Mahesh Babu: ಹೇಗಿದೆ ಮಹೇಶ್‌ ಬಾಬು ಲುಕ್‌? ರಾಜಮೌಳಿ ಪ್ಲ್ಯಾನ್​ ಉಲ್ಟಾ! - Vistara News

South Cinema

Mahesh Babu: ಹೇಗಿದೆ ಮಹೇಶ್‌ ಬಾಬು ಲುಕ್‌? ರಾಜಮೌಳಿ ಪ್ಲ್ಯಾನ್​ ಉಲ್ಟಾ!

Mahesh Babu: ವೈರಲ್‌ ಆದ ವಿಡಿಯೊದಲ್ಲಿ ಮಹೇಶ್ ಕಪ್ಪು ಮತ್ತು ಬಿಳಿ ಜಾಕೆಟ್‌ನಲ್ಲಿ ಬೂದು ಬಣ್ಣದ ಟೀ ಶರ್ಟ್ ಮತ್ತು ಜೀನ್ಸ್‌ನೊಂದಿಗೆ ಕಾಣಿಸಿಕೊಂಡಿದ್ದರು. ಮಹೇಶ್​ ಬಾಬು ಅವರು ವಿಶೇಷ ತರಬೇತಿ ಕೂಡ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ದುಬೈನಿಂದ ಮಹೇಶ್‌ ಬಾಬು ಅವರು ವಾಪಸ್​ ಹೈದರಾಬಾದ್​ಗೆ ಬಂದಿದ್ದಾರೆ ಎಂದು ವರದಿಯಾಗಿದೆ. ಈ ಚಿತ್ರಕ್ಕೆ ಇನ್ನೂ ಶೀರ್ಷಿಕೆ ಫಿಕ್ಸ್‌ ಆಗಿಲ್ಲ. ಸದ್ಯಕ್ಕೆ ‘SSMB 29’ ಎಂದು ಕರೆಯಲಾಗುತ್ತಿದೆ. ದುಬೈನಿಂದ ಶೂಟಿಂಗ್‌ ಮುಗಿಸಿ ವಾಪಸ್‌ ಬರುವಾಗ ಮಹೇಶ್‌ ಬಾಬು ಅವರ ಲುಕ್‌ ಬಹಿರಂಗವಾಗಿದೆ.

VISTARANEWS.COM


on

Mahesh Babu SS Rajamouli return from Dubai
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಟಾಲಿವುಡ್‌ ನಟ ಮಹೇಶ್‌ ಬಾಬು (Mahesh Babu) ಹಾಗೂ ನಿರ್ದೇಶಕ ರಾಜಮೌಳಿ (SS Rajamouli) ಅವರು ಸಿನಿಮಾ ಮಾಡುತ್ತಿರುವುದು ಗೊತ್ತೇ ಇದೆ. ಈ ಚಿತ್ರಕ್ಕೆ ಇನ್ನೂ ಶೀರ್ಷಿಕೆ ಫಿಕ್ಸ್‌ ಆಗಿಲ್ಲ. ಸದ್ಯಕ್ಕೆ ‘SSMB 29’ ಎಂದು ಕರೆಯಲಾಗುತ್ತಿದೆ. ದುಬೈನಿಂದ ಶೂಟಿಂಗ್‌ ಮುಗಿಸಿ ವಾಪಸ್‌ ಬರುವಾಗ ಮಹೇಶ್‌ ಬಾಬು ಅವರ ಲುಕ್‌ ಬಹಿರಂಗವಾಗಿದೆ. ಈ ಸಿನಿಮಾದಲ್ಲಿ ಮಹೇಶ್‌ ಬಾಬು ಅವರ ಲುಕ್‌ ಡಿಫ್‌ರೆಂಟ್‌ ಆಗಿರಲಿದೆ ಎಂದು ಈ ಮುಂಚೆ ರಾಜಮೌಳಿ ಅವರು ಹೇಳಿದ್ದರು. ಆ ಲುಕ್​ ಬಹಿರಂಗ ಆಗಬಾರದು ಎಂಬುದು ರಾಜಮೌಳಿ ಅವರ ಉದ್ದೇಶ ಆಗಿತ್ತು. ಅದಕ್ಕಾಗಿ ಅವರು ಸಾಕಷ್ಟು ಪ್ರಯತ್ನ ಮಾಡಿದ್ದರು. ಆದರೆ ಈಗ ಮಹೇಶ್​ ಬಾಬು ಅವರು ಹೊಸ ಗೆಟಪ್​ ಬಹಿರಂಗ ಆಗಿದೆ.

ವೈರಲ್‌ ಆದ ವಿಡಿಯೊದಲ್ಲಿ ಮಹೇಶ್ ಕಪ್ಪು ಮತ್ತು ಬಿಳಿ ಜಾಕೆಟ್‌ನಲ್ಲಿ ಬೂದು ಬಣ್ಣದ ಟೀ ಶರ್ಟ್ ಮತ್ತು ಜೀನ್ಸ್‌ನೊಂದಿಗೆ ಕಾಣಿಸಿಕೊಂಡಿದ್ದರು. ಮಹೇಶ್​ ಬಾಬು ಅವರು ವಿಶೇಷ ತರಬೇತಿ ಕೂಡ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ದುಬೈನಿಂದ ಮಹೇಶ್‌ ಬಾಬು ಅವರು ವಾಪಸ್​ ಹೈದರಾಬಾದ್​ಗೆ ಬಂದಿದ್ದಾರೆ ಎಂದು ವರದಿಯಾಗಿದೆ. ಈ ಸಿನಿಮಾದ ಪಾತ್ರಕ್ಕಾಗಿ ಅವರು ಕೂದಲು ಬೆಳೆಸಿದ್ದಾರೆ ಎಂದು ವರದಿಯಾಗಿದೆ. ರಾಜಮೌಳಿ ಇತ್ತೀಚೆಗೆ ಆರ್‌ಆರ್‌ಆರ್ ಸಿನಿಮಾದ ವಿಶೇಷ ಪ್ರದರ್ಶನಕ್ಕಾಗಿ ಜಪಾನ್‌ಗೆ ಬಂದಿದ್ದರು.

ಇದನ್ನೂ ಓದಿ: Mahesh Babu: ಮಹೇಶ್ ಬಾಬು-ರಾಜಮೌಳಿ ಸಿನಿಮಾ ಮುಹೂರ್ತ ಎಲ್ಲಿ? ಯಾವಾಗ?

ಎಸ್‌ಎಸ್ ರಾಜಮೌಳಿ (SS Rajamouli) ಅವರು ಪತ್ನಿ ರಮಾ ರಾಜಮೌಳಿ ಅವರೊಂದಿಗೆ ಮಾರ್ಚ್ 18ರಂದು ಜಪಾನ್‌ನಲ್ಲಿ ‘ಆರ್‌ಆರ್‌ಆರ್’ ಪ್ರದರ್ಶನಕ್ಕೆ ಹಾಜರಾಗಿದ್ದರು. ಮತ್ತೊಮ್ಮೆ ಸಿನಿಮಾ ಸ್ಕ್ರೀನಿಂಗ್‌ಗಾಗಿ ನಿರ್ದೇಶಕ ರಾಜಮೌಳಿ ಅಲ್ಲಿಗೆ ಹೋಗಿದ್ದರು. ಅಭಿಮಾನಿಗಳೊಂದಿಗೆ ಸಂವಾದದ ಸಮಯದಲ್ಲಿ, ಅವರು ಮಹೇಶ್ ಬಾಬು ಅವರೊಂದಿಗಿನ ತಮ್ಮ ಮುಂಬರುವ ಚಿತ್ರದ ಬಗ್ಗೆ ಮಾತನಾಡಿದ್ದರು.

ಜಪಾನ್‌ನಲ್ಲಿ ನಡೆದ ಸ್ಕ್ರೀನಿಂಗ್‌ನಲ್ಲಿ ಮಾತನಾಡಿದ ಎಸ್‌ಎಸ್ ರಾಜಮೌಳಿ, “ನಮ್ಮ ಮುಂದಿನ ಚಿತ್ರದ ಸ್ಕ್ರಿಪ್ಟ್‌ ಕೆಲಸ ಮಗಿಸಿದ್ದೇವೆ. ಚಿತ್ರ ಪ್ರಿ-ಪ್ರೊಡಕ್ಷನ್ ಪ್ರಕ್ರಿಯೆಯಲ್ಲಿದೆ. ಇನ್ನೂ ಕಾಸ್ಟಿಂಗ್ ಪೂರ್ಣಗೊಂಡಿಲ್ಲ. ಮುಖ್ಯ ನಾಯಕ, ಅಂದರೆ ಮಹೇಶ್‌ ಬಾಬು ಅವರು ಮಾತ್ರ ಫಿಕ್ಸ್‌ ಆಗಿದ್ದಾರೆ. ಆತ ತುಂಬಾ ಒಳ್ಳೆಯ ನಟ. ಸುಂದರ ಕೂಡ. ಸಿನಿಮಾ ಬಿಡುಗಡೆ ಸಮಯದಲ್ಲಿ ಅವರನ್ನು ಇಲ್ಲಿಗೆ ಕರೆತಂದು ನಿಮಗೆ ಪರಿಚಯಿಸುತ್ತೇನೆʼʼ ಎಂದಿದ್ದರು

2022ರಲ್ಲಿ ತೆರೆಕಂಡ ʼಆರ್‌.ಆರ್‌.ಆರ್‌.ʼ ಸಿನಿಮಾ ಬಳಿಕ ರಾಜಮೌಳಿ ನಿರ್ದೇಶನದ ಯಾವುದೇ ಚಿತ್ರ ಬಿಡುಗಡೆಯಾಗಿಲ್ಲ. ಅವರು ಈ ಚಿತ್ರಕ್ಕಾಗಿಯೇ ಹಲವು ವರ್ಷಗಳಿಂದ ಸಿದ್ಧತೆ ನಡೆಸುತ್ತಿದ್ದಾರೆ. ದಾಖಲೆ ಬರೆದ ʼಬಾಹುಬಲಿʼ, ʼಬಾಹುಬಲಿ 2ʼ, ʼಆರ್‌.ಆರ್‌.ಆರ್‌.ʼ ಮುಂತಾದ ಸಿನಿಮಾಗಳಿಗೆ ಕಥೆ ಬರೆದಿದ್ದ ವಿಜಯೇಂದ್ರ ಪ್ರಸಾದ್‌ ಅವರೇ ʼಎಸ್‌.ಎಸ್‌.ಬಿ.ಎಂ. 29ʼ ಚಿತ್ರದ ಬರವಣಿಗೆಯಲ್ಲಿ ತೊಡಗಿರುವುದು ನಿರೀಕ್ಷೆ ಹೆಚ್ಚಲು ಮತ್ತೊಂದು ಕಾರಣ. ಇತ್ತೀಚೆಗೆ ತೆರೆಕಂಡ ಮಹೇಶ್‌ ಬಾಬು ಅಭಿನಯದ ʼಗುಂಟೂರು ಖಾರಂʼ ಸಿನಿಮಾ ಸಾಧಾರಣ ಗೆಲುವು ದಾಖಲಿಸಿದೆ. ಹೀಗಾಗಿ ಅವರು ʼಎಸ್‌.ಎಸ್‌.ಬಿ.ಎಂ. 29ʼ ಚಿತ್ರದತ್ತ ಗಮನ ಹರಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಾಲಿವುಡ್

Actor Rajinikanth: ಶಾಲೆಗೆ ಹೋಗಲ್ಲ ಎಂದು ಹಠ ಹಿಡಿದ ಮೊಮ್ಮಗ; ತಾತನ ಡ್ಯೂಟಿ ಮಿಸ್ ಮಾಡ್ದೆ ಸ್ಕೂಲ್‌ಗೆ ಬಿಟ್ಟು ಬಂದ ರಜನಿಕಾಂತ್‌!

Actor Rajinikanth: ಸೌಂದರ್ಯಾ ಅವರು ತಮ್ಮ ಇನ್‌ಸ್ಟಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ, ರಜನಿಕಾಂತ್ ಮೊಮ್ಮಗನೊಂದಿಗೆ ಕುಳಿತು ತರಗತಿಗೆ ಕರೆದುಕೊಂಡು ಹೋಗುತ್ತಿರುವುದು ನೋಡಬಹುದು. ವಿದ್ಯಾರ್ಥಿಗಳು ತಮ್ಮ ನೆಚ್ಚಿನ ನಟನನ್ನು ನೋಡಿ ಅಚ್ಚರಿಗೊಂಡಿದ್ದಾರೆ. ನಟ ಮೊಮ್ಮಗನನ್ನು ಶಾಲೆಗೆ ಬಿಡುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಇದನ್ನು ಅವರ ಮಗಳು ಸೌಂದರ್ಯಾ ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಕೂಡ ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Actor Rajinikanth Fulfils Grandfather Duties By Dropping Grandson At School
Koo

ಬೆಂಗಳೂರು: ರಜನಿಕಾಂತ್ (Actor Rajinikanth) ದೇಶದ ಅತ್ಯಂತ ಜನಪ್ರಿಯ ನಟರಲ್ಲಿ ಒಬ್ಬರು. ಅವರಿಗೆ ಅಪಾರ ಅಭಿಮಾನಿ ಬಳಗವಿದೆ. ಹೀಗಿದ್ದರೂ ನಟ ಆಗಾಗ ಸರಳತೆಯ ವಿಚಾರಕ್ಕೆ ಸುದ್ದಿಯಾಗುತ್ತಲೇ ಇರುತ್ತಾರೆ. ಇದೀಗ ನಟ ಮೊಮ್ಮಗನನ್ನು ಶಾಲೆಗೆ ಬಿಡುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಇದನ್ನು ಅವರ ಮಗಳು ಸೌಂದರ್ಯಾ ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಕೂಡ ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸೌಂದರ್ಯಾ ಅವರು ತಮ್ಮ ಇನ್‌ಸ್ಟಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ, ರಜನಿಕಾಂತ್ ಮೊಮ್ಮಗನೊಂದಿಗೆ ಕುಳಿತು ತರಗತಿಗೆ ಕರೆದುಕೊಂಡು ಹೋಗುತ್ತಿರುವುದು ನೋಡಬಹುದು. ವಿದ್ಯಾರ್ಥಿಗಳು ತಮ್ಮ ನೆಚ್ಚಿನ ನಟನನ್ನು ನೋಡಿ ಅಚ್ಚರಿಗೊಂಡಿದ್ದಾರೆ. “ನನ್ನ ಮಗನಿಗೆ ಬೆಳಗ್ಗೆ ಶಾಲೆಗೆ ಹೋಗಲು ಇಷ್ಟವಿರಲಿಲ್ಲ. ಸೂಪರ್‌ಹೀರೋ ತಾತಾ ಅಳುತ್ತಿದ್ದ ಮಗನನ್ನು ಶಾಲೆಗೆ ಬಿಟ್ಟು ಬಂದರು. ನೀವು ನಿರ್ವಹಿಸುವ ಪ್ರತಿಯೊಂದು ಪಾತ್ರದಲ್ಲೂ ನೀವು ಅತ್ಯುತ್ತಮರು. ಆನ್ ಮತ್ತು ಆಫ್ ಸ್ಕ್ರೀನ್‌ನಲ್ಲಿಯೂ ನನ್ನ ಪ್ರೀತಿಯ ಅಪ್ಪ. ಬೆಸ್ಟ್ ಅಜ್ಜ . ಬೆಸ್ಟ್ ಫಾದರ್. ಜಸ್ಟ್ ದ ಬೆಸ್ಟ್ ʼʼ ಎಂದು ಶೀರ್ಷಿಕೆಯನ್ನು ನೀಡಿದ್ದಾರೆ.

ರಜನಿಕಾಂತ್ ಮೊಮ್ಮೊಗ ಲಿಂಗ ರಾಜ ಜೊತೆ ರಜನಿ ಪೋಸ್ ಕೊಟ್ಟಿದ್ದಾರೆ. ಮತ್ತೊಂದು ಫೋಟೋದಲ್ಲಿ ರಜನಿಕಾಂತ್ ಶಾಲಾ ಕೊಠಡಿಯಲ್ಲಿ ಕಾಣಿಸಿಕೊಂಡಿದ್ದಾರೆ. ರಜನಿಕಾಂತ್ ಅವರನ್ನು ನೋಡಿ ಶಾಲಾ ಮಕ್ಕಳು ಸಖತ್ ಎಗ್ಸೈಟ್ ಆಗಿದ್ದಾರೆ. ಅದರಲ್ಲೂ ಕೊನೆಯಲ್ಲಿ ಕುಳಿತ ಬಾಲಕಿ ಖುಷಿ ತಡೆಯಲಾರದೆ ಎರಡೂ ಕೈಯನ್ನು ಮುಖದಮೇಲೆ ಇಟ್ಟಿದ್ದಾಳೆ.

ಇದನ್ನೂ ಓದಿ: Actor Rajinikanth: ಈ ಬಾರಿಯೂ ಮೋದಿ ಗೆಲ್ಲಬಹುದಾ ಎಂಬ ಪ್ರಶ್ನೆಗೆ ರಜನಿಕಾಂತ್ ಕೊಟ್ಟ ಉತ್ತರ ಏನು?

ಈ ಫೋಟೊ ವೈರಲ್‌ ಆಗುತ್ತಿದ್ದಂತೆ ಫ್ಯಾನ್ಸ್‌ ʻಸೂಪರ್ ಸ್ಟಾರ್ ಆಗಿದ್ದರೂ ಅವರು ಯಾವಾಗಲೂ ವಿಶೇಷರುʼಎಂದು ಕಮೆಂಟ್‌ ಮಾಡಿದ್ದಾರೆ. ಇನ್ನೂ ಕೆಲವರು ಈ ಫೋಟೋ ಹಂಚಿಕೊಂಡ ಸೌಂದರ್ಯಾಗೆ ಧನ್ಯವಾದ ಹೇಳಿದ್ದಾರೆ. ಇನ್ನೂ ಕೆಲವರು ರಜನಿಕಾಂತ್ ಅವರ ದರ್ಶನ ಸಿಕ್ಕಿ ಖುಷಿಯಾದ ಮಕ್ಕಳ ಬಗ್ಗೆ ಬರೆದುಕೊಂಡಿದ್ದಾರೆ.

ತಮಿಳು ಸೂಪರ್‌ಸ್ಟಾರ್ ರಜನಿಕಾಂತ್ ಇತ್ತೀಚೆಗೆ ʻವೆಟ್ಟೈಯಾನ್‌ʼ ಸಿನಿಮಾ ಶೂಟಿಂಗ್‌ ಪೂರ್ಣಗೊಳಿಸಿದ್ದಾರೆ. ಚಿತ್ರದ ಸೆಟ್‌ನ ಕೊನೆಯ ದಿನದ ಫೋಟೋ ವೈರಲ್‌ ಆಗಿತ್ತು. ವೆಟ್ಟೈಯನ್ ಚಿತ್ರವನ್ನು ಟಿ ಜೆ ಜ್ಞಾನವೇಲ್ ನಿರ್ದೇಶಿಸುತ್ತಿದ್ದಾರೆ. ಇದರಲ್ಲಿ ಅಮಿತಾಭ್‌ ಬಚ್ಚನ್, ಫಹದ್ ಫಾಸಿಲ್, ರಾಣಾ ದಗ್ಗುಬಾಟಿ, ಮಂಜು ವಾರಿಯರ್, ರಿತಿಕಾ ಸಿಂಗ್, ದುಶಾರ ವಿಜಯನ್, ಕಿಶೋರ್ ಮತ್ತು ರೋಹಿಣಿ ಅವರ ಸಮಗ್ರ ತಾರಾಗಣದೊಂದಿಗೆ ರಜನಿಕಾಂತ್ ನಾಯಕನಾಗಿ ನಟಿಸಿದ್ದಾರೆ. ಇದನ್ನು ಲೈಕಾ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಸುಬಾಸ್ಕರನ್ ಅಲ್ಲಿರಾಜ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಅನಿರುದ್ಧ್ ರವಿಚಂದರ್ ಸಂಗೀತ ನೀಡುತ್ತಿದ್ದು, ಎಸ್ ಆರ್ ಕತಿರ್ ಛಾಯಾಗ್ರಹಣ ಮತ್ತು ಫಿಲೋಮಿನ್ ರಾಜ್ ಸಂಕಲನ ಮಾಡುತ್ತಿದ್ದಾರೆ. ಹೊಸ ಪೋಸ್ಟರ್ ಅನ್ನು ಅನಾವರಣ ಮಾಡುವುದರ ಜೊತೆಗೆ, ಈ ವರ್ಷ ಅಕ್ಟೋಬರ್‌ನಲ್ಲಿ ಚಿತ್ರವನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದೆ.

Continue Reading

ಸಿನಿಮಾ

Family Drama Film Review: ಹೊಸ ಅನುಭವ ನೀಡುವ ಫ್ಯಾಮಿಲಿ ಡ್ರಾಮಾ

Family Drama Film Review: ಕನ್ನಡಕ್ಕೆ ಇದೊಂದು ವಿಶಿಷ್ಟ ರೀತಿಯಾ ಸಿನಿಮಾ. ಚಿತ್ರದಲ್ಲಿ ಕಾಮಿಡಿ ಇದೆ, ಸಸ್ಪೆನ್ಸ್ ಇದೆ, ಹೊಸತಂಡದ ಹೊಸತನ ಹೊಸದಾಗಿಯೇ ಇದೆ. ಚಿತ್ರ ಎಲ್ಲವರ್ಗದಲ್ಲೂ ಅಚ್ಚುಕಟ್ಟಾಗಿ ರೂಪುಗೊಂಡಿದೆ, ಪ್ರೇಕ್ಷಕರ ಮನರಂಜಿಸುತ್ತದೆ. ವೇಗ ಹೆಚ್ಚಿಸಿ ಮೊದಲಾರ್ಧದ ಡ್ರಾಮಾಗೆ ಕೊಂಚ ಕತ್ತರಿ ಹಾಕಬಹುದಿತ್ತು ಅನಿಸುತ್ತದೆ. ಸೆಮಿ ಸೆಮಿ ಹಾಡು ಸಿಕ್ಕಾಬಟ್ಟೆ ಇಷ್ಟ ಆಗುತ್ತದೆ.

VISTARANEWS.COM


on

Family Drama Film Review
Koo

-ಶಿವರಾಜ್ ಡಿ ಎನ್, ಬೆಂಗಳೂರು
ಫ್ಯಾಮಿಲಿ ಸಮೇತ ಕೂತು ನೋಡಬಹುದಾದಂತ ಡಾರ್ಕ್ ಕಾಮಿಡಿ ಸಿನಿಮಾ ‘ಫ್ಯಾಮಿಲಿ ಡ್ರಾಮಾ’. ದಿ ಯಂಗ್ ಮೈಂಡ್ ಮೂವಿ.. ಸಿನಿಮಾ ಅಂದ್ರೆ ಅಲ್ಲೊಂದು ದೊಡ್ಡ ಸ್ಟಾರ್ ಕಾಸ್ಟ್, ಮಾಸ್ ಡೈಲಾಗ್, ರಗಡ್ ಫೈಟ್, ಮೆಲೋಡಿಯಸ್ ಸಾಂಗ್, ಮಿನಿಮಮ್ ಅಂದ್ರೂ ಒಂದ್ ಇಪ್ಪತ್ತೈದ್ ಮೂವತ್ ಕೋಟಿ ಖರ್ಚಾಗಿರ್ಬೇಕು.. ಸಿನಿಮಾ ಅಂದ್ರೇ ಹಾಗಿರ್ಬೇಕು ಹೀಗಿರ್ಬೇಕು ಎನ್ನುವ ಚೌಕಟ್ಟಿನೊಳಗಿನ ಪ್ರೇಕ್ಷಕರಿಗೆ ಈ ಸಿನಿಮಾ ಕಷ್ಟ ಆಗಬಹುದು.! ಇದೆಲ್ಲದರಾಚೆ ನಿಂತು ನೋಡುವ, ನಮ್ಮ ಕನ್ನಡ ಸಿನಿಮಾಗಳಲ್ಲೀ ಇನ್ನೂ ಏನೋ ಬೇಕು ಎಂದು ಹಾತೊರೆಯುವ ಪ್ರೇಕ್ಷಕರಿಗೆ ಇದೊಂದು ಉತ್ತಮ ಸಿನಿಮಾ (Family Drama Film Review) ಅನ್ನಿಸ ಬಹುದು.

ಅಬ್ಬಬ್ಬಬಬ್ಬಾ.. ಇಂತಹ ಗ್ಯಾಂಗ್ ವಾರ್ ಸಿನಿಮಾ.! ಕನ್ನಡ ಸಿನಿಮಾದಲ್ಲಿ ನಾ ಹಿಂದೆಂದೂ ಕಂಡಿಲ್ಲ, ಗುಂಡಿನ ಚಕಮಕಿಯಲ್ಲಿ ಕಾಣುವ ಗನ್ನುಗಳೇ ಪ್ರೇಕ್ಷಕರನ್ನ ದಂಗಾಗಿಸಬಹುದು.! ಸೀದಾ ವಿಷಯಕ್ಕೆ ಬರೋಣ ಎನ್ನುವುದಾದರೇ ಇದೊಂದು ಗ್ಯಾಂಗ್ ವಾರ್ ಕಥೆಯ ಸಿನಿಮಾ ಅಲ್ಲ. ಗ್ಯಾಂಗ್ ವಾರ್ ಒಂದು ಫ್ಯಾಮಿಲಿಯೊಳಗೆ ಹೇಗೆ ನುಸುಳುತ್ತದೆ, ಆ ಮಿಡಲ್ ಕ್ಲಾಸ್ ಫ್ಯಾಮಿಲಿಯೊಳಗೆ ಏನೆಲ್ಲ ಡ್ರಾಮಾ ನೆಡೆಯುತ್ತದೆ ಎನ್ನುವ ಚಿತ್ರಕಥೆಯ ಡಾರ್ಕ್ ಕಾಮಿಡಿ ಸಿನಿಮಾ.

ಯುವ ಪ್ರೇಮಿಗಳ ರೀತಿ ನೀತಿ, ತಂದೆ ತಾಯಿಯ ಕಾಣದ ಕಾಳಜಿ ಜೊತೆಗೆ ಮಿಡಲ್ ಕ್ಲಾಸ್ ಫ್ಯಾಮಿಲಿಯೊಳಗಿನ ಡ್ರಾಮಾ ಇಷ್ಟವಾಗುತ್ತದೆ. ಈ ಕಾಮಿಡಿಯೊಳಗೂ ಸೀರಿಯಸ್ ವಿಷಯ ಏನಿದೆ ಅಂತ ನೋಡೋದಾದ್ರೆ ಹೊಸಬರಾದರೂ ಕಥಾಹಂದರಕ್ಕೆ ಎಳೆತಂದಿರುವ ವಿಷಯ ಹಾಗೂ ಪ್ರಾಮುಖ್ಯತೆಯನ್ನೆ ಕೊಡದೆ ಅದೂ ಕಾಮನ್ ಗುರು ಎನ್ನುವಂತೆ ತೇಲಿಸಿ ಬಿಟ್ಟಿರುವ ಸೂಕ್ಷ್ಮತೆಯೂ ಶಭಾಸ್ ಎನ್ನಿಸಬಹುದು. ಅದು ಹೇಗೆ ಎಂದರೇ ಹೆಣ್ಣೊಂದು ಧಮ್ ಹೊಡೆಯೋದನ್ನ ಬಿಟ್ಟ ಕಣ್ಣು ಬಿಟ್ಟ ಹಾಗೆ ನೋಡುವ ಸಮಾಜದಲ್ಲಿ ಇಲ್ಲೊಂದು ಮಿಡಲ್ ಕ್ಲಾಸ್ ಹುಡುಗಿಯರೂ ಉಫ್ ಅಂತಾ ಹೊಗೆ ಬಿಡುವುದನ್ನ ಸಾಮನ್ಯವೆಂಬಂತೆ ಬಿಟ್ಟಿರುವುದು. ಇಂದಿನ ಹುಡುಗರ ಬಾಯಲ್ಲಿ ಸರ್ವೇ ಸಾಮಾನ್ಯವಾಗಿ ಬರುವ ದುಡ್ಡಿದ್ದರೇ ಮಾತ್ರ ಹುಡುಗಿಯ ನಮ್ಮ ಜೊತೆಗಿರ್ತಾರೆ ಎನ್ನುವ ಲಾಜಿಕ್ ಸ್ಕ್ರಾಚ್ ಮಾಡಿರೋದು ಕೂಡ ಒಳ್ಳೆಯ ವಿಷಯವೆ. ಚಿತ್ರ ಎಲ್ಲವರ್ಗದಲ್ಲೂ ಅಚ್ಚುಕಟ್ಟಾಗಿ ರೂಪುಗೊಂಡಿದೆ, ಪ್ರೇಕ್ಷಕರನ್ನ ಮನರಂಜಿಸುತ್ತದೆ, ವೇಗ ಹೆಚ್ಚಿಸಿ ಮೊದಲಾರ್ದದ ಡ್ರಾಮಾಗೆ ಕೊಂಚ ಕತ್ತರಿ ಹಾಕ ಬಹುದಿತ್ತು ಅನಿಸುತ್ತದೆ. ಸೆಮಿ ಸೆಮಿ ಹಾಡು ಸಿಕ್ಕಾಬಟ್ಟೆ ಇಷ್ಟ ಆಗತ್ತೆ.

ಕೆಲ ದೃಶ್ಯದ ಕಲರ್ ಗ್ರೇಡಿಂಗ್ ವಿಶೇಷವಾಗಿದೆ. ಸಿಂಧೂ ಶ್ರೀನಿವಾಸ ಮೂರ್ತಿ, ಪೂರ್ಣಚಂದ್ರ ಮೈಸೂರು, ಅಭಯ್, ಅನನ್ಯಾ ಅಮರ್, ರೇಖಾ ಕೂಡ್ಲಿಗಿ, ವಿರೀಶ್ ಕೆ ಮಂಜುನಾಥ್, ಮಹದೇವ್ ಹಡಪದ್‌,ಆಶಿತ್, ಸಿರಿ ರವಿಕುಮಾರ್ ಸೇರಿದಂತೆ ಎಲ್ಲ ಕಲಾವಿದರ ಅಭಿನವೂ ಅತ್ಯುತ್ತಮವಾಗಿದೆ. ಅಭಯ ಹಾಗು ಅಮ್ಮನ ಪಾತ್ರ ,ಡಾನ್ ಪ್ರಕಾಶ, ವಿಷ್ಣು ಸೇರಿದಂತೆ ಟೋಬಿ, ಸಿಗರೇಟ್ ಹುಡುಗಿಯರು, ಅನಾಲಿಸಿಸ್ ಮಾಡಿ ಐಡಿಯಾ ಕೊಡುವ ಚೋಟು ಸೇರಿಂದಂತೆ ಚೇತನ್ ಅಮಯ್ಯ್ ಅವರ ವಿಶಿಷ್ಟ ಸಂಗೀತವೂ ಗಮನ ಸೆಳೆಯುತ್ತದೆ. ದಬ್ಬುಗುಡಿ ಮುರಳಿಕೃಷ್ಣ ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು. ಆಕರ್ಶ್ ಹೆಚ್ ಪಿ ಆಕ್ಷನ್ ಕಟ್ ಹೇಳಿದ್ದಾರೆ. ಆಶಿಶ್ ಹುಳಕೊಂಡ್ ಸಂಕಲನ ಹಾಗೂ ಸಿದ್ದಾರ್ಥ್ ಸುನೀಲ್ ಛಾಯಾಗ್ರಹಣವಿದೆ.

ಇದನ್ನೂ ಓದಿ: Family Drama Trailer: ʻಡೇರ್ ಡೆವಿಲ್ ಮುಸ್ತಾಫ’ ತಂಡದಿಂದ ವಿಭಿನ್ನ ಸಿನಿಮಾ!

ಕನ್ನಡಕ್ಕೆ ಇದೊಂದು ವಿಶಿಷ್ಟ ರೀತಿಯಾ ಸಿನಿಮಾ, ಚಿತ್ರದಲ್ಲಿ ಕಾಮಿಡಿ ಇದೆ, ಸಸ್ಪೆನ್ಸ್ ಇದೆ, ಹೊಸತಂಡದ ಹೊಸತನ ಹೊಸದಾಗೆ ಇದೆ, ಅದೇನಿದಿಯಪ್ಪಅಂತ ಹೊಸತು ಅನ್ನೋದನ್ನ ತಪ್ಪದೇ ಚಿತ್ರಮಂದಿರಕ್ಕೆ ಬೇಟಿಕೊಟ್ಟು ನೋಡಿ ಚಿತ್ರ ನಿಮ್ಮನು ರಂಜಿಸೋದು ಖಂಡಿತ.

Continue Reading

ಸ್ಯಾಂಡಲ್ ವುಡ್

Kannada New Movie: ಮಕ್ಕಳ ಸಾಹಸ ಕಥೆಯಾಧಾರಿತ `ಭಗವತಿ’ ಚಿತ್ರಕ್ಕೆ ಚಾಲನೆ

Kannada New Movie : ಮಕ್ಕಳಿಗೆ ಆಗುತ್ತಿರುವ ಅನ್ಯಾಯದ ವಿರುದ್ದ ಸಿಡಿದುನಿಂತ ಮಕ್ಕಳು ಕಾನೂನಾತ್ಮಕವಾಗಿ ಹೋರಾಟ ನಡೆಸಿ ಗೆಲ್ಲುವಂಥ ಮಕ್ಕಳ ಸಾಹಸಮಯ ಕಾಥಾಹಂದರ ಈ ಚಿತ್ರದಲ್ಲಿದೆ. ಈಗಿನ ಜನರೇಶನ್ ಕುರಿತಾದ ಕಾನ್ಸೆಪ್ಟ್ ಹೊಂದಿರುವ ಈ ಚಿತ್ರದಲ್ಲಿ ಮಕ್ಕಳು ಹೇಗೆ ಹೋರಾಡಿ ಗೆಲ್ಲುತ್ತಾರೆ ಎಂಬುದನ್ನು ನಿರ್ದೇಶಕರು ರೋಚಕ ಕಥೆಯೊಂದಿಗೆ ಹೇಳಹೊರಟಿದ್ದಾರೆ.

VISTARANEWS.COM


on

Kannada New Movie children's adventure story-based film bhavati
Koo

ಬೆಂಗಳೂರು: `ಬಂಗಾರಿ’, ಶಿವನಪಾದ’ ಸೇರಿದಂತೆ ಹಲವಾರು (Kannada New Movie) ಚಿತ್ರಗಳನ್ನು ನಿರ್ದೇಶಿಸಿದ ಮಾಚಂದ್ರು ಅವರು ಕಥೆ ಚಿತ್ರಕಥೆ ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳುತ್ತಿರುವ ಮಕ್ಕಳ ಸಾಹಸದ ಕಥೆ ಇರುವ ಮತ್ತೊಂದು ಚಿತ್ರ ಭಗವತಿ. ಈ ಚಿತ್ರಕ್ಕೆ ಇತ್ತೀಚೆಗೆ ಬೆಂಗಳೂರಿನ ವಿಜಯ ನಗರದ ಮಾರುತಿ ಮಂದಿರದಲ್ಲಿ ಮುಹೂರ್ತ ಸಮಾರಂಭ ನಡೆಯಿತು. ವಿದ್ಯಾಧರೆ ಸಿನಿಮಾಸ್ ಮೂಲಕ ನಿರ್ಮಾಣವಾಗುತ್ತಿರುವ ಚಿತ್ರ ಇದಾಗಿದೆ.

ಈ ಹಿಂದೆ ಲೂಸ್ ಮಾದ ಯೋಗಿ, ರಾಗಿಣಿ ಅಭಿನಯದ ಬಂಗಾರಿ, ಬೆಟ್ಟದ ದಾರಿ, ನಡಗಲ್ಲು, ಶಿವನಪಾದ ಚಿತ್ರಗಳನ್ನು ನಿರ್ದೇಶಿಸಿದ್ದ ಮಾಚಂದ್ರು ಅವರು ಈ ಸಲ ಮಕ್ಕಳ ಸಾಹಸದ ಕಥಾನಕ‌ ಒಳಗೊಂಡ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ಮಕ್ಕಳಿಗೆ ಆಗುತ್ತಿರುವ ಅನ್ಯಾಯದ ವಿರುದ್ದ ಸಿಡಿದು ನಿಂತ ಮಕ್ಕಳು ಕಾನೂನಾತ್ಮಕವಾಗಿ ಹೋರಾಟ ನಡೆಸಿ ಗೆಲ್ಲುವಂಥ ಮಕ್ಕಳ ಸಾಹಸಮಯ ಕಾಥಾಹಂದರ ಈ ಚಿತ್ರದಲ್ಲಿದೆ. ಈಗಿನ ಜನರೇಶನ್ ಕುರಿತಾದ ಕಾನ್ಸೆಪ್ಟ್ ಹೊಂದಿರುವ ಈ ಚಿತ್ರದಲ್ಲಿ ಮಕ್ಕಳು ಹೇಗೆ ಹೋರಾಡಿ ಗೆಲ್ಲುತ್ತಾರೆ ಎಂಬುದನ್ನು ನಿರ್ದೇಶಕರು ರೋಚಕ ಕಥೆಯೊಂದಿಗೆ ಹೇಳಹೊರಟಿದ್ದಾರೆ. ಈ ಚಿತ್ರದಲ್ಲಿ ಒಟ್ಟು ಎರಡು ಹಾಡುಗಳಿದ್ದು, ರಾಜೇಶ್ ಗೌಡ ಕ್ಯಾಮೆರಾ ವರ್ಕ್ ನಿಭಾಯಿಸುತ್ತಿದ್ದಾರೆ.

ಇದನ್ನೂ ಓದಿ: Kannada New Movie: ʼಜೀನಿಯಸ್ ಮುತ್ತʼನಿಗೆ ಸಾಥ್ ನೀಡಿದ ʼಚಿನ್ನಾರಿ ಮುತ್ತʼ; ಆಗಸ್ಟ್‌ನಲ್ಲಿ ಸಿನಿಮಾ ರಿಲೀಸ್‌

ಆಗಸ್ಟ್ 5ರಿಂದ ಆರಂಭಿಸಿ ಬೆಂಗಳೂರು, ಕನಕಪುರ ಹಾಗೂ ಮಡಿಕೇರಿಯ ಸುತ್ತಮುತ್ತ ಭಗವತಿ ಚಿತ್ರದ ಚಿತ್ರೀಕರಣ ನಡೆಯಲಿದೆ. ಇನ್ನು ಈ ಚಿತ್ರದಲ್ಲಿ ಬಾಲ ಕಲಾವಿದರಾದ ರಿಷಿಕಾ ರಾಮ್, ದೀಪಕ್ ಪಿ.ಕೆ, ಅದ್ವೈತ್ ಪ್ರೇರಣ್, ಅದೇಶ್ ಪ್ರೇರಣ್, ಅಭಿನವ್ ಸಮರ್ಥ, ವೇದಾಂತ್, ಮೇಘನಾ, ಮಾನ್ವಿ, ರೋಶಿನಿ, ತೇಜಸ್, ಸುಷ್ಮಾ, ಶ್ವೇತಾ, ವಿಷ್ಣು, ಜಿ.ಡಿ. ಹೇರಂಭ , ಭಾನು, ಮೋಹನ್ ಕುಮಾರ್ ಡಿ.ಕೆ. ಸತೀಶ್, ಶರತ್, ಹರ್ಷ. ಮುಂತಾದವರು ಅಭಿನಯಿಸುತ್ತಿದ್ದಾರೆ. ಉಳಿದ ಕಲಾವಿದರ ಹಾಗೂ ತಾಂತ್ರಿಕ ವರ್ಗದ ಆಯ್ಕೆ ಪ್ರಕ್ರಿಯೆ ನಡೆಯುತಿದೆ.

Continue Reading

ಸಿನಿಮಾ

Sai Pallavi: ಮದುವೆಯಾಗಿ ಮಕ್ಕಳಿರುವ ಸಹ ನಟನೊಂದಿಗೆ ಸಾಯಿ ಪಲ್ಲವಿ ಡೇಟಿಂಗ್‌?

Sai Pallavi: ಇತ್ತೀಚೆಗೆ, ಸಾಯಿ ಪಲ್ಲವಿ ಮದುವೆಯಾಗಿರುವ ಪ್ರಸಿದ್ಧ ನಟನೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಗಳು ಹುಟ್ಟಿಕೊಂಡಿವೆ. ಈ ಸುದ್ದಿ ವಿಶೇಷವಾಗಿ ಅವರ ಅಭಿಮಾನಿಗಳನ್ನು ಆಶ್ಚರ್ಯಗೊಳಿಸಿದೆ. ನಟಿಯ ಫಾಲೋವರ್ಸ್‌ಗಳು ಈ ವದಂತಿಗಳನ್ನು ತಳ್ಳಿಹಾಕುತ್ತಿದ್ದಾರೆ.

VISTARANEWS.COM


on

Sai Pallavi Dating a Married Actor Who Has Two Kids
Koo

ಬೆಂಗಳೂರು: ಸಾಯಿ ಪಲ್ಲವಿ (Sai Pallavi) ದಕ್ಷಿಣ ಭಾರತ ಚಿತ್ರರಂಗದ ಅತ್ಯಂತ ಪ್ರಸಿದ್ಧ ನಟಿಯರಲ್ಲಿ ಒಬ್ಬರು. 2015 ರ ಮಲಯಾಳಂ ಚಲನಚಿತ್ರ ‘ಪ್ರೇಮಂ’ನಲ್ಲಿನ ಅಭಿನಯದೊಂದಿಗೆ ವ್ಯಾಪಕ ಮೆಚ್ಚುಗೆಯನ್ನು ಗಳಿಸಿದರು. ಕಲಿ, ಮಾರಿ 2, ಗಾರ್ಗಿ ಮತ್ತು ಇತರ ಅನೇಕ ಚಲನಚಿತ್ರಗಳ ಮೂಲಕ ಹೆಸರು ಗಳಿಸಿದ್ದಾರೆ. ಸಿನಿಮಾ ಜತೆಗೆ ನಟಿ ಆಗಾಗ ವೈಯಕ್ತಿಕ ವಿಚಾರಗಳಿಗಾಗಿ ಸುದ್ದಿಯಲ್ಲಿ ಇರುತ್ತಾರೆ. ಸದ್ಯ ನಟಿ ಮದುವೆಯಾಗಿ ಮಕ್ಕಳಿರುವ ಸಹ ನಟನೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಸಾಕಷ್ಟು ವೈರಲ್‌ ಆಗಿದೆ.

ಇತ್ತೀಚೆಗೆ, ಸಾಯಿ ಪಲ್ಲವಿ ಮದುವೆಯಾಗಿರುವ ಪ್ರಸಿದ್ಧ ನಟನೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಗಳು ಹುಟ್ಟಿಕೊಂಡಿವೆ. ಈ ಸುದ್ದಿ ವಿಶೇಷವಾಗಿ ಅವರ ಅಭಿಮಾನಿಗಳನ್ನು ಆಶ್ಚರ್ಯಗೊಳಿಸಿದೆ. ನಟಿಯ ಫಾಲೋವರ್ಸ್‌ಗಳು ಈ ವದಂತಿಗಳನ್ನು ತಳ್ಳಿಹಾಕುತ್ತಿದ್ದಾರೆ. ಸದ್ಯ ಈ ಸುದ್ದಿ ನ್ಯಾಷನಲ್ ಲೆವೆಲ್‌ನಲ್ಲಿ ಸಂಚಲನ ಸೃಷ್ಟಿಸಿದೆ. ಆದರೆ ಈ ನಟ ಯಾರು ಎನ್ನೋದನ್ನು ಮಾತ್ರ ವರದಿಗಳಲ್ಲಿ ತಿಳಿಸಲಾಗಿಲ್ಲ. ಸದ್ಯಕ್ಕೆ ಈ ವದಂತಿಗಳಿಗೆ ಸಾಯಿ ಪಲ್ಲವಿ ಉತ್ತರ ನೀಡಿಲ್ಲ.

ಸದ್ಯ ಸಾಯಿ ಪಲ್ಲವಿ ಕೈಯಲ್ಲಿ ರಾಜ್‌ಕುಮಾರ್ ಪೆರಿಯಸಾಮಿ ನಿರ್ದೇಶನದ ತಮಿಳು ಚಿತ್ರ ಶಿವಕಾರ್ತಿಕೇಯನ್ ಜೊತೆ ನಟಿಸುತ್ತಿರುವ ಅಮರನ್, ನಾಗಚೈತನ್ಯ ಸಿನಿಮಾ ‘ತಾಂಡೇಲ್’ ಹಾಗೂ ಬಾಲಿವುಡ್‌ನ ‘ರಾಮಾಯಣ’ ಕೈಯಲ್ಲಿದೆ. ಟ್ರೆಡಿಷನಲ್ ಲುಕ್‌ನಲ್ಲಿ ನಟಿಸಿ ಜನರ ಮನಗೆದ್ದಿರುವ ಸಾಯಿ ಪಲ್ಲವಿ ದಕ್ಷಿಣ ಭಾರತದ ಸ್ಟಾರ್ ನಟಿಯರಲ್ಲಿ ಒಬ್ಬರು. ‘ಪ್ರೇಮಂ’, ಮಿಡಲ್ ಕ್ಲಾಸ್ ಅಬ್ಬಾಯ್, ಲವ್ ಸ್ಟೋರಿ, ಎನ್‌ಜಿಕೆ, ಗಾರ್ಗಿ, ಫಿದಾ, ಮಾರಿ 2 ಅಂತಹ ಹಿಟ್ ಸಿನಿಮಾಗಳಲ್ಲಿ ನಟಿಸಿದ್ದಾರೆ. ಸದ್ಯ ಒಂದಿಷ್ಟು ದಿನ ಸಿನಿಮಾದಿಂದ ದೂರ ಉಳಿದಿದ್ದರೂ, ಅವರ ಕೈಯಲ್ಲೀಗ ಮೆಗಾ ಪ್ರಾಜೆಕ್ಟ್‌ಗಳು ಇವೆ.

ಇದನ್ನೂ ಓದಿ” Sai Pallavi Mass Dance: ಆಮೀರ್​ ಖಾನ್​ ಪುತ್ರನ ಜತೆ ಪಬ್‌ನಲ್ಲಿ ಕುಣಿದು ಕುಪ್ಪಳಿಸಿದ ಸಾಯಿ ಪಲ್ಲವಿ!

ಶಿವ ಆರೂರ್ ಮತ್ತು ರಾಹುಲ್ ಸಿಂಗ್ ಅವರ ‘ಇಂಡಿಯಾಸ್ ಮೋಸ್ಟ್ ಫಿಯರ್‌ಲೆಸ್: ಟ್ರೂ ಸ್ಟೋರೀಸ್ ಆಫ್ ಮಾಡರ್ನ್ ಮಿಲಿಟರಿ’ ಪುಸ್ತಕವನ್ನು ಆಧರಿಸಿದ ಈ ಚಿತ್ರದಲ್ಲಿ ಶಿವಕಾರ್ತಿಕೇಯನ್, ಭುವನ್ ಅರೋರಾ, ಲಲ್ಲು, ಶ್ರೀಕುಮಾರ್ ಮತ್ತು ಶ್ಯಾಮ್ ಮೋಹನ್ ಸಹ ನಟಿಸಿದ್ದಾರೆ. ಇದು ಅಕ್ಟೋಬರ್ 31, 2024 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ರಾಮಾಯಣದೊಂದಿಗೆ ಬಾಲಿವುಡ್‌ಗೆ ಪದಾರ್ಪಣೆ ಮಾಡಿದ್ದಾರೆ ನಟಿ. ಈ ಚಿತ್ರದಲ್ಲಿ ಅವರು ಸೀತಾ ದೇವಿಯ ಪಾತ್ರದಲ್ಲಿ ರಣಬೀರ್ ಕಪೂರ್ ಭಗವಾನ್ ರಾಮನ ಪಾತ್ರವನ್ನು ನಿರ್ವಹಿಸಲಿದ್ದಾರೆ. ಈ ಜೋಡಿ ಈಗಾಗಲೇ ಮುಂಬೈನಲ್ಲಿ ಕೆಲವು ದೃಶ್ಯಗಳನ್ನು ಚಿತ್ರೀಕರಿಸಿದೆ ಮತ್ತು ಚಿತ್ರವು 2025 ರಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ.

Continue Reading
Advertisement
illicit relationship raichur siravara
ಕ್ರೈಂ6 mins ago

Illicit Relationship: ವಿಚ್ಛೇದಿತ ನರ್ಸ್‌ ಜೊತೆ ಲವ್ವಿ ಡವ್ವಿ; ಪೊಲೀಸಪ್ಪನಿಗೇ ಕಾನೂನು ರುಚಿ ತೋರಿಸಿದ ಪತ್ನಿ

Gold Rate Today
ಚಿನ್ನದ ದರ6 mins ago

Gold Rate Today: ಬಜೆಟ್‌ ಬಳಿಕ ಇದೇ ಮೊದಲ ಬಾರಿ ಏರಿಕೆ ಕಂಡ ಚಿನ್ನದ ದರ; ಇಂದು ಇಷ್ಟು ದುಬಾರಿ

Actor Darshan Astrologer Chanda Pandey Said Facing Problems Because Of His vig
ಕ್ರೈಂ26 mins ago

Actor Darshan: ವಿಗ್‌ ಹಾಕಿದ್ದರಿಂದಲೇ ದರ್ಶನ್‌ಗೆ ಕಂಟಕ ಆಯ್ತು ಎಂದ ಕಾಳಿ ಉಪಾಸಕಿ ಚಂದಾ ಪಾಂಡೇ!

Encounter in Kupwara
ದೇಶ53 mins ago

Encounter in Kupwara: ಕುಪ್ವಾರಾದಲ್ಲಿ ಉಗ್ರರೊಂದಿಗೆ ಗುಂಡಿನ ಚಕಮಕಿ: ಮೂವರು ಸೈನಿಕರಿಗೆ ಗಾಯ

Champions Trophy 2025
ಕ್ರೀಡೆ56 mins ago

Champions Trophy 2025: ನಾವು ತುಂಬಾ ಒಳ್ಳೆಯವರು, ಪಾಕಿಸ್ತಾನಕ್ಕೆ ಬನ್ನಿ; ಟೀಮ್ ಇಂಡಿಯಾಗೆ ಪಾಕ್​ ಆಟಗಾರನ ಮನವಿ

Murder in PG Case
ಕ್ರೈಂ1 hour ago

Murder in PG: ಪಿಜಿಯಲ್ಲಿ ಯುವತಿ ಕೊಲೆ ಮಾಡಿದ ಪಾತಕಿ ಮಧ್ಯಪ್ರದೇಶದಲ್ಲಿ ಸೆರೆ

kaveri aarti
ಪ್ರಮುಖ ಸುದ್ದಿ1 hour ago

Kaveri Aarti: ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ; ದಸರಾ ಹೊತ್ತಿಗೆ ರೆಡಿ

Malaika Arora breakup rumours rushes past Arjun Kapoor
ಬಾಲಿವುಡ್1 hour ago

Malaika Arora: ಒಂದೇ ಈವೆಂಟ್‌ನಲ್ಲಿ ಇದ್ದರೂ ಒಬ್ಬರ ಮುಖವನ್ನು ಇನ್ನೊಬ್ಬರು ನೋಡಿಕೊಂಡಿಲ್ಲ! ಅರ್ಜುನ್​-ಮಲೈಕಾ ಬ್ರೇಕಪ್‌ ಖಚಿತ?

Narendra Modi
ದೇಶ2 hours ago

Narendra Modi: ರಷ್ಯಾ ಬಳಿಕ ಮುಂದಿನ ತಿಂಗಳು ಯುದ್ಧ ಪೀಡಿತ ಉಕ್ರೇನ್‌ಗೆ ಪ್ರಧಾನಿ ಮೋದಿ ಭೇಟಿ

Actor Rajinikanth Fulfils Grandfather Duties By Dropping Grandson At School
ಕಾಲಿವುಡ್2 hours ago

Actor Rajinikanth: ಶಾಲೆಗೆ ಹೋಗಲ್ಲ ಎಂದು ಹಠ ಹಿಡಿದ ಮೊಮ್ಮಗ; ತಾತನ ಡ್ಯೂಟಿ ಮಿಸ್ ಮಾಡ್ದೆ ಸ್ಕೂಲ್‌ಗೆ ಬಿಟ್ಟು ಬಂದ ರಜನಿಕಾಂತ್‌!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Ankola landslide
ಉತ್ತರ ಕನ್ನಡ16 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ17 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ18 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ19 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ3 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ4 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

ಟ್ರೆಂಡಿಂಗ್‌