Site icon Vistara News

Actor Dhanush: ಭಿಕ್ಷುಕನ ಅವತಾರದಲ್ಲಿ ʻನಟ ಧನುಷ್‌ʼ; ತಿರುಪತಿಯಲ್ಲಿ ಭಕ್ತರ ಪರದಾಟ!

Dhanush Shoots His Next In Tirupati Locals File Complaint

ಬೆಂಗಳೂರು: ಸೂಪರ್ ಸ್ಟಾರ್ ಧನುಷ್ (Actor Dhanush) ಅವರು ಇತ್ತೀಚೆಗೆ ತಿರುಪತಿಗೆ ಭೇಟಿ ನೀಡಿದ್ದರು. ನಿರ್ದೇಶಕ ಶೇಖರ್ ಕಮ್ಮುಲ ಜತೆ ಧನುಷ್‌ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ ‘D 51’ ಎಂದು ಶೀರ್ಷಿಕೆ ಇಡಲಾಗಿದೆ. ತಿರುಪತಿಯಲ್ಲಿ ಈ ಸಿನಿಮಾದ ಶೂಟಿಂಗ್‌ ವೇಳೆ ದೇವಸ್ಥಾನಕ್ಕೆ ದರ್ಶನಕ್ಕೆ ಬರುವ ಭಕ್ತರು ಪರದಾಡಿದ್ದಾರೆ. ಪೊಲೀಸರು ಶೂಟಿಂಗ್​ಗೆ ನೀಡಿದ್ದ ಅನುಮತಿಯನ್ನು ರದ್ದು ಮಾಡಿದ್ದಾರೆ. ಮಾತ್ರವಲ್ಲ, ಧನುಷ್‌ ಅವರ ಅವತಾರ ಯಾರೂ ಗುರುತು ಹಿಡಿಯಲಾಗಿರಲಿಲ್ಲ. ಇದೀಗ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ತಿರುಪತಿಯ ದೇವಸ್ಥಾನದ ಬಳಿ ಧನುಷ್ ಅಲಿಪಿರಿ ಘಾಟ್‌ನಲ್ಲಿ ಸಿನಿಮಾ ಶೂಟಿಂಗ್ ಮಾಡುತ್ತಿದ್ದರು. ​ಚಿತ್ರೀಕರಣದ ಹಲವಾರು ಫೋಟೋಗಳು ಮತ್ತು ವಿಡಿಯೊಗಳು ವೈರಲ್‌ ಆಗಿವೆ. ವಿಡಿಯೊದಲ್ಲಿ ಧನುಷ್‌ ಅವರು ಅತ್ಯಂತ ಗಲೀಜಾದ ಬಟ್ಟೆಯನ್ನು ಧರಿಸಿದ್ದರು. ಭಿಕ್ಷುಕನಂತೆ ಕಂಡಿದ್ದರು. ಇದರಿಂದಾಗಿ ದೇವಸ್ಥಾನಕ್ಕೆ ದರ್ಶನಕ್ಕೆ ಬರುವ ಭಕ್ತರು ಪರದಾಡಿದ್ದಾರೆ. ʻಇಂತಹ ಸ್ಥಳದಲ್ಲಿ ಚಿತ್ರೀಕರಣ ಮಾಡಲು ಸಿಬ್ಬಂದಿಗೆ ಹೇಗೆ ಅನುಮತಿ ನೀಡಿದ್ದೀರಿʼ? ಎಂದು ಭಕ್ತರು ಪೊಲೀಸರಿಗೆ ಪ್ರಶ್ನಿಸಿದ್ದಾರೆ. ಕೊನೆಗೆ ಭಕ್ತರೊಬ್ಬರು ಪೊಲೀಸರಿಗೆ ದೂರು ನೀಡಿದ ಬಳಿಕ ಶೂಟಿಂಗ್ ನಿಲ್ಲಿಸಲಾಯಿತು. ಪೊಲೀಸರು ಎಷ್ಟೇ ತಡೆದರೂ ಶೂಟ್​ ಮಾಡಲು ಚಿತ್ರತಂಡ ಯಶಸ್ವಿಯಾಗಿದೆ ಎಂದು ನಿರ್ಮಾಪಕರು ಮಾಹಿತಿ ಹಂಚಿಕೊಂಡಿದ್ದಾರೆ.

ಶೂಟಿಂಗ್ ಮುಗಿಸಿ ಧನುಷ್ ಜನವರಿ 31ರಂದು ದೇವಸ್ಥಾನಕ್ಕೆ ತೆರಳಿ ದರ್ಶನ ಪಡೆದರು. ಈ ವೇಳೆ ಅವರು ಸಾಂಪ್ರದಾಯಿಕ ಬಿಳಿ ಪಂಚೆ ಮತ್ತು ಶಾಲು ಧರಿಸಿದ್ದರು. ಧನುಷ್ ಅವರ ಚಿತ್ರದಲ್ಲಿ ನಾಗಾರ್ಜುನ ಮತ್ತು ಶೇಖರ್ ಕೂಡ ನಟಿಸಿದ್ದಾರೆ. ಈ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ನಾಯಕಿ.

ಇದನ್ನೂ ಓದಿ: Actor Dhanush: `ಇಳಯರಾಜ’ ಬಯೋಪಿಕ್‌ನಲ್ಲಿ ಧನುಷ್‌; 2025ಗೆ ತೆರೆಗೆ?

ವೈರಲ್‌ ವಿಡಿಯೊ

ಶ್ರೀವೆಂಕಟೇಶ್ವರ ಸಿನಿಮಾಸ್​ ಮತ್ತು ಒಮಿಗೋಸ್​ ಕ್ರಿಯೇಷನ್ಸ್​ ಬ್ಯಾನರ್​ ಮೂಲಕ ಈ ಚಿತ್ರ ನಿರ್ಮಾಣ ಆಗಲಿದೆ. ಧನುಷ್‌​​ ಮತ್ತು ರಶ್ಮಿಕಾ ಮಂದಣ್ಣ ಅವರನ್ನು ಹೊರತುಪಡಿಸಿ ಬೇರೆ ಯಾವೆಲ್ಲ ಕಲಾವಿದರು ನಟಿಸುತ್ತಾರೆ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ತಾಂತ್ರಿಕ ವರ್ಗದ ಬಗ್ಗೆಯೂ ಹೆಚ್ಚಿನ ಮಾಹಿತಿ ಹೊರಬರುವುದು ಬಾಕಿ ಇದೆ.

Exit mobile version