ಕಿಕ್ಕಿರಿದು ತುಂಬಿತ್ತು ಸಭಾಂಗಣ, ಕೆಕೆ ತುಂಬ ಬೆವರುತ್ತಿದ್ದರು; ವೇದಿಕೆ ಮೇಲೆ ಗಾಯಕನ ಕೊನೇ ಕ್ಷಣ

ಬಾಲಿವುಡ್

ಕಿಕ್ಕಿರಿದು ತುಂಬಿತ್ತು ಸಭಾಂಗಣ, ಕೆಕೆ ತುಂಬ ಬೆವರುತ್ತಿದ್ದರು; ವೇದಿಕೆ ಮೇಲೆ ಗಾಯಕನ ಕೊನೇ ಕ್ಷಣ

ಸಭಾಂಗಣದಲ್ಲಿ ಹವಾ ನಿಯಂತ್ರಕ (ಎಸಿ) ಕೆಲಸ ಮಾಡುತ್ತಿರಲಿಲ್ಲ. ಹೀಗಾಗಿ ಕೃಷ್ಣಕುಮಾರ್‌ಗೆ ಉಸಿರು ಕಟ್ಟುತ್ತಿತ್ತು ಎಂಬ ಮಾತುಗಳು ಕೇಳಿಬಂದಿವೆ. ಪೊಲೀಸರು ಎಲ್ಲ ಆಯಾಮಗಳಲ್ಲೂ ತನಿಖೆ ಶುರು ಮಾಡಿದ್ದಾರೆ.

VISTARANEWS.COM


on

KK Death
ಗಾಯಕ ಕೃಷ್ಣಕುಮಾರ್‌ ಕುನ್ನಾಥ್‌
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೋಲ್ಕತ್ತ: ಗಾಯಕ ಕೃಷ್ಣ ಕುಮಾರ್‌ ಮಂಗಳವಾರ ರಾತ್ರಿ ಕೋಲ್ಕತ್ತದ ನಜ್ರುಲ್‌ ಮಂಚಾ ಸಭಾಂಗಣದಲ್ಲಿ ಸಂಗೀತ ಗೋಷ್ಠಿ ಮುಗಿಸಿ, ಅಭಿಮಾನಿಗಳನ್ನು ರಂಜಿಸಿದ ಕೆಲವೇ ಹೊತ್ತಲ್ಲಿ ಮೃತಪಟ್ಟರು. ಅಂದು ನಜ್ರುಲ್‌ ಮಂಚಾ ಸಭಾಂಗಣದಲ್ಲಿ ಏನಾಯಿತು? ಕೆಕೆ ಕೊನೇ ಕ್ಷಣಗಳು ಹೇಗಿದ್ದವು ಎಂಬುದನ್ನು ಅದೇ ಅಡಿಟೋರಿಯಂನಲ್ಲಿ ಕೆಲಸ ಮಾಡುವ ವ್ಯಕ್ತಿಯೊಬ್ಬರು ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ. ʼನಾನು 12ವರ್ಷಗಳಿಂದ ಇಲ್ಲಿಯೇ ಕೆಲಸ ಮಾಡುತ್ತಿದ್ದೇನೆ. ಆದರೆ ಇಷ್ಟು ವರ್ಷಗಳಲ್ಲಿ ಸಭಾಂಗಣ ಈ ಪರಿ ಜನರಿಂದ ಕಿಕ್ಕರಿದು ತುಂಬಿದ್ದನ್ನು ಎಂದಿಗೂ ನೋಡಿರಲಿಲ್ಲ. ಸಭಾಂಗಣದಲ್ಲಿ 2462 ಆಸನಗಳಷ್ಟೇ ಇದ್ದವು, ಆದರೆ 6000ಕ್ಕೂ ಅಧಿಕ ಜನರು ಕೆಕೆ ಕಾನ್ಸರ್ಟ್‌ಗೆ ಬಂದಿದ್ದರು. ಅನೇಕರು ಪಾಸ್‌ ಇಲ್ಲದೆಯೇ ಆಗಮಿಸಿದ್ದರುʼ ಎಂದು ಹೇಳಿದ್ದಾರೆ.

ಬೆವರುತ್ತಿದ್ದರು ಕೆಕೆ !
ʼಕೃಷ್ಣಕುಮಾರ್‌ ಕುನ್ನಾಥ್‌ ಸಂಜೆ 6 ಗಂಟೆ ಹೊತ್ತಿಗೆ ಗಾಯನ ಪ್ರಾರಂಭಿಸಿದರು. ಅದಕ್ಕೂ ಮೊದಲು ಸಂಜೆ 5ಗಂಟೆ ಹೊತ್ತಿಗೆ ಅಡಿಟೋರಿಯಂ ಬಾಗಿಲು ತೆರೆಯಲಾಗಿತ್ತು. ವೇದಿಕೆಯ ಎರಡೂ ಕಡೆಗಳಲ್ಲಿ ಜನರು ತುಂಬುತ್ತಲೇ ಇದ್ದರು. ಕಾರ್ಯಕ್ರಮ ಶುರುವಾಗುತ್ತಿದ್ದಂತೆ ಕೆಕೆ ಸೊಗಸಾದ ಧ್ವನಿಯಲ್ಲಿ ಒಂದರ ಬೆನ್ನಿಗೆ ಒಂದರಂತೆ ಹಾಡುಗಳನ್ನು ಹಾಡುತ್ತಲೇ ಇದ್ದರು. ಆದರೆ ಅವರು ತುಂಬ ಬೆವರುತ್ತಿದ್ದರು. ಆಗಾಗ ವೇದಿಕೆಯಿಂದ ಸ್ವಲ್ಪ ಮರೆಯಾಗಿ ಬೆವರನ್ನು ಒರೆಸಿಕೊಳ್ಳುತ್ತಿದ್ದರು. ಡಾನ್ಸ್‌ ಮಾಡಲು ಯತ್ನಿಸುತ್ತಿದ್ದರೂ, ಅವರ ದೇಹ ಸಹಕರಿಸುತ್ತಿರಲಿಲ್ಲ. ಎಸಿ ಆಫ್‌ ಮಾಡಿರಲಿಲ್ಲ. ಆದರೆ ಅಡಿಟೋರಿಯಂ ಸಾಮರ್ಥ್ಯಕ್ಕಿಂತಲೂ ಹೆಚ್ಚಿಗೆ ಜನ ಸೇರಿದ್ದರಿಂದ ಏರ್‌ ಕಂಡೀಷನರ್‌ ಸರಿಯಾಗಿ ಕೆಲಸ ಮಾಡುತ್ತಿರಲಿಲ್ಲ. ಇನ್ನು ಬಾಗಿಲು ತೆರೆದಿದ್ದರೂ ಗಾಳಿ ಬರಲೂ ಜಾಗವಿರಲಿಲ್ಲ. ಕೆಕೆ ಹಾಡು ಶುರುಮಾಡಿದಾಗಿನಿಂದಲೂ ಜನರಂತೂ ಹುಚ್ಚೆದ್ದು ಕುಣಿಯುತ್ತಿದ್ದರು. ಗಲಾಟೆಯೂ ವಿಪರೀತವಾಗಿತ್ತು. ರಾತ್ರಿ ಸುಮಾರು 8.40ರ ಹೊತ್ತಿಗೆ ಗಾಯನ ಗೋಷ್ಠಿ ಮುಗಿಯಿತು. ಅಷ್ಟೊತ್ತಿಗೆ ಕೃಷ್ಣಕುಮಾರ್‌ ತುಂಬ ಬಳಲಿದ್ದರು. ವೇದಿಕೆಯಿಂದ ಹೊರ ಹೋಗುವಾಗಲೇ ಅವರು ತಮ್ಮ ಮೇಲೆ ನಿಯಂತ್ರಣ ಕಳೆದುಕೊಳ್ಳುತ್ತಿದ್ದರುʼ ಎಂದು ಆ ವ್ಯಕ್ತಿ ತಿಳಿಸಿದ್ದಾರೆ.

ಇದನ್ನೂ ಓದಿ: ಬಾಲಿವುಡ್‌ ನ ಜನ ಮೆಚ್ಚಿದ ಗಾಯಕ ಕೆಕೆ, ಶಾಸ್ತ್ರೀಯ ಸಂಗೀತ ಕಲಿಯದಿದ್ದರೂ, 3,000 ಜಿಂಗಲ್ಸ್‌ ಹಾಡಿದ್ದರು!

ಸಭಾಂಗಣದಲ್ಲಿ ಎಸಿ(ಹವಾ ನಿಯಂತ್ರಕ) ಆಫ್‌ ಆಗಿದ್ದರಿಂದಲೇ ಕೃಷ್ಣರಾಜ್‌ ಕುನ್ನಾಥ್‌ಗೆ ಉಸಿರುಕಟ್ಟುತ್ತಿತ್ತು. ಅಡಿಟೋರಿಯಂ ಸಿಬ್ಬಂದಿ, ಮ್ಯಾನೇಜ್‌ಮೆಂಟ್‌ನ ನಿರ್ಲಕ್ಷ್ಯ ಇದು ಎಂಬ ಆರೋಪವೂ ಕೇಳಿಬಂದಿದೆ. ಸೋಷಿಯಲ್‌ ಮೀಡಿಯಾ ಬಳಕೆದಾರರೊಬ್ಬರೂ ಟ್ವೀಟ್‌ ಮಾಡಿ, ಕೆಕೆ ಹಾಡುತ್ತಿದ್ದಾಗ ಅವರಿಗೆ ವಿಪರೀತ ಸೆಖೆಯಾಗುತ್ತಿತ್ತು. ಎಸಿ ಹಾಕಿ, ಲೈಟ್‌ ಕಡಿಮೆ ಮಾಡಿ ಎಂದು ಮಧ್ಯೆ ಒಂದೆರಡು ಬಾರಿ ಹೇಳಿದ್ದು ವಿಡಿಯೋದಲ್ಲಿ ಕೇಳಿಸುತ್ತದೆ. ಆದರೆ ಯಾರೊಬ್ಬರೂ ಗಮನ ಹರಿಸಲಿಲ್ಲ ಎಂದು ಹೇಳಿದ್ದಾರೆ. ಈ ಆಯಾಮದಲ್ಲೂ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ. ಕೋಲ್ಕತ್ತ ಮೇಯರ್‌ ಫಿರ್ಹಾದ್‌ ಹಕೀಮ್‌ ಕೂಡ ಇದಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ. ಎಸಿ ಬಂದ್‌ ಆಗಿತ್ತು ಎಂದು ನಾನು ಹೇಳಲಾರೆ. ಆದರೆ ತುಂಬ ಜನ ಸೇರಿದ್ದರಿಂದ ಎಸಿ ಪ್ರಭಾವ ಬೀರಲಿಲ್ಲ. ಇದರಿಂದ ಕೆಕೆಗೆ ತೊಂದರೆಯಾಗಿರಬಹುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ವಿದಾಯದ ವೇಳೆಯಲ್ಲಿ ನೆನಪು; ಗಾಯಕ ಕೆಕೆ ಹಾಡಿದ್ದ ಕನ್ನಡ ಹಾಡುಗಳು ಇವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Swara Bhasker: ಕಂಗನಾ- ಸ್ವರಾ ಭಾಸ್ಕರ್ ನಡುವಿನ ದೊಡ್ಡ ವ್ಯತ್ಯಾಸವೇನು? ನಟಿಯ ಬಾಯಲ್ಲೇ ಕೇಳಿ!

Swara Bhasker : ಸ್ವರಾ ಮತ್ತು ಕಂಗನಾ ಎರಡು ಚಿತ್ರಗಳಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು. 2011 ರಲ್ಲಿ ʻತನು ವೆಡ್ಸ್ ಮನು’ ಮತ್ತು 2015 ರಲ್ಲಿ `ತನು ವೆಡ್ಸ್ ಮನು ರಿಟರ್ನ್ಸ್’.ಕಂಗನಾ ಹಲವಾರು ಸಂದರ್ಭಗಳಲ್ಲಿ ಸೋಷಿಯಲ್‌ ಮೀಡಿಯಾ ಮೂಲಕ ಸ್ವರಾ ಅವರ ಜತೆ ವಾರ್‌ ಮಾಡಿದ್ದಾರೆ. ಸ್ವರಾ 2023ರಲ್ಲಿ ಸಂದರ್ಶನದ ಸಮಯದಲ್ಲಿ ಕಂಗನಾ ಅವರನ್ನು ಹೊಗಳಿದ್ದು ಇದೆ. ತನು ವೆಡ್ಸ್ ಮನು ಚಿತ್ರೀಕರಣದ ಸಮಯದಲ್ಲಿ ಕಂಗನಾ ಹಾಗೂ ಸ್ವರಾ ಉತ್ತಮ ಸ್ನೇಹಿತರಾಗಿದ್ದರು.

VISTARANEWS.COM


on

Swara Bhasker reveals big difference between Kangana Ranaut and herself
Koo

ಬೆಂಗಳೂರು: ಕಂಗನಾ ರಣಾವತ್ ( Kangana Ranaut ) ಅವರಿಗೆ ಹಿಂದಿ ಚಲನಚಿತ್ರೋದ್ಯಮದ ಅನೇಕ ನಟಿ ನಟಿಯರ ಜತೆ ವೈಮನಸ್ಸು ಇದೆ. ಅವರಲ್ಲಿ ಒಬ್ಬರು ಸ್ವರಾ ಭಾಸ್ಕರ್ (Swara Bhasker). ಕಂಗನಾ ಅವರು ಸ್ವರಾ ಅವರನ್ನು ‘ಬಿ-ಗ್ರೇಡ್ ನಟಿ’ ಎಂದು ಈ ಹಿಂದೆ ಕರೆದಿದ್ದರು. ನಟಿ ಮತ್ತು ರಾಜಕಾರಣಿ ಸ್ವರಾ ಇದೀಗ ಸಂದರ್ಶನವೊಂದರಲ್ಲಿ ತಮಗೆ ಹಾಗೂ ಕಂಗನಾ ನಡುವೆ ಇರುವ ವ್ಯತ್ಯಾಸದ ಬಗ್ಗೆ ಮಾತನಾಡಿದ್ದಾರೆ.

ಸ್ವರಾ ಮತ್ತು ಕಂಗನಾ ಎರಡು ಚಿತ್ರಗಳಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು. 2011 ರಲ್ಲಿ ʻತನು ವೆಡ್ಸ್ ಮನು’ ಮತ್ತು 2015 ರಲ್ಲಿ `ತನು ವೆಡ್ಸ್ ಮನು ರಿಟರ್ನ್ಸ್’. ಇತ್ತೀಚಿನ ಸಂದರ್ಶನದಲ್ಲಿ, ಸ್ವರಾ ಅವರಿಗೆ ಕಂಗನಾ ಕುರಿತು ಪ್ರಶ್ನೆ ಎದುರಾಯಿತು. ಆಗ ಸ್ವರಾ ಮಾತನಾಡಿ ʻʻಕಂಗನಾ ಹಾಗೂ ನನಗೆ ಬಹಳಷ್ಟು ವ್ಯತ್ಯಾಸವಿದೆ. ಕಂಗನಾ ಪ್ರತಿ ಬಾರಿ ಸರ್ಕಾರದ ಪರವಾಗಿ ಮಾತ್ರ ಧ್ವನಿ ಎತ್ತುತ್ತಾರೆ. ಆದರೆ ನಾನು ಹಾಗಲ್ಲ. ನಾನು ಯಾವಾಗಲೂ ಅಧಿಕಾರದಲ್ಲಿರುವವರನ್ನು ಪ್ರಶ್ನಿಸಲು ಧ್ವನಿ ಎತ್ತುತ್ತೇನೆʼʼಎಂದರು.

ಇದನ್ನೂ ಓದಿ: Parliament Flashback: ಸೋನಿಯಾ ಗಾಂಧಿ-ಸುಷ್ಮಾ ಸ್ವರಾಜ್‌ ಕದನಕ್ಕೆ ಅಖಾಡವಾಗಿದ್ದ ಬಳ್ಳಾರಿ ಲೋಕಸಭೆ ಕ್ಷೇತ್ರ

ರಾಹುಲ್ ಗಾಂಧಿ ನಾಯಕನಾಗಿ ಇಷ್ಟ

ವಿವಿಧ ರಾಜಕೀಯ ಪಕ್ಷಗಳಿಂದ ಆಫರ್‌ಗಳು ಬರುತ್ತಿರುವ ಬಗ್ಗೆ ಸ್ವರಾ ಮಾತನಾಡಿ ʻನೀವು ಮಾಧ್ಯಮಗಳನ್ನು ನೋಡುವುದಾದರೆ ಅವರ ಪ್ರಕಾರ ನನಗೆ ಹಲವಾರು ಪಕ್ಷಗಳಿಂದ ಆಫರ್‌ಗಳು ಬಂದಿವೆ. ಆದರೆ ಅವೆಲ್ಲ ಸುಳ್ಳು. ನಾನು ರಾಹುಲ್ ಗಾಂಧಿಯನ್ನು ನಾಯಕನಾಗಿ ಇಷ್ಟಪಡುತ್ತೇನೆ. ಅವರ ದೃಷ್ಟಿ, ಅವರು ಧ್ವನಿ ಎತ್ತುವ ಸಮಸ್ಯೆಗಳು ಮತ್ತು ಅವರ ಪ್ರಯತ್ನಗಳು ನಮ್ಮ ದೇಶಕ್ಕೆ ಬಹಳ ಮುಖ್ಯವೆಂದು ನಾನು ಭಾವಿಸುತ್ತೇನೆ. ನಮ್ಮ ದೇಶದ ಬಗ್ಗೆ ಪ್ರೀತಿ ಇರುವ ರಾಜಕಾರಣಿ ಯಾರೇ ಆಗಿರಲಿ ಅವರನ್ನು ನಾನು ಬೆಂಬಲಿಸುತ್ತೇನೆʼʼಎಂದರು.

ಕಂಗನಾ ಹಲವಾರು ಸಂದರ್ಭಗಳಲ್ಲಿ ಸೋಷಿಯಲ್‌ ಮೀಡಿಯಾ ಮೂಲಕ ಸ್ವರಾ ಅವರ ಜತೆ ವಾರ್‌ ಮಾಡಿದ್ದಾರೆ. ಸ್ವರಾ 2023ರಲ್ಲಿ ಸಂದರ್ಶನದ ಸಮಯದಲ್ಲಿ ಕಂಗನಾ ಅವರನ್ನು ಹೊಗಳಿದ್ದು ಇದೆ. ತನು ವೆಡ್ಸ್ ಮನು ಚಿತ್ರೀಕರಣದ ಸಮಯದಲ್ಲಿ ಕಂಗನಾ ಹಾಗೂ ಸ್ವರಾ ಉತ್ತಮ ಸ್ನೇಹಿತರಾಗಿದ್ದರು. ಚಿತ್ರೀಕರಣದ ವೇಳೆ ನನ್ನ ಕೈ ಹಿಡಿದು ನಡೆಸುತ್ತಿದ್ದಳು ಎಂದು ಕಂಗನಾ ಬಗ್ಗೆ ಸ್ವರಾ ಅದೆಷ್ಟೋ ಬಾರಿ ಹೇಳಿಕೊಂಡಿದ್ದೂ ಇದೆ. ಆದರೆ ಬರಬರುತ್ತ ಇಬ್ಬರ ನುಡುವೆ ವೈಮನಸ್ಸು ಹೆಚ್ಚಾಯ್ತು.

ಲೋಕಸಭಾ ಚುನಾವಣೆಗೆ ನಟಿ ಕಂಗನಾ ಅವರು ಗಮನಾರ್ಹ ರಾಜಕೀಯ ಇತಿಹಾಸವನ್ನು ಹೊಂದಿರುವ ಹಿಮಾಚಲ ಪ್ರದೇಶದ ಮಂಡಿಯಿಂದ ಸ್ಪರ್ಧಿಸಲು ಆಯ್ಕೆ ಮಾಡಿರುವುದು ಕುತೂಹಲವನ್ನು ಹೆಚ್ಚಿಸುತ್ತಿದೆ. ಈ ಹಿಂದೆ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿರುವ ಮಂಡಿಯಲ್ಲಿ ರಾಜಕೀಯ ರಂಗಕ್ಕೆ ಕಾಲಿಡುತ್ತಿದ್ದ ರಣಾವತ್ ಅವರಿಗೆ ಕಠಿಣ ಸವಾಲನ್ನು ಒಡ್ಡಿತ್ತು. ಈ ಪ್ರದೇಶದಲ್ಲಿ ತನ್ನ ಪ್ರಾಬಲ್ಯವನ್ನು ಸಾಧಿಸುವ ಗುರಿ ಹೊಂದಿರುವ ಬಿಜೆಪಿ 2019ರಂತೆ ತನ್ನ ಯಶಸ್ಸನ್ನು ಪುನರಾವರ್ತಿಸುವ ಭರವಸೆಯಲ್ಲಿದೆ.

ನಟಿ ಕಂಗನಾ ರಣಾವತ್ ಅವರು ತಮ್ಮ ಮುಂಬರುವ ಚಿತ್ರ ‘ಎಮರ್ಜೆನ್ಸಿ’ ಗಾಗಿ ಸಜ್ಜಾಗುತ್ತಿದ್ದಾರೆ. ಇದು ಅವರ ನಿರ್ದೇಶನಕ ಚೊಚ್ಚಲ ಚಿತ್ರವಾಗಿದೆ. ಹಾಗೇ ನಟಿ ಇತ್ತೀಚೆಗೆ ಅಯೋಧ್ಯೆಯಲ್ಲಿ ಹೊಸದಾಗಿ ಉದ್ಘಾಟಿಸಲಾದ ರಾಮಮಂದಿರಕ್ಕೂ ಭೇಟಿ ನೀಡಿದ್ದಾರೆ.

Continue Reading

ಬಾಲಿವುಡ್

Parineeti Chopra: ಪರಿಣಿತಿ ಚೋಪ್ರಾ ಪತಿ ಕಣ್ಣು ಕಳೆದುಕೊಳ್ಳುವ ಸಾಧ್ಯತೆ: ವೈದ್ಯರು ಹೇಳೋದೇನು?

Parineeti Chopra: ರಾಘವ್ ಚಡ್ಡಾ ಲಂಡನ್‌ನಲ್ಲಿ ಕಣ್ಣಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಬಗ್ಗೆ ಸುದ್ದಿ ಬಂದಿದೆ. ರಾಘವ್ ಚಡ್ಡಾ ಕಣ್ಣಿನ ರೆಟಿನಾದಲ್ಲಿ ರಂಧ್ರವಿರುವ ಕಾರಣ ಲಂಡನ್‌ನಲ್ಲಿ ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಪರಿಣಿತಿ ಅವರು ಲಂಡನ್‌ನಲ್ಲೇ ಇದ್ದು ಪತಿ ಆರೋಗ್ಯವನ್ನು ನೋಡಿಕೊಳ್ಳುತ್ತಿದ್ದಾರೆʼʼಎಂದು ವರದಿಯಾಗಿದೆ. ಸೆಪ್ಟೆಂಬರ್ 24ರಂದು ಉದಯಪುರದ ಲೀಲಾ ಪ್ಯಾಲೇಸ್‌ನಲ್ಲಿ ಪರಿಣಿತಿ ಮತ್ತು ರಾಘವ್ ಅವರ ವಿವಾಹ ಅದ್ಧೂರಿಯಾಗಿ ನೆರವೇರಿತ್ತು.

VISTARANEWS.COM


on

Parineeti Chopra husband Raghav Chadha doing well after eye surgery
Koo

ಬೆಂಗಳೂರು: ಬಾಲಿವುಡ್ ನಟಿ ಪರಿಣಿತಿ ಚೋಪ್ರಾ (Parineeti Chopra) ಆಮ್‌ ಆದ್ಮಿ ಪಕ್ಷದ ಸಂಸದ, ರಾಜಕಾರಣಿ ರಾಘವ್ ಚಡ್ಡಾ (Raghav Chadha) ಜತೆ ಸಪ್ತಪದಿ ತುಳಿದಿದ್ದರು. ಚುನಾವಣೆ ಸಮಯದಲ್ಲಿ ರಾಘವ್ ಪ್ರಚಾರದಿಂದ ದೂರ ಉಳಿದಿದ್ದರು. ಈ ಬೆನ್ನಲ್ಲೇ ರಾಘವ್ ಚಡ್ಡಾ ಲಂಡನ್‌ನಲ್ಲಿ ಕಣ್ಣಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಬಗ್ಗೆ ಸುದ್ದಿ ಬಂದಿದೆ. ರಾಘವ್ ಚಡ್ಡಾ ಕಣ್ಣಿನ ರೆಟಿನಾದಲ್ಲಿ ರಂಧ್ರವಿರುವ ಕಾರಣ ಲಂಡನ್‌ನಲ್ಲಿ ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ರಾಘವ್ ಚಡ್ಡಾ ಇನ್ನೂ ಲಂಡನ್‌ನಲ್ಲಿ ಬೆಡ್ ರೆಸ್ಟ್‌ನಲ್ಲಿದ್ದಾರೆ ಎಂದು ವರದಿಯಾಗಿದೆ.

ಶಸ್ತ್ರಚಿಕಿತ್ಸೆಯ ನಂತರ ರಾಘವ್ ಚಡ್ಡಾ ಅವರು ಆರೋಗ್ಯವಾಗಿದ್ದಾರೆ ಎಂದು ವರದಿಯಾಗಿದೆ. ಮಾಧ್ಯಮದ ವರದಿಗಳ ಪ್ರಕಾರ ರಾಘವ್ ಚಡ್ಡಾ ಅವರು ಗಂಭೀರವಾದ ಕಣ್ಣಿನ ಸಮಸ್ಯೆಯನ್ನು ಎದುರಿಸುತ್ತಿದ್ದರು. ಸದ್ಯಕ್ಕೀಗ ಲಂಡನ್‌ನಲ್ಲಿ ಇದ್ದಾರೆ. ಅವರಿಗೆ ಸಂಪೂರ್ಣ ಬೆಡ್ ರೆಸ್ಟ್ ನೀಡಲಾಗಿದೆ. ಒಂದು ಕಣ್ಣಿನ ರೆಟಿನಾದಲ್ಲಿ ರಂಧ್ರವಿತ್ತು. ಇದರಿಂದ ರಾಘವ್ ಚಡ್ಡಾ ಕಣ್ಣನ್ನೇ ಕಳೆದುಕೊಳ್ಳುವ ಸಾಧ್ಯತೆಯಿತ್ತು. ಹೀಗಾಗಿ ದಿಢೀರನೇ ಶಸ್ತ್ರ ಚಿಕಿತ್ಸೆಗೆ ಒಳಗಾಗಬೇಕಾಯ್ತುʼʼಎಂದು ವರದಿಯಾಗಿದೆ. ಶಸ್ತ್ರಚಿಕಿತ್ಸೆಯ ಮೊದಲು ಕಣ್ಣನ್ನು ಉಳ್ಳಿಸಿಕೊಳ್ಳುವ ಬಗ್ಗೆ ವೈದ್ಯರು ಗ್ಯಾರಂಟಿ ಕೂಡ ಕೊಟ್ಟಿರಲಿಲ್ಲ ಎಂದು ವರದಿಯಾಗಿದೆ.

ಇದನ್ನೂ ಓದಿ: Parineeti Chopra: ವೃತ್ತಿ ಜೀವನದ ಆರಂಭಿಕ ದಿನಗಳನ್ನು ನೆನೆದು ಭಾವುಕರಾದ ಪರಿಣಿತಿ ಚೋಪ್ರಾ!

ಇದೀಗ ಮೂಲಗಳ ಪ್ರಕಾರ ʻʻಶಸ್ತ್ರ ಚಿಕಿತ್ಸೆ ಬಳಿಕ ರಾಘವ್‌ ಅವರು ಚೇತರಿಸಿಕೊಂಡಿದ್ದಾರೆ. ಸೂರ್ಯನ ಬೆಳಕಿನಲ್ಲಿ ಹೊರಹೋಗದಂತೆ ವೈದ್ಯರು ಸಲಹೆ ನೀಡಿದ್ದಾರೆ. ಕಣ್ಣಿನ ಪರೀಕ್ಷೆ ಮತ್ತು ತಪಾಸಣೆಗಾಗಿ ಅವರು ವಾರಕ್ಕೆ ಎರಡು ಬಾರಿ ವೈದ್ಯರನ್ನು ಭೇಟಿ ಮಾಡಬೇಕಾಗುತ್ತದೆ. ವೈದ್ಯರು ಅನುಮತಿ ನೀಡಿದಾಗ ಮಾತ್ರ ಅವರು ಭಾರತಕ್ಕೆ ಬರುತ್ತಾರೆ. ಕೆಲಸಕ್ಕೆ ಮರಳಲು ಇನ್ನೂ ಕೆಲವು ವಾರಗಳನ್ನು ತೆಗೆದುಕೊಳ್ಳುತ್ತದೆ. ಪರಿಣಿತಿ ಅವರು ಲಂಡನ್‌ನಲ್ಲೇ ಇದ್ದು ಪತಿ ಆರೋಗ್ಯವನ್ನು ನೋಡಿಕೊಳ್ಳುತ್ತಿದ್ದಾರೆʼʼಎಂದು ವರದಿಯಾಗಿದೆ.

ಸೆಪ್ಟೆಂಬರ್ 24ರಂದು ಉದಯಪುರದ ಲೀಲಾ ಪ್ಯಾಲೇಸ್‌ನಲ್ಲಿ ಪರಿಣಿತಿ ಮತ್ತು ರಾಘವ್ ಅವರ ವಿವಾಹ ಅದ್ಧೂರಿಯಾಗಿ ನೆರವೇರಿತ್ತು. ಉದಯಪುರದ ಲೀಲಾ ಪ್ಯಾಲೇಸ್‌ನಲ್ಲಿ ಪರಿಣಿತಿ ಮತ್ತು ರಾಘವ್ ಕುಟುಂಬಸ್ಥರು ಮತ್ತು ಆತ್ಮೀಯ ಸ್ನೇಹಿತರ ಸಮ್ಮುಖದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಪರಿಣಿತಿ ಅವರ ಸೋದರಸಂಬಂಧಿ, ನಟ ಪ್ರಿಯಾಂಕಾ ಚೋಪ್ರಾ ಅವರು ಮದುವೆಗೆ ಭಾಗಿಯಾಗಿರಲಿಲ್ಲ. ಉದಯಪುರದಲ್ಲಿ ಪರಿಣಿತಿ ಮತ್ತು ರಾಘವ್ ಸ್ನೇಹಿತರು ಮತ್ತು ಕುಟುಂಬದವರಿಗೆ ಆರತಕ್ಷತೆಯನ್ನೂ ಏರ್ಪಡಿಸಿದ್ದರು. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪಂಜಾಬ್ ಸಿಎಂ ಭಗವಂತ್ ಮಾನ್, ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಮತ್ತು ಮಾಜಿ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಸೇರಿದಂತೆ ಅನೇಕ ಗಣ್ಯರು ಸಮರಾಂಭದಲ್ಲಿ ಸಾಕ್ಷಿಯಾಗಿದ್ದರು.

ಪರಿಣಿತಿ ಅವರು ʼಚಮ್ಕೀಲಾʼ ಸಿನಿಮಾಕ್ಕಾಗಿ ಪಂಜಾಬ್‌ನಲ್ಲಿ ಚಿತ್ರೀಕರಣ ನಡೆಸುತ್ತಿದ್ದರು. ಆ ವೇಳೆ ರಾಘವ್‌ ಅವರು ಅಲ್ಲಿಗೆ ತೆರಳಿ ನಟಿಯೊಂದಿಗೆ ಮಾತನಾಡಿದ್ದರು. ಆಗಲೇ ಅವರಿಬ್ಬರ ನಡುವೆ ಪ್ರೀತಿ ಹುಟ್ಟಿಕೊಂಡಿತ್ತು ಎಂದೂ ಹೇಳಲಾಗಿತ್ತು.

Continue Reading

ಸಿನಿಮಾ

Aamir Khan: ಬಿಗ್ ಸ್ಕ್ರೀನ್ ಮೇಲೆ ಮೂವರು ಖಾನ್​ಗಳು ಕಾಣೋದು ಕನ್‌ಫರ್ಮ್‌! ಸಿನಿಮಾ ಯಾವಾಗ ಶುರು?

Aamir Khan: ಎರಡು ದಿನಗಳ ಹಿಂದಷ್ಟೇ ಶಾರುಖ್‌ ಮತ್ತು ಮತ್ತು ಸಲ್ಮಾನ್ ಅವರನ್ನು ಭೇಟಿಯಾದೆ ಎಂದು ಆಮೀರ್ ನೆನಪಿಸಿಕೊಂಡಿದ್ದಾರೆ. . ರಿಯಾಲಿಟಿ ಶೋಗಳಲ್ಲಿ (Reality Show), ಪ್ರಶಸ್ತಿ ಕಾರ್ಯಕ್ರಮಗಳಲ್ಲಿ ಆಮೀರ್ ಖಾನ್ ಹೆಚ್ಚಾಗಿ ಕಾಣಿಸಿಕೊಳ್ಳೋದಿಲ್ಲ. ಇದೀಗ ಕಪಿಲ್ ಶರ್ಮಾ ಶೋನಲ್ಲಿ ಕೆಲವು ವಿಚಾರಗಳನ್ನು ಶೇರ್‌ ಮಾಡಿಕೊಂಡಿದ್ದಾರೆ . ಆಮೀರ್‌ ಮುಂದೆ ನಟ ಸಲ್ಮಾನ್ ಖಾನ್ (Salman Khan) ಮತ್ತು ಶಾರುಖ್ ಖಾನ್ ( Shah Rukh Khan) ಅವರೊಂದಿಗೆ ಚಿತ್ರದಲ್ಲಿ ನಟಿಸುತ್ತಾರಾ?ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದಾರೆ.

VISTARANEWS.COM


on

Aamir Khan on collaborating with SRK, Salman Khan
Koo

ಬೆಂಗಳೂರು: ಆಮೀರ್ ಖಾನ್ (Aamir Khan) ಇತ್ತೀಚೆಗೆ ನೆಟ್‌ಫ್ಲಿಕ್ಸ್‌ನ ‘ದಿ ಗ್ರೇಟ್ ಇಂಡಿಯನ್ ಕಪಿಲ್ ಶೋ‘ಗೆ ಅತಿಥಿಯಾಗಿ (The Great Indian Kapil Show) ಬಂದಿದ್ದರು. ಬಾಲಿವುಡ್ ಸಿನಿಮಾ ಇಂಡಸ್ಟ್ರಿಯ ಮಿಸ್ಟರ್​ ಪರ್ಫೆಕ್ಷನಿಸ್ಟ್ ಎಂದೇ ಕರೆಸಿಕೊಳ್ಳುವ ನಟ ಆಮೀರ್ ಖಾನ್ (Aamir Khan)​ ಪ್ರಚಾರ ಬಯಸದ ವ್ಯಕ್ತಿ ಎನ್ನಬಹುದು. ರಿಯಾಲಿಟಿ ಶೋಗಳಲ್ಲಿ (Reality Show), ಪ್ರಶಸ್ತಿ ಕಾರ್ಯಕ್ರಮಗಳಲ್ಲಿ ಆಮೀರ್ ಖಾನ್ ಹೆಚ್ಚಾಗಿ ಕಾಣಿಸಿಕೊಳ್ಳೋದಿಲ್ಲ. ಇದೀಗ ಕಪಿಲ್ ಶರ್ಮಾ ಶೋನಲ್ಲಿ ಕೆಲವು ವಿಚಾರಗಳನ್ನು ಶೇರ್‌ ಮಾಡಿಕೊಂಡಿದ್ದಾರೆ . ಆಮೀರ್‌ ಮುಂದೆ ನಟ ಸಲ್ಮಾನ್ ಖಾನ್ (Salman Khan) ಮತ್ತು ಶಾರುಖ್ ಖಾನ್ ( Shah Rukh Khan) ಅವರೊಂದಿಗೆ ಚಿತ್ರದಲ್ಲಿ ನಟಿಸುತ್ತಾರಾ?ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದಾರೆ.

ಎರಡು ದಿನಗಳ ಹಿಂದಷ್ಟೇ ಶಾರುಖ್‌ ಮತ್ತು ಮತ್ತು ಸಲ್ಮಾನ್ ಅವರನ್ನು ಭೇಟಿಯಾದೆ ಎಂದು ಆಮೀರ್ ನೆನಪಿಸಿಕೊಂಡಿದ್ದಾರೆ. “ನಾನು ಇತ್ತೀಚೆಗೆ ಶಾರುಖ್ ಮತ್ತು ಸಲ್ಮಾನ್ ಅವರನ್ನು ಭೇಟಿ ಮಾಡಿ, ಇಷ್ಟು ವರ್ಷಗಳಿಂದ ನಾವು ಒಂದೇ ಇಂಡಸ್ಟ್ರಿಯಲ್ಲಿ ಕೆಲಸ ಮಾಡುತ್ತಿದ್ದೇವೆ. ಒಟ್ಟಿಗೆ ಸಿನಿಮಾ ಮಾಡದಿದ್ದರೆ ಪ್ರೇಕ್ಷಕರಿಗೆ ಅನ್ಯಾಯವಾಗುತ್ತದೆ. ಕನಿಷ್ಠ ಒಂದು ಸಿನಿಮಾವನ್ನಾದರೂ ಒಟ್ಟಿಗೆ ಮಾಡಬೇಕುʼʼಎಂದು ಹೇಳಿದ್ದೆ ಎಂದು ಮಾತನಾಡಿದ್ದಾರೆ. ಮಾತು ಮುಂದುವರಿಸಿ ʻʻನಾವು ಮೂವರು ಒಳ್ಳೆಯ ಕಥೆ ಮತ್ತು ಚಿತ್ರಕಥೆಯನ್ನು ಹುಡುಕುತ್ತಿದ್ದೇವೆ” ಎಂದು ಹೇಳಿದರು. ಮಾತ್ರವಲ್ಲ ಶೋನಲ್ಲಿ ತಾನು ಧರಿಸಿದ್ದ ಜೀನ್ಸ್ ಅನ್ನು ಸಲ್ಮಾನ್ ಖಾನ್ ಉಡುಗೊರೆಯಾಗಿ ನೀಡಿದ್ದಾರೆ ಎಂದು ಅವರು ಹೇಳಿದರು.

ಇದನ್ನೂ ಓದಿ: Aamir Khan: ನಾನು ಮುಸ್ಲಿಮನಾಗಿರುವುದರಿಂದ ʻನಮಸ್ತೆʼ ಹೇಳುವ ಅಭ್ಯಾಸವಿರಲಿಲ್ಲ ಎಂದ ಆಮೀರ್‌ ಖಾನ್‌!

ನೆಟ್‌ಫ್ಲಿಕ್ಸ್ ಶೋನಲ್ಲಿ ಕಪಿಲ್ ಶರ್ಮಾ ಆಮೀರ್‌, ತುಂಬಾ ಯಂಗ್ ಆಗಿ ಕಾಣುವುದರ ಹಿಂದಿನ ರಹಸ್ಯದ ಬಗ್ಗೆ ಕೇಳಿದಾಗ, ಆಮೀರ್‌ ಪ್ರತಿಕ್ರಿಯಿಸಿದ್ದು ಹೀಗೆ. ʻʻನಾನು ಯಾವುದೇ ಕ್ರೀಮ್ ಬಳಸುವುದಿಲ್ಲʼʼಎಂದರು.

ನಾನು ಮುಸ್ಲಿಮನಾಗಿರುವುದರಿಂದ ʻನಮಸ್ತೆʼ ಹೇಳುವ ಅಭ್ಯಾಸವಿರಲಿಲ್ಲ ಎಂದ ಆಮೀರ್‌ ಖಾನ್‌!

ನೆಟ್‌ಫ್ಲಿಕ್ಸ್‌ನ ʻದಿ ಗ್ರೇಟ್ ಇಂಡಿಯನ್ ಕಪಿಲ್ ಶೋʼನ (The Great Indian Kapil Show) ಇತ್ತೀಚಿನ ಸಂಚಿಕೆಯಲ್ಲಿ, ನಟ ತನ್ನ ವೃತ್ತಿಜೀವನದ ಕುರಿತು ಹೇಳಿಕೊಂಡರು. ಜತೆಗೆ ಪಂಜಾಬ್‌ ಜನರ ನಮ್ರತೆಯನ್ನು ಶ್ಲಾಘಿಸಿದರು. ʻʻನಾನು ಮುಸ್ಲಿಂನಾಗಿರುವುದರಿಂದ ಕೈ ಜೋಡಿಸಿ ಜನರಿಗೆ ನಮಸ್ತೆ ಹೇಳುವ ಅಭ್ಯಾಸವಿರಲಿಲ್ಲ. ಪಂಜಾಬ್‌ನಲ್ಲಿ ಚಿತ್ರೀಕರಣಕ್ಕೆಂದು ಎರಡೂವರೆ ತಿಂಗಳುಗಳನ್ನು ಕಳೆದ ನಂತರ, ನನಗೆ ‘ನಮಸ್ತೆ’ ಎಂದು ಕೈ ಮುಗಿದು ಹೇಳುವ ಶಕ್ತಿ ಅರ್ಥವಾಯಿತುʼʼಎಂದು ಹೇಳಿಕೊಂಡಿದ್ದಾರೆ.

v

ಆಮೀರ್‌ ಮಾತನಾಡಿ ʻʻಈ ಕತೆ ನನಗೆ ತುಂಬ ಹತ್ತಿರವಾದದ್ದು. ದಂಗಲ್‌ ಸಿನಿಮಾವನ್ನು ಪಂಜಾಬ್‌ನಲ್ಲಿ ಚಿತ್ರೀಕರಣ ಮಾಡುವಾಗ ಅಲ್ಲಿಯ ಜನರನ್ನು ನಿಜವಾಗಿಯೂ ಇಷ್ಟಪಟ್ಟೆ. ಪಂಜಾಬಿ ಸಂಸ್ಕೃತಿಯು ಪ್ರೀತಿಯಿಂದ ತುಂಬಿದೆ. ದಂಗಲ್‌ ಸಿನಿಮಾಗಾಗಿ ನಾವು ಅಲ್ಲಿ ಹೋದಾಗ ಚಿತ್ರೀಕರಣ ಮಾಡುತ್ತಿದ್ದ ಸ್ಥಳ ಒಂದು ಪಟ್ಟ ಹಳ್ಳಿ. ನಾವು ಆ ಸ್ಥಳದಲ್ಲಿ ಮತ್ತು ಆ ಮನೆಯಲ್ಲಿ ಎರಡು ತಿಂಗಳಿಗಿಂತ ಹೆಚ್ಚು ಕಾಲ ಶೂಟ್ ಮಾಡಿದ್ದೇವೆ. ಅಲ್ಲಿ ಶೂಟ್‌ಗೆಂದು ಬೆಳಗ್ಗೆ 5 ಗಂಟೆಗೆ ಕಾರ್‌ನಲ್ಲಿ ತಲುಪುತ್ತಿದ್ದಾಗ ಜನ ನನಗೆ ಕೈ ಮುಗಿದು ಸ್ವಾಗತಿಸುತ್ತಿದ್ದರು. ಮನೆಯ ಹೊರಗೆ ನಿಂತು ‘ಸತ್ ಶ್ರೀ ಅಕಾಲ’ (ನಮಸ್ತೆ) ಎಂದು ಕೈ ಮುಗಿದು ಹೇಳುತ್ತಿದ್ದರು. ಶೂಟ್‌ ಆಗಿ ಪ್ಯಾಕ್‌ಅಪ್‌ ಆದ ಬಳಿಕವೂ ಮನೆ ಹೊರಗೆ ನಿಂತು ಕೈ ಮುಗಿದು ‘ಗುಡ್ ನೈಟ್’ ಎಂದು ಹೇಳುತ್ತಿದ್ದರುʼʼಎಂದರು.

ನಟ ಮಾತು ಮುಂದುವರಿಸಿ ʻʻನಾನು ಮುಸ್ಲಿಮನಾಗಿರುವುದರಿಂದ ಕೈ ಜೋಡಿಸಿ ಜನರಿಗೆ ನಮಸ್ತೆ ಹೇಳುವ ಅಭ್ಯಾಸವಿರಲಿಲ್ಲ. ಮುಸ್ಲಿಮರು ಪರಸ್ಪರ ಶುಭಾಶಯ ಹೇಳುವ ರೀತಿ ಕೈ ಎತ್ತಿ, ತಲೆ ಬಾಗಿಸಿ ಹೇಳುತ್ತಾರೆ. ಆದರೆ ಪಂಜಾಬ್‌ನಲ್ಲಿ ಆ ಎರಡೂವರೆ ತಿಂಗಳು ಕಳೆದ ನಂತರ, ನನಗೆ ‘ನಮಸ್ತೆ’ಯ ಶಕ್ತಿ ಅರ್ಥವಾಯಿತು. ಪಂಜಾಬ್‌ನ ಜನರು ಎಲ್ಲರಿಗೂ ತುಂಬಾ ಗೌರವ ನೀಡುತ್ತಾರೆʼʼಎಂದು ಹೇಳಿದರು. ಆಮೀರ್ ಕೊನೆಯದಾಗಿ ಲಾಲ್ ಸಿಂಗ್ ಚಡ್ಡಾ (2022) ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡರು.

Continue Reading

ಬಾಲಿವುಡ್

Suhana Khan: ಬ್ರೇಕಪ್‌ ಬಗ್ಗೆ ಓಪನ್‌ ಆಗಿ ಮಾತನಾಡಿದ ಶಾರುಖ್‌ ಪುತ್ರಿ ಸುಹಾನಾ ಖಾನ್‌; ವಿಡಿಯೊ ಇಲ್ಲಿದೆ

Suhana Khan: ಬಾಲಿವುಡ್‌ ಬಾದ್‌ಷಾ ಶಾರುಖ್‌ ಖಾನ್‌ ಪುತ್ರಿ ಸುಹಾನಾ ಖಾನ್‌ ಸುದ್ದಿಯಲ್ಲಿದ್ದಾರೆ. ಬಾಲಿವುಡ್‌ನಲ್ಲಿ ಇನ್ನೂ ಅಂಬೆಗಾಲಿಡುತ್ತಿರುವ ಅವರು ಬ್ರೇಕಪ್‌ ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ. ಕಳೆದ ವರ್ಷ ತೆರೆಕಂಡ ‘ದಿ ಆರ್ಚೀಸ್’ ಸಿನಿಮಾ ಮೂಲಕ ಬಾಲಿವುಡ್‌ ಪ್ರವೇಶಿಸಿದ ಸುಹಾನಾ ಸದ್ಯ ತಮ್ಮ ತಂದೆಯೊಂದಿಗೆ ಸಿನಿಮಾ ಮಾಡಲು ಮುಂದಾಗಿದ್ದಾರೆ. ಈ ಮಧ್ಯೆ ಅವರ ಬ್ರೇಕಪ್‌ ಸುದ್ದಿ ವೈರಲ್‌ ಆಗಿದೆ. ಆ ಬಗೆಗಿನ ವಿವರ ಇಲ್ಲಿದೆ.

VISTARANEWS.COM


on

Suhana Khan
Koo

ಮುಂಬೈ: ಬಾಲಿವುಡ್‌ ಬಾದ್‌ಷಾ ಶಾರುಖ್‌ ಖಾನ್‌ (Shah Rukh Khan) ಪುತ್ರಿ ಸುಹಾನಾ ಖಾನ್‌ (Suhana Khan) ಕಳೆದ ವರ್ಷ ಬಿಡುಗಡೆಯಾದ ʻದಿ ಆರ್ಚೀಸ್ʼ (The Archies) ಸಿನಿಮಾ ಮೂಲಕ ಬಣ್ಣದ ಲೋಕ ಪ್ರವೇಶಿಸಿದರು. ಜೋಯಾ ಅಖ್ತರ್ ಮತ್ತು ರೀಮಾ ಕಾಗ್ತಿ ನಿರ್ದೇಶನದ ‘ದಿ ಆರ್ಚೀಸ್’ ಸಿನಿಮಾದಲ್ಲಿ ಸುಹಾನಾ ಜತೆಗೆ ಅಮಿತಾಭ್‌ ಬಚ್ಚನ್ ಮತ್ತು ಜಯಾ ಬಚ್ಚನ್ ಅವರ ಮೊಮ್ಮಗ ಅಗಸ್ತ್ಯ ನಂದಾ ಕೂಡ ನಟಿಸಿದ್ದರು. ಈ ವೇಳೆ ಅವರಿಬ್ಬರು ಡೇಟಿಂಗ್ ನಡೆಸುತ್ತಿದ್ದರು ಎನ್ನುವ ಗುಸುಗುಸು ಹಬ್ಬಿತ್ತು. ಆದರೆ ಈ ಬಗ್ಗೆ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲ. ಇದೀಗ ಸುಹಾನಾ ಖಾನ್‌ ತಮ್ಮ ಬ್ರೇಕಪ್‌ ಘೋಷಿಸಿದ್ದಾರೆ. ಅರೇ! ಇದೇನಾಯ್ತು ಎಂದು ಅಚ್ಚರಿಗೆ ಒಳಗಾಗುವ ಮುನ್ನ ಈ ಸುದ್ದಿಯನ್ನು ಪೂರ್ತಿ ಓದಿ. ಅಷ್ಟಕ್ಕೂ ಅವರು ಸಂಬಂಧ ಮುರಿದುಕೊಂಡಿದ್ದ ಗೆಳೆಯನ ಜತೆ ಅಲ್ಲ. ಇಲ್ಲಿದೆ ಈ ಬಗೆಗಿನ ಪೂರ್ತಿ ವಿವರ.

ಸುಹಾನಾ ಖಾನ್‌ ಅಭಿನಯಿಸಿರುವ ಹೊಸ ಜಾಹೀರಾತು ಪ್ರಸಾರವಾಗಿದೆ. ಅದರಲ್ಲಿ ಆಕೆ ತಾನು ಸೋಪ್‌ನೊಂದಿಗೆ ಬ್ರೇಕಪ್‌ ಮಾಡಿಕೊಂಡು ಬಾಡಿ ವಾಶ್‌ನ ಸಖ್ಯ ಬೆಳೆಸಿರುವುದಾಗಿ ತಿಳಿಸಿದ್ದಾರೆ. ಹೌದು, ಭಾರತದ ಜನಪ್ರಿಯ ಲಕ್ಸ್‌ ಬ್ರ್ಯಾಂಡ್‌ನ ರೂಪದರ್ಶಿಯಾಗಿ ಸುಹಾನಾ ಖಾನ್‌ ನಟಿಸಿದ್ದಾರೆ. ಅದರಲ್ಲಿ ಅವರು ಇನ್ನು ಮುಂದೆ ಸೋಪ್‌ ಬಳಕೆ ಬಿಟ್ಟು ಬಾಡಿ ವಾಶ್‌ ಉಪಯೋಗಿಸುವುದಾಗಿ ತಿಳಿಸಿದ್ದಾರೆ.

ಶಾರುಖ್‌ ಖಾನ್‌ ಸುಮಾರು 19 ವರ್ಷಗಳಿಂದ ಲಕ್ಸ್‌ ಉತ್ಪನ್ನದ ರಾಯಭಾರಿಯಾಗಿ ಗುರುತಿಸಿಕೊಂಡಿದ್ದಾರೆ. ಇದೀಗ ಕಂಪನಿ ಅವರನ್ನು ಕೈಬಿಟ್ಟು ಅವರ ಪುತ್ರಿಗೆ ಮಣೆ ಹಾಕಿದೆ. ಅದರಂತೆ ಸುಹಾನಾ ಕಾಣಿಸಿಕೊಂಡಿರುವ ಲಕ್ಸ್‌ನ ಮೊದಲ ಜಾಹೀರಾತು ಮಂಗಳವಾರ ಪ್ರಸಾರವಾಗಿದೆ.

ಬಾತ್‌ರೂಮ್‌ನಲ್ಲಿ ಸುಹಾನಾ ಓಡಾಡುತ್ತಿರುವುದನ್ನು ತೋರಿಸುವ ಮೂಲಕ ಜಾಹೀರಾತು ಆರಂಭವಾಗುತ್ತದೆ. ಈ ವೇಳೆ ಅವರು ಸೋಪ್‌ನೊಂದಿಗೆ ಬ್ರೇಕಪ್‌ ಮಾಡಿಕೊಂಡಿರುವುದಾಗಿ ತಿಳಿಸುತ್ತಾರೆ. ಸೋಪ್‌ನ ಸುಗಂಧ ಕೆಲವು ಹೊತ್ತಿನಲ್ಲೇ ಮಾಯವಾಗುತ್ತದೆ. ಹೀಗಾಗಿ ಲಕ್ಸ್‌ನ ಹೊಸ ಉತ್ಪನ್ನ ಬಾಡಿ ವಾಶ್‌ ಬಳಸುವುದಾಗಿ ತಿಳಿಸುತ್ತಾರೆ. ಸದ್ಯ ಶಾರುಖ್‌ ಪುತ್ರಿಯ ಈ ಜಾಹೀರಾತು ಸಾಕಷ್ಟು ವೈರಲ್‌ ಆಗಿದೆ.

ಶಾರುಖ್‌ ಖಾನ್‌ ನೆನಪಿಸಿಕೊಂಡ ಅಭಿಮಾನಿಗಳು

ಈ ಜಾಹೀರಾತನ್ನು ನೋಡಿದ ಅನೇಕರಿಗೆ ಶಾರುಖ್‌ ಖಾನ್‌ ನೆನಪಿಗೆ ಬಂದಿದ್ದಾರೆ. ಅವರು 2005ರಲ್ಲಿ ಮೊದಲ ಬಾರಿ ಲಕ್ಸ್‌ ಜಾಹೀರಾತಿನಲ್ಲಿ ಕಾಣಿಸಿಕೊಂಡ ರೀತಿಯನ್ನು ಸ್ಮರಿಸಿಕೊಂಡಿದ್ದಾರೆ. ಅದರಲ್ಲಿ ಶಾರುಖ್‌ ಬಾತ್‌ ಟಬ್‌ ಬಳಿ ಬರುತ್ತಾರೆ. ಅಲ್ಲಿ ಹೇಮಾ ಮಾಲಿನಿ, ಜೂಹು ಚಾವ್ಲಾ, ಕರೀನಾ ಕಪೂರ್‌ ಮತ್ತು ಶ್ರೀದೇವಿ ನಿಂತಿರುತ್ತಾರೆ. ಸದ್ಯ ಇದನ್ನೂ ಫ್ಯಾನ್ಸ್‌ ಪ್ರಸ್ತಾವಿಸಿದ್ದಾರೆ.

ಇದನ್ನೂ ಓದಿ: Suhana Khan: ಹಣೆಗೆ ಬಿಂದಿ ಇಟ್ಟು ಫೋಟೊ ಹಂಚಿಕೊಂಡ ಶಾರುಖ್‌ ಖಾನ್‌ ಪುತ್ರಿ

ಸುಹಾನಾ ಖಾನ್‌ ಅಭಿನಯದ ಮೊದಲ ಚಿತ್ರ ‘ದಿ ಆರ್ಚೀಸ್’ ಒಟಿಟಿಯಲ್ಲಿ ತೆರೆಕಂಡು ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿತ್ತು. ಸದ್ಯ ಅವರು ಶಾರುಖ್‌ ಖಾನ್‌ ಅವರೊಂದಿಗೆ ತೆರೆ ಹಂಚಿಕೊಳ್ಳಲು ಸಿದ್ಧತೆ ನಡೆಸುತ್ತಿದ್ದಾರೆ. ಸುಜೋಯ್‌ ಘೋಷ್‌ ಮತ್ತು ಸಿದ್ಧಾರ್ಥ್‌ ಆನಂದ್‌ ನಿರ್ದೇಶನದ ʼಕಿಂಗ್‌ʼ ಟೈಟಲ್‌ನ ಸಿನಿಮಾದಲ್ಲಿ ತಂದೆ-ಮಗಳು ಜತೆಯಾಗಿ ಅಭಿನಯಿಸುತ್ತಿದ್ದಾರೆ ಎನ್ನಲಾಗಿದೆ. ಮುಂದಿನ ತಿಂಗಳು ಈ ಚಿತ್ರ ಸೆಟ್ಟೇರುವ ಸಾಧ್ಯತೆ ಇದೆ.

Continue Reading
Advertisement
Vote Jihad
ದೇಶ21 seconds ago

Vote Jihad: ವೋಟ್‌ ಜಿಹಾದ್‌ಗೆ ಕರೆ ನೀಡಿದ್ದು ಇಂಡಿಯಾ ಒಕ್ಕೂಟದ ಮನಸ್ಥಿತಿಗೆ ಕನ್ನಡಿ ಎಂದ ಮೋದಿ

Prajwal Revanna Case PM Modi defends MP accused of rape says Rahul Gandhi
Lok Sabha Election 20246 mins ago

Prajwal Revanna Case: ಮಹಾನ್‌ ರೇಪಿಸ್ಟ್‌ಗೆ ಮೋದಿಯಿಂದ ರಕ್ಷಣೆ; ಪ್ರಜ್ವಲ್‌ ಪೆನ್‌ಡ್ರೈವ್‌ ಕೇಸ್‌ ಬಗ್ಗೆ ರಾಹುಲ್‌ ಗಾಂಧಿ ಗುಡುಗು

Rinku Singh
ಕ್ರೀಡೆ14 mins ago

Rinku Singh: ಟಿ20 ವಿಶ್ವಕಪ್​ಗೆ ರಿಂಕು ಆಯ್ಕೆಯಾಗಬಹುದೆಂದು ಪಟಾಕಿ, ಸಿಹಿ ತಂದಿಟ್ಟಿದ್ದ ತಂದೆಗೆ ನಿರಾಸೆ

Crime News
ಕ್ರೈಂ15 mins ago

Crime News : 6 ವರ್ಷದ ಬಾಲಕಿಯ ಅಪಹರಿಸಲು ಯತ್ನಿಸಿದ ದುಷ್ಟ; ಹಿಟ್‌ ಆ್ಯಂಡ್‌ ರನ್‌ ಮಾಡಿ ಚಾಲಕರಿಬ್ಬರು ಎಸ್ಕೇಪ್‌

Samsung
ತಂತ್ರಜ್ಞಾನ34 mins ago

ಸ್ಯಾಮ್‌ಸಂಗ್‌ನ ‘ಫ್ಯಾಬ್ ಗ್ರಾಬ್ ಫೆಸ್ಟ್’: ಸ್ಮಾರ್ಟ್‌ಫೋನ್‌, ಟಿವಿ, ಲ್ಯಾಪ್‌ಟಾಪ್‌, ಡಿಜಿಟಲ್ ಉಪಕರಣಗಳ ಮೇಲೆ ಅದ್ಭುತ ಆಫರ್

students self harming
ಕ್ರೈಂ1 hour ago

Students Self harming: 20 ವರ್ಷಗಳಲ್ಲಿ ಐಐಟಿಯ 115 ವಿದ್ಯಾರ್ಥಿಗಳು ಆತ್ಮಹತ್ಯೆ

Prajwal Revanna Case HD DeveGowda and HD Kumaraswamy slams HD Revanna
ಕ್ರೈಂ2 hours ago

Prajwal Revanna Case: ನಿನ್ನ ಮಗನಿಂದ ಇಂಥ ಕಪ್ಪು ಚುಕ್ಕೆ ಬಂತು; ರೇವಣ್ಣ ಮೇಲೆ ಮುಗಿಬಿದ್ದ ಎಚ್‌ಡಿಡಿ, ಎಚ್‌ಡಿಕೆ

Pawan Kalyan Hari Hara Veera Mallu Part 1 teaser Out
ಟಾಲಿವುಡ್2 hours ago

Pawan Kalyan: ʻಹರಿ ಹರ ವೀರ ಮಲ್ಲುʼವಾಗಿ ಅಬ್ಬರಿಸಿದ ಪವನ್ ಕಲ್ಯಾಣ್; ಟೀಸರ್‌ ಔಟ್‌!

supreme court
ದೇಶ2 hours ago

Supreme Court: CBI ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿಲ್ಲ; ಸುಪ್ರೀಂಕೋರ್ಟ್‌ಗೆ ಸರ್ಕಾರ ಸ್ಪಷ್ಟನೆ

Viral News
ವೈರಲ್ ನ್ಯೂಸ್2 hours ago

Viral News: ಮದುವೆಗೆ ಮುನ್ನವೇ 2 ಬಾರಿ ಗರ್ಭಿಣಿಯಾದ ಅಪ್ರಾಪ್ತೆ; ಪೋಷಕರು ಮಗುವನ್ನು ಮಾರಾಟ ಮಾಡಿದ್ದಾರೆಂದು ದೂರು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ10 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ಟ್ರೆಂಡಿಂಗ್‌