ಸಿನಿಮಾ
Sorry (Karma Returns): ಬರಲಿದೆ ರಾಗಿಣಿ ದ್ವಿವೇದಿಯ ಹೊಸ ಚಿತ್ರ…ಕರ್ಮ!
ಕೆನಡಾ ನಿವಾಸಿ ನವೀನ್ ಕುಮಾರ್, ಜೈ ಕೃಪಾನಿ ಮತ್ತು ಜೇನ್ ಜಾರ್ಜ್ ಈ ಚಿತ್ರದ ಸಹ ನಿರ್ಮಾಪಕರಾಗಿದ್ದಾರೆ. ಬೆಂಗಳೂರು ಮತ್ತು ಸಕಲೇಶಪುರದಲ್ಲಿ ಚಿತ್ರೀಕರಣ ನಡೆಸಲಾಗಿದೆ.
ಬೆಂಗಳೂರು: ʼಐಪಿಎಸ್ ರಾಗಿಣಿʼ ಎಂದೇ ಖ್ಯಾತಿ ಪಡೆದ ರಾಗಿಣಿ ದ್ವಿವೇದಿ ತಮ್ಮ ಹುಟ್ಟುಹಬ್ಬದ ದಿನದಂದು ಸಂತಸದ ಸುದ್ದಿಯೊಂದನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಅವರ ಹುಟ್ಟು ಹಬ್ಬದ ಪ್ರಯುಕ್ತವಾಗಿ ಹೊಸ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಈವರೆಗೆ 25ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿರುವ ರಾಗಿಣಿ ದ್ವಿವೇದಿ ಪ್ರಸ್ತುತ ಸಾರಿ (ಕರ್ಮ ರಿಟರ್ನ್ಸ್) ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
ನಾವು ಚಿತ್ರದ ಬಗ್ಗೆ ಮಾತನಾಡುವಾಗ ಅದನ್ನು ಹಾಸ್ಯ, ಮರ್ಡರ್ ಮಿಸ್ಟರಿ, ಪ್ರಣಯ ಅಥವಾ ಭಯಾನಕ ಎಂದು ಕರೆಯುತ್ತೇವೆ. ಆದರೆ ಈ ಚಿತ್ರ ಎಲ್ಲದರ ಸಮ್ಮಿಶ್ರವಾಗಿದೆ. ವಾಸ್ತವವಾಗಿ ಮುಂದಿನದಕ್ಕೆ ಮುನ್ನುಡಿಯಂತೆ ಇದು ಅಲೌಕಿಕತೆಯ ಕುರಿತಾದ ಚಿತ್ರವಾಗಿದೆ ಎನ್ನುತ್ತಾರೆ ರಾಗಿಣಿ.
ವಿದೇಶದಲ್ಲಿ ಅನಿಮೇಷನ್ ನಲ್ಲಿ ಪ್ರತಿಷ್ಠಿತ ಪ್ರಾಜೆಕ್ಟ್ ಗಳಲ್ಲಿ ತೊಡಗಿಸಿಕೊಂಡಿರುವ ನಿರ್ದೇಶಕರು ಚಿತ್ರಕ್ಕೆ ಬೆಂಬಲ ನೀಡುತ್ತಿರುವುದರಿಂದ ಇಂಗ್ಲಿಷ್ ನಲ್ಲೂ ಬಿಡುಗಡೆ ಮಾಡಲು ಚಿತ್ರತಂಡ ಮುಂದಾಗಿದೆ.
ಇದನ್ನೂ ಓದಿ |Love Birds: ಸ್ಯಾಂಡಲ್ವುಡ್ ರಿಯಲ್ ‘ಲವ್ ಬರ್ಡ್ಸ್’ ಮತ್ತೆ ಪ್ರೇಕ್ಷಕರ ಮುಂದೆ
‘ಇದು ತುಂಬಾ ಮುಖ್ಯವಾದ ವಿಷಯವಾಗಿದೆ. ಶೀರ್ಷಿಕೆಯೇ ಆಸಕ್ತಿದಾಯಕವಾಗಿದೆ. ವಾಸ್ತವವಾಗಿ ಕರ್ಮದ ಮೇಲಿನ ನನ್ನ ನಂಬಿಕೆ ನನ್ನನ್ನು ಈ ಚಿತ್ರಕ್ಕೆ ಸೆಳೆಯಿತು. sorry ಮತ್ತು ‘thank you’ ಪದಗಳು ತುಂಬಾ ಪವರ್ ಫುಲ್ ಮತ್ತು 90 ಪ್ರತಿಶತಕ್ಕಿಂತಲೂ ಹೆಚ್ಚು ಎಂದು ನಾನು ನಂಬುತ್ತೇನೆ. ಅವುಗಳನ್ನು ನಾವು easy ಆಗಿ ಬಳಸುತ್ತೇವೆ. ʼನೀವು ಬಿತ್ತಿದಂತೆ, ನೀವು ಕೊಯ್ಯುತ್ತೀರಿ’ ಎಂಬ ಪರಿಕಲ್ಪನೆ ನಾನು ಅಧ್ಯಾತ್ಮಿಕತೆಯ ಕಡೆಗೆ ತಿರುಗಿದಾಗ ಮತ್ತು ಭಗವದ್ಗೀತೆಯಂತಹ ಪುಸ್ತಕಗಳನ್ನು ಓದಿದಾಗ ನನ್ನ ಅರಿವಿಗೆ ಬಂತು ಎಂದು ರಾಗಿಣಿ ಹೇಳುತ್ತಾರೆ.
ಈ ಚಿತ್ರವನ್ನು ಬ್ರಹ್ಮ ಅವರು ನಿರ್ದೇಶನ ಮಾಡಿದ್ದಾರೆ. ಚಿತ್ರದ ಕುರಿತು ಮಾತನಾಡಿದ ಅವರು, ʼʼ2000ನೇ ಇಸವಿಯಿಂದಲೂ ಅನಿಮೇಷನ್ ಹಾಗೂ ವಿಎಫ್ಎಕ್ಸ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಈ ಕುರಿತು ಕೆಲವರಿಗೆ ತರಗತಿ ಕೂಡ ನೀಡುತ್ತಿದ್ದೇನೆ. ಈ ಮುಂಚೆ ʼಸಿದ್ದಿ ಸೇರೆʼ ಎಂಬ ಚಿತ್ರವನ್ನು ನಿರ್ದೇಶಿಸಿದ್ದೆ. ಇದು ನನಗೆ ಎರಡನೇ ಚಿತ್ರ. ಬಹು ಇಷ್ಟವವಾದ ಈ ಚಿತ್ರವನ್ನು ಕ್ರೈಂ ಥ್ರಿಲರ್ ಎನ್ನಬಹುದುʼʼ ಎಂದು ಮಾಹಿತಿ ಹಂಚಿಕೊಂಡರು.
ಕೆನಡಾ ನಿವಾಸಿ ನವೀನ್ ಕುಮಾರ್, ಜೈ ಕೃಪಾನಿ ಮತ್ತು ಜೇನ್ ಜಾರ್ಜ್ ಈ ಚಿತ್ರದ ಸಹ ನಿರ್ಮಾಪಕರಾಗಿದ್ದಾರೆ. ಬೆಂಗಳೂರು ಮತ್ತು ಸಕಲೇಶಪುರದಲ್ಲಿ ಚಿತ್ರೀಕರಣ ಮಾಡಲಾಗಿದೆ. ಮುಂದಿನ ಚಿತ್ರೀಕರಣ ಹೈದರಾಬಾದ್ನಲ್ಲಿ ಮಾಡುತ್ತಿರುವುದಾಗಿ ಚಿತ್ರತಂಡ ಹೇಳಿದೆ. ಛಾಯಾಗ್ರಹಣವನ್ನು ರಾಜೀವ್ ಗಣೇಶನ್ ಮಾಡಿದ್ದಾರೆ.
ಇದನ್ನೂ ಓದಿ | Kushi Motion Poster: ಖುಷಿ ತರುತ್ತಿದೆ ʼಖುಷಿʼ ಚಿತ್ರದ ಮೋಷನ್ ಪೋಸ್ಟರ್
ದೇಶ
72 Hoorain: ಕಾಶ್ಮೀರ ಫೈಲ್ಸ್, ಕೇರಳ ಸ್ಟೋರಿ ಬಳಿಕ ಮತ್ತೊಂದು ವಿವಾದಾತ್ಮಕ ಸಿನಿಮಾ ’72 ಹೂರೇ’ ತೆರೆಗೆ ಬರಲು ಸಿದ್ಧ
72 Hoorain: ರಾಷ್ಟ್ರ ಪ್ರಶಸ್ತಿ ವಿಜೇತ ಸಂಜಯ್ ಪೂರನ್ ಸಿಂಗ್ ಚೌಹಾಣ್ ನಿರ್ದೇಶನದ 72 ಹೂರೇ ಚಿತ್ರದ ಟೀಸರ್ ಲಾಂಚ್ ಮಾಡಲಾಗಿದ್ದು, ಪರ ವಿರೋಧ ಚರ್ಚೆಗಳು ಶುರುವಾಗಿವೆ.
ನವದೆಹಲಿ: ದಿ ಕೇರಳ ಸ್ಟೋರಿ (The Kerala Story), ಕಾಶ್ಮೀರ್ ಫೈಲ್ (The Kashmir Files), ದಿ ಡೈರಿ ಆಫ್ ವೆಸ್ಟ್ ಬೆಂಗಾಲ್ ಸಿನಿಮಾ ಬೆನ್ನಲ್ಲೇ ಮತ್ತೊಂದು ವಿವಾದಾತ್ಮಕ ಸಿನಿಮಾ ತೆರೆಗೆ ಬರಲು ಸಿದ್ಧವಾಗಿದೆ. ಇಸ್ಲಾಮಿಕ್ ತೀವ್ರವಾದದ ಕತೆಯನ್ನು ಹೊಂದಿರುವ 72 ಹೂರೇ(72 Hoorain) ಚಿತ್ರದ ಟೀಸರ್ ಲಾಂಚ್ ಆಗಿದ್ದು, ತೀವ್ರ ವಿರೋಧ ಕೂಡ ವ್ಯಕ್ತವಾಗಿದೆ. ರಾಷ್ಟ್ರ ಪ್ರಶಸ್ತಿ ವಿಜೇತ ಸಂಜಯ್ ಪೂರನ್ ಸಿಂಗ್ ಚೌಹಾಣ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಟೀಸರ್ ಲಾಂಚ್ ಆಗುತ್ತಿದ್ದಂತೆ ನೆಟ್ಟಿಗರು, ಮುಸ್ಲಿಮ್ ಮತ್ತು ಇಸ್ಲಾಮ್ಗೆ ಅವಮಾನ ಮಾಡುವ ಪ್ರಾಪಗ್ಯಾಂಡ ಚಿತ್ರ ಎಂದು ಟೀಕಿಸಿದ್ದಾರೆ.
ಇತ್ತೀಚೆಗಷ್ಟೇ 72 ಹೂರೇ ಚಿತ್ರದ ಫಸ್ಟ್ ಲುಕ್ ಅನಾವರಣ ಮಾಡಲಾಗಿತ್ತು. ಆಗಲೂ ಟ್ವಿಟರ್ನಲ್ಲಿ ಸಾಕಷ್ಟು ಪರ ಮತ್ತು ವಿರೋಧ ಚರ್ಚೆಗಳು ಶುರುವಾಗಿದ್ದವು. ಭಾರತದ ಕೋಮು ಸೌಹಾರ್ದತೆಯನ್ನು ಹಾಳು ಮಾಡುವ ಪ್ರಯತ್ನಗಳ ನಡೆಯುತ್ತಿವೆ ಎಂದು ಟೀಕೆ ವ್ಯಕ್ತವಾಗಿತ್ತು.
ಚಿತ್ರದ ಟೀಸರ್ನಲ್ಲಿ ಒಸಾಮಾ ಬಿನ್ ಲಾಡೆನ್, ಅಜ್ಮಲ್ ಕಸಬ್ ಸೇರಿದಂತೆ ಇತರ ಚಿತ್ರಗಳನ್ನು ಮತ್ತು ಯಾಕೂಬ್ ಮೆಮನ್ನ ಮಿಶ್ರಿತ ಫೋಟೋವನ್ನು ತೋರಿಸಲಾಗಿದೆ. ಮೇಲ್ನೋಟಕ್ಕೆ ಟೀಸರ್ನಲ್ಲಿ ಕಾಣುವ ಅಂಶಗಳು ಖಂಡಿತವಾಗಿಯೂ, ಈ ಸಿನಿಮಾ ಕೂಡ ಮುಸ್ಲಿಮರು ಸುತ್ತ ಸುತ್ತದೆ ಎಂಬುದು ವೇದ್ಯವಾಗುತ್ತದೆ. ಉಗ್ರರಾದ ಮಸೂದ್ ಅಜರ್ ಮತ್ತು ಹಫೀಜ್ ಸಯೀದ್ ಅವರನ್ನು ಹೋಲುವರವನ್ನು ಹೈಲೆಟ್ ಮಾಡಲಾಗಿರುವುದನ್ನು ಕಾಣಬಹುದಾಗಿದೆ.
ಇದನ್ನೂ ಓದಿ: The Kerala Story : ದಿ ಕೇರಳ ಸ್ಟೋರಿ ಸಿನಿಮಾದ ಬಗ್ಗೆ ಕೆಂಡ ಕಾರಿದ ಹಿರಿಯ ನಟ ನಾಸಿರುದ್ದೀನ್ ಶಾ
72 ಹೂರೇ ಚಿತ್ರದ ಟ್ರೈಲರ್ ಅನ್ನು ಸಹ ನಿರ್ದೇಶಕರಾಗಿರುವ ಅಶೋಕ್ ಪಂಡಿತ್ ಅವರು ಟ್ವಿಟರ್ನಲ್ಲಿ ಷೇರ್ ಮಾಡಿದ್ದಾರೆ. ಇವರು ಕಾಶ್ಮೀರ ಪಂಡತ್ ಕೂಡ ಹೌದು. ನಮ್ಮ ಚಿತ್ರ 72 Hoorain ಸಿನಿಮಾದ ಮೊದಲ ನೋಟವನ್ನು ನಿಮಗೆ ಪ್ರಸ್ತುತಪಡಿಸುವ ಭರವಸೆಯಂತೆ. ನೀವು ಅದನ್ನು ಇಷ್ಟಪಡುತ್ತೀರಿ ಎಂದು ನನಗೆ ಖಾತ್ರಿಯಿದೆ. ಭಯೋತ್ಪಾದಕರ ಮಾರ್ಗದರ್ಶಕರು ಭರವಸೆ ನೀಡಿದಂತೆ 72 ಕನ್ಯೆಯರನ್ನು ಭೇಟಿಯಾಗುವ ಬದಲು ನೀವು ಕ್ರೂರವಾಗಿ ಸಾಯುತ್ತಿದ್ದರೆ? ನನ್ನ ಮುಂಬರುವ ಚಿತ್ರ 72 ಹೂರೇ ನ ಮೊದಲ ನೋಟವನ್ನು ಪ್ರಸ್ತುತಪಡಿಸುತ್ತಿದ್ದೇನೆ. ಚಿತ್ರವು 7 ಜುಲೈ 2023 ರಂದು ಬಿಡುಗಡೆಯಾಗಲಿದೆ ಎಂದು ಅವರು ಟ್ವೀಟ್ನಲ್ಲಿ ತಿಳಿಸಿದ್ದಾರೆ.
72 ಹೂರೇ ಚಿತ್ರದ ಟೀಸರ್
South Cinema
Kiccha Sudeep: ಅಭಿಷೇಕ್ ಅಂಬರೀಷ್ಗೆ ಭರ್ಜರಿ ಗಿಫ್ಟ್ ಕೊಟ್ಟ ಕಿಚ್ಚ ಸುದೀಪ್!
Kiccha Sudeep: ಕರ್ಕಾಟಕ ಲಗ್ನದಲ್ಲಿ (9:30-10:30)ಜೋಡಿ ಹಸೆಮಣೆ ಏರಿತು. ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದ ಕಲ್ಯಾಣಮಂಟಪದಲ್ಲಿ ಮದುವೆ ಗೌಡರ ಸಂಪ್ರದಾಯದಲ್ಲಿ ಅದ್ಧೂರಿಯಾಗಿ ನೆರವೇರಿತು
ಬೆಂಗಳೂರು; ಯಂಗ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಷ್ (Abhishek Ambareesh Wedding) ) ಹಾಗೂ ಅವಿವ ಬಿಡಪ ಜೂನ್ 5ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಕಿಚ್ಚ ಸುದೀಪ್ (Kiccha Sudeep) ಹಾಗೂ ಅಂಬರೀಷ್ ಮಧ್ಯೆ ಒಳ್ಳೆಯ ಒಡನಾಟ ಇತ್ತು. ಸುದೀಪ್ ಅವರ ಆಗಮನದಿಂದ ಮದುವೆಯ ಕಳೆ ಹೆಚ್ಚಿತ್ತು. ಮಂಟಪದಲ್ಲಿ ಅಕ್ಷತೆ ಹಾಕಿ ನವ ಜೋಡಿಗೆ ಶುಭಕೋರಿದ ಸುದೀಪ್ ದಂಪತಿ, ಅಭಿಷೇಕ್-ಅವಿವಾಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ಚಿನ್ನದ ಸರವನ್ನು ಸುದೀಪ್ ಉಡುಗೊರೆಯಾಗಿ ನೀಡಿದ್ದಾರೆ.
ಕರ್ಕಾಟಕ ಲಗ್ನದಲ್ಲಿ (9:30-10:30)ಜೋಡಿ ಹಸೆಮಣೆ ಏರಿತು. ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದ ಕಲ್ಯಾಣಮಂಟಪದಲ್ಲಿ ಮದುವೆ ಗೌಡರ ಸಂಪ್ರದಾಯದಲ್ಲಿ ಅದ್ಧೂರಿಯಾಗಿ ನೆರವೇರಿತು. ಅಭಿಷೇಕ್ ಮದುವೆಗೆ ಸುದೀಪ್ ಗ್ರ್ಯಾಂಡ್ ಆಗಿಯೇ ಎಂಟ್ರಿ ಕೊಟ್ಟರು. ಸುದೀಪ್ ಜತೆ ಪತ್ನಿ ಪ್ರಿಯಾ ಸುದೀಪ್ ಹಾಗೂ ಸಾನ್ವಿ ಸುದೀಪ್ ಕೂಡ ಆಗಮಿಸಿ ಅಭಿ-ಅವಿವಾಗೆ ಶುಭಕೋರಿದರು. ಮಂಟಪದಲ್ಲಿ ಅಕ್ಷತೆ ಹಾಕಿ ನವ ಜೋಡಿಗೆ ಶುಭಕೋರಿದ ಸುದೀಪ್ ದಂಪತಿ, ಅಭಿಷೇಕ್-ಅವಿವಾಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ಚಿನ್ನದ ಸರವನ್ನು ಸುದೀಪ್ ಉಡುಗೊರೆಯಾಗಿ ನೀಡಿದ್ದಾರೆ.
ಇದನ್ನೂ ಓದಿ: Kiccha Sudeep: ಕನ್ನಡಿಗರ ಹೃದಯ ಗೆದ್ದ ʻ2018ʼ ಚಿತ್ರ; ಮಲಯಾಳಂ ಸಿನಿಮಾಗೆ ಕಿಚ್ಚ ಸುದೀಪ್ ಫುಲ್ ಫಿದಾ
ಜೂನ್ 7ಕ್ಕೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಜೂನ್ 16ರಂದು ಮಂಡ್ಯದಲ್ಲಿ ಬೀಗರ ಊಟ ನಡೆಯಲಿದೆ. ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿಡಪ ಅವರ ಪುತ್ರಿ ಆಗಿರುವ ಅವಿವ ಬಿಡಪ (Aviva Bidapa) ಹಾಗೂ ಅಭಿಷೇಕ್ ಅಂಬರೀಷ್ ನಡುವೆ ಇತ್ತೀಚಿನ ವರ್ಷಗಳಲ್ಲಿ ಪರಿಚಯ ಬೆಳೆದಿತ್ತು. ಪರಿಚಯ ಪ್ರೀತಿಗೆ ತಿರುಗಿತು. ಕುಟುಂಬದ ಒಪ್ಪಿಗೆ ಪಡೆದು ಇಬ್ಬರೂ ನಿಶ್ಚಿತಾರ್ಥ ಮಾಡಿಕೊಂಡರು. ಈಗ ಇಬ್ಬರೂ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ.
South Cinema
Actor Yash: ಅಭಿಷೇಕ್ ದಂಪತಿಗೆ ವಿಶ್ ಮಾಡಿದ ಯಶ್ -ರಾಧಿಕಾ; ಸೈಲಿಶ್ ಆಗಿ ಕಂಡ ರಾಕಿ ಭಾಯ್!
Actor Yash : ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದ ಕಲ್ಯಾಣಮಂಟಪದಲ್ಲಿ ಮದುವೆ ಗೌಡರ ಸಂಪ್ರದಾಯದಲ್ಲಿ ಅದ್ಧೂರಿಯಾಗಿ ನೆರವೇರಿತು
South Cinema
Abhishek Ambareesh Wedding: ಅಭಿಷೇಕ್ ಅಂಬರೀಶ್- ಅವಿವ ಜೋಡಿಗೆ ಆಶೀರ್ವದಿಸಿದ ರಜನಿಕಾಂತ್!
Abhishek Ambareesh Wedding: ಸೂಪರ್ಸ್ಟಾರ್ ರಜನಿಕಾಂತ್ ಅವರು ಅಭಿಷೇಕ್ ಅಂಬರೀಶ್ ಹಾಗೂ ಅವಿವ ಮದುವೆಗೆ ಹಾಜರಿದ್ದರು. ಸೆಲೆಬ್ರಿಟಿಗಳ ದಂಡು ಈ ಮದುವೆಗೆ ಹಾಜರಿ ಹಾಕಿದೆ.
ಸೂಪರ್ಸ್ಟಾರ್ ರಜನಿಕಾಂತ್ ಅವರು ಅಭಿಷೇಕ್ ಅಂಬರೀಶ್ (Abhishek Ambareesh Wedding) ಹಾಗೂ ಅವಿವ ಮದುವೆಗೆ ಹಾಜರಿದ್ದರು. ಸೆಲೆಬ್ರಿಟಿಗಳ ದಂಡು ಈ ಮದುವೆಗೆ ಹಾಜರಿ ಹಾಕಿದೆ.
ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿಡಪ ಅವರ ಪುತ್ರಿ ಆಗಿರುವ ಅವಿವ ಬಿಡಪ (Aviva Bidapa) ಹಾಗೂ ಅಭಿಷೇಕ್ ಅಂಬರೀಷ್ ನಡುವೆ ಇತ್ತೀಚಿನ ವರ್ಷಗಳಲ್ಲಿ ಪರಿಚಯ ಬೆಳೆದಿತ್ತು.
ಜೂನ್ 7ಕ್ಕೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಜೂನ್ 16ರಂದು ಮಂಡ್ಯದಲ್ಲಿ ಬೀಗರ ಊಟ ನಡೆಯಲಿದೆ.
-
ಕರ್ನಾಟಕ19 hours ago
Odisha Train Accident: ಒಡಿಶಾ ರೈಲು ದುರಂತಕ್ಕೆ ಕೋಮು ಬಣ್ಣ ನೀಡಿದ ಮಹಿಳೆ, ಒಡಿಶಾ ಪೊಲೀಸರಿಂದ ತನಿಖೆ
-
ಕರ್ನಾಟಕ16 hours ago
ವಿಶ್ವ ಪರಿಸರ ದಿನ: ಸಸಿ ನೆಡಿ, ಫೋಟೊ ಕಳುಹಿಸಿ; ವಿಸ್ತಾರ ನ್ಯೂಸ್ ಅಭಿಯಾನ
-
ಕರ್ನಾಟಕ14 hours ago
Murder Case: ಟೋಲ್ ವಿಚಾರಕ್ಕೆ ಕಿರಿಕ್; ಹಾಕಿ ಸ್ಟಿಕ್ನಿಂದ ಬಡಿದು ಕೊಂದೇಬಿಟ್ಟರು ದುರುಳರು
-
ಕರ್ನಾಟಕ10 hours ago
DK Shivakumar: ಹೊಸಕೆರೆಹಳ್ಳಿ ಕೆರೆ ಮಧ್ಯೆ ರಸ್ತೆ ಮಾಡಿದ್ದಕ್ಕೆ ಜಾಡಿಸಿದ ಡಿಕೆಶಿ; ಅಧಿಕಾರಿಗಳ ಅಮಾನತಿಗೆ ಆದೇಶ
-
ದೇಶ15 hours ago
Odisha Train Accident: ಗಾಯದ ಮೇಲೆ ಬರೆ ಎಂದರೆ ಇದೇ; ಒಡಿಶಾದಲ್ಲಿ ಹಳಿ ತಪ್ಪಿದ ಮತ್ತೊಂದು ರೈಲು
-
ದೇಶ18 hours ago
world environment day : ಇಂದು ವಿಶ್ವ ಪರಿಸರ ದಿನ 2023: ಈ ದಿನದ ಮಹತ್ವ, ಇತಿಹಾಸ, ಥೀಮ್ ತಿಳಿಯಿರಿ
-
ಪರಿಸರ10 hours ago
ವಿಶ್ವ ಪರಿಸರ ದಿನ: ‘ಸಸಿ ನೆಡಿ, ಫೋಟೊ ಕಳುಹಿಸಿ’ ವಿಸ್ತಾರ ಅಭಿಯಾನ; ನಿಮ್ಮ ಮತ್ತಷ್ಟು ಫೋಟೊಗಳು ಇಲ್ಲಿವೆ
-
ಕರ್ನಾಟಕ7 hours ago
ಸರ್ಕಾರಿ ಬಸ್ ಓಡಿಸಿದ ಖಾಸಗಿ ವ್ಯಕ್ತಿ; ಕ್ರೂಸರ್ಗೆ ಡಿಕ್ಕಿ, ತಪ್ಪಿತು ಭಾರೀ ಅನಾಹುತ