Rishab Shetty: ಹರಿಯುವ ನೀರು, ಮಗುವಿನ ನಗುವಿನ ಧ್ವನಿ, ಬೇಕಾದವರೊಂದಿಗೆ ಕಳೆಯುವ ಕ್ಷಣಗಳು… ಫೋಟೊ ಹಂಚಿಕೊಂಡ ರಕ್ಷಿತ್‌ Vistara News
Connect with us

ಸಿನಿಮಾ

Rishab Shetty: ಹರಿಯುವ ನೀರು, ಮಗುವಿನ ನಗುವಿನ ಧ್ವನಿ, ಬೇಕಾದವರೊಂದಿಗೆ ಕಳೆಯುವ ಕ್ಷಣಗಳು… ಫೋಟೊ ಹಂಚಿಕೊಂಡ ರಕ್ಷಿತ್‌

ರಕ್ಷಿತ್ ಕೈಯಲ್ಲಿ ರಿಷಬ್ ಶೆಟ್ಟಿ ಮುದ್ದು ಮಗಳು ಕುಳಿತಿದ್ದಾಳೆ. ಅವಳೊಂದಿಗೆ ಸಂತಸದ ಕ್ಷಣ ಅನುಭವಿಸಿದ ಸಿಂಪಲ್‌ ಸ್ಟಾರ್‌. ದುಬೈನಿಂದ ಬಂದ ಬಳಿಕ ಸ್ನೇಹಿತರ ಜತೆ ರಿಲ್ಯಾಕ್ಸ್‌ ಮೂಡ್‌ನಲ್ಲಿ ರಿಷಬ್‌ (Rishab Shetty ) ಕಾಣಿಸಿಕೊಂಡಿದ್ದಾರೆ.

VISTARANEWS.COM


on

Rakshit shetty shares relax images with Rishab Shetty
Koo
ಕ್ಷಣ ಕ್ಷಣದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಫೇಸ್ ಬುಕ್ ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ವೈವಿಧ್ಯಮಯ ಸುದ್ದಿಗಳಿಗಾಗಿ ವಿಸ್ತಾರ ನ್ಯೂಸ್ ಟ್ವಿಟರ್ ಪೇಜ್ ಫಾಲೋ ಮಾಡಿ

ಸಿನಿಮಾ

Ishita Dutta : ತಾಯಿಯಾಗುತ್ತಿದ್ದಾರೆ ʼರಾಜ ರಾಜೇಂದ್ರʼ ನಟಿ ಇಶಿತಾ; ಬೇಬಿ ಬಂಪ್‌ ಫೋಟೊ ವೈರಲ್‌

ರಾಜ ರಾಜೇಂದ್ರ ಸಿನಿಮಾದ ನಟಿ ಇಶಿತಾ ದತ್ತಾ ಅವರು ಮೊದಲನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಅವರ ಬೇಬಿ ಬಂಪ್‌ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

VISTARANEWS.COM


on

Edited by

Koo

ಮುಂಬೈ: ಕನ್ನಡದ ರಾಜ ರಾಜೇಂದ್ರ ಸಿನಿಮಾದಲ್ಲಿ ನಟಿಸಿ, ಮಿಂಚಿದ್ದ ನಟಿ ಇಶಿತಾ ದತ್ತಾ. ಹಿಂದಿಯ ಹಲವಾರು ಸಿನಿಮಾ, ಧಾರಾವಾಹಿಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ನಟಿ ಇದೀಗ ಮೊದಲನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ತಮ್ಮ ಬೇಬಿ ಬಂಪ್‌ ಫೋಟೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಎಲ್ಲೆಡೆ ವೈರಲ್‌ ಆಗಿದೆ.

ಇದನ್ನೂ ಓದಿ: Kannada New Movie: ʻದಿಲ್ ದಾರ್’ ಎಂದ ಕೆ.ಮಂಜು ಪುತ್ರ: ಶ್ರೇಯಸ್ ಹೊಸ ಸಿನಿಮಾಗೆ ಕ್ರೇಜಿಸ್ಟಾರ್ ರವಿಚಂದ್ರನ್ ಸಾಥ್!

ನಟಿ ಸಮುದ್ರದ ತಡದಲ್ಲಿ ಪತಿಯೊಂದಿಗಿರುವ ಫೋಟೊವನ್ನು ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಕಡಲ ತೀರದಲ್ಲಿ ಸೂರ್ಯಾಸ್ತ ಆಗುವ ಸಮಯದಲ್ಲಿನ ಫೋಟೊ ಅದಾಗಿದೆ. ಬೇಬಿ ಬಂಪ್‌ಗೆ ಪತಿ ಮುತ್ತನ್ನಿಡುತ್ತಿರುವ ಫೋಟೊವನ್ನು ಹಂಚಿಕೊಂಡಿರುವ ನಟಿ, “ಬೇಬಿ ಆನ್‌ ಬೋರ್ಡ್‌” ಎಂದು ಬರೆದುಕೊಂಡಿದ್ದಾರೆ.
ನಟಿಯ ಈ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ವೈರಲ್‌ ಆಗಿದೆ. ಅಭಿಮಾನಿಗಳೆಲ್ಲರೂ ನಟಿಗೆ ಶುಭ ಹಾರೈಸಲಾರಂಭಿಸಿದ್ದಾರೆ.


ಇಶಿತಾ 2015ರಲ್ಲಿ ತೆರೆ ಕಂಡ ರಾಜ ರಾಜೇಂದ್ರ ಸಿನಿಮಾದಲ್ಲಿ ನಟ ಶರಣ್‌ಗೆ ಜೋಡಿಯಾಗಿ ಕಾಣಿಸಿಕೊಂಡಿದ್ದರು. ಹಿಂದಿಯಲ್ಲಿ ಅವರು ದೃಶ್ಯಂ, ದೃಶ್ಯಂ 2 ಸಿನಿಮಾ ಸೇರಿ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಹಾಗೆಯೇ ಹಲವಾರು ಧಾರಾವಾಹಿಗಳಲ್ಲೂ ನಟಿಸಿ ಜನರಿಗೆ ಹತ್ತಿರವಾಗಿದ್ದಾರೆ. ನಟಿ 2017ರಲ್ಲಿ ವತ್ಸಲ ಶೇಠ್‌ ಅವರನ್ನು ಪ್ರೀತಿಸಿ ಮದುವೆಯಾಗಿದ್ದಾರೆ.

Continue Reading

South Cinema

Kannada New Movie: ʻದಿಲ್ ದಾರ್’ ಎಂದ ಕೆ.ಮಂಜು ಪುತ್ರ: ಶ್ರೇಯಸ್ ಹೊಸ ಸಿನಿಮಾಗೆ ಕ್ರೇಜಿಸ್ಟಾರ್ ರವಿಚಂದ್ರನ್ ಸಾಥ್!

ಈ ಚಿತ್ರದ (Kannada New Movie) ಮುಹೂರ್ತ ಸಮಾರಂಭ ಮಾರ್ಚ್‌ 31ರಂದು ಬೆಂಗಳೂರಿನ ಶ್ರೀಕಂಠೇಶ್ವರ ದೇಗುಲದಲ್ಲಿ ಅದ್ಧೂರಿಯಾಗಿ ನೆರವೇರಿದೆ. ಕ್ರೇಜಿಸ್ಟಾರ್ ರವಿಚಂದ್ರನ್ ಸಿನಿಮಾಗೆ ಕ್ಲ್ಯಾಪ್ ಮಾಡಿ ಟೈಟಲ್ ಅನಾವರಣ ಮಾಡಿದರು. ನಾಗತಿಹಳ್ಳಿ ಚಂದ್ರಶೇಖರ್ ಕ್ಯಾಮೆರಾಗೆ ಚಾಲನೆ ನೀಡಿ ಚಿತ್ರತಂಡಕ್ಕೆ ಶುಭಾಶಯ ಕೋರಿದರು.

VISTARANEWS.COM


on

Edited by

Kannada New Movie
Koo

ಬೆಂಗಳೂರು; ರಾಣಾ ಸಿನಿಮಾ ಬಳಿಕ ಶ್ರೇಯಸ್ ಕೆ ಮಂಜು ಹೊಸ ಸಿನಿಮಾಕ್ಕೆ (Kannada New Movie) ದಿಲ್ ದಾರ್ ಎಂದು ಹೊಸ ಟೈಟಲ್ ಫಿಕ್ಸ್ ಮಾಡಲಾಗಿದೆ. ಈ ಚಿತ್ರದ ಮುಹೂರ್ತ ಸಮಾರಂಭ ಮಾರ್ಚ್‌ 31ರಂದು ಬೆಂಗಳೂರಿನ ಶ್ರೀಕಂಠೇಶ್ವರ ದೇಗುಲದಲ್ಲಿ ಅದ್ಧೂರಿಯಾಗಿ ನೆರವೇರಿದೆ. ಕ್ರೇಜಿಸ್ಟಾರ್ ರವಿಚಂದ್ರನ್ ಸಿನಿಮಾಗೆ ಕ್ಲ್ಯಾಪ್ ಮಾಡಿ ಟೈಟಲ್ ಅನಾವರಣ ಮಾಡಿದರು. ನಾಗತಿಹಳ್ಳಿ ಚಂದ್ರಶೇಖರ್ ಕ್ಯಾಮೆರಾಗೆ ಚಾಲನೆ ನೀಡಿ ಚಿತ್ರತಂಡಕ್ಕೆ ಶುಭಾಶಯ ಕೋರಿದರು.

ಟೈಟಲ್ ರಿವೀಲ್ ಮಾಡಿ ಮಾತಾನಾಡಿದ ಕ್ರೇಜಿಸ್ಟಾರ್ ರವಿಚಂದ್ರನ್, ʻʻಸಿನಿಮಾ ಮಾಡಬೇಕು ಅಂದರೆ ದಿಲ್ ಬೇಕು. ನಟ ಶ್ರೇಯಸ್ ಮಂಜು ಹಾಗೂ ಇಡೀ ಚಿತ್ರತಂಡಕ್ಕೆ ಶುಭಾಶಯʼʼ ತಿಳಿಸಿದರು.

ದಿಲ್ ದಾರ್ ನಿರ್ದೇಶಕ ಮಧು ಗೌಡ ಮಾತನಾಡಿ, ʻʻಈ ಸಿನಿಮಾ ಕೇವಲ ನನ್ನಿಂದ ಅಲ್ಲ. ನನ್ನ ತಂಡದ ಸಪೋರ್ಟ್ ನಿಂದ ಸಾಧ್ಯವಾಗಿದೆ. ಕತೆ ರೆಡಿ ಮಾಡಿದಾಗ ದಿಲ್ ದಾರ್ ಟೈಟಲ್ ಫಿಕ್ಸ್ ಮಾಡಿದಾಗ. ಯಾರು ಇದ್ದಾರೆ ದಿಲ್ ದಾರ್ ಎಂದು ಯೋಚಿಸಿದಾಗ ಸಿಕ್ಕಿದ್ದ ಶ್ರೇಯಸ್ ಮಂಜು ನೆನಪಾದರುʼʼ ಎಂದರು.

ಇದನ್ನೂ ಓದಿ: Kannada New Movie : ಶ್ರೇಯಸ್‌ ಕೆ ಮಂಜು ಹೊಸ ಸಿನಿಮಾ ಅನೌನ್ಸ್; ಪಡ್ಡೆಹುಲಿಗೆ ಪ್ರಿಯಾಂಕಾ ಕುಮಾರ್‌ ಜೋಡಿ

ಏಷ್ಯಾನೆಟ್ ಮೂವೀ ಬ್ಯಾನರ್ ನಡಿ ಆರ್ ಸಂತೋಷ್ ಕುಮಾರ್(ಎಸ್ ವಿಟಿ) ಚಿತ್ರ ನಿರ್ಮಾಣ ಮಾಡ್ತಿದ್ದು, ಅರ್ಜುನ್ ಜನ್ಯ ಸಂಗೀತ, ಗಗನ್ ಗೌಡ ಛಾಯಾಗ್ರಹಣ, ರವಿವರ್ಮಾ ಸಾಹಸ, ರಾಜೇಶ್ ಸಾಲುಂಡಿ ಸಂಭಾಷಣೆ ಚಿತ್ರಕ್ಕಿದೆ. ದುರ್ಗ, ನೀಲಿ ಸೀರಿಯಲ್ ಸೇರಿದಂತೆ ಒಂದಷ್ಟು ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ಅನುಭವವಿರುವ ಮಧು ಗೌಡ ಗಂಗೂರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ.

Continue Reading

South Cinema

Shah Rukh Khan: ಶಾರುಖ್‌ ಅಭಿಮಾನಿಗಳ ಅಭಿಮಾನದ ಜವಾನ್‌ ಪೋಸ್ಟರ್‌ ವೈರಲ್‌! ಟ್ರೆಂಡ್‌ ಆಗಿದ್ಯಾಕೆ?

ಸೋಷಿಯಲ್‌ ಮೀಡಿಯಾದಲ್ಲಿ ಜವಾನ್‌ ಟ್ರೆಂಡ್‌ ಆಗುತ್ತಿದೆ. ಇದೀಗ ಜವಾನ್‌ ಚಿತ್ರೀಕರಣ ಮುಗಿದಿದೆಯಾ ಎಂದು ಅಭಿಮಾನಿಗಳು ಕಮೆಂಟ್‌ ಮೂಲಕ ಕೇಳುತ್ತಿದ್ದಾರೆ. ಅಷ್ಟೇ ಅಲ್ಲದೇ ತಾವೇ ಪೋಸ್ಟರ್‌ (Shahrukh Khan) ತಯಾರಿಸಿ ಅಭಿಮಾನ ವ್ಯಕ್ತಪಡಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಸಿನಿಮಾ ದೃಶ್ಯಗಳು ಆನ್‌ಲೈನ್‌ನಲ್ಲಿ ಸೋರಿಕೆ ಆಗಿತ್ತು.

VISTARANEWS.COM


on

Edited by

Fans celebrate Shah Rukh Khans Jawan with posters
Koo

ಬೆಂಗಳೂರು: ಬಾಲಿವುಡ್‌ ನಟ ಶಾರುಖ್‌ ಖಾನ್‌ (Shahrukh Khan) ಅಭಿನಯದ ʻಪಠಾಣ್‌ʼ ಸಿನಿಮಾ ಸಕ್ಸೆಸ್‌ ನಂತರ ಇದೀಗ ಶಾರುಖ್‌ ಅಭಿಮಾನಗಳ ಚಿತ್ತ ʻಜವಾನ್‌ʼ ಕಡೆ ಹೋಗಿದೆ. ನಿರ್ದೇಶಕ ಅಟ್ಲೀ ಜತೆಗೆ ಕೈ ಜೋಡಿಸುತ್ತಿದ್ದಾರೆ ನಟ ಶಾರುಖ್‌. ಜವಾನ್ ಜೂನ್ 2 ರಂದು ಬಿಡುಗಡೆಯಾಗಲಿದೆ. ಈಗಾಗಲೇ ಸಿನಿಮಾದ ಚಿತ್ರೀಕರಣ ಮುಗಿದಿದೆ ಎಂದು ವರದಿಯಾಗಿದೆ. ಇದೀಗ ಶಾರುಖ್‌ ಅಭಿಮಾನಿಗಳು ತಾವೇ ತಯಾರಿಸದ ಫೋಟೊಗಳನ್ನು ಪೋಸ್ಟ್‌ ಮಾಡಲು ಆರಂಭಿಸಿದ್ದಾರೆ. ಅಭಿಮಾನಿಗಳ ಅಭಿಮಾನದ ಪೋಸ್ಟರ್‌ಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಸೋಷಿಯಲ್‌ ಮೀಡಿಯಾದಲ್ಲಿ ಜವಾನ್‌ ಟ್ರೆಂಡ್‌ ಆಗುತ್ತಿದೆ. ಇದೀಗ ಜವಾನ್‌ ಚಿತ್ರೀಕರಣ ಮುಗಿದಿದೆಯಾ ಎಂದು ಅಭಿಮಾನಿಗಳು ಕಮೆಂಟ್‌ ಮೂಲಕ ಕೇಳುತ್ತಿದ್ದಾರೆ. ಅಷ್ಟೇ ಅಲ್ಲದೇ ತಾವೇ ಪೋಸ್ಟರ್‌ ತಯಾರಿಸಿ ಅಭಿಮಾನ ವ್ಯಕ್ತಪಡಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಸಿನಿಮಾ ದೃಶ್ಯಗಳು ಆನ್‌ಲೈನ್‌ನಲ್ಲಿ ಸೋರಿಕೆ ಆಗಿತ್ತು. ಶೂಟಿಂಗ್‌ ಸೆಟ್‌ನಲ್ಲಿ ಶಾರುಖ್‌ ನಿಭಾಯಿಸುತ್ತಿರುವ ಆ್ಯಕ್ಷನ್‌ ದೃಶ್ಯಗಳು ಲೀಕ್‌ ಆಗಿತ್ತು. ಇದಾದ ಬಳಿಕ ಶಾರುಖ್ ಖಾನ್ ಅವರ ಅಭಿಮಾನಿಗಳ ಸಂಘಗಳು ಗ್ಲಿಂಪ್ಸ್‌ಗಳನ್ನು ಸೋರಿಕೆ ಮಾಡದಂತೆ ನೆಟಿಜನ್‌ಗಳಿಗೆ ವಿನಂತಿಸಿದೆ.

ಅಭಿಮಾನಿಗಳ ಸಂಘ ವಿನಂತಿಸಿದ ಪೋಸ್ಟ್‌

ಜವಾನ್‌ ಸಿನಿಮಾದಲ್ಲಿ ಶಾರುಖ್‌ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದು ಕಮರ್ಷಿಯಲ್ ಎಂಟರ್‌ಟೈನರ್ ಎಂದು ಹೇಳಲಾಗಿದೆ. ಗುಪ್ತಚರ ಅಧಿಕಾರಿ ಮತ್ತು ಕಳ್ಳನಾಗಿ ಶಾರುಖ್‌ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದಲ್ಲಿ ನಯನತಾರಾ, ಸನ್ಯಾ ಮಲ್ಹೋತ್ರಾ, ಸುನಿಲ್ ಗ್ರೋವರ್ ಸೇರಿದಂತೆ ಇತರರು ಇದ್ದಾರೆ.

ಇದನ್ನೂ ಓದಿ; Shahrukh Khan: ಶಾರುಖ್‌ ಅಭಿನಯದ ʻಜವಾನ್‌ʼ ಸಿನಿಮಾ ದೃಶ್ಯ ಲೀಕ್‌

ಅಭಿಮಾನಿಗಳ ಪೋಸ್ಟ್‌

ರಾಮ್‌ ಚರಣ್‌ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಿದೆ. ಜವಾನ್‌ ಸಿನಿಮಾದಲ್ಲಿ ಮುಖ್ಯ ಪಾತ್ರವೊಂದರಲ್ಲಿ ನಟಿಸುವುದಕ್ಕೆ ಟಾಲಿವುಡ್‌ನ ಅಲ್ಲು ಅರ್ಜುನ್‌ ಅವರಿಗೆ ಸಿನಿ ತಂಡ ಕೇಳಿಕೊಂಡಿತ್ತು. ಆದರೆ ಅಲ್ಲು ಅದಕ್ಕೆ ಒಪ್ಪಿಲ್ಲ ಎಂದು ಹೇಳಲಾಗಿದೆ. ಹಾಗೆಯೇ ದಳಪತಿ ವಿಜಯ್‌ ಅವರ ಬಳಿಯೂ ಜವಾನ್‌ ಸಿನಿಮಾದಲ್ಲಿ ನಟಿಸುವುದಕ್ಕೆ ಕೇಳಿಕೊಳ್ಳಲಾಗಿತ್ತು.

ಅಲ್ಲು ಮತ್ತು ದಳಪತಿ ವಿಜಯ್‌ ಇಬ್ಬರೂ ಬೇರೆ ಬೇರೆ ಸಿನಿಮಾಗಳ ಚಿತ್ರೀಕರಣದಲ್ಲಿ ಬಿಜಿ ಇರುವ ಹಿನ್ನೆಲೆಯಲ್ಲಿ ಜವಾನ್‌ ಸಿನಿಮಾಕ್ಕೆ ಒಪ್ಪಿಕೊಂಡಿಲ್ಲ ಎಂದು ಹೇಳಲಾಗಿದೆ.ಖ್ಯಾತ ನಟ ಶಿವರಾಜ್‌ ಕುಮಾರ್‌ ಅವರೂ ಈ ಚಿತ್ರದಲ್ಲಿ ವಿಶೇಷ ಪಾತ್ರವೊಂದರಲ್ಲಿ ನಟಿಸುತ್ತಾರೆ ಎನ್ನಲಾಗುತ್ತಿದೆ.

Continue Reading

South Cinema

Priyanka Chopra: ಸೋದರಸಂಬಂಧಿ ಪರಿಣಿತಿ ಚೋಪ್ರಾ ಮದುವೆಗೆ ಬಂದಿದ್ದಾರಾ ಪ್ರಿಯಾಂಕಾ ಚೋಪ್ರಾ?

ಕುಟುಂಬ (Priyanka Chopra) ಸಮೇತರಾಗಿ ನಟಿ ಬರುತ್ತಿದ್ದಂತೆ ಸೋದರಸಂಬಂಧಿ ಪರಿಣಿತಿ ಚೋಪ್ರಾ ಅವರ ವದಂತಿಯ ಗೆಳೆಯ, ಎಎಪಿ ಸದಸ್ಯ ರಾಘವ್ ಚಡ್ಡಾ ಅವರನ್ನು ಭೇಟಿಯಾಗಲಿದ್ದಾರೆ ಎಂಬ ಗಾಸಿಪ್‌ಗಳು ಹರಿದಾಡಿವೆ. ಕೆಲವು ದಿನಗಳಿಂದ, ಪರಿಣಿತಿ ಮತ್ತು ರಾಘವ್ ಮದುವೆಯಾಗಲಿದ್ದಾರೆ ಎಂಬ ವದಂತಿಗಳು ಇವೆ.

VISTARANEWS.COM


on

Edited by

Priyanka Chopra Is in Mumbai for Cousin Parineeti Chopras Wedding
Koo

ಬೆಂಗಳೂರು: ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಮಾರ್ಚ್‌ 31ರ ಮಧ್ಯಾಹ್ನ ನಿಕ್ ಜೋನಾಸ್ ಮತ್ತು ಮಗಳು ಮಾಲತಿ ಮೇರಿ ಅವರೊಂದಿಗೆ ಮುಂಬೈಗೆ ಬಂದಿಳಿದರು. ಕುಟುಂಬ ಸಮೇತರಾಗಿ ನಟಿ ಬರುತ್ತಿದ್ದಂತೆ ಸೋದರಸಂಬಂಧಿ ಪರಿಣಿತಿ ಚೋಪ್ರಾ ಅವರ ವದಂತಿಯ ಗೆಳೆಯ, ಎಎಪಿ ಸದಸ್ಯ ರಾಘವ್ ಚಡ್ಡಾ ಅವರನ್ನು ಭೇಟಿಯಾಗಲಿದ್ದಾರೆ ಎಂಬ ಗಾಸಿಪ್‌ಗಳು ಹರಿದಾಡಿವೆ. ಕೆಲವು ದಿನಗಳಿಂದ, ಪರಿಣಿತಿ ಮತ್ತು ರಾಘವ್ ಮದುವೆಯಾಗಲಿದ್ದಾರೆ ಎಂಬ ವದಂತಿಗಳು ಇವೆ.

ದಂಪತಿ ಕುಟುಂಬಗಳು ಶೀಘ್ರದಲ್ಲೇ ರೋಕಾ ಸಮಾರಂಭವನ್ನು ಆಯೋಜಿಸಬಹುದು ಮತ್ತು ಮದುವೆಯ ತಯಾರಿಯಲ್ಲಿದೆ ಎಂದು ವದಂತಿಗಳಿವೆ. ಇದೀಗ ಪ್ರಿಯಾಂಕ ಭಾರತಕ್ಕೆ ಬರುತ್ತಿದ್ದಂತೆ ಮತ್ತಷ್ಟು ಚರ್ಚೆಗಳು ಆಗುತ್ತಿವೆ. ಪರಿಣಿತಿ ಮತ್ತು ಪ್ರಿಯಾಂಕಾ ಇನ್ನೂ ಈ ಬಗ್ಗೆ ಯಾವುದೇ ಮಾಹಿತಿ ಹಂಚಿಕೊಂಡಿಲ್ಲ. ಇಂಡಿಯಾ ಟುಡೇ ವರದಿಯು ಪ್ರಿಯಾಂಕಾ ಅವರು ರಾಘವ್ ಅವರನ್ನು ಭೇಟಿಯಾಗಬಹುದು ಎಂದು ಹೇಳಿಕೊಂಡಿದೆ.

ʻʻಸಿಟಾಡೆಲ್ ಚಿತ್ರದ ಪ್ರಚಾರಕ್ಕಾಗಿ ಪ್ರಿಯಾಂಕಾ ಶೀಘ್ರದಲ್ಲೇ ಭಾರತಕ್ಕೆ ಬರಲಿದ್ದಾರೆ. ಕೊಲ್ಲಿಯಲ್ಲಿ ಹಿಂತಿರುಗಿ, ನಂತರ ತನ್ನ ಸೋದರಸಂಬಂಧಿ ಪರಿಣಿತಿ ಚೋಪ್ರಾರನ್ನು ಭೇಟಿಯಾಗಲಿದ್ದಾರೆ. ನಟಿ ಪರಿಣಿತಿ ಅವರ ಸ್ನೇಹಿತ ರಾಘವ್ ಚಡ್ಡಾ ಅವರನ್ನು ಭೇಟಿಯಾಗಬಹುದು. ಅವರ ಕುಟುಂಬದವರ ಸಮ್ಮುಖದಲ್ಲಿ ಸಣ್ಣ ಸಮಾರಂಭ ನಡೆಯುವ ಸಾಧ್ಯತೆ ಇದೆʼʼಎಂದು ವರದಿಯಾಗಿದೆ.

ಇದನ್ನೂ ಓದಿ: Priyanka Chopra: ಆರ್‌ಆರ್‌ಆರ್‌ ತಮಿಳು ಸಿನಿಮಾ ಎಂದ ಪ್ರಿಯಾಂಕಾ ಚೋಪ್ರಾ: ಟ್ರೋಲ್‌ಗೆ ಗುರಿಯಾದ ನಟಿ

ರಾಜ್ಯಸಭಾ ಸಂಸದ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ರಾಘವ್ ಚಡ್ಡಾ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಬಾಲಿವುಡ್‌ನಲ್ಲಿ ವೇಗವಾಗಿ ಹರಡಿದೆ. ರಾಘವ್ ಚಡ್ಡಾ ಮತ್ತು ಪರಿಣಿತಿ ಚೋಪ್ರಾ ಮಾರ್ಚ್‌ 29ರ ರಾತ್ರಿ ದೆಹಲಿ ವಿಮಾನ ನಿಲ್ದಾಣದಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಪರಿಣಿತಿ ಚೋಪ್ರಾ, ಇಮ್ತಿಯಾಜ್ ಅಲಿ ನಿರ್ದೇಶನದ ‘ಚಮ್ಕಿಲಾ’ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

Continue Reading
Advertisement
Elephant trap
ಕರ್ನಾಟಕ47 mins ago

Elephant trapped : ಮೂರು ತಿಂಗಳಿನಿಂದ ಸತಾಯಿಸುತ್ತಿರುವ 10 ವರ್ಷದ ಗಂಡಾನೆ ಕೊನೆಗೂ ಹನಿ ಟ್ರ್ಯಾಪ್‌ಗೆ ಬಿತ್ತು!

Unaccounted 6.4 Crore rupees seized in Chikmagalur
ಕರ್ನಾಟಕ50 mins ago

Karnataka Election 2023: ಚುನಾವಣೆ ಹಿನ್ನೆಲೆ ಹಣದ ಹೊಳೆ, ದಾಖಲೆ ಇಲ್ಲದ 6 ಕೋಟಿ ರೂ., 17 ಕೆಜಿ ಚಿನ್ನ, ಬೆಳ್ಳಿ ವಶ

Champion Gujarat won by 5 wickets in the first match, CSK was disappointed
ಕ್ರಿಕೆಟ್59 mins ago

IPL 2023 : ಚಾಂಪಿಯನ್​ ಗುಜರಾತ್​​ಗೆ ಮೊದಲ ಪಂದ್ಯದಲ್ಲಿ 5 ವಿಕೆಟ್ ಜಯ, ಸಿಎಸ್​ಕೆ ನಿರಾಸೆ

holalu urus
ಕರ್ನಾಟಕ1 hour ago

Communal Harmony : ಉರೂಸ್‌ ಸಂಭ್ರಮದಲ್ಲಿ ಹಿಂದೂ ಶ್ರೀಗಳನ್ನು ಗೌರವಿಸಿ ಭಾವೈಕ್ಯತೆ ಮೆರೆದ ಮುಸ್ಲಿಮರು

Nelyadi suicide
ಕರ್ನಾಟಕ1 hour ago

Suicide case : ಮೊಬೈಲ್‌ನಲ್ಲಿ ಸ್ಟೇಟಸ್‌ ಹಾಕಿ ಆತ್ಮಹತ್ಯೆ ಮಾಡಿಕೊಂಡ ಯುವಕ, ಆ ಮನೆಯಲ್ಲಿ ಇದು ಮೂರನೇ ಸುಸೈಡ್‌!

Bangalore mysore highway
ಪ್ರಮುಖ ಸುದ್ದಿ1 hour ago

ವಿಸ್ತಾರ ಸಂಪಾದಕೀಯ: ಟೋಲ್ ದರ ಜನರಿಗೆ ದುಃಸ್ವಪ್ನವಾಗದಿರಲಿ

IT Raid on the bank owned by Belgaum Congress leader VS Sadhunavar
ಕರ್ನಾಟಕ2 hours ago

IT Raid: ಕಾಂಗ್ರೆಸ್‌ ಮುಖಂಡ ವಿ.ಎಸ್.‌ ಸಾಧುನವರ ಒಡೆತನದ ಬ್ಯಾಂಕ್‌ ಮೇಲೆ ಐಟಿ ದಾಳಿ

IPL 2023
ಕ್ರಿಕೆಟ್2 hours ago

IPL 2023 : ಐಪಿಎಲ್​ನ ಮೊದಲ ಇಂಪ್ಯಾಕ್ಟ್​​ ಪ್ಲೇಯರ್​ ಯಾರು? ಅನುಕೂಲ ಬಳಸಿಕೊಂಡಿದ್ದು ಯಾವ ತಂಡ?

People In Pakistan Unhappy, Believe Partition Was A Mistake: Says Mohan Bhagwat
ದೇಶ2 hours ago

Mohan Bhagwat: ಪಾಕ್ ಜನಕ್ಕೆ ನೆಮ್ಮದಿ ಇಲ್ಲ, ದೇಶ ವಿಭಜನೆ ಪ್ರಮಾದ ಎಂಬ ಭಾವನೆ ಇದೆ: ಮೋಹನ್‌ ಭಾಗವತ್‌

Mohammad Shami who scored a century in bowling, what is the achievement?
ಕ್ರಿಕೆಟ್2 hours ago

IPL 2023 : ಬೌಲಿಂಗ್​ನಲ್ಲಿ ಶತಕ ಬಾರಿಸಿದ ಮೊಹಮ್ಮದ್​ ಶಮಿ, ಏನಿದು ಸಾಧನೆ?

7th Pay Commission
ನೌಕರರ ಕಾರ್ನರ್5 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ2 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ2 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ2 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್4 weeks ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ3 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

Teacher Transfer
ನೌಕರರ ಕಾರ್ನರ್6 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

7th Pay Commission
ಕರ್ನಾಟಕ5 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Land Surveyor Recruitment
ಉದ್ಯೋಗ2 months ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

Post Office Recruitment 2023
ಉದ್ಯೋಗ2 months ago

India Post GDS Recruitment 2023 : ಅಂಚೆ ಇಲಾಖೆಯಲ್ಲಿ 40,889 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ವಿದ್ಯಾರ್ಹತೆ ಎಸ್ಸೆಸ್ಸೆಲ್ಸಿ

ಕರ್ನಾಟಕ12 hours ago

SSLC Exam 2023: ಹಾಲ್ ಟಿಕೆಟ್ ಕೊಡದೆ ಕೈ ಎತ್ತಿದ ಶಾಲೆಗಳು; ವಿಸ್ತಾರ ಎಂಟ್ರಿಯಿಂದ ಪರೀಕ್ಷೆ ಬರೆದ ಮಕ್ಕಳು

ಕರ್ನಾಟಕ1 day ago

Ram Navami 2023: ಕರುನಾಡಿನೆಲ್ಲೆಡೆ ಶ್ರೀರಾಮ ನಾಮಸ್ಮರಣೆ; ಕಲಬುರಗಿಯಲ್ಲಿ ಮಜ್ಜಿಗೆ, ಪಾನಕ ವಿತರಿಸಿದ ಮುಸ್ಲಿಮರು

Siddalinga Swamiji of Siddaganga Mutt saw a cow and came running away Video goes viral
ಕರ್ನಾಟಕ2 days ago

Sri Siddalinga Swamiji: ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಕಂಡು ಓಡೋಡಿ ಬಂದ ಹಸು; ವಿಡಿಯೊ ವೈರಲ್‌

amit shah convoy
ಕರ್ನಾಟಕ4 days ago

Amit Shah: ಬೆಂಗಳೂರಿನಲ್ಲಿ ಅಮಿತ್‌ ಶಾ ಕಾನ್‌ವೇಯಲ್ಲಿ ಭದ್ರತಾ ವೈಫಲ್ಯ; ಇಬ್ಬರು ವಿದ್ಯಾರ್ಥಿಗಳ ವಿಚಾರಣೆ

rapido bike vs auto-Bike taxi drivers go on strike against auto drivers harassment
ಕರ್ನಾಟಕ4 days ago

Rapido Bike Vs Auto: ಆಟೋ ಚಾಲಕರ ದೌರ್ಜನ್ಯದ ವಿರುದ್ಧ ಸಿಡಿದೆದ್ದ ಬೈಕ್‌ ಟ್ಯಾಕ್ಸಿ ಚಾಲಕರು; ರಕ್ಷಣೆಗಾಗಿ ಪ್ರತಿಭಟನೆ

ಕರ್ನಾಟಕ1 week ago

Halal Ban: ಯುಗಾದಿಗೆ ಹಲಾಲ್‌ ಕಟ್‌ ಬಹಿಷ್ಕರಿಸಿ, ಜಟ್ಕಾ ಮಾಂಸ ಖರೀದಿ; ಮತ್ತೆ ಬೀದಿಗಿಳಿದ ಹಿಂದು ಕಾರ್ಯಕರ್ತರು

Did Dinesh Gundu Rao distribute damaged sarees in Gandhinagar for Ugadi festival?
ಕರ್ನಾಟಕ1 week ago

Damaged Saree: ಯುಗಾದಿ ಹಬ್ಬಕ್ಕೆ ಗಾಂಧಿನಗರದಲ್ಲಿ ಹರಿದ ಸೀರೆ ಕೊಟ್ಟರಾ ದಿನೇಶ್‌ ಗುಂಡೂರಾವ್‌? ಸೀರೆ ನೀಡಿ ಮಹಿಳೆಯರ ಕಿಡಿ

ಕರ್ನಾಟಕ2 weeks ago

Chikkaballapura BMTC: ಬೆಂಗಳೂರಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ವೋಲ್ವೋ ಬಸ್‌ ಸಂಚಾರ ಶುರು; ಟೈಮಿಂಗ್‌ ಏನು?

BMTC bus window shattered as police refused to allow auto drivers rally
ಕರ್ನಾಟಕ2 weeks ago

Auto Strike In Bengaluru: ಆಟೋ ಚಾಲಕರ ರ‍್ಯಾಲಿಗೆ ಅವಕಾಶ ನೀಡದ ಖಾಕಿ ಪಡೆ; ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶ

Drivers oppose Rapido bike taxi in bengaluru Extra BMTC buses ply on road, auto stopped plying
ಕರ್ನಾಟಕ2 weeks ago

Auto Strike: ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗೆ ವಿರೋಧ; ಆಟೋ ಓಡಾಟಕ್ಕೆ ಬ್ರೇಕ್‌, ರೋಡಿಗಿಳಿದ ಹೆಚ್ಚುವರಿ ಬಿಎಂಟಿಸಿ ಬಸ್‌

ಟ್ರೆಂಡಿಂಗ್‌

error: Content is protected !!