Shiva Rajkumar: ಮಕ್ಕಳು ಧೀಮಂತ ನಾಯಕರ ಚಿಂತನೆ ಜೀವನದಲ್ಲೂ ಅಳವಡಿಸಿಕೊಳ್ಳಲಿ ಎಂದ ಶಿವಣ್ಣ! - Vistara News

South Cinema

Shiva Rajkumar: ಮಕ್ಕಳು ಧೀಮಂತ ನಾಯಕರ ಚಿಂತನೆ ಜೀವನದಲ್ಲೂ ಅಳವಡಿಸಿಕೊಳ್ಳಲಿ ಎಂದ ಶಿವಣ್ಣ!

Shiva Rajkumar: ಅ.2ರಂದು ಆಚರಿಸಲಾಗುತ್ತಿದೆ. ಈ ದಿನಶ ಶಕ್ತಿಧಾಮ ಮಕ್ಕಳ ಜತೆ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನದ ಸಂಭ್ರಮವನ್ನು ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್‌ ಆಚರಿಸಿದರು.

VISTARANEWS.COM


on

Shiva Rajkumar GandhiJayanti Shakthidhama
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ನಿರ್ಣಾಯಕ ಕೊಡುಗೆ ನೀಡಿದ, ಅಹಿಂಸಾ ತತ್ವದಿಂದಲೇ ಜಗತ್ತಿಗೆ ಸ್ಫೂರ್ತಿಯಾದ ಮಹಾತ್ಮ ಗಾಂಧೀಜಿಯವರ 154ನೇ ಜಯಂತಿ (Gandhi Jayanti 2023)ಅ.2ರಂದು ಆಚರಿಸಲಾಗುತ್ತಿದೆ. ಈ ದಿನ ಶಕ್ತಿಧಾಮ ಮಕ್ಕಳ ಜತೆ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನದ ಸಂಭ್ರಮವನ್ನು ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್‌ ಆಚರಿಸಿದರು.

ಮಕ್ಕಳ ಜತೆ ಶಿವಣ್ಣ ನಿಂತು ʻʻಇಂದು ನಮ್ಮ ಶಕ್ತಿಧಾಮ ಮಕ್ಕಳ ಜತೆ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನದ ಸಂಭ್ರಮ ಆಚರಿದ್ದು ಸಂತೋಷವಾಯ್ತು! ಮಕ್ಕಳು ಈ ಧೀಮಂತ ನಾಯಕರ ಚಿಂತನೆ ತಮ್ಮ ಜೀವನದಲ್ಲೂ ಅಳವಡಿಸಿಕೊಳ್ಳಲಿʼʼಎಂದು ಬರೆದುಕೊಂಡಿದ್ದಾರೆ. ಹಲವು ವಿಶೇಷ ದಿನಗಳಲ್ಲಿ ಶಿವರಾಜ್​ಕುಮಾರ್​ ಅವರು ಅಲ್ಲಿಗೆ ಭೇಟಿ ನೀಡುತ್ತಾರೆ.

ಸಿನಿಮಾ ವಿಚಾರಕ್ಕೆ ಬಂದರೆ ಕರುನಾಡ ಚಕ್ರವರ್ತಿ ಶಿವ ರಾಜ್‌ಕುಮಾರ್ (Shiva Rajkumar) ನಾಯಕರಾಗಿ ನಟಿಸಿರುವ, ಬಹು ನಿರೀಕ್ಷಿತ “ಘೋಸ್ಟ್” ಚಿತ್ರದ ಟ್ರೈಲರ್‌ (Ghost Trailer) ಬಿಡುಗಡೆಗೊಂಡಿದೆ. ʻʻಸಾಮಾನ್ಯವಾಗಿ ನಾನ್ ಯಾರ್ ತಂಟೆಗೂ ಹೋಗಲ್ಲ. ಸೋಲ್ತಿನಿ ಅನ್ನೊ ಭಯಕ್ಕಲ್ಲ,‌ ನಾನ್ ಹೋದ್ರೆ ಯುದ್ಧಭೂಮಿ ರುದ್ರಭೂಮಿ ಆಗುತ್ತೆʼʼಎನ್ನು ಖಡಕ್‌ ಡೈಲಾಗ್‌ ಮೂಲಕ ರಗಡ್‌ ಆಗಿ ಕಂಡಿದ್ದಾರೆ ಶಿವಣ್ಣ. ಈ ಹಿಂದೆ “ಘೋಸ್ಟ್” ಚಿತ್ರದ ಸಾಂಗ್ ರಿಲೀಸ್ ಆಗಿತ್ತು. ಅರ್ಜುನ್‌ ಜನ್ಯಾ ಕಂಪೋಸ್‌ ಮಾಡಿದ್ದು, ಹಾಡು ಸಖತ್‌ ಆಗಿದೆ ಎಂದು ಶಿವಣ್ಣನ ಫ್ಯಾನ್ಸ್‌ (GHOST OGM) ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: Shiva Rajkumar: ʻಘೋಸ್ಟ್ʼ ಸಿನಿಮಾ ಹಾಡಿಗೆ ಶಿವಣ್ಣನ ಫ್ಯಾನ್ಸ್‌ ಫಿದಾ!

ಈಗಾಗಲೇ ಸಿನಿಮಾದ ಥಿಯೇಟ್ರಿಕಲ್, ಸ್ಯಾಟಲೈಟ್ ಹಾಗೂ ಡಿಜಿಟಲ್ ಹಕ್ಕು ಭಾರಿ ಮೊತ್ತಕ್ಕೆ ಮಾರಾಟವಾಗಿದೆ. ಕನ್ನಡದ ಖ್ಯಾತ ನಿರ್ಮಾಣ ಸಂಸ್ಥೆ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಂದೇಶ್ ಎನ್ ನಿರ್ಮಿಸಿರುವ, ಶ್ರೀನಿ ನಿರ್ದೇಶನದ ಈ ಸಿನಿಮಾ ಮತ್ತೆ ಸುದ್ದಿಯಲ್ಲಿದೆ .”ಆರ್ ಆರ್ ಆರ್”, “ಜವಾನ್” ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ವಿತರಣೆ ಮಾಡಿರುವ ಪೆನ್ ಸ್ಟುಡಿಯೊ ಸಂಸ್ಥೆ ಈಗ “ಘೋಸ್ಟ್” ಚಿತ್ರದ ವಿತರಣಾ ಹಕ್ಕನ್ನು ಪಡೆದುಕೊಂಡಿದೆ.

ಬಾಲಿವುಡ್‌ ನಟ ಅನುಪಮ್‌ ಖೇರ್‌, ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.ಕೆಜಿಎಫ್‌ ಖ್ಯಾತಿಯ ನಟಿ ಅರ್ಚನಾ ಜೋಯಿಸ್ ಕಾಣಿಸಿಕೊಳ್ಳಲಿದ್ದಾರೆ. ಟೋಪಿವಾಲ, ಶ್ರೀನಿವಾಸ ಕಲ್ಯಾಣ, ಓಲ್ಡ್‌ ಮಾಂಕ್‌ ಸಿನಿಮಾ ಖ್ಯಾತಿಯ ಎಂ.ಜಿ.ಶ್ರೀನಿವಾಸ್‌ ಅವರು ಘೋಸ್ಟ್‌ ಸಿನಿಮಾನವನ್ನು ನಿರ್ದೇಶಿಸುತ್ತಿದ್ದಾರೆ. ಸಿನಿಮಾಗೆ ಅರ್ಜುನ್‌ ಜನ್ಯಾ ಸಂಗೀತ ಇದ್ದರೆ, ಸಂದೇಶ್‌ ನಾಗರಾಜ್‌ ನಿರ್ಮಾಪಕರಾಗಿದ್ದಾರೆ. ಅಕ್ಟೋಬರ್ 19ರಂದು ಸಿನಿಮಾ ರಿಲೀಸ್ ಆಗಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Pushpa 2: ʼಪುಷ್ಪ 2ʼ ಸಿನಿಮಾದ ಎರಡನೇ ಹಾಡು ರಿಲೀಸ್‌: ಅಲ್ಲು ಜತೆ ಹೆಜ್ಜೆ ಹಾಕಿದ ರಶ್ಮಿಕಾ!

Pushpa 2: ಸಾಮಿ ಹಾಡನ್ನೂ ಮೀರಿಸುವಂತಿದೆ ಹಾಡು. ಅ ದೇವಿಶ್ರೀ ಪ್ರಸಾದ್‌ ಸಂಗೀತ ನಿರ್ದೇಶನದಲ್ಲಿ ಶ್ರೇಯಾ ಘೋಷಾಲ್‌ ಈ ಹಾಡಿಗೆ ಧ್ವನಿಯಾಗಿದ್ದಾರೆ. ಹಾಡಿಗೆ ಬಾಲಿವುಡ್‌ ಗಣೇಶ್ ಆಚಾರ್ಯ ಕೊರಿಯೋಗ್ರಾಫಿ ಇದೆ.ಈ ಹಾಡು 6 ಭಾಷೆಗಳಲ್ಲಿ ಮೂಡಿ ಬಂದಿದೆ. ಎಲ್ಲ ಭಾಷೆಗಳಲ್ಲಿಯೂ ಶ್ರೇಯಾ ಘೋಷಾಲ್‌ ಹಾಡಿಗೆ ಧ್ವನಿ ನೀಡುತ್ತಿರುವುದು ವಿಶೇಷ.

VISTARANEWS.COM


on

Pushpa 2 SOOSEKI Couple Song Lyrical Video out
Koo

ಬೆಂಗಳೂರು: ಸದ್ಯ ದೇಶದ ಗಮನ ಸೆಳೆದಿರುವ ಚಿತ್ರಗಳ ಪೈಕಿ ಟಾಲಿವುಡ್‌ ಸ್ಟೈಲಿಶ್‌ ಸ್ಟಾರ್‌ ಅಲ್ಲು ಅರ್ಜುನ್‌-ರಶ್ಮಿಕಾ ಮಂದಣ್ಣ ಅಭಿನಯದ ʼಪುಷ್ಪ 2ʼ (Pushpa 2) ಕೂಡ ಒಂದು. 2021ರಲ್ಲಿ ತೆರೆಕಂಡು ಬಾಕ್ಸ್‌ ಆಫೀಸ್‌ನಲ್ಲಿ ಮ್ಯಾಜಿಕ್‌ ಮಾಡುದ್ದ ಪ್ಯಾನ್‌ ಇಂಡಿಯಾ ಸಿನಿಮಾ ʼಪುಷ್ಪʼದ ಮುಂದುವರಿದ ಭಾಗ ಇದು. ಸುಕುಮಾರ್ ನಿರ್ದೇಶನದ ‘ಪುಷ್ಪ 2’ ಚಿತ್ರದ ಮೊದಲ ಹಾಡು ಈಗಾಗಲೇ ರಿಲೀಸ್‌ ಆಗಿ ಧೂಳೆಬ್ಬಿಸುತ್ತಿದೆ. ಅದರಲ್ಲಿಯೂ ಯೂಟ್ಯೂಬ್‌ನಲ್ಲಿ ದಾಖಲೆಯ ವೀಕ್ಷಣೆ ಕಂಡಿದೆ. ʻಪುಷ್ಪ ಪುಷ್ಪʼ ಎಂದು ಶುರುವಾಗುವ ಹಾಡಿಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ನೀಡಿದ್ದು, ಇದರಲ್ಲಿನ ಹುಕ್ ಸ್ಟೆಪ್ ವೈರಲ್‌ ಆಗಿದೆ. ಇದೀಗ ಎರಡನೇ ಹಾಡು ಔಟ್‌ ಆಗಿದೆ. ಅಲ್ಲು ಅರ್ಜುನ್‌ ಜತೆ ರಶ್ಮಿಕಾ ಹೆಜ್ಜೆ ಹಾಕಿದ್ದಾರೆ. ಹಾಡು ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ವೀವ್ಸ್‌ ಪಡೆದುಕೊಂಡಿದೆ.

ಸಾಮಿ ಹಾಡನ್ನೂ ಮೀರಿಸುವಂತಿದೆ ಸೂಸೇನೆ ಹಾಡು. ಅ ದೇವಿಶ್ರೀ ಪ್ರಸಾದ್‌ ಸಂಗೀತ ನಿರ್ದೇಶನದಲ್ಲಿ ಶ್ರೇಯಾ ಘೋಷಾಲ್‌ ಈ ಹಾಡಿಗೆ ಧ್ವನಿಯಾಗಿದ್ದಾರೆ. ಹಾಡಿಗೆ ಬಾಲಿವುಡ್‌ ಗಣೇಶ್ ಆಚಾರ್ಯ ಕೊರಿಯೋಗ್ರಾಫಿ ಇದೆ.

6 ಭಾಷೆಗಳಲ್ಲಿಯೂ ಶ್ರೇಯಾ ಮೋಡಿ

ಈ ಹಾಡು 6 ಭಾಷೆಗಳಲ್ಲಿ ಮೂಡಿ ಬಂದಿದೆ. ಎಲ್ಲ ಭಾಷೆಗಳಲ್ಲಿಯೂ ಶ್ರೇಯಾ ಘೋಷಾಲ್‌ ಹಾಡಿಗೆ ಧ್ವನಿ ನೀಡುತ್ತಿರುವುದು ವಿಶೇಷ. ಸೂಸೆಕಿ (ತೆಲುಗು), ನೋಡೋಕ (ಕನ್ನಡ), ಅಂಗಾರೊನ್‌ (ಹಿಂದಿ), ಸೂಡಾನ (ತಮಿಳು), ಕಂಡಾಲೋ (ಮಲಯಾಳಂ) ಮತ್ತು ಆಗುನೆರ್‌ (ಬಂಗಾಳಿ) ಎಂದು ಆರಂಭವಾಗುವ ಹಾಡನ್ನು ಶ್ರೇಯಾ ಘೋಷಾಲ್‌ ಹಾಡಿದ್ದಾರೆ.

ಇದನ್ನೂ ಓದಿ: Pushpa 2: ʼಪುಷ್ಪ 2ʼ ಸಿನಿಮಾ ತಂಡದಿಂದ ಅಲ್ಲು ಅರ್ಜುನ್‌ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌; ಎರಡನೇ ಹಾಡು ರಿಲೀಸ್‌ಗೆ ಮುಹೂರ್ತ ಫಿಕ್ಸ್‌

ಚಿತ್ರ ಬಿಡುಗಡೆ ಯಾವಾಗ?

ʼಪುಷ್ಪ 2ʼ ಸಿನಿಮಾ ಆಗಸ್ಟ್‌ 15ರಂದು ಬಿಡುಗಡೆಯಾಗಲಿದೆ. ಮೈತ್ರಿ ಮೂವೀ‌ ಮೇಕರ್ಸ್ ದುಬಾರಿ ಬಜೆಟ್‌ನಲ್ಲಿ ಚಿತ್ರ ನಿರ್ಮಿಸುತ್ತಿದೆ. ಈ ಸಿನಿಮಾದಲ್ಲಿ ಅಲ್ಲು ಅರ್ಜುನ್‌ ಜತೆಯಾಗಿ ಶ್ರೀವಲ್ಲಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಫಹದ್ ಫಾಸಿಲ್, ಡಾಲಿ ಧನಂಜಯ್, ಅನಸೂಯಾ ಭಾರದ್ವಾಜ್ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ಈ ವರ್ಷದ ಆರಂಭದಲ್ಲಿ ಅಲ್ಲು ಅರ್ಜುನ್ ಅವರ ಹುಟ್ಟುಹಬ್ಬದಂದು ʼಪುಷ್ಪ 2ʼ ತಯಾರಕರು ಚಿತ್ರದ ಟೀಸರ್ ಅನ್ನು ಬಿಡುಗಡೆ ಮಾಡಿದ್ದರು. ಟೀಸರ್​ನಲ್ಲಿ ಅಲ್ಲು ಅರ್ಜುನ್ ಸೀರೆ ಉಟ್ಟು, ಮುಖವನ್ನು ನೀಲಿ ಮತ್ತು ಕೆಂಪು ಬಣ್ಣಗಳನ್ನು ಮೆತ್ತಿಕೊಂಡಿರುವುದು ಕಂಡು ಬಂದಿತ್ತು. ಭಾರವಾದ ಸಾಂಪ್ರದಾಯಿಕ ಚಿನ್ನ ಮತ್ತು ಹೂವಿನ ಆಭರಣಗಳೊಂದಿಗೆ ಮೇಕಪ್ ಧರಿಸಿ ಗೂಂಡಾಗಳನ್ನು ಹೊಡೆಯುತ್ತಿರುವುದು ಟೀಸರ್‌ ಕಂಡು ಬಂದು ವೀಕ್ಷಕರ ಕುತೂಹಲ ಕೆರಳಿಸಿತ್ತು. ಸದ್ಯ ಅಭಿಮಾನಿಗಳು ಚಿತ್ರ ಬಿಡುಗಡೆ ದಿನಾಂಕವನ್ನು ಎದುರು ನೋಡುತ್ತಿದ್ದಾರೆ.

Continue Reading

ಸ್ಯಾಂಡಲ್ ವುಡ್

Shakhahaari Movie: ಪ್ರೇಕ್ಷಕರನ್ನು ಆವರಿಸಿದ ‘ಶಾಖಾಹಾರಿ’: ಪರಭಾಷಿಕರಿಂದಲೂ ಚಿತ್ರಕ್ಕೆ ಮೆಚ್ಚುಗೆ!

Shakhahaari Movie : ಚಿತ್ರಮಂದಿರದಲ್ಲಿ ದಕ್ಕದ ಪ್ರೀತಿ ಶಾಖಾಹಾರಿ ಚಿತ್ರಕ್ಕೆ ಒಟಿಟಿಯಲ್ಲಿ ದೊರೆಯುತ್ತಿದೆ. ಅಮೇಜಾನ್ ಪ್ರೈಮ್‌ಗೆ ಎಂಟ್ರಿ ಕೊಟ್ಟ ಬರೀ 4 ದಿನದಲ್ಲಿ 10 ಮಿಲಿಯನ್ ನಿಮಿಷಗಳ ಸ್ಟ್ರೀಮಿಂಗ್ ಕಂಡಿರುವ ಸಿನಿಮಾ.. ಎಲ್ಲಾ ಜಾಲತಾಣಗಳಲ್ಲು ಬಹಳಷ್ಟು ಜನ ದಿನೇ ದಿನೇ ಮೆಚ್ಚುಗೆ ವ್ಯಕ್ತಪಡಿಸುತ್ತ ಇರುವುದು ಗಮನಾರ್ಹ.

VISTARANEWS.COM


on

Shakhahaari Movie 1 cr minutes of streaming amazon prime
Koo

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಭಿನ್ನ-ವಿಭಿನ್ನ ಪ್ರಯತ್ನಗಳು ನಡೆಯುತ್ತಿವೆ. ಹೊಸಬರ ಜತೆಗೆ ಅನುಭವಿ ತಾರಾಬಳಗ ಕೈ ಜೋಡಿಸಿದಾಗ ಒಂದೊಳ್ಳೆ ಅದ್ಭುತ ಸಿನಿಮಾ ಹೊರಹೊಮ್ಮಲಿದೆ ಎಂಬುದಕ್ಕೆ ʻಶಾಖಾಹಾರಿʼ ಚಿತ್ರ (Shakhahaari Movie) ತಾಜಾ ಉದಾಹರಣೆ. ತನ್ನ ಒಳ್ಳೆಯ ಕಂಟೆಂಟ್‌ನಿಂದಲೇ ಭಾರೀ ಸದ್ದು ಮಾಡಿದ್ದ ಈ ಚಿತ್ರವೀಗ ಅಮೇಜಾನ್ ಪ್ರೈಮ್‌ನಲ್ಲಿ ಅಪಾರ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಶಾಖಾಹಾರಿ ನೋಡಿದವರೆಲ್ಲಾ ಇಂತಹ ಸಿನಿಮಾವನ್ನು ಥಿಯೇಟರ್ ನಲ್ಲಿ ಮಿಸ್ ಮಾಡಿಕೊಂಡ್ವಲ್ಲಾ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಫೆಬ್ರವರಿ 16ರಂದು ಬೆಳ್ಳಿಪರದೆಗೆ ಎಂಟ್ರಿ ಕೊಟ್ಟಿದ್ದ ಶಾಖಾಹಾರಿ ಸಿನಿಮಾವೀಗ ಮೂರು ತಿಂಗಳ ಬಳಿಕ ಒಟಿಟಿಗೆ ಲಗ್ಗೆ ಇಟ್ಟಿದೆ. ಶುಕ್ರವಾರದಿಂದ ಅಮೇಜಾನ್ ಪ್ರೈಮ್ ನಲ್ಲಿ ಸ್ಕ್ರೀಮ್ ಆಗಿರುವ ಈ ಚಿತ್ರವನ್ನು ನೋಡಿದವರೆಲ್ಲಾ ವಾವ್ ಇಂತಹ ಪ್ರಯತ್ನಗಳು ಮಾಲಿವುಡ್‌ನಲ್ಲಿ ಮಾತ್ರವಲ್ಲ ನಮ್ಮಲ್ಲಿಯೂ ನಡೆಯುತ್ತವೆ. ಅದಕ್ಕೆ ಪ್ರೇಕ್ಷಕಪ್ರಭು ಬೆನ್ನುತಟ್ಟಬೇಕಷ್ಟೇ.

ಚಿತ್ರಮಂದಿರದಲ್ಲಿ ದಕ್ಕದ ಪ್ರೀತಿ ಶಾಖಾಹಾರಿ ಚಿತ್ರಕ್ಕೆ ಒಟಿಟಿಯಲ್ಲಿ ದೊರೆಯುತ್ತಿದೆ. ಅಮೇಜಾನ್ ಪ್ರೈಮ್‌ಗೆ ಎಂಟ್ರಿ ಕೊಟ್ಟ ಬರೀ 4 ದಿನದಲ್ಲಿ 10 ಮಿಲಿಯನ್ ನಿಮಿಷಗಳ ಸ್ಟ್ರೀಮಿಂಗ್ ಕಂಡಿರುವ ಸಿನಿಮಾ.. ಎಲ್ಲಾ ಜಾಲತಾಣಗಳಲ್ಲು ಬಹಳಷ್ಟು ಜನ ದಿನೇ ದಿನೇ ಮೆಚ್ಚುಗೆ ವ್ಯಕ್ತಪಡಿಸುತ್ತ ಇರುವುದು ಗಮನಾರ್ಹ.

ಇದನ್ನೂ ಓದಿ: Kannada New Movie: ಶಶಿಕುಮಾರ್ ಪುತ್ರನ ‘ಕಾದಾಡಿ’ ಸಿನಿಮಾದ ಲಿರಿಕಲ್ ಸಾಂಗ್ ಔಟ್‌!

ಶಾಖಾಹಾರಿಗೆ ಜೈ ಎಂದ ಸತೀಶ್

ನೀನಾಸಂ ಸತೀಶ್ ಶಾಖಾಹಾರಿ ಸಿನಿಮಾವನ್ನು ಬಾಯ್ ತುಂಬಾ ಹೊಗಳಿದ್ದಾರೆ. ಯಾವ ನೀರಿಕ್ಷೆಯು ಇಲ್ಲದೆ ಸುಮ್ಮನೆ ಸಿನಿಮಾ ನೋಡುತ್ತಾ ಹೋದಾಗ,ಸಿನಿಮಾ ನಮ್ಮನ್ನು ಒಳಗೆ ಸೆಳೆದೊಯ್ಯುತ್ತದೆ,ಸುಳಿಯಂತೆ. ಪ್ರಾಮಾಣಿಕವಾದ, ಯಾರನ್ನೂ ಮೆಚ್ಚಿಸಲು ಅಲ್ಲದೆ ತಮ್ಮಷ್ಟಕ್ಕೆ ತಂಡ ಧ್ಯಾನಿಸಿದೆ. ಸಿನಿಮಾ ಬರೀ ನಿರ್ದೇಶಕ,ಅಥವಾ ನಟರಲ್ಲದೆ ಸಮೂಹದ ಕೆಲಸ ಎಂಬುದನ್ನು ಮತ್ತೆ ಸಾಬೀತು ಮಾಡಿದೆ.ಗೆಳೆಯ ಗೋಪಿ ವಾವ್! ರಘು ಅಣ್ಣ ನಮ್ಮ ಹೆಮ್ಮೆ! ನಿರ್ದೇಶಕ ಸಂದೀಪ್ ,ಮತ್ತು ಛಾಯಾಗ್ರಹಣ, ಸಂಗೀತ ಎಲ್ಲವೂ ಅದ್ಭುತ.ನೋಡಲೇಬೇಕಾದ ನಮ್ಮ ಚಿತ್ರ ಎಂದು ಟ್ವೀಟ್ ಮಾಡಿದ್ದಾರೆ.

ಕ್ಲೈಮ್ಯಾಕ್ಸ್ ಚಿಂದಿ ಎಂದ ಪೃಥ್ವಿ

ನಟ ಪೃಥ್ವಿ ಅಂಬಾರ್ ಕೂಡ ಚಿತ್ರವನ್ನು ನೋಡಿ ಮನಸಾರೆ ಕೊಂಡಾಡಿದ್ದಾರೆ. ಶಾಖಾಹಾರಿ ಬಿಡುಗಡೆ ಸಮಯದಲ್ಲಿ ನನ್ನ ಚಿತ್ರ ಬಿಡುಗಡೆಯಾಗಿತ್ತು. ಹೀಗಾಗಿ ಇಂತಹ ಒಳ್ಳೆ ಸಿನಿಮಾವನ್ನು ಮಿಸ್ ಮಾಡಿಕೊಂಡಿದ್ದೇನೆ. ಅದಕ್ಕಾಗಿ ನನಗೆ ಬೇಸರವಿದೆ. ಚಿತ್ರದ ಕಥೆ, ಟ್ವಿಸ್ಟ್, ಕ್ಲೈಮ್ಯಾಕ್ಸ್ ಎಲ್ಲವೂ ಅದ್ಭುತ. ರಂಗಾಯಣ ರಘು ಸರ್ ಹಾಗೂ ಗೋಪಾಲ್ ದೇಶಪಾಂಡೇ ಸರ್ ಅಭಿನಯ ಸೂಪರ್ ಎಂದಿದ್ದಾರೆ.

ಸಂದೀಪ್ ಸುಂಕದ್ ನಿರ್ದೇಶನದ ‘ಶಾಖಾಹಾರಿ’ ಸಿನಿಮಾದ ಸೂತ್ರಧಾರಿ. ಕನ್ನಡ ಚಿತ್ರರಂಗದ ಹಿರಿಯ ನಟ ರಂಗಾಯಣ ರಘು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದರು. ಪೊಲೀಸ್ ಅಧಿಕಾರಿಯಾಗಿ ಗೋಪಾಲಕೃಷ್ಣ ದೇಶಪಾಂಡೆ ಅತ್ಯದ್ಬುತವಾಗಿ ನಟಿಸಿದ್ದರು. ಉಳಿದಂತೆ ವಿನಯ್, ನಿಧಿ ಹೆಗಡೆ, ಸುಜಯ್ ಶಾಸ್ತ್ರೀ, ಹರಿಣಿ ಹಾಗೂ ಕಾನ್‌ಸ್ಟೇಬಲ್ ಮಮತಕ್ಕನ ಪಾತ್ರಧಾರಿಯಾಗಿ ಪ್ರತಿಭಾ ನಾಯಕ್ ತಮ್ಮ ಪಾತ್ರಗಳಿಗೆ ನ್ಯಾಯ ಸಲ್ಲಿಸಿದ್ದಾರೆ. ಕೀಲಂಬಿ ಮೀಡಿಯಾ ಲ್ಯಾಬ್ ಬ್ಯಾನರ್ ನಡಿ ರಾಜೇಶ್ ಕೀಲಾಂಬಿ, ರಂಜಿನಿ ಪ್ರಸನ್ನ ಶಾಖಾಹಾರಿಗೆ ಬಂಡವಾಳ ಹೂಡಿದ್ದಾರೆ.

ಶಿವಮೊಗ್ಗದ ತೀರ್ಥಹಳ್ಳಿಯ ಹಳ್ಳಿಯೊಂದರಲ್ಲಿ ನಡೆಯುವ ರೋಚಕ ಕಥೆಯೇ ಶಾಖಾಹಾರಿ. ಸಿನಿಮಾದಲ್ಲಿ ಮಾಸ್ತಿಕಟ್ಟೆ ಸುಬ್ರಮಣ್ಯ ಅಲಿಯಾಸ್ ಸುಬ್ಬಣ್ಣ (ರಂಗಾಯಣ ರಘು)ಗೆ ಹಿಂದೆ-ಮುಂದೆ ಯಾರೂ ಇರುವುದಿಲ್ಲ. ಹೋಟೆಲ್ ಮಾಲೀಕನಾಗಿರುವ ಸುಬ್ಬಣ್ಣ, ಬಾಣಸಿಗನಾಗಿಯೂ ಕೆಲಸ ಮಾಡಿಕೊಂಡಿರುತ್ತಾರೆ. ಇವರದ್ದು ಶುದ್ಧ ಶಾಕಾಹಾರಿ ಹೋಟೆಲ್… ಹೀಗಿರುವಾಗ, ಅಲ್ಲಿ ನಡೆಯುವ ಕೆಲ ಘಟನೆಗಳಿಂದ ಸುಬ್ಬಣ್ಣನ ಹೋಟೆಲ್ ಹೇಗೆ ‘ಶಾಖಾ’ಹಾರಿ ಆಗುತ್ತೆ ಎಂಬುದೆ ರೋಚಕ ವಿಷಯ.

Continue Reading

ಸಿನಿಮಾ

Shilpa Shetty: ಮೈಸೂರಿನ ನಂಜುಂಡೇಶ್ವರನ ಸನ್ನಿಧಿಯಲ್ಲಿ ನಟಿ ಶಿಲ್ಪಾ ಶೆಟ್ಟಿ ಧ್ಯಾನ

Shilpa Shetty: ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ (Dhruva Sarja) ಹಾಗೂ ನಿರ್ದೇಶಕ ಪ್ರೇಮ್‌ ಕಾಂಬಿನೇಶನ್‌ ಇರುವ ʻಕೆಡಿ’ ಸಿನಿಮಾದಲ್ಲಿ ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಸತ್ಯವತಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಪ್ಯಾನ್-ಇಂಡಿಯಾ ಸಿನಿಮಾವಾದ ಕೆಡಿ ಸಿನಿಮಾದಲ್ಲಿ ಸತ್ಯವತಿ ಪಾತ್ರದಲ್ಲಿ ಮಿಂಚುತ್ತಿದ್ದಾರೆ .ಯುಗಾದಿ ಹಬ್ಬದಂದು ಚಿತ್ರತಂಡ, ಶಿಲ್ಪಾ ಶೆಟ್ಟಿ ಫಸ್ಟ್‌ ಲುಕ್‌ ಪೋಸ್ಟರ್‌ ಹಂಚಿಕೊಂಡಿತ್ತು.

VISTARANEWS.COM


on

Shilpa Shetty Visiting Nanjundeshwara Temple
Koo

ಬೆಂಗಳೂರು: ಮೈಸೂರಿನಲ್ಲಿ `ಕೆಡಿ’ ಸಿನಿಮಾ (KD cinema) ಚಿತ್ರೀಕರಣ ನಟಿ ಶಿಲ್ಪಾ ಶೆಟ್ಟಿ ತಂಗಿದ್ದಾರೆ. ಈ ವೇಳೆ ನಟಿ ಬಿಡುವು ಮಾಡಿಕೊಂಡು ನಂಜನಗೂಡಿನ ನಂಜುಂಡೇಶ್ವರನ ದೇವಾಲಯಕ್ಕೆ (Nanjundeshwara Temple) ಬಂದಿದ್ದಾರೆ. ಪೂಜೆ ಸಲ್ಲಿಸಿ, ದೇವಸ್ಥಾನದ ಆವರಣದಲ್ಲಿ ಶಿಲ್ಪಾ ಶೆಟ್ಟಿ ಅವರು ಧ್ಯಾನ ಮಾಡಿದ್ದಾರೆ. ಶಿಲ್ಪಾ ಶೆಟ್ಟಿ ಬಂದಿರುವ ವಿಷಯ ತಿಳಿದು, ಫ್ಯಾನ್ಸ್​ ಮುಗಿಬಿದ್ದಿದ್ದರು.

 ಈ ಮಧ್ಯೆ ಶಿಲ್ಪಾ ಶೆಟ್ಟಿ ಅವರು ಆಗಾಗ ದೇವಸ್ಥಾನಗಳಿಗೆ ತೆರಳುತ್ತಿದ್ದಾರೆ. ಇತ್ತೀಚೆಗೆ ಮಂಗಳೂರಿಗೆ ತೆರಳಿ ಭೂತ ಕೋಲ ವೀಕ್ಷಿಸಿದ್ದರು. ಈಗ ಅವರು ಮೈಸೂರಿನಲ್ಲಿ ನಂಜನಗೂಡು ನಂಜುಡೇಶ್ವರನ ಸನ್ನಿಧಾನಕ್ಕೆ ತೆರಳಿದ್ದಾರೆ. ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ (Dhruva Sarja) ಹಾಗೂ ನಿರ್ದೇಶಕ ಪ್ರೇಮ್‌ ಕಾಂಬಿನೇಶನ್‌ ಇರುವ ʻಕೆಡಿ’ ಸಿನಿಮಾದಲ್ಲಿ ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಸತ್ಯವತಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಪ್ಯಾನ್-ಇಂಡಿಯಾ ಸಿನಿಮಾವಾದ ಕೆಡಿ ಸಿನಿಮಾದಲ್ಲಿ ಸತ್ಯವತಿ ಪಾತ್ರದಲ್ಲಿ ಮಿಂಚುತ್ತಿದ್ದಾರೆ .ಯುಗಾದಿ ಹಬ್ಬದಂದು ಚಿತ್ರತಂಡ, ಶಿಲ್ಪಾ ಶೆಟ್ಟಿ ಫಸ್ಟ್‌ ಲುಕ್‌ ಪೋಸ್ಟರ್‌ ಹಂಚಿಕೊಂಡಿತ್ತು. ಶಿಲ್ಪಾ ಶೆಟ್ಟಿ ಕೂಡಾ ತಮ್ಮ ಪೋಸ್ಟರನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡು ಬಹಳ ಎಕ್ಸೈಟ್‌ ಆಗಿದ್ದರು. ರೆಟ್ರೋ ಲುಕ್‌ನಲ್ಲಿ ಕಾರೊಂದರ ಮುಂದೆ ಬ್ಯಾಗ್‌ ಹಿಡಿದು ನಿಂತಿರುವ ಶಿಲ್ಪಾ ಶೆಟ್ಟಿ ಲುಕ್‌ಗೆ ಸಿನಿಪ್ರಿಯರು ಮೆಚ್ಚುಗೆ ವ್ಯಕ್ತಪಡಿಸಿದ್ದರು.ಶಿಲ್ಪಾ ಶೆಟ್ಟಿ 17 ವರ್ಷಗಳ ನಂತರ ಇದೀಗ ಕೆಡಿ’ ಸಿನಿಮಾದ ಮೂಲಕ ಕನ್ನಡ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಪ್ರೀತ್ಸೋದ್ ತಪ್ಪಾ? ಆಟೋ ಶಂಕರ್, ಒಂದಾಗೋಣ ಬಾ ಸಿನಿಮಾಗಳಲ್ಲಿ ಶಿಲ್ಪಾ ಅಭಿನಯಿಸಿದ್ದಾರೆ.

ಇದನ್ನೂ ಓದಿ: Shilpa Shetty : 3.5 ಕೋಟಿ ರೂಪಾಯಿ ಬೆಲೆಯ ರೇಂಜ್​ ರೋವರ್​​ ಕಾರು ಖರೀದಿಸಿದ ಶಿಲ್ಪಾ ಶೆಟ್ಟಿ; ವಿಡಿಯೊ ನೋಡಿ

ಕೆಡಿ ಸಿನಿಮಾದಲ್ಲಿ ಬಹು ತಾರಾಗಣ ಇದೆ. ಈ ಹಿಂದೆ ಚಿತ್ರತಂಡ ರವಿಚಂದ್ರನ್ ಅವರ ಲುಕ್‌ ಹಂಚಿಕೊಂಡಿತ್ತು. ರವಿಚಂದ್ರನ್ ಅವರ ಸಿನಿಮಾ ಫಸ್ಟ್ ಲುಕ್‌ನಲ್ಲಿ ಹಣೆಯಲ್ಲಿ ವಿಭೂತಿ, ಕಪ್ಪು ಶರ್ಟ್ ಮತ್ತು ಪ್ಯಾಂಟ್‌ನಲ್ಲಿ ಖಡಕ್ ಆಗಿ ಕಾಣಿಸಿಕೊಂಡಿದ್ದರು. ತಮ್ಮ ಬಲಗಾಲಿನಲ್ಲಿ ಕಾರಿನ ಡೋರ್ ಓಪನ್ ಮಾಡಿ ಪೋಸ್ ಕೊಟ್ಟಿದ್ದರು. ಎಂದೂ ಕಾಣಿಸಿಕೊಂಡಿರದ ಲುಕ್‌ನಲ್ಲಿ ರವಿಚಂದ್ರನ್ ಮಿಂಚಿದ್ದರು. ಅಷ್ಟೇ ಅಲ್ಲದೇ ಧ್ರುವ ಸರ್ಜಾ ಅವರು 23 ದಿನಗಳಲ್ಲಿ 18 ಕೆಜಿ ತೂಕ ಇಳಿಸಿಕೊಂಡಿದ್ದರು.

ಈ ಚಿತ್ರದ ಕಥೆ 1970ರ ದಶಕದಲ್ಲಿ ಸಾಗಲಿದೆ ಎಂದು ಹೇಳಲಾಗುತ್ತಿದೆ. ಟೈಟಲ್‌ ಟೀಸರ್‌ನಲ್ಲಿ ಧ್ರುವ ಸರ್ಜಾ ಮಾಸ್‌ ಆಗಿ ಕಾಣಿಸಿಕೊಂಡಿದ್ದಾರೆ. ‘ಕೆವಿಎನ್​ ಪ್ರೊಡಕ್ಷನ್ಸ್’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಈ ಚಿತ್ರ ಕನ್ನಡ ಮಾತ್ರವಲ್ಲದೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಮೂಡಿ ಬರುತ್ತಿದೆ. ಟೀಸರ್‌ ಪಂಚ ಭಾಷೆಯಲ್ಲಿ ಬಿಡುಗಡೆಗೊಂಡಿರುವುದು ವಿಶೇಷ.

Continue Reading

ಸ್ಯಾಂಡಲ್ ವುಡ್

Kannada New Movie: ಶಶಿಕುಮಾರ್ ಪುತ್ರನ ‘ಕಾದಾಡಿ’ ಸಿನಿಮಾದ ಲಿರಿಕಲ್ ಸಾಂಗ್ ಔಟ್‌!

Kannada New Movie: 90ರ ದಶಕದಲ್ಲಿ ಯಶಸ್ವಿಯ ಉತ್ತುಂಗದಲ್ಲಿದ್ದ ಶಶಿಕುಮಾರ್ ಕನ್ನಡ, ತಮಿಳು ಮತ್ತು ತೆಲುಗು ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿದ್ದು ಸೈ ಎನಿಸಿಕೊಂಡಿದ್ದರು. `ಕಾದಾಡಿ’ (Kaadaadi Movie Kannada) ಎನ್ನುವ ಚಿತ್ರದಲ್ಲಿ ಆದಿತ್ಯ ಶಶಿಕುಮಾರ್ ನಟಿಸಿದ್ದಾರೆ. ಕನ್ನಡ, ತೆಲುಗು,ಹಿಂದಿ ಮತ್ತು ತಮಿಳು ಭಾಷೆಯಲ್ಲಿ ಸಿದ್ದಗೊಂಡಿರುವ ಸಿನಿಮಾವನ್ನು ಸತೀಶ್ ಮಾಲೆಂಪಾಟಿ ನಿರ್ದೇಶಿಸಿ, ಅರುಣಂ ಫಿಲಿಂಸ್ ಮುಖಾಂತರ ನಿರ್ಮಾಣ ಮಾಡಿದ್ದಾರೆ.

VISTARANEWS.COM


on

Kannada New Movie Aditya Shashikumar Kaadaadi Movie Lyrical song out
Koo

ಬೆಂಗಳೂರು: ನಟ ಶಶಿಕುಮಾರ್ ಪುತ್ರ ಅಕ್ಷಿತ್ ಶಶಿಕುಮಾರ್ (Kannada New Movie) ಈಗ ಆದಿತ್ಯ ಶಶಿಕುಮಾರ್ (Aditya Shashikumar) ಎಂದು ಹೆಸರು ಬದಲಾಯಿಸಿಕೊಂಡಿದ್ದಾರೆ. `ಕಾದಾಡಿ’ (Kaadaadi Movie Kannada) ಎನ್ನುವ ಚಿತ್ರದಲ್ಲಿ ಆದಿತ್ಯ ಶಶಿಕುಮಾರ್ ನಟಿಸಿದ್ದಾರೆ. ಕನ್ನಡ, ತೆಲುಗು,ಹಿಂದಿ ಮತ್ತು ತಮಿಳು ಭಾಷೆಯಲ್ಲಿ ಸಿದ್ದಗೊಂಡಿರುವ ಸಿನಿಮಾವನ್ನು ಸತೀಶ್ ಮಾಲೆಂಪಾಟಿ ನಿರ್ದೇಶಿಸಿ, ಅರುಣಂ ಫಿಲಿಂಸ್ ಮುಖಾಂತರ ನಿರ್ಮಾಣ ಮಾಡಿದ್ದಾರೆ. ಪ್ರಚಾರದ ಸಲುವಾಗಿ ಮೊನ್ನೆಯಷ್ಟೇ ನಾಯಕನ ಪರಿಚಯದ ಎರಡನೇ ಲಿರಿಕಲ್ ವಿಡಿಯೋ ಹಾಡನ್ನು ಬಿಡುಗಡೆ ಮಾಡಲಾಗಿದೆ.

ಎನ್.ಮಾರುತಿ ಸಾಹಿತ್ಯದ ’ಕಲೆಯು ಇರಬೇಕು, ಮನೆಯು ಇರಬೇಕುʼʼ ಹಾಡಿಗೆ ಶಶಾಂಕ್ ಶೇಷಗಿರಿ ಧ್ವನಿಯಾಗಿದ್ದಾರೆ. ನಮ್ಮ ಜೀವನವನ್ನು ತ್ಯಾಗ ಮಾಡುವ ಮೂಲಕ ಸಮಾಜಕ್ಕೆ ಏನನ್ನಾದರೂ ಕೊಡಬೇಕು. ಇಂತಹ ಅಂಶಗಳನ್ನು ಥ್ರಿಲ್ಲರ್ ಮೂಲಕ ತೋರಿಸುವ ಪ್ರಯತ್ನ ಮಾಡಲಾಗಿದೆ.

ಲಾವಣ್ಯಸಾಹುಕಾರ, ಚಾಂದಿನಿತಮಿಳರಸನ್ ಈ ಸಿನಿಮಾಗೆ ನಾಯಕಿಯರು. ಉಳಿದಂತೆ ಪೋಸಾನಿ, ರವಿಕಾಳೆ, ಮಾರಿಮುತ್ತು, ಪ್ರೇಮ್‌ಮನೋಹರ್, ಶ್ರವಣ್‌ರಾಘವೇಂದ್ರ ಮುಂತಾದವರು ನಟಿಸಿದ್ದಾರೆ. ಆರು ಹಾಡುಗಳಿಗೆ ಭೀಮ್ಸ್ ಸಿಸಿರಿಲಿಯೋ ಸಂಗೀತ ಸಂಯೋಜಿಸಿದ್ದಾರೆ. ಡಿ.ಯೋಗಿಪ್ರಸಾದ್ ಛಾಯಾಗ್ರಹಣ ಡಿ.ಯೋಗಿಪ್ರಸಾದ್, ಕಲೆ ಅರ್ಜುನ್‌ ಸೂರಿ ಸೆಟ್ಟಿ, ಪ್ರಕಾಶ್‌ತೋಟ ಸಂಕಲನ, ನೃತ್ಯ ರಾಜ್‌ಪಿಡಿ-ರಾಜ್‌ಕೃಷ್ಣ, ಸಾಹಸ ಸಿನಿಮಾಕ್ಕಿದೆ.

ಇದನ್ನೂ ಓದಿ: Kannada New Movie: ʼಕೋಟಿʼ ಚಿತ್ರಕ್ಕೆ ಕಿಚ್ಚನ ಬಲ; ಹೊಸ ಪೋಸ್ಟರ್‌ ರಿಲೀಸ್‌

ಗೋವಾ, ಚಿಕ್ಕಮಗಳೂರು, ಹೈದರಬಾದ್, ಚೆನ್ನೈ ಸುಂದರ ತಾಣಗಳಲ್ಲಿ ಚಿತ್ರೀಕರಣ ಸನಡೆಸಲಾಗಿದೆ. ಅಂದಹಾಗೆ ಸಿನಿಮಾವು ಜೂನ್ ತಿಂಗಳಲ್ಲಿ ತೆರೆಗೆ ಬರುವ ಸಾಧ್ಯತೆ ಇದೆ.

90ರ ದಶಕದಲ್ಲಿ ಯಶಸ್ವಿಯ ಉತ್ತುಂಗದಲ್ಲಿದ್ದ ಶಶಿಕುಮಾರ್ ಕನ್ನಡ, ತಮಿಳು ಮತ್ತು ತೆಲುಗು ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿದ್ದು ಸೈ ಎನಿಸಿಕೊಂಡಿದ್ದರು. ಇದೀಗ ಅವರ ಪುತ್ರ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದು ತಂದೆಯಂತೆ ಆದಿತ್ಯ ಸ್ಯಾಂಡಲ್ವುಡ್ ನಲ್ಲಿ ತಮ್ಮ ಮಿಂಚು ಹರಿಸುತ್ತಾರೆ ಕಾದು ನೋಡಬೇಕು.

Continue Reading
Advertisement
Viral News
ವೈರಲ್ ನ್ಯೂಸ್21 mins ago

Viral News: ರೈಲಿಯಲ್ಲಿ ಅಶ್ಲೀಲವಾಗಿ ಮೈ ಕುಣಿಸಿದ ಮಹಿಳೆ; ರೀಲ್ಸ್ ಮಾಡುವವರ ಕಾಟವಿಲ್ಲದ ಪ್ರಯಾಣ ಅಸಾಧ್ಯ ಎಂದ ನೆಟ್ಟಿಗರು

Rahul Gandhi
ದೇಶ23 mins ago

Rahul Gandhi: ನೋಡ ನೋಡ್ತಿದ್ದಂತೆ ತಲೆ ಮೇಲೆ ನೀರು ಸುರಿದುಕೊಂಡ ರಾಹುಲ್‌ ಗಾಂಧಿ! ವಿಡಿಯೋ ಇದೆ

dk shivakumar jagdeep dhankar
ಪ್ರಮುಖ ಸುದ್ದಿ26 mins ago

DK Shivakumar: ಕುತೂಹಲ ಕೆರಳಿಸಿದ ಡಿಕೆಶಿ- ಉಪರಾಷ್ಟ್ರಪತಿ ಭೇಟಿ; ʼಬಿಜೆಪಿಗೆ ಸೇರ್ತೀರಾʼ ಎಂದ ನೆಟ್ಟಿಗರು!

Pushpa 2 SOOSEKI Couple Song Lyrical Video out
ಟಾಲಿವುಡ್28 mins ago

Pushpa 2: ʼಪುಷ್ಪ 2ʼ ಸಿನಿಮಾದ ಎರಡನೇ ಹಾಡು ರಿಲೀಸ್‌: ಅಲ್ಲು ಜತೆ ಹೆಜ್ಜೆ ಹಾಕಿದ ರಶ್ಮಿಕಾ!

UPI Safety Tips
ವಾಣಿಜ್ಯ28 mins ago

UPI Safety Tips: ಈ ಟಿಪ್ಸ್ ಪಾಲಿಸಿ, ಮೊಬೈಲ್ ನಿಂದ ಹಣ ಪಾವತಿಸುವಾಗ ಆಗುವ ವಂಚನೆಯಿಂದ ಪಾರಾಗಿ

Shakhahaari Movie 1 cr minutes of streaming amazon prime
ಸ್ಯಾಂಡಲ್ ವುಡ್51 mins ago

Shakhahaari Movie: ಪ್ರೇಕ್ಷಕರನ್ನು ಆವರಿಸಿದ ‘ಶಾಖಾಹಾರಿ’: ಪರಭಾಷಿಕರಿಂದಲೂ ಚಿತ್ರಕ್ಕೆ ಮೆಚ್ಚುಗೆ!

Arvind Kejriwal
ದೇಶ51 mins ago

Arvind Kejriwal: ಜಾಮೀನು ಅವಧಿ ವಿಸ್ತರಣೆಗೆ ಕೋರಿ ಅರ್ಜಿ; ಸುಪ್ರೀಂನಲ್ಲಿ ಕೇಜ್ರಿವಾಲ್‌ಗೆ ಭಾರೀ ಹಿನ್ನಡೆ-ಮತ್ತೆ ಜೈಲು ಫಿಕ್ಸ್‌!

Crime News
ಕ್ರೈಂ1 hour ago

Crime News: ಶಾಕಿಂಗ್‌: ಕುಟುಂಬದ 7 ಮಂದಿಯನ್ನು ಕೊಚ್ಚಿ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ; ಕಾರಣ ನಿಗೂಢ

belluru assault case
ಕ್ರೈಂ1 hour ago

Assault Case: ಬೆಳ್ಳೂರು ಹಿಂದೂ ಯುವಕನ ಮೇಲೆ ಹಲ್ಲೆ; ದೂರು ಸ್ವೀಕರಿಸದ ಪಿಎಸ್‌ಐ ಸಸ್ಪೆಂಡ್‌

Shilpa Shetty Visiting Nanjundeshwara Temple
ಸಿನಿಮಾ1 hour ago

Shilpa Shetty: ಮೈಸೂರಿನ ನಂಜುಂಡೇಶ್ವರನ ಸನ್ನಿಧಿಯಲ್ಲಿ ನಟಿ ಶಿಲ್ಪಾ ಶೆಟ್ಟಿ ಧ್ಯಾನ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ17 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 day ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌