Shruti Haasan: ಎರಡನೇ ಬಾಯ್‌ಫ್ರೆಂಡ್‌ ನಿಂದಲೂ ಕಮಲ್‌ ಹಾಸನ್‌ ಪುತ್ರಿ ಬ್ರೇಕಪ್? - Vistara News

ಕಾಲಿವುಡ್

Shruti Haasan: ಎರಡನೇ ಬಾಯ್‌ಫ್ರೆಂಡ್‌ ನಿಂದಲೂ ಕಮಲ್‌ ಹಾಸನ್‌ ಪುತ್ರಿ ಬ್ರೇಕಪ್?

Shruti Haasan: ಮೈಕಲ್ ಕೋರ್ಸೆಲ್ ಅವರಿಂದ ದೂರವಾದ ನಂತರ, ಶ್ರುತಿ ಹಾಸನ್ ಬದುಕಿನಲ್ಲಿ ಬಂದ ವ್ಯಕ್ತಿ ಶಂತನು ಹಜಾರಿಕಾ. ಶಂತನು ಹಜಾರಿಕಾ ಜತೆ ಎರಡು ವರ್ಷಗಳ ಪ್ರೀತಿಯಲ್ಲಿ ಇದ್ದಿದ್ದರು ಶ್ರುತಿ ಹಾಸನ್. ಅನೇಕ ಸಲ ತಮ್ಮ ಈ ಪ್ರೇಮ ಕಥೆಯನ್ನ ಹೆಮ್ಮೆಯಿಂದ ಹೇಳಿಕೊಂಡಿದ್ದರು. ನಟಿ ಶ್ರುತಿ ಹಾಸನ್ ಆಗಾಗ ಅವಾಂತರಗಳನ್ನು ಮಾಡುತ್ತಲೇ ಸಾಕಷ್ಟು ವಿವಾದಕ್ಕೂ ಗುರಿಯಾಗುತ್ತಲೇ ಇರುತ್ತಾರೆ. ಶ್ರುತಿ ಹಾಸನ್‌ ನಗುವಿನೊಂದಿಗೆ ಶಾಂತನು ಹಜಾರಿಕಾನ ಕಣ್ಣು ಅಷ್ಟೇ ಅಲ್ಲ, ಮತ್ತು ಆತ ಬಿಡುವ ಹೂಸು ಕೂಡ ನನಗೆ ತುಂಬಾ ಇಷ್ಟ ಎಂದಿದ್ದರು.

VISTARANEWS.COM


on

Shruti Haasan and boyfriend santanu hazarika break up
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಾಲಿವುಡ್‌ ಸೂಪರ್‌ ಸ್ಟಾರ್‌ ಮಲ್‌ ಹಾಸನ್‌ (Kamal Hassan) ಅವರ ಪುತ್ರಿ ನಟಿ ಶ್ರುತಿ ಹಾಸನ್‌ (Shruti Haasan) ಪ್ರಿಯತಮ ಶಂತನು ಹಜಾರಿಕಾ (santanu hazarika) ಜತೆ ಲಿವಿಂಗ್‌ ರಿಲೇಶನ್‌ಶಿಪ್‌ನಲ್ಲಿ ಇರುವುದು ಗೊತ್ತೇ ಇದೆ. ಇದೀಗ ಜೋಡಿ ಬ್ರೇಕಪ್‌ ಮಾಡಿಕೊಂಡಿದೆ ಎಂದು ತಮಿಳು ಮಾಧ್ಯಮಗಳು ವರದಿ ಮಾಡಿವೆ. ಪೂರಕ ಎಂಬಂತೆ ನಟಿ ಪ್ರಿಯತಮ ಶಂತನು ಹಜಾರಿಕಾ ಅವರ ಎಲ್ಲ ಫೋಟೊಗಳನ್ನು ಡಿಲಿಟ್‌ ಮಾಡಿದ್ದಾರೆ. ಜತೆಗೆ ಇನ್‌ಸ್ಟಾ ಅನ್‌ಫಾಲೋ ಮಾಡಿದ್ದಾರೆ.

ಮೂಲಗಳ ಪ್ರಕಾರ ನಟಿ ಸ್ವಲ್ಪ ಸಮಯದವರೆಗೆ ಇನ್ಸ್ಟಾಗ್ರಾಮ್ ಖಾತೆಯನ್ನು ಡಿ ಆಕ್ಟಿವೇಟ್‌ ಮಾಡಿದ್ದರು. ಬಳಿಕ ಇನ್‌ಸ್ಟಾದಲ್ಲಿ ಶಂತನು ಹಜಾರಿಕಾ ಜತೆ ಇದ್ದ ಫೋಟೊಗಳನ್ನು ಡಿಲಿಟ್‌ ಮಾಡಿದ್ದಾರೆ. ಜತೆಗೆ ಅನ್‌ಫಾಲೋ ಮಾಡಿದ್ದಾರೆ. ಈಗಾಗಲೇ ಈ ಜೋಡಿ ಒಟ್ಟಿಗೆ ಇಲ್ಲ ಎಂದು ವರದಿಯಾಗಿದೆ. ಈ ಮುಂಚೆ ಒಂದೇ ಮನೆಯಲ್ಲಿ ಇಬ್ಬರೂ ಇದ್ದಿದ್ದರು. ನಟಿ ತನ್ನ ವೈಯಕ್ತಿಕ ಜೀವನದಲ್ಲಿ ನಡೆಯುವ ಘಟನೆಗಳನ್ನು ಅಭಿಮಾನಿಗಳೊಂದಿಗೆ ಆಗಾಗ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಬ್ರೇಕಪ್‌ ಬಗ್ಗೆ ನಟಿ ಶೀರ್ಘದಲ್ಲೇ ಅಧಿಕೃತವಾಗಿ ಹೇಳಿಕೊಳ್ಳಬಹುದು ಎಂದು ನಿರೀಕ್ಷಿಸಲಾಗಿದೆ.

ಮೈಕಲ್ ಕೋರ್ಸೆಲ್ ಅವರಿಂದ ದೂರವಾದ ನಂತರ, ಶ್ರುತಿ ಹಾಸನ್ ಬದುಕಿನಲ್ಲಿ ಬಂದ ವ್ಯಕ್ತಿ ಶಂತನು ಹಜಾರಿಕಾ. ಶಂತನು ಹಜಾರಿಕಾ ಜತೆ ಎರಡು ವರ್ಷಗಳ ಪ್ರೀತಿಯಲ್ಲಿ ಇದ್ದಿದ್ದರು ಶ್ರುತಿ ಹಾಸನ್. ಅನೇಕ ಸಲ ತಮ್ಮ ಈ ಪ್ರೇಮ ಕಥೆಯನ್ನ ಹೆಮ್ಮೆಯಿಂದ ಹೇಳಿಕೊಂಡಿದ್ದರು.

ಇದನ್ನೂ ಓದಿ: Shruti Haasan: ನಿರ್ದೇಶಕನ ಜತೆ ಸಖತ್‌ ರೊಮ್ಯಾನ್ಸ್‌ ಮಾಡಿದ ಕಮಲ್ ಹಾಸನ್ ಪುತ್ರಿ

ಶ್ರುತಿ ಹಾಸನ್‌ ಮತ್ತು ಶಂತನು ಹಜಾರಿಕಾ ಸುಮಾರು 5 ವರ್ಷಗಳಿಂದ ಡೇಟಿಂಗ್‌ ನಡೆಸುತ್ತಿದ್ದಾರೆ. ಇವರು 2018ರಲ್ಲಿ ಮೊದಲ ಬಾರಿ ಭೇಟಿಯಾಗಿದ್ದರು. ಆಗಾಗ ಶ್ರುತಿ ಹಾಸನ್‌ ಶಂತನು ಹಜಾರಿಕಾ ಜತೆ ಇರುವ ಫೋಟೊಗಳನ್ನು ಶೇರ್‌ ಮಾಡಿಕೊಳ್ಳುತ್ತಲೇ ಇರುತ್ತಿದ್ದರು. ಮೊದಲು ಪ್ರಪೋಸ್ ಮಾಡಿದ್ದು ಕೂಡ ಶ್ರುತಿ ಹಾಸನ್‌ ಅಂತೆ.

ನನ್ನ ಬಾಯ್‌ಫ್ರೆಂಡ್‌ನ ಹೂಸು ಕೂಡ ನಂಗಿಷ್ಟ ಎಂದಿದ್ದ ಕಮಲ್‌ ಹಾಸನ್‌ ಪುತ್ರಿ

ನಟಿ ಶ್ರುತಿ ಹಾಸನ್ ಆಗಾಗ ಅವಾಂತರಗಳನ್ನು ಮಾಡುತ್ತಲೇ ಸಾಕಷ್ಟು ವಿವಾದಕ್ಕೂ ಗುರಿಯಾಗುತ್ತಲೇ ಇರುತ್ತಾರೆ. ಶ್ರುತಿ ಹಾಸನ್‌ ನಗುವಿನೊಂದಿಗೆ ಶಾಂತನು ಹಜಾರಿಕಾನ ಕಣ್ಣು ಅಷ್ಟೇ ಅಲ್ಲ, ಮತ್ತು ಆತ ಬಿಡುವ ಹೂಸು ಕೂಡ ನನಗೆ ತುಂಬಾ ಇಷ್ಟ ಎಂದಿದ್ದರು.

ಶ್ರುತಿ ಹಾಸನ್ ಫುಲ್ ಬ್ಯುಸಿ ಶ್ರುತಿ ಹಾಸನ್ ಕೈಯಲ್ಲಿ ದೊಡ್ಡ ದೊಡ್ಡ ಸಿನಿಮಾಗಳಿವೆ. ನಟಿ ಪ್ರಭಾಸ್ ಅವರ ಸಲಾರ್‌ನಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಸಲಾರ್‌ ಸಿನಿಮಾದಲ್ಲಿ ಶ್ರುತಿ ಹಾಸನ್ ‘ಆದ್ಯ’ ಪಾತ್ರ ಮಾಡಿದ್ದರು. ಶ್ರುತಿ ಇತ್ತೀಚೆಗೆ ತೆಲುಗು ಚಿತ್ರ ‘ವಾಲ್ತೇರ್‌ ವೀರಯ್ಯ’ದಲ್ಲಿ ಕಾಣಿಸಿಕೊಂಡಿದ್ದರು. ಈ ವರ್ಷ ವೀರಸಿಂಹ ರೆಡ್ಡಿ ಮತ್ತು ವಾಲ್ತೇರ್‌ ವೀರಯ್ಯ ಜನವರಿ ತಿಂಗಳಲ್ಲಿ ಒಟ್ಟಿಗೆ ತೆರೆಗೆ ಬಂತು.

ಕಮಲ್ ಹಾಸನ್ (Kamal Haasan) ನಟನೆಯ ‘ವಿಕ್ರಮ್’ ಚಿತ್ರಕ್ಕೆ ಲೋಕೇಶ್ ಕನಕರಾಜ್ ನಿರ್ದೇಶನ ಮಾಡುವ ಮೂಲಕ ಸೈ ಎನಿಸಿಕೊಂಡಿದ್ದರು. ಕಮಲ್‌ ಹಾಸನ್‌ ಪುತ್ರಿ ಶ್ರುತಿ ಹಾಸನ್‌ ಅವರಿಗೆ ಆ್ಯಕ್ಷನ್ ಕಟ್‌ ಹೇಳಲಿದ್ದಾರೆ ಲೋಕೇಶ್‌ ಕನಕರಾಜ್‌. ಕಮಲ್ ಹಾಸನ್ ಅವರ ನಿರ್ಮಾಣ ಸಂಸ್ಥೆ ರಾಜ್ ಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್ (RKFI) ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಾಲಿವುಡ್

Jyotika Trolled: ಆನ್​ಲೈನ್​ ಮೂಲಕ ವೋಟ್ ಮಾಡಿದ್ದಾರಂತೆ ಜ್ಯೋತಿಕಾ! ಟ್ರೋಲ್‌ ಆದ ಸೂರ್ಯ ಪತ್ನಿ!

Jyotika Trolled: ಸೂರ್ಯ ಪತ್ನಿ ಜ್ಯೋತಿಕಾ ಏಕೆ ಮತ ಹಾಕಲಿಲ್ಲ ಎಂದು ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸಿದ್ದರು. ಶ್ರೀಕಾಂತ್ ಸಿನಿಮಾ ಪ್ರಚಾರ ಕಾರ್ಯಕ್ರಮವೊಂದರಲ್ಲಿ, ನಟಿ ಏಕೆ ಮತದಾನ ಮಾಡಲಿಲ್ಲ ಎಂಬ ಪ್ರಶ್ನೆ ಎದುರಾಗಿದೆ. ʻಆನ್​ಲೈನ್​ನಲ್ಲಿ ವೋಟ್ ಮಾಡಿದ್ದೇನೆʼ ಎಂದು ನಟಿ ಉತ್ತರ ನೀಡಿದ್ದಾರೆ. ಹೀಗಾಗಿ ನಟಿ ಜ್ಯೋತಿಕಾ ಟ್ರೋಲ್ ಆಗಿದ್ದಾರೆ. ನಟಿ ಜ್ಯೋತಿಕಾ (Jyotika Trolled) ಅವರು ಹಿಂದಿಯ ‘ಶ್ರೀಕಾಂತ್’ ಹೆಸರಿನ ( Srikanth with Rajkummar Rao) ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

VISTARANEWS.COM


on

Jyotika Trolled For Claiming Online Private Voting
Koo

ಬೆಂಗಳೂರು: ನಟಿ ಜ್ಯೋತಿಕಾ (Jyotika Trolled) ಅವರು ಹಿಂದಿಯ ‘ಶ್ರೀಕಾಂತ್’ ಹೆಸರಿನ ( Srikanth with Rajkummar Rao) ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದೀಗ ಆನ್​ಲೈನ್​ನಲ್ಲಿ ವೋಟ್ ಮಾಡಿದ್ದೇನೆ ಎಂದು ಹೇಳುವ ಮೂಲಕ ಜ್ಯೋತಿಕಾ ಟ್ರೋಲ್ ಆಗಿದ್ದಾರೆ. ಕಳೆದ ತಿಂಗಳು, ನಟ ಸೂರ್ಯ ಚೆನ್ನೈನ ಮತಗಟ್ಟೆಯಲ್ಲಿ ಮತದಾನ ಮಾಡಲು ಆಗಮಿಸಿದ್ದರು. ಆದರೆ, ಅವರ ಪತ್ನಿ ಜ್ಯೋತಿಕಾ ಏಕೆ ಮತ ಹಾಕಲಿಲ್ಲ ಎಂದು ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸಿದ್ದರು. ಶ್ರೀಕಾಂತ್ ಸಿನಿಮಾ ಪ್ರಚಾರ ಕಾರ್ಯಕ್ರಮವೊಂದರಲ್ಲಿ, ನಟಿ ಏಕೆ ಮತದಾನ ಮಾಡಲಿಲ್ಲ ಎಂಬ ಪ್ರಶ್ನೆ ಎದುರಾಗಿದೆ. ʻಆನ್​ಲೈನ್​ನಲ್ಲಿ ವೋಟ್ ಮಾಡಿದ್ದೇನೆʼ ಎಂದು ನಟಿ ಉತ್ತರ ನೀಡಿದ್ದಾರೆ. ಹೀಗಾಗಿ ನಟಿ ಜ್ಯೋತಿಕಾ ಟ್ರೋಲ್ ಆಗಿದ್ದಾರೆ.

ಈವೆಂಟ್‌ನ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ವರದಿಗಾರರೊಬ್ಬರು ಜ್ಯೋತಿಕಾ ಅವರಿಗೆ ಏಕೆ ವೋಟ್‌ ಮಾಡಲು ಬರಲಿಲ್ಲ? ಎಂದು ಕೇಳಿದ್ದರು. ಆಗ ನಟಿ ʻʻನಾನು ಪ್ರತಿ ವರ್ಷ ವೋಟ್‌ ಮಾಡುತ್ತೇನೆʼʼಎಂದಿದ್ದಾರೆ. ನಂತರ ಮತದಾನ ಪ್ರತಿ ವರ್ಷ ನಡೆಯಲ್ಲ ಎಂದು ಸಂದರ್ಶಕರು ಹೇಳಿದರು.ಇದನ್ನು ಜ್ಯೋತಿಕಾ ಒಪ್ಪಿಕೊಂಡಿದ್ದಾರೆ.

ಯಾಕೆ ಮತ ಹಾಕಲಿಲ್ಲ ಎಂಬುದನ್ನು ವಿವರಿಸಿದ ಜ್ಯೋತಿಕಾ ʻʻಕೆಲವೊಮ್ಮೆ ನಾವು ನಮ್ಮ ರಾಜ್ಯದಲ್ಲಿ ಇಲ್ಲದೆ ಬೇರೆ ರಾಜ್ಯಕ್ಕೆ ಹೋಗಿರಬಹುದು. ನಾವು ಅನಾರೋಗ್ಯಕ್ಕೆ ಒಳಗಾಗಬಹುದು, ಇದು ಖಾಸಗಿ ವಿಷಯವಾಗಿದೆʼʼಎಂದಿದ್ದಾರೆ ನಟಿ.

ಇದನ್ನೂ ಓದಿ: Jyotika and Suriya: ಸೂರ್ಯ ಜತೆ ಜಿಮ್‌ನಲ್ಲಿ ನಟಿ ಜ್ಯೋತಿಕಾ ಹೆವಿ ವರ್ಕೌಟ್!

ಇದೀಗ ಈ ವಿಡಿಯೊ ವೈರಲ್‌ ಆಗುತ್ತಿದ್ದಂತೆ ನೆಟ್ಟಿಗರು ನಟಿಯನ್ನು ಟ್ರೋಲ್‌ ಮಾಡಲು ಶುರು ಮಾಡಿದ್ದಾರೆ. ಒಬ್ಬರು ʻʻನಟಿಯ ಆರೋಗ್ಯ ಹದೆಗಟ್ಟಿದ್ದರಿಂದ ವೋಟ್‌ ಹಾಕದೇ ಇರಬಹುದುʼʼ ಎಂದು ಕಮೆಂಟ್‌ ಮಾಡಿದ್ದಾರೆ. ಇನ್ನು ಕೆಲವರು ʻʻಇದೇನು ಬಿಗ್ ಬಾಸ್‌ನಲ್ಲಿ ಮತ ಚಲಾಯಿಸಿದಂತೆಯಾ?ʼʼಎಂದು ಕಮೆಂಟ್‌ ಮಾಡಿದ್ದಾರೆ. `ಜ್ಯೋತಿಕಾ ರೀತಿ ಆನ್​ಲೈನ್​ ವೋಟ್ ಮಾಡೋದು ಹೇಗೆ’ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ.‘ಸಮಾಜ ಸುಧಾರಕಿ ಜ್ಯೋತಿಕಾ, ಅಶಿಕ್ಷಿತರಿಗೂ ಗೊತ್ತು ಚುನಾವಣೆ ಪ್ರತಿ ವರ್ಷಕ್ಕೆ ಅಲ್ಲ, 5 ವರ್ಷಕ್ಕೊಮ್ಮೆ ಎಂದು. ನಾನು ಭಾರತದಲ್ಲಿ ಈವರೆಗೆ ಆನ್‌ಲೈನ್ ಮತದಾನದ ಬಗ್ಗೆ ಕೇಳಿಲ್ಲ’ ಎಂದಿದ್ದಾರೆ ಅವರು. ಈ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ.

ಜ್ಯೋತಿಕಾ ಕೊನೆಯದಾಗಿ ʻಶೈತಾನ್‌ʼ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು.ಈ ಚಿತ್ರದಲ್ಲಿ ಆರ್ ಮಾಧವನ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸದ್ಯ ಹಿಂದಿಯ ‘ಶ್ರೀಕಾಂತ್’ ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರವನ್ನು ತುಶಾರ್ ಹಿರಾನಂದನಿ ಇದನ್ನು ನಿರ್ದೇಶನ ಮಾಡಿದ್ದು, ರಾಜ್​ಕುಮಾರ್ ರಾವ್, ಅಲಾಯ ಎಫ್, ಶರದ್ ಕೇಲ್ಕರ್ ಈ ಚಿತ್ರದಲ್ಲಿ ನಟಿಸಿದ್ದಾರೆ.

Continue Reading

ಕಾಲಿವುಡ್

Annamalai Biopic: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಯೋಪಿಕ್‌ಗೆ ತಮಿಳು ಖ್ಯಾತ ನಟ ನಟನೆ!

Annamalai Biopic: ಸದ್ಯ ವಿಶಾಲ್ ನಟನೆಯ ‘ರತ್ನಂ’ ಸಿನಿಮಾ ತೆರೆಕಂಡು ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇತ್ತೀಚೆಗೆ ನಟ ವಿಶಾಲ್ ನಿರ್ದೇಶಕರಾಗಿಯೂ ಗುರ್ತಿಸಿಕೊಂಡಿದ್ದಾರೆ. ಇದೆಲ್ಲದರ ನಡುವೆ ಇದೀಗ ತೆರೆಮೇಲೆ ಅಣ್ಣಾಮಲೈ ಪಾತ್ರ ಮಾಡುತ್ತಾರೆ ಎನ್ನಲಾಗಿದೆ. ಇತ್ತೀಚೆಗೆ ವಿಶಾಲ್ ಕೂಡ ರಾಜಕೀಯಕ್ಕೆ ಸೇರುವ ಸೂಚನೆ ನೀಡಿದ್ದಾರೆ. ಆದರೆ, ಯಾವ ಪಕ್ಷಕ್ಕೆ ಅವರು ಸೇರ್ಪಡೆ ಆಗುತ್ತಾರೆ ಎನ್ನುವ ಮಾಹಿತಿ ಸಿಕ್ಕಿಲ್ಲ.

VISTARANEWS.COM


on

Annamalai Biopic Will Be Made In Kollywood Annamalai Biopic Will Be Made In Kollywood Annamalai Biopic Will Be Made In Kollywood
Koo

ಬೆಂಗಳೂರು: ಪೊಲೀಸ್ ಹುದ್ದೆಯಲ್ಲಿರುವಾಗ ತಮ್ಮ ಕಟ್ಟುನಿಟ್ಟಾದ ಕಾರ್ಯಶೈಲಿಯಿಂದ “ಸಿಂಗಂ ಅಣ್ಣ” ಎಂದು ಬಿರುದು ಪಡೆದ ನಿವೃತ್ತ ಪೊಲೀಸ್ ಅಧಿಕಾರಿ, ತಮಿಳುನಾಡಿನ ಬಿಜೆಪಿ ಮುಖ್ಯಸ್ಥ ಕೆ. ಅಣ್ಣಾಮಲೈ (k Annamalai) ಅವರು ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದರ ಮೂಲಕ ಲೋಕಸಭಾ ಚುನಾವಣೆಗೆ ಪದಾರ್ಪಣೆ ಮಾಡಿದ್ದಾರೆ. ಸದ್ಯ ಅಣ್ಣಾಮಲೈ ಕುರಿತು ತಮಿಳಿನಲ್ಲಿ ಬಯೋಪಿಕ್ ಸಿನಿಮಾ (Annamalai Biopic) ಮಾಡುವ ಬಗ್ಗೆ ಚರ್ಚೆ ಶುರುವಾಗಿದೆ. ತಮಿಳು ನಟ ವಿಶಾಲ್ ತೆರೆಮೇಲೆ ಅಣ್ಣಾಮಲೈ ಆಗಿ ನಟಿಸುತ್ತಾರೆ ಎನ್ನಲಾಗುತ್ತಿದೆ.

ಸದ್ಯ ವಿಶಾಲ್ ನಟನೆಯ ‘ರತ್ನಂ’ ಸಿನಿಮಾ ತೆರೆಕಂಡು ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇತ್ತೀಚೆಗೆ ನಟ ವಿಶಾಲ್ ನಿರ್ದೇಶಕರಾಗಿಯೂ ಗುರ್ತಿಸಿಕೊಂಡಿದ್ದಾರೆ. ಇದೆಲ್ಲದರ ನಡುವೆ ಇದೀಗ ತೆರೆಮೇಲೆ ಅಣ್ಣಾಮಲೈ ಪಾತ್ರ ಮಾಡುತ್ತಾರೆ ಎನ್ನಲಾಗಿದೆ. 1984ರ ಜೂ.4ರಂದು ಹುಟ್ಟಿದ ಅಣ್ಣಾಮಲೈ ಮೂಲತಃ ತಮಿಳುನಾಡಿನ ಕೊಯಮತ್ತೂರಿನವರು. ಬಿಇ ಎಂಜಿನಿಯರಿಂಗ್‌ ಮಾಡಿ ಎಂಬಿಎ ಪೂರ್ಣಗೊಳಿಸಿದ ಅಣ್ಣಾಮಲೈ 2011ರ ಬ್ಯಾಚ್‌ನ ಐಪಿಎಸ್‌ ಅಧಿಕಾರಿ ಆಗಿದ್ದರು.

ಇತ್ತೀಚೆಗೆ ವಿಶಾಲ್ ಕೂಡ ರಾಜಕೀಯಕ್ಕೆ ಸೇರುವ ಸೂಚನೆ ನೀಡಿದ್ದಾರೆ. ಆದರೆ, ಯಾವ ಪಕ್ಷಕ್ಕೆ ಅವರು ಸೇರ್ಪಡೆ ಆಗುತ್ತಾರೆ ಎನ್ನುವ ಮಾಹಿತಿ ಸಿಕ್ಕಿಲ್ಲ.

ಇದನ್ನೂ ಓದಿ: K. Annamalai : ಪ್ರಚಾರ ಸಭೆಯಲ್ಲಿ ಅಣ್ಣಾಮಲೈ ಹೊಗಳಿದಾಗ ಕಣ್ಣೀರು ಹಾಕಿದ ವಿಜಯಪುರ ಅಭ್ಯರ್ಥಿ ಜಿಗಜಿಣಗಿ

ಅಣ್ಣಾಮಲೈ ಅವರ ಕುರಿತಾದ ಕೆಲವು ಕುತೂಹಲಕರ ಸಂಗತಿಗಳು ಇಲ್ಲಿವೆ

  • ಅಣ್ಣಾಮಲೈ ಅವರಿಗೆ ಈಗ ಕೇವಲ 39 ವರ್ಷ. 2021ರಲ್ಲಿ ಅವರು ತಮಿಳುನಾಡಿನ ಅತ್ಯಂತ ಕಿರಿಯ ಬಿಜೆಪಿ ಅಧ್ಯಕ್ಷರಾಗಿ ಆಯ್ಕೆಯಾದರು.
  • ಕೆ. ಅಣ್ಣಾಮಲೈ ಅವರು 2020ರಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ತಮಿಳುನಾಡಿನಲ್ಲಿ ಅವರು ಯುವಜನತೆಯ ಅಪಾರ ಬೆಂಬಲ ಪಡೆದಿದ್ದಾರೆ. ಈ ಮೂಲಕ ಅವರು ತಮಿಳುನಾಡಿನಲ್ಲಿ ಬಿಜೆಪಿಗೆ ಶಕ್ತಿ ತುಂಬಿದ್ದಾರೆ. ಬಹಳ ವೇಗವಾಗಿ ಜನಪ್ರಿಯತೆ ಪಡೆಯುತ್ತಿದ್ದಾರೆ.
  • ಕರ್ನಾಟಕ ಕೇಡರ್‌ನ 2011ರ ಬ್ಯಾಚ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಚಿಕ್ಕಮಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯ ನಿರ್ವಹಿಸಿ ಅಪಾರ ಜನಪ್ರಿಯತೆ ಪಡೆದಿದ್ದರು. ನಕ್ಸಲ್‌ ಪೀಡಿತ ಪ್ರದೇಶಗಳಲ್ಲಿ ಅವರು ಜನರ ವಿಶ್ವಾಸ ಗಳಿಸಿದ್ದರು. ಬೆಂಗಳೂರು ದಕ್ಷಿಣ ಉಪ ಪೊಲೀಸ್ ಆಯುಕ್ತರಾಗಿಯೂ ಸೇವೆ ಸಲ್ಲಿಸಿದ್ದರು.
  • ಕೆ ಅಣ್ಣಾಮಲೈ ಅವರು ಸೆಪ್ಟೆಂಬರ್ 2019ರಲ್ಲಿ ಪೊಲೀಸ್ ಸೇವೆಯನ್ನು ತೊರೆದು ಅಚ್ಚರಿ ಮೂಡಿಸಿದ್ದರು.
  • ಇವರು ಎಂಜಿನಿಯರಿಂಗ್ ಪದವೀಧರರಾಗಿದ್ದು, ಐಐಎಂ ಲಕ್ನೋದಲ್ಲಿ ಎಂಬಿಎ ಓದಿದ್ದರು.
  • ಪೊಲೀಸ್ ಫೋರ್ಸ್‌ನಲ್ಲಿ ಕೆಲಸ ಮಾಡುವಾಗ ಕೆ ಅಣ್ಣಾಮಲೈ ಅವರ ಕಟ್ಟುನಿಟ್ಟಾದ ಕಾರ್ಯಶೈಲಿಯನ್ನು ಕಂಡು ಅವರನ್ನು “ಸಿಂಗಂ ಅಣ್ಣ” ಎಂದೇ ಕರೆಯಲಾಗಿತ್ತು.
  • ಅಣ್ಣಾಮಲೈ ಅವರು ಉಡುಪಿಯಲ್ಲಿ ಸೇವೆ ಸಲ್ಲಿಸುತ್ತಿರುವಾಗ ಧಾರ್ಮಿಕ ಗ್ರಂಥಗಳ ತಪ್ಪು ವ್ಯಾಖ್ಯಾನವನ್ನು ತಪ್ಪಿಸಲು ಮತ್ತು ಅವುಗಳನ್ನು ಸರಿಯಾಗಿ ಅರ್ಥಮಾಡಿಕೊಳ್ಳಲು ಇಸ್ಲಾಂ ಧರ್ಮದ ಬಗ್ಗೆ ಅಧ್ಯಯನ ಮಾಡಿದ್ದರು. ಧಾರ್ಮಿಕ ವಿದ್ವಾಂಸರ ಸಹಾಯದಿಂದ ಖುರಾನ್ ಮತ್ತು ಹದೀಸ್ ಅನ್ನು ಅಧ್ಯಯನ ಮಾಡಿದ್ದರು.
  • 2019ರಲ್ಲಿ ಪೊಲೀಸ್ ಅಧಿಕಾರಿ ಹುದ್ದೆಗೆ ರಾಜೀನಾಮೆ ನೀಡುವಾಗ ರಾಜೀನಾಮೆ ಪತ್ರದಲ್ಲಿ, ಇದು ನಾನು ತಕ್ಷಣ ತೆಗೆದುಕೊಂಡು ನಿರ್ಧಾರವಲ್ಲ. 2018ರಲ್ಲಿ ಕೈಗೊಂಡಿದ್ದ ಕೈಲಾಸ ಮಾನಸ ಸರೋವರ ಪ್ರವಾಸವು ನನ್ನ ಜೀವನವನ್ನು ಹಿಂತಿರುಗಿ ನೋಡುವಂತೆ ಮಾಡಿದೆ ಎಂದು ಬರೆದಿದ್ದರು.
  • 2023ರಲ್ಲಿ ಅಣ್ಣಾಮಲೈ ಅವರು ‘ಎನ್‌ ಮನ್ ಎನ್ ಮಕ್ಕಳ್ (ನನ್ನ ಭೂಮಿ ನನ್ನ ಜನರು)’ ಯಾತ್ರೆಯನ್ನು ತಮಿಳುನಾಡು ರಾಜ್ಯಾದ್ಯಂತ ಯಶಸ್ವಿಯಾಗಿ ನಡೆಸಿದರು.
  • ಅಣ್ಣಾಮಲೈ ಅವರನ್ನು ಬಿಜೆಪಿಯ ಭರವಸೆಯ ಉದಯೋನ್ಮುಖ ತಾರೆ ಎಂದು ವ್ಯಾಖ್ಯಾನಿಸಲಾಗಿದೆ. ಅವರು ವಾಕ್ಚಾತುರ್ಯಕ್ಕೆ ಹೆಸರುವಾಸಿಯಾದ ಕಾರಣ ಅವರ ಭಾಷಣಗಳು ಸಾಮಾನ್ಯವಾಗಿ ವೈರಲ್ ಆಗುತ್ತವೆ.
Continue Reading

ಕಿರುತೆರೆ

Vijay Deverakonda: ಸಿನಿಮಾಗಳ ಸತತ ಸೋಲಿನ ಬೆನ್ನಲ್ಲೆ ಹೊಸ ಸಿನಿಮಾ ಅನೌನ್ಸ್‌ ಮಾಡಿದ ವಿಜಯ್‌ ದೇವರಕೊಂಡ!

Vijay Deverakonda: ವಿಜಯ್ ದೇವರಕೊಂಡ (Vijay Deverakonda) ಮತ್ತು ಮೃಣಾಲ್ ಠಾಕೂರ್ ( Mrunal Thakur) ಅಭಿನಯದ ಚಿತ್ರ ʻಫ್ಯಾಮಿಲಿ ಸ್ಟಾರ್ʼ ಭಾರತದಲ್ಲಿ ಸಾಧಾರಣ ಓಪನಿಂಗ್‌ (Family Star Box Office) ಪಡೆದುಕೊಂಡಿತ್ತು. ಏಪ್ರಿಲ್ 26 ರಿಂದ ಅಮೆಜಾನ್‌ ಪ್ರೈಮ್‌ನಲ್ಲಿ ಸ್ಟ್ರೀಮಿಂಗ್‌ ಆಗಿತ್ತು.ಇದೀಗ ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ ವಿಜಯ್‌ ದೇವರಕೊಂಡ.ತೆಲುಗು ನಟ ವಿಜಯ್ ದೇವರಕೊಂಡ ಅವರು ದಿಲ್ ರಾಜು ಅವರೊಂದಿಗೆ ಹೈ-ಆಕ್ಟೇನ್ ಆಕ್ಷನ್ ಸಿನಿಮಾಗಾಗಿ ಕೈ ಜೋಡಿಸಿದ್ದಾರೆ.

VISTARANEWS.COM


on

Vijay Devarakonda announces new film
Koo

ಬೆಂಗಳೂರು: ʻಲೈಗರ್‌ʼ ಸಿನಿಮಾ ಸೋಲಿನ ಬಳಿಕ ನಟ ವಿಜಯ್‌ ದೇವರಕೊಂಡ (Vijay Deverakonda) ಯಾವ ಸಿನಿಮಾವನ್ನು ಮಾಡಲಿದ್ದಾರೆ ಎಂಬ ಕುತೂಹಲ ಅವರ ಅಭಿಮಾನಿಗಳಲ್ಲಿತ್ತು. ಇದಾದ ಬಳಿ ಸಾಕಷ್ಟು ಸಿನಿಮಾಗಳು ತೆರೆ ಕಂಡವು. ʻಖುಷಿʼ ಹಾಗೂ ʻಫ್ಯಾಮಿಲಿ ಸ್ಟಾರ್‌ʼ ಸಿನಿಮಾಗಳು ರಿಲೀಸ್‌ ಆದರೂ ತಕ್ಕ ಮಟ್ಟಿಗೆ ಸಕ್ಸೆಸ್‌ ಏನು ಆಗಿಲ್ಲ. ಇದೀಗ ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ ವಿಜಯ್‌ ದೇವರಕೊಂಡ.

ತೆಲುಗು ನಟ ವಿಜಯ್ ದೇವರಕೊಂಡ ಅವರು ದಿಲ್ ರಾಜು ಅವರೊಂದಿಗೆ ಹೈ-ಆಕ್ಟೇನ್ ಆಕ್ಷನ್ ಸಿನಿಮಾಗಾಗಿ ಕೈ ಜೋಡಿಸಿದ್ದಾರೆ. ಈ ಸಿನಿಮಾಗೆ ರವಿ ಕರಣ್ ಕೋಲಾ (Ravi Kiran Kola) ನಿರ್ದೇಶನವಿದೆ. ರವಿಕಿರಣ್ ಕೋಲಾ ಅವರು ‘ರಾಜಾ ವರು ರಾಣಿ ಗಾರು’ (Raja Vaaru Rani Gaaru) ಮತ್ತು ‘ಅಶೋಕ ವನಮ್ಲೋ ಅರ್ಜುನ ಕಲ್ಯಾಣಂ'(Ashoka Vanamlo Arjuna Kalyanam) ಸಿನಿಮಾಗೆ ಹೆಸರುವಾಸಿಯಾಗಿದ್ದಾರೆ. ಚಿತ್ರದ ಶೀರ್ಷಿಕೆ, ತಾರಾಗಣ ಮತ್ತು ಬಿಡುಗಡೆಯ ದಿನಾಂಕ ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ.

ವಿಜಯ್ ದೇವರಕೊಂಡ (Vijay Deverakonda) ಮತ್ತು ಮೃಣಾಲ್ ಠಾಕೂರ್ ( Mrunal Thakur) ಅಭಿನಯದ ಚಿತ್ರ ʻಫ್ಯಾಮಿಲಿ ಸ್ಟಾರ್ʼ ಭಾರತದಲ್ಲಿ ಸಾಧಾರಣ ಓಪನಿಂಗ್‌ (Family Star Box Office) ಪಡೆದುಕೊಂಡಿತ್ತು. ಏಪ್ರಿಲ್ 26 ರಿಂದ ಅಮೆಜಾನ್‌ ಪ್ರೈಮ್‌ನಲ್ಲಿ ಸ್ಟ್ರೀಮಿಂಗ್‌ ಆಗಿತ್ತು.

ಇದನ್ನೂ ಓದಿ: Rashmika Mandanna: ವಿಜಯ್‌ ದೇವರಕೊಂಡ ಜತೆಗಿನ ಸಂಬಂಧ ಒಪ್ಪಿಕೊಂಡ್ರಾ ರಶ್ಮಿಕಾ ಮಂದಣ್ಣ?

ಕೆಲವರು ಇದು ಸರಾಸರಿಗಿಂತ ಕಡಿಮೆ ಚಿತ್ರ ಎಂದು ಹೇಳುತ್ತಿದ್ದರೆ, ಇನ್ನು ಕೆಲವರು ಈ ಚಿತ್ರಕ್ಕಿಂತ ಧಾರಾವಾಹಿ ಉತ್ತಮವಾಗಿದೆ ಎಂದು ಕಮೆಂಟ್ ಮಾಡಿದ್ದರು. ಸಂಗೀತ ಅಷ್ಟಾಗಿ ಆಕರ್ಷಣೀಯವಾಗಿಲ್ಲ ಎಂಬ ಮಾತು ಕೂಡ ಇದೆ. ಈ ಸಿನಿಮಾ ಅಷ್ಟೊಂದು ಪ್ರಭಾವಶಾಲಿಯಾಗಿಲ್ಲ, ಹೊಸತನವೇನೂ ಇಲ್ಲ ಎಂದಿದ್ದರು.

ಹಾಯ್ ನಾನ್ನʼ (2023), ʻಸೀತಾ ರಾಮಂʼ (2022)ಬಳಿಕ ಮೃಣಾಲ್ ಠಾಕೂರ್ ಅವರ ಮೂರನೇ ತೆಲುಗು ಚಿತ್ರ ಇದು. ʻಫ್ಯಾಮಿಲಿ ಸ್ಟಾರ್ʼ ಸಿನಿಮಾವನ್ನು ಪರುಶುರಾಮ್ ನಿರ್ದೇಶಿಸಿದ್ದಾರೆ. ಈ ಮುಂಚೆ ವಿಜಯ್‌ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ʻಗೀತ ಗೋವಿಂದಂʼ (2018) ಸಿನಿಮಾಗೆ ನಿರ್ದೇಶನ ಮಾಡಿದ್ದರು.

Continue Reading

ಕಾಲಿವುಡ್

Aishwarya Rajinikanth: ಮಗಳ ಹೊಸ ಮನೆ ಕಂಡು ಹುಬ್ಬೇರಿಸಿದ ರಜನಿಕಾಂತ್!

Aishwarya Rajinikanth: ರಜನಿಕಾಂತ್ ಮಗಳು ಐಶ್ವರ್ಯಾ ಅವರ ಹೊಸದಾಗಿ ಖರೀದಿಸಿದ ಮನೆಗೆ ರಜನಿ ದಂಪತಿ ಭೇಟಿ ಕೊಟ್ಟಿದ್ದಾರೆ. . ಬಾಗಿಲಲ್ಲಿ ಮಗಳು ತಂದೆ ತಾಯಿಗೆ ಸ್ವಾಗತಿಸಿದ ಬಳಿಕ ರಜನಿ ಬಾಲ್ಕನಿಗೆ ಹೋಗಿ ಮನೆ ತುಂಬ ಚೆನ್ನಾಗಿದೆ ಎಂದು ಹೇಳಿದ್ದಾರೆ. ಮನೆಯ ಒಳಾಂಗಣ ಮತ್ತು ಇಂಟಿರಿಯರ್‌ ಡಿಸೈನ್‌ ಕಂಡು ರಜನಿ ಫುಲ್‌ ಫಿದಾ ಆದರು.

VISTARANEWS.COM


on

Aishwarya Rajinikanth new house priceless reaction Rajinikanth
Koo

ಬೆಂಗಳೂರು: ರಜನಿಕಾಂತ್ ಪುತ್ರಿ ಐಶ್ವರ್ಯಾ ರಜನಿಕಾಂತ್ (Aishwarya Rajinikanth) ಹೊಸ ಅಪಾರ್ಟ್‌ಮೆಂಟ್ ಖರೀದಿಸಿದ್ದಾರೆ. ರಜನಿ ಮತ್ತು ಪತ್ನಿ ಲತಾ ಮಗಳ ಹೊಸ ಮನೆಗೆ ಭೇಟಿ ನೀಡಿದ್ದರು. ಮಾತ್ರವಲ್ಲ ಮನೆಯ ಒಳಾಂಗಣ ಮತ್ತು ಇಂಟಿರಿಯರ್‌ ಡಿಸೈನ್‌ ಕಂಡು ರಜನಿ ಫುಲ್‌ ಫಿದಾ ಆದರು. ಮನೆಯ ಒಳಗೆ ಬರಬರುತ್ತಲೇ ಅಲಂಕಾರಗಳನ್ನು ಕಂಡು ಹುಬ್ಬೇರಿಸಿದ್ದಾರೆ. ಇದೀಗ ಈ ವಿಡಿಯೊಗಳು ವೈರಲ್‌ ಆಗಿವೆ.

ರಜನಿಕಾಂತ್ ಮಗಳು ಐಶ್ವರ್ಯಾ ಅವರು ಹೊಸದಾಗಿ ಖರೀದಿಸಿದ ಮನೆಗೆ ರಜನಿ ದಂಪತಿ ಭೇಟಿ ಕೊಟ್ಟಿದ್ದಾರೆ. . ಬಾಗಿಲಲ್ಲಿ ಮಗಳು ತಂದೆ ತಾಯಿಗೆ ಸ್ವಾಗತಿಸಿದ ಬಳಿಕ ರಜನಿ ಬಾಲ್ಕನಿಗೆ ಹೋಗಿ ಮನೆ ತುಂಬ ಚೆನ್ನಾಗಿದೆ ಎಂದು ಹೇಳಿದ್ದಾರೆ. ಇಡೀ ಮನೆ ಅಲಂಕಾರಗಳಿಂದ ಕಂಗೊಳಿಸುತ್ತಿತ್ತು. ಬಳಿಕ ಲತಾ ಅವರು ದೇವರ ಮನೆಯಲ್ಲಿ ದೀಪ ಹಚ್ಚಿ ಮಗಳಿಗೆ ವಿಶ್‌ ಮಾಡಿದ್ದಾರೆ.

 ನಟ ಧನುಷ್ (Actor Dhanush) ಹಾಗೂ ನಿರ್ದೇಶಕಿ ಐಶ್ವರ್ಯಾ ರಜನಿಕಾಂತ್ ಇತ್ತೀಚೆಗೆ ಚೆನ್ನೈ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಅಕ್ಟೋಬರ್ 7ರಂದು ಇಬ್ಬರೂ ನ್ಯಾಯಾಲಯಕ್ಕೆ ಹಾಜರಾಗುವಂತೆ ಆದೇಶಿಸಿದೆ. ಈ ಸಂಬಂಧ ನೋಟಿಸ್ ನೀಡಿರುವುದಾಗಿ ವರದಿಯಾಗಿದೆ.

ಇದನ್ನೂ ಓದಿ: Aishwaryaa Rajinikanth: ಐಶ್ವರ್ಯಾ ರಜನಿಕಾಂತ್ ಮನೆಯಲ್ಲಿ ಕದ್ದ ಕಳ್ಳರು ಕೊನೆಗು ಸಿಕ್ಕಿಬಿದ್ದರು; ಯಾರವರು?

ಪರಸ್ಪರ ಒಪ್ಪಿಗೆ ಮೇರೆಗೆ ಜೋಡಿ ವಿಚ್ಛೇದನ ಸಲ್ಲಿಸಿತ್ತು. ಕಳೆದ ಎರಡು ವರ್ಷಗಳಿಂದ ಧನುಷ್ ಮತ್ತು ಐಶ್ವರ್ಯ ಬೇರೆ ಬೇರೆಯಾಗಿ ವಾಸಿಸುತ್ತಿದ್ದಾರೆ. ಧನುಷ್ ಹಾಗೂ ಐಶ್ವರ್ಯಾ ಪರಸ್ಪರ ಪ್ರೀತಿಸಿ ಮದುವೆ ಆಗಿದ್ದರು. ಮದುವೆಯಾಗಿ ಬರೋಬ್ಬರಿ 18 ವರ್ಷಗಳ ಬಳಿಕ ದೂರಾಗುತ್ತಿರುವುದಾಗಿ ಹೇಳಿದ್ದರು. ವಿಚ್ಛೇದನ ವಿಚಾರ ಘೋಷಣೆ ಬಳಿಕ ಇಬ್ಬರು ತಮ್ಮ ಮಕ್ಕಳಾದ ಯಾತ್ರಾ ಮತ್ತು ಲಿಂಗ ಶಾಲೆಯ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದ್ದರು.

ಜನವರಿ 2022ರಲ್ಲಿ ಬೇರೆಯಾಗುತ್ತಿದ್ದೇವೆ ಎಂದು ದಂಪತಿ ಘೋಷಿಸಿದ್ದರು. “18 ವರ್ಷಗಳ ಕಾಲ ಸ್ನೇಹಿತರು, ದಂಪತಿಗಳಾಗಿ , ಪೋಷಕರಾಗಿ ಹಿತೈಷಿಗಳಾಗಿ ಒಟ್ಟಿಗೆ ಇದ್ದೆವು. ಈ ಪಯಣ ನಮ್ಮಿಬ್ಬರ ಪ್ರಗತಿ, ತಿಳಿವಳಿಕೆ, ಹೊಂದಾಣಿಕೆ ಮತ್ತು ಪರಸ್ಪರ ಸ್ವೀಕಾರದ ಹಾದಿಯಾಗಿತ್ತು. ಇಂದು ನಾವು ನಮ್ಮ ಪ್ರತ್ಯೇಕ ಮಾರ್ಗಗಳನ್ನು ಕಂಡುಕೊಂಡಿದ್ದೇವೆ. ಐಶ್ವರ್ಯಾ ಮತ್ತು ನಾನು ದಂಪತಿಗಳಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ. ನಮ್ಮನ್ನು ನಾವು ಅರ್ಥ ಮಾಡಿಕೊಳ್ಳುವುದಕ್ಕೆ ಸಮಯ ಹಿಡಿಯಲಿದೆ. ದಯವಿಟ್ಟು ನಮ್ಮ ನಿರ್ಧಾರವನ್ನು ಗೌರವಿಸಿ. ಓಂ ನಮಶಿವಾಯ” ಎಂದು ಒಂದೂವರೆ ವರ್ಷದ ಹಿಂದೆ ಧನುಷ್ ಟ್ವೀಟ್ ಮಾಡಿದ್ದರು. ಹಿರಿಯ ನಟ ರಜನಿಕಾಂತ್ ಅವರ ಪುತ್ರಿ ಧನುಷ್ ಮತ್ತು ಐಶ್ವರ್ಯಾ ಅವರು 2004ರಲ್ಲಿ ವಿವಾಹವಾಗಿದ್ದರು.
ಇಬ್ಬರೂ ಮತ್ತೆ ಒಂದಾಗಬೇಕು ಎಂದು ಆಪ್ತರು, ಅಭಿಮಾನಿಗಳು ಬಯಸಿದ್ದರು. ಆದರೆ ಈಗ ಸದ್ಯದಲ್ಲೇ ಇವರ ವಿಚ್ಛೇದನ ಅಂತಿಮಗೊಳ್ಳಲಿದೆ. ಈ ವಿಚಾರದಲ್ಲಿ ಅಭಿಮಾನಿಗಳಿಗೆ ನಿರಾಸೆಯಾಗಿದೆ.

ಐಶ್ವರ್ಯಾ ಇತ್ತೀಚೆಗೆ ʻಲಾಲ್ ಸಲಾಂʼ ಚಿತ್ರದ ಮೂಲಕ ನಿರ್ದೇಶನಕ್ಕೆ ಮರಳಿದ್ದರು. ಇದರಲ್ಲಿ ರಜನಿಕಾಂತ್ ಅವರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಚಿತ್ರದಲ್ಲಿ ವಿಷ್ಣು ವಿಶಾಲ್ ಮತ್ತು ವಿಕ್ರಾಂತ್ ಕೂಡ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದರು

Continue Reading
Advertisement
Rohit Sharma
ಪ್ರಮುಖ ಸುದ್ದಿ4 mins ago

Rohit Sharma : 4 ರನ್​ಗೆ ಔಟಾಗಿ ಕಣ್ಣೀರು ಸುರಿಸಿದ ರೋಹಿತ್​ ಶರ್ಮಾ; ಇಲ್ಲಿದೆ ವಿಡಿಯೊ

PM Narendra Modi
ದೇಶ15 mins ago

ತಮ್ಮ ಬಗ್ಗೆ ಟ್ರೋಲ್‌ ಮಾಡಿದ್ದನ್ನೂ ಮೆಚ್ಚಿದ ಮೋದಿ; ಮಮತಾ ಬ್ಯಾನರ್ಜಿ ನೋಟಿಸ್; ಯಾರು ಸರ್ವಾಧಿಕಾರಿ?

School Children
ಸಂಪಾದಕೀಯ15 mins ago

ವಿಸ್ತಾರ ಸಂಪಾದಕೀಯ: ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆ, ಇ-ಮೇಲ್‌ ಕಿಡಿಗೇಡಿಗಳಿಗೆ ಕಠಿಣ ಪಾಠ ಕಲಿಸಬೇಕಿದೆ

IPL 2024
ಕ್ರೀಡೆ23 mins ago

IPL 2024 : ಸೂರ್ಯನ ಪ್ರತಾಪಕ್ಕೆ ಮಂಕಾದ ಸನ್​; ಮುಂಬೈಗೆ 7 ವಿಕೆಟ್​ ಭರ್ಜರಿ ಗೆಲುವು

Narendra Modi
ದೇಶ39 mins ago

Maldives: ಭಾರತೀಯರೇ, ದಯಮಾಡಿ ಬನ್ನಿ ಎಂದ ಮಾಲ್ಡೀವ್ಸ್‌ ಸಚಿವ; ಬಾಯ್ಕಾಟ್‌ ಪೆಟ್ಟಿಗೆ ಥಂಡಾ!

DK Shivakumar
ಕರ್ನಾಟಕ44 mins ago

Prajwal Revanna Case: ದೇವರಾಜೇಗೌಡ ನನ್ನ ವಿರುದ್ಧ ಸುಳ್ಳು ಅಪಾದನೆ ಮಾಡಿದ್ದಾರೆ ಎಂದ ಡಿಕೆಶಿ

T20 World Cup 2024
ಕ್ರೀಡೆ52 mins ago

T20 World Cup 2024 : ಕೇಸರಿಯ ರಂಗು; ಟೀಮ್​ ಇಂಡಿಯಾದ ಟಿ20 ವಿಶ್ವ ಕಪ್​​ ಜೆರ್ಸಿ ಬಿಡುಗಡೆ

108 Ambulance
ಕರ್ನಾಟಕ1 hour ago

108 Ambulance: 108 ಸಿಬ್ಬಂದಿಗೆ ಸರ್ಕಾರದಿಂದ ವೇತನ ಬಾಕಿ ಉಳಿಸಿಕೊಂಡಿಲ್ಲ: ದಿನೇಶ್ ಗುಂಡೂರಾವ್

IPL 2024
ಪ್ರಮುಖ ಸುದ್ದಿ1 hour ago

IPL 2024 : ಮುಂಬೈ ಚಾ ರಾಜಾ ರೋಹಿತ್​ ಶರ್ಮಾ ಎಂದು ಕೂಗಿದ ಹೇಡನ್​ ಪುತ್ರಿ ಗ್ರೇಸ್​​; ಇಲ್ಲಿದೆ ವಿಡಿಯೊ

Champions Trophy
ಪ್ರಮುಖ ಸುದ್ದಿ2 hours ago

Champions Trophy : ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲಿ ನಡೆಯಲು ಬಿಡುವುದಿಲ್ಲ ? ಬಿಸಿಸಿಐ ಸ್ಫೋಟಕ ಹೇಳಿಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ5 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ6 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ6 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ19 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ1 day ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ1 day ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ1 day ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

ಟ್ರೆಂಡಿಂಗ್‌