Bramayugam Movie: ಒಟಿಟಿಗೆ ಲಗ್ಗೆ ಇಟ್ಟ ಮಮ್ಮುಟ್ಟಿ ಅಭಿನಯದ ‘ಭ್ರಮಯುಗಂ’! - Vistara News

ಮಾಲಿವುಡ್

Bramayugam Movie: ಒಟಿಟಿಗೆ ಲಗ್ಗೆ ಇಟ್ಟ ಮಮ್ಮುಟ್ಟಿ ಅಭಿನಯದ ‘ಭ್ರಮಯುಗಂ’!

Bramayugam Movie: ಸೋನಿ ಲಿವ್‌ನಲ್ಲಿ ಮಲಯಾಳಂ, ತೆಲುಗು, ತಮಿಳು, ಕನ್ನಡ ಮತ್ತು ಹಿಂದಿಯಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ ಸಿನಿಮಾ. ನೈಟ್ ಶಿಫ್ಟ್ ಸ್ಟುಡಿಯೋಸ್ ಎಲ್‌ಎಲ್‌ಪಿ ಮತ್ತು ವೈ ನಾಟ್ ಸ್ಟುಡಿಯೋಸ್ ಅಡಿಯಲ್ಲಿ ಚಕ್ರವರ್ತಿ ರಾಮಚಂದ್ರ ಮತ್ತು ಶಶಿಕಾಂತ್ ಅವರು ನಿರ್ಮಿಸಿದ್ದಾರೆ. ‘ಭ್ರಮಯುಗಂ’ನಲ್ಲಿ ಅರ್ಜುನ್ ಅಶೋಕನ್, ಸಿದ್ಧಾರ್ಥ್ ಭರತನ್ ಮತ್ತು ಅಮಲ್ಡಾ ಲಿಜ್ ಒಳಗೊಂಡ ಪ್ರತಿಭಾವಂತ ನಟರು ಇದ್ದಾರೆ.

VISTARANEWS.COM


on

Mammootty horror thriller Bramayugam makes its OTT
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಲಯಾಳಂನ ಹಿರಿಯ ನಟ ಮಮ್ಮುಟ್ಟಿ ‘ಭ್ರಮಯುಗಂ’ (Bramayugam Movie) ಸೋನಿ ಲಿವ್ ಮೂಲಕ ಒಟಿಟಿಗೆ ಲಗ್ಗೆ ಇಟ್ಟಿದೆ. ಈ ಚಿತ್ರಕ್ಕೆ (Horror thriller Bramayugam) ಐಎಂಡಿಬಿಯಲ್ಲಿ 8+ ರೇಟಿಂಗ್ ನೀಡಲಾಗಿದೆ. ರಾಹುಲ್ ಸದಾಶಿವನ್ (Rahul Sadasivan) ನಿರ್ದೇಶನದ ಈ ಸಿನಿಮಾ ಚಿತ್ರಮಂದಿರದಲ್ಲಿ ಯಶಸ್ಸು ಕಂಡಿತ್ತು. ಇದೀಗ ಸಿನಿಮಾ ಒಟಿಟಿಗೆ ಬಂದಿದೆ.

ಸೋನಿ ಲಿವ್‌ನಲ್ಲಿ ಮಲಯಾಳಂ, ತೆಲುಗು, ತಮಿಳು, ಕನ್ನಡ ಮತ್ತು ಹಿಂದಿಯಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ ಸಿನಿಮಾ. ನೈಟ್ ಶಿಫ್ಟ್ ಸ್ಟುಡಿಯೋಸ್ ಎಲ್‌ಎಲ್‌ಪಿ ಮತ್ತು ವೈ ನಾಟ್ ಸ್ಟುಡಿಯೋಸ್ ಅಡಿಯಲ್ಲಿ ಚಕ್ರವರ್ತಿ ರಾಮಚಂದ್ರ ಮತ್ತು ಶಶಿಕಾಂತ್ ಅವರು ನಿರ್ಮಿಸಿದ್ದಾರೆ. ‘ಭ್ರಮಯುಗಂ’ನಲ್ಲಿ ಅರ್ಜುನ್ ಅಶೋಕನ್, ಸಿದ್ಧಾರ್ಥ್ ಭರತನ್ ಮತ್ತು ಅಮಲ್ಡಾ ಲಿಜ್ ಒಳಗೊಂಡ ಪ್ರತಿಭಾವಂತ ನಟರುಗಳು ಇದ್ದಾರೆ.

ಬ್ಲ್ಯಾಕ್ ಆ್ಯಂಡ್ ವೈಟ್​ನಲ್ಲಿ ಈ ಸಿನಿಮಾ ಇದೆ. ಸಿನಿಮಾದಲ್ಲಿ ಹಾರರ್ ಅಂಶ ಇದೆ. ಆದರೆ, ದೆವ್ವ ಬಂದು ಪ್ರೇಕ್ಷಕರನ್ನು ಭಯ ಬೀಳಿಸುವುದಿಲ್ಲ. ಭ್ರಮಯುಗಂದಲ್ಲಿ ಮಮ್ಮುಟ್ಟಿ ಅವರ ಅದ್ಭುತ ಮತ್ತು ವೈವಿಧ್ಯಮಯ ಅಭಿನಯಕ್ಕೆ ಪ್ರಶಂಸೆ ವ್ಯಕ್ತವಾಗಿತ್ತು. ಭ್ರಮಯುಗಂ ಚಿತ್ರವು ವಿಶ್ವಾದ್ಯಂತ ಎರಡು ದಿನಗಳಲ್ಲಿ ಸುಮಾರು 13 ಕೋಟಿ ರೂ. ಕಲೆಕ್ಷನ್ ಮಾಡಿತ್ತು. ಈ ಪೈಕಿ ಈ ಸಿನಿಮಾ ಭಾರತದಲ್ಲೇ 6.55 ಕೋಟಿ ರೂ. ಕಲೆಕ್ಷನ್ ಮಾಡಿತ್ತು.

ಇದನ್ನೂ ಓದಿ: Actor Mammootty: ಮಮ್ಮುಟ್ಟಿ ಹೊಸ ಲುಕ್‌ ಕಂಡು ದಂಗಾದ ಫ್ಯಾನ್ಸ್‌; ‘ಭ್ರಮಯುಗಂ’ ಫಸ್ಟ್ ಲುಕ್ ಪೋಸ್ಟರ್ ಔಟ್‌!

ಮಮ್ಮುಟ್ಟಿ ಅವರು ಹಲವು ಸಿನಿಮಾಗಳನ್ನು ಘೋಷಿಸಿದ್ದಾರೆ. ಅದರಲ್ಲಿ ಟರ್ಬೋ ಕೂಡ ಒಂದು. ರಾಜ್ ಬಿ ಶೆಟ್ಟಿ ಮತ್ತು ತೆಲುಗು ನಟ ಸುನೀಲ್ ಕೂಡ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ದೊಡ್ಡ ಮಟ್ಟದಲ್ಲಿ ತಯಾರಾಗುವ ಸಾಧ್ಯತೆಯಿದೆ ಎಂತಲೂ ವರದಿಯಾಗಿದೆ. ಇದರಲ್ಲಿ ಫೈಟ್‌ಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ ಎಂದು ಹೇಳಲಾಗುತ್ತಿದೆ. ಜೀಪಿನಿಂದ ಹೊರಬರುವ ಮಮ್ಮುಟ್ಟಿಯ ಸ್ಟೈಲಿಶ್ ಅವತಾರಕ್ಕೆ ಫ್ಯಾನ್ಸ್‌ ಫಿದಾ ಆಗಿದ್ದಾರೆ.

ʻಟರ್ಬೊ’ ಸಿನಿಮಾ ನಿರ್ದೇಶಕ ವೈಶಾಖ್ ಜತೆ ಇದು ಮೂರನೇ ಬಾರಿ ಮಮ್ಮುಟ್ಟಿ ಜತೆ ಕೈ ಜೋಡಿಸುತ್ತಿದ್ದಾರೆ. ಪೊಕ್ಕಿರಿ ರಾಜ ಮತ್ತು ಮಧುರ ರಾಜ ಸಿನಿಮಾಗಳ ಬಳಿಕ ಮಮ್ಮುಟ್ಟಿಯವರ ಮೂರನೇ ಚಿತ್ರವಾಗಿದೆ. ಚಲನಚಿತ್ರ ನಿರ್ಮಾಪಕ ಮಿಧುನ್ ಮ್ಯಾನುಯೆಲ್ ಥಾಮಸ್ ಬರೆದ ಚಿತ್ರಕಥೆಯನ್ನು ಈ ಸಿನಿಮಾ ಆಧರಿಸಿದೆ. ಇದು ಆ್ಯಕ್ಷನ್ ಕಾಮಿಡಿ ಎಂದು ಹೇಳಲಾಗುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಾಲಿವುಡ್

Actor Sathyaraj: `ಬಾಹುಬಲಿ’ ಕಟ್ಟಪ್ಪನ ತೊಡೆ ಮೇಲೆ ಕುಳಿತ ಈ ಕ್ಯೂಟ್‌ ನಟ ಯಾರು? ಹೇಳಿ ನೋಡೋಣ!

Actor Sathyaraj: ಸತ್ಯರಾಜ್ ಅವರು 240 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಪ್ರಭಾಸ್ ಮತ್ತು ಎಸ್‌.ಎಸ್ ರಾಜಮೌಳಿ ಅವರ ಬಾಹುಬಲಿ ಸಿನಿಮಾದ ಕಟ್ಟಪ್ಪ ಪಾತ್ರಕ್ಕಾಗಿ ಸತ್ಯರಾಜ್ ವಿಶ್ವಾದ್ಯಂತ ಖ್ಯಾತಿಯನ್ನು ಗಳಿಸಿದರು. ಅವರು ಇನ್ನೂ ಅನೇಕ ಪ್ರೇಕ್ಷಕರಿಗೆ ಕಟ್ಟಪ್ಪ ಎಂತಲೇ ಪರಿಚಿತರಾಗಿದ್ದಾರೆ. ಈಗ ಮಲಯಾಳ ಖ್ಯಾತ ನಟನ ಬಾಲ್ಯದ ಫೋಟೊ ವೈರಲ್‌ ಆಗಿದೆ. ಮೇ 7ರಂದು, MUBI ಇಂಡಿಯಾದ ಅಧಿಕೃತ ಎಕ್ಸ್‌ ಖಾತೆ ಫೋಟೊ ಶೇರ್‌ ಮಾಡಿಕೊಂಡಿದೆ.

VISTARANEWS.COM


on

Actor Sathyaraj throwback picture of with veteran actor
Koo

ಬೆಂಗಳೂರು: ಬಾಹುಬಲಿ ಸಿನಿಮಾ ಕಟ್ಟಪ್ಪ (Baahubali Actor Sathyaraj) ಪಾತ್ರದ ಮೂಲಕ ಹೆಸರುವಾಸಿಯಾಗಿರುವ ತಮಿಳು ಮತ್ತು ತೆಲುಗು ನಟ ಸತ್ಯರಾಜ್ (Actor Sathyaraj) ಜತೆ ಫಹಾದ್ ಫಾಸಿಲ್ ಪೋಸ್‌ (Fahadh Faasil) ಕೊಟ್ಟಿದ್ದಾರೆ. ಇದು 80ರ ದಶಕದ ಫೋಟೊ. ಆಗ ಫಹಾದ್ ಫಾಸಿಲ್ ತುಂಬ ಚಿಕ್ಕವರಿದ್ದರು. ಸತ್ಯರಾಜ್ ತೊಡೆ ಮೇಲೆ ಕುಳಿತು ಫಹಾದ್ ಫಾಸಿಲ್ ಕ್ಯೂಟ್‌ ಆಗಿ ಸ್ಮೈಲ್‌ ಕೊಟ್ಟಿದ್ದಾರೆ. ಈ ಫೋಟೊ ಈಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ನಟ ಸತ್ಯರಾಜ್ ಅವರು ಫಹಾದ್ ಅವರ ತಂದೆ ಫಾಸಿಲ್ ಜತೆ ತುಂಬ ಕ್ಲೋಸ್‌ ಇದ್ದರು. ಫಹಾದ್ ಅವರ ತಂದೆ ಫಾಸಿಲ್ ಹಾಗೂ ಸತ್ಯರಾಜ್‌ ‘ಎನ್ ಬೊಮ್ಮುಕುಟ್ಟಿ ಅಮ್ಮಾವುಕ್ಕು’ ಮತ್ತು ‘ಪೂವಿಜಿ ವಸಲಿಲೆ’ ಎಂಬ ತಮಿಳು ಚಿತ್ರಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು.

ಮೇ 7ರಂದು, MUBI ಇಂಡಿಯಾದ ಅಧಿಕೃತ ಎಕ್ಸ್‌ ಖಾತೆ ಸತ್ಯರಾಜ್ ಮತ್ತು ಫಹಾದ್ ಫಾಸಿಲ್ ಅವರ ಈ ಅಪರೂಪದ ಫೋಟೊವನ್ನು ಹಂಚಿಕೊಂಡಿದೆ. “1980ರ ದಶಕದಲ್ಲಿ ಸತ್ಯರಾಜ್ ಮತ್ತು ಫಹಾದ್ ಫಾಸಿಲ್ ” ಎಂದು ಪೋಸ್ಟ್‌ಗೆ ಶೀರ್ಷಿಕೆ ನೀಡಿದೆ. ಫಹಾದ್ ಫಾಸಿಲ್ ಜನಪ್ರಿಯ ನಿರ್ದೇಶಕ, ನಿರ್ಮಾಪಕ, ಮತ್ತು ಮಲಯಾಳಂ, ತಮಿಳು ಸಿನಿಮಾಗಳಲ್ಲಿ ನಟಿಸಿರುವ ಖ್ಯಾತ ನಟ.ಎರಡು ತಮಿಳು ಚಿತ್ರಗಳಲ್ಲಿ ಸತ್ಯರಾಜ್ ಜತೆಗೂ ಫಹಾದ್ ಫಾಸಿಲ್ ತೆರೆ ಹಂಚಿಕೊಂಡಿದ್ದರು. ಆ ಎರಡೂ ಸಿನಿಮಾಗಳ ಬ್ಲಾಕ್ಬಸ್ಟರ್ ಹಿಟ್ ಕಂಡಿವೆ.

ಇದನ್ನೂ ಓದಿ: Kanakalatha Passes Away: 350ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಖ್ಯಾತ ನಟಿ ಇನ್ನಿಲ್ಲ

ನಟ ಫಹಾದ್ ಫಾಸಿಲ್ (Fahad Faasil) ಅವರು ತಮಿಳು, ತೆಲುಗು, ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೆ, ಅವರೆಂದಿಗೂ ಬಾಲಿವುಡ್​ನತ್ತ ಮುಖ ಮಾಡಿಲ್ಲ. ಪರಭಾಷೆಯ ‘ಸೂಪರ್ ಡಿಲಕ್ಸ್’, ‘ವಿಕ್ರಮ್’, ‘ಪುಷ್ಪ’ ಚಿತ್ರಗಳಲ್ಲಿ ಅವರು ಬಣ್ಣ ಹಚ್ಚಿದ್ದಾರೆ. ಅವರಿಗೆ ಈ ಮೊದಲು ಹಿಂದಿ ಆಫರ್​ಗಳು ಬಂದಿದ್ದವು. ಆದರೆ, ಅವರಿಗೆ ಯಾವುದೂ ಇಷ್ಟ ಆಗಿಲ್ಲ.

ಫಹಾದ್ ಫಾಸಿಲ್ ಕೊನೆಯದಾಗಿ ನಿರ್ದೇಶಕ ಜಿತು ಮಾಧವನ್ ಅವರ ‘ಆವೇಶಂ’ ನಲ್ಲಿ ಕಾಣಿಸಿಕೊಂಡರು. ಇದು ವಿಶ್ವಾದ್ಯಂತ ರೂ 150 ಕೋಟಿ ರೂ, ಗಳಿಕೆ ಕಂಡಿದೆ. ಫಹಾದ್ ಫಾಸಿಲ್ ನಟನೆಯ ‘ಪುಷ್ಪ: ದಿ ರೂಲ್’, ‘ಮಾರೀಸನ್’ ಮತ್ತು ರಜನಿಕಾಂತ್ ಅವರ ‘ವೆಟ್ಟೈಯನ್’ ಸೇರಿದಂತೆ ಮೂರು ಚಿತ್ರಗಳು ಬಿಡುಗಡೆಗೆ ಸಜ್ಜಾಗಿವೆ.

ಸತ್ಯರಾಜ್ ಕೊನೆಯದಾಗಿ ತಮಿಳು ಚಿತ್ರ ‘ಸಿಂಗಪುರ ಸಲೂನ್’ ನಲ್ಲಿ ಕಾಣಿಸಿಕೊಂಡಿದ್ದರು. ಸದ್ಯ ‘ತೋಜರ್ ಚೆಗುವೇರಾ’ ಬಿಡುಗಡೆಗೆ ಸಜ್ಜಾಗುತ್ತಿದ್ದಾರೆ. ಸಿನಿಮಾ ಬಿಡುಗಡೆ ದಿನಾಂಕ ಇನ್ನಷ್ಟೇ ಪ್ರಕಟವಾಗಬೇಕಿದೆ. ಸತ್ಯರಾಜ್ ಅವರು 240 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಪ್ರಭಾಸ್ ಮತ್ತು ಎಸ್‌.ಎಸ್ ರಾಜಮೌಳಿ ಅವರ ಬಾಹುಬಲಿ ಸಿನಿಮಾದ ಕಟ್ಟಪ್ಪ ಪಾತ್ರಕ್ಕಾಗಿ ಸತ್ಯರಾಜ್ ವಿಶ್ವಾದ್ಯಂತ ಖ್ಯಾತಿಯನ್ನು ಗಳಿಸಿದರು. ಅವರು ಇನ್ನೂ ಅನೇಕ ಪ್ರೇಕ್ಷಕರಿಗೆ ಕಟ್ಟಪ್ಪ ಎಂತಲೇ ಪರಿಚಿತರಾಗಿದ್ದಾರೆ.

Continue Reading

ಮಾಲಿವುಡ್

Kanakalatha Passes Away: 350ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಖ್ಯಾತ ನಟಿ ಇನ್ನಿಲ್ಲ

Kanakalatha Passes Away: ಕಿರುತೆರೆ ಧಾರಾವಾಹಿಗಳಲ್ಲಿ ಹೆಚ್ಚಾಗಿ ಪೋಷಕ ಪಾತ್ರಗಳನ್ನೇ ನಿಭಾಯಿಸುತ್ತಿದ್ದರು ನಟಿ ಕನಕಲತಾ. ನಟಿ ಪಾರ್ಕಿನ್ಸನ್ ಕಾಯಿಲೆ ಮತ್ತು ಬುದ್ಧಿಮಾಂದ್ಯತೆಯಿಂದ (dementia and Parkinson’s disease) ಬಳಲುತ್ತಿದ್ದರು ಎಂದು ವರದಿಯಾಗಿದೆ.ಮೇ 6ರಂದು ತಿರುವನಂತಪುರಂನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು. ಕೊನೆಯದಾಗಿ 2023 ರಲ್ಲಿ ಗಣೇಶ್ ರಾಜ್ ಅವರ ‘ಪೂಕ್ಕಲಂ’ ಚಿತ್ರದಲ್ಲಿ ಕಾಣಿಸಿಕೊಂಡರು.

VISTARANEWS.COM


on

Kanakalatha Passes Away Film serial actor Mollywood
Koo

ಬೆಂಗಳೂರು: ಮಾಲಿವುಡ್‌ ಖ್ಯಾತ ನಟಿ ಕನಕಲತಾ ಅವರು (Kanakalatha passes away) ಮೇ 6ರಂದು ತಿರುವನಂತಪುರಂನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು. ಅವರಿಗೆ 63 ವರ್ಷ ವಯಸ್ಸಾಗಿತ್ತು. 2021 ರಿಂದ ಪಾರ್ಕಿನ್ಸನ್ ಕಾಯಿಲೆ ಮತ್ತು ಬುದ್ಧಿಮಾಂದ್ಯತೆಯಿಂದ (dementia and Parkinson’s disease) ಬಳಲುತ್ತಿದ್ದರು ಎಂದು ವರದಿಯಾಗಿದೆ.

ದಕ್ಷಿಣ ಭಾರತದ ಶ್ರೇಷ್ಠ ನಟಿ ಕನಕಲತಾ 350ಕ್ಕೂ ಹೆಚ್ಚು ಚಲನಚಿತ್ರಗಳು ಮತ್ತು 50ಕ್ಕೂ ಹೆಚ್ಚು ಧಾರಾವಾಹಿಗಳಲ್ಲಿ ನಟಿಸಿದ್ದರು. ಅನೇಕ ತಮಿಳು ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಒಂಬತ್ತನೇ ತರಗತಿಯಿಂದಲೇ ರಂಗಭೂಮಿ ಮತ್ತು ನಾಟಕದಲ್ಲಿ ತೊಡಗಿಸಿಕೊಂಡಿದ್ದ ಅವರು ರಂಗಭೂಮಿಯಲ್ಲಿ ತಮ್ಮ ಅಸಾಧಾರಣ ಪ್ರತಿಭೆಯಿಂದ ಸಿನಿಮಾ ಕ್ಷೇತ್ರವನ್ನು ಪ್ರವೇಶಿಸಿದರು.

ಈಗಾಗಲೇ ಹೇಳಿದಂತೆ ಕನಕಲತಾ ಅವರು ಪಾರ್ಕಿನ್ಸನ್‌ ಮತ್ತು ಮರೆವಿನ ಕಾಯಿಲೆಯಿಂದ ಬಳಲುತ್ತಿದ್ದರು. ಕನಕಲತಾ ಅವರ ಜೀವನದ ಕೊನೆಯ ಕೆಲವು ವರ್ಷಗಳಲ್ಲಿ ತುಂಬಾ ಕಷ್ಟಪಟ್ಟಿದ್ದರು. ತನ್ನ ಹೆಸರನ್ನು ನೆನಪಿಸಿಕೊಳ್ಳಲಾಗದಷ್ಟು, ಟಿವಿಯಲ್ಲಿ ತನ್ನ ಸಿನಿಮಾ ಕಂಡರೂ ಅದು ತಾನೇ ಎಂದು ಗುರುತಿಸಲಾಗದಷ್ಟು ಆರೋಗ್ಯ ಹದಗೆಟ್ಟಿತ್ತು ಎಂದು ವರದಿ ಆಗಿದೆ.

ಇದನ್ನೂ ಓದಿ: Ramana Avatara Movie: ಬಂಪರ್ ಆಫರ್; ಕೇವಲ 99 ರೂ.ಗೆ ಸಿಗಲಿದೆ ‘ರಾಮನ ಅವತಾರ’ ಸಿನಿಮಾ ಟಿಕೆಟ್

ಮಲಯಾಳಂ ನಟಿ ಕನಕಲತಾ ಅವರು ಆಗಸ್ಟ್‌ 24, 1960ರಲ್ಲಿ ಕೇರಳದ ಕೊಲ್ಲಂನಲ್ಲಿ ಪರಮೇಶ್ವರನ್‌ ಪಿಳ್ಳೈ ಮತ್ತು ಚಿನ್ನಮ್ಮ ದಂಪತಿಯ ಪುತ್ರಿಯಾಗಿ ಜನಿಸಿದರು. ಇವರು ಕೊಲ್ಲಾಮ್‌ನ ಸರಕಾರಿ ಮಹಿಳಾ ಶಾಲೆಯಲ್ಲಿ ಶಿಕ್ಷಣ ಪಡೆದರು. ಸಿನಿಮಾರಂಗಕ್ಕೆ ಪ್ರವೇಶಿಸುವ ಮೊದಲು ಅವರು ರಂಗಭೂಮಿ ಕಲಾವಿದೆಯಾಗಿದ್ದರು.

‘ಚಿಲ್ಲು’, ‘ಕರಿಯಿಲಕ್ಕಟ್ಟು ಪೋಲ್’, ‘ಜಾಗ್ರತ’, ‘ಕಿರೀಟಂ’, ‘ಸ್ಪಡಿಕಂ’, ಮತ್ತು ‘ಹರಿಕೃಷ್ಣನ್ಸ್’ ಸೇರಿದಂತೆ ಕೆಲವು ಪ್ರಮುಖ ಮಲಯಾಳಂ ಚಿತ್ರಗಳಲ್ಲಿನ ಅವರ ನೈಜ ಅಭಿನಯಕ್ಕೆ ಸಿನಿರಸಿಕರು ಮನಸೋತಿದ್ದರು. ಕೊನೆಯದಾಗಿ 2023 ರಲ್ಲಿ ಗಣೇಶ್ ರಾಜ್ ಅವರ ‘ಪೂಕ್ಕಲಂ’ ಚಿತ್ರದಲ್ಲಿ ಕಾಣಿಸಿಕೊಂಡರು.

ಪೃಥ್ವಿರಾಜ್ ಸುಕುಮಾರನ್ ಜತೆ 2006ರಲ್ಲಿ ತೆರೆಕಂಡ ‘ಪಾಕಲ’ ಚಿತ್ರದಲ್ಲಿ ಕನಕಲತಾ ತೆರೆ ಹಂಚಿಕೊಂಡಿದ್ದರು. ಪೃಥ್ವಿರಾಜ್ ಸುಕುಮಾರನ್ ಕೂಡ ನಟಿಯ ಪೋಸ್ಟ್‌ ಹಾಕಿ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ. ಕಿರುತೆರೆ ಧಾರಾವಾಹಿಗಳಲ್ಲಿ ಹೆಚ್ಚಾಗಿ ಪೋಷಕ ಪಾತ್ರಗಳನ್ನೇ ನಿಭಾಯಿಸುತ್ತಿದ್ದರು ನಟಿ.

Continue Reading

ಒಟಿಟಿ

The Goat Life: ಪೃಥ್ವಿರಾಜ್ ಸುಕುಮಾರನ್ ಅಭಿನಯದ ʻಆಡುಜೀವಿತಂʼ ಒಟಿಟಿ ರಿಲೀಸ್‌ ಎಲ್ಲಿ?

The Goat Life ಆಡು ಜೀವಿತಂʼ (Aadujeevitham Movie ) `ದಿ ಗೋಟ್ ಲೈಫ್’ ಸಿನಿಮಾದಲ್ಲಿ ಸೂಪರ್ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬೆನ್ಯಾಮಿನ್ ಅವರ ಗೋಟ್ ಡೇಸ್ ಕಾದಂಬರಿ ಆಧರಿಸಿದ ಸಿನಿಮಾ ಇದಾಗಿದೆ.

VISTARANEWS.COM


on

The Goat Life OTT Release Date Fix
Koo

ಬೆಂಗಳೂರು: ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಬ್ಲೆಸ್ಸಿ ಅವರ ಮಲಯಾಳಂ ಚಿತ್ರ ʻಆಡುಜೀವಿತಂʼ (The Goat Life) ಬಿಡುಗಡೆಯಾದ ದಿನವೇ ಒಳ್ಳೆಯ ಗಳಿಕೆ ಕಂಡಿತ್ತು. ಪೃಥ್ವಿರಾಜ್ ಸುಕುಮಾರನ್ ಮುಖ್ಯ ಭೂಮಿಕೆಯಯ ಈ ಸಿನಿಮಾ 150 ಕೋಟಿ ರೂ. ಗಳಿಕೆ ಕಂಡಿತ್ತು. ನೈಜ ಘಟನೆಗಳನ್ನು ಆಧರಿಸಿ ಬರೆದ ಕಾದಂಬರಿಯನ್ನು ತೆರೆಗೆ ತಂದು ಚಿತ್ರತಂಡ ಸಕ್ಸಸ್ ಕಂಡಿತ್ತು. ಸಾಕಷ್ಟು ಜನ ಈ ಚಿತ್ರವನ್ನು ಒಟಿಟಿಯಲ್ಲಿ ವೀಕ್ಷಿಸಲು ಕಾಯುತ್ತಿದ್ದಾರೆ. ಡಿಸ್ನಿ ಪ್ಲಸ್ ಹಾಟ್‌ಸ್ಟರ್‌ಗೆ ಚಿತ್ರದ ಒಟಿಟಿ ರೈಟ್ಸ್ ಮಾರಾಟವಾಗಿದೆ ಎನ್ನುವ ಚರ್ಚೆ ನಡೀತಿದೆ.

ಬ್ಲೆಸ್ಸಿ ನಿರ್ದೇಶನದ ಈ ಚಿತ್ರ ಆರು ದಿನಗಳಲ್ಲಿ ಭಾರತದಲ್ಲಿ ಸುಮಾರು 40.4 ಕೋಟಿ ರೂ. ಸಂಗ್ರಹಿಸಿತ್ತು. ಮೊದಲ ದಿನ, ʻಆಡುಜೀವಿತಂʼ ಭಾರತದಲ್ಲಿ ಒಟ್ಟು ಎಲ್ಲಾ ಭಾಷೆಗಳು ಸೇರಿದಂತೆ 7.6 ಕೋಟಿ ರೂ. ಸಂಗ್ರಹಿಸಿದರೆ, ಎರಡನೇ ದಿನ ದಿನ 6.25 ಕೋಟಿ ರೂ. ಮೂರನೇ ದಿನ 7.75 ಕೋಟಿ ರೂ. ನಾಲ್ಕು ಮತ್ತು ಐದನೇ ದಿನ 8.7 ಕೋಟಿ ರೂ. ಮತ್ತು ಆರನೇ ದಿನ 4. 5 ಕೋಟಿ ರೂ. ವ್ಯವಹಾರ ಮಾಡಿತ್ತು.

ಆಡು ಜೀವಿತಂʼ (Aadujeevitham Movie ) `ದಿ ಗೋಟ್ ಲೈಫ್’ ಸಿನಿಮಾದಲ್ಲಿ ಸೂಪರ್ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬೆನ್ಯಾಮಿನ್ ಅವರ ಗೋಟ್ ಡೇಸ್ ಕಾದಂಬರಿ ಆಧರಿಸಿದ ಸಿನಿಮಾ ಇದಾಗಿದೆ. ಒಂದು ದಶಕದ ಪ್ರಯತ್ನದ ನಂತರ, ಮಲಯಾಳಂ ಸೂಪರ್ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ಅಭಿನಯದ ಈ ಸಿನಿಮಾ ನೈಜ ಕಥೆ ಆಧರಿಸಿದ ಚಿತ್ರವಾಗಿದೆ.

ಆಡು ಜೀವಿತಂʼ ಚಿತ್ರದ ಕಥೆ ವಲಸಿಗರ ಸಮಸ್ಯೆ ಸುತ್ತ ಸುತ್ತುತ್ತದೆ. ದುಡಿಮೆಗಾಗಿ ಸೌದಿ ಅರೇಬಿಯಾಗೆ ವಲಸೆ ಹೋಗುವ ನಸೀಬ್ ಮೊಹಮ್ಮದ್ ಎನ್ನುವ ಕೇರಳದ ವ್ಯಕ್ತಿ ಅಲ್ಲಿ ಪಟ್ಟಂತ ಕಷ್ಟಗಳು ಆತನ ಪಾಸ್‌ಪೋರ್ಟ್‌ ಕಸಿದು ಆತನಿಗೆ ಕೊಟ್ಟಂತಹ ಹಿಂಸೆಗಳು, ಆ ಬಿಸಿಲಿನ ಮರುಭೂಮಿಯಲ್ಲಿ ಆತ ಅನುಭವಿಸಿದ ಸಂಕಷ್ಟಗಳ ಕಥನವೇ ಈ ಆಡು ಜೀವಿತಂ.

ಇದನ್ನೂ ಓದಿ: Ranjani Raghavan: ರಂಜನಿ ರಾಘವನ್ ಸಿನಿಮಾದಲ್ಲಿ ಇರಲಿದೆ ಪಂಜುರ್ಲಿ ದೈವದ ಕಥೆ! ಬಿಡುಗಡೆ ಯಾವಾಗ?

ಒಟಿಟಿಗೆ ಯಾವಾಗ?

ಮೇ 10ಕ್ಕೆ ಸಿನಿಮಾ ಒಟಿಟಿ ಬರುತ್ತದೆ ಎನ್ನಲಾಗುತ್ತಿದೆ. ಮೇ 26ಕ್ಕೆ ಡಿಸ್ನಿ ಹಾಟ್‌ಸ್ಟರ್‌ನಲ್ಲಿ ಸಿನಿಮಾ ಸ್ಟ್ರೀಮಿಂಗ್ ಎನ್ನುವ ಚರ್ಚೆ ಕೂಡ ಇದೆ. ಆದರೆ ಯಾವಾಗ ಎನ್ನುವುದು ಶೀಘ್ರದಲ್ಲೇ ರಿವೀಲ್ ಆಗಲಿದೆ.

ಏನಿದೆ ಆಡುಜೀವಿತಂ ಸಿನಿಮಾ ಕಥೆ?

ಹಣ ಸಂಪಾದಿಸಲು ಸೌದಿ ಅರೇಬಿಯಾಕ್ಕೆ ಹೋದ ಭಾರತೀಯ ವಲಸೆ ಕಾರ್ಮಿಕ ನಜೀಬ್ ಮುಹಮ್ಮದ್ ನಿಜ ಜೀವನದ ಘಟನೆ ಇದು ಎಂದು ನಿರ್ದೇಶಕರು ಹೇಳಿಕೊಂಡಿದ್ದಾರೆ. ವಿಧಿಯ ವೈಚಿತ್ರ್ಯದಿಂದಾಗಿ ನಜೀಬ್‌ ಗುಲಾಮನ ಬದುಕನ್ನು ಬದುಕಬೇಕಾದ ಅನಿವಾರ್ಯತೆ ಸೃಷ್ಟಿಯಾಗುತ್ತದೆ. ಅವನು ಮರುಭೂಮಿಯ ಮಧ್ಯದಲ್ಲಿ ಮೇಕೆಗಳನ್ನು ಮೇಯಿಸಬೇಕಾಗುತ್ತದೆ. ಆಡು ಜೀವಿತಂ ಅಂದರೆ ಆಡಿನ ಬದುಕು ಅಂಥ ಅರ್ಥ. ಇಂಗ್ಲಿಷ್‌ನಲ್ಲಿ ಇದರ ಟೈಟಲ್‌ GOAT LIFE ಎಂದಿದೆ.

ಪರ್ಷಿಯನ್ ಕೊಲ್ಲಿ ರಾಷ್ಟ್ರಗಳಲ್ಲಿ ಕೆಲಸ ಮಾಡಿ ಮನೆಗೆ ಕಳುಹಿಸುವಷ್ಟು ಹಣ ಸಂಪಾದಿಸುವುದು ನಜೀಬ್ ಅವರ ಕನಸಾಗಿತ್ತು. ಆದರೆ, ಸೌದಿ ಮರುಭೂಮಿಯ ಮಧ್ಯದಲ್ಲಿ ಆಡುಗಳನ್ನು ಮೇಯಿಸುವ ಗುಲಾಮಗಿರಿಯ ಕೆಲಸಕ್ಕೆ ಒಡ್ಡಿಕೊಳ್ಳಬೇಕಾದ ಅನಿವಾರ್ಯತೆ ಏನು ಬಂತು? ಅವನು ಕೊನೆಗೂ ತನ್ನನ್ನು ತಾನು ಹೇಗೆ ಬಂಧಮುಕ್ತಗೊಳಿಸಿಕೊಳ್ಳುತ್ತಾನೆ ಎನ್ನುವುದೊಂದು ದೊಡ್ಡ ಹೋರಾಟದ ಕಥೆ. ಅವನು ಸೆರೆಮನೆ ಸೇರಿ, ಅಲ್ಲಿಂದ ತಪ್ಪಿಸಿಕೊಳ್ಳುವ ಸಾಹಸ ಈ ಚಿತ್ರದಲ್ಲಿ ಇರಲಿದೆ ಎನ್ನಲಾಗಿದೆ.

ಈ ಸಿನಿಮಾಕ್ಕಾಗಿ ನಿರ್ದೇಶಕ ಬ್ಲೆಸ್ಸಿ ಅವರು ತುಂಬಾ ಅಧ್ಯಯನ ಮಾಡಿದ್ದಾರೆ. ಈ ಕಥೆ ಅವರನ್ನು ಕಳೆದ 15 ವರ್ಷಗಳಿಂದ ಕೊರೆಯುತ್ತಿತ್ತಂತೆ. ಅಂತೆಯೇ ಅವರ ಕನಸಿನಲ್ಲಿ ಬಂದ ಚಿತ್ರದಂತೆ ತಮ್ಮನ್ನು ಮಾರ್ಪಾಡು ಮಾಡಿಕೊಂಡು ಹೊಸ ವ್ಯಕ್ತಿಯ ರೂಪದಲ್ಲಿ ಹೊಸ ಲುಕ್‌ನಲ್ಲಿ ಬಂದಿದ್ದಾರೆ ನಟ ಪೃಥ್ವಿರಾಜ್ ಸುಕುಮಾರನ್.

Continue Reading

ಮಾಲಿವುಡ್

Manjummel Boys: ‘ಮಂಜುಮ್ಮೆಲ್ ಬಾಯ್ಸ್’ ಒಟಿಟಿ ಡೇಟ್ ಅನೌನ್ಸ್ ಮಾಡಿದ ಡಿಸ್ನಿ!

Manjummel Boys: ʻಮಂಜುಮ್ಮೇಲ್ ಬಾಯ್ಸ್ʼ ಸುಮಾರು 5 ಕೋಟಿ ರೂ. ಬಜೆಟ್‌ನಲ್ಲಿ ತಯಾರಾದ ಚಿತ್ರದ ಗಳಿಕೆ ಬರೋಬ್ಬರಿ 200 ಕೋಟಿ ರೂ. ಗಳಿಕೆ ಕಂಡಿದೆ. ಥಿಯೇಟರ್‌ನಲ್ಲಿ ಪ್ರೇಕ್ಷಕರ ಗಮನ ಸೆಳೆದ ಈ ಚಿತ್ರ ಒಟಿಟಿ (OTT)ಗೆ ಬರಲು ಸಿದ್ಧವಾಗಿದೆ. ಡಿಸ್ನಿ ಪ್ಲಸ್ ಹಾಟ್​​ಸ್ಟಾರ್ ಮೂಲಕ ‘ಮಂಜುಮ್ಮೇಲ್ ಬಾಯ್ಸ್’ ವೀಕ್ಷಣೆಗೆ ಲಭ್ಯವಾಗಲಿದೆ. ಚಿದಂಬರಂ ನಿರ್ದೇಶನದ ಈ ಚಿತ್ರ ಫೆಬ್ರವರಿ 22ರಂದು ಥಿಯೇಟರ್​ನಲ್ಲಿ ಬಿಡುಗಡೆಯಾಗಿತ್ತು.

VISTARANEWS.COM


on

Manjummel Boys
Koo

ಬೆಂಗಳೂರು: ಕೆಲವು ಸಮಯದಿಂದ ಮಂಕಾಗಿದ್ದ ಮಲಯಾಳಂ ಚಿತ್ರರಂಗ (Mollywood) ಮತ್ತೆ ಸದ್ದು ಮಾಡತೊಡಗಿದೆ. ಬ್ಯಾಕ್‌ ಟು ಬ್ಯಾಕ್‌ ಮಲಯಾಳಂ ಚಿತ್ರಗಳು ಬಾಕ್ಸ್‌ ಆಫೀಸ್‌ನಲ್ಲಿ ಕಮಾಲ್‌ ಮಾಡುವ ಜತೆಗೆ ದೇಶದ ಗಮನ ಸೆಳೆಯುತ್ತಿವೆ. ಅದರಲ್ಲಿಯೂ ʻಮಂಜುಮ್ಮೆಲ್ ಬಾಯ್ಸ್ʼ (Manjummel Boys)ನ ಹವಾ ಜೋರಾಗಿಯೇ ಬೀಸುತ್ತಿದೆ. ಸುಮಾರು 5 ಕೋಟಿ ರೂ. ಬಜೆಟ್‌ನಲ್ಲಿ ತಯಾರಾದ ಈ ಚಿತ್ರದ ಗಳಿಕೆ ಬರೋಬ್ಬರಿ 200 ಕೋಟಿ ರೂ. ಗಳಿಕೆ ಕಂಡಿದೆ. ಥಿಯೇಟರ್‌ನಲ್ಲಿ ಪ್ರೇಕ್ಷಕರ ಗಮನ ಸೆಳೆದ ಈ ಚಿತ್ರ ಒಟಿಟಿ (OTT)ಗೆ ಬರಲು ಸಿದ್ಧವಾಗಿದೆ. ಮೇ 5 (ಭಾನುವಾರ) ಸಿನಿಮಾ ಡಿಸ್ನಿ ಪ್ಲಸ್ ಹಾಟ್​ಸ್ಟಾರ್​ನಲ್ಲಿ ಪ್ರಸಾರ ಕಾಣಲಿದೆ.

ಥಿಯೇಟರ್‌ಗಳಲ್ಲಿ ʻಮಂಜುಮ್ಮೆಲ್ ಬಾಯ್ಸ್ʼನನ್ನು ನೋಡಲಾಗದವರು ಒಟಿಟಿಗೆ ಯಾವಾಗ ಬರುತ್ತದೆ ಎಂದು ಕುತೂಹಲದಿಂದ ಕಾಯುತ್ತಿದ್ದಾರೆ. ಅವರ ಕಾತುರಕ್ಕೆ ಕೊನೆಗೂ ತೆರೆ ಬಿದ್ದಿದೆ. ಡಿಸ್ನಿ ಪ್ಲಸ್ ಹಾಟ್​​ಸ್ಟಾರ್ ಮೂಲಕ ‘ಮಂಜುಮ್ಮೇಲ್ ಬಾಯ್ಸ್’ ವೀಕ್ಷಣೆಗೆ ಲಭ್ಯವಾಗಲಿದೆ. ಮೇ 3ರಂದು ‘ಮಂಜುಮ್ಮೇಲ್ ಬಾಯ್ಸ್’ ಒಟಿಟಿಯಲ್ಲಿ ಪ್ರಸಾರ ಕಾಣಲಿದೆ ಎಂದು ಹೇಳಲಾಗಿತ್ತು. ಆದರೆ, ಇದಕ್ಕೆ ಟ್ವಿಸ್ಟ್ ನೀಡಲಾಗಿದೆ. ಮೇ 5 (ಭಾನುವಾರ) ಸಿನಿಮಾ ಡಿಸ್ನಿ ಪ್ಲಸ್ ಹಾಟ್​ಸ್ಟಾರ್​ನಲ್ಲಿ ಪ್ರಸಾರ ಕಾಣಲಿದೆ.

ಇದನ್ನೂ ಓದಿ: Manjummel Boys: ಕನ್ನಡದಲ್ಲೂ ಬರಲಿದೆ ʻಮಂಜುಮ್ಮೆಲ್ ಬಾಯ್ಸ್ʼ? ಒಟಿಟಿಗೆ ಯಾವಾಗ?

ಚಿದಂಬರಂ ನಿರ್ದೇಶನದ ಈ ಚಿತ್ರ ಫೆಬ್ರವರಿ 22ರಂದು ಥಿಯೇಟರ್​ನಲ್ಲಿ ಬಿಡುಗಡೆಯಾಗಿತ್ತು. ಅಂದಿನಿಂದ ಇದು ಸುಮಾರು 200 ಕೋಟಿ ರೂ. ಕಲೆಕ್ಷನ್‌ ಮಾಡಿದ್ದು, ಈ ಮೂಲಕ ಅತ್ಯಧಿಕ ಗಳಿಕೆ ಕಂಡ ಮಲಯಾಳಂ ಚಿತ್ರ ಎನ್ನುವ ದಾಖಲೆ ಬರೆದಿದೆ. ಇದು ಚಿದಂಬರಂ ಅವರ ಎರಡನೇ ಸಿನಿಮಾ. 2021ರಲ್ಲಿ ಇವರು ಆ್ಯಕ್ಷನ್‌ ಕಟ್‌ ಹೇಳಿದ್ದ ʼಜಾನ್‌.ಇ.ಮಾನ್‌ʼ ಚಿತ್ರ ಬಿಡುಗಡೆಯಾಗಿತ್ತು. ನಟ ʻಮಂಜುಮ್ಮೇಲ್ ಬಾಯ್ಸ್ʼ ಸಿನಿಮಾವನ್ನು ಸೌಬಿನ್ ಶಾಹಿರ್ ಚಿತ್ರವನ್ನು ನಿರ್ಮಾಣ ಮಾಡುವ ಜತೆಗೆ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಶ್ರೀನಾಥ್ ಭಾಸಿ, ಬಾಲು ವರ್ಗೀಸ್, ಗಣಪತಿ ಮತ್ತು ಜೀನ್ ಪಾಲ್ ಲಾಲ್ ಮತ್ತಿತರರು ನಟಿಸಿದ್ದಾರೆ.

ಕಥೆ ಏನು?

2006ರಲ್ಲಿ ಕೇರಳದಿಂದ ತಮಿಳುನಾಡಿನ ಕೊಡೈಕೆನಲ್​ಗೆ ಫ್ರೆಂಡ್ಸ್ ಗ್ರೂಪೊಂದಕು ಟ್ರಿಪ್ ಹೊರಡುತ್ತದೆ. ʻಡೆವಿಲ್ಸ್ ಕಿಚನ್ʼ ಹೆಸರಿನ ಗುಹೆಯಲ್ಲಿ ಸುಭಾಷ್ ಎಂಬಾತ ಬೀಳುತ್ತಾನೆ. ಆತನನ್ನು ರಕ್ಷಿಸಲು ಫ್ರೆಂಡ್ಸ್ ಪ್ರಯತ್ನಿಸುತ್ತಾರೆ. ಇದರಲ್ಲಿ ಯಶಸ್ವಿ ಆಗ್ತಾರಾ ಇಲ್ಲವಾ ಎಂಬುದೇ ಕಥೆ.

ಇದನ್ನೂ ಓದಿ: Ramayana Movie: ರಾಮಾಯಣ’ ಸಿನಿಮಾದ ರಣ್‌ಬೀರ್, ಸಾಯಿ ಪಲ್ಲವಿ ಲುಕ್ ಲೀಕ್

ನೈಜ ಘಟನೆ

ವಿಶೇಷ ಎಂದರೆ ಇದು ನೈಜ ಘಟನೆ ಆಧಾರಿತ ಸಿನಿಮಾ. ನೈಜವಾಗಿ, ಸರಳವಾಗಿ ಚಿತ್ರವನ್ನು ನಿರೂಪಿಸಲಾಗಿದೆ. ಇದು ಈ ಚಿತ್ರದ ಯಶಸ್ಸಿಗೆ ಮುಖ್ಯ ಕಾರಣ ಎಂದು ಸಿನಿಮಾ ತಜ್ಞರು ಅಭಿಪ್ರಾಯ ಪಡುತ್ತಾರೆ. ಈ ಹಿಂದೆ ಸಿನಿಮಾ ರಂಗದ ಹಲವು ದಿಗ್ಗಜರು ಈ ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದರು.

ಮಂಜುಮ್ಮೇಲ್ ಬಾಯ್ಸ್ʼ ಚಿತ್ರದ ಮೂಲಕ ಮಾಲಿವುಡ್‌ ಭರ್ಜರಿ ಕಂಬ್ಯಾಕ್‌ ಮಾಡಿದೆ. ಇತ್ತೀಚೆಗೆ ತೆರೆಕಂಡ ಹಲವು ಮಲಯಾಳಂ ಚಿತ್ರಗಳಯ ಬಾಕ್ಸ್‌ ಆಫೀಸ್‌ನಲ್ಲಿ ಮ್ಯಾಜಿಕ್‌ ಮಾಡಿವೆ. ʼಪ್ರೇಮುಲುʼ, ʼಭ್ರಮಯುಗಂʼ, ʼಅಬ್ರಹಾಂ ಓಜ್ಲರ್ʼ ಮುಂತಾದ ಸಿನಿಮಾಗಳು ಹಿಟ್‌ ಆಗಿವೆ.

Continue Reading
Advertisement
Palthady Rama krishna achar
ಕರ್ನಾಟಕ53 seconds ago

Palthady Ramakrishna Achar: ತುಳು ಸಾಹಿತಿ, ವಿದ್ವಾಂಸ ಡಾ|ಪಾಲ್ತಾಡಿ ರಾಮಕೃಷ್ಣ ಆಚಾರ್ ವಿಧಿವಶ

Actor Darshan devil starring making video release on may 10
ಸಿನಿಮಾ17 mins ago

Actor Darshan: ಮೇ 10ಕ್ಕೆ ಗುಡ್‌ನ್ಯೂಸ್‌ ಕೊಡ್ತಿದ್ದಾರೆ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌! ಏನದು?

Prajwal Revanna Case SIT not issuing notice to Karthik HDK decides to approach Governor and Court
ರಾಜಕೀಯ28 mins ago

Prajwal Revanna Case: ಕಾರ್ತಿಕ್‌ಗೆ ನೋಟಿಸ್‌ ನೀಡದ SIT; ರಾಜ್ಯಪಾಲ, ಕೋರ್ಟ್‌ ಮೊರೆ ಹೋಗಲು ಎಚ್‌ಡಿಕೆ ನಿರ್ಧಾರ

Self Harming
ಕ್ರೈಂ33 mins ago

Self Harming: ಅಪ್ಪನಿಗೆ ಗುಡ್ ಬೈ ಹೇಳಿಸಿ ಮಗುವನ್ನು ಕೊಂದ ತಾಯಿ!

Flights cancelled
ದೇಶ35 mins ago

Flights cancelled: 300 ಸಿಬ್ಬಂದಿ ಸಾಮೂಹಿಕ ರಜೆ; 86 ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನಗಳು ಕ್ಯಾನ್ಸಲ್‌

prajwal revanna case puttaraj shreyas patel karthik
ಪ್ರಮುಖ ಸುದ್ದಿ1 hour ago

Prajwal Revanna Case: ವಿಡಿಯೋ ಕಿಂಗ್‌ಪಿನ್‌ ಕಾರ್ತಿಕ್‌ ಕಾಂಗ್ರೆಸ್‌ ಅಭ್ಯರ್ಥಿ ಜೊತೆ ಕ್ಲೋಸ್;‌ ʼಕೈʼವಾಡಕ್ಕೆ ಸಾಕ್ಷಿ ಫೋಟೋಗಳು ಇಲ್ಲಿವೆ!

Actor Sathyaraj throwback picture of with veteran actor
ಮಾಲಿವುಡ್1 hour ago

Actor Sathyaraj: `ಬಾಹುಬಲಿ’ ಕಟ್ಟಪ್ಪನ ತೊಡೆ ಮೇಲೆ ಕುಳಿತ ಈ ಕ್ಯೂಟ್‌ ನಟ ಯಾರು? ಹೇಳಿ ನೋಡೋಣ!

Alia Bhatt Deep Fake Wamiqa Gabbi face replaced
ಬಾಲಿವುಡ್1 hour ago

Alia Bhatt Deep Fake: ಆಲಿಯಾ ಭಟ್‌ ಡೀಪ್‌ಫೇಕ್‌ ವಿಡಿಯೊ ವೈರಲ್‌! ಅಸಲಿ ಮುಖ ಯಾರದ್ದು?

Sindhuri Vs Roopa
ಕರ್ನಾಟಕ1 hour ago

Sindhuri Vs Roopa: ಆರೋಪ-ಪ್ರತ್ಯಾರೋಪ ಬಿಟ್ಟು ಸಂಧಾನದತ್ತ ಗಮನ ಹರಿಸಿ; ರೂಪ-ರೋಹಿಣಿಗೆ ಸುಪ್ರೀಂ ಕೋರ್ಟ್‌ ಸಲಹೆ

Puttakkana Makkalu umashree acting praised
ಕಿರುತೆರೆ1 hour ago

Puttakkana Makkalu: ʻಪುಟ್ಟಕ್ಕʼನ ನಟನೆಗೆ ಕೋಟಿ ಕೋಟಿ ನಮನ ಅಂತಿದ್ದಾರೆ ಫ್ಯಾನ್ಸ್‌!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ8 hours ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ16 hours ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ19 hours ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ21 hours ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ2 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ2 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ2 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ3 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ3 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌