ಸಿನಿಮಾ
Rishab Shetty: ಹರಿಯುವ ನೀರು, ಮಗುವಿನ ನಗುವಿನ ಧ್ವನಿ, ಬೇಕಾದವರೊಂದಿಗೆ ಕಳೆಯುವ ಕ್ಷಣಗಳು… ಫೋಟೊ ಹಂಚಿಕೊಂಡ ರಕ್ಷಿತ್
ರಕ್ಷಿತ್ ಕೈಯಲ್ಲಿ ರಿಷಬ್ ಶೆಟ್ಟಿ ಮುದ್ದು ಮಗಳು ಕುಳಿತಿದ್ದಾಳೆ. ಅವಳೊಂದಿಗೆ ಸಂತಸದ ಕ್ಷಣ ಅನುಭವಿಸಿದ ಸಿಂಪಲ್ ಸ್ಟಾರ್. ದುಬೈನಿಂದ ಬಂದ ಬಳಿಕ ಸ್ನೇಹಿತರ ಜತೆ ರಿಲ್ಯಾಕ್ಸ್ ಮೂಡ್ನಲ್ಲಿ ರಿಷಬ್ (Rishab Shetty ) ಕಾಣಿಸಿಕೊಂಡಿದ್ದಾರೆ.
ಸಿನಿಮಾ
Ishita Dutta : ತಾಯಿಯಾಗುತ್ತಿದ್ದಾರೆ ʼರಾಜ ರಾಜೇಂದ್ರʼ ನಟಿ ಇಶಿತಾ; ಬೇಬಿ ಬಂಪ್ ಫೋಟೊ ವೈರಲ್
ರಾಜ ರಾಜೇಂದ್ರ ಸಿನಿಮಾದ ನಟಿ ಇಶಿತಾ ದತ್ತಾ ಅವರು ಮೊದಲನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಅವರ ಬೇಬಿ ಬಂಪ್ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮುಂಬೈ: ಕನ್ನಡದ ರಾಜ ರಾಜೇಂದ್ರ ಸಿನಿಮಾದಲ್ಲಿ ನಟಿಸಿ, ಮಿಂಚಿದ್ದ ನಟಿ ಇಶಿತಾ ದತ್ತಾ. ಹಿಂದಿಯ ಹಲವಾರು ಸಿನಿಮಾ, ಧಾರಾವಾಹಿಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ನಟಿ ಇದೀಗ ಮೊದಲನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ತಮ್ಮ ಬೇಬಿ ಬಂಪ್ ಫೋಟೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಎಲ್ಲೆಡೆ ವೈರಲ್ ಆಗಿದೆ.
ಇದನ್ನೂ ಓದಿ: Kannada New Movie: ʻದಿಲ್ ದಾರ್’ ಎಂದ ಕೆ.ಮಂಜು ಪುತ್ರ: ಶ್ರೇಯಸ್ ಹೊಸ ಸಿನಿಮಾಗೆ ಕ್ರೇಜಿಸ್ಟಾರ್ ರವಿಚಂದ್ರನ್ ಸಾಥ್!
ನಟಿ ಸಮುದ್ರದ ತಡದಲ್ಲಿ ಪತಿಯೊಂದಿಗಿರುವ ಫೋಟೊವನ್ನು ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಕಡಲ ತೀರದಲ್ಲಿ ಸೂರ್ಯಾಸ್ತ ಆಗುವ ಸಮಯದಲ್ಲಿನ ಫೋಟೊ ಅದಾಗಿದೆ. ಬೇಬಿ ಬಂಪ್ಗೆ ಪತಿ ಮುತ್ತನ್ನಿಡುತ್ತಿರುವ ಫೋಟೊವನ್ನು ಹಂಚಿಕೊಂಡಿರುವ ನಟಿ, “ಬೇಬಿ ಆನ್ ಬೋರ್ಡ್” ಎಂದು ಬರೆದುಕೊಂಡಿದ್ದಾರೆ.
ನಟಿಯ ಈ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ವೈರಲ್ ಆಗಿದೆ. ಅಭಿಮಾನಿಗಳೆಲ್ಲರೂ ನಟಿಗೆ ಶುಭ ಹಾರೈಸಲಾರಂಭಿಸಿದ್ದಾರೆ.
ಇಶಿತಾ 2015ರಲ್ಲಿ ತೆರೆ ಕಂಡ ರಾಜ ರಾಜೇಂದ್ರ ಸಿನಿಮಾದಲ್ಲಿ ನಟ ಶರಣ್ಗೆ ಜೋಡಿಯಾಗಿ ಕಾಣಿಸಿಕೊಂಡಿದ್ದರು. ಹಿಂದಿಯಲ್ಲಿ ಅವರು ದೃಶ್ಯಂ, ದೃಶ್ಯಂ 2 ಸಿನಿಮಾ ಸೇರಿ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಹಾಗೆಯೇ ಹಲವಾರು ಧಾರಾವಾಹಿಗಳಲ್ಲೂ ನಟಿಸಿ ಜನರಿಗೆ ಹತ್ತಿರವಾಗಿದ್ದಾರೆ. ನಟಿ 2017ರಲ್ಲಿ ವತ್ಸಲ ಶೇಠ್ ಅವರನ್ನು ಪ್ರೀತಿಸಿ ಮದುವೆಯಾಗಿದ್ದಾರೆ.
South Cinema
Kannada New Movie: ʻದಿಲ್ ದಾರ್’ ಎಂದ ಕೆ.ಮಂಜು ಪುತ್ರ: ಶ್ರೇಯಸ್ ಹೊಸ ಸಿನಿಮಾಗೆ ಕ್ರೇಜಿಸ್ಟಾರ್ ರವಿಚಂದ್ರನ್ ಸಾಥ್!
ಈ ಚಿತ್ರದ (Kannada New Movie) ಮುಹೂರ್ತ ಸಮಾರಂಭ ಮಾರ್ಚ್ 31ರಂದು ಬೆಂಗಳೂರಿನ ಶ್ರೀಕಂಠೇಶ್ವರ ದೇಗುಲದಲ್ಲಿ ಅದ್ಧೂರಿಯಾಗಿ ನೆರವೇರಿದೆ. ಕ್ರೇಜಿಸ್ಟಾರ್ ರವಿಚಂದ್ರನ್ ಸಿನಿಮಾಗೆ ಕ್ಲ್ಯಾಪ್ ಮಾಡಿ ಟೈಟಲ್ ಅನಾವರಣ ಮಾಡಿದರು. ನಾಗತಿಹಳ್ಳಿ ಚಂದ್ರಶೇಖರ್ ಕ್ಯಾಮೆರಾಗೆ ಚಾಲನೆ ನೀಡಿ ಚಿತ್ರತಂಡಕ್ಕೆ ಶುಭಾಶಯ ಕೋರಿದರು.
ಬೆಂಗಳೂರು; ರಾಣಾ ಸಿನಿಮಾ ಬಳಿಕ ಶ್ರೇಯಸ್ ಕೆ ಮಂಜು ಹೊಸ ಸಿನಿಮಾಕ್ಕೆ (Kannada New Movie) ದಿಲ್ ದಾರ್ ಎಂದು ಹೊಸ ಟೈಟಲ್ ಫಿಕ್ಸ್ ಮಾಡಲಾಗಿದೆ. ಈ ಚಿತ್ರದ ಮುಹೂರ್ತ ಸಮಾರಂಭ ಮಾರ್ಚ್ 31ರಂದು ಬೆಂಗಳೂರಿನ ಶ್ರೀಕಂಠೇಶ್ವರ ದೇಗುಲದಲ್ಲಿ ಅದ್ಧೂರಿಯಾಗಿ ನೆರವೇರಿದೆ. ಕ್ರೇಜಿಸ್ಟಾರ್ ರವಿಚಂದ್ರನ್ ಸಿನಿಮಾಗೆ ಕ್ಲ್ಯಾಪ್ ಮಾಡಿ ಟೈಟಲ್ ಅನಾವರಣ ಮಾಡಿದರು. ನಾಗತಿಹಳ್ಳಿ ಚಂದ್ರಶೇಖರ್ ಕ್ಯಾಮೆರಾಗೆ ಚಾಲನೆ ನೀಡಿ ಚಿತ್ರತಂಡಕ್ಕೆ ಶುಭಾಶಯ ಕೋರಿದರು.
ಟೈಟಲ್ ರಿವೀಲ್ ಮಾಡಿ ಮಾತಾನಾಡಿದ ಕ್ರೇಜಿಸ್ಟಾರ್ ರವಿಚಂದ್ರನ್, ʻʻಸಿನಿಮಾ ಮಾಡಬೇಕು ಅಂದರೆ ದಿಲ್ ಬೇಕು. ನಟ ಶ್ರೇಯಸ್ ಮಂಜು ಹಾಗೂ ಇಡೀ ಚಿತ್ರತಂಡಕ್ಕೆ ಶುಭಾಶಯʼʼ ತಿಳಿಸಿದರು.
ದಿಲ್ ದಾರ್ ನಿರ್ದೇಶಕ ಮಧು ಗೌಡ ಮಾತನಾಡಿ, ʻʻಈ ಸಿನಿಮಾ ಕೇವಲ ನನ್ನಿಂದ ಅಲ್ಲ. ನನ್ನ ತಂಡದ ಸಪೋರ್ಟ್ ನಿಂದ ಸಾಧ್ಯವಾಗಿದೆ. ಕತೆ ರೆಡಿ ಮಾಡಿದಾಗ ದಿಲ್ ದಾರ್ ಟೈಟಲ್ ಫಿಕ್ಸ್ ಮಾಡಿದಾಗ. ಯಾರು ಇದ್ದಾರೆ ದಿಲ್ ದಾರ್ ಎಂದು ಯೋಚಿಸಿದಾಗ ಸಿಕ್ಕಿದ್ದ ಶ್ರೇಯಸ್ ಮಂಜು ನೆನಪಾದರುʼʼ ಎಂದರು.
ಇದನ್ನೂ ಓದಿ: Kannada New Movie : ಶ್ರೇಯಸ್ ಕೆ ಮಂಜು ಹೊಸ ಸಿನಿಮಾ ಅನೌನ್ಸ್; ಪಡ್ಡೆಹುಲಿಗೆ ಪ್ರಿಯಾಂಕಾ ಕುಮಾರ್ ಜೋಡಿ
ಏಷ್ಯಾನೆಟ್ ಮೂವೀ ಬ್ಯಾನರ್ ನಡಿ ಆರ್ ಸಂತೋಷ್ ಕುಮಾರ್(ಎಸ್ ವಿಟಿ) ಚಿತ್ರ ನಿರ್ಮಾಣ ಮಾಡ್ತಿದ್ದು, ಅರ್ಜುನ್ ಜನ್ಯ ಸಂಗೀತ, ಗಗನ್ ಗೌಡ ಛಾಯಾಗ್ರಹಣ, ರವಿವರ್ಮಾ ಸಾಹಸ, ರಾಜೇಶ್ ಸಾಲುಂಡಿ ಸಂಭಾಷಣೆ ಚಿತ್ರಕ್ಕಿದೆ. ದುರ್ಗ, ನೀಲಿ ಸೀರಿಯಲ್ ಸೇರಿದಂತೆ ಒಂದಷ್ಟು ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ಅನುಭವವಿರುವ ಮಧು ಗೌಡ ಗಂಗೂರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ.
South Cinema
Shah Rukh Khan: ಶಾರುಖ್ ಅಭಿಮಾನಿಗಳ ಅಭಿಮಾನದ ಜವಾನ್ ಪೋಸ್ಟರ್ ವೈರಲ್! ಟ್ರೆಂಡ್ ಆಗಿದ್ಯಾಕೆ?
ಸೋಷಿಯಲ್ ಮೀಡಿಯಾದಲ್ಲಿ ಜವಾನ್ ಟ್ರೆಂಡ್ ಆಗುತ್ತಿದೆ. ಇದೀಗ ಜವಾನ್ ಚಿತ್ರೀಕರಣ ಮುಗಿದಿದೆಯಾ ಎಂದು ಅಭಿಮಾನಿಗಳು ಕಮೆಂಟ್ ಮೂಲಕ ಕೇಳುತ್ತಿದ್ದಾರೆ. ಅಷ್ಟೇ ಅಲ್ಲದೇ ತಾವೇ ಪೋಸ್ಟರ್ (Shahrukh Khan) ತಯಾರಿಸಿ ಅಭಿಮಾನ ವ್ಯಕ್ತಪಡಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಸಿನಿಮಾ ದೃಶ್ಯಗಳು ಆನ್ಲೈನ್ನಲ್ಲಿ ಸೋರಿಕೆ ಆಗಿತ್ತು.
ಬೆಂಗಳೂರು: ಬಾಲಿವುಡ್ ನಟ ಶಾರುಖ್ ಖಾನ್ (Shahrukh Khan) ಅಭಿನಯದ ʻಪಠಾಣ್ʼ ಸಿನಿಮಾ ಸಕ್ಸೆಸ್ ನಂತರ ಇದೀಗ ಶಾರುಖ್ ಅಭಿಮಾನಗಳ ಚಿತ್ತ ʻಜವಾನ್ʼ ಕಡೆ ಹೋಗಿದೆ. ನಿರ್ದೇಶಕ ಅಟ್ಲೀ ಜತೆಗೆ ಕೈ ಜೋಡಿಸುತ್ತಿದ್ದಾರೆ ನಟ ಶಾರುಖ್. ಜವಾನ್ ಜೂನ್ 2 ರಂದು ಬಿಡುಗಡೆಯಾಗಲಿದೆ. ಈಗಾಗಲೇ ಸಿನಿಮಾದ ಚಿತ್ರೀಕರಣ ಮುಗಿದಿದೆ ಎಂದು ವರದಿಯಾಗಿದೆ. ಇದೀಗ ಶಾರುಖ್ ಅಭಿಮಾನಿಗಳು ತಾವೇ ತಯಾರಿಸದ ಫೋಟೊಗಳನ್ನು ಪೋಸ್ಟ್ ಮಾಡಲು ಆರಂಭಿಸಿದ್ದಾರೆ. ಅಭಿಮಾನಿಗಳ ಅಭಿಮಾನದ ಪೋಸ್ಟರ್ಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಸೋಷಿಯಲ್ ಮೀಡಿಯಾದಲ್ಲಿ ಜವಾನ್ ಟ್ರೆಂಡ್ ಆಗುತ್ತಿದೆ. ಇದೀಗ ಜವಾನ್ ಚಿತ್ರೀಕರಣ ಮುಗಿದಿದೆಯಾ ಎಂದು ಅಭಿಮಾನಿಗಳು ಕಮೆಂಟ್ ಮೂಲಕ ಕೇಳುತ್ತಿದ್ದಾರೆ. ಅಷ್ಟೇ ಅಲ್ಲದೇ ತಾವೇ ಪೋಸ್ಟರ್ ತಯಾರಿಸಿ ಅಭಿಮಾನ ವ್ಯಕ್ತಪಡಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಸಿನಿಮಾ ದೃಶ್ಯಗಳು ಆನ್ಲೈನ್ನಲ್ಲಿ ಸೋರಿಕೆ ಆಗಿತ್ತು. ಶೂಟಿಂಗ್ ಸೆಟ್ನಲ್ಲಿ ಶಾರುಖ್ ನಿಭಾಯಿಸುತ್ತಿರುವ ಆ್ಯಕ್ಷನ್ ದೃಶ್ಯಗಳು ಲೀಕ್ ಆಗಿತ್ತು. ಇದಾದ ಬಳಿಕ ಶಾರುಖ್ ಖಾನ್ ಅವರ ಅಭಿಮಾನಿಗಳ ಸಂಘಗಳು ಗ್ಲಿಂಪ್ಸ್ಗಳನ್ನು ಸೋರಿಕೆ ಮಾಡದಂತೆ ನೆಟಿಜನ್ಗಳಿಗೆ ವಿನಂತಿಸಿದೆ.
ಅಭಿಮಾನಿಗಳ ಸಂಘ ವಿನಂತಿಸಿದ ಪೋಸ್ಟ್
ಜವಾನ್ ಸಿನಿಮಾದಲ್ಲಿ ಶಾರುಖ್ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದು ಕಮರ್ಷಿಯಲ್ ಎಂಟರ್ಟೈನರ್ ಎಂದು ಹೇಳಲಾಗಿದೆ. ಗುಪ್ತಚರ ಅಧಿಕಾರಿ ಮತ್ತು ಕಳ್ಳನಾಗಿ ಶಾರುಖ್ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದಲ್ಲಿ ನಯನತಾರಾ, ಸನ್ಯಾ ಮಲ್ಹೋತ್ರಾ, ಸುನಿಲ್ ಗ್ರೋವರ್ ಸೇರಿದಂತೆ ಇತರರು ಇದ್ದಾರೆ.
ಇದನ್ನೂ ಓದಿ; Shahrukh Khan: ಶಾರುಖ್ ಅಭಿನಯದ ʻಜವಾನ್ʼ ಸಿನಿಮಾ ದೃಶ್ಯ ಲೀಕ್
ಅಭಿಮಾನಿಗಳ ಪೋಸ್ಟ್
ರಾಮ್ ಚರಣ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಿದೆ. ಜವಾನ್ ಸಿನಿಮಾದಲ್ಲಿ ಮುಖ್ಯ ಪಾತ್ರವೊಂದರಲ್ಲಿ ನಟಿಸುವುದಕ್ಕೆ ಟಾಲಿವುಡ್ನ ಅಲ್ಲು ಅರ್ಜುನ್ ಅವರಿಗೆ ಸಿನಿ ತಂಡ ಕೇಳಿಕೊಂಡಿತ್ತು. ಆದರೆ ಅಲ್ಲು ಅದಕ್ಕೆ ಒಪ್ಪಿಲ್ಲ ಎಂದು ಹೇಳಲಾಗಿದೆ. ಹಾಗೆಯೇ ದಳಪತಿ ವಿಜಯ್ ಅವರ ಬಳಿಯೂ ಜವಾನ್ ಸಿನಿಮಾದಲ್ಲಿ ನಟಿಸುವುದಕ್ಕೆ ಕೇಳಿಕೊಳ್ಳಲಾಗಿತ್ತು.
ಅಲ್ಲು ಮತ್ತು ದಳಪತಿ ವಿಜಯ್ ಇಬ್ಬರೂ ಬೇರೆ ಬೇರೆ ಸಿನಿಮಾಗಳ ಚಿತ್ರೀಕರಣದಲ್ಲಿ ಬಿಜಿ ಇರುವ ಹಿನ್ನೆಲೆಯಲ್ಲಿ ಜವಾನ್ ಸಿನಿಮಾಕ್ಕೆ ಒಪ್ಪಿಕೊಂಡಿಲ್ಲ ಎಂದು ಹೇಳಲಾಗಿದೆ.ಖ್ಯಾತ ನಟ ಶಿವರಾಜ್ ಕುಮಾರ್ ಅವರೂ ಈ ಚಿತ್ರದಲ್ಲಿ ವಿಶೇಷ ಪಾತ್ರವೊಂದರಲ್ಲಿ ನಟಿಸುತ್ತಾರೆ ಎನ್ನಲಾಗುತ್ತಿದೆ.
South Cinema
Priyanka Chopra: ಸೋದರಸಂಬಂಧಿ ಪರಿಣಿತಿ ಚೋಪ್ರಾ ಮದುವೆಗೆ ಬಂದಿದ್ದಾರಾ ಪ್ರಿಯಾಂಕಾ ಚೋಪ್ರಾ?
ಕುಟುಂಬ (Priyanka Chopra) ಸಮೇತರಾಗಿ ನಟಿ ಬರುತ್ತಿದ್ದಂತೆ ಸೋದರಸಂಬಂಧಿ ಪರಿಣಿತಿ ಚೋಪ್ರಾ ಅವರ ವದಂತಿಯ ಗೆಳೆಯ, ಎಎಪಿ ಸದಸ್ಯ ರಾಘವ್ ಚಡ್ಡಾ ಅವರನ್ನು ಭೇಟಿಯಾಗಲಿದ್ದಾರೆ ಎಂಬ ಗಾಸಿಪ್ಗಳು ಹರಿದಾಡಿವೆ. ಕೆಲವು ದಿನಗಳಿಂದ, ಪರಿಣಿತಿ ಮತ್ತು ರಾಘವ್ ಮದುವೆಯಾಗಲಿದ್ದಾರೆ ಎಂಬ ವದಂತಿಗಳು ಇವೆ.
ಬೆಂಗಳೂರು: ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಮಾರ್ಚ್ 31ರ ಮಧ್ಯಾಹ್ನ ನಿಕ್ ಜೋನಾಸ್ ಮತ್ತು ಮಗಳು ಮಾಲತಿ ಮೇರಿ ಅವರೊಂದಿಗೆ ಮುಂಬೈಗೆ ಬಂದಿಳಿದರು. ಕುಟುಂಬ ಸಮೇತರಾಗಿ ನಟಿ ಬರುತ್ತಿದ್ದಂತೆ ಸೋದರಸಂಬಂಧಿ ಪರಿಣಿತಿ ಚೋಪ್ರಾ ಅವರ ವದಂತಿಯ ಗೆಳೆಯ, ಎಎಪಿ ಸದಸ್ಯ ರಾಘವ್ ಚಡ್ಡಾ ಅವರನ್ನು ಭೇಟಿಯಾಗಲಿದ್ದಾರೆ ಎಂಬ ಗಾಸಿಪ್ಗಳು ಹರಿದಾಡಿವೆ. ಕೆಲವು ದಿನಗಳಿಂದ, ಪರಿಣಿತಿ ಮತ್ತು ರಾಘವ್ ಮದುವೆಯಾಗಲಿದ್ದಾರೆ ಎಂಬ ವದಂತಿಗಳು ಇವೆ.
ದಂಪತಿ ಕುಟುಂಬಗಳು ಶೀಘ್ರದಲ್ಲೇ ರೋಕಾ ಸಮಾರಂಭವನ್ನು ಆಯೋಜಿಸಬಹುದು ಮತ್ತು ಮದುವೆಯ ತಯಾರಿಯಲ್ಲಿದೆ ಎಂದು ವದಂತಿಗಳಿವೆ. ಇದೀಗ ಪ್ರಿಯಾಂಕ ಭಾರತಕ್ಕೆ ಬರುತ್ತಿದ್ದಂತೆ ಮತ್ತಷ್ಟು ಚರ್ಚೆಗಳು ಆಗುತ್ತಿವೆ. ಪರಿಣಿತಿ ಮತ್ತು ಪ್ರಿಯಾಂಕಾ ಇನ್ನೂ ಈ ಬಗ್ಗೆ ಯಾವುದೇ ಮಾಹಿತಿ ಹಂಚಿಕೊಂಡಿಲ್ಲ. ಇಂಡಿಯಾ ಟುಡೇ ವರದಿಯು ಪ್ರಿಯಾಂಕಾ ಅವರು ರಾಘವ್ ಅವರನ್ನು ಭೇಟಿಯಾಗಬಹುದು ಎಂದು ಹೇಳಿಕೊಂಡಿದೆ.
ʻʻಸಿಟಾಡೆಲ್ ಚಿತ್ರದ ಪ್ರಚಾರಕ್ಕಾಗಿ ಪ್ರಿಯಾಂಕಾ ಶೀಘ್ರದಲ್ಲೇ ಭಾರತಕ್ಕೆ ಬರಲಿದ್ದಾರೆ. ಕೊಲ್ಲಿಯಲ್ಲಿ ಹಿಂತಿರುಗಿ, ನಂತರ ತನ್ನ ಸೋದರಸಂಬಂಧಿ ಪರಿಣಿತಿ ಚೋಪ್ರಾರನ್ನು ಭೇಟಿಯಾಗಲಿದ್ದಾರೆ. ನಟಿ ಪರಿಣಿತಿ ಅವರ ಸ್ನೇಹಿತ ರಾಘವ್ ಚಡ್ಡಾ ಅವರನ್ನು ಭೇಟಿಯಾಗಬಹುದು. ಅವರ ಕುಟುಂಬದವರ ಸಮ್ಮುಖದಲ್ಲಿ ಸಣ್ಣ ಸಮಾರಂಭ ನಡೆಯುವ ಸಾಧ್ಯತೆ ಇದೆʼʼಎಂದು ವರದಿಯಾಗಿದೆ.
ಇದನ್ನೂ ಓದಿ: Priyanka Chopra: ಆರ್ಆರ್ಆರ್ ತಮಿಳು ಸಿನಿಮಾ ಎಂದ ಪ್ರಿಯಾಂಕಾ ಚೋಪ್ರಾ: ಟ್ರೋಲ್ಗೆ ಗುರಿಯಾದ ನಟಿ
ರಾಜ್ಯಸಭಾ ಸಂಸದ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ರಾಘವ್ ಚಡ್ಡಾ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಬಾಲಿವುಡ್ನಲ್ಲಿ ವೇಗವಾಗಿ ಹರಡಿದೆ. ರಾಘವ್ ಚಡ್ಡಾ ಮತ್ತು ಪರಿಣಿತಿ ಚೋಪ್ರಾ ಮಾರ್ಚ್ 29ರ ರಾತ್ರಿ ದೆಹಲಿ ವಿಮಾನ ನಿಲ್ದಾಣದಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಪರಿಣಿತಿ ಚೋಪ್ರಾ, ಇಮ್ತಿಯಾಜ್ ಅಲಿ ನಿರ್ದೇಶನದ ‘ಚಮ್ಕಿಲಾ’ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
-
ದೇಶ17 hours ago
Chenab Bridge | ಐಫೆಲ್ ಟವರ್ಗಿಂತಲೂ ಎತ್ತರದ ರೈಲ್ವೇ ಸೇತುವೆ ಜಮ್ಮು ಕಾಶ್ಮೀರದಲ್ಲಿ ಲೋಕಾರ್ಪಣೆಗೆ ಸಿದ್ಧ
-
ಕರ್ನಾಟಕ17 hours ago
SSLC Exam 2023: ಇಂದಿನಿಂದ SSLC ಎಕ್ಸಾಂ; ಪರೀಕ್ಷೆ ಬರೆಯಲಿರುವ 8.42 ಲಕ್ಷ ವಿದ್ಯಾರ್ಥಿಗಳು
-
ಗ್ಯಾಜೆಟ್ಸ್7 hours ago
Aadhaar Update: ಆನ್ಲೈನ್ನಲ್ಲಿ ಆಧಾರ್ ಅಪ್ಡೇಟ್ ಉಚಿತ; ಈ ಸೌಲಭ್ಯ ಜೂನ್ 14ರವರೆಗೆ ಮಾತ್ರ
-
ಅಂಕಣ18 hours ago
ಗೋ ಸಂಪತ್ತು: ಆಹಾರವಾಗಿ ಮಾತ್ರವಲ್ಲ, ಔಷಧವಾಗಿಯೂ ಮಜ್ಜಿಗೆಗೆ ಮಹತ್ವವಿದೆ!
-
ಅಂಕಣ18 hours ago
Brand story : ಚೀನಾದ ಇ-ಕಾಮರ್ಸ್ ದಿಗ್ಗಜ ಅಲಿಬಾಬಾ, 6 ಕಂಪನಿಗಳಾಗಿ ವಿಭಜನೆಯಾಗುತ್ತಿರುವುದೇಕೆ?
-
ಕರ್ನಾಟಕ8 hours ago
B.Y. Vijayendra: ಯಾವುದೇ ಕಾರಣಕ್ಕೆ ವರುಣಾದಿಂದ ವಿಜಯೇಂದ್ರ ಸ್ಪರ್ಧಿಸಲ್ಲ: ಗೊಂದಲಕ್ಕೆ ತೆರೆಯೆಳೆದ ಯಡಿಯೂರಪ್ಪ
-
ದೇಶ9 hours ago
Gujarat High Court: ಪಿಎಂ ಮೋದಿ ಪದವಿ ಸರ್ಟಿಫಿಕೇಟ್ ಕೇಳಿದ್ದ ದಿಲ್ಲಿ ಸಿಎಂ ಕೇಜ್ರಿವಾಲ್ಗೆ 25 ಸಾವಿರ ರೂ. ದಂಡ!
-
ಕರ್ನಾಟಕ13 hours ago
Banglore-Mysore Expressway: ದಶಪಥ ಹೆದ್ದಾರಿ ಮತ್ತೆ ದುಬಾರಿ; ನಾಳೆಯಿಂದಲೇ ಟೋಲ್ ದರದಲ್ಲಿ ಏರಿಕೆ, ಯಾವುದಕ್ಕೆ ಎಷ್ಟು?