Vinay Rajkumar: ವಿನಯ್ ರಾಜ್ ಕುಮಾರ್ 'ಪೆಪೆ' ಸಿನಿಮಾ ವಿತರಣೆ ಮಾಡಲಿದೆ ಕೆ ಆರ್ ಜಿ! - Vistara News

ಸ್ಯಾಂಡಲ್ ವುಡ್

Vinay Rajkumar: ವಿನಯ್ ರಾಜ್ ಕುಮಾರ್ ‘ಪೆಪೆ’ ಸಿನಿಮಾ ವಿತರಣೆ ಮಾಡಲಿದೆ ಕೆ ಆರ್ ಜಿ!

Vinay Rajkumar: ವಿನಯ್ ರಾಜ್‌ಕುಮಾರ್ ಇಲ್ಲಿವರೆಗೂ ಸಾಫ್ಟ್ ಚಿತ್ರಗಳನ್ನೆ ಮಾಡಿದ್ದಾರೆ. ಆದರೆ ಪೆಪೆ ಚಿತ್ರ ವಿಭಿನ್ನವಾಗಿಯೇ ಇವೆ. ಪೆಪೆ ಚಿತ್ರದಲ್ಲಿ ವಿನಯ್ ರಗಡ್ ಲುಕ್ ನಲ್ಲಿ‌ ಕಾಣಿಸಿಕೊಂಡಿದ್ದಾರೆ. ಕ್ಲಾಸ್ ಹೀರೋನಿಂದ ಮಾಸ್ ಲುಕ್ ಆಗಿ ಪ್ರೇಕ್ಷಕರ ಎದುರು ಬರುತ್ತಿದ್ದಾರೆ.

VISTARANEWS.COM


on

Vinay Rajkumar KRG will distribute 'Pepe' movie
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿನಯ್ ರಾಜ್ ಕುಮಾರ್ (Vinay Rajkumar) ನಟನೆಯ ಬಹುನಿರೀಕ್ಷಿತ ʻಪೆಪೆʼ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಸೆನ್ಸಾರ್ ಪಾಸಾಗಿರುವ ಚಿತ್ರತಂಡದಿಂದ ಮತ್ತೊಂದು ಅಪ್ ಡೇಟ್ ಸಿಕ್ಕಿದೆ. ಕ್ಲಾಸ್ ಹೀರೊ ಆಗಿ ಸೈ ಎನಿಸಿಕೊಂಡಿರುವ ವಿನಯ್ ಪೆಪೆ ಚಿತ್ರಕ್ಕಾಗಿ ಮಾಸ್ ಅವತಾರವೆತ್ತಿದ್ದಾರೆ. ಹೀಗಾಗಿ ಈ ಸಿನಿಮಾ ಮೇಲೆ ನಿರೀಕ್ಷೆ ತುಸು ಹೆಚ್ಚೇ ಇದೆ. ಸದ್ಯ ‘ಪೆಪೆ ಪ್ರಿಸೆಟ್’ ಟೈಟಲ್ ನಡಿ ಬಂದ ಸಾಂಗ್ ಸದ್ದು ಮಾಡುತ್ತಿರುವ ಹೊತ್ತಿನಲ್ಲಿ ಚಿತ್ರದ ವಿತರಣೆ ಹಕ್ಕು ಕೆಆರ್ ಜಿ ತೆಕ್ಕೆಗೆ ಸೇರಿರುವ ಬಗ್ಗೆ ಮಾಹಿತಿ ಹೊರಬಿದ್ದಿದೆ.

ಕೆಆರ್‌ಜಿ ಸ್ಟುಡಿಯೋಸ್ ಸಂಸ್ಥೆ ‘ಪೆಪೆ’ ಸಿನಿಮಾವನ್ನು ರಾಜ್ಯಾದ್ಯಂತ ವಿತರಣೆ ಮಾಡಲಿದೆ. ಸಿನಿಮಾಗಳ ವಿತರಣೆಯಲ್ಲಿ ಒಳ್ಳೆ ಹೆಸರು ಗಳಿಸಿರುವ ಆ ಸಂಸ್ಥೆ ‘ಪೆಪೆ’ ತಂಡಕ್ಕೆ ಸಾಥ್ ಕೊಟ್ಟಿದೆ. ಕೆಆರ್ ಜಿ ಸಂಸ್ಥೆಯ ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾಜ್ ಚಿತ್ರ ವಿತರಣೆ ಮಾಡುವ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.

ವಿನಯ್ ರಾಜ್‌ಕುಮಾರ್ ಇಲ್ಲಿವರೆಗೂ ಸಾಫ್ಟ್ ಚಿತ್ರಗಳನ್ನೆ ಮಾಡಿದ್ದಾರೆ. ಆದರೆ ಪೆಪೆ ಚಿತ್ರ ವಿಭಿನ್ನವಾಗಿಯೇ ಇವೆ. ಪೆಪೆ ಚಿತ್ರದಲ್ಲಿ ವಿನಯ್ ರಗಡ್ ಲುಕ್ ನಲ್ಲಿ‌ ಕಾಣಿಸಿಕೊಂಡಿದ್ದಾರೆ. ಕ್ಲಾಸ್ ಹೀರೋನಿಂದ ಮಾಸ್ ಲುಕ್ ಆಗಿ ಪ್ರೇಕ್ಷಕರ ಎದುರು ಬರುತ್ತಿದ್ದಾರೆ.

ಶ್ರೀಲೇಶ್ ಎಸ್ ನಾಯರ್ ಚೊಚ್ಚಲ ನಿರ್ದೇಶನದಲ್ಲಿಯೇ ಭರವಸೆ ಮೂಡಿಸಿದ್ದಾರೆ. ಮೊದಲ ಹೆಜ್ಜೆಯಲ್ಲಿಯೇ ಒಂದು ರೀತಿ ಪರಿಪೂರ್ಣ ವಿಭಿನ್ನ ಕಥೆ ಹೊತ್ತು ಬರುತ್ತಿದ್ದಾರೆ. ಈ ಚಿತ್ರದಲ್ಲಿ ನಾಯಕಿಯಾಗಿ ಕಾಜಲ್‌ ಕುಂದರ್‌ ನಟಿಸಿದ್ದು, ಮಯೂರ್‌ ಪಟೇಲ್‌, ಯಶ್‌ ಶೆಟ್ಟಿ, ಬಲ ರಾಜ್‌ವಾಡಿ, ಮೇದಿನಿ ಕೆಳಮನೆ, ಅರುಣಾ ಬಾಲರಾಜ್‌, ನವೀನ್‌ ಡಿ. ಪಡೀಲ್‌ರನ್ನು ಒಳಗೊಂಡ ತಾರಾಬಳಗವಿದೆ. ‘ಪೆಪೆ’ ಚಿತ್ರಕ್ಕೆ ಅಭಿಷೇಕ್‌ ಜಿ. ಕಾಸರಗೋಡು ಕ್ಯಾಮೆರಾ ವರ್ಕ್, ಪೂರ್ಣಚಂದ್ರ ತೇಜಸ್ವಿಯವರ ಸಂಗೀತ ನಿರ್ದೇಶನವಿದೆ.

ಇದನ್ನೂ ಓದಿ: Duniya Vijay: ಹೇಗಿದೆ ‘ಭೀಮ’ ಸಿನಿಮಾ? ಪ್ರೇಕ್ಷಕರು ಹೇಳೋದೇನು?

ಡಾ. ರವಿವರ್ಮ, ಚೇತನ್‌ ಡಿಸೋಜಾ, ಡಿಫ್ರೆಂಟ್‌ ಡ್ಯಾನಿ, ನರಸಿಂಹ ಅವರ ತಂಡ ಚಿತ್ರದ ಸಾಹಸ ದೃಶ್ಯಗಳನ್ನು ನಿರ್ದೇಶನ ಮಾಡಿದೆ. ಬೆಂಗಳೂರು, ಮೈಸೂರು, ಕೊಡಗು, ಸಕಲೇಶಪುರಗಳಲ್ಲಿ‘ಪೆಪೆ’ ಸಿನಿಮಾವನ್ನು ಸೆರೆಹಿಡಿಯಲಾಗಿದೆ. ಉದಯ್‌ ಸಿನಿ ವೆಂಚರ್‌, ದೀಪ ಫಿಲ್ಮ್ಸ್ ಬ್ಯಾನರ್‌ನಡಿ ಉದಯ್ ಶಂಕರ್.ಎಸ್ ಹಾಗೂ ಕೋಲಾರದ ಬಿ.ಎಮ್.ಶ್ರೀರಾಮ್ ಚಿತ್ರಕ್ಕೆ ಬಂಡವಾಳ ಹೂಡಿದ್ದು ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Tharun Sudhir: ತರುಣ್ ಸುಧೀರ್-ಸೋನಲ್ ಮದುವೆ ಸಂಭ್ರಮದ ಲೈವ್‌ ವಿಡಿಯೊ ಇಲ್ಲಿದೆ ನೋಡಿ!

Tharun Sudhir: ಈಗಾಗಲೇ ಮದುವೆ ಶಾಸ್ತ್ರಗಳು ಭರದಿಂದ ಸಾಗುತ್ತಿದೆ. ಕಿಚ್ಚ ಸುದೀಪ್ ಸೇರಿ ಹಲವು ನಟ, ನಟಿಯರು, ನಿರ್ದೆಶಕರನ್ನು ಭೇಟಿಯಾಗಿ ತರುಣ್ ಸುಧೀರ್​ ಅವರು ಮದುವೆಯ ಆಮಂತ್ರಣ ನೀಡಿದ್ದಾರೆ. ರಚಿತಾ ರಾಮ್​, ಉಪೇಂದ್ರ, ರಾಘವೇಂದ್ರ ರಾಜ್​ಕುಮಾರ್​ ಅವರಿಗೂ ತರುಣ್​ ಸುಧೀರ್​ ಆಹ್ವಾನ ನೀಡಿದ್ದರು.

VISTARANEWS.COM


on

Tharun Sudhir wedding live video is here
Koo

ಸ್ಯಾಂಡಲ್‌ವುಡ್‌ನ ಭರವಸೆಯ ನಿರ್ದೇಶಕ ತರುಣ್‌ ಸುಧೀರ್‌ (Tharun Sudhir) ಹಾಗೂ ಸೋನಲ್‌ ಮೊಂಥೆರೋ (Sonal Monteiro) ಅವರ ಆರತಕ್ಷತೆಯು ಅದ್ಧೂರಿಯಾಗಿ ನಿನ್ನೆ ನಡೆದಿತ್ತು. ಸ್ಯಾಂಡಲ್‌ವುಡ್‌ ನಟ, ನಟಿಯರು, ನಿರ್ದೇಶಕರು, ನಿರ್ಮಾಪಕರು, ರಾಜಕಾರಣಿಗಳು ಸೇರಿ ನೂರಾರು ಗಣ್ಯರು ರಿಸೆಪ್ಶನ್‌ನಲ್ಲಿ ಭಾಗವಹಿಸಿ, ನೂತನ ಜೋಡಿಗೆ ಶುಭ ಹಾರೈಸಿದ್ದರು. ಇದೀಗ ಜೋಡಿ ಕೆಲವೇ ಕ್ಷಣಗಳಲ್ಲಿ ಸಪ್ತಪದಿ ತುಳಿಯಲಿದೆ. ಜೋಡಿಯ ಫ್ಯಾನ್ಸ್‌ ಕೂಡ ಇದೀಗ ಮದುವೆಯ ಸುಂದರ ಕ್ಷಣವನ್ನು ಕಣ್ತುಂಬಿಸಿಕೊಳ್ಳಬಹುದು.

ಲೈವ್‌ ವಿಡಿಯೊ

ಈಗಾಗಲೇ ಮದುವೆ ಶಾಸ್ತ್ರಗಳು ಭರದಿಂದ ಸಾಗುತ್ತಿದೆ. ಕಿಚ್ಚ ಸುದೀಪ್ ಸೇರಿ ಹಲವು ನಟ, ನಟಿಯರು, ನಿರ್ದೆಶಕರನ್ನು ಭೇಟಿಯಾಗಿ ತರುಣ್ ಸುಧೀರ್​ ಅವರು ಮದುವೆಯ ಆಮಂತ್ರಣ ನೀಡಿದ್ದಾರೆ. ರಚಿತಾ ರಾಮ್​, ಉಪೇಂದ್ರ, ರಾಘವೇಂದ್ರ ರಾಜ್​ಕುಮಾರ್​ ಅವರಿಗೂ ತರುಣ್​ ಸುಧೀರ್​ ಆಹ್ವಾನ ನೀಡಿದ್ದರು.

ಸೋನಲ್ ಅವರು ಮಂಗಳೂರಿನವರು. ಅವರು ಮೊದಲು ತಮಿಳು ಸಿನಿಮಾದಲ್ಲಿ ನಟಿಸಿದ್ದರು. ಆನ್​ಲೈನ್​ನಲ್ಲಿ ಇರುವ ಮಾಹಿತಿ ಪ್ರಕಾರ ಅವರು ಜನಿಸಿದ್ದು 1995ರ ಆಗಸ್ಟ್ 11ರಂದು. ಕೆಲವೇ ದಿನಗಳಲ್ಲಿ 29 ವರ್ಷ ತುಂಬಲಿದೆ. ತರುಣ್ ಸುಧೀರ್ ಅವರಿಗೆ 41 ವರ್ಷ ಎನ್ನಲಾಗಿದೆ. ಈಗ ಅವರು ಜನಿಸಿದ್ದು 1983ರಲ್ಲಿ. ಅಂದರೆ, ಇಬ್ಬರ ಮಧ್ಯೆ ಸುಮರು 12 ವರ್ಷಗಳ ಅಂತರ ಇದೆ.

ಇದನ್ನೂ ಓದಿ: Jr NTR: ಸಿನಿಮಾ ಮುಹೂರ್ತದಲ್ಲಿ ಜ್ಯೂ. ಎನ್​ಟಿಆರ್ ಧರಿಸಿದ ವಾಚ್ ಬೆಲೆ ಕೇಳಿದರೆ ನೀವು ಬೆರಗಾಗೋದು ಖಚಿತ​!

ಲವ್‌ ಸ್ಟೋರಿ ಏನು?

ತರುಣ್‌ ಸುಧೀರ್‌ ಮಾತನಾಡಿ ʻʻನನ್ನ ಸೋನಲ್ ಪರಿಚಯ ಆಗಿದ್ದು ರಾಬರ್ಟ್ ಸಿನಿಮಾ ಮೂಲಕ. ಆಡಿಷನ್‌ನಲ್ಲಿ ಪರಿಚಯವಾದರು. ರಾಬರ್ಟ್ ಸೆಟ್ ಅಲ್ಲಿ ಲವ್ ಆಗಿಲ್ಲ. ಪ್ರೊಫೆಷನಲ್ ರಿಲೇಶನ್ ಶಿಪ್ ಅಲ್ಲಿ ಇದ್ವಿ. ಆದರೆ ಲವ್ ಆಗಿರಲಿಲ್ಲ. ಆಗಾಗ ಬರ್ತ್‌ಡೇ ವಿಶ್ ಮಾತ್ರ ಮೆಸೇಜ್ ಮಾಡ್ತಿದ್ವಿ. 2023 ಯಿಂದ ಇಬ್ಬರ ನಡುವೆ ಬಾಂಡಿಂಗ್ ಬೆಳೆದಿದ್ದು. ದರ್ಶನ್ ಅವರು ಕಾಲೆಳೆಯುತ್ತಿದ್ರು. ಸೋನಲ್ ಗೆ ಮಾತ್ರ ಯಾಕೆ ಚೆನ್ನಾಗ್ ಫ್ರೇಮ್ ಇಡ್ತಿಯಾ? ಅಂತ ತಮಾಷೆ ಮಾಡೋಕೆ ಶುರು ಮಾಡಿದ್ರು. ಏನು ಸೋನಲ್‌ನ ಲವ್ ಮಾಡ್ತಿದೀಯ ಎಂದು ರೇಗಿಸುತಿದ್ದರು. ನಂತರ ಮದುವೆ ಆಗ್ತೀಯಾ? ಅಂದ್ರು. ಅದ್ಕೆ ನಾನು ನೀವು ಯಾರನ್ನ ತೋರಿಸ್ತಿರೋ ಆಗ್ತೀನಿ ಅಂದೇ. ಕಾಟೇರ ಸೆಟ್ ನಲ್ಲೂ ದರ್ಶನ್ ಹಾಗು ಕೆಲವರು ಸೋನಲ್ ಹೆಸರಲ್ಲಿ ರೇಗಿಸುತಿದ್ರು. ಕೊನೆಗೆ ಒಂದು ಸಿನ ಸೋನಲ್ ನನಗೆ ಕಾಲ್ ಮಾಡಿ ಇಬ್ಬರು ಡೇಟ್ ಮಾಡುತ್ತಿದ್ದೇವೆ ಎನ್ನುವ ಸುದ್ದಿ ಹಬ್ಬುತಿದೆ. ತಪ್ಪು ತಿಳ್ಕೊಬೇಡಿ ಎಂದಿದ್ದರು. ನನಗೂ ಯಾಕೋ ಯೂನಿವರ್ಸ ನಮ್ಮಿಬ್ಬರನ್ನು ಕನೆಕ್ಟ್ ಮಾಡ್ತಿದೆ ಅನ್ಸಿತ್ತು. ನಾನು ಕಾಂಪ್ಲಿಕೇಟ್ ಇದೀನಿ ನೀವು ಸಿಂಪಲ್, ವರ್ಕ್ ಆಗುತ್ತ ಎಂದು ಸೋನಲ್ ಅವರನ್ನ ಕೇಳಿದ್ದೆ. ಕಾಟೇರ ವರೆಗೂ ಮದುವೆ ಬಗ್ಗೆ ಯೋಚಿಸಿಲ್ಲ. ಈ ಬಗ್ಗೆ ಸೋನಲ್‌ಗೂ ಹೇಳಿದ್ದೆ ಕಾಟೇರ ಸಕ್ಸಸ್ ಆಯಿತು. ಇದು ರೈಟ್ ಟೈಮ್ ಅಂತ ಸೋನಲ್ ಮನೆಯಲ್ಲಿ ಮದುವೆ ವಿಚಾರ ಪ್ರಸ್ತಾಪ ಆಯಿತು.ಇಬ್ಬರ ಕುಟುಂಬದ ಸಮ್ಮತಿಯಿಂದ ಮದುವೆ ಆಗುತ್ತಿದ್ದೇವೆʼʼ ಎಂದರು,

Continue Reading

ಸ್ಯಾಂಡಲ್ ವುಡ್

Shiva Rajkumar: ʻಭೈರತಿ ರಣಗಲ್ʼ ಟೈಟಲ್ ಸಾಂಗ್ ಔಟ್‌; ಸೆಪ್ಟೆಂಬರ್‌ನಲ್ಲಿ ತೆರೆಗೆ!

Shiva Rajkumar: ನರ್ತನ್ ಹಾಗೂ ಶಿವಣ್ಣ ಅವರ ಕಾಂಬಿನೇಶನ್ ನಲ್ಲಿ ಬಂದಿದ್ದ “ಮಫ್ತಿ” ಚಿತ್ರದ ಪ್ರೀಕ್ವೆಲ್ ಆಗಿರುವ “ಭೈರತಿ ರಣಗಲ್” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಹಾಗೂ ಹಾಡಿನ ಮೂಲಕ ಜನಪ್ರಿಯವಾಗಿರುವ ಈ ಚಿತ್ರದ ಬಿಡುಗಡೆಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಬಹು ನಿರೀಕ್ಷಿತ ಈ ಚಿತ್ರ ಸೆಪ್ಟೆಂಬರ್ ನಲ್ಲಿ ತೆರೆಗೆ ಬರಲಿದೆ.

VISTARANEWS.COM


on

Shiva Rajkumar Bhairathi Ranagal Title Song Geetha SRK
Koo

ಬೆಂಗಳೂರು: ಗೀತಾ ಪಿಕ್ಚರ್ಸ್ ಲಾಂಛನದಲ್ಲಿ ಗೀತಾ ಶಿವರಾಜಕುಮಾರ್ (Shiva Rajkumar) ಅವರು ನಿರ್ಮಿಸಿರುವ, ನರ್ತನ್ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಭೈರತಿ ರಣಗಲ್” ಚಿತ್ರದ ಶೀರ್ಷಿಕೆ ಗೀತೆ (ಟೈಟಲ್ ಸಾಂಗ್) ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ.

ಕಿನ್ನಾಳ್ ರಾಜ್ ಅವರು ಬರೆದಿರುವ “ಇತಿಹಾಸವೇ ನಿಬ್ಬೆರಿಗಿಸುವ ಎತ್ತಿ ಹಿಡಿಯುವ ಮೈಲಿಗಲ್ಲು” ಎಂಬ ಭೈರತಿ ರಣಗಲ್ ಸಿನಿಮಾದ ಶೀರ್ಷಿಕೆ ಗೀತೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಸಂಗೀತ ನೀಡಿದ್ದಾರೆ. ಸಂತೋಷ್ ವೆಂಕಿ ಹಾಡಿದ್ದಾರೆ. ಅಧಿಕ ಸಂಖ್ಯೆಯಲ್ಲಿ ವೀಕ್ಷಿಣೆಯಾಗುತ್ತಿರುವ ಈ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.

ನರ್ತನ್ ಹಾಗೂ ಶಿವಣ್ಣ ಅವರ ಕಾಂಬಿನೇಶನ್ ನಲ್ಲಿ ಬಂದಿದ್ದ “ಮಫ್ತಿ” ಚಿತ್ರದ ಪ್ರೀಕ್ವೆಲ್ ಆಗಿರುವ “ಭೈರತಿ ರಣಗಲ್” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಹಾಗೂ ಹಾಡಿನ ಮೂಲಕ ಜನಪ್ರಿಯವಾಗಿರುವ ಈ ಚಿತ್ರದ ಬಿಡುಗಡೆಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಬಹು ನಿರೀಕ್ಷಿತ ಈ ಚಿತ್ರ ಸೆಪ್ಟೆಂಬರ್ ನಲ್ಲಿ ತೆರೆಗೆ ಬರಲಿದೆ.

ಇದನ್ನೂ ಓದಿ: Shiva Rajkumar: ಸಾಯಿಕುಮಾರ್‌ಗೆ ಶಿವಣ್ಣ ಡ್ಯೂಪ್ ಆಗಿದ್ದ ಸಿನಿಮಾ ಯಾವುದು? ಆ ದೃಶ್ಯಕ್ಕೆ ಅಭಿಮಾನಿಗಳಿಂದ ಶಿಳ್ಳೆ, ಚಪ್ಪಾಳೆ!

ಶಿವರಾಜಕುಮಾರ್ ಅವರಿಗೆ ನಾಯಕಿಯಾಗಿ ರುಕ್ಮಿಣಿ ವಸಂತ್ ಅಭಿನಯಿಸಿದ್ದಾರೆ. ನವೀನ್ ಕುಮಾರ್ ಛಾಯಾಗ್ರಹಣ, ಆಕಾಶ್ ಹಿರೇಮಠ ಸಂಕಲನ, ‌ಗುಣ ಕಲಾ ನಿರ್ದೇಶನ ಹಾಗೂ ದಿಲೀಪ್ ಸುಬ್ರಹ್ಮಣ್ಯ, ಚೇತನ್ ಡಿಸೋಜ ಸಾಹಸ ನಿರ್ದೇಶನ “ಭೈರತಿ ರಣಗಲ್” ಚಿತ್ರಕ್ಕಿದೆ.

Continue Reading

ಸಿನಿಮಾ

Tharun Sudhir: ತರುಣ್‌-ಸೋನಲ್‌ಗೆ ಬಿಎಸ್‌ವೈ, ರಮೇಶ್‌ ಅರವಿಂದ್‌ ಸೇರಿ ಗಣ್ಯರಿಂದ ಶುಭಾಶಯ; Video, Photos ಇಲ್ಲಿವೆ

Tharun Sudhir: ಸೋನಲ್ ಅವರು ಮಂಗಳೂರಿನವರು. ಅವರು ಮೊದಲು ತಮಿಳು ಸಿನಿಮಾದಲ್ಲಿ ನಟಿಸಿದ್ದರು. ಆನ್​ಲೈನ್​ನಲ್ಲಿ ಇರುವ ಮಾಹಿತಿ ಪ್ರಕಾರ ಅವರು ಜನಿಸಿದ್ದು 1995ರ ಆಗಸ್ಟ್ 11ರಂದು. ಕೆಲವೇ ದಿನಗಳಲ್ಲಿ 29 ವರ್ಷ ತುಂಬಲಿದೆ. ತರುಣ್ ಸುಧೀರ್ ಅವರಿಗೆ 41 ವರ್ಷ ಎನ್ನಲಾಗಿದೆ. ಈಗ ಅವರು ಜನಿಸಿದ್ದು 1983ರಲ್ಲಿ. ಅಂದರೆ, ಇಬ್ಬರ ಮಧ್ಯೆ ಸುಮರು 12 ವರ್ಷಗಳ ಅಂತರ ಇದೆ. ಈಗ ಈ ಜೋಡಿಯು ಅದ್ಧೂರಿಯಾಗಿ ಆರತಕ್ಷತೆ ಮಾಡಿಕೊಂಡಿದೆ.

VISTARANEWS.COM


on

Tharun Sudhir
Koo

ಬೆಂಗಳೂರು: ಸ್ಯಾಂಡಲ್‌ವುಡ್‌ನ ಭರವಸೆಯ ನಿರ್ದೇಶಕ ತರುಣ್‌ ಸುಧೀರ್‌ (Tharun Sudhir) ಹಾಗೂ ಸೋನಲ್‌ ಮೊಂಥೆರೋ (Sonal Monteiro) ಅವರ ಆರತಕ್ಷತೆಯು ಅದ್ಧೂರಿಯಾಗಿ ನೆರವೇರಿದೆ. ಬೆಂಗಳೂರಿನಲ್ಲಿ ರಿಸೆಪ್ಶನ್‌ ನಡೆದಿದ್ದು, ಸ್ಯಾಂಡಲ್‌ವುಡ್‌ ನಟ, ನಟಿಯರು, ನಿರ್ದೇಶಕರು, ನಿರ್ಮಾಪಕರು, ರಾಜಕಾರಣಿಗಳು ಸೇರಿ ನೂರಾರು ಗಣ್ಯರು ರಿಸೆಪ್ಶನ್‌ನಲ್ಲಿ ಭಾಗವಹಿಸಿ, ನೂತನ ಜೋಡಿಗೆ ಶುಭ ಹಾರೈಸಿದ್ದಾರೆ. ಭಾನುವಾರ (ಆಗಸ್ಟ್‌ 11) ಮದುವೆ ಸಮಾರಂಭ ನಡೆಯಲಿದ್ದು, ಇನ್ನಷ್ಟು ಗಣ್ಯರು ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಸಿನಿಮಾ ಕಾನ್ಸೆಪ್ಟ್‌ನಲ್ಲಿಯೇ ಸಿದ್ಧವಾದ ವೇದಿಕೆ ಮೇಲೆ ತರುಣ್‌ ಸುಧೀರ್‌ ಹಾಗೂ ಸೋನಲ್‌ ಮೊಂಥೆರೋ ಅವರು ಮಿಂಚಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ನಟ ಪ್ರೇಮ್‌, ನಟಿಯರಾದ ಮಾಲಾಶ್ರೀ, ಆರಾಧನಾ ಮಾಲಾಶ್ರೀ, ಪ್ರೇಮಾ, ನಿರ್ಮಾಪಕ ಕೆ.ಮಂಜು, ನಟ ರಮೇಶ್‌ ಅರವಿಂದ್‌ ಸೇರಿ ಹಲವು ಸೆಲೆಬ್ರಿಟಿಗಳು, ಗಣ್ಯರು ನೂತನ ಜೋಡಿಗೆ ಶುಭ ಕೋರಿದರು.

ಕಿಚ್ಚ ಸುದೀಪ್ ಸೇರಿ ಹಲವು ನಟ, ನಟಿಯರು, ನಿರ್ದೆಶಕರನ್ನು ಭೇಟಿಯಾಗಿ ತರುಣ್ ಸುಧೀರ್​ ಅವರು ಮದುವೆಯ ಆಮಂತ್ರಣ ನೀಡಿದ್ದಾರೆ. ರಚಿತಾ ರಾಮ್​, ಉಪೇಂದ್ರ, ರಾಘವೇಂದ್ರ ರಾಜ್​ಕುಮಾರ್​ ಅವರಿಗೂ ತರುಣ್​ ಸುಧೀರ್​ ಆಹ್ವಾನ ನೀಡಿದ್ದಾರೆ. ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರನ್ನು ತರುಣ್​ ಸುಧೀರ್​ ಅವರು ಮದುವೆಗೆ ಆಹ್ವಾನಿಸಿದ್ದಾರೆ. ಇವರೆಲ್ಲರೂ ಭಾನುವಾರ ಮದುವೆಗೆ ಹಾಜರಾಗುವ ಸಾಧ್ಯತೆ ಇದೆ.

ಆರತಕ್ಷತೆಯ ಲೈವ್‌ ವಿಡಿಯೊ ವೀಕ್ಷಿಸಿ

ಶಿವರಾಜ್​ಕುಮಾರ್​, ಗೀತಾ ದಂಪತಿಯನ್ನು ಭೇಟಿಯಾಗಿ ತರುಣ್​ ಆಹ್ವಾನ ಪತ್ರಿಕೆ ನೀಡಿದ್ದಾರೆ.ರಾಜಕೀಯ ಕ್ಷೇತ್ರದಲ್ಲೂ ಅನೇಕರ ಜೊತೆ ತರುಣ್​ ಸುಧೀರ್​ ಅವರು ಆತ್ಮೀಯತೆ ಹೊಂದಿದ್ದಾರೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಸೇರಿದಂತೆ ಅನೇಕರು ಈ ಮದುವೆಗೆ ಬರುವ ನಿರೀಕ್ಷೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತರುಣ್​ ಸುಧೀರ್​ ಅವರು ಆಹ್ವಾನಿಸಿ ಬಂದಿದ್ದಾರೆ.

ತರುಣ್ ನೀಡಿರುವ ಇನ್ವಿಟೇಷನ್ ನಲ್ಲಿ ಮದುವೆ ಪತ್ರಿಕೆ, ಒಂದು ಖಾಲಿ ಪುಸ್ತಕ ಅದರಲ್ಲಿ ಬರೆಯೋದಕ್ಕೆ ಎರಡು ಪೆನ್ಸಿಲ್ ಹಾಗೂ ಎರಡು ಪೆನ್ ಮತ್ತು ಒಂದು ಸೀಡ್ ಬಾಲ್ ಇವೆ. ವಿಶೇಷ ಅಂದರೆ ಮದುವೆ ಮುಗಿದ ನಂತರ ಪತ್ರಿಕೆ ಏನ್ ಮಾಡೋದು ಅಂತ ಯೋಚನೆ ಮಾಡೋ ಹಾಗಿಲ್ಲ, ಯಾಕಂದ್ರೆ ಸೋನಾಲ್ ಮತ್ತು ತರುಣ್ ಮದ್ವೆ ನಂತರ ಪತ್ರಿಕಯನ್ನ ಒಂದು ಮಣ್ಣಿನ ಪಾಟ್‌ನಲ್ಲಿ ಹಾಕಿದ್ದರೆ ಅದು ಮಣ್ಣಿನಲ್ಲಿ ಬೆರೆದು ಗಿಡ ಬೆಳೆಯುತ್ತೆ.

ಅದಷ್ಟೇ ಅಲ್ಲ ಖಾಲಿ ಪುಸ್ತಕದಲ್ಲಿ ಬರೆದು ಹಾಳೆ ಖಾಲಿ ಆದ ನಂತರ ಅದು ಮಣ್ಣು ಸೇರಿದ್ದರೆ ಅದ್ರಿಂದಲೂ ಹೂವಿನ ಗಿಡ ಬೆಳೆಯುತ್ತೆ. ಇನ್ನು ಪೆನ್ ಮತ್ತು ಪೆನ್ಸಿಲ್ ಬೆರೆದು ಖಾಲಿ ಆದ್ರೆ ಅದನ್ನು ಮಣ್ಣಿಗೆ ಹಾಕಿದ್ರೆ ಚಂದದ ಹೂವಿನ ಹಾಗೂ ತರಕಾರಿ ಗಿಡ ಬೆಳೆಯುತ್ತೆ. ಹೀಗೆ ತಮ್ಮ ವಿವಾಹದ ಆಹ್ವಾನ ಪತ್ರಿಕೆ ಸಖತ್ ಸ್ಪೆಷಲ್ ಮತ್ತು ಪರಿಸರ ಸ್ನೇಹಿ ಆಗಿರಲಿ ಎಂದು ತರುಣ್ ಈ ರೀತಿ ಪ್ಲಾನ್ ಮಾಡಿದ್ದಾರೆ.

ಇದನ್ನೂ ಓದಿ: Tharun Sudhir: ಸೋನಾಲ್‌  ಬ್ಯಾಚುಲರ್ ಪಾರ್ಟಿ ಬಲು ಜೋರು!  ಕೈ ಹಿಡಿಯೋ ಸುಂದರಿಯನ್ನು ಮುದ್ದಾಗಿ ತರುಣ್ ಹೇಗೆ ಕರೆಯುತ್ತಾರೆ?

Continue Reading

ಸಿನಿಮಾ

Tharun Sudhir: ತರುಣ್ ಸುಧೀರ್-ಸೋನಲ್ ಮದುವೆ ಸಂಭ್ರಮ; ರಿಸೆಪ್ಶನ್‌ ಲೈವ್‌ ವಿಡಿಯೊ ಇಲ್ಲಿದೆ ನೋಡಿ

Tharun Sudhir: ಸೋನಲ್ ಅವರು ಮಂಗಳೂರಿನವರು. ಅವರು ಮೊದಲು ತಮಿಳು ಸಿನಿಮಾದಲ್ಲಿ ನಟಿಸಿದ್ದರು. ಆನ್​ಲೈನ್​ನಲ್ಲಿ ಇರುವ ಮಾಹಿತಿ ಪ್ರಕಾರ ಅವರು ಜನಿಸಿದ್ದು 1995ರ ಆಗಸ್ಟ್ 11ರಂದು. ಕೆಲವೇ ದಿನಗಳಲ್ಲಿ 29 ವರ್ಷ ತುಂಬಲಿದೆ. ತರುಣ್ ಸುಧೀರ್ ಅವರಿಗೆ 41 ವರ್ಷ ಎನ್ನಲಾಗಿದೆ. ಈಗ ಅವರು ಜನಿಸಿದ್ದು 1983ರಲ್ಲಿ. ಅಂದರೆ, ಇಬ್ಬರ ಮಧ್ಯೆ ಸುಮರು 12 ವರ್ಷಗಳ ಅಂತರ ಇದೆ.

VISTARANEWS.COM


on

Tharun Sudhir
Koo

ಬೆಂಗಳೂರು: ಸ್ಯಾಂಡಲ್‌ವುಡ್‌ ನಿರ್ದೇಶಕ ತರುಣ್‌ ಸುಧೀರ್‌ (Tharun Sudhir) ಹಾಗೂ ಸೋನಲ್‌ ಮೊಂಥೆರೋ (Sonal Monteiro) ಅವರ ಮೆಹಂದಿ ಶಾಸ್ತ್ರವು ಅದ್ಧೂರಿಯಾಗಿ ನೆರವೇರಿದ್ದು, ಶನಿವಾರ (ಆಗಸ್ಟ್‌ 10) ಸಂಜೆ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ರಿಸೆಪ್ಶನ್‌ ನಡೆಯುತ್ತಿದೆ. ಶನಿವಾರ ಆರತಕ್ಷತೆ ನಡೆದರೆ, ಭಾನುವಾರ ಅದ್ಧೂರಿಯಾಗಿ ತಾರಾ ಜೋಡಿಯು ದಾಂಪತ್ಯ ಜೀವನಕ್ಕೆ ಕಾಲಿಡಲಿದೆ. ಇನ್ನು ತರುಣ್‌ ಸುಧೀರ್‌ ಅವರ ರಿಸೆಪ್ಶನ್‌ಗೆ ಸ್ಯಾಂಡಲ್‌ವುಡ್‌ನ ಹಲವು ಗಣ್ಯರು ಆಗಮಿಸುತ್ತಿದ್ದಾರೆ. ಅವರ ರಿಸೆಪ್ಶನ್‌ ಲೈವ್‌ ವಿಡಿಯೊವನ್ನು ಇಲ್ಲಿ ವೀಕ್ಷಿಸಿ.

ಗಣ್ಯರಿಗೆ ಆಹ್ವಾನ

ಕಿಚ್ಚ ಸುದೀಪ್ ಸೇರಿ ಹಲವು ನಟ, ನಟಿಯರು, ನಿರ್ದೆಶಕರನ್ನು ಭೇಟಿಯಾಗಿ ತರುಣ್ ಸುಧೀರ್​ ಅವರು ಮದುವೆಯ ಆಮಂತ್ರಣ ನೀಡಿದ್ದಾರೆ. ರಚಿತಾ ರಾಮ್​, ಉಪೇಂದ್ರ, ರಾಘವೇಂದ್ರ ರಾಜ್​ಕುಮಾರ್​ ಅವರಿಗೂ ತರುಣ್​ ಸುಧೀರ್​ ಆಹ್ವಾನ ನೀಡಿದ್ದಾರೆ. ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರನ್ನು ತರುಣ್​ ಸುಧೀರ್​ ಅವರು ಮದುವೆಗೆ ಆಹ್ವಾನಿಸಿದರು.

ಶಿವರಾಜ್​ಕುಮಾರ್​, ಗೀತಾ ದಂಪತಿಯನ್ನು ಭೇಟಿಯಾಗಿ ತರುಣ್​ ಆಹ್ವಾನ ಪತ್ರಿಕೆ ನೀಡಿದ್ದಾರೆ.ರಾಜಕೀಯ ಕ್ಷೇತ್ರದಲ್ಲೂ ಅನೇಕರ ಜೊತೆ ತರುಣ್​ ಸುಧೀರ್​ ಅವರು ಆತ್ಮೀಯತೆ ಹೊಂದಿದ್ದಾರೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಸೇರಿದಂತೆ ಅನೇಕರು ಈ ಮದುವೆಗೆ ಬರುವ ನಿರೀಕ್ಷೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತರುಣ್​ ಸುಧೀರ್​ ಅವರು ಆಹ್ವಾನಿಸಿ ಬಂದಿದ್ದಾರೆ.

ತರುಣ್ ನೀಡುತ್ತಿರುವ ಈ ಇನ್ವಿಟೇಷನ್ ನಲ್ಲಿ ಮದುವೆ ಪತ್ರಿಕೆ, ಒಂದು ಖಾಲಿ ಪುಸ್ತಕ ಅದರಲ್ಲಿ ಬರೆಯೋದಕ್ಕೆ ಎರಡು ಪೆನ್ಸಿಲ್ ಹಾಗೂ ಎರಡು ಪೆನ್ ಮತ್ತು ಒಂದು ಸೀಡ್ ಬಾಲ್ ಇವೆ. ವಿಶೇಷ ಅಂದರೆ ಮದುವೆ ಮುಗಿದ ನಂತರ ಪತ್ರಿಕೆ ಏನ್ ಮಾಡೋದು ಅಂತ ಯೋಚನೆ ಮಾಡೋ ಹಾಗಿಲ್ಲ, ಯಾಕಂದ್ರೆ ಸೋನಾಲ್ ಮತ್ತು ತರುಣ್ ಮದ್ವೆ ನಂತರ ಪತ್ರಿಕಯನ್ನ ಒಂದು ಮಣ್ಣಿನ ಪಾಟ್‌ನಲ್ಲಿ ಹಾಕಿದ್ದರೆ ಅದು ಮಣ್ಣಿನಲ್ಲಿ ಬೆರೆದು ಗಿಡ ಬೆಳೆಯುತ್ತೆ. ಅದಷ್ಟೇ ಅಲ್ಲ ಖಾಲಿ ಪುಸ್ತಕದಲ್ಲಿ ಬರೆದು ಹಾಳೆ ಖಾಲಿ ಆದ ನಂತರ ಅದು ಮಣ್ಣು ಸೇರಿದ್ದರೆ ಅದ್ರಿಂದಲೂ ಹೂವಿನ ಗಿಡ ಬೆಳೆಯುತ್ತೆ. ಇನ್ನು ಪೆನ್ ಮತ್ತು ಪೆನ್ಸಿಲ್ ಬೆರೆದು ಖಾಲಿ ಆದ್ರೆ ಅದನ್ನು ಮಣ್ಣಿಗೆ ಹಾಕಿದ್ರೆ ಚಂದದ ಹೂವಿನ ಹಾಗೂ ತರಕಾರಿ ಗಿಡ ಬೆಳೆಯುತ್ತೆ. ಹೀಗೆ ತಮ್ಮ ವಿವಾಹದ ಆಹ್ವಾನ ಪತ್ರಿಕೆ ಸಖತ್ ಸ್ಪೆಷಲ್ ಮತ್ತು ಪರಿಸರ ಸ್ನೇಹಿ ಆಗಿರಲಿ ಎಂದು ತರುಣ್ ಈ ರೀತಿ ಪ್ಲಾನ್ ಮಾಡಿದ್ದಾರೆ.

ಇದನ್ನೂ ಓದಿ: Tharun Sudhir: ಸೋನಾಲ್‌  ಬ್ಯಾಚುಲರ್ ಪಾರ್ಟಿ ಬಲು ಜೋರು!  ಕೈ ಹಿಡಿಯೋ ಸುಂದರಿಯನ್ನು ಮುದ್ದಾಗಿ ತರುಣ್ ಹೇಗೆ ಕರೆಯುತ್ತಾರೆ?

Continue Reading
Advertisement
Police Firing
ಕ್ರೈಂ8 mins ago

Police Firing: ಪೊಲೀಸರ ಮೇಲೆ ದಾಳಿ ನಡೆಸಿದ ರೌಡಿ ಕಾಲಿಗೆ ಗುಂಡೇಟು

Bangladesh Unrest
ವಿದೇಶ9 mins ago

Bangladesh Unrest: ಹಿಂದೂಗಳ ಮೇಲಿನ ದಾಳಿ ಖಂಡಿಸಿ ಬಾಂಗ್ಲಾದೇಶದಲ್ಲಿ ಭಾರೀ ಪ್ರತಿಭಟನೆ; ಅಮೆರಿಕ, ಯುಕೆಯಲ್ಲೂ ಧರಣಿ

Tharun Sudhir wedding live video is here
ಸ್ಯಾಂಡಲ್ ವುಡ್30 mins ago

Tharun Sudhir: ತರುಣ್ ಸುಧೀರ್-ಸೋನಲ್ ಮದುವೆ ಸಂಭ್ರಮದ ಲೈವ್‌ ವಿಡಿಯೊ ಇಲ್ಲಿದೆ ನೋಡಿ!

Shiva Rajkumar Bhairathi Ranagal Title Song Geetha SRK
ಸ್ಯಾಂಡಲ್ ವುಡ್47 mins ago

Shiva Rajkumar: ʻಭೈರತಿ ರಣಗಲ್ʼ ಟೈಟಲ್ ಸಾಂಗ್ ಔಟ್‌; ಸೆಪ್ಟೆಂಬರ್‌ನಲ್ಲಿ ತೆರೆಗೆ!

Women’s T20 World Cup
ಕ್ರೀಡೆ54 mins ago

Women’s T20 World Cup: ವಿಶ್ವಕಪ್​ ನಡೆಸಲು ಸೇನೆಯ ನೆರವು ಕೇಳಿದ ಬಾಂಗ್ಲಾ ಕ್ರಿಕೆಟ್​ ಮಂಡಳಿ

Jr NTR luxury watch at Hyderabad event
South Cinema60 mins ago

Jr NTR: ಸಿನಿಮಾ ಮುಹೂರ್ತದಲ್ಲಿ ಜ್ಯೂ. ಎನ್​ಟಿಆರ್ ಧರಿಸಿದ ವಾಚ್ ಬೆಲೆ ಕೇಳಿದರೆ ನೀವು ಬೆರಗಾಗೋದು ಖಚಿತ​!

Police Firing
ಕ್ರೈಂ1 hour ago

Police Firing: ಸಕ್ಕರೆನಾಡು ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆಯೇ ಗುಂಡಿನ ಸದ್ದು; ಕೊಲೆ ಆರೋಪಿ ಕಾಲಿಗೆ ಫೈರಿಂಗ್‌

Kejriwal Bungalow Case
ದೇಶ1 hour ago

Kejriwal Bungalow Case: ಕೇಜ್ರಿವಾಲ್‌ ಬಂಗಲೆ ನವೀಕರಣ ಅಕ್ರಮ; ಮೂವರು ಇಂಜಿನಿಯರ್‌ಗಳು ಸಸ್ಪೆಂಡ್‌

ಕ್ರೀಡೆ1 hour ago

Paris Olympics: ಒಂದೇ ವಾರಕ್ಕೆ ಬಣ್ಣ ಕಳೆದುಕೊಂಡ ​ಒಲಿಂಪಿಕ್ಸ್​ ಪದಕ!

Cyber Crime
ಕ್ರೈಂ2 hours ago

Cyber Crime: ಆನ್‌ಲೈನ್‌ ಹೂಡಿಕೆ ಹೆಸರಲ್ಲಿ ವಂಚನೆ; 1.53 ಕೋಟಿ ರೂ. ಕಳೆದುಕೊಂಡ ಟೆಕ್ಕಿ ದಂಪತಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ3 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು5 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ5 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ7 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌