Shyam Benegal: ಖ್ಯಾತ ನಿರ್ದೇಶಕ ಶ್ಯಾಮ್ ಬೆನಗಲ್ ಎರಡೂ ಕಿಡ್ನಿ ಫೇಲ್‌, ಆರೋಗ್ಯ ಸ್ಥಿತಿ ಗಂಭೀರ - Vistara News

ಬಾಲಿವುಡ್

Shyam Benegal: ಖ್ಯಾತ ನಿರ್ದೇಶಕ ಶ್ಯಾಮ್ ಬೆನಗಲ್ ಎರಡೂ ಕಿಡ್ನಿ ಫೇಲ್‌, ಆರೋಗ್ಯ ಸ್ಥಿತಿ ಗಂಭೀರ

ನಿರ್ದೇಶಕ ಶ್ಯಾಮ್ ಬೆನಗಲ್ (Shyam Benegal) ಅವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಮನೆಯಲ್ಲಿ ವಿಶ್ರಾಂತಿ ಪಡೆಯುವಂತೆ ಸೂಚಿಸಲಾಗಿದ್ದು, ಮನೆಯಲ್ಲಿಯೇ ಡಯಾಲಿಸಿಸ್‌ಗೆ ಒಳಗಾಗಿದ್ದಾರೆ.

VISTARANEWS.COM


on

Shyam Benegal's Kidneys Fail
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಶ್ಯಾಮ್ ಬೆನಗಲ್ (Shyam Benegal) ಅವರ ಎರಡೂ ಕಿಡ್ನಿ ಫೇಲ್‌ ಆಗಿದ್ದು, ಮನೆಯಲ್ಲಿ ಡಯಾಲಿಸಿಸ್ ಮಾಡಲಾಗುತ್ತಿದೆ ಎಂದು ವರದಿಯಾಗಿದೆ. ವರದಿ ಪ್ರಕಾರ, ನಿರ್ದೇಶಕರ ಆರೋಗ್ಯವು ತೀರಾ ಹದಗೆಟ್ಟಿದೆ ಎಂದು ವರದಿಯಾಗಿದೆ.

ಟೈಮ್ಸ್ ನೌ ವರದಿ ಮಾಡಿದಂತೆ, ನಿರ್ದೇಶಕ ಶ್ಯಾಮ್ ಬೆನಗಲ್ ಅವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಮನೆಯಲ್ಲಿ ವಿಶ್ರಾಂತಿ ಪಡೆಯುವಂತೆ ಸೂಚಿಸಲಾಗಿದ್ದು, ಮನೆಯಲ್ಲಿಯೇ ಡಯಾಲಿಸಿಸ್‌ಗೆ ಒಳಗಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅವರು ಕಚೇರಿಗೆ ಭೇಟಿ ನೀಡುತ್ತಿಲ್ಲ ಎಂದು ಸಿಬ್ಬಂದಿ ಹೇಳಿರುವುದು ವರದಿಯಾಗಿದೆ. ಶ್ಯಾಮ್ ಅವರು ʻʻಮುಜೀಬ್: ದಿ ಮೇಕಿಂಗ್ ಆಫ್ ಎ ನೇಷನ್ʼʼ (Mujeeb: The Making of a Nation) ಎಂಬ ಚಿತ್ರದ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು. ಈ ಚಿತ್ರವು ಬಾಂಗ್ಲಾದೇಶದ ಮೊದಲ ಅಧ್ಯಕ್ಷ ಶೇಖ್ ಮುಜಿಬುರ್ ರೆಹಮಾನ್ ಅವರ ಜೀವನಾಧರಿತ ಕಥೆಯಾಗಿದೆ ಎಂದು ಹೇಳಲಾಗುತ್ತಿದೆ. ಅವರ ಆರೋಗ್ಯದ ಬಗ್ಗೆ ಅವರ ಕುಟುಂಬ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ.

ಇದನ್ನೂ ಓದಿ: Neena Gupta: ನಿರ್ದೇಶಕ ಶ್ಯಾಮ್ ಬೆನಗಲ್ ಬಗ್ಗೆ ಅಸಮಾಧಾನ ಹೊರ ಹಾಕಿದ ನಟಿ ನೀನಾ ಗುಪ್ತಾ

Shyam Benegal

ಶ್ಯಾಮ್ ಬೆನಗಲ್ ತಮ್ಮ ವೃತ್ತಿಜೀವನದಲ್ಲಿ ಎಂಟು ರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಅವರ ಮೊದಲ ರಾಷ್ಟ್ರೀಯ ಪ್ರಶಸ್ತಿಯು ಅವರ ಅಂಕುರ್ ( Ankur) (1974) ಚಿತ್ರಕ್ಕಾಗಿ, ಇದು ಶಬಾನಾ ಅಜ್ಮಿ ಮತ್ತು ಅನಂತ್ ನಾಗ್ ಅವರ ಚೊಚ್ಚಲ ಚಿತ್ರವಾಗಿದೆ. ನಿಶಾಂತ್ (Nishant) (1975), ಮಂಥನ್ (Manthan ) (1976), ಭೂಮಿಕಾ: ದಿ ರೋಲ್ ( Bhumika: The Role ) (1977), ಜುನೂನ್ (Junoon) (1978), ಆರೋಹನ್ Arohan) (1982), ನೇತಾಜಿ ಸುಭಾಸ್ ಚಂದ್ರ ಬೋಸ್: ದಿ ಫಾರ್ಗಾಟನ್ ಹೀರೋ (Netaji Subhas Chandra Bose: The Forgotten Hero) (2004) ಮತ್ತು ವೆಲ್ ಡನ್‌ ಅಬ್ಬಾ (Well Done Abba)ಗಾಗಿ ರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಇದನ್ನೂ ಓದಿ: Mahatma Gandhi | ಬೆಳ್ಳಿ ಪರದೆಯಲ್ಲಿ ಕಂಡ ಮಹಾತ್ಮ ಗಾಂಧಿ; ಬಾಪುವನ್ನು ಚಿತ್ರಿಸಿದ ಜನಪ್ರಿಯ ಚಲನಚಿತ್ರಗಳಿವು

ಪ್ರಶಸ್ತಿಗಳು

ರಾಷ್ಟ್ರಪ್ರಶಸ್ತಿಗಳನ್ನು ಗೆಲ್ಲುವುದರ ಜತೆಗೆ, ಶ್ಯಾಮ್ ಅವರು ಕೆಲವು ಅತ್ಯುನ್ನತ ನಾಗರಿಕ ಪ್ರಶಸ್ತಿಗಳನ್ನು ಸಹ ಪಡೆದಿದ್ದಾರೆ. ಇವುಗಳಲ್ಲಿ 1976ರಲ್ಲಿ ಪದ್ಮಶ್ರೀ, 1991 ರಲ್ಲಿ ಪದ್ಮಭೂಷಣ ಮತ್ತು 2005 ರಲ್ಲಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸೇರಿವೆ. ಚಲನಚಿತ್ರ ನಿರ್ಮಾಣದ ಜತೆಗೆ, ಶ್ಯಾಮ್ ಬೆನಗಲ್ ಅವರ ಬರವಣಿಗೆಯ ಕೆಲಸಕ್ಕೂ ಹೆಸರುವಾಸಿಯಾಗಿದ್ದಾರೆ. ಅವರು ಮೂರು ಜನಪ್ರಿಯ ಪುಸ್ತಕಗಳನ್ನು ಬರೆದಿದ್ದಾರೆ, ದಿ ಚರ್ನಿಂಗ್ ವಿತ್ ವಿಜಯ್ ತೆಂಡೂಲ್ಕರ್ (The Churning with Vijay Tendulkar ೦ (1984), ಸತ್ಯಜಿತ್ ರೇ ( Satyajit Ray ) (1988) ಮತ್ತು ದಿ ಮಾರ್ಕೆಟ್‌ಪ್ಲೇಸ್ ( The Marketplace ) (1989).

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Shamita Shetty: ವಿಚಿತ್ರ ಕಾಯಿಲೆಗೆ ತುತ್ತಾದ ಶಿಲ್ಪಾ ಶೆಟ್ಟಿ ಸಹೋದರಿ ಶಮಿತಾ ಶೆಟ್ಟಿ: ಆಸ್ಪತ್ರೆಗೆ ದಾಖಲು

Shamita Shetty: ಇತ್ತೀಚೆಗಷ್ಟೇ ಶಮಿತಾ ತಾಯಿ ಸುನಂದಾ ಶೆಟ್ಟಿ ಮತ್ತು ಸಹೋದರಿ ನಟಿ ಶಿಲ್ಪಾ ಶೆಟ್ಟಿ ಅವರೊಂದಿಗೆ ಜಮ್ಮು ಮತ್ತು ಕಾಶ್ಮೀರದ ವೈಷ್ಣೋ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಶಿಲ್ಪಾ ಅವರು ಪ್ರವಾಸದ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದರು. ಜಾರಿ ನಿರ್ದೇಶನಾಲಯ ಶಿಲ್ಪಾ ಶೆಟ್ಟಿ ಅವರಿಗೆ 98 ಕೋಟಿ ರೂಪಾಯಿ ಮೌಲ್ಯದ ಆಸ್ತಿ ವಶ ಪಡಿಸಿಕೊಂಡ ಪ್ರಕರಣ ತನಿಖೆ ಹಂತದಲ್ಲೇ, ಮತ್ತೊಂದು ವೈಯಕ್ತಿಕ ಸಮಸ್ಯೆ ಎದುರಾಗಿದೆ.

VISTARANEWS.COM


on

Shamita Shetty Undergoes Surgery For Endometriosis
Koo

ಬೆಂಗಳೂರು: ನಟಿ ಶಮಿತಾ ಶೆಟ್ಟಿ (Shamita Shetty ) ಅವರು ಎಂಡೊಮೆಟ್ರಿಯೊಸಿಸ್ (endometriosis ) ಎನ್ನುವ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದೀಗ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಬಗ್ಗೆ ಸ್ವತಃ ಶಮಿತಾ ಶೆಟ್ಟಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳಿಗೆ ತಿಳಿಸಿದ್ದು, ಎಲ್ಲಾ ಮಹಿಳೆಯರೂ ಈ ಬಗ್ಗೆ ಜಾಗೃತರಾಗಿ ಮತ್ತು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ. ಎಂಡೊಮೆಟ್ರಿಯೊಸಿಸ್ ಎಂದರೆ ಗರ್ಭಾಶಯದ ಒಳಪದರವನ್ನು ಹೋಲುವ ಅಂಗಾಂಶವು ಗರ್ಭಾಶಯದ ಹೊರಗೆ ಬೆಳೆಯಲು ಪ್ರಾರಂಭಿಸುತ್ತದೆ.

ಆಸ್ಪತ್ರೆಯ ಹಾಸಿಗೆಯಲ್ಲಿ ಕುಳಿತು ವಿಡಿಯೊ ಶೇರ್‌ ಮಾಡಿಕೊಂಡಿದ್ದಾರೆ. ಶಮಿತಾ ಮಾತನಾಡಿ ʻಮಹಿಳೆಯರೇ, ದಯವಿಟ್ಟು ಎಂಡೊಮೆಟ್ರಿಯೊಸಿಸ್ ಗೂಗಲ್ ಮಾಡಿ. ಸಮಸ್ಯೆ ಏನು ಎಂದು ನೀವು ತಿಳಿದುಕೊಳ್ಳಬೇಕು. ಸುಮಾರು 40% ಮಹಿಳೆಯರು ಎಂಡೊಮೆಟ್ರಿಯೊಸಿಸ್‌ನಿಂದ ಬಳಲುತ್ತಿದ್ದಾರೆ ಎಂದು ನಿಮಗೆ ತಿಳಿದಿದೆಯೇ..? ನಮ್ಮಲ್ಲಿ ಹೆಚ್ಚಿನವರಿಗೆ ಈ ರೋಗದ ಬಗ್ಗೆ ತಿಳಿದಿಲ್ಲ !!! ನನ್ನ ನೋವಿನ ಮೂಲ ಕಾರಣವನ್ನು ಕಂಡುಕೊಳ್ಳಲು ಸಹಾಯ ಮಾಡಿದ ನನ್ನ ವೈದ್ಯರಾದ ಗೈನಾಕ್ ಡಾ ನೀತಾ ವಾರ್ಟಿ ಮತ್ತು ನನ್ನ ಜಿಪಿ ಡಾ ಸುನೀತಾ ಬ್ಯಾನರ್ಜಿ ಇಬ್ಬರಿಗೂ ನಾನು ಧನ್ಯವಾದ ಹೇಳಲು ಬಯಸುತ್ತೇನೆ! ಈಗ ನಾನು ಈ ರೋಗವನ್ನು ಶಸ್ತ್ರಚಿಕಿತ್ಸೆಯಿಂದ ತೆಗೆದುಹಾಕಿದ್ದೇನೆ ನನ್ನ ಆರೋಗ್ಯ ಮತ್ತಷ್ಟು ಸುಧಾರಿಸಲು ಎದುರು ನೀಡುತ್ತಿದ್ದೇನೆ. ಈಗೀಗ ನೋವಿಲ್ಲದ ದಿನಗಳನ್ನು ಕಳೆಯುತ್ತಿದ್ದೇನೆ. ಹೀಗಾಗಿ ಎಲ್ಲಾ ಮಹಿಳೆಯರೂ ಈ ಎಂಡೊಮೆಟ್ರಿಯೊಸಿಸ್ ಬಗ್ಗೆ ಜಾಗೃತರಾಗಿ ಮತ್ತು ಚಿಕಿತ್ಸೆ ಪಡೆಯಿರಿʼʼ ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: Shilpa Shetty: ಅಮ್ಮ , ಸಹೋದರಿ ಜತೆ ಕೇದಾರನಾಥಕ್ಕೆ ಭೇಟಿ ನೀಡಿದ ಶಿಲ್ಪಾ ಶೆಟ್ಟಿ

ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ವೈರಲ್‌ ಆಗುತ್ತಿದ್ದಂತೆ ಶಮಿತಾ ಅವರ ಸಹೋದ್ಯೋಗಿಗಳು ಮತ್ತು ಬಾಲಿವುಡ್‌ನ ಅನೇಕ ಗಣ್ಯರು ಬೇಗ ಗುಣಮುಖರಾಗಿ ಎಂದು ಕಮೆಂಟ್‌ ಮಾಡಿದ್ದಾರೆ.

ಏನಿದು ಎಂಡೊಮೆಟ್ರಿಯೊಸಿಸ್ ಕಾಯಿಲೆ?

ಗರ್ಭಕೋಶಕ್ಕೆ ಸಂಬಂಧಿಸಿದ್ದು, ಗರ್ಭಾಶಯದ ಒಳಪದರವನ್ನು ಹೋಲುವ ಅಂಗಾಂಶವು ಗರ್ಭಾಶಯದ ಹೊರಗೆ ಬೆಳೆಯಲು ಪ್ರಾರಂಭಿಸುತ್ತದೆ. ಇದಕ್ಕೆ ಸೂಕ್ತ ಚಿಕಿತ್ಸೆಯನ್ನು ಪಡೆದುಕೊಳ್ಳಬೇಕು. ಇಲ್ಲವಾದಲ್ಲಿ ಮಹಿಳೆಯರಿಗೆ ಗರ್ಭಿಣಿಯಾಗಲು ಕಷ್ಟವಾಗುತ್ತದೆ. ಹಾಗೂ ಮುಟ್ಟಿನ ಸಮಯದಲ್ಲಿ ಕಷ್ಟವಾಗುತ್ತದೆ.

ಇತ್ತೀಚೆಗಷ್ಟೇ ಶಮಿತಾ ತಾಯಿ ಸುನಂದಾ ಶೆಟ್ಟಿ ಮತ್ತು ಸಹೋದರಿ ನಟಿ ಶಿಲ್ಪಾ ಶೆಟ್ಟಿ ಅವರೊಂದಿಗೆ ಜಮ್ಮು ಮತ್ತು ಕಾಶ್ಮೀರದ ವೈಷ್ಣೋ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಶಿಲ್ಪಾ ಅವರು ಪ್ರವಾಸದ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದರು. ಜಾರಿ ನಿರ್ದೇಶನಾಲಯ ಶಿಲ್ಪಾ ಶೆಟ್ಟಿ ಅವರಿಗೆ 98 ಕೋಟಿ ರೂಪಾಯಿ ಮೌಲ್ಯದ ಆಸ್ತಿ ವಶ ಪಡಿಸಿಕೊಂಡ ಪ್ರಕರಣ ತನಿಖೆ ಹಂತದಲ್ಲೇ, ಮತ್ತೊಂದು ವೈಯಕ್ತಿಕ ಸಮಸ್ಯೆ ಎದುರಾಗಿದೆ.

Continue Reading

ಸಿನಿಮಾ

Ramayana Movie: ದೇಶದ ಅತ್ಯಂತ ದುಬಾರಿ ಚಿತ್ರ ಎನಿಸಿಕೊಳ್ಳಲಿದೆ ʼರಾಮಾಯಣʼ; ಬಜೆಟ್‌ ನಿಮ್ಮ ಊಹೆಗೂ ನಿಲುಕದ್ದು

Ramayana Movie: ಸದ್ಯ ಚಿತ್ರ ಪ್ರೇಮಿಗಳ ಕುತೂಹಲ ಕೆರಳಿಸಿರುವ ಸಿನಿಮಾಗಳಲ್ಲಿ ರಾಮಾಯಣ ಕೂಡ ಒಂದು. ಬಾಲಿವುಡ್‌ನ ಖ್ಯಾತ ನಿರ್ದೇಶಕ ನಿತೇಶ್ ತಿವಾರಿ ಆ್ಯಕ್ಷನ್‌ ಕಟ್‌ ಹೇಳುತ್ತಿರುವ ಈ ಸಿನಿಮಾ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿದೆ. ಕೆಜಿಎಫ್‌ ಸರಣಿ ಚಿತ್ರಗಳ ಮೂಲಕ ದೇಶದ ಗಮನ ಸೆಳೆದ ರಾಕಿ ಭಾಯಿ ಯಶ್‌ ರಾವಣನಾಗಿ ಈ ಸಿನಿಮಾ ಮೂಲಕ ಬಾಲಿವುಡ್‌ ಪ್ರವೇಶಿಸಲಿದ್ದಾರೆ ಎನ್ನಲಾಗುತ್ತಿದೆ. ಈ ಮಧ್ಯೆ ಸಿನಿಮಾ ಬಜೆಟ್‌ ಬಗ್ಗೆ ಹೊಸದೊಂದು ಅಪ್‌ಡೇಟ್‌ ಹೊರ ಬಿದ್ದಿದೆ. ಈ ಚಿತ್ರದ ಬಜೆಟ್‌ ಎಷ್ಟು ಗೊತ್ತೆ?

VISTARANEWS.COM


on

Ramayana Movie
Koo

ಮುಂಬೈ: ಸದ್ಯ ದೇಶಾದ್ಯಂತ ʼರಾಮಾಯಣʼ (Ramayana Movie) ಚಿತ್ರದ್ದೇ ಸದ್ದು. ಬಾಲಿವುಡ್‌ನ ಖ್ಯಾತ ನಿರ್ದೇಶಕ ನಿತೇಶ್ ತಿವಾರಿ (Nitesh Tiwari) ಆ್ಯಕ್ಷನ್‌ ಕಟ್‌ ಹೇಳುತ್ತಿರುವ ಈ ಸಿನಿಮಾ ಬಹು ತಾರಾಗಣದ ಮೂಲಕವೇ ಸುದ್ದಿಯಾಗುತ್ತಿದೆ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತಯರಾಗುತ್ತಿರುವ ಈ ಚಿತ್ರದಲ್ಲಿ ರಾಮನಾಗಿ ರಣಬೀರ್‌ ಕಪೂರ್‌ (Ranbir Kapoor) ಮತ್ತು ಸೀತೆಯಾಗಿ ಸಾಯಿ ಪಲ್ಲವಿ (Sai Pallavi) ನಟಿಸುತ್ತಿದ್ದಾರೆ. ಈ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ ರಾಕಿಂಗ್‌ ಸ್ಟಾರ್‌ ಯಶ್‌ (Yash) ಬಾಲಿವುಡ್‌ಗೆ ಕಾಲಿಡುತ್ತಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ಇನ್ನೂ ಅಧಿಕೃತ ಘೋಷಣೆಯಾಗಿಲ್ಲ. ಈ ಮಧ್ಯೆ ಸಿನಿಮಾ ಬಜೆಟ್‌ ಬಗ್ಗೆ ಹೊಸ ಅಪ್‌ಡೇಟ್‌ ಹೊರ ಬಿದ್ದಿದೆ.

ಬಜೆಟ್‌ ಎಷ್ಟು?

ʼರಾಮಾಯಣʼ ಸಿನಿಮಾ ಬರೋಬ್ಬರಿ 835 ಕೋಟಿ ರೂ. ವೆಚ್ಚದಲ್ಲಿ ತಯಾರಾಗುತ್ತಿದೆ ಎನ್ನುವ ಸುದ್ದಿ ಹಬ್ಬಿದೆ. ಈ ಮೂಲಕ ಭಾರತೀಯ ಸಿನಿರಂಗದಲ್ಲೇ ಅತೀ ದುಬಾರಿ ಚಿತ್ರ ಎನಿಸಿಕೊಳ್ಳಲಿದೆ. ʼʼರಾಮಾಯಣ ಕೇವಲ ಸಿನಿಮಾವಲ್ಲ. ಅದೊಂದು ಭಾವನೆ. ನಂಬಿಕೆ. ಹೀಗಾಗಿ ನಿರ್ಮಾಪಕರು ಈ ಚಿತ್ರದ ತಯಾರಿಯಲ್ಲಿ ಯಾವುದೇ ರಾಜಿ ಮಾಡಿಕೊಳ್ಳುತ್ತಿಲ್ಲ. ದುಬಾರಿ ವೆಚ್ಚದಲ್ಲಿ ನಿರ್ಮಾಪಕರು ತೆರೆ ಮೇಲೆ ಮ್ಯಾಜಿಕ್‌ ಮಾಡಲು ಮುಂದಾಗಿದ್ದಾರೆʼʼ ಎಂದು ಮೂಲವೊಂದು ತಿಳಿಸಿದೆ.

ಈಗಾಗಲೇ ರಾಮಾಯಣ ಸಿನಿಮಾದ ಚಿತ್ರೀಕರಣ ಆರಂಭವಾಗಿದೆ. ಇತ್ತೀಚೆಗೆ ಶೂಟಿಂಗ್‌ನ ತುಣುಕೊಂಡು ಲೀಕ್‌ ಆಗಿ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ʼʼಚಿತ್ರದ ಬಜೆಟ್‌ 835 ಕೋಟಿ ರೂ.ಗೆ ತಲುಪಲಿದೆ. ಪೋಸ್ಟ್‌ ಪ್ರೊಡಕ್ಷನ್‌ಗೇ ಸುಮಾರು 600 ದಿನ ಬೇಕಾಗುತ್ತದೆ. ಈ ಮೂಲಕ ಜಾಗತಿಕ ಮಟ್ಟದಲ್ಲಿ ಭಾರತೀಯ ಸಿನಿಮಾವೊಂದು ರಾರಾಜಿಸಲಿದೆʼʼ ಎಂದು ವರದಿಯೊಂದರಲ್ಲಿ ವಿವರಿಸಲಾಗಿದೆ.

ಅತ್ಯಂತ ದುಬಾರಿ ಚಿತ್ರ

ಪ್ರಭಾಸ್‌ ಅಭಿನಯದ, ಕಳೆದ ವರ್ಷ ತೆರೆಕಂಡ ʼಆದಿಪುರುಷ್‌ʼ ಸಿನಿಮಾ ಇದುವರೆಗಿನ ಅತ್ಯಂತ ವೆಚ್ಚದ ಸಿನಿಮಾ ಎನಿಸಿಕೊಂಡಿತ್ತು. ರಾಮಾಯಣವನ್ನು ಆಧರಿಸಿದ ಇದು ಸುಮಾರು 700 ಕೋಟಿ ರೂ. ಬಜೆಟ್‌ನಲ್ಲಿ ತಯಾರಾಗಿತ್ತು ಎನ್ನಲಾಗಿದೆ. ಎರಡನೇ ಸ್ಥಾನದಲ್ಲಿ ಪ್ರಭಾಸ್‌ ಅವರದ್ದೇ ʼಕಲ್ಕಿ 2898 ಎಡಿʼ ಸಿನಿಮಾ ಇದೆ. ದೀಪಿಕಾ ಪಡುಕೋಣೆ ನಾಯಕಿಯಾಗಿರುವ ಇದು ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತಯಾರಾಗುತ್ತಿದ್ದು, ಈ ಚಿತ್ರದ ಬಜೆಟ್‌ ಸುಮಾರು 600 ಕೋಟಿ ರೂ. ಇನ್ನು ರಜನಿಕಾಂತ್‌ ನಟಿಸಿದ್ದ ʼ2.0ʼ ಚಿತ್ರಕ್ಕೆ 570 ಕೋಟಿ ರೂ. ವೆಚ್ಚವಾಗಿತ್ತು. ಹೀಗಾಗಿ ʼರಾಮಾಯಣʼ ಇದುವರೆಗಿನ ದುಬಾರಿ ಸಿನಿಮಾ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಇದು ಸುಮಾರು 3 ಭಾಗಗಳಲ್ಲಿ ತೆರೆಗೆ ಬರಲಿದೆ ಎನ್ನುವ ಸುದ್ದಿಯೂ ಇದೆ.

ಯಶ್‌ ನಟಿಸುತ್ತಾರಾ?

ʼಕೆಜಿಎಫ್‌ʼ ಸರಣಿ ಸಿನಿಮಾ ಮೂಲಕ ದೇಶದ ಗಮನ ಸೆಳೆದ ಸ್ಯಾಂಡಲ್‌ವುಡ್‌ ನಟ ಯಶ್‌ ರಾಮಾಯಣ ಸಿನಿಮಾದಲ್ಲಿ ರಾವಣನನಾಗಿ ಅಬ್ಬರಿಸಲಿದ್ದಾರೆ. ಅದಕ್ಕಾಗಿ ದುಬಾರಿ ಸಂಭಾವನೆಯನ್ನೇ ಪಡೆದುಕೊಂಡಿದ್ದಾರೆ ಎನ್ನುವ ಸುದ್ದಿ ಹರಡಿದೆ. ಇದರ ಜತೆಗೆ ಯಶ್‌ ನಟಿಸುತ್ತಿಲ್ಲ, ಬದಲಾಗಿ ಚಿತ್ರ ನಿರ್ಮಾಣದಲ್ಲಿ ಕೈ ಜೋಡಿಸುತ್ತಿದ್ದಾರೆ ಎಂದೂ ಹೇಳಲಾಗುತ್ತಿದೆ. ಆದರೆ ಇದುವರೆಗೆ ಈ ಬಗ್ಗೆ ಚಿತ್ರತಂಡವಾಗಲೀ, ಯಶ್‌ ಕಡೆಯಿಂದಾಗಲೀ ಸ್ಪಷ್ಟನೆ ದೊರೆತಿಲ್ಲ.

ಇದನ್ನೂ ಓದಿ: Ramayana Movie: ರಾಮಾಯಣ’ ಸಿನಿಮಾದ ರಣ್‌ಬೀರ್, ಸಾಯಿ ಪಲ್ಲವಿ ಲುಕ್ ಲೀಕ್

ದಶರಥನಾಗಿ ಅರುಣ್‌ ಗೋವಿಲ್, ಹನುಮಂತನಾಗಿ ಸನ್ನಿ ಡಿಯೋಲ್ ನಟಿಸುತ್ತಾರೆ ಎನ್ನಲಾಗುತ್ತಿದೆ. ರಾವಣನ ಸಹೋದರಿ ಶೂರ್ಪನಖಿಯಾಗಿ ರಕುಲ್‌ಪ್ರೀತ್ ಸಿಂಗ್ ನಟಿಸುತ್ತಾರೆ ಎಂದು ವರದಿಯಾಗಿದೆ. ಸದ್ಯ ಯಶ್ ಮತ್ತೊಂದು ಬಹು ನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ.

Continue Reading

ಬಾಲಿವುಡ್

Salman Khan: ಸಲ್ಮಾನ್‌ ಖಾನ್‌ ಮನೆ ಎದುರು ಫೈರಿಂಗ್‌ ಕೇಸ್‌; 6ನೇ ಆರೋಪಿಯ ಬಂಧನ

Salman Khan: ಕೆಲವು ದಿನಗಳ ಹಿಂದೆ ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಅವರ ಮನೆ ಮುಂದೆ ಫೈರಿಂಗ್‌ ಮಾಡಿದ ಪ್ರಕರಣದಲ್ಲಿ ಪೊಲೀಸರು 6ನೇ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು 37 ವರ್ಷದ ಹರ್ಪಾಲ್‌ ಸಿಂಗ್‌ ಎಂದು ಗುರುತಿಸಲಾಗಿದೆ. ಈತನನ್ನು ಹರಿಯಾಣದ ಫತೇಹಾಬಾದ್‌ನಿಂದ ವಶಕ್ಕೆ ಪಡೆಯಲಾಗಿದ್ದು, ಈತ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸದಸ್ಯ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Salman Khan
Koo

ಮುಂಬೈ: ಇತ್ತೀಚೆಗೆ ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ (Salman Khan) ನಿವಾಸದ ಎದುರು ಗುಂಡಿನ ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದ ಆರನೇ ಆರೋಪಿಯನ್ನು ಹರಿಯಾಣದಲ್ಲಿ ಬಂಧಿಸಲಾಗಿದೆ. ತನಿಖೆ ನಡೆಸುತ್ತಿರುವ ಮುಂಬೈ ಕ್ರೈಂ ಬ್ರ್ಯಾಂಚ್‌ ಹರಿಯಾಣದ ಫತೇಹಾಬಾದ್‌ನಿಂದ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸದಸ್ಯನಾದ ಆರನೇ ಆರೋಪಿಯನ್ನು ಬಂಧಿಸಿದೆ. ಬಂಧಿತ ಆರೋಪಿಯನ್ನು 37 ವರ್ಷದ ಹರ್ಪಾಲ್‌ ಸಿಂಗ್‌ ಎಂದು ಗುರುತಿಸಲಾಗಿದೆ.

ʼʼಹರ್ಪಾಲ್‌ ಸಿಂಗ್‌ನನ್ನು ಆತನ ಊರಾದ ಫತೇಹಾಬಾದ್‌ನಿಂದ ಬಂಧಿಸಲಾಗಿದೆ. ಮುಂಬೈ ಕ್ರೈಂ ಬ್ರ್ಯಾಂಚ್‌ನ ಅಧಿಕಾರಿಗಳ ತಂಡ ಸೋಮವಾರ ರಾತ್ರಿ ಆಗಮಿಸಿದ ಆತನನ್ನು ವಶಕ್ಕೆ ಪಡೆದುಕೊಂಡಿದೆʼʼ ಎಂದು ಮೂಲಗಳು ತಿಳಿಸಿವೆ. ಹರ್ಪಾಲ್‌ ಸಿಂಗ್‌ನನ್ನು ಮಂಗಳವಾರ ಬೆಳಿಗ್ಗೆ ಮುಂಬೈಗೆ ಕರೆತರಲಾಗಿದ್ದು, ನಂತರ ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (MCOCA) ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ. ಇದರೊಂದಿಗೆ ಈ ಪ್ರಕರಣದಲ್ಲಿ ಇದುವರೆಗೆ 6 ಮಂದಿಯನ್ನು ಬಂಧಿಸಿದಂತಾಗಿದೆ.

ಈ ಹಿಂದೆ ಆರಂಭದಲ್ಲಿ ಪೊಲೀಸರು ಪಂಜಾಬ್‌ ಮೂಲದ ಇಬ್ಬರನ್ನು ಬಂಧಿಸಿದ್ದರು. ಬಳಿಕ ಗುಜರಾತ್‌ನಿಂದ ಇಬ್ಬರನ್ನು ವಶಕ್ಕೆ ಪಡೆಯಲಾಗಿತ್ತು. ಬಳಿಕ ರಾಜಸ್ಥಾನದ ಓರ್ವ ಬಲೆಗೆ ಬಿದ್ದಿದ್ದ.

ಏನಿದು ಪ್ರಕರಣ?

ಎಪ್ರಿಲ್‌ 14ರಂದು ಮುಂಬೈಯ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಗುಂಡಿನ ದಾಳಿ ನಡೆದಿತ್ತು. ಬೈಕ್‌ನಲ್ಲಿ ಬಂದು ದಾಳಿ ನಡೆಸಿದ್ದ ಶೂಟರ್‌ಗಳಾದ ಸಾಗರ್‌ ಪಾಲ್‌ ಮತ್ತು ವಿಕ್ಕಿ ಗುಪ್ತಾ ಎಂಬ ಇಬ್ಬರು ದುಷ್ಕರ್ಮಿಗಳನ್ನು ಬಳಿಕ ಅರೆಸ್ಟ್‌ ಮಾಡಲಾಗಿತ್ತು. ಮುಂಬೈ ಪೊಲೀಸರು ಜೈಲಿನಲ್ಲಿರುವ ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತು ಅವನ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯ್ ಅವರನ್ನು ಈ ಪ್ರಕರಣದ ಪ್ರಮುಖ ಆರೋಪಿಗಳು ಎಂದು ಘೋಷಿಸಿದ್ದರು.

ಈ ಮಧ್ಯೆ ಗುಂಡಿನ ದಾಳಿ ನಡೆಸಿದ್ದ ಶೂಟರ್‌ಗಳಿಗೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡಿದ್ದ ಆರೋಪ ಎದುರಿಸುತ್ತಿದ್ದ ಅನೂಜ್‌ ಥಾಪನ್‌ ಕೆಲವು ದಿನಗಳ ಹಿಂದೆ ಪೊಲೀಸ್‌ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಆತ ಕೊನೆಯುಸಿರೆಳೆದಿದ್ದ. ಅನುಜ್ ಥಾಪನ್ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಆತನ ಕುಟುಂಬ ಇದರ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿತ್ತು. ಲಾಕಪ್‌ನಲ್ಲಿ ಥಾಪನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದರೆ ಆತನ ತಾಯಿ ಇದು ಕೊಲೆ ಎಂದು ಆರೋಪಿಸಿದ್ದರು.

ಕಾರಣವೇನು?

ಹಲವು ವರ್ಷಗಳ ಹಿಂದಿನ ಕೃಷ್ಣಮೃಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಮಾನ್‌ ಅವರನ್ನು ಕೊಲ್ಲುವುದಾಗಿ 2018 ರಲ್ಲಿ ಬೆದರಿಕೆ ಹಾಕಿದ ನಂತರ ಬಿಷ್ಣೋಯ್ ಅವರ ಸಹಾಯಕರಲ್ಲಿ ಒಬ್ಬನನ್ನು ಬಂಧಿಸಲಾಯಿತು. ಜೋಧಪುರ್​ನ ಬಿಷ್ಣೋಯ್​ಗಳು ಕೃಷ್ಣಮೃಗವನ್ನು ತಮ್ಮ ಧಾರ್ಮಿಕ ಗುರು ಭಗವಾನ್ ಜಂಬೇಶ್ವರ ಅವರ ಪುನರ್ಜನ್ಮ ಎಂದು ಪರಿಗಣಿಸುತ್ತಾರೆ. ಹೀಗಾಗಿ ಕೃಷ್ಣಮೃಗ ಕೊಲ್ಲುವುದನ್ನು ಬಿಷ್ಣೋಯ್​ಗಳು ಎಂದಿಗೂ ಸಹಿಸುವುದಿಲ್ಲ. ಈ ಕಾರಣಕ್ಕೆ ಸಲ್ಮಾನ್ ಖಾನ್ ಹತ್ಯೆ ಮಾಡಲು ಲಾರೆನ್ಸ್ ಬಿಷ್ಣೋಯ್ ನಿರ್ಧರಿಸಿದ್ದ. ಎಬಿಪಿ ನ್ಯೂಸ್‌ಗೆ ನೀಡಿದ ಇತ್ತೀಚಿನ ಸಂದರ್ಶನದಲ್ಲಿ, ʻʻಸಲ್ಮಾನ್ ಖಾನ್ ಅವರನ್ನು ಕೊಲ್ಲುವುದು ನನ್ನ ಜೀವನದ ಗುರಿ. ಸಲ್ಮಾನ್‌ ಅವರು ಬಿಷ್ಣೋಯ್ ಸಮುದಾಯಕ್ಕೆ ಕ್ಷಮೆಯಾಚಿಸಿದ ನಂತರವೇ ಈ ವಿಷಯ ಕೊನೆಗೊಳ್ಳುತ್ತದೆʼʼ ಎಂದು ಹೇಳಿದ್ದ.

ಇದನ್ನೂ ಓದಿ: Salman Khan : ಸಲ್ಮಾನ್​ ಮನೆ ಬಳಿ ಗುಂಡಿನ ದಾಳಿ; ಪಂಜಾಬ್​​ನಲ್ಲಿ ಗನ್​ ಕೊಟ್ಟವರಿಬ್ಬರ ಬಂಧನ

Continue Reading

Latest

Abdu Rozik: ತನಗಿಂತ ತುಂಬಾ ಎತ್ತರದ ಹುಡುಗಿ ಜತೆ ಬಿಗ್‌ ಬಾಸ್‌ ಸ್ಪರ್ಧಿಯ ಮದುವೆ!

ಅಮೀರಾ ಅವರೊಂದಿಗೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡ ಗಾಯಕ 115 ಸೆಂ.ಮೀ. ಎತ್ತರದ ಅಬ್ದು ರೋಝಿಕ್ (Abdu Rozik) ತಮ್ಮ ಎತ್ತರ ತಮ್ಮಿಬ್ಬರ ಸಂಬಂಧದ ನಡುವೆ ಎಂದಿಗೂ ಬರುವುದಿಲ್ಲ ಎಂದು ಹೇಳಿದ್ದಾರೆ.

VISTARANEWS.COM


on

By

Abdu Rozik
Koo

ಸಾಮಾಜಿಕ ಜಾಲತಾಣದಲ್ಲಿ (social media) ಸಕ್ರಿಯರಾಗಿರುವ ಮತ್ತು ಬಿಗ್ ಬಾಸ್ 16 (Bigg Boss 16) ಖ್ಯಾತಿಯ ಅಬ್ದು ರೋಝಿಕ್ (Abdu Rozik) ಇತ್ತೀಚೆಗಷ್ಟೇ ಅಮಿರಾ ಅವರೊಂದಿಗೆ ಮದುವೆ ನಿಶ್ಚಿತಾರ್ಥವನ್ನು (engagement) ಮಾಡಿಕೊಂಡಿದ್ದಾರೆ. ನಿಶ್ಚಿತಾರ್ಥದ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಅವರು ಮುಂದಿನ ಜುಲೈನಲ್ಲಿ ವಿವಾಹ ಕಾರ್ಯಕ್ರಮ ನಡೆಯಲಿದ್ದು, ಬಾಲಿವುಡ್ ನಟ (Bollywood actor) ಸಲ್ಮಾನ್ ಖಾನ್ (Salman Khan) ಪಾಲ್ಗೊಳ್ಳಲಿದ್ದಾರೆ ಎಂದು ಅಬ್ದು ತಿಳಿಸಿದ್ದಾರೆ.

20 ವರ್ಷದ ಗಾಯಕ (singer) ಅಬ್ದು ರೋಝಿಕ್ ಅವರು ಅಮೀರಾ ಅವರನ್ನು ಆಹಾರ ಉತ್ಸವದಲ್ಲಿ ಭೇಟಿಯಾಗಿದ್ದರು. ಮೊದಲ ನೋಟದಲ್ಲೇ ಇಬ್ಬರಿಗೂ ಪ್ರೀತಿಯಾಗಿತ್ತು ಎಂದು ಅಬ್ದು ತಿಳಿಸಿದರು.

ಅಬ್ದು ಅವರ ನಿಶ್ಚಿತಾರ್ಥವು ಯಾವುದೇ ಪ್ರಚಾರವಲ್ಲ ಎಂದು ಅಬ್ದು ಸ್ಪಷ್ಟಪಡಿಸಿದ್ದು, ನನ್ನಂತಹ ಸಣ್ಣ ವ್ಯಕ್ತಿ ಪ್ರೀತಿಯನ್ನು ಕಂಡುಕೊಂಡಿದ್ದಾನೆ ಎಂದು ಜನರು ನಂಬಲು ಕಷ್ಟವಾಗಬಹುದು ಎಂದು ತಿಳಿಸಿದರು.
ಅಮೀರಾಗಿಂತ ಚಿಕ್ಕವನಾಗಿರುವ ತನ್ನ ಎತ್ತರದ ವ್ಯತ್ಯಾಸವು ನಮ್ಮ ಪ್ರೀತಿಯ ಮೇಲೆ ಯಾವುದೇ ಪರಿಣಾಮ ಬೀರಲಿಲ್ಲ ಎಂದು ಹೇಳಿದರು.


ಅಬ್ದು ಅವರು 115 ಸೆಂ ಮತ್ತು ಅಮೀರಾ 155 ಸೆಂ.ಮೀ. ಎತ್ತರವಿದ್ದಾರೆ. ಅವರಿಬ್ಬರೂ ಕಡಿಮೆ ಎತ್ತರದಿಂದಾಗಿ ತಮ್ಮ ಸಂಗಾತಿಯನ್ನು ಹುಡುಕುವ ಬಗ್ಗೆ ಚಿಂತಿತರಾಗಿದ್ದರು. ಆದರೆ ಅಮೀರಾ ಅವರನ್ನು ಭೇಟಿ ಮಾಡಿದ್ದಕ್ಕಾಗಿ ಕೃತಜ್ಞರಾಗಿರುತ್ತೇನೆ. ಅಮೀರಾ ತನಗಿಂತ ಎತ್ತರವಾಗಿದ್ದರೂ ಅದು ನಮ್ಮ ಸಂಬಂಧದ ನಡುವೆ ಎಂದಿಗೂ ಬಂದಿಲ್ಲ ಎಂದು ತಿಳಿಸಿದರು.


ಕೆಲವು ದಿನಗಳ ಹಿಂದೆ ಅಬ್ದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ನಿಶ್ಚಿತಾರ್ಥ ಸಮಾರಂಭದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಅವರು ಅಮೀರಾ ಅವರ ಮುಖವನ್ನು ಬಹಿರಂಗಪಡಿಸಲಿಲ್ಲ, ಆದರೆ ಹೃದಯದ ಆಕಾರದ ವಜ್ರದ ಉಂಗುರದ ಫೋಟೋವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Jyoti Rai: ವೈರಲ್ ವಿಡಿಯೊ ಬೆನ್ನಲ್ಲೇ ಜ್ಯೋತಿ ರೈ ಟೆಂಪಲ್‌ ರನ್‌!

ಸುದ್ದಿಯನ್ನು ಹಂಚಿಕೊಂಡ ಅವರು, “ಜುಲೈ 7 ರಂದು ದಾಂಪತ್ಯ ಜೀವನಕ್ಕೆ ಕಾಲಿರಿಸುವುದಾಗಿ ಹೇಳಿದ್ದು, ನನ್ನನ್ನು ಗೌರವಿಸುವ ಪ್ರೀತಿಯನ್ನು ಪಡೆಯುವ ಅದೃಷ್ಟಶಾಲಿ ಎಂದು ನಾನು ನನ್ನ ಜೀವನದಲ್ಲಿ ಎಂದಿಗೂ ಊಹಿಸಿರಲಿಲ್ಲ. ನಾನು ಎಷ್ಟು ಸಂತೋಷವಾಗಿದ್ದೇನೆ ಎಂದು ಪದಗಳಲ್ಲಿ ಹೇಳಲು ಸಾಧ್ಯವಿಲ್ಲ ಎಂದು ಹೇಳಿಕೊಂಡಿದ್ದಾರೆ.

Continue Reading
Advertisement
Shamita Shetty Undergoes Surgery For Endometriosis
ಸಿನಿಮಾ6 mins ago

Shamita Shetty: ವಿಚಿತ್ರ ಕಾಯಿಲೆಗೆ ತುತ್ತಾದ ಶಿಲ್ಪಾ ಶೆಟ್ಟಿ ಸಹೋದರಿ ಶಮಿತಾ ಶೆಟ್ಟಿ: ಆಸ್ಪತ್ರೆಗೆ ದಾಖಲು

Road Accident
ಕ್ರೈಂ23 mins ago

Road Accident: ಭೀಕರ ರಸ್ತೆ ಅಪಘಾತ; ಮತ ಚಲಾಯಿಸಿ ತೆರಳುತ್ತಿದ್ದ 6 ಮಂದಿ ಸಜೀವ ದಹನ

Shrimad Ramayana udaya tv to telecasting kannada dubbing version
ಕಿರುತೆರೆ31 mins ago

Shrimad Ramayana: ಕಿರುತೆರೆಯಲ್ಲಿ ಪ್ರಸಾರವಾಗಲಿದೆ ‘ಶ್ರೀಮದ್ ರಾಮಾಯಣ’ ಮಹಾ ಕಾವ್ಯ: ಎಲ್ಲಿ? ಯಾವಾಗ?

bangalore woman murder case
ಕ್ರೈಂ39 mins ago

Murder Case: ಪ್ರಿಯತಮನ ಜೊತೆ ಶೋಕಿಗಾಗಿ ಮನೆ ಮಾಲಕಿಯ ಕೊಲೆ ಮಾಡಿದ ಯುವತಿ ಸೆರೆ

Dolly Dhananjay Kotie Cinema Kannada
ಸ್ಯಾಂಡಲ್ ವುಡ್1 hour ago

Dolly Dhananjay: ʻಕೋಟಿʼ ಸಿನಿಮಾ ಮೊದಲ ಹಾಡು ಬಿಡುಗಡೆ!

terror module
ದೇಶ1 hour ago

Terror Module Bust: ಪಂಜಾಬ್‌ನಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ; ಸಿಖ್ ಉಗ್ರರ ಜತೆ ನಂಟು ಹೊಂದಿದ್ದ ನಾಲ್ವರು ಅರೆಸ್ಟ್‌

woman murder case
ಕ್ರೈಂ1 hour ago

Murder Case: ʼನೇಹಾ ಹಿರೇಮಠ ಥರ ಕೊಲೆ ಮಾಡ್ತೀನಿ…ʼ ಎಂದವನು ಮಾಡಿಯೇ ಬಿಟ್ಟ! ಪಾಗಲ್‌ ಪ್ರೇಮಿಯಿಂದ ಮತ್ತೊಬ್ಬ ಯುವತಿಯ ಹತ್ಯೆ

Rashmika Mandanna Reacts To India Decade of Growth Amid Lok Sabha Polls
ಟಾಲಿವುಡ್2 hours ago

Rashmika Mandanna: ʻನಮೋʼ ಸಾಧನೆಗೆ ಕಿರಿಕ್‌ ಬ್ಯೂಟಿ ರಶ್ಮಿಕಾ ಕ್ಲೀನ್‌ ಬೋಲ್ಡ್‌!

Job Alert
ಉದ್ಯೋಗ2 hours ago

Job Alert: ಗಮನಿಸಿ; ಬಿಎಂಟಿಸಿಯ 2,500 ಕಂಡಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಮೇ 18 ಕೊನೆಯ ದಿನ

viral video garbage bengaluru roads
ವೈರಲ್ ನ್ಯೂಸ್2 hours ago

Viral video: ʼಅಸಹ್ಯಕರ!ʼ ಬೆಂಗಳೂರಿನ ರಸ್ತೆಗಳ ಕಸದ ವಿಡಿಯೋ ಪೋಸ್ಟ್‌ ಮಾಡಿದ ಕಿರಣ್ ಮಜುಂದಾರ್ ಶಾ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ3 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ5 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ15 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 202417 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 202421 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ22 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು23 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ1 day ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌