Site icon Vistara News

Varthur Santhosh: ‘ಯಾವನೋ ಕಿತ್ತೋದ್‌ ನನ್ಮಗ”ಎಂದ ಜಗ್ಗೇಶ್‌ಗೆ ವರ್ತೂರ್‌ ಹೇಳಿದ್ದೇನು?

varthur santhosh

ಬೆಂಗಳೂರು: ರಾಜ್ಯದಲ್ಲಿ ಹುಲಿ ಉಗುರಿನ (Tiger Nail) ಲಾಕೆಟ್ ಇರುವ ಸರ ಧರಿಸಿರುವವರ ವಿರುದ್ಧ ಅರಣ್ಯ ಇಲಾಖೆ ಪರಿಶೀಲನೆ ನಡೆಸಿತ್ತು. ಇದೀಗ ಬಿಗ್‌ ಬಾಸ್‌ ಸ್ಪರ್ಧಿ ವರ್ತೂರ್‌ ಸಂತೋಷ್‌ (Varthur Santhosh) ಅವರ ಹುಲಿ ಉಗರು ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ. ಕೆಲವು ದಿನಗಳ ಹಿಂದೆಯಷ್ಟೇ ಜಗ್ಗೇಶ್‌ ಅವರು ‘ರಂಗನಾಯಕ’ ಸಿನಿಮಾ ಕಾರ್ಯಕ್ರಮದಲ್ಲಿ ʻಯಾವನೋ ಕಿತ್ತೋದ್‌ ನನ್ಮಗ ರಿಯಲ್ ಆಗಿ ಹುಲಿ ಉಗುರು ಹಾಕ್ಕೊಂಡʼ ಎಂದು ಹೇಳಿದ್ದರು. ಈ ಮಾತಿಗೆ ಸೋಷಿಯಲ್‌ ಮೀಡಿಯಾದಲ್ಲಿ ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ವರ್ತೂರ್‌ ಮಾಧ್ಯಮವೊಂದಕ್ಕೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ʻನಾನು ಏನು ಹೇಳ್ತೀನಿ ಅಂದ್ರೆ, ಕಾಲಾಯ ತಸ್ಮೈ ನಮಃ ಅಷ್ಟೆʼಎಂದು ಹೇಳಿದ್ದಾರೆ.

ಕೆಲವು ದಿನಗಳ ಹಿಂದೆಯಷ್ಟೇ ಜಗ್ಗೇಶ್‌ ಅವರು ‘ರಂಗನಾಯಕ’ ಸಿನಿಮಾ ಕಾರ್ಯಕ್ರಮದಲ್ಲಿ ಮಾತನಾಡಿ ʻʻನಾನು ಹುಲಿ ತರ ಬದುಕಬೇಕು ಎಂದು ನನ್ನ ತಾಯಿ ಹುಲಿ ಉಗುರನ್ನು ಕೊಟ್ಟಳು. ಆದರೆ ಯಾವನೋ ಕಿತ್ತೋದ್‌ ನನ್ಮಗ ರಿಯಲ್ ಆಗಿ ಹುಲಿ ಉಗುರು ಹಾಕ್ಕೊಂಡು, ಯಾವುದೋ ಟಿವಿಯಲ್ಲಿ ತಗಲಾಕ್ಕೊಂಡ ಬಳಿಕ ದೊಡ್ಡ ಸುದ್ದಿ ಆಯಿತು”ಎಂದು ಹೇಳಿದ್ದರು. ಈ ಮಾತಿಗೆ ಸೋಷಿಯಲ್‌ ಮೀಡಿಯಾದಲ್ಲಿ ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು.

ತೂಕಕ್ಕೆ ತೂಕ ಸರಿ ಇರಬೇಕು

ಈ ಬಗ್ಗೆ ಬಿಗ್‌ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಮಾತನಾಡಿʻʻಅವರು ದೊಡ್ಡವರು. ನಾನು ಏನು ಹೇಳುತ್ತೇನೆ ಅಂದರೆ ಕಾಲೈ ತಸ್ಮೈ ನಮಃ ಅಷ್ಟೆ. ಕೆಲವೊಂದಕ್ಕೆ ಉತ್ತರ ಕೊಟ್ಟರೆ, ಇನ್ನು ಕೆಲವೊಂದಕ್ಕೆ ಸುಮ್ಮನಿರಬೇಕು. ಸುದೀಪಣ್ಣ ಅವರು ಹೇಳಿದಾಗೆ, ಕೆಲವೊಂದು ಜಾಗದಲ್ಲಿ ಮಾತನಾಡಬೇಕು. ಕೆಲವೊಮ್ಮೆ ಮಾತನಾಡದೇ ಸುಮ್ಮನಿದ್ದರೆ ಆ ಸೈಲೆಂಟ್ ಉತ್ತರ ಕೊಡುತ್ತೆ ಎಂದು. ತೂಕದ ಜತೆ ತೂಕವನ್ನು ಅಳೆಯಬೇಕಾದರೆ ತೂಕಕ್ಕೆ ತೂಕ ಸರಿ ಇರಬೇಕುʼʼಎಂದಿದ್ದಾರೆ.

ಇದನ್ನೂ ಓದಿ: Varthur Santhosh: ವರ್ತೂರ್‌ ಸಂತೋಷ್‌ಗೆ ಸನ್ಮಾನ ಮಾಡಿದ ಪಿ ಎಸ್ ಐ ರಾತ್ರೋರಾತ್ರಿ ವರ್ಗಾವಣೆ!

ಅರಣ್ಯ ಇಲಾಖೆ ಅಧಿಕಾರಿಗಳು ದರ್ಶನ್, ಜಗ್ಗೇಶ್, ನಿಖಿಲ್ ಕುಮಾರಸ್ವಾಮಿ ಮನೆಗಳಲ್ಲಿ ಶೋಧ ನಡೆಸಿ ಹುಲಿ ಉಗುರಿನ ಪೆಂಡೆಂಟ್ ಕೊಂಡೊಯ್ದಿದ್ದರು.

Exit mobile version