Vinay Guruji: ಬೈಕೊಂಡು ವಿನಯ್ ಗುರೂಜಿ ಆಶ್ರಮಕ್ಕೆ ಹೋಗಿದ್ದೆ ಆದರೆ ನನ್ನ ಅಷ್ಟೂ ಜಾತಕ ಬಿಚ್ಚಿಟ್ರು ಎಂದ ಮಾಸ್ಟರ್ ಆನಂದ್ ಸಹೋದರ! - Vistara News

ಸ್ಯಾಂಡಲ್ ವುಡ್

Vinay Guruji: ಬೈಕೊಂಡು ವಿನಯ್ ಗುರೂಜಿ ಆಶ್ರಮಕ್ಕೆ ಹೋಗಿದ್ದೆ ಆದರೆ ನನ್ನ ಅಷ್ಟೂ ಜಾತಕ ಬಿಚ್ಚಿಟ್ರು ಎಂದ ಮಾಸ್ಟರ್ ಆನಂದ್ ಸಹೋದರ!

Vinay Guruji: ದೇವರನ್ನು ನಂಬುವುದು ಕಷ್ಟ ಎನ್ನುವ ಸಮಯದಲ್ಲಿ ದೇವ ಮನುಷ್ಯರನ್ನು ಹೇಗೆ ನಂಬಲಿ ಎಂದು ಪದೇ ಪದೇ ಹೇಳುತ್ತಿದ್ದ ಅರುಣ್ ಹರಿಹರನ್‌ ವಿನಯ್ ಗುರೂಜಿ (Vinay Guruji) ಅವರನ್ನು ಭೇಟಿ ಮಾಡಿದ ಕ್ಷಣವನ್ನು ಮಾಧ್ಯಮವೊಂದರಲ್ಲಿ ಹಂಚಿಕೊಂಡಿದ್ದಾರೆ.

VISTARANEWS.COM


on

Vinay Guruji met by master anand brother
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಾಸ್ಟರ್ ಆನಂದ್ ಸಹೋದರ ಮಾಸ್ಟರ್ ಅರುಣ್ ಹರಿಹರನ್ (Arun Hariharan) ಕೂಡ ನಿರ್ದೇಶಕದಲ್ಲಿ ಬ್ಯುಸಿಯಾಗಿದ್ದಾರೆ. ಖಾಸಗಿ ವಾಹಿನಿಯಲ್ಲಿ ಇದೀಗ ‘Huu ಅಂತೀಯಾ…Uhuu ಅಂತೀಯಾ’ ಎಂಬ ಹೊಸ ಬಗೆಯ ವಿನೂತನ ಗೇಮ್ ಶೋ ನಿರೂಪಕ ಕೂಡ ಆಗಿದ್ದಾರೆ. ದೇವರನ್ನು ನಂಬುವುದು ಕಷ್ಟ ಎನ್ನುವ ಸಮಯದಲ್ಲಿ ದೇವ ಮನುಷ್ಯರನ್ನು ಹೇಗೆ ನಂಬಲಿ ಎಂದು ಪದೇ ಪದೇ ಹೇಳುತ್ತಿದ್ದ ಅರುಣ್ ಹರಿಹರನ್‌ ವಿನಯ್ ಗುರೂಜಿ (Vinay Guruji) ಅವರನ್ನು ಭೇಟಿ ಮಾಡಿದ ಕ್ಷಣವನ್ನು ಮಾಧ್ಯಮವೊಂದರಲ್ಲಿ ಹಂಚಿಕೊಂಡಿದ್ದಾರೆ.

ಅರುಣ್ ಹರಿಹರನ್ ಮಾತನಾಡಿ ʻʻನಾನು ದೇವರನ್ನ ನಂಬಲ್ಲ. ಇನ್ನೂ ದೇವ ಮಾನವನ್ನು ನಂಬಲು ಹೇಗೆ ಸಾಧ್ಯ? ಆದರೆ ನಮ್ಮ ಅಣ್ಣ ಬಾ ಎಂದು ಹೇಳಿದ ಅಂತ ವಿನಯ್ ಗುರೂಜೀ ಅವರನ್ನು ಭೇಟಿ ಮಾಡಲು ಹೋದೆ. ಅಲ್ಲಿ ಹೋದಾಗ ನಾವು ಹೋಗುತ್ತಿದ್ದಂತೆ ಗೇಟ್‌ ಬಳಿ ನಿಂತಿದ್ದರು ‘ಬನ್ನಿ ಬನ್ನಿ ನಿಮಗಾಗಿ ಕಾಯುತ್ತಿದ್ದೆ’ ಅಂತ ಹೇಳಿದರು. ಆನಂತ್ ಸಂಪೂರ್ಣ ವ್ಯವಸ್ಥೆ ಮಾಡಿದ್ದಾನೆ ಅಂದುಕೊಂಡು ಸುಮ್ಮನಾದೆʼʼಎಂದು ಮಾತು ಮುಂದುವರಿಸಿದರು.

ʻʻಗುರೂಜಿ ಫುಲ್‌ ಶಾರ್ಟ್ಸ್‌ ಹಾಕ್ಕೊಂಡು ಕೂತಿದ್ದಾರೆ. ನಾನು ಮಾಮೂಲಿ ಖಾವಿನೋ ಅಥವಾ ಬಿಳಿ ಬಣ್ಣದ ಉಡುಪನ್ನೋ ಧರಿಸುತ್ತಾರೆ ಅಂದುಕೊಂಡಿದ್ದೆ. ಆದರೆ ನೋಡುವಾಗ ಅವರು ಹಾಗೆ ಕಂಡಿಲ್ಲ. ನಮ್ಮ ಅಣ್ಣ ಕರೆದುಕೊಂಡು ಬಂದ ಮಕ್ಕರ್‌ ಮಾಡಿದ ಎಂದು ಅಂದುಕೊಂಡಿದ್ದೆ. ಇಡೀ ಟೀಂ ನೋಡಿ ನಿಮಗೆ ಕಾಯುತ್ತಿದ್ದೆ ಎಂದರು. ಗುರೂಜಿ ಅವರು ಊಟ ಬಡಿಸುತ್ತಿದ್ದರು. ಬಜ್ಜಿ ಬಡಿಸುವಾಗ ಇದರಷ್ಟೇ ಖಾರ ಇದ್ಯಲ್ಲ ನೀನು? ಎಂದು ಕೇಳಿದ್ದರು. ಎಷ್ಟು ಬೈಕ್ಕೊಂಡೆ ಅಲ್ವಾ? ಎಂದರು ನಾನು ಅಣ್ಣನೇ ನನ್ನ ಬಗ್ಗೆ ಅವರಿಗೆ ಇದೆಲ್ಲ ಹೇಳಿರಬೇಕು ಎಂದು ಅಂದುಕೊಂಡೆ. ನಮ್ಮ ಡಿಒಪಿ ಮೊಬೈಲ್‌ ಒಡೆದಿದ್ದೂ ಹೇಳಿದ್ದರು. ಮನೆ ಕೂಡ ಬೇಗ ಆಗುತ್ತೆ ಎಂದೂ ಹೇಳುತ್ತಾರೆ. ಇಷ್ಟೆಲ್ಲ ಹೇಳಿದಾಗ ಅಣ್ಣನೇ ಎಲ್ಲವೂ ಹೇಳಿರುತ್ತಾರೆ ಅಂದುಕೊಂಡೆʼʼಎಂದರು.

ಇದನ್ನೂ ಓದಿ: Kannada New Movie: `ನೈಸ್ ರೋಡ್’ ಸಿನಿಮಾಗೆ ನೋಟಿಸ್ ; ಅಷ್ಟಕ್ಕೂ ಆಗಿದ್ದೇನು?

ʻʻನಾನು ಆಗಷ್ಟೇ ಮದುವೆಯಾಗಿದ್ದೆ. ಆಗ ನನ್ನ ಹಳೆ ಪರಚಿಕೊಂಡ ಗಾಯದ ಬಗ್ಗೆ ಹೇಳಿಬಿಟ್ಟರು. ಹೆಂಗಿದ್ದಾಳೋ ಅವಳು ಅಂದುಬಿಟ್ಟರು. ಕಾಲು ಕೈ ಎಲ್ಲಾ ತಣ್ಣಗಾಯ್ತು. ಅಣ್ಣ ಇಷ್ಟೋಂದು ಹೇಳಿದ್ದಾನ ಯಾವ ಹುಡುಗಿ ಹೆಸರು ಹೇಳಿರಬಹುದು ಅಂತ ಯೋಚನೆ ಮಾಡುತ್ತಿದ್ದೆ. ಮತ್ತೊಂದು ರೌಂಡ್‌ ಬಂದರು ಲಿಸ್ಟ್ ತೆಗೆದು ಯೋಚನೆ ಮಾಡುತ್ತಿದ್ದೀಯಾ ಅಂದ್ರು. ಆ ಕ್ಷಣಕ್ಕೆ ನಾನು ಅವರಿಗೆ ಏನೋ ಪವರ್ ಇದೆ ಎಂದು ಅವರಿಗೆ ಸರೆಂಡರ್ ಆಗಿಬಿಟ್ಟೆ. ತುಂಬಾ ಫ್ರೆಂಡ್ಲಿಯಾಗಿ ಮಾತನಾಡಿಸುತ್ತಾರೆ ಯಾರು ಏನೇ ಕೊಟ್ಟರೂ ನಮಗೆ ಕೊಡುತ್ತಿದ್ದರು’ ಎಂದಿದ್ದಾರೆ ಅರುಣ್.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Kannada New Movie: ರೆಟ್ರೋ ಸ್ಟೈಲ್‌ನಲ್ಲಿ ಮೂಡಿಬಂದ ʼಹೇಳು ಗೆಳತಿʼ; ಚರಣ್‌ರಾಜ್ ಕಂಠಸಿರಿಗೆ ಕೇಳುಗರು ಫಿದಾ

Kannada New Movie: ʼಇಬ್ಬನಿ ತಬ್ಬಿದ ಇಳೆಯಲಿʼ ಸಿನಿಮಾದ ಮತ್ತೊಂದು ಹಾಡು ರಿಲೀಸ್‌ ಆಗಿದೆ. ಚಂದ್ರಜಿತ್ ಬೆಳಿಯಪ್ಪ ನಿರ್ದೇಶನವಿರುವ ಈ ಸಿನಿಮಾದ ‘ಹೇಳು ಗೆಳತಿʼ ಎಂಬ ಮೆಲೋಡಿ ಹಾಡನ್ನು ಚಿತ್ರತಂಡ ಇತ್ತೀಚೆಗೆ ಪರವಃ ಮ್ಯೂಸಿಕ್ ಯೂಟ್ಯೂಬ್ ಚಾನಲ್‌ನಲ್ಲಿ ಬಿಡುಗಡೆ ಮಾಡಿದೆ. ಈ ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಚಿತ್ರತಂಡ ತಿಳಿಸಿದೆ.

VISTARANEWS.COM


on

Ibbani Thabbida Ileyali movie Helu Gelati song released
Koo

ಬೆಂಗಳೂರು: ವಿಹಾನ್, ಅಂಕಿತಾ ಅಮರ್ ಪ್ರಮುಖ ಭೂಮಿಕೆಯಲ್ಲಿರುವ ʼಇಬ್ಬನಿ ತಬ್ಬಿದ ಇಳೆಯಲಿʼ ಸಿನಿಮಾದ ಮತ್ತೊಂದು ಹಾಡು ರಿಲೀಸ್‌ ಆಗಿದೆ. ಚಂದ್ರಜಿತ್ ಬೆಳಿಯಪ್ಪ ನಿರ್ದೇಶನವಿರುವ ಈ ಸಿನಿಮಾದ ‘ಹೇಳು ಗೆಳತಿʼ ಎಂಬ ಮೆಲೋಡಿ ಹಾಡನ್ನು ಚಿತ್ರತಂಡ ಇತ್ತೀಚೆಗೆ ಬಿಡುಗಡೆ ಮಾಡಿದ್ದು, ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಚಿತ್ರತಂಡ (Kannada New Movie) ತಿಳಿಸಿದೆ.

ಈ ಹಿಂದೆ ಬಿಡುಗಡೆ ಮಾಡಿದ್ದ ಈ ಸಿನಿಮಾದ ಹಾಡುಗಳಿಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿತ್ತು. ರೆಟ್ರೋ ಹಿನ್ನೆಲೆಯಲ್ಲಿ ಮೂಡಿ ಬಂದಿರುವ ಈ ಮಾಧುರ್ಯಭರಿತ ಗೀತೆಯನ್ನು ಪರವಃ ಮ್ಯೂಸಿಕ್ ಯೂಟ್ಯೂಬ್ ಚಾನಲ್‌ನಲ್ಲಿ ಬಿಡುಗಡೆ ಮಾಡಿದೆ. ಚರಣ್‌ರಾಜ್ ಈ ಗೀತೆಗೆ ಧನಿಗೂಡಿಸಿರುವುದು ವಿಶೇಷ.

ನಾಗಾರ್ಜುನ ಶರ್ಮಾ ಸಾಹಿತ್ಯವಿರುವ ಈ ಹಾಡಿಗೆ ಗಗನ್ ಬಡೇರಿಯಾ ಸಂಗೀತ ಸಂಯೋಜಿಸಿದ್ದಾರೆ. ಸದ್ಯ ಟ್ರೆಂಡ್ ಹುಟ್ಟುಹಾಕಿರುವ ಈ ಗೀತೆಗೆ ದೀಕ್ಷಿತ್ ಕುಮಾರ್ ನೃತ್ಯ ನಿರ್ದೇಶನವಿದೆ. ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಈ ಹಾಡಿಗೆ ಕೇಳುಗರು ಫಿದಾ ಆಗಿದ್ದಾರೆ.

ಕಿರಿಕ್ ಪಾರ್ಟಿ ಹಾಗೂ ಅವನ್ನೇ ಶ್ರೀಮನ್ನಾರಾಯಣ ಚಿತ್ರಗಳಲ್ಲಿ ಬರಹಗಾರರಾಗಿ ಗುರುತಿಸಿಕೊಂಡಿದ್ದ ಚಂದ್ರಜಿತ್ ಬೆಳಿಯಪ್ಪ, ರಕ್ಷಿತ್‌ರ ‘ಸೆವೆನ್ ಆಡ್ಸ್’ಬರಹಗಾರರ ತಂಡದ ಪ್ರಮುಖ ಸದಸ್ಯ ಹಾಗೂ ಕಥಾಸಂಗಮ ಚಿತ್ರದ ನಿರ್ದೇಶಕರಲ್ಲೊಬ್ಬರಾಗಿದ್ದರು. ಇದೀಗ ಇಬ್ಬನಿ ತಬ್ಬಿದ ಇಳೆಯಲಿ ಚಿತ್ರವನ್ನು ನಿರ್ದೇಶಿಸಿದ್ದಾರೆ. ಪರವಃ ಸ್ಟುಡಿಯೋಸ್ ಲಾಂಛನದಲ್ಲಿ ಜಿ.ಎಸ್.ಗುಪ್ತ, ರಕ್ಷಿತ್ ಶೆಟ್ಟಿ ಈ ಚಿತ್ರವನ್ನು ನಿರ್ಮಿಸಿದ್ದಾರೆ.

ತೆಲುಗಿನ ಸೂಪರ್‌ಹಿಟ್ ‘ಗೀತಾಂಜಲಿʼ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿರುವ ಗಿರಿಜಾ ಶೆಟ್ಟರ್ ಬಹಳ ವರ್ಷಗಳ ನಂತರ ನಟನೆಗೆ ಮರಳಿ ಬಂದಿದ್ದಾರೆ. ಮಯೂರಿ ನಟರಾಜ್, ಅನಿರುದ್ಧ್ ಭಟ್, ದಾಮಿನಿ ಧನರಾಜ್ ಮೊದಲಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.‌

ಇದನ್ನೂ ಓದಿ: Pralhad Joshi: ಕೇಂದ್ರದ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆ; 1.3 ಕೋಟಿ ಜನರಿಂದ ನೋಂದಣಿ

ಸದ್ಯ ಪೋಸ್ಟ್ ಪ್ರೊಡಕ್ಷನ್ ಕಾರ್ಯದಲ್ಲಿ ಚಿತ್ರತಂಡ ಮಗ್ನವಾಗಿದ್ದು, ವಿಎಫ್‌ಎಕ್ಸ್ ಕೆಲಸ ಪಿನಾಕ ಸ್ಟುಡಿಯೋದಲ್ಲಿ ನಡೆಯುತ್ತಿದೆ. ಶ್ರೀವತ್ಸನ್ ಸೆಲ್ವರಾಜನ್ ಛಾಯಾಗ್ರಹಣ, ರಕ್ಷಿತ್ ಕಾಪ್ ಸಂಕಲನ ಈ ಚಿತ್ರಕ್ಕಿದೆ.

Continue Reading

ಸ್ಯಾಂಡಲ್ ವುಡ್

Kannada New Movie: `ನೈಸ್ ರೋಡ್’ ಸಿನಿಮಾಗೆ ನೋಟಿಸ್ ; ಅಷ್ಟಕ್ಕೂ ಆಗಿದ್ದೇನು?

Kannada New Movie: ನೈಸ್ ರೋಡ್ ಎಂಬ ಹೆಸರನ್ನು ಬದಲಾಯಿಸದೆ ಇದ್ದರೆ ಕಂಪ್ಲೇಂಟ್ ಕೊಡುವುದಾಗಿ ಈ ಸಿನಿಮಾದ ನಿರ್ಮಾಪಕರಾದ ಗೋಪಾಲ್ ಹಳೆಪಾಳ್ಯ ಅವರಿಗೆ ನೋಟಿಸ್ ನೀಡಿದ್ದಾರೆ. ಸಿನಿಮಾ ಈಗ ರಿಲೀಸ್ ಹಂತಕ್ಕೆ ಬಂದಿದ್ದು ತಂಡಕ್ಕೆ ಸಂಕಷ್ಟ ಎದುರಾಗಿದೆ.

VISTARANEWS.COM


on

Nice Road Kannada Movie Receive Notice To Change Its Name
Koo

ಬೆಂಗಳೂರು: ನೈಸ್ ರೋಡ್ (Kannada New Movie) ಕನ್ನಡ ಸಿನಾಮಾಕ್ಕೆ `ನೈಸ್ ರೋಡ್’ (Nice Road Kannada Movie Receive Notice) ಕಂಪನಿಯವರಿಂದಲೆ ಕಂಟಕ ಎದುರಾಗಿದೆ. ನೈಸ್ ರೋಡ್ ಎಂಬ ಹೆಸರನ್ನು ಬದಲಾಯಿಸದೆ ಇದ್ದರೆ ಕಂಪ್ಲೇಂಟ್ ಕೊಡುವುದಾಗಿ ಈ ಸಿನಿಮಾದ ನಿರ್ಮಾಪಕರಾದ ಗೋಪಾಲ್ ಹಳೆಪಾಳ್ಯ ಅವರಿಗೆ ನೋಟಿಸ್ ನೀಡಿದ್ದಾರೆ. ಸಿನಿಮಾ ಈಗ ರಿಲೀಸ್ ಹಂತಕ್ಕೆ ಬಂದಿದ್ದು ತಂಡಕ್ಕೆ ಸಂಕಷ್ಟ ಎದುರಾಗಿದೆ.

ʻʻಏಲ್ಲಾ ಕಡೆ ನೈಸ್ ರೋಡ್ ಎಂಬ ಹೆಸರಿನಿಂದನೆ ಪ್ರಚಾರವಾಗಿದೆ ಈ ಹಂತದಲ್ಲಿ ಹೆಸರು ಬದಲಾಯಿಸಲು ತುಂಬಾ ಖರ್ಚುವೆಚ್ಚಗಳಾಗುವುದು ಅಲ್ಲದೆ ತುಂಬಾ ಸಮಯವು ಬೇಕಾಗುತ್ತದೆ. ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನೈಸ್ ರೋಡ್ ಎಂಬ ಟೈಟಲ್ ರಿಜಿಸ್ಟರ್ ಆಗಿದ್ದು ಸಿನಿಮಾ ಚಿತ್ರೀಕರಣ ಮುಗಿಸಿ ಈಗಾಗಲೇ ಸಿನಿಮಾ ಸೆನ್ಸಾರ್ ಆಗಿದ್ದು ಸೆನ್ಸಾರ್ ಮಂಡಳಿಯು ಕೂಡ ಸಿನಿಮಾ ನೋಡಿ ನೈಸ್ ರೋಡಿಗೂ ಈ ಸಿನಿಮಾಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ನಿರ್ಧರಿಸಿ U/A ಪ್ರಮಾಣ ಪತ್ರ ಕೊಟ್ಟಿದಾರೆ. ಆದರೆ ಈಗ ನೈಸ್ ರೋಡ್ ಕಂಪನಿಯವರು ಏಕಏಕಿ ಬಂದು ಹೆಸರು ಬದಲಾಯಿಸಲೇ ಬೇಕೆಂದು ನೋಟಿಸ್ ನೀಡಿದ್ದಾರೆʼʼಎಂದು ನಿರ್ಮಾಪಕ ಗೋಪಾಲ್ ಹಳೆಪಾಳ್ಯ ಅವರು ಹೇಳಿಕೆ ನೀಡಿದ್ದಾರೆ

ಈ ಸಿನಿಮಾಕ್ಕೆ ಫೈನಾನ್ಸ್ ಮಾಡಿರುವ ಏನ್ ರಾಜೂಗೌಡ ಮತ್ತು ಈ ಸಿನಿಮಾದ ನಟರಾದ ಧರ್ಮ ಅವರ ಜೊತೆ ಮಾತಾಡಿ ಒಂದು ನಿರ್ಧಾರಕ್ಕೆ ಬರುತ್ತೇನೆ ಎಂದು ಹೇಳುತ್ತಿದ್ದಾರೆ. ಮುಂದೆ ಸಿನಿಮಾ ತಂಡದವರು ಹೆಸರು ಬದಲಾಯಿಸುತ್ತಾರೋ ಇಲ್ಲ ಇದೆ ಹೆಸರಿನಲ್ಲೆ ಸಿನಿಮಾ ಬಿಡುಗಡೆ ಮಾಡುತ್ತಾರೋ ಎಂಬುರ ಬಗ್ಗೆ ಮುಂದೆ ಗೊತ್ತಾಗಲಿದೆ.

ಇದನ್ನೂ ಓದಿ: Kannada New Movie: ಭಾರಿ ಮೊತ್ತಕ್ಕೆ ಮಾರಾಟವಾಯ್ತು ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಸಿನಿಮಾ ಆಡಿಯೊ ಹಕ್ಕು

ಅಶೋಕ್ ಖೇಣಿ ಮಾಲೀಕತ್ವದ ನೈಸ್ ಸಂಸ್ಥೆಯಿಂದಲೇ ಈ ಚಿತ್ರದ ನಿರ್ಮಾಪಕರಿಗೆ ನೋಟಿಸ್ ಬಂದಿದೆ. ಕೂಡಲೇ ಚಿತ್ರದ ಶೀರ್ಷಿಕೆ ಬದಲಾಯಿಸಬೇಕು, ಇಲ್ಲವಾದಲ್ಲಿ ಪ್ರಕರಣದ ದಾಖಲು ಮಾಡಲಾಗುವುದು ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ. ನೈಸ್ ರೋಡ್’ ಸಿನಿಮಾದ ಶೂಟಿಂಗ್ ಮುಕ್ತಾಯವಾಗಿದ್ದು, ಟ್ರೇಲರ್‌ ರಿಲೀಸ್ ಕೂಡ ಆಗಿದೆ. ಶೀಘ್ರದಲ್ಲೇ ಈ ಸಿನಿಮಾವನ್ನು ತೆರೆಗೆ ತರುವುದಕ್ಕೆ ನಿರ್ಮಾಪಕರು ಪ್ಲ್ಯಾನ್ ಮಾಡಿಕೊಂಡಿದ್ದಾರೆ.

ನಟ ಧರ್ಮ ಅವರು ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಜ್ಯೋತಿ ರೈ, ಗಿರಿಜಾ ಲೋಕೇಶ್, ಕಾಮಿಡಿ ಕಿಲಾಡಿಗಳು ಖ್ಯಾತಿಯ ಗೋವಿಂದೇಗೌಡ, ಮಂಜುನಾಥ್ ರಂಗಾಯಣ, ಪ್ರಭು ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಸತೀಶ್ ಆರ್ಯನ್ ಈ ಸಿನಿಮಾಕ್ಕೆ ಸಂಗೀತ ನೀಡಿದ್ದಾರೆ.

Continue Reading

ಸ್ಯಾಂಡಲ್ ವುಡ್

Sruthi Hariharan: ʻನೀ ನಂಗೆ ಅಲ್ಲವಾʼ? ಎಂದು ಸ್ನೇಹಿತೆಯ ಜತೆ ಪೋಸ್‌ ಕೊಟ್ಟ ಮೂಗುತಿ ಸುಂದರಿ ಶ್ರುತಿ ಹರಿಹರನ್!

Sruthi Hariharan: ಜೀವನದಲ್ಲಿ ಸ್ನೇಹದ ಮಹತ್ವ ಮತ್ತು ಸ್ನೇಹಿತೆಯರ ಮಹತ್ವ ಮತ್ತು ಸ್ನೇಹಿತೆರೆಯ ಪ್ರೀತಿಯ ಬಗ್ಗೆ ವಿಶೇಷ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಜತೆಗೆ ತಮ್ಮ ಸ್ನೇಹಿತೆಯಾದ ಶಾಶ್ವತಿ ಚಂದ್ರ ಶೇಖರ್ (Shashwati Chandrashekar) ಜೊತೆಗಿನ ಒಂದಷ್ಟು ವಿಶೇಷ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

VISTARANEWS.COM


on

Sruthi Hariharan female friendship nangeallava shashwati chandrashekar
Koo

ಮೂಗುತಿ ಸುಂದರಿ ಶ್ರುತಿ ಹರಿಹರನ್ (Sruthi Hariharan) ಸೋಶಿಯಲ್ ಮೀಡಿಯಾದಲ್ಲಿ ವಿಶೇಷ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು, ಇದು ಎಲ್ಲರ ಗಮನ ಸೆಳೆದಿದೆ.

ಜೀವನದಲ್ಲಿ ಸ್ನೇಹದ ಮಹತ್ವ ಮತ್ತು ಸ್ನೇಹಿತೆಯರ ಮಹತ್ವ ಮತ್ತು ಸ್ನೇಹಿತೆರೆಯ ಪ್ರೀತಿಯ ಬಗ್ಗೆ ವಿಶೇಷ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಜತೆಗೆ ತಮ್ಮ ಸ್ನೇಹಿತೆಯಾದ ಶಾಶ್ವತಿ ಚಂದ್ರ ಶೇಖರ್ (Shashwati Chandrashekar) ಜೊತೆಗಿನ ಒಂದಷ್ಟು ವಿಶೇಷ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

 

ʻʻಸ್ತ್ರೀ ಸ್ನೇಹವು ಎಲ್ಲಾ ಬಂಧಗಳಲ್ಲಿಯೂ ಬಲವಾದ ಮತ್ತು ಹೆಚ್ಚು ಬಾಳಿಕೆ ಬರುವದು ಎಂದು ನಾನು ನಂಬುತ್ತೇನೆ. ನನ್ನ ಆತ್ಮೀಯ ಸ್ನೇಹಿತರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಪ್ರತಿಯೊಬ್ಬರೂ ನನ್ನ ಜೀವನದಲ್ಲಿ ಇದ್ದಾರೆ ಎಂದು ಕೃತಜ್ಞನಾಗಿದ್ದೇನೆ. ಒಂದು ನನ್ನ ನೈತಿಕ ದಿಕ್ಸೂಚಿಯಾದರೆ, ಇನ್ನೊಂದು ನನ್ನ ಕನ್ನಡಿ. ಕೆಲವರು ಆಹಾರ ಮತ್ತು ಜೀವನವನ್ನು ಅನ್ವೇಷಿಸುವಲ್ಲಿ ನನ್ನ ಪಾಲುದಾರರಾಗಿದ್ದಾರೆ ಮತ್ತು ಒಬ್ಬರನ್ನೊಬ್ಬರು ನನ್ನ ಆತ್ಮ ಸಂಗಾತಿಯಾಗಿದ್ದಾರೆ. ನಾನು ಅವರನ್ನು ಒಂದೇ ರೀತಿ ಪ್ರೀತಿಸುತ್ತೇನೆ ಎಂದು ನನಗೆ ತಿಳಿದಿದೆ. ಹಾಗಾದರೆ ಅಂತಹ ಸ್ನೇಹಕ್ಕೆ ಇಲ್ಲಿ ಒಂದು ನುಡಿಮುತ್ತು. ನೀವು ನಿಜವಾದ ಸ್ನೇಹಿತ ಎಂದು ಕರೆಯಬಹುದಾದ ಕನಿಷ್ಠ ಒಬ್ಬ ಮಹಿಳೆಯನ್ನು ನೀವು ಹೊಂದಿದ್ದೀರಿ ಎಂದು ನಾನು ಭಾವಿಸುತ್ತೇನೆʼʼ.

ಇದನ್ನೂ ಓದಿ: ಕೇಂದ್ರದ ಹುದ್ದೆಗೆ ವೀರಪ್ಪನ್ ಕಾರ್ಯಾಚರಣೆ ಸಾರಥಿ ವಿಜಯ್‌ ಕುಮಾರ್‌ ರಾಜೀನಾಮೆ, ಕಾರಣ ಏನು?

ಇನ್ನು ಶ್ರುತಿ ಹರಿಹರನ್ ತಮ್ಮ ಜೊತೆ ಫೋಟೋಗೆ ಪೋಸ್ ನೀಡಿದ ತಮ್ಮ ಗೆಳತಿಯಾದ ಶಾಶ್ವತಿ ಚಂದ್ರಶೇಖರ್ ಅವರಿಗೂ ಥ್ಯಾಂಕ್ಯೂ ಮತ್ತು , ಲವ್ ಯೂ ಎಂದು ಹೇಳಿದ್ದು, ನಿನ್ನ ಕ್ರಿಯೇಟಿವಿಟಿ ಮತ್ತು ಗುಣ ಯಾವಾಗ್ಲೂ ನನ್ನನ್ನ ಇನ್’ಸ್ಪೈರ್ ಮಾಡುತ್ತಲೇ ಇರುತ್ತೆ ಎಂದಿದ್ದಾರೆ.  ಫೋಟೋಗಳನ್ನ ಸಂಚಿತ್ ಹೆಗ್ಡೆ ಹಾಡಿರುವ ʻಏನಂದರೂನು ಹಾಗೆ ನೀ ನಂಗೆ ಅಲ್ಲವಾʼ ಎನ್ನುವ ಹಾಡಿನ ಜೊತೆ ಪೋಸ್ಟ್ ಮಾಡಿದ್ದು, ತಮ್ಮ ಜೀವನದ ಎಲ್ಲಾ ಸ್ನೇಹಿತೆಯರ ಬಗ್ಗೆ ಒಂದಷ್ಟು ಮಾಹಿತಿ ಹಂಚಿಕೊಂಡಿದ್ದಾರೆ. 

Continue Reading

ಸ್ಯಾಂಡಲ್ ವುಡ್

Actor Darshan: ಜೈಲಿನ ಊಟ ನಂಗಂತೂ ಸಖತ್‌ ಇಷ್ಟ ಆಗಿತ್ತು , ದರ್ಶನ್‌ಗೆ ಯಾಕೆ ಕಷ್ಟ ಆಗ್ತಿದೆ ಎಂದ ಚೇತನ್‌ ಅಹಿಂಸಾ!

Actor Darshan: ದರ್ಶನ್ ತಮಗೆ ಮನೆಯೂಟ ಬೇಕು ಎಂದು ಪಟ್ಟು ಹಿಡಿದ ಬೆನ್ನಲ್ಲಿಯೇ, ತಮ್ಮ ಜೈಲಿನ ಅನುಭವವನ್ನು ಹಂಚಿಕೊಂಡಿದ್ದಾರೆ. ಸಿನಿಮಾ ಸ್ಟಾರ್ ಗಳಿಗೆ ಯೋಗ್ಯತೆ ಮೀರಿ ತುಂಬಾ ಬಿಲ್ಡಪ್ ಸಿಕ್ಕಿದೆ ಎಂದಿದ್ದಾರೆ.ಸುಮ್ಮನೆ ಪೊಲೀಸರು ಸಮಯ ವ್ಯರ್ಥ ಮಾಡಿಕೊಂಡು ಇಲ್ಲದೇ ಇರುವುದನ್ನು ಹುಟ್ಟು ಹಾಕುವುದಿಲ್ಲ. ನಿರ್ಧಾರ ಬರಲಿ. ದರ್ಶನ್‌ ಹಾಗೂ ರೇಣುಕಾ ಸ್ವಾಮಿ ಸಮಸ್ಯೆ ಅಲ್ಲʼʼಎಂದು ಮಾತು ಶುರು ಮಾಡಿದರು.

VISTARANEWS.COM


on

Actor Darshan Chethan Kumar on Darshan Case
Koo

ಬೆಂಗಳೂರು: ನಟ ಚೇತನ್‌ ಅಹಿಂಸಾ (Chethan Kumar) ತಮ್ಮ ಹೇಳಿಕೆ ಗಳ ಮೂಲಕವೇ ಸಾಕಷ್ಟು ಸುದ್ದಿಯಲ್ಲಿ ಇರುತ್ತಾರೆ. ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದ್ದರೂ ಕೂಡ. ಎರಡೆರಡು ಬಾರಿ ಜೈಲಿಗೆ ಕೂಡ ಹೋಗಿ ಬಂದರು. ಇದೀಗ ದರ್ಶನ್ ಬಂಧನ ಕುರಿತು ಮಾಧ್ಯಮದ ಜತೆ ಮಾತನಾಡಿದ್ದಾರೆ. ದರ್ಶನ್ ತಮಗೆ ಮನೆಯೂಟ ಬೇಕು ಎಂದು ಪಟ್ಟು ಹಿಡಿದ ಬೆನ್ನಲ್ಲಿಯೇ, ತಮ್ಮ ಜೈಲಿನ ಅನುಭವವನ್ನು ಹಂಚಿಕೊಂಡಿದ್ದಾರೆ. ಸಿನಿಮಾ ಸ್ಟಾರ್ ಗಳಿಗೆ ಯೋಗ್ಯತೆ ಮೀರಿ ತುಂಬಾ ಬಿಲ್ಡಪ್ ಸಿಕ್ಕಿದೆ ಎಂದಿದ್ದಾರೆ.

ಚೇತನ್‌ ಅಹಿಂಸಾ ಮಾತನಾಡಿ ʻʻನಾನು ದರ್ಶನ್‌ ಅವರನ್ನು ಹಲವು ಸಲ ಭೇಟಿಯಾಗಿದ್ದೇನೆ. ಅವರು ದೊಡ್ಡ ಸ್ಟಾರ್‌. ಕೋಟಿ ಕಲೆಕ್ಷನ್‌ ಮಾಡುವ ಹೀರೊ. ಆದರೆ ಸಿನಿಮಾ ರಂಗದಲ್ಲಿ ವಿಚಾರಣ, ನಡವಳಿಕೆ, ಅಲೋಚನೆ, ಪ್ರತಿಭೆ ಇದಕೆಲ್ಲ ಬೆಲೆ ಇಲ್ಲ. ಹಣಕ್ಕೆ ಮಾತ್ರ ಬೆಲೆ. ದರ್ಶನ್‌ ಈ ಕೊಲೆ ಮಾಡಿದ್ದಾರೋ ಇಲ್ಲವೋ ಗೊತ್ತಿಲ್ಲ. ಆರೋಪಿ ನಿಜ. ಆದರೆ ಅಪರಾಧಿ ಅಲ್ಲ. ಬಹಳ ಗಂಭೀರ ವಾದ ಆರೋಪ ಇದು. ಸುಮ್ಮನೆ ಪೊಲೀಸರು ಸಮಯ ವ್ಯರ್ಥ ಮಾಡಿಕೊಂಡು ಇಲ್ಲದೇ ಇರುವುದನ್ನು ಹುಟ್ಟು ಹಾಕುವುದಿಲ್ಲ. ನಿರ್ಧಾರ ಬರಲಿ. ದರ್ಶನ್‌ ಹಾಗೂ ರೇಣುಕಾ ಸ್ವಾಮಿ ಸಮಸ್ಯೆ ಅಲ್ಲʼʼಎಂದು ಮಾತು ಶುರು ಮಾಡಿದರು.

ʻʻಹೀರೋಗಳು ಸತ್ತಾಗ ಸ್ಮಾರಕಗಳನ್ನು ಅವರೇ ಮಾಡಿಕೊಳ್ಳಲಿ, ಅವರು ಮಾಡಿರುವ ಸಿನಿಮಾಗಳಿಗೆ ಸಂಭಾವನೆ ಪಡೆದಿರುತ್ತಾರೆ. ಕೋಟಿ ಹಣ ಅವರ ಬಳಿ ಇರುತ್ತೆ. , ಚಿತ್ರರಂಗದಲ್ಲಿ ಮೌನ ಬಿಟ್ಟು ಸತ್ಯ ಹೇಳುವ ಕೆಲಸವನ್ನು ಎಲ್ಲರೂ ಮಾಡಬೇಕು ರೇಣುಕಾಸ್ವಾಮಿ ಪವಿತ್ರಾಗೆ ಅಶ್ಲೀಲ ಮೆಸೇಜ್ ಮಾಡಿದ್ದು ನಂಬ್ತೀವಿ, ಆದರೆ ಅದೇ ದರ್ಶನ್ ಕೊಲೆ ಆರೋಪಿ ಅಂದ್ರೆ ನಂಬಲ್ಲ, ಹೀಗಾಗಿಯೇ ಸ್ಟಾರ್ ಸಂಸ್ಕೃತಿ ಅನ್ನೋದು ಅಳಿಸಬೇಕು. ಚಿತ್ರರಂಗದ ನಾವೆಲ್ಲ ಆತ್ಮಾವಲೋಕನ ಮಾಡಿಕೊಳ್ಳಬೇಕ. ದರ್ಶನ್ ಆರೋಪಿಯಷ್ಟೇ ಅಪರಾಧಿಯಲ್ಲ ಆದರೆ ಅವರ ಮೇಲೆ ಗಂಭೀರ ಆರೋಪ ಇದೆʼʼ ಎಂದು ಕೂಡ ಹೇಳಿದ್ದಾರೆ.

ಇದನ್ನೂ ಓದಿ: Kannada New Movie: ಭಾರಿ ಮೊತ್ತಕ್ಕೆ ಮಾರಾಟವಾಯ್ತು ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಸಿನಿಮಾ ಆಡಿಯೊ ಹಕ್ಕು

ʻʻಸೆಲ್ ಅಲ್ಲಿ ದರ್ಶನ್‌ ಅವರು ಇರಬಹುದು. ಆದರೆ ಬ್ಯಾರೆಕ್ಸ್ ಅಲ್ಲಿ ಇರುವುದು ಕಷ್ಟ. ನಾನು ಹೋರಾಟದ ಮೇಲೆ ಎರಡು ಸಲ ಜೈಲಿಗೆ ಹೋಗಿದ್ದೆ. ಮೊದಲ ಬಾರಿ ನಾನು ಜೈಲಿಗೆ ಹೋದಾಗ 6 ಜನರಿರುವ ಸೆಲ್ ನಲ್ಲಿ ಹಾಕಿದ್ದರು. ಎರಡನೇ ಬಾರಿ 40 ಜನರಿರುವ ಬ್ಯಾರೆಕ್ಸ್ ನಲ್ಲಿ ಹಾಕಿದ್ದರು. ಜೈಲಿನ ಊಟ ನನಗೆ ಯಾವತ್ತು ಸಮಸ್ಯೆಯಾಗಲಿಲ್ಲ ಬದಲಿಗೆ ಜೈಲೂಟ ನನಗೆ ಸಖತ್ ಇಷ್ಟವಾಯಿತು. ಜೈಲಿನಲ್ಲಿ ಮುದ್ದೆ ಸ್ವಲ್ಪ ಗಟ್ಟಿ ಇರುತ್ತದೆ. ನನ್ನ 39ನೇ ಹುಟ್ಟುಹಬ್ಬವನ್ನು ನಾನು ಜೈಲಿನಲ್ಲಿ ಆಚರಿಸಿಕೊಂಡೆ ಆಗ ಪುಳಿಯೋಗರೆ ಮಾಡಿದ್ದರು, ಆಗ ತುಂಬಾ ಚೆನ್ನಾಗಿತ್ತು. ಪುಳಿಯೋಗರೆ ಅಷ್ಟೇ ಅಲ್ಲ ಚಿತ್ರಾನ್ನ, ಅನ್ನ ಸಾಂಬಾರು, ಎಲ್ಲವೂ ಚೆನ್ನಾಗಿತ್ತು ಎಂದು ಹೇಳಿದ್ದಾರೆ. ದರ್ಶನ್ ಅವರಿಗೆ ಜೈಲೂಟ ಯಾಕೆ ಇಷ್ಟವಾಗ್ತಿಲ್ಲ ಎನ್ನುವುದು ಗೊತ್ತಿಲ್ಲʼʼ ಎಂದು ಕೂಡ ಚೇತನ್ ಅಹಿಂಸಾ ಹೇಳಿದ್ದಾರೆ.

Continue Reading
Advertisement
Gunfire On School
Latest1 min ago

Gunfire On School: ಶಾಲೆಯೊಳಗೆ ಗನ್‌ ತಂದು 10 ವರ್ಷದ ಹುಡುಗನಿಗೆ ಗುಂಡು ಹಾರಿಸಿದ 5 ವರ್ಷದ ಬಾಲಕ!

Ibbani Thabbida Ileyali movie Helu Gelati song released
ಕರ್ನಾಟಕ20 mins ago

Kannada New Movie: ರೆಟ್ರೋ ಸ್ಟೈಲ್‌ನಲ್ಲಿ ಮೂಡಿಬಂದ ʼಹೇಳು ಗೆಳತಿʼ; ಚರಣ್‌ರಾಜ್ ಕಂಠಸಿರಿಗೆ ಕೇಳುಗರು ಫಿದಾ

Ashwini Ponnappa
ಕ್ರೀಡೆ31 mins ago

Ashwini Ponnappa: ‘ಇದು ನನ್ನ ಕೊನೆಯ ಒಲಿಂಪಿಕ್ಸ್​’; ನಿವೃತ್ತಿ ಘೋಷಿಸಿದ ಶಟ್ಲರ್​ ಅಶ್ವಿನಿ ಪೊನ್ನಪ್ಪ

Ismail Haniyeh
ವಿದೇಶ52 mins ago

Ismail Haniyeh: ಒಸಾಮಾ ರೀತಿಯೇ ಹಮಾಸ್‌ನ ಇಸ್ಮಾಯಿಲ್‌ ಹನಿಯೇಹ್‌ನನ್ನು ಕೊಂದ ಇಸ್ರೇಲ್;‌ ಆಪರೇಷನ್‌ನ ಡಿಟೇಲ್ಸ್‌ ಇಲ್ಲಿದೆ

Mahesh Bhatt said his mother was worried after he gave daughters Muslim names
ಬಾಲಿವುಡ್1 hour ago

Alia Bhatt: ಪುತ್ರಿಯರಿಗೆ ಮುಸ್ಲಿಂ ಹೆಸರುಗಳನ್ನು ಇಟ್ಟಾಗ ನನ್ನ ತಾಯಿಗೆ ಚಿಂತೆಯಾಗಿತ್ತು ಎಂದ ಆಲಿಯಾ ಭಟ್‌ ತಂದೆ!

Jagdeep Dhankhar
ದೇಶ1 hour ago

Parliament Session: RSS ಬಗ್ಗೆ ದೋಷಾರೋಪಣೆ ಸಲ್ಲದು; ಜಗದೀಪ್ ಧನ್‌ಕರ್ ಹೇಳಿಕೆ- ಪ್ರತಿಪಕ್ಷಗಳು ವಾಕ್‌ಔಟ್‌!

Paris Olympics Boxing
ಕ್ರೀಡೆ1 hour ago

Paris Olympics Boxing: ಕ್ವಾರ್ಟರ್​ ಫೈನಲ್​ ಪ್ರವೇಶಿಸಿದ ಬಾಕ್ಸರ್​ ಲವ್ಲಿನಾ ಬೊರ್ಗೊಹೇನ್‌

Muda Scam
ಕರ್ನಾಟಕ1 hour ago

Muda Scam: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ; ಲೋಕಾಯುಕ್ತಕ್ಕೆ ಪ್ರಮುಖ ದಾಖಲೆ ಸಲ್ಲಿಕೆ

Paris Olympics
ಕ್ರೀಡೆ2 hours ago

Paris Olympic: ಹುಟ್ಟು ಹಬ್ಬದ ದಿನವೇ ಗೆಲುವು ಸಾಧಿಸಿ ಪ್ರೀ-ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಶ್ರೀಜಾ ಅಕುಲಾ

Indian Navy Recruitment
ಉದ್ಯೋಗ2 hours ago

Indian Navy Recruitment: ಭಾರತೀಯ ನೌಕಾ ಪಡೆಯಲ್ಲಿದೆ ಉದ್ಯೋಗಾವಕಾಶ; ಅಪ್ಲೈ ಮಾಡಲು ಆ. 2 ಕೊನೆಯ ದಿನ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 day ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 day ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ2 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ2 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ2 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ3 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ3 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ3 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ3 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌