Actor Yash: ಯಶ್ ಫ್ಯಾನ್ಸ್ ದುರಂತ: ಗಾಯಾಳುಗಳಿಗೆ ಒಂದು ಲಕ್ಷ ರೂ. ಪರಿಹಾರ ಕೊಟ್ಟ ಯಶ್‌! - Vistara News

ಸ್ಯಾಂಡಲ್ ವುಡ್

Actor Yash: ಯಶ್ ಫ್ಯಾನ್ಸ್ ದುರಂತ: ಗಾಯಾಳುಗಳಿಗೆ ಒಂದು ಲಕ್ಷ ರೂ. ಪರಿಹಾರ ಕೊಟ್ಟ ಯಶ್‌!

ಯಶ್ (Actor Yash)​ ಆಪ್ತರು ಗದಗ ಜಿಲ್ಲೆಯ ಸೊರಣಗಿ ಗ್ರಾಮಕ್ಕೆ ತೆರಳಿ ಮೃತ ಯುವಕನ ಕುಟುಂಬಕ್ಕೆ ಪರಿಹಾರದ ಚೆಕ್​ ನೀಡಿದ್ದರು. ಅದೇ ವೇಳೆ ಗಾಯಾಳುಗಳ ಬ್ಯಾಂಕ್ ಮಾಹಿತಿ ಪಡೆದು ಪರಿಹಾರದ ಭರವಸೆ ನೀಡಿ ಹೋಗಿದ್ದರು.

VISTARANEWS.COM


on

Yash fans Gadag tragedy 1 lakh for the injured Fans
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗದಗ: ಜಿಲ್ಲೆಯ ಲಕ್ಷ್ಮೇಶ್ವರದ ಸೂರಣಗಿ ಗ್ರಾಮದ ಕೆಲವು ಯುವಕರು ಸೇರಿ ಬೃಹತ್‌ ಗಾತ್ರದ ಕಟೌಟ್‌ ರೂಪಿಸಿ ಅದನ್ನು ಕಟ್ಟುವ ಹಂತದಲ್ಲಿ ಅದು ವಿದ್ಯುತ್‌ ತಂತಿಗೆ ಸ್ಪರ್ಶಿಸಿತ್ತು. ಇದರಿಂದ ಹನುಮಂತ ಹರಿಜನ (21), ಮುರಳಿ ನಡುವಿನಮನಿ (20) ಮತ್ತು ನವೀನ್ ಗಾಜಿ (19) ಎಂಬ ಮೂವರು ಯುವಕರು ಮೃತಪಟ್ಟರೆ, ಮಂಜುನಾಥ್ ಹರಿಜನ, ದೀಪಕ್ ಹರಿಜನ, ಪ್ರಕಾಶ್ ಮ್ಯಾಗೇರಿ ಎಂಬುವವರು ಗಾಯಗೊಂಡಿದ್ದರು. ಯಶ್ (Actor Yash)​ ಆಪ್ತರು ಗದಗ ಜಿಲ್ಲೆಯ ಸೊರಣಗಿ ಗ್ರಾಮಕ್ಕೆ ತೆರಳಿ ಮೃತ ಯುವಕನ ಕುಟುಂಬಕ್ಕೆ ಪರಿಹಾರದ ಚೆಕ್​ ನೀಡಿದ್ದರು. ಅದೇ ವೇಳೆ ಗಾಯಾಳುಗಳ ಬ್ಯಾಂಕ್ ಮಾಹಿತಿ ಪಡೆದು ಪರಿಹಾರದ ಭರವಸೆ ನೀಡಿ ಹೋಗಿದ್ದರು. ಇದೀಗ ನಾಲ್ಕು ಜನ ಗಾಯಾಳುಗಳ ಕುಟುಂಬಕ್ಕೆ ತಲಾ ಒಂದು ಲಕ್ಷ ರೂ. ಬ್ಯಾಂಕ್‌ ಖಾತೆಗೆ ನೇರವಾಗಿ ಹಾಕಿದ್ದಾರೆ.

ಏನಿದು ಘಟನೆ?

ಗದಗ ಜಿಲ್ಲೆಯ ಲಕ್ಷ್ಮೇಶ್ವರದ ಸೂರಣಗಿ ಗ್ರಾಮದ ಕೆಲವು ಯುವಕರು ಸೇರಿ ಬೃಹತ್‌ ಗಾತ್ರದ ಕಟೌಟ್‌ ರೂಪಿಸಿ ಅದನ್ನು ಕಟ್ಟುವ ಹಂತದಲ್ಲಿ ಅದು ವಿದ್ಯುತ್‌ ತಂತಿಗೆ ಸ್ಪರ್ಶಿಸಿತ್ತು. ಇದರಿಂದ ಹನುಮಂತ ಹರಿಜನ (21), ಮುರಳಿ ನಡುವಿನಮನಿ (20) ಮತ್ತು ನವೀನ್ ಗಾಜಿ (19) ಎಂಬ ಮೂವರು ಯುವಕರು ಮೃತಪಟ್ಟರೆ, ಮಂಜುನಾಥ್ ಹರಿಜನ, ದೀಪಕ್ ಹರಿಜನ, ಪ್ರಕಾಶ್ ಮ್ಯಾಗೇರಿ ಎಂಬುವವರು ಗಾಯಗೊಂಡಿದ್ದರು. ಇದಾದ ಬಳಿಕ ಯಶ್‌ ಅವರು ಮೃತಪಟ್ಟ ಮೂವರು ಅಭಿಮಾನಿಗಳ (Actor Yash) ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದರು. 

ಇದನ್ನೂ ಓದಿ: Actor Yash: ಮಲೇಷಿಯಾಗೆ ಹಾರಿದ ʻರಾಕಿಂಗ್‌ ಸ್ಟಾರ್‌’ ಯಶ್‌ʼ: ಫೋಟೊ ವೈರಲ್‌!

ಅಭಿಮಾನಿಗಳು ಹುಟ್ಟು ಹಬ್ಬದ ಸಂದರ್ಭದಲ್ಲಿ (Yash Birthday) ತಮ್ಮ ಅಭಿಮಾನವನ್ನು ಬ್ಯಾನರ್‌, ಕಟೌಟ್‌ಗಳ ಮೂಲಕ ತೋರಿಸುವ ಬದಲು ಒಳ್ಳೆಯ ಕೆಲಸದ ಮೂಲಕ, ಒಳ್ಳೆಯ ಬದುಕಿನ ಮೂಲಕ ತೋರಿಸಬೇಕು ಎಂದು ಯಶ್‌ ಈ ಹಿಂದೆ ಮನವಿ ಮಾಡಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದ ಚಿತ್ರ ನಟ ಯಶ್‌ ಅವರು ಸಂಜೆಯ ಹೊತ್ತಿಗೆ ವಿಶೇಷ ವಿಮಾನದಲ್ಲಿ ಹುಬ್ಬಳ್ಳಿ ಮೂಲಕ ಸೂರಣಗಿಗೆ ಆಗಮಿಸಿದ್ದರು. ಅಲ್ಲಿ ಮೃತರ ಮನೆಗಳಿಗೆ ಭೇಟಿ ನೀಡಿ ಮನೆ ಮಂದಿಗೆ ಸಾಂತ್ವನ ಹೇಳಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Blink Movie: ಹಾಫ್ ಸೆಂಚುರಿ ಬಾರಿಸಿದ ʻಬ್ಲಿಂಕ್ ʼ ಸಿನಿಮಾ; ಒಟಿಟಿಯಲ್ಲಿಯೂ ʻಬಹುಪರಾಕ್ʼ!

Blink Movie: ಥಿಯೇಟರ್ ನಲ್ಲಿಯೂ ಭರಪೂರ ಮೆಚ್ಚುಗೆ ಪಡೆದಿದ್ದ ಬ್ಲಿಂಕ್ ಸಿನಿಮಾ ಒಟಿಟಿಯಲ್ಲಿಯೂ ಸದ್ದು ಮಾಡಿದೆ. ಅಮೇಜಾನ್ ಪ್ರೈಮ್ ಗೆ ಎಂಟ್ರಿ ಕೊಟ್ಟು 3 ದಿನದಲ್ಲಿಯೇ 7 ಮಿಲಿಯನ್ಸ್ ಮಿನಿಟ್ ಸ್ಟ್ರೀಮಿಂಗ್ ಕಾಣುವ ಮೂಲಕ ಹೊಸ ದಾಖಲೆ ಸೃಷ್ಟಿಸಿದ್ದು, 4 ನೇ ದಿನ 10 ಮಿಲಿಯನ್ ಮಿನಿಟ್ಸ್ ರೀಚ್ ಆಗಿದೆ. ಹೊಸಬರ ಚಿತ್ರಕ್ಕೆ ಇಷ್ಟು ಒಳ್ಳೆ ರೆಸ್ಪಾನ್ಸ್ ಸಿಕ್ಕಿರುವುದು ಖುಷಿ.

VISTARANEWS.COM


on

Blink Movie in half centuru with good in OTT
Koo

ಬೆಂಗಳೂರು: ಶ್ರೀನಿಧಿ ಬೆಂಗಳೂರು ನಿರ್ದೇಶನದ ಟೈಮ್‌ ಟ್ರಾವೆಲ್‌ ಸಿನಿಮಾ “ಬ್ಲಿಂಕ್‌” (Blink Movie) ಅಮೆಜಾನ್ ಒಟಿಟಿಯಲ್ಲಿ ಬಿಡುಗಡೆಯಾಗಿದ್ದು, ಅದ್ಭುತ ಪ್ರತಿಕ್ರಿಯೆ ಪಡೆಯುತ್ತಿದೆ. ಈ ಸಿನಿಮಾದ ಕುರಿತು ಜನ ಸೋಷಿಯಲ್ ಮೀಡಿಯಾದಲ್ಲಿ ಒಳ್ಳೆ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಒಟಿಟಿಗೂ ಎಂಟ್ರಿ ಕೊಟ್ಟಿರುವ ಚಿತ್ರವೀಗ ಯಶಸ್ವಿಯಾಗಿ 50 ದಿನ ಪೂರೈಸಿದೆ. ಕನ್ನಡ ಸಿನಿಮಾಗಳನ್ನು ಪ್ರೇಕ್ಷಕರು ನೋಡುತ್ತಿಲ್ಲ ಎಂಬ ಅಪವಾದದ ನಡುವೆ ʻಬ್ಲಿಂಕ್ʼ ಆಫ್ ಸೆಂಚುರಿ ಬಾರಿಸಿರುವುದು ಇಡೀ ತಂಡಕ್ಕೆ ಖುಷಿ ಕೊಟ್ಟಿದೆ. ಈ ಕ್ಷಣಗಳನ್ನು ಚಿತ್ರತಂಡ ಮಾಧ್ಯಮದವರೊಟ್ಟಿಗೆ ಹಂಚಿಕೊಂಡಿದೆ.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ನಿರ್ಮಾಪಕ ರವಿಚಂದ್ರ ಎ ಜೆ ಮಾತನಾಡಿ, ʻʻಸಿನಿಮಾ ಈ ಲೆವೆಲ್‌ಗೆ ಆಗುತ್ತದೆ ಎಂದು ಅಂದುಕೊಂಡಿರಲಿಲ್ಲ. ಮನೆಯವರು ಖುಷಿಯಾಗಿದ್ದಾರೆ. ತಂಡ ಖುಷಿಯಾಗಬೇಕು ಎಂದರೆ ಅಂದುಕೊಂಡಿರುವ ದೊಡ್ಡ ಬರಬೇಕು. ಇಡೀ ಸಿನಿಮಾ ತಂಡ ಪ್ರಾಮಾಣಿಕವಾಗಿ ದುಡಿದಿದೆ. ಅವರಿಗೆಲ್ಲಾ ಮುಂದೆ ಒಳ್ಳೆ ಸಿನಿ ಕರಿಯರ್ ಸಿಗಬೇಕು. ಆದಷ್ಟು ಬೇಗ ತೆಲುಗಿಗೂ ಡಬ್ ಮಾಡಿಸುತ್ತೇವೆ. ತಮಿಳು ಡಬ್ ಬಗ್ಗೆ ಚರ್ಚೆ ನಡೆಸಲಾಗಿದೆ. ಈ ಸಿನಿಮಾಗೆ ಭಾಷೆಯ ಎಲ್ಲೆ ಇಲ್ಲʼʼ ಎಂದರು.

ಇದನ್ನೂ ಓದಿ: Daredevil Mustafa: ಪುಸ್ತಕ ರೂಪ ಪಡೆದ ʻಡೇರ್ ಡೆವಿಲ್‌ ಮುಸ್ತಾಫಾʼ ಸಿನಿಮಾ!

ನಟ ದೀಕ್ಷಿತ್ ಶೆಟ್ಟಿ ಮಾತನಾಡಿ, ʻʻಬಹಳ ಖುಷಿಯಾಗುತ್ತಿದೆ. ಎಷ್ಟೋ ವರ್ಷಗಳ ನಂತರ ಹೊಸಬರ ತಂಡ 50 ದಿನಗಳ ಕಾಲ ಸಿನಿಮಾವನ್ನು ಥಿಯೇಟರ್‌ನಲ್ಲಿ ಉಳಿಸಿಕೊಂಡಿದ್ದೇವೆ. ನಮಗೆ ನಂಬಲು ಆಗುತ್ತಿಲ್ಲ. ಮೊದಲ ದಿನದಿಂದ ಇಲ್ಲಿವರೆಗೂ ಬಹಳಷ್ಟು ಹೋರಾಟ ಮಾಡಿದ್ದೇವು. ನಾವು ಜನರನ್ನು ಕರೆದುಕೊಂಡು ಥಿಯೇಟರ್ ತುಂಬಿಸುತ್ತಿದ್ದೇವೆ ಎಂದು ಒಂದಷ್ಟು ಜನ ಮಾತಾನಾಡಿಕೊಂಡರು. ಹಾಗೇ ಹೇಳಿದವರಿಗೆ ಉತ್ತರ 50 ದಿನ. ಸಿನಿಮಾ ಅಷ್ಟು ಕೋಟಿ ಮಾಡಬೇಕು. ಇಷ್ಟು ಕೋಟಿ ಮಾಡಬೇಕು ಎನ್ನುವುದು ನನ್ನ ತಲೆಯಲ್ಲಿ ಇರಲಿಲ್ಲ. ನಿರ್ಮಾಪಕರು ಗೆಲ್ಲಬೇಕು. ನಿಲ್ಲಬೇಕು ಅನ್ನುವುದಷ್ಟೇ ಇತ್ತು. ಹಾಕಿದ ಬಂಡವಾಳ ವಾಪಸ್ ಬರುವುದರಲ್ಲಿದೆ. ಹೀಗಾಗಿ ಖುಷಿ ಇದೆ ಎಂದು ಭಾವಿಸಿದ್ದೇನೆ. ಈ ಗೆಲುವಿಗೆ ಕಾರಣರಾದ ಇಡೀ ತಂಡಕ್ಕೆ ಧನ್ಯವಾದʼʼ ತಿಳಿಸಿದರು.

ಹೊಂದಿಸಿ ಬರೆಯಿರಿ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ , ಐವತ್ತು ಬರೀ ನಂಬರ್ ಅಷ್ಟೇ ಅಲ್ಲ. ಅದಕ್ಕೂ ಮೀರಿ ಸಿನಿಮಾವನ್ನು ಚಿತ್ರತಂಡ ತೆಗೆದುಕೊಂಡು ಹೋದ ರೀತಿ ನಾವು ಹೊಂದಿಸಿ ಬರೆಯಿರಿ ಮಾಡುವ ಟೈಮ್ ನಲ್ಲಿ ಮಾಡಿದ ರೀತಿ ಇತ್ತು. ಆ ಜರ್ನಿಯೇ ರೋಚಕ. ಬ್ಲಿಂಕ್ ಸಿನಿಮಾ ನೋಡಿದಾಗ ಇದು ಬೇರೆನೇ ಇದೆ ಎನಿಸಿತು. ಮೂರು ವರ್ಷ ಟ್ರಾವೆಲ್ ಆಗಿ ಸಿನಿಮಾ ಮಾಡುವುದು ಒಂದು ಜರ್ನಿಯಾದರೆ. ಸಿನಿಮಾ ತಲುಪಿಸಲು ಅಷ್ಟೇ ಟ್ರಾವೆಲ್ ಆಗಬೇಕು. ಸಿನಿಮಾ ಮಾಡಿ ಸುಮ್ಮನೇ ಆಗಬಾರದು. ಸಿನಿಮಾ ಚೆನ್ನಾಗಿ ಇದ್ದಾಗ ನಿಲ್ಲಿಸಲು ಓಡಾಡಬೇಕು ಎಂದು ಅಭಿಪ್ರಾಯ ಹಂಚಿಕೊಂಡರು.

ಒಟಿಟಿಯಲ್ಲಿಯೂ ಬ್ಲಿಂಕ್‌ಗೆ ಬಹುಪರಾಕ್

ಥಿಯೇಟರ್‌ನಲ್ಲಿಯೂ ಭರಪೂರ ಮೆಚ್ಚುಗೆ ಪಡೆದಿದ್ದ ಬ್ಲಿಂಕ್ ಸಿನಿಮಾ ಒಟಿಟಿಯಲ್ಲಿಯೂ ಸದ್ದು ಮಾಡಿದೆ. ಅಮೇಜಾನ್ ಪ್ರೈಮ್ ಗೆ ಎಂಟ್ರಿ ಕೊಟ್ಟು 3 ದಿನದಲ್ಲಿಯೇ 7 ಮಿಲಿಯನ್ಸ್ ಮಿನಿಟ್ ಸ್ಟ್ರೀಮಿಂಗ್ ಕಾಣುವ ಮೂಲಕ ಹೊಸ ದಾಖಲೆ ಸೃಷ್ಟಿಸಿದ್ದು, 4ನೇ ದಿನ 10 ಮಿಲಿಯನ್ ಮಿನಿಟ್ಸ್ ರೀಚ್ ಆಗಿದೆ. ಹೊಸಬರ ಚಿತ್ರಕ್ಕೆ ಇಷ್ಟು ಒಳ್ಳೆ ರೆಸ್ಪಾನ್ಸ್ ಸಿಕ್ಕಿರುವುದು ಖುಷಿ.

‘ಬ್ಲಿಂಕ್’ ಚಿತ್ರಕ್ಕೆ ಶ್ರೀನಿಧಿ ಬೆಂಗಳೂರು ಆಕ್ಷನ್ ಕಟ್ ಹೇಳಿದ್ದಾರೆ. ರವಿಚಂದ್ರ ಎ.ಜೆ. ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ‘ದಿಯಾ’ ಖ್ಯಾತಿಯ ದೀಕ್ಷಿತ್ ಶೆಟ್ಟಿ ಅವರು ಈ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿದ್ದಾರೆ. ಚೈತ್ರಾ ಆಚಾರ್, ಗೋಪಾಲ್ ದೇಶಪಾಂಡೆ ಸೇರಿದಂತೆ ಹಲವರು ಸಿನಿಮಾದಲ್ಲಿ ನಟಿಸಿದ್ದಾರೆ.

ಶಿವರಾತ್ರಿ ಹಬ್ಬದಂದು ಸೂಪರ್ ಸ್ಟಾರ್ಸ್ ಸಿನಿಮಾಗಳ ಮಧ್ಯೆ ತೆರೆಗೆ ಬಂದ ‘ಬ್ಲಿಂಕ್’ ಸಿನಿಮಾಗೆ ಪ್ರಾರಂಭದಲ್ಲಿ ಅಷ್ಟಾಗಿ ಉತ್ತಮ ಪ್ರತಿಕ್ರಿಯೆ ಸಿಕ್ಕಿರಲಿಲ್ಲ. ಇದು ಮೂರರಲ್ಲಿ ಮತ್ತೊಂದು ಸಿನಿಮಾ ಎಂದೇ ಅಂದುಕೊಳ್ಳಲಾಗಿತ್ತು. ಆದರೆ ಆರಂಭದ ದಿನಗಳಲ್ಲಿ ಸಿನಿಮಾ ನೋಡಿದ ಪ್ರೇಕ್ಷಕರು, ಸಿನಿಮಾದ ಬಗ್ಗೆ ಮಾತನಾಡಿ ಆದ ಮೌತ್ ಪಬ್ಲಿಸಿಟಿಯಿಂದ ‘ಬ್ಲಿಂಕ್’ ಶೋಗಳು ಏರಿಕೆಯಾಗುತ್ತಾ ಹೋದವು. ಕನ್ನಡ ಸಿನಿಮಾಗಳಿಗೆ ಶೋ ಸಿಕ್ತಿಲ್ಲ ಎಂಬ ಆಪವಾದದ ನಡುವೆ 8 ಶೋಗಳಿಂದ 82 ಶೋ ಬ್ಲಿಂಕ್ ಪಾಲಾಗಿತ್ತು. ಹೀಗಾಗಿ ಶೋ ಹೆಚ್ಚಳದಿಂದ ಪ್ರೇಕ್ಷಕರ ಪ್ರೀತಿಯೂ ಪಡೆದ ಬ್ಲಿಂಕ್ ಸಿನಿಮಾ ಆಫ್ ಸೆಂಚುರಿ ಬಾರಿಸಿದೆ.

Continue Reading

ಸ್ಯಾಂಡಲ್ ವುಡ್

Daredevil Mustafa: ಪುಸ್ತಕ ರೂಪ ಪಡೆದ ʻಡೇರ್ ಡೆವಿಲ್‌ ಮುಸ್ತಾಫಾʼ ಸಿನಿಮಾ!

Daredevil Mustafa: ಕನ್ನಡದಲ್ಲಿ ಸಿನಿಮಾ ಕುರಿತ ಕೃತಿಗಳು ಕಡಿಮೆ. ಅದರಲ್ಲಿಯೂ ಕೆಲವೇ ಕೆಲವು ಚಿತ್ರಕಥೆಯ ಪುಸ್ತಕಗಳಿವೆ. ಆ ಸಾಲಿಗೀಗ ಡೇರ್ ಡೆವಿಲ್ ಮುಸ್ತಾಫಾ ಸಿನಿಮಾ ಕೂಡ ಸೇರ್ಪಡೆಯಾಗಿದೆ. ಈ ಪುಸ್ತಕದಲ್ಲಿ ಕಾಲೇಜು ದಿನಗಳನ್ನು ಮೆಲುಕು ಹಾಕುವಂತಹ ಸನ್ನಿವೇಶ. ಸಹಪಾಠಿಗಳ ನಡುವೆ ನಡೆಯುವ ಸಣ್ಣ ಪುಟ್ಟ ಜಗಳ, ಹಾಗು ಧರ್ಮಕ್ಕೂ ಮಿಗಿಲಾದದ್ದು ಫ್ರೆಂಡ್ ಶಿಪ್ ಎಂಬ ಸಾರಾಂಶವನ್ನು ಸಮಾಜಕ್ಕೆ ಸಾರುವಂತಹ ವಿಷಯದ ಜತೆಗೆ ಸಿನಿಮಾ ಆಸಕ್ತರಿಗೆ ಪಠ್ಯವಾಗಬಲ್ಲ ಪುಸ್ತಕ ಅಂದರು ತಪ್ಪಿಲ್ಲ.

VISTARANEWS.COM


on

daredevil mustafa book release
Koo

ಬೆಂಗಳೂರು: ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಸಣ್ಣ ಕಥೆ ಆಧಾರಿತ ಸಿನಿಮಾ ʻಡೇರ್ ಡೆವಿಲ್ ಮುಸ್ತಾಫಾʼ (Daredevil Mustafa) . ಕಳೆದ ವರ್ಷ ಬಿಡುಗಡೆಯಾಗಿದ್ದ ಈ ಚಿತ್ರ ಪ್ರೇಕ್ಷಕರ ಪ್ರೀತಿ ಪಡೆದಿತ್ತು. ಶಶಾಂಕ ಸೋಗಾಲ್ ನಿರ್ದೇಶನದಲ್ಲಿ ಮೂಡಿಬಂದಿದ್ದ ʻಡೇರ್ ಡೆವಿಲ್ ಮುಸ್ತಾಫಾʼ ಚಿತ್ರವೀಗ ಪುಸ್ತಕ ರೂಪ ಪಡೆದಿದೆ.

ʻಡೇರ್ ಡೆವಿಲ್ ಮುಸ್ತಾಫಾʼ ಸಿನಿಮಾಗೆ ಒಂದು ವರ್ಷ ಪೂರೈಸಿದೆ. ಈ ಹಿನ್ನೆಲೆಯಲ್ಲಿ ನಿರ್ದೇಶಕ ಶಶಾಂಕ್ ಸೋಗಾಲ್ ಚಿತ್ರಕಥೆ ಹಾಗೂ ಆಯ್ದ ವಿಮರ್ಶೆಗಳನ್ನು ಪುಸ್ತಕ ರೂಪಕ್ಕೆ ಇಳಿಸಿದ್ದಾರೆ. ಇತ್ತೀಚೆಗಷ್ಟೇ ಬೆಂಗಳೂರಿನ ಸುಚಿತ್ರ ಮತ್ತು ಸಾಂಸ್ಕೃತಿಕ ಅಕಾಡೆಮಿಯಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಿತು. ನಿರ್ದೇಶಕಿ ಕಂ ನಟಿ ಸಿಂಧು ಎಸ್ ಮೂರ್ತಿ, ನಿರ್ದೇಶಕರಾದ ಅನೂಪ್ ಭಂಡಾರಿ, ನಿತಿನ್ ಕೃಷ್ಣಮೂರ್ತಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ಇದನ್ನೂ ಓದಿ: Dare devil Mustafa: ಸದ್ದಿಲ್ಲದೇ ಒಟಿಟಿಗೆ ಬಂದೇ ಬಿಡ್ತು ʻಡೇರ್‌ಡೆವಿಲ್‌ ಮುಸ್ತಾಫಾ‌ʼ

ಪುಸ್ತಕದ ವಿಶೇಷತೆಗಳೇನು?

ಕನ್ನಡದಲ್ಲಿ ಸಿನಿಮಾ ಕುರಿತ ಕೃತಿಗಳು ಕಡಿಮೆ. ಅದರಲ್ಲಿಯೂ ಕೆಲವೇ ಕೆಲವು ಚಿತ್ರಕಥೆಯ ಪುಸ್ತಕಗಳಿವೆ. ಆ ಸಾಲಿಗೀಗ ಡೇರ್ ಡೆವಿಲ್ ಮುಸ್ತಾಫಾ ಸಿನಿಮಾ ಕೂಡ ಸೇರ್ಪಡೆಯಾಗಿದೆ. ಈ ಪುಸ್ತಕದಲ್ಲಿ ಕಾಲೇಜು ದಿನಗಳನ್ನು ಮೆಲುಕು ಹಾಕುವಂತಹ ಸನ್ನಿವೇಶ. ಸಹಪಾಠಿಗಳ ನಡುವೆ ನಡೆಯುವ ಸಣ್ಣ ಪುಟ್ಟ ಜಗಳ, ಹಾಗು ಧರ್ಮಕ್ಕೂ ಮಿಗಿಲಾದದ್ದು ಫ್ರೆಂಡ್ ಶಿಪ್ ಎಂಬ ಸಾರಾಂಶವನ್ನು ಸಮಾಜಕ್ಕೆ ಸಾರುವಂತಹ ವಿಷಯದ ಜತೆಗೆ ಸಿನಿಮಾ ಆಸಕ್ತರಿಗೆ ಪಠ್ಯವಾಗಬಲ್ಲ ಪುಸ್ತಕ ಅಂದರು ತಪ್ಪಿಲ್ಲ. ಒಂದು ಸಣ್ಣ ಕಥೆ ಎತ್ತಿಕೊಂಡು ಸ್ಕ್ರೀನ್ ಪ್ಲೇ, ಕಥೆ ಡೈಲಾಗ್ ಬರೆದು ದೃಶ್ಯ ರೂಪಕ್ಕೆ ಹೇಗೆ ಇಳಿಸಲಾಯಿತು.? ಸಣ್ಣ ಕಥೆ ಚಿತ್ರ ಕಥೆ ಆಗಿದ್ದೇಗೆ? ಕಥೆ ಸಿನಿಮಾವಾಗಿದ್ದೇಗೆ ಎಂಬ ವಿಷಯಗಳು ಈ ಪುಸ್ತಕ ಓದಿದರೆ ತಿಳಿಯುತ್ತದೆ.

ಇದನ್ನೂ ದ ಓದಿ: List of Movies Releasing: ಈ ವಾರ ಬಿಡುಗಡೆಗೆ ಸಜ್ಜಾಗಿವೆ ಈ ಸಾಲು ಸಾಲು ಸಿನಿಮಾಗಳು!

ಸಿನಿಮಾ ಮಾಧ್ಯಮದ ವಿದ್ಯಾರ್ಥಿಗಳಿಗೆ ಉಪಯುಕ್ತವಾಗುವ ಪುಸ್ತಕಗಳ ಕೊರತೆ ಇದೆ.‌ಅದರಲ್ಲಿಯೂ ಇಂಗ್ಲೀಷ್ ಭಾಷೆಯಲ್ಲಿ ಕಥೆ ಬರೆದು ಸಿನಿಮಾ ಮಾಡುವವರು ಹೆಚ್ಚಿರುವಾಗ ಕನ್ನಡದಲ್ಲಿ ಸ್ಕ್ರೀಪ್ಟ್ ಬರೆದು ಸಿನಿಮಾ ಮಾಡಿದ್ದೇವೆ ಅನ್ನೋದನ್ನು ಡೇರ್ ಡೆವಿಲ್ ಮುಸ್ತಾಫಾ ಪುಸ್ತಕದಲ್ಲಿ ಕಟ್ಟಿಕೊಡಲಾಗಿದೆ. ಕನ್ನಡದ ಸದ್ಯದ ಸಿನಿಮಾರಂಗ ಇರುವ ಪರಿಸ್ಥಿತಿಯಲ್ಲಿ ಸಿನಿಮಾ ಸೂಕ್ಷ್ಮಗಳ ಬಗ್ಗೆ ಅರಿವು ಹುಟ್ಟಿಸಬಲ್ಲ ಇಂಥ ಕೃತಿಗಳ ಅಗತ್ಯ ಖಂಡಿತ ಇದೆ.

Continue Reading

ಟಾಲಿವುಡ್

List of Movies Releasing: ಈ ವಾರ ಬಿಡುಗಡೆಗೆ ಸಜ್ಜಾಗಿವೆ ಈ ಸಾಲು ಸಾಲು ಸಿನಿಮಾಗಳು!

List of Movies Releasing: ಈ ವಾರ ಜಿ9 ಕಮ್ಯೂನಿಕೇಷನ್ ಮೀಡಿಯಾ & ಎಂಟರ್ಟೈನ್ಮೆಂಟ್ ಲಾಂಛನದಲ್ಲಿ (Kannada New Movie) ನಿರ್ಮಾಣವಾಗುತ್ತಿರುವ, ‘ಕ್ರೇಜಿಸ್ಟಾರ್’ ರವಿಚಂದ್ರನ್ ಮುಖ್ಯಪಾತ್ರದಲ್ಲಿ ನಟಿಸುತ್ತಿರುವ ‘ದಿ ಜಡ್ಜ್‌ಮೆಂಟ್’ ಸಿನಿಮಾ ತೆರೆಗೆ ಬರುತ್ತಿದೆ. ಜೂನ್ 4ಕ್ಕೆ ಲೋಕಸಭೆ ಚುನಾವಣೆ ಫಲಿತಾಂಶ ಸಹ ಹೊರ ಬೀಳಲಿದೆ. ಆ ಬಳಿಕವೇ ಚಿತ್ರರಂಗ ಸಹಜ ಸ್ಥಿತಿಗೆ ಮರಳುವ ಸಾಧ್ಯತೆಯಿದೆ. ದೊಡ್ಡ ಸಿನಿಮಾಗಳು ಅಲ್ಲದೇ ಇದ್ದರೂ ಒಂದಷ್ಟು ಸಿನಿಮಾಗಳು ಈ ವಾರ ಬಿಡುಗಡೆಗೆ ಸಜ್ಜಾಗಿವೆ. ಅವುಗಳು ಯಾವುದೆಲ್ಲ ನೋಡೋಣ!

VISTARANEWS.COM


on

List of Movies Releasing From may 24
Koo

ಬೆಂಗಳೂರು: ಐಪಿಎಲ್‌, ಲೋಕಸಭಾ ಎಲೆಕ್ಷನ್‌ನಿಂದಾಗಿ ಕನ್ನಡ ಸಿನಿಮಾಗಳು (List of Movies Releasing) ಪ್ರೇಕ್ಷಕರ ಮುಂದೆ ಬಂದಿಲ್ಲ. ಜೂನ್ 4ಕ್ಕೆ ಲೋಕಸಭೆ ಚುನಾವಣೆ ಫಲಿತಾಂಶ ಸಹ ಹೊರ ಬೀಳಲಿದೆ. ಆ ಬಳಿಕವೇ ಚಿತ್ರರಂಗ ಸಹಜ ಸ್ಥಿತಿಗೆ ಮರಳುವ ಸಾಧ್ಯತೆಯಿದೆ. ದೊಡ್ಡ ಸಿನಿಮಾಗಳು ಅಲ್ಲದೇ ಇದ್ದರೂ ಒಂದಷ್ಟು ಸಿನಿಮಾಗಳು ಈ ವಾರ ಬಿಡುಗಡೆಗೆ ಸಜ್ಜಾಗಿವೆ. ಅವುಗಳು ಯಾವುದೆಲ್ಲ ನೋಡೋಣ…

‘ದಿ ಜಡ್ಜ್‌ಮೆಂಟ್’

ಜಿ9 ಕಮ್ಯೂನಿಕೇಷನ್ ಮೀಡಿಯಾ & ಎಂಟರ್ಟೈನ್ಮೆಂಟ್ ಲಾಂಛನದಲ್ಲಿ (tKannada New Movie) ನಿರ್ಮಾಣವಾಗುತ್ತಿರುವ, ‘ಕ್ರೇಜಿಸ್ಟಾರ್’ ರವಿಚಂದ್ರನ್ ಮುಖ್ಯಪಾತ್ರದಲ್ಲಿ ನಟಿಸುತ್ತಿರುವ ‘ದಿ ಜಡ್ಜ್‌ಮೆಂಟ್’ ಚಿತ್ರದಲ್ಲಿ ದಿಗಂತ್‌ ಕಾಣಿಸಿಕೊಳ್ಳುತ್ತಿದ್ದಾರೆ. ಗುರುರಾಜ್ ಕುಲಕರ್ಣಿ ನಿರ್ದೇಶನದ ‘ದಿ ಜಡ್ಜ್‌ಮೆಂಟ್’ ಸಿನಿಮಾ ಈ ವಾರ ತೆರೆಗೆ ಬರ್ತಿದೆ.ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಕೆಂಪರಾಜು ಬಿ ಎಸ್ ಸಂಕಲನ‌, ಪ್ರಮೋದ್ ಮರವಂತೆ ಈ ಚಿತ್ರದ ಹಾಡುಗಳನ್ನು ರಚಿಸಿದ್ದಾರೆ. ಎಂ ಎಸ್ ರಮೇಶ್ ಸಂಭಾಷಣೆ ಬರೆದಿದ್ದಾರೆ. ಡಾ. ರವಿ ವರ್ಮ ಸಾಹಸ ನಿರ್ದೇಶನ, ರೂಪೇಂದ್ರ ಆಚಾರ್ ಅವರ ಕಲಾ ನಿರ್ದೇಶನ ‘ದ ಜಡ್ಜ್ ಮೆಂಟ್’ ಚಿತ್ರಕ್ಕಿದೆ.

ಇದನ್ನೂ ಓದಿ: Actress Murder: ‘ಭಜರಂಗಿ’ ಸಿನಿಮಾ ನಟಿ ಗಂಡನಿಂದಲೇ ಭೀಕರ ಕೊಲೆ!

ಮೂರನೇ ಕೃಷ್ಣಪ್ಪ

ವಿಭಿನ್ನ ಕಥಾನಕದ ಮೂಲಕವೇ ಪ್ರೇಕ್ಷಕರನ್ನು ಮುಖಾಮುಖಿಯಾಗಲು ಹೊರಟಿರುವ ಸಿನಿಮಾ ʻಮೂರನೇ ಕೃಷ್ಣಪ್ಪʼ. ಲೂಸ್ ಮಾದ ಯೋಗಿ (Kannada New Movie) ಸಂಭಾಷಣೆಯಿಂದ ಶುರುವಾಗುವ ಟ್ರೈಲರ್‌ನಲ್ಲಿ ಕೋಲಾರ‌ ಕನ್ನಡ‌ , ರಂಗಾಯಣ ರಘು, ಸಂಪತ್ ಮೈತ್ರಿಯಾಯಂತಹ ಅದ್ಭುತ ಕಲಾವಿದರ ಅಭಿನಯ ಗಮನ ಸೆಳೆಯುತ್ತದೆ. ಹಳ್ಳಿ ಸೊಗಡನ್ನು ಸೊಗಸಾಗಿ ಕಟ್ಟಿಕೊಡಲಾಗಿದೆ. ಟ್ರೇಲರ್ ಪ್ರಾಮಿಸಿಂಗ್ ಆಗಿದ್ದು, ಸಿನಿಪ್ರಿಯರಿಗೆ ಮನರಂಜನೆ ಗ್ಯಾರಂಟಿ ಎಂಬ ಸಂದೇಶ ರವಾನಿಸಿದೆ. ರೆಡ್ ಡ್ರ್ಯಾಗನ್ ಫಿಲಂಸ್ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ‘ಮೂರನೇ ಕೃಷ್ಣಪ್ಪ’ ಸಿನಿಮಾಗೆ ಮೋಹನ್ ರೆಡ್ಡಿ ಜಿ, ರವಿಶಂಕರ್ ಹಣ ಹೂಡಿದ್ದಾರೆ. ಆನೇಕಲ್ ಭಾಗದ ಭಾಷೆಯ ಸೊಬಗನ್ನು ಇಟ್ಟುಕೊಂಡು ಈ ಸಿನಿಮಾದ ಕಥೆಯನ್ನು ಹೆಣೆಯಲಾಗಿದೆ. ಸಂಪತ್ ಮೈತ್ರೀಯಾ ನಾಯಕನಾಗಿ ನಟಿಸುತ್ತಿದ್ದರೆ, ಪ್ರಮುಖ ಪಾತ್ರದಲ್ಲಿ ರಂಗಾಯಣ ರಘು ಕಾಣಿಸಿಕೊಂಡಿದ್ದಾರೆ. ಶ್ರೀಪ್ರಿಯಾ ನಾಯಕಿಯಾಗಿದ್ದಾರೆ. ಮೇ 24ಕ್ಕೆ ಮೂರನೇ ಕೃಷ್ಣಪ್ಪನ ಕಥೆ ತೆರೆಗೆ ಬರಲಿದೆ.

3ದೇವಿ

3ದೇವಿ ಅಶ್ವಿನ್ ಮ್ಯಾಥ್ಯೂ ನಿರ್ದೇಶನದ 3ದೇವಿ ಸಿನಿಮಾ ಕೂಡ ಈ ವಾರವೇ ಪ್ರೇಕ್ಷಕರ ಮುಂದೆ ಬರಲಿದೆ. ಮೊಗ್ಗಿನ ಮನಸ್ಸಿನ ಶುಭಾ ಪೂಂಜಾ (Shubha Poonja) ದೇವಿ ರೂಪದಲ್ಲಿಯೇ ಅಭಿನಯಿಸಿದ್ದಾರೆ. ಸಂಧ್ಯಾ ಮತ್ತು ಜ್ಯೋತ್ಸ್ನಾ ತಾರಾಗಣದಲ್ಲಿದ್ದಾರೆ.

ಎವಿಡೆನ್ಸ್

ಸಿ. ಪಿ ಪ್ರವೀಣ್ ನಿರ್ದೇಶನದ ‘ಎವಿಡೆನ್ಸ್’ ಚಿತ್ರ ಇದೇ ಶುಕ್ರವಾರ ತೆರೆ ಕಾಣುತ್ತಿದೆ. ʼಮಂಗಳಗೌರಿ ಮದುವೆ’ ಸೇರಿ ಅನೇಕ ಧಾರಾವಾಹಿಗಳಲ್ಲಿ ಬಣ್ಣ ಹಚ್ಚಿರುವ, ಅದರಲ್ಲಿಯೂ ದೇವಿ ಪಾತ್ರದಲ್ಲಿ ಹೆಚ್ಚು ಕಾಣಿಸಿಕೊಂಡಿರುವ ನಟಿ ಮಾನಸಾ ಜೋಶಿ ಅವರು ಈ ಬಾರಿ ‘ಎವಿಡೆನ್ಸ್’ ಎನ್ನುವ ಸಿನಿಮಾದಲ್ಲಿ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ. ಈ 3 ಚಿತ್ರಗಳ ಜೊತೆಗೆ ‘ಸೆಲ್ಯೂಟ್’ ಎನ್ನುವ ಮತ್ತೊಂದು ಕನ್ನಡ ಸಿನಿಮಾ ತೆರೆಗೆ ಬರಲಿದೆ.

ಟರ್ಬೋ

ಮಮ್ಮುಟ್ಟಿ (Mammootty) ಅವರು ಈ ಹಿಂದೆ ಘೋಷಿಸಿದ ಮೂರು ಸಿನಿಮಾಗಳ ಬಿಡುಗಡೆಗಳಲ್ಲಿ ʻಟರ್ಬೋʼ (Turbo Trailer Out) ಕೂಡ ಒಂದು. ರಾಜ್ ಬಿ ಶೆಟ್ಟಿ (Raj B Shetty) ಮತ್ತು ತೆಲುಗು ನಟ ಸುನೀಲ್ ಕೂಡ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಇಲ್ಲಿ ರಾಜ್‌ ಬಿ ಶೆಟ್ಟಿ ಅವರದ್ದು ಸಣ್ಣ ಪಾತ್ರ ಏನಲ್ಲ. ಮಮ್ಮುಟಿಗೆ ಪೈಪೋಟಿ ಕೊಡುವಂತಿದೆ. ಟರ್ಬೊ’ ಸಿನಿಮಾ ನಿರ್ದೇಶಕ ವೈಶಾಖ್ ಜತೆ ಇದು ಮೂರನೇ ಬಾರಿ ಮಮ್ಮುಟ್ಟಿ ಜತೆ ಕೈ ಜೋಡಿಸುತ್ತಿದ್ದಾರೆ. ಪೊಕ್ಕಿರಿ ರಾಜ ಮತ್ತು ಮಧುರ ರಾಜ ಸಿನಿಮಾಗಳ ಬಳಿಕ ಮಮ್ಮುಟ್ಟಿಯವರ ಮೂರನೇ ಚಿತ್ರವಾಗಿದೆ.

ಇದನ್ನೂ ಓದಿ: Dina Bhavishya : ಈ ರಾಶಿಯವರು ಯಾರೊಂದಿಗೂ ದಿನದ ಮಟ್ಟಿಗೆ ಹಣಕಾಸಿನ ವ್ಯವಹಾರ ಮಾಡಬೇಡಿ

ಚಲನಚಿತ್ರ ನಿರ್ಮಾಪಕ ಮಿಧುನ್ ಮ್ಯಾನುಯೆಲ್ ಥಾಮಸ್ ಬರೆದ ಚಿತ್ರಕಥೆಯನ್ನು ಈ ಸಿನಿಮಾ ಆಧರಿಸಿದೆ. ಇದು ಆ್ಯಕ್ಷನ್ ಕಾಮಿಡಿ ಎಂದು ಹೇಳಲಾಗುತ್ತದೆ. ಸಿನಿಮಾದಲ್ಲಿ ಮಮ್ಮುಟ್ಟಿಗೆ ನಾಯಕಿಯಾಗಿ ನಟಿ ಜ್ಯೋತಿಕಾ ಕಾಣಿಸಿಕೊಂಡಿದ್ದು, ಒಂದು ದಶಕದ ಬಳಿಕ ಮಲಯಾಳಂ ಚಿತ್ರರಂಗಕ್ಕೆ ಹಿಂತಿರುಗಿದ್ದಾರೆ.ಇದೊಂದು ಆಕ್ಷನ್ ಕಾಮಿಡಿ ಎಂಟರ್‌ಟೈನರ್ ಆಗಿದ್ದು ಮೇ 23ಕ್ಕೆ ತೆರೆಗೆ ಬರಲಿದೆ. ಆಟೋ ಬಿಲ್ಲ ಆಗಿ ತೆಲುಗು ನಟ ಸುನೀಲ್ ಕೂಡ ಕಾಣಿಸಿಕೊಂಡಿದ್ದಾರೆ. ಅಂಜನಾ ಜಯಪ್ರಕಾಶ್, ಕಬೀರ್ ದುಹಾನ್ ಸಿಂಗ್, ಸಿದ್ದಿಕಿ ಸೇರಿದಂತೆ ದೊಡ್ಡ ತಾರಾಗಣ ‘ಟರ್ಬೋ’ ಚಿತ್ರದಲ್ಲಿದೆ. ವಿಷ್ಣು ಶರ್ಮಾ ಛಾಯಾಗ್ರಹಣ, ಕ್ರಿಸ್ಟೋ ಕ್ಸೇವಿಯರ್ ಸಂಗೀತ ಚಿತ್ರಕ್ಕಿದೆ.

Continue Reading

ಸ್ಯಾಂಡಲ್ ವುಡ್

Rishab shetty: ಹರಿಹರಪುರ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಕುಟುಂಬದ ಭೇಟಿ: ನರಸಿಂಹಸ್ವಾಮಿಯ ದರ್ಶನ ಪಡೆದ ಡಿವೈನ್‌ ಸ್ಟಾರ್‌!

Rishab shetty: ರಾಜ್ಯದ ಪ್ರಸಿದ್ಧ ಪ್ರವಾಸಿ ಜಿಲ್ಲೆಗಳಲ್ಲೊಂದಾದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿರುವ ಹರಿಹರಪುರ ಕ್ಷೇತ್ರಕ್ಕೆ ಪೌರಾಣಿಕ (Rishab shetty) ಮಹತ್ವವಿದೆ.ಇದೀಗ ಹರಿಹರಪುರ ಕ್ಷೇತ್ರಕ್ಕೆ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ಪತ್ನಿ ಮಗ, ಮಗಳ ಜತೆ ಕುಟುಂಬ ಸಮೇತರಾಗಿ ಭೇಟಿ ಕೊಟ್ಟಿದ್ದಾರೆ.ತುಂಗಾ ನದಿ ತಟದಲ್ಲಿರುವ ಇತಿಹಾಸ ಪ್ರಸಿದ್ಧ ದೇಗುಲ ಇದಾಗಿದೆ. ಮಠದ ಆವರಣದ ಆಂಜನೇಯನ ಬಳಿ ಅಭಿಮಾನಿಗಳ ಜತೆ ರಿಷಬ್‌ ಫೋಟೊ ಕ್ಲಿಕ್ಕಿಸಿಕೊಂಡರು.

VISTARANEWS.COM


on

Rishab shetty family visit Hariharpur Narasimhaswamy
Koo

ರಾಜ್ಯದ ಪ್ರಸಿದ್ಧ ಪ್ರವಾಸಿ ಜಿಲ್ಲೆಗಳಲ್ಲೊಂದಾದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿರುವ ಹರಿಹರಪುರ ಕ್ಷೇತ್ರಕ್ಕೆ ಪೌರಾಣಿಕ (Rishab shetty) ಮಹತ್ವವಿದೆ.

ಇದೀಗ ಹರಿಹರಪುರ ಕ್ಷೇತ್ರಕ್ಕೆ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ಪತ್ನಿ ಮಗ, ಮಗಳ ಜತೆ ಕುಟುಂಬ ಸಮೇತರಾಗಿ ಭೇಟಿ ಕೊಟ್ಟಿದ್ದಾರೆ.

ರಿಷಬ್ ದಂಪತಿ ಶಾರದಾ ಲಕ್ಷ್ಮಿ ನರಸಿಂಹಸ್ವಾಮಿಯ ದರ್ಶನ ಪಡೆದರು. ಜತೆಗೆ ಹರಿಹರಪುರದ ಶ್ರೀ ಸ್ವಯಂ ಸಚ್ಚಿದಾನಂದ ಶ್ರೀಗಳ ಆಶೀರ್ವಾದ ಪಡೆದರು.

ಇದನ್ನೂ ಓದಿ: Actress Murder: ‘ಭಜರಂಗಿ’ ಸಿನಿಮಾ ನಟಿ ಗಂಡನಿಂದಲೇ ಭೀಕರ ಕೊಲೆ!

ತುಂಗಾ ನದಿ ತಟದಲ್ಲಿರುವ ಇತಿಹಾಸ ಪ್ರಸಿದ್ಧ ದೇಗುಲ ಇದಾಗಿದೆ. ಮಠದ ಆವರಣದ ಆಂಜನೇಯನ ಬಳಿ ಅಭಿಮಾನಿಗಳ ಜತೆ ರಿಷಬ್‌ ಫೋಟೊ ಕ್ಲಿಕ್ಕಿಸಿಕೊಂಡರು.

ಸ್ಕಂದ ಪುರಾಣದಲ್ಲಿ ಉಲ್ಲೇಖಿಸಿರುವಂತೆ ಇಲ್ಲಿ ದಕ್ಷಯಜ್ಞ ನಡೆದಿತ್ತಂತೆ. ಆಗ ಪರಶಿವನು ಯಜ್ಞಕುಂಡದಲ್ಲಿ ಆವಿರ್ಭವಿಸಿ ಸಮಸ್ತ ಭಕ್ತರನ್ನು ಅನುಗ್ರಹಿಸಿದನಂತೆ. ಇಂದಿಗೂ ದಕ್ಷಹರ ಸೋಮೇಶ್ವರನ ದೇವಸ್ಥಾನವು ಹರಿಹರಪುರದಲ್ಲಿದೆ. 

Continue Reading
Advertisement
IPL 2024
ಕ್ರೀಡೆ2 hours ago

IPL 2024 : 17 ವರ್ಷ ಕಾದರೂ ಟ್ರೋಫಿ ಇಲ್ಲ: ಆರ್​ಸಿಬಿ ಅಭಿಮಾನಿಗಳ ಕಾಯುವಿಕೆ ನಿರಂತರ

Karnataka police
ಪ್ರಮುಖ ಸುದ್ದಿ2 hours ago

ವಿಸ್ತಾರ ಸಂಪಾದಕೀಯ: ಒಂದು ಕಡೆ ಸರಣಿ ಕೊಲೆ, ಇನ್ನೊಂದೆಡೆ ಪೊಲೀಸರ ಬೀದಿ ಸುಲಿಗೆ!

Harish Poonja
ಕರ್ನಾಟಕ3 hours ago

Harish Poonja: ವಿಚಾರಣೆ ಮುಗಿಸಿ ಠಾಣೆಯಿಂದ ಹೊರಬಂದ ಶಾಸಕ ಹರೀಶ್‌ ಪೂಂಜಾ

IPL 2024
ಕ್ರೀಡೆ3 hours ago

IPL 2024 : ಐಪಿಎಲ್​ 17ನೇ ಆವೃತ್ತಿಯಲ್ಲಿ ಆರ್​ಸಿಬಿ ಅಭಿಯಾನ ಅಂತ್ಯ; ರಾಜಸ್ಥಾನ್​ 2ನೇ ಕ್ವಾಲಿಫೈಯರ್​ಗೆ

IPL 2024
ಪ್ರಮುಖ ಸುದ್ದಿ4 hours ago

IPL 2024 : ದಿನೇಶ್​ ಕಾರ್ತಿಕ್​ ಔಟಾ; ನಾಟೌಟಾ? ಮತ್ತೊಂದು ಅಂಪೈರಿಂಗ್ ವಿವಾದ

Mother Dies
ಕರ್ನಾಟಕ4 hours ago

Mother Dies: ಅವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ ಸಾವು; 35 ಲಕ್ಷ ಬಿಲ್‌ ಕಟ್ಟಿ ಮೃತದೇಹ ತೆಗೆದುಕೊಳ್ಳಿ ಎಂದ ಆಸ್ಪತ್ರೆ!

young womans lover was stabbed in the neck by an ex lover
ಉತ್ತರ ಕನ್ನಡ4 hours ago

Assault Case: ಯುವತಿಯ ಪ್ರಿಯಕರನ ಕುತ್ತಿಗೆಗೆ ಚಾಕುವಿನಿಂದ ಇರಿದ ಮಾಜಿ ಪ್ರಿಯಕರ!

IPL 2024
ಪ್ರಮುಖ ಸುದ್ದಿ4 hours ago

Yuzvendra Chahal : ರಾಜಸ್ಥಾನ್​ ರಾಯಲ್ಸ್​ ಪರ ವಿಕೆಟ್​ ಗಳಿಕೆಯಲ್ಲಿ ಹೊಸ ದಾಖಲೆ ಬರೆದ ಯಜ್ವೇಂದ್ರ ಚಹಲ್​

Pune porsche car crash
ದೇಶ5 hours ago

Pune porsche car crash : ಕುಡಿದು ಕಾರು ಚಲಾಯಿಸಿ ಇಬ್ಬರ ಸಾವಿಗೆ ಕಾರಣನಾದ ಬಾಲಕನ ಜಾಮೀನು ವಜಾ

Kalki 2898 AD
ಪ್ರಮುಖ ಸುದ್ದಿ5 hours ago

Kalki 2898 AD: ಕಲ್ಕಿ ಚಿತ್ರದ ʼಬುಜ್ಜಿʼ ಪಾತ್ರ ರಿವೀಲ್; ಅದ್ಧೂರಿ ಕಾರ್ಯಕ್ರಮದ LIVE ವಿಡಿಯೊ ಇಲ್ಲಿದೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ20 hours ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು2 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ3 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ3 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ5 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ6 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

ಟ್ರೆಂಡಿಂಗ್‌