪೇಟೆ ಸುರೇಶ್, ಡಿಸೈನರ್ ಮಣಿ ಸೇರಿದಂತೆ “ಮೊನಾಲಿಸಾ” ಚಿತ್ರತಂಡದ ಸದಸ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

VISTARANEWS.COM


on

Samarjit Lankesh Monalisa Kannada Movie 20 Years Celebration Gowri Movie 2 Songs Released
Koo

ಬೆಂಗಳೂರು: ಇಂದ್ರಜಿತ್ ಲಂಕೇಶ್ ನಿರ್ದೇಶನದಲ್ಲಿ ಧ್ಯಾನ್ ಹಾಗೂ ಸದಾ ನಾಯಕ, ನಾಯಕಿಯಾಗಿ ನಟಿಸಿದ್ದ ಸೂಪರ್ ಹಿಟ್ “ಮೊನಾಲಿಸಾ” ಚಿತ್ರ ತೆರೆಕಂಡು ಇಪ್ಪತ್ತು ವರ್ಷಗಳಾಗಿದೆ. ಚಿತ್ರತಂಡದ ಸದಸ್ಯರೊಡನೆ ಕೇಕ್ ಕಟ್ ಮಾಡುವ ಮೂಲಕ “ಮೊನಾಲಿಸಾ” ಚಿತ್ರದ ಇಪ್ಪತ್ತರ ಸಂಭ್ರಮವನ್ನು ಆಚರಿಸಲಾಯಿತು. ನಿರ್ದೇಶಕ ಇಂದ್ರಜಿತ್ ಲಂಕೇಶ್, ನಾಯಕ ಧ್ಯಾನ್, ನಾಯಕಿ ಸದಾ, ನಟ ಶರಣ್, ಸಂಭಾಷಣೆ ಬರೆದಿದ್ದ ಬಿ.ಎ.ಮಧು, ಸ್ಥಿರ ಛಾಯಾಗ್ರಾಹಕ ಗುಂಡ್ಲುಪೇಟೆ ಸುರೇಶ್, ಡಿಸೈನರ್ ಮಣಿ ಸೇರಿದಂತೆ “ಮೊನಾಲಿಸಾ” ಚಿತ್ರತಂಡದ ಸದಸ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಈ ಸಂಭ್ರಮದ ಸಂಧರ್ಭದಲ್ಲಿ ಇಂದ್ರಜಿತ್ ಲಂಕೇಶ್ ನಿರ್ದೇಶನದಲ್ಲಿ ಅವರ ಮಗ ಸಮರ್ಜಿತ್ ಲಂಕೇಶ್ ನಾಯಕನಾಗಿ ಪದಾರ್ಪಣೆ ಮಾಡುತ್ತಿರುವ “ಗೌರಿ” ಚಿತ್ರದ “ಮುದ್ದಾದ” ಹಾಡು ಸೇರಿದಂತೆ ಎರಡು ಹಾಡುಗಳು ಬಿಡುಗಡೆಯಾಯಿತು. ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ “ಗೌರಿ” ಹಾಡನ್ನು ಬಿಡುಗಡೆ ಮಾಡಿದರು. ಇಂದಿರಾ ಲಂಕೇಶ್ ಅವರು ಉಪಸ್ಥಿತರಿದ್ದರು. ಈ ಹಾಡನ್ನು ಇಂದ್ರಜಿತ್ ಅವರ ಸಹೋದರಿ ಗೌರಿ ಲಂಕೇಶ್ ಅವರಿಗೆ ಅರ್ಪಿಸಲಾಗಿದೆ. “ಮದ್ದಾದ” ಹಾಡನ್ನು “ಮೊನಾಲಿಸಾ” ಚಿತ್ರದ ನಾಯಕ ಧ್ಯಾನ್, ನಾಯಕಿ ಸದಾ ಹಾಗೂ”ಗೌರಿ” ಚಿತ್ರದ ನಾಯಕ ಸಮರ್ಜಿತ್ ಹಾಗೂ ನಾಯಕಿ ಸಾನ್ಯ ಅಯ್ಯರ್ ಸೇರಿ ಬಿಡುಗಡೆ ಮಾಡಿದರು. “ಗೌರಿ” ಹಾಡನ್ನು ಕೆ.ಕಲ್ಯಾಣ್ ಹಾಗೂ “ಮುದ್ದಾದ” ಹಾಡನ್ನು ಕವಿರಾಜ್ ಬರೆದಿದ್ದಾರೆ. ಆನಂದ್ ಆಡಿಯೋ ಮೂಲಕ ಹಾಡುಗಳು ಬಿಡುಗಡೆಯಾಗಿದೆ.

ಇದನ್ನೂ ಓದಿ: Samarjit Lankesh: ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಅಭಿನಯದ `ಗೌರಿ’ ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌!

ಹಾಡು ಬಿಡುಗಡೆ ಮಾಡಿ ಮಾತನಾಡಿದ ಹಂಸಲೇಖ ಅವರು, ʻʻಸಂಗೀತ ಎಂದರೆ ಸಿನಿಮಾ. ಸಿನಿಮಾ ಎಂದರೆ ಸಂಗೀತ. ಸಂಗೀತವಿಲ್ಲದ ಸಿನಿಮಾವನ್ನು ಊಹಿಸಿಕೊಳ್ಳಲು ಅಸಾಧ್ಯ. ಸ್ಟೈಲಿಶ್ ಚಿತ್ರಗಳಿಗೆ ಹೆಸರಾದ ಇಂದ್ರಜಿತ್ ಅವರು ಈ ಚಿತ್ರವನ್ನೂ ನಿರ್ದೇಶಿಸಿದ್ದಾರೆ. ತಮ್ಮ ನಿರ್ದೇಶನದಲ್ಲೇ ಮಗನನ್ನು ಚಿತ್ರರಂಗಕ್ಕೆ ಪದಾರ್ಪಣೆ ಮಾಡಿಸುತ್ತಿದ್ದಾರೆ. ಇಂದು ನನ್ನಿಂದ ಬಿಡುಗಡೆಯಾದ ಹಾಡನ್ನು ಗೌರಿ ಲಂಕೇಶ್ ಅವರಿಗೆ ಅರ್ಪಿಸಿದ್ದಾರೆ. “ಗೌರಿ” ಚಿತ್ರ ಯಶಸ್ವಿಯಾಗಲಿʼʼ ಎಂದು ಹಾರೈಸಿದರು.

ನಿರ್ದೇಶಕ ಹಾಗೂ ನಿರ್ಮಾಪಕ ಇಂದ್ರಜಿತ್ ಲಂಕೇಶ್ ಮಾತನಾಡಿ,ʻʻ “ಗೌರಿ” ಚಿತ್ರದಲ್ಲಿ ಏಳು ಹಾಡುಗಳಿದೆ. ಇದೊಂದು ಸಂಗೀತ ಪ್ರಧಾನ ಚಿತ್ರವಾಗಿರುವುದರಿಂದ ಹಂಸಲೇಖ ಅವರಿಂದಲೇ ಹಾಡು ಬಿಡುಗಡೆ ಮಾಡಿಸಬೇಕೆಂಬ ಹಂಬಲ ನನ್ನಗಿತ್ತು. ಹಾಡು ಬಿಡುಗಡೆ ಮಾಡಿಕೊಟ್ಟ ಅವರಿಗೆ ವಂದನೆ.‌ ಇಂದು ಎರಡು ಹಾಡುಗಳನ್ನು ಬಿಡುಗಡೆ ಮಾಡಿದ್ದು, “ಮುದ್ದಾದ” ಹಾಡನ್ನು ಕವಿರಾಜ್ ಅವರು ಬರೆದಿದ್ದು, ನಿಹಾಲ್ ತವ್ರು ಹಾಡಿದ್ದಾರೆ. ಜೆಸ್ಸಿ ಗಿಫ್ಟ್ ಸಂಗೀತ ನೀಡಿದ್ದಾರೆ. ಮತ್ತೊಂದು ಹಾಡನ್ನು ಕೆ.ಕಲ್ಯಾಣ್ ಅವರು ಬರೆದಿದ್ದು, ಆ ಹಾಡನ್ನು ನನ್ನ ಅಕ್ಕ ಗೌರಿ ಲಂಕೇಶ್ ಅವರಿಗೆ ಅರ್ಪಣೆ ಮಾಡಲಾಗಿದೆ. ಇನ್ನು ಚಿತ್ರಕ್ಕೆ ಸೆನ್ಸಾರ್ ಮಂಡಳಿ “ಯು” ಪ್ರಮಾಣ ಪತ್ರ ನೀಡಿದೆ. ಆಗಸ್ಟ್ ಹದಿನೈದು ಚಿತ್ರ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಗಂಗಾಧರ್ ಮೈಸೂರು ಭಾಗದ ವಿತರಕರು. ಮೈಸೂರು ಒಂದನ್ನು ಬಿಟ್ಟು ವಿಶಾಲ ಕರ್ನಾಟಕಕ್ಕೆ ಜಯಣ್ಣ ಫಿಲಂಸ್ ಅವರು ವಿತರಣೆ ಮಾಡುತ್ತಿದ್ದಾರೆ. ಡಬ್ಬಿಂಗ್ ರೈಟ್ಸ್ ಕೂಡ ಮಾರಾಟವಾಗಿದೆ. ಈಗಾಗಲೇ ಬಿಡುಗಡೆಯಾಗಿರುವ ಹಾಡುಗಳು ಹಾಗೂ ಟೀಸರ್ ಮೂಲಕ ನಮ್ಮ ಚಿತ್ರ ಗೆದ್ದಿದೆ. ಇನ್ನೇನಿದ್ದರೂ ನಿರ್ದೇಶಕನಾಗಿ ನಾನ ಗೆಲ್ಲಬೇಕುʼʼ ಎಂದರು.

ನನ್ನ ಬಹು ದಿನಗಳ ಕನಸು ನನಸ್ಸಾಗುವ ಸಮಯ ಸಮೀಪಿಸಿದೆ. ಮೊದಲು ನಾನು ನನ್ನ ಅಪ್ಪನಿಗೆ ಹಾಗೂ ಇಡೀ ತಂಡಕ್ಕೆ ಧನ್ಯವಾದ ಹೇಳುತ್ತೇನೆ ಎಂದರು ನಾಯಕ ಸಮರ್ಜಿತ್ ಲಂಕೇಶ್.
ಇಷ್ಟು ದಿಗ್ಗಜ್ಜರ ನಡುವೆ ನಮ್ಮ ಚಿತ್ರದ ಹಾಡು ಬಿಡುಗಡೆಯಾಗಿದು ಖುಷಿಯಾಗಿದೆ ಎಂದರು ನಾಯಕಿ ಸಾನ್ಯಾ ಅಯ್ಯರ್. “ಗೌರಿ” ಚಿತ್ರದ ಛಾಯಾಗ್ರಾಹಕ ಕೆ.ಕೆ, ಗೀತರಚನೆ ಮಾಡಿರುವ ಕೆ.ಕಲ್ಯಾಣ್, ಕವಿರಾಜ್ ಚಿತ್ರದ ಕುರಿತು ಮಾತನಾಡಿದರು.

“ಮೊನಲಿಸ” ಚಿತ್ರದ ಬಗ್ಗೆ ನಾಯಕ ಧ್ಯಾನ್, ನಾಯಕಿ ಸದಾ, ಸಂಭಾಷಣೆ ಬರೆದಿರುವ ಬಿ.ಎ.ಮಧು ಮುಂತಾದವರು ಅನುಭವಗಳನ್ನು ಹಂಚಿಕೊಂಡರು.

Continue Reading

ಸಿನಿಮಾ

Kichcha Sudeep: ಅಂಬಾನಿ ಮದುವೆಗೆ ಸುದೀಪ್‌ಗೆ ಆಹ್ವಾನ ಬಂದಿತ್ತ? ಅಸಲಿ ಸತ್ಯ ಏನು?

Kichcha Sudeep: ಪ್ರಧಾನಿ ಮೋದಿ ಸಹ ಈ ದುಬಾರಿ ಕಲ್ಯಾಣೋತ್ಸವಕ್ಕೆ ಹಾಜರಾಗಿದ್ದು ವಿಶೇಷ. ರಜನಿಕಾಂತ್, ಮಹೇಶ್‌ ಬಾಬು, ರಾಮ್‌ಚರಣ್ ಸೇರಿದಂತೆ ದಕ್ಷಿಣ ಭಾರತದ ಹಲವು ಸಿನಿಮಾ ತಾರೆಯರಿಗೆ ಮದುವೆಯ ಆಮಂತ್ರಣ ಸಿಕ್ಕಿತ್ತು.ಸ್ಯಾಂಡಲ್‌ವುಡ್‌ನಿಂದ ಯಶ್ ದಂಪತಿಗೆ ಮಾತ್ರ ಆಹ್ವಾನ ನೀಡಲಾಗಿತ್ತು ಎನ್ನಲಾಗ್ತಿದೆ.

VISTARANEWS.COM


on

Kichcha Sudeep Really Invited By Mukesh Ambani Wedding
Koo

ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮುಕೇಶ್ ಅಂಬಾನಿ (Mukesh Ambani) ಅವರ ಕಿರಿಯ ಪುತ್ರ ಅನಂತ್ ಅಂಬಾನಿ (Anant Ambani) ಮತ್ತು ಕೈಗಾರಿಕೋದ್ಯಮಿ ವೀರೇನ್ ಮರ್ಚಂಟ್‌ ಅವರ ಪುತ್ರಿ ರಾಧಿಕಾ ಮರ್ಚಂಟ್‌ (Radhika Merchant) ಅವರ ವಿವಾಹವು ಮುಂಬೈನಲ್ಲಿ ಅದ್ಧೂರಿಯಾಗಿ ನೆರವೇರಿತ್ತು.  ನಟ ಯಶ್‌- ಪತ್ನಿ ರಾಧಿಕಾ ಪಂಡಿತ್‌ ಸಹ ಭಾಗಿ ಆಗಿದ್ದರು. ಇದಾದ ಬಳಿಕ ಬಹು ಚರ್ಚೆಯಾಗಿದ್ದು, ಸುದೀಪ್‌ ಅವರಿಗೆ ಆಹ್ವಾನ ಇತ್ತ?ಎಂಬುದು. ಈಗ ಸುದೀಪ್ ಅವರ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೊದಲ್ಲಿ ಅವರು ಅಂಬಾನಿ ಮನೆಯ ಮದುವೆಗೆ ಏಕೆ ಹೋಗಿಲ್ಲ ಎಂಬುದನ್ನು ವಿವರಿಸಿದ್ದಾರೆ ಎಂದು ಫ್ಯಾನ್​ ಪೇಜ್​ಗಳು ಹಾಕಿವೆ. ಆದರೆ ಅಸಲಿ ವಿಚಾರ ಏನು? ತಿಳಿಯಲು ಮುಂದೆ ಓದಿ.

ವಿಡಿಯೊದಲ್ಲಿ ಸುದೀಪ್‌ ಹೇಳಿದ್ದು ಹೀಗೆ. ʻನನಗೆ ಸ್ವಲ್ಪ ಹುಷಾರಿರಲಿಲ್ಲ. ಅಲ್ಲಿ ತುಂಬ ಕಟ್ಟುನಿಟ್ಟಾದ ಪ್ರೋಟೋಕಾಲ್​ ಇತ್ತು. ಶೀತ, ಜ್ವರ ಇತ್ಯಾದಿ ಇದ್ದರೆ ಆರ್​ಟಿಪಿಸಿಆರ್​ ಮಾಡಬೇಕಿತ್ತು. ಅದರಿಂದ ನನಗೆ ಕಂಫರ್ಟ್​ ಇರಲಿಲ್ಲ. ನನಗೆ ಸ್ವಲ್ಪ ಟೆಂಪ್ರೇಚರ್​ ಇತ್ತು. ಬೇರೆ ಬೇರೆ ಕೆಲಸಗಳಲ್ಲಿ ನಾನು ತೊಡಗಿಕೊಂಡಿದ್ದೆ. ಅಲ್ಲಿ ಹೋಗಿ ಪರೀಕ್ಷೆ ಮಾಡಿದ ಬಳಿಕ ಜ್ವರ ಇದೆ ಅಂತ ಒಳಗೆ ಬಿಡದಿದ್ದರೆ? ಅಲ್ಲಿತನಕ ಹೋಗಿ ವಾಪಸ್​ ಬಂದರೆ ತಪ್ಪಾಗುತ್ತದೆ. ಸಂಬಂಧಿಸಿದವರಿಗೆ ಫೋನ್​ ಮಾಡಿ ವಿಷಯ ತಿಳಿಸಿದೆ’ ಎಂದು ಸುದೀಪ್​ ವಿಡಿಯೊದಲ್ಲಿ ಹೇಳಿದ್ದರು.

ಇನ್ನು ಈ ವಿಡಿಯೊ ವೈರಲ್‌ ಆಗುತ್ತಿದ್ದಂತೆ ಇದು ಹಳೆಯ ವಿಡಿಯೊ. 2023 ಫೆಬ್ರವರಿಯಲ್ಲಿ ಹಲವು ನಟರು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದರು. ಆಗ ಸುದೀಪ್‌ ಅವರಿಗೆ ಆಹ್ವಾನ ನೀಡಲಾಗಿತ್ತು. ಆದರೆ ಅವರು ಹೋಗಿರಲಿಲ್ಲ. ಆ ಸಮಯದಲ್ಲಿ ಸುದೀಪ್‌ ಕೊಟ್ಟ ರಿಯಾಕ್ಷನ್‌ ಇದು. ಫ್ಯಾನ್​ ಪೇಜ್​ಗಳು ಬೇರೆ ರೀತಿಯಲ್ಲಿ ಹಾಕಿವೆ.

ಪ್ರಧಾನಿ ಮೋದಿ ಸಹ ಈ ದುಬಾರಿ ಕಲ್ಯಾಣೋತ್ಸವಕ್ಕೆ ಹಾಜರಾಗಿದ್ದು ವಿಶೇಷ. ರಜನಿಕಾಂತ್, ಮಹೇಶ್‌ ಬಾಬು, ರಾಮ್‌ಚರಣ್ ಸೇರಿದಂತೆ ದಕ್ಷಿಣ ಭಾರತದ ಹಲವು ಸಿನಿಮಾ ತಾರೆಯರಿಗೆ ಮದುವೆಯ ಆಮಂತ್ರಣ ಸಿಕ್ಕಿತ್ತು.ಸ್ಯಾಂಡಲ್‌ವುಡ್‌ನಿಂದ ಯಶ್ ದಂಪತಿಗೆ ಮಾತ್ರ ಆಹ್ವಾನ ನೀಡಲಾಗಿತ್ತು ಎನ್ನಲಾಗ್ತಿದೆ. ಇನ್ನು ನಟ ಯಶ್ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ಕಾಣಿಸಿಕೊಂಡ ಫೋಟೊ, ವೀಡಿಯೋಗಳು ಸಖತ್ ವೈರಲ್ ಆಗುತ್ತಿದೆ.

ಇದನ್ನೂ ಓದಿ: Kichcha Sudeep: ವಾಲ್ಮೀಕಿ ಜಾತ್ರೆಗೆ ಈ ಬಾರಿ ನಟ ಕಿಚ್ಚ ಸುದೀಪ್‌ಗೆ ಇಲ್ಲ ಆಹ್ವಾನ

ಮುಕೇಶ್ ಅಂಬಾನಿ ತಮ್ಮ ಮಗನ ಮದುವೆಗೆ ಬಂದ ಅತಿಥಿಗಳಿಗೆ ರಿಟರ್ನ್ ಗಿಫ್ಟ್ ನೀಡಿದ್ದಾರೆ. ನಟ ಯಶ್ ಸೇರಿದಂತೆ ಹಲವರಿಗೆ 2 ಕೋಟಿ ರೂ. ಮೌಲ್ಯದ ಒಡುಮಾರ್ ಪಿಗೇಟ್‌ ವಾಚ್‌ಗಳು ಉಡುಗೊರೆಯಾಗಿ ಸಿಕ್ಕಿದೆ ಎನ್ನಲಾಗುತ್ತಿದೆ. ಬಾಲಿವುಡ್ ನಟರಾದ ಶಾರುಖ್ ಖಾನ್, ರಣ್‌ವೀರ್ ಸಿಂಗ್ ಸೇರಿದಂತೆ ಹಲವರು ಇದೇ ರೀತಿ ವಾಚ್‌ಗಳನ್ನು ಧರಿಸಿ ಮದುವೆ ಸಮಾರಂಭದಲ್ಲಿ ಭಾಗಿ ಆಗಿದ್ದರು. ನ

Continue Reading

ಸ್ಯಾಂಡಲ್ ವುಡ್

MAX Teaser: ಬಹುನಿರೀಕ್ಷಿತ ʼಮ್ಯಾಕ್ಸ್ʼ ಚಿತ್ರದ ಟೀಸರ್‌ ಔಟ್‌; ರೌಡಿಗಳ ಅಡ್ಡದಲ್ಲಿ ನಿಂತು ಲಾಂಗ್‌ ಬೀಸಿದ ಸುದೀಪ್‌

MAX Teaser: ಬಹು ನಿರೀಕ್ಷಿತ ಪ್ಯಾನ್‌ ಇಂಡಿಯಾ ಚಿತ್ರ ʼಮ್ಯಾಕ್ಸ್ʼನ ಟೀಸರ್ ರಿಲೀಸ್‌ ಆಗಿದೆ. ಈ‌ ಆ್ಯಕ್ಷನ್‌ ಚಿತ್ರದಲ್ಲಿ ಕಿಚ್ಚ ಸುದೀಪ್‌ ಮತ್ತೊಮ್ಮೆ ಮಾಸ್‌ ಅವತಾರದಲ್ಲಿ ಮಿಂಚಿದ್ದಾರೆ. ಟೀಸರ್‌ನಲ್ಲಿ ಭರಪೂರ ಆ್ಯಕ್ಷನ್‌ ದೃಶ್ಯಗಳು ಕಂಡು ಬಂದಿದ್ದು ಅಭಿಮಾನಿಗಳು ಮನಸೋತಿದ್ದಾರೆ. ಮಾಸ್- ಗಾಡ್ ಅವತಾರದಲ್ಲಿ ಕಾಣಿಸಿಕೊಂಡಿರುವ ಕಿಚ್ಚ ಸುದೀಪ್ ಅವರನ್ನು ನೋಡಿದ ಅಭಿಮಾನಿಗಳ ನಿರೀಕ್ಷೆ ಇನ್ನೂ ಹೆಚ್ಚಾಗಿದೆ. ವಿಜಯ್ ಕಾರ್ತಿಕೇಯ ನಿರ್ದೇಶನದ ಆಕ್ಷನ್ ಥ್ರಿಲ್ಲರ್ ʼಮ್ಯಾಕ್ಸ್ʼ ಚಿತ್ರದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಜತೆಗೆ ವರಲಕ್ಷ್ಮೀ ಶರತ್ ಕುಮಾರ್, ಸಂಯುಕ್ತ ಹೊರನಾಡು, ಪ್ರಮೋದ್ ಶೆಟ್ಟಿ, ಸುನೀಲ್‌ ಮುಂತಾದವರು ಬಣ್ಣ ಹಚ್ಚಿದ್ದಾರೆ.

VISTARANEWS.COM


on

MAX Teaser
Koo

ಬೆಂಗಳೂರು: ಬಹು ನಿರೀಕ್ಷಿತ ಪ್ಯಾನ್‌ ಇಂಡಿಯಾ ಚಿತ್ರ ʼಮ್ಯಾಕ್ಸ್ʼನ ಟೀಸರ್ (MAX Teaser) ರಿಲೀಸ್‌ ಆಗಿದೆ. ಈ‌ ಆ್ಯಕ್ಷನ್‌ ಚಿತ್ರದಲ್ಲಿ ಕಿಚ್ಚ ಸುದೀಪ್‌ (Kiccha Sudeep) ಮತ್ತೊಮ್ಮೆ ಮಾಸ್‌ ಅವತಾರದಲ್ಲಿ ಮಿಂಚಿದ್ದಾರೆ. ಟೀಸರ್‌ನಲ್ಲಿ ಭರಪೂರ ಆ್ಯಕ್ಷನ್‌ ದೃಶ್ಯಗಳು ಕಂಡು ಬಂದಿದ್ದು ಅಭಿಮಾನಿಗಳು ಮನಸೋತಿದ್ದಾರೆ. ʼವಿಕ್ರಾಂತ್‌ ರೋಣʼ ಚಿತ್ರದ ಬಳಿಕ ಸುಮಾರು 2 ವರ್ಷಗಳ ತರುವಾಯ ಈ ಸಿನಿಮಾ ತರೆಕಾಣಲಿದ್ದು, ಕುತೂಹಲ ಕೆರಳಿಸಿದೆ.

ಮಾಸ್- ಗಾಡ್ ಅವತಾರದಲ್ಲಿ ಕಾಣಿಸಿಕೊಂಡಿರುವ ಕಿಚ್ಚ ಸುದೀಪ್ ಅವರನ್ನು ನೋಡಿದ ಅಭಿಮಾನಿಗಳ ನಿರೀಕ್ಷೆ ಇನ್ನೂ ಹೆಚ್ಚಾಗಿದೆ. ವಿಜಯ್ ಕಾರ್ತಿಕೇಯ ನಿರ್ದೇಶನದ ಆಕ್ಷನ್ ಥ್ರಿಲ್ಲರ್ ʼಮ್ಯಾಕ್ಸ್ʼ ಚಿತ್ರದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಜತೆಗೆ ವರಲಕ್ಷ್ಮೀ ಶರತ್ ಕುಮಾರ್, ಸಂಯುಕ್ತ ಹೊರನಾಡು, ಪ್ರಮೋದ್ ಶೆಟ್ಟಿ, ಸುನೀಲ್‌ ಮುಂತಾದವರು ಬಣ್ಣ ಹಚ್ಚಿದ್ದಾರೆ. ʼವಿಕ್ರಾಂತ್‌ ರೋಣʼ ಬಳಿಕ ಸುದೀಪ್‌ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡುವ ಅವಕಾಶ ಅಜನೀಶ್ ಲೋಕನಾಥ್‌ಗೆ ಸಿಕ್ಕಿದ್ದು, ಹಾಡುಗಳ ಬಗ್ಗೆಯೂ ಕುತೂಹಲ ಗರಿಗೆದರಿದೆ. ತನು ವಿ‌ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಕಲೈಪುಲಿ ಎಸ್. ಹಾಗೂ ಕಿಚ್ಚ ಸುದೀಪ್ ಕಿಚ್ಚ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಟೀಸರ್‌ನಲ್ಲಿ ಏನಿದೆ?

ಕಿಚ್ಚ ಸುದೀಪ್‌ ʼಮ್ಯಾಕ್ಸ್‌ʼ ಡಬ್ಬಿಂಗ್‌ ಮುಗಿಸಿರುವ ಫೋಟೊ ಇತ್ತೀಚೆಗೆ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ಇದೀಗ ಚಿತ್ರತಂಡ ʼಮ್ಯಾಕ್ಸ್‌ʼ ಟೀಸರ್‌ ಬಿಟ್ಟು ಪ್ರೇಕ್ಷಕರು ಸಿನಿಮಾ ರಿಲೀಸ್‌ಗಾಗಿ ತುದಿಗಾಲಿನಲ್ಲಿ ಕಾಯುವಂತೆ ಮಾಡಿದೆ. ರೌಡಿಗಳ ಅಖಾಡದಲ್ಲಿ ನಿಂತು ಎರಡು ಕೈಗಳಿಂದ ಮಚ್ಚು ಬೀಸುವ ಮಾಸ್‌ ಲುಕ್‌ನಲ್ಲಿ ಕಿಚ್ಚ ಸುದೀಪ್‌ ಮಿಂಚು ಹರಿಸಿದ್ದಾರೆ. ಹಿನ್ನಲೆ ಸಂಗೀತವೂ ಗಮನ ಸೆಳೆಯುವಂತಿದೆ.

ʼಮ್ಯಾಕ್ಸ್ʼ ಸಿನಿಮಾದಲ್ಲಿ ಸುದೀಪ್ ಪೊಲೀಸ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ʻಅರ್ಜುನ್ ಮಹಾಕ್ಷಯ್ʼ ಹೆಸರಿನ ಸುದೀಪ್ ಪಾತ್ರ ಸ್ಪೆಷಲ್ ಆಗಿಯೇ ಇರಲಿದೆ ಎಂದು ಮೂಲಗಳು ತಿಳಿಸಿವೆ. ʻಮ್ಯಾಕ್ಸ್ʼ ಸಿನಿಮಾದಲ್ಲಿ ಸುದೀಪ್ ಭರ್ಜರಿ ಸಾಹಸಗಳನ್ನ ಮಾಡಿದ್ದಾರೆ. ಸಾಹಸ ನಿರ್ದೇಶಕ ಚೇತನ್ ಡಿಸೋಜಾ ಈ ಸಾಹಗಳನ್ನ ಕಂಪೋಸ್ ಮಾಡಿದ್ದಾರೆ. ವಿಶೇಷವಾಗಿ ಚಿತ್ರದ ಕ್ಲೈಮ್ಯಾಕ್ಸ್‌ನಲ್ಲಿ ಭರ್ಜರಿ ಆ್ಯಕ್ಷನ್‌ಗಳೇ ಇವೆ ಎನ್ನಲಾಗಿದೆ. ಅದರ ಸೂಚನೆ ಈ ಟೀಸರ್‌ನಲ್ಲಿ ಲಭಿಸಿದೆ.

ಇದನ್ನೂ ಓದಿ: Kiccha Sudeep: ಕಿಚ್ಚ ಸುದೀಪ್ ಸಿನಿಮಾಗೆ ‘ಜೈಲರ್’ ಸ್ಟಂಟ್ ಮಾಸ್ಟರ್ ಎಂಟ್ರಿ!

ಮತ್ತೆ ಖಾಕಿ ತೊಟ್ಟ ಸುದೀಪ್‌

ಸುದೀಪ್‌ ಖಡಕ್‌ ಪೊಲೀಸ್‌ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡ ʼವಿಕ್ರಾಂತ್‌ ರೋಣʼ ಚಿತ್ರ 2022ರ ಜುಲೈ 28ರಂದು ತೆರೆಕಂಡಿತ್ತು. ʼರಂಗಿತರಂಗʼ ನಿರ್ದೇಶಕ ಅನೂಪ್‌ ಭಂಡಾರಿ ಆ್ಯಕ್ಷನ್‌ ಕಟ್‌ ಹೇಳಿದ್ದ ʼವಿಕ್ರಾಂತ್‌ ರೋಣʼ ಬಾಕ್ಸ್‌ ಆಫೀಸ್‌ನಲ್ಲಿ ಕಮಾಲ್‌ ಮಾಡಿತ್ತು. ಈ ಥ್ರಿಲ್ಲರ್‌ ಚಿತ್ರ 100 ಕೋಟಿ ರೂ. ಕ್ಲಬ್‌ ಸೇರಿ ಸುದೀಪ್‌ ವೃತ್ತಿ ಜೀವನಕ್ಕೆ ಹೊಸ ಮೈಲೇಜ್‌ ನೀಡಿತ್ತು. ನಿರೂಪ್‌ ಭಂಡಾರಿ, ಮಿಲನಾ ನಾಗರಾಜ್‌, ನೀತಾ ಅಶೋಕ್‌ ಮತ್ತಿತರರು ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಂಡ ಈ ಸಿನಿಮಾದಲ್ಲಿ ಬಾಲಿವುಡ್‌ ಬೆಡಗಿ ಜ್ವಾಕಲಿನ್‌ ಫೆರ್ನಾಂಡೀಸ್‌ ಹೆಜ್ಜೆ ಹಾಕಿದ ʼರಾ ರಾ ರಕ್ಕಮ್ಮʼ ಹಾಡು ಜನಪ್ರಿಯವಾಗಿತ್ತು. ಇದಾಗಿ ಎರಡು ವರ್ಷಗಳ ಬಳಿಕ ಸುದೀಪ್‌ ಮತ್ತೆ ಖಾಕಿ ವೇಷದಲ್ಲಿ ಪ್ರೇಕ್ಷಕರ ಎದುರು ಬರುತ್ತಿರುವುದರಿಂದ ಸಹಜವಾಗಿಯೇ ನಿರೀಕ್ಷೆ ಹೆಚ್ಚಾಗಿದೆ. ರಿಲೀಸ್‌ ದಿನಾಂಕವನ್ನು ಚಿತ್ರತಂಡ ಶೀಘ್ರದಲ್ಲಿಯೇ ಘೋಷಿಸಲಿದೆ.

Continue Reading
Advertisement
Director Arrest gajendra in murder case
ಸ್ಯಾಂಡಲ್ ವುಡ್10 mins ago

Director Arrest: ಕೊಲೆ ಕೇಸ್​​ನಲ್ಲಿ 20 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಸ್ಯಾಂಡಲ್​ವುಡ್ ನಿರ್ದೇಶಕ ಅರೆಸ್ಟ್​!

Vicky Kaushal Kissing Scenes of 27 Seconds deleated From Bad Newz
ಬಾಲಿವುಡ್38 mins ago

Vicky Kaushal: 27 ಸೆಕೆಂಡುಗಳ ಕಾಲ ಚುಂಬಸಿದ ವಿಕ್ಕಿ ಕೌಶಲ್ -ತೃಪ್ತಿ; ಸೆನ್ಸಾರ್‌ ಬೋರ್ಡ್‌ನಿಂದ ಬಿತ್ತು ಕತ್ತರಿ!

uttara kannada landslide shirur
ಉತ್ತರ ಕನ್ನಡ48 mins ago

Uttara Kannada Landslide: ಭೂಕುಸಿತದ ಜಾಗದ ಬಳಿಯೇ ʼಸುನಾಮಿʼ ಎಫೆಕ್ಟ್‌; ನೀರಿನ ರಭಸಕ್ಕೆ ಕೊಚ್ಚಿಹೋದ ಮಹಿಳೆ

Ajit Pawar
ರಾಜಕೀಯ50 mins ago

Ajit Pawar: ಮಹಾರಾಷ್ಟ್ರದಲ್ಲಿ ಅಜಿತ್‌ ಪವಾರ್‌ಗೆ ಶಾಕ್‌; ಎನ್‌ಸಿಪಿಗೆ ರಾಜೀನಾಮೆ ನೀಡಿದ ಆಪ್ತ

KL Rahul
ಕ್ರೀಡೆ53 mins ago

KL Rahul: ಮುಂದಿನ ವರ್ಷ ಆರ್​ಸಿಬಿ ಪರ ಆಡಲಿದ್ದಾರೆ ಕೆ.ಎಲ್​ ರಾಹುಲ್​; ಪೋಸ್ಟರ್ ವೈರಲ್

Samarjit Lankesh Monalisa Kannada Movie 20 Years Celebration Gowri Movie 2 Songs Released
ಸ್ಯಾಂಡಲ್ ವುಡ್1 hour ago

Samarjit Lankesh: ‘ಮೊನಾಲಿಸಾ’ ಚಿತ್ರಕ್ಕೆ 20 ವರ್ಷಗಳ ಸಂಭ್ರಮ: ರಿಲೀಸ್ ಆಯ್ತು ‘ಗೌರಿ’ ಚಿತ್ರದ ಹಾಡುಗಳು

gt world mall
ಪ್ರಮುಖ ಸುದ್ದಿ1 hour ago

GT World Mall: ಪಂಚೆ ಧರಿಸಿ ಬಂದ ರೈತರಿಗೆ ಪ್ರವೇಶ ನಿರಾಕರಿಸಿ ಅವಮಾನಿಸಿದ ಜಿಟಿ ವರ್ಲ್ಡ್‌ ಮಾಲ್‌

Kylian Mbappe
ಕ್ರೀಡೆ1 hour ago

Kylian Mbappe: ಬಾಲ್ಯದ ಕನಸಿನ ರಿಯಲ್‌ ಮ್ಯಾಡ್ರಿಡ್‌ ತಂಡ ಸೇರಿದ ಕೀಲಿಯನ್‌ ಎಂಬಾಪೆ

SIIMA 2024 nomination list announced kaatera
ಸ್ಯಾಂಡಲ್ ವುಡ್2 hours ago

SIIMA 2024: ಸೈಮಾ ನಾಮಿನೇಷನ್ ರೇಸ್‌ನಲ್ಲಿ ʻಕಾಟೇರʼ, ʻಸಪ್ತ ಸಾಗರದಾಚೆ ಎಲ್ಲೋ ಸೈಡ್-ಎʼ!

Chandipura Virus
ಆರೋಗ್ಯ2 hours ago

Chandipura Virus: ಡೆಂಗ್ಯೂ ಹಾವಳಿ ನಡುವೆ ಕಾಡುತ್ತಿದೆ ಚಾಂದಿಪುರ ವೈರಸ್; ಇದುವರೆಗೆ 6 ಮಕ್ಕಳು ಬಲಿ: ಏನಿದರ ಲಕ್ಷಣ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ22 hours ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ23 hours ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ2 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ2 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ2 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ3 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ3 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ3 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ4 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌