Shilpa shetty: ನಟಿ ಶಿಲ್ಪಾ ಶೆಟ್ಟಿ ತಾಯಿ ಸುನಂದಾ ಶೆಟ್ಟಿ ಆಸ್ಪತ್ರೆಗೆ ದಾಖಲು Vistara News
Connect with us

ಬಾಲಿವುಡ್

Shilpa shetty: ನಟಿ ಶಿಲ್ಪಾ ಶೆಟ್ಟಿ ತಾಯಿ ಸುನಂದಾ ಶೆಟ್ಟಿ ಆಸ್ಪತ್ರೆಗೆ ದಾಖಲು

ನಟಿ ಶಿಲ್ಪಾ ಶೆಟ್ಟಿ (Shilpa shetty) ಕುಂದ್ರಾ ಅವರ ತಾಯಿ ಸುನಂದಾ ಶೆಟ್ಟಿ ಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ʻʻಕಳೆದ ಕೆಲವು ದಿನಗಳು ಕಷ್ಟಕರವಾಗಿತ್ತು. ಇದೀಗ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆʼʼ ಎಂದು ನಟಿ ಸೋಷಿಯಲ್‌ ಮೀಡಿಯಾದಲ್ಲಿ ಭಾವನಾತ್ಮಕ ಪೋಸ್ಟ್‌ ಹಂಚಿಕೊಂಡಿದ್ದಾರೆ.

VISTARANEWS.COM


on

Shilpa shetty emotional note after mothers surgery
Koo

ಬೆಂಗಳೂರು: ನಟಿ ಶಿಲ್ಪಾ ಶೆಟ್ಟಿ (Shilpa shetty) ಕುಂದ್ರಾ ಅವರ ತಾಯಿ ಸುನಂದಾ ಶೆಟ್ಟಿ ಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ʻʻಕಳೆದ ಕೆಲವು ದಿನಗಳು ಕಷ್ಟಕರವಾಗಿತ್ತು. ಇದೀಗ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆʼʼ ಎಂದು ನಟಿ ಸೋಷಿಯಲ್‌ ಮೀಡಿಯಾದಲ್ಲಿ ಭಾವನಾತ್ಮಕ ಪೋಸ್ಟ್‌ ಹಂಚಿಕೊಂಡಿದ್ದಾರೆ.

ಶಸ್ತ್ರಚಿಕಿತ್ಸೆಯ ಹಿಂದಿನ ಕಾರಣ ಏನು ಎಂಬುದು ನಟಿ ಬಹಿರಂಗಪಡಿಸಿಲ್ಲ. ಶಿಲ್ಪಾ ಶೆಟ್ಟಿ ವೈದ್ಯ ರಾಜೀವ್ ಭಾಗವತ್ ಅವರನ್ನು ಹೊಗಳಿದ್ದಾರೆ. ಇತ್ತೀಚೆಗೆ ನಟಿ ಸುಶ್ಮಿತಾ ಸೇನ್ ಅವರು ಹೃದಯಾಘಾತಕ್ಕೆ ಒಳಗಾದ ನಂತರ ಚಿಕಿತ್ಸೆ ನೀಡಿದ ವೈದ್ಯರೇ ಇವರು. ಪೋಸ್ಟ್‌ನಲ್ಲಿ, ಶಿಲ್ಪಾ ಅವರು ತಮ್ಮ ತಾಯಿಯನ್ನು ಉದ್ದೇಶಿಸಿ ʻ’ಪೋಷಕರು ಶಸ್ತ್ರಚಿಕಿತ್ಸೆಗೆ ಒಳಗಾಗುವುದನ್ನು ನೋಡುವುದು ಯಾವುದೇ ಮಕ್ಕಳಿಗೆ ಎಂದಿಗೂ ಸುಲಭವಲ್ಲ. ಆದರೆ, ನನ್ನ ತಾಯಿಯಿಂದ ನಾನು ಏನನ್ನಾದರೂ ಕಲಿಯು ಬಯಸಿದರೆ ಅದು ಅವಳ ಧೈರ್ಯ ಮತ್ತು ಅವಳ ಹೋರಾಟ! ಥ್ಯಾಂಕ್ಯು ಸೋ ಮಚ್, ಡಾ.ರಾಜೀವ್ ಭಾಗವತ್. ಚೆನ್ನಾಗಿ ಕಾಳಜಿ ವಹಿಸಿದ್ದಕ್ಕಾಗಿʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Shilpa Shetty: ಬಾಜೀಗರ್ ಹಾಡಿನೊಂದಿಗೆ ವರ್ಕೌಟ್‌ ವಿಡಿಯೊ ಹಂಚಿಕೊಂಡ ಶಿಲ್ಪಾ ಶೆಟ್ಟಿ

ಶಿಲ್ಪಾ ಅವರ ಸಹೋದರಿ, ನಟಿ ಶಮಿತಾ ಶೆಟ್ಟಿ ಅವರು ʻʻನನ್ನ ಮಮ್ಮಿ ಸ್ಟ್ರಾಂಗ್‌ʼʼಎಂದು ಬರೆದುಕೊಂಡಿದ್ದಾರೆ. ನಟಿ ರವೀನಾ ಟಂಡನ್, “ಶೀಘ್ರವಾಗಿ ಚೇತರಿಸಿಕೊಳ್ಳಲಿʼʼ ಎಂದು ಹಾರೈಸಿದ್ದಾರೆ.

ಕಳೆದ ವರ್ಷ ರೋಹಿತ್ ಶೆಟ್ಟಿಯವರ ವೆಬ್ ಸೀರೀಸ್ ಇಂಡಿಯನ್ ಪೊಲೀಸ್‌ ಫೋರ್ಸ್ ಚಿತ್ರೀಕರಣದ ವೇಳೆ ಶಿಲ್ಪಾ ಅವರು ಕಾಲಿನ ಮೂಳೆ ಮುರಿತಕ್ಕೆ ಒಳಗಾಗಿದ್ದರು. ಆ ಸಮಯದಲ್ಲಿ, ನಟಿ ತನ್ನ ಎಲ್ಲಾ ಅನುಯಾಯಿಗಳಿಗೆ ಫಿಟ್‌ನೆಸ್ ನೀಡುವುದನ್ನು ಮುಂದುವರಿಸಿದ್ದರು. ಸಾಮಾನ್ಯವಾಗಿ ಯೋಗಾಸನಗಳು ಮತ್ತು ವ್ಯಾಯಾಮಗಳನ್ನು ಮಾಡುವ ವಿಡಿಯೊಗಳನ್ನು ಪೋಸ್ಟ್ ಮಾಡುತ್ತಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಫೇಸ್ ಬುಕ್ ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ವೈವಿಧ್ಯಮಯ ಸುದ್ದಿಗಳಿಗಾಗಿ ವಿಸ್ತಾರ ನ್ಯೂಸ್ ಟ್ವಿಟರ್ ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Kangana Ranaut : ಪ್ರಿಯಾಂಕಾ ಭಾರತ ಬಿಟ್ಟು ಹೋಗುವುದಕ್ಕೆ ಕರಣ್‌ ಜೋಹರ್ ಕಾರಣ ಎಂದ ಕಂಗನಾ!

ಬಾಲಿವುಡ್‌ ನಟಿ ಪ್ರಿಯಾಂಕಾ ಚೋಪ್ರಾ ಬಾಲಿವುಡ್‌ ತೊರೆಯುವುದಕ್ಕೆ ನಿರ್ದೇಶಕ ಕರಣ್‌ ಜೋಹರ್‌ ಅವರೇ ಕಾರಣ ಎಂದು ನಟಿ ಕಂಗನಾ ರಣಾವತ್‌ (Kangana Ranaut) ಆರೋಪಿಸಿದ್ದಾರೆ.

VISTARANEWS.COM


on

Edited by

Koo

ಮುಂಬೈ: ಬಾಲಿವುಡ್‌ ನಟಿ ಕಂಗನಾ ರಣಾವತ್‌ (Kangana Ranaut) ಸದಾ ಸೋಶಿಯಲ್‌ ಮೀಡಿಯಾ ಮೂಲಕ ಸುದ್ದಿ ಮಾಡುವವರು. ಇದೀಗ ನಟಿ ಬಾಲಿವುಡ್‌ನ ಪ್ರಸಿದ್ಧ ನಿರ್ದೇಶಕ ಕರಣ್‌ ಜೋಹರ್‌ ಅವರ ಬಗ್ಗೆ ಗಂಭೀರ ಆರೋಪವೊಂದನ್ನು ಮಾಡಿದ್ದಾರೆ. ನಟಿ ಪ್ರಿಯಾಂಕಾ ಚೋಪ್ರಾ ಭಾರತ ಬಿಟ್ಟು ಹೋಗುವುದಕ್ಕೆ ಕರಣ್‌ ಅವರೇ ಕಾರಣ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: Kangana Ranaut: ಚಿತ್ರರಂಗದಲ್ಲೇ ಅತ್ಯಂತ ದುಬಾರಿ ವ್ಯಾನಿಟಿ ವ್ಯಾನ್ ಬಳಸುತ್ತಿರುವ ನಟಿ ಕಂಗನಾ ರಣಾವತ್!
ಟ್ವಿಟರ್‌ನಲ್ಲಿ ಸಾಲು ಸಾಲು ಟ್ವೀಟ್‌ ಮಾಡಿರುವ ನಟಿ, “ಪ್ರಿಯಾಂಕಾ ವಿರುದ್ಧ ಹಲವರು ಗ್ಯಾಂಗ್‌ ಮಾಡಿಕೊಂಡರು. ಅವರ ಸಿನಿಮಾ ಕ್ಷೇತ್ರವನ್ನು ಬಿಟ್ಟು ಹೋಗುವಂತೆ ಹಿಂದೆ ಬಿದ್ದರು. ಸ್ವಯಂ ಪ್ರಯತ್ನದಿಂದ ಮೇಲೆ ಬಂದಿದ್ದ ಹೆಣ್ಣೊಬ್ಬರು ಭಾರತವನ್ನೇ ಬಿಟ್ಟು ಹೋಗುವಂತೆ ಮಾಡಿದರು. ಕರಣ್‌ ಜೋಹರ್‌ ಅವರು ಆಕೆಯನ್ನು ಬ್ಯಾನ್‌ ಮಾಡಿದ ವಿಚಾರ ಎಲ್ಲರಿಗೂ ತಿಳಿದಿದೆ” ಎಂದು ಬರೆದುಕೊಂಡಿದ್ದಾರೆ.


“ಶಾರುಖ್‌ ಖಾನ್‌ ಅವರೊಂದಿಗೆ ಪ್ರಿಯಾಂಕಾ ಸ್ನೇಹದಿಂದ ಇದ್ದಿದ್ದು ಕರಣ್‌ಗೆ ಆಗಲಿಲ್ಲ. ಹಾಗಾಗಿ ಅವರ ವಿರುದ್ಧ ಎಲ್ಲರನ್ನೂ ಎತ್ತಿಕಟ್ಟಿದರು. ಅದೇ ಕಾರಣಕ್ಕೆ ಆಕೆ ಭಾರತವನ್ನೇ ತೊರೆಯಬೇಕಾಯಿತು. ಈ ಅಸಹ್ಯಕರ, ಅಸೂಯೆ, ನೀಚ ಮತ್ತು ವಿಷಕಾರಿ ವ್ಯಕ್ತಿಗೆ ಚಲನಚಿತ್ರೋದ್ಯಮದ ಸಂಸ್ಕೃತಿ ಮತ್ತು ಪರಿಸರವನ್ನು ಹಾಳು ಮಾಡಿದ್ದಾರೆ. ಅವರ ಗ್ಯಾಂಗ್‌ ಮೇಲೆ ದಾಳಿ ನಡೆಸಿ ಬಂಧಿಸಬೇಕು” ಎಂದು ನಟಿ ಮತ್ತೊಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: Kangana Ranaut: ಇನ್ನೂ ಗದ್ದೆಯಲ್ಲೇ ಕೆಲಸ ಮಾಡುತ್ತಿದ್ದಾರೆ ಕಂಗನಾ ತಾಯಿ! ನಾನೇ ಕಾರಣ ಎಂದ ಕಂಗನಾ
ಇತ್ತೀಚೆಗೆ ನಟಿ ಪ್ರಿಯಾಂಕಾ ಚೋಪ್ರಾ ಅವರು ಸಂದರ್ಶನವೊಂದರಲ್ಲಿ ಭಾಗವಹಿಸಿದ್ದು, ಅಲ್ಲಿ ತಾವು ಬಾಲಿವುಡ್‌ ತೊರೆಯುವುದಕ್ಕೆ ಕಾರಣ ಹೇಳಿಕೊಂಡಿದ್ದರು. “ಬಾಲಿವುಡ್‌ನಲ್ಲಿ ನನ್ನ ಮೂಲೆಗೆ ಹಾಕಲಾಯಿತು. ರಾಜಕೀಯ ಮಾಡಲಾಯಿತು. ಅದರಿಂದ ಬೇಸತ್ತು ಹೊರಬಂದೆ” ಎಂದು ಅವರು ಹೇಳಿದ್ದರು. ನಟಿ 2015ರಲ್ಲಿ ಬಾಲಿವುಡ್‌ ತೊರೆದು ಹಾಲಿವುಡ್‌ ಸೇರಿಕೊಂಡಿದ್ದಾರೆ.

Continue Reading

South Cinema

Kareena Kapoor: ಉರ್ಫಿ ತುಂಬ ಧೈರ್ಯಶಾಲಿ ಎಂದು ಹಾಡಿ ಹೊಗಳಿದ ಕರೀನಾ ಕಪೂರ್‌

ಕರೀನಾ ಕಪೂರ್ (Kareena Kapoor) ಸಂದರ್ಶನವೊಂದರಲ್ಲಿ ಉರ್ಫಿಯನ್ನು ಹೊಗಳಿದ್ದಾರೆ. ನಟಿ ಮಾತನಾಡಿ ʻನಾನು ಉರ್ಫಿ ಜಾವೇದ್‌ ಅವರಷ್ಟು ಧೈರ್ಯಶಾಲಿಯಲ್ಲ ಎಂದಿದ್ದಾರೆ. ಸದಾ ಉಡುಪಿನ ಮೂಲಕವೇ ಕೆಂಗಣ್ಣಿಗೆ ಗುರಿಯಾಗುತ್ತಿರುವ ನಟಿಯ ಬಗ್ಗೆ ಕೆಲವು ಬಾಲಿವುಡ್‌ ಸೆಲೆಬ್ರಿಟಿಗಳು ನಟಿಯ ಫ್ಯಾಶನ್ ಸೆನ್ಸ್ ಕುರಿತು ಶ್ಲಾಘಿಸಿದ ಸಂದರ್ಭಗಳಿವೆ.

VISTARANEWS.COM


on

Edited by

Kareena Kapoor Tells urfi javed confidence
Koo

ಬೆಂಗಳೂರು: ಫ್ಯಾಷನ್‌ ಐಕಾನ್‌ ಅಂತಯೇ ಖ್ಯಾತಿ ಪಡೆದಿರುವ ಉರ್ಫಿ ಜಾವೇದ್ (urfi javed) ಬಿಗ್ ಬಾಸ್ ಒಟಿಟಿ ಮೂಲಕ ಖ್ಯಾತಿಯನ್ನು ಗಳಿಸಿದರು. ಸದಾ ಉಡುಪಿನ ಮೂಲಕವೇ ಕೆಂಗಣ್ಣಿಗೆ ಗುರಿಯಾಗುತ್ತಿರುವ ನಟಿಯ ಬಗ್ಗೆ ಕೆಲವು ಬಾಲಿವುಡ್‌ ಸೆಲೆಬ್ರಿಟಿಗಳು ನಟಿಯ ಫ್ಯಾಶನ್ ಸೆನ್ಸ್ ಕುರಿತು ಶ್ಲಾಘಿಸಿದ ಸಂದರ್ಭಗಳಿವೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಬಾಲಿವುಡ್ ತಾರೆ ಕರೀನಾ ಕಪೂರ್ (Kareena Kapoor) ಅವರು ಉರ್ಫಿ ಜಾವೇದ್ ಅವರನ್ನು ಹೊಗಳಿದ್ದಾರೆ. ʻʻಉರ್ಫಿ ತುಂಬ ‘ಧೈರ್ಯಶಾಲಿ’ ಎಂದು ಹೇಳಿದ್ದಾರೆ.

ಕರೀನಾ ಕಪೂರ್ ಸಂದರ್ಶನವೊಂದರಲ್ಲಿ ಉರ್ಫಿಯನ್ನು ಹೊಗಳಿದ್ದಾರೆ. ನಟಿ ಮಾತನಾಡಿ ʻನಾನು ಉರ್ಫಿ ಜಾವೇದ್‌ ಅವರಷ್ಟು ಧೈರ್ಯಶಾಲಿಯಲ್ಲ. ಫ್ಯಾಷನ್ ಎನ್ನುವುದು ಅಭಿವ್ಯಕ್ತಿ ಮತ್ತು ವಾಕ್ ಸ್ವಾತಂತ್ರ್ಯಕ್ಕೆ ಸಂಬಂಧಿಸಿದೆ. ಅವರ ಒಂದು ಈ ಆತ್ಮವಿಶ್ವಾಸ ಇಂದು ಇಲ್ಲಿಗೆ ತಂದಿದೆ. ಉರ್ಫಿ ಅದ್ಭುತವಾಗಿ ಕಾಣುತ್ತಾರೆ ಎಂದು ನಾನು ಭಾವಿಸುತ್ತೇನೆʼʼಎಂದರು.

ಮಾತು ಮುಂದುವರಿಸಿ ʻʻತನಗೆ ಬೇಕಾದಂತಹ ಫ್ಯಾಷನ್‌ ಅನ್ನು ಅವರು ಆಯ್ಕೆ ಮಾಡಿಕೊಳ್ಳುತ್ತಾರೆ. ಅದು ಫ್ಯಾಷನ್‌ ಅಂದರೆ. ನಿಮ್ಮ ಸ್ಕಿನ್‌ಗೆ ಯಾವುದು ಆರಾಮದಾಯಕವಾಗಿರುತ್ತದೆಯೋ ಅದನ್ನು ನೀವು ಮುಂದುವರಿಸಿ. ಉರ್ಫಿ ಅವರ ನಾನು ಆತ್ಮವಿಶ್ವಾಸವನ್ನು ಪ್ರೀತಿಸುತ್ತೇನೆ. ನಾನು ಆತ್ಮವಿಶ್ವಾಸದ ಹುಡುಗಿ. ಉರ್ಫಿ ಅವರು ನಡೆದುಕೊಳ್ಳುವ ರೀತಿಯನ್ನು ಪ್ರೀತಿಸುತ್ತೇನೆ. ಹ್ಯಾಟ್ಸ್ ಆಫ್ ಉರ್ಫಿ.”ಎಂದಿದ್ದಾರೆ.

ಇದನ್ನೂ ಓದಿ: Urfi Javed: ಇದು ಡಬಲ್ ಧಮಾಕಾ! ಒಟ್ಟಿಗೆ ಕಾಣಿಸಿಕೊಂಡ ಉರ್ಫಿ ಜಾವೇದ್‌ ಮತ್ತು ಸನ್ನಿ ಲಿಯೋನ್!

ಕೆಲಸದ ಮುಂಭಾಗದಲ್ಲಿ, ಕರೀನಾ ಕೊನೆಯದಾಗಿ ಅಮೀರ್ ಖಾನ್ ಅವರೊಂದಿಗೆ ಲಾಲ್ ಸಿಂಗ್ ಚಡ್ಡಾದಲ್ಲಿ ಕಾಣಿಸಿಕೊಂಡರು. ಮುಂದೆ ದಿ ಡಿವೋಷನ್ ಆಫ್ ಸಸ್ಪೆಕ್ಟ್ ಎಕ್ಸ್, ದಿ ಬಕಿಂಗ್ಹ್ಯಾಮ್ ಮರ್ಡರ್ಸ್ ಮತ್ತು ದಿ ಕ್ರ್ಯೂನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

Continue Reading

South Cinema

Priyanka Chopra: ಆರ್‌ಆರ್‌ಆರ್‌ ತಮಿಳು ಸಿನಿಮಾ ಎಂದ ಪ್ರಿಯಾಂಕಾ ಚೋಪ್ರಾ: ಟ್ರೋಲ್‌ಗೆ ಗುರಿಯಾದ ನಟಿ

ನಟಿ (Priyanka Chopra) ಪಾಡ್‌ಕ್ಯಾಸ್ಟ್ ಚಾನೆಲ್ ಆರ್ಮ್‌ಚೇರ್ ಎಕ್ಸ್‌ಪರ್ಟ್‌ಗೆ ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ ಆರ್‌ಆರ್‌ಆರ್‌ ಚಿತ್ರವನ್ನು ‘ತಮಿಳು ಚಿತ್ರ’ ಎಂದು ಉಲ್ಲೇಖಿಸಿ ಟ್ರೋಲ್‌ಗೆ ಗುರಿಯಾಗಿದ್ದಾರೆ. ನೆಟ್ಟಿಗರು ಸೋಷಿಯಲ್‌ ಮೀಡಿಯಾದಲ್ಲಿ ನಟಿಯ ವಿರುದ್ಧ ಗರಂ ಆಗಿದ್ದಾರೆ.

VISTARANEWS.COM


on

Edited by

Priyanka Chopra says RRR is a Tamil film gets brutally trolled
Koo

ಬೆಂಗಳೂರು: ಎಸ್‌ಎಸ್ ರಾಜಮೌಳಿ ನಿರ್ದೇಶನದ ಆರ್‌ಆರ್‌ಆರ್ ಚಿತ್ರ ಆಸ್ಕರ್‌ಗೆ ಸಲ್ಲಿಸಿದಾಗಿನಿಂದಲೂ ಪ್ರಿಯಾಂಕಾ ಚೋಪ್ರಾ (Priyanka Chopra) ಉತ್ತಮ ಬೆಂಬಲಿಗರಾಗಿದ್ದರು. ಅಮೆರಿಕಾದಲ್ಲಿ ಚಿತ್ರದ ಪ್ರದರ್ಶನದಲ್ಲಿಯೂ ನಟಿ ಹಾಜರಾಗಿದ್ದರು. ಆದರೆ ಇದೀಗ ನಟಿ ಪಾಡ್‌ಕ್ಯಾಸ್ಟ್ ಚಾನೆಲ್ ಆರ್ಮ್‌ಚೇರ್ ಎಕ್ಸ್‌ಪರ್ಟ್‌ಗೆ ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ ಆರ್‌ಆರ್‌ಆರ್‌ ಚಿತ್ರವನ್ನು ‘ತಮಿಳು ಚಿತ್ರ’ ಎಂದು ಉಲ್ಲೇಖಿಸಿ ಟ್ರೋಲ್‌ಗೆ ಗುರಿಯಾಗಿದ್ದಾರೆ. ನೆಟ್ಟಿಗರು ಸೋಷಿಯಲ್‌ ಮೀಡಿಯಾದಲ್ಲಿ ನಟಿಯ ವಿರುದ್ಧ ಗರಂ ಆಗಿದ್ದಾರೆ.

ಡಾಕ್ಸ್ ಶೆಪರ್ಡ್ ಅವರೊಂದಿಗೆ ಪಾಡ್‌ಕ್ಯಾಸ್ಟ್ ಚಾನೆಲ್ ಆರ್ಮ್‌ಚೇರ್ ಎಕ್ಸ್‌ಪರ್ಟ್‌ನ ಇತ್ತೀಚಿನ ಸಂದರ್ಶನದಲ್ಲಿ, ಪ್ರಿಯಾಂಕಾ ಚೋಪ್ರಾ ಬಾಲಿವುಡ್‌ ಬಗ್ಗೆ ಮತ್ತು ಇತರ ವಿಷಯಗಳ ಬಗ್ಗೆ ಮಾತನಾಡಿದರು. ಸಂದರ್ಶನದ ಸಮಯದಲ್ಲಿ, ನಿರೂಪಕರು RRR ಅನ್ನು ಬಾಲಿವುಡ್ ಚಲನಚಿತ್ರ ಎಂದು ಹೇಳಿದ್ದಾರೆ. ಬಾಲಿವುಡ್ ಮತ್ತು ಹಾಲಿವುಡ್ ಹೋಲಿಕೆ ಮಾಡುವಾಗ, ʻಕೆಲವು ಸೆಲೆಬ್ರಿಟಿಗಳನ್ನು ಮತ್ತು ಸ್ಟುಡಿಯೋಗಳು ಎಲ್ಲವನ್ನೂ ನಿಯಂತ್ರಿಸುತ್ತವೆʼ ಎಂದು ಹೇಳಿದರು. ಪ್ರಿಯಾಂಕಾ ಅವರ ಮಾತಿಗೆ ಒಪ್ಪಿಗೆ ಸೂಚಿಸಿ, “ನೀವು ದೂರದಲ್ಲಿದ್ದೀರಿ ಎಂದು ನಾನು ಭಾವಿಸುತ್ತೇನೆ, ದೊಡ್ಡ ಸ್ಟುಡಿಯೋಗಳು, ಕೆಲವು ನಟರುಗಳು ದೊಡ್ಡ ಸಿನಿಮಾಗಳನ್ನು ಚಲನಚಿತ್ರಗಳನ್ನು ಮಾಡುತ್ತಾರೆ. ಆದರೆ ಇದೀಗ ಎಲ್ಲವೂ ಬದಲಾಗಿದೆ. ಮೊದಲನೆಯದಾಗಿ ಸ್ಟ್ರೀಮಿಂಗ್ ಆಗಿದೆ. ಇದು ಕಂಟೆಂಟ್ ಮಾಡುತ್ತಿರುವ ಹಲವಾರು ಜನರಿಗೆ ಸಾಥ್‌ ನೀಡಿದೆ. ಬಾಲಿವುಡ್ ಉದ್ಯಮ ನಂಬಲಾಗದ ರೀತಿಯಲ್ಲಿ ವಿಕಸನಗೊಂಡಿದೆ.ʼʼಎಂದರು. ಆಗ ಸಂದರ್ಶನಕಾರ ʻಆರ್‌ಆರ್‌ಆರ್‌ ಸಿನಿಮಾ ಅಂತೆʼ ಎಂದು ಹೇಳಿದಾಗ, ನಟಿ ʻಆರ್‌ಆರ್‌ಆರ್‌ ಬಾಲಿವುಡ್‌ ಸಿನಿಮಾವಲ್ಲ, ತಮಿಳು ಸಿನಿಮಾʼ ಎಂದಿದ್ದಾರೆ.

ಪ್ರಿಯಾಂಕಾ ಸಂದರ್ಶಕರ ಮಾತನ್ನು ಸರಿಪಡಿಸಿ,ʻʻಆರ್‌ಆರ್‌ಆರ್‌ ತಮಿಳು ಚಿತ್ರ. ಇದು ದೊಡ್ಡ, ಮೆಗಾ, ಬ್ಲಾಕ್‌ಬಸ್ಟರ್ ಸಿನಿಮಾ. ಇದು ನಮ್ಮ ಅವೆಂಜರ್ಸ್‌ನಂತೆ” ಎಂದು ಹೇಳಿದರು. ಇದೀಗ ನಟಿ ಆರ್‌ಆರ್‌ಆರ್‌ ಸಿನಿಮಾ ತಮಿಳು ಸಿನಿಮಾ ಅಂದಿರುವುದಕ್ಕೆ ಟ್ರೋಲ್‌ಗೆ ಗುರಿಯಾಗಿದ್ದಾರೆ. ಪ್ರಿಯಾಂಕಾ ಚೋಪ್ರಾ 2023ರ ಆಸ್ಕರ್‌ಗೆ ಮುಂಚಿತವಾಗಿ ಆರ್‌ಆರ್‌ಆರ್‌ ಸಿನಿಮಾವನ್ನು ಪ್ರಚಾರ ಮಾಡಿದ್ದರು. ಆಸ್ಕರ್ ಪ್ರಶಸ್ತಿಯನ್ನು ಗೆದ್ದ ನಂತರ ಚಲನಚಿತ್ರವನ್ನು ಅಭಿನಂದಿಸಿದ್ದರು. ಇಷ್ಟೆಲ್ಲ ಸಪೋರ್ಟ್‌ ಮಾಡಿರುವ ನಟಿ ಟ್ರೋಲ್‌ಗೆ ಗುರಿಯಾಗಿದ್ದಾರೆ. ಇದೀಗ ನೆಟ್ಟಿಗರು ಟ್ವೀಟ್‌ನಲ್ಲಿ ಪ್ರಿಯಾಂಕಾ ಚೋಪ್ರಾ ಅವರನ್ನು ಕ್ಲಾಸ್‌ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: Priyanka Chopra: ಫೇರ್‌ನೆಸ್ ಆ್ಯಡ್‌ಗಳಲ್ಲಿ ನಟಿಸುವುದು ಹಾನಿಕರ ಎಂದು ಪ್ರಿಯಾಂಕಾ ಚೋಪ್ರಾ ಹೇಳಿದ್ದೇಕೆ?

ಟ್ರೋಲ್‌ ಮಾಡಿ ನಟಿಯ ಕಾಲೆಳೆದ ನೆಟ್ಟಿಗರು

ನೆಟ್ಟಿಗೊಬ್ಬರು ʻʻನಿಮ್ಮ ಬಗ್ಗೆ ತುಂಬಾ ನಿರಾಶೆಯಾಗಿದೆ. ತೆಲುಗು ಚಿತ್ರ ಯಾವುದು ಎಂದು ನಿಮಗೆ ಹೇಳಲು ಸಾಧ್ಯವಿಲ್ಲ ಅಂದರೆ ನೀವು ಪ್ರಚಾರದ ಸಮಯದಲ್ಲಿ RRR ಚಿತ್ರವನ್ನು ಬೆಂಬಲಿಸಿದ್ದೀರಿ ಅದಕ್ಕಾಗಿ ನಾವು ತುಂಬಾ ಕೃತಜ್ಞರಾಗಿದ್ದೇವೆ! ಆದರೆ ಕನಿಷ್ಠ ಸಾಮಾನ್ಯ ಜ್ಞಾನವನ್ನು ಹೊಂದಿರಿ. ಸಿನಿಮಾ ಬಗ್ಗೆ ಮಾತನಾಡುವ ಮೊದಲು ಸ್ವಲ್ಪ ಸಂಶೋಧನೆಯನ್ನು ಮಾಡಿ ಬನ್ನಿʼʼಎಂದು ಕಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ: Priyanka Chopra : ಬಾಲಿವುಡ್​ನ ಪೊಲಿಟಿಕ್ಸ್​ಗೆ ಹೆದರಿ ಹಾಲಿವುಡ್​ಗೆ ಓಡಿದ್ದೆ ಎಂದ ನಟಿ ಪ್ರಿಯಾಂಕ ಚೋಪ್ರಾ

ಪಾಡ್‌ಕ್ಯಾಸ್ಟ್‌ ಸಂಭಾಷಣೆಯಲ್ಲಿ “ಡಾಕ್ಸ್ ಶೆಪರ್ಡ್ ಜತೆ ಆರ್ಮ್‌ಚೇರ್ ಎಕ್ಸ್‌ಪರ್ಟ್”. ಆರ್‌ಆರ್‌ಆರ್‌ ಸಿನಿಮಾವನ್ನು ಬಾಲಿವುಡ್ ಚಿತ್ರ ಎಂದು ಲೇಬಲ್ ಮಾಡುವ ಸಂದರ್ಶಕರ ತಪ್ಪನ್ನು ಪ್ರಿಯಾಂಕಾ ಚೋಪ್ರಾ ಎತ್ತಿ ತೋರಿಸಿದ್ದಾರೆ. ತಮಿಳು ಚಿತ್ರ ಎಂದು ಬೇರೆ ಹೇಳಿದ್ದಾರೆ. ಉತ್ತರ ಭಾರತದ ಜನರು ಯಾವಾಗಲೂ ದಕ್ಷಿಣ ಭಾರತದ ಚಿತ್ರರಂಗವನ್ನು ತಮಿಳು ಮತ್ತು ಸಾಂಬಾರ್ ಎಂದು ಕಂಡುಕೊಳ್ಳುತ್ತಾರೆʼʼಎಂದು ಬರೆದುಕೊಂಡಿದ್ದಾರೆ.

ನಟಿ ಆರ್‌ಆರ್‌ಆರ್‌ ಚಿತ್ರತಂಡಕ್ಕೆ ಪ್ರೀ ಇವೆಂಟ್‌ ಪಾರ್ಟಿಯನ್ನು ಸಹ ಆಯೋಜಿಸಿದ್ದರು. ಆದರೆ ಸಿನಿಮಾದ ಮೂಲ ಭಾಷೆಯೇʼʼಗೊತ್ತಿಲ್ಲ ಎಂದು ನೆಟ್ಟಿಗರು ನಟಿಯ ಕಾಲೆಳೆದಿದ್ದಾರೆ.

ಸಿಟಾಡೆಲ್‌ನ ಪ್ರಚಾರಕ್ಕಾಗಿ ಪಿಗ್ಗಿ ಮುಂದಿನ ವಾರ ಭಾರತಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ. ಶೀಘ್ರದಲ್ಲೇ ನಟಿ ‘ಸಿಟಾಡೆಲ್’ ಮತ್ತು ‘ಲವ್ ಎಗೇನ್’ ಚಿತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

Continue Reading

South Cinema

Amitabh Bachchan: 5 ಗ್ರಹಗಳು ಒಂದೇ ರೇಖೆಯಲ್ಲಿ ಕಾಣಿಸಿಕೊಂಡಿರುವ ಅಪರೂಪದ ವಿಡಿಯೊ ಹಂಚಿಕೊಂಡ ಅಮಿತಾಭ್‌ ಬಚ್ಚನ್

ಮಾರ್ಚ್‌ 29ರಂದು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ 5 ಗ್ರಹಗಳು ಒಂದೇ ರೇಖೆಯಲ್ಲಿ ಕಾಣಿಸಿಕೊಂಡಿರುವ ಅಪರೂಪದ ವಿಡಿಯೊವನ್ನು ಹಂಚಿಕೊಂಡಿದ್ದಾರೆ (Amitabh Bachchan). ವಿಡಿಯೊದಲ್ಲಿ ಬುಧ, ಶುಕ್ರ, ಮಂಗಳ, ಗುರು ಮತ್ತು ಯುರೇನಸ್ ಎಲ್ಲವೂ ಒಂದೇ ರೇಖೆಯಲ್ಲಿವೆ.

VISTARANEWS.COM


on

Edited by

Amitabh Bachchan shares beautiful video of 5 planets
Koo

ಬೆಂಗಳೂರು: ಬಾಲಿವುಡ್‌ ಸ್ಟಾರ್‌ ಅಮಿತಾಭ್‌ ಬಚ್ಚನ್ (Amitabh Bachchan) ಮಾರ್ಚ್‌ 29ರಂದು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ 5 ಗ್ರಹಗಳು ಒಂದೇ ರೇಖೆಯಲ್ಲಿ ಕಾಣಿಸಿಕೊಂಡಿರುವ ಅಪರೂಪದ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ವಿಡಿಯೊದಲ್ಲಿ ಬುಧ, ಶುಕ್ರ, ಮಂಗಳ, ಗುರು ಮತ್ತು ಯುರೇನಸ್ ಎಲ್ಲವೂ ಒಂದೇ ರೇಖೆಯಲ್ಲಿವೆ. ಈ ವಿಡಿಯೊ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೊವನ್ನು ಹಂಚಿಕೊಂಡ ನಟ ʻʻಎಷ್ಟು ಸುಂದರ ದೃಶ್ಯ…! 5 ಗ್ರಹಗಳು ಇಂದು ಒಟ್ಟಿಗೆ ಒಂದೇ ರೇಖೆಯಲ್ಲಿ ಜೋಡಿಸಲ್ಪಟ್ಟಿವೆ. ಸುಂದರ ಮತ್ತು ಅಪರೂಪ. ನೀವೂ ಇದಕ್ಕೆ ಸಾಕ್ಷಿಯಾಗಿದ್ದೀರಿ ಎಂದು ಭಾವಿಸುತ್ತೇವೆʼʼ ಎಂದು ಬರೆದುಕೊಂಡಿದ್ದಾರೆ.

ಇನ್‌ಸ್ಟಾಗ್ರಾಮ್‌ ವಿಡಿಯೊವನ್ನು ಪೋಸ್ಟ್ ಮಾಡಿದ ನಂತರ 2.2 ಮಿಲಿಯನ್ ವೀಕ್ಷಣೆಗಳು, 15,000 ಲೈಕ್ಸ್‌ಗಳು ಬಂದಿವೆ. ನೆಟ್ಟಗರೊಬ್ಬರು ‘ನಾನೂ ಗಮನಿಸಿದ್ದೇನೆ… ನಿಮ್ಮಂತಹ ಅತ್ಯುತ್ತಮ ಫೋನ್ ನಮ್ಮ ಹತ್ತಿರ ಇಲ್ಲ’ ಎಂದು ಕಮೆಂಟ್ ಮಾಡಿದರೆ, ಇನ್ನೊಬ್ಬರು “ನನ್ನ ಫೋನ್ ಚೆನ್ನಾಗಿ ಝೂಮ್ ಆಗುತ್ತಿಲ್ಲ ಸರ್” ಎಂದು ಕಮೆಂಟ್‌ ಮಾಡಿದ್ದಾರೆ. ಮತ್ತೊಬ್ಬರು “ಬಚ್ಚನ್ ಸಾಹಭ್‌ ಅವರ ಕೈಗಳು ತುಂಬಾ ಉದ್ದವಾಗಿದೆ” ಎಂದು ಕಮೆಂಟ್ ಮಾಡಿದ್ದಾರೆ. ಅಮಿತಾಭ್ ಬಚ್ಚನ್ ಅವರಿಂದ ಪ್ರೇರಿತರಾದ ಹಲವಾರು ಬಳಕೆದಾರರು ಬುಧ, ಗುರು, ಶುಕ್ರ, ಯುರೇನಸ್, ಮಂಗಳ ಮತ್ತು ಚಂದ್ರನ ಈ ಅಪರೂಪದ ವಿಡಿಯೊವನ್ನು ಪೋಸ್ಟ್ ಮಾಡಿದ್ದಾರೆ.

ಅಮಿತಾಭ್‌ ಬಚ್ಚನ್ ಮುಂಬರುವ ಚಲನಚಿತ್ರಗಳು

ಬಿಗ್ ಬಿ ಅವರು ʻಪ್ರಾಜೆಕ್ಟ್‌ ಕೆʼ ಸಿನಿಮಾದ ಚಿತ್ರೀಕರಣದ ವೇಳೆ ಗಾಯಗೊಂಡಿದ್ದರು. ಸದ್ಯ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ನಾಗ್ ಅಶ್ವಿನ್ ಅವರ ನಿರ್ದೇಶನದಲ್ಲಿ, ಪ್ರಾಜೆಕ್ಟ್ ಕೆ ಮೂಡಿಬರುತ್ತಿದೆ. ಹಿಂದಿ ಮತ್ತು ತೆಲುಗುವಿನಲ್ಲಿ ಸಿನಿಮಾ ತಯಾರಾಗುತ್ತಿದೆ ವಿವಿಧ ಸ್ಥಳಗಳಲ್ಲಿ ಚಿತ್ರೀಕರಿಸಲಾದ ದ್ವಿಭಾಷಾ ಚಲನಚಿತ್ರವಾಗಿದೆ. ಅದೇ ಚಿತ್ರದಲ್ಲಿ ದೀಪಿಕಾ ಪಡುಕೋಣೆ ಮತ್ತು ಪ್ರಭಾಸ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದಲ್ಲದೆ, ಬಿಗ್ ಬಿ ರಿಶು ದಾಸ್‌ಗುಪ್ತಾ ಅವರ ‘ಸೆಕ್ಷನ್ 84’ ನಲ್ಲಿಯೂ ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: Amitabh Bachchan: ಬೆಡ್‌ ರೆಸ್ಟ್‌‌ನಲ್ಲಿರುವ ಅಮಿತಾಭ್‌‌ರಿಂದ ಬಂತು ಹೊಸ ಟ್ವೀಟ್‌; ನನಗಾಗಿ ಪ್ರಾರ್ಥಿಸಿ ಎಂದ ಬಿಗ್‌ ಬಿ

ಅಮಿತಾಭ್‌ ಬಚ್ಚನ್ ಪೋಸ್ಟ್‌

ʼಪ್ರಾಜೆಕ್ಟ್‌ ಕೆʼ ಸಿನಿಮಾ

ಸಿನಿಮಾ ನಿರ್ಮಾಣ ಸಂಸ್ಥೆ ವೈಜಯಂತಿ ಮೂವಿಸ್‌ನ 50ನೇ ವರ್ಷದ ಸಂಭ್ರಮಾಚರಣೆ ಸಮಯದಲ್ಲಿ ನಿರ್ಮಾಣವಾಗುತ್ತಿರುವ ಈ ಸಿನಿಮಾ ದಕ್ಷಿಣ ಭಾರತದ ಬಹುನಿರೀಕ್ಷಿತ ಸಿನಿಮಾವಾಗಿದೆ. ವಿಶೇಷವೆಂದರೆ ಈ ಸಿನಿಮಾ ಒಂದು ಪಾರ್ಟ್‌ನಲ್ಲಿ ಬರದೆ ಎರಡು ಭಾಗಗಳಲ್ಲಿ ಬರಲಿದೆ ಎಂದು ಮೂಲಗಳು ತಿಳಿಸಿವೆ.ಸಿನಿಮಾದಲ್ಲಿ ಪ್ರಭಾಸ್‌ ಬೇರೆಯದ್ದೇ ರೀತಿಯ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪ್ರಾಜೆಕ್ಟ್ ಕೆ ಸಿನಿಮಾದ ದೃಷ್ಟಿ ಮತ್ತು ಕಥಾವಸ್ತುವು ತುಂಬಾ ದೊಡ್ಡದಾಗಿದೆ. ಹಾಗಾಗಿ ತಯಾರಕರು ಇದನ್ನು 2 ಭಾಗದ ಸಿನಿಮಾ ಮಾಡಲು ನಿರ್ಧರಿಸಿದ್ದಾರೆ.ಎಂದು ಮೂಲವು ತಿಳಿಸಿದೆ.

Continue Reading
Advertisement
Establishment of Backward Classes Category-I Pinjara, Nadaf and 13 Other Castes Development Corporation
ಕರ್ನಾಟಕ37 mins ago

Reservation: ಒಬಿಸಿ ಮೀಸಲಾತಿ ಪುನರ್‌ ವರ್ಗೀಕರಿಸಿ ರಾಜ್ಯ ಸರ್ಕಾರ ಆದೇಶ; 2ಸಿ ಪ್ರವರ್ಗಕ್ಕೆ ಶೇ.6, 2ಡಿ ಪ್ರವರ್ಗಕ್ಕೆ ಶೇ.7 ಮೀಸಲಾತಿ

World’s first 7.2-metre high-rise train set on trial on Delhi-Jaipur route, video out
ದೇಶ1 hour ago

Viral Video: ಭಾರತದಲ್ಲಿ ವಿಶ್ವದಲ್ಲೇ ಎತ್ತರದ ರೈಲಿನ ಪ್ರಾಯೋಗಿಕ ಸಂಚಾರ ಯಶಸ್ವಿ, ಇಲ್ಲಿದೆ ವಿಡಿಯೊ

Road Accident
ಕರ್ನಾಟಕ1 hour ago

Road Accident: ನೆಲಮಂಗಲದ ಬಳಿ ಲಾರಿ ಹರಿದು ಯುವತಿ ಸ್ಥಳದಲ್ಲೇ ಸಾವು

High way robbery
ಕರ್ನಾಟಕ2 hours ago

Highway robbery : ಯುವಕ-ಯುವತಿಯನ್ನು ಅಡ್ಡಗಟ್ಟಿ ಬೈಕ್‌, ಐಫೋನ್‌ ಕಿತ್ತುಕೊಂಡು ಹೋದ ಮೂವರು ಸುಲಿಗೆಕೋರರು ಅರೆಸ್ಟ್‌

Restrictions on entry to Dharwad, Supreme Court dismisses Vinay Kulkarni's plea seeking exemption
ಕರ್ನಾಟಕ2 hours ago

Vinay kulkarni: ಧಾರವಾಡಕ್ಕೆ ಪ್ರವೇಶ ನಿರ್ಬಂಧ; ವಿನಾಯಿತಿ ಕೋರಿ ವಿನಯ್‌ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಜಾ

Ram Navami 2023
ಧಾರ್ಮಿಕ3 hours ago

Ram Navami 2023: ಶ್ರೀರಾಮನ ಪರಿಪೂರ್ಣತೆ ನಮ್ಮಲ್ಲಿ ತುಂಬಿಕೊಳ್ಳೋದು ಹೇಗೆ? 

IPL 2023: Rohit likely to be unavailable for some IPL matches to relieve stress
ಕ್ರಿಕೆಟ್3 hours ago

IPL 2023: ಒತ್ತಡ ನಿವಾರಣೆಗಾಗಿ ಕೆಲ ಐಪಿಎಲ್​ ಪಂದ್ಯಗಳಿಗೆ ರೋಹಿತ್​ ಅಲಭ್ಯ ಸಾಧ್ಯತೆ

Karnataka Elections 2023
ಪ್ರಮುಖ ಸುದ್ದಿ3 hours ago

ವಿಸ್ತಾರ ಸಂಪಾದಕೀಯ: ಮತ ಪ್ರಮಾಣ ಹೆಚ್ಚಿಸುವ ಆಯೋಗದ ಕ್ರಮವನ್ನು ಬೆಂಬಲಿಸೋಣ

Aam Aadmi Party announces 300 units of free electricity, Rs 3,000. unemployment allowance, Implementation of OPS guarantee scheme
ಕರ್ನಾಟಕ3 hours ago

Karnataka Election: ಎಎಪಿಯಿಂದ 300 ಯೂನಿಟ್‌ ವಿದ್ಯುತ್‌ ಉಚಿತ, 3000 ರೂ. ನಿರುದ್ಯೋಗ ಭತ್ಯೆ, ಒಪಿಎಸ್‌ ಜಾರಿ ಗ್ಯಾರಂಟಿ

Indian govt let go of Rs 7 lakh in GST to save a baby girl’s life
ದೇಶ4 hours ago

ಬಾಲಕಿಯ ಪ್ರಾಣ ಉಳಿಸಲು 7 ಲಕ್ಷ ರೂ. ಜಿಎಸ್‌ಟಿ ಬಿಟ್ಟ ಕೇಂದ್ರ, ಮಾನವೀಯತೆ ಮೆರೆದ ಶಶಿ ತರೂರ್‌

7th Pay Commission
ನೌಕರರ ಕಾರ್ನರ್5 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ2 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ2 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ1 month ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Paid leave for govt employees involved in the strike
ನೌಕರರ ಕಾರ್ನರ್4 weeks ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ3 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

Teacher Transfer
ನೌಕರರ ಕಾರ್ನರ್5 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

7th Pay Commission
ಕರ್ನಾಟಕ5 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Land Surveyor Recruitment
ಉದ್ಯೋಗ2 months ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

Post Office Recruitment 2023
ಉದ್ಯೋಗ2 months ago

India Post GDS Recruitment 2023 : ಅಂಚೆ ಇಲಾಖೆಯಲ್ಲಿ 40,889 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ವಿದ್ಯಾರ್ಹತೆ ಎಸ್ಸೆಸ್ಸೆಲ್ಸಿ

amit shah convoy
ಕರ್ನಾಟಕ2 days ago

Amit Shah: ಬೆಂಗಳೂರಿನಲ್ಲಿ ಅಮಿತ್‌ ಶಾ ಕಾನ್‌ವೇಯಲ್ಲಿ ಭದ್ರತಾ ವೈಫಲ್ಯ; ಇಬ್ಬರು ವಿದ್ಯಾರ್ಥಿಗಳ ವಿಚಾರಣೆ

rapido bike vs auto-Bike taxi drivers go on strike against auto drivers harassment
ಕರ್ನಾಟಕ3 days ago

Rapido Bike Vs Auto: ಆಟೋ ಚಾಲಕರ ದೌರ್ಜನ್ಯದ ವಿರುದ್ಧ ಸಿಡಿದೆದ್ದ ಬೈಕ್‌ ಟ್ಯಾಕ್ಸಿ ಚಾಲಕರು; ರಕ್ಷಣೆಗಾಗಿ ಪ್ರತಿಭಟನೆ

ಕರ್ನಾಟಕ1 week ago

Halal Ban: ಯುಗಾದಿಗೆ ಹಲಾಲ್‌ ಕಟ್‌ ಬಹಿಷ್ಕರಿಸಿ, ಜಟ್ಕಾ ಮಾಂಸ ಖರೀದಿ; ಮತ್ತೆ ಬೀದಿಗಿಳಿದ ಹಿಂದು ಕಾರ್ಯಕರ್ತರು

Did Dinesh Gundu Rao distribute damaged sarees in Gandhinagar for Ugadi festival?
ಕರ್ನಾಟಕ1 week ago

Damaged Saree: ಯುಗಾದಿ ಹಬ್ಬಕ್ಕೆ ಗಾಂಧಿನಗರದಲ್ಲಿ ಹರಿದ ಸೀರೆ ಕೊಟ್ಟರಾ ದಿನೇಶ್‌ ಗುಂಡೂರಾವ್‌? ಸೀರೆ ನೀಡಿ ಮಹಿಳೆಯರ ಕಿಡಿ

ಕರ್ನಾಟಕ1 week ago

Chikkaballapura BMTC: ಬೆಂಗಳೂರಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ವೋಲ್ವೋ ಬಸ್‌ ಸಂಚಾರ ಶುರು; ಟೈಮಿಂಗ್‌ ಏನು?

BMTC bus window shattered as police refused to allow auto drivers rally
ಕರ್ನಾಟಕ1 week ago

Auto Strike In Bengaluru: ಆಟೋ ಚಾಲಕರ ರ‍್ಯಾಲಿಗೆ ಅವಕಾಶ ನೀಡದ ಖಾಕಿ ಪಡೆ; ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶ

Drivers oppose Rapido bike taxi in bengaluru Extra BMTC buses ply on road, auto stopped plying
ಕರ್ನಾಟಕ1 week ago

Auto Strike: ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗೆ ವಿರೋಧ; ಆಟೋ ಓಡಾಟಕ್ಕೆ ಬ್ರೇಕ್‌, ರೋಡಿಗಿಳಿದ ಹೆಚ್ಚುವರಿ ಬಿಎಂಟಿಸಿ ಬಸ್‌

someone cant tell the truth that Tipu used to charge high taxes on Hindus says Hariprakash konemane
ಕರ್ನಾಟಕ1 week ago

ಇತಿಹಾಸ ವಸ್ತುನಿಷ್ಠವಾಗಿರಬೇಕು, ನಿಸ್ವಾರ್ಥದಿಂದ ಬರೆಯುವವರನ್ನು ಗೌರವಿಸಬೇಕು: ಹರಿಪ್ರಕಾಶ್‌ ಕೋಣೆಮನೆ

Auto services to be stopped from Sunday midnight, Drivers protest against whiteboard bike taxi
ಕರ್ನಾಟಕ1 week ago

Bengaluru Auto Bandh: ಬೈಕ್‌ ಟ್ಯಾಕ್ಸಿಗೆ ವಿರೋಧ; ಭಾನುವಾರ ಮಧ್ಯರಾತ್ರಿಯಿಂದಲೇ ಆಟೋ ಸಂಚಾರ ಸ್ಥಗಿತ

Organizing our Power Run Marathon in the name of puneeth rajkumar
ಕರ್ನಾಟಕ1 week ago

Puneeth Rajkumar: ಅಪ್ಪು ಹೆಸರಲ್ಲಿ ನಮ್ಮ ಪವರ್ ರನ್ ಮ್ಯಾರಥಾನ್; ಅಶ್ವಿನಿ ಪುನೀತ್‌ ಚಾಲನೆ

ಟ್ರೆಂಡಿಂಗ್‌

error: Content is protected !!