Site icon Vistara News

Mahesh Babu: ಮಹೇಶ್ ಬಾಬು-ರಾಜಮೌಳಿ ಸಿನಿಮಾ ಮುಹೂರ್ತ ಎಲ್ಲಿ? ಯಾವಾಗ?

Mahesh Babu and Rajamouli to work on Financials

ಬೆಂಗಳೂರು: ಎಸ್‌.ಎಸ್‌.ರಾಜಮೌಳಿ (S.S. Rajamouliಎನ್ನುವ ಸ್ಟಾರ್‌ ನಿರ್ದೇಶಕರ ಹೆಸರು ಕೇಳದವರು ವಿರಳ. ನಿರ್ದೇಶನಕ್ಕೆ ಹೊಸ ಆಯಾಮ ತಂದುಕೊಟ್ಟವರು ಅವರು. ಟಾಲಿವುಡ್‌ನ ರಾಜಮೌಳಿ ಆ್ಯಕ್ಷನ್‌ ಕಟ್‌ ಹೇಳಿರುವ ಯಾವ ಚಿತ್ರವೂ ಇದುವರೆಗೆ ಫ್ಲಾಪ್‌ ಆಗಿಲ್ಲ ಎನ್ನುವುದು ವಿಶೇಷ. ಹೀಗಾಗಿ ಅವರು ಸಿನಿಮಾ ಮಾಡುತ್ತಾರೆ ಎನ್ನುವಾಗಲೇ ನಿರೀಕ್ಷೆ ಮೂಡುತ್ತದೆ, ಕುತೂಹಲ ಗರಿಗೆದರುತ್ತದೆ. ಸದ್ಯ ಅವರು ಟಾಲಿವುಡ್‌ ಸೂಪರ್‌ ಸ್ಟಾರ್‌ ಮಹೇಶ್‌ ಬಾಬು (Mahesh Babu) ಅವರ ಮುಂದಿನ ಚಿತ್ರ ನಿರ್ದೇಶಿಸಲಿದ್ದಾರೆ. ಸದ್ಯ ಚಿತ್ರಕ್ಕೆ ʼಎಸ್‌.ಎಸ್‌.ಬಿ.ಎಂ. 29ʼ (SSMB 29) ಎನ್ನುವ ತಾತ್ಕಾಲಿಕ ಶೀರ್ಷಿಕೆ ಇಡಲಾಗಿದೆ. ಇದೀಗ ಸಿನಿಮಾದ ಮುಹೂರ್ತ ದಿನಾಂಕ ನಿಗದಿಯಾಗಿದೆ. ರಾಜಮೌಳಿ ಹಾಗೂ ಮಹೇಶ್ ಬಾಬು ನಟನೆಯ ಸಿನಿಮಾದ ಮುಹೂರ್ತ ಯುಗಾದಿ ದಿನದಂದು ನಡೆಯಲಿದೆ ಎಂದು ವರದಿಯಾಗಿದೆ.

ಹೈದರಾಬಾದ್​ನಲ್ಲಿಯೇ ಮುಹೂರ್ತ ಸಮಾರಂಭ ನಡೆಯಲಿದ್ದು, ಹಾಲಿವುಡ್​ನ ಖ್ಯಾತ ನಿರ್ದೇಶಕ ಜೇಮ್ಸ್ ಕ್ಯಾಮರನ್ ಮುಹೂರ್ತಕ್ಕೆ ಅತಿಥಿಯಾಗಿ ಬರಲಿದ್ದಾರೆ ಎನ್ನಲಾಗಿದೆ. ‘ಆರ್​ಆರ್​ಆರ್’ ಸಿನಿಮಾದ ನಾಯಕರಾದ ಜೂ ಎನ್​ಟಿಆರ್, ರಾಮ್ ಚರಣ್ ಅವರ ಜತೆಗೆ ಪ್ರಭಾಸ್, ರಾಣಾ ದಗ್ಗುಬಾಟಿ ಸೇರದಿಂತೆ ಅನೇಕರು ಭಾಗಿಯಾಗಲಿದ್ದಾರೆ ಎನ್ನಲಾಗಿದೆ. ಮೊದಲ ಬಾರಿಗೆ ಇಬ್ಬರು ಚಿತ್ರಕ್ಕಾಗಿ ಒಂದಾಗುತ್ತಿರುವುದು ಕೂಡ ನಿರೀಕ್ಷೆ ಹೆಚ್ಚಲು ಮತ್ತೊಂದು ಮುಖ್ಯ ಕಾರಣ. ಇವರ ಸಂಭಾವನೆ ಕಾರಣಕ್ಕೂ ಚಿತ್ರ ಸೆಟ್ಟೇರುವ ಮೊದಲೇ ಸದ್ದು ಮಾಡುತ್ತಿದೆ.

ಇದನ್ನೂ ಓದಿ: Mahesh Babu: ಮಹೇಶ್ ಬಾಬು ಪುತ್ರಿಯ ಹೆಸರಲ್ಲಿ ನಕಲಿ ಖಾತೆ; ಸಾರ್ವಜನಿಕರಿಗೆ ಎಚ್ಚರಿಕೆ ಕೊಟ್ಟ ನಟ!

ಈ ನಡುವೆ ʼಎಸ್‌.ಎಸ್‌.ಬಿ.ಎಂ. 29ʼ ಸಿನಿಮಾಕ್ಕಾಗಿ ಮಹೇಶ್‌ ಬಾಬು ದಾಖಲೆಯ ಪ್ರತಿಫಲ ಪಡೆಯುತ್ತಿದ್ದಾರೆ. ಅವರು 60ರಿಂದ 80 ಕೋಟಿ ರೂ. ಸಂಭಾವನೆಗೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿತ್ತು. ಆದರೆ ಅವರು ಸಂಭಾವನೆ ಪಡೆಯುತ್ತಿಲ್ಲ ಎಂದು ಮೂಲಗಳು ತಿಳಿಸಿವೆ. ಅದರ ಬದಲಾಗಿ ಮಹೇಶ್‌ ಬಾಬು ಚಿತ್ರದ ಲಾಭದಲ್ಲಿ ಶೇರ್‌ ಪಡೆದುಕೊಳ್ಳುವ ಬಗ್ಗೆ ಒಪ್ಪಂದ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಎಸ್‌.ಎಸ್‌.ಬಿ.ಎಂ. 29ʼ ಸಿನಿಮಾದ ಕಥೆ ರಾಮಾಯಣದ ಹನುಮಂತನ ಪಾತ್ರದಿಂದ ಸ್ಫೂರ್ತಿ ಪಡೆದುಕೊಂಡಿದೆ ಎನ್ನಲಾಗುತ್ತಿದೆ. ವಿಜಯೇಂದ್ರ ಪ್ರಸಾದ್‌ ಚಿತ್ರಕ್ಕಾಗಿ ಕಥೆ ಬರೆಯುತ್ತಿದ್ದಾರೆ. ಈ ಸಿನಿಮಾಕ್ಕಾಗಿ ಹಾಲಿವುಡ್‌ ನಟರನ್ನು ಸಂಪರ್ಕಿಸಲಾಗಿದೆ.

ಶೀಘ್ರದಲ್ಲಿಯೇ ಆಫ್ರಿಕಾದಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಭರ್ಜರಿ ಸಾಹಸ ದೃಶ್ಯಗಳು ಈ ಚಿತ್ರದಲ್ಲಿ ಇರಲಿದೆ.2022ರಲ್ಲಿ ತೆರೆಕಂಡ ʼಆರ್‌.ಆರ್‌.ಆರ್‌.ʼ ಸಿನಿಮಾ ಬಳಿಕ ರಾಜಮೌಳಿ ನಿರ್ದೇಶನದ ಯಾವುದೇ ಚಿತ್ರ ಬಿಡುಗಡೆಯಾಗಿಲ್ಲ. ಅವರು ಈ ಚಿತ್ರಕ್ಕಾಗಿಯೇ ಹಲವು ವರ್ಷಗಳಿಂದ ಸಿದ್ಧತೆ ನಡೆಸುತ್ತಿದ್ದಾರೆ. ದಾಖಲೆ ಬರೆದ ʼಬಾಹುಬಲಿʼ, ʼಬಾಹುಬಲಿ 2ʼ, ʼಆರ್‌.ಆರ್‌.ಆರ್‌.ʼ ಮುಂತಾದ ಸಿನಿಮಾಗಳಿಗೆ ಕಥೆ ಬರೆದಿದ್ದ ವಿಜಯೇಂದ್ರ ಪ್ರಸಾದ್‌ ಅವರೇ ʼಎಸ್‌.ಎಸ್‌.ಬಿ.ಎಂ. 29ʼ ಚಿತ್ರದ ಬರವಣಿಗೆಯಲ್ಲಿ ತೊಡಗಿರುವುದು ನಿರೀಕ್ಷೆ ಹೆಚ್ಚಲು ಮತ್ತೊಂದು ಕಾರಣ.

Exit mobile version