Shruti Haasan: ಬಾಯ್‌ಫ್ರೆಂಡ್‌ ಜತೆ ಜನುಮದಿನ ಆಚರಿಸಿಕೊಂಡ ಶ್ರುತಿ ಹಾಸನ್‌ - Vistara News

ಟಾಲಿವುಡ್

Shruti Haasan: ಬಾಯ್‌ಫ್ರೆಂಡ್‌ ಜತೆ ಜನುಮದಿನ ಆಚರಿಸಿಕೊಂಡ ಶ್ರುತಿ ಹಾಸನ್‌

ನಟಿ ಶ್ರುತಿ ಹಾಸನ್ (Shruti Haasan) ಅವರು ಶಾಂತನು ಹಜಾರಿಕಾ (Santanu Hazarika) ಜತೆ ಡೇಟಿಂಗ್ ಮಾಡುತ್ತಿದ್ದು, ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿದ್ದಾರೆ.

VISTARANEWS.COM


on

Shruti Haasan shared an adorable picture with her beau Santanu Hazarika
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಬಹುಭಾಷಾ ನಟಿ ಶ್ರುತಿ ಹಾಸನ್‌ (Shruti Haasan) ಅವರಿಗೆ ಜನುಮದಿನದ ಸಂಭ್ರಮ. ಜನವರಿ 27 ಶುಕ್ರವಾರ ರಾತ್ರಿ ತಮ್ಮ ಹುಟ್ಟುಹಬ್ಬವನ್ನು ತಮ್ಮ ಬಾಯ್‌ಫ್ರೆಂಡ್‌ ಶಾಂತನು ಹಜಾರಿಕಾ ಹಾಗೂ ಸ್ನೇಹಿತರೊಂದಿಗೆ ಆಚರಿಸಿದ್ದಾರೆ. ಇದೀಗ ಸಂಭ್ರಮಾಚರಣೆಯ ಫೋಟೊ ಹಾಗೂ ವಿಡಿಯೊಗಳನ್ನು ಇನ್‌ಸ್ಟಾ ಸ್ಟೋರಿಯಲ್ಲಿ ನಟಿ ಹಂಚಿಕೊಂಡಿದ್ದಾರೆ.

ಶ್ರುತಿ ಹಾಸನ್‌ ಅವರು ತಮ್ಮ ಇನ್‌ಸ್ಟಾ ಸ್ಟೋರಿಯಲ್ಲಿ ಪೋಸ್ಟ್ ಮಾಡಿದ ಚಿತ್ರದಲ್ಲಿ, ಶಾಂತನು ಮತ್ತು ಆಕೆ ಇಬ್ಬರೂ ಒಬ್ಬರನ್ನೊಬ್ಬರು ತಬ್ಬಿಕೊಳ್ಳುತ್ತಿರುವುದನ್ನು ಪೋಸ್ಟ್‌ ಮಾಡಿದ್ದಾರೆ. ಶ್ರುತಿ ಹಾಸನ್‌ ಆಗಾಗ ಶಾಂತನು ಹಜಾರಿಕಾ ಜತೆ ಇರುವ ಫೋಟೊಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಶ್ರುತಿ ಹಾಸನ್ ಅವರು ಶಾಂತನು ಹಜಾರಿಕಾ (Santanu Hazarika) ಜತೆ ನಟಿ ಡೇಟಿಂಗ್ ಮಾಡುತ್ತಿದ್ದು, ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿದ್ದಾರೆ.

ಇದನ್ನೂ ಓದಿ: Shruti Haasan | ಮಾನಸಿಕ ಸಮಸ್ಯೆಯಿದೆ ಎಂದವರಿಗೆ ಶ್ರುತಿ ಹಾಸನ್ ಖಡಕ್‌ ಪ್ರತಿಕ್ರಿಯೆ

Shruti Haasan

ಇದನ್ನೂ ಓದಿ: Shruti Haasan | ನನ್ನ ಹೈಟ್‌ ನನಗೆ ಮೈನಸ್‌ ಅನ್ನುತ್ತಿದ್ದರು, ಅದೇ ಪ್ಲಸ್‌ ಆಯಿತು: ಶ್ರುತಿ ಹಾಸನ್‌

ಪ್ರಸ್ತುತ ನಟಿ ಪ್ರಭಾಸ್ ಅವರ ಸಲಾರ್, ಬಾಬಿಯಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಸಲಾರ್‌ ಸಿನಿಮಾದಲ್ಲಿ ಶ್ರುತಿ ಹಾಸನ್ ‘ಆದ್ಯ’ ಪಾತ್ರ ಮಾಡುತ್ತಿದ್ದಾರೆ. ಶ್ರುತಿ ಇತ್ತೀಚೆಗೆ ತೆಲುಗು ಚಿತ್ರ ‘ವಾಲ್ತೇರ್‌ ವೀರಯ್ಯ’ದಲ್ಲಿ ಕಾಣಿಸಿಕೊಂಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

South Cinema

Mahesh Babu: ಸಹೋದರಿ ಮಂಜುಳಾ, ಪ್ರಭಾಸ್ ಚಿಕ್ಕಮ್ಮ ಜತೆ ಸಿಹಿಕ್ಷಣ ಹಂಚಿಕೊಂಡ ಮಹೇಶ್‌ ಬಾಬು!

Mahesh Babu: ನಟ ಮಹೇಶ್ ಬಾಬು ಸಹೋದರಿ ಮಂಜುಳಾ ( sister Manjula ) ಮತ್ತು ಪ್ರಭಾಸ್ ಅವರ ಚಿಕ್ಕಮ್ಮ ಶ್ಯಾಮಲಾ ದೇವಿ (Prabhas’ aunt Shyamala Devi) ಅವರೊಂದಿಗೆ ಸಿಹಿ ಕ್ಷಣಗಳನ್ನು ಹಂಚಿಕೊಂಡಿರುವ ವಿಡಿಯೊ ಹಾಗೂ ಫೋಟೊಗಳು ಸೋಷಿಯಲ್‌ ನೀಡಿಯಾದಲ್ಲಿ ವೈರಲ್‌ ಆಗಿವೆ. ಮಹೇಶ್‌ ಅವರ ಉದ್ದನೆಯ ಕೂದಲನ್ನು ಮುಟ್ಟಿ, ತಮಾಷೆ ಮಾಡಿ ನಗುತ್ತಿರುವುದು ಕಂಡಿದೆ. ಮಹೇಶ್‌ ಕೂಡ ಸಹೋದರಿ ತಮಾಷೆಗೆ ಬಿದ್ದು ಬಿದ್ದು ನಕ್ಕಿದ್ದಾರೆ.

VISTARANEWS.COM


on

Mahesh Babu shares sweet moments with sister Manjula and Prabhas aunt
Koo

ಬೆಂಗಳೂರು: ನಟ ಮಹೇಶ್ ಬಾಬು (Mahesh Babu) ಅವರು ಭಾನುವಾರ ರಾತ್ರಿ (ಏ.28) ಪತ್ನಿ ನಮ್ರತಾ ಶಿರೋಡ್ಕರ್ ಮತ್ತು ಮಗಳು ಸಿತಾರಾ ಅವರೊಂದಿಗೆ ತಮ್ಮ ಕುಟುಂಬದ ವಿವಾಹ ಸಮಾರಂಭದಲ್ಲಿ ಭಾಗಿಯಾಗಿದ್ದರು. ಮದುವೆಯಲ್ಲಿ ಅಭಿಮಾನಿಗಳೊಂದಿಗೆ ಫೋಟೊಗೆ ನಟ ಪೋಸ್‌ ಕೊಟ್ಟಿದ್ದಾರೆ. ನಟ ಸಹೋದರಿ ಮಂಜುಳಾ ( sister Manjula ) ಮತ್ತು ಪ್ರಭಾಸ್ ಅವರ ಚಿಕ್ಕಮ್ಮ ಶ್ಯಾಮಲಾ ದೇವಿ (Prabhas’ aunt Shyamala Devi) ಅವರೊಂದಿಗೆ ಸಿಹಿ ಕ್ಷಣಗಳನ್ನು ಹಂಚಿಕೊಂಡಿರುವ ವಿಡಿಯೊ ಹಾಗೂ ಫೋಟೊಗಳು ಸೋಷಿಯಲ್‌ ನೀಡಿಯಾದಲ್ಲಿ ವೈರಲ್‌ ಆಗಿವೆ.

ಅಭಿಮಾನಿಗಳು ಹಂಚಿಕೊಂಡ ವಿಡಿಯೊವೊಂದರಲ್ಲಿ, ಮಹೇಶ್ ಅವರು ತಮ್ಮ ಸಹೋದರಿ ಮಂಜುಳಾ ಅವರೊಂದಿಗೆ ಖುಷಿಯ ಸಂದರ್ಭವನ್ನು ಹಂಚಿಕೊಳ್ಳುತ್ತಿರುವುದನ್ನು ನೋಡಬಹುದು. ಸಹೋದರಿ ಮಂಜುಳಾ ಅವರು ಮಹೇಶ್‌ ಅವರ ಹೊಸ ಹೇರ್‌ಸೈಲ್‌ಗೆ ಫಿದಾ ಆದರು. ಮಹೇಶ್‌ ಅವರ ಉದ್ದನೆಯ ಕೂದಲನ್ನು ಮುಟ್ಟಿ, ತಮಾಷೆ ಮಾಡಿ ನಗುತ್ತಿರುವುದು ಕಂಡಿದೆ. ಮಹೇಶ್‌ ಕೂಡ ಸಹೋದರಿ ತಮಾಷೆಗೆ ಬಿದ್ದು ಬಿದ್ದು ನಕ್ಕಿದ್ದಾರೆ. ಈ ವಿಡಿಯೊ ವೈರಲ್‌ ಆಗುತ್ತಿದ್ದಂತೆ “ನಾವೆಲ್ಲರೂ ಇಂತಹ ಕ್ಷಣಗಳನ್ನು ಪ್ರೀತಿಸುತ್ತೇವೆ” ಎಂದು ಅಭಿಮಾನಿಗಳು ಕಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ: Mahesh Babu: ಹೇಗಿದೆ ಮಹೇಶ್‌ ಬಾಬು ಲುಕ್‌? ರಾಜಮೌಳಿ ಪ್ಲ್ಯಾನ್​ ಉಲ್ಟಾ!

ಇದನ್ನೂ ಓದಿ: Mahesh Babu: ಹೇಗಿದೆ ಮಹೇಶ್‌ ಬಾಬು ಲುಕ್‌? ರಾಜಮೌಳಿ ಪ್ಲ್ಯಾನ್​ ಉಲ್ಟಾ!

ಪಾಪರಾಜಿಗಳು ಕ್ಲಿಕ್ ಮಾಡಿದ ಮತ್ತೊಂದು ವಿಡಿಯೊದಲ್ಲಿ ಮಹೇಶ್ ಅವರು ಪ್ರಭಾಸ್ ಅವರ ಚಿಕ್ಕಮ್ಮ ಶ್ಯಾಮಲಾ ಅವರೊಂದಿಗೆ ಮಾತನಾಡುವುದನ್ನು ಕಾಣಬಹುದು. ನಮ್ರತಾ ಮತ್ತು ಸಿತಾರಾ ಅವರನ್ನು ತಬ್ಬಿಕೊಂಡು ಖುಷಿಯಲ್ಲಿ ಮಾತನಾಡಿದ್ದಾರೆ ಪ್ರಭಾಸ್ ಚಿಕ್ಕಮ್ಮ. ಪ್ರಭಾಸ್ ಅವರ ಅಭಿಮಾನಿಗಳು ವಿಡಿಯೊವನ್ನು ನೋಡಿ ಸಂತಸ ವ್ಯಕ್ತಪಡಿಸಿದ್ದಾರೆ.

ಪೋಕಿರಿ ಸಿನಿಮಾಗೆ 18 ವರ್ಷ

ಭಾನುವಾರದಂದು (ಏ.28) ಮಹೇಶ್‌ ಅಭಿಮಾನಿಗಳಿಗೆ ಡಬಲ್ ಟ್ರೀಟ್ ಆಗಿತ್ತು. ಏಕೆಂದರೆ ಏಪ್ರಿಲ್ 28ರಂದು ಪುರಿ ಜಗನ್ನಾಥ್ ಅವರ ಮಹೇಶ್ ಮತ್ತು ಇಲಿಯಾನಾ ಡಿಕ್ರೂಜ್ ಅಭಿನಯದ ʻಪೋಕಿರಿʼ ಬಿಡುಗಡೆಯಾಗಿ 18 ವರ್ಷಗಳು ಕಳೆದಿತ್ತು. ಈ ಚಿತ್ರ ಬಿಡುಗಡೆಯಾದ ಸಮಯದಲ್ಲಿ ಭಾರಿ ಯಶಸ್ಸನ್ನು ಕಂಡಿತ್ತು. ತೆಲುಗಿನಲ್ಲಿ ಅತಿ ಹೆಚ್ಚು ಗಳಿಕೆಯಾದ ಸಿನಿಮಾ ಆಗಿತ್ತು. ʻಪೋಕಿರಿʼ ಸಿನಿಮಾ ಹಿಟ್‌ ಆದ ಬಳಿಕ ತಮಿಳು, ಹಿಂದಿ, ಕನ್ನಡದಲ್ಲಿ ರಿಮೇಕ್‌ ಮಾಡಲಾಯ್ತು. 2009ರಲ್ಲಿ ಎಸ್‌ಎಸ್ ರಾಜಮೌಳಿಯವರ ʻಮಗಧೀರʼ ಸಿನಿಮಾ ಈ ಕಲೆಕ್ಷನ್‌ನನ್ನು ಸೋಲಿಸಿತ್ತು.

ಇದನ್ನೂ ಓದಿ: Mahesh Babu: ಮಹೇಶ್ ಬಾಬು-ರಾಜಮೌಳಿ ಸಿನಿಮಾ ಮುಹೂರ್ತ ಎಲ್ಲಿ? ಯಾವಾಗ?

ಟಾಲಿವುಡ್‌ ನಟ ಮಹೇಶ್‌ ಬಾಬು (Mahesh Babu) ಹಾಗೂ ನಿರ್ದೇಶಕ ರಾಜಮೌಳಿ (SS Rajamouli) ಅವರು ಸಿನಿಮಾ ಮಾಡುತ್ತಿರುವುದು ಗೊತ್ತೇ ಇದೆ. ಈ ಚಿತ್ರಕ್ಕೆ ಇನ್ನೂ ಶೀರ್ಷಿಕೆ ಫಿಕ್ಸ್‌ ಆಗಿಲ್ಲ. ಸದ್ಯಕ್ಕೆ ‘SSMB 29’ ಎಂದು ಕರೆಯಲಾಗುತ್ತಿದೆ. 2022ರಲ್ಲಿ ತೆರೆಕಂಡ ʼಆರ್‌.ಆರ್‌.ಆರ್‌.ʼ ಸಿನಿಮಾ ಬಳಿಕ ರಾಜಮೌಳಿ ನಿರ್ದೇಶನದ ಯಾವುದೇ ಚಿತ್ರ ಬಿಡುಗಡೆಯಾಗಿಲ್ಲ. ಅವರು ಈ ಚಿತ್ರಕ್ಕಾಗಿಯೇ ಹಲವು ವರ್ಷಗಳಿಂದ ಸಿದ್ಧತೆ ನಡೆಸುತ್ತಿದ್ದಾರೆ. ದಾಖಲೆ ಬರೆದ ʼಬಾಹುಬಲಿʼ, ʼಬಾಹುಬಲಿ 2ʼ, ʼಆರ್‌.ಆರ್‌.ಆರ್‌.ʼ ಮುಂತಾದ ಸಿನಿಮಾಗಳಿಗೆ ಕಥೆ ಬರೆದಿದ್ದ ವಿಜಯೇಂದ್ರ ಪ್ರಸಾದ್‌ ಅವರೇ ʼಎಸ್‌.ಎಸ್‌.ಬಿ.ಎಂ. 29ʼ ಚಿತ್ರದ ಬರವಣಿಗೆಯಲ್ಲಿ ತೊಡಗಿರುವುದು ನಿರೀಕ್ಷೆ ಹೆಚ್ಚಲು ಮತ್ತೊಂದು ಕಾರಣ. ಇತ್ತೀಚೆಗೆ ತೆರೆಕಂಡ ಮಹೇಶ್‌ ಬಾಬು ಅಭಿನಯದ ʼಗುಂಟೂರು ಖಾರಂʼ ಸಿನಿಮಾ ಸಾಧಾರಣ ಗೆಲುವು ದಾಖಲಿಸಿದೆ. ಹೀಗಾಗಿ ಅವರು ʼಎಸ್‌.ಎಸ್‌.ಬಿ.ಎಂ. 29ʼ ಚಿತ್ರದತ್ತ ಗಮನ ಹರಿಸಿದ್ದಾರೆ.

Continue Reading

ಟಾಲಿವುಡ್

Samantha Ruth Prabhu: ಜನ್ಮದಿನದಂದೇ ಹೊಸ ಸಿನಿಮಾ ಅನೌನ್ಸ್‌ ಮಾಡಿದ ನಟಿ ಸಮಂತಾ!

Samantha Ruth Prabhu: ಸಮಂತಾ ಜನುಮದಿನಕ್ಕೆ ಅವರ ಅಭಿಮಾನಿಗಳು ಮತ್ತು ಸ್ನೇಹಿತರು ಶುಭಾಶಯ ತಿಳಿಸುತ್ತಿದ್ದಾರೆ. ‘ಬಂಗಾರಂ’ ಚಿತ್ರದ ಫಸ್ಟ್ ಲುಕ್‌ನಲ್ಲಿ ಉಗ್ರ ಅವತಾರದಲ್ಲಿ ನಟಿ ಕಾಣಿಸಿಕೊಂಡಿದ್ದು, ಗನ್ ಹಿಡಿದುಕೊಂಡು ರಕ್ತಸಿಕ್ತ ಮುಖವನ್ನು ಕ್ಯಾಮೆರಾಗೆ ಪೋಸ್‌ ಕೊಟ್ಟಿದ್ದಾರೆ. 37ನೇ ವಸಂತಕ್ಕೆ ನಟಿ ಕಾಲಿಟ್ಟಿದ್ದಾರೆ. ಈ ವಿಶೇಷ ದಿನದಂದು ನಟಿ ಸಮಂತಾ ಅವರು ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ. ʻ

VISTARANEWS.COM


on

Samantha Ruth Prabhu announces new film Bangaram
Koo

ಬೆಂಗಳೂರು: ಇಂದು ಟಾಲಿವುಡ್‌ ನಟಿ ಸಮಂತಾ(Samantha Ruth Prabhu) ಅವರ ಜನುಮದಿನದ (Samantha Birthday) ಸಂಭ್ರಮ. 37ನೇ ವಸಂತಕ್ಕೆ ನಟಿ ಕಾಲಿಟ್ಟಿದ್ದಾರೆ. ಈ ವಿಶೇಷ ದಿನದಂದು ನಟಿ ಸಮಂತಾ ಅವರು ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ. ʻಬಂಗಾರಂ’ (Bangaram) ಎಂಬ ಹೊಸ ಚಿತ್ರದ ಶೀರ್ಷಿಕೆ ಜತೆ ಫಸ್ಟ್‌ ಲುಕ್‌ ಪೋಸ್ಟರ್‌ ಹಂಚಿಕೊಂಡಿದ್ದಾರೆ. ಸದ್ಯದಲ್ಲೇ ಚಿತ್ರದ ಶೂಟಿಂಗ್ ಆರಂಭವಾಗಲಿದೆ ಎಂದು ಸಮಂತಾ ತಿಳಿಸಿದ್ದಾರೆ.

ಸಮಂತಾ ಜನುಮದಿನಕ್ಕೆ ಅವರ ಅಭಿಮಾನಿಗಳು ಮತ್ತು ಸ್ನೇಹಿತರು ಶುಭಾಶಯ ತಿಳಿಸುತ್ತಿದ್ದಾರೆ. ‘ಬಂಗಾರM’ ಚಿತ್ರದ ಫಸ್ಟ್ ಲುಕ್‌ನಲ್ಲಿ ಉಗ್ರ ಅವತಾರದಲ್ಲಿ ನಟಿ ಕಾಣಿಸಿಕೊಂಡಿದ್ದು, ಗನ್ ಹಿಡಿದುಕೊಂಡು ರಕ್ತಸಿಕ್ತ ಮುಖವನ್ನು ಕ್ಯಾಮೆರಾಗೆ ಪೋಸ್‌ ಕೊಟ್ಟಿದ್ದಾರೆ. ಈ ಚಿತ್ರದ ನಿರ್ಮಾಣದ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಸಿನಿಮಾ 2025ರಲ್ಲಿ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಇನ್‌ಸ್ಟಾದಲ್ಲಿ ನಟಿ ಪೋಸ್ಟ್ ಶೇರ್‌ ಮಾಡಿ “ಚಿನ್ನವಾಗಲು ಎಲ್ಲವೂ ಹೊಳೆಯಬೇಕಾಗಿಲ್ಲ. ʻಬಂಗಾರಂʼ ಶೀಘ್ರದಲ್ಲೇ ಸೆಟ್ಟೇರಲಿದೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Samantha Ruth Prabhu: ಸಮಂತಾಗೆ ಜನುಮ ದಿನದ ಸಂಭ್ರಮ! ಈ ನಟಿಯ ಸೀಕ್ರೆಟ್‌ ಸಂಗತಿಗಳಿವು!

ತೆಲುಗು ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದ ನಟಿ ಸಮಂತಾ ಯೋಗ, ಧ್ಯಾನ, ಕುದುರೆ ಸವಾರಿ ಮತ್ತು ಕಿಕ್ ಬಾಕ್ಸಿಂಗ್ ಕಡೆಗೆ ಗಮನಹರಿಸುತ್ತಿದ್ದಾರೆ. ತಾವು ಕಲಿತ ಸಮರ ಕಲೆಗಳ ಪ್ರದರ್ಶನದ ವಿಡಿಯೊಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ನಟಿ ಸಮಂತಾ (Samantha Kickboxing) ಇದಕ್ಕೆ ‘ಒನ್ ಡೇ ಎಟ್ ಅ ಟೈಮ್ ‘ ಎಂಬ ಶೀರ್ಷಿಕೆ ನೀಡಿದ್ದಾರೆ.

ನಟಿ ಸಮಂತಾ ನಟನಾ ವೃತ್ತಿಗೆ ವಿದಾಯ ಹೇಳಿಲ್ಲ, ಬದಲಾಗಿ ಸ್ವಲ್ಪ ವಿರಾಮ ತೆಗೆದುಕೊಂಡಿದ್ದಾರೆ ಅಷ್ಟೇ. ನಟಿ ಈಗಾಗಲೇ ʻಸಿಟಾಡೆಲ್ ಇಂಡಿಯಾ: ಹನಿ ಬನ್ನಿʼ ವೆಬ್ ಸರಣಿಯಲ್ಲಿ ನಟಿಸಿದ್ದು ಅದರ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಇದರಲ್ಲಿ ಸಮಂತಾ ಜತೆ ವರುಣ್ ಧವನ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಜತೆಗೆ ಸಿಕಂದರ್ ಖೇರ್, ಸಾಕಿಬ್ ಸಲೀಮ್ ಮತ್ತು ಕೇ ಕೇ ಮೆನನ್ ಪೋಷಕ ಪಾತ್ರಗಳನ್ನು ನಿರ್ವಹಿಸಿದ್ದಾರೆ.

ರಾಜ್ ಮತ್ತು ಡಿಕೆ ಮತ್ತು ಸೀತಾ ಆರ್ ಮೆನನ್ ನಿರ್ದೇಶನದ ಸಿಟಾಡೆಲ್ ಇಂಡಿಯಾ:ಹನಿ ಬನ್ನಿ ಯುಎಸ್ ಶೋನ ಭಾರತೀಯ ಸ್ಪಿನ್ ಆಫ್ ಆಗಿದೆ. ಇದರಲ್ಲಿ ಪ್ರಿಯಾಂಕ ಚೋಪ್ರಾ ಮತ್ತು ರಿಚರ್ಡ್ ಮ್ಯಾಡೆನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

Continue Reading

ಟಾಲಿವುಡ್

Samantha Ruth Prabhu: ಸಮಂತಾಗೆ ಜನುಮ ದಿನದ ಸಂಭ್ರಮ! ಈ ನಟಿಯ ಸೀಕ್ರೆಟ್‌ ಸಂಗತಿಗಳಿವು!

Samantha Ruth Prabhu: ಸಮಂತಾ ತಮ್ಮ ವೃತ್ತಿಪರ ಮತ್ತು ವೈಯಕ್ತಿಕ ಜೀವನದ ಬಗ್ಗೆ ಆಗಾಗ ಶೇರ್‌ ಮಾಡಿಕೊಳ್ಳುತ್ತಲೇ ಇರುತ್ತಾರೆ. ನಾಗ ಚೈತನ್ಯ ಅವರೊಂದಿಗಿನ ಅವರ ಪ್ರೇಮಕಥೆಯಿಂದ ಹಿಡಿದು ವಿಚ್ಛೇದನದದ ವರೆಗೆ ಹಲವು ವಿಚಾರಗಳನ್ನು ಹೇಳಿಕೊಂಡಿದ್ದಾರೆ. ಸಮಂತಾ ಕ್ರಿಶ್ಚಿಯನ್ ಆಗಿದ್ದರೂ ಆಗಾಗ ದೇವಾಲಯಗಳಿಗೆ ಭೇಟಿ ಕೊಡುತ್ತಲೇ ಇರುತ್ತಾರೆ. ಇದಲ್ಲದೇ ಮುಖಕ್ಕೆ ಸರ್ಜರಿ ಕೂಡ ಮಾಡಿಸಿದ್ದರು ನಟಿ.

VISTARANEWS.COM


on

Samantha Ruth Prabhu shocking secrets
Koo

ಬೆಂಗಳೂರು: ಟಾಲಿವುಡ್‌ ನಟ ಸಮಂತಾ ರುತ್ ಪ್ರಭು (Samantha Ruth Prabhu) ಅವರಿಗೆ ಇಂದು (ಏ.28) ಜನುಮದಿನ ಸಂಭ್ರಮ. ಸಮಂತಾ ಅವರಿಗೆ ಅಪಾರವಾದ ಫ್ಯಾನ್ಸ್‌ ಬಳಗವಿದೆ. ಈ ಹಿಂದೆ ಸಮಂತಾ ಅವರ ಜನುಮದಿನವೇ ಆಂಧ್ರಪ್ರದೇಶದ ಬಾಪಟ್ಲಾದಲ್ಲಿರುವ (Bapatla, Andhra Pradesh) ಅಭಿಮಾನಿ ಯುವಕ ಸಂದೀಪ್‌ ನಟಿಗಾಗಿ ದೇವಸ್ಥಾನ ನಿರ್ಮಿಸಿದ್ದ. ಸಮಂತಾ ಮೇಲಿನ ಅಭಿಮಾನದಿಂದ ಸಂದೀಪ್ ಅವರು ತಿರುಪತಿ, ಚೆನ್ನೈ, ನಾಗಪಟ್ಟಣಂ ದೇವಸ್ಥಾನಗಳಿಗೆ ನಟಿಯ (Samantha Birthday) ಹೆಸರಲ್ಲಿ ತೀರ್ಥಯಾತ್ರೆ ಮಾಡಿದ್ದ. ಸಮಂತಾ ಮಯೋಸಿಟಿಸ್ ಕಾಯಿಲೆಯಿಂದ ಚೇತರಿಸಿಕೊಂಡ ನಂತರ ಸಂದೀಪ್ ಈ ಯಾತ್ರೆ ಮಾಡಿದ್ದ. ಇದೆಲ್ಲದರ ಜತೆಗೆ ನಟಿಯ ಬಗ್ಗೆ ಹಲವು ವಿಚಾರಗಳು ಕುತೂಹಲಕರವಾಗಿವೆ.

ಸಮಂತಾರನ್ನು ಹುಚ್ಚನಂತೆ ಪ್ರೀತಿಸುತ್ತಿದ್ದರು ನಟ ಸಿದ್ಧಾರ್ಥ್

ಸಮಂತಾ ತಮ್ಮ ವೃತ್ತಿಪರ ಮತ್ತು ವೈಯಕ್ತಿಕ ಜೀವನದ ಬಗ್ಗೆ ಆಗಾಗ ಶೇರ್‌ ಮಾಡಿಕೊಳ್ಳುತ್ತಲೇ ಇರುತ್ತಾರೆ. ನಾಗ ಚೈತನ್ಯ ಅವರೊಂದಿಗಿನ ಅವರ ಪ್ರೇಮಕಥೆಯಿಂದ ಹಿಡಿದು ವಿಚ್ಛೇದನದವರೆಗೆ ಹಲವು ವಿಚಾರಗಳನ್ನು ಹೇಳಿಕೊಂಡಿದ್ದಾರೆ. ಸದ್ಯ ಅದಿತಿ ರಾವ್ ಹೈದರಿ ಅವರೊಂದಿಗೆ ಡೇಟಿಂಗ್ ಮಾಡುತ್ತಿರುವ ತಮಿಳು ನಟ ಸಿದ್ಧಾರ್ಥ್ ಅವರು ಸಮಂತಾರನ್ನು ಹುಚ್ಚನಂತೆ ಪ್ರೀತಿಸುತ್ತಿದ್ದರು. ಇಬ್ಬರೂ ಮದುವೆಯಾಗಬೇಕು ಎಂದು ಅಂದುಕೊಂಡಿದ್ದರು. ಆದರೆ ಜೋಡಿ ಮಧ್ಯೆ ಏನು ಆಯ್ತೋ ಏನೋ! ಸಿದ್ಧಾರ್ಥ್ ಜತೆ ನಟಿ ಬ್ರೇಕಪ್‌ ಮಾಡಿಕೊಂಡು ನಾಗ ಚೈತನ್ಯ ಅವರನ್ನು ಪ್ರೀತಿಸಲು ಶುರು ಮಾಡಿದರು.

ಇದನ್ನೂ ಓದಿ: Samantha Ruth Prabhu: ಮದುವೆ ಗೌನ್‌ ಕತ್ತರಿಸಿ ಹೊಸ ಉಡುಪು ತಯಾರಿಸಿದ ಸಮಂತಾ!

ವರದಿಗಳ ಪ್ರಕಾರ ಸಮಂತಾಗೂ ಮೊದಲು ಸಿದ್ಧಾರ್ಥ್ ನಟಿ ಶ್ರುತಿ ಹಾಸನ್ ಮತ್ತು ಆಂಡ್ರಿಯಾ ಅವರೊಂದಿಗೆ ಸಂಬಂಧ ಹೊಂದಿದ್ದರು. ಈ ಕಾರಣಗಳಿಂದಾಗಿ ಸಮಂತಾ ಬ್ರೇಕಪ್‌ ಮಾಡಿಕೊಂಡರು ಎಂಬ ವರದಿಯಾಗಿದೆ.

ಕ್ರಿಶ್ಚಿಯನ್ ಆಗಿದ್ದರೂ ದೇವಾಲಯಗಳಿಗೆ ಭೇಟಿ

ಸಮಂತಾ ಕ್ರಿಶ್ಚಿಯನ್ ಆಗಿದ್ದರೂ ಆಗಾಗ ದೇವಾಲಯಗಳಿಗೆ ಭೇಟಿ ಕೊಡುತ್ತಲೇ ಇರುತ್ತಾರೆ. ಇದಲ್ಲದೇ ಮುಖಕ್ಕೆ ಸರ್ಜರಿ ಕೂಡ ಮಾಡಿಸಿಕೊಂಡಿದ್ದರು ನಟಿ. ಇನ್ನು ನಾಗಚೈತ್ಯ ಜತೆ ನಟಿ ಪ್ರೀತಿಸಿ ಮದುವೆ ಕೂಡ ಆದರು. ಟಾಲಿವುಡ್‌ನಲ್ಲಿ ʻಪವರ್ ಜೋಡಿʼ ಎಂದು ಅನ್ನಿಸಿಕೊಂಡಿದ್ದರು. ಮದುವೆಯಾದ ನಾಲ್ಕು ವರ್ಷಗಳ ಬಳಿಕ ಜೋಡಿ ಡಿವೋರ್ಸ್‌ ಪಡೆದುಕೊಂಡಿತ್ತು. ಜೋಡಿ ಇದುವೆರೆಗೆ ತಾವು ಏಕೆ ಬೇರೆಯಾದೆವು ಎಂಬ ಕಾರಣ ಕೂಡ ನೀಡಿಲ್ಲ. ಸದ್ಯ ನಾಗಚೈತನ್ಯ ಕೂಡ ನಟಿ ಶೋಭಿತಾ ಜತೆಗೆ ಡೇಟಿಂಗ್‌ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ.

ಮೈಯೋಸಿಟಿಸ್‌ ಕಾಯಿಲೆ ವಿರುದ್ಧ ಹೋರಾಟ

ಸಮಂತಾ ರುತ್ ಪ್ರಭು (Samantha Ruth Prabhu) ಅವರು ಮೈಯೋಸಿಟಿಸ್‌ ಕಾಯಿಲೆ ವಿರುದ್ಧ ಹೋರಾಟ ಮಾಡುತ್ತಲೇ ಇದ್ದಾರೆ. ಆಸ್ಪತ್ರೆಯಲ್ಲಿ ಇಂದಿಗೂ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಆರೋಗ್ಯ ಮತ್ತು ಫಿಟ್‌ನೆಸ್ ಪ್ರಯಾಣದ ಬಗ್ಗೆ ವಿವರವಾಗಿ ಮಾತನಾಡುತ್ತಿದ್ದಾರೆ. ಆರೋಗ್ಯದ ಬಗ್ಗೆ ತಮ್ಮ ಅಭಿಮಾನಿಗಳಿಗೆ ಸಾಮಾಜಿಕ ಮಾಧ್ಯಮದಲ್ಲಿ ಆಗಾಗ ತಿಳಿಸುತ್ತಿದ್ದಾರೆ. ಸದ್ಯ ನಟಿ ಒಂದು ವರ್ಷ ನಟನೆಯಿಂದ ಹಿಂದೆ ಸರಿದಿದ್ದಾರೆ. ಆರೋಗ್ಯದತ್ತ ಗಮನ ಹರಿಸಿದ್ದಾರೆ.

ಇದನ್ನೂ ಓದಿ: Samantha Ruth Prabhu: ಮದುವೆ ಗೌನ್‌ ಕತ್ತರಿಸಿ ಹೊಸ ಉಡುಪು ತಯಾರಿಸಿದ ಸಮಂತಾ!

ನಟನೆಯಿಂದ ಹಿಂದೆ ಸರಿದ ನಟಿ

ನಟಿ ಈಗಾಗಲೇ ʻಸಿಟಾಡೆಲ್ ಇಂಡಿಯಾ: ಹನಿ ಬನ್ನಿʼ ವೆಬ್ ಸರಣಿಯಲ್ಲಿ ನಟಿಸಿದ್ದು, ಅದರ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಇದರಲ್ಲಿ ಸಮಂತಾ ಜತೆ ವರುಣ್ ಧವನ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಜತೆಗೆ ಸಿಕಂದರ್ ಖೇರ್, ಸಾಕಿಬ್ ಸಲೀಮ್ ಮತ್ತು ಕೇ ಕೇ ಮೆನನ್ ಪೋಷಕ ಪಾತ್ರಗಳನ್ನು ನಿರ್ವಹಿಸಿದ್ದಾರೆ.

ರಾಜ್ ಮತ್ತು ಡಿಕೆ ಮತ್ತು ಸೀತಾ ಆರ್ ಮೆನನ್ ನಿರ್ದೇಶನದ ʼಸಿಟಾಡೆಲ್ ಇಂಡಿಯಾ: ಹನಿ ಬನ್ನಿʼ ಯುಎಸ್ ಶೋನ ಭಾರತೀಯ ಸ್ಪಿನ್ ಆಫ್ ಆಗಿದೆ. ಇದರಲ್ಲಿ ಪ್ರಿಯಾಂಕ ಚೋಪ್ರಾ ಮತ್ತು ರಿಚರ್ಡ್ ಮ್ಯಾಡೆನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

Continue Reading

ಟಾಲಿವುಡ್

Anupama Parameswaran: ಅನುಪಮಾ ಪರಮೇಶ್ವರನ್ ಹೊಸ ಸಿನಿಮಾ ಅನೌನ್ಸ್‌: ನಟಿಯ ಲುಕ್‌ಗೆ ಫ್ಯಾನ್ಸ್‌ ಫಿದಾ!

Anupama Parameswaran: ಟಿಲ್ಲು ಸ್ಕ್ವೇರ್’ನಲ್ಲಿ ಅತ್ಯಂತ ಬೋಲ್ಡ್‌ ಆಗಿ ನಟಿಸಿದ್ದ ನಟಿ ಇದೀಗ ಸಾಫ್ಟ್‌ ಲುಕ್‌ನಲ್ಲಿ ಕಂಡಿದ್ದಾರೆ. ಅನುಪಮಾ ಅವರ ಮುಂದಿನ ಸಿನಿಮಾ ಬಗ್ಗೆ ಸಮಂತಾ ರುತ್ ಪ್ರಭು ಮತ್ತು ರಾಜ್ ಮತ್ತು ಡಿಕೆ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಬಿಡುಗಡೆ ಮಾಡಿದ್ದಾರೆ. ʻಪರದಾʼ ಸಿನಿಮಾದಲ್ಲಿ ಮುಂದೆ ಅನುಪಮಾ ಕಾಣಿಸಿಕೊಳ್ಳುತ್ತಿದ್ದಾರೆ. ʻಪರದಾʼ ಸಿನಿಮಾದ ಫಸ್ಟ್‌ ಲುಕ್‌ ಪೋಸ್ಟರ್‌ ಔಟ್‌ ಆಗಿದೆ.

VISTARANEWS.COM


on

Anupama Parameswaran Paradha next
Koo

ಬೆಂಗಳೂರು: ನಟ ಸಾರ್ವಭೌಮʼ ಚಿತ್ರದ ನಟಿ ಅನುಪಮಾ ಪರಮೇಶ್ವರನ್ (Anupama Parameswaran) ಅಭಿನಯದ ʻಟಿಲ್ಲು ಸ್ಕ್ವೇರ್’ ಸಿನಿಮಾ 100 ಕೋಟಿ ರೂ. ಗಳಿಕೆ ಕಂಡಿದ್ದು ಗೊತ್ತೇ ಇದೆ. 2002ರಲ್ಲಿ ಬಂದಿದ್ದ ʻಡಿಜೆ ಟಿಲ್ಲು’ ಚಿತ್ರದ ಮುಂದುವರಿದ ಭಾಗ ಈ `ಟಿಲ್ಲು ಸ್ಕ್ವೇರ್’. ಸಿದ್ದು ಜೊನ್ನಲಗಡ್ಡ ( Siddhu Jonnalagadda ) ಈ ಚಿತ್ರದ ನಾಯಕ. ಸಿದ್ದು ಜೊನ್ನಲಗಡ್ಡ ಹಾಗೂ ನಟಿ ಅನುಪಮಾ ಪರಮೇಶ್ವರನ್ ಒಟ್ಟಾಗಿ ಕಾಣಿಸಿಕೊಂಡಿರುವ ‘ಟಿಲ್ಲು ಸ್ಕ್ವೇರ್’ (Tillu Square) ಸಿನಿಮಾದಲ್ಲಿ ನಟಿ ಮೈ ಚಳಿ ಬಿಟ್ಟು ನಟಿಸಿದ್ದಾರೆ. ಚಿತ್ರತಂಡ ಇತ್ತೀಚೆಗೆ ಯಶಸ್ಸನ್ನು ಆಚರಿಸಿಕೊಂಡಿತ್ತು. ಸಿನಿಮಾ ಒಟಿಟಿಗೆ ಲಗ್ಗೆ ಈಗಾಗಲೇ ಇಟ್ಟಿದೆ. ಇದರ ಬೆನ್ನಲ್ಲೇ ಅನುಪಮಾ ಪರಮೇಶ್ವರನ್ ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ. ಹೊಸ ಅವತಾರದಲ್ಲಿ ಕಂಡಿದ್ದಾರೆ ಅನುಪಮಾ ಪರಮೇಶ್ವರನ್.

‘ಟಿಲ್ಲು ಸ್ಕ್ವೇರ್’ನಲ್ಲಿ ಅತ್ಯಂತ ಬೋಲ್ಡ್‌ ಆಗಿ ನಟಿಸಿದ್ದ ನಟಿ ಇದೀಗ ಸಾಫ್ಟ್‌ ಲುಕ್‌ನಲ್ಲಿ ಕಂಡಿದ್ದಾರೆ. ಅನುಪಮಾ ಅವರ ಮುಂದಿನ ಸಿನಿಮಾ ಬಗ್ಗೆ ಸಮಂತಾ ರುತ್ ಪ್ರಭು ಮತ್ತು ರಾಜ್ ಮತ್ತು ಡಿಕೆ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಬಿಡುಗಡೆ ಮಾಡಿದ್ದಾರೆ. ʻಪರದಾʼ ಸಿನಿಮಾದಲ್ಲಿ ಮುಂದೆ ಅನುಪಮಾ ಕಾಣಿಸಿಕೊಳ್ಳುತ್ತಿದ್ದಾರೆ. ʻಪರದಾʼ ಸಿನಿಮಾದ ಫಸ್ಟ್‌ ಲುಕ್‌ ಪೋಸ್ಟರ್‌ ಔಟ್‌ ಆಗಿದೆ. ಸಾಂಪ್ರದಾಯಿಕ ಉಡುಗೆಯಲ್ಲಿ ಅನುಪಮಾ ಕಂಡಿದ್ದಾರೆ. ಸೆರಗನ್ನು ತಲೆ ಮೇಲೆ ಹೊತ್ತು, ಮಹಿಳೆಯರ ಸಮ್ಮುಖದಲ್ಲಿ ನಿಂತಿದ್ದಾರೆ.

ಇದನ್ನೂ ಓದಿ: Anupama Parameswaran: ಅನುಪಮಾ ಪರಮೇಶ್ವರನ್‌ಗೆ ಜ್ಯೂ.ಎನ್‌ಟಿಆರ್‌ ಫ್ಯಾನ್ಸ್‌ನಿಂದ ಅವಮಾನ!

`ಬಂಡಿ’ ಸಿನಿಮಾ ಖ್ಯಾತಿಯ ಪ್ರವೀಣ್ ಕಂಡ್ರೇಗುಲಾ ನಿರ್ದೇಶನ ಪರಧಾ ಚಿತ್ರಕ್ಕಿದೆ. ಮಲಯಾಳಂ ನಟ ಹೃದಯಂನ ʻದರ್ಶನಾ ರಾಜೇಂದ್ರನ್ʼ ಮತ್ತು ಸಂಗೀತಾ ಪ್ರಮುಖ ಪಾತ್ರಗಳಲ್ಲಿ ನಟಿಸಲಿದ್ದಾರೆ. ಆನಂದ ಮೀಡಿಯಾ ಅಡಿಯಲ್ಲಿ ವಿಜಯ್ ಡೊಂಕದ, ಶ್ರೀನಿವಾಸಲು ಪಿವಿ ಮತ್ತು ಶ್ರೀಧರ್ ಮಕ್ಕುವ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಗೋಪಿ ಸುಂದರ್ ಸಂಗೀತ ಸಂಯೋಜನೆ ಮಾಡಲಿದ್ದಾರೆ. ದೆಹಲಿ, ಹಿಮಾಚಲ ಪ್ರದೇಶ ಮತ್ತು ಕೆಲವು ಹಳ್ಳಿಗಳಲ್ಲಿ ಪರಧಾ ಚಿತ್ರೀಕರಣ ಮಾಡಲಾಗಿದೆ.

ಅನುಪಮಾ ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಶೇರ್‌ ಮಾಡಿಕೊಂಡಿದ್ದಾರೆ, “ ಬ್ಲಾಕ್‌ಬಸ್ಟರ್ ಟಿಲ್ಲು ಸ್ಕ್ವೇರ್ ನಂತರ, ಈಗ ಪರಧಾ ಜೊತೆ ಬರುತ್ತಿದ್ದೇನೆ! ಹಿಂದೆಂದೂ ಕಾಣದಂತಹ ಅನುಭವವನ್ನು ನಿಮಗೆ ಈ ಸಿನಿಮಾ ಮೂಲಕ ಸಿಗಲಿದೆ ಎಂದು ಭರವಸೆ ನೀಡುತ್ತೇನೆʼʼಎಂದು ಬರೆದುಕೊಂಡಿದ್ದಾರೆ.

ಟಿಲ್ಲು ಸ್ಕ್ವೇರ್’ 2024, ಮಾರ್ಚ್ 29ರಂದು ರಿಲೀಸ್ ಆಗಿತ್ತು. ‘ಡಿಜೆ ಟಿಲ್ಲು’ 30 ಕೋಟಿ ರೂಪಾಯಿ ಲೂಟಿ ಮಾಡಿದ್ದರೆ, ‘ಟಿಲ್ಲು ಸ್ಕ್ವೇರ್’ ಬಾಕ್ಸಾಫೀಸ್‌ನಲ್ಲಿ ಬರೋಬ್ಬರು 125 ಕೋಟಿ ರೂಪಾಯಿ ದೋಚಿದೆ. ಈ ವರ್ಷದ ಟಾಲಿವುಡ್‌ನ ಮೋಸ್ಟ್ ಸಕ್ಸೆಸ್‌ಫುಲ್‌ ಸಿನಿಮಾ ಎನಿಸಿಕೊಂಡಿದೆ. ನೆಟ್‌ಫ್ಲಿಕ್ಸ್ ‘ಟಿಲ್ಲು ಸ್ಕ್ವೇರ್’ ಸಿನಿಮಾ ಖರೀದಿ ಮಾಡಿದೆ.

`ಟಿಲ್ಲು ಸ್ಕ್ವೇರ್’ ಒಳ್ಳೆಯ ಕಥಾಹಂದರ ಮತ್ತು ಆಕರ್ಷಕ ಪ್ರದರ್ಶನ ಪ್ರೇಕ್ಷಕರನ್ನು ಮೋಡಿ ಮಾಡಿತ್ತು.
ಟಿಲ್ಲು ಸ್ಕ್ವೇರ್‌ನ ನಿರ್ಮಾಪಕರ ಇತ್ತೀಚಿನ ವರದಿಗಳ ಪ್ರಕಾರ, ಚಿತ್ರವು ಈಗಾಗಲೇ ಕೇವಲ 9 ದಿನಗಳಲ್ಲಿ ವಿಶ್ವಾದ್ಯಂತ 100 ಕೋಟಿ ರೂಪಾಯಿಗಳನ್ನು ದಾಟಿದೆ. ತೆಲುಗು ಚಿತ್ರ ಟಿಲ್ಲು ಸ್ಕ್ವೇರ್ 100 ಕೋಟಿ ಗಳಿಸಿದ ಮೊದಲ ಹಾಸ್ಯ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ʻಜಾತಿ ರತ್ನಲುʼ ಸಿನಿಮಾ ಈ ಮುಂಚೆ ದಾಖಲೆ ಮಾಡಿತ್ತು.

ಟಿಲ್ಲು ಸ್ಕ್ವೇರ್ ಚಿತ್ರವನ್ನ ಮಲ್ಲಿಕ್ ರಾಮ್ ನಿರ್ದೇಶಿಸಿದ್ದಾರೆ. ಸೂರ್ಯದೇವರ ನಾಗ ವಂಶಿ ಹಾಗೂ ಸಾಯಿ ಸೌಜನ್ಯ ಚಿತ್ರವನ್ನ ನಿರ್ಮಾಣ ಮಾಡಿದ್ದಾರೆ. `ಟಿಲ್ಲು ಸ್ಕ್ವೇರ್’ ಸಿನಿಮಾದಲ್ಲಿ ಸಖತ್ ಬೋಲ್ಡ್ ದೃಶ್ಯಗಳು ಇವೆ.

Continue Reading
Advertisement
Hassan Pen Drive Case will tell Rakesh Siddaramaiah died history says HD Kumaraswamy
ಕ್ರೈಂ5 mins ago

Hassan Pen Drive Case: ರಾಕೇಶ್‌ ಸಿದ್ದರಾಮಯ್ಯ ಸಾವಿನ ವೇಳೆ ಏನಾಗಿತ್ತು ಎಂದೂ ಹೇಳುತ್ತೇನೆ: ಎಚ್‌.ಡಿ. ಕುಮಾರಸ್ವಾಮಿ

IPL 2024
ಕ್ರೀಡೆ16 mins ago

IPL 2024: ಐಪಿಎಲ್​ನಲ್ಲಿ ವಿಶೇಷ ದಾಖಲೆ ಬರೆದ ಕುಲ್​ದೀಪ್, ನರೈನ್

ಸಿನಿಮಾ19 mins ago

Rakhi Sawant: ವೈಮನಸ್ಸು ಬಿಟ್ಟು ಮಾಜಿ ಪತಿ ಜೊತೆ ಒಂದಾದ್ರಾ ರಾಖಿ ಸಾವಂತ್‌?

Hassan Pen Drive Case Sexual assault case Prajwal Revanna suspended from JDS
ಕ್ರೈಂ21 mins ago

Hassan Pen Drive Case: ಲೈಂಗಿಕ ದೌರ್ಜನ್ಯ ಕೇಸ್;‌ ಪ್ರಜ್ವಲ್‌ ರೇವಣ್ಣ ಜೆಡಿಎಸ್‌ನಿಂದ ಅಮಾನತು

Khalistani Separatist Gurpatwant Singh Pannun
ಪ್ರಮುಖ ಸುದ್ದಿ29 mins ago

Gurpatwant Singh Pannun: ಪನ್ನುನ್‌ ಹತ್ಯೆ ಸಂಚಿನಲ್ಲಿ ʼರಾʼ ಕೈವಾಡ: ವಾಷಿಂಗ್ಟನ್‌ ವರದಿಗೆ ಭಾರತ ಕಟು ಟೀಕೆ

Ayushman Bharat Diwas 2024
ಆರೋಗ್ಯ39 mins ago

Ayushman Bharat Diwas 2024: 50 ಕೋಟಿಗೂ ಹೆಚ್ಚು ಜನರಿಗೆ ಉಚಿತ ಆರೋಗ್ಯ ಸೇವೆ ನೀಡುತ್ತಿರುವ ಅಯುಷ್ಮಾನ್ ಭಾರತ್

Hassan Pen Drive Case Revanna and Siddaramaiah pact in Prajwal case Says Pralhad Joshi
ಕ್ರೈಂ1 hour ago

Hassan Pen Drive Case: ಪ್ರಜ್ವಲ್ ಪ್ರಕರಣದಲ್ಲಿ ರೇವಣ್ಣ-ಸಿದ್ದರಾಮಯ್ಯ ಒಪ್ಪಂದ; ಪ್ರಲ್ಹಾದ್ ಜೋಶಿ ಹೇಳಿದ್ದೇನು?

amith shah
ಪ್ರಮುಖ ಸುದ್ದಿ1 hour ago

Hassan pen drive case: “ಇದನ್ನು ಸಹಿಸಲು ಸಾಧ್ಯವಿಲ್ಲ…” ಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಗೃಹ ಸಚಿವ ಅಮಿತ್‌ ಶಾ ಖಡಕ್‌ ಎಚ್ಚರಿಕೆ

Physical Abuse
ದೇಶ2 hours ago

Physical abuse: JNU ಉಪನ್ಯಾಸಕನಿಂದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಭುಗಿಲೆದ್ದ ಆಕ್ರೋಶ

LSG vs MI
ಕ್ರೀಡೆ2 hours ago

LSG vs MI: ಫಿಟ್​ ಆದ ಶರವೇಗದ ಎಸೆತಗಾರ ಮಾಯಾಂಕ್‌ ಯಾದವ್‌; ಮುಂಬೈ ವಿರುದ್ಧ ಕಣಕ್ಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ8 hours ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 202424 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20241 day ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20242 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20242 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌