Siddharth Bodke: ಮರಾಠಿ ನಟಿ ತಿತೀಕ್ಷಾ- ʻದೃಶ್ಯಂʼ ನಟ ಸಿದ್ಧಾರ್ಥ್ ಬೋಡ್ಕೆ ಜೋಡಿಯ ಅದ್ಧೂರಿ ಮದುವೆ ಇಂದು - Vistara News

ಸಿನಿಮಾ

Siddharth Bodke: ಮರಾಠಿ ನಟಿ ತಿತೀಕ್ಷಾ- ʻದೃಶ್ಯಂʼ ನಟ ಸಿದ್ಧಾರ್ಥ್ ಬೋಡ್ಕೆ ಜೋಡಿಯ ಅದ್ಧೂರಿ ಮದುವೆ ಇಂದು

Siddharth Bodke: ಫೆಬ್ರವರಿ 25ರಂದು ಇವರಿಬ್ಬರ ನಿಶ್ಚಿತಾರ್ಥ ನಡೆದಿದ್ದು, ಇಂದು (ಫೆಬ್ರವರಿ 26) ಅದ್ಧೂರಿಯಾಗಿ ಮದುವೆ ನಡೆಯಲಿದೆ. ತಿತೀಕ್ಷಾ ಈಗಾಗಲೇ ನಿಶ್ಚಿತಾರ್ಥದ ಫೋಟೊ ಜತೆಗೆ ಮದುವೆ ಶಾಸ್ತ್ರಗಳ ಫೋಟೊಗಳನ್ನು ಶೇರ್‌ ಮಾಡಿಕೊಂಡಿದ್ದಾರೆ.

VISTARANEWS.COM


on

Siddharth Bodke and Titeeksha Tawade to get married
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮರಾಠಿ ನಟಿ ತಿತೀಕ್ಷಾ ತಾವಡೆ (Titeeksha Tawade) ʻದೃಶ್ಯಂʼ ಸಿನಿಮಾ ಖ್ಯಾತಿಯ ನಟ ಸಿದ್ಧಾರ್ಥ್ ಬೋಡ್ಕೆ (Siddharth Bodke) ಜತೆ ಎಂಗೇಜ್‌ ಆಗಿದ್ದಾರೆ. ಫೆಬ್ರವರಿ 25ರಂದು ಇವರಿಬ್ಬರ ನಿಶ್ಚಿತಾರ್ಥ ನಡೆದಿದ್ದು, ಇಂದು (ಫೆಬ್ರವರಿ 26) ಅದ್ಧೂರಿಯಾಗಿ ಮದುವೆ ನಡೆಯಲಿದೆ. ತಿತೀಕ್ಷಾ ಈಗಾಗಲೇ ನಿಶ್ಚಿತಾರ್ಥದ ಫೋಟೊ ಜತೆಗೆ ಮದುವೆ ಶಾಸ್ತ್ರಗಳ ಫೋಟೊಗಳನ್ನು ಶೇರ್‌ ಮಾಡಿಕೊಂಡಿದ್ದಾರೆ.

ತಿತೀಕ್ಷಾ ಮತ್ತು ಸಿದ್ಧಾರ್ಥ್ ಟಿವಿ ಶೋ ʻತು ಆಶಿ ಜವಲಿ ರಹಾʼದಲ್ಲಿ (Tu Ashi Jawali Raha) ಒಟ್ಟಿಗೆ ಕೆಲಸ ಮಾಡುವಾಗ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. 2019ರಲ್ಲಿ ಶೋ ಮುಗಿದ್ದರೂ ತಮ್ಮ ಸಂಬಂಧವನ್ನು ಮುಂದುವರಿಸಿದ್ದರು. ಇದಾದ ಬಳಿಕ ಆಗಾಗ ಸೋಷಿಯಲ್‌ ಮೀಡಿಯಾ ಮೂಲಕ ಒಟ್ಟಿಗೆ ಇರುವ ಫೋಟೊವನ್ನು ಹಂಚಿಕೊಳ್ಳುತ್ತಿದ್ದರು. ಫ್ಯಾನ್ಸ್‌ ಕೂಡ ಮದುವೆ ಯಾವಾಗ ಎಂದು ಕೇಳುತ್ತಿದ್ದರು. ಇದೀಗ ಜೋಡಿ ಅಂತೂ ಸಿಹಿ ಸುದ್ದಿ ನೀಡಿದೆ. ತಿತೀಕ್ಷಾ ಮತ್ತು ಸಿದ್ಧಾರ್ಥ್ ತಮ್ಮ ನಿಶ್ಚಿತಾರ್ಥದ ಫೋಟೊವನ್ನು ಇದೀಗ ಇನ್‌ಸ್ಟಾದಲ್ಲಿ ಶೇರ್‌ ಮಾಡಿಕೊಂಡಿದ್ದಾರೆ.

ಈಗಾಗಲೇ ಇಬ್ಬರ ಕುಟುಂಬದಲ್ಲಿ ಸಾಂಪ್ರದಾಯಿಕ ಕೆಲ್ವನ್ ಶಾಸ್ತ್ರಗಳನ್ನು ನೆರವೇರಿಸಲಾಗಿದೆ. ವಧು ಮತ್ತು ವರನ ಕುಟುಂಬಗಳು ಬಟ್ಟೆ, ಹೂವುಗಳು, ಆಭರಣಗಳು ಮತ್ತು ಇತರ ಬೆಲೆಬಾಳುವ ವಸ್ತುಗಳಂತಹ ಉಡುಗೊರೆಗಳನ್ನು ವಿನಿಮಯ ಮಾಡಿಕೊಳ್ಳುವ ಸಂಪ್ರದಾಯವೆಂದರೆ ಕೆಲ್ವನ್. ಈ ಸಮಾರಂಭವು ಮಹಾರಾಷ್ಟ್ರದ ಮದುವೆ ಪದ್ಧತಿಯಲ್ಲಿ ಮಹತ್ವದ್ದಾಗಿದೆ.

ಇದನ್ನೂ ಓದಿ: Kannada New Movie: ‘ಎಬಿ ಪಾಸಿಟಿವ್’ ಸಿನಿಮಾದಿಂದ ತೇಲಿಬಂತು ಮತ್ತೊಂದು ಚೆಂದದ ಹಾಡು!

ನಟಿ ತಿತೀಕ್ಷಾ ತಾವಡೆ ಸದ್ಯ ಟಿವಿ ಶೋ ʻಸತ್ಯ ಮುಳಿಚಿ ಸತವಿ ಮುಲ್ಗಿʼಯಲ್ಲಿ ನಟಿಸುತ್ತಿದ್ದು, ನಟ ಸಿದ್ಧಾರ್ಥ್ ಬೋಡ್ಕೆ ಹಿಂದಿ ಮತ್ತು ಮರಾಠಿ ನಾಟಕಗಳಲ್ಲಿ ಚಲನಚಿತ್ರಗಳಲ್ಲಿ ನಿರತರಾಗಿದ್ದಾರೆ. ಸಿದ್ಧಾರ್ಥ್ ʻತು ಆಶಿ ಜವಳಿ ರಹಾʼ ಮತ್ತು ʻಅನನ್ಯʼ ಸೇರಿದಂತೆ ವಿವಿಧ ಧಾರಾವಾಹಿಗಳಲ್ಲಿ ಕಾಣಿಸಿಕೊಂಡಿದ್ದಾರೆ. ಹಿಂದಿ ಚಲನಚಿತ್ರ ʻದೃಶ್ಯಂʼನಲ್ಲಿಯೂ ಅವರು ಮಹತ್ವದ ಪಾತ್ರವನ್ನು ನಿರ್ವಹಿಸಿದ್ದಾರೆ. ತಿತೀಕ್ಷಾ ತಾವ್ಡೆ ಅವರು ʻಸರಸ್ವತಿʼ, ʻಏಕ್ ಥ್ರಿಲ್ಲರ್ ನೈಟ್ʼ ಮತ್ತು ʻಶಭಾಶ್ ಮಿಥುʼ ಸೇರಿದಂತೆ ಹಲವು ಚಿತ್ರಗಳಿಗೆ ಹೆಸರುವಾಸಿಯಾಗಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Kalki 2898 AD: 1000 ಕೋಟಿ ರೂ. ಗಳಿಕೆಯತ್ತ ‘ಕಲ್ಕಿ 2898  ಎಡಿʼ; ಇಲ್ಲಿಯವರೆಗೆ ಕಲೆಕ್ಷನ್‌ ಮಾಡಿದ್ದೆಷ್ಟು?

Kalki 2898 AD: ಟಾಲಿವುಡ್‌ನ ಪ್ರತಿಭಾವಂತ ನಿರ್ದೇಶಕ ನಾಗ್ ಅಶ್ವಿನ್ ಆ್ಯಕ್ಷನ್‌ ಕಟ್‌ ಹೇಳಿರುವ ʼಕಲ್ಕಿʼಯಲ್ಲಿ ಬಹುತಾರಾಗಣವಿದೆ. ಪ್ರಭಾಸ್‌ ಮತ್ತು ದೀಪಿಕಾ ಪಡುಕೋಣೆ ಮೊದಲ ಬಾರಿ ತೆರೆ ಹಂಚಿಕೊಂಡಿದ್ದು, ಬಾಲಿವುಡ್‌ನ ಹಿರಿಯ ನಟ ಅಮಿತಾಭ್‌ ಬಚ್ಚನ್‌ ಮುಖ್ಯಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

VISTARANEWS.COM


on

Kalki 2898 AD records global box office collection
Koo

ಬೆಂಗಳೂರು:   ʼಕಲ್ಕಿ 2898 ಎಡಿʼ (Kalki 2898 AD) ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ನಾಗಾಲೋಟ ಮುಂದುವರಿಸಿದೆ. ಜೂನ್ 27ರಂದು ವಿಶ್ವಾದ್ಯಂತ ತೆರೆಕಂಡ ಈ ಸೈನ್ಸ್‌ ಫಿಕ್ಷನ್‌ ದಾಖಲೆಯ ಕಲೆಕ್ಷನ್‌ ಮಾಡಿದೆ. ಜಾಗತಿಕವಾಗಿ 700 ಕೋಟಿ ರೂ. ಬಾಕ್ಸ್ ಆಫೀಸ್ ಸಂಗ್ರಹ ಮಾಡಿದೆ. ಮೊದಲ ವಾರದಲ್ಲಿ ಭಾರತದಲ್ಲಿ 393.4 ಕೋಟಿ ರೂ ಗಳಿಕೆ ಕಂಡಿದೆ.

ಭಾರತದ ಒಟ್ಟು ಕಲೆಕ್ಷನ್ ಅಂದಾಜು 441.5 ಕೋಟಿ ರೂ. ಅಂತಾರಾಷ್ಟ್ರೀಯ ಮಾರುಕಟ್ಟೆಗಳಿಂದ 168.5 ಕೋಟಿ ರೂಪಾಯಿಗಳನ್ನು ಸಂಗ್ರಹಿಸುವುದರೊಂದಿಗೆ, ಚಿತ್ರದ 7-ದಿನಗಳ ಒಟ್ಟು ಒಟ್ಟು ಮೊತ್ತ ಸುಮಾರು 610 ಕೋಟಿ ರೂ. ಕಲೆಕ್ಷನ್‌ ಆಗಿದೆ ಎಂದು ಅಂದಾಜಿಸಲಾಗಿದೆ. “ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಅತಿ ದೊಡ್ಡ ಬ್ಲಾಕ್‌ಬಸ್ಟರ್” ಎಂದು ಒಬ್ಬರು ಕಮೆಂಟ್ ಮಾಡಿದ್ದಾರೆ. ʻʻಈ ಚಿತ್ರ ಎಷ್ಟು ಲಾಭ ಗಳಿಸುತ್ತದೆ ಎಂದು ನೋಡೋಣ” ಎಂದು ಇನ್ನೊಬ್ಬರು ಕಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ: Kalki 2898 AD: ಕಡಿಮೆ ಆಗಿಲ್ಲ `ಕಲ್ಕಿ’ ಅಬ್ಬರ; ಚಿತ್ರದ ಒಟ್ಟೂ ಗಳಿಕೆ ಎಷ್ಟು?

ಭರ್ಜರಿ ಗಳಿಕೆ

ಮೊದಲ ದಿನ ಭರ್ಜರಿ 191 ಕೋಟಿ ರೂ. ಗಳಿಸಿದ ʼಕಲ್ಕಿʼ ಆ ಮೂಲಕ ಸ್ಯಾಂಡಲ್‌ವುಡ್‌ನ ʼಕೆಜಿಎಫ್‌ 2ʼ (159 ಕೋಟಿ ರೂ.), ʼಸಲಾರ್‌ʼ (158 ಕೋಟಿ ರೂ.), ʼಲಿಯೋʼ (142.75 ಕೋಟಿ ರೂ.), ʼಸಾಹೋʼ (130 ಕೋಟಿ ರೂ.) ಮತ್ತು ʼಜವಾನ್‌ʼ (129 ಕೋಟಿ ರೂ.) ದಾಖಲೆ ಮುರಿದೆ. ಅದಾಗ್ಯೂ 223 ಕೋಟಿ ರೂ. ಕಲೆಕ್ಷನ್‌ ಮಾಡಿದ ʼಆರ್‌ಆರ್‌ಆರ್‌ʼ ಮತ್ತು 217 ಕೋಟಿ ರೂ. ಗಳಿಸಿದ ʼಬಾಹುಬಲಿ 2ʼ ಈಗಲೂ ಮೊದಲ ದಿನದ ಕಲೆಕ್ಷನ್‌ ವಿಚಾರದಲ್ಲಿ ಮೊದಲೆರಡು ಸ್ಥಾನಗಳಲ್ಲಿ ಭದ್ರವಾಗಿವೆ.

ಬಹುತಾರಾಗಣ

ಟಾಲಿವುಡ್‌ನ ಪ್ರತಿಭಾವಂತ ನಿರ್ದೇಶಕ ನಾಗ್ ಅಶ್ವಿನ್ ಆ್ಯಕ್ಷನ್‌ ಕಟ್‌ ಹೇಳಿರುವ ʼಕಲ್ಕಿʼಯಲ್ಲಿ ಬಹುತಾರಾಗಣವಿದೆ. ಪ್ರಭಾಸ್‌ ಮತ್ತು ದೀಪಿಕಾ ಪಡುಕೋಣೆ ಮೊದಲ ಬಾರಿ ತೆರೆ ಹಂಚಿಕೊಂಡಿದ್ದು, ಬಾಲಿವುಡ್‌ನ ಹಿರಿಯ ನಟ ಅಮಿತಾಭ್‌ ಬಚ್ಚನ್‌ ಮುಖ್ಯಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ದಕ್ಷಿಣ ಭಾರತದ ಜನಪ್ರಿಯ ತಾರೆಗಳಾದ ಕಮಲ್‌ ಹಾಸನ್‌, ಶೋಭನಾ ಮತ್ತಿತರರು ಅತಿಥಿ ಪಾತ್ರದಲ್ಲಿ ಮಿಂಚಿದ್ದಾರೆ.

Continue Reading

ಸಿನಿಮಾ

Salman Khan: ಸಲ್ಮಾನ್ ಖಾನ್ ಹೊಸ ಲುಕ್‌ ವೈರಲ್‌: ‘ಸಿಕಂದರ್’ಗೆ ಫ್ಯಾನ್ಸ್‌ ಫಿದಾ!

Salman Khan: ತಮಿಳು, ತೆಲುಗಿನಲ್ಲಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಎಆರ್ ಮುರುಗದಾಸ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವನ್ನು ಸಾಜಿದ್ ನಾಡಿಯಾವಾಲ ನಿರ್ಮಾಣ ಮಾಡುತ್ತಿದ್ದು, ದೊಡ್ಡ ಬಜೆಟ್​ನಲ್ಲಿ ಸಿದ್ಧವಾಗುತ್ತಿದೆ. ಮುರುಗದಾಸ್ ಅವರು ಈ ಮೊದಲು ‘ಗಜಿನಿ’, ‘ಸ್ಟಾಲಿನ್’, ‘ಸೆವೆಂತ್ ಸೆನ್ಸ್’, ‘ತುಪ್ಪಾಕಿ’, ‘ಸ್ಪೈಡರ್’ ಸೇರಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ಕೊಟ್ಟಿದ್ದರು. ಮುರುಗದಾಸ್ ಅವರು ಆಮಿರ್ ಖಾನ್ ನಟಿಸಿದ್ದ ‘ಗಜಿನಿ’ ಚಿತ್ರವನ್ನು ಅವರೇ ನಿರ್ದೇಶನ ಮಾಡಿದ್ದರು.

VISTARANEWS.COM


on

Salman Khan shares new pic from for Sikandar
Koo

ಬೆಂಗಳೂರು: ನಟ ಸಲ್ಮಾನ್ ಖಾನ್ (Salman Khan) ಬುಧವಾರ ತಮ್ಮ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ಹೊಸ ಫೋಟೊವನ್ನು ಹಂಚಿಕೊಂಡಿದ್ದಾರೆ. ಸರಳವಾದ ಕಪ್ಪು ಟೀ ಶರ್ಟ್‌ನಲ್ಲಿ ಸುಂದರವಾಗಿ ಕಾಣುತ್ತಿದ್ದರು. ನಟನ ಹೊಸ ಲುಕ್‌ ಕಂಡು ಅಭಿಮಾನಿಗಳು ಪ್ರತಿಕ್ರಿಯಿಸಿ ಪ್ರೀತಿಯ ಸುರಿಮಳೆಗೈದರು. ‘ಸಿಕಂದರ್’ ಚಿತ್ರೀಕರಣದಲ್ಲಿ ನಿರತರಾಗಿರುವ ಸಲ್ಮಾನ್, “ಗ್ರೀನ್ ಜೋನ್” ಎಂದು ಕ್ಯಾಪ್ಷನ್‌ ಕೊಟ್ಟಿದ್ದಾರೆ.

ಈ ಹಿಂದೆ, ‘ಸಿಕಂದರ್’ ಸೆಟ್‌ನಿಂದ ಕೆಲವು ಫೋಟೊಗಳು ಲೀಕ್‌ ಆಗಿದ್ದವು. ಜೂನ್ 19 ರಂದು ‘ಸಿಕಂದರ್’ ಚಿತ್ರದ ಚಿತ್ರೀಕರಣ ಪ್ರಾರಂಭವಾಯಿತು. ಚಿತ್ರದಲ್ಲಿ ಸಲ್ಮಾನ್ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ.

ಈ ಹಿಂದೆ ಸಿನಿಮಾ ಈದ್ 2025ರಂದು ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ ಎಂದು ಪೋಸ್ಟರ್‌ ಜತೆ ಮಾಹಿತಿ ಹಂಚಿಕೊಂಡಿದ್ದಾರೆ. ಮಾರ್ಚ್ 12ರಂದು, ಸಲ್ಮಾನ್ ಖಾನ್ ತಮ್ಮ ಅಧಿಕೃತ ಎಕ್ಸ್‌ ಹ್ಯಾಂಡಲ್‌ನಲ್ಲಿ ಸಿನಿಮಾ ಬಗ್ಗೆ ಹಂಚಿಕೊಂಡಿದ್ದರು. ಪ್ರತಿಭಾವಂತರಾದ ಎಆರ್ ಮುರುಗದಾಸ್ ನನ್ನ ಸ್ನೇಹಿತ, ಅವರೊಂದಿಗೆ ಸಿನಿಮಾ ಮಾಡುತ್ತಿರುವುದು ಸಂತೋಷವಾಗಿದೆ. ಈ ಸಹಯೋಗ ವಿಶೇಷವಾಗಿದೆ. ನಿಮ್ಮ ಪ್ರೀತಿ ಮತ್ತು ಆಶೀರ್ವಾದ ನಮ್ಮ ಮೇಲೆ ಇರಲಿʼʼಎಂದು ಬರೆದುಕೊಂಡಿದ್ದರು.

ತಮಿಳು, ತೆಲುಗಿನಲ್ಲಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಎಆರ್ ಮುರುಗದಾಸ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವನ್ನು ಸಾಜಿದ್ ನಾಡಿಯಾವಾಲ ನಿರ್ಮಾಣ ಮಾಡುತ್ತಿದ್ದು, ದೊಡ್ಡ ಬಜೆಟ್​ನಲ್ಲಿ ಸಿದ್ಧವಾಗುತ್ತಿದೆ. ಮುರುಗದಾಸ್ ಅವರು ಈ ಮೊದಲು ‘ಗಜಿನಿ’, ‘ಸ್ಟಾಲಿನ್’, ‘ಸೆವೆಂತ್ ಸೆನ್ಸ್’, ‘ತುಪ್ಪಾಕಿ’, ‘ಸ್ಪೈಡರ್’ ಸೇರಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ಕೊಟ್ಟಿದ್ದರು. ಮುರುಗದಾಸ್ ಅವರು ಆಮಿರ್ ಖಾನ್ ನಟಿಸಿದ್ದ ‘ಗಜಿನಿ’ ಚಿತ್ರವನ್ನು ಅವರೇ ನಿರ್ದೇಶನ ಮಾಡಿದ್ದರು.

ಇದನ್ನೂ ಓದಿ: Salman Khan: ʻಅಲ್ಟಿಮೇಟ್ ಸೆಕ್ಸ್ ಸಿಂಬಲ್ʼ ನನ್ನ ಗಂಡ ಅಲ್ಲ, ಅದು ಸಲ್ಮಾನ್‌ ಖಾನ್‌ ಎಂದಳು ಖ್ಯಾತ ನಟಿ!

ಸೊನಾಕ್ಷಿ ಸಿನ್ಹಾ ನಟನೆಯ ‘ಅಕಿರಾ’ ಚಿತ್ರವನ್ನು ಅವರು ನಿರ್ದೇಶನ ಮಾಡಿದ್ದರು. ಮುರುಗದಾಸ್ ನಿರ್ದೇಶನದಲ್ಲಿ ಮೂಡಿ ಬಂದಿದ್ದ ‘ಸ್ಟಾಲಿನ್’ ಚಿತ್ರವನ್ನು ಹಿಂದಿಯಲ್ಲಿ ‘ಜೈ ಹೋ’ ಹೆಸರಲ್ಲಿ ರೀಮೇಕ್ ಮಾಡಲಾಗಿತ್ತು.

ʻಸಿಖಂದರ್’ ಸಿನಿಮಾ ಆಕ್ಷನ್ ಥ್ರಿಲ್ಲರ್ ಚಿತ್ರವಾಗಿರಲಿದೆ. 400 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿನಿಮಾ ಸಿದ್ಧವಾಗುತ್ತಿದೆ ಎಂದು ವರದಿಯಾಗಿದೆ. ಸಲ್ಮಾನ್ ಖಾನ್ ಕೊನೆಯದಾಗಿ ‘ಟೈಗರ್ 3’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.

ತಮಿಳು ಮತ್ತು ಹಿಂದಿಯ ʼಘಜನಿʼ, ತಮಿಳಿನ ʼ7 ಆಮ್ ಅರಿವುʼ, ʼತುಪಾಕಿʼ, ʼಕತ್ತಿʼ, ʼದರ್ಬಾರ್‌ʼ, ಹಿಂದಿಯ ʼಹಾಲಿ ಡೇʼ, ತೆಲುಗಿನ ʼಸ್ಪೈಡರ್‌ʼ ಮುಂತಾದ ಹಿಟ್‌ ಚಿತ್ರಗಳಿಗೆ ಆ್ಯಕ್ಷನ್‌ ಕಟ್‌ ಹೇಳಿದ್ದ ಎ.ಆರ್‌.ಮುರುಗದಾಸ್‌ ಸುಮಾರು 8 ವರ್ಷಗಳ ಬಳಿಕ ಸಲ್ಮಾನ್‌ ಚಿತ್ರದ ಮೂಲಕ ಬಾಲಿವುಡ್‌ಗೆ ಮತ್ತೆ ಕಾಲಿಡುತ್ತಿದ್ದಾರೆ. ಮೊದಲ ಬಾರಿ ಮುರುಗದಾಸ್‌ ಅವರು ಸಲ್ಮಾನ್‌ ಖಾನ್‌ ಚಿತ್ರವನ್ನು ನಿರ್ದೇಶಿಸುತ್ತಿರುವುದು ಕೂಡ ವಿಶೇಷವೆನಿಸಿದೆ.

Continue Reading

ಸ್ಯಾಂಡಲ್ ವುಡ್

Yuva Rajkumar: ಅಮೆರಿಕಕ್ಕೆ ಮರಳಿದ ಶ್ರೀದೇವಿ ಭೈರಪ್ಪ; ಡಿವೋರ್ಸ್ ಕಥೆ ಏನಾಯ್ತು?

Yuva Rajkumar: ಡಾ.ರಾಜ್‌ಕುಮಾರ್‌ ವಂಶದ ಕುಡಿ, ನಟ ಯುವ ರಾಜ್‌ಕುಮಾರ್‌ (Yuva Rajkumar) ಅವರು ಪತ್ನಿ ಶ್ರೀದೇವಿ ಭೈರಪ್ಪ (Sridevi Byrappa) ಅವರಿಗೆ ಡಿವೋರ್ಸ್ ನೋಟಿಸ್‌ ನೀಡಿದ ವಿಚಾರ ಕೆಲವು ದಿನಗಳ ಹಿಂದೆ ಭಾರೀ ಸುದ್ದಿಯಾಗಿತ್ತು. ಈ ನೋಟಿಸ್‌ಗೆ ಸಂಬಂಧಿಸಿ ಇಂದು (ಜುಲೈ 4) ನಡೆಯಬೇಕಾಗಿದ್ದ ವಿಚಾರಣೆಗಾಗಿ ಅಮೆರಿಕದಿಂದ ಬಂದಿದ್ದ ಶ್ರೀದೇವಿ ಭೈರಪ್ಪ ಹಿಂತಿರುಗುತ್ತಿರುವುದಾಗಿ ಸೋಷಿಯಲ್‌ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

VISTARANEWS.COM


on

Yuva Rajkumar
Koo

ಬೆಂಗಳೂರು: ಡಾ.ರಾಜ್‌ಕುಮಾರ್‌ ವಂಶದ ಕುಡಿ, ನಟ ಯುವ ರಾಜ್‌ಕುಮಾರ್‌ (Yuva Rajkumar) ಅವರು ಪತ್ನಿ ಶ್ರೀದೇವಿ ಭೈರಪ್ಪ (Sridevi Byrappa) ಅವರಿಗೆ ಡಿವೋರ್ಸ್ ನೋಟಿಸ್‌ ನೀಡಿದ ವಿಚಾರ ಕೆಲವು ದಿನಗಳ ಹಿಂದೆ ಭಾರೀ ಸುದ್ದಿಯಾಗಿತ್ತು. ಈ ನೋಟಿಸ್‌ಗೆ ಸಂಬಂಧಿಸಿ ಇಂದು (ಜುಲೈ 4) ನಡೆಯಬೇಕಾಗಿದ್ದ ವಿಚಾರಣೆಗಾಗಿ ಅಮೆರಿಕದಿಂದ ಬಂದಿದ್ದ ಶ್ರೀದೇವಿ ಭೈರಪ್ಪ ಹಿಂತಿರುಗುತ್ತಿರುವುದಾಗಿ ಸೋಷಿಯಲ್‌ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಹೀಗಾಗಿ ಅವರು ವಿಚಾರಣೆಗೆ ಗೈರಾಗಲಿದ್ದಾರೆ ಎನ್ನಲಾಗಿದೆ.

ಡಿವೋರ್ಸ್ ಪ್ರಕರಣ ವಿಚಾರವಾಗಿ ಅಮೆರಿಕದಿಂದ ಬಂದಿದ್ದ ಶ್ರೀದೇವಿ ವಿಚಾರಣೆಗೆ ಹಾಜರಾಗದೆ ಅಮೆರಿಕಕ್ಕೆ ಹಿಂತಿರುಗುತ್ತಿರುವ ವಿಷಯ ಸದ್ಯ ಕುತೂಹಲ ಮೂಡಿಸಿದೆ. ಹಾರ್ವರ್ಡ್‌ನಲ್ಲಿ ಶಿಕ್ಷಣ ಮುಂದುವರಿಸುವ ಸಲುವಾಗಿ ಭಾರತದಿಂದ ಅಮೆರಿಕಕ್ಕೆ ಹೋಗುತ್ತಿರುವುದಾಗಿ ಶ್ರೀದೇವಿ ತಿಳಿಸಿದ್ದಾರೆ. ತನ್ನ ಮೇಲೆ ಮಾಡಿರುವ ಆರೋಪಗಳಿಗೆ ತಕ್ಕ ಉತ್ತರ ಕೊಡ್ತೀನಿ. ನಾನು ಬಿಟ್ಟು ಕೊಡಲ್ಲ, ಸರಿಯಾದ ಸಮಯ ಬಂದಾಗ ಮತ್ತೆ ವಾಪಾಸ್ ಬರ್ತೀನಿ ಎಂದಿದ್ದಾರೆ.

ಶ್ರೀದೇವಿ ಹೇಳಿದ್ದೇನು?

ಕಳೆದ 15 ದಿನಗಳಿಂದ ನಾನು ಕರ್ನಾಟಕದಲ್ಲಿ ನನ್ನ ಕುಟುಂಬದ ಜತೆ ಇದ್ದಾಗ ಖಾಸಗಿ ಬದುಕನ್ನ ಗೌರವಿಸಿದ್ದಕ್ಕೆ ಧನ್ಯವಾದ. ಕಳೆದ ದಶಕಗಳಿಂದ ನನ್ನ ಜತೆಯಾಗಿದ್ದ ಸ್ನೇಹಿತರ ಬಳಗ ಕೆಲವು ದಿನಗಳ ಹಿಂದಿನ ಸುಳ್ಳಿನ ಸರಮಾಲೆಗೆ ಬಲಿಯಾದದ್ದು ದುರಾದೃಷ್ಟ. ಕಷ್ಟದ ಸಮಯದಲ್ಲಿ ನನ್ನ ಜತೆ ನಿಂತ ಸ್ನೇಹಿತರಿಗೆ, ಚಿತ್ರರಂಗದವರಿಗೆ ಧನ್ಯವಾದಗಳು ಎಂದು ಶ್ರೀದೇವಿ ಬರೆದುಕೊಂಡಿದ್ದಾರೆ.

ಮುಂದುವರಿದು, ಸತ್ಯ ಮತ್ತು ನ್ಯಾಯ ಮೇಲುಗೈ ಸಾಧಿಸುತ್ತದೆ ಎಂದು ನಂಬಿದ್ದೇನೆ ಹಾಗೂ ಅದಕ್ಕಾಗಿ ಹೋರಾಡುತ್ತೇನೆ. ನನ್ನ ಮೇಲೆ ಮಾಡಿರುವ ಪ್ರತಿಯೊಂದು ಸುಳ್ಳು ಆರೋಪದಿಂದ ಮುಕ್ತಳಾಗುವವರೆಗೆ ನನ್ನ ದಾರಿಗೆ ಏನೇ ಎದುರಾದರೂ ಹೆದರುವುದಿಲ್ಲ. ಹಾರ್ವರ್ಡ್‌ನಲ್ಲಿ ನಾನೊಂದು ಶೈಕ್ಷಣಿಕ ಯೋಜನೆಯನ್ನ ಶುರು ಮಾಡಿದ್ದೇನೆ. ಕಾಯಕವನ್ನ ಮುಂದುವರಿಸಲು ನಾನು ಅಮೆರಿಕಕ್ಕೆ ಹಿಂದಿರುಗುತ್ತಿದ್ದೇನೆ. ಸರಿಯಾದ ಸಮಯ ಬಂದಾಗ ನಾನು ಹಿಂದಿರುತ್ತೇನೆ ಹಾಗೂ ಇಲ್ಲಿನ ಕೆಲಸಗಳನ್ನ ಮುಂದುವರಿಸುತ್ತೇನೆ ಎಂದು ಶ್ರೀದೇವಿ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಬೆಚ್ಚಿ ಬಿದ್ದಿದ್ದ ಸ್ಯಾಂಡಲ್‌ವುಡ್‌

ಕೆಲವು ದಿನಗಳ ಹಿಂದೆ ರಾಜ್​ಕುಮಾರ್ ಕುಟುಂಬದ ಕುಡಿ ಯುವ ರಾಜ್‌ಕುಮಾರ್‌ ಅವರು ವಿಚ್ಛೇದನ ಪಡೆಯಲು ಮುಂದಾದಾಗ ಇಡೀ ಸ್ಯಾಂಡಲ್‌ವುಡ್‌ ಬೆಚ್ಚಿ ಬಿದ್ದಿತ್ತು. ಪತ್ನಿಯಿಂದ ಅಗೌರವ ಹಾಗೂ ಮಾನಸಿಕ ಕ್ರೌರ್ಯ ಉಂಟಾಗಿದೆ ಎಂದು ಯುವ ವಿಚ್ಛೇದನ ಅರ್ಜಿಯಲ್ಲಿ ಉಲ್ಲೇಖ ಮಾಡಿದ್ದರು. ಕೋರ್ಟ್‌ ಸಮನ್ಸ್ ಜಾರಿ ಮಾಡಿ ಜುಲೈ 4ಕ್ಕೆ ಪ್ರಕರಣ ಮುಂದೂಡಿತ್ತು. 

2019ರಲ್ಲಿ ಈ ಜೋಡಿ ಪ್ರೀತಿಸಿ ಮದುವೆಯಾಗಿತ್ತು. ಅಂದಹಾಗೆ ಶ್ರೀದೇವಿ ಮತ್ತು ಯುವ ರಾಜ್ ಕುಮಾರ್ ಪರಸ್ಪರ 7 ವರ್ಷಗಳಿಂದ ಪರಿಚಿತರಾಗಿದ್ದರು. ಶ್ರೀದೇವಿ ಅವರು ವಿನಯ್ ರಾಜ್ ಕುಮಾರ್ ಅಭಿನಯದ ರನ್ ಆಂಟನಿ ಸಿನಿಮಾದ ಪ್ರಚಾರದಲ್ಲೂ ಭಾಗಿಯಾಗಿದ್ದರು. ಇನ್ನೂ ಪವರ್ ಸ್ಟಾರ್‌ ಪುನೀತ್‌ ನಿಧನರಾದಾಗ ಮುಂದೆ ನಿಂತು ಸಾಕಷ್ಟು ಕೆಲಸಗಳು ಮಾಡಿದ್ದರು. ಕೆಲವು ದಿನಗಳಿಂದ ಇಬ್ಬರೂ ಎಲ್ಲಿಯೂ ಒಟ್ಟಿಗೆ ಕಾಣಿಸಿಕೊಂಡಿಲ್ಲ. ಇನ್ನೂ ಯುವ ಸಿನಿಮಾ ಪ್ರಚಾರದಲ್ಲಿ ಪತ್ನಿ ಶ್ರೀದೇವಿ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಅವರು ಕಳೆದ ಆರೇಳು ತಿಂಗಳಿಂದ ದೊಡ್ಮನೆಯಿಂದ ದೂರಾಗಿದ್ದರು. ಕಳೆದೊಂದು ವರ್ಷದಿಂದ ದಂಪತಿ ದೂರವೇ ಇದ್ದರು ಎನ್ನಲಾಗಿದೆ. ಸದ್ಯ ಅಮೆರಿಕಾದಲ್ಲಿ ಶ್ರೀದೇವಿ ಉನ್ನತ ಶಿಕ್ಷಣಕ್ಕಾಗಿ ವಾಸಿಸುತ್ತಿದ್ದಾರೆ. 

ಇದನ್ನೂ ಓದಿ: Yuva Rajkumar: ಕಾಂತಾರ ಕ್ವೀನ್‌ ಸಪ್ತಮಿ ಗೌಡ ಜತೆ ಯುವ ರಾಜ್‌ಕುಮಾರ್‌ ಸಂಬಂಧ; ಪತ್ನಿ ಶ್ರೀದೇವಿ ಆರೋಪ

Continue Reading

ಸ್ಯಾಂಡಲ್ ವುಡ್

Ashika Ranganath: ಪುಷ್ಪ 2 ಹಾಡಿಗೆ ದಿಲ್‌ ಖುಷ್‌ ಆಗಿ ಕುಣಿದ ಆಶಿಕಾ ರಂಗನಾಥ್;‌ Video ಇದೆ ನೋಡಿ

Ashika Ranganath: ಪುಷ್ಪ 2 ಸಿನಿಮಾದ ಸೂಸೇನೆ ಹಾಡಿಗೆ ಆಶಿಕಾ ರಂಗನಾಥ್‌ ಅವರು ಹೆಜ್ಜೆ ಹಾಕಿದ್ದಾರೆ. ಸಾಂಪ್ರದಾಯಿಕ ಉಡುಗೆಯಲ್ಲಿ ಆಶಿಕಾ ರಂಗನಾಥ್‌ ಅವರು ನವಿಲಿನಂತೆ ಹೆಜ್ಜೆ ಹಾಕಿರುವುದನ್ನು ನೋಡಿ ಅವರ ಅಭಿಮಾನಿಗಳು ಖುಷಿಯಾಗಿದ್ದಾರೆ. ಮಿಲ್ಕಿ ಬ್ಯೂಟಿ ಮಾಡಿದ ಡಾನ್ಸ್‌ನ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

VISTARANEWS.COM


on

Ashika Ranganath
Koo

ಬೆಂಗಳೂರು: ಅಲ್ಲು ಅರ್ಜುನ್‌ (Allu Arjun) ಹಾಗೂ ರಶ್ಮಿಕಾ ಮಂದಣ್ಣ ಅಭಿನಯದ ಪುಷ್ಪ 2 (Pushpa 2) ಸಿನಿಮಾದ ಸೂಸೇನೆ ಹಾಡು ಎಲ್ಲರ ಮನೆಮಾತಾಗಿದೆ. ಸಾಮಾಜಿಕ ಜಾಲತಾಣಗಳಲ್ಲಂತೂ ಹಾಡು ವೈರಲ್‌ ಆಗುವ ಜತೆಗೆ ಯುವತಿಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಈ ಹಾಡಿಗೆ ಡಾನ್ಸ್‌ ಮಾಡಿದ ವಿಡಿಯೊ ಪೋಸ್ಟ್‌ ಮಾಡಿದ್ದಾರೆ. ಅಷ್ಟರಮಟ್ಟಿಗೆ ಈ ಹಾಡು ಎಲ್ಲರ ಗಮನ ಸೆಳೆದಿದೆ. ಇದಕ್ಕೆ ನಿದರ್ಶನ ಎಂಬಂತೆ, ಸ್ಯಾಂಡಲ್‌ವುಡ್‌ನ ಮಿಲ್ಕಿ ಬ್ಯೂಟಿ ಎಂದೇ ಖ್ಯಾತಿಯಾದ, ನಟಿ ಆಶಿಕಾ ರಂಗನಾಥ್‌ (Ashika Ranganath) ಅವರು ಕೂಡ ಸೂಸೇನೆ ಹಾಡಿಗೆ ಡಾನ್ಸ್‌ ಮಾಡಿದ್ದಾರೆ. ಡಾನ್ಸ್‌ ಮಾಡಿದ ವಿಡಿಯೊವನ್ನು (Viral Video) ಅವರು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಈ ವಿಡಿಯೊ ಕೂಡ ವೈರಲ್‌ ಆಗಿದೆ.

ಸಾಂಪ್ರದಾಯಿಕ ಉಡುಗೆಯಲ್ಲಿ ಆಶಿಕಾ ರಂಗನಾಥ್‌ ಅವರು ಪುಷ್ಪ 2 ಹಾಡಿಗೆ ಹೆಜ್ಜೆ ಹಾಕಿದ್ದು, ಅವರ ಅಭಿಮಾನಿಗಳು ಖುಷಿಯಾಗಿದ್ದಾರೆ. “ನಾನು ಈ ಹಾಡಿಗೆ ತುಂಬ ತಡವಾಗಿ ಕುಣಿಯುತ್ತಿರಬಹುದು, ಆದರೆ, ನೀವು ನನ್ನ ನೃತ್ಯವನ್ನು ಇಷ್ಟಪಡುತ್ತೀರಿ ಎಂಬ ಭರವಸೆ ಇದೆ” ಎಂಬುದಾಗಿ ಆಶಿಕಾ ರಂಗನಾಥ್‌ ಅವರು ಬರೆದುಕೊಂಡಿದ್ದಾರೆ. ವಿಡಿಯೊಗೆ ಅಭಿಮಾನಿಗಳು ಪ್ರತಿಕ್ರಿಯಿಸಿದ್ದು, “ತುಂಬ ಚೆನ್ನಾಗಿ ಡಾನ್ಸ್‌ ಮಾಡಿದ್ದೀರಿ” ಎಂದಿದ್ದಾರೆ. ಇನ್ನೊಂದಿಷ್ಟು ಕಿಡಿಗೇಡಿಗಳು, “ನೀವು ರಶ್ಮಿಕಾ ಮಂದಣ್ಣ ಅವರಿಗಿಂತ ಚೆನ್ನಾಗಿ ಹೆಜ್ಜೆ ಹಾಕಿದ್ದೀರಿ” ಎಂದಿದ್ದಾರೆ.

ಪುಷ್ಪ 1 ಸಿನಿಮಾದ ಸಾಮಿ ಹಾಡನ್ನೂ ಮೀರಿಸುವಂತಿದೆ ಸೂಸೇನೆ ಹಾಡು. ಅ ದೇವಿಶ್ರೀ ಪ್ರಸಾದ್‌ ಸಂಗೀತ ನಿರ್ದೇಶನದಲ್ಲಿ ಶ್ರೇಯಾ ಘೋಷಾಲ್‌ ಈ ಹಾಡಿಗೆ ಧ್ವನಿಯಾಗಿದ್ದಾರೆ. ಹಾಡಿಗೆ ಬಾಲಿವುಡ್‌ ಗಣೇಶ್ ಆಚಾರ್ಯ ಕೊರಿಯೋಗ್ರಫಿ ಇದೆ. ಈ ಹಾಡು 6 ಭಾಷೆಗಳಲ್ಲಿ ಮೂಡಿ ಬಂದಿದೆ. ಎಲ್ಲ ಭಾಷೆಗಳಲ್ಲಿಯೂ ಶ್ರೇಯಾ ಘೋಷಾಲ್‌ ಹಾಡಿಗೆ ಧ್ವನಿ ನೀಡುತ್ತಿರುವುದು ವಿಶೇಷ. ಸೂಸೆಕಿ (ತೆಲುಗು), ನೋಡೋಕ (ಕನ್ನಡ), ಅಂಗಾರೊನ್‌ (ಹಿಂದಿ), ಸೂಡಾನ (ತಮಿಳು), ಕಂಡಾಲೋ (ಮಲಯಾಳಂ) ಮತ್ತು ಆಗುನೆರ್‌ (ಬಂಗಾಳಿ) ಎಂದು ಆರಂಭವಾಗುವ ಹಾಡನ್ನು ಶ್ರೇಯಾ ಘೋಷಾಲ್‌ ಹಾಡಿದ್ದಾರೆ.

ಡಿಸೆಂಬರ್‌ 6ಕ್ಕೆ ಸಿನಿಮಾ ಬಿಡುಗಡೆ

ಟಾಲಿವುಡ್‌ ಐಕಾನ್‌ ಸ್ಟಾರ್‌ ಅಲ್ಲು ಅರ್ಜುನ್‌ ನಟನೆಯ ಬಹುನಿರೀಕ್ಷಿತ ಪುಷ್ಪ 2 ಸಿನಿಮಾದ ಬಿಡುಗಡೆಯನ್ನು ಐದು ತಿಂಗಳು ಮುಂದೂಡಲಾಗಿದೆ. ಪುಷ್ಪ 2 ಸಿನಿಮಾವನ್ನು ಆಗಸ್ಟ್‌ 5ರ ಬದಲಾಗಿ ಇದೇ ವರ್ಷದ ಡಿಸೆಂಬರ್‌ 6ರಂದು ಬಿಡುಗಡೆ ಮಾಡಲು ಚಿತ್ರತಂಡವು ತೀರ್ಮಾನಿಸಿದೆ. ಈ ಕುರಿತು ಅಲ್ಲು ಅರ್ಜುನ್‌ ಅವರೇ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದಾರೆ.

ನಿರ್ದೇಶಕ ಸುಕುಮಾರ್ ಇನ್ನೂ ಚಿತ್ರದ ಶೂಟಿಂಗ್ ಮತ್ತು ಪೋಸ್ಟ್ ಪ್ರೊಡಕ್ಷನ್ ಹಂತದ ಕೆಲಸಗಳಲ್ಲಿ ನಿರತರಾಗಿರುವುದರಿಂದ ಸಿನಿಮಾ ಬಿಡುಗಡೆಯ ದಿನಾಂಕವನ್ನು ಮುಂದೂಡಲಾಗಿದೆ ಎಂದು ಹೇಳಲಾಗುತ್ತಿದೆ. ಇನ್ನೂ ಒಂದು ತಿಂಗಳ ಶೂಟಿಂಗ್ ಬಾಕಿಯಿದ್ದು ಜುಲೈ ವೇಳೆಗೆ ಚಿತ್ರೀಕರಣ ಪೂರ್ಣಗೊಳಿಸುವ ಗುರಿಯನ್ನು ಸುಕುಮಾರ್ ಹೊಂದಿದ್ದಾರೆ ಎನ್ನಲಾಗಿದೆ. ಅಗಸ್ಟ್ 15 ರಂದು ಅಕ್ಷಯ್ ಕುಮಾರ್ ಅವರ ‘ಖೇಲ್ ಖೇಲ್ ಮೇ’ ಕೂಡ ಬಿಡುಗಡೆಗೊಳ್ಳುತ್ತಿದೆ. ಈ ಮೊದಲು, ‘ಖೇಲ್ ಖೇಲ್ ಮೇ’ ಸೆಪ್ಟೆಂಬರ್ 6 ರಂದು ಅದ್ಧೂರಿಯಾಗಿ ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು.

ಇದನ್ನೂ ಓದಿ: Rashmika Mandanna: ರಶ್ಮಿಕಾ ಇದೀಗ ಟಾಲಿವುಡ್‌ಗೆ ಬೈ ಬೈ; ಬಾಲಿವುಡ್‌ನಲ್ಲಿಯೇ ಬಿಡಾರ!

Continue Reading
Advertisement
fraud case bagepalli
ಕ್ರೈಂ1 min ago

Fraud Case: ಮದುವೆಯಾಗುವುದಾಗಿ ನಂಬಿಸಿ ಪ್ರಿಯಕರ ಎಸ್ಕೇಪ್, ಗರ್ಭಿಣಿಯಿಂದ ಪೊಲೀಸ್‌ಗೆ ದೂರು

Suryakumar Yadav
ಕ್ರೀಡೆ2 mins ago

Suryakumar Yadav: ದಿಲ್ಲಿಯಲ್ಲಿ ತಮಟೆ ಸದ್ದಿಗೆ ಹೆಜ್ಜೆ ಹಾಕಿದ ಸೂರ್ಯಕುಮಾರ್​ ಯಾದವ್​; ವಿಡಿಯೊ ವೈರಲ್​

Kalki 2898 AD records global box office collection
ಟಾಲಿವುಡ್17 mins ago

Kalki 2898 AD: 1000 ಕೋಟಿ ರೂ. ಗಳಿಕೆಯತ್ತ ‘ಕಲ್ಕಿ 2898  ಎಡಿʼ; ಇಲ್ಲಿಯವರೆಗೆ ಕಲೆಕ್ಷನ್‌ ಮಾಡಿದ್ದೆಷ್ಟು?

Dengue Fever In Children
ಆರೋಗ್ಯ21 mins ago

Dengue Fever In Children: ಮಗುವಿನ ಮೈ ಬಿಸಿ ಆಗಿದೆಯೇ? ಡೆಂಗ್ಯು ಜ್ವರದ ಲಕ್ಷಣಗಳನ್ನು ತಿಳಿದುಕೊಳ್ಳಿ

Teachers Transfer
ಶಿಕ್ಷಣ22 mins ago

Teachers Transfer: 10 ವರ್ಷ ಒಂದೇ ಕಡೆ ಇದ್ದ 5,000 ಶಿಕ್ಷಕರ ವರ್ಗಾವಣೆ

Death Penalty
ದೇಶ27 mins ago

Death Penalty: ಸೌದಿ ಅರೇಬಿಯಾದಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿದ್ದ ಕೇರಳದ ವ್ಯಕ್ತಿಗೆ ಬಿಡುಗಡೆ ಭಾಗ್ಯ

board exam
ಪ್ರಮುಖ ಸುದ್ದಿ30 mins ago

Board Exam: ಈ ವರ್ಷ 5, 8, 9ನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ ಇಲ್ಲ: ಶಿಕ್ಷಣ ಇಲಾಖೆ

T20 World Cup 2024
ಕ್ರಿಕೆಟ್35 mins ago

T20 World Cup 2024: ವಿವಾದಾತ್ಮಕ ಕ್ಯಾಚ್​ನ ಮತ್ತೊಂದು ವಿಡಿಯೊ ವೈರಲ್​

Salman Khan shares new pic from for Sikandar
ಸಿನಿಮಾ39 mins ago

Salman Khan: ಸಲ್ಮಾನ್ ಖಾನ್ ಹೊಸ ಲುಕ್‌ ವೈರಲ್‌: ‘ಸಿಕಂದರ್’ಗೆ ಫ್ಯಾನ್ಸ್‌ ಫಿದಾ!

Champions Trophy 2025
ಕ್ರೀಡೆ59 mins ago

Champions Trophy 2025: ಲಾಹೋರ್‌ನಲ್ಲಿ ಭಾರತ-ಪಾಕ್​ ಹೈವೋಲ್ಟೇಜ್​ ಪಂದ್ಯ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ3 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ4 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು4 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ5 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ5 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ6 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ7 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ7 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌