Savarkar Movie Collection: ಬಾಲಿವುಡ್‌ ಚಿತ್ರ ‘ಸ್ವತಂತ್ರ ವೀರ್ ಸಾವರ್ಕರ್’ನ ಕಲೆಕ್ಷನ್‌ನಲ್ಲಿ ಚೇತರಿಕೆ; ಮೂರು ದಿನಗಳ ಗಳಿಕೆ ಎಷ್ಟು? - Vistara News

ಸಿನಿಮಾ

Savarkar Movie Collection: ಬಾಲಿವುಡ್‌ ಚಿತ್ರ ‘ಸ್ವತಂತ್ರ ವೀರ್ ಸಾವರ್ಕರ್’ನ ಕಲೆಕ್ಷನ್‌ನಲ್ಲಿ ಚೇತರಿಕೆ; ಮೂರು ದಿನಗಳ ಗಳಿಕೆ ಎಷ್ಟು?

Savarkar Movie Collection: ಈ ವರ್ಷದ ಬಹು ನಿರೀಕ್ಷಿತ ಬಾಲಿವುಡ್‌ ಚಿತ್ರಗಳಲ್ಲಿ ಒಂದಾದ ‘ಸ್ವತಂತ್ರ ವೀರ್ ಸಾವರ್ಕರ್’  ತೆರೆ ಕಂಡಿದೆ. ಮೊದಲ ದಿನ ಸಾಧಾರಣ ಗಳಿಕೆ ಕಂಡಿದ್ದ ಈ ಸಿನಿಮಾ ಇದೀಗ ಬಾಕ್ಸ್‌ ಆಫೀಸ್‌ನಲ್ಲಿ ಚೇತರಿಸಿಕೊಳ್ಳುತ್ತಿದೆ.

VISTARANEWS.COM


on

Savarkar Movie Collection
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಈ ವರ್ಷದ ಬಾಲಿವುಡ್‌ನ ಬಹು ನಿರೀಕ್ಷಿತ ಚಿತ್ರಗಳ ಪೈಕಿ ಒಂದಾದ ‘ಸ್ವತಂತ್ರ ವೀರ್ ಸಾವರ್ಕರ್’ (Swatantrya Veer Savarkar) ಮಾರ್ಚ್‌ 22ರಂದು ತೆರೆ ಕಂಡಿದೆ. ಹಿಂದಿ ಮತ್ತು ಮರಾಠಿಯಲ್ಲಿ ಬಿಡುಗಡೆಯಾಗಿರುವ ಈ ಸಿನಿಮಾ ಸ್ವಾತಂತ್ರ್ಯ ಹೋರಾಟಗಾರ ವಿನಾಯಕ್​ ದಾಮೋದರ್​ ಸಾವರ್ಕರ್​ (Vinayak Damodar Savarkar) ಅವರ ಜೀವನದ ಮೇಲೆ ಬೆಳಕು ಚೆಲ್ಲುತ್ತದೆ. ಈ ಚಿತ್ರವನ್ನು ಬಾಲಿವುಡ್‌ ನಟ ರಣದೀಪ್ ಹೂಡಾ (Randeep Hooda) ನಿರ್ದೇಶಿಸುವ ಜತೆಗೆ ನಾಯಕನಾಗಿಯೂ ಅಭಿನಯಿಸಿದ್ದಾರೆ. ಮೊದಲ ದಿನ ಬಾಕ್ಸ್‌ ಆಫೀಸ್‌ನಲ್ಲಿ ಸಾಧಾರಣ ಕಲೆಕ್ಷನ್‌ ಮಾಡಿದ್ದ ಈ ಚಿತ್ರ ಇದುವರೆಗೆ ಗಳಿಸಿದ್ದೆಷ್ಟು? ಇಲ್ಲಿದೆ ವಿವರ.

ಮೂರು ದಿನಗಳ ಕಲೆಕ್ಷನ್‌ ಎಷ್ಟು?

‘ಸ್ವತಂತ್ರ ವೀರ್ ಸಾವರ್ಕರ್’ (Swatantra Veer Savarkar) ಮೂರು ದಿನಗಳಲ್ಲಿ ಭಾರತದಲ್ಲಿ ಸುಮಾರು 6 ಕೋಟಿ ರೂ. ಗಳಿಸಿದೆ. ಮೊದಲ ದಿನ ಕೇವಲ 1.15 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ್ದ ಈ ಸಿನಿಮಾ ಕಲೆಕ್ಷನ್‌ ಶನಿವಾರ ಮತ್ತು ಭಾನುವಾರ ವೃದ್ಧಿಸಿದೆ. ಎರಡನೇ ದಿನ (ಮಾರ್ಚ್‌ 23) ಸುಮಾರು 2.25 ಕೋಟಿ ರೂ. ಮತ್ತು ಮೂರನೇ ದಿನವಾದ ಭಾನುವಾರ (ಮಾರ್ಚ್‌ 24) 2.60 ಕೋಟಿ ರೂ. ಕಲೆಕ್ಷನ್‌ ಮಾಡುವ ಮೂಲಕ ಚಿತ್ರ ತುಸು ಚೇತರಿಕೆ ಕಂಡಿದೆ. ಇಂದು (ಮಾರ್ಚ್‌ 25) ಹೋಳಿಯ ಹಿನ್ನೆಲೆಯಲ್ಲಿ ಕೆಲವು ಕಡೆಗಳಲ್ಲಿ ರಜೆ ಇರುವುದರಿಂದ ಚಿತ್ರ ಉತ್ತಮ ಗಳಿಕೆ ಮಾಡಲಿದೆ ಎನ್ನುವ ವಿಶ್ವಾಸದಲ್ಲಿದೆ ಚಿತ್ರ ತಂಡ.

ಕಲಾವಿದರಾದ ಅಂಕಿತಾ ಲೋಖಂಡೆ, ಅಮಿತ್‌ ಸಿಯಾಲ್‌, ರಾಕೇಶ್‌ ಚತುರ್ವೇದಿ, ಲೋಕೇಶ್‌ ಮಿತ್ತಲ್‌ ಮತ್ತಿತರರು ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ಮಹಾತ್ಮ ಗಾಂಧಿ, ಬಾಲ ಗಂಗಾಧರ್​ ತಿಲಕ್​, ಡಾ. ಬಿ.ಆರ್​.ಅಂಬೇಡ್ಕರ್​, ಸುಭಾಷ್​ ಚಂದ್ರ ಬೋಸ್​, ಜವಹರ್​ ಲಾಲ್​ ನೆಹರೂ, ಭಗತ್​ ಸಿಂಗ್​ ಸೇರಿದಂತೆ ಹಲವು ನೈಜ ಪಾತ್ರಗಳು ‘ಸ್ವಾತಂತ್ರ್ಯ ವೀರ ಸಾವರ್ಕರ್​’ ಸಿನಿಮಾದಲ್ಲಿವೆ. ಕೆಲವು ದಿನಗಳ ಹಿಂದೆ ಈ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿ ಗಮನ ಸೆಳೆದಿತ್ತು.

ಅಲ್ಲದೆ ವಿನಾಯಕ್​ ದಾಮೋದರ್​ ಸಾವರ್ಕರ್​ ಪಾತ್ರ ನಿರ್ವಹಿಸಲು ರಣದೀಪ್‌ ಹೂಡಾ (Randeep Hooda) ಸುಮಾರು 30 ಕೆಜಿ ಕಳೆದುಕೊಳ್ಳುವ ಮೂಲಕ ಗಮನ ಸೆಳೆದಿದ್ದರು. ಕಟ್ಟುಮಸ್ತಾದ ಶರೀರ ಹೊಂದಿದ್ದ ರಣದೀಪ್​ ಹೂಡಾ ಅವರು ಸಾವರ್ಕರ್​ ಪಾತ್ರಕ್ಕಾಗಿ ಸಿಕ್ಕಾಪಟ್ಟೆ ತೆಳ್ಳಗಾಗಿದ್ದರು. ಎದೆಗೂಡಿನ ಮೂಳೆಗಳು ಕಾಣುವ ರೀತಿಯಲ್ಲಿ ಫೋಸ್‌​ ನೀಡಿದ್ದ ಫೋಟೊ ಇತ್ತೀಚೆಗೆ ವೈರಲ್‌ ಆಗಿತ್ತು.

ಇದನ್ನೂ ಓದಿ: Randeep Hooda: ಮಣಿಪುರದ ಮೈತಿ ಪದ್ಧತಿಯಂತೆ ವಿವಾಹವಾದ ಸ್ಟಾರ್‌ ನಟ; ಏನಿದರ ವಿಶೇಷ?

ಈ ಮಧ್ಯೆ ರಣದೀಪ್‌ ಹೂಡಾ (Randeep Hooda) ಅವರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದು, ಬಿಜೆಪಿ ಅವರಿಗೆ ಟಿಕೆಟ್‌ ನೀಡಲಿದೆ. ಹರಿಯಾಣದ ರೋಹ್ಟಕ್‌ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಯಿಂದ ರಣದೀಪ್‌ ಹೂಡಾ ಅವರು ಸ್ಪರ್ಧಿಸಲಿದ್ದಾರೆ ಎನ್ನಲಾಗುತ್ತಿದೆ. ಜತೆಗೆ ಬಿಜೆಪಿ ಹಿಮಾಚಲ ಪ್ರದೇಶದಲ್ಲಿ ನಟಿ ಕಂಗನಾ ರಣಾವತ್‌ ಅವರಿಗೆ ಟಿಕೆಟ್‌ ನೀಡಿದ್ದು, ರಣದೀಪ್‌ ಹೂಡಾ ಅವರಿಗೂ ಪಕ್ಕಾ ಎನ್ನಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Shiva Rajkumar: ಸೆಟ್ಟೇರಿತು ಶಿವರಾಜ್‌ಕುಮಾರ್‌ – ಆರ್ ಚಂದ್ರು ಕಾಂಬಿನೇಷನ್‌ನ ಹೊಸ ಸಿನಿಮಾ!

Shiva Rajkumar: ಶಾಸಕ ಪ್ರದೀಪ್ ಈಶ್ವರ್, ರಾಜಕೀಯ ಮುಖಂಡ ಎಚ್.ಎಂ. ರೇವಣ್ಣ, ನಿರ್ಮಾಪಕ ಕೆ.ಪಿ. ಶ್ರೀಕಾಂತ್, ನಿರ್ದೇಶಕ ಚೇತನ್ ಕುಮಾರ್, ಮಂಜುನಾಥ್, ಮಮತಾ ದೇವರಾಜ್ ಮುಂತಾದವರು ಮುಹೂರ್ತ ಸಮಾರಂಭದಲ್ಲಿ ಹಾಜರಿದ್ದು ‘ಫಾದರ್​’ ಚಿತ್ರತಂಡಕ್ಕೆ ಶುಭ ಹಾರೈಸಿದರು. ʻಶ್ರೀರಾಮಬಾಣʼ, ʻಫಾದರ್ʼ, ʻPOKʼ, ʻಡಾಗ್ʼ ಹಾಗೂ ಕಬ್ಜ-2 ಟೈಟಲ್ ಘೋಷಣೆಯಾಗಿತ್ತು.

VISTARANEWS.COM


on

Shiva Rajkumar Graces Muhurtha Of Father Kannada Movie
Koo

ಬೆಂಗಳೂರು: ಸ್ಯಾಂಡಲ್‌ವುಡ್‌ ಹ್ಯಾಟ್ರಿಕ್‌ ಹೀರೊ ಶಿವರಾಜ್‌ಕುಮಾರ್‌ (Shiva Rajkumar) ಹಾಗೂ ಆರ್ ಚಂದ್ರು ಕಾಂಬಿನೇಷನ್‌ನಲ್ಲಿ ಹೊಸ ಸಿನಿಮಾ ಘೋಷಣೆ ಆಗಿರುವುದು ಗೊತ್ತೇ ಇದೆ. ಆರ್​ ಚಂದ್ರು (R Chandru) ಅವರು ಇತ್ತೀಚೆಗೆ ‘ಆರ್​ಸಿ ಸ್ಟುಡಿಯೊ’ ಆರಂಭಿಸಿ ಐದು ಸಿನಿಮಾಗಳನ್ನು ಘೋಷಣೆ ಮಾಡಿದ್ದರು. ಈಗ ಆ ಐದು ಸಿನಿಮಾಗಳಲ್ಲಿ ಮೊದಲ ಚಿತ್ರವಾಗಿ ‘ಡಾರ್ಲಿಂಗ್’ ಕೃಷ್ಣ ನಟನೆಯ ‘ಫಾದರ್’ ಸಿನಿಮಾ (Father Kannada Movie) ಸೆಟ್ಟೇರಿದೆ. ಬೆಂಗಳೂರಿನ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಈ ಸಿನಿಮಾದ ಮುಹೂರ್ತ ನಡೆಯಿತು. ಭಾರತೀಯ ಚಿತ್ರರಂಗದಲ್ಲೇ ಹೊಸ ಮೈಲುಗಲ್ಲು ಸೃಷ್ಟಿಸಿದ ನಿರ್ದೇಶಕ ಆರ್ ಚಂದ್ರು ಅವರು ಆರ್ ಸಿ ಪ್ರೊಡಕ್ಷನ್ ನಡಿ ಐದು ಪ್ಯಾನ್ ಇಂಡಿಯಾ ಸಿನಿಮಾಗಳನ್ನು ಘೋಷಣೆ ಮಾಡಿದ್ದರು. ʻಶ್ರೀರಾಮಬಾಣʼ, ʻಫಾದರ್ʼ, ʻPOKʼ, ʻಡಾಗ್ʼ ಹಾಗೂ ಕಬ್ಜ-2 ಟೈಟಲ್ ಘೋಷಣೆಯಾಗಿತ್ತು.

ಶಾಸಕ ಪ್ರದೀಪ್ ಈಶ್ವರ್, ರಾಜಕೀಯ ಮುಖಂಡ ಎಚ್.ಎಂ. ರೇವಣ್ಣ, ನಿರ್ಮಾಪಕ ಕೆ.ಪಿ. ಶ್ರೀಕಾಂತ್, ನಿರ್ದೇಶಕ ಚೇತನ್ ಕುಮಾರ್, ಮಂಜುನಾಥ್, ಮಮತಾ ದೇವರಾಜ್ ಮುಂತಾದವರು ಮುಹೂರ್ತ ಸಮಾರಂಭದಲ್ಲಿ ಹಾಜರಿದ್ದು ‘ಫಾದರ್​’ ಚಿತ್ರತಂಡಕ್ಕೆ ಶುಭ ಹಾರೈಸಿದರು

ಶಿವರಾಜ್​ಕುಮಾರ್​ ನಟಿಸಿದ್ದ ‘ಭೈರಾಗಿ’ ಸಿನಿಮಾಗೆ ಸಹ-ನಿರ್ದೇಶಕರಾಗಿ ಕೆಲಸ ಮಾಡಿದ್ದ ರಾಜ್ ಮೋಹನ್ ಅವರು ಈಗ ‘ಫಾದರ್​’ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಡಾರ್ಲಿಂಗ್ ಕೃಷ್ಣ ನಾಯಕರಾಗಿದ್ದು, ಅವರಿಗೆ ಅಮೃತಾ ಅಯ್ಯಂಗಾರ್ ಜೋಡಿ ಆಗಿದ್ದಾರೆ. ಪ್ರಕಾಶ್ ರೈ, ಸುನೀಲ್ ಸೇರಿದಂತೆ ಅನೇಕ ಪ್ರತಿಭಾವಂತ ಕಲಾವಿದರು ಈ ಸಿನಿಮಾದಲ್ಲಿ ನಟಿಸಲಿದ್ದಾರೆ. ಬಾಲಿವುಡ್​ ನಿರ್ಮಾಪಕ ಆನಂದ್ ಪಂಡಿತ್ ಈ ಸಿನಿಮಾವನ್ನು ಅರ್ಪಿಸುತ್ತಿದ್ದಾರೆ. ‘ಹನುಮಾನ್’ ಸಿನಿಮಾದ ಖ್ಯಾತಿಯ ಹರಿ ಅವರು ಸಂಗೀತ ನೀಡುತ್ತಿದ್ದಾರೆ ಎಂದು ಆರ್. ಚಂದ್ರು ಮಾಹಿತಿ ಹಂಚಿಕೊಂಡಿದ್ದಾರೆ. ಇದೊಂದು ತಂದೆ-ಮಗನ ನಡುವಿನ ಬಾಂಧವ್ಯದ ಕಹಾನಿ ಇರಲಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

ಇದನ್ನೂ ಓದಿ: Shiva Rajkumar: `ವಿಕ್ಟೋರಿಯಾ ಮಾನ್ಸನ್‌’ ಫಸ್ಟ್‌ ಲುಕ್‌ ಔಟ್‌: ಶಿವಣ್ಣ ಸಾಥ್!

ಆರ್​. ಚಂದ್ರು ನಿರ್ದೇಶನದ, ಉಪೇಂದ್ರ ನಟನೆಯ ‘ಕಬ್ಜ’ ಸಿನಿಮಾ (Kabzaa Movie) ಎರಡು ದಿನಗಳಲ್ಲೇ ನೂರು ಕೋಟಿ ರೂ. ಕ್ಲಬ್‌ ಸೇರಿತ್ತು. ಆದರೆ ಭಾರಿ ಕಲೆಕ್ಷನ್‌ ಮಾಡಿರುವ ಈ ಸಿನಿಮಾವನ್ನು ಸಾಕಷ್ಟು ಜನ ಇಷ್ಟ ಪಟ್ಟಿರಲಿಲ್ಲ. ಹೀಗಾಗಿ ʻಕಬ್ಜʼ ಸೀಕ್ವೆಲ್ ಯಾವುದೇ ಕಾರಣಕ್ಕೂ ಸಿದ್ಧವಾಗುವುದಿಲ್ಲ ಎಂದು ಹಲವರು ಅಂದುಕೊಂಡಿದ್ದರು. ಇದಾದ ಬಳಿಕ ಜನವರಿ 23ರಂದು ಚಂದ್ರು ಅವರು ಐದು ಸಿನಿಮಾ ಘೋಷಣೆ ಮಾಡಿದರು.

ಭಾರತೀಯ ಚಿತ್ರರಂಗದಲ್ಲೇ ಹೊಸ ಮೈಲುಗಲ್ಲು ಸೃಷ್ಟಿಸಿದ ನಿರ್ದೇಶಕ ಆರ್ ಚಂದ್ರು ಅವರು ಆರ್ ಸಿ ಪ್ರೊಡಕ್ಷನ್ ನಡಿ ಐದು ಪ್ಯಾನ್ ಇಂಡಿಯಾ ಸಿನಿಮಾಗಳನ್ನು ಘೋಷಣೆ ಮಾಡಿದ್ದರು. ʻಶ್ರೀರಾಮಬಾಣʼ, ʻಫಾದರ್ʼ, ʻPOKʼ, ʻಡಾಗ್ʼ ಹಾಗೂ ಕಬ್ಜ-2 ಟೈಟಲ್ ಘೋಷಣೆಯಾಗಿತ್ತು.

ಈ ಬಗ್ಗೆ ಆರ್‌ ಚಂದ್ರು ಮಾತನಾಡಿ ʻʻಯಾವುದೇ ಕೆಲಸ ಮಾಡಬೇಕು ಅಂದರೆ ಯೋಗಬೇಕು. ಯೋಗ್ಯತೆ ಬೇಕು. 10 ತಿಂಗಳು ನಾನು ಸುಮ್ನೆ ಕೂತಿರಲಿಲ್ಲ. ಕೈ ಹಾಕಿದರೆ ಕರಂಟ್ ಕಂಬಕ್ಕೆ ಕೈ ಹಾಕಬಾರದು. ಚಂದ್ರಲೋಕಕ್ಕೆ ಕೈ ಹಾಕಬೇಕು. ಕಬ್ಜ’ ಸಿನಿಮಾದ ಕಲೆಕ್ಷನ್ ಫೇಕ್ ಎಂದು ಅನೇಕರು ಹೇಳಿದ್ದರು.‘ಕಬ್ಜ ಸಿನಿಮಾದಿಂದ ನಾನು ಸರ್ಕಾರಕ್ಕೆ 20 ಕೋಟಿ ರೂಪಾಯಿ ಟ್ಯಾಕ್ಸ್ ಕಟ್ಟಿದ್ದೀನಿ. ಇದನ್ನು ಓಪನ್ ಆಗಿ ಹೇಳಿಕೊಳ್ಳುತ್ತಿದ್ದೇನೆ. ಕನ್ನಡ ಸಿನಿಮಾಗಳನ್ನು ನೋಡ್ಬೇಕು ಅಂದ್ರೆ ಒಳ್ಳೊಳ್ಳೆ ಸಿನಿಮಾಗಳನ್ನ ಮಾಡ್ಬೇಕು. ಬಾಯಿ ಇದೆ ಎಂದು ಮಾತನಾಡಿದರೆ ಐದು ಸಿನಿಮಾ, ಹತ್ತು ಸಿನಿಮಾ ಆಗಲ್ಲ’ ಎಂದು ಅವರು ನೇರವಾಗಿ ಹೇಳಿದ್ದರು.

Continue Reading

ಟಾಲಿವುಡ್

Samantha Ruth Prabhu: ಜನ್ಮದಿನದಂದೇ ಹೊಸ ಸಿನಿಮಾ ಅನೌನ್ಸ್‌ ಮಾಡಿದ ನಟಿ ಸಮಂತಾ!

Samantha Ruth Prabhu: ಸಮಂತಾ ಜನುಮದಿನಕ್ಕೆ ಅವರ ಅಭಿಮಾನಿಗಳು ಮತ್ತು ಸ್ನೇಹಿತರು ಶುಭಾಶಯ ತಿಳಿಸುತ್ತಿದ್ದಾರೆ. ‘ಬಂಗಾರಂ’ ಚಿತ್ರದ ಫಸ್ಟ್ ಲುಕ್‌ನಲ್ಲಿ ಉಗ್ರ ಅವತಾರದಲ್ಲಿ ನಟಿ ಕಾಣಿಸಿಕೊಂಡಿದ್ದು, ಗನ್ ಹಿಡಿದುಕೊಂಡು ರಕ್ತಸಿಕ್ತ ಮುಖವನ್ನು ಕ್ಯಾಮೆರಾಗೆ ಪೋಸ್‌ ಕೊಟ್ಟಿದ್ದಾರೆ. 37ನೇ ವಸಂತಕ್ಕೆ ನಟಿ ಕಾಲಿಟ್ಟಿದ್ದಾರೆ. ಈ ವಿಶೇಷ ದಿನದಂದು ನಟಿ ಸಮಂತಾ ಅವರು ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ. ʻ

VISTARANEWS.COM


on

Samantha Ruth Prabhu announces new film Bangaram
Koo

ಬೆಂಗಳೂರು: ಇಂದು ಟಾಲಿವುಡ್‌ ನಟಿ ಸಮಂತಾ(Samantha Ruth Prabhu) ಅವರ ಜನುಮದಿನದ (Samantha Birthday) ಸಂಭ್ರಮ. 37ನೇ ವಸಂತಕ್ಕೆ ನಟಿ ಕಾಲಿಟ್ಟಿದ್ದಾರೆ. ಈ ವಿಶೇಷ ದಿನದಂದು ನಟಿ ಸಮಂತಾ ಅವರು ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ. ʻಬಂಗಾರಂ’ (Bangaram) ಎಂಬ ಹೊಸ ಚಿತ್ರದ ಶೀರ್ಷಿಕೆ ಜತೆ ಫಸ್ಟ್‌ ಲುಕ್‌ ಪೋಸ್ಟರ್‌ ಹಂಚಿಕೊಂಡಿದ್ದಾರೆ. ಸದ್ಯದಲ್ಲೇ ಚಿತ್ರದ ಶೂಟಿಂಗ್ ಆರಂಭವಾಗಲಿದೆ ಎಂದು ಸಮಂತಾ ತಿಳಿಸಿದ್ದಾರೆ.

ಸಮಂತಾ ಜನುಮದಿನಕ್ಕೆ ಅವರ ಅಭಿಮಾನಿಗಳು ಮತ್ತು ಸ್ನೇಹಿತರು ಶುಭಾಶಯ ತಿಳಿಸುತ್ತಿದ್ದಾರೆ. ‘ಬಂಗಾರM’ ಚಿತ್ರದ ಫಸ್ಟ್ ಲುಕ್‌ನಲ್ಲಿ ಉಗ್ರ ಅವತಾರದಲ್ಲಿ ನಟಿ ಕಾಣಿಸಿಕೊಂಡಿದ್ದು, ಗನ್ ಹಿಡಿದುಕೊಂಡು ರಕ್ತಸಿಕ್ತ ಮುಖವನ್ನು ಕ್ಯಾಮೆರಾಗೆ ಪೋಸ್‌ ಕೊಟ್ಟಿದ್ದಾರೆ. ಈ ಚಿತ್ರದ ನಿರ್ಮಾಣದ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಸಿನಿಮಾ 2025ರಲ್ಲಿ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಇನ್‌ಸ್ಟಾದಲ್ಲಿ ನಟಿ ಪೋಸ್ಟ್ ಶೇರ್‌ ಮಾಡಿ “ಚಿನ್ನವಾಗಲು ಎಲ್ಲವೂ ಹೊಳೆಯಬೇಕಾಗಿಲ್ಲ. ʻಬಂಗಾರಂʼ ಶೀಘ್ರದಲ್ಲೇ ಸೆಟ್ಟೇರಲಿದೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Samantha Ruth Prabhu: ಸಮಂತಾಗೆ ಜನುಮ ದಿನದ ಸಂಭ್ರಮ! ಈ ನಟಿಯ ಸೀಕ್ರೆಟ್‌ ಸಂಗತಿಗಳಿವು!

ತೆಲುಗು ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದ ನಟಿ ಸಮಂತಾ ಯೋಗ, ಧ್ಯಾನ, ಕುದುರೆ ಸವಾರಿ ಮತ್ತು ಕಿಕ್ ಬಾಕ್ಸಿಂಗ್ ಕಡೆಗೆ ಗಮನಹರಿಸುತ್ತಿದ್ದಾರೆ. ತಾವು ಕಲಿತ ಸಮರ ಕಲೆಗಳ ಪ್ರದರ್ಶನದ ವಿಡಿಯೊಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ನಟಿ ಸಮಂತಾ (Samantha Kickboxing) ಇದಕ್ಕೆ ‘ಒನ್ ಡೇ ಎಟ್ ಅ ಟೈಮ್ ‘ ಎಂಬ ಶೀರ್ಷಿಕೆ ನೀಡಿದ್ದಾರೆ.

ನಟಿ ಸಮಂತಾ ನಟನಾ ವೃತ್ತಿಗೆ ವಿದಾಯ ಹೇಳಿಲ್ಲ, ಬದಲಾಗಿ ಸ್ವಲ್ಪ ವಿರಾಮ ತೆಗೆದುಕೊಂಡಿದ್ದಾರೆ ಅಷ್ಟೇ. ನಟಿ ಈಗಾಗಲೇ ʻಸಿಟಾಡೆಲ್ ಇಂಡಿಯಾ: ಹನಿ ಬನ್ನಿʼ ವೆಬ್ ಸರಣಿಯಲ್ಲಿ ನಟಿಸಿದ್ದು ಅದರ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಇದರಲ್ಲಿ ಸಮಂತಾ ಜತೆ ವರುಣ್ ಧವನ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಜತೆಗೆ ಸಿಕಂದರ್ ಖೇರ್, ಸಾಕಿಬ್ ಸಲೀಮ್ ಮತ್ತು ಕೇ ಕೇ ಮೆನನ್ ಪೋಷಕ ಪಾತ್ರಗಳನ್ನು ನಿರ್ವಹಿಸಿದ್ದಾರೆ.

ರಾಜ್ ಮತ್ತು ಡಿಕೆ ಮತ್ತು ಸೀತಾ ಆರ್ ಮೆನನ್ ನಿರ್ದೇಶನದ ಸಿಟಾಡೆಲ್ ಇಂಡಿಯಾ:ಹನಿ ಬನ್ನಿ ಯುಎಸ್ ಶೋನ ಭಾರತೀಯ ಸ್ಪಿನ್ ಆಫ್ ಆಗಿದೆ. ಇದರಲ್ಲಿ ಪ್ರಿಯಾಂಕ ಚೋಪ್ರಾ ಮತ್ತು ರಿಚರ್ಡ್ ಮ್ಯಾಡೆನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

Continue Reading

ಬಾಲಿವುಡ್

Aamir Khan: ನಾನು ಮುಸ್ಲಿಮನಾಗಿರುವುದರಿಂದ ʻನಮಸ್ತೆʼ ಹೇಳುವ ಅಭ್ಯಾಸವಿರಲಿಲ್ಲ ಎಂದ ಆಮೀರ್‌ ಖಾನ್‌!

Aamir Khan: ನೆಟ್‌ಫ್ಲಿಕ್ಸ್‌ನ ʻದಿ ಗ್ರೇಟ್ ಇಂಡಿಯನ್ ಕಪಿಲ್ ಶೋʼನ (The Great Indian Kapil Show) ಇತ್ತೀಚಿನ ಸಂಚಿಕೆಯಲ್ಲಿ, ನಟ ತನ್ನ ವೃತ್ತಿಜೀವನದ ಕುರಿತು ಹೇಳಿಕೊಂಡರು. ಈಗ ಆಮಿರ್ ಖಾನ್​ ಅವರು ‘ಸಿತಾರೆ ಜಮೀನ್​ ಪರ್​’ (Sitaare Zameen Par) ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಆಮೀರ್ ಖಾನ್ ತಮ್ಮ ಮುಂಬರುವ ಚಿತ್ರ ‘ಸಿತಾರೆ ಜಮೀನ್ ಪರ್’ ಸಿನಿಮಾ (Sitare Zameen Par) ಬಿಡುಗಡೆ ಯಾವಾಗ ಎಂಬುದನ್ನು ಮಾಧ್ಯಮವೊಂದರಲ್ಲಿ ಈ ಮುಂಚೆ ಹೇಳಿಕೆ ನೀಡಿದ್ದರು.

VISTARANEWS.COM


on

Aamir Khan talks about power of namaste
Koo

ಬೆಂಗಳೂರು: ಕಪಿಲ್ ಶರ್ಮಾ ಶೋನಲ್ಲಿ ಆಮೀರ್ ಖಾನ್ (Aamir Khan ) ಮೊದಲ ಬಾರಿಗೆ ಕಾಣಿಸಿಕೊಂಡಿದ್ದಾರೆ. ನೆಟ್‌ಫ್ಲಿಕ್ಸ್‌ನ ʻದಿ ಗ್ರೇಟ್ ಇಂಡಿಯನ್ ಕಪಿಲ್ ಶೋʼನ (The Great Indian Kapil Show) ಇತ್ತೀಚಿನ ಸಂಚಿಕೆಯಲ್ಲಿ, ನಟ ತನ್ನ ವೃತ್ತಿಜೀವನದ ಕುರಿತು ಹೇಳಿಕೊಂಡರು. ಜತೆಗೆ ಪಂಜಾಬ್‌ ಜನರ ನಮ್ರತೆಯನ್ನು ಶ್ಲಾಘಿಸಿದರು. ʻʻನಾನು ಮುಸ್ಲಿಂನಾಗಿರುವುದರಿಂದ ಕೈ ಜೋಡಿಸಿ ಜನರಿಗೆ ನಮಸ್ತೆ ಹೇಳುವ ಅಭ್ಯಾಸವಿರಲಿಲ್ಲ. ಪಂಜಾಬ್‌ನಲ್ಲಿ ಚಿತ್ರೀಕರಣಕ್ಕೆಂದು ಎರಡೂವರೆ ತಿಂಗಳುಗಳನ್ನು ಕಳೆದ ನಂತರ, ನನಗೆ ‘ನಮಸ್ತೆ’ ಎಂದು ಕೈ ಮುಗಿದು ಹೇಳುವ ಶಕ್ತಿ ಅರ್ಥವಾಯಿತುʼʼಎಂದು ಹೇಳಿಕೊಂಡಿದ್ದಾರೆ.

ಆಮೀರ್‌ ಮಾತನಾಡಿ ʻʻಈ ಕತೆ ನನಗೆ ತುಂಬ ಹತ್ತಿರವಾದದ್ದು. ದಂಗಲ್‌ ಸಿನಿಮಾವನ್ನು ಪಂಜಾಬ್‌ನಲ್ಲಿ ಚಿತ್ರೀಕರಣ ಮಾಡುವಾಗ ಅಲ್ಲಿಯ ಜನರನ್ನು ನಿಜವಾಗಿಯೂ ಇಷ್ಟಪಟ್ಟೆ. ಪಂಜಾಬಿ ಸಂಸ್ಕೃತಿಯು ಪ್ರೀತಿಯಿಂದ ತುಂಬಿದೆ. ದಂಗಲ್‌ ಸಿನಿಮಾಗಾಗಿ ನಾವು ಅಲ್ಲಿ ಹೋದಾಗ ಚಿತ್ರೀಕರಣ ಮಾಡುತ್ತಿದ್ದ ಸ್ಥಳ ಒಂದು ಪಟ್ಟ ಹಳ್ಳಿ. ನಾವು ಆ ಸ್ಥಳದಲ್ಲಿ ಮತ್ತು ಆ ಮನೆಯಲ್ಲಿ ಎರಡು ತಿಂಗಳಿಗಿಂತ ಹೆಚ್ಚು ಕಾಲ ಶೂಟ್ ಮಾಡಿದ್ದೇವೆ. ಅಲ್ಲಿ ಶೂಟ್‌ಗೆಂದು ಬೆಳಗ್ಗೆ 5 ಗಂಟೆಗೆ ಕಾರ್‌ನಲ್ಲಿ ತಲುಪುತ್ತಿದ್ದಾಗ ಜನ ನನಗೆ ಕೈ ಮುಗಿದು ಸ್ವಾಗತಿಸುತ್ತಿದ್ದರು. ಮನೆಯ ಹೊರಗೆ ನಿಂತು ‘ಸತ್ ಶ್ರೀ ಅಕಾಲ’ (ನಮಸ್ತೆ) ಎಂದು ಕೈ ಮುಗಿದು ಹೇಳುತ್ತಿದ್ದರು. ಶೂಟ್‌ ಆಗಿ ಪ್ಯಾಕ್‌ಅಪ್‌ ಆದ ಬಳಿಕವೂ ಮನೆ ಹೊರಗೆ ನಿಂತು ಕೈ ಮುಗಿದು ‘ಗುಡ್ ನೈಟ್’ ಎಂದು ಹೇಳುತ್ತಿದ್ದರುʼʼಎಂದರು.

ಇದನ್ನೂ ಓದಿ: Aamir Khan: ಕಾಂಗ್ರೆಸ್‌ಗೆ ಮತ ನೀಡಿ ಎಂದು ಆಮೀರ್ ಖಾನ್ ಮನವಿ ಮಾಡಿದರೆ? ಎಫ್‌ಐಆರ್‌ ಏಕೆ?

ನಟ ಮಾತು ಮುಂದುವರಿಸಿ ʻʻನಾನು ಮುಸ್ಲಿಮನಾಗಿರುವುದರಿಂದ ಕೈ ಜೋಡಿಸಿ ಜನರಿಗೆ ನಮಸ್ತೆ ಹೇಳುವ ಅಭ್ಯಾಸವಿರಲಿಲ್ಲ. ಮುಸ್ಲಿಮರು ಪರಸ್ಪರ ಶುಭಾಶಯ ಹೇಳುವ ರೀತಿ ಕೈ ಎತ್ತಿ, ತಲೆ ಬಾಗಿಸಿ ಹೇಳುತ್ತಾರೆ. ಆದರೆ ಪಂಜಾಬ್‌ನಲ್ಲಿ ಆ ಎರಡೂವರೆ ತಿಂಗಳು ಕಳೆದ ನಂತರ, ನನಗೆ ‘ನಮಸ್ತೆ’ಯ ಶಕ್ತಿ ಅರ್ಥವಾಯಿತು. ಪಂಜಾಬ್‌ನ ಜನರು ಎಲ್ಲರಿಗೂ ತುಂಬಾ ಗೌರವ ನೀಡುತ್ತಾರೆʼʼಎಂದು ಹೇಳಿದರು. ಆಮೀರ್ ಕೊನೆಯದಾಗಿ ಲಾಲ್ ಸಿಂಗ್ ಚಡ್ಡಾ (2022) ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡರು.

ಈಗ ಆಮಿರ್ ಖಾನ್​ ಅವರು ‘ಸಿತಾರೆ ಜಮೀನ್​ ಪರ್​’ (Sitaare Zameen Par) ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಆಮೀರ್ ಖಾನ್ ತಮ್ಮ ಮುಂಬರುವ ಚಿತ್ರ ‘ಸಿತಾರೆ ಜಮೀನ್ ಪರ್’ ಸಿನಿಮಾ (Sitare Zameen Par) ಬಿಡುಗಡೆ ಯಾವಾಗ ಎಂಬುದನ್ನು ಮಾಧ್ಯಮವೊಂದರಲ್ಲಿ ಈ ಮುಂಚೆ ಹೇಳಿಕೆ ನೀಡಿದ್ದರು. ಈ ವರ್ಷದ ಕ್ರಿಸ್‌ಮಸ್ ಸಂದರ್ಭದಲ್ಲಿ ‘ಸಿತಾರೆ ಜಮೀನ್ ಪರ್’ ಸಿನಿಮಾ ಬಿಡುಗಡೆ ಮಾಡಲು ಯೋಜಿಸುತ್ತಿದ್ದೇನೆ ಎಂದು ಆಮೀರ್ ಖಾನ್ ಬಹಿರಂಗಪಡಿಸಿದ್ದರು. ಮಾಧ್ಯಮವೊಂದರ ಸಂವಾದದ ಸಮಯದಲ್ಲಿ, ನಟ ಆಮೀರ್ ಖಾನ್ ಮಾತನಾಡಿ, “ನಾಯಕ ನಟನಾಗಿ ನನ್ನ ಮುಂದಿನ ಚಿತ್ರ ‘ಸಿತಾರೆ ಜಮೀನ್ ಪರ್’. ನಾವು ಇದನ್ನು ಈ ವರ್ಷದ ಕೊನೆಯಲ್ಲಿ ಕ್ರಿಸ್ಮಸ್ ಸಂದರ್ಭದಲ್ಲಿ ಬಿಡುಗಡೆ ಮಾಡಲು ಯೋಜಿಸುತ್ತಿದ್ದೇನೆ. ಇದು ಮನರಂಜನಾ ಚಿತ್ರ. ಶೂಟಿಂಗ್‌ ಈಗಾಗಲೇ ಶುರುವಾಗಿದೆʼʼಎಂದು ಹೇಳಿಕೊಂಡಿದ್ದರು.

ಸಿತಾರೆ ಜಮೀನ್ ಪರ್’ ಚಿತ್ರದಲ್ಲಿ ಆಮೀರ್ ಖಾನ್ ಜೋಡಿಯಾಗಿ ಜೆನಿಲಿಯಾ ದೇಶಮುಖ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಿತಾರೆ ಜಮೀನ್ ಪರ್’ ಚಿತ್ರದ ಪಾತ್ರವರ್ಗದ ಬಗ್ಗೆ ಮುಂದಿನ ದಿನಗಳಲ್ಲಿ ನಟ ಮಾಹಿತಿ ಹಂಚಿಕೊಳ್ಳಲಿದ್ದಾರೆ.

Continue Reading

ಟಾಲಿವುಡ್

Samantha Ruth Prabhu: ಸಮಂತಾಗೆ ಜನುಮ ದಿನದ ಸಂಭ್ರಮ! ಈ ನಟಿಯ ಸೀಕ್ರೆಟ್‌ ಸಂಗತಿಗಳಿವು!

Samantha Ruth Prabhu: ಸಮಂತಾ ತಮ್ಮ ವೃತ್ತಿಪರ ಮತ್ತು ವೈಯಕ್ತಿಕ ಜೀವನದ ಬಗ್ಗೆ ಆಗಾಗ ಶೇರ್‌ ಮಾಡಿಕೊಳ್ಳುತ್ತಲೇ ಇರುತ್ತಾರೆ. ನಾಗ ಚೈತನ್ಯ ಅವರೊಂದಿಗಿನ ಅವರ ಪ್ರೇಮಕಥೆಯಿಂದ ಹಿಡಿದು ವಿಚ್ಛೇದನದದ ವರೆಗೆ ಹಲವು ವಿಚಾರಗಳನ್ನು ಹೇಳಿಕೊಂಡಿದ್ದಾರೆ. ಸಮಂತಾ ಕ್ರಿಶ್ಚಿಯನ್ ಆಗಿದ್ದರೂ ಆಗಾಗ ದೇವಾಲಯಗಳಿಗೆ ಭೇಟಿ ಕೊಡುತ್ತಲೇ ಇರುತ್ತಾರೆ. ಇದಲ್ಲದೇ ಮುಖಕ್ಕೆ ಸರ್ಜರಿ ಕೂಡ ಮಾಡಿಸಿದ್ದರು ನಟಿ.

VISTARANEWS.COM


on

Samantha Ruth Prabhu shocking secrets
Koo

ಬೆಂಗಳೂರು: ಟಾಲಿವುಡ್‌ ನಟ ಸಮಂತಾ ರುತ್ ಪ್ರಭು (Samantha Ruth Prabhu) ಅವರಿಗೆ ಇಂದು (ಏ.28) ಜನುಮದಿನ ಸಂಭ್ರಮ. ಸಮಂತಾ ಅವರಿಗೆ ಅಪಾರವಾದ ಫ್ಯಾನ್ಸ್‌ ಬಳಗವಿದೆ. ಈ ಹಿಂದೆ ಸಮಂತಾ ಅವರ ಜನುಮದಿನವೇ ಆಂಧ್ರಪ್ರದೇಶದ ಬಾಪಟ್ಲಾದಲ್ಲಿರುವ (Bapatla, Andhra Pradesh) ಅಭಿಮಾನಿ ಯುವಕ ಸಂದೀಪ್‌ ನಟಿಗಾಗಿ ದೇವಸ್ಥಾನ ನಿರ್ಮಿಸಿದ್ದ. ಸಮಂತಾ ಮೇಲಿನ ಅಭಿಮಾನದಿಂದ ಸಂದೀಪ್ ಅವರು ತಿರುಪತಿ, ಚೆನ್ನೈ, ನಾಗಪಟ್ಟಣಂ ದೇವಸ್ಥಾನಗಳಿಗೆ ನಟಿಯ (Samantha Birthday) ಹೆಸರಲ್ಲಿ ತೀರ್ಥಯಾತ್ರೆ ಮಾಡಿದ್ದ. ಸಮಂತಾ ಮಯೋಸಿಟಿಸ್ ಕಾಯಿಲೆಯಿಂದ ಚೇತರಿಸಿಕೊಂಡ ನಂತರ ಸಂದೀಪ್ ಈ ಯಾತ್ರೆ ಮಾಡಿದ್ದ. ಇದೆಲ್ಲದರ ಜತೆಗೆ ನಟಿಯ ಬಗ್ಗೆ ಹಲವು ವಿಚಾರಗಳು ಕುತೂಹಲಕರವಾಗಿವೆ.

ಸಮಂತಾರನ್ನು ಹುಚ್ಚನಂತೆ ಪ್ರೀತಿಸುತ್ತಿದ್ದರು ನಟ ಸಿದ್ಧಾರ್ಥ್

ಸಮಂತಾ ತಮ್ಮ ವೃತ್ತಿಪರ ಮತ್ತು ವೈಯಕ್ತಿಕ ಜೀವನದ ಬಗ್ಗೆ ಆಗಾಗ ಶೇರ್‌ ಮಾಡಿಕೊಳ್ಳುತ್ತಲೇ ಇರುತ್ತಾರೆ. ನಾಗ ಚೈತನ್ಯ ಅವರೊಂದಿಗಿನ ಅವರ ಪ್ರೇಮಕಥೆಯಿಂದ ಹಿಡಿದು ವಿಚ್ಛೇದನದವರೆಗೆ ಹಲವು ವಿಚಾರಗಳನ್ನು ಹೇಳಿಕೊಂಡಿದ್ದಾರೆ. ಸದ್ಯ ಅದಿತಿ ರಾವ್ ಹೈದರಿ ಅವರೊಂದಿಗೆ ಡೇಟಿಂಗ್ ಮಾಡುತ್ತಿರುವ ತಮಿಳು ನಟ ಸಿದ್ಧಾರ್ಥ್ ಅವರು ಸಮಂತಾರನ್ನು ಹುಚ್ಚನಂತೆ ಪ್ರೀತಿಸುತ್ತಿದ್ದರು. ಇಬ್ಬರೂ ಮದುವೆಯಾಗಬೇಕು ಎಂದು ಅಂದುಕೊಂಡಿದ್ದರು. ಆದರೆ ಜೋಡಿ ಮಧ್ಯೆ ಏನು ಆಯ್ತೋ ಏನೋ! ಸಿದ್ಧಾರ್ಥ್ ಜತೆ ನಟಿ ಬ್ರೇಕಪ್‌ ಮಾಡಿಕೊಂಡು ನಾಗ ಚೈತನ್ಯ ಅವರನ್ನು ಪ್ರೀತಿಸಲು ಶುರು ಮಾಡಿದರು.

ಇದನ್ನೂ ಓದಿ: Samantha Ruth Prabhu: ಮದುವೆ ಗೌನ್‌ ಕತ್ತರಿಸಿ ಹೊಸ ಉಡುಪು ತಯಾರಿಸಿದ ಸಮಂತಾ!

ವರದಿಗಳ ಪ್ರಕಾರ ಸಮಂತಾಗೂ ಮೊದಲು ಸಿದ್ಧಾರ್ಥ್ ನಟಿ ಶ್ರುತಿ ಹಾಸನ್ ಮತ್ತು ಆಂಡ್ರಿಯಾ ಅವರೊಂದಿಗೆ ಸಂಬಂಧ ಹೊಂದಿದ್ದರು. ಈ ಕಾರಣಗಳಿಂದಾಗಿ ಸಮಂತಾ ಬ್ರೇಕಪ್‌ ಮಾಡಿಕೊಂಡರು ಎಂಬ ವರದಿಯಾಗಿದೆ.

ಕ್ರಿಶ್ಚಿಯನ್ ಆಗಿದ್ದರೂ ದೇವಾಲಯಗಳಿಗೆ ಭೇಟಿ

ಸಮಂತಾ ಕ್ರಿಶ್ಚಿಯನ್ ಆಗಿದ್ದರೂ ಆಗಾಗ ದೇವಾಲಯಗಳಿಗೆ ಭೇಟಿ ಕೊಡುತ್ತಲೇ ಇರುತ್ತಾರೆ. ಇದಲ್ಲದೇ ಮುಖಕ್ಕೆ ಸರ್ಜರಿ ಕೂಡ ಮಾಡಿಸಿಕೊಂಡಿದ್ದರು ನಟಿ. ಇನ್ನು ನಾಗಚೈತ್ಯ ಜತೆ ನಟಿ ಪ್ರೀತಿಸಿ ಮದುವೆ ಕೂಡ ಆದರು. ಟಾಲಿವುಡ್‌ನಲ್ಲಿ ʻಪವರ್ ಜೋಡಿʼ ಎಂದು ಅನ್ನಿಸಿಕೊಂಡಿದ್ದರು. ಮದುವೆಯಾದ ನಾಲ್ಕು ವರ್ಷಗಳ ಬಳಿಕ ಜೋಡಿ ಡಿವೋರ್ಸ್‌ ಪಡೆದುಕೊಂಡಿತ್ತು. ಜೋಡಿ ಇದುವೆರೆಗೆ ತಾವು ಏಕೆ ಬೇರೆಯಾದೆವು ಎಂಬ ಕಾರಣ ಕೂಡ ನೀಡಿಲ್ಲ. ಸದ್ಯ ನಾಗಚೈತನ್ಯ ಕೂಡ ನಟಿ ಶೋಭಿತಾ ಜತೆಗೆ ಡೇಟಿಂಗ್‌ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ.

ಮೈಯೋಸಿಟಿಸ್‌ ಕಾಯಿಲೆ ವಿರುದ್ಧ ಹೋರಾಟ

ಸಮಂತಾ ರುತ್ ಪ್ರಭು (Samantha Ruth Prabhu) ಅವರು ಮೈಯೋಸಿಟಿಸ್‌ ಕಾಯಿಲೆ ವಿರುದ್ಧ ಹೋರಾಟ ಮಾಡುತ್ತಲೇ ಇದ್ದಾರೆ. ಆಸ್ಪತ್ರೆಯಲ್ಲಿ ಇಂದಿಗೂ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಆರೋಗ್ಯ ಮತ್ತು ಫಿಟ್‌ನೆಸ್ ಪ್ರಯಾಣದ ಬಗ್ಗೆ ವಿವರವಾಗಿ ಮಾತನಾಡುತ್ತಿದ್ದಾರೆ. ಆರೋಗ್ಯದ ಬಗ್ಗೆ ತಮ್ಮ ಅಭಿಮಾನಿಗಳಿಗೆ ಸಾಮಾಜಿಕ ಮಾಧ್ಯಮದಲ್ಲಿ ಆಗಾಗ ತಿಳಿಸುತ್ತಿದ್ದಾರೆ. ಸದ್ಯ ನಟಿ ಒಂದು ವರ್ಷ ನಟನೆಯಿಂದ ಹಿಂದೆ ಸರಿದಿದ್ದಾರೆ. ಆರೋಗ್ಯದತ್ತ ಗಮನ ಹರಿಸಿದ್ದಾರೆ.

ಇದನ್ನೂ ಓದಿ: Samantha Ruth Prabhu: ಮದುವೆ ಗೌನ್‌ ಕತ್ತರಿಸಿ ಹೊಸ ಉಡುಪು ತಯಾರಿಸಿದ ಸಮಂತಾ!

ನಟನೆಯಿಂದ ಹಿಂದೆ ಸರಿದ ನಟಿ

ನಟಿ ಈಗಾಗಲೇ ʻಸಿಟಾಡೆಲ್ ಇಂಡಿಯಾ: ಹನಿ ಬನ್ನಿʼ ವೆಬ್ ಸರಣಿಯಲ್ಲಿ ನಟಿಸಿದ್ದು, ಅದರ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಇದರಲ್ಲಿ ಸಮಂತಾ ಜತೆ ವರುಣ್ ಧವನ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಜತೆಗೆ ಸಿಕಂದರ್ ಖೇರ್, ಸಾಕಿಬ್ ಸಲೀಮ್ ಮತ್ತು ಕೇ ಕೇ ಮೆನನ್ ಪೋಷಕ ಪಾತ್ರಗಳನ್ನು ನಿರ್ವಹಿಸಿದ್ದಾರೆ.

ರಾಜ್ ಮತ್ತು ಡಿಕೆ ಮತ್ತು ಸೀತಾ ಆರ್ ಮೆನನ್ ನಿರ್ದೇಶನದ ʼಸಿಟಾಡೆಲ್ ಇಂಡಿಯಾ: ಹನಿ ಬನ್ನಿʼ ಯುಎಸ್ ಶೋನ ಭಾರತೀಯ ಸ್ಪಿನ್ ಆಫ್ ಆಗಿದೆ. ಇದರಲ್ಲಿ ಪ್ರಿಯಾಂಕ ಚೋಪ್ರಾ ಮತ್ತು ರಿಚರ್ಡ್ ಮ್ಯಾಡೆನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

Continue Reading
Advertisement
Ishan Kishan
ಕ್ರೀಡೆ23 mins ago

Ishan Kishan: ಐಪಿಎಲ್​ ನೀತಿ ಸಂಹಿತೆ ಉಲ್ಲಂಘನೆ; ಇಶಾನ್​ ಕಿಶನ್​ಗೆ ಬಿತ್ತು ದಂಡದ ಬರೆ

5 PM for 5 years if Congress comes to power says PM Narendra Modi
Lok Sabha Election 202424 mins ago

PM Narendra Modi: ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 5 ವರ್ಷಕ್ಕೆ 5 ಪಿಎಂ; ಕರ್ನಾಟಕದಲ್ಲಿ ಶಿಕ್ಷಣ ನೀತಿಯಲ್ಲೂ ರಾಜಕೀಯ: ಮೋದಿ ಕಿಡಿ

Summer Fashion
ಫ್ಯಾಷನ್38 mins ago

Summer Fashion: ಬೇಸಿಗೆಯಲ್ಲಿ ಕ್ರಾಪ್‌ ಟೀ ಶರ್ಟ್‌ ಸ್ಟೈಲಿಂಗ್‌ಗೆ 3 ಐಡಿಯಾ

Drugs Smuggling
ದೇಶ43 mins ago

Drugs Smuggling: ಗುಜರಾತ್‌ನಲ್ಲಿ ಪಾಕ್‌ನ 14 ಜನರ ಬಂಧನ, 600 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ!

Shiva Rajkumar Graces Muhurtha Of Father Kannada Movie
ಸ್ಯಾಂಡಲ್ ವುಡ್44 mins ago

Shiva Rajkumar: ಸೆಟ್ಟೇರಿತು ಶಿವರಾಜ್‌ಕುಮಾರ್‌ – ಆರ್ ಚಂದ್ರು ಕಾಂಬಿನೇಷನ್‌ನ ಹೊಸ ಸಿನಿಮಾ!

Hassan Pen Drive Case
ಕರ್ನಾಟಕ51 mins ago

Hassan Pen Drive Case: ಹಾಸನ ಅಶ್ಲೀಲ ವಿಡಿಯೊ ಪ್ರಕರಣ; ಬಿ.ಕೆ.ಸಿಂಗ್‌ ನೇತೃತ್ವದಲ್ಲಿ ಎಸ್‌ಐಟಿ ರಚನೆ

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202456 mins ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ದೇಶ1 hour ago

Trinmool Congress: ಟಿಎಂಸಿ ಕಾರ್ಯಕರ್ತನ ಭೀಕರ ಹತ್ಯೆ; ಬಿಜೆಪಿ ನಾಯಕಿ ಮೇಲೆ ಡೆಡ್ಲಿ ಅಟ್ಯಾಕ್‌!

Crime News
ವೈರಲ್ ನ್ಯೂಸ್1 hour ago

ನೆಚ್ಚಿನ ಶ್ವಾನ ಮರಿ ನಾಪತ್ತೆಯಾದ ಕೊರಗಿನಿಂದ ಆತ್ಮಹತ್ಯೆಗೆ ಶರಣಾದ 12 ವರ್ಷದ ಬಾಲಕಿ

Pakistan Cricket
ಕ್ರಿಕೆಟ್1 hour ago

Pakistan Cricket: ಭಾರತಕ್ಕೆ ವಿಶ್ವಕಪ್​ ಗೆಲ್ಲಿಸಿಕೊಟ್ಟ ಗ್ಯಾರಿ ಕರ್ಸ್ಟನ್ ಪಾಕ್​ ತಂಡಕ್ಕೆ ನೂತನ ಕೋಚ್​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202456 mins ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20245 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20246 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ9 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ13 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20241 day ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ1 day ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

ಟ್ರೆಂಡಿಂಗ್‌