Site icon Vistara News

Umapathy Srinivas: ಬಡವರ ಸಾರಥಿ, ಭಗವಂತ ನೀನೆ ಕಣಯ್ಯಾ; ಉಮಾಪತಿ ಶ್ರೀನಿವಾಸ್ ಬರ್ತ್‌ಡೇ ಸಾಂಗ್‌ ಔಟ್‌!

Umapathy Srinivas The Kaptan Song out

ಬೆಂಗಳೂರು:ʻ ‘ಹೆಬ್ಬುಲಿ’, ‘ಒಂದಲ್ಲಾ ಎರಡಲ್ಲಾ’, ‘ರಾಬರ್ಟ್’ ಹಾಗೂ ‘ಉಪಾಧ್ಯಕ್ಷ’ ಅಂತಹ ಸಿನಿಮಾವನ್ನು ನಿರ್ಮಾಣ ಮಾಡಿ ಬಾಕ್ಸಾಫೀಸ್‌ನಲ್ಲಿ (Umapathy Srinivas) ಲಾಭ ಕಂಡಿದ್ದಾರೆ. ಇತ್ತೀಚೆಗೆ ದರ್ಶನ್ ಜೈಲಿಗೆ ಹೋದ ಬಳಿಕ ಸಿಡಿದೆದ್ದು ರಾಜ್ಯಾದ್ಯಂತ ಸುದ್ದಿಯಲ್ಲಿ ಇದ್ದರು.ಕನ್ನಡ ಚಿತ್ರರಂಗದ ರೆಬೆಲ್ ನಿರ್ಮಾಪಕ ಅಂತಲೇ ಫೇಮಸ್ ಆಗಿರುವವರು ಉಮಾಪತಿ ಶ್ರೀನಿವಾಸ್ ಗೌಡ. ಈ ರೆಬೆಲ್ ನಿರ್ಮಾಪಕ ಉಮಾಪತಿ ಗೌಡ ಜುಲೈ 27ರಂದು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ನಿರ್ಮಾಪಕ ಬರ್ತ್‌ಡೇಗೆ ಇನ್ನೂ ನಾಲ್ಕು ದಿನಗಳು ಇರುವಾಗಲೇ ಹಾಡೊಂದನ್ನು ಉಡುಗೊರೆಯಾಗಿ ನೀಡಿದ್ದಾರೆ. ಈಗಾಗಲೇ ‘ದ ಕಪ್ತಾನ್‌’ ಅನ್ನುವ ಆಲ್ಬಂ ಸಾಂಗ್ ಅನ್ನು ಯೂಟ್ಯೂಬ್ ಚಾನೆಲ್‌ನಲ್ಲಿ ರಿಲೀಸ್ ಮಾಡಲಾಗಿದೆ.

ಈ ಸಂದರ್ಭದಲ್ಲಿ ಪೃಕೃತಿ ಪ್ರೊಡಕ್ಷನ್ಸ್ ಮೂಲಕ ಶರಣಪ್ಪ ಗೌರಮ್ಮ ಅವರು “ದ ಕಪ್ತಾನ್‌” ಆಲ್ಬಂ ಸಾಂಗ್ ಮಾಡುವ ಮೂಲಕ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ಕಿಕ್ ಬಾಕ್ಸಿಂಗ್ ನಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಶರಣಪ್ಪ ಗೌರಮ್ಮ “ಯಾವ ಮೋಹನ ಮುರಳಿ ಕರೆಯಿತು” ಚಿತ್ರದ ಮೂಲಕ ನಿರ್ಮಾಪಕರಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ್ದಾರೆ.

ಇದನ್ನೂ ಓದಿ: Actor Suriya: ಕಾಲಿವುಡ್‌ ನಟ ಸೂರ್ಯ ಸಿನಿಮಾಗಾಗಿ ಈ ಕನ್ನಡ   ಸ್ಟಾರ್ ಹೀರೋಗೆ ಬಂದಿತ್ತು ಆಫರ್‌!

“ನನಗೆ ಉಮಾಪತಿ ಶ್ರೀನಿವಾಸ್, ಅವರ ಮೇಲೆ ಅಪಾರ ಪ್ರೀತಿ ಹಾಗೂ ಗೌರವ. ನಮ್ಮ ಎಲ್ಲಾ ಕೆಲಸಗಳಿಗೂ ಅವರ ಪ್ರೋತ್ಸಾಹ ಇರುತ್ತದೆ. ಹಾಗಾಗಿ ಈ ಹಾಡನ್ನು ಬಿಡುಗಡೆ ಮಾಡುವ ಮೂಲಕ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಮುಂಚಿತವಾಗಿಯೇ ತಿಳಿಸುತ್ತಿರುವುದಾಗಿʼʼ ನಿರ್ಮಾಪಕ ಶರಣಪ್ಪ ಗೌರಮ್ಮ ತಿಳಿಸಿದ್ದಾರೆ.

ಪದ್ದಿ ಮಲ್ನಾಡ್ ಬರೆದು, ಅನಿಲ್ ಸಿ ಜೆ ಹಾಡಿ, ಸಂಗೀತ ನೀಡಿರುವ ಈ ” ದ ಕಪ್ತಾನ್‌ ” ಆಲ್ಬಂ ಸಾಂಗ್ ಮಾಸ್ ಮ್ಯೂಸಿಕ್ ಅಡ್ಡ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ.

ಸದ್ಯ ಈ ಹಾಡಿನ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ. ನಿರ್ಮಾಪಕರೊಬ್ಬರ ಹುಟ್ಟುಹಬ್ಬಕ್ಕೆ ಅಲ್ಬಂ ಸಾಂಗ್ ಮಾಡಿ ಉಡುಗೊರೆಯಾಗಿ ಕೊಟ್ಟಿರುವುದು ತೀರಾ ಅಪರೂಪ.ಸದ್ಯ ಹೊಸ ಸಿನಿಮಾದ ಘೋಷಣೆ ಮಾಡದೇ ಹೋದರೂ, ಹೊಸ ಕಥೆಗಳನ್ನು ಕೇಳುತ್ತಿರುವುದಾಗಿ ಈ ಹಿಂದೆ ಹೇಳಿದ್ದಾರೆ.

Exit mobile version