Actor Rajinikanth: ಪ್ರವಾಹದಿಂದಾಗಿ ರಜನಿಕಾಂತ್‌ಗೂ ಎಂತಹ ಪರಿಸ್ಥಿತಿ ಬಂತು ನೋಡಿ! - Vistara News

South Cinema

Actor Rajinikanth: ಪ್ರವಾಹದಿಂದಾಗಿ ರಜನಿಕಾಂತ್‌ಗೂ ಎಂತಹ ಪರಿಸ್ಥಿತಿ ಬಂತು ನೋಡಿ!

Actor Rajinikanth: ಚೆನ್ನೈ ಪ್ರವಾಹದ ಪ್ರಭಾವ ನಟ ರಜನಿಕಾಂತ್‌ ಅವರಿಗೂ ತಟ್ಟಿದೆ. ಅವರ ಮನೆಯೊಳಗೆ ನೀರು ನುಗ್ಗಿದ ವಿಡಿಯೊ ವೈರಲ್‌ ಆಗಿದೆ.

VISTARANEWS.COM


on

rajanikanth
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚೆನ್ನೈ: ಬಂಗಾಳ ಕೊಲ್ಲಿಯಲ್ಲಿ ರೂಪುಗೊಂಡ ಮಿಚಾಂಗ್‌ ಚಂಡಮಾರುತದ (Cyclone Michaung) ಪರಿಣಾಮ ತಮಿಳುನಾಡಿನಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದ್ದು, ಚೆನ್ನೈ ಸೇರಿದಂತೆ ವಿವಿಧ ಕಡೆಗಳಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ. ಹಲವು ಮನೆಗಳಿಗೆ ನೀರು ನುಗ್ಗಿದೆ. ಈ ಮಧ್ಯೆ ತಮಿಳು ಸೂಪರ್‌ ಸ್ಟಾರ್‌ ರಜನಿಕಾಂತ್‌ ಅವರ ಮನೆಯನ್ನೂ ಪ್ರವಾಹ ಬಿಟ್ಟಿಲ್ಲ. ಚೆನ್ನೈಯ ಅತ್ಯಂತ ಶ್ರೀಮಂತ ಪ್ರದೇಶದಲ್ಲಿ ತಲೈವಾ ಮನೆ ಇದ್ದು, ಅಭಿಮಾನಿಯೊಬ್ಬರು ಚಿತ್ರೀಕರಿಸಿದ ವಿಡಿಯೊದಲ್ಲಿ ಅವರ ಮನೆಯ ಮುಂದೆ ನೀರು ನಿಂತ ರಸ್ತೆ ಕಂಡು ಬರುತ್ತಿದೆ. ಕಾಂಪೌಂಡ್‌ ಒಳಗೂ ನೀರು ನುಗ್ಗಿದೆ. ಮಳೆಯ ಬಳಿಕ ಇಡೀ ರಸ್ತೆ ನೀರಿನಲ್ಲಿ ಮುಳುಗಿರುವುದು ಕಂಡು ಬಂದಿದೆ. ಸದ್ಯ ಈ ವಿಡಿಯೊ ವೈರಲ್‌ (Viral Video) ಆಗಿದ್ದು, ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ರಜನಿಕಾಂತ್‌ ಮನೆಯೊಳಗೂ ನೀರು ನುಗ್ಗಿರುವ ಸಾಧ್ಯತೆ ಇದೆ.

ಸೋಷಿಯಲ್‌ ಮೀಡಿಯಾದಲ್ಲಿ ಅಭಿಮಾನಿಗಳು ಪರಿಸ್ಥಿತಿಯ ಬಗ್ಗೆ ಆಘಾತ ಸೂಚಿಸಿದ್ದಾರೆ. ಒಬ್ಬರಂತೂ ‘ತಲೈವರ್‌ಗೂ ಎಂತಹ ಪರಿಸ್ಥಿತಿ ಬಂದಿದೆ’ ಎಂದು ಖೇದ ವ್ಯಕ್ತಪಡಿಸಿದ್ದಾರೆ. ವರದಿ ಪ್ರಕಾರ ರಜನಿಕಾಂತ್‌ ಸದ್ಯ ಚಿತ್ರೀಕರಣದ ನಿಮಿತ್ತ ತಿರುನೆಲ್ವೇಲಿಗೆ ತೆರಳಿದ್ದಾರೆ. ಟಿ.ಜೆ.ಜ್ಞಾನವೇಲ್ ನಿರ್ದೇಶನದ ಮುಂಬರುವ ಚಿತ್ರ ‘ತಲೈವರ್ 170’ರ ಚಿತ್ರೀಕರಣಕ್ಕಾಗಿ ರಜನಿಕಾಂತ್ ತಿರುನೆಲ್ವೇಲಿಗೆ ಹೋಗಿದ್ದಾರೆ. ಅವರ ಕುಟುಂಬವು ನೆರೆ ಬಾಧಿತ ಪೋಯೆಸ್ ಗಾರ್ಡನ್ ಮನೆಯಿಂದ ಬೇರೆ ಸ್ಥಳಕ್ಕೆ ಸ್ಥಳಾಂತರಗೊಂಡಿದೆ. ರಜನಿಕಾಂತ್‌ ಈ ಸಮಸ್ಯೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಆಮೀರ್‌ ಖಾನ್‌ ರಕ್ಷಣೆ

ಚೆನ್ನೈ ನೆರೆಗೆ ಸಿಲುಕಿದ್ದ ಬಾಲಿವುಡ್‌ ನಟ ಆಮೀರ್‌ ಖಾನ್‌ ಅವರನ್ನು ಮಂಗಳವಾರ ರಕ್ಷಿಸಲಾಗಿತ್ತು. ಪ್ರವಾಹ ಪೀಡಿತ ಸ್ಥಳದಿಂದ ಆಮೀರ್ ಖಾನ್ ಮತ್ತು ತಮಿಳು ನಟ ವಿಷ್ಣು ವಿಶಾಲ್ ರಕ್ಷಣಾ ದೋಣಿಯಲ್ಲಿ ಕುಳಿತಿರುವ ಫೋಟೊ ವೈರಲ್ ಆಗಿತ್ತು. ಅಲ್ಲದೆ ಕಲಾವಿದರಾದ ನಮಿತಾ, ವಿನೋದಿನಿ ವೈದ್ಯನಾಥನ್, ಅದಿತಿ ಬಾಲನ್, ಶಂತನು ಮತ್ತು ಆತ್ಮಿಕಾ ಪ್ರವಾಹದಿಂದ ಸಂಕಷ್ಟ ಅನುಭವಿಸಿದ್ದರು. ಅವರನ್ನು ರಕ್ಷಣಾ ಪಡೆ ಸುರಕ್ಷಿತ ಜಾಗಕ್ಕೆ ಕರೆದುಕೊಂಡು ಹೋಗಿದೆ. ಮಳೆ ನಿಂತಿದ್ದರೂ ಕಟ್ಟಿ ನಿಂತ ನೀರಿನ ಮಟ್ಟ ಇನ್ನೂ ಇಳಿಕೆಯಾಗಿಲ್ಲ. ವಿದ್ಯುತ್‌ ಸಂಪರ್ಕ ಪುನಃ ಸ್ಥಾಪಿಸಲು ಸರ್ಕಾರ ಅವಿರತ ಪ್ರಯತ್ನದಲ್ಲಿ ತೊಡಗಿದೆ.

ಇನ್ನು ಸಿನಿಮಾ ವಿಚಾರಕ್ಕೆ ಬರುವುದಾದರೆ ರಜನಿಕಾಂತ್‌ ಸದ್ಯ ʼತಲೈವರ್ 170ʼ ಚಿತ್ರದಲ್ಲಿ ನಿರತರಾಗಿದ್ದಾರೆ. ಇದರಲ್ಲಿ ಅಮಿತಾಭ್ ಬಚ್ಚನ್, ಫಹಾದ್ ಫಾಸಿಲ್ ಮತ್ತು ರಾಣಾ ದಗ್ಗುಬಾಟಿ ಪ್ರಮುಖ ಪಾತ್ರಗಳಲ್ಲಿದ್ದಾರೆ.‌ ಬಳಿಕ ರಜನಿಕಾಂತ್ ಲೋಕೇಶ್ ಕನಗರಾಜ್ ಅವರೊಂದಿಗೆ ಇನ್ನೂ ಹೆಸರಿಡದ ಚಿತ್ರಕ್ಕಾಗಿ ಕೈ ಜೋಡಿಸಲಿದ್ದಾರೆ. 2024ರ ಏಪ್ರಿಲ್‌ನಲ್ಲಿ ಸೆಟ್ಟೇರಲಿದೆ. ರಜನಿಕಾಂತ್‌ ಅಭಿನಯದ ʼಜೈಲರ್‌ʼ ಸಿನಿಮಾ ಇತ್ತೀಚೆಗೆ ತೆರೆಕಂಡು ಸೂಪರ್‌ ಹಿಟ್‌ ಆಗಿತ್ತು. ಸ್ಯಾಂಡಲ್‌ವುಡ್‌ ಹ್ಯಾಟ್ರಿಕ್‌ ಹೀರೋ ಶಿವ ರಾಜ್‌ಕುಮಾರ್‌, ಮಲೆಯಾಳಂ ಸೂಪರ್‌ ಸ್ಟಾರ್‌ ಮೋಹನ್‌ ಲಾಲ್‌, ತಮನ್ನಾ, ರಮ್ಯಾ ಕೃಷ್ಣ, ವಿನಾಯಕ್‌ ಮತ್ತಿತರರು ಈ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ನೆಲ್ಸನ್‌ ದಿಲೀಪ್‌ ಕುಮಾರ್‌ ನಿರ್ದೇಶನದ ಈ ಚಿತ್ರ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆ ಕಂಡಿತ್ತು.

ಇದನ್ನೂ ಓದಿ: Aamir Khan: ಚೆನ್ನೈ ಪ್ರವಾಹ ಪೀಡಿತ ಸ್ಥಳದಿಂದ ಬಾಲಿವುಡ್‌ ನಟ ಆಮೀರ್ ಖಾನ್ ಗ್ರೇಟ್‌ ಎಸ್ಕೇಪ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Kiccha Sudeep: ಚಾಮುಂಡಿ ಬೆಟ್ಟಕ್ಕೆ ಕಿಚ್ಚ ಸುದೀಪ್ ಭೇಟಿ; ಇವರನ್ನು ನೋಡಲು ಜನವೋ ಜನ!

Kiccha Sudeep: ಕೆಲವು ದಿನಗಳ ಹಿಂದೆ ಸುದೀಪ್‌ ʻಮ್ಯಾಕ್ಸ್‌ʼ ಸಿನಿಮಾ ಶೂಟಿಂಗ್‌ ಕಂಪ್ಲೀಟ್‌ ಆಗಿದೆ ಎಂದು ಎಕ್ಸ್‌ ಮೂಲಕ ಮಾಹಿತಿ ಹಂಚಿಕೊಂಡಿದ್ದರು. ಕೆಲವೇ ದಿನಗಳಲ್ಲಿ ಮ್ಯಾಕ್ಸ್‌ ಟ್ರೈಲರ್‌ ರಿಲೀಸ್‌ ಮಾಡಲಿದ್ದಾರೆ ಎನ್ನಲಾಗಿದೆ. ಇದೀಗ ಚಾಮುಂಡಿ ಬೆಟ್ಟಕ್ಕೆ ನಟ ಕಿಚ್ಚ ಸುದೀಪ್ (Kiccha Sudeep) ಇಂದು (ಮೇ.27) ಬೆಳಗ್ಗೆ ಭೇಟಿ ನೀಡಿದ್ದಾರೆ.

VISTARANEWS.COM


on

Kiccha Sudeep visit chamundeshwari temple
Koo

ಮೈಸೂರು: ಚಾಮುಂಡಿ ಬೆಟ್ಟಕ್ಕೆ ನಟ ಕಿಚ್ಚ ಸುದೀಪ್ (Kiccha Sudeep) ಇಂದು (ಮೇ 27) ಬೆಳಗ್ಗೆ ಭೇಟಿ ನೀಡಿದ್ದಾರೆ. ನಾಡ ಅದಿದೇವತೆ ದರ್ಶನ ಪಡೆದಿದ್ದಾರೆ ಕಿಚ್ಚ ಸುದೀಪ್. ಕಿಚ್ಚ ಸುದೀಪ್ ನೋಡಲು ಅಭಿಮಾನಿಗಳು ಸಾಗರವೇ ನೆರೆದಿತ್ತು. ಕಿಚ್ಚ ಸುದೀಪ್‌ ಕಂಡೊಡನೆ (Kiccha Sudeep visit chamundeshwari temple) ಫ್ಯಾನ್ಸ್‌ ಜೈಕಾರ ಹಾಕಿದ್ದಾರೆ. ಕೆಲವು ದಿನಗಳ ಹಿಂದೆ ಸುದೀಪ್‌ ʻಮ್ಯಾಕ್ಸ್‌ʼ ಸಿನಿಮಾ ಶೂಟಿಂಗ್‌ ಕಂಪ್ಲೀಟ್‌ ಆಗಿದೆ ಎಂದು ಎಕ್ಸ್‌ ಮೂಲಕ ಮಾಹಿತಿ ಹಂಚಿಕೊಂಡಿದ್ದರು. ಕೆಲವೇ ದಿನಗಳಲ್ಲಿ ಮ್ಯಾಕ್ಸ್‌ ಟ್ರೈಲರ್‌ ರಿಲೀಸ್‌ ಮಾಡಲಿದ್ದಾರೆ ಎನ್ನಲಾಗಿದೆ.

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದರು. ಮಂಗಳೂರಿನ ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರೆಸ್ಟ್ ಆಯೋಜಿಸಿದ್ದ, ಯಕ್ಷ ಧ್ರುವ ಪಟ್ಲ ಸಂಭ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕಾರ್ಯಕ್ರಮದ ವೇದಿಕೆಯಲ್ಲಿ ಮಾತಾಡುತ್ತಿದ್ದ ಕಿಚ್ಚ ಸುದೀಪ್ ತಮಗಿರುವ ತುಳುನಾಡಿನ ಕನೆಕ್ಷನ್ ಬಗ್ಗೆ ಮಾತಾಡಿದ್ದರು. ಅವರ ತಾಯಿ ತುಳುನಾಡಿನವರಾಗಿದ್ದು, ಅವರು ತುಂಬಾ ಚೆನ್ನಾಗಿ ತುಳು ಮಾತಾಡುತ್ತಾರೆ. ಆದರೆ, ತಮಗೆ ಮಾತ್ರ ಎರಡೇ ಎರಡು ತುಳು ಪದಗಳನ್ನು ಹೇಳಿಕೊಟ್ಟಿದ್ದಾರಷ್ಟೇ ಎಂದು ಹೇಳಿಕೊಂಡಿದ್ದರು.

ಇದನ್ನೂ ಓದಿ: Kiccha Sudeep: ʻಮ್ಯಾಕ್ಸ್ʼ ಪ್ರಿ- ಕ್ಲೈಮ್ಯಾಕ್ಸ್ ಫೋಟೊ ಲೀಕ್‌? ಬೆಂಕಿ ಬಿರುಗಾಳಿ ಅಂದ್ರು ಫ್ಯಾನ್ಸ್‌!

‘ವಿಕ್ರಾಂತ್ ರೋಣ’ ಬಳಿಕ ಕಿಚ್ಚ ಸುದೀಪ್ (Kiccha Sudeep) ಒಪ್ಪಿಕೊಂಡಿರುವ ಸಿನಿಮಾ ಮ್ಯಾಕ್ಸ್ (MAX). ಹೀಗಾಗಿ ಈ ಸಿನಿಮಾ ಬಗ್ಗೆ ಅವರ ಅಭಿಮಾನಿಗಳಲ್ಲಿ ಬಹಳಷ್ಟು ನಿರೀಕ್ಷೆಯಿದೆ. ಕಿಚ್ಚ ಸುದೀಪ್‌ ಎಕ್ಸ್‌ನಲ್ಲಿ ʻʻಮಹಾಬಲಿಪುರಂನಲ್ಲಿ ʻಮ್ಯಾಕ್ಸ್‌ʼಗಾಗಿ ಒಂದು ಸುತ್ತು. ಸುದೀರ್ಘ 10 ತಿಂಗಳ ಪ್ರಯಾಣ. ನಾನು‌ ಪ್ರತಿ ಘಳಿಗೆಯನ್ನು ಆನಂದಿಸಿದೆ. ಸೆಟ್‌ನಲ್ಲಿ ಅದ್ಭುತ ತಂಡ ಮತ್ತು ಸುಂದರ ತಾರೆಯನ್ನು ಒಳಗೊಂಡಿತ್ತು. ಧನ್ಯವಾದಗಳು ಧನು ಸರ್. ನನ್ನನ್ನು ಚೆನ್ನಾಗಿ ಹೋಸ್ಟ್ ಮಾಡಿದ್ದಕ್ಕಾಗಿ ಧನ್ಯವಾದಗಳು, ವಿಜಯ್ ಮತ್ತು ಇಡೀ ತಂಡಕ್ಕೆ ಧನ್ಯವಾದʼʼಎಂದು ಬರೆದುಕೊಂಡಿದ್ದರು.

ಇದಕ್ಕೂ ಕೆಲವು ದಿನಗಳ ಹಿಂದೆ ಟ್ರೈಲರ್ ರಫ್ ಕಟ್ ಆಗಿರುವ ಬಗ್ಗೆ ಸುದೀಪ್ ಮಾಹಿತಿ ಹಂಚಿಕೊಂಡಿದ್ದರು. ಸುದೀಪ್‌ ಎಕ್ಸ್‌ನಲ್ಲಿ ʻʻಮ್ಯಾಕ್ಸ್ (Max) ಕ್ಲೈಮ್ಯಾಕ್ಸ್‌ನ ಪ್ರಮುಖ ಭಾಗ ಪೂರ್ಣಗೊಳಿಸಲಾಗಿದೆ. ಇಲ್ಲಿಯವರೆಗೆ ಚಿತ್ರೀಕರಿಸಿದ ಅಷ್ಟೂ ಶಾಟ್‌ಗಳನ್ನು ನೋಡಿದೆ. ಚಿತ್ರದ ಪ್ರತಿ ಬಿಟ್ ನೋಡಿ, ತಂಡದ ಎಫರ್ಟ್‌ ಕಂಡು ಸಂತೋಷವಾಗಿದೆ. ಸ್ವಲ್ಪ ಭಾಗ ಚಿತ್ರೀಕರಣ ಬಾಕಿ ಇದೆ. ಟ್ರೈಲರ್ ವೇಳೆ ರಫ್ ಕಟ್ ಸಹ ನೋಡಿದೆ ಮತ್ತು ಅದು ನನ್ನನ್ನು ರೋಮಾಂಚನಗೊಳಿಸಿತುʼʼ ಎಂದು ಬರೆದುಕೊಂಡಿದ್ದರು.

ಮ್ಯಾಕ್ಸ್ ಸಿನಿಮಾದಲ್ಲಿ ಸುದೀಪ್ ಪೊಲೀಸ್‌ ಪಾತ್ರದಲ್ಲಿ ಮಿಂಚಲಿದ್ದಾರೆ. ಪಾತ್ರದ ಹೆಸರು ವಿಭಿನ್ನವಾಗಿಯೇ ಇದೆ. ʻಅರ್ಜುನ್ ಮಹಾಕ್ಷಯ್ʼ ಹೆಸರಿನ ಸುದೀಪ್ ಪಾತ್ರ ಸ್ಪೆಷಲ್ ಆಗಿಯೇ ಇರಲಿದೆ ಎಂದು ವರದಿಯಾಗಿದೆ. ʻಮ್ಯಾಕ್ಸ್ʼ ಸಿನಿಮಾದಲ್ಲಿ ಸುದೀಪ್ ಭರ್ಜರಿ ಸಾಹಸಗಳನ್ನ ಮಾಡಿದ್ದಾರೆ. ಸಾಹಸ ನಿರ್ದೇಶಕ ಚೇತನ್ ಡಿಸೋಜಾ ಈ ಸಾಹಗಳನ್ನ ಕಂಪೋಸ್ ಮಾಡಿದ್ದಾರೆ. ವಿಶೇಷವಾಗಿ ಚಿತ್ರದ ಕ್ಲೈಮ್ಯಾಕ್ಸ್‌ನಲ್ಲಿ ಭರ್ಜರಿ ಆ್ಯಕ್ಷನ್‌ಗಳೇ ಇವೆ ಎನ್ನಲಾಗಿದೆ.

ʻಮ್ಯಾಕ್ಸ್ʼ ಸಿನಿಮಾಕ್ಕೆ ಕನ್ನಡದ ತಾರೆಯರು ಇದ್ದಾರೆ. ಕನ್ನಡದ ಟೆಕ್ನಿಷಿಯನ್‌ಗಳೂ ಇದ್ದಾರೆ. ಹಾಗೆಯೇ ಅಜನೀಶ್ ಲೋಕನಾಥ್ ಈ ಚಿತ್ರಕ್ಕೆ ಸಂಗೀತ ಕೊಟ್ಟಿದ್ದಾರೆ. ಶೇಖರ್‌ಚಂದ್ರ ಕ್ಯಾಮೆರಾ ವರ್ಕ್ ಮಾಡಿದ್ದಾರೆ. ಸಂಯುಕ್ತಾ ಹೊರನಾಡು, ಸುಕೃತಾ ವಾಗ್ಲೆ ಕೂಡ ಈ ಸಿನಿಮಾದಲ್ಲಿ ಇದ್ದಾರೆ.

ವರಲಕ್ಷ್ಮಿ ಶರತ್ ಕುಮಾರ್ ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ. ವಿಜಯ್ ಕಾರ್ತಿಕೇಯ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ತಮಿಳು ನಿರ್ಮಾಪಕ ಕಲೈಪುಲಿ ಎಸ್. ತನು ಜೊತೆ ಸೇರಿ ಕಿಚ್ಚ ಕ್ರಿಯೇಷನ್ಸ್ ಬ್ಯಾನರ್‌ನಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ.

Continue Reading

ಸಿನಿಮಾ

Ragini Dwivedi: ರಾಗಿಣಿ ದ್ವಿವೇದಿ ಅಭಿನಯದ ʻಬಿಂಗೊʼ ಚಿತ್ರದ ಡಬ್ಬಿಂಗ್‌ ಮುಕ್ತಾಯ

Ragini Dwivedi: ರಾಗಿಣಿ ದ್ವಿವೇದಿ, ಆರ್ ಕೆ ಚಂದನ್ , ರಾಜೇಶ್ ನಟರಂಗ, ಪವನ್(ಮಜಾ ಟಾಕೀಸ್), ಮುರಳಿ ಪೂರ್ವಿಕ್, ಅಪೂರ್ವ, ಶ್ರವಣ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಹಿತನ್ ಹಾಸನ್ ಸಂಗೀತ ನೀಡಿರುವ ಮೂರು ಹಾಡುಗಳು ಈ ಚಿತ್ರದಲ್ಲಿದೆ. ಸದ್ಯದಲ್ಲೇ ಹಾಡುಗಳು ಹಾಗೂ ಟೀಸರ್ ಬಿಡುಗಡೆಯಾಗಲಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.

VISTARANEWS.COM


on

Ragini Dwivedi Bingo Movie Dubbing complete
Koo

ಬೆಂಗಳೂರು: “ಶಂಭೋ ಶಿವ ಶಂಕರ” ಚಿತ್ರ ನಿರ್ದೇಶಿಸಿದ್ದ ಶಂಕರ್ ಕೋನಮಾನಹಳ್ಳಿ ನಿರ್ದೇಶನದ “ಬಿಂಗೊ” ಚಿತ್ರದ ಡಬ್ಬಿಂಗ್ ಮುಕ್ತಾಯಗೊಂಡಿದೆ. ಆರ್ ಕೆ ಚಂದನ್ ಹಾಗೂ ರಾಗಿಣಿ ದ್ವಿವೇದಿ (Ragini Dwivedi) ನಾಯಕ – ನಾಯಕಿಯಾಗಿ ನಟಿಸಿರುವ ಸಿನಿಮಾ ಇದು. “ಬಿಂಗೊ” ಚಿತ್ರದ ಡಬ್ಬಿಂಗ್ ಸಾಧುಕೋಕಿಲ ಅವರ ಲೂಪ್ ಸ್ಟುಡಿಯೊದಲ್ಲಿ ಮುಕ್ತಾಯವಾಗಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಬಿರುಸಿನಿಂದ ಸಾಗಿವೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

ಸಸ್ಪೆನ್ಸ್ ಥ್ರಿಲ್ಲರ್ ಜಾನರ್‌ನ ಈ ಚಿತ್ರಕ್ಕೆ ಬೆಂಗಳೂರಿನಲ್ಲೇ ಚಿತ್ರೀಕರಣ ನಡೆದಿದೆ. ಮೇ 24ರಂದು ನಟಿ ರಾಗಿಣಿ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ “ಬಿಂಗೊ” ಚಿತ್ರತಂಡ ರಾಗಿಣಿ ಅವರಿಗೆ ಶುಭಾಶಯ ತಿಳಿಸಿದೆ. ಆರ್.ಕೆ ಸ್ಟುಡಿಯೋಸ್ ಮತ್ತು ಮುತರಾ ವೆಂಚರ್ಸ್ ಲಾಂಛನದಲ್ಲಿ ಲಲಿತಾಸ್ವಾಮಿ ಮತ್ತು ಆರ್ ಪರಾಂಕುಶ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ರಾಗಿಣಿ ದ್ವಿವೇದಿ, ಆರ್ ಕೆ ಚಂದನ್ , ರಾಜೇಶ್ ನಟರಂಗ, ಪವನ್(ಮಜಾ ಟಾಕೀಸ್), ಮುರಳಿ ಪೂರ್ವಿಕ್, ಅಪೂರ್ವ, ಶ್ರವಣ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಹಿತನ್ ಹಾಸನ್ ಸಂಗೀತ ನೀಡಿರುವ ಮೂರು ಹಾಡುಗಳು ಈ ಚಿತ್ರದಲ್ಲಿದೆ. ಸದ್ಯದಲ್ಲೇ ಹಾಡುಗಳು ಹಾಗೂ ಟೀಸರ್ ಬಿಡುಗಡೆಯಾಗಲಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.

ನಟರಾಜ್ ಮುದ್ದಾಲ್ ಅವರ ಛಾಯಾಗ್ರಹಣವಿರುವ ಈ ಚಿತ್ರದಲ್ಲಿ ಮೈನವಿರೇಳಿಸುವ ಸಾಹಸ ಸನ್ನಿವೇಶಗಳಿದ್ದು, ನರಸಿಂಹ ಸಾಹಸ ನಿರ್ದೇಶನ ಮಾಡಿದ್ದಾರೆ. ಕಂಬಿ ರಾಜು ಅವರ ನೃತ್ಯ ನಿರ್ದೇಶನ ಸಿನಿಮಾಕ್ಕಿದೆ.

ಇದನ್ನೂ ಓದಿ: Ragini Dwivedi: ರಾಜವರ್ಧನ್ ‘ಗಜರಾಮ’ ಸಿನಿಮಾದ ಸ್ಪೆಷಲ್ ಸಾಂಗ್‌ಗೆ ಹೆಜ್ಜೆ ಹಾಕಿದ ತುಪ್ಪದ ಬೆಡಗಿ ರಾಗಿಣಿ!

ಮೋಹನ್‌ಲಾಲ್‌ ಜತೆ ಶೂಟಿಂಗ್‌ ಶುರು ಮಾಡಿದ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ

ನಂದಕಿಶೋರ್ ಅವರು ಮಲಯಾಳಂ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಮಾಲಿವುಡ್‌ ಸ್ಟಾರ್‌ ಮೋಹನ್ ಲಾಲ್ (Actor Mohan Lal) ಅವರಿಗೆ ನಂದಕಿಶೋರ್ ಸಿನಿಮಾ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೇ ಈ ಸಿನಿಮಾಗೆ ಏಕ್ತಾ ಕಪೂರ್‌ ಅವರ ಸಹ ನಿರ್ಮಾಣವಿದೆ. ಈ ಬಹುನಿರೀಕ್ಷಿತ ಚಿತ್ರದ ಶೂಟಿಂಗ್​ ಆರಂಭ ಆಗಿದೆ. ಈ ಚಿತ್ರದ ಪಾತ್ರವರ್ಗ ಗಮನ ಸೆಳೆಯುತ್ತಿದೆ. ಈಗ ರಾಗಿಣಿ ದ್ವಿವೇದಿ (Ragini Dwivedi) ಅವರು ನಟ ಮೋಹನ್​ಲಾಲ್​ ಜತೆ ನಟಿಸುತ್ತಿದ್ದಾರೆ. ಮೋಹನ್​ಲಾಲ್​ ಅಭಿನಯದ ‘ವೃಷಭ’ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ಈ ಸಿನಿಮಾದಲ್ಲಿ ನಟಿಸುವ ಚಾನ್ಸ್​ ಸಿಕ್ಕಿರುವುದಕ್ಕೆ ರಾಗಿಣಿ ದ್ವಿವೇದಿ ಸಖತ್​ ಖುಷಿ ಆಗಿದ್ದಾರೆ.

ಈ ಪ್ಯಾನ್‌ ಇಂಡಿಯಾ ಸಿನಿಮಾಗೆ ಏಕ್ತಾ ಕಪೂರ್‌ ಅವರ ಸಹ ನಿರ್ಮಾಣವಿದೆ. ಎವಿಎಸ್ ಸ್ಟುಡಿಯೋಸ್ ಮತ್ತು ಕನೆಕ್ಟ್ ಮೀಡಿಯಾ 200 ಕೋಟಿ ರೂ ಬಜೆಟ್‌ನಲ್ಲಿ ಸಿನಿಮಾ ಮಾಡಲಿದೆ ಎಂದು ವರದಿಯಾಗಿದೆ. ಏಕ್ತಾ ಕಪೂರ್‌ ಅವರ ಸಹ ನಿರ್ಮಾಣವಿದ್ದು, ಇದು ಏಕ್ತಾ ಅವರ ಮೊದಲ ಪ್ಯಾನ್ ಇಂಡಿಯಾ ಚಿತ್ರವಾಗಿದೆ.

ನಂದ್ ಕಿಶೋರ್ ನಿರ್ದೇಶನದ ಈ ಚಿತ್ರ 2024ರಲ್ಲಿ ತೆಲುಗು, ಮಲಯಾಳಂ, ತಮಿಳು, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಇದೊಂದು ಪೌರಾಣಿಕ ಹಾಗೂ ಫ್ಯಾಂಟಸಿ ಕಥಾ ಹಂದರವನ್ನು ಹೊಂದಿರುವ ಸಿನಿಮಾ ಎಂದು ಹೇಳಿಕೊಂಡಿರುವ ನಂದಕಿಶೋರ್, ಸಾಹಸ ಪ್ರಧಾನ ದೃಶ್ಯಗಳನ್ನೂ ಹೊಂದಿರುವುದಾಗಿ ತಿಳಿಸಿದ್ದಾರೆ.

Continue Reading

ಸ್ಯಾಂಡಲ್ ವುಡ್

Sahara Movie Trailer: ಕ್ರಿಕೆಟ್ ಆಧಾರಿತ `ಸಹಾರಾ’ ಸಿನಿಮಾ ಟ್ರೈಲರ್‌ ಔಟ್‌ ಮಾಡಿದ RCB ಮಾಜಿ ಆಟಗಾರ

Sahara Movie Trailer: ಕನ್ನಡದಲ್ಲಿ ಮೊದಲ ಮಹಿಳಾ ಕ್ರಿಕೆಟ್ ಪ್ರಧಾನ ಸಿನಿಮಾವಾಗಿರುವ ʻಸಹಾರಾʼದಲ್ಲಿ ಮಂಡ್ಯ ಹುಡುಗಿ ಕ್ರಿಕೆಟರ್ ಆದ ಕಥೆಯನ್ನು ಕಟ್ಟಿಕೊಡಲಾಗಿದೆ. ಮಂಡ್ಯ ಹುಡುಗಿಯ ಪಾತ್ರದಲ್ಲಿ ಸಾರಿಕಾ ರಾವ್ ಅಭಿನಯಿಸಿದ್ದಾರೆ. ಪಾತ್ರಕ್ಕಾಗಿಯೇ ಸಾರಿಕಾ ಅವರು ರಣಜಿ ಆಟಗಾರರಾದ. ಕೆ.ಬಿ. ಪವನ್ ಬಳಿ ಕ್ರಿಕೆಟ್ ಆಟದ ಬಗ್ಗೆ ತರಬೇತಿ ಪಡೆದುಕೊಂಡು ಬಂದು ನಂತರ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ.

VISTARANEWS.COM


on

Sahara Movie Trailer Out Sarika Rao
Koo

ಬೆಂಗಳೂರು: ಕನ್ನಡದಲ್ಲಿ ಮಹಿಳಾ ಕ್ರಿಕೆಟ್ ಆಧಾರಿತ ಸಿನಿಮಾ ʻಸಹಾರಾʼ ಟ್ರೈಲರ್‌ (Sahara Movie Trailer) ಬಿಡುಗಡೆಯಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಟ್ರೈಲರ್‌ ಬಿಡುಗಡೆ ಕಾರ್ಯಕ್ರಮ ನಡೆಯಿತು. ಆರ್‌ಸಿಬಿ ತಂಡದ ಮಾಜಿ ಆಟಗಾರ ಗೌತಮ್ ಕೆ ಚಿತ್ರದ ಮೊದಲ ನೋಟ ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

ಬಿಡುಗಡೆ ಬಳಿಕ ಕ್ರಿಕೆಟರ್ ಕೃಷ್ಣಪ್ಪ ಗೌತಮ್ ಮಾತನಾಡಿ, ʻʻಕ್ರಿಕೆಟ್ ಕಥೆಯನ್ನು ಒಳಗೊಂಡಿರುವ ಚಿತ್ರ ಇದು. ಟ್ರೈಲರ್‌ ತುಂಬ ನೈಜವಾಗಿದೆ. ಇಡೀ ತಂಡಕ್ಕೆ ಒಳ್ಳೆದಾಗಲಿʼʼ ಎಂದರು. ನಟಿ ಸಾರಿಕಾ ರಾವ್ ಮಾತನಾಡಿ, ʻʻಇದು ಸ್ಫೂರ್ತಿದಾಯಕ ಕಥೆ. ನಾನು ಜವಾಬ್ದಾರಿಯಿಂದ ನನ್ನ ಪಾತ್ರ ನಿರ್ವಹಿಸಿದ್ದೇನೆ ಎಂದುಕೊಳ್ಳುತ್ತೇನೆ. ಮಹಿಳಾ ಪ್ರಧಾನ ಸಿನಿಮಾವನ್ನು ನಿರ್ದೇಶಕರಾದ ಮಜೇಶ್ ಅವರು ಕನ್ನಡ ಇಂಡಸ್ಟ್ರೀಗೆ ಕೊಡುತ್ತಿದ್ದಾರೆ. ಕಾಣದ ಕೈಗಳು ಅಂದರೆ ಸುದೀಪ್ ಸರ್, ಸಿಂಪಲ್ ಸುನಿ ಸರ್, ಅಶ್ವಿನಿ ಮೇಡಂ ಅವರೆಲ್ಲಾ ಹೊಸಬರಿಗೆ ಸಾಥ್ ಕೊಟ್ಟಿದ್ದಾರೆʼʼ ಎಂದು ಸಂತಸ ಹಂಚಿಕೊಂಡರು.

ಕನ್ನಡದಲ್ಲಿ ಮೊದಲ ಮಹಿಳಾ ಕ್ರಿಕೆಟ್ ಪ್ರಧಾನ ಸಿನಿಮಾವಾಗಿರುವ ʻಸಹಾರಾʼದಲ್ಲಿ ಮಂಡ್ಯ ಹುಡುಗಿ ಕ್ರಿಕೆಟರ್ ಆದ ಕಥೆಯನ್ನು ಕಟ್ಟಿಕೊಡಲಾಗಿದೆ. ಮಂಡ್ಯ ಹುಡುಗಿಯ ಪಾತ್ರದಲ್ಲಿ ಸಾರಿಕಾ ರಾವ್ ಅಭಿನಯಿಸಿದ್ದಾರೆ. ಪಾತ್ರಕ್ಕಾಗಿಯೇ ಸಾರಿಕಾ ಅವರು ರಣಜಿ ಆಟಗಾರರಾದ. ಕೆ.ಬಿ. ಪವನ್ ಬಳಿ ಕ್ರಿಕೆಟ್ ಆಟದ ಬಗ್ಗೆ ತರಬೇತಿ ಪಡೆದುಕೊಂಡು ಬಂದು ನಂತರ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ.

ಇದನ್ನೂ ಓದಿ: Dhruva Sarja: ಬಾಲಿವುಡ್‌ ಸಿನಿಮಾಗೆ ಎಂಟ್ರಿ ಕೊಡ್ತಾರಾ ಧ್ರುವ ಸರ್ಜಾ? ಬಿಗ್‌ ಬಜೆಟ್‌ ಚಿತ್ರದಲ್ಲಿ ಸಹೋದರನ ಪಾತ್ರ?

ಕಳೆದ ಎಂಟು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸಹನಿರ್ದೇಶಕರಾಗಿ ಕೆಲಸ ಮಾಡಿರುವ ಮಂಜೇಶ್ ಭಗವತ್ ಅವರು ಇದೇ ಮೊದಲ ಬಾರಿಗೆ ನಿರ್ದೇಶನದ ಜವಾಬ್ದಾರಿ ಹೊತ್ತು ಈ ಚಿತ್ರವನ್ನು ಹೊರತರುತ್ತಿದ್ದಾರೆ. ಮಾ ಕ್ರಿಯೆಷನ್ಸ್ ಪ್ರಥಮ ನಿರ್ಮಾಣದ ಈ ಚಿತ್ರಕ್ಕೆ ನಿರ್ದೇಶಕರೇ ಕಥೆ- ಚಿತ್ರಕಥೆ – ಸಂಭಾಷಣೆ ರಚಿಸಿದ್ದಾರೆ.

ಉಳಿದಂತೆ ತಾರಾಬಳಗದಲ್ಲಿ ಮಂಜುನಾಥ ಹೆಗಡೆ, ಕುರಿ ಸುನಿಲ್, ಅಂಕುಶ್ ರಜತ್, ರಂಜನ್, ಮಂಜುಳಾ ರೆಡ್ಡಿ, ಪ್ರಕಾಶ್ ಶೆಟ್ಟಿ ಮುಂತಾದವರು ಅಭಿನಯಿಸಿದ್ದಾರೆ. ಮಹಿಳಾ ಕ್ರಿಕೆಟ್ ಆಧರಿಸಿದ ಈ ಚಿತ್ರಕ್ಕೆ ಪಿ.ಆರ್.ಸಂಸ್ಥೆ ಸಪೋರ್ಟ್ ಮಾಡಿದೆ. ಆಡಿಯೋ ಹಕ್ಕನ್ನು ಕೂಡ ಪಡೆದುಕೊಂಡಿದೆ. ಕೆಆರ್.ಜಿ ಸಂಸ್ಥೆ ಚಿತ್ರ ವಿತರಣೆ ಮಾಡುತ್ತಿದೆ.

ಕ್ರಿಕೆಟ್ ಆಧರಿಸಿದ ಈ ಚಿತ್ರಕ್ಕೆ ಕಿಚ್ಚ ಸುದೀಪ್ ನಿರೂಪಣೆ ಮಾಡಿದ್ದಾರೆ. ಮಂಡ್ಯದ ಹುಡುಗಿಯ ಕ್ರಿಕೆಟ್ ಕನಸಿನ ಕಥೆಯನ್ನ ನಿರೂಪಿಸಿದ್ದಾರೆ. ಇದರೊಟ್ಟಿಗೆ ಚಿತ್ರಕ್ಕೆ ಆಂಥೋನಿ ರುತ್ ವಿನ್ಸೆಂಟ್ ಕ್ಯಾಮರಾವರ್ಕ್ ಮಾಡಿದ್ದಾರೆ. ಸೂರಜ್ ಜೋಯಿಸ್ ಸಂಗೀತ ಕೊಟ್ಟಿದ್ದಾರೆ. ಥ್ರಿಲ್ಲರ್ ಮಂಜು ಸಾಹಸ, ಸಂತೋಷ್ ಶೇಖರ್ ಕೊರಿಯೋಗ್ರಫಿ ಚಿತ್ರದಲ್ಲಿದೆ.

Continue Reading

ಸ್ಯಾಂಡಲ್ ವುಡ್

Kannada New Movie: ನಿರ್ದೇಶಕ ಸಂದೇಶ ಶೆಟ್ಟಿ ಆಜ್ರಿ ಇದೀಗ `ಗುಂಮ್ಟಿ’ ಅವತಾರದಲ್ಲಿ!

Kannada News Movie: ಇನ್ನು ‘ಗುಂಮ್ಟಿ’ ಸಿನಿಮಾದಲ್ಲಿ ಕರ್ನಾಟಕದ ಕರಾವಳಿ ತೀರದ ʻಕುಡುಬಿʼ ಜನಾಂಗದ ಕಥೆಯೊಂದು ತೆರೆಮೇಲೆ ಅನಾವರಣವಾಗಲಿದೆ. ಕುಡುಬಿ ಜನಾಂಗದ ಸಂಪ್ರದಾಯ, ಆಚಾರ-ವಿಚಾರ, ಬದುಕು ಮತ್ತು ಆಧುನಿಕತೆಯ ನಡುವಿನ ಸಂಘರ್ಷವನ್ನು ‘ಗುಂಮ್ಟಿ’ ಸಿನಿಮಾದಲ್ಲಿ ಮನಮುಟ್ಟುವಂತೆ ಹೇಳಲು ಹೊರಟಿದೆ ಚಿತ್ರತಂಡ.

VISTARANEWS.COM


on

Kannada New Movie Gumti new post
Koo

ಬೆಂಗಳೂರು: ಈಗಾಗಲೇ ಕನ್ನಡ ಚಿತ್ರರಂಗದಲ್ಲಿ ‘ಕತ್ತಲೆ ಕೋಣೆ’ ಮತ್ತು ‘ಇನಾಮ್ದಾರ್’ ಸಿನಿಮಾಗಳನ್ನು (Kannada New Movie) ನಿರ್ದೇಶಿಸಿ ಕಂಟೆಂಟ್ ಸಿನಿಮಾ ನಿರ್ದೇಶಕರ ಸಾಲಿನಲ್ಲಿ ಗುರುತಿಸಿಕೊಂಡಿರುವ ನಿರ್ದೇಶಕ ಸಂದೇಶ ಶೆಟ್ಟಿ ಆಜ್ರಿ, ಈ ಬಾರಿ ಮತ್ತೊಂದು ಕಂಟೆಂಟ್ ಆಧಾರಿತ ಸಿನಿಮಾವನ್ನು ಪ್ರೇಕ್ಷಕರ ಮುಂದೆ ತರುವ ಯೋಜನೆಯಲ್ಲಿದ್ದಾರೆ. ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ ತಮ್ಮ ಮೂರನೇ ಸಿನಿಮಾಕ್ಕೆ ‘ಗುಂಮ್ಟಿ’ ಎಂದು ಹೆಸರಿಟ್ಟಿದ್ದಾರೆ. ಈ ಸಿನಿಮಾದಲ್ಲಿ ಸಂದೇಶ್ ಶೆಟ್ಟಿ ತೆರೆಮೇಲೆ ನಾಯಕನಾಗಿ, ತೆರೆಹಿಂದೆ ನಿರ್ದೇಶಕನಾಗಿ ‘ಡಬಲ್ ರೋಲ್’ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇನ್ನು ‘ಗುಂಮ್ಟಿ’ ಸಿನಿಮಾದಲ್ಲಿ ಕರ್ನಾಟಕದ ಕರಾವಳಿ ತೀರದ ʻಕುಡುಬಿʼ ಜನಾಂಗದ ಕಥೆಯೊಂದು ತೆರೆಮೇಲೆ ಅನಾವರಣವಾಗಲಿದೆ. ಕುಡುಬಿ ಜನಾಂಗದ ಸಂಪ್ರದಾಯ, ಆಚಾರ-ವಿಚಾರ, ಬದುಕು ಮತ್ತು ಆಧುನಿಕತೆಯ ನಡುವಿನ ಸಂಘರ್ಷವನ್ನು ‘ಗುಂಮ್ಟಿ’ ಸಿನಿಮಾದಲ್ಲಿ ಮನಮುಟ್ಟುವಂತೆ ಹೇಳಲು ಹೊರಟಿದೆ ಚಿತ್ರತಂಡ.

ಈಗಾಗಲೇ ಸದ್ದಿಲ್ಲದೆ ಉಡುಪಿ, ಕುಂದಾಪುರ, ಶಿರಸಿ, ಬೆಳಗಾವಿ, ಮಹಾರಾಷ್ಟ್ರದ ಸೋಲಾಪುರ ಹೀಗೆ ಕರಾವಳಿ-ಮಲೆನಾಡು ಮತ್ತು ಪಶ್ಚಿಮ ಘಟ್ಟದ ಸುತ್ತಮುತ್ತ ಸುಮಾರು 25ಕ್ಕೂ ಹೆಚ್ಚು ದಿನಗಳ ಕಾಲ ಚಿತ್ರತಂಡ ‘ಗುಂಮ್ಟಿ’ ಚಿತ್ರೀಕರಣವನ್ನು ಯಶಸ್ವಿಯಾಗಿ ಮುಗಿಸಿದೆ. ಇದೀಗ ‘ಗುಂಮ್ಟಿ’ ಸಿನಿಮಾದ ಚಿತ್ರೀಕರಣ ಮುಗಿಸಿ, ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ನಿರತವಾಗಿರುವ ಚಿತ್ರತಂಡ ಇನ್ನು ಎರಡು-ಮೂರು ತಿಂಗಳಿನಲ್ಲಿ ಸಿನಿಮಾವನ್ನು ಪ್ರೇಕ್ಷಕರ ಮುಂದೆ ತರುವ ಯೋಚನೆಯಲ್ಲಿದೆ.

ಇದನ್ನೂ ಓದಿ: Kannada New Movie: ʻಸಂಭವಾಮಿ ಯುಗೇ ಯುಗೇʼ ಚಿತ್ರದ ಮೊದಲ ಹಾಡು ರಿಲೀಸ್‌ ಮಾಡಿದ ನಟಿ ಶ್ರುತಿ ಹರಿಹರನ್!

ಕನ್ನಡ ಸೇರಿದಂತೆ ಮಲಯಾಳಂ ಸಿನಿಮಾದಲ್ಲೂ ಕೂಡ ಸಂದೇಶ್ ಶೆಟ್ಟಿ ಅವರು ಅಭಿನಯಿಸಿದ್ದಾರೆ. ‘ತಸ್ಮೈ ಪ್ರೊಡಕ್ಷನ್ಸ್’ ಮತ್ತು ‘ಜ್ಯೋತಿ ಪ್ರೊಡಕ್ಷನ್ಸ್’ ಬ್ಯಾನರಿನಲ್ಲಿ ಜಂಟಿಯಾಗಿ ನಿರ್ಮಾಣವಾಗುತ್ತಿರುವ ‘ಗುಂಮ್ಟಿ’ ಸಿನಿಮಾವನ್ನು ವಿಕಾಸ್ ಎಸ್. ಶೆಟ್ಟಿ ನಿರ್ಮಿಸುತ್ತಿದ್ದಾರೆ.

ಸಿನಿಮಾದಲ್ಲಿ ನಾಯಕ ಸಂದೇಶ್ ಶೆಟ್ಟಿ ಆಜ್ರಿ ಅವರಿಗೆ ವೈಷ್ಣವಿ ನಾಡಿಗ್ ಹಾಗೂ ನೇಹಾ ಗೌಡ ಜೋಡಿಯಾಗಿದ್ದಾರೆ. ,ಉಳಿದಂತೆ ರಂಜನ್ ಛತ್ರಪತಿ, ಕರಣ್ ಕುಂದರ್, ಯಶ್ ಆಚಾರ್ಯ, ಪ್ರಭಾಕರ ಕುಂದರ್, ರಘು ಪಾಂಡೇಶ್ವರ, ಚೇತನ ನೈಲಾಡಿ, ಚಿತ್ರಕಲಾ, ನೂರ್ ಅಹ್ಮದ್, ಸ್ವರಾಜ್ ಲಕ್ಷ್ಮಿ ಮತ್ತಿತರರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ‘ಗುಂಮ್ಟಿ’ ಸಿನಿಮಾ ಅನೀಶ್ ಡಿಸೋಜಾ ಕ್ಯಾಮರದ ಕೈಚಳಕದಲ್ಲಿ ಮೂಡಿ ಬಂದಿದ್ದು, ಸಿನಿಮಾಕ್ಕೆ ಮೋಹನ್ ಸಂಗೀತ ಸಂಯೋಜಿಸಿದ್ದಾರೆ.

‘ಗುಂಮ್ಟಿ’ ಸಿನಿಮಾಕ್ಕೆ ಶಿವರಾಜ್ ಮೇಹು ಸಂಕಲನವಿದೆ. ‘ಯುಗಾದಿ’ ಹಬ್ಬದ ಸಂದರ್ಭದಲ್ಲಿ ‘ಗುಂಮ್ಟಿ’ ಸಿನಿಮಾದ ಫಸ್ಟ್ ಲುಕ್ ಮತ್ತು ಟೈಟಲ್ ಪೋಸ್ಟರ್ ಬಿಡುಗಡೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ‘ಗುಂಮ್ಟಿ’ ಫಸ್ಟ್ ಲುಕ್ ಮತ್ತು ಟೈಟಲ್ ಪೋಸ್ಟರ್ ಸಿನಿಪ್ರಿಯರ ಗಮನ ಸೆಳೆಯುತ್ತಿದೆ.

Continue Reading
Advertisement
Nehru laid the foundation for the countrys development says CM Siddaramaia
ಕರ್ನಾಟಕ56 seconds ago

Karnataka Congress: ಈ ದೇಶವನ್ನು ಅಭಿವೃದ್ಧಿಗೊಳಿಸಿದ್ದು ನೆಹರೂ ಹೊರತು ಮೋದಿಯಲ್ಲ: ಸಿದ್ದರಾಮಯ್ಯ ಪ್ರತಿಪಾದನೆ

Karan Johar announces Dhadak 2
ಬಾಲಿವುಡ್16 mins ago

Dhadak 2: ‘ಧಡಕ್ 2’ ಸಿನಿಮಾ ಅನೌನ್ಸ್‌ ಮಾಡಿದ ಕರಣ್‌ ಜೋಹರ್: ʻಅನಿಮಲ್‌ʼ ನಟಿ ನಾಯಕಿ!

snake bite in chikkamagaluru
ಕ್ರೈಂ17 mins ago

Snake Bite : ಮುಳ್ಳು ಚುಚ್ಚಿದೆ ಎಂದು ನಿದ್ರೆಗೆ ಜಾರಿದವನ ಮೈ ಸೇರಿತು ಹಾವಿನ ವಿಷ! ಬೆಳಗಾಗುವಷ್ಟರಲ್ಲಿ ಮೃತ್ಯು

PM Narendra Modi
ಕರ್ನಾಟಕ21 mins ago

PM Narendra Modi: ಪ್ರಧಾನಿ ಮೋದಿ ಉಳಿದುಕೊಂಡಿದ್ದ ಹೋಟೆಲ್ ಬಿಲ್ ಪಾವತಿಸಲು ರಾಜ್ಯ ಸರ್ಕಾರ ನಿರ್ಧಾರ; ಎಷ್ಟು ಖರ್ಚಾಗಿತ್ತು?

IPL 2024
ಪ್ರಮುಖ ಸುದ್ದಿ30 mins ago

IPL 2024 : ಇದು ಕಾಕತಾಳಿಯವೇ? ಐಪಿಎಲ್ ಮತ್ತು ಡಬ್ಲ್ಯುಪಿಎಲ್​ ಫೈನಲ್ ರಿಸಲ್ಟ್​​ನಲ್ಲಿದೆ ಸಾಮ್ಯತೆ

Prajwal revanna Case
ಕರ್ನಾಟಕ33 mins ago

Prajwal Revanna Video: ವಿದೇಶದಿಂದಲೇ ಪ್ರಜ್ವಲ್‌ ವಿಡಿಯೊ ಮೆಸೇಜ್; ಮೇ 31ರ ಬೆಳಗ್ಗೆ 10ಕ್ಕೆ ಎಸ್‌ಐಟಿಗೆ ಹಾಜರ್‌!

Munawar Faruqui gets married for second timeʼ Munawar Faruqui gets married for second timeʼ
ಬಾಲಿವುಡ್46 mins ago

Munawar Faruqui: ಮತ್ತೊಂದು ಮದುವೆಯಾದರಾ ʻಬಿಗ್ ಬಾಸ್ 17ʼರ ವಿಜೇತ ಮುನಾವರ್ ಫಾರೂಕಿ?

Congress Kutumba programme to strengthen organization at booth level says DCM DK Shivakumar
ಬೆಂಗಳೂರು53 mins ago

Karnataka Congress: ಬೂತ್ ಮಟ್ಟದಲ್ಲಿ ‘ಕಾಂಗ್ರೆಸ್ ಕುಟುಂಬ’ ಕಾರ್ಯಕ್ರಮ; ಪಕ್ಷ ಬಲವರ್ಧನೆಗೆ ಡಿ.ಕೆ.ಶಿ ಪ್ಲ್ಯಾನ್‌

Virat kohli
ಪ್ರಮುಖ ಸುದ್ದಿ57 mins ago

Virat Kohli: ಐಪಿಎಲ್​ 2024ರ ಸಾಧನೆ ಕುರಿತು ಹೇಳಿಕೆ ನೀಡಿದ ವಿರಾಟ್ ಕೊಹ್ಲಿ

Road Accident
ಚಿಕ್ಕಮಗಳೂರು59 mins ago

Accident News : ಈಜಲು ಕೆರೆಗೆ ಜಿಗಿದ ಬಾಲಕ ಮೃತ್ಯು; ಬಸ್‌ ಡಿಕ್ಕಿಗೆ ಬೈಕ್‌ನಲ್ಲಿದ್ದ ರೈತರಿಬ್ಬರು ಸಾವು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ23 hours ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು24 hours ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ4 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ5 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು6 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು6 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 week ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 week ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

ಟ್ರೆಂಡಿಂಗ್‌