Actor Rajinikanth: ರಜನಿಕಾಂತ್‌ ಅಭಿನಯದ ʼವೆಟ್ಟೈಯನ್‌ʼ ಚಿತ್ರದ ಪೋಸ್ಟರ್‌ ರಿಲೀಸ್‌; ಇಲ್ಲಿದೆ ತಲೈವಾ ಹೊಸ ಲುಕ್‌ - Vistara News

South Cinema

Actor Rajinikanth: ರಜನಿಕಾಂತ್‌ ಅಭಿನಯದ ʼವೆಟ್ಟೈಯನ್‌ʼ ಚಿತ್ರದ ಪೋಸ್ಟರ್‌ ರಿಲೀಸ್‌; ಇಲ್ಲಿದೆ ತಲೈವಾ ಹೊಸ ಲುಕ್‌

Actor Rajinikanth: ರಜನಿಕಾಂತ್‌ ಅಭಿನಯದ ಮುಂದಿನ ಚಿತ್ರ ʼವೆಟ್ಟೈಯನ್‌ʼನ ಪೋಸ್ಟರ್‌ ರಿಲೀಸ್‌ ಆಗಿದೆ. ಖಡಕ್‌ ಲುಕ್‌ನಲ್ಲಿ ತಲೈವಾ ಮಿಂಚು ಹರಿಸಿದ್ದಾರೆ.

VISTARANEWS.COM


on

rajanikanth
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚೆನ್ನೈ: ತಮಿಳು ಸೂಪರ್‌ ಸ್ಟಾರ್‌ ರಜನಿಕಾಂತ್‌ (Actor Rajinikanth) ಅವರ ಅಭಿಮಾನಿಗಳಿಗೆ ಈ ಸಂಕ್ರಾಂತಿಯಲ್ಲಿ ಭರ್ಜರಿ ಉಡುಗೊರೆಯೊಂದು ಸಿಕ್ಕಿದೆ. ತಲೈವಾ ಅಭಿನಯದ ಮುಂದಿನ ಚಿತ್ರ ʼವೆಟ್ಟೈಯನ್‌ʼ (Vettaiyan)ನ ಹೊಸ ಪೋಸ್ಟರ್‌ ರಿಲೀಸ್‌ ಆಗಿದೆ. ಆ್ಯಂಗ್ರಿ ಲುಕ್‌ನಲ್ಲಿ ರಜನಿಕಾಂತ್‌ ಮಿಂಚು ಹರಿಸಿದ್ದಾರೆ. ಪೊಂಗಲ್‌ ಹಬ್ಬದ ಪ್ರಯುಕ್ತ ಲೈಕ ಪ್ರೊಡಕ್ಷನ್ಸ್‌ (Lyca Productions) ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ ಖಾತೆಯಲ್ಲಿ ಈ ಪೋಸ್ಟರ್‌ ಅನ್ನು ಬಿಡುಗಡೆ ಮಾಡಿದೆ.

ಟಿ.ಜೆ.ಜ್ಞಾನವೇಲ್ ನಿರ್ದೇಶನದ ಈ ಸಿನಿಮಾದಲ್ಲಿ ಮಲಯಾಳಂ ನಟ ಫಹಾದ್‌ ಫಾಸಿಲ್‌ ಕೂಡ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಈ ಇಬ್ಬರು ಜತೆಯಾಗಿ ನಟಿಸುತ್ತಿರುವ ಫೋಟೊ ಇಂಟರ್‌ನೆಟ್‌ನಲ್ಲಿ ಹರಿದಾಡಿ ವೈರಲ್‌ ಆಗಿತ್ತು. ವಿಶೇಷ ಎಂದರೆ ಈ ಚಿತ್ರದಲ್ಲಿ ಘಟಾನುಘಟಿ ಕಲಾವಿದರು ಅಭಿನಯಿಸುತ್ತಿದ್ದಾರೆ. ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌, ರಾಣಾ ದಗ್ಗುಬಾಟಿ, ಮಲಯಾಳಂ ನಟಿ ಮಂಜು ವಾಯಿಯರ್‌, ರಿತಿಕಾ ಸಿಂಗ್‌, ದುಶಾರಾ ವಿಜಯನ್‌ ಮತ್ತಿತರರು ಮುಖ್ಯ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಅನಿರುದ್ಧ್‌ ರವಿಚಂದರ್‌ ಸಂಗೀತ ಸಂಯೋಜಿಸಲಿದ್ದಾರೆ.

ಕಥೆ ಏನು?

‘ವೆಟ್ಟೈಯನ್’ ಚಿತ್ರದಲ್ಲಿ ರಜನಿಕಾಂತ್ ನಿವೃತ್ತ ಪೊಲೀಸ್ ಅಧಿಕಾರಿಯ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ ಎಂದು ವರದಿಯಾಗಿದೆ. ತಿರುವನಂತಪುರಂ, ತಿರುನೆಲ್ವೇಲಿ ಮತ್ತು ಮುಂಬೈ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಈಗಾಗಲೇ ಚಿತ್ರೀಕರಣ ನಡೆದಿದೆ. ತಮಿಳು ಜತೆಗೆ ಕನ್ನಡ, ತೆಲುಗು, ಮಲಯಾಳಂ ಮತ್ತು ಹಿಂದಿಯಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ.

ಟೀಸರ್‌ ಬಿಡುಗಡೆ

ಇತ್ತೀಚೆಗೆ ‘ವೆಟ್ಟೈಯನ್’ ಚಿತ್ರದ ಟೀಸರ್‌ ಬಿಡುಗಡೆಯಾಗಿತ್ತು. ಲಾಠಿ ಹಿಡಿದು ರಜನಿಕಾಂತ್‌ ಆಗಮಿಸುವ ದೃಶ್ಯಕ್ಕೆ ಅಭಿಮಾನಿಗಳು ಫಿದಾ ಆಗಿದ್ದರು. ಜತೆಗೆ ರಜನಿಕಾಂತ್ ತಮ್ಮದೇ ಶೈಲಿಯಲ್ಲಿ ಕನ್ನಡಕ ಹಾಕಿಕೊಳ್ಳುತ್ತ ಡೈಲಾಗ್‌ ಹೇಳುವ ದೃಶ್ಯ, ಕೈ ಹಿಂಬದಿಯಲ್ಲಿಟ್ಟುಕೊಂಡು ಚಿಟಿಕೆ ಹೊಡೆಯುವ ಸೀನ್‌ ಗಮನ ಸೆಳೆದಿತ್ತು. ‌ʼವೆಟ್ಟೈಯನ್‌ʼ ಎಂದರೆ ಕನ್ನಡದಲ್ಲಿ ಬೇಟೆಗಾರ ಎಂದರ್ಥ. ಈ ಸಿನಿಮಾದಲ್ಲಿ ರಜನಿಕಾಂತ್‌ ಅಪರಾಧಿಗಳ ಬೇಟೆಗಾರನಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಆಗಲೇ ಪ್ರೇಕ್ಷಕರು ಊಹಿಸಿದ್ದರು.

ಮೂರು ದಶಕಗಳ ಬಳಿಕ ಬಚ್ಚನ್‌ ಜತೆ ನಟನೆ

ಇನ್ನೊಂದು ವಿಶೇಷ ಎಂದರೆ ಅಮಿತಾಭ್‌ ಬಚ್ಚನ್‌ ಮತ್ತು ರಜನಿಕಾಂತ್‌ ಸುಮಾರು 32 ವರ್ಷಗಳ ಬಳಿಕ ಜತೆಯಾಗಿ ನಟಿಸುತ್ತಿದ್ದಾರೆ. ಇವರಿಬ್ಬರು ಕೊನೆಯದಾಗಿ 1991ರಲ್ಲಿ ತೆರೆಕಂಡ ʼಹಮ್‌ʼ ಸಿನಿಮಾದಲ್ಲಿ ಜತೆಯಾಗಿ ನಟಿಸಿದ್ದರು. ಈಗಾಗಲೇ ಶೂಟಿಂಗ್‌ನಲ್ಲಿ ಅಮಿತಾಭ್‌ ಬಚ್ಚನ್‌ ಭಾಗಿಯಾಗಿದ್ದಾರೆ. ಹೀಗಾಗಿ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಾಗಿದ್ದು, ಬಿಡುಗಡೆ ದಿನಾಂಕವನ್ನು ಚಿತ್ರತಂಡ ಇದುವರೆಗೆ ಘೋಷಿಸಿಲ್ಲ.

ಭರ್ಜರಿ ಕಲೆಕ್ಷನ್‌ ಮಾಡಿದ್ದ ʼಜೈಲರ್‌ʼ

ರಜನಿಕಾಂತ್‌ ಅಭಿನಯದ ʼಜೈಲರ್‌ʼ ಚಿತ್ರ ಇತ್ತೀಚೆಗೆ ತೆರೆಕಂಡು ಭರ್ಜರಿ ಕಲೆಕ್ಷನ್‌ ಮಾಡಿದೆ. ಸ್ಯಾಂಡಲ್‌ವುಡ್‌ ಹ್ಯಾಟ್ರಿಕ್‌ ಹೀರೋ ಶಿವ ರಾಜ್‌ಕುಮಾರ್‌, ಮಲೆಯಾಳಂ ಸೂಪರ್‌ ಸ್ಟಾರ್‌ ಮೋಹನ್‌ ಲಾಲ್‌, ತಮನ್ನಾ, ರಮ್ಯಾ ಕೃಷ್ಣ, ವಿನಾಯಕ್‌ ಮತ್ತಿತರರು ಈ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ನೆಲ್ಸನ್‌ ದಿಲೀಪ್‌ ಕುಮಾರ್‌ ನಿರ್ದೇಶನದ ಈ ಚಿತ್ರ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆ ಕಂಡಿತ್ತು.

ಇದನ್ನೂ ಓದಿ: Thalaivar 170: ಮುಂಬೈನಲ್ಲಿ ಶೂಟಿಂಗ್‌ ಮುಗಿಸಿದ ರಜನಿಕಾಂತ್‌, ಅಮಿತಾಭ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಸಿನಿಮಾ

Deepak Aras: ನಟಿ ಅಮೂಲ್ಯ ಸಹೋದರ ಚಲನಚಿತ್ರ ನಿರ್ದೇಶಕ ದೀಪಕ್ ಅರಸ್ ಅನಾರೋಗ್ಯದಿಂದ ನಿಧನ

Deepak Aras: ನಟಿ ಅಮೂಲ್ಯ ಸಹೋದರ ಚಲನಚಿತ್ರ ನಿರ್ದೇಶಕ ದೀಪಕ್ ಅರಸ್ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.

VISTARANEWS.COM


on

By

Actress Amulyas brother film director Deepak aras passes away
Koo

ಬೆಂಗಳೂರು: ನಟಿ ಅಮೂಲ್ಯ ಸಹೋದರ, ಚಲನಚಿತ್ರ ನಿರ್ದೇಶಕ ದೀಪಕ್ ಅರಸ್ (46) ಬದುಕಿನ ಪಯಣ ಮುಗಿಸಿದ್ದಾರೆ. ದೀರ್ಘ ಅನಾರೋಗ್ಯದಿಂದ ಬಳಲುತ್ತಿದ್ದ ದೀಪಕ್ (Deepak Aras) ಶುಕ್ರವಾರ ಬೆಳಗ್ಗೆ 6 ಗಂಟೆಗೆ ನಿಧನರಾಗಿದ್ದಾರೆ. ಮನಸಾಲಜಿ, ಶುಗರ್ ಫ್ಯಾಕ್ಟರಿ ಸಿನಿಮಾಗಳನ್ನು ದೀಪಕ್ ಅರಸ್ ನಿರ್ದೇಶಿಸಿದ್ದರು. 3 ದಿನಗಳಿಂದ ಕೋಮದಲಿದ್ದ ದೀಪಕ್ ತೀವ್ರ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.

ಮಲ್ಲೇಶ್ವರಂ ಪೈಪ್ ಲೈನ್ ರಸ್ತೆಯಲ್ಲಿರುವ ಮನೆ ಬಳಿ ದೀಪಕ್ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ. ಶುಕ್ರವಾರ ಮಧ್ಯಾಹ್ನ 4 ಗಂಟೆಗೆ ಸುಮ್ಮನಹಳ್ಳಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ದೀಪಕ್ ಸಹೋದರ ಪವನ್ ಮಾಹಿತಿ ನೀಡಿದ್ದಾರೆ. ಅಣ್ಣ ದೀಪಕ್ ಕುರಿತು ನಟಿ ಅಮೂಲ್ಯ ಪೋಸ್ಟ್ ಹಾಕಿದ್ದಾರೆ. ದೀಪಣ್ಣ ಇಂದು ಬೆಳಗ್ಗೆ 6ಗಂಟೆಗೆ ನಮೆಲ್ಲರನ್ನು ಅಗಲಿದ್ದಾರೆ.

ಮದುವೆ ಆಗಿ ಎರಡು ಮಕ್ಕಳಿರುವ ದೀಪಕ್‌ಗೆ ಕಿಡ್ನಿ ಫೆಲ್ಯುರ್‌ ಆಗಿತ್ತು, ಡಯಾಲಿಸಿಸ್ ಮಾಡಿಸುತ್ತಿದ್ದರು. ಆರ್ ಆರ್ ನಗರದಲ್ಲಿರುವ ಬಿಜಿಎಸ್ ಆಸ್ಪತ್ರೆಯಲ್ಲಿ ದೀಪಕ್ ಅರಸ್ ಕೊನೆಯುಸಿರೆಳೆದಿದ್ದಾರೆ.

Continue Reading

ಸಿನಿಮಾ

Parvati Nair : ಸಸ್ಪೆನ್ಸ್ ಥ್ರಿಲ್ಲರ್‌ ʻಊಣ್‌ ಪರವೈಲ್‌ʼ ತಮಿಳು ಚಿತ್ರದಲ್ಲಿ ಪಾರ್ವತಿ ನಾಯರ್‌ ದ್ವಿಪಾತ್ರದಲ್ಲಿ ಮಿಂಚಿಂಗ್‌

Parvati Nair: ಐರ್ಲೆಂಡ್‌ನ ಇಂಡಿಯನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ತಮಿಳು ಥ್ರಿಲ್ಲರ್ “ಊಣ್ ಪರವೈಲ್ ” ಹೆಸರು ಬಿಡುಗಡೆಯಾಗಿದೆ. ಪಾರ್ವತಿ ನಾಯರ್‌ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

VISTARANEWS.COM


on

By

Parvati Nair to play dual role in suspense thriller un Paravail Tamil film
Koo

ಬೆಂಗಳೂರು: ಇತ್ತೀಚೆಗೆ ಐರ್ಲೆಂಡ್, ಡಬ್ಲಿನ್‌ನಲ್ಲಿ ನಡೆದ ಭಾರತೀಯ ಚಲನಚಿತ್ರೋತ್ಸವದಲ್ಲಿ ಬಹುನಿರೀಕ್ಷಿತ ತಮಿಳು ಥ್ರಿಲ್ಲರ್ ಮೂವಿ ” ಊಣ್ ಪರವೈಲ್ ” ಅಧಿಕೃತವಾಗಿ ಬಿಡುಗಡೆಯಾಯಿತು. ತಾಲ್ ಮತ್ತು ಕಹೋ ನಾ ಪ್ಯಾರ್ ಹೈ ಖ್ಯಾತಿಯ ಪ್ರಸಿದ್ಧ ಬಾಲಿವುಡ್ ಛಾಯಾಗ್ರಾಹಕ ಕಬೀರ್ ಲಾಲ್ ನಿರ್ದೇಶಿಸಿದ ಈ ಚಿತ್ರದಲ್ಲಿ ಪಾರ್ವತಿ ನಾಯರ್ (Parvati Nair) ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಅಸಾಧಾರಣ ನಟನಾ ಕೌಶಲ್ಯವನ್ನು ಪ್ರದ‌ರ್ಶಿಸಿದ್ದಾರೆ. ಊಣ್ ಪರವೈಲ್ ಚಿತ್ರವು ಸಸ್ಪೆನ್ಸ್, ರಹಸ್ಯ ಮತ್ತು ಭಾವನಾತ್ಮಕ ನಾಟಕದ ವಿಶಿಷ್ಟ ಮಿಶ್ರಣವಾಗಿದೆ ಎಂದು ಪಾರ್ವತಿ ನಾಯರ್ ಹೇಳಿದರು.

ಪಾರ್ವತಿ ನಾಯರ್‌ ಈ ಚಿತ್ರದಲ್ಲಿ ದ್ವಿಪಾತ್ರದಲ್ಲಿ ನಟಿಸುತ್ತಿದ್ದಾರೆ. “ಭವ್ಯ ಮತ್ತು ದಿವ್ಯಾ ದ್ವಿಪಾತ್ರಗಳನ್ನು ನಿರ್ವಹಿಸುವುದು ಸವಾಲಾಗಿತ್ತು. ಥ್ರಿಲ್ಲರ್‌ ಸಿನಿಮಾದಲ್ಲಿ ನನ್ನ ಅಭಿಯಾನವನ್ನು ಪ್ರದರ್ಶಿಸಲು ರೋಮಾಂಚನಗೊಂಡಿದ್ದೇನೆ ಎಂದಿದ್ದಾರೆ. ಇನ್ನು “ಊಣ್ ಪರವೈಲ್” ನಲ್ಲಿ ಪಾರ್ವತಿ ನಾಯರ್ ಅದ್ಭುತವಾಗಿ ನಟಿಸಿದ್ದಾರೆ. ಎರಡು ವಿಭಿನ್ನ ಪಾತ್ರಗಳಲ್ಲಿ ದಿವ್ಯಾ, ದೃಢಸಂಕಲ್ಪವುಳ್ಳ ಮತ್ತು ರಕ್ಷಿಸುವ ಸಹೋದರಿ ಮತ್ತು ಭವ್ಯಾ, ನಿಗೂಢ ಸಂದರ್ಭಗಳಲ್ಲಿ ದುರಂತ ಅಂತ್ಯವನ್ನು ಎದುರಿಸುವ ದೃಷ್ಟಿಹೀನ ಹುಡುಗಿಯಾಗಿದ್ದಾಳೆ. 

Parvati Nair to play dual role in suspense thriller un Paravail Tamil film
Parvati Nair to play dual role in suspense thriller un Paravail Tamil film

ದಿವ್ಯಾ ತನ್ನ ಸಹೋದರಿ ಭವ್ಯಳ ಸಾವಿನ ಸುತ್ತಲಿನ ಸತ್ಯವನ್ನು ಆಳವಾಗಿ ಪರಿಶೀಲಿಸಿದಾಗ, ಆಕೆಯ ಹಿಂದಿನ ರಹಸ್ಯಗಳು ಮತ್ತು ಸುಳ್ಳಿನ ಸಂಕೀರ್ಣ ಜಾಲವನ್ನು ಬಹಿರಂಗಪಡಿಸುತ್ತಾರೆ. ಊಣ್ ಪರವೈಲ್ ಮಹಿಳಾ ಪ್ರಧಾನ ಚಿತ್ರವಾಗಿದ್ದು ಅದು ಮಹಿಳೆಯರ ಶಕ್ತಿ ಮತ್ತು ಸ್ಥಿತಿಸ್ಥಾಪಕತ್ವದ ಮೇಲೆ ಬೆಳಕು ಚೆಲ್ಲುತ್ತದೆ” ಎಂದು ನಿರ್ದೇಶಕ ಕಬೀರ್ ಲಾಲ್ ಹೇಳಿದರು. “ಪಾರ್ವತಿ ನಾಯರ್ ಅವರ ಗಮನಾರ್ಹ ಅಭಿನಯವು ನಿರೂಪಣೆಗೆ ಆಳ ಮತ್ತು ಸೂಕ್ಷ್ಮತೆಯನ್ನು ತರುತ್ತದೆ. ಪ್ರೇಕ್ಷಕರನ್ನು ಕೊನೆಯವರೆಗೂ ಹಿಡಿದುಇಟ್ಟುಕೊಳ್ಳಲಿದೆ. ಐರ್ಲೆಂಡ್‌ನ ಭಾರತೀಯ ಚಲನಚಿತ್ರೋತ್ಸವದಲ್ಲಿ ಚಲನಚಿತ್ರದ ಬಿಡುಗಡೆಯು ಮತ್ತಷ್ಟು ಉತ್ಸಾಹದಿಂದ ಕೂಡಿತ್ತು. ಉದ್ಯಮದ ತಜ್ಞರು ಮತ್ತು ಚಲನಚಿತ್ರ ಉತ್ಸಾಹಿಗಳು ಚಲನಚಿತ್ರದ ವಿಶಿಷ್ಟತೆಯನ್ನು ಶ್ಲಾಘಿಸಿದರು. 

ಪಾರ್ವತಿ ನಾಯರ್ ಅವರ ಅದ್ವಿತೀಯ ಅಭಿನಯದ ಕಥಾಹಂದರ ಹೊಂದಿರುವ ಈ ಚಿತ್ರ ಭಾರತದಲ್ಲಿ ಡಿಸೆಂಬರ್ 2024 ರೊಳಗೆ ಬಿಡುಗಡೆಗೊಳ್ಳಲಿದೆ. ಊಣ್ ಪರವೈಲ್ ಬಗ್ಗೆ” ಊಣ್ ಪರವೈಲ್” ಅಜಯ್ ಕುಮಾರ್ ಸಿಂಗ್ ಮತ್ತು ರೇಖಾ ಸಿಂಗ್ ನಿರ್ಮಿಸಿದ ತಮಿಳು ಥ್ರಿಲ್ಲರ್ ಆಗಿದೆ. ಚಿತ್ರದ ಹಿಡಿತದ ನಿರೂಪಣೆ ಮತ್ತು ಪಾರ್ವತಿ ನಾಯರ್ ಅವರ ಅಸಾಧಾರಣ ಅಭಿನಯವು ಪ್ರೇಕ್ಷಕರನ್ನು ಅವರ ಆಸನಗಳ ತುದಿಯಲ್ಲಿ ಇರಿಸುವ ಭರವಸೆ ನೀಡುತ್ತದೆ.

Continue Reading

ಬೆಂಗಳೂರು

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬೇಲ್‌ ಕನಸು ನಚ್ಚು ನೂರು; ನಟ ದರ್ಶನ್‌ ಜಾಮೀನು ನಿರಾಕರಣೆಗೆ ಕೋರ್ಟ್‌ ಕೊಟ್ಟ 9 ಕಾರಣಗಳು

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ರ ಬೇಲ್‌ ಕನಸು ನಚ್ಚು ನೂರಾಗಿದೆ. ನಟ ದರ್ಶನ್‌ ಜಾಮೀನು ನಿರಾಕರಣೆಗೆ ಕೋರ್ಟ್‌ 9 ಕಾರಣಗಳನ್ನು ಕೊಟ್ಟಿದೆ.

VISTARANEWS.COM


on

By

Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಲಾಕ್‌ ಆಗಿರುವ ನಟ ದರ್ಶನ್‌‌ (Actor Darshan) ಸಲ್ಲಿಸಿದ್ದ ಜಾಮೀನು ಅರ್ಜಿಯನ್ನುನಿನ್ನೆ ಸೋಮವಾರ ಕೋರ್ಟ್‌ ವಜಾಗೊಳಿಸಿತು. ದರ್ಶನ್‌ಗೆ ಜಾಮೀನು ನೀಡಲು ನಿರಾಕರಿಸಿದ್ದಕ್ಕೆ ಕೋರ್ಟ್‌ 9 ಕಾರಣಗಳನ್ನು ನೀಡಿದೆ.

ದರ್ಶನ್ ಜಾಮೀನು ಅರ್ಜಿ ವಜಾಗೊಳಿಸಲು ಪ್ರಮುಖ ಕಾರಣಗಳು!

  • -ಐ ವಿಟ್ನೆಸ್ ಹೇಳಿಕೆಗಳು ಕಾನೂನು ಪ್ರಕಾರವಾಗಿವೆ
  • -ರೇಣುಕಾಸ್ವಾಮಿ ಮೃತದೇಹದ ಗುರುತು ಪತ್ತೆ ಬಳಿಕ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು ತಡವಾಗಿಲ್ಲ.
  • -ದರ್ಶನ್ ಟ್ರಯಲ್ ಆರಂಭವಾದ ಬಳಿಕ ಆರೋಪಿಗಳ ಹೇಳಿಕೆಯ ಬಗ್ಗೆ ತಿಳಿಯುತ್ತದೆ.
  • -ದರ್ಶನ್ ಕ್ರಾಸ್ ಎಕ್ಸಾಮಿನ್ ಮಾಡಿದಾಗ ರಿಕವರಿಯ ಅಂಶಗಳ ಬಗ್ಗೆ ತಿಳಿಯುತ್ತದೆ
  • -ಸಿಡಿಆರ್ ನಲ್ಲಿ ಎ೨ ಆರೋಪಿ ದರ್ಶನ್ ಕೃತ್ಯ ನಡೆದ ಸ್ಥಳದಲ್ಲಿರೋದು ಸ್ಪಷ್ಟವಾಗಿದೆ
  • -ಈ ಹಂತದಲ್ಲಿ ಸಾಕ್ಷಿಗಳ ಹೇಳಿಕೆ ತಡವಾಗಿದೆ ಅನ್ನೋದಕ್ಕೆ ಪುರಾವೆಗಳಿಲ್ಲ
  • -ಡಿ ಎನ್ ಎ ಟೆಸ್ಟ್‌ ನಲ್ಲಿ ದರ್ಶನ್ ಕೃತ್ಯ ನಡೆದ ಸ್ಥಳದಲ್ಲಿ ಇದ್ದ ಬಗ್ಗೆ ಸ್ಪಷ್ಟಪಡಿಸಿದೆ
  • -ಪೋಸ್ಟ್ ಮಾರ್ಟಂ ರಿಪೋರ್ಟ್ ನಲ್ಲಿ ರೇಣುಕಾಸ್ವಾಮಿ ಯ ಕೊಲೆಯ ಕ್ರೂರತೆ ಬಗ್ಗೆ ತಿಳಿಸಿದೆ
  • -ಸಮಾಜದಲ್ಲಿ ದರ್ಶನ್ ರೋಲ್ ಮಾಡೆಲ್ ಆಗಿದ್ದು, ಸಾಕಷ್ಟು ಜನ್ರು ಪ್ರಭಾವಿತರಾಗಿರ್ತಾರೆ

ಹತ್ಯೆ ಕೇಸ್‌ ಆರೋಪಿ ದರ್ಶನ್‌ಗೆ ಮತ್ತಷ್ಟು ದಿನ ಜೈಲುವಾಸವೇ ಫಿಕ್ಸ್ ಆಗಿದೆ. ಜಾಮೀನು ನಿರೀಕ್ಷೆಯಲ್ಲಿದ್ದ ಆರೋಪಿ ದರ್ಶನ್‌ಗೆ ನ್ಯಾಯಾಲಯ ಬಿಗ್‌ ಶಾಕ್‌ ನೀಡಿದೆ. ಸ್ಯಾಂಡಲ್‌‌ವುಡ್ ಜಗ್ಗುದಾದಾನ ಬೇಲ್‌ ಅರ್ಜಿ ವಜಾಗೊಳಿಸಿರುವ ಕೋರ್ಟ್‌, ಜಾಮೀನು ನಿರಾಕರಣೆಗೆ ಹಲವು ಕಾರಣ ನೀಡಿದೆ. ವಿಸ್ತಾರ ನ್ಯೂಸ್‌ಗೆ ಬೇಲ್‌ ರಿಜೆಕ್ಟ್‌‌ ಬಗ್ಗೆ ಕೋರ್ಟ್‌ ಉಲ್ಲೇಖಿಸಿದ ಅಂಶಗಳ ಪಿನ್‌ ಟು ಪಿನ್‌ ಮಾಹಿತಿ ಲಭ್ಯವಾಗಿದೆ. ಸದ್ಯ ಜೈಲಲ್ಲಿರುವ ದರ್ಶನ್‌ಗೆ ಜಾಮೀನು ಅನ್ನೋದು ಮರೀಚಿಕೆ ಆಗಿದೆ. ನ್ಯಾಯಾಲಯ ಉಲ್ಲೇಖಿಸಿದ ಅಂಶಗಳ ನೋಡಾದಾದರೆ, ಕೊಲೆ ಕೇಸಲ್ಲಿ ಐ ವಿಟ್ನೆಸ್ ಹೇಳಿಕೆಗಳು ಕಾನೂನು ಪ್ರಕಾರವಾಗಿವೆ ಅಂತಾ ಆದೇಶದಲ್ಲಿ ತಿಳಿಸಲಾಗಿದೆ.

ದರ್ಶನ್‌ ಪರ ವಕೀಲರ ಆರೋಪದಂತೆ ರೇಣುಕಾಸ್ವಾಮಿ ಮೃತದೇಹ ಗುರುತಿನ ಬಳಿಕ ಮರಣೋತ್ತರ ಪರೀಕ್ಷೆ ತಡವಾಗಿಲ್ಲ, ದರ್ಶನ್ ಟ್ರಯಲ್ ಆರಂಭ ಬಳಿಕ ಆರೋಪಿಗಳ ಹೇಳಿಕೆ ತಿಳಿಯುತ್ತದೆ. ದರ್ಶನ್ ಕ್ರಾಸ್ ಎಕ್ಸಾಮ್‌‌‌‌‌‌ ಮಾಡಿದಾಗ ರಿಕವರಿ ಅಂಶ ತಿಳಿಯುತ್ತದೆ. ಸಿಡಿಆರ್‌ನಲ್ಲಿ ದರ್ಶನ್ ಕೃತ್ಯ ನಡೆದ ಸ್ಥಳದಲ್ಲಿರೋದು ಸ್ಪಷ್ಟವಾಗಿದೆ ಅಂತಾ ಬೇಲ್‌ ಅರ್ಜಿ ವಜಾಗೊಳಿಸಿದೆ. ಮಾತ್ರವಲ್ಲ ಕೊಲೆ ಕೇಸಲ್ಲಿ ಸಾಕ್ಷಿಗಳ ಹೇಳಿಕೆ ತಡವಾಗಿದೆ ಅನ್ನೋದಕ್ಕೆ ಪುರಾವೆಗಳಿಲ್ಲ, DNA ಟೆಸ್ಟ್‌‌ನಲ್ಲಿ ದರ್ಶನ್ ಕೃತ್ಯ ನಡೆದ ಸ್ಥಳದಲ್ಲಿ ಇದ್ದ ಬಗ್ಗೆ ಸ್ಪಷ್ಟಪಡಿಸಿದೆ. ಪೋಸ್ಟ್‌‌ಮಾರ್ಟಂ ವರದಿ ರೇಣುಕಾಸ್ವಾಮಿ ಕೊಲೆಯ ಕ್ರೂರತೆ ತಿಳಿಸಿದೆ ಎಂದಿರುವ ಕೋರ್ಟ್‌, ದರ್ಶನ್‌ಗೆ ಜಾಮೀನು ನೀಡಲು ನಿರಾಕರಿಸಿದ್ದು, ಬೇಲ್ ಅರ್ಜಿ ವಜಾಗೊಳಿಸಿದೆ.

ಹೈಕೋರ್ಟ್‌ನತ್ತ ದಚ್ಚು-ಪವಿ ಬೇಲ್‌ ಅರ್ಜಿ?

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದಾರೆ. ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ದರ್ಶನ್‌, ಜಾಮೀನು ಪಡೆದು ಹೊರಬರುವ ದಿನಕ್ಕಾಗಿ ಕಾಯುತ್ತಾ ಇದ್ದರು. ಆದರೆ ಸ್ಯಾಂಡಲ್‌ವುಡ್ ಕಾಟೇರನ ಬೇಲ್‌‌ ಕನಸು ನುಚ್ಚು ನೂರಾಯಿತು. ಕಳೆದ ವಾರ ದರ್ಶನ್‌ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು 57ನೇ ಸಿಸಿಎಚ್‌ ಕೋರ್ಟ್‌ ಪೂರ್ಣಗೊಳಿಸಿತ್ತು. ನಿನ್ನೆ ಬೇಲ್ ಆದೇಶ ಹೊರಬಿದ್ದಿದ್ದು, ದರ್ಶನ್​ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ದರ್ಶನ್ ಪರ ವಕೀಲರ ತಂಡ ಹೈಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಲು ಸಜ್ಜಾಗಿದ್ದಾರೆ.

ಸೆಷನ್‌ ಕೋರ್ಟ್‌ನ ಆದೇಶ ಪ್ರತಿ ಸೇರಿಸಿ ಮೇಲ್ಮನವಿ ಅರ್ಜಿ ಸಲ್ಲಿಕೆ ಮಾಡಲು ಸಜ್ಜಾಗಿದ್ದು, ಯಾವುದೇ ಕ್ಷಣದಲ್ಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಬಹುದು. ಮತ್ತೊಂದೆಡೆ ಸದ್ಯಕ್ಕೆ ಜಾಮೀನು ಸಿಗದಿರೋ ಕಾರಣ ಅನಾರೋಗ್ಯ ಕಾರಣ ನೀಡಿ, ದರ್ಶನ್ ಬೆಂಗಳೂರಿಗೆ ಶಿಫ್ಟ್​ ಆಗುವ ಸಾಧ್ಯತೆ ಇದೆ. ಈಗಾಗಲೇ ದರ್ಶನ್ ಕುಟುಂಬಸ್ಥರು ಮೆಡಿಕಲ್ ವರದಿ ಸಿದ್ಧ ಮಾಡಿಕೊಂಡಿದ್ದಾರೆ. ಅನಾರೋಗ್ಯದ ಕಾರಣ ನೀಡಿ ಬೆಂಗಳೂರಿಗೆ ಶಿಫ್ಟ್​ ಆಗಲು ಪ್ಲ್ಯಾನ್​ ನಡೆದಿದೆ.

ದರ್ಶನ್ ಕಳೆದ ಕೆಲ ದಿನಗಳಿಂದ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ನಡೆಯಲು ಕೂಡ ದರ್ಶನ್‌ಗೆ ಕಷ್ಟ ಆಗುತ್ತಿದೆ ಎನ್ನಲಾಗಿದೆ. ಅನಾರೋಗ್ಯದ ನೆಪದಲ್ಲಾದರೂ ಚಾಲೆಂಜಿಂಗ್‌ ಸ್ಟಾರ್‌, ಬೆಂಗಳೂರು ಜೈಲು ಸೇರುವ ಯತ್ನ ನಡೆಸ್ತಿದ್ದಾರೆ ಎನ್ನಲಾಗ್ತಿದೆ. ಈ ಮಧ್ಯೆ ಹೈಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಲು ಸಿದ್ಧತೆ ನಡೆದಿದೆ. ಮತ್ತೊಂದೆಡೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಪವಿತ್ರಾ ಗೌಡಗೂ ಬೇಲ್‌ ಸಿಕ್ಕಿಲ್ಲ. ಹೀಗಾಗಿ ಜೈಲುಹಕ್ಕಿ, ದರ್ಶನ್ ಗೆಳತಿ ಪವಿತ್ರಾ ಕೂಡ ಹೈಕೋರ್ಟ್‌ ಮೊರೆ ಹೋಗಲು ನಿರ್ಧರಿಸಿದ್ದಾರೆ. ಪವಿತ್ರಾ ಗೌಡ ಪರ ವಕೀಲರ ತಂಡ, ಬೇಲ್‌‌ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.

ಈವರೆಗೆ ಐವರಿಗೆ ಜಾಮೀನು

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳಿಗೆ ನ್ಯಾಯಾಲಯ ಬಿಗ್ ರಿಲೀಫ್ ನೀಡಿದೆ. ಹತ್ಯೆ ಕೇಸ್‌ನ ಎ8 ರವಿಶಂಕರ್ ಹಾಗೂ ಎ13 ದೀಪಕ್‌ಗೆ ಬೇಲ್ ನೀಡಿದ ಕೋರ್ಟ್‌ ಆದೇಶಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈವರೆಗೆ ಐವರಿಗೆ ಜಾಮೀನು ಸಿಕ್ಕಿದ್ದು, ಇದೀಗ ಮತ್ತಿಬ್ಬರು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಮರ್ಡರ್‌ ಕೇಸ್‌ನ ಎ8 ಆಗಿರುವ ರವಿಶಂಕರ್ ಕ್ಯಾಬ್‌ವೊಂದರ ಚಾಲಕನಾಗಿರುವ ಹಿನ್ನೆಲೆ ಚಿತ್ರದುರ್ಗದಿಂದ ಬೆಂಗಳೂರಿಗೆ ಸ್ವಾಮಿಯನ್ನು ಕರೆತಂದಿದ್ದ ಅಷ್ಟೇ ಎಂದು ವಕೀಲರು ವಾದ ಮಾಡಿದ್ದು, ಹತ್ಯೆ ಕೇಸಲ್ಲಿ ರವಿಶಂಕರ್ ಒಳಸಂಚು ಮೇಲ್ನೋಟಕ್ಕೆ ಕಾಣದ ಹಿನ್ನೆಲೆ ಬೇಲ್ ನೀಡುವಂತ ಮನವಿ ಕೂಡ ಮಾಡಲಾಗಿತ್ತು.

ಮತ್ತೊಂದೆಡೆ ಎ13 ದೀಪಕ್ ವಿರುದ್ಧ ಸಾಕ್ಷ್ಯ ನಾಶ ಮಾಡಿರುವ ಆರೋಪ ಕೇಳಿ ಬಂದಿತ್ತು. ಆದರೆ ದೀಪಕ್‌‌ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದಿರುವ ವಕೀಲರು, ಜಾಮೀನು ಕೋರಿ ಮನವಿ ಮಾಡಿದ್ದು, ಇದಕ್ಕೆ ಎಸ್‌ಪಿಪಿ ಪ್ರಸನ್ನ ಕುಮಾರ್ ಕೂಡ ಆಕ್ಷೇಪ ವ್ಯಕ್ತಪಡಿಸದ ಹಿನ್ನೆಲೆ ಜಾಮೀನು ಸಿಕ್ಕಿದ್ದು, ಇಬ್ಬರಿಗೂ ರಿಲೀಫ್ ಸಿಕ್ಕಿದೆ. ಇಬ್ಬರು ಆರೋಪಿಗಳ ವಿರುದ್ಧವೂ ಜಾಮೀನು ನೀಡಬಹುದಾದ ಪ್ರಕರಣ ಹಿನ್ನೆಲೆ ನ್ಯಾಯಾಲಯ ಬೇಲ್ ನೀಡಿದೆ. ಜಾಮೀನು ಪ್ರಕ್ರಿಯೆ ಮುಗಿದ ಬಳಿಕ ಇಬ್ಬರೂ ರಿಲೀಸ್ ಆಗಲಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಗದಗ

Darshan Fans : ದರ್ಶನ ಅಭಿಮಾನಿಗಳಿಂದಾಗಿ ಶ್ರವಣ ಶಕ್ತಿ ಕಳೆದುಕೊಂಡೆ: ಸಾಹಿತಿ ನಾಡೋಜ ಡಾ. ಗೊ.ರು. ಚನ್ನಬಸಪ್ಪ

Darshan Fans : ದರ್ಶನ ಅಭಿಮಾನಿಗಳಿಂದಾಗಿ ಶ್ರವಣ ಶಕ್ತಿ ಕಳೆದುಕೊಂಡೆ ಎಂದು ಸಾಹಿತಿ ನಾಡೋಜ ಡಾ. ಗೊ.ರು. ಚನ್ನಬಸಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

VISTARANEWS.COM


on

By

darshan fans Writer Nadoja G.R. Channabasappa
ಸಾಹಿತಿ ನಾಡೋಜ ಡಾ. ಗೊ.ರು. ಚನ್ನಬಸಪ್ಪ
Koo

ಗದಗ: ಚಿತ್ರನಟ ದರ್ಶನ ಅಭಿಮಾನಿಗಳಿಂದಾಗಿ (Darshan Fans) ಶ್ರವಣ ಶಕ್ತಿ ಕಳೆದುಕೊಂಡೆ ಎಂದು ಹಿರಿಯ ಸಾಹಿತಿ ನಾಡೋಜ ಡಾ. ಗೊ.ರು. ಚನ್ನಬಸಪ್ಪ ಬೇಸರ ವ್ಯಕ್ತಪಡಿಸಿದರು. ನಗರದ ತೋಂಟದಾರ್ಯ ಮಠದ ಶಿವಾನುಭವ ಮಂಟಪದಲ್ಲಿ ಲಿಂ. ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ ಅವರ 6ನೇ ಪುಣ್ಯಸ್ಮರಣೆ ಅಂಗವಾಗಿ ಸೋಮವಾರ ಹಮ್ಮಿಕೊಂಡಿದ್ದ ಮರಣವೇ ಮಹಾನವಮಿ ಆಚರಣೆ ಕಾರ್ಯಕ್ರಮದಲ್ಲಿ ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.

Darshan Fans Writer Nadoja G.R. Channabasappa
Darshan Fans Writer Nadoja G.R. Channabasappa

ಇಂದು ಮಾಧ್ಯಮಗಳಲ್ಲಿ ಪ್ರತಿನಿತ್ಯ ಪ್ರಚಲಿತದಲ್ಲಿರುವ ಚಿತ್ರನಟ ದರ್ಶನರ ಜನ್ಮದಿನದ ಸಂದರ್ಭದಲ್ಲಿ ಬೆಂಗಳೂರಿನ ನಿವಾಸದ ಪಕ್ಕದಲ್ಲಿ ಸೇರಿದ್ದ ದರ್ಶನ ಅಭಿಮಾನಿಗಳು ಸಿಡಿಸಿದ ಭಾರಿ ಸಿಡಿಮದ್ದಿನ ಸದ್ದಿನಿಂದ ನಾನು ನನ್ನ ಶ್ರವಣ ಶಕ್ತಿಯನ್ನು ಕಳೆದುಕೊಳ್ಳಬೇಕಾಯಿತು ಎಂದು ಅಸಮಾಧಾನ ಹೊರಹಾಕಿದರು. 97ರ ವಯಸ್ಸಿನಲ್ಲೂ ಸ್ಪಷ್ಟವಾಗಿ ಮಾತನಾಡಬಲ್ಲೆ, ನಡೆದಾಡಬಲ್ಲೆನು. ಆದರೆ, ಇಂದಿನ ಕಾರ್ಯಕ್ರಮದಲ್ಲಿ ತಾವೆಲ್ಲರೂ ಮಾತನಾಡುವ ಪದಗಳನ್ನು ಕೇಳಿಸಿಕೊಳ್ಳಲಾಗದಷ್ಟು ಶ್ರವಣದೋಷವನ್ನು ಅನುಭವಿಸುತ್ತಿದ್ದೇನೆ ಎಂದರು.

Continue Reading
Advertisement
Dina Bhavishya
ಭವಿಷ್ಯ6 ಗಂಟೆಗಳು ago

Dina Bhavishya : ವಿನಾ ಕಾರಣ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳಬೇಡಿ; ನಂಬಿದ ವ್ಯಕ್ತಿಗಳಿಂದ ಈ ರಾಶಿಯವರಿಗೆ ನಿರಾಸೆ

Bigg boss kannada
ಬಿಗ್ ಬಾಸ್22 ಗಂಟೆಗಳು ago

Bigg Boss Kannada : ಕಿಚ್ಚನ ಪಂಚಾಯ್ತಿಯಲ್ಲಿ ಗರ್ಮಾಗರಂ ವಿಷ್ಯಗಳು; ಬಿಗ್‌ಬಾಸ್‌ ನಿರ್ಧಾರವನ್ನೇ ಪ್ರಶ್ನೆ ಮಾಡ್ತಾರಾ ಸುದೀಪ್‌!

missing case
ಗದಗ23 ಗಂಟೆಗಳು ago

Missing Case : ಬಸ್ ನಿಲ್ದಾಣದಲ್ಲಿ ಕಳೆದು ಹೋಗಿದ್ದ 5 ವರ್ಷದ ಮಗು: ಎರಡೇ ಗಂಟೆಯಲ್ಲಿ ತಾಯಿ ಮಡಿಲು ಸೇರಿಸಿದ ಪೊಲೀಸರು

Dina Bhavishya
ಭವಿಷ್ಯ1 ದಿನ ago

Dina Bhavishya : ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ; ಈ ರಾಶಿಯವರು ಅಗತ್ಯವಿದ್ದಷ್ಟೆ ಮಾತನಾಡಿ

Gode Bengaluru
ಬೆಂಗಳೂರು2 ದಿನಗಳು ago

Gode Bengaluru : ಬೆಂಗಳೂರು ಗೋಡೆಗಳ ಮೇಲೆ ಚಿತ್ತಾರ; ʻಗೋಡೆ ಬೆಂಗಳೂರುʼ ಘೋಷಿಸಿದ ಅನ್‌ಬಾಕ್ಸಿಂಗ್‌

Pralhad Joshi
ದೇಶ2 ದಿನಗಳು ago

Pralhad Joshi : ನನಗೆ ಸಹೋದರಿಯೇ ಇಲ್ಲ! ಗೋಪಾಲ್ ಜೋಶಿ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ, ತಪ್ಪು ಮಾಡಿದ್ದರೆ ಕಾನೂನು ಕ್ರಮವಾಗಲಿ- ಪ್ರಲ್ಹಾದ ಜೋಶಿ

African boy successfully undergoes surgery for rare aplastic anemia
ಬೆಂಗಳೂರು2 ದಿನಗಳು ago

Aplastic anemia : ಅತಿ ವಿರಳ ಅಪ್ಲ್ಯಾಸ್ಟಿಕ್‌ ರಕ್ತ ಹೀನತೆಯಿಂದ ಬಳಲುತ್ತಿದ್ದ ಆಫ್ರಿಕಾ ಮೂಲದ ಬಾಲಕನಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

Self Harming
ಚಿತ್ರದುರ್ಗ2 ದಿನಗಳು ago

Self Harming: ಪ್ರೀತ್ಸೆ ಅಂತ ಪ್ರಾಣ ತಿಂದ ಯುವಕ; ಕಾಲೇಜು ಕಟ್ಟಡದ ಮೇಲಿಂದು ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

Actress Amulyas brother film director Deepak aras passes away
ಸಿನಿಮಾ2 ದಿನಗಳು ago

Deepak Aras: ನಟಿ ಅಮೂಲ್ಯ ಸಹೋದರ ಚಲನಚಿತ್ರ ನಿರ್ದೇಶಕ ದೀಪಕ್ ಅರಸ್ ಅನಾರೋಗ್ಯದಿಂದ ನಿಧನ

Fraud case Union Minister Pralhad Joshis brother duped of ticket for Lok Sabha polls
ಬೆಂಗಳೂರು2 ದಿನಗಳು ago

Fraud Case : ಲೋಕಸಭೆ ಚುನಾವಣೆಗೆ ಟಿಕೆಟ್‌ ಕೊಡಿಸುವುದಾಗಿ ಕೋಟಿ ರೂ. ಲೂಟಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಹೋದರನ ವಿರುದ್ಧ ಎಫ್‌ಐಆರ್‌ ದಾಖಲು

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ1 ವರ್ಷ ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 ವಾರಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌