Shahrukh Khan | ʻಪಠಾಣ್‌ʼ ಎರಡನೇ ಹಾಡಿಗೆ ವ್ಯಾಪಕ ಮೆಚ್ಚುಗೆ: ದೀಪಿಕಾ-ಶಾರುಖ್‌ ಸ್ಟೆಪ್ಸ್‌ಗೆ ಫ್ಯಾನ್ಸ್‌ ಫಿದಾ! - Vistara News

ಬಾಲಿವುಡ್

Shahrukh Khan | ʻಪಠಾಣ್‌ʼ ಎರಡನೇ ಹಾಡಿಗೆ ವ್ಯಾಪಕ ಮೆಚ್ಚುಗೆ: ದೀಪಿಕಾ-ಶಾರುಖ್‌ ಸ್ಟೆಪ್ಸ್‌ಗೆ ಫ್ಯಾನ್ಸ್‌ ಫಿದಾ!

ʻಪಠಾಣ್‌ʼ ಸಿನಿಮಾದ (Shahrukh Khan) ಎರಡನೇ ಹಾಡು ʻಜೂಮ್ ಜೋ ಪಠಾಣ್‌ʼ ಬಿಡುಗಡೆಗೊಂಡಿದೆ. ಈ ಹಾಡಿಗೆ ನೋಡುಗರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

VISTARANEWS.COM


on

Shahrukh Khan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಶಾರುಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ ಕಾಂಬಿನೇಶನ್‌ನಲ್ಲಿ ಬರುತ್ತಿರುವ ʻಪಠಾಣ್‌ʼ ಸಿನಿಮಾದ (Shahrukh Khan) ಎರಡನೇ ಹಾಡು ʻಜೂಮ್ ಜೋ ಪಠಾಣ್‌ʼ ಅನಾವರಣಗೊಂಡಿದೆ. ಚಿತ್ರದ ಮೊದಲ ಹಾಡು ʻಬೇಷರಮ್ ರಂಗ್ʼ ವಿವಾದ ಮಾಡುತ್ತಿರುವ ನಡುವೆ ಈ ಹಾಡು ಸಖತ್‌ ಸೌಂಡ್‌ ಮಾಡುತ್ತಿದೆ. ಶಾರುಖ್ ರಗಡ್ ಲುಕ್‌ನಲ್ಲಿ ಕಾಣಿಸಿಕೊಂಡರೆ, ದೀಪಿಕಾ ಪಡುಕೋಣೆ ಗ್ಲಾಮರಸ್​ ಆಗಿ ಕಾಣಿಸಿಕೊಂಡಿದ್ದಾರೆ. ಈ ಹಾಡಿಗೆ ನೋಡುಗರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಈ ಹಾಡನ್ನು ಯುರೋಪ್​ನ ದೇಶಗಳಲ್ಲಿ ಚಿತ್ರೀಕರಿಸಲಾಗಿದೆ. ಕಾಸ್ಟ್ಯೂಮ್‌ಗಳು ಕೂಡ ಆಕರ್ಷಕವಾಗಿದ್ದು, ಅರಿಜಿತ್ ಸಿಂಗ್​ ಹಾಡಿದ್ದಾರೆ. ಹಾಡಿನ ಕುರಿತು ಮಾತನಾಡಿದ ನಿರ್ದೇಶಕ ಸಿದ್ಧಾರ್ಥ್ ಆನಂದ್, “ನಾವು ʻಜೂಮ್ ಜೋ ಪಠಾಣ್‌ʼ ಹಾಡು ಮಾಡುವಾಗ, ಶಾರುಖ್ ಖಾನ್ ಅವರಿಗೆ ಅರಿಜಿತ್ ಸಿಂಗ್ ಹಾಡಬೇಕು ಎಂಬುದು ನನಗೆ ಸ್ಪಷ್ಟವಾಗಿತ್ತು. ಅವರು ನಮ್ಮ ದೇಶದ ನಂಬರ್ ಒನ್ ಗಾಯಕ ಮತ್ತು ಅವರು ಹಾಡಬೇಕೆಂದು ನಾವು ಬಯಸಿದ್ದೆವು. ಈ ನೃತ್ಯದಲ್ಲಿ ಅರಿಜಿತ್ ಸಿಂಗ್​ ತಮ್ಮ ಧ್ವನಿಯೊಂದಿಗೆ ಮ್ಯಾಜಿಕ್‌ ಮಾಡಿದ್ದಾರೆ. ನನ್ನ ಸಿನಿಮಾಗಳಲ್ಲಿ ಸಂಗೀತವು ಬಹಳ ಮುಖ್ಯ ಪಾತ್ರವನ್ನು ವಹಿಸುತ್ತದೆ. ಅದೃಷ್ಟವಶಾತ್ ನನ್ನೆಲ್ಲ ಚಿತ್ರಗಳ ಸಂಗೀತವನ್ನು ಉತ್ತಮವಾಗಿಯೇ ವಿಮರ್ಶಿಸಲಾಗುತ್ತಿದೆ. ‘ಜೂಮೇ ಜೋ ಪಠಾಣ್‌’ ಹಾಡು ನನಗೆ ತುಂಬಾ ಹೆಮ್ಮೆ ತಂದಿದೆ. ಪ್ರೇಕ್ಷಕರು ನೋಡಿ ಖುಷಿ ಪಡುತ್ತಾರೆ ಎಂದು ಭಾವಿಸಿದ್ದೇನೆʼʼ ಎಂದು ಹೇಳಿದ್ದಾರೆ.

ಇದನ್ನೂ ಓದಿ | Pathaan Controversy | ಮುಸ್ಲಿಂ ಸಂಘಟನೆಗಳಿಂದಲೂ ʻಪಠಾಣ್‌ʼ ಸಿನಿಮಾ ನಿಷೇಧಿಸುವಂತೆ ಒತ್ತಾಯ!

ಪಠಾಣ್‌ ಸಿನಿಮಾ ಬೇಷರಮ್ ರಂಗ್ ಹಾಡಿನ ವಿವಾದ!
ಪಠಾಣ್ ಸಿನಿಮಾದ ʻಬೇಷರಮ್‌ ರಂಗ್‌’ ಹಾಡಿನಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದ್ದಾರೆ ಎನ್ನುವ ವಿವಾದ ತಾರಕಕ್ಕೇರಿತ್ತು. ಇದು ಬೇಕು ಎಂತಲೇ ಮಾಡಿದ ಹುನ್ನಾರ ಎಂದು ಹಿಂದುಪರ ಸಂಘಟನೆಗಳು ಆರೋಪಿಸಿದ್ದವು. ‘ಬೇಷರಮ್‌ ರಂಗ್‌’ ಅಂದರೆ ಕನ್ನಡದಲ್ಲಿ ನಾಚಿಕೆ ಇಲ್ಲದ ಬಣ್ಣ ಎಂದಾಗುತ್ತದೆ. ಕೇಸರಿ ಬಣ್ಣಕ್ಕೆ ನಾಚಿಕೆ ಇಲ್ಲದ ಬಣ್ಣ ಎಂದು ಜರಿದಿದ್ದಾರೆ ಎಂದು ಹೋಲಿಕೆ ಮಾಡಿಕೊಂಡು ಹಲವರು ಗರಂ ಆಗಿದ್ದರು. ಬೇಕು ಎಂತಲೇ ಈ ರೀತಿ ಕೇಸರಿ ಬಣ್ಣಕ್ಕೆ ಅವಮಾನ ಮಾಡಲಾಗಿದೆ ಎಂದು ಕಮೆಂಟ್ ಕೂಡ ಮಾಡಿದ್ದರು. ಜನವರಿ 25, 2023ಕ್ಕೆ ಚಿತ್ರ ಬಿಡುಗಡೆಗೊಳ್ಳುತ್ತಿದೆ. ಹಿಂದಿ, ತಮಿಳು ಮತ್ತು ತೆಲುಗಿನಲ್ಲಿ ರಿಲೀಸ್‌ ಆಗುತ್ತಿರುವುದಾಗಿ ಚಿತ್ರ ತಂಡ ಹಂಚಿಕೊಂಡಿದೆ.

ಇದನ್ನೂ ಓದಿ | IPL 2023 | ಸನ್​ರೈಸರ್ಸ್​ಗೆ ಕನ್ನಡಿಗ ಮಯಾಂಕ್​ ಅಗರ್ವಾಲ್​ ನಾಯಕತ್ವ ಸಾಧ್ಯತೆ; ಇರ್ಫಾನ್‌ ಪಠಾಣ್‌ ವಿಶ್ವಾಸ​

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಬಾಲಿವುಡ್

Munawar Faruqui: ಮೊದಲ ಬಾರಿಗೆ ಪತ್ನಿ ಜತೆ ಇರುವ ಫೋಟೊ ಹಂಚಿಕೊಂಡ  ʻಬಿಗ್ ಬಾಸ್ 17ʼರ ವಿಜೇತ  ಮುನಾವರ್ ಫಾರೂಕಿ!

Munawar Faruqui: ಕೊನೆಯ ಚಿತ್ರವು ಮುನಾವರ್ ಮತ್ತು ಮೆಹಜಬೀನ್ ಕೋಟ್ವಾಲಾ ಸಂಜೆ ಪರಸ್ಪರ ಕೈ ಹಿಡಿದುಕೊಂಡು ನಿಂತಿರುವುದು ಇದೆ. ಫೋಟೋದಲ್ಲಿ, ಮುನಾವರ್ ಕಪ್ಪು ಟೀ ಶರ್ಟ್, ಆಲಿವ್ ಹಸಿರು ಪ್ಯಾಂಟ್, ಶೂ ಮತ್ತು ಕ್ಯಾಪ್ ಧರಿಸಿದ್ದರು. ಮುದ್ರಿತ ಟಿ-ಶರ್ಟ್, ಡೆನಿಮ್ಸ್ ಮತ್ತು ಸ್ನೀಕರ್ಸ್‌ನಲ್ಲಿ ಮೆಹಜಬೀನ್ ಕಾಣಿಸಿಕೊಂಡಿದ್ದಾರೆ. ಮುನಾವರ್ ಅವರ ಪತ್ನಿಗೂ ಪೋಟೊವನ್ನು ಟ್ಯಾಗ್ ಮಾಡಿದ್ದಾರೆ.

VISTARANEWS.COM


on

Munawar Faruqui shares first pic with new wife
Koo

ಬೆಂಗಳೂರು:  ಬಿಗ್ ಬಾಸ್ 17 ವಿನ್ನರ್ ಮತ್ತು ಸ್ಟ್ಯಾಂಡ್-ಅಪ್ ಕಮಿಡಿಯನ್ಮು ಮುನಾವರ್ ಫಾರೂಕಿ (Munawar Faruqui) ಎರಡನೇ ಬಾರಿಗೆ ವಿವಾಹವಾದರು ಎಂದು ವರದಿಯಾಗಿತ್ತು. ಮೇಕಪ್ ಕಲಾವಿದೆ ಮೆಹಜಬೀನ್ ಕೋಟ್ವಾಲಾ ಅವರೊಂದಿಗೆ ಮದುವೆಯಾಗಿದ್ದರು. ಇದೀಗ ಇದೇ ಮೊದಲ ಬಾರಿಗೆ ಪತ್ನಿ ಜತೆ ಇರುವ ಫೋಟೊವನ್ನು ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿಕೊಂಡಿದ್ದಾರೆ. ಒಂದು ತಿಂಗಳ ವಿವಾಹ ವಾರ್ಷಿಕೋತ್ಸವವನ್ನು ದುಬೈನಲ್ಲಿ ಸೆಲೆಬ್ರೆಟ್‌ ಮಾಡಿರುವ ಫೋಟೊವನ್ನು ಶೇರ್‌ ಮಾಡಿಕೊಂಡಿದ್ದಾರೆ.

ಮೊದಲ ಫೋಟೊದಲ್ಲಿ , ಮುನಾವರ್ ಅವರು ವಿಶ್ರಾಂತಿ ತೆಗೆದುಕೊಳ್ಳುವ, ಶಾಪಿಂಗ್ ಮುಗಿಸಿ ದುಬೈನ ಸ್ಟ್ರೀಟ್‌ನಲ್ಲಿ ಸುತ್ತಾಡುವ. ಸಂಜೆಯ ವಿಹಾರಕ್ಕೆ ಹೋವ, ಉಪಹಾರದ ಫೋಟೋ ಹಾಗೇ ತಮ್ಮ ಶೋ ಒಂದರ ಫೋಟೋವನ್ನು ಸಹ ಹಂಚಿಕೊಂಡಿದ್ದಾರೆ.

ಕೊನೆಯ ಚಿತ್ರವು ಮುನಾವರ್ ಮತ್ತು ಮೆಹಜಬೀನ್ ಕೋಟ್ವಾಲಾ ಸಂಜೆ ಪರಸ್ಪರ ಕೈ ಹಿಡಿದುಕೊಂಡು ನಿಂತಿರುವುದು ಇದೆ. ಫೋಟೋದಲ್ಲಿ, ಮುನಾವರ್ ಕಪ್ಪು ಟೀ ಶರ್ಟ್, ಆಲಿವ್ ಹಸಿರು ಪ್ಯಾಂಟ್, ಶೂ ಮತ್ತು ಕ್ಯಾಪ್ ಧರಿಸಿದ್ದರು. ಮುದ್ರಿತ ಟಿ-ಶರ್ಟ್, ಡೆನಿಮ್ಸ್ ಮತ್ತು ಸ್ನೀಕರ್ಸ್‌ನಲ್ಲಿ ಮೆಹಜಬೀನ್ ಕಾಣಿಸಿಕೊಂಡಿದ್ದಾರೆ. ಮುನಾವರ್ ಅವರ ಪತ್ನಿಗೂ ಪೋಟೊವನ್ನು ಟ್ಯಾಗ್ ಮಾಡಿದ್ದಾರೆ.

ಇದನ್ನೂ ಓದಿ: Samarjit Lankesh: ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಅಭಿನಯದ `ಗೌರಿ’ ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌!

ಇದೀಗ ಈ ಫೋಟೊಗೆ ಮುನಾವರ್‌ ಫ್ಯಾನ್ಸ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ʻಕೊನೆಯ ಫೋಟೋ ನಮ್ಮ ಹೃದಯ ಕದ್ದಿದೆʼʼಎಂದು ಒಬ್ಬರು ಕಮೆಂಟ್‌ ಮಾಡಿದ್ದಾರೆ. ಇನ್ನೊಬ್ಬರು ʻʻನಿಮ್ಮಿಬ್ಬರ ಮುಂದಿನ ಜೀವನಕ್ಕಾಗಿ ದೇವರು ಆಶೀರ್ವದಿಸಲಿʼʼಎಂದು ಕಮೆಂಟ್‌ ಮಾಡಿದ್ದಾರೆ.

ಮೇಕಪ್ ಕಲಾವಿದೆ ಮೆಹಜಬೀನ್ ಕೋಟ್ವಾಲಾ

ಮೆಹಜಬೀನ್ ಮೇಕಪ್ ಕಲಾವಿದೆ. ಆರ್ ಮಾಧವನ್, ವರುಣ್ ಧವನ್, ಯುಜ್ವೇಂದ್ರ ಚಾಹಲ್ ನಂತಹ ನಟರುಗಳ ಪತ್ನಿಯರಿಗೆ, ನೃತ್ಯಗಾರ್ತಿ ಧನಶ್ರೀ ವರ್ಮಾ ಅವರಂತಹ ಅನೇಕ ಗಣ್ಯ ವ್ಯಕ್ಯಿಗಳಿಗೆ ಮೇಕಪ್‌ ಮಾಡಿದ್ದಾರೆ. ಸಾಕಷು ಫ್ಯಾನ್ಸ್‌ ಫಾಲೋವರ್ಸ್‌ ಕೂಡ ಹೊಂದಿದ್ದಾರೆ. ವರದಿಯ ಪ್ರಕಾರ, ಮುನಾವರ್‌ನಂತೆ, ಮೆಹಜಬೀನ್ ಅವರಿಗೆ ಕೂಡ ಇದು ಎರಡನೇ ಮದುವೆ. ಮುನಾವರ್ ಅವರಿಗೆ ಈಗಾಗಲೇ ಒಬ್ಬ ಮಗನೂ ಇದ್ದಾನೆ. ಮೊದಲ ಹೆಂಡತಿ ಜತೆ ವಿಚ್ಛೇದನ ಕೂಡ ಪಡೆದುಕೊಂಡಿದ್ದಾರೆ ಮುನಾವರ್‌.

ಇನ್ನು ಮೇಕಪ್ ಕಲಾವಿದೆ ಮೆಹಜಬೀನ್ ಕೋಟ್ವಾಲಾ ಕೂಡ ಸಿಂಗಲ್‌ ಪೇರೆಂಟ್‌ ಎಂದು ವರದಿಯಾಗಿದೆ. ಮೆಹಜಬೀನ್‌ಗೆ ಈಗಾಗಲೇ 10 ವರ್ಷದ ಮಗಳಿದ್ದಾಳೆ ಎಂದು ವರದಿಯಾಗಿದೆ. ಮೆಹಜಬೀನ್ ಕೋಟ್ವಾಲಾ ಆಗಗಾಗ ಮಗಳ ಜತೆ ಇರುವ ಫೋಟೊವನ್ನು ಸೋಷಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡಿಕೊಳ್ಳುತ್ತಿರುತ್ತಾರೆ. ಮೆಹಜಬೀನ್ ಕೋಟ್ವಾಲಾ ಕೂಡ ಮೊದಲ ಗಂಡನಿಂದ ಡಿವೋರ್ಸ್‌ ಪಡೆದುಕೊಂಡಿದ್ದಾರೆ.

ಮುನಾವರ್‌ 2017ರಲ್ಲಿ ಜಾಸ್ಮಿನ್‌ ಎಂಬುವರನ್ನು ಮುನಾವರ್‌ ವಿವಾಹವಾಗಿದ್ದರು. ವಿಚ್ಛೇದನ ಬಳಿಕ ಮಗನನ್ನು ಇವರೇ ನೋಡಿಕೊಳ್ಳುತ್ತಿದ್ದಾರೆ. ಇದಾದ ಬಳಿಕ ಮುನಾವರ್‌ ನಾಜಿಲ್‌ ಸಿತೈಶಿ ಎಂಬುವರ ಜತೆ ಡೇಟಿಂಗ್‌ ನಡೆಸುತ್ತಿದ್ದರು. ಮುನಾವರ್‌ ಅವರು ಸಾಕಷ್ಟು ವಿವಾದಾತ್ಮಕ ಸುದ್ದಿಗಳಿಗೆ ಹೆಸರುವಾಸಿ. ಮುಂಬೈ ಬಂದರು ಪ್ರದೇಶದ ಹುಕ್ಕಾ ಬಾರ್‌ನಲ್ಲಿ ಪೊಲೀಸರು ಮಾ.26ರ ಮಂಗಳವಾರ ದಾಳಿ ನಡೆಸಿದ್ದರು. ಬಿಗ್ ಬಾಸ್ 17ರ ವಿಜೇತ ಮುನಾವರ್ ಫಾರೂಕಿ (Munawar Faruqui) ಸೇರಿದಂತೆ ಕೆಲವರನ್ನು ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಜಾಮೀನು ಮೂಲಕ ಹೊರಗೆ ಬಂದಿದ್ದರು ಮುನಾವರ್.

Continue Reading

ಬಾಲಿವುಡ್

Virat Kohli: ವಿಶ್ವಕಪ್ ಗೆದ್ದ ನಂತರ ಅನುಷ್ಕಾ ಶರ್ಮಾಗೆ ವಿಡಿಯೊ ಕಾಲ್‌ ಮಾಡಿ ಫ್ಲೈಯಿಂಗ್ ಕಿಸ್‌ ಕೊಟ್ಟ ವಿರಾಟ್ ಕೊಹ್ಲಿ!

Virat Kohli: ವಿರಾಟ್​ ಕೊಹ್ಲಿ ಅವರು ಈ ಸ್ಮರಣೀಯ ಗೆಲುವಿನ ಬಳಿಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿದರು. ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿದ ವೇಳೆ ಕೊಹ್ಲಿ ತಮ್ಮ ನಿವೃತ್ತಿ ಘೋಷಿಸಿದರು. ‘ದೇವರು ದೊಡ್ಡವನು. ಭಾರತಕ್ಕಾಗಿ ಇದು ನನ್ನ ಕೊನೆಯ ಟಿ20 ಪಂದ್ಯವಾಗಿತ್ತು. ನಾವು ಆ ಕಪ್ ಎತ್ತಲು ಬಯಸಿದ್ದೆ. ಇದು ಸಾಕಾರಗೊಂಡಿದೆ. ಮುಂದಿನ ಪೀಳಿಗೆಗೆ ಟಿ20 ಆಟವನ್ನು ಮುಂದಕ್ಕೆ ಕೊಂಡೊಯ್ಯುವ ಸಮಯ ಇದು. ಅದ್ಭುತ ದಿನದಂದು ವಿದಾಯ ಹೇಳುವ ಸೌಭಾಗ್ಯ ನನಗೆ ಒದಗಿದ್ದು ನಿಜ್ಜಕ್ಕೂ ಸಂತಸ ತಂದಿದೆ” ಎಂದು ಹೇಳಿದರು.

VISTARANEWS.COM


on

Virat Kohli video calls Anushka Sharma after winning
Koo

ಬೆಂಗಳೂರು: ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್​ನಲ್ಲಿ ಜೂನ್ 29ರಂದು ನಡೆದ ಟಿ20 ವಿಶ್ವಕಪ್​ 2024 (T20 World Cup 2024) ಫೈನಲ್​ನಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾವನ್ನು ಏಳು ರನ್​ಗಳ ಅಂತರದಿಂದ ಸೋಲಿಸುವ ಮೂಲಕ ಚಾಂಪಿಯನ್ ಆಗಿ (Virat Kohli) ಹೊರ ಹೊಮ್ಮಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.  ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಭಾರತೀಯ ಆಟಗಾರರು ಸಂಭ್ರಮಿಸುತ್ತಿರುವ ವಿಡಿಯೊಗಳು ಮತ್ತು ಫೋಟೋಗಳು ಸದ್ದು ಮಾಡುತ್ತಿವೆ. ವಿಶ್ವಕಪ್ ಗೆದ್ದ ನಂತರ ವಿರಾಟ್ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಶರ್ಮಾಗೆ ವಿಡಿಯೊ ಕಾಲ್‌ ಮಾಡಿರುವ ಫೋಟೊಗಳು ಸಖತ್‌ ವೈರಲ್‌ ಆಗುತ್ತಿವೆ.

ವೈರಲ್‌ ಆದ ಫೋಟೊಗಳಲ್ಲಿ ವಿರಾಟ್‌ ಸಂತಸದಿಂದ ಪತ್ನಿ ಜತೆ ಮಾತನಾಡುತ್ತಿರುವುದು ಕಂಡು ಬಂದಿದೆ. ಮಾತ್ರವಲ್ಲ ಕಾಲ್‌ ಮೂಲಕವೇ ಫ್ಲೈ ಕಿಸ್‌ ಕೂಡ ಕೊಟ್ಟಿದ್ದಾರೆ. ಈ ಭಾವುಕ ಕ್ಷಣಗಳನ್ನು ಅಭಿಮಾನಿಗಳು ಕೂಡ ಹಾಡಿ ಹೊಗಳುತ್ತಿದ್ದಾರೆ.

ನಟಿ ಅನುಷ್ಕಾ ಶರ್ಮಾ ಅವರು ತಮ್ಮ ಪತಿ-ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಹೊಗಳಿ ಇನ್‌ಸ್ಟಾದಲ್ಲಿ ಪೋಸ್ಟ್‌ ಮಾಡಿದ್ದಾರೆ. ಮಗಳು ವಾಮಿಕಾ ಬಗ್ಗೆ ಘಟನೆವೊಂದನ್ನು ಹಂಚಿಕೊಂಡಿದ್ದಾರೆ. ಅನುಷ್ಕಾ ಶರ್ಮಾ ಪೋಸ್ಟ್‌ನಲ್ಲಿ ʻʻನಮ್ಮ ಮಗಳ ದೊಡ್ಡ ಕಾಳಜಿ ಏನೆಂದರೆ, ಎಲ್ಲಾ ಆಟಗಾರರು ಟಿವಿಯಲ್ಲಿ ಅಳುತ್ತಿರುವುದನ್ನು ನೋಡಿದ ನಂತರ ಅವರನ್ನು ತಬ್ಬಿಕೊಳ್ಳಲು ಯಾರಾದರೂ ಇದ್ದರೆ ಎಂದು. ಆಗ ನಾನು ಅಂದೆ ..ಹೌದು, ಅವರನ್ನು 1.5 ಬಿಲಿಯನ್ ಜನರು ತಬ್ಬಿಕೊಂಡರು ಎಂದೆ. ಎಂತಹ ಅದ್ಭುತ ಗೆಲುವು ಮತ್ತು ಎಂತಹ ಪೌರಾಣಿಕ ಸಾಧನೆ!! ಚಾಂಪಿಯನ್ಸ್ – ಅಭಿನಂದನೆಗಳು!! ಎಂದು ಬರೆದುಕೊಂಡಿದ್ದಾರೆ. ಮತ್ತೊಂದು ಪೋಸ್ಟ್‌ನಲ್ಲಿ, ಅನುಷ್ಕಾ ಅವರು ವಿರಾಟ್ ಮುಗುಳ್ನಕ್ಕು ಟ್ರೋಫಿಯನ್ನು ಎತ್ತುತ್ತಿರುವ ಚಿತ್ರವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Virat Kohli: ಗೆಲುವಿನ ಬಳಿಕ ಪಂಜಾಬಿ ಹಾಡಿಗೆ ಮಸ್ತ್​ ಸ್ಟೆಪ್ಸ್​ ಹಾಕಿದ ವಿರಾಟ್​ ಕೊಹ್ಲಿ

ವಿದಾಯ ಹೇಳಿದ ರೋಹಿತ್​


ನಾಯಕನಾಗಿ ಮತ್ತು ಆಟಗಾರನಾಗಿ 2 ಟಿ20 ವಿಶ್ವಕಪ್​ ಗೆದ್ದ ರೋಹಿತ್​ ಗೆಲುವಿನ ಬಳಿಕ ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದರು. ಈ ಮೂಲಕ ಸ್ಮರಣೀಯ ವಿದಾಯ ಪಡೆದರು. ಪಂದ್ಯದ ಬಳಿಕ ಮಾತನಾಡಿದ ರೋಹಿತ್​, “ಇದು ನನ್ನ ಕೊನೆಯ ಅಂತಾರಾಷ್ಟ್ರೀಯ ಟಿ20 ಪಂದ್ಯ. ಚುಟುಕು ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ಇದಕ್ಕಿಂತ ಸಕಾಲ ಇನ್ನೊಂದಿಲ್ಲ. ನಾನು ಮೊದಲು ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದೇ ಟಿ20 ಆಡುವ ಮೂಲಕ. ನಾಕಯನಾಗಿ ನಾನು ಕಪ್ ಗೆಲ್ಲಬೇಕೆಂದು ಬಯಸಿದ್ದೆ. ಇದು ಸಾಕಾರಗೊಂಡಿದೆ” ಎಂದು ಹೇಳುವ ಮೂಲಕ ವಿದಾಯ ಹೇಳಿದರು. ಟಿ20ಯಲ್ಲಿ 159 ಪಂದ್ಯಗಳನ್ನು ಆಡಿರುವ ರೋಹಿತ್‌, 4231 ರನ್‌ ಗಳಿಸಿದ್ದು, 5 ಶತಕ ಹಾಗೂ 37 ಅರ್ಧಶತಕಗಳನ್ನು ಬಾರಿಸಿದ್ದಾರೆ.

ವಿದಾಯ ಹೇಳಿದ ಕೊಹ್ಲಿ


ವಿರಾಟ್​ ಕೊಹ್ಲಿ ಅವರು ಈ ಸ್ಮರಣೀಯ ಗೆಲುವಿನ ಬಳಿಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿದರು. ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿದ ವೇಳೆ ಕೊಹ್ಲಿ ತಮ್ಮ ನಿವೃತ್ತಿ ಘೋಷಿಸಿದರು. ‘ದೇವರು ದೊಡ್ಡವನು. ಭಾರತಕ್ಕಾಗಿ ಇದು ನನ್ನ ಕೊನೆಯ ಟಿ20 ಪಂದ್ಯವಾಗಿತ್ತು. ನಾವು ಆ ಕಪ್ ಎತ್ತಲು ಬಯಸಿದ್ದೆ. ಇದು ಸಾಕಾರಗೊಂಡಿದೆ. ಮುಂದಿನ ಪೀಳಿಗೆಗೆ ಟಿ20 ಆಟವನ್ನು ಮುಂದಕ್ಕೆ ಕೊಂಡೊಯ್ಯುವ ಸಮಯ ಇದು. ಅದ್ಭುತ ದಿನದಂದು ವಿದಾಯ ಹೇಳುವ ಸೌಭಾಗ್ಯ ನನಗೆ ಒದಗಿದ್ದು ನಿಜ್ಜಕ್ಕೂ ಸಂತಸ ತಂದಿದೆ” ಎಂದು ಹೇಳಿದರು.

Continue Reading

ಕ್ರಿಕೆಟ್

T20 World Cup 2024: ಸುದೀಪ್‌ ಸೇರಿದಂತೆ ಸೌತ್‌ ,ಬಾಲಿವುಡ್‌ ತಾರೆಯರು ವಿಶ್ವಕಪ್​ ಗೆಲುವನ್ನು  ಸಂಭ್ರಮಿಸಿದ್ದು ಹೀಗೆ!

T20 World Cup 2024: ನಾಯಕನಾಗಿ ಮತ್ತು ಆಟಗಾರನಾಗಿ 2 ಟಿ20 ವಿಶ್ವಕಪ್​ ಗೆದ್ದ ರೋಹಿತ್​ ಗೆಲುವಿನ ಬಳಿಕ ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದರು. ಈ ಮೂಲಕ ಸ್ಮರಣೀಯ ವಿದಾಯ ಪಡೆದರು. ಪಂದ್ಯದ ಬಳಿಕ ಮಾತನಾಡಿದ ರೋಹಿತ್​, “ಇದು ನನ್ನ ಕೊನೆಯ ಅಂತಾರಾಷ್ಟ್ರೀಯ ಟಿ20 ಪಂದ್ಯ. ಚುಟುಕು ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ಇದಕ್ಕಿಂತ ಸಕಾಲ ಇನ್ನೊಂದಿಲ್ಲ.

VISTARANEWS.COM


on

T20 World Cup 2024 Celebrities Celebrates India ICC Cricket
Koo

ಬೆಂಗಳೂರು: ಅತ್ಯಂತ ರೋಚಕವಾಗಿ ನಡೆದ ಟಿ20 ವಿಶ್ವಕಪ್​ ಫೈನಲ್(T20 World Cup 2024) ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ(South Africa vs India) ತಂಡವನ್ನು 7 ರನ್​ಗಳಿಂದ ಮಣಿಸಿದ ಭಾರತ 2ನೇ ಬಾರಿ ಚಾಂಪಿಯನ್​ ಪಟ್ಟ ಅಲಂಕರಿಸಿತು. ಜತೆಗೆ 13 ವರ್ಷಗಳ ಕಪ್​ ಬರಗಾಲ ಕೂಡ ನೀಗಿತು.  ಭಾರತ ಕ್ರಿಕೆಟ್ ತಂಡದ ಗೆಲುವನ್ನು ಸಿನಿಮಾ ಸೆಲೆಬ್ರಿಟಿಗಳು ಕೂಡ ಸಂಭ್ರಮಿಸಿದ್ದಾರೆ.

ಸ್ಯಾಂಡಲ್‌ವುಡ್‌ ನಟ ಕಿಚ್ಚ ಸುದೀಪ್‌ ಎಕ್ಸ್‌ ಖಾತೆಯಲ್ಲಿ ʻʻರಾಹುಲ್ ದ್ರಾವಿಡ್ ಸರ್ ನೀವು ನಮ್ಮ ಹೆಮ್ಮೆ. , ಘನತೆಯ ಶಿಖರ ಇದು. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಅವರುಗಳು ನಮ್ಮ ಹೀರೋಗಳಾಗಿ ಹೊರಹೊಮ್ಮಿದ್ದಕ್ಕೆ ಧನ್ಯಾವದ. ಅದ್ಭುತ ಕ್ಯಾಚ್ ಪಡೆದ ಸೂರ್ಯಕುಮಾರ್ ಯಾದವ್​ಗೆ ವಿಶೇಷ ಧನ್ಯವಾದ’ ಎಂದಿದ್ದಾರೆ ಸುದೀಪ್.

ಇದನ್ನೂ ಓದಿ: T20 World Cup 2024: ದರ್ಶನ್‌ ಜೈಲಿಗೆ ಹೋದಾಗೆಲ್ಲ ವಿಶ್ವಕಪ್‌ ಗೆದ್ದ ಭಾರತ; ಹೀಗ್ಯಾಕೆ ಅಂದ್ರು ನೆಟ್ಟಿಗರು?

ಅಮಿತಾಭ್‌ ಬಚ್ಚನ್‌ ಕೂಡ ʻʻಕಣ್ಣೀರು ಹರಿಯುತ್ತಿದೆ. ವಿಶ್ವ ಚಾಂಪಿಯನ್ಸ್ ಭಾರತ. ಭಾರತ ಮಾತಾ ಕಿ ಜಯ್‌. ಜಯ ಹಿಂದ್ ಜಯ ಹಿಂದ್ʼʼಎಂದು ಬರೆದುಕೊಂಡಿದ್ದಾರೆ.

ಇನ್ನು ನಟ, ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಸಹ ಟ್ವೀಟ್ ಮಾಡಿದ್ದು, ಸರಳವಾಗಿ, ‘ಭಾರತ ತಂಡಕ್ಕೆ ಅಭಿನಂದನೆಗಳು’ ಎಂದಿದ್ದಾರೆ. ಭಾರತ ಕ್ರಿಕೆಟ್ ತಂಡದ ಚಿತ್ರವನ್ನು ಹಂಚಿಕೊಂಡಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ ಸಹ ಟ್ವೀಟ್ ಮಾಡಿದ್ದು, ʻʻಈ ಕಪ್‌ ನಮ್ಮದು! ಹೀರೋಸ್-ಇನ್-ಬ್ಲೂ ಹೊಸ ‘ವಿಶ್ವ ಚಾಂಪಿಯನ್’! ಸೂರ್ಯ ಕುಮಾರ್‌ ಕ್ಯಾಚ್‌ ಅದ್ಭುತ. ಈ ಐತಿಹಾಸಿಕ ಗೆಲುವಿನ ಬಗ್ಗೆ ತುಂಬಾ ಹೆಮ್ಮೆ ಇದೆ. ಜೈ ಹಿಂದ್! ಎಂದು ಬರೆದುಕೊಂಡಿದ್ದಾರೆ.

ರಣದೀಪ್ ಹೂಡಾ “ಬುಮ್ರಾ ಸ್ವಿಂಗ್ ದೇವರು ಮತ್ತು ಅರ್ಶ್‌ದೀಪ್ ಮತ್ತು ಅಕ್ಸರ್ .. ಕೊಹ್ಲಿ ಬ್ಯಾಟ್ ಮತ್ತು ರೋಹಿತ್ ಗ್ರೇಟ್‌. ಧನ್ಯವಾದಗಳು ರಾಹುಲ್ ದ್ರಾವಿಡ್.”ಎಂದು ಬರೆದುಕೊಂಡಿದ್ದಾರೆ.

ಅನಿಲ್ ಕಪೂರ್, ಮತ್ತು ರಶ್ಮಿಕಾ ಮಂದಣ್ಣ, ಅನನ್ಯ ಪಾಂಡೆ, ರವೀನಾ ಟಂಡನ್ ರಣದೀಪ್ ಹೂಡಾ ರಣ್ವೀರ್ ಸಿಂಗ್ ಸೇರಿದಂತೆ ಇನ್ನೂ ಹಲವು ಸಿನಿಮಾ ಸೆಲೆಬ್ರಿಟಿಗಳು ಭಾರತ ಕ್ರಿಕೆಟ್ ತಂಡದ ಅತ್ಯದ್ಭುತವಾದ ವಿಜಯಕ್ಕೆ ಟ್ವೀಟ್ ಮಾಡಿ ಸಂಭ್ರಮ ವ್ಯಕ್ತಪಡಿಸಿದ್ದಾರೆ.

ವಿದಾಯ ಹೇಳಿದ ರೋಹಿತ್​


ನಾಯಕನಾಗಿ ಮತ್ತು ಆಟಗಾರನಾಗಿ 2 ಟಿ20 ವಿಶ್ವಕಪ್​ ಗೆದ್ದ ರೋಹಿತ್​ ಗೆಲುವಿನ ಬಳಿಕ ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದರು. ಈ ಮೂಲಕ ಸ್ಮರಣೀಯ ವಿದಾಯ ಪಡೆದರು. ಪಂದ್ಯದ ಬಳಿಕ ಮಾತನಾಡಿದ ರೋಹಿತ್​, “ಇದು ನನ್ನ ಕೊನೆಯ ಅಂತಾರಾಷ್ಟ್ರೀಯ ಟಿ20 ಪಂದ್ಯ. ಚುಟುಕು ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ಇದಕ್ಕಿಂತ ಸಕಾಲ ಇನ್ನೊಂದಿಲ್ಲ. ನಾನು ಮೊದಲು ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದೇ ಟಿ20 ಆಡುವ ಮೂಲಕ. ನಾಕಯನಾಗಿ ನಾನು ಕಪ್ ಗೆಲ್ಲಬೇಕೆಂದು ಬಯಸಿದ್ದೆ. ಇದು ಸಾಕಾರಗೊಂಡಿದೆ” ಎಂದು ಹೇಳುವ ಮೂಲಕ ವಿದಾಯ ಹೇಳಿದರು. ಟಿ20ಯಲ್ಲಿ 159 ಪಂದ್ಯಗಳನ್ನು ಆಡಿರುವ ರೋಹಿತ್‌, 4231 ರನ್‌ ಗಳಿಸಿದ್ದು, 5 ಶತಕ ಹಾಗೂ 37 ಅರ್ಧಶತಕಗಳನ್ನು ಬಾರಿಸಿದ್ದಾರೆ.

Continue Reading

Latest

OTT Release : ಒಟಿಟಿಯಲ್ಲಿ ಈ ವಾರ ಬಿಡುಗಡೆಯಾಗಲಿರುವ ಹೊಸ ಚಲನಚಿತ್ರಗಳು, ವೆಬ್ ಸರಣಿಗಳ ಪಟ್ಟಿ ಹೀಗಿವೆ

OTT Release ನೀವು ಸಿನಿಮಾ ಪ್ರಿಯರಾಗಿದ್ದರೆ ಈ ವಾರ ಒಟಿಟಿಯಲ್ಲಿ ಬಿಡುಗಡೆಯಾಗಲಿರುವ ಈ ಸಿನಿಮಾಗಳು ನಿಮಗೆ ಭರಪೂರ ಮನರಂಜನೆಯನ್ನು ನೀಡುವುದಂತೂ ಗ್ಯಾರಂಟಿ. ಎ ಫ್ಯಾಮಿಲಿ ಅಫೇರ್, ಆವೇಶಮ್, ಸಿವಿಲ್ ವಾರ್, ಸಾವೇಜ್ ಬ್ಯೂಟಿ ಸೀಸನ್ 2, ಶರ್ಮಾಜೀ ಕಿ ಬೇಟಿ, ದಿ ವೈರ್ಲ್ವಿಂಡ್ ಮುಂತಾದ ಸಿನಿಮಾಗಳು ನಿಮ್ಮನ್ನು ಹೊಸಲೋಕಕ್ಕೆ ಕರೆದುಕೊಂಡು ಹೋಗಲಿದೆ. ತಪ್ಪದೇ ಒಟಿಟಿಯಲ್ಲಿ ಈ ಸಿನಿಮಾವನ್ನು ನೋಡಿ.

VISTARANEWS.COM


on

OTT Release
Koo

ಬೆಂಗಳೂರು : ಒಟಿಟಿ ಪ್ರತಿವಾರ ತನ್ನ ವೀಕ್ಷಕರಿಗೆ ಹೊಸ ಹೊಸ ಚಲನಚಿತ್ರಗಳು ಮತ್ತು ವೆಬ್ ಸರಣಿಗಳನ್ನು ಬಿಡುಗಡೆ ಮಾಡುತ್ತದೆ. ಆ ಮೂಲಕ ಒಟಿಟಿ ತನ್ನ ವೀಕ್ಷಕರನ್ನು ಸೆಳೆಯುವ ಯೋಜನೆ ಮಾಡುತ್ತಿದೆ. ಪ್ರತಿಬಾರಿ ಒಟಿಟಿಯಲ್ಲಿ ಉತ್ತಮವಾದ ಚಿತ್ರಗಳನ್ನು ಬಿಡುಗಡೆ ಮಾಡಿ ವೀಕ್ಷಕರಿಗೆ ಮನೋರಂಜನೆಯನ್ನು ನೀಡುತ್ತಿದೆ. ಹಾಗಾದ್ರೆ ಒಟಿಟಿ(OTT Release )ಯಲ್ಲಿ ಈ ವಾರ ಬಿಡುಗಡೆಯಾಗಲಿರುವ ಹೊಸ ಚಲನಚಿತ್ರಗಳು, ವೆಬ್ ಸರಣಿಗಳ ಬಗ್ಗೆ ತಿಳಿದುಕೊಳ್ಳೋಣ.

OTT Release

ಎ ಫ್ಯಾಮಿಲಿ ಅಫೇರ್(A Family Affair):

ಒಬ್ಬ ಯುವತಿ, ಆಕೆಯ ತಾಯಿ ಮತ್ತು ಆಕೆಯ ನೆಚ್ಚಿನ ಸಿನಿಮಾ ತಾರೆ ಬಾಸ್ ಅವರ ಪ್ರೀತಿ, ಸೆಕ್ಸ್ ಅನ್ನು ನ್ಯಾವಿಗೇಟ್ ಮಾಡುವುದರಿಂದ ಅವರ ಪ್ರಣಯ ಹಾಸ್ಯ ಸನ್ನಿವೇಶಗಳಿಗೆ ಕಾರಣವಾಗುತ್ತದೆ.

ಇದರಲ್ಲಿ ನಿಕೋಲ್ ಕಿಡ್ಮನ್, ಜಾಕ್ ಎಫ್ರಾನ್, ಜೋಯಿ ಕಿಂಗ್ ನಟಿಸಿದ್ದಾರೆ. ಇದು ಜೂನ್ 28ರಂದು ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಿದೆ.

OTT Release

ಆವೇಶಮ್ (ಹಿಂದಿ) (Aavesham (Hindi):

ಮೂವರು ಹದಿಹರೆಯದ ಬಾಲಕರು ಎಂಜಿನಿಯರಿಂಗ್ ಅಧ್ಯಯನಕ್ಕಾಗಿ ಬೆಂಗಳೂರಿಗೆ ಬಂದು ಅಲ್ಲಿ ಜಗಳವಾಡುತ್ತಾರೆ. ನಂತರ ಅವರು ಹೊಡೆದಾಡಲು ಸ್ಥಳೀಯ ದರೋಡೆಕೋರನ ಸಹಾಯವನ್ನು ಪಡೆಯುತ್ತಾರೆ.

ಇದರಲ್ಲಿ ಫಹಾದ್ ಫಾಸಿಲ್, ಹಿಪ್‌ಸ್ಟರ್‌, ಸಜಿನ್ ಗೋಪು, ಮಿಥುನ್ ಜೈ ಶಂಕರ್ ನಟಿಸಿದ್ದಾರೆ. ಇದು ಹಾಸ್ಯ ಹಾಗೂ ಆ್ಯಕ್ಷನ್ ಚಿತ್ರವಾಗಿದ್ದು, ಜೂನ್ 28ರಂದು ಡಿಸ್ನಿ ಪ್ಲಸ್ ಹಾಟ್ಸ್ಸ್ಟಾರ್ನಲ್ಲಿ ಪ್ರಸಾರವಾಗಿದೆ.

OTT Release

ಸಿವಿಲ್ ವಾರ್ (Civil War):

ಯುಎಸ್ ಅಂತರ್ಯುದ್ಧದ ಸಮಯದಲ್ಲಿ ವಾರ್ ಜರ್ನಲಿಸ್ಟ್ ತಂಡವು ನ್ಯೂಯಾರ್ಕ್ ನಗರದಿಂದ ವಾಷಿಂಗ್ಟನ್ ಡಿಸಿಗೆ ಪ್ರಯಾಣಿಸುತ್ತದೆ. ಬಂಡುಕೋರರು ರಾಜಧಾನಿಯನ್ನು ವಶಪಡಿಸಿಕೊಳ್ಳುವ ಮೊದಲು ಯುಎಸ್ ಅಧ್ಯಕ್ಷರನ್ನು ಸಂದರ್ಶಿಸುವ ಗುರಿಯನ್ನು ಅವರು ಹೊಂದಿರುತ್ತಾರೆ.

ಇದರಲ್ಲಿ ಕ್ರಿಸ್ಟನ್ ಡನ್ಸ್ಟ್, ವ್ಯಾಗ್ನರ್ ಮೌರಾ, ಕೈಲೀ ಸ್ಪೇನಿ, ಸ್ಟೀಫನ್ ಮೆಕಿನ್ಲೆ ಹೆಂಡರ್ಸನ್ ನಟಿಸಿದ್ದಾರೆ. ಇದು ಆ್ಯಕ್ಷನ್, ಥ್ರಿಲ್ಲರ್ ಚಿತ್ರವಾಗಿದ್ದು, ಜೂನ್ 28ರಂದು ಅಮೆಜಾನ್ ಪ್ರೈಮ್ ವಿಡಿಯೊದಲ್ಲಿ ಪ್ರಸಾರವಾಗಿದೆ.

OTT Release

ರೌತು ಕಾ ರಾಜ್(Rautu Ka Raaz):

ಉತ್ತರಾಖಂಡದ ತೆಹ್ರಿಯ ರೌತು ಕಿ ಬೇಲಿ ಗ್ರಾಮದ ಅಂಧರ ಶಾಲೆಯ ವಾರ್ಡನ್ ತನ್ನ ಕೋಣೆಯಲ್ಲಿ ಶವವಾಗಿ ಪತ್ತೆಯಾಗುತ್ತಾನೆ. ಈ ಪ್ರಕರಣದ ತನಿಖೆ ಮಾಡಲು ಇನ್ಸ್ಪೆಕ್ಟರ್ ದೀಪಕ್ ನೇಗಿ ಅವರನ್ನು ಕರೆಸಲಾಗುತ್ತದೆ.

ಇದರಲ್ಲಿ ನವಾಜುದ್ದೀನ್ ಸಿದ್ದಿಕಿ, ರಾಜೇಶ್ ಕುಮಾರ್, ಅತುಲ್ ತಿವಾರಿ, ನಾರಾಯಣಿ ಶಾಸ್ತ್ರಿ ನಟಿಸಿದ್ದಾರೆ. ಇದು ಮಿಸ್ಟರಿ/ಥ್ರಿಲ್ಲರ್ ಚಿತ್ರವಾಗಿದ್ದು, ಜೂನ್ 28ರಂದು ಜೀ5ನಲ್ಲಿ ಬಿಡುಗಡೆಯಾಗಿದೆ.

OTT Release

ಸಾವೇಜ್ ಬ್ಯೂಟಿ ಸೀಸನ್ 2 (Savage Beauty Season 2):

ನಿಗೂಢ ಮಹಿಳೆಯೊಬ್ಬಳು ತನ್ನ ಜೀವನದಲ್ಲಿ ಹಿಂದೆ ನಡೆದ ದುರಂತಕ್ಕೆ ಸೇಡು ತೀರಿಸಿಕೊಳ್ಳಲು ಜಾಗತಿಕ ಸೌಂದರ್ಯ ಸಾಮ್ರಾಜ್ಯ ಮತ್ತು ಕರಾಳ ರಹಸ್ಯಗಳನ್ನೊಳಗೊಂಡ ಪ್ರಬಲ ಕುಟುಂಬಕ್ಕೆ ಬರುತ್ತಾಳೆ.

ಈ ಚಿತ್ರದಲ್ಲಿ ನಂಬಿತಾ ಬೆನ್-ಮಜ್ವಿ, ರೋಸ್ಮರಿ ಜಿಮು, ಎನ್ಥಾಟಿ ಮೋಶೆಶ್, ದುಮಿಸಾನಿ ಎಂಬೆಬೆ ನಟಿಸಿದ್ದಾರೆ. ಇದು ಥ್ರಿಲ್ಲರ್/ಡ್ರಾಮಾ ಚಿತ್ರವಾಗಿದ್ದು, ಜೂನ್ 28ರಂದು ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಿದೆ.

OTT Release

ಶರ್ಮಾಜೀ ಕಿ ಬೇಟಿ (Sharmajee Ki Beti):

ಶರ್ಮಾ ಎಂಬ ಉಪನಾಮ ಹೊಂದಿರುವ ಮೂವರು ಮಹಿಳೆಯರನ್ನು ಕಥೆ ಅನುಸರಿಸುತ್ತದೆ. ಅವರ ಜೀವನವು ಸರಿಯಾದ ದಾರಿಯಲ್ಲಿ ಚಲಿಸಿದರೂ ಕೂಡ ಅವರು ಸಂಕ್ಷಿಪ್ತವಾದ ಮಾರ್ಗಗಳನ್ನು ದಾಟುತ್ತಾರೆ, ಇದು ಅವರ ಜೀವನದ ಮೇಲೆ ಗಮನಾರ್ಹ ಪರಿಣಾಮವನ್ನು ಬೀರುತ್ತದೆ.

ಈ ಚಿತ್ರದಲ್ಲಿ ಸಾಕ್ಷಿ ತನ್ವರ್, ದಿವ್ಯಾ ದತ್ತಾ, ಸಯಾಮಿ ಖೇರ್ ನಟಿಸಿದ್ದಾರೆ. ಇದು ಒಂದು ಡ್ರಾಮಾವಾಗಿದ್ದು, ಜೂನ್ 28ರಂದು ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಬಿಡುಗಡೆಯಾಗಿದೆ.

ಇದನ್ನೂ ಓದಿ:  ನಟ ಶಾರುಖ್ ಖಾನ್ ಬಗ್ಗೆ ಶಾಕಿಂಗ್ ಸುದ್ದಿ ಕೊಟ್ಟ ನಟ ಗೋವಿಂದ್ ನಾಮದೇವ್

ದಿ ವೈರ್ಲ್ವಿಂಡ್(The Whirlwind):

ದಕ್ಷಿಣ ಕೊರಿಯಾದ ಸರ್ಕಾರದಲ್ಲಿ, ಭ್ರಷ್ಟಾಚಾರವನ್ನು ನಿಭಾಯಿಸುವ ಗುರಿಯನ್ನು ಹೊಂದಿರುವ ಪ್ರಧಾನಿ ಪಾರ್ಕ್ ಡಾಂಗ್ ಹೋ, ಎಂಬವವರು ಅಲ್ಲಿನ ಅಧ್ಯಕ್ಷರ ಹತ್ಯೆಯನ್ನು ಧೈರ್ಯದಿಂದ ಆಯೋಜಿಸುತ್ತಾರೆ.

ಇದರಲ್ಲಿ ಸೋಲ್ ಕ್ಯೂಂಗ್-ಗು, ಕಿಮ್ ಹೀ-ಎ, ಲೀ ಹೇ ಯಂಗ್ ನಟಿಸಿದ್ದಾರೆ. ಇದು ಒಂದು ಡ್ರಾಮಾವಾಗಿದ್ದು, ಜೂನ್ 28ರಂದು ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಿದೆ.

Continue Reading
Advertisement
Kabzaa movie Appreciation Letter from Union Finance Ministry to Sri siddeshwar Enterprises
ಕರ್ನಾಟಕ17 mins ago

Kabzaa movie: ಅತಿ ಹೆಚ್ಚು ತೆರಿಗೆ ಪಾವತಿ; ಆರ್. ಚಂದ್ರು ನಿರ್ಮಾಣ ಸಂಸ್ಥೆಗೆ ಕೇಂದ್ರದಿಂದ ಪ್ರಶಂಸಾ ಪತ್ರ!

Parliament Sessions
ಪ್ರಮುಖ ಸುದ್ದಿ25 mins ago

Parliament Sessions : ರಾಹುಲ್ ಗಾಂಧಿಯಿಂದ ಹಿಂದೂಗಳಿಗೆ ಅವಮಾನ: ಬಿಜೆಪಿ ಆರೋಪ

Reliance Jio
ಕರ್ನಾಟಕ33 mins ago

Reliance Jio: ಮೊಬೈಲ್‌ ಶುಲ್ಕ ಏರಿಕೆ; ಯಾವ ಕಂಪನಿಯ ಪ್ಲ್ಯಾನ್‌ ಸೂಕ್ತ?

Parliament Sessions
ದೇಶ42 mins ago

Parliament Sessions: ಮೋದಿ ಆತ್ಮದ ಜೊತೆ ಪರಮಾತ್ಮನ ಸಂವಹನ; ರಾಹುಲ್‌ ಗಾಂಧಿ ವ್ಯಂಗ್ಯ

MUDA site scandal
ಕರ್ನಾಟಕ48 mins ago

MUDA site scandal: ಮುಡಾ ನಿವೇಶನಗಳ ಹಂಚಿಕೆ ರದ್ದು; ಬಹುಕೋಟಿ ಹಗರಣದ ತನಿಖೆಗೆ ಸರ್ಕಾರ ಆದೇಶ

Fashion Show News
ಫ್ಯಾಷನ್1 hour ago

Fashion Show News: ಸಿಇಎಸ್‌ ಫ್ಯಾಷನ್‌ ಡಿಸೈನಿಂಗ್‌ ವಿದ್ಯಾರ್ಥಿಗಳ ರ‍್ಯಾಂಪ್‌ ಶೋ

karnataka Weather Forecast
ಮಳೆ1 hour ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

Medha Patkar
ದೇಶ2 hours ago

Medha Patkar: ನರ್ಮದಾ ಬಚಾವೋ ಹೋರಾಟಗಾರ್ತಿ ಮೇಧಾ ಪಾಟ್ಕರ್‌ಗೆ ಜೈಲು; 10ಲಕ್ಷ ರೂ. ದಂಡ

Karave Protest
ಕರ್ನಾಟಕ2 hours ago

Karave Protest: ಕನ್ನಡಿಗರಿಗೆ ಉದ್ಯೋಗ ನೀಡಲು ಕರವೇ ನಾರಾಯಣ ಗೌಡ ನಿಯೋಗ ಮನವಿ; ಶೀಘ್ರವೇ ಕ್ರಮ ಎಂದ ಸಿಎಂ

Arecanut Insurance Karnataka last date
ಕೃಷಿ2 hours ago

Arecanut Insurance : ಮೆಣಸು, ಅಡಿಕೆಗೆ ವಿಮೆ ಪ್ರೀಮಿಯಂ ಕಟ್ಟಲು ಜು.31 ಕೊನೆಯ ದಿನ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ1 hour ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ1 day ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು1 day ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

ಟ್ರೆಂಡಿಂಗ್‌