Thalapathy Vijay: 14 ವರ್ಷಗಳ ಬಳಿಕ ಕೇರಳಕ್ಕೆ ಬಂದ ದಳಪತಿ ವಿಜಯ್‌! - Vistara News

ಮಾಲಿವುಡ್

Thalapathy Vijay: 14 ವರ್ಷಗಳ ಬಳಿಕ ಕೇರಳಕ್ಕೆ ಬಂದ ದಳಪತಿ ವಿಜಯ್‌!

Thalapathy Vijay: ರಾಜಕೀಯಕ್ಕೆ ಪ್ರವೇಶಿಸುವ ಮೊದಲು ದಳಪತಿ ವಿಜಯ್‌ ಅವರ ಕೊನೆಯ ಸಿನಿಮಾ ಇದು ಎನ್ನಲಾಗುತ್ತಿದೆ. ಆನ್‌ಲೈನ್‌ನಲ್ಲಿ ಕಾಣಿಸಿಕೊಂಡ ಹಲವಾರು ವೀಡಿಯೊಗಳಲ್ಲಿ, ವಿಜಯ್ ಅವರ ಅಭಿಮಾನಿಗಳು ನಟನಿಗಾಗಿ ಕಾದಿದ್ದಾರೆ.

VISTARANEWS.COM


on

Thalapathy Vijay
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವೆಂಕಟ್ ಪ್ರಭು ನಿರ್ದೇಶನದ ದಳಪತಿ ವಿಜಯ್ (Thalapathy Vijay) ಅವರ ಬಹುನಿರೀಕ್ಷಿತ ಚಿತ್ರ ‘ಗ್ರೇಟೆಸ್ಟ್ ಆಫ್ ಆಲ್ ಟೈಮ್ (ಗೋಟ್)’ (‘Greatest Of All Time (GOAT)’) ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಬಿಡುಗಡೆಗೂ ಮುನ್ನ, ಅದರ ಕ್ಲೈಮ್ಯಾಕ್ಸ್ ಚಿತ್ರೀಕರಣಕ್ಕಾಗಿ ನಟ ಕೇರಳಕ್ಕೆ ಭೇಟಿ ನೀಡಿದ್ದಾರೆ. 14 ವರ್ಷಗಳ ಸುದೀರ್ಘ ಅವಧಿಯ ನಂತರ ಅವರು ಕೇರಳ ರಾಜ್ಯಕ್ಕೆ ಮರಳಿದ್ದರು. ಸೋಮವಾರ (ಮಾ.18), ನೂರಾರು ಅಭಿಮಾನಿಗಳು ಅವರನ್ನು ಸ್ವಾಗತಿಸಲು ವಿಮಾನ ನಿಲ್ದಾಣದಲ್ಲಿ ಜಮಾಯಿಸಿದರು. ಇದೀಗ ಈ ವಿಡಿಯೊ ವೈರಲ್‌ ಆಗಿದೆ.

ರಾಜಕೀಯಕ್ಕೆ ಪ್ರವೇಶಿಸುವ ಮೊದಲು ದಳಪತಿ ವಿಜಯ್‌ ಅವರ ಕೊನೆಯ ಸಿನಿಮಾ ಇದು ಎನ್ನಲಾಗುತ್ತಿದೆ. ಆನ್‌ಲೈನ್‌ನಲ್ಲಿ ಕಾಣಿಸಿಕೊಂಡ ಹಲವಾರು ವೀಡಿಯೊಗಳಲ್ಲಿ, ವಿಜಯ್ ಅವರ ಅಭಿಮಾನಿಗಳು ನಟನಿಗಾಗಿ ಕಾದಿದ್ದಾರೆ. ಜನಸಂದಣಿಯನ್ನು ನಿಯಂತ್ರಿಸಲು ಪೊಲೀಸರು ಮಹತ್ವದ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದರು. ಅಷ್ಟೇ ಅಲ್ಲ, ‘ವಿಜಯ್ ಸ್ಟಾರ್ಮ್ ಹಿಟ್ಸ್ ಕೇರಳ’ ಮತ್ತು ‘ಗೋಟ್’ ಎಂಬ ಹ್ಯಾಶ್‌ಟ್ಯಾಗ್‌ಗಳು ಎಕ್ಸ್‌ನಲ್ಲಿ ಟ್ರೆಂಡ್‌ ಆಗಿವೆ.

ನಟ ಕೇರಳದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಅವರ ಹಿಂದಿನ ಚಿತ್ರ, ಲೋಕೇಶ್ ಕನಕರಾಜ್ ಬರೆದು ನಿರ್ದೇಶಿಸಿದ ‘ಲಿಯೋ’, ಕೇರಳದ ಗಲ್ಲಾಪೆಟ್ಟಿಗೆಯಲ್ಲಿ ಯಶಸ್ಸನ್ನು ಕಂಡಿತು. ಥಿಯೇಟರ್ ಗಳಿಕೆಯಲ್ಲಿ 60 ಕೋಟಿ ರೂ. ಗಳಿಸಿತು.

ಇದನ್ನೂ ಓದಿ: Actor Rajinikanth: ರಾಜಕೀಯಕ್ಕೆ ಧುಮುಕಿದ ನಟ ದಳಪತಿ ವಿಜಯ್‌; ರಜನಿಕಾಂತ್‌ ರಿಯಾಕ್ಷನ್‌ ಏನು?

‘GOAT’ ಸಿನಿಮಾದಲ್ಲಿ ವಿಜಯ್ ಜೊತೆ ಪ್ರಭುದೇವ, ಪ್ರಶಾಂತ್, ವಿನಯ್, ಮೀನಾಕ್ಷಿ ಚೌಧರಿ ಮೊದಲಾದವರು ನಟಿಸುತ್ತಿದ್ದಾರೆ. ವೆಂಕಟ್ ಪ್ರಭು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ತ್ರಿಷಾ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಗೋಟ್’ ಅನ್ನು ಎಜಿಎಸ್ ಎಂಟರ್‌ಟೈನ್‌ಮೆಂಟ್‌ನಿಂದ ಕಲ್ಪತಿ ಎಸ್ ಅಘೋರಂ, ಕಲ್ಪತಿ ಎಸ್ ಗಣೇಶ್ ಮತ್ತು ಕಲ್ಪತಿ ಎಸ್ ಸುರೇಶ್ ಅವರು ಬೃಹತ್ ಬಜೆಟ್‌ನಲ್ಲಿ ನಿರ್ಮಿಸಿದ್ದಾರೆ. ಚಿತ್ರಕ್ಕೆ ಯುವನ್ ಶಂಕರ್ ರಾಜಾ ಅವರ ಸಂಗೀತ ಸಂಯೋಜನೆ. ಸಿದ್ಧಾರ್ಥ ನುನಿ ಅವರ ಛಾಯಾಗ್ರಹಣ ಮತ್ತು ವೆಂಕಟ್ ರಾಜೇನ್ ಅವರ ಸಂಕಲನವಿದೆ.

‘ಗೋಟ್’ ನಿರ್ಮಾಣದ ಕೊನೆಯ ಹಂತದಲ್ಲಿದ್ದು, ಚೆನ್ನೈ, ಥೈಲ್ಯಾಂಡ್, ಹೈದರಾಬಾದ್ ಮತ್ತು ಪಾಂಡಿಚೇರಿಯಲ್ಲಿ ಚಿತ್ರೀಕರಣ ಮಾಡಲಾಗಿದೆ. ಈ ವರ್ಷದ ಕೊನೆಯಲ್ಲಿ ಚಿತ್ರವು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಶೀಘ್ರದಲ್ಲೇ ಅಧಿಕೃತ ಘೋಷಣೆ ಹೊರಬೀಳಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಾಲಿವುಡ್

All We Imagine As Light: ʻದಿ ಕೇರಳ ಸ್ಟೋರಿʼ ಸಿನಿಮಾ ಆಡಿಷನ್‌ ರಿಜೆಕ್ಟ್‌ ಮಾಡಿದ್ರಂತೆ ಕಾನ್‌ ಪ್ರಶಸ್ತಿ ವಿಜೇತೆ!

All We Imagine As Light : ‘ಆಲ್ ವಿ ಇಮ್ಯಾಜಿನ್ ಆಸ್ ಲೈಟ್’ (All We Imagine as Light) ಸಿನಿಮಾ ಕಾನ್​ನ ಗ್ರ್ಯಾಂಡ್​ ಪ್ರಿಕ್ಸ್ ಪ್ರೈಜ್ ಪಡೆದ ಮೊದಲ ಭಾರತೀಯ ಸಿನಿಮಾ ಎನಿಸಿಕೊಂಡಿತ್ತು. ʻ ಆಲ್ ವಿ ಇಮ್ಯಾಜಿನ್ ಆಸ್ ಲೈಟ್‌ʼನಲ್ಲಿನ ಅಭಿನಯಕ್ಕಾಗಿ ಮಲಯಾಳಂ ನಟಿ ʻಕಣಿ ಕುಸರುತಿʼ (Kani Kusruti ) ಜಾಗತಿಕ ಮೆಚ್ಚುಗೆಯನ್ನು ಗಳಿಸಿದರು.

VISTARANEWS.COM


on

All We Imagine As Light actor rejected audition call by The Kerala Story
Koo

ಬೆಂಗಳೂರು: ಗ್ರ್ಯಾಂಡ್​ ಪ್ರಿಕ್ಸ್ ಪ್ರೈಜ್ ಪ್ರಶಸ್ತಿ ಕಾನ್ ಸಿನಿಮೋತ್ಸವದ ಎರಡನೇ ಅತ್ಯುತ್ತಮ ಪ್ರಶಸ್ತಿಯಾಗಿದೆ. ಪಾಯಲ್ ಕಪಾಡಿಯಾ ನಿರ್ದೇಶನದ ‘ಆಲ್ ವಿ ಇಮ್ಯಾಜಿನ್ ಆಸ್ ಲೈಟ್’ (All We Imagine as Light) ಸಿನಿಮಾ ಕಾನ್​ನ ಗ್ರ್ಯಾಂಡ್​ ಪ್ರಿಕ್ಸ್ ಪ್ರೈಜ್ ಪಡೆದ ಮೊದಲ ಭಾರತೀಯ ಸಿನಿಮಾ ಎನಿಸಿಕೊಂಡಿತ್ತು. ʻ ಆಲ್ ವಿ ಇಮ್ಯಾಜಿನ್ ಆಸ್ ಲೈಟ್‌ʼನಲ್ಲಿನ ಅಭಿನಯಕ್ಕಾಗಿ ಮಲಯಾಳಂ ನಟಿ ʻಕಣಿ ಕುಸರುತಿʼ (Kani Kusruti ) ಜಾಗತಿಕ ಮೆಚ್ಚುಗೆಯನ್ನು ಗಳಿಸಿದರು. ಕಣಿ ಕುಸರುತಿ ನೀಡಿದ ಸಂದರ್ಶನದಲ್ಲಿ, ʻʻಕಡಿಮೆ ಸಿನಿಮಾಗಳು ನನಗೆ ಆಫರ್‌ ಬಂದಿದ್ದವು. ಹಾಗೇ ನಿರ್ದೇಶಕ ಸುದೀಪ್ತೋ ಸೇನ್ ಅವರ ʻದಿ ಕೇರಳ ಸ್ಟೋರಿʼ ಸಿನಿಮಾ ಆಡಿಷನ್‌ ಕರೆ ಬಂದಿತ್ತು. ಅದನ್ನು ಕೂಡ ರಿಜೆಕ್ಟ್‌ ಮಾಡಿದ್ದೆʼʼಎಂದು ಹೇಳಿಕೊಂಡಿದ್ದಾರೆ.

ನಟಿ ಮಾತನಾಡಿ ʻʻನನಗೆ ಬಂದ ಸಿನಿಮಾಗಳನ್ನು ಮಾತ್ರ ನಾನು ಮಾಡಬಲ್ಲೆ. ಸಜಿನ್ ಬಾಬು ಅವರ 2019 ರ ಬಿಡುಗಡೆಯಾದ ʻಬಿರಿಯಾನಿʼ ಸಿನಿಮಾ ನಟನೆಗೆ ಕೇರಳ ರಾಜ್ಯ ಪ್ರಶಸ್ತಿಯನ್ನು ಗೆದ್ದಿದ್ದೆ. ಆದರೆ ನನಗೆ ಹೊಂದಿಕೆಯಾಗದ ಚಿತ್ರಗಳನ್ನು ಮಾಡದಿರಲು ಪ್ರಯತ್ನಿಸುತ್ತೇನೆ. ಉದಾಹರಣೆಗೆ ಕಳೆದ ವರ್ಷ ಬ್ಲಾಕ್‌ ಬಸ್ಟರ್‌ ಹಿಟ್‌ ಆದ ʻದಿ ಕೇರಳ ಸ್ಟೋರಿʼ ಸಿನಿಮಾ. ನಿರ್ದೇಶಕ ಸುದೀಪ್ತೋ ಸೇನ್ ಅವರು ಆಡಿಷನ್‌ಗೆ ಕರೆದಿದ್ದರು. ಆದರೆ ನಾನು ರಿಜೆಕ್ಟ್‌ ಮಾಡಿದ್ದೆʼʼ ಎಂದು ಬಹಿರಂಗಪಡಿಸಿದರು.

ಈ ಹಿಂದೆ ʻಬಿರಿಯಾನಿʼ ಸಿನಿಮಾದಲ್ಲಿ ಕಣಿ ಕುಸರುತಿ ಸಾಕಷ್ಟು ವಿವಾದಗಳನ್ನು ಎದುರಿಸಿದ್ದರು. ಈ ಬಗ್ಗೆಯೂ ನಟಿ ಹೇಳಿಕೊಂಡಿದ್ದಾರೆ. ʻʻಬಿರಿಯಾನಿ ಸಿನಿಮಾ ವೇಳೆ ನಾನು ಆ ಸ್ಕ್ರಿಪ್ಟ್‌ಗೆ ಹೊಂದಿಕೆಯಾಗುವುದಿಲ್ಲ ಎಂದು ನಾನು ನಿರ್ದೇಶಕ ಸಜಿನ್‌ಗೆ ಹೇಳಿದ್ದೆ. ಸಜಿನ್ ಹಿಂದುಳಿದ ಮುಸ್ಲಿಂ ಸಮುದಾಯದಿಂದ ಬಂದವರು. ಅವರು ಅವರ ಸ್ಥಾನದಲ್ಲಿಯೇ ಯೋಚಿಸುತ್ತಿದ್ದರು. ಅವರ ರಾಜಕೀಯವನ್ನು ಮಾತ್ರ ಮಾತನಾಡುತ್ತಿದ್ದರುʼʼಎಂದರು.

ಇದನ್ನೂ ಓದಿ: Kendall Jenner: ತಿಂಗಳಲ್ಲಿ ಎರಡು ಬಾರಿ ಟಾಪ್‌ಲೆಸ್‌ ಆದ ಹಾಲಿವುಡ್‌ ಬ್ಯೂಟಿ ಕೆಂಡಲ್‌ ಜೆನ್ನರ್‌!

ಪಾಯಲ್ ನಿರ್ದೇಶನದ ‘ಆಲ್ ವಿ ಇಮ್ಯಾಜಿನ್ ಆಸ್ ಲೈಟ್’ (All We Imagine as Light) ಸಿನಿಮಾ ಕಾನ್​ನ ಗ್ರ್ಯಾಂಡ್​ ಪ್ರಿಕ್ಸ್ ಪ್ರೈಜ್ ( Grand Prix At Cannes) ಪಡೆದ ಮೊದಲ ಭಾರತೀಯ ಸಿನಿಮಾ ಎನಿಸಿಕೊಂಡಿದೆ .77ನೇ ಆವೃತ್ತಿಯ ಕಾನ್ ಫಿಲ್ಮ್ಸ್‌ ಫೆಸ್ಟಿವಲ್‌ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ನೀಡಲಾಗಿತ್ತು. ಸಿನಿಮಾ ಕಾನ್​ನಲ್ಲಿ ಪ್ರದರ್ಶನವಾದಾಗ ಬರೋಬ್ಬರಿ ಎಂಟು ನಿಮಿಷಗಳ ಸ್ಟಾಂಡಿಂಗ್ ಓವಿಯೇಷನ್ ಈ ಸಿನಿಮಾಕ್ಕೆ ದೊರೆತಿತ್ತು.

ಆಲ್ ವಿ ಇಮ್ಯಾಜಿನ್ ಆಸ್ ಲೈಟ್’ ಸಿನಿಮಾವು ಮಲಯಾಳಂ-ಹಿಂದಿ ಸಿನಿಮಾ ಆಗಿದೆ. ಆಸ್ಪತ್ರೆಯಲ್ಲಿ ನರ್ಸ್‌ಗಳಾಗಿ ಸೇವೆ ಸಲ್ಲಿಸುವ ಇಬ್ಬರು ರೂಮ್‌ಮೇಟ್‌ಗಳ ಕಥೆ ಇದರಲ್ಲಿದೆ. ಚಿತ್ರವು ಮೂರು ವಿಭಿನ್ನ ಮಹಿಳೆಯರ ನಡುವಿನ ಸ್ನೇಹದ ಕತೆ ಕೂಡ ಇದೆ. ಕನಿ ಕುಸರುತಿ ಮುಂದೆ ಡಿಸ್ನಿ+ ಹಾಟ್‌ಸ್ಟಾರ್‌ನಲ್ಲಿ ನಾಗೇಂದ್ರ ಅವರ ಮಲಯಾಳಂ ಸಿರೀಸ್‌ ಹನಿಮೂನ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

Continue Reading

South Cinema

 L2 Empuraan: ಮೋಹನ್‌ಲಾಲ್ ಬರ್ತ್‌ಡೇ; L2E-ಎಂಪುರಾನ್‌ ಲುಕ್‌ ಔಟ್‌!

 L2 Empuraan: ಈ ಚಿತ್ರವನ್ನು ಆಶೀರ್ವಾದ್ ಸಿನಿಮಾಸ್ ಮತ್ತು ಲೈಕಾ ಪ್ರೊಡಕ್ಷನ್ಸ್ ಜಂಟಿಯಾಗಿ ನಿರ್ಮಿಸಲಿವೆ. ಇದು ಮಲಯಾಳಂ, ತಮಿಳು, ತೆಲುಗು, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಲೂಸಿಫರ್ 2019ರಲ್ಲಿ ಬಿಡುಗಡೆಗೊಂಡು ಬ್ಲಾಕ್‌ಬಸ್ಟರ್‌ ಹಿಟ್‌ ಆಯಿತು. ಮಲಯಾಳಂ ಚಿತ್ರರಂಗದ ಇತಿಹಾಸದಲ್ಲಿ ಅತಿದೊಡ್ಡ ಗಳಿಕೆಗಳಲ್ಲಿ ಒಂದಾಯಿತು.

VISTARANEWS.COM


on

L2 Empuraan first look poster shared by Prithviraj Sukumaran
Koo

ಬೆಂಗಳೂರು: ಇಂದು ಮಾಲಿವುಡ್‌ ಸ್ಟಾರ್‌ ಮೋಹನ್‌ಲಾಲ್ (Mohanlal as Khureshi Abraam ) ಅವರ 64ನೇ ಹುಟ್ಟುಹಬ್ಬದ ಸಂಭ್ರಮ. ಈ ವಿಶೇಷ ದಿನದಂದು ನಟ ಪೃಥ್ವಿರಾಜ್ ಸುಕುಮಾರನ್ ʻL2 ಎಂಪುರಾನ್‌ʼ (L2 Empuraan) ಹೊಸ ಪೋಸ್ಟರ್ ಹಂಚಿಕೊಂಡಿದ್ದಾರೆ. ಪೃಥ್ವಿರಾಜ್ ಅವರ ನಿರ್ದೇಶನದಲ್ಲಿ, ಮೋಹನ್‌ಲಾಲ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಈ ಚಿತ್ರ 2019ರ ಬ್ಲಾಕ್‌ಬಸ್ಟರ್ ಚಲನಚಿತ್ರ ʻಲೂಸಿಫರ್‌ʼನ ಮುಂದುವರಿದ ಭಾಗವಾಗಿದೆ.

ʻL2 ಎಂಪುರಾನ್‌ʼಗಾಗಿ ಮೋಹನ್‌ಲಾಲ್‌ನ ಜಾಕೆಟ್ ಮತ್ತು ಪ್ಯಾಂಟ್‌ ಧರಿಸಿದ್ದಾರೆ. ಭದ್ರತಾ ಸಿಬ್ಬಂದಿಗಳ ನಡುವೆ ಖಡಕ್‌ ಆಗಿ ನಡೆದುಕೊಂಡು ಹೋಗುತ್ತಿರುವ ಪೋಸ್ಟರ್‌ ಇದು. ಲೂಸಿಫರ್ ಪೃಥ್ವಿರಾಜ್ ಅವರ ನಿರ್ದೇಶನದ ಚೊಚ್ಚಲ ಚಿತ್ರವಾಗಿತ್ತು. ಅದಾದ ಬಳಿಕ ʻಬ್ರೋ ಡ್ಯಾಡಿʼ ಸಿನಿಮಾವನ್ನು ಒಟ್ಟಿಗೆ ಮಾಡಿದ್ದರು. ಮತ್ತೆ ಈ ಜೋಡಿ L2E-ಎಂಪುರಾನ್‌ ಮೂಲಕ ಒಂದಾಗಿದೆ.

ಈ ಚಿತ್ರವನ್ನು ಆಶೀರ್ವಾದ್ ಸಿನಿಮಾಸ್ ಮತ್ತು ಲೈಕಾ ಪ್ರೊಡಕ್ಷನ್ಸ್ ಜಂಟಿಯಾಗಿ ನಿರ್ಮಿಸಲಿವೆ. ಇದು ಮಲಯಾಳಂ, ತಮಿಳು, ತೆಲುಗು, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಲೂಸಿಫರ್ 2019ರಲ್ಲಿ ಬಿಡುಗಡೆಗೊಂಡು ಬ್ಲಾಕ್‌ಬಸ್ಟರ್‌ ಹಿಟ್‌ ಆಯಿತು. ಮಲಯಾಳಂ ಚಿತ್ರರಂಗದ ಇತಿಹಾಸದಲ್ಲಿ ಅತಿದೊಡ್ಡ ಗಳಿಕೆಗಳಲ್ಲಿ ಒಂದಾಯಿತು. ಮೋಹನ್‌ಲಾಲ್ ಅವರಲ್ಲದೆ, ಚಿತ್ರದಲ್ಲಿ ವಿವೇಕ್ ಒಬೆರಾಯ್, ಮಂಜು ವಾರಿಯರ್, ಟೊವಿನೋ ಥಾಮಸ್, ಪೃಥ್ವಿರಾಜ್ ಸುಕುಮಾರನ್, ಇಂದ್ರಜಿತ್ ಸುಕುಮಾರನ್, ಸಾನಿಯಾ ಐಯಪ್ಪನ್, ಸಾಯಿ ಕುಮಾರ್, ಜಾನ್ ವಿಜಯ್, ಸಚಿನ್ ಖೇಡೇಕರ್, ಬೈಜು ಸಂತೋಷ್, ಕಲಾಭವನ್ ಶಾಜೋನ್, ಫಾಜಿಲ್, ಸುರೇಶ್ ಚಂದ್ರ ಮೆನನ್ ಮತ್ತು ನೈಲಾ ಉಷಾ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: Actress Murder: ‘ಭಜರಂಗಿ’ ಸಿನಿಮಾ ನಟಿ ಗಂಡನಿಂದಲೇ ಭೀಕರ ಕೊಲೆ!

ಮೋಹನ್ ಲಾಲ್ ಕೊನೆಯದಾಗಿ ಕಾಣಿಸಿಕೊಂಡದ್ದು ಫ್ಯಾಂಟಸಿ ನಾಟಕ ಮಲೈಕೊಟ್ಟೈ ವಾಲಿಬನ್ (2024), ಇದನ್ನು ಲಿಜೋ ಜೋಸ್ ಪೆಲ್ಲಿಸ್ಸೆರಿ ನಿರ್ದೇಶಿಸಿದ್ದಾರೆ.

ಮೋಹನ್‌ಲಾಲ್‌ ಜತೆ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ

ನಂದಕಿಶೋರ್ ಅವರು ಮಲಯಾಳಂ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಮಾಲಿವುಡ್‌ ಸ್ಟಾರ್‌ ಮೋಹನ್ ಲಾಲ್ (Actor Mohan Lal) ಅವರಿಗೆ ನಂದಕಿಶೋರ್ ಸಿನಿಮಾ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೇ ಈ ಸಿನಿಮಾಗೆ ಏಕ್ತಾ ಕಪೂರ್‌ ಅವರ ಸಹ ನಿರ್ಮಾಣವಿದೆ. ಈ ಬಹುನಿರೀಕ್ಷಿತ ಚಿತ್ರದ ಶೂಟಿಂಗ್​ ಆರಂಭ ಆಗಿದೆ. ಈ ಚಿತ್ರದ ಪಾತ್ರವರ್ಗ ಗಮನ ಸೆಳೆಯುತ್ತಿದೆ. ಈಗ ರಾಗಿಣಿ ದ್ವಿವೇದಿ (Ragini Dwivedi) ಅವರು ನಟ ಮೋಹನ್​ಲಾಲ್​ ಜತೆ ನಟಿಸುತ್ತಿದ್ದಾರೆ. ಮೋಹನ್​ಲಾಲ್​ ಅಭಿನಯದ ‘ವೃಷಭ’ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ.

Continue Reading

ಮಾಲಿವುಡ್

Mohan Lal: ಅಣ್ಣಾವ್ರ ಹಾಡನ್ನು ಎಂಜಾಯ್‌ ಮಾಡಿದ ಮೋಹನ್ ಲಾಲ್; ವಿಡಿಯೊ ವೈರಲ್‌!

Mohan Lal: ಮೋಹನ್ ಲಾಲ್ ಕನ್ನಡದಲ್ಲಿ ಪುನೀತ್ ರಾಜ್‌ಕುಮಾರ್ ಜತೆ ‘ಮೈತ್ರಿ’ ಚಿತ್ರದಲ್ಲಿ ನಟಿಸಿದ್ದರು. ಆ ಚಿತ್ರಕ್ಕೆ ಒಳ್ಳೆ ರೆಸ್ಪಾನ್ಸ್ ಸಿಕ್ಕಿತ್ತು. ಗಿರಿರಾಜ್ ನಿರ್ದೇಶನದ ಈ ಸೋಶಿಯಲ್ ಡ್ರಾಮಾ ಚಿತ್ರದಲ್ಲಿ ಮಹಾದೇವ್ ಗೊಡ್ಕೆ ಎನ್ನುವ ವಿಜ್ಞಾನಿ ಪಾತ್ರದಲ್ಲಿ ನಟಿಸಿದ್ದರು. ಇದೀಗ ರಾಜ್‌ಕುಮಾರ್‌ ಅವರ ʻಎರಡೂ ಕನಸುʼ ಚಿತ್ರದ ʻಎಂದೆಂದೂ ನಿನ್ನನ್ನು ಮರೆತು” ಹಾಡನ್ನು ಪ್ಲೇ ಮಾಡಿ ಗುನುಗುತ್ತಿದ್ದರು ಮೋಹನ್ ಲಾಲ್.

VISTARANEWS.COM


on

Mohan Lal watching dr rajkumars super hit song
Koo

ಬೆಂಗಳೂರು: ಕನ್ನಡದ ಕುಲಪುತ್ರ ದಿವಂಗತ ಡಾ. ರಾಜ್ ಕುಮಾರ್ (Dr. Rajkumar) ಎಂದರೆ ಅದು ಕೇವಲ ವ್ಯಕ್ತಿಯಲ್ಲ. ಅವರು ಕನ್ನಡ (Kannada) ಕಲಾರಸಿಕರ ಹೃದಯ ಸಾಮ್ರಾಟ. ಕನ್ನಡಿಗರಿಗೆಲ್ಲರಿಗೂ ಅವರೊಂದು ಶಕ್ತಿ. ಅವರು ಕನ್ನಡ ಭಾಷೆಯ ಅಸ್ಮಿತೆ. 200ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಸಾರ್ವಭೌಮ ಬಣ್ಣ ಹಚ್ಚಿದ್ದರು. ರಾಜ್‌ಕುಮಾರ್‌ ಅವರನ್ನು ಇಷ್ಟ ಪಡದವರೇ ಇಲ್ಲ. ಇನ್ನು ಮಾಲಿವುಡ್ ನಟ ಮೋಹನ್ ಲಾಲ್‌ಗೂ (Mohan Lal) ರಾಜ್‌ ಅಂದರೆ ಪ್ರೀತಿ. ರಾಜ್‌ಕುಮಾರ್‌ ಅವರ ʻಎರಡೂ ಕನಸುʼ ಚಿತ್ರದ ʻಎಂದೆಂದೂ ನಿನ್ನನ್ನು ಮರೆತು” ಹಾಡನ್ನು ಪ್ಲೇ ಮಾಡಿ ಗುನುಗುತ್ತಿದ್ದರು ಮೋಹನ್ ಲಾಲ್. ಇದೀಗ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

ಮೋಹನ್ ಲಾಲ್ ಕನ್ನಡದಲ್ಲಿ ಪುನೀತ್ ರಾಜ್‌ಕುಮಾರ್ ಜತೆ ‘ಮೈತ್ರಿ’ ಚಿತ್ರದಲ್ಲಿ ನಟಿಸಿದ್ದರು. ಆ ಚಿತ್ರಕ್ಕೆ ಒಳ್ಳೆ ರೆಸ್ಪಾನ್ಸ್ ಸಿಕ್ಕಿತ್ತು. ಗಿರಿರಾಜ್ ನಿರ್ದೇಶನದ ಈ ಸೋಶಿಯಲ್ ಡ್ರಾಮಾ ಚಿತ್ರದಲ್ಲಿ ಮಹಾದೇವ್ ಗೊಡ್ಕೆ ಎನ್ನುವ ವಿಜ್ಞಾನಿ ಪಾತ್ರದಲ್ಲಿ ನಟಿಸಿದ್ದರು. 50 ವರ್ಷಗಳ ಹಿಂದೆ ತೆರೆಕಂಡಿದ್ದ ‘ಎರಡು ಕನಸು’ ಚಿತ್ರಕ್ಕೆ ದೊರೆ- ಭಗವಾನ್ ಆಕ್ಷನ್ ಕಟ್ ಹೇಳಿದ್ದರು. ವಾಣಿ ಅವರು ಬರೆದ ಕಾದಂಬರಿ ಆಧರಿಸಿ ಸಿನಿಮಾ ಮೂಡಿ ಬಂದಿತ್ತು.30 ವಾರಗಳ ಕಾಲ ಭರ್ಜರಿ ಪ್ರದರ್ಶನ ಕಂಡಿದ್ದ ‘ಎರಡು ಕನಸು’ ಸಿನಿಮಾ 1982ರಲ್ಲಿ ರೀ ರಿಲೀಸ್ ಆಗಿ ಶತದಿನೋತ್ಸವ ಆಚರಿಸಿತ್ತು. 2015ರಲ್ಲಿ ಮತ್ತೊಮ್ಮೆ ಪ್ರೇಕ್ಷಕರ ಮುಂದೆ ಬಂದು ಸಿನಿಮಾ ಗಮನ ಸೆಳೆದಿತ್ತು. ಇದೀಗ ಮೋಹನ್‌ಲಾಲ್‌ ತಮ್ಮ ಮೊಬೈಲ್ ನಲ್ಲಿ ರಾಜ್ ಕುಮಾರ್ ಹಾಡು ಕೇಳುತ್ತ ಅದೇ ರೀತಿ ಹಾಡಲು ಪ್ರಯತ್ನಿಸುತ್ತಿದ್ದಾರೆ.

ಇದನ್ನೂ ಓದಿ: Actor Mohanlal: 56ನೇ ಬಾರಿಗೆ ಮೋಹನ್ ಲಾಲ್ ಜತೆ ತೆರೆ ಹಂಚಿಕೊಳ್ಳುತ್ತಿದ್ದಾರೆ ಈ ಫೇಮಸ್‌ ನಟಿ!

ಮೋಹನ್‌ಲಾಲ್‌ ಜತೆ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ

ನಂದಕಿಶೋರ್ ಅವರು ಮಲಯಾಳಂ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಮಾಲಿವುಡ್‌ ಸ್ಟಾರ್‌ ಮೋಹನ್ ಲಾಲ್ (Actor Mohan Lal) ಅವರಿಗೆ ನಂದಕಿಶೋರ್ ಸಿನಿಮಾ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೇ ಈ ಸಿನಿಮಾಗೆ ಏಕ್ತಾ ಕಪೂರ್‌ ಅವರ ಸಹ ನಿರ್ಮಾಣವಿದೆ. ಈ ಬಹುನಿರೀಕ್ಷಿತ ಚಿತ್ರದ ಶೂಟಿಂಗ್​ ಆರಂಭ ಆಗಿದೆ. ಈ ಚಿತ್ರದ ಪಾತ್ರವರ್ಗ ಗಮನ ಸೆಳೆಯುತ್ತಿದೆ. ಈಗ ರಾಗಿಣಿ ದ್ವಿವೇದಿ (Ragini Dwivedi) ಅವರು ನಟ ಮೋಹನ್​ಲಾಲ್​ ಜತೆ ನಟಿಸುತ್ತಿದ್ದಾರೆ. ಮೋಹನ್​ಲಾಲ್​ ಅಭಿನಯದ ‘ವೃಷಭ’ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ.

Continue Reading

ಮಾಲಿವುಡ್

Turbo Trailer Out: ಮಮ್ಮುಟ್ಟಿ ನಟನೆಯ ‘ಟರ್ಬೋ’ ಟ್ರೈಲರ್‌ ಔಟ್‌: ರಾಜ್‌ ಬಿ ಶೆಟ್ಟಿ ಖದರ್‌ಗೆ ಫ್ಯಾನ್ಸ್‌ ಫಿದಾ!

Turbo Trailer Out: ಭೀಷ್ಮ ಪರ್ವಂ (2022) ನಂತರ ಮಲಯಾಳಂ ಸೂಪರ್‌ಸ್ಟಾರ್ ಮಮ್ಮುಟ್ಟಿ ಅವರ ಮೊದಲ ಪೂರ್ಣ ಪ್ರಮಾಣದ ಮಾಸ್ ಎಂಟರ್‌ಟೈನರ್ ಸಿನಿಮಾ ಇದು. ಇಲ್ಲಿ ರಾಜ್‌ .ಬಿ ಶೆಟ್ಟಿ ಅವರದ್ದು ಸಣ್ಣ ಪಾತ್ರ ಏನಲ್ಲ. ಮಮ್ಮುಟಿಗೆ ಪೈಪೋಟಿ ಕೊಡುವಂತಿದೆ. ಟ್ರೈಲರ್ ನೋಡಿ ಕನ್ನಡ ಸಿನಿರಸಿಕರು ಮೆಚ್ಚಿಕೊಂಡಿದ್ದಾರೆ. ಮೇ 23ರಂದು ಸಿನಿಮಾ ಥಿಯೇಟರ್​ನಲ್ಲಿ ರಿಲೀಸ್ ಆಗುತ್ತಿದೆ.

VISTARANEWS.COM


on

Turbo Trailer Out mammoottys raj b shetty looks menacing
Koo

ಬೆಂಗಳೂರು: ಮಮ್ಮುಟ್ಟಿ (Mammootty) ಅವರು ಈ ಹಿಂದೆ ಘೋಷಿಸಿದ ಮೂರು ಸಿನಿಮಾಗಳ ಬಿಡುಗಡೆಗಳಲ್ಲಿ ʻಟರ್ಬೋʼ (Turbo Trailer Out) ಕೂಡ ಒಂದು. ರಾಜ್ ಬಿ ಶೆಟ್ಟಿ (Raj B Shetty) ಮತ್ತು ತೆಲುಗು ನಟ ಸುನೀಲ್ ಕೂಡ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಈ ಚಿತ್ರದ ಟ್ರೈಲರ್‌ ರಿಲೀಸ್ ಆಗಿದ್ದು ಗಮನ ಸೆಳೆದಿದೆ. ರಾಜ್ ಅವರು ಪವರ್​ಫುಲ್ ವ್ಯಕ್ತಿಯಾಗಿ ಕಾಣಿಸಿಕೊಂಡಿದ್ದಾರೆ. ಇಲ್ಲಿ ರಾಜ್‌ ಬಿ ಶೆಟ್ಟಿ ಅವರದ್ದು ಸಣ್ಣ ಪಾತ್ರ ಏನಲ್ಲ. ಮಮ್ಮುಟಿಗೆ ಪೈಪೋಟಿ ಕೊಡುವಂತಿದೆ. ಟ್ರೈಲರ್ ನೋಡಿ ಕನ್ನಡ ಸಿನಿರಸಿಕರು ಮೆಚ್ಚಿಕೊಂಡಿದ್ದಾರೆ. ಮೇ 23ರಂದು ಸಿನಿಮಾ ಥಿಯೇಟರ್​ನಲ್ಲಿ ರಿಲೀಸ್ ಆಗುತ್ತಿದೆ.

ಭೀಷ್ಮ ಪರ್ವಂ (2022) ನಂತರ ಮಲಯಾಳಂ ಸೂಪರ್‌ಸ್ಟಾರ್ ಮಮ್ಮುಟ್ಟಿ ಅವರ ಮೊದಲ ಪೂರ್ಣ ಪ್ರಮಾಣದ ಮಾಸ್ ಎಂಟರ್‌ಟೈನರ್ ಸಿನಿಮಾ ಇದು. 133 ಸೆಕೆಂಡ್​ಗಳ ಟ್ರೈಲರ್‌ನಲ್ಲಿ ಆರಂಭದಲ್ಲಿ ಜೋಸ್​ನ​ (ಮಮ್ಮುಟಿ) ಪರಿಚಯ ಮಾಡಿಕೊಡುವ ಪ್ರಯತ್ನ ನಡೆದಿದೆ. ಟ್ರೈಲರ್‌ನಲ್ಲಿ ಭರ್ಜರಿ ಆ್ಯಕ್ಷನ್ ತೋರಿಸಲಾಗಿದೆ. ಇದರ ಜತೆಗೆ ಕಾಮಿಡಿ ಕೂಡ ಇದೆ. ಟ್ರೈಲರ್‌ನಲ್ಲಿ ರಾಜ್ ಬಿ ಶೆಟ್ಟಿ ಅವರು ಕೂಡ ಕಾಣಿಸುತ್ತಾರೆ. ರಾಜ್​ ಬಿ ಶೆಟ್ಟಿ ಎಂಟ್ರಿ ಸಖತ್ ಆಗಿದೆ. ರಾಜ್‌ ಬಿ ಶೆಟ್ಟಿ ಮಲಯಾಳಂನಲ್ಲೂ ಅವರೇ ಡಬ್ ಮಾಡಿದ್ದಾರೆ.

ಇದನ್ನೂ ಓದಿ: Palanku Movie: 17 ವರ್ಷ ಪೂರೈಸಿದ ಮಮ್ಮುಟ್ಟಿ ಅಭಿನಯದ ʻಪಲುಂಕುʼ ಸಿನಿಮಾ, ಇದರ ಕತೆ ಹೃದಯಸ್ಪರ್ಶಿ

ಟರ್ಬೊ’ ಸಿನಿಮಾ ನಿರ್ದೇಶಕ ವೈಶಾಖ್ ಜತೆ ಇದು ಮೂರನೇ ಬಾರಿ ಮಮ್ಮುಟ್ಟಿ ಜತೆ ಕೈ ಜೋಡಿಸುತ್ತಿದ್ದಾರೆ. ಪೊಕ್ಕಿರಿ ರಾಜ ಮತ್ತು ಮಧುರ ರಾಜ ಸಿನಿಮಾಗಳ ಬಳಿಕ ಮಮ್ಮುಟ್ಟಿಯವರ ಮೂರನೇ ಚಿತ್ರವಾಗಿದೆ. ಚಲನಚಿತ್ರ ನಿರ್ಮಾಪಕ ಮಿಧುನ್ ಮ್ಯಾನುಯೆಲ್ ಥಾಮಸ್ ಬರೆದ ಚಿತ್ರಕಥೆಯನ್ನು ಈ ಸಿನಿಮಾ ಆಧರಿಸಿದೆ. ಇದು ಆ್ಯಕ್ಷನ್ ಕಾಮಿಡಿ ಎಂದು ಹೇಳಲಾಗುತ್ತದೆ. ಸಿನಿಮಾದಲ್ಲಿ ಮಮ್ಮುಟ್ಟಿಗೆ ನಾಯಕಿಯಾಗಿ ನಟಿ ಜ್ಯೋತಿಕಾ ಕಾಣಿಸಿಕೊಂಡಿದ್ದು, ಒಂದು ದಶಕದ ಬಳಿಕ ಮಲಯಾಳಂ ಚಿತ್ರರಂಗಕ್ಕೆ ಹಿಂತಿರುಗಿದ್ದಾರೆ.

‘ಒಂದು ಮೊಟ್ಟೆಯ ಕಥೆ’ ಸಿನಿಮಾ ಮೂಲಕ ಕನ್ನಡ ಸಿನಿರಸಿಕರ ಮುಂದೆ ರಾಜ್. ಶೆಟ್ಟಿ ಬಂದಿದ್ದರು. ಬಳಿಕ ಒಂದಷ್ಟು ಸಿನಿಮಾಗಳಲ್ಲಿ ನಟಿಸಿದ್ದರು. ಆದರೆ ‘ಗರುಡಗಮನ ವೃಷಭವಾಹನ’ ಸಿನಿಮಾ ದೊಡ್ಡ ಬ್ರೇಕ್ ಕೊಟ್ಟಿತ್ತು. ತಾವೇ ನಿರ್ದೇಶಿಸಿ ನಟಿಸಿದ್ದ ಚಿತ್ರದಲ್ಲಿ ಶಿವ ಆಗಿ ಅಬ್ಬರಿಸಿದ್ದರು. ಸದ್ಯ ‘ಟರ್ಬೋ’ ಚಿತ್ರದಲ್ಲೂ ವೆಟ್ರಿವೇಲ್ ಷಣ್ಮುಗಂ ಎನ್ನುವ ಖಡಕ್ ಪಾತ್ರದಲ್ಲಿ ದರ್ಬಾರ್ ನಡೆಸಿದ್ದಾರೆ.

ಇದೊಂದು ಆಕ್ಷನ್ ಕಾಮಿಡಿ ಎಂಟರ್‌ಟೈನರ್ ಆಗಿದ್ದು ಮೇ 23ಕ್ಕೆ ತೆರೆಗೆ ಬರಲಿದೆ. ಆಟೋ ಬಿಲ್ಲ ಆಗಿ ತೆಲುಗು ನಟ ಸುನೀಲ್ ಕೂಡ ಕಾಣಿಸಿಕೊಂಡಿದ್ದಾರೆ. ಅಂಜನಾ ಜಯಪ್ರಕಾಶ್, ಕಬೀರ್ ದುಹಾನ್ ಸಿಂಗ್, ಸಿದ್ದಿಕಿ ಸೇರಿದಂತೆ ದೊಡ್ಡ ತಾರಾಗಣ ‘ಟರ್ಬೋ’ ಚಿತ್ರದಲ್ಲಿದೆ. ವಿಷ್ಣು ಶರ್ಮಾ ಛಾಯಾಗ್ರಹಣ, ಕ್ರಿಸ್ಟೋ ಕ್ಸೇವಿಯರ್ ಸಂಗೀತ ಚಿತ್ರಕ್ಕಿದೆ.

Continue Reading
Advertisement
Shah Rukh Khan shooting for King in Spain
ಬಾಲಿವುಡ್4 mins ago

Shah Rukh Khan: ಮಗಳ ಜತೆ ಶಾರುಖ್ ಅಭಿನಯಿಸಲಿರುವ ಸಿನಿಮಾ ದೃಶ್ಯ ಲೀಕ್‌!

Liquor ban
ಬೆಂಗಳೂರು13 mins ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

IPL 2025 Mega Auction
ಕ್ರೀಡೆ15 mins ago

IPL 2025 Mega Auction: ಕೇವಲ ಇಷ್ಟು ಆಟಗಾರರ ರಿಟೇನ್​ಗೆ ಮಾತ್ರ ಅವಕಾಶ!

Rohit Sharma
ಪ್ರಮುಖ ಸುದ್ದಿ20 mins ago

Rohit Sharma : ಹಿರಿಯರಿರುವ ತಂಡಕ್ಕಿಂತ ಕಿರಿಯರ ತಂಡವೇ ಬೆಸ್ಟ್​ ಎಂದ ರೋಹಿತ್ ಶರ್ಮಾ; ಯಾಕೆ ಗೊತ್ತಾ?

Exit Poll 2024
ದೇಶ31 mins ago

Exit Poll 2024: ಸಟ್ಟಾ ಬಜಾರ್‌, ರಾಜಕೀಯ ಪರಿಣತರ ಪ್ರಕಾರ ಈ ಬಾರಿಯೂ ಮೋದಿ; ನಿಮ್ಮ ಪ್ರಕಾರ ಯಾರಿಗೆ ಅಧಿಕಾರ? ತಿಳಿಸಿ

POK
ವಿದೇಶ31 mins ago

POK: ಪಿಒಕೆ ತನ್ನ ಭಾಗವಲ್ಲ ಎಂದು ಅಧಿಕೃತವಾಗಿಯೇ ಒಪ್ಪಿಕೊಂಡ ಪಾಕಿಸ್ತಾನ!

Kichcha Sudeep joined hands with Sandesh
ಸ್ಯಾಂಡಲ್ ವುಡ್40 mins ago

Kiccha Sudeep: ಸಂದೇಶ್‌ ಪ್ರೊಡಕ್ಷನ್ಸ್‌ ಜತೆ ಕೈ ಜೋಡಿಸಿದ ಕಿಚ್ಚ ಸುದೀಪ್

Prajwal Revanna Case
ಕರ್ನಾಟಕ55 mins ago

Prajwal Revanna Case: ವಿಚಾರಣೆಯಲ್ಲಿ ಬಾಯಿಬಿಡದ ಪ್ರಜ್ವಲ್‌; ಸ್ಥಳ ಮಹಜರಿಗಾಗಿ ಹೊಳೆನರಸೀಪುರಕ್ಕೆ ಕರೆದೊಯ್ಯಲು ಸಿದ್ಧತೆ

Cow Smuggling
ಕ್ರೈಂ1 hour ago

Cow Smuggling : ಕಂಟೇನರ್‌, ಮಿಲ್ಕ್‌ ವ್ಯಾನ್‌ನಲ್ಲಿತ್ತು 70ಕ್ಕೂ ಹೆಚ್ಚು ಜಾನುವಾರು; ಹಿಂಸೆ ಕೊಟ್ಟವರು ಅರೆಸ್ಟ್‌

Gautam Gambhir
ಕ್ರೀಡೆ2 hours ago

Gautam Gambhir: ಗೌತಮ್​ ಗಂಭೀರ್​ ಭಾರತದ ಮುಂದಿನ ಕೋಚ್​; ಅಧಿಕೃತ ಘೋಷಣೆಯೊಂದೇ ಬಾಕಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Liquor ban
ಬೆಂಗಳೂರು13 mins ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

ಟ್ರೆಂಡಿಂಗ್‌