Jailer 2: ʻಜೈಲರ್‌ 2ʼ ಬರೋದು ಕನ್‌ಫರ್ಮ್‌? ನಟಿ ಮಿರ್ನಾ ಮೆನನ್ ಹೇಳಿದ್ದೇನು? - Vistara News

ಕಾಲಿವುಡ್

Jailer 2: ʻಜೈಲರ್‌ 2ʼ ಬರೋದು ಕನ್‌ಫರ್ಮ್‌? ನಟಿ ಮಿರ್ನಾ ಮೆನನ್ ಹೇಳಿದ್ದೇನು?

Jailer 2: ನಟಿ ಮಿರ್ನಾ ಮೆನನ್ ತಮ್ಮ ಮುಂಬರುವ ಸಿನಿಮಾ ʻಬರ್ತ್ ಮಾರ್ಕ್ʼ ಪ್ರಚಾರ ಮಾಡುವಾಗ, ʻಜೈಲರ್ 2ʼ ಸಿನಿಮಾ ಆಗಲಿದೆ ಎಂದು ಹೇಳಿದ್ದಾರೆ. ಜೈಲರ್ ಚಿತ್ರದಲ್ಲಿ ರಜನಿಯ ಸೊಸೆಯಾಗಿ ನಟಿಸಿದ್ದರು ನಟಿ ಮಿರ್ನಾ ಮೆನನ್.

VISTARANEWS.COM


on

Mirnaa Menon gives a big update about Jailer 2
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸೂಪರ್‌ ಸ್ಟಾರ್‌ ರಜನಿಕಾಂತ್‌ ಅವರ ʻಜೈಲರ್‌ʼ ಸಿನಿಮಾ (Jailer 2) ಹಿಟ್‌ ಕಂಡ ಬಳಿಕ ಜೈಲರ್‌ ಸೀಕ್ವೆಲ್ ಬರುತ್ತದೆ ಎಂದು ವರದಿಯಾಗಿತ್ತು. ರಜನಿಕಾಂತ್, ನೆಲ್ಸನ್ ದಿಲೀಪ್ ಕುಮಾರ್ ಹಾಗೂ ಅನಿರುದ್ಧ್ ಮೂವರ ಕಾಂಬಿನೇಷನ್‌ನಲ್ಲಿ ‘ಜೈಲರ್ 2’ ಬರಲಿದೆ ಎನ್ನಲಾಗುತ್ತಿದೆ. ಶೀಘ್ರದಲ್ಲಿಯೇ ‘ಜೈಲರ್ 2’ ಸೆಟ್ಟೇರಲಿದೆ ಎನ್ನುವ ಮಾತು ಕೂಡ ಕೇಳಿ ಬಂದಿತ್ತು. ನಿರ್ದೇಶಕ ನೆಲ್ಸನ್ ದಿಲೀಪ್ ಕುಮಾರ್ ಸ್ಕ್ರಿಪ್ಟ್ ವರ್ಕ್ ಶುರು ಮಾಡಿದ್ದಾರೆ ಎನ್ನಲಾಗಿದೆ.

ಇಲ್ಲಿಯವರೆಗೆ, ಚಿತ್ರತಂಡದಿಂದ ಅಧಿಕೃತ ಮಾಹಿತಿ ಬಂದಿಲ್ಲ. ಆದರೆ ನಟಿ ಮಿರ್ನಾ ಮೆನನ್ ತಮ್ಮ ಮುಂಬರುವ ಸಿನಿಮಾ ʻಬರ್ತ್ ಮಾರ್ಕ್ʼ ಪ್ರಚಾರ ಮಾಡುವಾಗ, ʻಜೈಲರ್ 2ʼ ಸಿನಿಮಾ ಆಗಲಿದೆ ಎಂದು ಹೇಳಿದ್ದಾರೆ. ಜೈಲರ್ ಚಿತ್ರದಲ್ಲಿ ರಜನಿಯ ಸೊಸೆಯಾಗಿ ನಟಿಸಿದ್ದರು ನಟಿ ಮಿರ್ನಾ ಮೆನನ್.

ಮಿರ್ನಾ ಮೆನನ್ ಮಾತನಾಡಿ, “ನಾನು ಇತ್ತೀಚೆಗೆ ನೆಲ್ಸನ್ ಸರ್ ಅವರೊಂದಿಗೆ ಮಾತನಾಡಿದ್ದೇನೆ. ಜೈಲರ್ 2 ಸಿನಿಮಾ ಸ್ಕ್ರಿಪ್ಟ್ ಕೆಲಸ ನಡೆಯುತ್ತಿದೆ ಎಂದು ಅವರು ನನಗೆ ಹೇಳಿದರು. ನಾನು ಜೈಲರ್ 2 ಸಿನಿಮಾದಲ್ಲಿ ಇದ್ದೇನೋ ಇಲ್ಲವೋ ಗೊತ್ತಿಲ್ಲ. ಅದು ನಿರ್ದೇಶಕರ ಆಯ್ಕೆ. ಒಂದು ವೇಳೆ ನನ್ನ ಪಾತ್ರವನ್ನು ವಿಸ್ತರಿಸಲು ಬಯಸಿದರೆ, ನಾನು ಮುಂದಿನ ಭಾಗದದಲ್ಲಿ ಇರಬಹುದುʼʼಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Jailer Movie: `ಜೈಲರ್‌ 2’ನಲ್ಲಿ ಸೂಪರ್‌ ಸ್ಟಾರ್‌ ರಜನಿ ಜತೆ ದಳಪತಿ ವಿಜಯ್‌?

`ಜೈ ಭೀಮ್‌’ ಖ್ಯಾತಿಯ ನಿರ್ದೇಶಕ ಟಿ.ಜೆ. ಜ್ಞಾನವೇಲ್ ನಿರ್ದೇಶನದ ʼತಲೈವರ್ 170ʼ ಸಿನಿಮಾಗೆ ʼವೆಟ್ಟಯ್ಯನ್’ ಎಂದು ಟೈಟಲ್‌ ಇಡಲಾಗಿದೆ. ವೆಟ್ಟಯ್ಯನ್ (Vettaiyan) ಎಂದರೆ ತಮಿಳಿನಲ್ಲಿ ʼಬೇಟೆಗಾರ (Hunter) ಎಂದು ಅರ್ಥ. ಇದು ಮಲ್ಟಿಸ್ಟಾರರ್‌ ಚಿತ್ರವಾಗಿದ್ದು, ಅಮಿತಾಬ್ ಬಚ್ಚನ್, ಫಹಾದ್ ಫಾಸಿಲ್, ರಾಣಾ ದಗ್ಗುಬಾಟಿ, ಮಂಜು ವಾರಿಯರ್ ಸೇರಿದಂತೆ ಪ್ರಮುಖ ಕಲಾವಿದರು ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಿನಿಮಾ ಚಿತ್ರೀಕರಣ ಕೂಡ ಭರದಿಂದ ಸಾಗುತ್ತಿದೆ. ಲೈಕಾ ಪ್ರೊಡಕ್ಷನ್ಸ್ ಈ ಸಿನಿಮಾವನ್ನು ನಿರ್ಮಿಸುತ್ತಿದ್ದು,‌ ಸಿನಿಮಾಗೆ ಅನಿರುದ್ಧ್ ರವಿಚಂದರ್ ಮ್ಯೂಸಿಕ್ ಇರಲಿದೆ.

ಸಿನಿಮಾದಲ್ಲಿ ರಜನಿಕಾಂತ್ ನಿವೃತ್ತ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳಲಿದ್ದು, ಪ್ರಕರಣವೊಂದನ್ನು ರಿ ಓಪನ್ ಮಾಡಿ ನ್ಯಾಯ ಒದಗಿಸುವ ಕೆಲಸವನ್ನು ಮಾಡಲಿದ್ದಾರೆ ಎನ್ನಲಾಗಿದೆ. ಇದಾದ ಬಳಿಕ ರಜನಿಕಾಂತ್‌ ಅವರು ಲೋಕೇಶ್ ಕನಕರಾಜ್ ಜತೆ ಸಿನಿಮಾ ಮಾಡಲಿದ್ದಾರೆ. ಹಾಗಾಗಿ, ಈ ಎರಡು ಚಿತ್ರಗಳು ಮುಗಿದ ನಂತರ ʻಜೈಲರ್ 2ʼ ಪ್ರಾರಂಭವಾಗಬಹುದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಾಲಿವುಡ್

Actor Rajinikanth: ಶಾಲೆಗೆ ಹೋಗಲ್ಲ ಎಂದು ಹಠ ಹಿಡಿದ ಮೊಮ್ಮಗ; ತಾತನ ಡ್ಯೂಟಿ ಮಿಸ್ ಮಾಡ್ದೆ ಸ್ಕೂಲ್‌ಗೆ ಬಿಟ್ಟು ಬಂದ ರಜನಿಕಾಂತ್‌!

Actor Rajinikanth: ಸೌಂದರ್ಯಾ ಅವರು ತಮ್ಮ ಇನ್‌ಸ್ಟಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ, ರಜನಿಕಾಂತ್ ಮೊಮ್ಮಗನೊಂದಿಗೆ ಕುಳಿತು ತರಗತಿಗೆ ಕರೆದುಕೊಂಡು ಹೋಗುತ್ತಿರುವುದು ನೋಡಬಹುದು. ವಿದ್ಯಾರ್ಥಿಗಳು ತಮ್ಮ ನೆಚ್ಚಿನ ನಟನನ್ನು ನೋಡಿ ಅಚ್ಚರಿಗೊಂಡಿದ್ದಾರೆ. ನಟ ಮೊಮ್ಮಗನನ್ನು ಶಾಲೆಗೆ ಬಿಡುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಇದನ್ನು ಅವರ ಮಗಳು ಸೌಂದರ್ಯಾ ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಕೂಡ ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Actor Rajinikanth Fulfils Grandfather Duties By Dropping Grandson At School
Koo

ಬೆಂಗಳೂರು: ರಜನಿಕಾಂತ್ (Actor Rajinikanth) ದೇಶದ ಅತ್ಯಂತ ಜನಪ್ರಿಯ ನಟರಲ್ಲಿ ಒಬ್ಬರು. ಅವರಿಗೆ ಅಪಾರ ಅಭಿಮಾನಿ ಬಳಗವಿದೆ. ಹೀಗಿದ್ದರೂ ನಟ ಆಗಾಗ ಸರಳತೆಯ ವಿಚಾರಕ್ಕೆ ಸುದ್ದಿಯಾಗುತ್ತಲೇ ಇರುತ್ತಾರೆ. ಇದೀಗ ನಟ ಮೊಮ್ಮಗನನ್ನು ಶಾಲೆಗೆ ಬಿಡುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಇದನ್ನು ಅವರ ಮಗಳು ಸೌಂದರ್ಯಾ ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಕೂಡ ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸೌಂದರ್ಯಾ ಅವರು ತಮ್ಮ ಇನ್‌ಸ್ಟಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ, ರಜನಿಕಾಂತ್ ಮೊಮ್ಮಗನೊಂದಿಗೆ ಕುಳಿತು ತರಗತಿಗೆ ಕರೆದುಕೊಂಡು ಹೋಗುತ್ತಿರುವುದು ನೋಡಬಹುದು. ವಿದ್ಯಾರ್ಥಿಗಳು ತಮ್ಮ ನೆಚ್ಚಿನ ನಟನನ್ನು ನೋಡಿ ಅಚ್ಚರಿಗೊಂಡಿದ್ದಾರೆ. “ನನ್ನ ಮಗನಿಗೆ ಬೆಳಗ್ಗೆ ಶಾಲೆಗೆ ಹೋಗಲು ಇಷ್ಟವಿರಲಿಲ್ಲ. ಸೂಪರ್‌ಹೀರೋ ತಾತಾ ಅಳುತ್ತಿದ್ದ ಮಗನನ್ನು ಶಾಲೆಗೆ ಬಿಟ್ಟು ಬಂದರು. ನೀವು ನಿರ್ವಹಿಸುವ ಪ್ರತಿಯೊಂದು ಪಾತ್ರದಲ್ಲೂ ನೀವು ಅತ್ಯುತ್ತಮರು. ಆನ್ ಮತ್ತು ಆಫ್ ಸ್ಕ್ರೀನ್‌ನಲ್ಲಿಯೂ ನನ್ನ ಪ್ರೀತಿಯ ಅಪ್ಪ. ಬೆಸ್ಟ್ ಅಜ್ಜ . ಬೆಸ್ಟ್ ಫಾದರ್. ಜಸ್ಟ್ ದ ಬೆಸ್ಟ್ ʼʼ ಎಂದು ಶೀರ್ಷಿಕೆಯನ್ನು ನೀಡಿದ್ದಾರೆ.

ರಜನಿಕಾಂತ್ ಮೊಮ್ಮೊಗ ಲಿಂಗ ರಾಜ ಜೊತೆ ರಜನಿ ಪೋಸ್ ಕೊಟ್ಟಿದ್ದಾರೆ. ಮತ್ತೊಂದು ಫೋಟೋದಲ್ಲಿ ರಜನಿಕಾಂತ್ ಶಾಲಾ ಕೊಠಡಿಯಲ್ಲಿ ಕಾಣಿಸಿಕೊಂಡಿದ್ದಾರೆ. ರಜನಿಕಾಂತ್ ಅವರನ್ನು ನೋಡಿ ಶಾಲಾ ಮಕ್ಕಳು ಸಖತ್ ಎಗ್ಸೈಟ್ ಆಗಿದ್ದಾರೆ. ಅದರಲ್ಲೂ ಕೊನೆಯಲ್ಲಿ ಕುಳಿತ ಬಾಲಕಿ ಖುಷಿ ತಡೆಯಲಾರದೆ ಎರಡೂ ಕೈಯನ್ನು ಮುಖದಮೇಲೆ ಇಟ್ಟಿದ್ದಾಳೆ.

ಇದನ್ನೂ ಓದಿ: Actor Rajinikanth: ಈ ಬಾರಿಯೂ ಮೋದಿ ಗೆಲ್ಲಬಹುದಾ ಎಂಬ ಪ್ರಶ್ನೆಗೆ ರಜನಿಕಾಂತ್ ಕೊಟ್ಟ ಉತ್ತರ ಏನು?

ಈ ಫೋಟೊ ವೈರಲ್‌ ಆಗುತ್ತಿದ್ದಂತೆ ಫ್ಯಾನ್ಸ್‌ ʻಸೂಪರ್ ಸ್ಟಾರ್ ಆಗಿದ್ದರೂ ಅವರು ಯಾವಾಗಲೂ ವಿಶೇಷರುʼಎಂದು ಕಮೆಂಟ್‌ ಮಾಡಿದ್ದಾರೆ. ಇನ್ನೂ ಕೆಲವರು ಈ ಫೋಟೋ ಹಂಚಿಕೊಂಡ ಸೌಂದರ್ಯಾಗೆ ಧನ್ಯವಾದ ಹೇಳಿದ್ದಾರೆ. ಇನ್ನೂ ಕೆಲವರು ರಜನಿಕಾಂತ್ ಅವರ ದರ್ಶನ ಸಿಕ್ಕಿ ಖುಷಿಯಾದ ಮಕ್ಕಳ ಬಗ್ಗೆ ಬರೆದುಕೊಂಡಿದ್ದಾರೆ.

ತಮಿಳು ಸೂಪರ್‌ಸ್ಟಾರ್ ರಜನಿಕಾಂತ್ ಇತ್ತೀಚೆಗೆ ʻವೆಟ್ಟೈಯಾನ್‌ʼ ಸಿನಿಮಾ ಶೂಟಿಂಗ್‌ ಪೂರ್ಣಗೊಳಿಸಿದ್ದಾರೆ. ಚಿತ್ರದ ಸೆಟ್‌ನ ಕೊನೆಯ ದಿನದ ಫೋಟೋ ವೈರಲ್‌ ಆಗಿತ್ತು. ವೆಟ್ಟೈಯನ್ ಚಿತ್ರವನ್ನು ಟಿ ಜೆ ಜ್ಞಾನವೇಲ್ ನಿರ್ದೇಶಿಸುತ್ತಿದ್ದಾರೆ. ಇದರಲ್ಲಿ ಅಮಿತಾಭ್‌ ಬಚ್ಚನ್, ಫಹದ್ ಫಾಸಿಲ್, ರಾಣಾ ದಗ್ಗುಬಾಟಿ, ಮಂಜು ವಾರಿಯರ್, ರಿತಿಕಾ ಸಿಂಗ್, ದುಶಾರ ವಿಜಯನ್, ಕಿಶೋರ್ ಮತ್ತು ರೋಹಿಣಿ ಅವರ ಸಮಗ್ರ ತಾರಾಗಣದೊಂದಿಗೆ ರಜನಿಕಾಂತ್ ನಾಯಕನಾಗಿ ನಟಿಸಿದ್ದಾರೆ. ಇದನ್ನು ಲೈಕಾ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಸುಬಾಸ್ಕರನ್ ಅಲ್ಲಿರಾಜ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಅನಿರುದ್ಧ್ ರವಿಚಂದರ್ ಸಂಗೀತ ನೀಡುತ್ತಿದ್ದು, ಎಸ್ ಆರ್ ಕತಿರ್ ಛಾಯಾಗ್ರಹಣ ಮತ್ತು ಫಿಲೋಮಿನ್ ರಾಜ್ ಸಂಕಲನ ಮಾಡುತ್ತಿದ್ದಾರೆ. ಹೊಸ ಪೋಸ್ಟರ್ ಅನ್ನು ಅನಾವರಣ ಮಾಡುವುದರ ಜೊತೆಗೆ, ಈ ವರ್ಷ ಅಕ್ಟೋಬರ್‌ನಲ್ಲಿ ಚಿತ್ರವನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದೆ.

Continue Reading

ದೇಶ

IMDb 2024 top movies: ಈ ವರ್ಷದ ಅತ್ಯಂತ ನಿರೀಕ್ಷಿತ ಮತ್ತು ಜನಪ್ರಿಯ ಸಿನಿಮಾಗಳ ಪಟ್ಟಿ ಇಲ್ಲಿದೆ

ಚಲನಚಿತ್ರಗಳು, ಟಿವಿ ಕಾರ್ಯಕ್ರಮಗಳು ಮತ್ತು ಸೆಲೆಬ್ರಿಟಿಗಳ ಕುರಿತು ಮಾಹಿತಿಗಾಗಿ ಅತ್ಯಂತ ಜನಪ್ರಿಯ ಮೂಲಗಳಲ್ಲಿ ಒಂದಾಗಿರುವ ಇಂಟರ್ನೆಟ್ ಮೂವಿ ಡೇಟಾಬೇಸ್ 2024ರ (IMDb 2024) ಟಾಪ್ ಭಾರತೀಯ ಚಲನಚಿತ್ರಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ 2024ರಲ್ಲಿ ಈವರೆಗಿನ ಅತ್ಯಂತ ಜನಪ್ರಿಯ ಭಾರತೀಯ ಚಲನಚಿತ್ರಗಳು ಮತ್ತು ಹೆಚ್ಚು ನಿರೀಕ್ಷಿತ ಚಲನಚಿತ್ರಗಳ ಮಾಹಿತಿಯನ್ನು ನೀಡಲಾಗಿದೆ. ನೀವು ಇವುಗಳಲ್ಲಿ ಯಾವ ಚಿತ್ರ ನೋಡಿದ್ದೀರಿ? ಈ ಪಟ್ಟಿ ನೋಡಿ.

VISTARANEWS.COM


on

By

IMDb 2024
Koo

ಬಾಕ್ಸ್ ಆಫೀಸ್‌ನಲ್ಲಿ (box office collection) ಅನಿಶ್ಚಿತತೆಯ ಹೊರತಾಗಿಯೂ 2024ರಲ್ಲಿ ಹಲವು ಭಾರತೀಯ ಸಿನಿಮಾಗಳು (Indian film) ದಾಖಲೆಯನ್ನು ಬರೆದಿತ್ತು. ಕಲ್ಕಿ 2898 ಎಡಿ (kalki 2898 AD) ಪ್ರಸ್ತುತ 2024ರ ಅತ್ಯಂತ ಜನಪ್ರಿಯ ಭಾರತೀಯ ಚಲನಚಿತ್ರವಾಗಿದೆ. ಪುಷ್ಪ: ದಿ ರೂಲ್ ಭಾಗ 2 (pushpa: the rule part 2) ಡಿಸೆಂಬರ್ 6ರಂದು ಬಿಡುಗಡೆಯಾಗಲಿದೆ. ಇಂಟರ್ನೆಟ್ ಮೂವಿ ಡೇಟಾಬೇಸ್ (IMDb 2024) ಪ್ರಕಾರ ಇದು ಈ ವರ್ಷದ ಬಹು ನಿರೀಕ್ಷಿತ ಭಾರತೀಯ ಚಲನಚಿತ್ರವಾಗಿದೆ.

ಇಂಟರ್ನೆಟ್ ಮೂವಿ ಡೇಟಾಬೇಸ್ 2024ರ ಟಾಪ್ ಭಾರತೀಯ ಚಲನಚಿತ್ರಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇಂಟರ್ನೆಟ್ ಮೂವಿ ಡೇಟಾಬೇಸ್ ಚಲನಚಿತ್ರಗಳು, ಟಿವಿ ಕಾರ್ಯಕ್ರಮಗಳು ಮತ್ತು ಸೆಲೆಬ್ರಿಟಿಗಳ ಕುರಿತು ಮಾಹಿತಿಗಾಗಿ ಅತ್ಯಂತ ಜನಪ್ರಿಯ ಮೂಲಗಳಲ್ಲಿ ಒಂದಾಗಿದೆ. 2024ರಲ್ಲಿ ಈವರೆಗಿನ ಅತ್ಯಂತ ಜನಪ್ರಿಯ ಭಾರತೀಯ ಚಲನಚಿತ್ರಗಳು ಮತ್ತು ಹೆಚ್ಚು ನಿರೀಕ್ಷಿತ ಚಲನಚಿತ್ರಗಳ ಮಾಹಿತಿಯನ್ನು ಐಎಂಡಿಬಿ ಪ್ರಕಟಿಸಿದೆ.

ಕಲ್ಕಿ 2898 ಎಡಿ ಚಿತ್ರದ ನಿರ್ದೇಶಕ ನಾಗ್ ಅಶ್ವಿನ್ ಮಾತನಾಡಿ, ನಮ್ಮ ಇಡೀ ತಂಡವು ಐಎಂಡಿಬಿ ಪಟ್ಟಿಯಲ್ಲಿ ಕಾಣಿಸಿಕೊಂಡಿರುವುದು ಬಹಳ ಸಂತೋಷ ಮತ್ತು ಗೌರವವಾಗಿದೆ. ಇದು ಪ್ರಪಂಚದಾದ್ಯಂತದ ನಮ್ಮ ಪ್ರೇಕ್ಷಕರ ಪ್ರೀತಿಯನ್ನು ನೇರವಾಗಿ ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ.


ಐಎಂಡಿಬಿ ಪಟ್ಟಿಯ 2024ರ ನಂ. 2 ಶ್ರೇಯಾಂಕದಲ್ಲಿರುವ ʼಮಂಜುಮ್ಮೆಲ್ ಬಾಯ್ಸ್‌ʼ ಚಿತ್ರದ ನಿರ್ದೇಶಕ ಚಿದಂಬರಂ ಪ್ರತಿಕ್ರಿಯಿಸಿ ಈ ಗೌರವಕ್ಕಾಗಿ ನಾನು ಐಎಂಡಿಬಿಗೆ ಕೃತಜ್ಞನಾಗಿದ್ದೇನೆ. ಅವರ ಪ್ರೀತಿ ಮತ್ತು ಬೆಂಬಲಕ್ಕಾಗಿ ಪ್ರಪಂಚದಾದ್ಯಂತದ ವೀಕ್ಷಕರಿಗೆ ನನ್ನ ಪ್ರಾಮಾಣಿಕ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ. ಈ ಚಿತ್ರದ ಮ್ಯಾಜಿಕ್‌ಗೆ ಜೀವ ತುಂಬಿದ ಇಡೀ ಚಿತ್ರತಂಡದ ಶ್ರಮ ಮತ್ತು ಸಮರ್ಪಣೆಗೆ ಈ ಸಾಧನೆ ಸಾಕ್ಷಿಯಾಗಿದೆ ಎಂದು ತಿಳಿಸಿದ್ದಾರೆ.

ಐಎಂಡಿಬಿ 2024 ಪಟ್ಟಿಯಲ್ಲಿ ಭಾರತೀಯ ಸಿನಿಮಾ

ಭಾರತೀಯ ಸಿನಿಮಾವು ಭಾರತದಲ್ಲಿ ಮತ್ತು ಜಾಗತಿಕವಾಗಿ ಅತೀ ಹೆಚ್ಚು ವೀಕ್ಷಕರನ್ನು ಸೆಳೆಯುತ್ತಿದೆ ಎಂದು ಐಎಂಡಿಬಿ ಇಂಡಿಯಾದ ಮುಖ್ಯಸ್ಥೆ ಯಾಮಿನಿ ಪಟೋಡಿಯಾ ಹೇಳಿದ್ದಾರೆ.
2024ರಲ್ಲಿ ಇಲ್ಲಿಯವರೆಗೆ ಅತ್ಯಂತ ಜನಪ್ರಿಯ ಭಾರತೀಯ ಚಲನಚಿತ್ರಗಳ ಪಟ್ಟಿಯಲ್ಲಿ ಐದು ಹಿಂದಿ, ಮೂರು ಮಲಯಾಳಂ ಮತ್ತು ಎರಡು ತೆಲುಗು ಚಲನಚಿತ್ರಗಳು ಪ್ರೇಕ್ಷಕರನ್ನು ಕಾಯುವಂತೆ ಮಾಡಿದೆ. ಇದರಲ್ಲಿ ಪುಷ್ಪಾ: ದಿ ರೂಲ್ – ಭಾಗ 2 ಮೊದಲ ಸ್ಥಾನದಲ್ಲಿ ಇದೆ ಎಂದು ಅವರು ತಿಳಿಸಿದ್ದಾರೆ.


ಅತ್ಯಂತ ಜನಪ್ರಿಯ ಚಿತ್ರಗಳು

ಕಲ್ಕಿ 2898 ಎಡಿ, ಮಂಜುಮ್ಮೆಲ್ ಬಾಯ್ಸ್, ಫೈಟರ್, ಹನುಮಾನ್, ಶೈತಾನ್, ಲಾಪತಾ ಲೇಡಿಸ್, ಆರ್ಟಿಕಲ್ 370, ಪ್ರೇಮಾಲು, ಆವೇಶಮ್, ಮುಂಜ್ಯ ಕ್ರಮವಾಗಿ 1ರಿಂದ 10ರೊಳಗಿನ ಸ್ಥಾನದಲ್ಲಿದೆ.

ಶ್ರೇಯಾಂಕ

2024ರ ಜನವರಿ 1ರಿಂದ ಜುಲೈ 10ರ ನಡುವೆ ಭಾರತದಲ್ಲಿ ಬಿಡುಗಡೆಯಾದ ಎಲ್ಲಾ ಚಲನಚಿತ್ರಗಳಲ್ಲಿ ಐಎಂಡಿಬಿ ಬಳಕೆದಾರರ ಸರಾಸರಿ ರೇಟಿಂಗ್ 6 ಅಥವಾ ಕನಿಷ್ಠ 10,000 ಮತಗಳೊಂದಿಗೆ ಈ ಚಿತ್ರಗಳು ಹೆಚ್ಚು ಜನಪ್ರಿಯವಾಗಿವೆ.


ಹೆಚ್ಚು ನಿರೀಕ್ಷಿತ ಚಿತ್ರಗಳು

ಪುಷ್ಪಾ: ದಿ ರೂಲ್- ಭಾಗ 2, ದೇವರ- ಭಾಗ 1, ವೆಲ್ಕಮ್ ಟು ಜಂಗಲ್, ಡಿ ಗ್ರೇಟೆಸ್ಟ್ ಆಫ್ ಆಲ್ ಟೈಮ್, ಕಂಗುವ, ಸಿಂಗಂ ಅಗೈನ್, ಭೂಲ್ ಭುಲೈಯಾ 3, ತಂಗಲಾನ್, ಔರಾನ್ ಮೇ ಕಹಾನ್ ದಮ್ ಥಾ, ಸ್ತ್ರೀ 2 ಕ್ರಮವಾಗಿ 1ರಿಂದ 10ರೊಳಗಿನ ಸ್ಥಾನದಲ್ಲಿದೆ.


ಟಾಪ್ ಸ್ಥಾನದಲ್ಲಿ ದೀಪಿಕಾ ಪಡುಕೋಣೆ, ದಿಶಾ ಪಟಾನಿ, ಅಜಯ್ ದೇವಗನ್

ದೀಪಿಕಾ ಪಡುಕೋಣೆ, ದಿಶಾ ಪಟಾನಿ ಮತ್ತು ಅಜಯ್ ದೇವಗನ್ ಅವರ ಚಿತ್ರಗಳು ಎರಡೂ ಪಟ್ಟಿಯಲ್ಲಿ ಕಾಣಿಸಿಕೊಂಡಿದೆ. ದೀಪಿಕಾ ಮತ್ತು ದಿಶಾ ಕಲ್ಕಿ 2898 ಎಡಿ ಚಿತ್ರದಲ್ಲಿ ನಟಿಸುತ್ತಿದ್ದಾರೆ ಮತ್ತು ಫೈಟರ್ ಚಿತ್ರದಲ್ಲೂ ದೀಪಿಕಾ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: Actor Dhanush: ಪೋಯಸ್ ಗಾರ್ಡನ್‌ನಲ್ಲಿ ಮನೆ ಖರೀದಿಸಬಾರದಾ? ನಾನೇನು ಬೀದಿಯಲ್ಲಿ ಇರಬೇಕಾ ಎಂದ ನಟ ಧನುಷ್‌!

ಶೈತಾನ್ ಚಿತ್ರದಲ್ಲಿ ಅಜಯ್ ನಟಿಸಿದ್ದು, ದೀಪಿಕಾ ಮತ್ತು ಅಜಯ್ ಮೊದಲ ಬಾರಿಗೆ ಸಿಂಗಮ್ ಅಗೈನ್ ನಲ್ಲಿ ಕಾಣಿಸಿಕೊಂಡಿದ್ದಾರೆ.


ಇದು ಈ ವರ್ಷದ ಕೊನೆಯಲ್ಲಿ ಬಿಡುಗಡೆಯಾಗಲಿದೆ. ದಿಶಾ ಅವರ ಮುಂಬರುವ ಬಿಡುಗಡೆಗಳಲ್ಲಿ ವೆಲ್ಕಮ್ ಟು ದಿ ಜಂಗಲ್ ಮತ್ತು ಕಂಗುವ ಸೇರಿವೆ.

Continue Reading

ಕಾಲಿವುಡ್

Actor Dhanush: ಸಿನಿಮಾ ಬಿಡುಗಡೆಗೂ ಮುನ್ನ ದೇವರ ಮೊರೆ ಹೋದ ನಟ ಧನುಷ್

Actor Dhanush: ಚಿತ್ರ ‘ಎ’ ಸರ್ಟಿಫಿಕೇಟ್‌ ಪಡೆದುಕೊಂಡಿದೆ. ‘ರಾಯನ್ಸ್’ ಚಿತ್ರಕ್ಕೆ ಎಆರ್ ರೆಹಮಾನ್ ಸಂಗೀತ, ಓಂ ಪ್ರಕಾಶ್ ಅವರ ಛಾಯಾಗ್ರಹಣ ಮತ್ತು ಪ್ರಸನ್ನ ಜಿಕೆ ಸಂಕಲನವಿದೆ.ಇದೀಗ ಸಿನಿಮಾ ಬಿಡುಗಡೆಗೂ ಮುಂಚೆ ನಟ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ದೇವಾಲಯದಲ್ಲಿ ಧ್ಯಾನ ಮಾಡುತ್ತಿರುವ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ.

VISTARANEWS.COM


on

Actor Dhanush shares pic of him meditating at ancestral temple
Koo

ಬೆಂಗಳೂರು: ಧನುಷ್ ಬರೆದು ನಿರ್ದೇಶಿಸಿರುವ ಸನ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ʻರಾಯನ್ʼ ಸಿನಿಮಾವನ್ನು ಕಲಾನಿಧಿ ಮಾರನ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಸಿನಿಮಾ ಜುಲೈ 26ಕ್ಕೆ ಚಿತ್ರ ತಮಿಳು ಮತ್ತು ತೆಲುಗಿನಲ್ಲಿ ಬಿಡುಗಡೆಯಾಗಲಿದೆ. ಇನ್ನು ಸಿನಿಮಾದ ಟ್ರೈಲರ್‌ ಬಹಳ ರೂಚಕತೆಯಿಂದ ಕೂಡಿತ್ತು. ಈಗಾಗಲೇ ಸಿನಿಮಾದ ಆಡಿಯೊ ಲಾಂಚ್‌ ಬಹಳ ಅದ್ಧೂರಿಯಾಗಿ ನೆರವೇರಿದೆ. ಇದೀಗ ಸಿನಿಮಾ ಬಿಡುಗಡೆಗೂ ಮುಂಚೆ ನಟ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ದೇವಾಲಯದಲ್ಲಿ ಧ್ಯಾನ ಮಾಡುತ್ತಿರುವ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ.

ಪುತ್ರರಾದ ಯಾತ್ರಾ ಮತ್ತು ಲಿಂಗ ಕೂಡ ಜತೆಗೆ ಇದ್ದರು. ಜುಲೈ 26 ರಂದು ತಮಿಳು ಮತ್ತು ತೆಲುಗಿನಲ್ಲಿ ಥಿಯೇಟರ್‌ಗಳಲ್ಲಿ ಗ್ರ್ಯಾಂಡ್ ರಿಲೀಸ್‌ಗೆ ಸಜ್ಜಾಗಿದೆ. ಇನ್ನು ಈ ಸಿನಿಮಾ ಧನುಷ್‌ ಅವರ 50ನೇ ಸಿನಿಮಾ ಎನ್ನುವುದು ವಿಶೇಷ. ಚಿತ್ರದಲ್ಲಿ ಎಸ್‌ಜೆ ಸೂರ್ಯ, ಸಂದೀಪ್ ಕಿಶನ್, ಕಾಳಿದಾಸ್ ಜಯರಾಮ್, ಅಪರ್ಣಾ ಬಾಲಮುರಳಿ, ದುಶಾರ ವಿಜಯನ್, ಪ್ರಕಾಶ್ ರಾಜ್ ಮತ್ತು ಸೇವಾರಾಘವನ್ ಪ್ರಮುಖ ಪಾತ್ರಗಳಲ್ಲಿದ್ದಾರೆ.

ಚಿತ್ರ ‘ಎ’ ಸರ್ಟಿಫಿಕೇಟ್‌ ಪಡೆದುಕೊಂಡಿದೆ. ‘ರಾಯನ್ಸ್’ ಚಿತ್ರಕ್ಕೆ ಎಆರ್ ರೆಹಮಾನ್ ಸಂಗೀತ, ಓಂ ಪ್ರಕಾಶ್ ಅವರ ಛಾಯಾಗ್ರಹಣ ಮತ್ತು ಪ್ರಸನ್ನ ಜಿಕೆ ಸಂಕಲನವಿದೆ.

ಇದನ್ನೂ ಓದಿ: Actor Suriya: ಕಾಲಿವುಡ್‌ ನಟ ಸೂರ್ಯ ಸಿನಿಮಾಗಾಗಿ ಈ ಕನ್ನಡ   ಸ್ಟಾರ್ ಹೀರೋಗೆ ಬಂದಿತ್ತು ಆಫರ್‌!

ಧನುಷ್ (Actor Dhanush) ಅವರ ಎರಡನೇ ನಿರ್ದೇಶನದ ಸಿನಿಮಾ ರಾಯನ್‌’ (Raayan). ಧನುಷ್ ಕಳೆದ ವರ್ಷ ಜುಲೈನಲ್ಲಿ ಈ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದರು. ಈ ಸಿನಿಮಾಗಾಗಿ ನಟ ತಲೆಯನ್ನು ಬೋಳಿಸಿಕೊಂಡಿದ್ದರು. 2017 ರಲ್ಲಿ ತೆರೆಕಂಡ ‘ಪಾ ಪಾಂಡಿ’ ಚಿತ್ರದ ಮೂಲಕ ಧನುಷ್ ನಿರ್ದೇಶಕರಾಗಿ ಪದಾರ್ಪಣೆ ಮಾಡಿದರು. ಈ ಚಿತ್ರಕ್ಕಾಗಿ ಫಿಲ್ಮ್‌ಫೇರ್‌ನಲ್ಲಿ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು. ಇದೀಗ ʻರಾಯನ್‌ʼ ಅವರ ಎರಡನೇ ನಿರ್ದೇಶನದ ಸಿನಿಮಾ. ಧನುಷ್‌ ಕೊನೆಯದಾಗಿ ‘ಕ್ಯಾಪ್ಟನ್ ಮಿಲ್ಲರ್’ ಚಿತ್ರದಲ್ಲಿ ಕಾಣಿಸಿಕೊಂಡರು. ಅರುಣ್ ಮಾಥೇಶ್ವರನ್ ನಿರ್ದೇಶನದ ಈ ಚಿತ್ರದಲ್ಲಿ ಶಿವ ರಾಜ್‌ಕುಮಾರ್, ಪ್ರಿಯಾಂಕಾ ಮೋಹನ್, ನಿವೇದಿತಾ ಸತೀಶ್, ಜಾನ್ ಕೊಕ್ಕೆನ್ ಮತ್ತು ಮೂರ್ ಪ್ರಮುಖ ಪಾತ್ರಗಳಲ್ಲಿದ್ದರು.

ಸದ್ಯ ‘ಕುಬೇರ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಶೀಘ್ರದಲ್ಲೇ ಸೂಟಿಂಗ್‌ ಮುಕ್ತಾಯವಾಗುವ ನಿರೀಕ್ಷೆಯಿದೆ. ‘ಕುಬೇರ’ ತ್ರಿಭಾಷಾ ಚಿತ್ರವಾಗಿದ್ದು, ಏಕಕಾಲದಲ್ಲಿ ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ಚಿತ್ರೀಕರಣವಾಗುತ್ತಿದೆ.ʻಕುಬೇರ’ ಬಹು ನಿರೀಕ್ಷಿತ ಪ್ಯಾನ್-ಇಂಡಿಯನ್ ಚಲನಚಿತ್ರಗಳಲ್ಲಿ ಒಂದಾಗಿದೆ, ಇದನ್ನು ರಾಷ್ಟ್ರೀಯ ಪ್ರಶಸ್ತಿ ವಿಜೇತ ನಿರ್ದೇಶಕ ಶೇಖರ್ ಕಮ್ಮುಲ ನಿರ್ದೇಶಿಸಿದ್ದಾರೆ.

Continue Reading

South Cinema

Actor Dhanush: ಪೋಯಸ್ ಗಾರ್ಡನ್‌ನಲ್ಲಿ ಮನೆ ಖರೀದಿಸಬಾರದಾ? ನಾನೇನು ಬೀದಿಯಲ್ಲಿ ಇರಬೇಕಾ ಎಂದ ನಟ ಧನುಷ್‌!

Actor Dhanush: ಪೋಯಸ್ ಗಾರ್ಡನ್‌ನಲ್ಲಿ ಮನೆ ಖರೀದಿಸಲು ತಾನು ಹೇಗೆ ಶ್ರಮಿಸಿದ್ದೇನೆ ಎಂಬ ಬಗ್ಗೆ ನಟ ಹೇಳಿಕೊಂಡರು. ಈಚೆಗೆ ಅವರು ತಮ್ಮ 150 ಕೋಟಿ ರೂ. ಮೌಲ್ಯದ ಮನೆ ವಿಚಾರಕ್ಕಾಗಿ ಸುದ್ದಿಯಾಗಿದ್ದರು. ಚೆನ್ನೈನ ಅತ್ಯಂತ ದುಬಾರಿ ಮತ್ತು ಪ್ರತಿಷ್ಠಿತ ಏರಿಯಾ ಅಂದ್ರೆ, ಅದು ಪೋಯಸ್ ಗಾರ್ಡನ್. ಇಂತಹ ಏರಿಯಾದಲ್ಲಿ ಮನೆ ಕಟ್ಟಬೇಕು ಎಂಬುದು ಧನುಷ್ ಕನಸಾಗಿತ್ತು.

VISTARANEWS.COM


on

Actor Dhanush receives backlash for calling himself an outsider at Raayan
Koo

ಬೆಂಗಳೂರು: ಕಾಲಿವುಡ್‌ ನಟ ಧನುಷ್ (Actor Dhanush) ಅವರು ತಮ್ಮ ಮುಂಬರುವ ಚಿತ್ರ ʻರಾಯನ್‌ʼ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ತಮ್ಮ ಭಾಷಣದ ಮೂಲಕ ಹಲವಾರು ವಿಚಾರಗಳಿಗೆ ರಗಡ್‌ ಆಗಿಯೇ ಪ್ರತಿಕ್ರಿಯಿಸಿದ್ದಾರೆ. ಪೋಯಸ್ ಗಾರ್ಡನ್‌ನಲ್ಲಿ ಮನೆ ಖರೀದಿಸಲು ತಾನು ಹೇಗೆ ಶ್ರಮಿಸಿದ್ದೇನೆ ಎಂಬ ಬಗ್ಗೆ ನಟ ಹೇಳಿಕೊಂಡರು. ಈಚೆಗೆ ಅವರು ತಮ್ಮ 150 ಕೋಟಿ ರೂ. ಮೌಲ್ಯದ ಮನೆ ವಿಚಾರಕ್ಕಾಗಿ ಸುದ್ದಿಯಾಗಿದ್ದರು. ಚೆನ್ನೈನ ಅತ್ಯಂತ ದುಬಾರಿ ಮತ್ತು ಪ್ರತಿಷ್ಠಿತ ಏರಿಯಾ ಅಂದ್ರೆ, ಅದು ಪೋಯಸ್ ಗಾರ್ಡನ್. ಇಂತಹ ಏರಿಯಾದಲ್ಲಿ ಮನೆ ಕಟ್ಟಬೇಕು ಎಂಬುದು ಧನುಷ್ ಕನಸಾಗಿತ್ತು. ಈ ಮನೆ ಬಗ್ಗೆ ದೊಡ್ಡಮಟ್ಟದಲ್ಲಿ ಚರ್ಚೆ ಆಗುತ್ತದೆ. “ನಾವೆಲ್ಲಾ ಪೋಯಸ್ ಗಾರ್ಡನ್‌ನಲ್ಲಿ ಮನೆ ಖರೀದಿಸಬಾರದಾ? ನಾನು ಬೀದಿಯಲ್ಲಿ ವಾಸಿಸಬೇಕಾ” ಎಂದು ಪ್ರಶ್ನೆ ಮಾಡಿದ್ದಾರೆ.

ರಜನಿಕಾಂತ್ ಮತ್ತು ದಿವಂಗತ ಜಯಲಲಿತಾ ಅಂತಹ ಘಟನುಘಟಿಗಳು ಪೋಯಸ್ ಗಾರ್ಡನ್‌ನಲ್ಲಿ ಮನೆ ಖರೀದಿಸಿದ್ದರು. ಈ ಪಟ್ಟಿಗೆ ಧನುಷ್‌ ಅವರ ಹೆಸರು ಸೇಪರ್ಡೆಯಾಗಿತ್ತು. ಮಾತ್ರವಲ್ಲ ಈ ಬಗ್ಗೆ ಭಾರಿ ಚರ್ಚೆಗಳು ಆದವು. ಇದೀಗ ವೇದಿಕೆಯಲ್ಲಿ ಧನುಷ್‌ ಮಾತನಾಡಿ ʻʻಪೋಯಸ್ ಗಾರ್ಡನ್‌ನಲ್ಲಿ ಮನೆ ಖರೀದಿಸುವುದು ಇಷ್ಟು ದೊಡ್ಡ ಚರ್ಚೆ ಆಗುತ್ತಿತ್ತು ಎಂದು ನನಗೆ ತಿಳಿದಿದ್ದರೆ, ನಾನು ಕೇವಲ ಒಂದು ಸಣ್ಣ ಅಪಾರ್ಟ್ಮೆಂಟ್ ಅಲ್ಲಿ ಇರುತ್ತಿದ್ದೆ. ಹಾಗಾದರೆ ನಾನು ಪೋಯಸ್ ಗಾರ್ಡನ್‌ನಲ್ಲಿ ಮನೆ ಖರೀದಿಸಬಾರದೇ? ಬೀದಿಯಲ್ಲಿ ಇರುವವನು ಬೀದಿಯಲ್ಲೇ ಇರಬೇಕೇ?ಎಂದು ಮತ್ತಷ್ಟು ವಿಚಾರ ಹೇಳಿಕೊಂಡರು.

ಧನುಷ್ ಅವರು 16 ವರ್ಷದವರಾಗಿದ್ದಾಗ ರಜನಿಕಾಂತ್ ಅವರ ಮನೆಯನ್ನು ನೋಡಲು ಕಾಯುತ್ತಿದ್ದರಂತೆ. ಈ ಬಗ್ಗೆ ನಟ ಮಾತನಾಡಿ ʻʻನನಗೆ ಆಗ 16 ವರ್ಷ ಇರಬೇಕು. ಈ ಏರಿಯಾಗೆ ಬಂದಾಗ ಮುಂಚೆ ಜಯಲಲಿತಾ ಅವರ ಮನೆ ಎಂದು ಗೊತ್ತಾಯ್ತು. ನಾನು ಬೈಕ್ ನಿಲ್ಲಿಸಿ ನೋಡಿದೆ – ಒಂದು ಕಡೆ ರಜನಿ ಸರ್ ಮನೆ, ಇನ್ನೊಂದು ಕಡೆ ಜಯಲಲಿತಾ ಅಮ್ಮನ ಮನೆ. ಒಂದು ದಿನ, ಹೇಗಾದರೂ, ನಾನು ಪೋಯಸ್ ಗಾರ್ಡನ್‌ನಂತಹ ಐಷಾರಾಮಿ ಪ್ರದೇಶದಲ್ಲಿ ಕನಿಷ್ಠ ಒಂದು ಸಣ್ಣ ಮನೆಯನ್ನು ಖರೀದಿಸಬೇಕು ಎಂದು ನಿರ್ಧಾರ ಮಾಡಿದ್ದೆ. ಅಂದು ಕನಸು ಕಂಡ ವೆಂಕಟೇಶ್ ಪ್ರಭುಗೆ (ಧನುಷ್ ಮೂಲ ಹೆಸರು) ಇಷ್ಟು ವರ್ಷ ಕಷ್ಟಪಟ್ಟು ಧನುಷ್ ನೀಡಿದ ಗಿಫ್ಟ್ ಆ ಪೋಯಸ್ ಗಾರ್ಡನ್‌ ಮನೆ” ಎಂದು ನಟ ಧನುಷ್ ಹೇಳಿದ್ದಾರೆ.

ಇದನ್ನೂ ಓದಿ: Actor Suriya: ಕಾಲಿವುಡ್‌ ನಟ ಸೂರ್ಯ ಸಿನಿಮಾಗಾಗಿ ಈ ಕನ್ನಡ   ಸ್ಟಾರ್ ಹೀರೋಗೆ ಬಂದಿತ್ತು ಆಫರ್‌!

ಇದೀಗ ನಟನ ಮಾತುಗಳಿಗೆ ಹೆಚ್ಚಾಗಿ ನೆಗೆಟಿವ್‌ ಕಮೆಂಟ್‌ ಬಂದಿವೆ. , “ಧನುಷ್ ಅವರಂತಹ ನೆಪೋ ಕಿಡ್ ವ ಬಗ್ಗೆ ಮಾತನಾಡುತ್ತಿರುವುದು ತಮಾಷೆಯಾಗಿದೆ.. ಹಾಗೆ, ನಿಮ್ಮ ಕುಟುಂಬವು ಸಿನಿಮಾ ಹಿನ್ನೆಲೆಯನ್ನು ಹೊಂದಿದೆ ಮತ್ತು ಯಾವುದೇ ಪ್ರತಿಭೆಗಳಿಲ್ಲದೆ ನೀವು ಅದನ್ನು ಸುಲಭವಾಗಿ ಪ್ರವೇಶಿಸಬಹುದು. ಬೀದಿ ಎಂದರೇನು ಎಂದು ನಿಮಗೆ ತಿಳಿದಿದೆಯೇ? ”ಎಂದು ಒಬ್ಬರು ಪ್ರಶ್ನಿಸಿದ್ದಾರೆ.

ʻ”ಈ ನಟರು ಸಾಮಾನ್ಯವಲ್ಲದವರಂತೆ ಏಕೆ ವರ್ತಿಸುತ್ತಾರೆ? ಸರಳವಾದ ಉಡುಗೆ ಮತ್ತು ರುದ್ರಾಕ್ಷಿಯನ್ನು ಧರಿಸುವುದರಿಂದ ಯಾರಾದರೂ ಸರಳ ಮತ್ತು ವಿನಮ್ರರು ಎಂದು ಅರ್ಥವಲ್ಲ. ಮನಸ್ಥಿತಿಯೇ ಮುಖ್ಯ! ಈ ಕಥೆಗಳ ಮೂಲಕ ತನ್ನ ಮಾಜಿ ಮಾವನಿಗೆ ಮಣೆ ಹಾಕುತ್ತಿದ್ದಾರೆʼʼಎಂದು ಇನ್ನೊಬ್ಬರು ಕಮೆಂಟ್‌ ಮಾಡಿದ್ದಾರೆ.

ಧನುಷ್ (Actor Dhanush) ಅವರ ಎರಡನೇ ನಿರ್ದೇಶನದ ಸಿನಿಮಾ ರಾಯನ್‌’ (Raayan). ಧನುಷ್ ಕಳೆದ ವರ್ಷ ಜುಲೈನಲ್ಲಿ ಈ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದರು. ಈ ಸಿನಿಮಾಗಾಗಿ ನಟ ತಲೆಯನ್ನು ಬೋಳಿಸಿಕೊಂಡಿdfdru. 2017 ರಲ್ಲಿ ತೆರೆಕಂಡ ‘ಪಾ ಪಾಂಡಿ’ ಚಿತ್ರದ ಮೂಲಕ ಧನುಷ್ ನಿರ್ದೇಶಕರಾಗಿ ಪದಾರ್ಪಣೆ ಮಾಡಿದರು. ಈ ಚಿತ್ರಕ್ಕಾಗಿ ಫಿಲ್ಮ್‌ಫೇರ್‌ನಲ್ಲಿ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು. ಇದೀಗ ʻರಾಯನ್‌ʼ ಅವರ ಎರಡನೇ ನಿರ್ದೇಶನದ ಸಿನಿಮಾ. ಧನುಷ್‌ ಕೊನೆಯದಾಗಿ ‘ಕ್ಯಾಪ್ಟನ್ ಮಿಲ್ಲರ್’ ಚಿತ್ರದಲ್ಲಿ ಕಾಣಿಸಿಕೊಂಡರು. ಅರುಣ್ ಮಾಥೇಶ್ವರನ್ ನಿರ್ದೇಶನದ ಈ ಚಿತ್ರದಲ್ಲಿ ಶಿವ ರಾಜ್‌ಕುಮಾರ್, ಪ್ರಿಯಾಂಕಾ ಮೋಹನ್, ನಿವೇದಿತಾ ಸತೀಶ್, ಜಾನ್ ಕೊಕ್ಕೆನ್ ಮತ್ತು ಮೂರ್ ಪ್ರಮುಖ ಪಾತ್ರಗಳಲ್ಲಿದ್ದರು.

ಸಂದೀಪ್ ಕಿಶನ್ ಮತ್ತು ಕಾಳಿದಾಸ್ ಜಯರಾಮ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ಚಿತ್ರದಲ್ಲಿ ಎಸ್‌ಜೆ ಸೂರ್ಯ, ಸೆಲ್ವರಾಘವನ್, ಪ್ರಕಾಶ್ ರಾಜ್, ದುಶಾರ ವಿಜಯನ್, ಅಪರ್ಣಾ ಬಾಲಮುರಳಿ ಮತ್ತು ವರಲಕ್ಷ್ಮಿ ಶರತ್‌ಕುಮಾರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಶೀಘ್ರದಲ್ಲೇ ಶೇಖರ್ ಕಮ್ಮುಲ ಅವರ ತೆಲುಗು-ತಮಿಳು ದ್ವಿಭಾಷಾ ಚಿತ್ರ `ಕುಬೇರ’ದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಾಗಾರ್ಜುನ, ರಶ್ಮಿಕಾ ಮಂದಣ್ಣ ಮತ್ತು ಜಿಮ್ ಸರ್ಭ್ ಕೂಡ ಇದರಲ್ಲಿ ನಟಿಸಿದ್ದಾರೆ.

Continue Reading
Advertisement
illicit relationship raichur siravara
ಕ್ರೈಂ9 mins ago

Illicit Relationship: ವಿಚ್ಛೇದಿತ ನರ್ಸ್‌ ಜೊತೆ ಲವ್ವಿ ಡವ್ವಿ; ಪೊಲೀಸಪ್ಪನಿಗೇ ಕಾನೂನು ರುಚಿ ತೋರಿಸಿದ ಪತ್ನಿ

Gold Rate Today
ಚಿನ್ನದ ದರ9 mins ago

Gold Rate Today: ಬಜೆಟ್‌ ಬಳಿಕ ಇದೇ ಮೊದಲ ಬಾರಿ ಏರಿಕೆ ಕಂಡ ಚಿನ್ನದ ದರ; ಇಂದು ಇಷ್ಟು ದುಬಾರಿ

Actor Darshan Astrologer Chanda Pandey Said Facing Problems Because Of His vig
ಕ್ರೈಂ29 mins ago

Actor Darshan: ವಿಗ್‌ ಹಾಕಿದ್ದರಿಂದಲೇ ದರ್ಶನ್‌ಗೆ ಕಂಟಕ ಆಯ್ತು ಎಂದ ಕಾಳಿ ಉಪಾಸಕಿ ಚಂದಾ ಪಾಂಡೇ!

Encounter in Kupwara
ದೇಶ56 mins ago

Encounter in Kupwara: ಕುಪ್ವಾರಾದಲ್ಲಿ ಉಗ್ರರೊಂದಿಗೆ ಗುಂಡಿನ ಚಕಮಕಿ: ಮೂವರು ಸೈನಿಕರಿಗೆ ಗಾಯ

Champions Trophy 2025
ಕ್ರೀಡೆ59 mins ago

Champions Trophy 2025: ನಾವು ತುಂಬಾ ಒಳ್ಳೆಯವರು, ಪಾಕಿಸ್ತಾನಕ್ಕೆ ಬನ್ನಿ; ಟೀಮ್ ಇಂಡಿಯಾಗೆ ಪಾಕ್​ ಆಟಗಾರನ ಮನವಿ

Murder in PG Case
ಕ್ರೈಂ1 hour ago

Murder in PG: ಪಿಜಿಯಲ್ಲಿ ಯುವತಿ ಕೊಲೆ ಮಾಡಿದ ಪಾತಕಿ ಮಧ್ಯಪ್ರದೇಶದಲ್ಲಿ ಸೆರೆ

kaveri aarti
ಪ್ರಮುಖ ಸುದ್ದಿ1 hour ago

Kaveri Aarti: ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ; ದಸರಾ ಹೊತ್ತಿಗೆ ರೆಡಿ

Malaika Arora breakup rumours rushes past Arjun Kapoor
ಬಾಲಿವುಡ್1 hour ago

Malaika Arora: ಒಂದೇ ಈವೆಂಟ್‌ನಲ್ಲಿ ಇದ್ದರೂ ಒಬ್ಬರ ಮುಖವನ್ನು ಇನ್ನೊಬ್ಬರು ನೋಡಿಕೊಂಡಿಲ್ಲ! ಅರ್ಜುನ್​-ಮಲೈಕಾ ಬ್ರೇಕಪ್‌ ಖಚಿತ?

Narendra Modi
ದೇಶ2 hours ago

Narendra Modi: ರಷ್ಯಾ ಬಳಿಕ ಮುಂದಿನ ತಿಂಗಳು ಯುದ್ಧ ಪೀಡಿತ ಉಕ್ರೇನ್‌ಗೆ ಪ್ರಧಾನಿ ಮೋದಿ ಭೇಟಿ

Actor Rajinikanth Fulfils Grandfather Duties By Dropping Grandson At School
ಕಾಲಿವುಡ್2 hours ago

Actor Rajinikanth: ಶಾಲೆಗೆ ಹೋಗಲ್ಲ ಎಂದು ಹಠ ಹಿಡಿದ ಮೊಮ್ಮಗ; ತಾತನ ಡ್ಯೂಟಿ ಮಿಸ್ ಮಾಡ್ದೆ ಸ್ಕೂಲ್‌ಗೆ ಬಿಟ್ಟು ಬಂದ ರಜನಿಕಾಂತ್‌!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Ankola landslide
ಉತ್ತರ ಕನ್ನಡ16 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ17 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ18 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ19 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ3 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ4 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

ಟ್ರೆಂಡಿಂಗ್‌