Shah Rukh Khan: ಫೋಟೊಗೆ ಪೋಸ್‌ ಕೊಡುವ ಭರದಲ್ಲಿ ಹಿರಿಯ ವ್ಯಕ್ತಿಯನ್ನು ತಳ್ಳಿದ ಶಾರುಖ್‌; ʻಸೊಕ್ಕಿನ ಮನುಷ್ಯʼ ಅಂದ್ರು ನೆಟ್ಟಿಗರು! - Vistara News

ಸಿನಿಮಾ

Shah Rukh Khan: ಫೋಟೊಗೆ ಪೋಸ್‌ ಕೊಡುವ ಭರದಲ್ಲಿ ಹಿರಿಯ ವ್ಯಕ್ತಿಯನ್ನು ತಳ್ಳಿದ ಶಾರುಖ್‌; ʻಸೊಕ್ಕಿನ ಮನುಷ್ಯʼ ಅಂದ್ರು ನೆಟ್ಟಿಗರು!

Shah Rukh Khan: ಶಾರುಖ್ ಅವರು ಭಾರತೀಯ ಚಿತ್ರರಂಗಕ್ಕೆ ನೀಡಿದ ಮಹತ್ವದ ಕೊಡುಗೆಗಾಗಿ ಪಾರ್ಡೊ ಅಲ್ಲಾ ಕ್ಯಾರಿಯರಾ ಅಸ್ಕೋನಾ-ಲೊಕಾರ್ನೊ ಪ್ರವಾಸೋದ್ಯಮ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಲೊಕಾರ್ನೊ ಫಿಲ್ಮ್ ಫೆಸ್ಟಿವಲ್‌ನ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಚಿತ್ರಗಳನ್ನು ಹಂಚಿಕೊಳ್ಳಲಾಗಿದೆ. ಶಾರುಖ್ ಕಪ್ಪು ಬಣ್ಣದ ಬ್ಲೇಜರ್ ಮತ್ತು ಮ್ಯಾಚಿಂಗ್ ಪ್ಯಾಂಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

VISTARANEWS.COM


on

Shah Rukh Khan pushes old man at Locarno film festival red carpet
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಾಲಿವುಡ್‌ ಕಿಂಗ್ ಶಾರುಖ್ ಖಾನ್ಗೆ (Shah Rukh Khan) ಪಾರ್ಡೊ ಅಲ್ಲಾ ಕ್ಯಾರಿಯರಾ ಅಸ್ಕೋನಾ-ಲೊಕಾರ್ನೊ ಪ್ರವಾಸೋದ್ಯಮ ಪ್ರಶಸ್ತಿಗೆ (Pardo Alla Carriera at the 77th Locarno Film Festival) ಭಾಜನರಾಗಿದ್ದಾರೆ. ಶನಿವಾರ (ಆಗಸ್ಟ್ 10 ರಂದು) ನಡೆದ ಲೊಕಾರ್ನೊ ಚಲನಚಿತ್ರೋತ್ಸವದಲ್ಲಿ ಶಾರುಖ್ ಖಾನ್​​ಗೆ ಈ ಗೌರವ ನೀಡಲಾಗಿದೆ. ಪ್ರಶಸ್ತಿ ಸಮಾರಂಭದಲ್ಲಿನ ಶಾರುಖ್ ಖಾನ್ ಅವರ ಫೋಟೋಗಳು ಮತ್ತು ವಿಡಿಯೋಗಳು ಭಾರೀ ವೈರಲ್ ಆಗುತ್ತಿವೆ. ಇದೀಗ ನಟ ರೆಡ್‌ ಕಾರ್ಪೆಟ್‌ ಮೇಲೆ ಪೋಸ್‌ ನೀಡುವಾಗ ಅಡ್ಡ ಬಂದ ಹಿರಿಯ ವ್ಯಕ್ತಿಯನ್ನು ತಳ್ಳಿದ್ದಾರೆ. ಇದೀಗ ನಟ ಭಾರಿ ಟ್ರೋಲ್‌ ಆಗಿದ್ದಾರೆ.

ಇದೀಗ ನೆಟ್ಟಿಗರು ನಟನ ನಡವಳಿಕೆಗೆ ಖಂಡಿಸಿದ್ದಾರೆ. ಅತ್ಯಂತ “ಸೊಕ್ಕಿನ” ಮತ್ತು “ಅಸಭ್ಯ” ವ್ಯಕ್ತಿ ಎಂದು ಲೇಬಲ್ ಕೊಟ್ಟಿದ್ದಾರೆ. ಶಾರುಖ್ ಒಳ್ಳೆಯ ವ್ಯಕ್ತಿಯಲ್ಲ ಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ. ʻಅವರ ಹಳೆಯ ಸ್ನೇಹಿತರಲ್ಲಿ ಒಬ್ಬರುʼʼಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ.

ಶಾರುಖ್ ಅವರು ಭಾರತೀಯ ಚಿತ್ರರಂಗಕ್ಕೆ ನೀಡಿದ ಮಹತ್ವದ ಕೊಡುಗೆಗಾಗಿ ಪಾರ್ಡೊ ಅಲ್ಲಾ ಕ್ಯಾರಿಯರಾ ಅಸ್ಕೋನಾ-ಲೊಕಾರ್ನೊ ಪ್ರವಾಸೋದ್ಯಮ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಲೊಕಾರ್ನೊ ಫಿಲ್ಮ್ ಫೆಸ್ಟಿವಲ್‌ನ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಚಿತ್ರಗಳನ್ನು ಹಂಚಿಕೊಳ್ಳಲಾಗಿದೆ. ಶಾರುಖ್ ಕಪ್ಪು ಬಣ್ಣದ ಬ್ಲೇಜರ್ ಮತ್ತು ಮ್ಯಾಚಿಂಗ್ ಪ್ಯಾಂಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: Actor Shahrukh Khan: ಅಮೆರಿಕದಲ್ಲಿ ಶಾರುಖ್ ಖಾನ್‌ಗೆ ಶಸ್ತ್ರಚಿಕಿತ್ಸೆ; ಬಾಲಿವುಡ್‌ ಬಾದ್‌ಶಾಗೆ ಕಾಡುತ್ತಿರುವ ಸಮಸ್ಯೆ ಏನು?

ಸುಜೋಯ್ ಘೋಷ್ ನಿರ್ದೇಶನದ ಕಿಂಗ್‌ನಲ್ಲಿ ಶಾರುಖ್ ಖಾನ್ ಮುಂದೆ ಕಾಣಿಸಿಕೊಳ್ಳಲಿದ್ದಾರೆ. 2023ರಲ್ಲಿ ಬ್ಯಾಕ್‌ ಟು ಬ್ಯಾಕ್‌ ಹಿಟ್‌ ಸಿನಿಮಾಗಳನ್ನು ನೀಡಿದ ಬಳಿಕ ಶಾರುಖ್‌ ʻಕಿಂಗ್‌ʼ ಸಿನಿಮಾ ಮೇಲೆ ಗಮನ ಹರಿಸಿದ್ದಾರೆ. ಇದೀಗ ಶಾರುಖ್‌ ಸ್ಪೇನ್‌ನಲ್ಲಿ ಚಿತ್ರದ ಚಿತ್ರೀಕರಣದಲ್ಲಿದ್ದಾರೆ ಎಂದು ವರದಿಯಾಗಿದೆ. ಈ ಚಿತ್ರವನ್ನು ಶಾರುಖ್ ಅವರ ರೆಡ್ ಚಿಲ್ಲೀಸ್ ಎಂಟರ್‌ಟೈನ್‌ಮೆಂಟ್ ಮತ್ತು ಅವರ ಪಠಾಣ್ ನಿರ್ದೇಶಕ ಸಿದ್ಧಾರ್ಥ್ ಆನಂದ್ ಅವರ ಮಾರ್ಫ್ಲಿಕ್ಸ್ ಪಿಕ್ಚರ್ಸ್ ಸಹ-ನಿರ್ಮಾಣ ಮಾಡಿದ್ದಾರೆ.ಇನ್ನು ಶಾರುಖ್‌ ಮಗಳು ಕಳೆದ ವರ್ಷ ಬಿಡುಗಡೆಯಾದ ʻದಿ ಆರ್ಚೀಸ್ʼ (The Archies) ಸಿನಿಮಾ ಮೂಲಕ ಬಣ್ಣದ ಲೋಕ ಪ್ರವೇಶಿಸಿದರು.

ಜೋಯಾ ಅಖ್ತರ್ ಮತ್ತು ರೀಮಾ ಕಾಗ್ತಿ ನಿರ್ದೇಶನದ ‘ದಿ ಆರ್ಚೀಸ್’ ಸಿನಿಮಾದಲ್ಲಿ ಸುಹಾನಾ ಜತೆಗೆ ಅಮಿತಾಭ್‌ ಬಚ್ಚನ್ ಮತ್ತು ಜಯಾ ಬಚ್ಚನ್ ಅವರ ಮೊಮ್ಮಗ ಅಗಸ್ತ್ಯ ನಂದಾ ಕೂಡ ನಟಿಸಿದ್ದರು. ಈ ವೇಳೆ ಅವರಿಬ್ಬರು ಡೇಟಿಂಗ್ ನಡೆಸುತ್ತಿದ್ದರು ಎನ್ನುವ ಗುಸುಗುಸು ಹಬ್ಬಿತ್ತು. ಆದರೆ ಈ ಬಗ್ಗೆ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲ. ಸುಹಾನಾ ಖಾನ್‌ ಅಭಿನಯದ ಮೊದಲ ಚಿತ್ರ ‘ದಿ ಆರ್ಚೀಸ್’ ಒಟಿಟಿಯಲ್ಲಿ ತೆರೆಕಂಡು ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Urfi Javed: ಎಲ್ಇಡಿ ಡಿಸ್ಪ್ಲೇ ಇಂದ ಮಾನ ಮುಚ್ಚಿಕೊಂಡು ಬಂದ ಉರ್ಫಿ ಜಾವೇದ್!

Urfi Javed: ಇದಕ್ಕೂ ಮುಂಚೆ ಯೂನಿವರ್ಸ್-ಪ್ರೇರಿತ ಉಡುಗೆ ತೊಟ್ಟು ಪೋಸ್‌ ಕೊಟ್ಟಿದ್ದರು. ಉಡುಪಿನೊಳಗೇ ಬ್ರಹ್ಮಾಂಡ ತೋರಿಸಿದ್ದರು ನಟಿ ಉರ್ಫಿ. ಉರ್ಫಿ ಅವರನ್ನು ಆಧುನಿಕ ಶ್ರೀಕೃಷ್ಣ ಎನ್ನುತ್ತಿದ್ದರು ಫ್ಯಾನ್ಸ್​. ತಮ್ಮ ಸ್ಕರ್ಟ್‌ನಲ್ಲಿ ಬ್ರಹ್ಮಾಂಡ ತಿರುಗುವ ರೀತಿಯಲ್ಲಿ ತೋರಿಸಿದ್ದರು. ಇಡೀ ಗ್ರಹಗಳನ್ನು ಸ್ಕರ್ಟ್‌ನಲ್ಲಿ ನೋಡಬಹುದಾಗಿತ್ತು. ʻಕೆಲವರು ಶ್ರೀಕೃಷ್ಣ ಪರಮಾತ್ಮ ಬಾಯಲ್ಲಿ ಬ್ರಹ್ಮಾಂಡ ತೋರಿದರೆ, ನೀವು ಉಡುಪಿನೊಳಗೇ ಬ್ರಹ್ಮಾಂಡ ತೋರಿದ್ದೀರಿ, ಆಧುನಿಕ ಕೃಷ್ಣ ನೀವುʼ ಎನ್ನುತ್ತಿದ್ದರು.

VISTARANEWS.COM


on

Urfi Javed 'LED Display Top' On Mumbai Streets
Koo

ಬೆಂಗಳೂರು: ಕೆಲವು ದಿನಗಳಿಂದ ನಟಿ ಉರ್ಫಿ ಜಾವೇದ್ (Urfi Javed) ಕುಡಿದು ತೇಲಡುತ್ತಿರುವ ವಿಡಿಯೊ ಭಾರಿ ವೈರಲ್‌ ಆಗಿತ್ತು. ಹೀಗಾಗಿ ಉರ್ಫಿಯ ಫ್ಯಾಷನ್‌ ಬಗ್ಗೆಯೇ ಸಾಕಷ್ಟು ಸುದ್ದಿಯಾಗಿತ್ತು. ಇದೀಗ ಬಸ್​, ಮಳಿಗೆಗಳಿಗೆ ಅಳವಡಿಸಿ ಡಿಜಿಟಲ್​ ನಾಮಫಲಕವನ್ನು ಎದೆಗೆ ಅಳವಡಿಸಿಕೊಂಡು ಹೋಗಿದ್ದಾರೆ. , ಇನ್ನು ಫ್ಲ್ಯಾಟ್ ಚೆಸ್ಟ್​ ಎಂದು ನೀವು ಹೇಳುವುದು ಏಕೆ ಎಂದು ನಟಿಯ ಕಾಲೆಳೆಯುತ್ತಿದ್ದಾರೆ.

 ಕೆಲ ದಿನಗಳ ಹಿಂದೆ,  ಮೈಮೇಲಿಂದಲೇ ಉದುರುವ ಹೂವು-ಎಲೆ ಹಾರಾಡುವ ಚಿಟ್ಟೆಗಳ ಬಟ್ಟೆ ತೊಟ್ಟು ಅಭಿಮಾನಿಗಳ ಹುಬ್ಬೇರಿಸಿದ್ದರು.  ಇದರ ವಿಡಿಯೋ ಸಕತ್​ ವೈರಲ್​ ಆಗಿದ್ದು,  ಇಂಥ ಐಡಿಯಾ ಬೇರೆ ಯಾರಿಗೂ ಹೊಳೆಯಲು ಸಾಧ್ಯವೇ ಇಲ್ಲ ಬಿಡಿ ಎಂದು ಉರ್ಫಿ ಅಭಿಮಾನಿಗಳು ದೊಡ್ಡ ನಮಸ್ಕಾರ ಹಾಕಿದ್ದರು.  

ಇದಕ್ಕೂ ಮುಂಚೆ ಯೂನಿವರ್ಸ್-ಪ್ರೇರಿತ ಉಡುಗೆ ತೊಟ್ಟು ಪೋಸ್‌ ಕೊಟ್ಟಿದ್ದರು. ಉಡುಪಿನೊಳಗೇ ಬ್ರಹ್ಮಾಂಡ ತೋರಿಸಿದ್ದರು ನಟಿ ಉರ್ಫಿ. ಉರ್ಫಿ ಅವರನ್ನು ಆಧುನಿಕ ಶ್ರೀಕೃಷ್ಣ ಎನ್ನುತ್ತಿದ್ದರು ಫ್ಯಾನ್ಸ್​. ತಮ್ಮ ಸ್ಕರ್ಟ್‌ನಲ್ಲಿ ಬ್ರಹ್ಮಾಂಡ ತಿರುಗುವ ರೀತಿಯಲ್ಲಿ ತೋರಿಸಿದ್ದರು. ಇಡೀ ಗ್ರಹಗಳನ್ನು ಸ್ಕರ್ಟ್‌ನಲ್ಲಿ ನೋಡಬಹುದಾಗಿತ್ತು. ʻಕೆಲವರು ಶ್ರೀಕೃಷ್ಣ ಪರಮಾತ್ಮ ಬಾಯಲ್ಲಿ ಬ್ರಹ್ಮಾಂಡ ತೋರಿದರೆ, ನೀವು ಉಡುಪಿನೊಳಗೇ ಬ್ರಹ್ಮಾಂಡ ತೋರಿದ್ದೀರಿ, ಆಧುನಿಕ ಕೃಷ್ಣ ನೀವುʼ ಎನ್ನುತ್ತಿದ್ದರು.

ಇದನ್ನೂ ಓದಿ: Urfi Javed: ಚಿಟ್ಟೆ, ಬ್ರಹ್ಮಾಂಡ ಎಲ್ಲಾ ಆಯ್ತು! ಈಗ ಅಕ್ಟೋಪಸ್​​ನಂತೆ ಬಂದ ಉರ್ಫಿ!

ಫ್ಯಾಷನ್‌ ಐಕಾನ್‌ ಎಂದೇ ಖ್ಯಾತಿ ಪಡೆದಿರುವ ಉರ್ಫಿ ಜಾವೇದ್ (Urfi Javed) ಆಗಾಗ ಸುದ್ದಿಯಾಗುತ್ತಲೇ ಇರುತ್ತಾರೆ. ಇದರ ಜತೆಗೆ ಉರ್ಫಿ ಜಾವೇದ್‌ ಬಾಲಿವುಡ್‌ಗೂ ಕಾಲಿಟ್ಟಿದ್ದಾರೆ. ಏಕ್ತಾ ಕಪೂರ್ ನಿರ್ಮಾಣದ ‘ಲವ್ ಸೆಕ್ಸ್ ಔರ್ ಧೋಖಾ 2’ ಸಿನಿಮಾದಲ್ಲಿ ಅವರು ಅಭಿನಯಿಸಿದ್ದರು. ಏಪ್ರಿಲ್ 19ರಂದು ಸಿನಿಮಾ ಬಿಡುಗಡೆಯಾಗಿತ್ತು. ಈ ಚಿತ್ರವನ್ನು ದಿವಾಕರ್ ಬ್ಯಾನರ್ಜಿ ನಿರ್ದೇಶಿಸಿದ್ದರು. ಈ ಹಿಂದೆ ಇವರು ʻಲವ್ ಸೆಕ್ಸ್ ಔರ್ ಧೋಖಾʼ ಸಿನಿಮಾಕ್ಕೆ ಆ್ಯಕ್ಷನ್‌ ಕಟ್‌ ಹೇಳಿದ್ದರು. ʼಲವ್ ಸೆಕ್ಸ್ ಔರ್ ಧೋಖಾ 2ʼನಲ್ಲಿ ಆಸಕ್ತಿದಾಯಕ ಕಥೆ ಇರಲಿದೆ ಎಂದು ಚಿತ್ರತಂಡ ಹೇಳಿಕೊಂಡಿತ್ತು. ಇಂಟರ್‌ನೆಟ್‌ ಜಗತ್ತಿನಲ್ಲಿ ನಡೆಯುವ ಪ್ರೀತಿಯ ಕಥೆ ಇರಲಿದೆ ಎನ್ನಲಾಗಿತ್ತು.

Continue Reading

ಟಾಲಿವುಡ್

Pushpa 2: ಪುಷ್ಪ 2 ಚಿತ್ರದಲ್ಲಿ ಇರಲಿದ್ದಾರಂತೆ ಈ ಕನ್ನಡದ ಹೀರೋಯಿನ್​?

Pushpa 2: ಶ್ರೀಲೀಲಾ (Sreeleela) ಅವರು ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೇ ಟಾಲಿವುಡ್​ನಲ್ಲೂ ಅವಕಾಶಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಅಲ್ಲು ಅರ್ಜುನ್​ ಅಭಿನಯದ ‘ಪುಷ್ಪ 2’ (Pushpa 2 Movie) ಸಿನಿಮಾದಲ್ಲಿನ ಸ್ಪೆಷಲ್​ ಸಾಂಗ್​ಗೆ ಶ್ರೀಲೀಲಾ ಡ್ಯಾನ್ಸ್​ ಮಾಡುವ ಸಾಧ್ಯತೆ ಇದೆ ಎಂಬ ಮಾತು ಕೇಳಿಬರುತ್ತಿದೆ. ‘

VISTARANEWS.COM


on

Pushpa 2 Leela offered to do special song in Pushpa 2
Koo

ಬೆಂಗಳೂರು: ಟಾಲಿವುಡ್‌ನ ಅಲ್ಲು ಅರ್ಜುನ್‌ ಮತ್ತು ನಟಿ ರಶ್ಮಿಕಾ ಮಂದಣ್ಣ (Rashmika Mandanna) ನಟನೆಯ ʼಪುಷ್ಪಾ: ದಿ ರೈಸ್‌ʼ (Pushpa 2) ಸಿನಿಮಾ ಭಾರತದಾದ್ಯಂತ ಹಿಟ್‌ ಆಗಿತ್ತು. . ಸಮಂತಾ ರುತ್​ ಪ್ರಭು ಅವರು ಡ್ಯಾನ್ಸ್ ಮಾಡಿದ್ದ ‘ಉ ಅಂಟಾವಾ ಮಾವ, ಉಊ ಅಂಟಾವಾ ಮಾವ..’ ಹಾಡು ಸೂಪರ್​ ಹಿಟ್​ ಆಗಿತ್ತು. ಈಗ ಎರಡನೇ ಪಾರ್ಟ್​ನಲ್ಲಿ ಯಾರು ಹೆಜ್ಜೆ ಹಾಕಲಿದ್ದಾರೆ ಎನ್ನುವ ಕುತೂಹಲ ಮೂಡಿದೆ. ‘ಪುಷ್ಪ 2’ ಸಿನಿಮಾದಲ್ಲಿ ಬಾಲಿವುಡ್ ನಟಿ ಜಾನ್ಹವಿ ಕಪೂರ್ ಐಟಂ ಸಾಂಗ್ ಮಾಡಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಜಾನ್ವಿ ಜೊತೆಗೆ ಕನ್ನಡದ ನಟಿ ಶ್ರೀಲೀಲಾ ಹೆಸರು ಕೂಡ ಚರ್ಚೆಗೆ ಬಂದಿದೆ. ಆದರೆ ಇನ್ನೂ ಅಧಿಕೃತ ಘೋಷಣೆ ಹೊರಬಿದ್ದಿಲ್ಲ.

ಶ್ರೀಲೀಲಾ (Sreeleela) ಅವರು ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೇ ಟಾಲಿವುಡ್​ನಲ್ಲೂ ಅವಕಾಶಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಅಲ್ಲು ಅರ್ಜುನ್​ ಅಭಿನಯದ ‘ಪುಷ್ಪ 2’ (Pushpa 2 Movie) ಸಿನಿಮಾದಲ್ಲಿನ ಸ್ಪೆಷಲ್​ ಸಾಂಗ್​ಗೆ ಶ್ರೀಲೀಲಾ ಡ್ಯಾನ್ಸ್​ ಮಾಡುವ ಸಾಧ್ಯತೆ ಇದೆ ಎಂಬ ಮಾತು ಕೇಳಿಬರುತ್ತಿದೆ. ‘ಸೀಕ್ವೆಲ್​ನಲ್ಲಿ ಆ ಅವಕಾಶ ಶ್ರೀಲೀಲಾ ಪಾಲಾಗಿದೆ ಎನ್ನಲಾಗುತ್ತಿದೆ.‘ಪುಷ್ಪ 2’ ಸಿನಿಮಾದಲ್ಲಿ ಏನೆಲ್ಲಾ ಡಿಫರೆಂಟ್ ಆಗಲಿದೆ ಎಂದು ಅಭಿಮಾನಿಗಳು ಕೂಡ ಕಾತರರಾಗಿದ್ದಾರೆ. ಅಭಿಮಾನಿಗಳ ಮನದಲ್ಲಿ ಸಿನಿಮಾದ ಕುತೂಹಲ ಮುಗಿಲು ಮುಟ್ಟಿದೆ.

ಇದನ್ನೂ ಓದಿ: Pushpa 2 New Poster: ಲುಂಗಿಯುಟ್ಟು ಒಂದು ಕೈಯಲ್ಲಿ ಕೊಡಲಿ, ಇನ್ನೊಂದು ಕೈಯಲ್ಲಿ ಗನ್ ಹಿಡಿದು ಅಬ್ಬರಿಸಿದ ಫಹಾದ್ ಫಾಸಿಲ್! ​

ಇದನ್ನೂ ಓದಿ: Nanu Mattu Gunda-2: ಬರ್ತಿದೆ ʻನಾನು ಮತ್ತು ಗುಂಡ-2ʼ ಸಿನಿಮಾ; ಡಬ್ಬಿಂಗ್‌ಗೆ ಇಳಿದ ಸಿಂಬ!

2021ರಲ್ಲಿ ತೆರೆಕಂಡು ಬಾಕ್ಸ್‌ ಆಫೀಸ್‌ನಲ್ಲಿ ಮ್ಯಾಜಿಕ್‌ ಮಾಡುದ್ದ ಪ್ಯಾನ್‌ ಇಂಡಿಯಾ ಸಿನಿಮಾ ʼಪುಷ್ಪʼದ ಮುಂದುವರಿದ ಭಾಗ ಇದು. ಸುಕುಮಾರ್ ನಿರ್ದೇಶನದ ‘ಪುಷ್ಪ 2’ ಚಿತ್ರದ ಮೊದಲ ಹಾಡು ಈಗಾಗಲೇ ರಿಲೀಸ್‌ ಆಗಿ ಧೂಳೆಬ್ಬಿಸುತ್ತಿದೆ. ಅದರಲ್ಲಿಯೂ ಯೂಟ್ಯೂಬ್‌ನಲ್ಲಿ ದಾಖಲೆಯ ವೀಕ್ಷಣೆ ಕಂಡಿದೆ. ʻಪುಷ್ಪ ಪುಷ್ಪʼ ಎಂದು ಶುರುವಾಗುವ ಹಾಡಿಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ನೀಡಿದ್ದು, ಇದರಲ್ಲಿನ ಹುಕ್ ಸ್ಟೆಪ್ ವೈರಲ್‌ ಆಗಿದೆ. ಎರಡನೇ ಹಾಡು ಕೂಡ ಔಟ್‌ ಆಗಿದ್ದು, ಅಲ್ಲು ಅರ್ಜುನ್‌ ಜತೆ ರಶ್ಮಿಕಾ ಹೆಜ್ಜೆ ಹಾಕಿದ್ದಾರೆ. ಹಾಡು ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ವೀಕ್ಷಣೆ ಪಡೆದುಕೊಂಡಿದೆ.

Continue Reading

ಬಾಲಿವುಡ್

Mukesh Khanna: ಪಾನ್ ಮಸಾಲಾ ಜಾಹೀರಾತು ಮಾಡುವವರಿಗೆ ಹೊಡೆಯಬೇಕು ಎಂದ ಮಹಾಭಾರತ ಖ್ಯಾತಿಯ ʻಭೀಷ್ಮʼ

Mukesh Khanna: ಅಕ್ಷಯ್ ಕುಮಾರ್, ಶಾರುಖ್ ಖಾನ್ ಮತ್ತು ಅಜಯ್ ದೇವಗನ್ ಅವರು ಪಾನ್ ಮಸಾಲಾ ಜಾಹೀರಾತುಗಳಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಟೀಕೆಗೊಳಗಾಗಿದ್ದಾರೆ. ಮುಖೇಶ್‌ ಖನ್ನಾ ಅವರು ‘ಇಂಥವರಿಗೆ ಹೊಡೆಯಬೇಕು’ ಎಂದು ಅವರು ಸಖತ್​ ಖಾರವಾಗಿ ಹೇಳಿದ್ದಾರೆ. 

VISTARANEWS.COM


on

Mukesh Khanna slams Ajay Devgn Shah Rukh for doing pan masala
Koo

ಬೆಂಗಳೂರು:  ಮಹಾಭಾರತ (mahabharatha) ಖ್ಯಾತಿಯ ಭೀಷ್ಮ ಪಾತ್ರಧಾರಿ ಮುಖೇಶ್ ಖನ್ನಾ (Mukesh Khanna)  ಪಾನ್ ಮಸಾಲಾ ಜಾಹೀರಾತುಗಳಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಸೂಪರ್‌ಸ್ಟಾರ್‌ಗಳಾದ ಶಾರುಖ್ ಖಾನ್ ಮತ್ತು ಅಜಯ್ ದೇವಗನ್ ಅವರನ್ನು ದೂಷಿಸಿದ್ದಾರೆ. ಅಕ್ಷಯ್ ಕುಮಾರ್, ಶಾರುಖ್ ಖಾನ್ ಮತ್ತು ಅಜಯ್ ದೇವಗನ್ ಅವರು ಪಾನ್ ಮಸಾಲಾ ಜಾಹೀರಾತುಗಳಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಟೀಕೆಗೊಳಗಾಗಿದ್ದಾರೆ. ಮುಖೇಶ್‌ ಖನ್ನಾ ಅವರು ‘ಇಂಥವರಿಗೆ ಹೊಡೆಯಬೇಕು’ ಎಂದು ಅವರು ಸಖತ್​ ಖಾರವಾಗಿ ಹೇಳಿದ್ದಾರೆ. 

ಸಂದರ್ಶನವೊಂದರಲ್ಲಿ ಮುಖೇಶ್ ಖನ್ನಾ ಮಾತನಾಡಿ, “ನೀವು ನನ್ನನ್ನು ಈ ಪಾನ್ ಮಸಾಲಾ ಜಾಹೀರಾತು ಬಗ್ಗೆ ಕೇಳಿದರೆ, ಈ ರೀತಿ ಜಾಹೀರಾತು ಮಾಡವರಿಗೆ ಹೊಡೆಯಬೇಕು ಎಂದು ಹೇಳುತ್ತೇನೆ. ನಾನು ಅಕ್ಷಯ್ ಕುಮಾರ್ ಅವರನ್ನು ನಿಂದಿಸಿದ್ದೇನೆ. ಅವರು ಆರೋಗ್ಯದ ಬಗ್ಗೆ ಕಾಳಜಿ ಇರುವ ಮನುಷ್ಯ. ಶಾರುಖ್​ ಖಾನ್, ಅಜಯ್​ ದೇವಗನ್​ ಜೊತೆ ಅವರು ಈ ಜಾಹೀರಾತು ಮಾಡಿದ್ದಾರೆ. ಇಂಥ ಜಾಹೀರಾತುಗಳ ಮೇಲೆ ಕೋಟ್ಯಂತರ ರೂಪಾಯಿ ಸುರಿಯಲಾಗುತ್ತದೆ. ಇದರಿಂದ ಜನರಿಗೆ ನೀವು ಏನು ಕಲಿಸುತ್ತಿದ್ದೀರಿ? ತಾವು ಪಾನ್​ ಮಸಾಲಾ ಮಾಡುತ್ತಿಲ್ಲ, ಅಡಿಕೆ ಪುಡಿ ಮಾರುತ್ತೇವೆ ಎನ್ನುತ್ತಾರೆ. ಆದರೆ ತಾವು ಮಾಡುತ್ತಿರುವುದು ಏನು ಅಂತ ಅವರಿಗೂ ಗೊತ್ತಿದೆ’ ಎಂದು ಮುಖೇಶ್​ ಖನ್ನಾ ಹೇಳಿದ್ದಾರೆ.

ʻʻನೀವು ಕಿಂಗ್‌ಫಿಶರ್ ಜಾಹೀರಾತನ್ನು ಮಾಡಿದರೆ, ನೀವು ಕಿಂಗ್‌ಫಿಶರ್ ಬಿಯರ್ ಅನ್ನು ಮಾರಾಟ ಮಾಡುತ್ತಿದ್ದೀರಿ ಎಂದರ್ಥ. ಎಲ್ಲರಿಗೂ ತಿಳಿದಿದೆ, ಇದನ್ನು ಮೋಸಗೊಳಿಸುವ ಜಾಹೀರಾತು ಎಂದು ಕರೆಯಲಾಗುತ್ತದೆ. ಅವರು ಈ ಜಾಹೀರಾತುಗಳನ್ನು ಏಕೆ ಮಾಡುತ್ತಾರೆ? ಅವರ ಬಳಿ ಹಣವಿಲ್ಲವೇ? ನಾನು ಅವರಿಗೆ ಇದನ್ನು ಹೇಳಿದ್ದೇನೆ, ಈ ಕೆಲಸಗಳನ್ನು ಮಾಡಬೇಡಿ, ನಿಮ್ಮ ಬಳಿ ಸಾಕಷ್ಟು ಹಣವಿದೆ. ಕೆಲವು ನಟರು ಅದನ್ನು ಹಿಂಪಡೆದಿದ್ದಾರೆ, ಅವರಲ್ಲಿ ಅಕ್ಷಯ್ ಒಬ್ಬರು. ಅಮಿತಾಭ್‌ ಬಚ್ಚನ್ ಕೂಡ ಅದರಿಂದ ದೂರ ಸರಿದಿದ್ದಾರೆ. ಆದರೆ, ಇಲ್ಲಿಯವರೆಗೆ, ಈ ಜಾಹೀರಾತುಗಳನ್ನು ಮಾಡಲು ಕೋಟ್ಯಂತರ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ. ನೀವು ಜನರಿಗೆ ಗುಟ್ಕಾ ಸೇವಿಸಲು ಕಲಿಸುತ್ತಿದ್ದೀರಿ! ಅದನ್ನು ಮಾಡಬೇಡಿ,” ಎಂದು ನಟ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Nanu Mattu Gunda-2: ಬರ್ತಿದೆ ʻನಾನು ಮತ್ತು ಗುಂಡ-2ʼ ಸಿನಿಮಾ; ಡಬ್ಬಿಂಗ್‌ಗೆ ಇಳಿದ ಸಿಂಬ!

ಈ ಹಿಂದೆ ಈ ವಿಚಾರದ ಬಗ್ಗೆ  ಜಾನ್ ಅಬ್ರಹಾಂ ಟೀಕಿಸಿದ್ದರು. ʻʻಜನರು ಫಿಟ್ನೆಸ್ ಬಗ್ಗೆ ಮಾತನಾಡುತ್ತಾರೆ. ಆ ಬಳಿಕ ಅದೇ ವ್ಯಕ್ತಿಗಳು ಪಾನ್ ಮಸಾಲ ಪ್ರಚಾರ ಮಾಡುತ್ತಾರೆ. ನಾನು ಇಂಡಸ್ಟ್ರಿಯ ಎಲ್ಲರನ್ನೂ ಪ್ರೀತಿಸುತ್ತೇನೆ. ನಾನು ಅವರನ್ನು ಅಗೌರವಿಸುತ್ತಿಲ್ಲ. ಒಂದು ವಿಚಾರವನ್ನು ನಾನು ಸ್ಪಷ್ಟಪಡಿಸಬೇಕು. ನಾನು ನನ್ನ ಬಗ್ಗೆ ಮಾತನಾಡುತ್ತೇನೆ. ನಾನು ಸಾವನ್ನು ಮಾರಾಟ ಮಾಡಲ್ಲ. ಇದಕ್ಕೆ ನಾನು ಹಾಕಿಕೊಂಡ ಪ್ರಿನ್ಸಿಪಲ್ ಕಾರಣ. ನಾನು ನನ್ನ ಜೀವನವನ್ನು ಪ್ರಾಮಾಣಿಕತೆಯಿಂದ ಜೀವಿಸಿದರೆ ಮತ್ತು ನಾನು ಬೋಧಿಸುವದನ್ನು ನಾನು ಅಭ್ಯಾಸ ಮಾಡಿದರೆ, ಆಗ ನಾನೇ ರೋಲ್ ಮಾಡೆಲ್ ’ ಎಂದಿದ್ದರು.

Continue Reading

ಸ್ಯಾಂಡಲ್ ವುಡ್

Nanu Mattu Gunda-2: ಬರ್ತಿದೆ ʻನಾನು ಮತ್ತು ಗುಂಡ-2ʼ ಸಿನಿಮಾ; ಡಬ್ಬಿಂಗ್‌ಗೆ ಇಳಿದ ಸಿಂಬ!

Nanu Mattu Gunda-2:ನಾನು ಮತ್ತು ಗುಂಡ’ ಚಿತ್ರದ ಸೀಕ್ವೇಲ್ ಆಗಿ ತೆರೆಗೆ ಬರುತ್ತಿರುವ ನಾನು ಮತ್ತು ಗುಂಡ -‌2 ನಲ್ಲಿ ನಾಯಕ ರಾಕೇಶ್ ಅಡಿಗ ಜೊತೆ ಡಾಗ್ ಸಿಂಬ ಕೂಡ ಪ್ರಮುಖ‌ ಪಾತ್ರದಲ್ಲಿ ಕಾಣಿಸಿಕೊಂಡಿದೆ.

VISTARANEWS.COM


on

Nanu Mattu Gunda-2 dog simba dubbing rakesh adiga in main roles
Koo

ಬೆಂಗಳೂರು: ನಾನು ಮತ್ತು ಗುಂಡ-2 (Nanu Mattu Gunda-2) ಚಿತ್ರದ ಒಂದು ವಿಡಿಯೋ ಈ ಹಿಂದೆ ರಿಲೀಸ್ ಆಗಿತ್ತು. ಇದು ಚಿತ್ರದ ಟೈಟಲ್ ರಿವೀಲ್ ಮಾಡಿತ್ತು. ಗುಂಡನ ಪಾತ್ರದ ಹೇಗಿರುತ್ತದೆ ಅನ್ನುವುದನ್ನು ತೋರಿಸಿಕೊಟ್ಟಿತ್ತು. ನಾನು ಮತ್ತು ಗುಂಡ ಚಿತ್ರದಲ್ಲಿ ರಾಕೇಶ್ ಅಡಿಗ ಹೀರೋ ಆಗಿದ್ದಾರೆ. ಲವ್ ಮಾಕ್ಟೆಲ್ ಚಿತ್ರದಲ್ಲಿ ನಟಿಸಿದ್ದ ರಚನಾ ಇಂದರ್ ಈ ಚಿತ್ರದ ಹೀರೋಯಿನ್ ಆಗಿದ್ದಾರೆ.ನಾನು ಮತ್ತು ಗುಂಡ’ ಚಿತ್ರದ ಸೀಕ್ವೇಲ್ ಆಗಿ ತೆರೆಗೆ ಬರುತ್ತಿರುವ ನಾನು ಮತ್ತು ಗುಂಡ -‌2 ನಲ್ಲಿ ನಾಯಕ ರಾಕೇಶ್ ಅಡಿಗ ಜೊತೆ ಡಾಗ್ ಸಿಂಬ ಕೂಡ ಪ್ರಮುಖ‌ ಪಾತ್ರದಲ್ಲಿ ಕಾಣಿಸಿಕೊಂಡಿದೆ.

ರಘುಹಾಸನ್ ಆಕ್ಷನ್ ಕಟ್ ಹೇಳುತ್ತಿರುವ ಈ ಚಿತ್ರ ಕನ್ನಡ, ತೆಲುಗು, ಹಿಂದಿ ಸೇರಿ ಐದು ಭಾಷೆಗಳಲ್ಲಿ ತೆರೆಗೆ ಬರುತ್ತಿದೆ. ಈಗಾಗಲೇ ಚಿತ್ರದ ಚಿತ್ರೀಕರಣ ಮುಗಿದು ಡಬ್ಬಿಂಗ್ ಕೆಲಸ ಈಗಷ್ಟೇ ಶುರುವಾಗಿದೆ. ಇಡೀ ಸಿನಿಮಾದಲ್ಲಿ ಎಲ್ಲಾ ರೀತಿಯ ಎಮೋಷನ್ಸ್ ಇದ್ದು, ವಿಶೇಷವಾಗಿ ಡಾಗ್ ಸಿಂಬಾ ರೆಕಾರ್ಡಿಂಗ್ ಸ್ಟುಡೊಯೋಗೆ ಬಂದು ತನ್ನ ಪಾತ್ರಕ್ಕೆ ತಾನೇ ಡಬ್ ಮಾಡುತ್ತಿದೆ. ಎಲ್ಲಿ ಅವಶ್ಯಕತೆ ಇದೆಯೋ ಅಲ್ಲಿ ಅದರ ಬೊಗಳೋ ಸೌಂಡ್ ರೆಕಾರ್ಡ್ ಮಾಡಲಾಗುತ್ತಿದೆ.

ʻʻಪ್ರತಿ ಜಾತಿಯ ನಾಯಿಯದೂ ಒಂದೊಂದು ರೀತಿ ಸೌಂಡ್ ಇರುತ್ತದೆ. ಹಾಗಾಗಿಯೇ ನಾವು ನಮ್ಮ ಗುಂಡನ ಪಾತ್ರ ಮಾಡಿರೋ ಸಿಂಬಾನಿಂದಲೇ ಡಬ್ಬಿಂಗ್ ಮಾಡಿಸುತ್ತಿದ್ದೇವೆ.ಡಾಗ್ ಕೈಲಿ ಡಬ್ಬಿಂಗ್ ಮಾಡಿಸುತ್ತಿರುವುದು ನಾವೇ ಮೊದಲೆನ್ನಬಹುದು. ಹಿಂದಿನ ಪಾರ್ಟ್ ಒನ್ ಚಿತ್ರದಲ್ಲೂ ಡಾಗ್‌ನಿಂದಲೇ ಡಬ್ಬಿಂಗ್ ಮಾಡಿಸಿದ್ದೇವೆ. ಆದರೆ, ಅದು ಕೆಲವೇ ಕೆಲವು ದೃಶ್ಯಗಳಲ್ಲಿ ಮಾತ್ರ ಆಗಿತ್ತು. ಪಾರ್ಟ್-2ನ ಇಡೀ ಸಿನಿಮಾದಲ್ಲಿ ಡಾಗ್ ಸಿಂಬಾನೇ ಡಬ್ ಮಾಡುತ್ತಿದೆ. ಇಂಡಿಯಾದಲ್ಲಿ ಇಲ್ಲಿವರೆಗೂ ಯಾರೂ ಈ ಪ್ರಯತ್ನ ಮಾಡಿಲ್ಲʼʼ ಎಂದು ನಿರ್ದೇಶಕ ರಘು ಹಾಸನ್ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: Kannada New Movie: `ಗೋಪಿಲೋಲ’ ಸಿನಿಮಾದ ಎರಡನೇ ಹಾಡು ರಿಲೀಸ್ !

ದೆ. ಮೊದಲ ಭಾಗದಲ್ಲಿ ಮರಣ ಹೊಂದಿದ್ದ ನಾಯಕ ಶಂಕರ​ನಿಗೆ ಎರಡನೇ ಭಾಗದಲ್ಲಿ ಪುನರ್ಜನ್ಮವಾಗಿರುತ್ತದೆ. ಗೋವಿಂದೇ ಗೌಡ ಹಾಗೂ ನಾಯಿಯ ಪಾತ್ರದ ಮೂಲಕ ಚಿತ್ರಕಥೆ ಮುಂದುವರೆಯಲಿದೆ. ಸೋಷಿಯಲ್ ಕನ್ಸರ್ನ್ ಜೊತೆಗೆ ಡಿವೈನ್ ಕಂಟೆಂಟ್ ಕೂಡ ಚಿತ್ರದಲ್ಲಿದೆ. ಸಂಭಾಷಣೆ ಹಾಗೂ ಸಾಹಿತ್ಯವನ್ನು ರೋಹಿತ್ ರಮನ್ ರಚಿಸಿದ್ದಾರೆ.ಸಿನಿಮಾ ನಿರ್ದೇಶನದ ಜೊತೆಗೆ ನಿರ್ಮಾಣದ ಜವಾಬ್ದಾರಿಯನ್ನೂ ರಘು ಹಾಸನ್ ಹೊತ್ತಿದ್ದಾರೆ. ಪೊಯೆಮ್ ಪಿಕ್ಚರ್ಸ್ ಲಾಂಛನದಲ್ಲಿ ತಯಾರಾಗುತ್ತಿರುವ ‘ನಾನು ಮತ್ತು ಗುಂಡ 2’ಗೆ ಆರ್.ಪಿ.ಪಟ್ನಾಯಕ್ ಸಂಗೀತ, ರುತ್ವಿಕ್ ಮುರಳೀಧರ್ ಹಿನ್ನೆಲೆ ಸಂಗೀತ, ತನ್ವಿಕ್ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ ಹಾಗು ರಾಘು ನೃತ್ಯ ನಿರ್ದೇಶನವಿದೆ. ಕನ್ನಡ, ತೆಲುಗು, ಹಿಂದಿ ಸೇರಿ ಐದು ಭಾಷೆಗಳಲ್ಲಿ ಚಿತ್ರ ತೆರೆಗೆ ಬರಲಿದೆ.

Continue Reading
Advertisement
submarines
ದೇಶ10 mins ago

Submarines: ಎರಡು ಪರಮಾಣು ಜಲಾಂತರ್ಗಾಮಿ ನೌಕೆಗಳಿಗಾಗಿ ಕೇಂದ್ರಕ್ಕೆ ಭಾರತೀಯ ನೌಕಾಪಡೆ ಮನವಿ

Urfi Javed 'LED Display Top' On Mumbai Streets
ಬಾಲಿವುಡ್36 mins ago

Urfi Javed: ಎಲ್ಇಡಿ ಡಿಸ್ಪ್ಲೇ ಇಂದ ಮಾನ ಮುಚ್ಚಿಕೊಂಡು ಬಂದ ಉರ್ಫಿ ಜಾವೇದ್!

Tungabhadra Dam
ಬೆಂಗಳೂರು51 mins ago

Tungabhadra Dam: ರಾಜ್ಯದ ಎಲ್ಲ ಡ್ಯಾಮ್‌ಗಳ ಪರಿಶೀಲನೆಗೆ ಸಮಿತಿ ರಚನೆ: ಡಿ.ಕೆ. ಶಿವಕುಮಾರ್ ಸುಳಿವು

Self Harming
ಚಿತ್ರದುರ್ಗ1 hour ago

Self Harming : ಹೆಂಡ್ತಿ ಟಾರ್ಚರ್‌ಗೆ ನೇಣು ಬಿಗಿದುಕೊಂಡು ಗಂಡ ಆತ್ಮಹತ್ಯೆ

Pushpa 2 Leela offered to do special song in Pushpa 2
ಟಾಲಿವುಡ್2 hours ago

Pushpa 2: ಪುಷ್ಪ 2 ಚಿತ್ರದಲ್ಲಿ ಇರಲಿದ್ದಾರಂತೆ ಈ ಕನ್ನಡದ ಹೀರೋಯಿನ್​?

Hindenburg Report
ದೇಶ2 hours ago

Hindenburg Report: ಷೇರು ಮಾರುಕಟ್ಟೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್‌ ಗಾಂಧಿಗೆ ಬಿಜೆಪಿ ಟಾಂಗ್‌

karnataka rain weather forecast
ಮಳೆ2 hours ago

Karnataka Rain : ಧಾರಾಕಾರ ಮಳೆಗೆ ಕೆರೆಯಂತಾದ ಬೆಂಗಳೂರು-ಹೊಸೂರು ಹೈವೆ; ಡ್ಯಾಡಿಸ್ ಗಾರ್ಡನ್ ಲೇಔಟ್‌ಗೆ ಜಲದಿಗ್ಬಂದನ

Gold Rate Today
ಚಿನ್ನದ ದರ2 hours ago

Gold Rate Today: ಮತ್ತೆ ಹೆಚ್ಚಾಯ್ತು ಚಿನ್ನದ ದರ; ಬಂಗಾರ ಇಂದು ಇಷ್ಟು ದುಬಾರಿ

Tungabhadra Dam
ಕರ್ನಾಟಕ2 hours ago

Tungabhadra Dam: ತುಂಗಭದ್ರಾ ಜಲಾಶಯದಿಂದ ಅಪಾರ ಪ್ರಮಾಣದ ನೀರು ಬಿಡುಗಡೆ; ನದಿಪಾತ್ರದ ಗ್ರಾಮಗಳಲ್ಲಿ ಡಂಗುರ ಸಾರಿ ಎಚ್ಚರಿಕೆ

Physical abuse
ದೇಶ3 hours ago

Physical Abuse: 70 ವರ್ಷದ ಮುಸ್ಲಿಂ ಧರ್ಮ ಗುರು 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡುವಾಗ ಸಿಕ್ಕಿ ಬಿದ್ದ! ವಿಡಿಯೊ ಇದೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ4 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ4 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ4 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು6 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ6 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌