Ambani Bash: ಅಂಬಾನಿ ಮಗನ ಮದುವೆಗೆ ಕುಣಿಯಲು ʻಮೂವರು ಖಾನ್‌ʼಗಳು ಪಡೆದ ಸಂಭಾವನೆ ಎಷ್ಟು? - Vistara News

ಸಿನಿಮಾ

Ambani Bash: ಅಂಬಾನಿ ಮಗನ ಮದುವೆಗೆ ಕುಣಿಯಲು ʻಮೂವರು ಖಾನ್‌ʼಗಳು ಪಡೆದ ಸಂಭಾವನೆ ಎಷ್ಟು?

ಅನಂತ್‌ ಅಂಬಾನಿ ಅವರ ವಿವಾಹ ಪೂರ್ವ ಸಂಭ್ರದಲ್ಲಿ ಶಾರುಖ್‌, ಆಮೀರ್‌, ಸಲ್ಮಾನ್‌ ʻಆರ್‌ಆರ್‌ ಆರ್‌ʼ ಸಿನಿಮಾದ ʻನಾಟು ನಾಟುʼ ಹಾಡಿಗೆ ಸಖತ್‌ ಸ್ಟೆಪ್ಸ್‌ ಹಾಕಿರುವ ವಿಡಿಯೊ ವೈರಲ್‌ ಆಗಿತ್ತು. ಇದಾದ ಬಳಿಕ ಶಾರುಖ್‌ ಅವರ ಹಳೆಯ ಸಂದರ್ಶನದ ವಿಡಿಯೊ ಭಾರಿ ಸದ್ದು ಮಾಡಿತ್ತು.

VISTARANEWS.COM


on

Shah Rukh, Aamir, Salman Khan dance Charge For Peforming At The Ambani Bash
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಾಲಿವುಡ್‌ ಸೂಪರ್‌ಸ್ಟಾರ್‌ಗಳಾದ ಮೂವರು ಖಾನ್‌ಗಳು (Ambani Bash) ಅಂದರೆ ಶಾರುಖ್‌, ಸಲ್ಮಾನ್‌, ಆಮೀರ್‌ ಅವರನ್ನು ಒಟ್ಟಿಗೆ ಸೇರಿಸಲು ಅಂಬಾನಿ ಭಾರಿ ಹಣವನ್ನು ಖರ್ಚು ಮಾಡಿರಬೇಕು ಎಂದು ಬಹಳಷ್ಟು ಜನರು ಊಹಿಸಿದ್ದುಂಟು. ಆದರೆ ವರದಿಗಳ ಪ್ರಕಾರ ಈ ಮೂವರೂ ಅನಂತ್‌ ಅಂಬಾನಿ ಅವರ ವಿವಾಹ ಪೂರ್ವ ಆಚರಣೆಗಳಲ್ಲಿ ಪ್ರದರ್ಶನ ನೀಡಲು ಒಂದು ಪೈಸೆಯನ್ನೂ ಪಡೆದುಕೊಂಡಿಲ್ಲ ಎಂದು ವರದಿಯಾಗಿದೆ.

ಚಡ್ಡಿ, ಬನಿಯನ್​ ಮಾರಿದ್ರೂ ಇದು ಸಾಧ್ಯವಿಲ್ಲ!

ಅನಂತ್‌ ಅಂಬಾನಿ ಅವರ ವಿವಾಹ ಪೂರ್ವ ಸಂಭ್ರದಲ್ಲಿ ಶಾರುಖ್‌, ಆಮೀರ್‌, ಸಲ್ಮಾನ್‌ ʻಆರ್‌ಆರ್‌ ಆರ್‌ʼ ಸಿನಿಮಾದ ʻನಾಟು ನಾಟುʼ ಹಾಡಿಗೆ ಸಖತ್‌ ಸ್ಟೆಪ್ಸ್‌ ಹಾಕಿರುವ ವಿಡಿಯೊ ವೈರಲ್‌ ಆಗಿತ್ತು. ಇದಾದ ಬಳಿಕ ಶಾರುಖ್‌ ಅವರ ಹಳೆಯ ಸಂದರ್ಶನದ ವಿಡಿಯೊ ಭಾರಿ ಸದ್ದು ಮಾಡಿತ್ತು.

ಶಾರುಖ್‌ ಅವರು ಈ ಹಿಂದೆ ಸಂದರ್ಶನವೊಂದರಲ್ಲಿ ʻʻನಮ್ಮ ಮೂವರು ಖಾನ್​ರನ್ನು ಒಟ್ಟಿಗೆ ಒಂದೇ ಕಡೆ ಸೇರಿಸುವಷ್ಟು ಸಂಪತ್ತು ಯಾರ ಬಳಿಯೂ ಇಲ್ಲ. ಚಡ್ಡಿ, ಬನಿಯನ್​ ಮಾರಿದ್ರೂ ಇದು ಸಾಧ್ಯವಿಲ್ಲʼʼ ಎಂದು ಹೇಳಿಕೆ ನೀಡಿದ್ದರು. ಆದರೀಗ ಮುಕೇಶ್‌ ಅಂಬಾನಿ ಮಾಡಿ ತೋರಿಸಿದ್ದಾರೆ ಎಂಬ ಟ್ರೋಲ್‌ಗಳು ಹರಿದಾಡಿದವು. ಇಷ್ಟಾದರೂ ಈ ಮೂವರು ಪಡೆದ ಸಂಭಾವನೆ ಎಷ್ಟು ಎಂಬುದೇ ಜನರಿಗೆ ಇದ್ದ ಕುತೂಹಲ.

ಇದನ್ನೂ ಓದಿ: Kangana Ranaut : ಅಂಬಾನಿ ಮದುವೆ ಸಂಭ್ರಮದಲ್ಲಿ ʻಖಾನ್‌ʼಗಳ ಡ್ಯಾನ್ಸ್‌: ಇಂಥ ಆಮಿಷಗಳಿಗೆ ನಾನಂತೂ ಬಗ್ಗಲಿಲ್ಲ ಎಂದ ಕಂಗನಾ!

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್‌ ಅವರ ಕಾಕ್‌ಟೈಲ್ ಪಾರ್ಟಿಯಲ್ಲಿ ಪ್ರದರ್ಶನ ನೀಡಲು ರಿಹಾನ್ನಾಗಿಂತ ಆಮೀರ್, ಶಾರುಖ್‌ ಮತ್ತು ಸಲ್ಮಾನ್ ಕಡಿಮೆ ಸಂಭಾವನೆ ಪಡೆದಿದ್ದಾರೆ ಎಂಬ ವದಂತಿಗಳು ಹುಟ್ಟುಕೊಂಡಿದ್ದವು. ಅಷ್ಟೇ ಅಲ್ಲ ಈ ಬಗ್ಗೆ ಟ್ರೋಲ್‌ ಹರಿದಾಡಿತ್ತು.

“ಅಂಬಾನಿ ತಮ್ಮ ವಿವಾಹಪೂರ್ವ ಸಮಾರಂಭದಲ್ಲಿ ಪ್ರದರ್ಶನ ನೀಡಲು ರಿಹಾನ್ನಾಗೆ 52 ಕೋಟಿ ರೂ. ಸಂಭಾವನೆ ನೀಡಿದ್ದಾರೆ. ಆದರೆ ಸಲ್ಮಾನ್, ಅಮೀರ್ ಮತ್ತು ಶಾರುಖ್ ಒಟ್ಟಿಗೆ ಪ್ರದರ್ಶನ ನೀಡಿದ್ದರೂ ಅಷ್ಟೂ ಹಣ ಅವರಿಗೆ ಸಿಕ್ಕಿಲ್ಲ. ಕಾರ್ಪೊರೇಟ್‌ಗಳಲ್ಲಿ ಹಾಗೇ. ಹಳೆಯ ಉದ್ಯೋಗಿಗಳು ಹಲವು ವರ್ಷಗಳಿಂದ ಕಷ್ಟಪಟ್ಟು ಕೆಲಸ ಮಾಡುತ್ತಾರೆ. 5-10% ಮಾತ್ರ ಸಂಬಳ ಹೆಚ್ಚಳವಿರುತ್ತದೆ. ಆದರೆ ಹೊಸ ಉದ್ಯೋಗಿಗಳಿಗೆ 30-40% ಹೆಚ್ಚಳದಲ್ಲಿ ನೇಮಕಗೊಳ್ಳುತ್ತಾರೆʼ ಎಂದು ಖಾನ್‌ಗಳನ್ನು ಟ್ರೋಲ್‌ ಮಾಡಿದ್ದರು ನೆಟ್ಟಿಗರು.

ಆದರೆ ಮೂಲಗಳ ಪ್ರಕಾರ ಈ ಮೂವರು ಖಾನ್‌ಗಳು ವಿವಾಹ ಪೂರ್ವ ಆಚರಣೆಗಳಲ್ಲಿ ಪ್ರದರ್ಶನ ನೀಡಲು ಒಂದು ಪೈಸೆಯನ್ನೂ ಪಡೆದುಕೊಂಡಿಲ್ಲ ಎಂದು ವರದಿಯಾಗಿದೆ. ಈ ಮೂವರನ್ನು ಒಟ್ಟಿಗೆ ವೇದಿಕೆ ಮೇಲೆ ತರಲು ಯಾವುದೇ ಪ್ರೀ ಪ್ಲ್ಯಾನಿಂಗ್‌ ಇಲ್ಲವಾಗಿತ್ತು ಎನ್ನಲಾಗಿದೆ. ಈ ಮೂವರು ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬದೊಂದಿಗೆ ವೈಯಕ್ತಿಕವಾಗಿ ಒಳ್ಳೆಯ ಸಂಬಂಧವನ್ನು ಹೊಂದಿದ್ದಾರೆ. ಆದ್ದರಿಂದ ಈ ಮೂವರು ಪ್ರೀತಿಯಿಂದ ಪ್ರದರ್ಶನ ನೀಡಿದ್ದರು ಎಂದು ವರದಿಯಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Malaika Arora: ಒಂದೇ ಈವೆಂಟ್‌ನಲ್ಲಿ ಇದ್ದರೂ ಒಬ್ಬರ ಮುಖವನ್ನು ಇನ್ನೊಬ್ಬರು ನೋಡಿಕೊಂಡಿಲ್ಲ! ಅರ್ಜುನ್​-ಮಲೈಕಾ ಬ್ರೇಕಪ್‌ ಖಚಿತ?

Malaika Arora: ಈವೆಂಟ್‌ನಲ್ಲಿ ಜೋಡಿಯ ಹಲವಾರು ವೀಡಿಯೊಗಳು ಮತ್ತು ಚಿತ್ರಗಳು ಸಾಮಾಜಿಕ ವೈರಲ್‌ ಆಗಿವೆ. ಆದರೆ ಇಬ್ಬರೂ ಒಂದೇ ಈವೆಂಟ್‌ನಲ್ಲಿ ಭಾಗಿಯಾಗಿದ್ದರೂ ಈಗ ಪರಸ್ಪರ ದೂರ ಆಗಿದ್ದಾರೆ.ಇಬ್ಬರೂ ಒಂದೇ ವೇದಿಕೆ ಏರಿದ್ದಾರೆ. ಆದರೆ, ಒಬ್ಬರಿಗೊಬ್ಬರು ನಿರ್ಲಕ್ಷಿಸಿದ್ದಾರೆ. ಒಬ್ಬರ ಮುಖವನ್ನು ಮತ್ತೊಬ್ಬರು ನೋಡಿಕೊಂಡಿಲ್ಲ.

VISTARANEWS.COM


on

Malaika Arora breakup rumours rushes past Arjun Kapoor
Koo

ಬೆಂಗಳೂರು: ಬ್ರೇಕಪ್ ವದಂತಿಗಳ ಬಳಿಕ, ನಟ ಅರ್ಜುನ್ ಕಪೂರ್ ಮತ್ತು ಮಲೈಕಾ ಅರೋರಾ (Malaika Arora) ಶುಕ್ರವಾರ ದೆಹಲಿಯಲ್ಲಿ ನಡೆದ ಇಂಡಿಯಾ ಕೌಚರ್ ವೀಕ್‌ನಲ್ಲಿ ಡಿಸೈನರ್ ಕುನಾಲ್ ರಾವಲ್ ಅವರ ಕಾರ್ಯಕ್ರಮದಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಈವೆಂಟ್‌ನಲ್ಲಿ ಜೋಡಿಯ ಹಲವಾರು ವೀಡಿಯೊಗಳು ಮತ್ತು ಚಿತ್ರಗಳು ಸಾಮಾಜಿಕ ವೈರಲ್‌ ಆಗಿವೆ. ಆದರೆ ಇಬ್ಬರೂ ಒಂದೇ ಈವೆಂಟ್‌ನಲ್ಲಿ ಭಾಗಿಯಾಗಿದ್ದರೂ ಈಗ ಪರಸ್ಪರ ದೂರ ಆಗಿದ್ದಾರೆ.ಇಬ್ಬರೂ ಒಂದೇ ವೇದಿಕೆ ಏರಿದ್ದಾರೆ. ಆದರೆ, ಒಬ್ಬರಿಗೊಬ್ಬರು ನಿರ್ಲಕ್ಷಿಸಿದ್ದಾರೆ. ಒಬ್ಬರ ಮುಖವನ್ನು ಮತ್ತೊಬ್ಬರು ನೋಡಿಕೊಂಡಿಲ್ಲ.

ವೀಡಿಯೊವೊಂದರಲ್ಲಿ, ಅರ್ಜುನ್ ಕಪೂರ್ ಮತ್ತು ಮಲೈಕಾ ಮುಂದಿನ ಸಾಲಿನಲ್ಲಿ ಕುಳಿತಿದ್ದಾರೆ. ಪರಸ್ಪರ ಅಕ್ಕ ಪಕ್ಕದಲ್ಲಿ ಕುಳಿತುಕೊಳ್ಳಲಿಲ್ಲ. ಮತ್ತೊಂದು ಕ್ಲಿಪ್‌ನಲ್ಲಿ, ಅರ್ಜುನ್ ಕಪೂರ್ ಎದುರಲ್ಲೇ ಮಲೈಕಾ ಹಾದು ಹೋಗಿದ್ದಾರೆ. ಈ ವೇಳೆ ಅಭಿಮಾನಿಗಳು ಮುತ್ತಿಕೊಳ್ಳದಂತೆ ತಡೆದಿದ್ದಾರೆ ಅರ್ಜುನ್ ಕಪೂರ್. ಆದರೆ, ಇದನ್ನು ಮಲೈಕಾ ಅರೋರಾ ಗಮನಿಸಿಯೂ ಇಲ್ಲ. ಅವರು ನೇರವಾಗಿ ಹೊರಟು ಹೋಗಿದ್ದಾರೆ. ಈ ಮೂಲಕ ಬ್ರೇಕಪ್ ವಿಚಾರ ಖಚಿತವಾಗಿದೆ. ಸ್ವತಃ ಮಲೈಕಾ ಅವರೇ ಬ್ರೇಕಪ್ ಮಾಡಿಕೊಂಡರೇ ಎನ್ನುವ ಪ್ರಶ್ನೆ ಮೂಡಿದೆ. ಏಕೆಂದರೆ ಅರ್ಜುನ್ ಕಪೂರ್​ಗೆ ಮಲೈಕಾ ಮೇಲೆ ಇನ್ನೂ ಕಾಳಜಿ ಇದೆ. ಆದರೆ, ಈ ಕಾಳಜಿ ಮಲೈಕಾಗೆ ಇಲ್ಲ.

ಈವೆಂಟ್‌ಗಾಗಿ, ಮಲೈಕಾ ವೈಟ್ ಬ್ಲೇಜರ್ ಕೋ-ಆರ್ಡರ್ ಸೆಟ್‌ನಲ್ಲಿ ಸುಂದರವಾಗಿ ಕಾಣುತ್ತಿದ್ದರು. ಅರ್ಜುನ್ ಕಪ್ಪು ಶೆರ್ವಾನಿ ಮತ್ತು ಧೋತಿ ಪ್ಯಾಂಟ್‌ನಲ್ಲಿ ಕಾಣಿಸಿಕೊಂಡರು.

ಇದನ್ನೂ ಓದಿ: Malaika Arora: 38ರ ಅರ್ಜುನ್‌ ಕಪೂರ್‌ಗೆ 50ರ ಮಲೈಕಾ ಅರೋರಾ ಸಹವಾಸ ಸಾಕಾಯ್ತಾ?!

ಮಲೈಕಾ ಮತ್ತು ಅರ್ಜುನ್ ʼವಿಶೇಷವಾದ ಸಂಬಂಧʼವನ್ನು ಹೊಂದಿದ್ದರು. ಇಬ್ಬರೂ ಪರಸ್ಪರರ ಹೃದಯದಲ್ಲಿ ವಿಶೇಷ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಆದರೆ ಇದೀಗ ಜೋಡಿ ಬೇರೆಯಾಗಬೇಕು ಎಂದು ನಿರ್ಧರಿಸಿದೆ. ಇಷ್ಟೂ ವರ್ಷಗಳಲ್ಲಿ, ಅವರು ತಮ್ಮ ಸಂಬಂಧಕ್ಕೆ ಗೌರವವನ್ನು ನೀಡಿದ್ದಾರೆ. ಒಂದು ವೇಳೆ ಬೇರೆಯಾಗಲು ನಿರ್ಧರಿಸಿದರೂ ಪರಸ್ಪರ ಅದೇ ಗೌರವವನ್ನು ಕಾಪಾಡಿಕೊಂಡು ಹೋಗುತ್ತಾರೆ ಎಂದು ವರದಿಯಾಗಿದೆ.

11 ವರ್ಷಗಳ ಅಂತರ

ಮಲೈಕಾ ಅರೋರಾ ಅವರಿಗೆ ಈಗ 50 ವರ್ಷ. ಅರ್ಜುನ್ ಕಪೂರ್​ಗೆ 38. ಇಬ್ಬರ ಮಧ್ಯೆ ಸುಮಾರು 11 ವರ್ಷಗಳ ಅಂತರ ಇದೆ. ಅರ್ಜುನ್ ಕಪೂರ್ ವಯಸ್ಸಿನಲ್ಲಿ ಸಣ್ಣವರು. ಮಾತ್ರವಲ್ಲ ಕೆಲವು ದಿನಗಳಿಂದ ಮಗು ವಿಚಾರವಾಗಿ ಸಾಕಷ್ಟು ಟ್ರೋಲ್‌ ಆಗಿತ್ತು ಜೋಡಿ. ಮಲೈಕಾ ಹಾಗೂ ಅರ್ಜುನ್ ಕಪೂರ್​ಗೆ ಮದುವೆ ಯಾವಾಗ ಎನ್ನುವ ಪ್ರಶ್ನೆ ಎದುರಾಗುತ್ತಲೇ ಇತ್ತು. ಆದರೆ, ಈ ಬಗ್ಗೆ ಈ ಜೋಡಿ ಮೌನ ವಹಿಸಿದ್ದರು.

ಇತ್ತೀಚಿನ ವರದಿಗಳ ಪ್ರಕಾರ ಇಬ್ಬರ ನಡುವೆ ಬಿರುಕು ಮೂಡಿದೆ ಎನ್ನಲಾಗಿದೆ. ಅರ್ಜುನ್‌ ಕಪೂರ್ ಕುಟುಂಬದವರನ್ನು ಅನ್​ಫಾಲೋ ಮಾಡಿದ್ದಾರೆ ಮಲೈಕಾ ಅರೋರಾ. ಅಷ್ಟೇ ಅಲ್ಲದೇ ಅರ್ಜುನ್ ಕಪೂರ್ ಈಗ ನಟಿ ಕುಶಾ ಕಪಿಲಾ (Kusha Kapila) ಅವರೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎಂತಲೂ ವರದಿಗಳಿವೆ.

ಈ ಮೊದಲು ಮಲೈಕಾ ಅವರು ಅರ್ಜುನ್ ಕಪೂರ್ ತಂದೆ ಬೋನಿ ಕಪೂರ್, ಕುಟುಂಬದ ಇತರ ಸದಸ್ಯರಾದ ಅನಿಲ್ ಕಪೂರ್, ಜಾನ್ವಿ ಕಪೂರ್, ಖುಷಿ ಕಪೂರ್ ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಫಾಲೋ ಮಾಡುತ್ತಿದ್ದರು. ಆದರೆ, ಇವರುಗಳನ್ನು ಮಲೈಕಾ ಅನ್​ಫಾಲೋ ಮಾಡಿದ್ದಾರೆ. ಆದರೆ, ಅರ್ಜುನ್ ಕಪೂರ್ ಅವರನ್ನು ಈಗಲೂ ಅವರು ಫಾಲೋ ಮಾಡುತ್ತಿದ್ದಾರೆ. ಇತ್ತೀಚೆಗೆ ಮುಂಬೈನಲ್ಲಿರುವ ಕರಣ್ ಜೋಹರ್ ಅವರ ಮನೆಯಲ್ಲಿ ಅರ್ಜುನ್ ಮತ್ತು ಕುಶಾ ಒಟ್ಟಿಗೆ ಪಾರ್ಟಿ ಮಾಡಿದ್ದಾಗಿನಿಂದಲೂ ಸಂಬಂಧದ ವದಂತಿಗಳು ಪ್ರಾರಂಭವಾದವು.

ಮಲೈಕಾ ಈ ಹಿಂದೆ ನಟ, ನಿರ್ಮಾಪಕ ಅರ್ಬಾಜ್ ಖಾನ್ ಅವರನ್ನು ವಿವಾಹವಾಗಿದ್ದರು. ಇಬ್ಬರು 2016ರಲ್ಲಿ ವಿಚ್ಛೇದನ ಪಡೆದುಕೊಂಡಿದ್ದಾರೆ. ಅವರಿಗೆ ಅರ್ಹಾನ್ ಖಾನ್ ಹೆಸರಿನ ಮಗನಿದ್ದಾನೆ. ಮಲೈಕಾ ಮತ್ತು ಅರ್ಜುನ್ ಹಲವು ವರ್ಷಗಳಿಂದ ಪ್ರೀತಿಯಲ್ಲಿದ್ದು, 2019ರಲ್ಲಿ ಅದನ್ನು ಸಾರ್ವಜನಿಕವಾಗಿ ಹೇಳಿಕೊಂಡಿದ್ದಾರೆ.

Continue Reading

ಕಾಲಿವುಡ್

Actor Rajinikanth: ಶಾಲೆಗೆ ಹೋಗಲ್ಲ ಎಂದು ಹಠ ಹಿಡಿದ ಮೊಮ್ಮಗ; ತಾತನ ಡ್ಯೂಟಿ ಮಿಸ್ ಮಾಡ್ದೆ ಸ್ಕೂಲ್‌ಗೆ ಬಿಟ್ಟು ಬಂದ ರಜನಿಕಾಂತ್‌!

Actor Rajinikanth: ಸೌಂದರ್ಯಾ ಅವರು ತಮ್ಮ ಇನ್‌ಸ್ಟಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ, ರಜನಿಕಾಂತ್ ಮೊಮ್ಮಗನೊಂದಿಗೆ ಕುಳಿತು ತರಗತಿಗೆ ಕರೆದುಕೊಂಡು ಹೋಗುತ್ತಿರುವುದು ನೋಡಬಹುದು. ವಿದ್ಯಾರ್ಥಿಗಳು ತಮ್ಮ ನೆಚ್ಚಿನ ನಟನನ್ನು ನೋಡಿ ಅಚ್ಚರಿಗೊಂಡಿದ್ದಾರೆ. ನಟ ಮೊಮ್ಮಗನನ್ನು ಶಾಲೆಗೆ ಬಿಡುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಇದನ್ನು ಅವರ ಮಗಳು ಸೌಂದರ್ಯಾ ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಕೂಡ ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Actor Rajinikanth Fulfils Grandfather Duties By Dropping Grandson At School
Koo

ಬೆಂಗಳೂರು: ರಜನಿಕಾಂತ್ (Actor Rajinikanth) ದೇಶದ ಅತ್ಯಂತ ಜನಪ್ರಿಯ ನಟರಲ್ಲಿ ಒಬ್ಬರು. ಅವರಿಗೆ ಅಪಾರ ಅಭಿಮಾನಿ ಬಳಗವಿದೆ. ಹೀಗಿದ್ದರೂ ನಟ ಆಗಾಗ ಸರಳತೆಯ ವಿಚಾರಕ್ಕೆ ಸುದ್ದಿಯಾಗುತ್ತಲೇ ಇರುತ್ತಾರೆ. ಇದೀಗ ನಟ ಮೊಮ್ಮಗನನ್ನು ಶಾಲೆಗೆ ಬಿಡುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಇದನ್ನು ಅವರ ಮಗಳು ಸೌಂದರ್ಯಾ ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಕೂಡ ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸೌಂದರ್ಯಾ ಅವರು ತಮ್ಮ ಇನ್‌ಸ್ಟಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ, ರಜನಿಕಾಂತ್ ಮೊಮ್ಮಗನೊಂದಿಗೆ ಕುಳಿತು ತರಗತಿಗೆ ಕರೆದುಕೊಂಡು ಹೋಗುತ್ತಿರುವುದು ನೋಡಬಹುದು. ವಿದ್ಯಾರ್ಥಿಗಳು ತಮ್ಮ ನೆಚ್ಚಿನ ನಟನನ್ನು ನೋಡಿ ಅಚ್ಚರಿಗೊಂಡಿದ್ದಾರೆ. “ನನ್ನ ಮಗನಿಗೆ ಬೆಳಗ್ಗೆ ಶಾಲೆಗೆ ಹೋಗಲು ಇಷ್ಟವಿರಲಿಲ್ಲ. ಸೂಪರ್‌ಹೀರೋ ತಾತಾ ಅಳುತ್ತಿದ್ದ ಮಗನನ್ನು ಶಾಲೆಗೆ ಬಿಟ್ಟು ಬಂದರು. ನೀವು ನಿರ್ವಹಿಸುವ ಪ್ರತಿಯೊಂದು ಪಾತ್ರದಲ್ಲೂ ನೀವು ಅತ್ಯುತ್ತಮರು. ಆನ್ ಮತ್ತು ಆಫ್ ಸ್ಕ್ರೀನ್‌ನಲ್ಲಿಯೂ ನನ್ನ ಪ್ರೀತಿಯ ಅಪ್ಪ. ಬೆಸ್ಟ್ ಅಜ್ಜ . ಬೆಸ್ಟ್ ಫಾದರ್. ಜಸ್ಟ್ ದ ಬೆಸ್ಟ್ ʼʼ ಎಂದು ಶೀರ್ಷಿಕೆಯನ್ನು ನೀಡಿದ್ದಾರೆ.

ರಜನಿಕಾಂತ್ ಮೊಮ್ಮೊಗ ಲಿಂಗ ರಾಜ ಜೊತೆ ರಜನಿ ಪೋಸ್ ಕೊಟ್ಟಿದ್ದಾರೆ. ಮತ್ತೊಂದು ಫೋಟೋದಲ್ಲಿ ರಜನಿಕಾಂತ್ ಶಾಲಾ ಕೊಠಡಿಯಲ್ಲಿ ಕಾಣಿಸಿಕೊಂಡಿದ್ದಾರೆ. ರಜನಿಕಾಂತ್ ಅವರನ್ನು ನೋಡಿ ಶಾಲಾ ಮಕ್ಕಳು ಸಖತ್ ಎಗ್ಸೈಟ್ ಆಗಿದ್ದಾರೆ. ಅದರಲ್ಲೂ ಕೊನೆಯಲ್ಲಿ ಕುಳಿತ ಬಾಲಕಿ ಖುಷಿ ತಡೆಯಲಾರದೆ ಎರಡೂ ಕೈಯನ್ನು ಮುಖದಮೇಲೆ ಇಟ್ಟಿದ್ದಾಳೆ.

ಇದನ್ನೂ ಓದಿ: Actor Rajinikanth: ಈ ಬಾರಿಯೂ ಮೋದಿ ಗೆಲ್ಲಬಹುದಾ ಎಂಬ ಪ್ರಶ್ನೆಗೆ ರಜನಿಕಾಂತ್ ಕೊಟ್ಟ ಉತ್ತರ ಏನು?

ಈ ಫೋಟೊ ವೈರಲ್‌ ಆಗುತ್ತಿದ್ದಂತೆ ಫ್ಯಾನ್ಸ್‌ ʻಸೂಪರ್ ಸ್ಟಾರ್ ಆಗಿದ್ದರೂ ಅವರು ಯಾವಾಗಲೂ ವಿಶೇಷರುʼಎಂದು ಕಮೆಂಟ್‌ ಮಾಡಿದ್ದಾರೆ. ಇನ್ನೂ ಕೆಲವರು ಈ ಫೋಟೋ ಹಂಚಿಕೊಂಡ ಸೌಂದರ್ಯಾಗೆ ಧನ್ಯವಾದ ಹೇಳಿದ್ದಾರೆ. ಇನ್ನೂ ಕೆಲವರು ರಜನಿಕಾಂತ್ ಅವರ ದರ್ಶನ ಸಿಕ್ಕಿ ಖುಷಿಯಾದ ಮಕ್ಕಳ ಬಗ್ಗೆ ಬರೆದುಕೊಂಡಿದ್ದಾರೆ.

ತಮಿಳು ಸೂಪರ್‌ಸ್ಟಾರ್ ರಜನಿಕಾಂತ್ ಇತ್ತೀಚೆಗೆ ʻವೆಟ್ಟೈಯಾನ್‌ʼ ಸಿನಿಮಾ ಶೂಟಿಂಗ್‌ ಪೂರ್ಣಗೊಳಿಸಿದ್ದಾರೆ. ಚಿತ್ರದ ಸೆಟ್‌ನ ಕೊನೆಯ ದಿನದ ಫೋಟೋ ವೈರಲ್‌ ಆಗಿತ್ತು. ವೆಟ್ಟೈಯನ್ ಚಿತ್ರವನ್ನು ಟಿ ಜೆ ಜ್ಞಾನವೇಲ್ ನಿರ್ದೇಶಿಸುತ್ತಿದ್ದಾರೆ. ಇದರಲ್ಲಿ ಅಮಿತಾಭ್‌ ಬಚ್ಚನ್, ಫಹದ್ ಫಾಸಿಲ್, ರಾಣಾ ದಗ್ಗುಬಾಟಿ, ಮಂಜು ವಾರಿಯರ್, ರಿತಿಕಾ ಸಿಂಗ್, ದುಶಾರ ವಿಜಯನ್, ಕಿಶೋರ್ ಮತ್ತು ರೋಹಿಣಿ ಅವರ ಸಮಗ್ರ ತಾರಾಗಣದೊಂದಿಗೆ ರಜನಿಕಾಂತ್ ನಾಯಕನಾಗಿ ನಟಿಸಿದ್ದಾರೆ. ಇದನ್ನು ಲೈಕಾ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಸುಬಾಸ್ಕರನ್ ಅಲ್ಲಿರಾಜ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಅನಿರುದ್ಧ್ ರವಿಚಂದರ್ ಸಂಗೀತ ನೀಡುತ್ತಿದ್ದು, ಎಸ್ ಆರ್ ಕತಿರ್ ಛಾಯಾಗ್ರಹಣ ಮತ್ತು ಫಿಲೋಮಿನ್ ರಾಜ್ ಸಂಕಲನ ಮಾಡುತ್ತಿದ್ದಾರೆ. ಹೊಸ ಪೋಸ್ಟರ್ ಅನ್ನು ಅನಾವರಣ ಮಾಡುವುದರ ಜೊತೆಗೆ, ಈ ವರ್ಷ ಅಕ್ಟೋಬರ್‌ನಲ್ಲಿ ಚಿತ್ರವನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದೆ.

Continue Reading

ಸಿನಿಮಾ

Salman Khan: ಗರ್ಲ್​ಫ್ರೆಂಡ್ ಬರ್ತ್​ಡೇ ಪಾರ್ಟಿಯಲ್ಲಿ ಸಖತ್‌ ಎಂಜಾಯ್‌ ಮಾಡಿದ ಸಲ್ಮಾನ್ ಖಾನ್!

Salman Khan: ಸಲ್ಮಾನ್ ಖಾನ್ ಈ ಮೊದಲು ಅನೇಕ ಹುಡುಗಿಯರ ಜೊತೆ ಸುತ್ತಾಟ ನಡೆಸಿದ್ದಾರೆ. ಆದರೆ, ಯಾರನ್ನೂ ಅವರು ಮದುವೆ ಆಗುವ ನಿರ್ಧಾರ ತೆಗೆದುಕೊಂಡಿಲ್ಲ. ಈ ವಿಚಾರ ಅನೇಕರಿಗೆ ಅಚ್ಚರಿ ತಂದಿದೆ.ಜಿಯೋ ಕನ್ವೆನ್ಷನ್ ಸೆಂಟರ್‌ನಲ್ಲಿ ಶುಕ್ರವಾರ ನಡೆದ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್ ಅವರ ಅದ್ಧೂರಿ ವಿವಾಹದಲ್ಲಿ ಸಲ್ಮಾನ್‌ ಭಾಗಿಯಾಗಿದ್ದರು. ಹಾಗೇ ಶನಿವಾರ ಆಯೋಜಿಸಲಾದ ಸ್ಟಾರ್-ಸ್ಟಡ್ಡ್ ಶುಭ್ ಆಶೀರ್ವಾದ್ ಸಮಾರಂಭದಲ್ಲಿ ಸಲ್ಮಾನ್‌ ಇದ್ದರು. . ಸಲ್ಲು ಜೊತೆ ಮಾಜಿ ಗೆಳತಿ ಯುಲಿಯಾ ವಂಟೂರ್ ( Iulia Vantur) ಅವರು ಈ ಕಾರ್ಯಕ್ರಮದಲ್ಲಿ ಮಿಂಚಿದ್ದರು.

VISTARANEWS.COM


on

Salman Khan New Pics From Iulia Vantur Birthday Party
Koo

ಬೆಂಗಳೂರು: ಸಲ್ಮಾನ್ ಖಾನ್ (Salman Khan) ಅವರು ಯೂಲಿಯಾ ವಂಟೂರ್ (Iulia Vantur) ಅವರ ಬರ್ತ್​ಡೇಯನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ. ಗಾಯಕರಾದ ಹಿಮೇಶ್ ರೇಶಮಿಯಾ ಮತ್ತು ಮಿಕಾ ಸಿಂಗ್ ಹಂಚಿಕೊಂಡ ಪಾರ್ಟಿಯ ಫೋಟೊಗಳಲ್ಲಿ ಸಲ್ಮಾನ್ ಖಾನ್ ಕಾಣಿಸಿಕೊಂಡಿದ್ದಾರೆ. ಹಿಮೇಶ್ ರೇಶಮಿಯಾ ಅವರು ತಮ್ಮ ಇನ್‌ಸ್ಟಾಗ್ರಾಮ್ ಪ್ರೊಫೈಲ್‌ನಲ್ಲಿ ಪಾರ್ಟಿಯ ವೀಡಿಯೊವನ್ನು ಹಂಚಿಕೊಂಡಿದ್ದಾರೆ ಮತ್ತು “ಭಾಯಿ ಮತ್ತು ಕುಟುಂಬ, ಸ್ನೇಹಿತರೊಂದಿಗೆ ಐತಿಹಾಸಿಕ ಸ್ಮರಣೀಯ ಸುಂದರ ಸಂಜೆ. ಬರ್ತ್‌ಡೇ ಹುಡುಗಿ ಯುಲಿಯಾ ವಂಟೂರ್‌ಗೆ ಶುಭ ಹಾರೈಕೆಗಳುʼʼಎಂದು ಶೀರ್ಷಿಕೆ ನೀಡಿದ್ದಾರೆ.

ಸಲ್ಮಾನ್ ಖಾನ್ ಈ ಮೊದಲು ಅನೇಕ ಹುಡುಗಿಯರ ಜೊತೆ ಸುತ್ತಾಟ ನಡೆಸಿದ್ದಾರೆ. ಆದರೆ, ಯಾರನ್ನೂ ಅವರು ಮದುವೆ ಆಗುವ ನಿರ್ಧಾರ ತೆಗೆದುಕೊಂಡಿಲ್ಲ. ಈ ವಿಚಾರ ಅನೇಕರಿಗೆ ಅಚ್ಚರಿ ತಂದಿದೆ. ಈಗ ಅವರು ಯೂಲಿಯಾ ಜೊತೆ ಸುತ್ತಾಟ ನಡೆಸುತ್ತಿದ್ದಾರೆಯೇ ಎನ್ನುವ ಪ್ರಶ್ನೆ ಮೂಡಿದೆ.ಯೂಲಿಯಾ ವಂಟೂರ್ ಬರ್ತ್​ಡೇ ಸೆಲೆಬ್ರೇಷನ್ ಮಾಡಲು ಒಳ್ಳೆಯ ಗೆಟ್​ ಟುಗೇದರ್ ಆಯೋಜಿಸಲಾಗಿತ್ತು’ ಎಂದು ಮಿಕಾ ಸಿಂಗ್ ಬರೆದುಕೊಂಡಿದ್ದಾರೆ. ಈ ಬರ್ತ್​ಡೇ ಸೆಲೆಬ್ರೇಷನ್​ನಿಂದ ಸಲ್ಲು ಹಾಗೂ ಯೂಲಿಯಾ ಮಧ್ಯೆ ಏನೋ ನಡೆಯುತ್ತಿದೆ ಎನ್ನುವ ವಿಚಾರ ಅಧಿಕೃತ ಆದಂತೆ ಆಗಿದೆ.

ಇದನ್ನೂ ಓದಿ: Salman Khan: ಸಲ್ಮಾನ್ ಖಾನ್‌ ಹೆದರುವ ರೀತಿಯಲ್ಲಿ ಗುಂಡಿನ ದಾಳಿ ಆಗಬೇಕು ಎಂದು ಶೂಟರ್‌ಗಳಿಗೆ ಸ್ಫೂರ್ತಿ ತುಂಬಿದ್ದ ಬಿಷ್ಣೋಯಿ!

ಅಂಬಾನಿ ಮದುವೆಯಲ್ಲಿಯೂ ಒಟ್ಟಿಗೆ ಕಂಡಿತ್ತು ಜೋಡಿ!

ಜಿಯೋ ಕನ್ವೆನ್ಷನ್ ಸೆಂಟರ್‌ನಲ್ಲಿ ಶುಕ್ರವಾರ ನಡೆದ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್ ಅವರ ಅದ್ಧೂರಿ ವಿವಾಹದಲ್ಲಿ ಸಲ್ಮಾನ್‌ ಭಾಗಿಯಾಗಿದ್ದರು. ಹಾಗೇ ಶನಿವಾರ ಆಯೋಜಿಸಲಾದ ಸ್ಟಾರ್-ಸ್ಟಡ್ಡ್ ಶುಭ್ ಆಶೀರ್ವಾದ್ ಸಮಾರಂಭದಲ್ಲಿ ಸಲ್ಮಾನ್‌ ಇದ್ದರು. . ಸಲ್ಲು ಜೊತೆ ಮಾಜಿ ಗೆಳತಿ ಯುಲಿಯಾ ವಂಟೂರ್ ( Iulia Vantur) ಅವರು ಈ ಕಾರ್ಯಕ್ರಮದಲ್ಲಿ ಮಿಂಚಿದ್ದರು. ಸಲ್ಮಾನ್ ಮತ್ತು ಯೂಲಿಯಾ ಇಬ್ಬರೂ ಭಾಗಿಯಾಗಿದ್ದು, ಇನ್ನೂ ರಿಲೇಶನ್​ಶಿಪ್​ನಲ್ಲಿದ್ದಾರಾ ಎನ್ನುವ ಪ್ರಶ್ನೆ ನೆಟ್ಟಿಗರಿಗೆ ಕಾಡಿತ್ತು. ಇತ್ತೀಚೆಗೆ, ಅನಂತ್ ಮತ್ತು ರಾಧಿಕಾ ಅವರ ಸಂಗೀತ ಕಾರ್ಯಕ್ರಮದಲ್ಲಿ “ಓ ಓ ಜಾನೆ ಜಾನಾ” ಹಾಡಿಗೆ ಒಟ್ಟಿಗೆ ನೃತ್ಯ ಮಾಡಿರುವ ವಿಡಿಯೊ ಕೂಡ ವೈರಲ್‌ ಆಗಿತ್ತು.

ಸಿನಿಮಾ ವಿಚಾರಕ್ಕೆ ಬಂದರೆ ಜೂನ್ 19 ರಂದು ‘ಸಿಕಂದರ್’ ಚಿತ್ರದ ಚಿತ್ರೀಕರಣ ಪ್ರಾರಂಭವಾಯಿತು. ಚಿತ್ರದಲ್ಲಿ ಸಲ್ಮಾನ್ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ.

ಈ ಹಿಂದೆ ಸಿನಿಮಾ ಈದ್ 2025ರಂದು ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ ಎಂದು ಪೋಸ್ಟರ್‌ ಜತೆ ಮಾಹಿತಿ ಹಂಚಿಕೊಂಡಿದ್ದಾರೆ. ಮಾರ್ಚ್ 12ರಂದು, ಸಲ್ಮಾನ್ ಖಾನ್ ತಮ್ಮ ಅಧಿಕೃತ ಎಕ್ಸ್‌ ಹ್ಯಾಂಡಲ್‌ನಲ್ಲಿ ಸಿನಿಮಾ ಬಗ್ಗೆ ಹಂಚಿಕೊಂಡಿದ್ದರು. ಪ್ರತಿಭಾವಂತರಾದ ಎಆರ್ ಮುರುಗದಾಸ್ ನನ್ನ ಸ್ನೇಹಿತ, ಅವರೊಂದಿಗೆ ಸಿನಿಮಾ ಮಾಡುತ್ತಿರುವುದು ಸಂತೋಷವಾಗಿದೆ. ಈ ಸಹಯೋಗ ವಿಶೇಷವಾಗಿದೆ. ನಿಮ್ಮ ಪ್ರೀತಿ ಮತ್ತು ಆಶೀರ್ವಾದ ನಮ್ಮ ಮೇಲೆ ಇರಲಿʼʼಎಂದು ಬರೆದುಕೊಂಡಿದ್ದರು.

ತಮಿಳು, ತೆಲುಗಿನಲ್ಲಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಎಆರ್ ಮುರುಗದಾಸ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವನ್ನು ಸಾಜಿದ್ ನಾಡಿಯಾವಾಲ ನಿರ್ಮಾಣ ಮಾಡುತ್ತಿದ್ದು, ದೊಡ್ಡ ಬಜೆಟ್​ನಲ್ಲಿ ಸಿದ್ಧವಾಗುತ್ತಿದೆ. ಮುರುಗದಾಸ್ ಅವರು ಈ ಮೊದಲು ‘ಗಜಿನಿ’, ‘ಸ್ಟಾಲಿನ್’, ‘ಸೆವೆಂತ್ ಸೆನ್ಸ್’, ‘ತುಪ್ಪಾಕಿ’, ‘ಸ್ಪೈಡರ್’ ಸೇರಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ಕೊಟ್ಟಿದ್ದರು. ಮುರುಗದಾಸ್ ಅವರು ಆಮಿರ್ ಖಾನ್ ನಟಿಸಿದ್ದ ‘ಗಜಿನಿ’ ಚಿತ್ರವನ್ನು ಅವರೇ ನಿರ್ದೇಶನ ಮಾಡಿದ್ದರು.

ʻಸಿಖಂದರ್’ ಸಿನಿಮಾ ಆಕ್ಷನ್ ಥ್ರಿಲ್ಲರ್ ಚಿತ್ರವಾಗಿರಲಿದೆ. 400 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿನಿಮಾ ಸಿದ್ಧವಾಗುತ್ತಿದೆ ಎಂದು ವರದಿಯಾಗಿದೆ. ಸಲ್ಮಾನ್ ಖಾನ್ ಕೊನೆಯದಾಗಿ ‘ಟೈಗರ್ 3’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.

Continue Reading

ಸಿನಿಮಾ

Family Drama Film Review: ಹೊಸ ಅನುಭವ ನೀಡುವ ಫ್ಯಾಮಿಲಿ ಡ್ರಾಮಾ

Family Drama Film Review: ಕನ್ನಡಕ್ಕೆ ಇದೊಂದು ವಿಶಿಷ್ಟ ರೀತಿಯಾ ಸಿನಿಮಾ. ಚಿತ್ರದಲ್ಲಿ ಕಾಮಿಡಿ ಇದೆ, ಸಸ್ಪೆನ್ಸ್ ಇದೆ, ಹೊಸತಂಡದ ಹೊಸತನ ಹೊಸದಾಗಿಯೇ ಇದೆ. ಚಿತ್ರ ಎಲ್ಲವರ್ಗದಲ್ಲೂ ಅಚ್ಚುಕಟ್ಟಾಗಿ ರೂಪುಗೊಂಡಿದೆ, ಪ್ರೇಕ್ಷಕರ ಮನರಂಜಿಸುತ್ತದೆ. ವೇಗ ಹೆಚ್ಚಿಸಿ ಮೊದಲಾರ್ಧದ ಡ್ರಾಮಾಗೆ ಕೊಂಚ ಕತ್ತರಿ ಹಾಕಬಹುದಿತ್ತು ಅನಿಸುತ್ತದೆ. ಸೆಮಿ ಸೆಮಿ ಹಾಡು ಸಿಕ್ಕಾಬಟ್ಟೆ ಇಷ್ಟ ಆಗುತ್ತದೆ.

VISTARANEWS.COM


on

Family Drama Film Review
Koo

-ಶಿವರಾಜ್ ಡಿ ಎನ್, ಬೆಂಗಳೂರು
ಫ್ಯಾಮಿಲಿ ಸಮೇತ ಕೂತು ನೋಡಬಹುದಾದಂತ ಡಾರ್ಕ್ ಕಾಮಿಡಿ ಸಿನಿಮಾ ‘ಫ್ಯಾಮಿಲಿ ಡ್ರಾಮಾ’. ದಿ ಯಂಗ್ ಮೈಂಡ್ ಮೂವಿ.. ಸಿನಿಮಾ ಅಂದ್ರೆ ಅಲ್ಲೊಂದು ದೊಡ್ಡ ಸ್ಟಾರ್ ಕಾಸ್ಟ್, ಮಾಸ್ ಡೈಲಾಗ್, ರಗಡ್ ಫೈಟ್, ಮೆಲೋಡಿಯಸ್ ಸಾಂಗ್, ಮಿನಿಮಮ್ ಅಂದ್ರೂ ಒಂದ್ ಇಪ್ಪತ್ತೈದ್ ಮೂವತ್ ಕೋಟಿ ಖರ್ಚಾಗಿರ್ಬೇಕು.. ಸಿನಿಮಾ ಅಂದ್ರೇ ಹಾಗಿರ್ಬೇಕು ಹೀಗಿರ್ಬೇಕು ಎನ್ನುವ ಚೌಕಟ್ಟಿನೊಳಗಿನ ಪ್ರೇಕ್ಷಕರಿಗೆ ಈ ಸಿನಿಮಾ ಕಷ್ಟ ಆಗಬಹುದು.! ಇದೆಲ್ಲದರಾಚೆ ನಿಂತು ನೋಡುವ, ನಮ್ಮ ಕನ್ನಡ ಸಿನಿಮಾಗಳಲ್ಲೀ ಇನ್ನೂ ಏನೋ ಬೇಕು ಎಂದು ಹಾತೊರೆಯುವ ಪ್ರೇಕ್ಷಕರಿಗೆ ಇದೊಂದು ಉತ್ತಮ ಸಿನಿಮಾ (Family Drama Film Review) ಅನ್ನಿಸ ಬಹುದು.

ಅಬ್ಬಬ್ಬಬಬ್ಬಾ.. ಇಂತಹ ಗ್ಯಾಂಗ್ ವಾರ್ ಸಿನಿಮಾ.! ಕನ್ನಡ ಸಿನಿಮಾದಲ್ಲಿ ನಾ ಹಿಂದೆಂದೂ ಕಂಡಿಲ್ಲ, ಗುಂಡಿನ ಚಕಮಕಿಯಲ್ಲಿ ಕಾಣುವ ಗನ್ನುಗಳೇ ಪ್ರೇಕ್ಷಕರನ್ನ ದಂಗಾಗಿಸಬಹುದು.! ಸೀದಾ ವಿಷಯಕ್ಕೆ ಬರೋಣ ಎನ್ನುವುದಾದರೇ ಇದೊಂದು ಗ್ಯಾಂಗ್ ವಾರ್ ಕಥೆಯ ಸಿನಿಮಾ ಅಲ್ಲ. ಗ್ಯಾಂಗ್ ವಾರ್ ಒಂದು ಫ್ಯಾಮಿಲಿಯೊಳಗೆ ಹೇಗೆ ನುಸುಳುತ್ತದೆ, ಆ ಮಿಡಲ್ ಕ್ಲಾಸ್ ಫ್ಯಾಮಿಲಿಯೊಳಗೆ ಏನೆಲ್ಲ ಡ್ರಾಮಾ ನೆಡೆಯುತ್ತದೆ ಎನ್ನುವ ಚಿತ್ರಕಥೆಯ ಡಾರ್ಕ್ ಕಾಮಿಡಿ ಸಿನಿಮಾ.

ಯುವ ಪ್ರೇಮಿಗಳ ರೀತಿ ನೀತಿ, ತಂದೆ ತಾಯಿಯ ಕಾಣದ ಕಾಳಜಿ ಜೊತೆಗೆ ಮಿಡಲ್ ಕ್ಲಾಸ್ ಫ್ಯಾಮಿಲಿಯೊಳಗಿನ ಡ್ರಾಮಾ ಇಷ್ಟವಾಗುತ್ತದೆ. ಈ ಕಾಮಿಡಿಯೊಳಗೂ ಸೀರಿಯಸ್ ವಿಷಯ ಏನಿದೆ ಅಂತ ನೋಡೋದಾದ್ರೆ ಹೊಸಬರಾದರೂ ಕಥಾಹಂದರಕ್ಕೆ ಎಳೆತಂದಿರುವ ವಿಷಯ ಹಾಗೂ ಪ್ರಾಮುಖ್ಯತೆಯನ್ನೆ ಕೊಡದೆ ಅದೂ ಕಾಮನ್ ಗುರು ಎನ್ನುವಂತೆ ತೇಲಿಸಿ ಬಿಟ್ಟಿರುವ ಸೂಕ್ಷ್ಮತೆಯೂ ಶಭಾಸ್ ಎನ್ನಿಸಬಹುದು. ಅದು ಹೇಗೆ ಎಂದರೇ ಹೆಣ್ಣೊಂದು ಧಮ್ ಹೊಡೆಯೋದನ್ನ ಬಿಟ್ಟ ಕಣ್ಣು ಬಿಟ್ಟ ಹಾಗೆ ನೋಡುವ ಸಮಾಜದಲ್ಲಿ ಇಲ್ಲೊಂದು ಮಿಡಲ್ ಕ್ಲಾಸ್ ಹುಡುಗಿಯರೂ ಉಫ್ ಅಂತಾ ಹೊಗೆ ಬಿಡುವುದನ್ನ ಸಾಮನ್ಯವೆಂಬಂತೆ ಬಿಟ್ಟಿರುವುದು. ಇಂದಿನ ಹುಡುಗರ ಬಾಯಲ್ಲಿ ಸರ್ವೇ ಸಾಮಾನ್ಯವಾಗಿ ಬರುವ ದುಡ್ಡಿದ್ದರೇ ಮಾತ್ರ ಹುಡುಗಿಯ ನಮ್ಮ ಜೊತೆಗಿರ್ತಾರೆ ಎನ್ನುವ ಲಾಜಿಕ್ ಸ್ಕ್ರಾಚ್ ಮಾಡಿರೋದು ಕೂಡ ಒಳ್ಳೆಯ ವಿಷಯವೆ. ಚಿತ್ರ ಎಲ್ಲವರ್ಗದಲ್ಲೂ ಅಚ್ಚುಕಟ್ಟಾಗಿ ರೂಪುಗೊಂಡಿದೆ, ಪ್ರೇಕ್ಷಕರನ್ನ ಮನರಂಜಿಸುತ್ತದೆ, ವೇಗ ಹೆಚ್ಚಿಸಿ ಮೊದಲಾರ್ದದ ಡ್ರಾಮಾಗೆ ಕೊಂಚ ಕತ್ತರಿ ಹಾಕ ಬಹುದಿತ್ತು ಅನಿಸುತ್ತದೆ. ಸೆಮಿ ಸೆಮಿ ಹಾಡು ಸಿಕ್ಕಾಬಟ್ಟೆ ಇಷ್ಟ ಆಗತ್ತೆ.

ಕೆಲ ದೃಶ್ಯದ ಕಲರ್ ಗ್ರೇಡಿಂಗ್ ವಿಶೇಷವಾಗಿದೆ. ಸಿಂಧೂ ಶ್ರೀನಿವಾಸ ಮೂರ್ತಿ, ಪೂರ್ಣಚಂದ್ರ ಮೈಸೂರು, ಅಭಯ್, ಅನನ್ಯಾ ಅಮರ್, ರೇಖಾ ಕೂಡ್ಲಿಗಿ, ವಿರೀಶ್ ಕೆ ಮಂಜುನಾಥ್, ಮಹದೇವ್ ಹಡಪದ್‌,ಆಶಿತ್, ಸಿರಿ ರವಿಕುಮಾರ್ ಸೇರಿದಂತೆ ಎಲ್ಲ ಕಲಾವಿದರ ಅಭಿನವೂ ಅತ್ಯುತ್ತಮವಾಗಿದೆ. ಅಭಯ ಹಾಗು ಅಮ್ಮನ ಪಾತ್ರ ,ಡಾನ್ ಪ್ರಕಾಶ, ವಿಷ್ಣು ಸೇರಿದಂತೆ ಟೋಬಿ, ಸಿಗರೇಟ್ ಹುಡುಗಿಯರು, ಅನಾಲಿಸಿಸ್ ಮಾಡಿ ಐಡಿಯಾ ಕೊಡುವ ಚೋಟು ಸೇರಿಂದಂತೆ ಚೇತನ್ ಅಮಯ್ಯ್ ಅವರ ವಿಶಿಷ್ಟ ಸಂಗೀತವೂ ಗಮನ ಸೆಳೆಯುತ್ತದೆ. ದಬ್ಬುಗುಡಿ ಮುರಳಿಕೃಷ್ಣ ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು. ಆಕರ್ಶ್ ಹೆಚ್ ಪಿ ಆಕ್ಷನ್ ಕಟ್ ಹೇಳಿದ್ದಾರೆ. ಆಶಿಶ್ ಹುಳಕೊಂಡ್ ಸಂಕಲನ ಹಾಗೂ ಸಿದ್ದಾರ್ಥ್ ಸುನೀಲ್ ಛಾಯಾಗ್ರಹಣವಿದೆ.

ಇದನ್ನೂ ಓದಿ: Family Drama Trailer: ʻಡೇರ್ ಡೆವಿಲ್ ಮುಸ್ತಾಫ’ ತಂಡದಿಂದ ವಿಭಿನ್ನ ಸಿನಿಮಾ!

ಕನ್ನಡಕ್ಕೆ ಇದೊಂದು ವಿಶಿಷ್ಟ ರೀತಿಯಾ ಸಿನಿಮಾ, ಚಿತ್ರದಲ್ಲಿ ಕಾಮಿಡಿ ಇದೆ, ಸಸ್ಪೆನ್ಸ್ ಇದೆ, ಹೊಸತಂಡದ ಹೊಸತನ ಹೊಸದಾಗೆ ಇದೆ, ಅದೇನಿದಿಯಪ್ಪಅಂತ ಹೊಸತು ಅನ್ನೋದನ್ನ ತಪ್ಪದೇ ಚಿತ್ರಮಂದಿರಕ್ಕೆ ಬೇಟಿಕೊಟ್ಟು ನೋಡಿ ಚಿತ್ರ ನಿಮ್ಮನು ರಂಜಿಸೋದು ಖಂಡಿತ.

Continue Reading
Advertisement
Encounter in Kupwara
ದೇಶ19 mins ago

Encounter in Kupwara: ಕುಪ್ವಾರಾದಲ್ಲಿ ಉಗ್ರರೊಂದಿಗೆ ಗುಂಡಿನ ಚಕಮಕಿ: ಮೂವರು ಸೈನಿಕರಿಗೆ ಗಾಯ

Champions Trophy 2025
ಕ್ರೀಡೆ22 mins ago

Champions Trophy 2025: ನಾವು ತುಂಬಾ ಒಳ್ಳೆಯವರು, ಪಾಕಿಸ್ತಾನಕ್ಕೆ ಬನ್ನಿ; ಟೀಮ್ ಇಂಡಿಯಾಗೆ ಪಾಕ್​ ಆಟಗಾರನ ಮನವಿ

Murder in PG Case
ಕ್ರೈಂ30 mins ago

Murder in PG: ಪಿಜಿಯಲ್ಲಿ ಯುವತಿ ಕೊಲೆ ಮಾಡಿದ ಪಾತಕಿ ಮಧ್ಯಪ್ರದೇಶದಲ್ಲಿ ಸೆರೆ

kaveri aarti
ಪ್ರಮುಖ ಸುದ್ದಿ44 mins ago

Kaveri Aarti: ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ; ದಸರಾ ಹೊತ್ತಿಗೆ ರೆಡಿ

Malaika Arora breakup rumours rushes past Arjun Kapoor
ಬಾಲಿವುಡ್44 mins ago

Malaika Arora: ಒಂದೇ ಈವೆಂಟ್‌ನಲ್ಲಿ ಇದ್ದರೂ ಒಬ್ಬರ ಮುಖವನ್ನು ಇನ್ನೊಬ್ಬರು ನೋಡಿಕೊಂಡಿಲ್ಲ! ಅರ್ಜುನ್​-ಮಲೈಕಾ ಬ್ರೇಕಪ್‌ ಖಚಿತ?

Narendra Modi
ದೇಶ57 mins ago

Narendra Modi: ರಷ್ಯಾ ಬಳಿಕ ಮುಂದಿನ ತಿಂಗಳು ಯುದ್ಧ ಪೀಡಿತ ಉಕ್ರೇನ್‌ಗೆ ಪ್ರಧಾನಿ ಮೋದಿ ಭೇಟಿ

Actor Rajinikanth Fulfils Grandfather Duties By Dropping Grandson At School
ಕಾಲಿವುಡ್1 hour ago

Actor Rajinikanth: ಶಾಲೆಗೆ ಹೋಗಲ್ಲ ಎಂದು ಹಠ ಹಿಡಿದ ಮೊಮ್ಮಗ; ತಾತನ ಡ್ಯೂಟಿ ಮಿಸ್ ಮಾಡ್ದೆ ಸ್ಕೂಲ್‌ಗೆ ಬಿಟ್ಟು ಬಂದ ರಜನಿಕಾಂತ್‌!

Paris Olympics 2024
ಕ್ರೀಡೆ1 hour ago

Paris Olympics 2024: ಒಲಿಂಪಿಕ್ಸ್​ನಲ್ಲಿ ಇಂದು ಭಾರತದ ಕ್ರೀಡಾ ಸ್ಫರ್ಧೆಗಳು; ಶೂಟಿಂಗ್​ನಲ್ಲಿ ಪದಕ ನಿರೀಕ್ಷೆ

students night
ಪ್ರಮುಖ ಸುದ್ದಿ1 hour ago

Students Night: ವಿದ್ಯಾರ್ಥಿಗಳು ಕುಡಿದು ಕುಪ್ಪಳಿಸಲು ʼಸ್ಟೂಡೆಂಟ್ಸ್‌ ನೈಟ್‌ʼ ಆಯೋಜಿಸಿದ ಬಾರ್‌ ಮಾಲಿಕ! ಕಾರ್ಯಕ್ರಮ ರದ್ದು

Salman Khan New Pics From Iulia Vantur Birthday Party
ಸಿನಿಮಾ1 hour ago

Salman Khan: ಗರ್ಲ್​ಫ್ರೆಂಡ್ ಬರ್ತ್​ಡೇ ಪಾರ್ಟಿಯಲ್ಲಿ ಸಖತ್‌ ಎಂಜಾಯ್‌ ಮಾಡಿದ ಸಲ್ಮಾನ್ ಖಾನ್!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Ankola landslide
ಉತ್ತರ ಕನ್ನಡ15 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ17 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ17 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ19 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ3 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ4 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

ಟ್ರೆಂಡಿಂಗ್‌