Shiva Rajkumar Birthday: `ಬಿಗ್‌ ಡ್ಯಾಡಿ' ಟೀಸರ್‌ ಔಟ್‌; ಕಣ್ಣಲ್ಲೇ ಹೆದರಿಸಿದ ಶಿವಣ್ಣ! - Vistara News

South Cinema

Shiva Rajkumar Birthday: `ಬಿಗ್‌ ಡ್ಯಾಡಿ’ ಟೀಸರ್‌ ಔಟ್‌; ಕಣ್ಣಲ್ಲೇ ಹೆದರಿಸಿದ ಶಿವಣ್ಣ!

Shiva Rajkumar Birthday: ಶಿವರಾಜಕುಮಾರ್, ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

VISTARANEWS.COM


on

Bigg Dady Teaser Out
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹ್ಯಾಟ್ರಿಕ್‌ ಹೀರೊ ಶಿವರಾಜ್‌ ಕುಮಾರ್‌ (Shiva Rajkumar Birthday) ಅಭಿನಯದ ಘೋಸ್ಟ್‌ ಸಿನಿಮಾ ಇದೀಗ ಟೀಸರ್‌ ಬಿಡುಗಡೆಗೊಳಿಸಿದೆ. ಘೋಸ್ಟ್‌ ಸಿನಿಮಾದಿಂದ ‘ಬಿಗ್ ಡ್ಯಾಡಿ’ ಟೀಸರ್ ಶಿವಣ್ಣನ ಜನುಮದಿನಕ್ಕೆ​ ರಿಲೀಸ್​ ಆಗಿದೆ. ಶಿವರಾಜ್‌ಕುಮಾರ್‌ ಅವರ ರಗಡ್‌ ಡೈಲಾಗ್‌ ಹಾಗೂ ಲುಕ್‌ಗೆ ಅವರ ಫ್ಯಾನ್ಸ್‌ ಸಖತ್‌ ಖುಷ್‌ ಆಗಿದ್ದಾರೆ. ʻʻನೀವು ಗನ್‌ ಅಲ್ಲಿ ಎಷ್ಟು ಜನ ಹೆದ್ರಿಸಿದ್ದೀರೋ ಅದಕ್ಕಿಂತ ಜಾಸ್ತಿ ನಾನು ಕಣ್ಣಲ್ಲಿ ಹೆದ್ರಿಸಿದ್ದೀನಿ. ನಾನು ಒರಿಜಿನಲ್‌ ಗ್ಯಾಂಗ್‌ಸ್ಟರ್‌ʼʼ ಎಂದು ಶಿವಣ್ಣ ಖಡಕ್‌ ಡೈಲಾಗ್‌ನಲ್ಲಿ ಅಬ್ಬರಿಸಿದ್ದಾರೆ.

ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ. ಪ್ರಮುಖ ಪಾತ್ರದಲ್ಲಿ ಕೆಜಿಎಫ್‌ ಖ್ಯಾತಿಯ ನಟಿ ಅರ್ಚನಾ ಜೋಯಿಸ್ ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: Shiva Rajkumar: `ಬಿಗ್‌ ಡ್ಯಾಡಿ’ ಹೊಸ ಲುಕ್‌ ಔಟ್‌; ಹೊಸ ಅಪ್‌ಡೇಟ್‌ ಹಂಚಿಕೊಂಡ ಶಿವಣ್ಣ!

ಟೋಪಿವಾಲ, ಶ್ರೀನಿವಾಸ ಕಲ್ಯಾಣ, ಓಲ್ಡ್‌ ಮಾಂಕ್‌ ಸಿನಿಮಾ ಖ್ಯಾತಿಯ ಎಂ.ಜಿ.ಶ್ರೀನಿವಾಸ್‌ ಅವರು ಘೋಸ್ಟ್‌ ಸಿನಿಮಾನವನ್ನು ನಿರ್ದೇಶಿಸುತ್ತಿದ್ದಾರೆ. ಸಿನಿಮಾಗೆ ಅರ್ಜುನ್‌ ಜನ್ಯಾ ಸಂಗೀತ ಇದ್ದರೆ, ಸಂದೇಶ್‌ ನಾಗರಾಜ್‌ ನಿರ್ಮಾಪಕರಾಗಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಾಲಿವುಡ್

Kamal Haasan: ‘ಇಂಡಿಯನ್-2’ ಸಿನಿಮಾದ ಎರಡನೇ ಹಾಡು ರಿಲೀಸ್!

Kamal Haasan: 1996ರಲ್ಲಿ ‘ಇಂಡಿಯನ್’ ಸಿನಿಮಾ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿತ್ತು. ಸೇನಾಪತಿ ಎಂಬ ಪಾತ್ರದಲ್ಲಿ ಕಮಲ್ ಹಾಸನ್ ಅವರು ಮಿಂಚಿದ್ದರು. ಅದರ ಮುಂದುವರಿದ ಭಾಗವಾಗಿ ‘ಇಂಡಿಯನ್ 2’ ಸಿನಿಮಾ ಮೂಡಿಬರುತ್ತಿದೆ. ಇದು ಪ್ಯಾನ್ ಇಂಡಿಯಾ ಸಿನಿಮಾ. ಕಮಲ್ ಹಾಸನ್ ಹಿರಿಯ ಸ್ವಾತಂತ್ರ್ಯ ಹೋರಾಟಗಾರನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

VISTARANEWS.COM


on

Kamal Haasan indian 2 second song out
Koo

ಬೆಂಗಳೂರು: ಕಾಲಿವುಡ್‌ ನಟ ಕಮಲ್ ಹಾಸನ್ (Kamal Haasan) ನಟನೆಯ ಬಹುನಿರೀಕ್ಷಿತ ಸಿನಿಮಾ ʻಇಂಡಿಯನ್ 2ʼ ಜುಲೈ 12ಕ್ಕೆ ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಈಗಾಗಲೇ ಟೀಸರ್ ಹಾಗೂ ಹಾಡಿನ ಮೂಲಕ ಪ್ರೇಕ್ಷಕರಲ್ಲಿ ಕುತೂಹಲ ಹುಟ್ಟಿಸಿರುವ ಈ ಚಿತ್ರದ ಎರಡನೇ ಹಾಡು ಅನಾವರಣಗೊಂಡಿದೆ. ಬೊಮ್ಮರಿಲ್ಲು ಸಿದ್ದಾರ್ಥ್ ಹಾಗೂ ರಕುಲ್ ಪ್ರೀತ್ ಸಿಂಗ್ ನಡುವಿನ ಪ್ರೇಮಗೀತೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ರಾಮ ಜೋಗಯ್ಯಶಾಸ್ತ್ರಿ ತೆಲುಗು ವರ್ಷನ್ ಹಾಡಿಗೆ ಸಾಹಿತ್ಯ ಬರೆದಿದ್ದು, ತಾಮರೈ ತಮಿಳು ವರ್ಷನ್ ಗೆ ಪದ ಗೀಚಿದ್ದಾರೆ. ಅನಿರುದ್ಧ ರವಿಚಂದರ್ ಹಾಡಿಗೆ ಸಂಗೀತ ನಿರ್ದೇಶನ ಮಾಡಿದ್ದಾರೆ.

1996ರಲ್ಲಿ ‘ಇಂಡಿಯನ್’ ಸಿನಿಮಾ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿತ್ತು. ಸೇನಾಪತಿ ಎಂಬ ಪಾತ್ರದಲ್ಲಿ ಕಮಲ್ ಹಾಸನ್ ಅವರು ಮಿಂಚಿದ್ದರು. ಅದರ ಮುಂದುವರಿದ ಭಾಗವಾಗಿ ‘ಇಂಡಿಯನ್ 2’ ಸಿನಿಮಾ ಮೂಡಿಬರುತ್ತಿದೆ. ಇದು ಪ್ಯಾನ್ ಇಂಡಿಯಾ ಸಿನಿಮಾ. ಕಮಲ್ ಹಾಸನ್ ಹಿರಿಯ ಸ್ವಾತಂತ್ರ್ಯ ಹೋರಾಟಗಾರನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆ ಈ ಸಿನಿಮಾದಲ್ಲಿದ್ದು, ಕಮಲ್ ಹಾಸನ್ ಮತ್ತದೇ ಅವತಾರದಲ್ಲಿ ನೋಡಬಹುದಾಗಿದೆ.

ಇದನ್ನೂ ಓದಿ: Kamal Haasan: ಕಮಲ್‌ ಹಾಸನ್‌ ಅಭಿನಯದ ‘ಇಂಡಿಯನ್ 2′  ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌!

ಕಮಲ್ ಹಾಸನ್ ಜತೆಯಲ್ಲಿ ಸಿದ್ದಾರ್ಥ್, ಎಸ್ ಜೆ ಸೂರ್ಯ, ಕಾಜಲ್ ಅಗರ್ವಾಲ್, ರಕುಲ್ ಪ್ರೀತ್ ಸಿಂಗ್, ಪ್ರಿಯಾ ಭವಾನಿ ಶಂಕರ್, ಕಾಳಿದಾಸ್ ಜಯರಾಂ, ಗುಲ್ಶನ್ ಗ್ರೋವರ್, ನೆಡುಮುಡಿ ವೇಣು, ವಿವೇಕ್, ಸಮುದ್ರಕಣಿ, ಬಾಬಿ ಸಿಂಹ, ಗುರು ಸೋಮಸುಂದರಂ, ದೆಹಲಿ ಗಣೇಶ್, ಜಯಪ್ರಕಾಶ್, ಮನೋಬಾಲಾ, ವೆನ್ನೆಲಾ ಕಿಶೋರ್, ಮತ್ತು ದೀಪಾ ಶಂಕರ್ ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: IPL 2024 : ಜಿಯೋಸಿನಿಮಾದಲ್ಲಿ ದಾಖಲೆಯ 62 ಕೋಟಿಗೂ ಅಧಿಕ ವೀಕ್ಷಣೆ ಕಂಡ ಐಪಿಎಲ್​

ಎಸ್. ಶಂಕರ್ ನಿರ್ದೇಶನದಲ್ಲಿ ‘ಇಂಡಿಯನ್ 2’ ಸಿನಿಮಾ ಮೂಡಿ ಬರುತ್ತಿದ್ದು, ಲೈಕಾ ಪ್ರೊಡಕ್ಷನ್ಸ್ ಮತ್ತು ಉದಯನಿಧಿ ಸ್ಟಾಲಿನ್ ಅವರ ರೆಡ್ ಜೈಂಟ್ ಮೂವೀಸ್ ಜಂಟಿಯಾಗಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಅನಿರುದ್ಧ್ ರವಿಚಂದರ್ ಅವರು ಈ ಸಿನಿಮಾಗೆ ಸಂಗೀತ ನೀಡಿದ್ದಾರೆ. ರವಿವರ್ಮನ್ ಹಾಗೂ ರತ್ನವೇಲು ಅವರು ಛಾಯಾಗ್ರಹಣ ಮಾಡಿದ್ದಾರೆ. ಎ. ಶ್ರೀಕರ್ ಪ್ರಸಾದ್ ಅವರು ಸಂಕಲನದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ.

Continue Reading

ಸ್ಯಾಂಡಲ್ ವುಡ್

Prajwal Devaraj: ಪ್ರಜ್ವಲ್​ ದೇವರಾಜ್ ಇನ್ನಿಲ್ಲ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳು; ಕುಟುಂಬಸ್ಥರ ಆಕ್ರೋಶ!

Prajwal Devaraj: ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ದೂರು ನೀಡಲು ಕುಟುಂಬದವರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ‘ಪ್ರಜ್ವಲ್ ದೇವರಾಜ್ ಆರೋಗ್ಯವಾಗಿದ್ದಾರೆ. ಅಭಿಮಾನಿಗಳು ಯಾವುದೇ ಆತಂಕ ಪಡುವ ಅಗತ್ಯವಿಲ್ಲ’ ಎಂದು ಅವರ ಆಪ್ತರು ಮಾಹಿತಿ ನೀಡಿದ್ದಾರೆ.ಪ್ರಜ್ವಲ್‌ ಬಗ್ಗೆ ಹರಿದಾಡುತ್ತಿರುವ ಈ ವಿಚಾರವನ್ನು ಅರಗಿಸಿಕೊಳ್ಳಲಾಗದೇ, ಅಭಿಮಾನಿ ವಲಯವೂ ಆತಂಕಕ್ಕೀಡಾಗಿತ್ತು. ಈ ಬಗ್ಗೆ ನಟ ದೇವರಾಜ್‌ ಮತ್ತವರ ಕುಟುಂಬ ಸ್ಪಷ್ಟನೆ ನೀಡಿದೆ.

VISTARANEWS.COM


on

Prajwal Devaraj death news take leagal action by family
Koo

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಪ್ರಜ್ವಲ್​ ದೇವರಾಜ್ (Prajwal Devaraj) ಅವರುಇನ್ನಿಲ್ಲ ಎಂಬ ಸುದ್ದಿ ಸದ್ಯ ಸೋಷಿಯಲ್‌ ಮೀಡಿಯಾದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ‘ಪ್ರಜ್ವಲ್​ ದೇವರಾಜ್​ ಇನ್ನಿಲ್ಲ. ಓಂ ಶಾಂತಿ’ ಎಂಬ ಕ್ಯಾಪ್ಷನ್​ನೊಂದಿಗೆ ಪ್ರಜ್ವಲ್​ ದೇವರಾಜ್​ ಅವರ ಫೋಟೊವನ್ನು ಕಿಡಿಗೇಡಿಗಳು ವೈರಲ್​ ಮಾಡಿದ್ದಾರೆ. ಇದು ಅವರ ಕುಟುಂಬದವರ ಗಮನಕ್ಕೂ ಬಂದಿದೆ. ಪ್ರಜ್ವಲ್‌ ಬಗ್ಗೆ ಹರಿದಾಡುತ್ತಿರುವ ಈ ವಿಚಾರವನ್ನು ಅರಗಿಸಿಕೊಳ್ಳಲಾಗದೇ, ಅಭಿಮಾನಿ ವಲಯವೂ ಆತಂಕಕ್ಕೀಡಾಗಿತ್ತು. ಈ ಬಗ್ಗೆ ನಟ ದೇವರಾಜ್‌ ಮತ್ತವರ ಕುಟುಂಬ ಸ್ಪಷ್ಟನೆ ನೀಡಿದೆ.

ʻʻನಟ ಪ್ರಜ್ವಲ್ ದೇವರಾಜ್ ಕ್ಷೇಮವಾಗಿದ್ದಾರೆ. ಅವರ ಆರೋಗ್ಯದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ವದಂತಿಗಳನ್ನ ಹಬ್ಬಿಸಲಾಗಿದೆ. ಪ್ರಜ್ವಲ್ ದೇವರಾಜ್ ಅವರ ಪೋಟೋಗಳನ್ನ ದುರ್ಬಳಕೆ ಮಾಡಲಾಗಿದೆ.. ಆರೋಗ್ಯವಂತ ನಟನ ಬಗ್ಗೆ ಈ ರೀತಿಯ ವದಂತಿಗಳು ಸಲ್ಲದು. ಇದರಿಂದಾಗಿ ಕುಟುಂಬಸ್ಥರು ಹಾಗೂ ಅಭಿಮಾನಿಗಳಲ್ಲಿ ಆತಂಕ ಉಂಟಾಗುತ್ತದೆ. ಕಿಡಿಗೇಡಿಗಳು ಪ್ರಜ್ವಲ್ ದೇವರಾಜ್ ಆರೋಗ್ಯದ ಬಗ್ಗೆ ಅನಗತ್ಯ ಸುಳ್ಳು ವದಂತಿ ಹಬ್ಬಿಸಿದ್ದಾರೆʼʼಎಂದು ಕುಟುಂಬ ಮಾಹಿತಿ ಹಂಚಿಕೊಂಡಿದೆ.

ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ದೂರು ನೀಡಲು ಕುಟುಂಬದವರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ‘ಪ್ರಜ್ವಲ್ ದೇವರಾಜ್ ಆರೋಗ್ಯವಾಗಿದ್ದಾರೆ. ಅಭಿಮಾನಿಗಳು ಯಾವುದೇ ಆತಂಕ ಪಡುವ ಅಗತ್ಯವಿಲ್ಲ’ ಎಂದು ಅವರ ಆಪ್ತರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Prajwal Devaraj: ಪ್ರಜ್ವಲ್ ಜತೆ ಸಂಪದಾ ರೊಮ್ಯಾನ್ಸ್!

‘ಕರಾವಳಿ’, ‘ಮಾಫಿಯಾ’, ‘ಗಣ’ ಮುಂತಾದ ಸಿನಿಮಾಗಳು ಅವರ ಕೈಯಲ್ಲಿವೆ. ‘ಕರಾವಳಿ’ ಸಿನಿಮಾದಲ್ಲಿ ಅವರ ಗೆಟಪ್​ ತುಂಬ ಡಿಫರೆಂಟ್​ ಆಗಿರಲಿದೆ.

ಕರಾವಳಿ (Karavali Movie)-ಇದು ಈಗಾಗಲೇ ಭಾರಿ ನಿರೀಕ್ಷೆ ಮತ್ತು ಕುತೂಹಲ ಮೂಡಿಸಿರುವ ಸಿನಿಮಾ. ಗುರುದತ್ ಗಾಣಿಗ (Gurudath Ganiga) ನಿರ್ದೇಶನದ ಅವರದೇ ಗಾಣಿಗ ಫಿಲ್ಮ್ಸ್‌ ಹಾಗೂ ವಿಕೆ ಫಿಲ್ಮ್‌ ಅಸೋಸಿಯೇಷನ್‌ನಲ್ಲಿ ನಿರ್ಮಾ಼ಣವಾಗುತ್ತಿರುವ ಚಿತ್ರ. ಪ್ರಜ್ವಲ್ ದೇವರಾಜ್ (Prajwal Devaraj) ನಾಯಕನಾಗಿ ನಟಿಸುತ್ತಿರುವ ಈ ಸಿನಿಮಾ ಈಗಾಗಲೇ ಪೋಸ್ಟರ್ ಮತ್ತು ಟೀಸರ್ ಮೂಲಕ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ.

ನಿರ್ದೇಶಕ ಮತ್ತು ನಿರ್ಮಾಪಕ ಗುರುದತ್ ಗಾಣಿಗ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು ‘ಇದು ಮನುಷ್ಯ ಹಾಗೂ ಪ್ರಾಣಿಯ ಮಧ್ಯೆ ನಡೆಯುವ ಸಂಘರ್ಷದ ಕಥೆ. ಇದು ಹಳ್ಳಿಯ ಕಥೆ. ಚಿತ್ರದಲ್ಲಿ ಕಂಬಳವೂ ಒಂದು ಪಾತ್ರವಾಗಿ ಹರಿಯಲಿದೆ’ ಎಂದು ಹೇಳಿದ್ದರು.

ಇನ್ನು ಕರಾವಳಿ ಸಿನಿಮಾಗೆ ನಾಯಕಿಯಾಗಿ ಸಂಪದಾ ಆಯ್ಕೆ ಆಗಿದ್ದಾರೆ. ಈಗಾಗಲೇ ಬೆಂಕಿ ಹಾಗೂ ರೈಡರ್ ಸಿನಿಮಾಗಳಲ್ಲಿ ಕಾಣಿಸೊಂಡಿದ್ದ ಸಂಪದಾ ಇದೀಗ ಕರಾವಳಿ ಸಿನಿಮಾದಲ್ಲಿ ಮಿಂಚಲಿದ್ದಾರೆ. ಚಿತ್ರದ ಬಗ್ಗೆಸ ಸಖತ್ ಎಕ್ಸಾಯಿಟ್ ಆಗಿರುವ ಸಂಪದಾ ಪಶುವೈದ್ಯೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

Continue Reading

ಸಿನಿಮಾ

Kantara Movie: `ಕಾಂತಾರ ಚಾಪ್ಟರ್‌ 1‌’ ಸಿನಿಮಾಗೆ ಖ್ಯಾತ ಮಾಲಿವುಡ್‌ ನಟ ಎಂಟ್ರಿ!

Kantara Movie: ದೈವಾರಾಧನೆಯ ಎಳೆಯನ್ನು ಇಟ್ಟುಕೊಂಡು, ಕಡಿಮೆ ಬಜೆಟ್‌ನಲ್ಲಿ ನಿರ್ಮಿಸಿದ ಕಾಂತಾರ ಸಿನಿಮಾ ಭಾರತ ಸೇರಿ ಜಗತ್ತಿನಾದ್ಯಂತ ಹೆಸರು ಗಳಿಸಿದೆ. ರಿಷಬ್‌ ಶೆಟ್ಟಿ ಅವರ ಸಿನಿಮಾ ಬದುಕಿಗೆ ಹೊಸ ಸ್ವರೂಪ ನೀಡಿದೆ. ಹಾಗಾಗಿ, ಕಾಂತಾರ ಪ್ರಿಕ್ವೆಲ್‌ಅನ್ನು ಅದ್ಧೂರಿಯಾಗಿ ನಿರ್ಮಿಸುವುದು ರಿಷಬ್‌ ಶೆಟ್ಟಿ ಅವರ ಗುರಿಯಾಗಿದೆ. ಇದರ ಬೆನ್ನಲ್ಲೇ, ಕಾಂತಾರ ಚಾಪ್ಟರ್‌ 1 ಸಿನಿಮಾದ ಡಿಜಿಟಲ್‌ ಹಕ್ಕುಗಳು ದಾಖಲೆಯ 125 ಕೋಟಿ ರೂ.ಗೆ ಮಾರಾಟವಾಗಿರುವುದು ಮಹತ್ವದ ಸಂಗತಿಯಾಗಿದೆ.

VISTARANEWS.COM


on

Kantara Movie Mollywood actor enters
Koo

ಬೆಂಗಳೂರು: ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶಿಸಿದ ಕಾಂತಾರ ಸಿನಿಮಾ ದೇಶ-ವಿದೇಶದಲ್ಲಿ ಭರ್ಜರಿ ಹೆಸರು ಗಳಿಸಿದ ಬೆನ್ನಲ್ಲೇ ರಿಷಬ್‌ ಶೆಟ್ಟಿ ಅವರು ಕಾಂತಾರ ಚಾಪ್ಟರ್‌ 1‌ (Kantara Movie) (ಪ್ರಿಕ್ವೆಲ್) ಚಿತ್ರೀಕರಣಕ್ಕೆ ಇಳಿದಿದ್ದರು. ಇದರ ಬೆನ್ನಲ್ಲೇ, ಕಾಂತಾರ ಸಿನಿಮಾದ ಡಿಜಿಟಲ್‌ ಹಕ್ಕುಗಳು (Digital Rights) ಅಮೆಜಾನ್‌ ಪ್ರೈಮ್‌ ಪಾಲಾಗಿದ್ದು, ಸುಮಾರು 125 ಕೋಟಿ ರೂ.ಗೆ ಮಾರಾಟ ಮಾಡಲಾಗಿದೆ ಎಂದು ತಿಳಿದುಬಂದಿತ್ತು. ಇದೀಗ ಮಾಲಿವುಡ್‌ ಖ್ಯಾತ ನಟ ಸಿನಿಮಾಗೆ ಎಂಟ್ರಿ ಕೊಟ್ಟಿರುವುದಾಗಿ ವರದಿಯಾಗಿದೆ.

ಮಾಲಿವುಡ್‌ ನಟ ನಟ ಜಯರಾಂ ‘ಕಾಂತಾರ’ ಚಿತ್ರದಲ್ಲಿ ಅವರು ನಟಿಸುತ್ತಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಹೊರ ಬೀಳಬೇಕಿದೆ. ಒಮ್ಮೆಲೆ 5 ಭಾಷೆಗಳಲ್ಲಿ ‘ಕಾಂತಾರ’ ಚಾಪ್ಟರ್-1 ಸಿನಿಮಾ ಕಟ್ಟಿಕೊಡಲು ತಂಡ ಪ್ರಯತ್ನಿಸುತ್ತಿದೆ ಎನ್ನಲಾಗಿದೆ. ಬೇರೆ ಭಾಷೆಗಳಲ್ಲಿ ಸಿನಿಮಾ ಬರುವುದರಿಂದ ಅಲ್ಲಿನ ಕಲಾವಿದರನ್ನು ಬಳಸಿಕೊಳ್ಳುತ್ತಿದೆ ಎನ್ನಲಾಗಿದೆ. ನಟ ಜಯರಾಂ ಕನ್ನಡ, ತೆಲುಗು, ತಮಿಳು ಸಿನಿಮಾಗಳಲ್ಲಿ ಕೂಡ ನಟಿಸಿದ್ದಾರೆ. ಶಿವರಾಜ್‌ಕುಮಾರ್ ನಟನೆಯ ‘ಘೋಸ್ಟ್’ ಚಿತ್ರದಲ್ಲಿ ಎಸಿಪಿ ಚೆಂಗಪ್ಪ ಪಾತ್ರದಲ್ಲಿ ಅಬ್ಬರಿಸಿದ್ದರು.

ಇದನ್ನೂ ಓದಿ: Kantara Movie: ದಾಖಲೆ ಮೊತ್ತಕ್ಕೆ ಕಾಂತಾರ ಸಿನಿಮಾದ ಡಿಜಿಟಲ್‌ ರೈಟ್ಸ್‌ ಮಾರಾಟ; ಅಬ್ಬಾ ಇಷ್ಟು ಕೋಟಿನಾ!

ದೈವಾರಾಧನೆಯ ಎಳೆಯನ್ನು ಇಟ್ಟುಕೊಂಡು, ಕಡಿಮೆ ಬಜೆಟ್‌ನಲ್ಲಿ ನಿರ್ಮಿಸಿದ ಕಾಂತಾರ ಸಿನಿಮಾ ಭಾರತ ಸೇರಿ ಜಗತ್ತಿನಾದ್ಯಂತ ಹೆಸರು ಗಳಿಸಿದೆ. ರಿಷಬ್‌ ಶೆಟ್ಟಿ ಅವರ ಸಿನಿಮಾ ಬದುಕಿಗೆ ಹೊಸ ಸ್ವರೂಪ ನೀಡಿದೆ. ಹಾಗಾಗಿ, ಕಾಂತಾರ ಪ್ರಿಕ್ವೆಲ್‌ಅನ್ನು ಅದ್ಧೂರಿಯಾಗಿ ನಿರ್ಮಿಸುವುದು ರಿಷಬ್‌ ಶೆಟ್ಟಿ ಅವರ ಗುರಿಯಾಗಿದೆ. ಇದರ ಬೆನ್ನಲ್ಲೇ, ಕಾಂತಾರ ಚಾಪ್ಟರ್‌ 1 ಸಿನಿಮಾದ ಡಿಜಿಟಲ್‌ ಹಕ್ಕುಗಳು ದಾಖಲೆಯ 125 ಕೋಟಿ ರೂ.ಗೆ ಮಾರಾಟವಾಗಿರುವುದು ಮಹತ್ವದ ಸಂಗತಿಯಾಗಿದೆ.

ಕೆಲ ದಿನಗಳ ಹಿಂದಷ್ಟೇ ರಿಷಬ್‌ ಶೆಟ್ಟಿ ಅವರು ಕಾಂತಾರ 2 ಚಿತ್ರೀಕರಣ ಆರಂಭವಾಗಿದೆ ಎಂದು ಹೇಳಿದ್ದರು. ಕಾಂತಾರ ಚಿತ್ರದ ಕುರಿತು ಅಧಿಕೃತವಾಗಿ ಹೊಂಬಾಳೆ ಸಂಸ್ಥೆ ಎಲ್ಲವನ್ನೂ ಘೋಷಣೆ ಮಾಡುತ್ತದೆ. ಈಗಾಗಲೇ ಚಿತ್ರೀಕರಣ ಆರಂಭವಾಗಿದ್ದು, ಬಹಳ ಚೆನ್ನಾಗಿ ಕೆಲಸಕಾರ್ಯಗಳು ನಡೆಯುತ್ತಿವೆ. ಮೊದಲಿಗಿಂತ ದೊಡ್ಡ ಜವಾಬ್ದಾರಿಯೊಂದಿಗೆ ದೊಡ್ಡ ತಂಡ ಕೆಲಸ ಮಾಡುತ್ತಿದೆ” ಎಂದು ಹೇಳಿದ್ದರು.

“ಹೊಂಬಾಳೆ ಪ್ರೊಡಕ್ಷನ್ ಹೌಸ್ ಸಿಕ್ಕಿರುವುದು ಫಿಲಂ ಮೇಕರ್‌ಗಳಿಗೆ ಒಂದು ಪುಣ್ಯ. ಕಾಂತಾರದಲ್ಲಿ ಅದ್ಭುತವಾದ ಟೆಕ್ನಿಷಿಯನ್ಸ್‌ಗಳು ಕೆಲಸ ಮಾಡುತ್ತಿದ್ದಾರೆ. ನಿರಂತರವಾಗಿ ಕೆಲಸಗಳು ನಡೆಯುತ್ತಿದ್ದು ಪಾರ್ಟ್ ಬೈ ಪಾರ್ಟ್ ಚಿತ್ರೀಕರಣ ನಡೆಯುತ್ತದೆ. ಜನ ಕಾಂತಾರವನ್ನು ಗೆಲ್ಲಿಸಿದ್ದಾರೆ, ಹೀಗಾಗಿ ಮಾತಿನಲ್ಲಿ ಏನನ್ನೂ ಹೇಳುವುದಿಲ್ಲ. ಕೆಲಸದ ಮೂಲಕ ಮಾಡಿ ತೋರಿಸಬೇಕು ಎಂದು ಅಂದುಕೊಂಡಿದ್ದೇನೆ” ಎಂದಿದ್ದರು.

ಕಾಂತಾರ ಶೂಟಿಂಗ್‌ಗಾಗಿ ಕುಂದಾಪುರದ ಕರಾವಳಿ ಪ್ರದೇಶದಲ್ಲಿ ಅದ್ಧೂರಿ ಸೆಟ್​ ನಿರ್ಮಿಸಲಾಗಿದೆ. 200×200 ಅಡಿಯ ಬೃಹತ್ ಸೆಟ್ ನಿರ್ಮಿಸಲಾಗಿದೆ. ಚಿತ್ರದ ಹೆಚ್ಚಿನ ಭಾಗವನ್ನು ಕಾಡಿನಲ್ಲಿ ಚಿತ್ರೀಕರಿಸಲಿದ್ದರೆ, ಬೃಹತ್ ಸೆಟ್ ಡಬ್ಬಿಂಗ್ ಸ್ಟುಡಿಯೊ ಮತ್ತು ಎಡಿಟಿಂಗ್ ಸೂಟ್ ಒಳಗೊಂಡಿರುತ್ತದೆ ಎಂದು ವರದಿಯಾಗಿದೆ. ಮುಂಬೈ, ಬೆಂಗಳೂರು ಮತ್ತು ಹೈದರಾಬಾದ್‌ನಂತಹ ಸ್ಥಳಗಳಿಂದ ಸೆಟ್ ನಿರ್ಮಾಣಕ್ಕಾಗಿ 600 ನುರಿತ ಬಡಗಿಗಳು ಮತ್ತು ಸ್ಟಂಟ್ ಮಾಸ್ಟರ್‌ಗಳನ್ನು ನೇಮಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ರಾಮೋಜಿ ಫಿಲ್ಮ್‌ ಸಿಟಿಯ ನಂತರ ದೇಶದಲ್ಲೇ ಅತಿ ದೊಡ್ಡ ಸೆಟ್‌ ಇದಾಗಿದೆ ಎಂದು ಹೇಳಲಾಗುತ್ತಿದೆ.

Continue Reading

ಸ್ಯಾಂಡಲ್ ವುಡ್

Shiva Rajkumar: ತಮಿಳಿನ ‘ನಾನ್ ವೈಲೆನ್ಸ್’ ಸಿನಿಮಾಗೆ ಕರುನಾಡ ಚಕ್ರವರ್ತಿ ಶಿವಣ್ಣ ಸಾಥ್: ಫಸ್ಟ್ ಲುಕ್ ಔಟ್‌!

Shiva Rajkumar:  ʻನಾನ್ ವೈಲೆನ್ಸ್ʼ ಚಿತ್ರೀಕರಣ ಮುಕ್ತಾಯ ಹಂತಕ್ಕೆ ಬಂದಿದೆ. ಶೀಘ್ರದಲ್ಲೇ ಚಿತ್ರದ ಟೀಸರ್ ಮತ್ತು ಟ್ರೈಲರ್‌ ಬಗ್ಗೆ ಅಧಿಕೃತವಾಗಿ ಪ್ರಕಟಿಸಲಾಗುವುದು ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ತಮಿಳು, ತೆಲುಗು, ಮಲಯಾಳಂ, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ.

VISTARANEWS.COM


on

Shiva Rajkumar support Tamil Movie Non Voilance Cinema
Koo

ಬೆಂಗಳೂರು: ತಮಿಳಿನ ʻಮೆಟ್ರೋʼ ಖ್ಯಾತಿಯ ನಿರ್ದೇಶಕ ಆನಂದ್ ಕೃಷ್ಣನ್ ಆಕ್ಷನ್ ಕಟ್ ಹೇಳುತ್ತಿರುವ ʻನಾನ್ ವೈಲೆನ್ಸ್ʼ (Shiva Rajkumar) ಸಿನಿಮಾಗೆ ನಟ ಶಿವರಾಜ್ ಕುಮಾರ್ (Non Voilance Cinema) ಸಾಥ್ ಕೊಟ್ಟಿದ್ದಾರೆ. ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿ. ಶಿವಣ್ಣ ಇಡೀ ತಂಡಕ್ಕೆ ಶುಭಾಶಯ ತಿಳಿಸಿದ್ದಾರೆ. ಮೆಟ್ರೋ ಶಿರೀಶ್, ಬಾಬಿ ಸಿಂಹ ಮತ್ತು ಯೋಗಿ ಬಾಬು ಪ್ರಮುಖ ಪಾತ್ರಗಳಲ್ಲಿ ನಟಿಸುತಿದ್ದಾರೆ. ದಿತಿ ಬಾಲನ್, ಗರುಡ ರಾಮ್, ಆದಿತ್ಯ ಕಥಿರ್ ತಾರಾಬಳಗದಲ್ಲಿದ್ದಾರೆ.

90ರ ದಶಕದಲ್ಲಿ ಮಧುರೈ ಜೈಲಿನೊಳಗೆ ಸಂಭವಿಸುವ ಘಟನೆಗಳ ಸುತ್ತ ಸುತ್ತುವ ಒಂದು ಆಕರ್ಷಕ ಚಿತ್ರಕಥೆಯನ್ನು ಆನಂದ್ ರಚಿಸಿದ್ದಾರೆ. ‘ಮೆಟ್ರೋ’ ಮತ್ತು ‘ಕೊಡಿಯಲ್ಲಿ ಒರುವನ್’ ಚಿತ್ರಗಳ ಸತತ ಗೆಲುವಿನ ನಂತರ ನಿರ್ದೇಶಕ ಆನಂದ ಕೃಷ್ಣನ್ ಈ ಚಿತ್ರದ ಮೂಲಕ ಹ್ಯಾಟ್ರಿಕ್ ಯಶಸ್ಸನ್ನು ತಮ್ಮದಾಗಿಸಿಕೊಳ್ಳವ ನಿರೀಕ್ಷೆಯಲ್ಲಿದ್ದಾರೆ.

ʻನಾನ್ ವೈಲೆನ್ಸ್ʼ ಚಿತ್ರೀಕರಣ ಮುಕ್ತಾಯ ಹಂತಕ್ಕೆ ಬಂದಿದೆ. ಶೀಘ್ರದಲ್ಲೇ ಚಿತ್ರದ ಟೀಸರ್ ಮತ್ತು ಟ್ರೈಲರ್‌ ಬಗ್ಗೆ ಅಧಿಕೃತವಾಗಿ ಪ್ರಕಟಿಸಲಾಗುವುದು ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ತಮಿಳು, ತೆಲುಗು, ಮಲಯಾಳಂ, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ.

ಎಕೆ ಪಿಕ್ಚರ್ಸ್ ನಡಿ ಲೇಖಾ ನಾನ್ ವೈಲೆನ್ಸ್ ಸಿನಿಮಾ ನಿರ್ಮಾಣ ಮಾಡುತ್ತಿದ್ದು, 90ರ ದಶಕವನ್ನು ಮರುಸೃಷ್ಟಿಸಲು ಚಿತ್ರತಂಡ ಭಾರೀ ಶ್ರಮವಹಿಸುತ್ತಿದೆ. ಯುವನ್ ಶಂಕರ್ ರಾಜ್ ಸಂಗೀತ, ಎನ್ ಎಸ್ ಉದಯ್ ಕುಮಾರ್ ಛಾಯಾಗ್ರಹಣ, ಶ್ರೀಕಾಂತ್ ಎನ್ ಬಿ ಸಂಕಲನ ಚಿತ್ರಕ್ಕಿದೆ.

ಶಿವಣ್ಣ ಸಿನಿಮಾ

ಸ್ಯಾಂಡಲ್‌ವುಡ್‌ ಹ್ಯಾಟ್ರಿಕ್‌ ಹೀರೊ ಶಿವರಾಜ್‌ಕುಮಾರ್‌ (Shiva Rajkumar) ಹಾಗೂ ಆರ್ ಚಂದ್ರು ಕಾಂಬಿನೇಷನ್‌ನಲ್ಲಿ ಹೊಸ ಸಿನಿಮಾ ಘೋಷಣೆ ಆಗಿದೆ. ಆರ್​ ಚಂದ್ರು (R Chandru) ಅವರು ಇತ್ತೀಚೆಗೆ ‘ಆರ್​ಸಿ ಸ್ಟುಡಿಯೊ’ ಆರಂಭಿಸಿ ಐದು ಸಿನಿಮಾಗಳನ್ನು ಘೋಷಣೆ ಮಾಡಿದ್ದರು. ಇದೀಗ ಆರನೇ ಸಿನಿಮಾ ಅನೌನ್ಸ್‌ ಮಾಡಿದ್ದಾರೆ. ಈ ಮುಂಚೆ ಈ ಜೋಡಿಯ ʻಮೈಲಾರಿʼ ಸಿನಿಮಾ ದೊಡ್ಡ ಯಶಸ್ಸು ಕಂಡಿತ್ತು. ಇದಾದ ಬಳಿಕ ಆರ್​ ಚಂದ್ರು ಅವರ ʻಕಬ್ಜʼ ಚಿತ್ರದಲ್ಲಿ ಚಿಕ್ಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು ಶಿವಣ್ಣ.

ಆರ್​. ಚಂದ್ರು ನಿರ್ದೇಶನದ, ಉಪೇಂದ್ರ ನಟನೆಯ ‘ಕಬ್ಜ’ ಸಿನಿಮಾ (Kabzaa Movie) ಎರಡು ದಿನಗಳಲ್ಲೇ ನೂರು ಕೋಟಿ ರೂ. ಕ್ಲಬ್‌ ಸೇರಿತ್ತು. ಆದರೆ ಭಾರಿ ಕಲೆಕ್ಷನ್‌ ಮಾಡಿರುವ ಈ ಸಿನಿಮಾವನ್ನು ಸಾಕಷ್ಟು ಜನ ಇಷ್ಟ ಪಟ್ಟಿರಲಿಲ್ಲ. ಹೀಗಾಗಿ ʻಕಬ್ಜʼ ಸೀಕ್ವೆಲ್ ಯಾವುದೇ ಕಾರಣಕ್ಕೂ ಸಿದ್ಧವಾಗುವುದಿಲ್ಲ ಎಂದು ಹಲವರು ಅಂದುಕೊಂಡಿದ್ದರು. ಇದಾದ ಬಳಿಕ ಜನವರಿ 23ರಂದು ಚಂದ್ರು ಅವರು ಐದು ಸಿನಿಮಾ ಘೋಷಣೆ ಮಾಡಿದರು.

ಭಾರತೀಯ ಚಿತ್ರರಂಗದಲ್ಲೇ ಹೊಸ ಮೈಲುಗಲ್ಲು ಸೃಷ್ಟಿಸಿದ ನಿರ್ದೇಶಕ ಆರ್ ಚಂದ್ರು ಅವರು ಆರ್ ಸಿ ಪ್ರೊಡಕ್ಷನ್ ನಡಿ ಐದು ಪ್ಯಾನ್ ಇಂಡಿಯಾ ಸಿನಿಮಾಗಳನ್ನು ಘೋಷಣೆ ಮಾಡಿದ್ದರು. ʻಶ್ರೀರಾಮಬಾಣʼ, ʻಫಾದರ್ʼ, ʻPOKʼ, ʻಡಾಗ್ʼ ಹಾಗೂ ಕಬ್ಜ-2 ಟೈಟಲ್ ಘೋಷಣೆಯಾಗಿತ್ತು.

Continue Reading
Advertisement
Star Fashion
ಫ್ಯಾಷನ್23 mins ago

Star Fashion: ಪಂಚೆ ಜೊತೆ ಟ್ರೋಫಿ ಜಾಕೆಟ್‌ ಧರಿಸಿದ ನಟಿ ತಮನ್ನಾಳ ಯೂನಿಕ್‌ ಫ್ಯಾಷನ್‌!

Health Insurance
ಮನಿ-ಗೈಡ್37 mins ago

Health Insurance: ಕ್ಯಾಶ್​ಲೆಸ್​ ಕ್ಲೈಮ್‌ ಗಳಿಗೆ ಆಸ್ಪತ್ರೆಯಲ್ಲಿ ಇನ್ನು ಹೆಚ್ಚು ಹೊತ್ತು ಕಾಯಬೇಕಿಲ್ಲ; ಇಲ್ಲಿದೆ ಹೊಸ ನಿಯಮ

First successful TAVR surgery in the state at Fortis Hospital
ಬೆಂಗಳೂರು39 mins ago

Fortis Hospital: ರಾಜ್ಯದಲ್ಲೇ ಮೊದಲ ಬಾರಿಗೆ ಅಪರೂಪದ ಶಸ್ತ್ರಚಿಕಿತ್ಸೆ

MLA Belur Gopalakrishna election campaign for Congress candidates at ripponpete
ರಾಜಕೀಯ47 mins ago

MLC Election: ವಿಧಾನಪರಿಷತ್ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿಗಳ ಪರ ಶಾಸಕ ಬೇಳೂರು ಗೋಪಾಲಕೃಷ್ಣ ಮತಯಾಚನೆ

Vijayanagara News Distribute good quality sowing seeds and fertilizers says Tehsildar Amaresh G K
ವಿಜಯನಗರ48 mins ago

Vijayanagara News: ಉತ್ತಮ ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ ವಿತರಿಸಿ: ತಹಸೀಲ್ದಾರ್‌ ಅಮರೇಶ್

Vishwadarshan Education Institute President Hariprakash konemane spoke in Training Workshop for Vishwadarshan Central School Teachers at Yallapura
ಉತ್ತರ ಕನ್ನಡ50 mins ago

Uttara Kannada News: ಸಂಸ್ಕಾರಯುತ, ಗುಣಾತ್ಮಕ ಶಿಕ್ಷಣ ನೀಡುವಲ್ಲಿ ವಿಶ್ವದರ್ಶನ ಶಿಕ್ಷಣ ಸಂಸ್ಥೆ ಮುಂಚೂಣಿ: ಹರಿಪ್ರಕಾಶ್‌ ಕೋಣೆಮನೆ

indo Chaina border
ದೇಶ50 mins ago

Indo China Border : ಸಿಕ್ಕಿಂನಿಂದ 150 ಕಿ.ಮೀ ದೂರದಲ್ಲಿ ಚೀನಾದಿಂದ ಅತ್ಯಾಧುನಿಕ ಯುದ್ಧ ವಿಮಾನ ನಿಯೋಜನೆ

Prevention Of Obesity
ಆರೋಗ್ಯ53 mins ago

Prevention Of Obesity: ಆರೋಗ್ಯಪೂರ್ಣ ಜೀರ್ಣಕ್ರಿಯೆ ಮೂಲಕ ಬೊಜ್ಜು ನಿವಾರಣೆ ಸಾಧ್ಯ

Karnataka Weather Forecast
ಮಳೆ55 mins ago

Karnataka Weather : ರಾಜ್ಯಾದ್ಯಂತ ಜೂನ್‌ ಮೊದಲ ವಾರ ಅಬ್ಬರಿಸಲಿದ್ಯಾ ಮಳೆ; ಕುಸಿಯಲಿದೆ ತಾಪಮಾನ

Union Minister Pralhad Joshi Statement
ಕರ್ನಾಟಕ1 hour ago

Pralhad Joshi: ಕನ್ನಡಿಗರ ತೆರಿಗೆಯಲ್ಲಿ ಕೇರಳಿಗರನ್ನು ಸಾಕುತ್ತಿದ್ದಾರೆ ಸಿದ್ದರಾಮಯ್ಯ: ಜೋಶಿ ಆರೋಪ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ6 hours ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು2 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ3 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ4 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು4 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌