Nayanthara and Vignesh: ಪತಿಯನ್ನು ಅನ್‌ಫಾಲೋ ಮಾಡಿ ಭಾವುಕ ಪೋಸ್ಟ್‌ ಹಂಚಿಕೊಂಡ ನಯನತಾರ! - Vistara News

ಕಾಲಿವುಡ್

Nayanthara and Vignesh: ಪತಿಯನ್ನು ಅನ್‌ಫಾಲೋ ಮಾಡಿ ಭಾವುಕ ಪೋಸ್ಟ್‌ ಹಂಚಿಕೊಂಡ ನಯನತಾರ!

Nayanthara and Vignesh: ನಟಿ ಏಕಾಏಕಿ ಇನ್‌ಸ್ಟಾಗ್ರಾಮ್‌ನಲ್ಲಿ ಪತಿ ವಿಘ್ನೇಶ್ ಶಿವನ್‌ ಅವರನ್ನು ಅನ್‌ಫಾಲೋ ಮಾಡಿದ್ದಾರೆ ಎಂದು ವರದಿಯಾಗಿದೆ. ಮಾತ್ರವಲ್ಲ ಭಾವುಕ ಪೋಸ್ಟ್‌ ಕೂಡ ಹಾಕಿಕೊಂಡಿದ್ದಾರೆ.

VISTARANEWS.COM


on

Vignesh Shivan Shares fIRST Post After Nayanthara Unfollows
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಘ್ನೇಶ್ ಶಿವನ್ ಮತ್ತು ನಯನತಾರಾ (Nayanthara and Vignesh) ಅಕ್ಟೋಬರ್ 9ರಂದು ಅವಳಿ ಮಕ್ಕಳನ್ನು ಪಡೆದರು. ನಟಿ ನಯನತಾರಾ ಇತ್ತೀಚೆಗೆ ತಮ್ಮ ಮಕ್ಕಳಾದ ಉಯಿರ್ ಮತ್ತು ಉಲಗ್ ಅವರ ಫೋಟೋಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಆದರೀಗ ನಟಿ ಏಕಾಏಕಿ ಇನ್‌ಸ್ಟಾಗ್ರಾಮ್‌ನಲ್ಲಿ ಪತಿ ವಿಘ್ನೇಶ್ ಶಿವನ್‌ನ ಅನ್‌ಫಾಲೋ ಮಾಡಿದ್ದಾರೆ ಎಂದು ವರದಿಯಾಗಿದೆ. ಮಾತ್ರವಲ್ಲ ಭಾವುಕ ಪೋಸ್ಟ್‌ ಕೂಡ ಹಾಕಿಕೊಂಡಿದ್ದಾರೆ.

ಆದರೆ ಅಸಲಿಗೆ ಹಾಗೇನು ಆಗಿಲ್ಲ. ನಯನತಾರಾ ಅವರು ಇನ್​ಸ್ಟಾಗ್ರಾಮ್​ನಲ್ಲಿ ವಿಘ್ನೇಶ್ ಶಿವನ್ ಅವರನ್ನು ಅನ್​ಫಾಲೋ ಮಾಡಿಯೇ ಇಲ್ಲ. ಇದರ ಸ್ಕ್ರೀನ್​ಶಾಟ್​ಗಳು ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ನಯನತಾರಾ ಅವರಿಗೆ ಆಗದೇ ಇರುವವರ ಕೆಲಸ ಇದು ಎಂದು ಫ್ಯಾನ್ಸ್‌ ಕಮೆಂಟ್‌ ಮಾಡುತ್ತಿದ್ದಾರೆ. ಕೆಲವು ದಿನಗಳಹಿಂದೆ ಜೋಡಿ ಡಿವೋರ್ಸ್‌ ಪಡೆದುಕೊಳ್ಳುತ್ತಿದೆ ಎಂದು ಸುದ್ದಿಯಾಗಿತ್ತು. ಆದರೀಗ ನಟಿ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ, ನಯನತಾರಾ ಒಂದು ಇಂಗ್ಲಿಷ್ ಪೋಸ್ಟ್ ಮಾಡಿದ್ದಾರೆ. “ಅವಳು ಕಣ್ಣೀರಿನ ಮೂಲಕವೂ ಇದು ಆಕೆಗೆ ಸಿಕ್ಕಿದೆ ಎಂದು ಯಾವಾಗಲೂ ಹೇಳುತ್ತಿದ್ದಳು” ಎನ್ನುವ ಅರ್ಥದಲ್ಲಿ ಒಂದು ಕೋಟ್ ಹಾಕಿದ್ದಾರೆ. ಇದಾದ ಬಳಿಕ ನಟಿ ಪತಿ ವಿಘ್ನೇಶ್ ಅವರನ್ನು ಅನ್ ಫಾಲೋ ಮಾಡಿದ್ದಾರೆ ಎಂದು ಸುದ್ದಿ ವೈರಲ್‌ ಆಗಿದೆ. ಆದರೀಗ ಮತ್ತೆ ನಯನತಾರಾ ಪತಿಯನ್ನು ಫಾಲೋ ಮಾಡುತ್ತಿದ್ದಾರೆ. ನಟಿಯ ಸಂಸಾರದಲ್ಲಿ ಬಿರುಕು ಮೂಡಿದೆ ಎನ್ನುವ ಚರ್ಚೆ ಶುರುವಾಗಿದೆ.

ಇದನ್ನೂ ಓದಿ: Nayanthara and Vignesh: ಅವಳಿ ಮಕ್ಕಳೊಂದಿಗೆ ಇರುವ ಕ್ಯೂಟ್‌ ಫೋಟೊ ಹಂಚಿಕೊಂಡ ನಯನತಾರಾ!

ನಯನತಾರಾ ನಟನೆ ಹಾಗೂ ಮಕ್ಕಳ ಜವಾಬ್ದಾರಿ ಎರಡನ್ನು ನಿಭಾಯಿಸುವುದು ಕಷ್ಟವಾದ ಹಿನ್ನೆಲೆ ಮಕ್ಕಳ ಜೊತೆ ಸಮಯ ಕಳೆಯಲು ಕೆಲ ಕಾಲ ನಟಿ ಬ್ರೇಕ್ ತೆಗೆದುಕೊಳ್ಳುತ್ತಾರೆ ಎನ್ನುವ ಮಾತು ಕಾಲಿವುಡ್ ಅಂಗಳದಲ್ಲಿ ಕೇಳಿ ಹರಿದಾಡಿತ್ತು. ಆದರೆ ನಟಿ ʻಜವಾನ್‌ʼ ಸಿನಿಮಾ ಮೂಲಕ ಮತ್ತೆ ಕಮ್‌ ಬ್ಯಾಕ್‌ ಆದರು.

ಇತ್ತೀಚೆಗೆ ಥಿಯೇಟರ್‌ಗಳಲ್ಲಿ ತೆರೆಕಂಡ ಲೇಡಿ ಸೂಪರ್‌ ಸ್ಟಾರ್‌ ನಯನತಾರಾ (Actress Nayanthara) ಅಭಿನಯದ ʼಅನ್ನಪೂರ್ಣಿʼ (Annapoorani) ಚಿತ್ರ ಒಟಿಟಿಯಲ್ಲಿ ಸ್ಟ್ರೀಮಿಂಗ್‌ ಆಗಿತ್ತು. ಸಿನಿಮಾ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತರುತ್ತಿದೆ ಎಂದು ಶಿವಸೇನೆಯ ಮಾಜಿ ನಾಯಕ ರಮೇಶ್ ಸೋಲಂಕಿ ಕೇಸ್ ಕೂಡ ದಾಖಲಿಸಿದ್ದರು. ಇದಾದ ಬಳಿಕ ನೆಟ್​ಫ್ಲಿಕ್ಸ್ ಎಚ್ಚೆತ್ತುಕೊಂಡಿದ್ದು, ಸಿನಿಮಾವನ್ನು ಡಿಲೀಟ್ ಮಾಡಿತ್ತು. ಇನ್‌ಸ್ಟಾ ಮೂಲಕ ನಟಿ ಕ್ಷಮೆ ಕೂಡ ಕೇಳಿದ್ದರು.

ವಿಘ್ನೇಶ್ ಶಿವನ್ ಪ್ರಸ್ತುತ ʻಲವ್ ಇನ್ಶುರೆನ್ಸ್ ಕಾರ್ಪೊರೇಶನ್‌ʼ ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಪ್ರದೀಪ್ ರಂಗನಾಥನ್, ಎಸ್.ಜೆ.ಸೂರ್ಯ ಮತ್ತು ಕೃತಿ ಶೆಟ್ಟಿ ಮನರಂಜನಾ ಪಾತ್ರದಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಾಲಿವುಡ್

Raghu Thatha: `ಪುಷ್ಪ 2′ ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್‌ ಸೆಡ್ಡು: ‘ರಘು ತಾತಾ’ ರಿಲೀಸ್‌ ಡೇಟ್‌ ಅನೌನ್ಸ್‌!

Raghu Thatha: ಈ ಹಿಂದೆ, ‘ದಿ ಫ್ಯಾಮಿಲಿ ಮ್ಯಾನ್’ ವೆಬ್ ಸೀರೀಸ್ ಜತೆಗೆ ಕೆಲವು ಚಿತ್ರಗಳಿಗೆ ಕಥೆ-ಚಿತ್ರಕಥೆ ರಚಿಸಿದ್ದ ಸುಮನ್ ಕುಮಾರ್ ಈ ಚಿತ್ರವನ್ನು ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿದ್ದಾರೆ. ʼʼರಘುತಾತಾ’ ಮಹಿಳಾ ಪ್ರಧಾನ ಕಥೆಯನ್ನೊಳಗೊಂಡ ಚಿತ್ರವಾಗಿದ್ದು, ಒಬ್ಬ ಯುವತಿಯ ಸುತ್ತ ಸುತ್ತುತ್ತದೆ. ಆಕೆ ತನ್ನ ನೆಲ ಮತ್ತು ಜನರ ಅಸಿತ್ವವನ್ನು ರಕ್ಷಿಸುವ ನಿಟ್ಟಿನಲ್ಲಿ ಏನೆಲ್ಲ ಸಾಹಸಗಳನ್ನು ಮಾಡುತ್ತಾಳೆ ಎಂಬುದನ್ನು ಈ ಕಥೆಯಲ್ಲಿ ಹಾಸ್ಯಮಯವಾಗಿ ಚಿತ್ರಿಸಲಾಗಿದೆʼʼಎಂದು ಚಿತ್ರತಂಡ ಈ ಹಿಂದೆ ಹೇಳಿಕೊಂಡಿತ್ತು.

VISTARANEWS.COM


on

Raghu Thatha Hombale Films Realease date announced
Koo

ಬೆಂಗಳೂರು: ʼಕೆಜಿಎಫ್‌ʼ ಸರಣಿ, ʼಕಾಂತಾರʼ, ʼಸಲಾರ್‌ʼ ಮುಂತಾದ ಚಿತ್ರಗಳನ್ನು ನಿರ್ಮಿಸಿ ದೇಶಾದ್ಯಂತ ಸಂಚಲನ ಸೃಷಿಸಿದ ಕನ್ನಡದ ಹೊಂಬಾಳೆ ಫಿಲ್ಮ್ಸ್‌ನ (Hombale Films) ಮೊದಲ ತಮಿಳು ಸಿನಿಮಾ ‘ರಘು ತಾತಾ’ (Raghu Thatha). ಇದುವರೆಗೂ ಕನ್ನಡ, ತೆಲುಗು ಮತ್ತು ಮಲಯಾಳಂ ಚಿತ್ರಗಳನ್ನು ನಿರ್ಮಿಸಿದ್ದ ಹೊಂಬಾಳೆ ಫಿಲ್ಮ್ಸ್‌ ನ ಮೊದಲ ಈ ತಮಿಳು ಸಿನಿಮಾದಲ್ಲಿ ಬಹುಭಾಷಾ ನಟಿ, ಪ್ರತಿಭಾವಂತ ಕಲಾವಿದೆ ಕೀರ್ತಿ ಸುರೇಶ್‌ (Keerthy Suresh) ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಇದೀಗ ಚಿತ್ರದ ರಿಲೀಸ್‌ ಡೇಟ್‌ ಅನೌನ್ಸ್‌ ಆಗಿದೆ.

ಈ ಹಿಂದೆ, ‘ದಿ ಫ್ಯಾಮಿಲಿ ಮ್ಯಾನ್’ ವೆಬ್ ಸೀರೀಸ್ ಜತೆಗೆ ಕೆಲವು ಚಿತ್ರಗಳಿಗೆ ಕಥೆ-ಚಿತ್ರಕಥೆ ರಚಿಸಿದ್ದ ಸುಮನ್ ಕುಮಾರ್ ಈ ಚಿತ್ರವನ್ನು ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿದ್ದಾರೆ. ʼʼರಘುತಾತಾ’ ಮಹಿಳಾ ಪ್ರಧಾನ ಕಥೆಯನ್ನೊಳಗೊಂಡ ಚಿತ್ರವಾಗಿದ್ದು, ಒಬ್ಬ ಯುವತಿಯ ಸುತ್ತ ಸುತ್ತುತ್ತದೆ. ಆಕೆ ತನ್ನ ನೆಲ ಮತ್ತು ಜನರ ಅಸಿತ್ವವನ್ನು ರಕ್ಷಿಸುವ ನಿಟ್ಟಿನಲ್ಲಿ ಏನೆಲ್ಲ ಸಾಹಸಗಳನ್ನು ಮಾಡುತ್ತಾಳೆ ಎಂಬುದನ್ನು ಈ ಕಥೆಯಲ್ಲಿ ಹಾಸ್ಯಮಯವಾಗಿ ಚಿತ್ರಿಸಲಾಗಿದೆʼʼ ಎಂದು ಚಿತ್ರತಂಡ ಈ ಹಿಂದೆ ಹೇಳಿಕೊಂಡಿತ್ತು. ಈ ಸಿನಿಮಾ ಅಗಸ್ಟ್‌ 15ರಂದು ತೆರೆಗೆ ಅಪ್ಪಳಿಸಲಿದೆ.

ಇದನ್ನೂ ಓದಿ: Physical Abuse : ಸಂಜೆಯಾದರೆ ರೂಮಿಗೆ ಬಾ ಅಂತಾರೆ! ಕೇಂದ್ರೀಯ ವಿವಿಯ ವಿದ್ಯಾರ್ಥಿನಿಗೆ ಪಿಎಚ್‌ಡಿ ಗೈಡ್ ಮಾನಸಿಕ ಕಿರುಕುಳ

ಗಮನ ಸೆಳೆದ ಕೀರ್ತಿ ಸುರೇಶ್‌

ಈ ಮುಂಚೆ ಬಿಡುಗಡೆಯಾದ ಒಂದು ನಿಮಿಷದ ಟೀಸರ್‌ನಲ್ಲಿ, ತಮಿಳುನಾಡಿನಲ್ಲಿ ಹಿಂದಿ ಹೇರಿಕೆಯ ವಿರುದ್ಧ ಹೋರಾಡುವ ಯುವತಿಯಾಗಿ ಕೀರ್ತಿ ಸುರೇಶ್‌ ಮಿಂಚಿದ್ದರು. ಉದ್ಯೋಗ ಬಡ್ತಿಗಾಗಿ ಹಿಂದಿ ಪರೀಕ್ಷೆಯಲ್ಲಿ ಉತ್ತೀರ್ಣವಾಗಬೇಕು ಎನ್ನುವ ಷರತ್ತನ್ನು ಆಕೆ ವಿರೋಧಿಸುತ್ತಾಳೆ. ಅನೇಕ ಜನರನ್ನು ಸಂಘಟಿಸಿ ಬೀದಿಗಿಳಿದು ಹೋರಾಡುತ್ತಾಳೆ. ಸದ್ಯ ಇದಿಷ್ಟು ವಿಚಾರ ಟೀಸರ್‌ ಮೂಲಕ ಬಹಿರಂಗಗೊಂಡಿತ್ತು. ರೆಟ್ರೋ ಶೈಲಿಯಲ್ಲಿ ಚಿತ್ರ ಮೂಡಿ ಬಂದಿದೆ. ದಿಟ್ಟ ಯುವತಿ ಪಾತ್ರದಲ್ಲಿ ಕಂಡು ಬಂದಿರುವ ಕೀರ್ತಿ ಸುರೇಶ್‌ ಪಾತ್ರಕ್ಕೆ ಅಭಿಮಾನಿಗಳು ಮನ ಸೋತಿದ್ದರು.

ಎಂ.ಎಸ್. ಭಾಸ್ಕರ್, ದೇವದರ್ಶಿನಿ, ರವೀಂದ್ರ ವಿಜಯ್, ಆನಂದ್‌ಸಾಮಿ, ರಾಜೇಶ್ ಬಾಲಕೃಷ್ಣನ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಯಾಮಿನಿ ಯಜ್ನಮೂರ್ತಿ ಚಿತ್ರಕ್ಕೆ ಛಾಯಾಗ್ರಹಣ ಮಾಡುತ್ತಿದ್ದು, ʼಜೈ ಭೀಮ್ʼ ಖ್ಯಾತಿಯ ಸೀನ್ ರೋಲ್ಡನ್ ಸಂಗೀತ ಸಂಯೋಜಿಸುತ್ತಿದ್ದಾರೆ. 

ಪುಷ್ಪ ಸಿನಿಮಾಗೆ ಸೆಡ್ಡು ಹೊಡೆದ ಹೊಂಬಾಳೆ!

ಸದ್ಯ ದೇಶದ ಗಮನ ಸೆಳೆದಿರುವ ಚಿತ್ರಗಳ ಪೈಕಿ ಟಾಲಿವುಡ್‌ ಸ್ಟೈಲಿಶ್‌ ಸ್ಟಾರ್‌ ಅಲ್ಲು ಅರ್ಜುನ್‌-ರಶ್ಮಿಕಾ ಮಂದಣ್ಣ ಅಭಿನಯದ ʼಪುಷ್ಪ 2ʼ (Pushpa 2) ಕೂಡ ಒಂದು.ʼಪುಷ್ಪ 2ʼ ಸಿನಿಮಾ ಆಗಸ್ಟ್‌ 15ರಂದು ಬಿಡುಗಡೆಯಾಗಲಿದೆ. ಮೈತ್ರಿ ಮೂವೀ‌ ಮೇಕರ್ಸ್ ದುಬಾರಿ ಬಜೆಟ್‌ನಲ್ಲಿ ಚಿತ್ರ ನಿರ್ಮಿಸುತ್ತಿದೆ. ಈ ಸಿನಿಮಾದಲ್ಲಿ ಅಲ್ಲು ಅರ್ಜುನ್‌ ಜತೆಯಾಗಿ ಶ್ರೀವಲ್ಲಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಫಹದ್ ಫಾಸಿಲ್, ಡಾಲಿ ಧನಂಜಯ್, ಅನಸೂಯಾ ಭಾರದ್ವಾಜ್ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ಈ ವರ್ಷದ ಆರಂಭದಲ್ಲಿ ಅಲ್ಲು ಅರ್ಜುನ್ ಅವರ ಹುಟ್ಟುಹಬ್ಬದಂದು ʼಪುಷ್ಪ 2ʼ ತಯಾರಕರು ಚಿತ್ರದ ಟೀಸರ್ ಅನ್ನು ಬಿಡುಗಡೆ ಮಾಡಿದ್ದರು.

Continue Reading

ಕಾಲಿವುಡ್

Kamal Haasan: ‘ಇಂಡಿಯನ್-2’ ಸಿನಿಮಾದ ಎರಡನೇ ಹಾಡು ರಿಲೀಸ್!

Kamal Haasan: 1996ರಲ್ಲಿ ‘ಇಂಡಿಯನ್’ ಸಿನಿಮಾ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿತ್ತು. ಸೇನಾಪತಿ ಎಂಬ ಪಾತ್ರದಲ್ಲಿ ಕಮಲ್ ಹಾಸನ್ ಅವರು ಮಿಂಚಿದ್ದರು. ಅದರ ಮುಂದುವರಿದ ಭಾಗವಾಗಿ ‘ಇಂಡಿಯನ್ 2’ ಸಿನಿಮಾ ಮೂಡಿಬರುತ್ತಿದೆ. ಇದು ಪ್ಯಾನ್ ಇಂಡಿಯಾ ಸಿನಿಮಾ. ಕಮಲ್ ಹಾಸನ್ ಹಿರಿಯ ಸ್ವಾತಂತ್ರ್ಯ ಹೋರಾಟಗಾರನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

VISTARANEWS.COM


on

Kamal Haasan indian 2 second song out
Koo

ಬೆಂಗಳೂರು: ಕಾಲಿವುಡ್‌ ನಟ ಕಮಲ್ ಹಾಸನ್ (Kamal Haasan) ನಟನೆಯ ಬಹುನಿರೀಕ್ಷಿತ ಸಿನಿಮಾ ʻಇಂಡಿಯನ್ 2ʼ ಜುಲೈ 12ಕ್ಕೆ ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಈಗಾಗಲೇ ಟೀಸರ್ ಹಾಗೂ ಹಾಡಿನ ಮೂಲಕ ಪ್ರೇಕ್ಷಕರಲ್ಲಿ ಕುತೂಹಲ ಹುಟ್ಟಿಸಿರುವ ಈ ಚಿತ್ರದ ಎರಡನೇ ಹಾಡು ಅನಾವರಣಗೊಂಡಿದೆ. ಬೊಮ್ಮರಿಲ್ಲು ಸಿದ್ದಾರ್ಥ್ ಹಾಗೂ ರಕುಲ್ ಪ್ರೀತ್ ಸಿಂಗ್ ನಡುವಿನ ಪ್ರೇಮಗೀತೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ರಾಮ ಜೋಗಯ್ಯಶಾಸ್ತ್ರಿ ತೆಲುಗು ವರ್ಷನ್ ಹಾಡಿಗೆ ಸಾಹಿತ್ಯ ಬರೆದಿದ್ದು, ತಾಮರೈ ತಮಿಳು ವರ್ಷನ್ ಗೆ ಪದ ಗೀಚಿದ್ದಾರೆ. ಅನಿರುದ್ಧ ರವಿಚಂದರ್ ಹಾಡಿಗೆ ಸಂಗೀತ ನಿರ್ದೇಶನ ಮಾಡಿದ್ದಾರೆ.

1996ರಲ್ಲಿ ‘ಇಂಡಿಯನ್’ ಸಿನಿಮಾ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿತ್ತು. ಸೇನಾಪತಿ ಎಂಬ ಪಾತ್ರದಲ್ಲಿ ಕಮಲ್ ಹಾಸನ್ ಅವರು ಮಿಂಚಿದ್ದರು. ಅದರ ಮುಂದುವರಿದ ಭಾಗವಾಗಿ ‘ಇಂಡಿಯನ್ 2’ ಸಿನಿಮಾ ಮೂಡಿಬರುತ್ತಿದೆ. ಇದು ಪ್ಯಾನ್ ಇಂಡಿಯಾ ಸಿನಿಮಾ. ಕಮಲ್ ಹಾಸನ್ ಹಿರಿಯ ಸ್ವಾತಂತ್ರ್ಯ ಹೋರಾಟಗಾರನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆ ಈ ಸಿನಿಮಾದಲ್ಲಿದ್ದು, ಕಮಲ್ ಹಾಸನ್ ಮತ್ತದೇ ಅವತಾರದಲ್ಲಿ ನೋಡಬಹುದಾಗಿದೆ.

ಇದನ್ನೂ ಓದಿ: Kamal Haasan: ಕಮಲ್‌ ಹಾಸನ್‌ ಅಭಿನಯದ ‘ಇಂಡಿಯನ್ 2′  ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌!

ಕಮಲ್ ಹಾಸನ್ ಜತೆಯಲ್ಲಿ ಸಿದ್ದಾರ್ಥ್, ಎಸ್ ಜೆ ಸೂರ್ಯ, ಕಾಜಲ್ ಅಗರ್ವಾಲ್, ರಕುಲ್ ಪ್ರೀತ್ ಸಿಂಗ್, ಪ್ರಿಯಾ ಭವಾನಿ ಶಂಕರ್, ಕಾಳಿದಾಸ್ ಜಯರಾಂ, ಗುಲ್ಶನ್ ಗ್ರೋವರ್, ನೆಡುಮುಡಿ ವೇಣು, ವಿವೇಕ್, ಸಮುದ್ರಕಣಿ, ಬಾಬಿ ಸಿಂಹ, ಗುರು ಸೋಮಸುಂದರಂ, ದೆಹಲಿ ಗಣೇಶ್, ಜಯಪ್ರಕಾಶ್, ಮನೋಬಾಲಾ, ವೆನ್ನೆಲಾ ಕಿಶೋರ್, ಮತ್ತು ದೀಪಾ ಶಂಕರ್ ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: IPL 2024 : ಜಿಯೋಸಿನಿಮಾದಲ್ಲಿ ದಾಖಲೆಯ 62 ಕೋಟಿಗೂ ಅಧಿಕ ವೀಕ್ಷಣೆ ಕಂಡ ಐಪಿಎಲ್​

ಎಸ್. ಶಂಕರ್ ನಿರ್ದೇಶನದಲ್ಲಿ ‘ಇಂಡಿಯನ್ 2’ ಸಿನಿಮಾ ಮೂಡಿ ಬರುತ್ತಿದ್ದು, ಲೈಕಾ ಪ್ರೊಡಕ್ಷನ್ಸ್ ಮತ್ತು ಉದಯನಿಧಿ ಸ್ಟಾಲಿನ್ ಅವರ ರೆಡ್ ಜೈಂಟ್ ಮೂವೀಸ್ ಜಂಟಿಯಾಗಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಅನಿರುದ್ಧ್ ರವಿಚಂದರ್ ಅವರು ಈ ಸಿನಿಮಾಗೆ ಸಂಗೀತ ನೀಡಿದ್ದಾರೆ. ರವಿವರ್ಮನ್ ಹಾಗೂ ರತ್ನವೇಲು ಅವರು ಛಾಯಾಗ್ರಹಣ ಮಾಡಿದ್ದಾರೆ. ಎ. ಶ್ರೀಕರ್ ಪ್ರಸಾದ್ ಅವರು ಸಂಕಲನದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ.

Continue Reading

ಕಾಲಿವುಡ್

Actor Rajinikanth: ಈ ಬಾರಿಯೂ ಮೋದಿ ಗೆಲ್ಲಬಹುದಾ ಎಂಬ ಪ್ರಶ್ನೆಗೆ ರಜನಿಕಾಂತ್ ಕೊಟ್ಟ ಉತ್ತರ ಏನು?

Actor Rajinikanth ಇತ್ತೀಚೆಗೆ ರಜನಿಕಾಂತ್ ಅವರು ಅಬುಧಾಬಿಯ ಬಿಎಪಿಎಸ್ ಹಿಂದೂ ಮಂದಿರಕ್ಕೆ ಭೇಟಿ ನೀಡಿದ್ದರು. ಕೆಲವು ದಿನಗಳ ಹಿಂದೆ ಯುನೈಟೆಡ್ ಅರಬ್ ಎಮಿರೇಟ್ಸ್, ನಟ ರಜನಿಕಾಂತ್ ಅವರಿಗೆ ಗೋಲ್ಡನ್ ವೀಸಾ ನೀಡಿ ಗೌರವಿಸಿದೆ. ವೆಟ್ಟೈಯನ್ ಚಿತ್ರದ ಶೂಟಿಂಗ್ ಮುಗಿಸಿರು ರಜನಿಕಾಂತ್​ (Rajinikanth) ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ವಿಶ್ರಾಂತಿ ಪಡೆದಿದ್ದರು. ಅಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ರಜನಿಕಾಂತ್ ಭಾಗವಹಿಸಿದ್ದರು. ಗೋಲ್ಡನ್​ ವೀಸಾ ನೀಡಿದ ಅಬುಧಾಬಿ ಸರ್ಕಾರಕ್ಕೆ ನಟ ರಜನಿಕಾಂತ್​ ಧನ್ಯವಾದ ಕೂಡ ಹೇಳಿದ್ದಾರೆ.

VISTARANEWS.COM


on

Actor Rajinikanth response to political questions is unmissable
Koo

ಬೆಂಗಳೂರು: ಪ್ರತಿ ಚಿತ್ರ ಮುಗಿದ ನಂತರ, ರಜನಿಕಾಂತ್ (Actor Rajinikanth) ಹಿಮಾಲಯದ ಪ್ರವಾಸವನ್ನು ಕೈಗೊಳ್ಳುತ್ತಾರೆ. ನಟ ರಜನಿಕಾಂತ್‌ ಅವರು ಆಗಾಗ ಆಧ್ಯಾತ್ಮಿಕದ ಕಡೆಗೆ ಹೊರಳುವುದನ್ನು ನೋಡಿಯೇ ಇರುತ್ತೀರ. ಭಕ್ತಿ, ದೇವರ ವಿಚಾರದಲ್ಲಿ ಅವರು ಮನಸ್ಸು ಸದಾ ಜಾಗೃತವಾಗಿರುತ್ತದೆ. ಈಗಾಗಲೆ ಹಲವಾರು ಸಲ ಹಿಮಾಲಕ್ಕೆ ಹೋಗಿ ಬಂದಿದ್ದಾರೆ. ಈ ಆಧ್ಯಾತ್ಮಿಕ ಪ್ರವಾಸವನ್ನು ಕೈಗೊಳ್ಳುವ ಸಂಪ್ರದಾಯವನ್ನು ಬಹು ವರ್ಷಗಳಿಂದ ನಟ ಹೊಂದಿದ್ದಾರೆ. ಈ ಹಿಂದೆ ಹಿಮಾಲಯಕ್ಕೆ ಆಧ್ಯಾತ್ಮಿಕ ಪ್ರವಾಸಗಳನ್ನು ಮಾಡಿದ್ದ ರಜನಿಕಾಂತ್ ಈಗ ಮತ್ತಷ್ಟು ಪವಿತ್ರ ಸ್ಥಳಗಳಿಗೆ ಭೇಟಿ ನೀಡಲು ಯೋಜಿಸುತ್ತಿದ್ದಾರೆ. ಈ ವೇಳೆ ಲೋಕಸಭಾ ಚುನಾವಣಾ ಫಲಿತಾಂಶಗಳ ಬಗ್ಗೆ ನಟನಿಗೆ ಪ್ರಶ್ನೆ ಎದುರಾಗಿದೆ. ಈ ವೇಳೆ ರಜನಿ ʻʻಯಾವುದೇ ರೀತಿಯ ರಾಜಕೀಯ ಪ್ರಶ್ನೆಗಳನ್ನು ಕೇಳಬೇಡಿʼʼ ಎಂದು ನಗುತ್ತ ವಿನಂತಿಸಿದ್ದಾರೆ.

ಈ ಹಿಂದೆ ಹಿಮಾಲಯಕ್ಕೆ ಆಧ್ಯಾತ್ಮಿಕ ಪ್ರವಾಸಗಳನ್ನು ಮಾಡಿದ್ದ ರಜನಿಕಾಂತ್ ಈಗ ಮತ್ತಷ್ಟು ಪವಿತ್ರ ಸ್ಥಳಗಳಿಗೆ ಭೇಟಿ ನೀಡಲು ಯೋಜಿಸುತ್ತಿದ್ದಾರೆ. ಸೂಪರ್‌ಸ್ಟಾರ್ ಚೆನ್ನೈನಿಂದ ಹೊರಟು ಉತ್ತರಾಖಂಡದ ಡೆಹ್ರಾಡೂನ್‌ಗೆ ಆಗಮಿಸಿ ತಮ್ಮ ಪ್ರಯಾಣವನ್ನು ಪ್ರಾರಂಭಿಸಿದರು. ಈ ವೇಳೆ ಮಾಧ್ಯಮಗಳು ಲೋಕಸಭಾ ಚುನಾವಣಾ ಫಲಿತಾಂಶಗಳ ಬಗ್ಗೆ ನಟನಿಗೆ ಪ್ರಶ್ನೆ ಕೇಳಿದ್ದಾರೆ. ಈ ವೇಳೆ ರಜನಿ ʻʻಯಾವುದೇ ರೀತಿಯ ರಾಜಕೀಯ ಪ್ರಶ್ನೆಗಳನ್ನು ಕೇಳಬೇಡಿ. “ಅಣ್ಣಾ…ನೋ ಕಮೆಂಟ್ಸ್ ಎಂದು ಅಲ್ಲಿಂದ ಮುಂದೆ ತೆರಳಿದ್ದಾರೆ.

ಇದನ್ನೂ ಓದಿ: Actor Rajinikanth: ಮೊಮ್ಮಗನ ಕ್ರಿಕೆಟ್‌ ಥೀಮ್‌ ಬರ್ತ್‌ಡೇ ಪಾರ್ಟಿಯಲ್ಲಿ ಭಾಗಿಯಾದ ತಲೈವಾ!

ಡೆಹ್ರಾಡೂನ್ ವಿಮಾನ ನಿಲ್ದಾಣದಲ್ಲಿ, ರಜನಿಕಾಂತ್ ತಮ್ಮ ಆಧ್ಯಾತ್ಮಿಕ ಪ್ರವಾಸಗಳ ಬಗ್ಗೆ ಮಾಧ್ಯಮದ ಜತೆ ಮಾತನಾಡಿದರು. “ಪ್ರತಿ ವರ್ಷ ನಾನು ಹೊಸ ಅನುಭವವನ್ನು ಪಡೆಯುತ್ತಿದ್ದೆ, ಅದು ನನ್ನ ಆಧ್ಯಾತ್ಮಿಕ ಪ್ರಯಾಣವನ್ನು ಮತ್ತೆ ಮತ್ತೆ ಮುಂದುವರಿಸುವಂತೆ ಮಾಡಿತು. ಈ ಬಾರಿಯೂ ನಾನು ಹೊಸ ಅನುಭವಗಳನ್ನು ಪಡೆಯುತ್ತೇನೆ ಎಂದು ನಾನು ನಂಬುತ್ತೇನೆ” ಎಂದು ಅವರು ಹೇಳಿದರು.

ರಜನಿಕಾಂತ್ ಅವರು ಆಧ್ಯಾತ್ಮಿಕತೆ ಏಕೆ ಮುಖ್ಯ ಎಂಬುದರ ಕುರಿತು ಮಾತನಾಡಿದರು. “ಇಡೀ ಜಗತ್ತಿಗೆ ಆಧ್ಯಾತ್ಮಿಕತೆಯ ಅಗತ್ಯವಿದೆ, ಏಕೆಂದರೆ ಅದು ಪ್ರತಿಯೊಬ್ಬ ಮನುಷ್ಯನಿಗೂ ಮುಖ್ಯವಾಗಿದೆ. ಆಧ್ಯಾತ್ಮಿಕವಾಗಿರುವುದು ಎಂದರೆ ಶಾಂತಿ ಮತ್ತು ನೆಮ್ಮದಿಯನ್ನು ಅನುಭವಿಸುವುದು ಮತ್ತು ಮೂಲಭೂತವಾಗಿ ಇದು ದೇವರಲ್ಲಿ ನಂಬಿಕೆಯನ್ನು ಒಳಗೊಂಡಿರುತ್ತದೆʼʼಎಂದರು.

ಇತ್ತೀಚೆಗೆ ರಜನಿಕಾಂತ್ ಅವರು ಅಬುಧಾಬಿಯ ಬಿಎಪಿಎಸ್ ಹಿಂದೂ ಮಂದಿರಕ್ಕೆ ಭೇಟಿ ನೀಡಿದ್ದರು. ಕೆಲವು ದಿನಗಳ ಹಿಂದೆ ಯುನೈಟೆಡ್ ಅರಬ್ ಎಮಿರೇಟ್ಸ್, ನಟ ರಜನಿಕಾಂತ್ ಅವರಿಗೆ ಗೋಲ್ಡನ್ ವೀಸಾ ನೀಡಿ ಗೌರವಿಸಿದೆ. ವೆಟ್ಟೈಯನ್ ಚಿತ್ರದ ಶೂಟಿಂಗ್ ಮುಗಿಸಿರು ರಜನಿಕಾಂತ್​ (Rajinikanth) ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ವಿಶ್ರಾಂತಿ ಪಡೆದಿದ್ದರು. ಅಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ರಜನಿಕಾಂತ್ ಭಾಗವಹಿಸಿದ್ದರು. ಗೋಲ್ಡನ್​ ವೀಸಾ ನೀಡಿದ ಅಬುಧಾಬಿ ಸರ್ಕಾರಕ್ಕೆ ನಟ ರಜನಿಕಾಂತ್​ ಧನ್ಯವಾದ ಕೂಡ ಹೇಳಿದ್ದಾರೆ.

ಸಿನಿಮಾ ವಿಚಾರಕ್ಕೆ ಬಂದರೆ ರಜನಿಕಾಂತ್ ಅವರು ಟಿಜೆ ಜ್ಞಾನವೇಲ್ ನಿರ್ದೇಶನದ ʻವೆಟ್ಟೈಯಾನ್ʼ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ. ವೆಟ್ಟೈಯನ್ ಚಿತ್ರದಲ್ಲಿ ಅಮಿತಾಭ್‌ ಬಚ್ಚನ್ ಕೂಡ ನಟಿಸಿದ್ದಾರೆ.

ರಜನಿಕಾಂತ್ ಅವರ 170ನೇ ಚಿತ್ರವಾಗಿರುವ ವೆಟ್ಟೈಯಾನ್ ಈ ವರ್ಷದ ಅಕ್ಟೋಬರ್‌ನಲ್ಲಿ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಚಿತ್ರದಲ್ಲಿ ಫಹಾದ್ ಫಾಸಿಲ್, ರಾಣಾ ದಗ್ಗುಬಾಟಿ, ರಿತಿಕಾ ಸಿಂಗ್, ಮಂಜು ವಾರಿಯರ್ ಮತ್ತು ದುಶಾರಾ ವಿಜಯನ್ ಸೇರಿದಂತೆ ಸಮಗ್ರ ತಾರಾಗಣವಿದೆ. ಅನಿರುದ್ಧ್ ರವಿಚಂದರ್ ಚಿತ್ರಕ್ಕೆ ಸಂಗೀತ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ವೆಟ್ಟೈಯಾನ್ ಸಿನಿಮಾಗೆ ರಾಕ್ ಸ್ಟಾರ್ ಖ್ಯಾತಿಯ ಅನಿರುದ್ಧ್ ರವಿಚಂದರ್ ಸಂಗೀತ, ಎಸ್.ಆರ್. ಕಥಿರ್ ಛಾಯಾಗ್ರಹಣ ಮತ್ತು ಫಿಲೋಮಿನ್ ರಾಜ್ ಸಂಕಲನವಿರಲಿದೆ. ತಿರುವನಂತಪುರಂ, ತಿರುನೆಲ್ವೇಲಿ, ಚೆನ್ನೈ, ಮುಂಬೈ, ಆಂಧ್ರಪ್ರದೇಶ ಮತ್ತು ಹೈದರಾಬಾದ್‌ನಲ್ಲಿ ಚಿತ್ರದ ಚಿತ್ರೀಕರಣ‌ ನಡೆಸಲಾಗಿದೆ.

Continue Reading

ಕಾಲಿವುಡ್

Surya Prakash: ʻಮಾಯಿʼ ಸಿನಿಮಾ ಖ್ಯಾತಿಯ ತಮಿಳು ನಿರ್ದೇಶಕ ಸೂರ್ಯ ಪ್ರಕಾಶ್ ಇನ್ನಿಲ್ಲ

Surya Prakash: ‘ಮಾಯಿ’, ‘ಮಾಣಿಕ್ಕಂ’ ಮತ್ತು ‘ದಿವಾನ್’ ಚಿತ್ರಗಳಿಗೆ ಹೆಚ್ಚು ಹೆಸರುವಾಸಿಯಾಗಿದ್ದರು. ಅವರಿಗೆ 56 ವರ್ಷ ವಯಸ್ಸಾಗಿತ್ತು. ಸೂರ್ಯ ಪ್ರಕಾಶ್ (‘Maayi’ director) ಅವರ ಅಂತಿಮ ವಿಧಿವಿಧಾನಗಳ ಕುರಿತು ಕುಟುಂಬ ಮಾಹಿತಿ ಹಂಚಿಕೊಂಡಿಲ್ಲ.

VISTARANEWS.COM


on

Surya Prakash Maayi director dies
Koo

ಬೆಂಗಳೂರು: ತಮಿಳು ನಿರ್ದೇಶಕ ಸೂರ್ಯ ಪ್ರಕಾಶ್ (Surya Prakash) ಸೋಮವಾರ (ಮೇ 27) ಹೃದಯಾಘಾತದಿಂದ ನಿಧನರಾದರು. ‘ಮಾಯಿ’, ‘ಮಾಣಿಕ್ಕಂ’ ಮತ್ತು ‘ದಿವಾನ್’ ಚಿತ್ರಗಳಿಗೆ ಹೆಚ್ಚು ಹೆಸರುವಾಸಿಯಾಗಿದ್ದರು. ಅವರಿಗೆ 56 ವರ್ಷ ವಯಸ್ಸಾಗಿತ್ತು. ಸೂರ್ಯ ಪ್ರಕಾಶ್ (‘Maayi’ director) ಅವರ ಅಂತಿಮ ವಿಧಿವಿಧಾನಗಳ ಕುರಿತು ಕುಟುಂಬ ಮಾಹಿತಿ ಹಂಚಿಕೊಂಡಿಲ್ಲ.

ನಟ ಶರತ್‌ಕುಮಾರ್ ಮತ್ತು ರಾಧಿಕಾ ಶರತ್‌ಕುಮಾರ್ ತಮ್ಮ ಸಾಮಾಜಿಕ ಜಾಲತಾಣ ಮೂಲಕ ಸಂತಾಪ ಸೂಚಿಸಿದ್ದಾರೆ. “ಮಾಯಿ ಮತ್ತು ದಿವಾನ್ ಚಿತ್ರಗಳನ್ನು ನಿರ್ದೇಶಿಸಿದ ನನ್ನ ಆತ್ಮೀಯ ಸ್ನೇಹಿತ ಸೂರ್ಯ ಪ್ರಕಾಶ್ ಅವರ ನಿಧನದ ಸುದ್ದಿ ಕೇಳಿ ಆಘಾತ ಮತ್ತು ನೋವಾಯ್ತು. ನಿನ್ನೆಯಷ್ಟೇ ಅವರ ಜತೆ ಮಾತನಾಡಿದ್ದೆ. ಅವರ ಹಠಾತ್ ನಿಧನ ತುಂಬ ದುಃಖ ಉಂಟುಮಾಡಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆʼʼಎಂದು ನಟ ಶರತ್‌ಕುಮಾರ್ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ರಾಧಿಕಾ ಶರತ್‌ಕುಮಾರ್ “ಅದ್ಭುತ ಮತ್ತು ಪ್ರತಿಭಾವಂತ ವ್ಯಕ್ತಿ, ಉತ್ತಮ ಬರಹಗಾರ, ಹಾಸ್ಯದ ಅಭಿರುಚಿಯುಳ್ಳ ನಿರ್ದೇಶಕ, ನಟ ಶರತ್‌ಕುಮಾರ್ ಅವರ ಆತ್ಮೀಯ ಸ್ನೇಹಿತ. ಅವರ ಕುಟುಂಬ ಮತ್ತು ಸಿನಿಮಾ ಉದ್ಯಮಕ್ಕೆ ದೊಡ್ಡ ನಷ್ಟʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Dhadak 2: ‘ಧಡಕ್ 2’ ಸಿನಿಮಾ ಅನೌನ್ಸ್‌ ಮಾಡಿದ ಕರಣ್‌ ಜೋಹರ್: ʻಅನಿಮಲ್‌ʼ ನಟಿ ನಾಯಕಿ!

ಸೂರ್ಯ ಪ್ರಕಾಶ್ ಅವರು ರಾಜ್‌ಕಿರಣ್‌ ಅವರ ‘ಮಾಣಿಕ್ಕಂ’ ಚಿತ್ರದ ಮೂಲಕ ನಿರ್ದೇಶಕರಾಗಿ ಪದಾರ್ಪಣೆ ಮಾಡಿದರು. ನಂತರ ಅವರು ಶರತ್‌ಕುಮಾರ್ ಮತ್ತು ಮೀನಾಅವರಿಗೆ ‘ಮಾಯಿ’ ಸಿನಿಮಾಗಾಗಿ ನಿರ್ದೇಶನ ಮಾಡಿದರು. ಇದು ಸಕಾರಾತ್ಮಕ ವಿಮರ್ಶೆಗಳನ್ನು ಪಡೆಯಿತು. ತೆಲುಗಿನಲ್ಲಿ ‘ಸಿಂಹರಸಿ’ ಮತ್ತು ಕನ್ನಡದಲ್ಲಿ ‘ನರಸಿಂಹ’ ಎಂದು ಸಿನಿಮಾ ರಿಮೇಕ್ ಆಗಿತ್ತು.

ರಾಜಶೇಖರ್ ಅಭಿನಯದ ‘ಭರತಸಿಂಹ ರೆಡ್ಡಿ’ ಚಿತ್ರದ ಮೂಲಕ ಟಾಲಿವುಡ್‌ಗೂ ಎಂಟ್ರಿ ಕೊಟ್ಟಿದ್ದರು. ಶರತ್‌ಕುಮಾರ್ ಅವರ ‘ದಿವಾನ್’ ಮತ್ತು ಜೀವನ್ ಅವರ ‘ಅಧಿಬರ್’ ಮೂಲಕ ತಮಿಳಿಗೆ ಮತ್ತೆ ಕಮ್‌ಬ್ಯಾಕ್‌ ಆಗಿದ್ದರು.

Continue Reading
Advertisement
OpenAI
Lok Sabha Election 20241 min ago

OpenAI: ಇಸ್ರೇಲ್‌ನ ಸಂಸ್ಥೆಯಿಂದ ಬಿಜೆಪಿ ವಿರುದ್ಧ ಪ್ರಚಾರ; ಶಾಕಿಂಗ್‌ ಮಾಹಿತಿ ಹಂಚಿಕೊಂಡ ಓಪನ್ಎಐ

Murder Case in Mysuru
ಕ್ರೈಂ2 mins ago

Murder case : ಜಸ್ಟ್‌ ಗುರಾಯಿಸಿದ್ದಕ್ಕೆ ಯುವಕನ ಬರ್ಬರ ಹತ್ಯೆ; ಸಾವಿನ ಕೊನೆ ಕ್ಷಣ ಸೆರೆ

Ambati Rayudu
ಕ್ರೀಡೆ3 mins ago

Ambati Rayudu: ಸ್ಟಾಂಡರ್ಡ್​ ಕಮ್ಮಿ ಮಾಡಿದರೆ ಉತ್ತಮ ಎಂದು ಕೊಹ್ಲಿಯ ಕಾಲೆಳೆದ ರಾಯುಡು

cm Siddaramaiah And DK Shivakumar
ಪ್ರಮುಖ ಸುದ್ದಿ7 mins ago

CM Siddaramaiah: ಸಿಎಂ, ಡಿಸಿಎಂ ಕೂಡ ಇಂದು ಕೋರ್ಟ್‌ ಕಟಕಟೆಯಲ್ಲಿ! ಏನಿದು ಕೇಸ್?‌

Cannes Film Festival Ukrainian model Sawa Pontyjska assault by security guard
ಸಿನಿಮಾ9 mins ago

Cannes Film Festival:  ಮಾಡೆಲ್‌ನನ್ನು ಒರಟಾಗಿ ಹೊರ ದಬ್ಬಿದ ಕಾನ್‌ ಚಲನಚಿತ್ರೋತ್ಸವ ಸಂಘಟಕರು; ವಿಡಿಯೊ ವೈರಲ್‌!

shatru bhairavi yaga
ಪ್ರಮುಖ ಸುದ್ದಿ46 mins ago

Shatru Bhairavi Yaga: ಶತ್ರು ಭೈರವಿ ಯಾಗ ನಡೆದಿಲ್ಲ, ಪ್ರಾಣಿಬಲಿಯೂ ಇಲ್ಲ: ಕೇರಳ ಸರಕಾರದಿಂದಲೇ ತನಿಖೆ, ಸ್ಪಷ್ಟನೆ

Bigg Boss OTT 3 Anil Kapoor Replaces Salman Khan As Host
ಒಟಿಟಿ51 mins ago

Bigg Boss OTT 3: ಶುರುವಾಗಲಿದೆ ಬಿಗ್​ ಬಾಸ್​ ಒಟಿಟಿ 3: ನಿರೂಪಣೆಗೆ ಸಲ್ಮಾನ್​ ಖಾನ್​ ಬದಲು ಅನಿಲ್​ ಕಪೂರ್!

Lok Sabha Election
Lok Sabha Election 202457 mins ago

Lok Sabha Election: ವಾರಾಣಸಿಯಲ್ಲಿ ಮೋದಿ ವಿರುದ್ಧ ಕಣಕ್ಕಿಳಿದಿರುವ 6 ಅಭ್ಯರ್ಥಿಗಳ ಸಾಮರ್ಥ್ಯ ಎಷ್ಟಿದೆ?

IND vs PAK
ಕ್ರೀಡೆ1 hour ago

IND vs PAK T20 World Cup: ಪಾಕಿಸ್ತಾನ​ ವಿರುದ್ಧ ಭಾರತಕ್ಕೆ ಗೆಲುವು ಖಚಿತ ಎಂದ ಪಾಕ್​ ಆಟಗಾರ

Lok Sabha Election 2024 Mithun Chakraborty casting his vote
ಬಾಲಿವುಡ್1 hour ago

Lok Sabha Election 2024: ಕೊನೇ ಹಂತದ ಮತದಾನ; ವೋಟ್‌ ಮಾಡಿದ ನಟ ಮಿಥುನ್ ಚಕ್ರವರ್ತಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 weeks ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌