Vijay Sethupathi: ವಿಜಯ್​ ಸೇತುಪತಿ ನಟನೆಯ’ʻವಿಡುತಲೈ 2ʼ ಫಸ್ಟ್‌ ಲುಕ್‌ ಔಟ್‌! - Vistara News

ಕಾಲಿವುಡ್

Vijay Sethupathi: ವಿಜಯ್​ ಸೇತುಪತಿ ನಟನೆಯ’ʻವಿಡುತಲೈ 2ʼ ಫಸ್ಟ್‌ ಲುಕ್‌ ಔಟ್‌!

vijay sethupathi: ಆರ್‌ಎಸ್ ಇನ್‌ಫರ್‌ಟೈನ್‌ಮೆಂಟ್ ಪ್ರೈ. ಲಿಮಿಟೆಡ್ ಬ್ಯಾನರ್‌ದಲ್ಲಿ ಸಿದ್ದಗೊಳ್ಳುತ್ತಿರುವ ಸಿನಿಮಾದ ಫಸ್ಟ್ ಲುಕ್ ಯಾವ ರೀತಿ ಇರಬಹುದೆಂಬ ಕುತೂಹಲ ಎಲ್ಲರಿಗೂ ಕಾಡುತ್ತಿದೆ. ಮಿಕ್ಕಂತೆ ವಿವರಗಳನ್ನು ಮುಂದಿನ ದಿನಗಳಲ್ಲಿ ತಿಳಿಸುವುದಾಗಿ ತಂಡವು ಹೇಳಿಕೊಂಡಿದೆ.

VISTARANEWS.COM


on

Vijay Sethupathi 'Viduthalai 2' first look out now
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಳೆದ ವರ್ಷ ಬಿಡುಗಡೆಗೊಂಡಿದ್ದ ’ʻವಿಡುತಲೈʼ ’ ಚಿತ್ರವು ಯಶಸ್ಸು ಕಂಡು ಕಲಾವಿದರು ಸೇರಿದಂತೆ ತಂತ್ರಜ್ಞರುಗಳಿಗೆ ಅವಕಾಶಗಳು ಒಲಿದು ಬಂದವು. ಇದರಿಂದ ಸ್ಪೂರ್ತಿಗೊಂಡ ನಿರ್ದೇಶಕ ವೆಟ್ರಿ ಮಾರನ್ ಮತ್ತು ನಿರ್ಮಾಪಕ ಎಲ್ರಡ್ ಕುಮಾರ್ ಭಾಗ-2 ಬರುವುದಾಗಿ (Vijay Sethupathi) ಘೋಷಣೆ ಮಾಡಿದ್ದರು. ಬಹುತೇಕ ಹಿಂದಿನ ಚಿತ್ರದಲ್ಲಿ ಕೆಲಸ ಮಾಡಿದವರು ಇದರಲ್ಲೂ ಮುಂದುವರೆದಿದ್ದಾರೆ. ಪ್ರಚಾರದ ಮೊದಲ ಹಂತವಾಗಿ ಸಿನಿಮಾದ ಫಸ್ಟ್ ಲುಕ್‌ನ ಎರಡು ಪೋಸ್ಟರ್‌ನ್ನು ಅನಾವರಣಗೊಳಿಸಲಿದ್ದಾರೆ. ಎರಡು ಲುಕ್‌ಗಳಲ್ಲಿ ವಿಜಯ್ ಸೇತುಪತಿ ಕಾಣಿಸಿಕೊಂಡಿದ್ದಾರೆ.

ತಾರಾಗಣದಲ್ಲಿ ವಿಜಯ್ ಸೇತುಪತಿ, ಸೂರಿ, ಮಂಜುವಾರಿಯರ್, ಅನುರಾಗ್ ಕಶ್ಯಪ್, ಕಿಶೋರ್, ಗೌತಂ ವಾಸುದೇವ್‌ಮೆನನ್, ರಾಜೀವ್ ಮೆನನ್, ಚೇತನ್ ಮುಂತಾದವರು ನಟಿಸಿದ್ದಾರೆ. ಸಂಗೀತ ಇಳಯರಾಜ, ಛಾಯಾಗ್ರಹಣ ಆರ್.ವೆಲ್ವರಾಜ್, ಕಲೆ ಜಾಕಿ, ಸಂಕಲನ ರಮರ್, ವಸ್ರ್ತಾಂಲಕಾರ ಉತ್ತರ ಮೆನನ್, ಸಾಹಸ ಪೀಟರ್ ಹೈನ್-ಸ್ವಂಟ್ ಶಿವ, ವಿಎಫ್‌ಎಕ್ಸ್ ಆರ್.ಹರಿಹರಸುಧನ್ ಅವರದಾಗಿದೆ.

ಆರ್‌ಎಸ್ ಇನ್‌ಫರ್‌ಟೈನ್‌ಮೆಂಟ್ ಪ್ರೈ. ಲಿಮಿಟೆಡ್ ಬ್ಯಾನರ್‌ದಲ್ಲಿ ಸಿದ್ದಗೊಳ್ಳುತ್ತಿರುವ ಸಿನಿಮಾದ ಫಸ್ಟ್ ಲುಕ್ ಯಾವ ರೀತಿ ಇರಬಹುದೆಂಬ ಕುತೂಹಲ ಎಲ್ಲರಿಗೂ ಕಾಡುತ್ತಿದೆ. ಮಿಕ್ಕಂತೆ ವಿವರಗಳನ್ನು ಮುಂದಿನ ದಿನಗಳಲ್ಲಿ ತಿಳಿಸುವುದಾಗಿ ತಂಡವು ಹೇಳಿಕೊಂಡಿದೆ.

ಇದನ್ನೂ ಓದಿ: Actor  Karthi: ನಟ ಕಾರ್ತಿ ಸಿನಿಮಾ ಸೆಟ್‌ನಲ್ಲಿ ಅವಘಡ; 20 ಅಡಿಯಿಂದ ಬಿದ್ದು ಸ್ಟಂಟ್‌ ಮ್ಯಾನ್‌ ಸಾವು

ಈ ಚಿತ್ರಕ್ಕೆ ಎಲ್‌ರೆಡ್‌ ಕುಮಾರ್‌ ಬಂಡವಾಳ ಹೂಡಿದ್ದಾರೆ. ಜಿಯಾ ಮೆನನ್‌ ಬರೆದ ʻತುನೈವನ್‌ʼ ಸಣ್ಣ ಕಥೆ ಆಧರಿಸಿ ಸಿನಿಮಾ ಕಟ್ಟಿಕೊಡಲಾಗಿದೆ.

ದೊಡ್ಡ ಬಜೆಟ್‌ ಸಿನಿಮಾ ʻವಿಡುತಲೈʼ!
ಎರಡು ಭಾಗಗಳಲ್ಲಿ ಬಿಡುಗಡೆಯಾಗುವ ಈ ಚಿತ್ರ ದೊಡ್ಡ ಬಜೆಟ್​ನಲ್ಲಿ ನಿರ್ಮಾಣವಾಗಿದೆ. ತಮಿಳಿನ ದುಬಾರಿ ಚಿತ್ರಗಳ ಪೈಕಿಗೆ ‘ವಿಡುತಲೈ’ ಸೇರ್ಪಡೆಯಾಗಲಿದೆ. ಈ ಚಿತ್ರವನ್ನು ಕೋಟ್ಯಂತರ ವೆಚ್ಚದಲ್ಲಿ ಅದ್ಧೂರಿಯಾಗಿ ನಿರ್ಮಿಸಲಾಗಿದ್ದು, ಚಿತ್ರಕ್ಕಾಗಿ ವಿಶೇಷವಾಗಿ 10 ಕೋಟಿ ರೂ. ವೆಚ್ಚದ ರೈಲು ಮತ್ತು ರೈಲ್ವೇ ಸೇತುವೆಯ ಸೆಟ್​ ನಿರ್ಮಾಣ ಮಾಡಲಾಗಿತ್ತು. ನಿಜವಾದ ರೈಲ್ವೆ ಬೋಗಿಗಳು ಮತ್ತು ಸೇತುವೆಯನ್ನು ನಿರ್ಮಿಸುವುದಕ್ಕೆ ಬಳಸಲಾಗುವ ಪರಿಕರಗಳನ್ನೇ ಈ ಸೆಟ್​ ನಿರ್ಮಾಣಕ್ಕೂ ಬಳಸಲಾಗಿದೆ ಎನ್ನಲಾಗಿತ್ತು.

ಸಾವಿರಕ್ಕೂ ಹೆಚ್ಚು ಚಿತ್ರಗಳಿಗೆ ಸಂಗೀತ ಸಂಯೋಜಿಸಿರುವ ಇಳಯರಾಜ ಅವರು ಈ ಚಿತ್ರದ ಸಂಗೀತದ ಜವಾಬ್ದಾರಿ ಹೊತ್ತಿದ್ದಾರೆ. ವೇಲ್​ರಾಜ್​ ಛಾಯಾಗ್ರಹಣ ಮಾಡುತ್ತಿದ್ದಾರೆ. ಈ ಚಿತ್ರದ ವಿತರಣೆಯ ಜವಾಬ್ದಾರಿಯನ್ನು ರೆಡ್​ ಜೈಂಟ್​ ಮೂವೀಸ್​ ವಹಿಸಿಕೊಂಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಾಲಿವುಡ್

Actor  Karthi: ನಟ ಕಾರ್ತಿ ಸಿನಿಮಾ ಸೆಟ್‌ನಲ್ಲಿ ಅವಘಡ; 20 ಅಡಿಯಿಂದ ಬಿದ್ದು ಸ್ಟಂಟ್‌ ಮ್ಯಾನ್‌ ಸಾವು

Actor  Karthi: ಚೆನ್ನೈನ ಸಾಲಿಗ್ರಾಮದಲ್ಲಿರುವ ಎಲ್ ವಿ ಪ್ರಸಾದ್ ಸ್ಟುಡಿಯೋದಲ್ಲಿ ಚಿತ್ರದ ಶೂಟಿಂಗ್ ನಡೆಯುತ್ತಿತ್ತು. ಅಪಘಾತದ ಬಗ್ಗೆ ವಿರುಗಂಬಕ್ಕಂ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು, ತನಿಖೆ ನಡೆಯುತ್ತಿದೆ. ಎಲುಮಲೈ ಅವರಿಗೆ 54 ವರ್ಷ ವಯಸ್ಸಾಗಿತ್ತು.

VISTARANEWS.COM


on

Actor  Karthi Stuntman falls 20 ft to his death
Koo

ಬೆಂಗಳೂರು: ಪಿಎಸ್ ಮಿತ್ರನ್ ಅವರ ಕಾರ್ತಿ ಅಭಿನಯದ ಸರ್ದಾರ್ 2ರ ( Sardar 2) ಸೆಟ್‌ನಲ್ಲಿ ಸ್ಟಂಟ್‌ಮ್ಯಾನ್ ಮೃತಪಟ್ಟಿದ್ದಾರೆ. ಚಿತ್ರೀಕರಣದಲ್ಲಿ ಅವಘಡ ಸಂಭವಿಸಿ ಈ ದುರ್ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ. ಎಲುಮಲೈ (Elumalai ) ಎಂಬ ಸ್ಟಂಟ್‌ಮ್ಯಾನ್ ಆಕ್ಷನ್ ಸೀಕ್ವೆನ್ಸ್ ಚಿತ್ರೀಕರಣ ಮಾಡುವಾಗ ರೋಸ್ಟ್ರಮ್‌ನಿಂದ 20 ಅಡಿ ಕೆಳಗೆ ಬಿದ್ದಿದ್ದಾರೆ. ಕೂಡಲೇ ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಚೆನ್ನೈನ ಸಾಲಿಗ್ರಾಮದಲ್ಲಿರುವ ಎಲ್ ವಿ ಪ್ರಸಾದ್ ಸ್ಟುಡಿಯೋದಲ್ಲಿ ಚಿತ್ರದ ಶೂಟಿಂಗ್ ನಡೆಯುತ್ತಿತ್ತು. ಅಪಘಾತದ ಬಗ್ಗೆ ವಿರುಗಂಬಕ್ಕಂ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು, ತನಿಖೆ ನಡೆಯುತ್ತಿದೆ. ಎಲುಮಲೈ ಅವರಿಗೆ 54 ವರ್ಷ ವಯಸ್ಸಾಗಿತ್ತು. ಅವರು ಬಿದ್ದ ನಂತರ ಗಂಭೀರ ಗಾಯಗೊಂಡರು. ರಾತ್ರಿ 11:30ಕ್ಕೆ ರಕ್ತಸ್ರಾವದಿಂದ ಅವರು ನಿಧನರಾದರು. ಇದೀಗ ಸರ್ದಾರ್ 2 ಚಿತ್ರೀಕರಣ ಸ್ಥಗಿತಗೊಂಡಿದೆ.

ಸರ್ದಾರ್ 2ರ ಪ್ರೊಡಕ್ಷನ್ ಹೌಸ್ ಪ್ರಿನ್ಸ್ ಪಿಕ್ಚರ್ಸ್ ಈ ಸುದ್ದಿಯನ್ನು ಖಚಿತಪಡಿಸಿದೆ, “ನಮ್ಮ ಸರ್ದಾರ್ 2 ಚಿತ್ರದ ಸೆಟ್‌ಗಳಲ್ಲಿ ಸ್ಟಂಟ್ ರಿಗ್ ಮ್ಯಾನ್ ಆಗಿ ಕೆಲಸ ಮಾಡಿದ ಸ್ಟಂಟ್ ಯೂನಿಯನ್ ಸದಸ್ಯ ಎಲುಮಲೈ ಅವರ ಸಾವಿನ ಬಗ್ಗೆ ತಿಳಿಸಲು ವಿಷಾದಿಸುತ್ತೇವೆ. ಜುಲೈ 16 ರ ಮಂಗಳವಾರ ಸಂಜೆ, ಸ್ಟಂಟ್ ಸೀಕ್ವೆನ್ಸ್ ಚಿತ್ರೀಕರಣದ ನಂತರ, ಎಲುಮಲೈ ಅವರು 20 ಅಡಿ ಎತ್ತರದ ರೋಸ್ಟ್ರಮ್ನಿಂದ ಆಕಸ್ಮಿಕವಾಗಿ ಬಿದ್ದು ಗಾಯಗೊಂಡರು. ನರಬಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಕೂಡಲೇ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗಿಲ್ಲ. ರಾತ್ರಿ 11.30 ರ ಸುಮಾರಿಗೆ ನಿಧನರಾದರು. ನಮ್ಮ ಇಡೀ ತಂಡವು ಎಲುಮಲೈ ಅವರ ಕುಟುಂಬಕ್ಕೆ ಸಂತಾಪವನ್ನು ಸೂಚಿಸುತ್ತದೆ ಎಂದುʼʼಬರೆದುಕೊಂಡಿದೆ. ಕಾರ್ತಿ ಈ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ.

ಇದನ್ನೂ ಓದಿ: Kannada New Movie: ರಾಜವರ್ಧನ್ ‘ಹಿರಣ್ಯ’ ಸಿನಿಮಾದಲ್ಲಿ ಮೈ ಚಳಿ ಬಿಟ್ಟು ಡ್ಯಾನ್ಸ್‌ ಮಾಡಿದ ದಿವ್ಯಾ ಸುರೇಶ್!

ಜುಲೈ 12 ರಂದು ಮಿತ್ರನ್ ಮತ್ತು ಕಾರ್ತಿ ಈ ಸಿನಿಮಾ ಮುಹೂರ್ತ ನೆರವೇರಿಸಿದ್ದರು. ಕಾರ್ಯಕ್ರಮದಲ್ಲಿ ಕಾರ್ತಿ ಅವರ ತಂದೆ ನಟ ಶಿವಕುಮಾರ್ ಕೂಡ ಭಾಗವಹಿಸಿದ್ದರು. ಚಿತ್ರದ ಶೂಟಿಂಗ್ ಜುಲೈ 15 ರಂದು ಚೆನ್ನೈನಲ್ಲಿ ಪ್ರಾರಂಭವಾಯಿತು. ಈ ಚಿತ್ರವು ಮಿತ್ರನ್ ಮತ್ತು ಕಾರ್ತಿ ಅವರ 2022 ರ ಚಲನಚಿತ್ರ ಸರ್ದಾರ್‌ನ ಮುಂದುವರಿದ ಭಾಗವಾಗಿದೆ. ನಟನನ್ನು ದ್ವಿಪಾತ್ರಗಳಲ್ಲಿ ಕಂಡ ಸ್ಪೈ ಥ್ರಿಲ್ಲರ್ ಆಗಿದೆ.

Continue Reading

ಕಾಲಿವುಡ್

Kamal Haasan: ಇಂದೇ ಒಟಿಟಿಯಲ್ಲಿ ಸ್ಟ್ರೀಮಿಂಗ್‌ ಆಗುತ್ತಿದೆ ಕಮಲ್ ಹಾಸನ್ ನಟನೆಯ ʻಇಂಡಿಯನ್’ ಸಿನಿಮಾ?

Kamal Haasan: ಇಂಡಿಯನ್ 2ನ ಡಿಜಿಟಲ್ ಸ್ಟ್ರೀಮಿಂಗ್ ಹಕ್ಕುಗಳನ್ನು ನೆಟ್‌ಫ್ಲಿಕ್ಸ್ ಪಡೆದುಕೊಂಡಿದೆ. ಇದೀಗ ‘ಇಂಡಿಯನ್’-2ಗಿಂತ 28 ವರ್ಷಗಳ ಹಿಂದೆ ಬಂದಿದ್ದ ಪ್ರೀಕ್ವೆಲ್ ಸೂಪರ್ ಎನ್ನುತ್ತಿದ್ದಾರೆ. ‘ಇಂಡಿಯನ್’ ಸಿನಿಮಾ ನೋಡದವರು ನೋಡಲು ಬಯಸುತ್ತಿದ್ದಾರೆ. ಇಂಡಿಯನ್ 2 ಬಿಡುಗಡೆಯಾದ ಮೊದಲ ದಿನದಲ್ಲಿ ಭಾರತದಾದ್ಯಂತ 26 ಕೋಟಿ ರೂ. ಗಳಿಸಿದೆ. ಅದರಲ್ಲಿ 17 ಕೋಟಿ ರೂ. ತಮಿಳು ಆವೃತ್ತಿಯಿಂದ ಬಂದಿದೆ.

VISTARANEWS.COM


on

Kamal Haasan Indian cinema release OTT today
Koo

ಬೆಂಗಳೂರು: “ಇಂಡಿಯನ್ 2,” ಎಸ್. ಶಂಕರ್ ನಿರ್ದೇಶನದ ಸಿನಿಮಾ. ನಟ ಕಮಲ್ ಹಾಸನ್ ಅವರ ಇತ್ತೀಚಿನ ಚಿತ್ರ, ಇಂಡಿಯನ್‌ 2 (Indian 2 box office) ಅಂತಿಮವಾಗಿ ಶುಕ್ರವಾರ (ಜು. 12) ಭಾರತದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. ‘ಇಂಡಿಯನ್ 2’ ಸಿನಿಮಾ ಮೇಲೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಈ ನಿರೀಕ್ಷೆಗಳನ್ನು ಸಿನಿಮಾ ಹುಸಿ ಮಾಡಿದೆ. ವಿಮರ್ಶಕರು ಮತ್ತು ಪ್ರೇಕ್ಷಕರಿಂದ ನೆಗೆಟಿವ್‌ ಪ್ರತಿಕ್ರಿಯೆ ಪಡೆದುಕೊಂಡಿದೆ.  ಇಂಡಿಯನ್ 2ನ ಡಿಜಿಟಲ್ ಸ್ಟ್ರೀಮಿಂಗ್ ಹಕ್ಕುಗಳನ್ನು ನೆಟ್‌ಫ್ಲಿಕ್ಸ್ ಪಡೆದುಕೊಂಡಿದೆ. ಇದೀಗ ‘ಇಂಡಿಯನ್’-2ಗಿಂತ 28 ವರ್ಷಗಳ ಹಿಂದೆ ಬಂದಿದ್ದ ಪ್ರೀಕ್ವೆಲ್ ಸೂಪರ್ ಎನ್ನುತ್ತಿದ್ದಾರೆ. ‘ಇಂಡಿಯನ್’ ಸಿನಿಮಾ ನೋಡದವರು ನೋಡಲು ಬಯಸುತ್ತಿದ್ದಾರೆ. ಹಾಗಾಗಿ ನೆಟ್‌ಫ್ಲಿಕ್ಸ್‌ನಲ್ಲಿ ಸಿನಿಮಾ ಸ್ಟ್ರೀಮಿಂಗ್ ಆಗುತ್ತಿದೆ ಎಂದು ವರದಿಯಾಗಿದೆ.

ಕೆಲವರು ಇನ್ನು 10 ಬಾರಿ ‘ಇಂಡಿಯನ್’ ನೋಡಬಹುದು. ಸೀಕ್ವೆಲ್ ನೋಡಲು ಆಗುವುದಿಲ್ಲ ಎನ್ನುತ್ತಿದ್ದಾರೆ. ಇದೆಲ್ಲದರ ಮಧ್ಯೆ ಕೆಲವರು ‘ಇಂಡಿಯನ್’ ಸಿನಿಮಾ ನೋಡಬೇಕು ಎಂದು ಬಯಸುತ್ತಿದ್ದಾರೆ. ಹಾಗಾಗಿ ನೆಟ್‌ಫ್ಲಿಕ್ಸ್‌ನಲ್ಲಿ ಸಿನಿಮಾ ಸ್ಟ್ರೀಮಿಂಗ್ ಆಗುತ್ತಿದೆ. ಜುಲೈ 14ರಿಂದ ಅಂದರೆ ಇಂದು ರಾತ್ರಿಯಿಂದಲೇ ‘ಇಂಡಿಯನ್’ ಸಿನಿಮಾ ರಿಲೀಸ್ ಆಗಲಿದೆ. ರೀ ಮಾಸ್ಟರ್ಸ್‌ 4K ವರ್ಷನ್‌ ನೋಡಲು ಸಿಗಲಿದೆ ಎಂದು ವರದಿಯಾಗಿದೆ.

ಇನ್ನು ಕೆಲವೇ ದಿನಗಳಲ್ಲಿ ‘ಇಂಡಿಯನ್-2’ ನೆಟ್‌ಫ್ಲಿಕ್ಸ್‌ಗೆ ಬರಲಿದೆ. ಆಗಸ್ಟ್ 15ಕ್ಕೆ ಸ್ಟ್ರೀಮಿಂಗ್ ಆಗುವ ಸಾಧ್ಯತೆಯಿದೆ. “ಇಂಡಿಯನ್ 2” ನ ಸಮಗ್ರ ಪಾತ್ರವರ್ಗವು ಆಕರ್ಷಕವಾಗಿದೆ.

ಇದನ್ನೂ ಓದಿ: Shiva Rajkumar: ಶಿವರಾಜ್ ಕುಮಾರ್ ಜನುಮದಿನಕ್ಕೆ 131ನೇ ಸಿನಿಮಾದ ಮೊದಲ ಝಲಕ್ ರಿಲೀಸ್!

ಇಂಡಿಯನ್ 2 ಬಿಡುಗಡೆಯಾದ ಮೊದಲ ದಿನದಲ್ಲಿ ಭಾರತದಾದ್ಯಂತ 26 ಕೋಟಿ ರೂ. ಗಳಿಸಿದೆ. ಅದರಲ್ಲಿ 17 ಕೋಟಿ ರೂ. ತಮಿಳು ಆವೃತ್ತಿಯಿಂದ ಬಂದಿದೆ. 1.1 ಕೋಟಿ ರೂ. ಹಿಂದಿ ಆವೃತ್ತಿಯಿಂದ ಮತ್ತು 7.9 ಕೋಟಿ ರೂ. ತೆಲುಗು ಆವೃತ್ತಿಯಿಂದ ಬಂದಿದೆ.ಕೆಲವೊಮ್ಮೆ ಸಿನಿಮಾ ಉತ್ತಮವಾಗಿ ಇರದೇ ಇದ್ದರೂ ಹೀರೋಗಳ ಪಾತ್ರದಿಂದ ಸಿನಿಮಾ ಇಷ್ಟ ಆಗುತ್ತದೆ. ಆದರೆ, ‘ಇಂಡಿಯನ್ 2’ ಚಿತ್ರದಲ್ಲಿ ಕಮಲ್ ಹಾಸನ್ ವಿವಿಧ ಗೆಟಪ್​ನಲ್ಲಿ ಬರೋದಷ್ಟೇ ಹೊರತು ಮತ್ತಿನ್ನೇನೂ ಇಲ್ಲ ಎಂದು ಫ್ಯಾನ್ಸ್ ಮಾತನಾಡಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಊರ್ಮಿಳಾ ಮಾತೋಂಡ್ಕರ್ ಮತ್ತು ಮನೀಶಾ ಕೊಯಿರಾಲಾ ಕೂಡ ನಟಿಸಿದ್ದಾರೆ.

ಚಿತ್ರದಲ್ಲಿ ರಕುಲ್ ಪ್ರೀತ್ ಸಿಂಗ್, ಕಾಜಲ್ ಅಗರ್ವಾಲ್, ಎಸ್.ಜೆ.ಸೂರ್ಯ, ಪ್ರಿಯಾ ಭವಾನಿ ಶಂಕರ್, ನೆಡುಮುಡಿ ವೇಣು, ವಿವೇಕ್, ಕಾಳಿದಾಸ್ ಜಯರಾಮ್, ಗುಲ್ಶನ್ ಗ್ರೋವರ್, ಸಮುದ್ರಕನಿ, ಬಾಬಿ ಸಿಂಹ, ಬ್ರಹ್ಮಾನಂದಂ, ವೆನ್ನೆಲ ಕಿಶೋರ್, ಜಾಕಿರ್ ಹುಸೇನ್, ಗುರು ಸೋಮಸುಂದರಾಮ್, ದೆಹಲಿ, ಗುರು ಸೋಮಸುಂದರಾಮ್ ಮಿಶ್ರಾ, , ಜಯಪ್ರಕಾಶ್, ಮನೋಬಾಲಾ, ಮತ್ತು ಅಶ್ವಿನಿ ತಂಗರಾಜ್ ಇದ್ದಾರೆ.

Continue Reading

ಕಾಲಿವುಡ್

Indian 2 box office: ನೆಲಕಚ್ಚಿದ ‘ಇಂಡಿಯನ್ 2’; ಫ್ಯಾನ್ಸ್‌ಗೆ ಭಾರಿ ನಿರಾಸೆ,  ಮೊದಲ ದಿನದ ಗಳಿಕೆ ಎಷ್ಟು?

Indian 2: ಕೆಲವೊಮ್ಮೆ ಸಿನಿಮಾ ಉತ್ತಮವಾಗಿ ಇರದೇ ಇದ್ದರೂ ಹೀರೋಗಳ ಪಾತ್ರದಿಂದ ಸಿನಿಮಾ ಇಷ್ಟ ಆಗುತ್ತದೆ. ಆದರೆ, ‘ಇಂಡಿಯನ್ 2’ ಚಿತ್ರದಲ್ಲಿ ಕಮಲ್ ಹಾಸನ್ ವಿವಿಧ ಗೆಟಪ್​ನಲ್ಲಿ ಬರೋದಷ್ಟೇ ಹೊರತು ಮತ್ತಿನ್ನೇನೂ ಇಲ್ಲ ಎಂದು ಫ್ಯಾನ್ಸ್ ಮಾತನಾಡಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಊರ್ಮಿಳಾ ಮಾತೋಂಡ್ಕರ್ ಮತ್ತು ಮನೀಶಾ ಕೊಯಿರಾಲಾ ಕೂಡ ನಟಿಸಿದ್ದಾರೆ.

VISTARANEWS.COM


on

Indian 2 box office collection Day Kamal Haasan’s critically panned
Koo

ಬೆಂಗಳೂರು: ನಟ ಕಮಲ್ ಹಾಸನ್ ಅವರ ಇತ್ತೀಚಿನ ಚಿತ್ರ, ಇಂಡಿಯನ್‌ 2 (Indian 2 box office) ಅಂತಿಮವಾಗಿ ಶುಕ್ರವಾರ (ಜು. 12) ಭಾರತದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. ‘ಇಂಡಿಯನ್ 2’ ಸಿನಿಮಾ ಮೇಲೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಈ ನಿರೀಕ್ಷೆಗಳನ್ನು ಸಿನಿಮಾ ಹುಸಿ ಮಾಡಿದೆ. ವಿಮರ್ಶಕರು ಮತ್ತು ಪ್ರೇಕ್ಷಕರಿಂದ ನೆಗೆಟಿವ್‌ ಪ್ರತಿಕ್ರಿಯೆ ಪಡೆದುಕೊಂಡಿದೆ. ಇಂಡಿಯನ್ 2 ಬಿಡುಗಡೆಯಾದ ಮೊದಲ ದಿನದಲ್ಲಿ ಭಾರತದಾದ್ಯಂತ 26 ಕೋಟಿ ರೂ. ಗಳಿಸಿದೆ. ಅದರಲ್ಲಿ 17 ಕೋಟಿ ರೂ. ತಮಿಳು ಆವೃತ್ತಿಯಿಂದ ಬಂದಿದೆ. 1.1 ಕೋಟಿ ರೂ. ಹಿಂದಿ ಆವೃತ್ತಿಯಿಂದ ಮತ್ತು 7.9 ಕೋಟಿ ರೂ. ತೆಲುಗು ಆವೃತ್ತಿಯಿಂದ ಬಂದಿದೆ.

ಇಂಡಿಯನ್ 2 ಸಿನಿಮಾ ಕಮಲ್ ಹಾಸನ್ ಅವರ ಕೊನೆಯ ಚಿತ್ರ ʻವಿಕ್ರಮ್ʼ ಕ್ಕಿಂತ ಕಡಿಮೆ ಗಳಿಕೆ ಕಂಡಿದೆ. 2022 ರಲ್ಲಿ ವಿಕ್ರಮ್‌ ಸಿನಿಮಾ ತನ್ನ ಆರಂಭಿಕ ದಿನದಂದು 28 ಕೋಟಿ ರೂ. ಗಳಿಕೆ ಕಂಡಿತ್ತು. ವಿಕ್ರಮ್ ಸಕಾರಾತ್ಮಕ ವಿಮರ್ಶೆಗಳನ್ನು ಪಡೆದಿತ್ತು. ವಿಶ್ವಾದ್ಯಂತ 430 ಕೋಟಿ ರೂ. ಗಳಿಕೆ ಕಂಡಿತ್ತು. ಅದಕ್ಕೂ ಮೊದಲು, ಕಮಲ್ ಹಾಸನ್ ಕೊನೆಯದಾಗಿ 2018 ರ ವಿಶ್ವರೂಪಂ ಚಿತ್ರದಲ್ಲಿ ನಟಿಸಿದ್ದರು. ಇಂಡಿಯನ್ 2’ ಸಿನಿಮಾಗೆ ಮೊದಲ ದಿನ ಕೇವಲ 26 ಕೋಟಿ ರೂಪಾಯಿ ಗಳಿಕೆ ಆಗಿದೆ. ಕಮಲ್ ಹಾಸನ್ ಅವರಂಥ ಸಿನಿಮಾಗೆ ಇದು ತುಂಬಾನೇ ಸಣ್ಣ ಮೊತ್ತ. 

ಕೆಲವೊಮ್ಮೆ ಸಿನಿಮಾ ಉತ್ತಮವಾಗಿ ಇರದೇ ಇದ್ದರೂ ಹೀರೋಗಳ ಪಾತ್ರದಿಂದ ಸಿನಿಮಾ ಇಷ್ಟ ಆಗುತ್ತದೆ. ಆದರೆ, ‘ಇಂಡಿಯನ್ 2’ ಚಿತ್ರದಲ್ಲಿ ಕಮಲ್ ಹಾಸನ್ ವಿವಿಧ ಗೆಟಪ್​ನಲ್ಲಿ ಬರೋದಷ್ಟೇ ಹೊರತು ಮತ್ತಿನ್ನೇನೂ ಇಲ್ಲ ಎಂದು ಫ್ಯಾನ್ಸ್ ಮಾತನಾಡಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಊರ್ಮಿಳಾ ಮಾತೋಂಡ್ಕರ್ ಮತ್ತು ಮನೀಶಾ ಕೊಯಿರಾಲಾ ಕೂಡ ನಟಿಸಿದ್ದಾರೆ.

ಇದನ್ನೂ ಓದಿ: Indian 2: ಇಂಡಿಯನ್ 2ನಲ್ಲಿ ಸೆನ್ಸಾರ್ ಮಂಡಳಿ ಕೇಳಿದೆ ಆ ಐದು ಬದಲಾವಣೆ!

ಸ್ಯಾಕ್‌ನಿಲ್ಕ್ ಪ್ರಕಾರ, ಇಂಡಿಯನ್ 2 ತಮಿಳು ಆವೃತ್ತಿಗೆ ಒಟ್ಟಾರೆ 55% ಆಕ್ಯುಪೆನ್ಸಿಯನ್ನು ಹೊಂದಿತ್ತು, ಹೆಚ್ಚು ರಾತ್ರಿ ಪ್ರದರ್ಶನಗಳಿಂದ ಬಂದಿದೆ. ಚೆನ್ನೈ ಶೇ 68ರಷ್ಟು , ಹಿಂದಿ ಶೇ 11 ರಷ್ಟು ಆಕ್ಯುಪೆನ್ಸಿ , ಮುಂಬೈ ಮತ್ತು ದೆಹಲಿ-ಎನ್‌ಸಿಆರ್ ಕ್ರಮವಾಗಿ ಶೇ. 12.5ರಷ್ಟು ​​ಮತ್ತು ಶೇ. 8ರಷ್ಟು ಆಕ್ಯುಪೆನ್ಸಿ ಇತ್ತು. ಚಿತ್ರದ ತೆಲುಗು ಆವೃತ್ತಿಯು ಉತ್ತಮ ಪ್ರದರ್ಶನ ನೀಡಿದೆ. ಶೇ. 58ರಷ್ಟು ಆಕ್ಯುಪೆನ್ಸಿ ಇತ್ತು ಎನ್ನಲಾಗಿದೆ. ಕಮಲ್ ಹಾಸನ್ ಇತ್ತೀಚೆಗೆ ಕಲ್ಕಿ 2898 ಎಡಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ, ಇದು ಜಾಗತಿಕವಾಗಿ 1000 ಕೋಟಿ ರೂ. ಕಲೆಕ್ಷನ್‌ ಮಾಡಿದೆ.

ಚಿತ್ರದಲ್ಲಿ ರಕುಲ್ ಪ್ರೀತ್ ಸಿಂಗ್, ಕಾಜಲ್ ಅಗರ್ವಾಲ್, ಎಸ್.ಜೆ.ಸೂರ್ಯ, ಪ್ರಿಯಾ ಭವಾನಿ ಶಂಕರ್, ನೆಡುಮುಡಿ ವೇಣು, ವಿವೇಕ್, ಕಾಳಿದಾಸ್ ಜಯರಾಮ್, ಗುಲ್ಶನ್ ಗ್ರೋವರ್, ಸಮುದ್ರಕನಿ, ಬಾಬಿ ಸಿಂಹ, ಬ್ರಹ್ಮಾನಂದಂ, ವೆನ್ನೆಲ ಕಿಶೋರ್, ಜಾಕಿರ್ ಹುಸೇನ್, ಗುರು ಸೋಮಸುಂದರಾಮ್, ದೆಹಲಿ, ಗುರು ಸೋಮಸುಂದರಾಮ್ ಮಿಶ್ರಾ, , ಜಯಪ್ರಕಾಶ್, ಮನೋಬಾಲಾ, ಮತ್ತು ಅಶ್ವಿನಿ ತಂಗರಾಜ್ ಇದ್ದಾರೆ.

Continue Reading

ಕಾಲಿವುಡ್

Rashmika Mandanna: ಧನುಷ್‌ ನಟನೆಯ ʻಕುಬೇರʼ ಸಿನಿಮಾದ ರಶ್ಮಿಕಾ ಫಸ್ಟ್‌ ಲುಕ್‌ ಪೋಸ್ಟರ್‌ ಔಟ್‌!

Rashmika Mandanna: ರಶ್ಮಿಕಾ ಫಸ್ಟ್‌ ಲುಕ್‌ ಜತೆಗೆ ಕ್ಯಾರಕ್ಟರ್‌ ಗ್ಲಿಂಪ್ಸ್‌ ಕೂಡ ಚಿತ್ರತಂಡ ರಿವೀಲ್‌ ಮಾಡಿದೆ. ಒಂದು ನಿಮಿಷದಲ್ಲಿರುವ ಈ ವಿಡಿಯೊದಲ್ಲಿ ರಶ್ಮಿಕಾ ಪಾತ್ರದ ಝಲಕ್‌ ಇದೆ. ದೇವಿ ಶ್ರೀ ಪ್ರಸಾದ್ ಅವರ ಸಂಗೀತ ಇನ್ನಷ್ಟು ಕಿಕ್‌ ಕೊಡುವಂತಿದೆ. ಶೇಖರ್ ಕುಮ್ಮಲ ಅವರ ಕುಬೇರ ಬಹು ನಿರೀಕ್ಷಿತ ಪ್ಯಾನ್-ಇಂಡಿಯನ್ ಚಲನಚಿತ್ರಗಳಲ್ಲಿ ಒಂದಾಗಿದೆ.

VISTARANEWS.COM


on

Rashmika Mandanna Kubera interesting first look
Koo

ಬೆಂಗಳೂರು: ಸೂಪರ್ ಸ್ಟಾರ್ ಧನುಷ್ ನಟನೆಯ ತೆಲುಗು ನಿರ್ದೇಶಕ ಶೇಖರ್ ಕಮ್ಮುಲ ಆಕ್ಷನ್ ಕಟ್ ಹೇಳುತ್ತಿರುವ ʻಕುಬೇರʼ ಸಿನಿಮಾ  ರಶ್ಮಿಕಾ ಮಂದಣ್ಣ ಅವರ ಫಸ್ಟ್‌ ಲುಕ್‌ ಪೋಸ್ಟರ್‌ ಹಂಚಿಕೊಂಡಿದೆ. ಸೂಪರ್‌ಸ್ಟಾರ್ ಧನುಷ್ ಮತ್ತು ನಾಗಾರ್ಜುನ ಅಭಿನಯದ ಬಹು ನಿರೀಕ್ಷಿತ ಪೌರಾಣಿಕ ಪ್ಯಾನ್-ಇಂಡಿಯನ್ ʻಕುಬೇರʼ ಸಿನಿಮಾ ಈ ಫಸ್ಟ್‌ ಲುಕ್‌ ಮೂಲಕ ಮತ್ತೆ ಪ್ರೇಕ್ಷರನ್ನು ಸೆಳೆಯಲು ಸಜ್ಜಾಗಿದೆ. ಸಿನಿಮಾದಲ್ಲಿ ನ್ಯಾಶನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ ಮಹತ್ವದ ಪಾತ್ರ ನಿರ್ವಹಿಸಿದ್ದಾರೆ.

ಇದೀಗ ಚಿತ್ರತಂಡ ರಶ್ಮಿಕಾ ಅವರ ಫಸ್ಟ್ ಲುಕ್ ಮತ್ತು ಪಾತ್ರದ ಪರಿಚಯವನ್ನು ವಿಡಿಯೊ ಮೂಲಕ ಮೂಲಕ ಶೇರ್‌ ಮಾಡಿಕೊಂಡಿದೆ. ರಶ್ಮಿಕಾ ವಿಭಿನ್ನ ಅವತಾರದಲ್ಲಿ ಕಾಣಿಸಿಕೊಂಡಿದ್ದು, ಅವರ ಪಾತ್ರ ಪ್ರೇಕ್ಷಕರಲ್ಲಿ ಭಾರೀ ನಿರೀಕ್ಷೆ ಹುಟ್ಟುಹಾಕಿದೆ. ನಟರಾದ ಧನುಷ್ ಮತ್ತು ನಾಗಾರ್ಜುನ ಜತೆಗೆ ಈ ಸಿನಿಮಾದಲ್ಲಿ ರಶ್ಮಿಕಾ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಫಸ್ಟ್ ಲುಕ್ ಥ್ರಿಲ್ಲಿಂಗ್ ಮತ್ತು ಇಂಟ್ರೆಸ್ಟಿಂಗ್ ಆಗಿದೆ.

ರಶ್ಮಿಕಾ ಫಸ್ಟ್‌ ಲುಕ್‌ ಜತೆಗೆ ಕ್ಯಾರಕ್ಟರ್‌ ಗ್ಲಿಂಪ್ಸ್‌ ಕೂಡ ಚಿತ್ರತಂಡ ರಿವೀಲ್‌ ಮಾಡಿದೆ. ಒಂದು ನಿಮಿಷದಲ್ಲಿರುವ ಈ ವಿಡಿಯೊದಲ್ಲಿ ರಶ್ಮಿಕಾ ಪಾತ್ರದ ಝಲಕ್‌ ಇದೆ. ದೇವಿ ಶ್ರೀ ಪ್ರಸಾದ್ ಅವರ ಸಂಗೀತ ಇನ್ನಷ್ಟು ಕಿಕ್‌ ಕೊಡುವಂತಿದೆ. ಶೇಖರ್ ಕುಮ್ಮಲ ಅವರ ಕುಬೇರ ಬಹು ನಿರೀಕ್ಷಿತ ಪ್ಯಾನ್-ಇಂಡಿಯನ್ ಚಲನಚಿತ್ರಗಳಲ್ಲಿ ಒಂದಾಗಿದೆ. ಸದ್ಯ ಈ ಹೈ-ಬಜೆಟ್ ಸಿನಿಮಾದ ಪೋಸ್ಟ್-ಪ್ರೊಡಕ್ಷನ್ ಕೆಲಸಗಳು ಆಗುತ್ತಿವೆ. ಇತ್ತೀಚೆಗಷ್ಟೇ ಧನುಷ್ ಅವರ ಫಸ್ಟ್ ಲುಕ್ ಪೋಸ್ಟರ್‌ ಅನಾವರಣಗೊಂಡಿತ್ತು. ಮಾತ್ರವಲ್ಲ ಪ್ರೇಕ್ಷರಿಂದ ಮೆಚ್ಚುಗೆ ವ್ಯಕ್ತವಾಗಿತ್ತು.

ಇದನ್ನೂ ಓದಿ: Rashmika Mandanna: ರಶ್ಮಿಕಾ ಇದೀಗ ಟಾಲಿವುಡ್‌ಗೆ ಬೈ ಬೈ; ಬಾಲಿವುಡ್‌ನಲ್ಲಿಯೇ ಬಿಡಾರ!

ಶ್ರೀ ವೆಂಕಟೇಶ್ವರ ಸಿನಿಮಾಸ್ ಎಲ್‌ಎಲ್‌ಪಿ ಮತ್ತು ಅಮಿಗೋಸ್ ಕ್ರಿಯೇಷನ್ಸ್ ಪ್ರೈವೇಟ್ ಲಿಮಿಟೆಡ್ ಬ್ಯಾನರ್‌ನಡಿಯಲ್ಲಿ ಸುನೀಲ್ ನಾರಂಗ್ ಮತ್ತು ಪುಸ್ಕುರ್ ರಾಮ್ ಮೋಹನ್ ರಾವ್ ಈ ಚಿತ್ರವನ್ನು ಜಂಟಿಯಾಗಿ ನಿರ್ಮಿಸಿದ್ದಾರೆ. ‘ಶೇಖರ್ ಕಮ್ಮುಲ ಅವರ ಕುಬೇರ’ ಒಂದು ಪ್ಯಾನ್-ಇಂಡಿಯಾ ಬಹುಭಾಷಾ ಚಿತ್ರವಾಗಿದ್ದು, ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ಏಕಕಾಲದಲ್ಲಿ ಚಿತ್ರೀಕರಿಸಲಾಗಿದೆ. ಸದ್ಯ ಚಿತ್ರದ ಚಿತ್ರೀಕರಣ ಹೈದರಾಬಾದ್‌ನಲ್ಲಿ ನಡೆಯುತ್ತಿದೆ.

ಕೆಲವು ದಿನಗಳ ಹಿಂದೆ ಧನುಷ್ (Actor Dhanush) ಅವರ ಎರಡನೇ ನಿರ್ದೇಶನದ ಸಿನಿಮಾ ‘ಡಿ 50’ಪೋಸ್ಟರ್‌ ಲುಕ್‌ ಅನಾವರಣಗೊಂಡಿತ್ತು. ಧನುಷ್ ಕಳೆದ ವರ್ಷ ಜುಲೈನಲ್ಲಿ ಈ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದರು. ಈ ಸಿನಿಮಾಗಾಗಿ ನಟ ತಲೆಯನ್ನು ಬೋಳಿಸಿಕೊಂಡಿದ್ದಾರೆ. ಇನ್ನು ಸಿನಿಮಾದ ನಾಯಕಿ ಹಾಗೂ ಇನ್ನುಳಿದ ಪಾತ್ರವರ್ಗದ ಬಗ್ಗೆ ಮುಂದಿನ ದಿನಗಳಲ್ಲಿ ಅಪ್‌ಡೇಟ್‌ ನೀಡುವುದಾಗಿ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. 2017 ರಲ್ಲಿ ತೆರೆಕಂಡ ‘ಪಾ ಪಾಂಡಿ’ ಚಿತ್ರದ ಮೂಲಕ ಧನುಷ್ ನಿರ್ದೇಶಕರಾಗಿ ಪದಾರ್ಪಣೆ ಮಾಡಿದರು. ಈ ಚಿತ್ರಕ್ಕಾಗಿ ಫಿಲ್ಮ್‌ಫೇರ್‌ನಲ್ಲಿ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು. ಇದೀಗ ʻರಾಯನ್‌ʼ ಅವರ ಎರಡನೇ ನಿರ್ದೇಶನದ ಸಿನಿಮಾ.

Continue Reading
Advertisement
Joe Biden
ವಿದೇಶ18 seconds ago

Joe Biden: ಅಮೆರಿಕ ಅಧ್ಯಕ್ಷ ಜೋ ಬೈಡನ್​ಗೆ ಕೊರೊನಾ ಸೋಂಕು; ಪ್ರಚಾರಕ್ಕೆ ಬ್ರೇಕ್‌

Actor Darshan Judicial Custody Ends Today May Extend Again
ಸ್ಯಾಂಡಲ್ ವುಡ್3 mins ago

Actor Darshan: ಇಂದು ಜಡ್ಜ್​ ಮುಂದೆ ದರ್ಶನ್ & ಟೀಂ ಹಾಜರು; ಜೈಲುವಾಸ ಮುಕ್ತಾಯವಾಗುತ್ತಾ?

ಕ್ರಿಕೆಟ್8 mins ago

BCCI: ಕೋಚಿಂಗ್​ ಹುದ್ದೆಗೆ ಗಂಭೀರ್ ಸೂಚಿಸಿದ್ದ ಐವರ ಹೆಸರನ್ನು ತಿರಸ್ಕರಿಸಿದ ಬಿಸಿಸಿಐ

SL vs IND
ಕ್ರಿಕೆಟ್34 mins ago

SL vs IND: ಇಂದು ಶ್ರೀಲಂಕಾ ಪ್ರವಾಸಕ್ಕೆ ಭಾರತ ತಂಡ ಪ್ರಕಟ; ಯಾರಿಗೆ ಒಲಿಯಲಿದೆ ನಾಯಕತ್ವ?

Narendra Modi
ರಾಜಕೀಯ42 mins ago

Narendra Modi: ಇಂದು ಮೋದಿ ನೇತೃತ್ವದಲ್ಲಿ ಬಿಜೆಪಿ ಸಭೆ: ಮಹತ್ವದ ತೀರ್ಮಾನ ಸಾಧ್ಯತೆ; ಏನೆಲ್ಲ ಚರ್ಚೆಯಾಗಲಿದೆ?

Vijay Sethupathi 'Viduthalai 2' first look out now
ಕಾಲಿವುಡ್45 mins ago

Vijay Sethupathi: ವಿಜಯ್​ ಸೇತುಪತಿ ನಟನೆಯ’ʻವಿಡುತಲೈ 2ʼ ಫಸ್ಟ್‌ ಲುಕ್‌ ಔಟ್‌!

b nagendra valmiki corporation scam
ಪ್ರಮುಖ ಸುದ್ದಿ47 mins ago

Valmiki Corporation Scam: ನಾಗೇಂದ್ರ ಕಸ್ಟಡಿ ಅಂತ್ಯ, ಇಂದು ಕೋರ್ಟ್‌ಗೆ ಹಾಜರು; ಪತ್ನಿಯೂ ಇಡಿ ವಶದಲ್ಲಿ

Actor  Karthi Stuntman falls 20 ft to his death
ಕಾಲಿವುಡ್1 hour ago

Actor  Karthi: ನಟ ಕಾರ್ತಿ ಸಿನಿಮಾ ಸೆಟ್‌ನಲ್ಲಿ ಅವಘಡ; 20 ಅಡಿಯಿಂದ ಬಿದ್ದು ಸ್ಟಂಟ್‌ ಮ್ಯಾನ್‌ ಸಾವು

Paris Olympics
ಕ್ರೀಡೆ1 hour ago

Paris Olympics: ಪ್ಯಾರಿಸ್‌ ಒಲಿಂಪಿಕ್ಸ್​ ಭದ್ರತಾ ಕಾರ್ಯದಲ್ಲಿ ಭಾರತದ ಶ್ವಾನದಳ; ಬೆಂಗಳೂರಿನಲ್ಲಿ ತರಬೇತಿ

Anant Radhika Wedding
ವಾಣಿಜ್ಯ1 hour ago

Anant Radhika Wedding: ಅನಂತ್ ಅಂಬಾನಿ ಮದುವೆ ಊಟಕ್ಕೆ 2500 ಬಗೆಯ ಖಾದ್ಯಗಳು! ಏನ್ ತಿಂದ್ರೋ ಏನ್ ಬಿಟ್ರೋ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ3 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ3 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ3 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ4 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ4 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ4 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ5 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌