Thalapathy Vijay: ದಳಪತಿ ವಿಜಯ್ ನಟನೆಯ ‘GOAT’ ಚಿತ್ರದ ಟ್ರೈಲರ್‌ ರಿಲೀಸ್‌ ಡೇಟ್‌ ಅನೌನ್ಸ್‌! - Vistara News

ಕಾಲಿವುಡ್

Thalapathy Vijay: ದಳಪತಿ ವಿಜಯ್ ನಟನೆಯ ‘GOAT’ ಚಿತ್ರದ ಟ್ರೈಲರ್‌ ರಿಲೀಸ್‌ ಡೇಟ್‌ ಅನೌನ್ಸ್‌!

Thalapathy Vijay: ದಳಪತಿ ವಿಜಯ್ ಅವರು ಈ ಚಿತ್ರದಲ್ಲಿ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಪ್ಪ-ಮಗನ ಕಥೆ ಈ ಚಿತ್ರದಲ್ಲಿ ಇರಲಿದೆ ಎನ್ನಲಾಗಿದೆ. ದಳಪತಿ ವಿಜಯ್ ಅವರು ರಾಜಕೀಯದಲ್ಲಿ ಬ್ಯುಸಿ ಆಗೋಕೆ ರೆಡಿ ಆಗಿದ್ದಾರೆ. ಈ ಕಾರಣದಿಂದ ಈ ಸಿನಿಮಾದ ಬಗ್ಗೆ ಪ್ರೇಕ್ಷಕರಿಗೆ ಸಾಕಷ್ಟು ನಿರೀಕ್ಷೆ ಇದೆ. ಅವರು ಇನ್ನೂ ಒಂದು ಸಿನಿಮಾದಲ್ಲಿ ಮಾತ್ರ ನಟಿಸಬಹುದು ಎನ್ನಲಾಗುತ್ತಿದೆ.

VISTARANEWS.COM


on

Thalapathy Vijay Looks Intense In New GOAT Poster Trailer To Release
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಜಯ್‌ ಅವರು ಸದ್ಯ ‘ಗ್ರೇಟೆಸ್ಟ್ ಆಫ್ ಆಲ್​ ಟೈಮ್’ ((‘Greatest Of All Time (GOAT)’) ) ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ತ್ರಿಶಾ ನಾಯಕಿ. ಈ ಸಿನಿಮಾದಲ್ಲಿ ಪ್ರಭುದೇವ ಮೊದಲಾದವರು ನಟಿಸುತ್ತಿದ್ದಾರೆ. ʻವಿಸಿಲ್‌ ಪೋಡುʼ (Whistle Podu) ಎಂಬ ಶೀರ್ಷಿಕೆಯ ಮೊದಲ ಹಾಡು ಬಿಡುಗಡೆಯಾಗಿ ಸಖತ್‌ ಸೌಂಡ್‌ ಮಾಡಿತ್ತು. ಇದೀಗ ಸಿನಿಮಾದ ಟ್ರೈಲರ್‌ ಬಿಡುಗಡೆ ದಿನಾಂಕ ರಿವೀಲ್‌ ಆಗಿದೆ.

ಚಿತ್ರದಲ್ಲಿ ಮೀನಾಕ್ಷಿ ಚೌಧರಿ, ಪ್ರಶಾಂತ್, ಪ್ರಭುದೇವ, ಮೋಹನ್, ಜಯರಾಮ್, ಸ್ನೇಹಾ ಮತ್ತು ಲೈಲಾ ಪ್ರಮುಖ ಪಾತ್ರಗಳಲ್ಲಿ ನಟಿಸಲಿದ್ದಾರೆ. ಈ ಚಿತ್ರವನ್ನು ವೆಂಕಟ್ ಪ್ರಭು ನಿರ್ದೇಶನ ಮಾಡುತ್ತಿದ್ದಾರೆ. ಅಂದರೆ ಆಗಸ್ಟ್ 17ರಂದು ಸಿನಿಮಾದ ಟ್ರೇಲರ್ ರಿಲೀಸ್ ಆಗಲಿದೆ. ಆಗಸ್ಟ್ 15ರ ಪ್ರಯುಕ್ತ ಈ ಘೋಷಣೆ ಮಾಡಲಾಗಿದೆ.  GOAT’ ಚಿತ್ರದ ಹೊಸ ಪೋಸ್ಟರ್​ನ ತಂಡ ರಿಲೀಸ್ ಮಾಡಿದೆ. ಇದರಲ್ಲಿ ಅವರು ಗನ್ ಹಿಡಿದು ಮಿಂಚಿದ್ದಾರೆ. ಇದರಲ್ಲಿ ಟ್ರೇಲರ್ ರಿಲೀಸ್ ದಿನಾಂಕವನ್ನು ಉಲ್ಲೇಖ ಮಾಡಲಾಗಿದೆ. 

ದಳಪತಿ ವಿಜಯ್ ಅವರು ಈ ಚಿತ್ರದಲ್ಲಿ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಪ್ಪ-ಮಗನ ಕಥೆ ಈ ಚಿತ್ರದಲ್ಲಿ ಇರಲಿದೆ ಎನ್ನಲಾಗಿದೆ. ದಳಪತಿ ವಿಜಯ್ ಅವರು ರಾಜಕೀಯದಲ್ಲಿ ಬ್ಯುಸಿ ಆಗೋಕೆ ರೆಡಿ ಆಗಿದ್ದಾರೆ. ಈ ಕಾರಣದಿಂದ ಈ ಸಿನಿಮಾದ ಬಗ್ಗೆ ಪ್ರೇಕ್ಷಕರಿಗೆ ಸಾಕಷ್ಟು ನಿರೀಕ್ಷೆ ಇದೆ. ಅವರು ಇನ್ನೂ ಒಂದು ಸಿನಿಮಾದಲ್ಲಿ ಮಾತ್ರ ನಟಿಸಬಹುದು ಎನ್ನಲಾಗುತ್ತಿದೆ.

ಗೋಟ್’ ನಿರ್ಮಾಣದ ಕೊನೆಯ ಹಂತದಲ್ಲಿದ್ದು, ಚೆನ್ನೈ, ಥೈಲ್ಯಾಂಡ್, ಹೈದರಾಬಾದ್ ಮತ್ತು ಪಾಂಡಿಚೇರಿಯಲ್ಲಿ ಚಿತ್ರೀಕರಣ ಮಾಡಲಾಗಿದೆ. ವಿಜಯ್ ಕೊನೆಯದಾಗಿ ಲೋಕೇಶ್ ಕನಕರಾಜ್ ಅವರ ʻಲಿಯೋʼ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು.

ಇದನ್ನೂ ಓದಿ: Thalapathy Vijay: ದಳಪತಿ ವಿಜಯ್‌ಗೆ ಭುಜದ ಮೇಲಿನ ಕೈ ತೆಗೆಯಲು ಹೇಳಿದ ಹುಡುಗಿ; ವಿಡಿಯೊ ವೈರಲ್

ಗೋಟ್’ ಅನ್ನು ಎಜಿಎಸ್ ಎಂಟರ್‌ಟೈನ್‌ಮೆಂಟ್‌ನಿಂದ ಕಲ್ಪತಿ ಎಸ್ ಅಘೋರಂ, ಕಲ್ಪತಿ ಎಸ್ ಗಣೇಶ್ ಮತ್ತು ಕಲ್ಪತಿ ಎಸ್ ಸುರೇಶ್ ಅವರು ಬೃಹತ್ ಬಜೆಟ್‌ನಲ್ಲಿ ನಿರ್ಮಿಸಿದ್ದಾರೆ. ಚಿತ್ರಕ್ಕೆ ಯುವನ್ ಶಂಕರ್ ರಾಜಾ ಅವರ ಸಂಗೀತ ಸಂಯೋಜನೆ. ಸಿದ್ಧಾರ್ಥ ನುನಿ ಅವರ ಛಾಯಾಗ್ರಹಣ ಮತ್ತು ವೆಂಕಟ್ ರಾಜೇನ್ ಅವರ ಸಂಕಲನವಿದೆ. ದಿ ಗೋಟ್ ಮೇಲೆ ನಿರೀಕ್ಷೆ ಹೆಚ್ಚಿದೆ. ಸೆಪ್ಟೆಂಬರ್ 5 ರಂದು ಗಣೇಶ ಚತುರ್ಥಿಯಂದು ಚಿತ್ರ ಬಿಡುಗಡೆಯಾಗಲಿದೆ. ಈ ಚಿತ್ರ ತಮಿಳು ಮಾತ್ರವಲ್ಲದೆ ತೆಲುಗು, ಹಿಂದಿ ಮತ್ತು ಇತರ ಭಾಷೆಗಳಲ್ಲೂ ಬಿಡುಗಡೆಯಾಗಲಿದೆಎಂದು ವರದಿಯಾಗಿದೆ.

ಸಿನಿಮಾ ವೃತ್ತಿಜೀವನಕ್ಕೆ ದಳಪತಿ ವಿಜಯ್‌ (Thalapathy Vijay) ಅವರು ವಿದಾಯ ಹೇಳಲು ಸಜ್ಜಾಗುತ್ತಿದ್ದಾರೆ. ದಳಪತಿ ವಿಜಯ್‌ ಅವರ 69ನೇ ಸಿನಿಮಾ ಘೋಷಣೆ ಆಗಲಿದೆ. ಇದು ಅವರ ಕೊನೆಯ ಸಿನಿಮಾ ಆಗಿರಲಿದೆ ಎನ್ನಲಾಗುತ್ತಿದೆ. ತಮಿಳು ಚಿತ್ರ ನಟ ದಳಪತಿ ವಿಜಯ್‌ (Thalapathy Vijay) ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸಿರುವುದು ಗೊತ್ತೇ ಇದೆ. ಪಕ್ಷಕ್ಕೆ ʼತಮಿಳ ವೆಟ್ರಿ ಕಳಗಂʼ (Tamizha Vetri Kazhagam) ಎಂಬ ಹೆಸರನ್ನು ಈಗಾಗಲೇ ಘೋಷಿಸಿದ್ದಾರೆ ನಟ. ಮೂಲಗಳ ಪ್ರಕಾರ ತಮಿಳುನಾಡಿನಲ್ಲಿ 2026ರ ರಾಜ್ಯ ಚುನಾವಣೆಯಲ್ಲಿ ವಿಜಯ್‌ ಅವರು ಕಣಕ್ಕೆ ಇಳಿಯಲಿದ್ದಾರೆ. ಲೋಕಸಭೆ ಚುನಾವಣೆಗೆ ಸ್ಪರ್ಧಿಸದೆ 2026ರಲ್ಲಿ ಬರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಅವರು ಸ್ಪರ್ಧಿಸಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಾಲಿವುಡ್

Bigg Boss Tamil 8: ಬಿಗ್‌ ಬಾಸ್‌ನಿಂದ ಕಮಲ್‌ ಹಾಸನ್‌ ಔಟ್‌ ಆದ ಬೆನ್ನಲ್ಲೇ ಈ ಸ್ಟಾರ್‌ ನಟ ಎಂಟ್ರಿ?

Bigg Boss Tamil 8: ಹೀಗೆ ಕಮಲ್ ಹಾಸನ್ ಆ ಮನೆಯಿಂದ ನಿರ್ಗಮಿಸಿದ ಬೆನ್ನಲ್ಲಿಯೇ, ಕಮಲ್ ಜಾಗವನ್ನು ಬಿಗ್ ಬಾಸ್ ನಲ್ಲಿ ತುಂಬುವ ಕಲಾವಿದ ಯಾರು ಎನ್ನುವ ಪ್ರಶ್ನೆ ಅನೇಕರನ್ನು ಕಾಡುತ್ತಿತ್ತು. ಇದೀಗ ಸ್ಟಾರ್‌ ಒಬ್ಬರ ಹೆಸರು ಸಖತ್‌ ವೈರಲ್‌ ಆಗುತ್ತಿದೆ.

VISTARANEWS.COM


on

Bigg Boss Tamil 8 replaced Kamal Haasan for Bigg Boss.
Koo

ಬೆಂಗಳೂರು: ತಮಿಳು ಬಿಗ್‌ ಬಾಸ್‌ ಶೀಘ್ರದಲ್ಲಿ ಬರಲಿದೆ ಎಂದು ವರದಿಯಾಗಿದೆ. ಆದರೆ ಈ ಬಾರಿ ಬಿಗ್ ಬಾಸ್‌ ನಿರೂಪಣೆ ಕಮಲ್‌ ಹಾಸನ್‌ (Bigg Boss Tamil 8) ಮಾಡುತ್ತಿಲ್ಲ. ಈ ವರ್ಷ ಬಿಗ್ ಬಾಸ್ ಕಾರ್ಯಕ್ರಮದ ಹೊಣೆ ಹೊರಲು ಸಾಧ್ಯ ಇಲ್ಲ ಅಂದಿದ್ದಾರೆ. ಕಿರುತೆರೆಯ ಮೂಲಕ ನಿಮ್ಮ ಮನೆ ಮತ್ತು ಮನಗಳನ್ನು ತಲುಪಲು ಸಹಕಾರವನ್ನೂ ನೀಡಿದ ವಿಜಯ್ ಟಿವಿಗೆ ಧನ್ಯವಾದ ಎಂದಿರುವ ಕಮಲ್ ಹಾಸನ್,ಕೆಲಸದ ಒತ್ತಡ ಮತ್ತು ಒಪ್ಪಿಕೊಂಡಿರುವ ಕೆಲಸಗಳನ್ನು ಮುಗಿಸಲೇಬೇಕಾದ ಕಾರಣದಿಂದ ನಿರೂಪಣೆ ಮಾಡುತ್ತಿಲ್ಲ ಎಂದಿದ್ದಾರೆ. ಹೀಗೆ ಕಮಲ್ ಹಾಸನ್ ಆ ಮನೆಯಿಂದ ನಿರ್ಗಮಿಸಿದ ಬೆನ್ನಲ್ಲಿಯೇ, ಕಮಲ್ ಜಾಗವನ್ನು ಬಿಗ್ ಬಾಸ್ ನಲ್ಲಿ ತುಂಬುವ ಕಲಾವಿದ ಯಾರು ಎನ್ನುವ ಪ್ರಶ್ನೆ ಅನೇಕರನ್ನು ಕಾಡುತ್ತಿತ್ತು. ಇದೀಗ ಸ್ಟಾರ್‌ ಒಬ್ಬರ ಹೆಸರು ಸಖತ್‌ ವೈರಲ್‌ ಆಗುತ್ತಿದೆ.

ವಿಜಯ್ ಮತ್ತು ಅಜಿತ್ ಹೊರತು ಪಡಿಸಿದರೆ, ಬಿಗ್‌ ಬಾಸ್‌ ಕಾರ್ಯಕ್ರಮವನ್ನು ನೆರವೇರಿಸುವ ಶಕ್ತಿ ಇರುವುದು ರಜನಿಕಾಂತ್‌ ಅವರಿಗೆ ಮಾತ್ರ. ಇದೀಗ ಆದರೆ, ವಯಸ್ಸು ಸೇರಿ ಆರೋಗ್ಯದ ಸಮಸ್ಯೆಗಳು ಇದಕ್ಕೆ ಅಡ್ಡಗಾಲು ಆಗಿವೆ. ಈ ಕಾರಣಕ್ಕೆ ಬಿಗ್ ಬಾಸ್ ಉಸ್ತುವಾರಿಯನ್ನು, ವಿಜಯ್ ಸೇತುಪತಿ ಅವರ ಹೆಗಲಿಗೆ ವಹಿಸುವ ಕಸರತ್ತು ತಮಿಳುನಾಡಿನ ಕಿರುತೆರೆ ಲೋಕದಲ್ಲಿ ಶುರುವಾಗಿದೆ. ಇನ್ನೂ ವಿಜಯ್ ಸೇತುಪತಿ ಕೇವಲ ನಾಯಕನ ಪಾತ್ರಕ್ಕೆ ಸೀಮಿತವಾದವರಲ್ಲ. ಪಾತ್ರ ಯಾವುದೇ ಇದ್ದರೂ ಅದಕ್ಕೆ ಜೀವ ತುಂಬಬಲ್ಲ ಸಾಮರ್ಥ್ಯ ಹೊಂದಿರುವವರು. ಒಂದು ಅರ್ಥದಲ್ಲಿ ವರ್ಷ ಪೂರ್ತಿ ಬ್ಯುಸಿಯಾಗಿರುವವರು ವಿಜಯ್ ಸೇತುಪತಿ.

ಉಳಿದಂತೆ ವಿಜಯ್ ಸೇತುಪತಿ ಹೊರತು ಪಡಿಸಿದರೆ ಸಿಲಂಬರಸನ್ ಅಲಿಯಾಸ್ ಸಿಂಬು ಬಿಗ್ ಬಾಸ್ ನಿರೂಪಣೆ ಮಾಡುವ ಸಾಧ್ಯತೆ ಇದೆ. ಈ ಹಿಂದೆ ಸಿಂಬು ಬಿಗ್ ಬಾಸ್ ಅಲ್ಟಿಮೇಟ್ ಓಟಿಟಿ ಸೀಸನ್ ನಿರೂಪಣೆ ಮಾಡಿದ ಕಾರಣದಿಂದ ಸಿಂಬು ಒಪ್ಪಿಕೊಂಡರು ಒಪ್ಪಿಕೊಳ್ಳಬಹುದು ಎಂದು ವರದಿಯಾಗಿದೆ.

ಇದನ್ನೂ ಓದಿ: Bigg Boss Tamil 8: ಬಿಗ್​ ಬಾಸ್​ ಸೀಸನ್ 8​ರ ಹೋಸ್ಟ್​ ನಾನಲ್ಲ ಎಂದ ಕಮಲ್‌ ಹಾಸನ್‌; ಕಾರಣ ಬಿಚ್ಚಿಟ್ಟ ನಟ!

ಹಮಲ್‌ ಹಾಸನ್‌ ಕೊಟ್ಟ ಕಾರಣವೇನು?

“ಆತ್ಮೀಯ ವೀಕ್ಷಕರೇ, ಭಾರವಾದ ಹೃದಯದಿಂದ, 7 ವರ್ಷಗಳ ಹಿಂದೆ ಪ್ರಾರಂಭವಾದ ನಮ್ಮ ಪ್ರಯಾಣದಿಂದ ನಾನು ಸಣ್ಣ ವಿರಾಮವನ್ನು ತೆಗೆದುಕೊಳ್ಳುತ್ತಿದ್ದೇನೆ ಎಂದು ನಾನು ನಿಮಗೆ ತಿಳಿಸಲು ಬಯಸುತ್ತೇನೆ. ಸಿನಿಮಾಗಳ ಕಮಿಟ್‌ಮೆಂಟ್‌ನಿಂದಾಗಿ ಬಿಗ್ ಬಾಸ್ ತಮಿಳಿನ ಮುಂಬರುವ ಸೀಸನ್‌ಗೆ ಹೋಸ್ಟ್ ಮಾಡಲು ಸಾಧ್ಯವಾಗುತ್ತಿಲ್ಲ. .”
ನಿಮ್ಮ ಮನೆಗಳಲ್ಲಿ ತಲುಪುವ ಸೌಭಾಗ್ಯ ನನಗೆ ಸಿಕ್ಕಿದೆ. ನಿಮ್ಮ ಪ್ರೀತಿ ಮತ್ತು ವಾತ್ಸಲ್ಯವನ್ನು ನೀವು ನನಗೆ ಧಾರೆ ಎರೆದಿದ್ದೀರಿ, ಅದಕ್ಕಾಗಿ ನಿಮಗೆ ನನ್ನ ಚಿರ ಕೃತಜ್ಞತೆ ಇದೆ. ಇಲ್ಲಿ ನಾನು ನನ್ನ ಕಲಿಕೆಯನ್ನು ಪ್ರಾಮಾಣಿಕವಾಗಿ ಹಂಚಿಕೊಂಡಿದ್ದೇನೆ. ಈ ಕಲಿಕೆಯ ಅನುಭವಕ್ಕಾಗಿ ನಾನು ಯಾವಾಗಲೂ ಕೃತಜ್ಞರಾಗಿರುತ್ತೇನೆ. ನಿಮ್ಮಲ್ಲಿ ಪ್ರತಿಯೊಬ್ಬರಿಗೂ ಮತ್ತು ಸ್ಪರ್ಧಿಗಳಿಗೂ ನಾನು ಪ್ರಾಮಾಣಿಕವಾಗಿ ಧನ್ಯವಾದಗಳು. ಕೊನೆಯದಾಗಿ, ವಿಜಯ್ ಟಿವಿಯಲ್ಲಿನ ಅದ್ಭುತ ತಂಡಕ್ಕೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ, ಜೊತೆಗೆ ಈ ಉದ್ಯಮವನ್ನು ಒಂದು ದೊಡ್ಡ ಯಶಸ್ಸನ್ನು ಮಾಡುವಲ್ಲಿ ತೊಡಗಿಸಿಕೊಂಡಿರುವ ಪ್ರತಿಯೊಬ್ಬ ಸಿಬ್ಬಂದಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆʼʼಎಂದು ಬರೆದುಕೊಂಡಿದ್ದಾರೆ.

ಕಮಲ್ ಹಾಸನ್ ಅವರು 2007 ರಲ್ಲಿ ‘ಬಿಗ್ ಬಾಸ್ ತಮಿಳು’ ನಿರೂಪಣೆ ಮಾಡಿದರು.ನಟ ‘ಬಿಗ್ ಬಾಸ್ ತಮಿಳು’ ನ ಪ್ರತಿ ಸೀಸನ್ ಅನ್ನು ನಿರಂತರವಾಗಿ ಹೋಸ್ಟ್ ಮಾಡಿದ್ದಾರೆ. ‘ಬಿಗ್ ಬಾಸ್ ತಮಿಳು 8’ ಹೊಸ ಹೋಸ್ಟ್ ಯಾರೆಂದು ಇನ್ನೂ ಘೋಷಿಸಲಾಗಿಲ್ಲ.

ಕಳೆದ ಸೀಸನ್‌ನಲ್ಲಿ ವಿಶೇಷ ಎಂದರೆ ಅರ್ಚನಾ ರವಿಚಂದ್ರನ್ ಅವರು ವೈಲ್ಡ್‌ ಕಾರ್ಡ್‌ ಮೂಲಕ ಬಿಗ್‌ಬಾಸ್‌ ಮನೆಯೊಳಗೆ ಪ್ರವೇಶ ಪಡೆದಿದ್ದರು. ಇದೀಗ ವೈಲ್ಡ್ ಕಾರ್ಡ್ ಮೂಲಕ ಬಂದು ಚಾಂಪಿಯನ್‌ ಆಗುವ ಮೂಲಕ ಅವರು ಅಪರೂಪದ ಸಾಧನೆ ಮಾಡಿದ್ದರು.  ಇನ್ನು ಡ್ಯಾನ್ಸರ್‌ ಮಾಯಾ ಕೃಷ್ಣನ್‌ ರನ್ನರ್‌ ಅಪ್‌ ಆಗಿ ಆಯ್ಕೆಯಾಗಿದ್ದರು. ಮತ್ತೋರ್ವ ವೈಲ್ಡ್ ಕಾರ್ಡ್ ಎಂಟ್ರಿ ದಿನೇಶ್ ಮೂರನೇ ರನ್ನರ್ ಅಪ್ ಆಗಿದ್ದರು.

Continue Reading

ಕಾಲಿವುಡ್

Kanguva Trailer Out: `ಕಂಗುವ’ ಟ್ರೈಲರ್‌ ಔಟ್‌; ಅಬ್ಬರಿಸಿದ ಸೂರ್ಯ!

Kanguva Trailer Out:  ಇದು ಎಲ್ಲ ಭಾಷೆಯ ಹಕ್ಕುಗಳನ್ನೂ ಒಳಗೊಂಡಿದೆ ಎನ್ನಲಾಗುತ್ತಿದೆ. ಮೂಲಗಳ ಪ್ರಕಾರ ಈ ಸಿನಿಮಾದಲ್ಲಿ ನಟ ಐದು ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವೆಂಕಟೇರ್, ಅರತಾರ್, ಮಂದಾಂಕರ್, ಮುಕಾತಾರ್ ಮತ್ತು ಪೆರುಮಾನಾಥರ್ ಎಂಬ ಐದು ಪಾತ್ರಗಳನ್ನು ನಿರ್ವಹಿಸಲಿದ್ದಾರೆ. ದಿಶಾ ಪಟಾನಿ ಈ ಚಿತ್ರದ ಮೂಲಕ ತಮಿಳಿಗೆ ಪದಾರ್ಪಣೆ ಮಾಡುತ್ತಿದ್ದಾರೆ.

VISTARANEWS.COM


on

Kanguva Trailer Out Suriya Takes On A Savage Bobby Deol
Koo

ಬೆಂಗಳೂರು: ಸೂರ್ಯ (Kanguva Trailer Out) ಅವರ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾದ `ಕಂಗುವ’ ಟ್ರೈಲರ್‌ ಬಿಡುಗಡೆಯಾಗಿದೆ. ಮಹೇಶ್ ಬಾಬು ಅವರ ಹೊಸ ಲುಕ್ ಕೂಡ ವೈರಲ್ ಆಗಿದೆ. ಕಂಗುವ ಚಿತ್ರವನ್ನು ಶಿವಾ ನಿರ್ದೇಶಿಸಿದ್ದಾರೆ ಮತ್ತು ಬಾಬಿ ಡಿಯೋಲ್, ದಿಶಾ ಪಟಾನಿ, ನಟರಾಜನ್ ಸುಬ್ರಮಣ್ಯಂ, ಜಗಪತಿ ಬಾಬು, ಯೋಗಿ ಬಾಬು, ರೆಡಿನ್ ಕಿಂಗ್ಸ್ಲಿ, ಕೋವೈ ಸರಳಾ, ಆನಂದರಾಜ್, ರವಿ ರಾಘವೇಂದ್ರ ಮತ್ತು ಇನ್ನೂ ಅನೇಕರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಕಂಗುವ ಅಕ್ಟೋಬರ್ 10ರಂದು ಥಿಯೇಟರ್‌ಗಳಿಗೆ ಬರಲಿದೆ.

ಟ್ರೈಲರ್‌ನಲ್ಲಿ ಅತ್ಯಂತ ರಗಡ್‌ ಆಗಿ ಅಬ್ಬರಿಸಿದ್ದಾರೆ ಸೂರ್ಯ. ತಮ್ಮ ಎಕ್ಸ್ ಹ್ಯಾಂಡಲ್‌ನಲ್ಲಿ ಟ್ರೇಲರ್ ಅನ್ನು ಹಂಚಿಕೊಂಡ ಸೂರ್ಯ, ” ನಾವು ತಂಡವಾಗಿ ಒಟ್ಟಾಗಿ ಮಾಡಿದ ಈ ಸಿನಿಮಾ ಬಗ್ಗೆ ನಂಬಲಾಗದಷ್ಟು ಹೆಮ್ಮೆ ಇದೆ, ಧನ್ಯವಾದಗಳು, ಜನ್ಮದಿನದ ಶುಭಾಶಯಗಳು ಪ್ರಿಯ ಶಿವ!! ಕಂಗುವಟ್ರೇಲರ್ ನಿಮಗಾಗಿ! (sic ).” ಎಂದು ಬರೆದುಕೊಂಡಿದ್ದಾರೆ.

ಬುಡಕಟ್ಟು ಜನರ ದೃಶ್ಯದೊಂದಿಗೆ ಟ್ರೈಲರ್‌ ಶುರುವಾಗುತ್ತದೆ. ಸೂರ್ಯನ ಪಾತ್ರವನ್ನು ಉಗ್ರ ಡೇರ್‌ಡೆವಿಲ್ ಎಂದು ಚಿತ್ರಿಸಲಾಗಿದೆ. ಕಂಗುವಾದಲ್ಲಿ ಬಾಲಿವುಡ್ ನಟಿ ದಿಶಾ ಪಟಾನಿ ನಟಿಸಿದ್ದಾರೆ. ಈ ಸಿನಿಮಾ 38 ಜಾಗತಿಕ ಭಾಷೆಗಳಲ್ಲಿ 3D ನಲ್ಲಿ ಬಿಡುಗಡೆಯಾಗಲಿದೆ. ಮೂಲಗಳ ಪ್ರಕಾರ ಅಮೆಜಾನ್‌ ಪ್ರೈಂ ಸಂಸ್ಥೆ ಬರೋಬ್ಬರಿ 80 ಕೋಟಿ ರೂ. ಖರೀದಿ ಮಾಡಿದೆಯಂತೆ. ಇದು ಎಲ್ಲ ಭಾಷೆಯ ಹಕ್ಕುಗಳನ್ನೂ ಒಳಗೊಂಡಿದೆ ಎನ್ನಲಾಗುತ್ತಿದೆ. ಮೂಲಗಳ ಪ್ರಕಾರ ಈ ಸಿನಿಮಾದಲ್ಲಿ ನಟ ಐದು ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವೆಂಕಟೇರ್, ಅರತಾರ್, ಮಂದಾಂಕರ್, ಮುಕಾತಾರ್ ಮತ್ತು ಪೆರುಮಾನಾಥರ್ ಎಂಬ ಐದು ಪಾತ್ರಗಳನ್ನು ನಿರ್ವಹಿಸಲಿದ್ದಾರೆ. ದಿಶಾ ಪಟಾನಿ ಈ ಚಿತ್ರದ ಮೂಲಕ ತಮಿಳಿಗೆ ಪದಾರ್ಪಣೆ ಮಾಡುತ್ತಿದ್ದಾರೆ.

ಇದನ್ನೂ ಓದಿ: Kanguva Movie: ʻಕಂಗುವʼ ಚಿತ್ರದಲ್ಲಿ ಮೂರು ಅವತಾರಗಳಲ್ಲಿ ಮಿಂಚಲಿದ್ದಾರಂತೆ ಸೂರ್ಯ

ಧ್ರುವ ಸರ್ಜಾ ಸಿನಿಮಾ ಜತೆ ಕ್ಲ್ಯಾಶ್‌!

ಕಾಲಿವುಡ್‌ ನಟ ಸೂರ್ಯ (Actor Suriya) ನಟನೆಯ ʻಕಂಗುವʼ ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌ ಆಗಿದೆ. ಅಕ್ಟೋಬರ್ 10ರಂದು ವಿಶ್ವಾದ್ಯಂತ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಇದೇ ಸಂದರ್ಭದಲ್ಲಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ‘ಮಾರ್ಟಿನ್’ ಸಿನಿಮಾ (Kanguva Release Date) ಬಿಡುಗಡೆ ಆಗುತ್ತಿದೆ. ತಮಿಳಿನ ಜತೆಗೆ ಕನ್ನಡ, ತೆಲುಗು, ಹಿಂದಿ ಭಾಷೆಗಳಲ್ಲೂ ಈ ಚಿತ್ರ ರಿಲೀಸ್ ಆಗುತ್ತಿದೆ. ಹೀಗಾಗಿ, ಕನ್ನಡದ ‘ಮಾರ್ಟಿನ್’ ಜೊತೆ ಈ ಚಿತ್ರ ಕ್ಲ್ಯಾಶ್ ಆಗಲಿದೆ.

ಅಕ್ಟೋಬರ್‌ 11 ಕ್ಕೆ ಮಾರ್ಟಿನ್‌ ಸಿನಿಮಾ ಬಿಡುಗಡೆ

ಅಕ್ಟೋಬರ್‌ 11 ಕ್ಕೆ ಮಾರ್ಟಿನ್‌ ಸಿನಿಮಾ ಬಿಡುಗಡೆ ಆಗಲಿದೆ . ಧ್ರುವ ಸರ್ಜಾ ಅಭಿನಯದ 5ನೇ ಚಿತ್ರ ಮಾರ್ಟಿನ್. ಎ.ಪಿ.ಅರ್ಜುನ್ ನಿರ್ದೇಶನದ ಮಾರ್ಟಿನ್ 5 ಭಾಷೆಯಲ್ಲಿ ರಿಲೀಸ್ ಆಗಲಿದೆ. ಆ ಮೂಲಕ 2024 ರ ಹೈವೋಲ್ಟೇಜ್ ಸಿನಿಮಾ ಇದಾಗಲಿದೆ. ಪೊಗರು ಸಿನಿಮಾ ಬಳಿಕ 3 ವರ್ಷಗಳ ನಂತರ ಬೆಳ್ಳಿತೆರೆ ಮೇಲೆ ಧ್ರುವ ಸರ್ಜಾ ಅವರ ಮತ್ತೊಂದು ಸಿನಿಮಾ ಬಿಡುಗಡೆಯಾಗಲಿದೆ. ಮಾರ್ಟಿನ್ ಚಿತ್ರಕ್ಕೆ ಖ್ಯಾತ ಬಹುಭಾಷಾ ನಟ ಅರ್ಜುನ್‌ ಸರ್ಜಾ ಕಥೆ ಬರೆದಿದ್ದು, ವಾಸವಿ ಎಂಟರ್‌ಪ್ರೈಸಸ್ ಲಾಂಛನದಲ್ಲಿ ಉದಯ್ ಕೆ. ಮೆಹ್ತಾ ಈ ಚಿತ್ರ ನಿರ್ಮಿಸಿದ್ದಾರೆ.

ಸತ್ಯ ಹೆಗಡೆ ಛಾಯಾಚಿತ್ರಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮ, ರಾಮ್ ಲಕ್ಷ್ಮಣ್ ಅವರ ಸಾಹಸ ನಿರ್ದೇಶನ ಚಿತ್ರಕ್ಕಿದೆ. ಚಿತ್ರದ ತಾರಾಬಳಗದಲ್ಲಿ ಅನ್ವೇಶಿ ಜೈನ್, ಜಾರ್ಜಿಯ ಆಂಡ್ರಿಯಾನಿ, ಚಿಕ್ಕಣ್ಣ, ಮಾಳವಿಕ ಅವಿನಾಶ್, ನಿಕ್ತಿನ್ ಧೀರ್, ನವಾಬ್ ಶಾ, ರೋಹಿತ್ ಪಾಠಕ್ ಮುಂತಾದವರಿದ್ದಾರೆ.

ದೇಶ ವಿದೇಶದ 38 ಭಾಷೆಗಳಲ್ಲಿ ‘ಕಂಗುವ’ ಸಿನಿಮಾ ಡಬ್ ಮಾಡಿ ರಿಲೀಸ್ ಮಾಡಲಾಗುತ್ತಿದೆ. ಟ್ರೈಲರ್ ನೋಡಿದರೆ ವಿಷ್ಯುವಲಿ ಸಿನಿಮಾ ತೆರೆಮೇಲೆ ಅದ್ಭುತ ಅನುಭವ ನೀಡುವ ಸಾಧ್ಯತೆಯಿದೆ.ಚೆನ್ನೈ, ಗೋವಾ, ಕೇರಳ, ರಾಜಮಂಡ್ರಿ, ಕೊಡೆಕೊನಾಲ್‌ನಲ್ಲಿ ‘ಕಂಗುವ’ ಸಿನಿಮಾ ಚಿತ್ರೀಕರಣ ನಡೆದಿದೆ.




Continue Reading

South Cinema

Jr NTR: ಸಿನಿಮಾ ಮುಹೂರ್ತದಲ್ಲಿ ಜ್ಯೂ. ಎನ್​ಟಿಆರ್ ಧರಿಸಿದ ವಾಚ್ ಬೆಲೆ ಕೇಳಿದರೆ ನೀವು ಬೆರಗಾಗೋದು ಖಚಿತ​!

Jr NTR: ಅದ್ಧೂರಿಯಾಗಿ ಮುಹೂರ್ತ ಕಾರ್ಯಕ್ರಮವೂ ಜರುಗಿದ್ದು, ಇನ್ನೇನು ಶೀಘ್ರದಲ್ಲಿ ಶೂಟಿಂಗ್‌ ಸಹ ಶುರುವಾಗಲಿದೆ.ಸಿನಿಮಾದ ಮುಹೂರ್ತಕ್ಕೆ ಆಗಮಿಸಿದ್ದಾಗ ವಾಚ್ ಒಂದನ್ನು ಜೂ ಎನ್​ಟಿಆರ್ ಧರಿಸಿದ್ದರು. ಕೈಗೆ ತೊಟ್ಟಿದ್ದ ಗಡಿಯಾರ ಸಖತ್ ಗಮನ ಸೆಳೆಯಿತು. ಅಂದಹಾಗೆ ಈ ಗಡಿಯಾರದ ಬೆಲೆಗೆ ಒಂದು ಸಣ್ಣ ಬಜೆಟ್​ನ ಸಿನಿಮಾ ನಿರ್ಮಾಣ ಮಾಡಿಬಿಡಬಹುದು.

VISTARANEWS.COM


on

Jr NTR luxury watch at Hyderabad event
Koo

ಬೆಂಗಳೂರು: ಜೂನಿಯರ್‌ ಎನ್ ಟಿಆರ್ (Jr NTR) ಮತ್ತು ನಿರ್ದೇಶಕ ಪ್ರಶಾಂತ್ ನೀಲ್ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ಇನ್ನೂ ಶೀರ್ಷಿಕೆ ಅಂತಿಮವಾಗದ ಸಿನಿಮಾದ ಬಿಡುಗಡೆ ದಿನಾಂಕವನ್ನು ಚಿತ್ರ ನಿರ್ಮಾಣ ಸಂಸ್ಥೆ ಮೈತ್ರಿ ಮೂವಿ ಮೇಕರ್ಸ್‌ ಶುಭ ಶುಕ್ರವಾರದಂದು ಘೋಷಣೆ ಮಾಡಿದ್ದಾರೆ. ಈ ಬಿಗ್ ಬಜೆಟ್ ಸಿನಿಮಾ 2026ರ ಜನವರಿ 9 ರಂದು ಬಿಡುಗಡೆಯಾಗಲಿದೆ. ಅದ್ಧೂರಿಯಾಗಿ ಮುಹೂರ್ತ ಕಾರ್ಯಕ್ರಮವೂ ಜರುಗಿದ್ದು, ಇನ್ನೇನು ಶೀಘ್ರದಲ್ಲಿ ಶೂಟಿಂಗ್‌ ಸಹ ಶುರುವಾಗಲಿದೆ.ಸಿನಿಮಾದ ಮುಹೂರ್ತಕ್ಕೆ ಆಗಮಿಸಿದ್ದಾಗ ವಾಚ್ ಒಂದನ್ನು ಜೂ ಎನ್​ಟಿಆರ್ ಧರಿಸಿದ್ದರು. ಕೈಗೆ ತೊಟ್ಟಿದ್ದ ಗಡಿಯಾರ ಸಖತ್ ಗಮನ ಸೆಳೆಯಿತು. ಅಂದಹಾಗೆ ಈ ಗಡಿಯಾರದ ಬೆಲೆಗೆ ಒಂದು ಸಣ್ಣ ಬಜೆಟ್​ನ ಸಿನಿಮಾ ನಿರ್ಮಾಣ ಮಾಡಿಬಿಡಬಹುದು.

ಜೂ ಎನ್​ಟಿಆರ್ ಕಪ್ಪು ಬಣ್ಣದ ಲೆದರ್ ಬೆಲ್ಟ್ ಹೊಂದಿರುವ ನೀಲಿ-ಚಿನ್ನದ ಬಣ್ಣದ ಡಯಲ್ ಹೊಂದಿರುವ, ನೋಡಲು ತೀರ ಅದ್ಧೂರಿ ಎಂದೇನೂ ಅನಿಸದಿದ್ದ ವಾಚ್ ಒಂದನ್ನು ಧರಿಸಿದ್ದರು. ಇದರ ಬೆಲೆ ಬರೋಬ್ಬರಿ 2.53 ಕೋಟಿ ರೂಪಾಯಿಗಳು. ಜೂ ಎನ್​ಟಿಆರ್ ಧರಿಸಿದ್ದು ಪೆಟೆಕ್ ಫಿಲಿಫ್ ಸಂಸ್ಥೆಯ ವಾಚ್‌. ಫಿಲಿಪ್ 5370 ಪಿ ಸ್ಪ್ಲಿಟ್-ಸೆಕೆಂಡ್ಸ್ ಕ್ರೊನೊಗ್ರಾಫ್ ವಾಚ್. ಸೆಲ್ಫ್​ ವೆಂಡಿಂಗ್ ಮೆಕ್ಯಾನಿಕಲ್ ಮೂಮೆಂಟ್ ಹೊಂದಿದೆ. ಅಪರೂಪದ ಮಾಡೆಲ್​ನ ಈ ವಾಚಿನಲ್ಲಿ ಬಿಳಿ ಚಿನ್ನದ ಬಳಕೆಯನ್ನೂ ಸಹ ಮಾಡಲಾಗಿದೆ.

ಇದನ್ನೂ ಓದಿ: Vinay Rajkumar: ವಿನಯ್ ರಾಜ್ ಕುಮಾರ್ ‘ಪೆಪೆ’ ಸಿನಿಮಾ ವಿತರಣೆ ಮಾಡಲಿದೆ ಕೆ ಆರ್ ಜಿ!

ಎನ್‌ಟಿಆರ್ ಮತ್ತು ಪ್ರಶಾಂತ್ ನೀಲ್ ಅಭಿನಯದ ಈ ಸಿನಿಮಾದ ಲಾಂಚಿಂಗ್‌ ಇವೆಂಟ್‌ ಶುಕ್ರವಾರ ಹೈದರಾಬಾದ್‌ನಲ್ಲಿ ನಡೆಯಿತು. ಯಾವುದೇ ಪೂರ್ವ ಮಾಹಿತಿ ಇಲ್ಲದೆ ಸರಳವಾಗಿ ಈ ಮುಹೂರ್ತ ಸಮಾರಂಭವನ್ನು ನಡೆಸಲಾಯಿತು. ಎನ್‌ಟಿಆರ್ ಮತ್ತು ಪ್ರಶಾಂತ್ ನೀಲ್ ಚಿತ್ರದ ಉದ್ಘಾಟನಾ ಕಾರ್ಯಕ್ರಮದ ಫೋಟೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿವೆ. ಎನ್‌ಟಿಆರ್ ಮತ್ತು ಪ್ರಶಾಂತ್ ನೀಲ್ ಜೊತೆಗೆ ಕಲ್ಯಾಣ್ ರಾಮ್ ಮತ್ತು ಚಿತ್ರದ ನಿರ್ಮಾಪಕರು ಪೂಜಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.

ಈಗಾಗಲೇ ಎನ್‌ಟಿಆರ್‌ ಮತ್ತು ನೀಲ್‌ ಜೋಡಿಯ ಸಿನಿಮಾ ಘೋಷಣೆ ಆಗಿಯೇ ವರ್ಷಗಳು ಕಳೆದಿವೆ. ಆದರೆ, ಮುಂದುವರಿದು ಯಾವುದೇ ಅಪ್ಡೇಟ್‌ ಹೊರಬಂದಿರಲಿಲ್ಲ. ಇದೀಗ ಎನ್‌ಟಿಆರ್‌ ಮತ್ತು ನೀಲ್‌ ಕಾಂಬಿನೇಷನ್‌ ಸಿನಿಮಾ ಸೆಟ್ಟೇರಿದೆ. ಈ ಸುದ್ದಿ ತಿಳಿದ ಅವರ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಮುಹೂರ್ತ ಮಾತ್ರವಲ್ಲದೆ, ಚಿತ್ರದ ಬಿಡುಗಡೆಯ ದಿನಾಂಕವನ್ನೂ ಘೋಷಣೆ ಮಾಡಲಾಗಿದೆ. 2026ರ ಸಂಕ್ರಾಂತಿಗೆ ಈ ಸಿನಿಮಾ ತೆರೆಗೆ ಅಪ್ಪಳಿಸಲಿದೆ. ಮೂಲ ತೆಲುಗು ಜತೆಗೆ, ತಮಿಳು, ಹಿಂದಿ, ಕನ್ನಡ ಮತ್ತು ಮಲಯಾಳಂನಲ್ಲಿ ಚಿತ್ರಮಂದಿರಕ್ಕೆ ಲಗ್ಗೆ ಇಡಲಿದೆ.

ಬ್ಲಾಕ್‌ಬಸ್ಟರ್ ಹಿಟ್‌ ಸಿನಿಮಾಗಳಿಂದಲೇ ಹೆಸರುವಾಸಿಯಾದ ಪ್ರಶಾಂತ್ ನೀಲ್, ಎನ್‌ಟಿಆರ್‌ ಜತೆಗಿನ ಈ ಸಿನಿಮಾಕ್ಕೆ ಇನ್ನಷ್ಟು ಶ್ರಮ ಹಾಕುತ್ತಿದ್ದಾರೆ. ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. ಈ ಚಿತ್ರವನ್ನು ಕಲ್ಯಾಣ್ ರಾಮ್ ನಂದಮೂರಿ, ನವೀನ್ ಯೆರ್ನೇನಿ, ರವಿಶಂಕರ್ ಯಲಮಂಚಿಲಿ ಮತ್ತು ಹರಿಕೃಷ್ಣ ಕೊಸರಾಜು ಅವರು ಮೈತ್ರಿ ಮೂವೀ ಮೇಕರ್ಸ್ ಮತ್ತು ಎನ್‌ಟಿಆರ್ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸುತ್ತಿದ್ದಾರೆ. ಕೆಜಿಎಫ್‌, ಸಲಾರ್‌ ಖ್ಯಾತಿಯ ಭುವನ್ ಗೌಡ ಈ ಚಿತ್ರಕ್ಕೆ ಛಾಯಾಗ್ರಹಣ ಮಾಡಲಿದ್ದು, ರವಿ ಬಸ್ರೂರ್ ಸಂಗೀತ ಸಂಯೋಜಿಸಲಿದ್ದಾರೆ. ಚಿತ್ರದ ಪಾತ್ರವರ್ಗ ಇನ್ನಷ್ಟೇ ಅಂತಿಮವಾಗಬೇಕಿದೆ.

Continue Reading

ಕಾಲಿವುಡ್

Actor Suriya: ಸೂರ್ಯಗೆ ಸೆಟ್‌ನಲ್ಲಿ ಗಾಯ: ಆರೋಗ್ಯ ಸ್ಥಿತಿ ಹೇಗಿದೆ?

Actor Suriya: ಮಾರ್ಚ್ 28 ರಂದು ಸೂರ್ಯ 44 ರ ಫಸ್ಟ್ ಲುಕ್ ಪೋಸ್ಟರ್ ಅನ್ನು ಸೂರ್ಯ ಬಿಡುಗಡೆ ಮಾಡಿದರು. ಈ ಸಿನಿಮಾವನ್ನು ತಮಿಳಿನ ಕಾರ್ತಿಕ್ ಸುಬ್ಬರಾಜು ನಿರ್ದೇಶನ ಮಾಡಲಿದ್ದಾರೆ. ಸೂಪರ್ ಹಿಟ್ ಸಿನಿಮಾಗಳಾದ ‘ಜಿಗರ್​ಥಂಡಾ’, ರಜನೀಕಾಂತ್ ನಟನೆಯ ‘ಪೆಟ್ಟಾ’, ‘ಜಿಗರ್ ಥಂಡಾ ಡಬಲ್ ಎಕ್ಸ್’, ‘ಮಹಾನ್’ ಇನ್ನಿತರೆ ಸಿನಿಮಾಗಳನ್ನು ಇವರು ನಿರ್ದೇಶಿಸಿದ್ದಾರೆ.2022 ರಲ್ಲಿ ಬಿಡುಗಡೆ ಆದ ‘ಆಚಾರ್ಯ’ ಸಿನಿಮಾ ಬಳಿಕ ಪೂಜಾ ಹೆಗ್ಡೆ ಯಾವುದೇ ದಕ್ಷಿಣ ಭಾರತದ ಸಿನಿಮಾದಲ್ಲಿ ನಟಿಸಿರಲಿಲ್ಲ. ಇದೀಗ ‘ಸೂರ್ಯ 44’ ಸಿನಿಮಾ ಮೂಲಕ ಪೂಜಾ ಕಮ್ ಬ್ಯಾಕ್ ಮಾಡಿದ್ದಾರೆ.

VISTARANEWS.COM


on

Actor Suriya minor injury while shooting for film
Koo

ಬೆಂಗಳೂರು: ನಿರ್ದೇಶಕ ಕಾರ್ತಿಕ್ ಸುಬ್ಬರಾಜ್ (Actor Suriya) ಅವರ ಮುಂಬರುವ ಚಿತ್ರದ ಶೂಟಿಂಗ್ ವೇಳೆ ನಟ ಸೂರ್ಯ ಅವರ ತಲೆಗೆ ಗಾಯವಾಗಿದೆ. ಈ ಘಟನೆಯ ನಂತರ ತಾತ್ಕಾಲಿಕವಾಗಿ ಸೂರ್ಯ 44 ಚಿತ್ರದ ಶೂಟಿಂಗ್‌ವನ್ನು ( Karthik Subbaraj) ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಸೂರ್ಯ ಸಿನಿಮಾದ ತಂಡದವರೂ ಸಾಕಷ್ಟು ಎಚ್ಚರಿಕೆ ವಹಿಸಿದ್ದರು. ಆದಾಗ್ಯೂ ಅವಘಡ ಸಂಭವಿಸಿದೆ. ಈಗ ಸೂರ್ಯ ಚೇತರಿಕೆಕಂಡಿದ್ದಾರೆ. ಈ ಬಗ್ಗೆ ನಿರ್ಮಾಪಕ ರಾಜಶೇಖರ್ ಪಾಂಡಿಯನ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ನಿರ್ಮಾಪಕ ರಾಜಶೇಖರ್ ಪಾಂಡಿಯನ್ ಅವರು ಎಕ್ಸ್ ನಲ್ಲಿ ನಟನ ಯೋಗಕ್ಷೇಮದ ಬಗ್ಗೆ ಅಭಿಮಾನಿಗಳಿಗೆ ಮಾಹಿತಿ ನೀಡಿದರು. ʻʻನಟನಿಗೆ ಸಣ್ಣ ಗಾಯವಾಗಿದೆ. ದಯವಿಟ್ಟು ಚಿಂತಿಸಬೇಡಿ, ಸೂರ್ಯ ಅಣ್ಣ ನಿಮ್ಮೆಲ್ಲರ ಪ್ರೀತಿ ಮತ್ತು ಪ್ರಾರ್ಥನೆಯೊಂದಿಗೆ ಸಂಪೂರ್ಣವಾಗಿ ಚೆನ್ನಾಗಿದ್ದಾರೆʼʼಎಂದು ಬರೆದುಕೊಂಡಿದ್ದಾರೆ.

ಈ ಘಟನೆ ಬಗ್ಗೆ ಕೇಳಿ ಸೂರ್ಯ ಅವರ ಅಭಿಮಾನಿಗಳಲ್ಲಿ ಸಾಕಷ್ಟು ಆತಂಕ ವ್ಯಕ್ತವಾಗಿತ್ತು. ಆದರೆ, ಈಗ ನಿರ್ಮಾಪಕರು ಈ ಬಗ್ಗೆ ಮಾಹಿತಿ ಕೊಟ್ಟ ಬಳಿಕ ಎಲ್ಲರೂ ನಿಟ್ಟುಸಿರು ಬಿಡುವಂತೆ ಆಗಿದೆ. ಅವರು ಬೇಗ ಚೇತರಿಕೆ ಕಂಡು ಮತ್ತೆ ಶೂಟಿಂಗ್ ಸೆಟ್ ಸೇರಿಕೊಳ್ಳಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ಮಾರ್ಚ್ 28 ರಂದು ಸೂರ್ಯ 44 ರ ಫಸ್ಟ್ ಲುಕ್ ಪೋಸ್ಟರ್ ಅನ್ನು ಸೂರ್ಯ ಬಿಡುಗಡೆ ಮಾಡಿದರು. ಈ ಸಿನಿಮಾವನ್ನು ತಮಿಳಿನ ಕಾರ್ತಿಕ್ ಸುಬ್ಬರಾಜು ನಿರ್ದೇಶನ ಮಾಡಲಿದ್ದಾರೆ. ಸೂಪರ್ ಹಿಟ್ ಸಿನಿಮಾಗಳಾದ ‘ಜಿಗರ್​ಥಂಡಾ’, ರಜನೀಕಾಂತ್ ನಟನೆಯ ‘ಪೆಟ್ಟಾ’, ‘ಜಿಗರ್ ಥಂಡಾ ಡಬಲ್ ಎಕ್ಸ್’, ‘ಮಹಾನ್’ ಇನ್ನಿತರೆ ಸಿನಿಮಾಗಳನ್ನು ಇವರು ನಿರ್ದೇಶಿಸಿದ್ದಾರೆ.2022 ರಲ್ಲಿ ಬಿಡುಗಡೆ ಆದ ‘ಆಚಾರ್ಯ’ ಸಿನಿಮಾ ಬಳಿಕ ಪೂಜಾ ಹೆಗ್ಡೆ ಯಾವುದೇ ದಕ್ಷಿಣ ಭಾರತದ ಸಿನಿಮಾದಲ್ಲಿ ನಟಿಸಿರಲಿಲ್ಲ. ಇದೀಗ ‘ಸೂರ್ಯ 44’ ಸಿನಿಮಾ ಮೂಲಕ ಪೂಜಾ ಕಮ್ ಬ್ಯಾಕ್ ಮಾಡಿದ್ದಾರೆ.

ಇದನ್ನೂ ಓದಿ: IND vs SL : ಲಂಕಾ ವಿರುದ್ಧದ 3ನೇ ಟಿ20 ಪಂದ್ಯದಲ್ಲೂ ಭಾರತಕ್ಕೆ ಜಯ, ಸರಣಿ ಕ್ಲೀನ್ ಸ್ವೀಪ್ ಮಾಡಿದ ಸೂರ್ಯಕುಮಾರ್ ಪಡೆ

ʻಕಂಗುವʼ ಸಿನಿಮಾ

ಈಗಾಗಲೇ ಸೂರ್ಯ ಅಭಿನಯದ ಕಂಗುವ ಸಿನಿಮಾ (Kanguva vs Alia Bhatt) ರಿಲೀಸ್‌ ಡೇಟ್‌ ಅನೌನ್ಸ್‌ ಆಗಿದೆ. “ಕಂಗುವ” ಪ್ರೇಕ್ಷಕರಿಗೆ ಹೆಚ್ಚು ನಿರೀಕ್ಷಿತ ಚಿತ್ರವಾಗಿದೆ. ಶಿವ ನಿರ್ದೇಶನದ ಈ ಚಿತ್ರದಲ್ಲಿ ಸೂಪರ್‌ಸ್ಟಾರ್ ಸೂರ್ಯ ಸಂಪೂರ್ಣವಾಗಿ (Kanguva Movie) ಹೊಸ ಅವತಾರದಲ್ಲಿ ನಟಿಸಿದ್ದಾರೆ. ಮೂರು ಅವತಾರದಲ್ಲಿ ಸೂರು ಮಿಂಚುತ್ತಿದ್ದಾರೆ. ಈಗಾಗಲೇ ಚಿತ್ರತಂಡ ಸೂರ್ಯ ಅವರ ಪ್ರತಿಯೊಂದು ಪಾತ್ರವು ಹಿಂದೆಂದೂ ನೋಡಿರದ ವಿಭಿನ್ನ ಲುಕ್‌ ಇರಲಿದೆ ಎಂದಿದ್ದಾರೆ.

ಶಿವ-ನಿರ್ದೇಶನದ ಈ ಸಿನಿಮಾ ಅಕ್ಟೋಬರ್ 10 ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಕಂಗುವಾದಲ್ಲಿ ಬಾಲಿವುಡ್ ನಟಿ ದಿಶಾ ಪಟಾನಿ ನಟಿಸಿದ್ದಾರೆ. ಈ ಸಿನಿಮಾ 38 ಜಾಗತಿಕ ಭಾಷೆಗಳಲ್ಲಿ 3D ನಲ್ಲಿ ಬಿಡುಗಡೆಯಾಗಲಿದೆ.

ಮೂಲಗಳ ಪ್ರಕಾರ ಅಮೆಜಾನ್‌ ಪ್ರೈಂ ಸಂಸ್ಥೆ ಬರೋಬ್ಬರಿ 80 ಕೋಟಿ ರೂ. ಖರೀದಿ ಮಾಡಿದೆಯಂತೆ. ಇದು ಎಲ್ಲ ಭಾಷೆಯ ಹಕ್ಕುಗಳನ್ನೂ ಒಳಗೊಂಡಿದೆ ಎನ್ನಲಾಗುತ್ತಿದೆ. ಮೂಲಗಳ ಪ್ರಕಾರ ಈ ಸಿನಿಮಾದಲ್ಲಿ ನಟ ಐದು ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವೆಂಕಟೇರ್, ಅರತಾರ್, ಮಂದಾಂಕರ್, ಮುಕಾತಾರ್ ಮತ್ತು ಪೆರುಮಾನಾಥರ್ ಎಂಬ ಐದು ಪಾತ್ರಗಳನ್ನು ನಿರ್ವಹಿಸಲಿದ್ದಾರೆ. ದಿಶಾ ಪಟಾನಿ ಈ ಚಿತ್ರದ ಮೂಲಕ ತಮಿಳಿಗೆ ಪದಾರ್ಪಣೆ ಮಾಡುತ್ತಿದ್ದಾರೆ. ಇದರಲ್ಲಿ ಕೋವೈ ಸರಳಾ, ಯೋಗಿ ಬಾಬು, ಆನಂದ್ ರಾಜ್, ರೆಡಿನ್ ಕಿಂಗ್ಸ್ಲಿ, ರವಿ ರಾಘವೇಂದ್ರ ಮತ್ತು ಇತರರು ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ.

Continue Reading
Advertisement
Doctors protest
ಕರ್ನಾಟಕ2 mins ago

Doctors Protest: ನಾಳಿನ ಪ್ರತಿಭಟನೆಗೆ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಬೆಂಬಲ; ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೇವೆ ಬಂದ್

Medicine
ಆರೋಗ್ಯ8 mins ago

Red Line on Medicine Strip: ಔಷಧ ಪ್ಯಾಕೇಟ್‌ ಮೇಲೆ ಕೆಂಪು ಗೆರೆ ಏಕಿರುತ್ತದೆ ಅನ್ನೋದು ಗೊತ್ತಾ?

Vijay Surya drusti bottu serial will start
ಕಿರುತೆರೆ17 mins ago

Vijay Surya: `ದೃಷ್ಟಿಬೊಟ್ಟು’ ಧಾರಾವಾಹಿ ಮೂಲಕ ಖಡಕ್‌ ಎಂಟ್ರಿ ಕೊಟ್ಟ ವಿಜಯ್ ಸೂರ್ಯ!

Visa Free Countries
ಪ್ರವಾಸ20 mins ago

Visa Free Countries: ಪ್ರವಾಸಿ ತಾಣಗಳಿಗೆ ಹೆಸರಾದ ಈ 10 ದೇಶಗಳಿಗೆ ಹೋಗಲು ವೀಸಾ ಬೇಕಿಲ್ಲ!

Indian Economy
ಪ್ರಮುಖ ಸುದ್ದಿ58 mins ago

Indian Economy : 2027ರ ವೇಳೆಗೆ ಭಾರತ 3ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: ಐಎಂಎಫ್​ನ ಗೀತಾ ಗೋಪಿನಾಥ್

Kolkata Doctor Murder Case
Latest60 mins ago

Kolkata Doctor Murder Case: ಕೋಲ್ಕತ್ತಾ ವೈದ್ಯೆಯ ಅತ್ಯಾಚಾರಿಗೆ ಮರಣದಂಡನೆ ವಿಧಿಸುವಂತೆ ಬಾಲಿವುಡ್ ತಾರೆಯರ ಆಗ್ರಹ

Shiva Rajkumar 131st film set on Varamahalakshmi festival
ಸ್ಯಾಂಡಲ್ ವುಡ್1 hour ago

Shiva Rajkumar: ವರಮಹಾಲಕ್ಷ್ಮಿ ಹಬ್ಬದ ದಿನದಂದೇ ಸೆಟ್ಟೇರಿತು ಶಿವರಾಜ್ ಕುಮಾರ್ 131ನೇ ಸಿನಿಮಾ!

Vinesh Phogat
ಪ್ರಮುಖ ಸುದ್ದಿ1 hour ago

Vinesh Phogat : ವಿನೇಶ್​ ಫೈನಲ್ ತಲುಪಿದ್ದೇ ಹೆಮ್ಮೆಯ ವಿಷಯ; ಫೋಗಟ್ ಸಾಧನೆಯನ್ನು ಕೊಂಡಾಡಿದ ಮೋದಿ

Donald Trump
ಪ್ರಮುಖ ಸುದ್ದಿ2 hours ago

Donald Trump : ಡೊನಾಲ್ಡ್​ ಟ್ರಂಪ್​, ಎಲಾನ್​ ಮಸ್ಕ್​ ಮಸ್ತ್​ ಡಾನ್ಸ್​; ಇದು ಕೃತಕ ಬುದ್ದಿಮತ್ತೆಯ ಕರಾಮತ್ತು!

70th National Film Awards Mammootty rishab shetty competition
ಸಿನಿಮಾ2 hours ago

70th National Film Awards: 70ನೇ ರಾಷ್ಟ್ರೀಯ ಪ್ರಶಸ್ತಿ ಕ್ಷಣಗಣನೆ; ರಿಷಬ್‌ ಶೆಟ್ಟಿ ಮೇಲೆ ಸಿನಿಪ್ರಿಯರ ಕಣ್ಣು!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌