SIIMA 2023; ಅತ್ಯುತ್ತಮ ನಟ, ನಟಿ ಜ್ಯೂ.ಎನ್‌ಟಿಆರ್‌, ಶ್ರೀಲೀಲಾ; ತೆಲುಗು ವಿಜೇತರ ಕಂಪ್ಲೀಟ್‌ ಲಿಸ್ಟ್‌! - Vistara News

South Cinema

SIIMA 2023; ಅತ್ಯುತ್ತಮ ನಟ, ನಟಿ ಜ್ಯೂ.ಎನ್‌ಟಿಆರ್‌, ಶ್ರೀಲೀಲಾ; ತೆಲುಗು ವಿಜೇತರ ಕಂಪ್ಲೀಟ್‌ ಲಿಸ್ಟ್‌!

SIIMA 2023;. ಪ್ರೇಕ್ಷಕರ ನಿರೀಕ್ಷೆಯಂತೆ ಆರ್‌ಆರ್‌ಆರ್‌ ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. ಚಿತ್ರರಂಗದಲ್ಲಿ ರಾಷ್ಟ್ರಪ್ರಶಸ್ತಿ, ಫಿಲ್ಮ್‌ಫೇರ್ ಬಳಿಕ ಪ್ರತಿಷ್ಠಿತ ಪ್ರಶಸ್ತಿ ಎನಿಸಿಕೊಂಡಿದೆ. ಕಳೆದ ವರ್ಷ ಬಿಡುಗಡೆಯಾದ ಸಿನಿಮಾಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

VISTARANEWS.COM


on

J NTR Sreeleela
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸೌತ್‌ ಇಂಡಿಯನ್ ಇಂಟರ್‌ನ್ಯಾಷನಲ್ ಫಿಲ್ಮ್ ಅವಾರ್ಡ್ಸ್ 2023 (SIIMA 2023) ಈವೆಂಟ್ ದುಬೈನಲ್ಲಿ ನಡೆಯುತ್ತಿದೆ. ಸೆಪ್ಟೆಂಬರ್ 15ರಂದು ಕನ್ನಡ ಜತೆಗೆ ತೆಲುಗಿನ ಅತ್ಯುತ್ತಮ ಸಿನಿಮಾಗಳಿಗೆ ಪ್ರಶಸ್ತಿ ವಿತರಿಸಲಾಗಿದೆ. ‘RRR’ ಚಿತ್ರದ ನಟನೆಗಾಗಿ ಜ್ಯೂ. ಎನ್‌ಟಿಆರ್‌ ಅತ್ಯುತ್ತಮ ನಟ ಪ್ರಶಸ್ತಿ ಪಡೆದರು. ನಿರ್ದೇಶಕ ರಾಜಮೌಳಿ, ಸಂಗೀತ ನಿರ್ದೇಶಕ ಎಂ.ಎಂ.ಕೀರವಾಣಿ, ಗೀತರಚನೆಕಾರ ಚಂದ್ರಬೋಸ್ ಮತ್ತು ಛಾಯಾಗ್ರಾಹಕ ಸೆಂಥಿಲ್ ಕುಮಾರ್ ಕೂಡ ಪ್ರಶಸ್ತಿ ಸ್ವೀಕರಿಸಿದರು. ಪ್ರೇಕ್ಷಕರ ನಿರೀಕ್ಷೆಯಂತೆ ಆರ್‌ಆರ್‌ಆರ್‌ ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. ಚಿತ್ರರಂಗದಲ್ಲಿ ರಾಷ್ಟ್ರಪ್ರಶಸ್ತಿ, ಫಿಲ್ಮ್‌ಫೇರ್ ಬಳಿಕ ಪ್ರತಿಷ್ಠಿತ ಪ್ರಶಸ್ತಿ ಎನಿಸಿಕೊಂಡಿದೆ. ಕಳೆದ ವರ್ಷ ಬಿಡುಗಡೆಯಾದ ಸಿನಿಮಾಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

  • ಅತ್ಯುತ್ತಮ ನಟ – ಜ್ಯೂ.ಎನ್‌ಟಿಆರ್‌ (RRR)
  • ಅತ್ಯುತ್ತಮ ನಟಿ – ಶ್ರೀ ಲೀಲಾ (ಧಮಾಕಾ)
  • ಅತ್ಯುತ್ತಮ ನಿರ್ದೇಶಕ – ಎಸ್‌ಎಸ್ ರಾಜಮೌಳಿ (RRR)
  • ಅತ್ಯುತ್ತಮ ಚಿತ್ರ – ಸೀತಾರಾಮಂ (ವೈಜಯಂತಿ ಮೂವೀಸ್ ಅಶ್ವಿನಿದತ್, ಸ್ವಪ್ನಾ ಸಿನಿಮಾ)
  • ಅತ್ಯುತ್ತಮ ಸಂಗೀತ ನಿರ್ದೇಶಕ – ಎಂಎಂ ಕೀರವಾಣಿ (RRR)
  • ಅತ್ಯುತ್ತಮ ಛಾಯಾಗ್ರಹಣ – ಕೆ. ಸೆಂಥಿಲ್ ಕುಮಾರ್ (RRR)
  • ಅತ್ಯುತ್ತಮ ಸಾಹಿತ್ಯ – ಚಂದ್ರ ಬೋಸ್ (RRR)
  • ಅತ್ಯುತ್ತಮ ನಟ (ವಿಮರ್ಶಕರು) – ಅಡಿವಿ ಶೇಶ್ (ಮೇಜರ್)
  • ಅತ್ಯುತ್ತಮ ನಟಿ (ವಿಮರ್ಶಕರು) – ಮೃಣಾಲ್ ಠಾಕೂರ್ (ಸೀತಾರಾಮಂ)
  • ಅತ್ಯುತ್ತಮ ಚೊಚ್ಚಲ ನಿರ್ದೇಶಕ – ವಸಿಷ್ಠ (ಬಿಂಬಿಸಾರ)
  • ಅತ್ಯುತ್ತಮ ಚೊಚ್ಚಲ (ನಾಯಕ) – ಅಶೋಕ್ ಗಲ್ಲಾ (ಹೀರೋ)
  • ಅತ್ಯುತ್ತಮ ಚೊಚ್ಚಲ (ನಾಯಕಿ) – ಮೃಣಾಲ್ ಠಾಕೂರ್ (ಸೀತಾರಾಮಂ ಚಲನಚಿತ್ರ)
  • ಅತ್ಯುತ್ತಮ ಚೊಚ್ಚಲ ನಿರ್ಮಾಪಕರು – ಶರತ್ ಮತ್ತು ಅನುರಾಗ್ (ಮೇಜರ್)
  • ಸೆನ್ಸೇಷನಲ್ ಆಫ್‌ ದಿ ಇಯರ್ – ಕಾರ್ತಿಕೇಯ 2
  • ಅತ್ಯುತ್ತಮ ಪೋಷಕ ನಟ – ರಾಣಾ ದಗ್ಗುಬಾಟಿ (ಭೀಮ್ಲಾ ನಾಯಕ್)
  • ಅತ್ಯುತ್ತಮ ಪೋಷಕ ನಟಿ – ಸಂಗೀತಾ (ಮಸೂದ)
  • ಅತ್ಯುತ್ತಮ ಖಳನಟ – ಸುಹಾಸ್ (ಹಿಟ್- 2)
  • ಅತ್ಯುತ್ತಮ ಹಾಸ್ಯನಟ – ಶ್ರೀನಿವಾಸ ರೆಡ್ಡಿ (ಕಾರ್ತಿಕೇಯ -2)
  • ಫ್ಯಾಷನ್ ಯೂತ್ ಐಕಾನ್ – ಶ್ರುತಿ ಹಾಸನ್
  • ಪ್ರಾಮಿಸಿಂಗ್ ಸ್ಟಾರ್ – ಬೆಲ್ಲಂಕೊಂಡ ಗಣೇಶ್‌

ಇದನ್ನೂ ಓದಿ: SIIMA 2023: ದುಬೈನಲ್ಲಿ ಸೈಮಾ ಅವಾರ್ಡ್‌; ನಾಮಿನೇಟ್‌ ಆದ ಕನ್ನಡ ಸಿನಿಮಾಗಳ ಕಂಪ್ಲೀಟ್‌ ಲಿಸ್ಟ್‌!

ಕನ್ನಡ ನಟಿ ಶ್ರೀಲೀಲಾ ಈಗ ಟಾಲಿವುಡ್‌ನಲ್ಲಿ ಮಿಂಚಿದ್ದಾರೆ. ಸೈಮಾ ಪ್ರಶಸ್ತಿ 11 ನೇ ವರ್ಷಕ್ಕೆ ಕಾಲಿಟ್ಟಿದೆ. ಕನ್ನಡದ ‘ಕಿಸ್’ ಸಿನಿಮಾ ಮೂಲಕ ನಟಿ ಶ್ರೀಲೀಲಾ ಚಿತ್ರರಂಗಕ್ಕೆ ಕಾಲಿಟ್ಟರು. ರಶ್ಮಿಕಾ ಮಂದಣ್ಣ ರೀತಿ ಶ್ರೀಲೀಲಾ ತೆಲುಗಿನಲ್ಲಿ ಹೆಸರು ಮಾಡುತ್ತಿದ್ದಾರೆ. ನಟಿಯ ಕೈಯಲ್ಲಿ ಬರೋಬ್ಬರಿ ಎಂಟು ಸಿನಿಮಾಗಳಿವೆ. ಶ್ರೀಲೀಲಾ ಡ್ಯಾನ್ಸ್‌ ಮತ್ತು ನಟನೆಗೆ ಅಭಿಮಾನಿಗಳು ಫಿದಾ ಆಗುತ್ತಿದ್ದಾರೆ. ಬಹುತೇಕ ಚಿತ್ರಗಳು ಬಿಡುಗಡೆಗೆ ಸಿದ್ಧವಾಗಿದ್ದರೆ, ಇನ್ನು ಕೆಲವು ಚಿತ್ರೀಕರಣ ಹಂತದಲ್ಲಿವೆ. ʻಪೆಲ್ಲಿ ಸಂದಡಿʼ ಚಿತ್ರದ ಮೂಲಕ ತೆಲುಗು ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರು ಶ್ರೀಲೀಲಾ. ಮಾಸ್ ಮಹಾರಾಜ ರವಿತೇಜ್ ಅಭಿನಯದ ʻಧಮಾಕಾʼ ಚಿತ್ರದಲ್ಲಿ ನಟಿಸಿದರು. ಈ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ 100 ಕೋಟಿ ರೂ. ಕಲೆಕ್ಷನ್ ಮಾಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Kalki 2898 AD: ‘ಕಲ್ಕಿ 2898 AD’ ಚಿತ್ರದ ಫೈನಲ್‌ ಟ್ರೇಲರ್‌ ಹೀಗಿದೆ ನೋಡಿ! ಜೂ.27ರಂದು ಚಿತ್ರ ರಿಲೀಸ್

Kalki 2898 AD: ‘ಕಲ್ಕಿ 2898 AD’ ಚಿತ್ರದ ಬಹು ನಿರೀಕ್ಷಿತ ಬಿಡುಗಡೆಯ ಟ್ರೈಲರ್ ಅಂತಿಮವಾಗಿ ಅನಾವರಣಗೊಂಡಿದೆ. ಮೊದಲ ನೋಟವು ಭಾರತೀಯ ಪುರಾಣಗಳಲ್ಲಿ ಬೇರೂರಿರುವ ಅಸಾಧಾರಣ ‘ಕಲ್ಕಿ 2898 AD’ ಸಿನಿಮೀಯ ಬ್ರಹ್ಮಾಂಡವನ್ನು ಪ್ರೇಕ್ಷಕರಿಗೆ ಪರಿಚಯಿಸಿದರೆ, ಇದೀಗ ಬಿಡುಗಡೆ ಆಗಿರುವ ಟ್ರೇಲರ್ ಚಿತ್ರದೊಳಗಿನ ಇನ್ನಷ್ಟ ಆಳವನ್ನು ನೋಡುಗನಿಗೆ ಪರಿಚಯಿಸಿದೆ. ಇದು ಮಹಾಕಾವ್ಯದ ಇನ್ನೊಂದು ಹಂತದ ಬಗ್ಗೆ ಸುಳಿವು ನೀಡುತ್ತದೆ.

VISTARANEWS.COM


on

Kalki 2898 AD Final Trailer Released
Koo

ಬೆಂಗಳೂರು: ವೈಜ್ಞಾನಿಕ ಮತ್ತು ಕಾಲ್ಪನಿಕ ಸಮ್ಮಿಶ್ರಣದ ದೃಶ್ಯಕಾವ್ಯ ‘ಕಲ್ಕಿ 2898 AD’ ಚಿತ್ರದ ಬಹು ನಿರೀಕ್ಷಿತ ಬಿಡುಗಡೆಯ ಟ್ರೈಲರ್ ಅಂತಿಮವಾಗಿ ಅನಾವರಣಗೊಂಡಿದೆ. ಮೊದಲ ನೋಟವು ಭಾರತೀಯ ಪುರಾಣಗಳಲ್ಲಿ ಬೇರೂರಿರುವ ಅಸಾಧಾರಣ ‘ಕಲ್ಕಿ 2898 AD’ (Kalki 2898 AD) ಸಿನಿಮೀಯ ಬ್ರಹ್ಮಾಂಡವನ್ನು ಪ್ರೇಕ್ಷಕರಿಗೆ ಪರಿಚಯಿಸಿದರೆ, ಇದೀಗ ಬಿಡುಗಡೆ ಆಗಿರುವ ಟ್ರೇಲರ್ ಚಿತ್ರದೊಳಗಿನ ಇನ್ನಷ್ಟ ಆಳವನ್ನು ನೋಡುಗನಿಗೆ ಪರಿಚಯಿಸಿದೆ. ಇದು ಮಹಾಕಾವ್ಯದ ಇನ್ನೊಂದು ಹಂತದ ಬಗ್ಗೆ ಸುಳಿವು ನೀಡುತ್ತದೆ.

ಟ್ರೇಲರ್‌ನಲ್ಲಿ ಒಂದಕ್ಕಿಂತ ಒಂದು ಮೀರಿಸುವ ಪಾತ್ರಗಳೇ ಹೈಲೈಟ್.‌ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ‘ಅಶ್ವತ್ಥಾಮ’ ಆಗಿ ಧೈರ್ಯಶಾಲಿ ಸಾಹಸಗಳನ್ನು ಪ್ರದರ್ಶಿಸುತ್ತಾರೆ. ಉಳಗನಾಯಗನ್ ಕಮಲ್ ಹಾಸನ್ ಗುರುತಿಸಲಾಗದ ಇನ್ನೂ ಮಾರಣಾಂತಿಕ ಅವತಾರದಲ್ಲಿ ‘ಯಾಸ್ಕಿನ್’ ಆಗಿ ಕಾಣಿಸಿಕೊಂಡಿದ್ದಾರೆ. ಪ್ರಭಾಸ್ ಭೈರವನಾಗಿ, ದೀಪಿಕಾ ಪಡುಕೋಣೆ ‘ಸುಮತಿ’ ಪಾತ್ರದಲ್ಲಿ ಎದುರಾಗಿದ್ದಾರೆ. ದಿಶಾ ಪಟಾನಿ ‘ರಾಕ್ಸಿ’ ಖಡಕ್‌ ಆಗಿಯೇ ಮಿಂಚು ಹರಿಸಿದ್ದಾರೆ.

ಇದನ್ನೂ ಓದಿ: Rishabh Pant : ವಿಶ್ವ ಕಪ್​ನಲ್ಲಿ ವಿನೂತನ ವಿಕೆಟ್​ಕೀಪಿಂಗ್​​ ದಾಖಲೆ ಬರೆದ ರಿಷಭ್​ ಪಂತ್​

ʼಕಲ್ಕಿ 2898 ADʼ ಚಿತ್ರದ ಟ್ರೇಲರ್‌ನಲ್ಲಿ ಬಗೆಬಗೆ ವಿಭಿನ್ನ ಪ್ರಪಂಚಗಳನ್ನು ಕಾಣಬಹುದು. ಒಂದು ಕಾಶಿ, ಅದರ ಉಳಿವಿಗಾಗಿ ಹೋರಾಡುತ್ತಿರುವ, ಕೊನೆಯದಾಗಿ ಉಳಿದ ನಗರವೆಂದು ಬಿಂಬಿಸಲಾಗಿದೆ. ದೃಶ್ಯ ವೈಭವವೇ ಇಡೀ ಟ್ರೇಲರ್‌ನ ಜೀವಾಳ. ಊಹೆಗೂ ನಿಲುಕದ ಒಂದಷ್ಟು ಅಚ್ಚರಿಗೆ ದೂಡುವ ದೃಶ್ಯಗಳೇ ಇಲ್ಲಿನ ಹೈಲೈಟ್.‌

ಅತ್ಯುತ್ತಮ ಹಿನ್ನೆಲೆ ಸ್ಕೋರ್, ಹೈ ಕ್ಲಾಸ್ VFX ಮತ್ತು ರೋಮಾಂಚನಗೊಳಿಸುವ ದೃಶ್ಯಗಳೊಂದಿಗೆ, ಈ ಸಿನಿಮಾ ಮೂಡಿಬಂದಿದೆ. ತೆಲುಗು, ಹಿಂದಿ, ತಮಿಳು, ಮಲಯಾಳಂ, ಕನ್ನಡ ಮತ್ತು ಇಂಗ್ಲಿಷ್ ಸೇರಿದಂತೆ ಬಹು ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ.

‘ಕಲ್ಕಿ 2898 AD’ ಚಿತ್ರದಲ್ಲಿ ನಿರ್ದೇಶಕ ನಾಗ್ ಅಶ್ವಿನ್ ಅವರ ದೂರದೃಷ್ಟಿಯ ವಿಧಾನವು ಭಾರತೀಯ ಸಿನಿಮಾವನ್ನು ಅದರ ನೆಲದ ದೃಶ್ಯಗಳು ಮತ್ತು ಕಥೆ ಹೇಳುವ ಮೂಲಕ ಮರುವ್ಯಾಖ್ಯಾನಿಸುವ ಭರವಸೆ ನೀಡುತ್ತದೆ. ‘ಕಲ್ಕಿ 2898 AD’ ನಿಜವಾದ ಪ್ಯಾನ್-ಇಂಡಿಯನ್ ಸಿನಿಮಾ ಎನಿಸಿಕೊಂಡಿದೆ.

ಇದನ್ನೂ ಓದಿ: Pralhad Joshi: ಕಿಮ್ಸ್‌ಗೆ ಅತ್ಯಾಧುನಿಕ “ವೈರಾಣು ಸಂಶೋಧನೆ, ರೋಗ ನಿರ್ಣಯ ಪ್ರಯೋಗಾಲಯ” ಮಂಜೂರು

ತಾರಾಗಣದಲ್ಲಿ ಅಮಿತಾಬ್ ಬಚ್ಚನ್, ಕಮಲ್ ಹಾಸನ್, ಪ್ರಭಾಸ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ಪ್ರಮುಖ ಪಾತ್ರಗಳಲ್ಲಿದ್ದಾರೆ. ನಾಗ್ ಅಶ್ವಿನ್ ನಿರ್ದೇಶಿಸಿದ್ದಾರೆ ಮತ್ತು ವೈಜಯಂತಿ ಮೂವೀಸ್ ಬಂಡವಾಳ ಹೂಡಿದೆ. ಈ ಬಹುಭಾಷಾ, ಪುರಾಣ- ಪ್ರೇರಿತ ವೈಜ್ಞಾನಿಕ ಕಥೆಯುಳ್ಳ ಸಿನಿಮಾ, ಜೂನ್ 27ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ‌

Continue Reading

ಸ್ಯಾಂಡಲ್ ವುಡ್

Kannada New Movie: ಡಾಲಿ-ಪರಮ್ ‘ಕೋಟಿ’ಗೆ ಪ್ರೇಕ್ಷಕರ ಜೈಕಾರ; ಕೊಂಡಾಡಿದ ಪ್ರತಾಪ್ ಸಿಂಹ!

Kannada New Movie: ಕೋಟಿ ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್‌ ಮತ್ತು ಖಳನಾಯಕನಾಗಿ ರಮೇಶ್ ಇಂದಿರಾ ಇದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ತಾರಾ, ಸರ್ದಾರ್‌ ಸತ್ಯ ಜತೆಗೆ ಪೃಥ್ವಿ ಶಾಮನೂರು, ತನುಜಾ ವೆಂಕಟೇಶ್, ಅಭಿಷೇಕ್ ಶ್ರೀಕಾಂತ್, ವಿಜಯ್ ಶೋಭರಾಜ್ ಪವೂರ್ ಮುಂತಾದವರು ಅಭಿನಯಿಸಿದ್ದಾರೆ.

VISTARANEWS.COM


on

Kannada New Movie kotee watched Bt prathap simha and likes
Koo

ಬೆಂಗಳೂರು: ಪರಮ್ ಚೊಚ್ಚಲ ಪ್ರಯತ್ನದ `ಕೋಟಿ’ ಸಿನಿಮಾಗೆ ಭರಪೂರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕಳೆದ ವಾರ ತೆರೆಗೆ ಬಂದ ಚಿತ್ರವನ್ನು ಫ್ಯಾಮಿಲಿ ಆಡಿಯನ್ಸ್ ಫರ್ಫೆಕ್ಟ್​ ಫ್ಯಾಮಿಲಿ ಎಂಟರ್‌ಟೈನರ್ ಅಂತಾ ಹಾಡಿ ಹೊಗಳುತ್ತಿದ್ದಾರೆ. ಯಶಸ್ವಿ ಎರಡನೇ ವಾರವೂ ಅದ್ಭುತ ಪ್ರದರ್ಶನ ಕಾಣುತ್ತಿರುವ ಕೋಟಿ ಸಿನಿಮಾ ಎಲ್ಲಾ ವರ್ಗದ ಪ್ರೇಕ್ಷಕರಿಂದ ಚಪ್ಪಾಳೆ ಪಡೆಯುತ್ತಿದೆ.

ಕಾಮನ್ ಮ್ಯಾನ್ ಕಥೆಯಾಗಿರುವ ಕೋಟಿ ಸಿನಿಮಾದಲ್ಲಿ ಧನಂಜಯ್, ರಮೇಶ್ ಇಂದಿರಾ, ರಂಗಾಯಣ ರಘು, ತಾರಾ ನಟನೆ, ರೋಚಕ ಕ್ಲೈಮ್ಯಾಕ್ಸ್ ‌ಮತ್ತು ದುನಿಯಾ ವಿಜಯ್ ವಿಶೇಷ ಪಾತ್ರದ ಮೂಲಕ ಪ್ರೇಕ್ಷಕರಿಗೆ ಕಿಕ್ ಕೊಡುತ್ತದೆ. ಕೋಟಿ ಸಿನಿಮಾ ರಾಜ್ಯಾದ್ಯಂತ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದ್ದು, ಮೈಸೂರಿನಲ್ಲಿ ಜನಪ್ರಿಯ ರಾಜಕಾರಣಿ ಪ್ರತಾಪ್ ಸಿಂಹ ಚಿತ್ರ ವೀಕ್ಷಣೆ ಮಾಡಿ ಕೋಟಿ ಕಥೆಯನ್ನು ಮನಸಾರೆ ಕೊಂಡಾಡಿದ್ದಾರೆ.

ಇದನ್ನೂ ಓದಿ: Duniya Vijay: ʻಭೀಮʼ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದ ದುನಿಯಾ ವಿಜಯ್‌; ಸ್ಟಾರ್‌ ಹಿರೋ ಸಿನಿಮಾ ಜತೆ ಕ್ಲ್ಯಾಶ್‌?

ಚಿತ್ರದಲ್ಲಿ ಐದು ಹಾಡುಗಳಿದ್ದು, ವಾಸುಕಿ ವೈಭವ್‌ ರಾಗ ಸಂಯೋಜಿಸಿದ್ದಾರೆ. ಈ ಹಾಡುಗಳಿಗೆ ಯೋಗರಾಜ್‌ ಭಟ್‌ ಮತ್ತು ವಾಸುಕಿ ವೈಭವ್‌ ಸಾಹಿತ್ಯ ರಚಿಸಿದ್ದಾರೆ. ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನು 777 ಚಾರ್ಲಿ ಖ್ಯಾತಿಯ ನೊಬಿನ್‌ ಪೌಲ್‌ ಹೊತ್ತಿದ್ದಾರೆ. ಕಾಂತಾರ ಸಿನಿಮಾದ ಕೆಲಸಕ್ಕೆ ಪ್ರಶಂಸೆಗಳಿಸಿದ್ದ ಪ್ರತೀಕ್‌ ಶೆಟ್ಟಿ ಅವರು‌ ಕೋಟಿಯ ಸಂಕಲನಕಾರರಾದರೆ, ಟೆಲಿವಿಷನ್‌ನ ಖ್ಯಾತ ಛಾಯಾಗ್ರಾಹಕ ಅರುಣ್ ಅವರು ಈ ಸಿನಿಮಾದ ಕ್ಯಾಮರಾಮನ್. ಚಿತ್ರವನ್ನು ಜಿಯೋ ಸ್ಟುಡಿಯೋಸ್ ನಿರ್ಮಾಣ ಮಾಡಿದ್ದು, ಪರಮ್‌ ಅವರು ಬರೆದು ನಿರ್ದೇಶಿಸಿದ್ದಾರೆ. ಕೋಟಿ ರಾಜ್ಯಾದ್ಯಂತ 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಳ್ಳುತ್ತಿದೆ.

ವಿಶೇಷ ಪಾತ್ರದಲ್ಲಿ ದುನಿಯಾ ವಿಜಯ್

‘ಸಲಗ’ ಮೂಲಕ ತಮ್ಮ ವೃತ್ತಿಜೀವನಕ್ಕೆ ಹೊಸ ಬಣ್ಣ ತುಂಬಿರುವ ದುನಿಯಾ ವಿಜಯ್ ‘ಕೋಟಿ’ ಸಿನಿಮಾದಲ್ಲಿ ಒಂದು ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರ ನೋಡಿದ ಪ್ರೇಕ್ಷಕರು ಅಚ್ಚರಿಯಿಂದಲೇ ಈ ವಿಶೇಷ ಪಾತ್ರವನ್ನು ಮೆಚ್ಚಿದ್ದಾರೆ. ಈ ಹಿಂದೆ ವಿಜಯ್ ಅವರ ‘ಸಲಗ’ ಸಿನೆಮಾದಲ್ಲಿ ಧನಂಜಯ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು.

‘ದುನಿಯಾ ವಿಜಯ್ ಅವರ ನಟನೆ ಮತ್ತು ಆ ಒಂದು ಸನ್ನಿವೇಶ ಪ್ರೇಕ್ಷಕರನ್ನು ಭಾವುಕರನ್ನಾಗಿ ಮಾಡುತ್ತದೆ’ ಎಂದು ಪ್ರೇಕ್ಷಕರು ಸೋಷಿಯಲ್ ಮೀಡಿಯಾಗಳಲ್ಲಿ ದುನಿಯಾ ವಿಜಯ್ ಕ್ಯಾಮಿಯೋಗೆ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಕೋಟಿ ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್‌ ಮತ್ತು ಖಳನಾಯಕನಾಗಿ ರಮೇಶ್ ಇಂದಿರಾ ಇದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ತಾರಾ, ಸರ್ದಾರ್‌ ಸತ್ಯ ಜತೆಗೆ ಪೃಥ್ವಿ ಶಾಮನೂರು, ತನುಜಾ ವೆಂಕಟೇಶ್, ಅಭಿಷೇಕ್ ಶ್ರೀಕಾಂತ್, ವಿಜಯ್ ಶೋಭರಾಜ್ ಪವೂರ್ ಮುಂತಾದವರು ಅಭಿನಯಿಸಿದ್ದಾರೆ.

Continue Reading

ಸ್ಯಾಂಡಲ್ ವುಡ್

Aradhana Ram: ಅಂತಾರಾಷ್ಟ್ರೀಯ ಯೋಗ ದಿನಾಚರಣೆ; ಕಾಟೇರ ನಟಿ ಆರಾಧಾನ ರಾಮ್ ಯೋಗಾಭ್ಯಾಸ

Aradhana Ram: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ‘ಕಾಟೇರ’ ಸಿನಿಮಾ ನಟಿ ಆರಾಧಾನಾ ರಾಮ್ ಯೋಗಾಭ್ಯಾಸದಲ್ಲಿ ಭಾಗಿಯಾಗಿದ್ದರು. ಇಂದಿರಾ ನಗರದ ಕ್ಲಬ್‌ನಲ್ಲಿ ಅಥಾಯೋಗ್ ಲಿವಿಂಗ್ ಆಯೋಜಿಸಿದ ಯೋಗ ಕಾರ್ಯಕ್ರಮದಲ್ಲಿ ಭಾಗಿಯಾಗಿ ಆರಾಧನಾ ಎಲ್ಲರ ಜೊತೆಯಾಗಿ ಯೋಗ ಮಾಡಿದು. ಸುಮಾರು ಒಂದು‌ ಗಂಟೆಗಳ‌ ಕಾಲ ಆರಾಧಾನಾ ಯೋಗ‌ ಮಾಡಿದರು. ಇದೇ ಸಮಯದಲ್ಲಿ ‘ಯೋಗ ಕೇವಲ ದೇಹಕ್ಕೆ ಮಾತ್ರವಲ್ಲ ಮನಸ್ಸಿಗೂ ಶಾಂತಿ ನೀಡುತ್ತೆ ಪ್ರತಿಯೊಬ್ಬರು ಯೋಗ ಮಾಡಬೇಕು’ ಎಂದರು.

VISTARANEWS.COM


on

Aradhana Ram yoga kaatera Heroine
Koo

ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ʻಕಾಟೇರʼ ಸಿನಿಮಾ ನಟಿ ಆರಾಧಾನ ರಾಮ್ ಯೋಗಾಭ್ಯಾಸದಲ್ಲಿ ಭಾಗಿ ಆದರು.

ಇಂದಿರಾ ನಗರದ ಕ್ಲಬ್‌ನಲ್ಲಿ ಅಥಾಯೋಗ್ ಲಿವಿಂಗ್ ಆಯೋಜಿಸಿದ ಯೋಗ ಕಾರ್ಯಕ್ರಮದಲ್ಲಿ ಭಾಗಿಯಾಗಿ ಎಲ್ಲರ ಜೊತೆಯಾಗಿ ಯೋಗ ಮಾಡಿದರು.

ಇದನ್ನೂ ಓದಿ: Duniya Vijay: ʻಭೀಮʼ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದ ದುನಿಯಾ ವಿಜಯ್‌; ಸ್ಟಾರ್‌ ಹಿರೋ ಸಿನಿಮಾ ಜತೆ ಕ್ಲ್ಯಾಶ್‌?

ಸುಮಾರು ಒಂದು‌ ಗಂಟೆಗಳ‌ ಕಾಲ ಆರಾಧಾನ ಯೋಗ‌ ಮಾಡಿದರು..ಇದೇ ಸಮಯದಲ್ಲಿ ಯೋಗ ಕೇವಲ ದೇಹಕ್ಕೆ ಮಾತ್ರವಲ್ಲ ಮನಸ್ಸಿಗೂ ಶಾಂತಿ ನೀಡುತ್ತದೆ. ಪ್ರತಿಯೊಬ್ಬರು ಯೋಗ ಮಾಡಬೇಕು ಎಂದರು.

ಇಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ. ನಟಿಯರು, ರಾಜಕಾರಣಿಗಳು ಯೋಗ ಮಾಡುವ ಫೋಟೋ ಹಾಗೂ ವಿಡಿಯೋಗಳನ್ನು ಶೇರ್ ಮಾಡಿದ್ದಾರೆ. 

Continue Reading

ಸ್ಯಾಂಡಲ್ ವುಡ್

Duniya Vijay: ʻಭೀಮʼ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದ ದುನಿಯಾ ವಿಜಯ್‌; ಸ್ಟಾರ್‌ ಹಿರೋ ಸಿನಿಮಾ ಜತೆ ಕ್ಲ್ಯಾಶ್‌?

Duniya Vijay: `ಭೀಮ’ ಸಿನಿಮಾದ ಬಗ್ಗೆ ಹೇಳುವುದಾದರೆ ದುನಿಯಾ ವಿಜಯ್ ನಾಯಕನಾಗಿ ನಟಿಸಿದ್ದರೆ, ನಾಯಕಿಯಾಗಿ ರಂಗಭೂಮಿ ಕಲಾವಿದೆ ಅಶ್ವಿನಿ ಕಾಣಿಸಿಕೊಂಡಿದ್ದಾರೆ. ಕೃಷ್ಣ ಸಾರ್ಥಕ್ ಈ ಸಿನಿಮಾಗೆ ಬಂಡವಾಳ ಹೂಡಿಸಿದ್ದಾರೆ. ಸಲಗ ಬಳಿಕ ದುನಿಯ ವಿಜಯ್ ಆ್ಯಕ್ಷನ್ ಕಟ್ ಹೇಳುತ್ತಿರುವ 2ನೇ ಸಿನಿಮಾ ಇದಾಗಿದೆ. ಸಲಗ ಸಕ್ಸೆಸ್‌ನಲ್ಲಿರುವ ವಿಜಿ “ಭೀಮʼ ಮೂಲಕ ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.

VISTARANEWS.COM


on

Duniya Vijay Bheema Release Date announce
Koo

ಬೆಂಗಳೂರು: ದುನಿಯಾ ವಿಜಯ್ (Duniya Vijay) ʻಭೀಮʼ ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದ್ದಾರೆ. ಈ ಸಿನಿಮಾ ಆಗಸ್ಟ್ 9ರಂದು ರಿಲೀಸ್ ಆಗಲಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಈ ಮೊದಲು ‘ಸಲಗ’ ಹಾಗೂ ಸುದೀಪ್ ನಟನೆಯ ‘ಕೋಟಿಗೊಬ್ಬ 3’ ಚಿತ್ರ ರಿಲೀಸ್ ಆಗಿತ್ತು. ಇತ್ತೀಚೆಗೆ ಮಾಧ್ಯಮಗಳ ಜತೆ ಮಾತನಾಡಿದ್ದ ಸುದೀಪ್ ಅವರು, ‘ಮ್ಯಾಕ್ಸ್’ ಚಿತ್ರ ಆಗಸ್ಟ್​ನಲ್ಲಿ ರಿಲೀಸ್ ಆಗಲಿದೆ ಎಂದಿದ್ದರು. ಹೀಗಾಗಿ, ಮತ್ತೊಮ್ಮೆ ದುನಿಯಾ ವಿಜಯ್ ಹಾಗೂ ಸುದೀಪ್ ಸಿನಿಮಾ ಮುಖಾಮುಖಿ ಆಗಲಿದೆ ಎನ್ನಲಾಗುತ್ತಿದೆ.

`ಭೀಮ’ ಸಿನಿಮಾದ ಬಗ್ಗೆ ಹೇಳುವುದಾದರೆ ದುನಿಯಾ ವಿಜಯ್ ನಾಯಕನಾಗಿ ನಟಿಸಿದ್ದರೆ, ನಾಯಕಿಯಾಗಿ ರಂಗಭೂಮಿ ಕಲಾವಿದೆ ಅಶ್ವಿನಿ ಕಾಣಿಸಿಕೊಂಡಿದ್ದಾರೆ. ಕೃಷ್ಣ ಸಾರ್ಥಕ್ ಈ ಸಿನಿಮಾಗೆ ಬಂಡವಾಳ ಹೂಡಿಸಿದ್ದಾರೆ. ಸಲಗ ಬಳಿಕ ದುನಿಯ ವಿಜಯ್ ಆ್ಯಕ್ಷನ್ ಕಟ್ ಹೇಳುತ್ತಿರುವ 2ನೇ ಸಿನಿಮಾ ಇದಾಗಿದೆ. ಸಲಗ ಸಕ್ಸೆಸ್‌ನಲ್ಲಿರುವ ವಿಜಿ “ಭೀಮʼ ಮೂಲಕ ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.

ರಂಗಾಯಣ ರಘು, ಅಚ್ಯುತ್ ಕುಮಾರ್, ಸುಧಿ ಕಾಕ್ರೋಚ್, ಕಲ್ಯಾಣಿ, ಅಶ್ವಿನಿ ಮತ್ತು ಪ್ರಿಯಾ ಶಠಮರ್ಷಣ ಮುಖ್ಯ ಭೂಮಿಕೆಯಲ್ಲಿದ್ದಾರೆ. ಶಿವಸೇನಾ ಛಾಯಾಗ್ರಹಣ, ಚರಣ್ ರಾಜ್ ಸಂಗೀತ ,ಮಾಸ್ತಿ ಡೈಲಾಗ್ಸ್ ಚಿತ್ರಕ್ಕಿದೆ. ದೀಪು ಎಸ್ ಕುಮಾರ್ ಸಂಕಲನ, ಚೇತನ್ ಡಿಸೋಜಾ, ವಿನೋದ್, ಗೌತಮ್ ಸಾಹಸ, ಧನು ನೃತ್ಯ ಭೀಮನಿಗಿದೆ.
ಕೃಷ್ಣ ಸಾರ್ಥಕ್, ಜಗದೀಶ್ ಗೌಡ ನಿರ್ಮಾಣ ಮಾಡಿರುವ ʼಭೀಮʼ ಚಿತ್ರರಂಗದಲ್ಲಿ ದೊಡ್ಡ ನಿರೀಕ್ಷೆಯನ್ನ ಹುಟ್ಟಿಸಿದೆ.

ಇದನ್ನೂ ಓದಿ: Dolly Dhananjay: ಮೈಸೂರಿನಲ್ಲಿ ಡಾಲಿ ಧನಂಜಯ್‌ ಅಭಿನಯದ ‘ಕೋಟಿ’ ಸಿನಿಮಾ ವೀಕ್ಷಿಸಲಿರುವ ಪ್ರತಾಪ್ ಸಿಂಹ!

ಅಂದಹಾಗೆ ಭೀಮ ಚಿತ್ರಕ್ಕೆ ಚರಣ್ ರಾಜ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಚರಣ್ ರಾಜ್ ಸಂಗೀತ, ಕವಿರಾಜ್ ಸಾಹಿತ್ಯ ಹಾಗೂ ದುನಿಯಾ ವಿಜಯ್ ನಟನೆ. ಈ ಮೂವರ ಕಾಂಬಿನೇಷನ್‌ನಲ್ಲಿ ಬರ್ತಿರುವ ಹಾಡಿನ ಮೇಲೆ ನಿರೀಕ್ಷೆ ಈಗಾಗಲೇ ಹೆಚ್ಚಾಗಿದ್ದು, ತೆರೆಮೇಲೆ ನೋಡಲು ಅಭಿಮಾನಿಗಳು ಸಹ ಕಾತರರಾಗಿದ್ದಾರೆ.

Continue Reading
Advertisement
Kalki 2898 AD Final Trailer Released
ಕರ್ನಾಟಕ1 hour ago

Kalki 2898 AD: ‘ಕಲ್ಕಿ 2898 AD’ ಚಿತ್ರದ ಫೈನಲ್‌ ಟ್ರೇಲರ್‌ ಹೀಗಿದೆ ನೋಡಿ! ಜೂ.27ರಂದು ಚಿತ್ರ ರಿಲೀಸ್

Sonakshi Sinha
ಬಾಲಿವುಡ್2 hours ago

Sonakshi Sinha: ಸೋನಾಕ್ಷಿ ಸಿನ್ಹಾ-ಜಹೀರ್‌ ಇಕ್ಬಾಲ್‌ ಮದುವೆ; ಮೆಹಂದಿ ಶಾಸ್ತ್ರದ ವೇಳೆ ಪತಿ ಜತೆ ನಟಿ ಮಿಂಚಿಂಗ್!

T20 World Cup 2024
ಪ್ರಮುಖ ಸುದ್ದಿ2 hours ago

T20 World Cup 2024 : ಇಂಗ್ಲೆಂಡ್ ವಿರುದ್ಧ ದಕ್ಷಿಣ ಆಫ್ರಿಕಾ ತಂಡಕ್ಕೆ 7 ರನ್ ಜಯ

Suryakumar Yadav
ಪ್ರಮುಖ ಸುದ್ದಿ2 hours ago

Suryakumar Yadav : ವಿಶ್ವದ ಬೆಸ್ಟ್​ ಟಿ20 ಆಟಗಾರ ಸೂರ್ಯಕುಮಾರ್​ ಯಾದವ್​ ಎಂದ ಅಂಬಾಟಿ ರಾಯುಡು

Central Government monitoring wheat price stability: Union Minister Pralhad Joshi
ಕರ್ನಾಟಕ3 hours ago

Pralhad Joshi: ಗೋಧಿ ಬೆಲೆ ಸ್ಥಿರತೆಗೆ ಕೇಂದ್ರ ಸರ್ಕಾರದ ಕ್ರಮ; ಪ್ರಲ್ಹಾದ್‌ ಜೋಶಿ

regional Laboratory sanctioned to Kims Hubballi
ಕರ್ನಾಟಕ3 hours ago

Pralhad Joshi: ಕಿಮ್ಸ್‌ಗೆ ಅತ್ಯಾಧುನಿಕ “ವೈರಾಣು ಸಂಶೋಧನೆ, ರೋಗ ನಿರ್ಣಯ ಪ್ರಯೋಗಾಲಯ” ಮಂಜೂರು

Hinduja Family
ವಿದೇಶ3 hours ago

Hinduja Family: ಮನೆಗೆಲಸದವರ ಮೇಲೆ ದೌರ್ಜನ್ಯ; ಹಿಂದುಜಾ ಕುಟುಂಬದ ನಾಲ್ವರಿಗೆ 4.5 ವರ್ಷ ಜೈಲು!

Gautam Gambhir
ಪ್ರಮುಖ ಸುದ್ದಿ3 hours ago

Gautam Gambhir : ಕೋಚ್​ ಹುದ್ದೆ ಅಂತಿಮವಾಗಿಲ್ಲ; ವರದಿಗಳಿಗೆ ವ್ಯತಿರಿಕ್ತ ಹೇಳಿಕೆ ನೀಡಿದ ಗಂಭೀರ್​!

Rishabh Pant
ಪ್ರಮುಖ ಸುದ್ದಿ4 hours ago

Rishabh Pant : ವಿಶ್ವ ಕಪ್​ನಲ್ಲಿ ವಿನೂತನ ವಿಕೆಟ್​ಕೀಪಿಂಗ್​​ ದಾಖಲೆ ಬರೆದ ರಿಷಭ್​ ಪಂತ್​

Parking Complex
ಬೆಂಗಳೂರು4 hours ago

Parking Complex: ಬೆಂಗಳೂರಿನಲ್ಲಿ ಸುಸಜ್ಜಿತ ಪಾರ್ಕಿಂಗ್‌ ಕಾಂಪ್ಲೆಕ್ಸ್;‌ ಶುಲ್ಕದ ಕುರಿತ ಮಾಹಿತಿ ಇಲ್ಲಿದೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ7 hours ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ13 hours ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 day ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು5 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು5 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ5 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ5 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ6 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ6 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌