Aadujeevitham Box Office : ಎರಡು ದಿನಕ್ಕೆ ‘ಆಡುಜೀವಿತಂ’ ಮಾಡಿದ ಕಲೆಕ್ಷನ್ ಎಷ್ಟು - Vistara News

ಮಾಲಿವುಡ್

Aadujeevitham Box Office : ಎರಡು ದಿನಕ್ಕೆ ‘ಆಡುಜೀವಿತಂ’ ಮಾಡಿದ ಕಲೆಕ್ಷನ್ ಎಷ್ಟು

Aadujeevitham Box Office : ಹಣ ಸಂಪಾದಿಸಲು ಸೌದಿ ಅರೇಬಿಯಾಕ್ಕೆ ಹೋದ ಭಾರತೀಯ ವಲಸೆ ಕಾರ್ಮಿಕ ನಜೀಬ್ ಮುಹಮ್ಮದ್ ನಿಜ ಜೀವನದ ಘಟನೆಯೇ ಈ ʻಆಡುಜೀವಿತಂʼ. ಪೃಥ್ವಿರಾಜ್ ಸುಕುಮಾರನ್‌ (Prithviraj Sukumaran) ಮತ್ತು ಅಮಲಾ ಪಾಲ್ (Amala Paul) ಪ್ರಮುಖ ಪಾತ್ರದಲ್ಲಿ ಇದ್ದಾರೆ. ಮೊದಲನೇ ದಿನವೇ ಒಳ್ಳೆಯ ಕಲೆಕ್ಷನ್‌ ಮಾಡಿತ್ತು. ಇದೀಗ ಎರಡನೇ ದಿನ ಮಲಯಾಳಂ ಚಿತ್ರರಂಗದಿಂದಲೇ 11.82 ಕೋಟಿ ರೂಪಾಯಿ ಗಳಿಕೆ ಆಗಿದೆ.

VISTARANEWS.COM


on

Aadujeevitham Box Office Collection Poster
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಲಯಾಳಂ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ( Prithviraj Sukumaran) ಅಭಿನಯದ ಮತ್ತು ಬ್ಲೆಸ್ಸಿ ನಿರ್ದೇಶನದ ಬಹುನಿರೀಕ್ಷಿತ ಚಿತ್ರ ʻಆಡುಜೀವಿತಂʼ (Aadujeevitham Movie) ಮಾರ್ಚ್‌ 28ರಂದು ಅದ್ಧೂರಿಯಾಗಿ ತೆರೆ ಕಂಡಿದೆ. ಚಿತ್ರವನ್ನು ಕಂಡು ವೀಕ್ಷಕರು ಮೂಕಸ್ಮಿತರಾಗಿದ್ದಾರೆ. ವಿಶೇಷವಾಗಿ ಪೃಥ್ವಿರಾಜ್ ಸುಕುಮಾರನ್ ಅವರ ಅಭಿನಯಕ್ಕೆ ಮನಸೋತಿದ್ದಾರೆ. ಸೋಷಿಯಲ್‌ ಮೀಡಿಯಾ ಮೂಲಕ ಪ್ರೇಕ್ಷಕರು ಮೆಚ್ಚುಗೆ ಹೊರಹಾಕಿದ್ದಾರೆ. ಇದೀಗ ಭಾರತದಲ್ಲಿ ಚಿತ್ರದ ಗಳಿಕೆ ಎರಡನೇ ದಿನ 6.50 ಕೋಟಿ ರೂಪಾಯಿ ಆಗಿದೆ. ಈ ಮೂಲಕ ಒಟ್ಟಾರೆ ಕಲೆಕ್ಷನ್ (Aadujeevitham Box Office) 14.10 ಕೋಟಿ ರೂಪಾಯಿ ದಾಟಿದೆ.

ಭಾರತದಲ್ಲಿ ಮೊದಲ ದಿನವೇ ಚಿತ್ರ 7.60 ಕೋಟಿ ಗಳಿಸಿತು. ಎರಡನೇ ದಿನದಲ್ಲಿ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಕೇವಲ 6.50 ಕೋಟಿ ರೂ. ಗಳಿಸಿದೆ ಎಂದು ವರದಿಯಾಗಿದೆ, ಆ ಮೂಲಕ ಬಿಡುಗಡೆಯಾದ ಎರಡು ದಿನಗಳಲ್ಲಿ ಎಲ್ಲಾ ಭಾರತೀಯ ಭಾಷೆಗಳಿಂದ ಒಟ್ಟು 14.10 ಕೋಟಿ ರೂ. ಕಲೆಕ್ಷನ್‌ ಆಗಿದೆ. ಮಲಯಾಳಂ ಚಿತ್ರರಂಗದಿಂದಲೇ 11.82 ಕೋಟಿ ರೂಪಾಯಿ ಗಳಿಕೆ ಆಗಿದೆ. ಕನ್ನಡದಿಂದ ಕೇವಲ 90 ಲಕ್ಷ ರೂಪಾಯಿ ಕಲೆಕ್ಷನ್ ಆಗಿದೆ. ಈ ಚಿತ್ರವನ್ನು ಕರ್ನಾಟಕದಲ್ಲಿ ಹೊಂಬಾಳೆ ಫಿಲ್ಮ್ಸ್ ಹಂಚಿಕೆ ಮಾಡಿದೆ. ಮೊದಲ ದಿನ ಶೇ. 57.79 ಆಕ್ಯುಪೆನ್ಸಿ ಇದ್ದರೆ, ಎರಡನೇ ದಿನದ ಆಕ್ಯುಪೆನ್ಸಿ ಶೇ. 75.09ರಷ್ಟು ಇತ್ತು. ಬಹ್ರೇನ್, ಕತಾರ್, ಮತ್ತು ಒಮಾನ್ ಸೇರಿದಂತೆ ʻಆಡುಜೀವಿತಂʼ ಮಾರ್ಚ್ 28ರಂದು ಯುನೈಟೆಡ್ ಅರಬ್ ಎಮಿರೇಟ್ಸ್‌ನ (United Arab Emirates) ಚಿತ್ರಮಂದಿರಗಳಲ್ಲಿ ತೆರೆಕಂಡಿತು.ʼ

ಇದನ್ನೂ ಓದಿ: Prithviraj Sukumaran: ಪೃಥ್ವಿರಾಜ್ ಸುಕುಮಾರನ್‌ ಅಭಿನಯದ ‘ಆಡುಜೀವಿತಂ’ ಚಿತ್ರಕ್ಕೆ ಪ್ರೇಕ್ಷಕರು ಫಿದಾ!

ಆಡು ಜೀವಿತಂ (Aadujeevitham Movie ) `ದಿ ಗೋಟ್ ಲೈಫ್’ ಸಿನಿಮಾದಲ್ಲಿ ಸೂಪರ್ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬೆನ್ಯಾಮಿನ್ ಅವರ ಗೋಟ್ ಡೇಸ್ ಕಾದಂಬರಿ ಆಧರಿಸಿದ ಸಿನಿಮಾ ಇದಾಗಿದೆ. ಒಂದು ದಶಕದ ಪ್ರಯತ್ನದ ನಂತರ, ಮಲಯಾಳಂ ಸೂಪರ್ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ಅಭಿನಯದ ಈ ಸಿನಿಮಾ ನೈಜ ಕಥೆ ಆಧರಿಸಿದ ಚಿತ್ರವಾಗಿದೆ.

ಆಡು ಜೀವಿತಂ ಚಿತ್ರದ ಕಥೆ ವಲಸಿಗರ ಸಮಸ್ಯೆ ಸುತ್ತ ಸುತ್ತುತ್ತದೆ. ದುಡಿಮೆಗಾಗಿ ಸೌದಿ ಅರೇಬಿಯಾಗೆ ವಲಸೆ ಹೋಗುವ ನಸೀಬ್ ಮೊಹಮ್ಮದ್ ಎನ್ನುವ ಕೇರಳದ ವ್ಯಕ್ತಿ ಅಲ್ಲಿ ಪಟ್ಟಂತ ಕಷ್ಟಗಳು ಆತನ ಪಾಸ್‌ಪೋರ್ಟ್‌ ಕಸಿದು ಆತನಿಗೆ ಕೊಟ್ಟಂತಹ ಹಿಂಸೆಗಳು, ಆ ಬಿಸಿಲಿನ ಮರುಭೂಮಿಯಲ್ಲಿ ಆತ ಅನುಭವಿಸಿದ ಸಂಕಷ್ಟಗಳ ಕಥನವೇ ಈ ಆಡು ಜೀವಿತಂ.

ಇದನ್ನೂ ಓದಿ: Aadujeevitham Movie: ರಿಲೀಸ್‌ಗೆ ಸಜ್ಜಾಗುತ್ತಿದೆ ʻಆಡುಜೀವಿತಂʼ!

ಏನಿದೆ ಆಡುಜೀವಿತಂ ಸಿನಿಮಾ ಕಥೆ?

ಹಣ ಸಂಪಾದಿಸಲು ಸೌದಿ ಅರೇಬಿಯಾಕ್ಕೆ ಹೋದ ಭಾರತೀಯ ವಲಸೆ ಕಾರ್ಮಿಕ ನಜೀಬ್ ಮುಹಮ್ಮದ್ ನಿಜ ಜೀವನದ ಘಟನೆ ಇದು ಎಂದು ನಿರ್ದೇಶಕರು ಹೇಳಿಕೊಂಡಿದ್ದಾರೆ. ವಿಧಿಯ ವೈಚಿತ್ರ್ಯದಿಂದಾಗಿ ನಜೀಬ್‌ ಗುಲಾಮನ ಬದುಕನ್ನು ಬದುಕಬೇಕಾದ ಅನಿವಾರ್ಯತೆ ಸೃಷ್ಟಿಯಾಗುತ್ತದೆ. ಅವನು ಮರುಭೂಮಿಯ ಮಧ್ಯದಲ್ಲಿ ಮೇಕೆಗಳನ್ನು ಮೇಯಿಸಬೇಕಾಗುತ್ತದೆ. ಆಡು ಜೀವಿತಂ ಅಂದರೆ ಆಡಿನ ಬದುಕು ಅಂಥ ಅರ್ಥ. ಇಂಗ್ಲಿಷ್‌ನಲ್ಲಿ ಇದರ ಟೈಟಲ್‌ GOAT LIFE ಎಂದಿದೆ.

ಪರ್ಷಿಯನ್ ಕೊಲ್ಲಿ ರಾಷ್ಟ್ರಗಳಲ್ಲಿ ಕೆಲಸ ಮಾಡಿ ಮನೆಗೆ ಕಳುಹಿಸುವಷ್ಟು ಹಣ ಸಂಪಾದಿಸುವುದು ನಜೀಬ್ ಅವರ ಕನಸಾಗಿತ್ತು. ಆದರೆ, ಸೌದಿ ಮರುಭೂಮಿಯ ಮಧ್ಯದಲ್ಲಿ ಆಡುಗಳನ್ನು ಮೇಯಿಸುವ ಗುಲಾಮಗಿರಿಯ ಕೆಲಸಕ್ಕೆ ಒಡ್ಡಿಕೊಳ್ಳಬೇಕಾದ ಅನಿವಾರ್ಯತೆ ಏನು ಬಂತು? ಅವನು ಕೊನೆಗೂ ತನ್ನನ್ನು ತಾನು ಹೇಗೆ ಬಂಧಮುಕ್ತಗೊಳಿಸಿಕೊಳ್ಳುತ್ತಾನೆ ಎನ್ನುವುದೊಂದು ದೊಡ್ಡ ಹೋರಾಟದ ಕಥೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಾಲಿವುಡ್

Manjummel Boys: ‘ಮಂಜುಮ್ಮೆಲ್ ಬಾಯ್ಸ್’ ಒಟಿಟಿ ಡೇಟ್ ಅನೌನ್ಸ್ ಮಾಡಿದ ಡಿಸ್ನಿ!

Manjummel Boys: ʻಮಂಜುಮ್ಮೇಲ್ ಬಾಯ್ಸ್ʼ ಸುಮಾರು 5 ಕೋಟಿ ರೂ. ಬಜೆಟ್‌ನಲ್ಲಿ ತಯಾರಾದ ಚಿತ್ರದ ಗಳಿಕೆ ಬರೋಬ್ಬರಿ 200 ಕೋಟಿ ರೂ. ಗಳಿಕೆ ಕಂಡಿದೆ. ಥಿಯೇಟರ್‌ನಲ್ಲಿ ಪ್ರೇಕ್ಷಕರ ಗಮನ ಸೆಳೆದ ಈ ಚಿತ್ರ ಒಟಿಟಿ (OTT)ಗೆ ಬರಲು ಸಿದ್ಧವಾಗಿದೆ. ಡಿಸ್ನಿ ಪ್ಲಸ್ ಹಾಟ್​​ಸ್ಟಾರ್ ಮೂಲಕ ‘ಮಂಜುಮ್ಮೇಲ್ ಬಾಯ್ಸ್’ ವೀಕ್ಷಣೆಗೆ ಲಭ್ಯವಾಗಲಿದೆ. ಚಿದಂಬರಂ ನಿರ್ದೇಶನದ ಈ ಚಿತ್ರ ಫೆಬ್ರವರಿ 22ರಂದು ಥಿಯೇಟರ್​ನಲ್ಲಿ ಬಿಡುಗಡೆಯಾಗಿತ್ತು.

VISTARANEWS.COM


on

Manjummel Boys
Koo

ಬೆಂಗಳೂರು: ಕೆಲವು ಸಮಯದಿಂದ ಮಂಕಾಗಿದ್ದ ಮಲಯಾಳಂ ಚಿತ್ರರಂಗ (Mollywood) ಮತ್ತೆ ಸದ್ದು ಮಾಡತೊಡಗಿದೆ. ಬ್ಯಾಕ್‌ ಟು ಬ್ಯಾಕ್‌ ಮಲಯಾಳಂ ಚಿತ್ರಗಳು ಬಾಕ್ಸ್‌ ಆಫೀಸ್‌ನಲ್ಲಿ ಕಮಾಲ್‌ ಮಾಡುವ ಜತೆಗೆ ದೇಶದ ಗಮನ ಸೆಳೆಯುತ್ತಿವೆ. ಅದರಲ್ಲಿಯೂ ʻಮಂಜುಮ್ಮೆಲ್ ಬಾಯ್ಸ್ʼ (Manjummel Boys)ನ ಹವಾ ಜೋರಾಗಿಯೇ ಬೀಸುತ್ತಿದೆ. ಸುಮಾರು 5 ಕೋಟಿ ರೂ. ಬಜೆಟ್‌ನಲ್ಲಿ ತಯಾರಾದ ಈ ಚಿತ್ರದ ಗಳಿಕೆ ಬರೋಬ್ಬರಿ 200 ಕೋಟಿ ರೂ. ಗಳಿಕೆ ಕಂಡಿದೆ. ಥಿಯೇಟರ್‌ನಲ್ಲಿ ಪ್ರೇಕ್ಷಕರ ಗಮನ ಸೆಳೆದ ಈ ಚಿತ್ರ ಒಟಿಟಿ (OTT)ಗೆ ಬರಲು ಸಿದ್ಧವಾಗಿದೆ. ಮೇ 5 (ಭಾನುವಾರ) ಸಿನಿಮಾ ಡಿಸ್ನಿ ಪ್ಲಸ್ ಹಾಟ್​ಸ್ಟಾರ್​ನಲ್ಲಿ ಪ್ರಸಾರ ಕಾಣಲಿದೆ.

ಥಿಯೇಟರ್‌ಗಳಲ್ಲಿ ʻಮಂಜುಮ್ಮೆಲ್ ಬಾಯ್ಸ್ʼನನ್ನು ನೋಡಲಾಗದವರು ಒಟಿಟಿಗೆ ಯಾವಾಗ ಬರುತ್ತದೆ ಎಂದು ಕುತೂಹಲದಿಂದ ಕಾಯುತ್ತಿದ್ದಾರೆ. ಅವರ ಕಾತುರಕ್ಕೆ ಕೊನೆಗೂ ತೆರೆ ಬಿದ್ದಿದೆ. ಡಿಸ್ನಿ ಪ್ಲಸ್ ಹಾಟ್​​ಸ್ಟಾರ್ ಮೂಲಕ ‘ಮಂಜುಮ್ಮೇಲ್ ಬಾಯ್ಸ್’ ವೀಕ್ಷಣೆಗೆ ಲಭ್ಯವಾಗಲಿದೆ. ಮೇ 3ರಂದು ‘ಮಂಜುಮ್ಮೇಲ್ ಬಾಯ್ಸ್’ ಒಟಿಟಿಯಲ್ಲಿ ಪ್ರಸಾರ ಕಾಣಲಿದೆ ಎಂದು ಹೇಳಲಾಗಿತ್ತು. ಆದರೆ, ಇದಕ್ಕೆ ಟ್ವಿಸ್ಟ್ ನೀಡಲಾಗಿದೆ. ಮೇ 5 (ಭಾನುವಾರ) ಸಿನಿಮಾ ಡಿಸ್ನಿ ಪ್ಲಸ್ ಹಾಟ್​ಸ್ಟಾರ್​ನಲ್ಲಿ ಪ್ರಸಾರ ಕಾಣಲಿದೆ.

ಇದನ್ನೂ ಓದಿ: Manjummel Boys: ಕನ್ನಡದಲ್ಲೂ ಬರಲಿದೆ ʻಮಂಜುಮ್ಮೆಲ್ ಬಾಯ್ಸ್ʼ? ಒಟಿಟಿಗೆ ಯಾವಾಗ?

ಚಿದಂಬರಂ ನಿರ್ದೇಶನದ ಈ ಚಿತ್ರ ಫೆಬ್ರವರಿ 22ರಂದು ಥಿಯೇಟರ್​ನಲ್ಲಿ ಬಿಡುಗಡೆಯಾಗಿತ್ತು. ಅಂದಿನಿಂದ ಇದು ಸುಮಾರು 200 ಕೋಟಿ ರೂ. ಕಲೆಕ್ಷನ್‌ ಮಾಡಿದ್ದು, ಈ ಮೂಲಕ ಅತ್ಯಧಿಕ ಗಳಿಕೆ ಕಂಡ ಮಲಯಾಳಂ ಚಿತ್ರ ಎನ್ನುವ ದಾಖಲೆ ಬರೆದಿದೆ. ಇದು ಚಿದಂಬರಂ ಅವರ ಎರಡನೇ ಸಿನಿಮಾ. 2021ರಲ್ಲಿ ಇವರು ಆ್ಯಕ್ಷನ್‌ ಕಟ್‌ ಹೇಳಿದ್ದ ʼಜಾನ್‌.ಇ.ಮಾನ್‌ʼ ಚಿತ್ರ ಬಿಡುಗಡೆಯಾಗಿತ್ತು. ನಟ ʻಮಂಜುಮ್ಮೇಲ್ ಬಾಯ್ಸ್ʼ ಸಿನಿಮಾವನ್ನು ಸೌಬಿನ್ ಶಾಹಿರ್ ಚಿತ್ರವನ್ನು ನಿರ್ಮಾಣ ಮಾಡುವ ಜತೆಗೆ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಶ್ರೀನಾಥ್ ಭಾಸಿ, ಬಾಲು ವರ್ಗೀಸ್, ಗಣಪತಿ ಮತ್ತು ಜೀನ್ ಪಾಲ್ ಲಾಲ್ ಮತ್ತಿತರರು ನಟಿಸಿದ್ದಾರೆ.

ಕಥೆ ಏನು?

2006ರಲ್ಲಿ ಕೇರಳದಿಂದ ತಮಿಳುನಾಡಿನ ಕೊಡೈಕೆನಲ್​ಗೆ ಫ್ರೆಂಡ್ಸ್ ಗ್ರೂಪೊಂದಕು ಟ್ರಿಪ್ ಹೊರಡುತ್ತದೆ. ʻಡೆವಿಲ್ಸ್ ಕಿಚನ್ʼ ಹೆಸರಿನ ಗುಹೆಯಲ್ಲಿ ಸುಭಾಷ್ ಎಂಬಾತ ಬೀಳುತ್ತಾನೆ. ಆತನನ್ನು ರಕ್ಷಿಸಲು ಫ್ರೆಂಡ್ಸ್ ಪ್ರಯತ್ನಿಸುತ್ತಾರೆ. ಇದರಲ್ಲಿ ಯಶಸ್ವಿ ಆಗ್ತಾರಾ ಇಲ್ಲವಾ ಎಂಬುದೇ ಕಥೆ.

ಇದನ್ನೂ ಓದಿ: Ramayana Movie: ರಾಮಾಯಣ’ ಸಿನಿಮಾದ ರಣ್‌ಬೀರ್, ಸಾಯಿ ಪಲ್ಲವಿ ಲುಕ್ ಲೀಕ್

ನೈಜ ಘಟನೆ

ವಿಶೇಷ ಎಂದರೆ ಇದು ನೈಜ ಘಟನೆ ಆಧಾರಿತ ಸಿನಿಮಾ. ನೈಜವಾಗಿ, ಸರಳವಾಗಿ ಚಿತ್ರವನ್ನು ನಿರೂಪಿಸಲಾಗಿದೆ. ಇದು ಈ ಚಿತ್ರದ ಯಶಸ್ಸಿಗೆ ಮುಖ್ಯ ಕಾರಣ ಎಂದು ಸಿನಿಮಾ ತಜ್ಞರು ಅಭಿಪ್ರಾಯ ಪಡುತ್ತಾರೆ. ಈ ಹಿಂದೆ ಸಿನಿಮಾ ರಂಗದ ಹಲವು ದಿಗ್ಗಜರು ಈ ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದರು.

ಮಂಜುಮ್ಮೇಲ್ ಬಾಯ್ಸ್ʼ ಚಿತ್ರದ ಮೂಲಕ ಮಾಲಿವುಡ್‌ ಭರ್ಜರಿ ಕಂಬ್ಯಾಕ್‌ ಮಾಡಿದೆ. ಇತ್ತೀಚೆಗೆ ತೆರೆಕಂಡ ಹಲವು ಮಲಯಾಳಂ ಚಿತ್ರಗಳಯ ಬಾಕ್ಸ್‌ ಆಫೀಸ್‌ನಲ್ಲಿ ಮ್ಯಾಜಿಕ್‌ ಮಾಡಿವೆ. ʼಪ್ರೇಮುಲುʼ, ʼಭ್ರಮಯುಗಂʼ, ʼಅಬ್ರಹಾಂ ಓಜ್ಲರ್ʼ ಮುಂತಾದ ಸಿನಿಮಾಗಳು ಹಿಟ್‌ ಆಗಿವೆ.

Continue Reading

ಮಾಲಿವುಡ್

Actor Mohanlal: 56ನೇ ಬಾರಿಗೆ ಮೋಹನ್ ಲಾಲ್ ಜತೆ ತೆರೆ ಹಂಚಿಕೊಳ್ಳುತ್ತಿದ್ದಾರೆ ಈ ಫೇಮಸ್‌ ನಟಿ!

Actor Mohanlal: ನಟಿ ತನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಈ ಬಗ್ಗೆ ಶೇರ್‌ ಮಾಡಿ ʻʻನಾಲ್ಕು ವರ್ಷಗಳು ನಾಲ್ಕು ನಿಮಿಷಗಳಂತೆ ಕಳೆದಿವೆ. L360”ಎಂದು ಬರೆದುಕೊಂಡಿದ್ದಾರೆ. ಹಲವು ದಶಕಗಳಿಂದ ನಟಿ ಶೋಬನಾ ಮಲಯಾಳಂ ಚಿತ್ರರಂಗದಲ್ಲಿ ನಟಿಸಿಕೊಂಡು ಬಂದವರು. ನಟನೆ ಜತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಹಲವು ನೃತ್ಯ ಪ್ರದರ್ಶನಗಳನ್ನು ನೀಡುತ್ತ ಬರುತ್ತಿದ್ದರು.

VISTARANEWS.COM


on

Actor Mohanlal Shobana reunites L360
Koo

ಬೆಂಗಳೂರು: ಮಾಲಿವುಡ್‌ ಫ್ಯಾನ್ಸ್‌ ನಟ ಮೋಹನ್ ಲಾಲ್ (Actor Mohanlal) ಮತ್ತು ಶೋಬನಾ (Shobana) ನಡುವಿನ ಆನ್-ಸ್ಕ್ರೀನ್ ಕೆಮಿಸ್ಟ್ರಿಯನ್ನು ಇಷ್ಟಪಡುತ್ತಾರೆ. ಇದೀಗ ಈ ತಾರೆಯರು ಹಲವು ವರ್ಷಗಳ ಬ್ರೇಕ್‌ ನಂತರ ಒಟ್ಟಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ತಾತ್ಕಾಲಿಕವಾಗಿ ಶೀರ್ಷಿಕೆ ಇಡಲಾದ L360 ಗಾಗಿ ತೆರೆಯ ಮೇಲೆ ಮತ್ತೆ ಒಂದಾಗಲು ಸಿದ್ಧರಾಗಿದ್ದಾರೆ. ʻಆಪರೇಷನ್ ಜಾವಾʼ ಖ್ಯಾತಿಯ ತರುಣ್ ಮೂರ್ತಿ ನಿರ್ದೇಶಿಸುತ್ತಿರುವ ಈ ಚಿತ್ರ ಶೀಘ್ರದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದ್ದು, ಇಬ್ಬರೂ ತಾರೆಯರು 56ನೇ ಬಾರಿಗೆ ತೆರೆಯನ್ನು ಒಟ್ಟಿಗೆ ಹಂಚಿಕೊಳ್ಳುತ್ತಿದ್ದಾರೆ.

ನಟಿ ತನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಈ ಬಗ್ಗೆ ಶೇರ್‌ ಮಾಡಿ ʻʻನಾಲ್ಕು ವರ್ಷಗಳು ನಾಲ್ಕು ನಿಮಿಷಗಳಂತೆ ಕಳೆದಿವೆ. L360”ಎಂದು ಬರೆದುಕೊಂಡಿದ್ದಾರೆ. ಹಲವು ದಶಕಗಳಿಂದ ನಟಿ ಶೋಬನಾ ಮಲಯಾಳಂ ಚಿತ್ರರಂಗದಲ್ಲಿ ನಟಿಸಿಕೊಂಡು ಬಂದವರು. ಸಾರ್ವಜನಿಕರಿಂದ ಹೆಚ್ಚಾಗಿ ದೂರವೇ ಇರುತ್ತಿದ್ದರು. ನಟನೆ ಜತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಹಲವು ನೃತ್ಯ ಪ್ರದರ್ಶನಗಳನ್ನು ನೀಡುತ್ತ ಬರುತ್ತಿದ್ದರು.

ಈ ಹಿಂದೆ, ನಟಿ ಸುರೇಶ್ ಗೋಪಿ, ಕಲ್ಯಾಣಿ ಪ್ರಿಯದರ್ಶನ್ ಮತ್ತು ದುಲ್ಕರ್ ಸಲ್ಮಾನ್ ಅವರೊಂದಿಗೆ ನಟಿಸಿದ 2020 ರ ʻವಾರಣೆ ಅವಶ್ಯಮುಂದ್ʼ ಚಿತ್ರದಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸಿದ್ದರು. ಅನೂಪ್ ಸತ್ಯನ್ ಅವರ ಈ ʻವಾರಣೆ ಅವಶ್ಯಮುಂದ್ʼ ಚಿತ್ರದಲ್ಲಿ ಶೋಬನಾ 7 ವರ್ಷಗಳ ನಂತರ ಮತ್ತೆ ಬಣ್ಣ ಹಚ್ಚಿದ್ದರು. ಇದೀಗ ಮೋಹನ್‌ಲಾಲ್‌ ಅವರ ಜತೆ ನಟಿಸಲಿರುವ ಸಿನಿಮಾ ಶೋಬನಾ ಅವರ 91ನೇ ಸಿನಿಮಾವಾಗಿದೆ.

ಇದನ್ನೂ ಓದಿ: Actor Mohanlal: ಮೋಹನ್‌ಲಾಲ್ ಅಭಿನಯದ ʻಮಲೈಕೋಟ್ಟೈ ವಾಲಿಬನ್ʼ ಟೀಸರ್‌ ಔಟ್‌!

ಮೋಹನ್‌ಲಾಲ್‌ ಜತೆ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ

ನಂದಕಿಶೋರ್ ಅವರು ಮಲಯಾಳಂ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಮಾಲಿವುಡ್‌ ಸ್ಟಾರ್‌ ಮೋಹನ್ ಲಾಲ್ (Actor Mohan Lal) ಅವರಿಗೆ ನಂದಕಿಶೋರ್ ಸಿನಿಮಾ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೇ ಈ ಸಿನಿಮಾಗೆ ಏಕ್ತಾ ಕಪೂರ್‌ ಅವರ ಸಹ ನಿರ್ಮಾಣವಿದೆ. ಈ ಬಹುನಿರೀಕ್ಷಿತ ಚಿತ್ರದ ಶೂಟಿಂಗ್​ ಆರಂಭ ಆಗಿದೆ. ಈ ಚಿತ್ರದ ಪಾತ್ರವರ್ಗ ಗಮನ ಸೆಳೆಯುತ್ತಿದೆ. ಈಗ ರಾಗಿಣಿ ದ್ವಿವೇದಿ (Ragini Dwivedi) ಅವರು ನಟ ಮೋಹನ್​ಲಾಲ್​ ಜತೆ ನಟಿಸುತ್ತಿದ್ದಾರೆ. ಮೋಹನ್​ಲಾಲ್​ ಅಭಿನಯದ ‘ವೃಷಭ’ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ.

Continue Reading

ಮಾಲಿವುಡ್

Manjummel Boys: ಕನ್ನಡದಲ್ಲೂ ಬರಲಿದೆ ʻಮಂಜುಮ್ಮೆಲ್ ಬಾಯ್ಸ್ʼ? ಒಟಿಟಿಗೆ ಯಾವಾಗ?

Manjummel Boys: ಚಿದಂಬರಂ ಪೊದುವಾಲ್ ಅವರ ಎರಡನೇ ನಿರ್ದೇಶನ ಸಿನಿಮಾ ಇದು. ಈ ಮುಂಚೆ ʻಜೇನ್‌ಮ್ಯಾನ್ʼ ಹೆಚ್ಚು ಮೆಚ್ಚುಗೆ ಪಡೆದುಕೊಂಡಿತ್ತು. ಸುಶಿನ್ ಶ್ಯಾಮ್ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.ಫೆಬ್ರವರಿ 22ರಂದು ತೆರೆಗೆ ಬಂದಿದ್ದ ಸಿನಿಮಾ ಈಗಾಗಲೇ 50 ದಿನ ಪೂರೈಸಿದೆ. ಸದ್ಯ ತೆಲುಗು, ತಮಿಳು, ಕನ್ನಡಕ್ಕೂ ಸಿನಿಮಾ ಡಬ್ ಆಗಿದ್ದು ಏಕಕಾಲಕ್ಕೆ ಓಟಿಟಿಯಲ್ಲಿ ಸ್ಟ್ರೀಮಿಂಗ್ ಆಗಲಿದೆ ಎನ್ನುವ ಚರ್ಚೆ ನಡೆಯುತ್ತಿದೆ.

VISTARANEWS.COM


on

Manjummel Boys ott malayalam to premiere on may
Koo

ಬೆಂಗಳೂರು: ʼಮಂಜುಮ್ಮೇಲ್ ಬಾಯ್ಸ್’ (Manjummel Boys) ಸಾರ್ವಕಾಲಿಕ ಅತಿ ಹೆಚ್ಚು ಹಣ ಗಳಿಸಿದ ಮಲಯಾಳಂ ಚಿತ್ರವಾಗಿ ಹೊರಹೊಮ್ಮಿತ್ತು. ಮಂಜುಮ್ಮೇಲ್ ಬಾಯ್ಸ್’ ಸಿನಿಮಾವನ್ನು ಪ್ರೇಕ್ಷಕರು ಮಾತ್ರವೇ ಅಲ್ಲದೆ ಸಿನಿಮಾ ಸೆಲೆಬ್ರಿಟಿಗಳು, ಸ್ಟಾರ್ ನಟರು ಸಹ ನೋಡಿ ಮೆಚ್ಚಿಕೊಂಡಿದ್ದರು. ಇದೀಗ ‘ಮಂಜುಮ್ಮೆಲ್ ಬಾಯ್ಸ್’ ಸಿನಿಮಾ ಡಿಸ್ನಿ ಪ್ಲಸ್ ಹಾಟ್‌ಸ್ಟರ್‌ನಲ್ಲಿ ಮೇ 3ರಂದು ಸ್ಟ್ರೀಮಿಂಗ್ ಆಗುವುದು ಬಹುತೇಕ ಖಚಿತ ಎಂದು ವರದಿಯಾಗಿದೆ. ಫೆಬ್ರವರಿ 22ರಂದು ತೆರೆಗೆ ಬಂದಿದ್ದ ಸಿನಿಮಾ ಈಗಾಗಲೇ 50 ದಿನ ಪೂರೈಸಿದೆ. ಸದ್ಯ ತೆಲುಗು, ತಮಿಳು, ಕನ್ನಡಕ್ಕೂ ಸಿನಿಮಾ ಡಬ್ ಆಗಿದ್ದು ಏಕಕಾಲಕ್ಕೆ ಓಟಿಟಿಯಲ್ಲಿ ಸ್ಟ್ರೀಮಿಂಗ್ ಆಗಲಿದೆ ಎನ್ನುವ ಚರ್ಚೆ ನಡೆಯುತ್ತಿದೆ.

ರಜನಿಕಾಂತ್​ಗೆ ಬಹಳ ಇಷ್ಟವಾಗಿತ್ತು ಸಿನಿಮಾ

ಇತ್ತೀಚೆಗಷ್ಟೇ, ಮಂಜುಮ್ಮೆಲ್ ಬಾಯ್ಸ್ ನಿರ್ದೇಶಕ ಚಿದಂಬರಂ ಪೊದುವಾಲ್ (Chidambaram Poduval) ಮತ್ತು ತಂಡ ಸೂಪರ್‌ಸ್ಟಾರ್ ರಜನಿಕಾಂತ್ (Superstar Rajinikanth ) ಅವರನ್ನು ಚೆನ್ನೈನಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಿದ್ದರು. ಮಂಜುಮ್ಮೇಲ್ ಬಾಯ್ಸ್’ ಸೂಪರ್ ಸ್ಟಾರ್ ರಜನಿಕಾಂತ್​ಗೆ ಬಹಳ ಇಷ್ಟವಾಗಿದ್ದು, ಚಿತ್ರತಂಡವನ್ನು ಮನೆಗೆ ಆಹ್ವಾನಿಸಿ ಸತ್ಕರಿಸಿದ್ದರು.

ಇದನ್ನೂ ಓದಿ: Manjummel Boys: ʼಮಂಜುಮ್ಮೇಲ್ ಬಾಯ್ಸ್’ ತಂಡಕ್ಕೆ ರಜನಿಕಾಂತ್‌ ಸತ್ಕಾರ!

ಏನಿದು ಕಥೆ?

ಸೌಬಿನ್ ಶಬೀರ್ ಸಿನಿಮಾ ನಿರ್ಮಾಣ ಮಾಡಿದ್ದಾರೆ. 2006ರಲ್ಲಿ ಕೇರಳದಿಂದ ತಮಿಳುನಾಡಿನ ಕೊಡೈಕೆನಲ್​ಗೆ ಫ್ರೆಂಡ್ಸ್ ಗ್ರೂಪ್ ಒಂದು ಟ್ರಿಪ್ ಹೊರಡುತ್ತದೆ. ʻಡೆವಿಲ್ಸ್ ಕಿಚನ್ʼ ಹೆಸರಿನ ಗುಹೆಯಲ್ಲಿ ಸುಭಾಷ್ ಎಂಬಾತ ಬೀಳುತ್ತಾನೆ. ಆತನ ರಕ್ಷಿಸಲು ಫ್ರೆಂಡ್ಸ್ ಪ್ರಯತ್ನಿಸುತ್ತಾರೆ. ಇದರಲ್ಲಿ ಸಕ್ಸೆಸ್‌ ಆಗ್ತಾರಾ? ಇಲ್ಲವಾ ಎಂಬುದೇ ಕಥೆ. ಮಲಯಾಳಂ ಮಾತ್ರವಲ್ಲದೆ ತಮಿಳುನಾಡಿನಲ್ಲೂ ಸಿನಿಮಾ ಒಳ್ಳೆಯ ಗಳಿಕೆ ಮಾಡುತ್ತಿದೆ. ಈ ಚಿತ್ರ ತಮಿಳಿಗೂ ಡಬ್ ಆಗಿ ರಿಲೀಸ್ ಆಗಿದೆ.ಸೌಬಿನ್ ಶಾಹಿರ್, ಶ್ರೀನಾಥ್ ಭಾಸಿ, ಬಾಲು ವರ್ಗೀಸ್, ಗಣಪತಿ ಮತ್ತು ಜೀನ್ ಪಾಲ್ ಲಾಲ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಚಿದಂಬರಂ ಪೊದುವಾಲ್ ಅವರ ಎರಡನೇ ನಿರ್ದೇಶನ ಸಿನಿಮಾ ಇದು. ಈ ಮುಂಚೆ ʻಜೇನ್‌ಮ್ಯಾನ್ʼ ಹೆಚ್ಚು ಮೆಚ್ಚುಗೆ ಪಡೆದುಕೊಂಡಿತ್ತು. ಸುಶಿನ್ ಶ್ಯಾಮ್ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.

Continue Reading

Latest

Movie web series: ಆ್ಯಕ್ಷನ್‌, ಥ್ರಿಲರ್, ಹಾರರ್: ವಾರಾಂತ್ಯಕ್ಕೆ ಬರಲಿವೆ ಬಹು ನಿರೀಕ್ಷಿತ ಚಿತ್ರಗಳು!

Movie, web series: ಹಬ್ಬ ಮುಗಿದು ವಾರ ಕೊನೆಯಾಗುವ ಹೊತ್ತಿಗೆ ಮುಂದಿನ ವಾರದಿಂದ ಒಂದೊಂದು ಚಿತ್ರಗಳು ತೆರೆಗೆ ಬರಲು ಕಾತರಿಸುವಂತಿದೆ. ಒಟಿಟಿಯಲ್ಲೂ ಹೊಸಹೊಸ ಸರಣಿಗಳು ಬರುವ ನಿರೀಕ್ಷೆ ಮೂಡಿಸಿದೆ. ಕೆಲವು ವೆಬ್ ಸೀರಿಸ್‌ಗಳು ಈ ವಾರದಲ್ಲೇ ಸರಣಿ ಪ್ರದರ್ಶನಕ್ಕೆ ಚಾಲನೆ ನೀಡಿವೆ. ಗುರುವಾರ, ಶುಕ್ರವಾರ, ಶನಿವಾರ ಒಂದಷ್ಟು ಸಿನಿಮಾ, ಸೀರಿಸ್ ಬಿಡುಗಡೆಯಾಗಲು ಕಾಯುತ್ತಿವೆ.

VISTARANEWS.COM


on

By

Movie, web series
Koo

ಬೆಂಗಳೂರು: ಹಬ್ಬದ ವೇಳೆಗೆ ಹೊಸ ಚಿತ್ರ ತೆರೆಗೆ ಬರಬಹುದು ಎನ್ನುವ ನಿರೀಕ್ಷೆಯಲ್ಲಿದ್ದವರಿಗೆ ಈ ಬಾರಿ ಯುಗಾದಿ (yugad), ಈದ್ ಮಿಲಾದ್ (eid-millad) ಹಬ್ಬ ಬೇಸರ ಮೂಡಿಸಿತ್ತು. ಯಾಕೆಂದರೆ ರಜೆಯ ಮೂಡ್ ನಲ್ಲಿದ್ದವರಿಗೆ ಯಾವುದೇ ದೊಡ್ಡ ಸಿನಿಮಾಗಳು (Movie, web series) ತೆರೆ (theater) ಮೇಲೆ ಕಾಣಲಿಲ್ಲ, ಒಟಿಟಿಯಲ್ಲೂ (OTT) ಸಿಗಲಿಲ್ಲ.

ಹಬ್ಬ ಮುಗಿದು ವಾರ ಕೊನೆಯಾಗುವ ಹೊತ್ತಿಗೆ ಮುಂದಿನ ವಾರದಿಂದ ಒಂದೊಂದು ಚಿತ್ರಗಳು ತೆರೆಗೆ ಬರಲು ಕಾತರಿಸುವಂತಿದೆ. ಒಟಿಟಿಯಲ್ಲೂ ಹೊಸಹೊಸ ಸರಣಿಗಳು ಬರುವ ನಿರೀಕ್ಷೆ ಮೂಡಿಸಿದೆ. ಕೆಲವು ವೆಬ್ ಸೀರಿಸ್‌ಗಳು ಈ ವಾರದಲ್ಲೇ ಸರಣಿ ಪ್ರದರ್ಶನಕ್ಕೆ ಚಾಲನೆ ನೀಡಿವೆ. ಗುರುವಾರ, ಶುಕ್ರವಾರ, ಶನಿವಾರ ಒಂದಷ್ಟು ಸಿನಿಮಾ, ಸೀರಿಸ್ ಬಿಡುಗಡೆಯಾಗಲು ಕಾಯುತ್ತಿವೆ.

ಇದನ್ನೂ ಓದಿ: Duniya Vijay: ಪುತ್ರಿಗಾಗಿ ಹೊಸ ಸಿನಿಮಾ ಅನೌನ್ಸ್‌ ಮಾಡಿದ ದುನಿಯಾ ವಿಜಯ್‌

ಎಂದಿನಂತೆ ಕನ್ನಡ ಚಿತ್ರರಂಗದಿಂದ ಯಾವುದೇ ಹೊಸ ಸಿರೀಸ್‌, ಚಿತ್ರಗಳು ತೆರೆಗೆ ಬರುವ ನಿರೀಕ್ಷೆ ಇಲ್ಲ. ಈಗಾಗಲೇ ಥಿಯೇಟರ್‌ಗಳಲ್ಲಿ ‘ಯುವ’, ‘ಬ್ಲಿಂಕ್’ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಕೆಲವು ಸಿನಿಮಾಗಳು ಥಿಯೇಟರ್‌ಗೆ ಬಂದಿದ್ದರೂ ಒಟಿಟಿಗೆ ಬಂದಿಲ್ಲ. ಹೀಗಾಗಿ ಮುಂದೆಯಾದರೂ ಒಂದಷ್ಟು ಸಿನಿಮಾಗಳ ಒಟಿಟಿಯಲ್ಲಿ ಬರಬಹುದು ಎನ್ನುವ ನಿರೀಕ್ಷೆಯಲ್ಲಿದ್ದಾರೆ ಕನ್ನಡ ಸಿನಿ ಪ್ರಿಯರು.

ಈ ವಾರದಲ್ಲಿ ಹಲವು ಚಿತ್ರಗಳು ಥಿಯೇಟರ್ ಹಾಗೂ ಓಟಿಟಿಗೆ ಬರಲು ಸಜ್ಜಾಗಿದೆ. ಅವುಗಳ ಕುರಿತು ಮಾಹಿತಿ ಇಲ್ಲಿದೆ.

ʻಬಡೇ ಮಿಯಾ ಚೋಟೆ ಮಿಯಾʼ

ಅಕ್ಷಯ್ ಕುಮಾರ್ ಹಾಗೂ ಟೈಗರ್ ಶ್ರಾಫ್ ಜೊತೆಯಾದರೆ ಆ್ಯಕ್ಷನ್ ನೊಂದಿಗೆ ಮನೋರಂಜನೆಗೇನೂ ಕೊರತೆಯಾಗದು. ಇವರಿಬ್ಬರು ಒಟ್ಟಿಗೆ ನಟಿಸಿರುವ ಅಲಿ ಅಬ್ಬಾಸ್ ಜಾಫರ್ ನಿರ್ದೇಶನದ ʻಬಡೇ ಮಿಯಾ ಚೋಟೆ ಮಿಯಾʼ ಈ ವಾರದಲ್ಲಿ ತೆರೆಗೆ ಬರಲಿದೆ. ಮಾನುಷಿ ಚಿಲ್ಲರ್‌, ಸೋನಾಕ್ಷಿ ಸಿನ್ಹಾ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ʻಮೈದಾನ್’

ಬಹು ನಿರೀಕ್ಷೆ ಮೂಡಿಸಿರುವ ಅಜಯ್ ದೇವಗನ್ ಜತೆಗೆ ಪ್ರಿಯಾಮಣಿ ನಟನೆಯ ‘ಮೈದಾನ್’ ಸಿನಿಮಾ ತೆರೆಗೆ ಬರಲು ಕಾಯುತ್ತಿದೆ. ಬೋನಿ ಕಪೂರ್ ನಿರ್ದೇಶನದ ಈ ಚಿತ್ರ ಖ್ಯಾತ ಭಾರತದ ಫುಟ್ಬಾಲ್ ತರಬೇತುದಾರ ಸೈಯದ್ ಅಬ್ದುಲ್ ರಹೀಮ್ ಅವರ ಜೀವನವನ್ನು ಆಧರಿಸಿದೆ.

ಪ್ರೇಮಲು

ಹಾಟ್ ಸ್ಟಾರ್ ನಲ್ಲಿ ಸಣ್ಣ ಬಜೆಟ್‌ನ ಮಲಯಾಳಂ ಚಿತ್ರ ಪ್ರೇಮಲು ತೆರೆಗೆ ಬರಲಿದೆ. ಮಲಯಾಳಂ ಹಾಗೂ ತೆಲುಗಿನಲ್ಲಿ ಡಬ್ ಆಗಿ ಹಿಟ್ ಆಗಿದ್ದ ಈ ಚಿತ್ರದ ತೆಲುಗು ಚಿತ್ರ ಈಗಾಗಲೇ ಒಟಿಟಿಯಲ್ಲಿದೆ. ಏಪ್ರಿಲ್ 12ರಂದು ಮಲಯಾಳಂ, ತಮಿಳು, ಕನ್ನಡ ಮತ್ತು ಹಿಂದಿಯಲ್ಲಿ ಡಿಸ್ನಿ+ ಹಾಟ್‌ಸ್ಟಾರ್ ಒಟಿಟಿಯಲ್ಲಿ ಸ್ಟ್ರೀಮ್ ಆಗಲಿದೆ. ನೆಸ್ಲೇನ್ ಕೆ ಗೂಫರ್ ಮತ್ತು ಮಮಿತಾ ಬೈಜು ನಾಯಕಿಯರಾಗಿ ನಟಿಸಿರುವ ಪ್ರೇಮಲು ಚಿತ್ರವನ್ನು ಗಿರೀಶ್ ಎಡಿ ನಿರ್ದೇಶಿಸಿದ್ದಾರೆ.

ಕರುಂಗಾಪಿಯಂ

ಬಾಕ್ಸ್ ಆಫೀಸ್ ನಲ್ಲಿ ಹೀನಾಯ ಸೋಲು ಕಂಡ ಕಾಜಲ್ ಅಗರ್‌ವಾಲ್ ಹಾಗೂ ರೆಗಿಮಾ ಕಸೆಂದ್ರಾ ನಟನೆಯ ‘ಕರುಂಗಾಪಿಯಂ’ ಸಿನಿಮಾ ತೆಲುಗಿಗೂ ಡಬ್ ಆಗಿ ಒಟಿಟಿಯಲ್ಲಿ ತೆರೆಕಂಡಿದೆ.


ಅಮೇಜಾನ್ ಪ್ರೈಂ

ಈ ಬಾರಿ ಅಮೇಜಾನ್ ಪ್ರೈಂ ನಲ್ಲಿ ಏಪ್ರಿಲ್ 1ರಿಂದ ಹಾಲಿವುಡ್ ಸಿರೀಸ್ ಫಾಲ್ ಔಟ್, ಏಪ್ರಿಲ್ 9ರಿಂದ ಹಾರರ್ ಸಿನೆಮಾ ದಿ ಎಕ್ಸಾರ್ಸಿಸ್ಟ್: ಬಿಲಿವರ್, ಏಪ್ರಿಲ್ 8 ಅನ್‌ಫರ್ಗಟನ್ ಸೀಸನ್-5 ಸರಣಿ, ಏಪ್ರಿಲ್ 12ರಿಂದ ಎನ್‌ಡಬ್ಲೂಎಸ್‌ಎಲ್ -ಒರಿಜಿನಲ್ ಸೀರಿಸ್ ತೆರೆಕಾಣುತ್ತಿದೆ.


ನೆಟ್‌ಫ್ಲಿಕ್ಸ್

ನೆಟ್‌ಫ್ಲಿಕ್ಸ್ ನಲ್ಲಿಏಪ್ರಿಲ್ 8ರಿಂದ ಸ್ಪಿರಿಟ್ ರೇಂಜರ್ಸ್-ಸೀಸನ್-3(ಆನಿಮೇಟೆಡ್ ಸೀರಿಸ್), ಏಪ್ರಿಲ್ 10ರಿಂದ ದಿ ಹೈಜಾಕಿಂಗ್ ಆಫ್ ಫ್ಲೈಟ್ 601(ವೆಬ್ ಸೀರಿಸ್), ಅನ್‌ಲಾಕ್ಡ್: ಎ ಜೈಲ್ ಎಕ್ಸ್‌ಪೆರಿಮೆಂಟ್(ಡಾಕ್ಯೂ ಸೀರಿಸ್), ಜೆನ್ನಿಫರ್ ವಾಟ್ ಡಿಡ್(ಕ್ರೈಂ ಡಾಕ್ಯುಮೆಂಟರಿ), ಆಂತ್ರಾಸೈಟ್(ಫ್ರೆಂಚ್ ವೆಬ್ ಸೀರಿಸ್), ಏಪ್ರಿಲ್ 11ರಿಂದ ಮಿಡ್ ಸಮ್ಮರ್ ನೈಟ್- ಸೀಸನ್-1(ನಾರ್ವೆ ಥ್ರಿಲ್ಲರ್ ಸೀರಿಸ್), ಯಾಜ್ ದಿ ಕ್ರೋ ಫೈಲ್ಸ್- ಸೀಸನ್-3(ಟರ್ಕಿಸ್ ವೆಬ್ ಸೀರಿಸ್) , ಹಾರ್ಟ್‌ಬ್ರೇಕ್ ಹೈ- ಸೀಸನ್-2 (ಟೀನ್ ಬೆವ್ ಸೀರಿಸ್), ಏಪ್ರಿಲ್ 12ರಿಂದ ಸ್ಟೋಲೆನ್(ಸ್ವಿಡಿಶ್ ಸಿನಿಮಾ), ಅಮರ್ ಸಿಂಗ್ ಚಮ್ಕಿಲಾ(ಹಿಂದಿ ಸಿನಿಮಾ) ತೆರೆಯಲ್ಲಿ ಕಾಣಿಸಲಿದೆ. ಜೀ-5ನಲ್ಲಿ ಏಪ್ರಿಲ್ 12ರಿಂದ ʻಗಾಮಿʼ (ತೆಲುಗು ಸಿನಿಮಾ) ತೆರೆಗೆ ಬರಲಿದೆ.

Continue Reading
Advertisement
Terrorist attack
ದೇಶ13 mins ago

Terrorist Attack: “ಉಗ್ರರ ದಾಳಿ ಬಿಜೆಪಿ ಚುನಾವಣಾ ಪೂರ್ವ ಸ್ಟಂಟ್‌”; ನಾಲಿಗೆ ಹರಿಬಿಟ್ಟ ಪ್ರತಿಪಕ್ಷದ ಇಬ್ಬರು ನಾಯಕರು

Prajwal Revanna Case
ಕರ್ನಾಟಕ18 mins ago

Prajwal Revanna Case: ಪ್ರಜ್ವಲ್‌ ಕೇಸ್‌ನ ಸಂತ್ರಸ್ತೆಯರಿಗಾಗಿ ಆರಂಭಿಸಿದ ಹೆಲ್ಪ್‌ಲೈನ್‌ಗೆ ಬರ್ತಿವೆ ಹಲವು ಕರೆಗಳು

Cooking Oils
ಆರೋಗ್ಯ1 hour ago

Cooking Oils: ಈ 5 ಅಡುಗೆ ಎಣ್ಣೆಗಳು ನಮ್ಮ ಆರೋಗ್ಯಕ್ಕೆ ಅಪಾಯಕಾರಿ!

karnataka Weather Forecast
ಮಳೆ2 hours ago

Karnataka Weather : ಇಂದು ಮಳೆ ಬರುತ್ತಾ? ಯಾವ ಜಿಲ್ಲೆಗಳಲ್ಲಿದೆ ಹೀಟ್‌ ವೇವ್‌?

Pain relievers
ಆರೋಗ್ಯ2 hours ago

Pain Relievers: ಸೈಡ್‌ ಎಫೆಕ್ಟ್‌ ಇಲ್ಲದ ಪ್ರಕೃತಿದತ್ತ ನೋವು ನಿವಾರಕಗಳಿವು

Dina bhavishya
ಭವಿಷ್ಯ3 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Ramanagara News
ಕರ್ನಾಟಕ8 hours ago

Channapatna News: ಮದುವೆಯಲ್ಲಿ ಐಸ್ ಕ್ರೀಂ ತಿಂದು 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Narendra Modi
ದೇಶ8 hours ago

Narendra Modi: ರಾಮಲಲ್ಲಾನಿಗೆ ಮೋದಿ ಸಾಷ್ಟಾಂಗ ನಮಸ್ಕಾರ; ಇಲ್ಲಿವೆ ಅಯೋಧ್ಯೆ ಭೇಟಿ Photos

IPL 2024
ಪ್ರಮುಖ ಸುದ್ದಿ8 hours ago

IPL 2024 : ಇವರೇ ನೋಡಿ ಐಪಿಎಲ್​ 2024ರ ಮೊದಲ ಕನ್​ಕಷನ್​ ಬದಲಿ ಆಟಗಾರ

Prajwal Revanna Case
ಪ್ರಮುಖ ಸುದ್ದಿ8 hours ago

Prajwal Revanna Case: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ಶೇರ್‌ ಮಾಡಿದ್ರೆ ಕೇಸ್‌ ಗ್ಯಾರಂಟಿ; ಎಸ್‌ಐಟಿ ಎಚ್ಚರಿಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ3 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ12 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ14 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ14 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ4 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

ಟ್ರೆಂಡಿಂಗ್‌