Site icon Vistara News

Rishab Shetty: ಭೂಮಿ ಮೇಲಿನ ಅದೃಷ್ಟಶಾಲಿ ವ್ಯಕ್ತಿ ನಾನು; ಚಿಯಾನ್ ವಿಕ್ರಮ್ ಭೇಟಿ ಬಳಿಕ ರಿಷಬ್ ಶೆಟ್ಟಿ ರಿಯಾಕ್ಷನ್‌!

Rishab Shetty meets Chiyaan Vikram after 24 years

ಬೆಂಗಳೂರು: ಕನ್ನಡ ನಟ ರಿಷಬ್ ಶೆಟ್ಟಿ (Rishab Shetty) ಅವರು ಆಗಸ್ಟ್ 6ರಂದು ಬೆಂಗಳೂರಿನಲ್ಲಿ ತಮಿಳು ನಟ ಚಿಯಾನ್ ವಿಕ್ರಮ್ ಅವರನ್ನು ಭೇಟಿಯಾದರು. ಕೆಲವು ಕ್ಯಾಂಡಿಡ್ ಚಿತ್ರಗಳನ್ನು ಹಂಚಿಕೊಂಡ ರಿಷಬ್, ನಟನಾಗಿ ತನ್ನ ಪ್ರಯಾಣದಲ್ಲಿ ತನಗೆ ಸ್ಫೂರ್ತಿ ನೀಡಿದ ವಿಕ್ರಮ್ ಅವರನ್ನು ಭೇಟಿಯಾಗಲು 24 ವರ್ಷಗಳೇ ಬೇಕಾಯ್ತು ಎಂದು ಬರೆದುಕೊಂಡಿದ್ದಾರೆ. ಚಿಯಾನ್ ವಿಕ್ರಮ್ ಅವರು ಪಾ ರಂಜಿತ್ ನಿರ್ದೇಶನದ ತಮ್ಮ ಮುಂಬರುವ ಚಿತ್ರ ‘ತಂಗಾಲನ್’ ಸಿನಿಮಾ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದಿದ್ದರು. ಆಗ ರಿಷಬ್‌ ಅವರನ್ನು ನಟ ಭೇಟಿಯಾಗಿದ್ದಾರೆ.

ಆಗಸ್ಟ್ 6 ರಿಷಬ್ ಶೆಟ್ಟಿ ಜೀವನದಲ್ಲಿ ಮರೆಯಲಾಗದ ದಿನವಾಗಿದೆ. ಎಕ್ಸ್ ಪೇಜ್‌ನಲ್ಲಿ ಫೋಟೋಗಳನ್ನು ಹಂಚಿಕೊಂಡಿರುವ ರಿಷಬ್, “ನಟನಾಗುವಾಗ ನನ್ನ ಪ್ರಯಾಣದಲ್ಲಿ, ವಿಕ್ರಮ್ ಸರ್ ಯಾವಾಗಲೂ ನನಗೆ ಸ್ಫೂರ್ತಿಯಾಗಿದ್ದರು. 24 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಇಂದು ವಿಕ್ರಮ್‌ ಅವರನ್ನು ಭೇಟಿಯಾದೆ. ಹೀಗಾಗಿ ಭೂಮಿಯ ಮೇಲಿನ ಅದೃಷ್ಟಶಾಲಿ ವ್ಯಕ್ತಿ ಎಂದು ಭಾವಿಸುತ್ತೇನೆ. ನನ್ನಂತಹ ನಟರನ್ನು ಪ್ರೇರೇಪಿಸಿದ್ದಕ್ಕಾಗಿ ಧನ್ಯವಾದಗಳು, ತಂಗಲಾನ್‌ ಸಿನಿಮಾಗೆ ಶುಭ ಹಾರೈಸುತ್ತೇನೆʼʼಎಂದು ಬರೆದುಕೊಂಡಿದ್ದಾರೆ.

‘ತಂಗಾಲನ್’ ಬಿಡುಗಡೆಗೆ ಮುನ್ನ, ಚಿತ್ರದ ಪ್ರಚಾರಕ್ಕಾಗಿ ಚಿತ್ರತಂಡ ಬೆಂಗಳೂರಿಗೆ ಬಂದಿತ್ತು. ಈ ಹಿಂದೆ, ತಯಾರಕರು ಹೈದರಾಬಾದ್ ಮತ್ತು ಚೆನ್ನೈನಲ್ಲಿ ಕಾರ್ಯಕ್ರಮಗಳನ್ನು ನಡೆಸಿದ್ದರು. ಬೆಂಗಳೂರು ಈವೆಂಟ್ ಆಗಸ್ಟ್ 6 ರಂದು ನಡೆದಿದ್ದು, ತಂಡ ಈಗ ಮುಂಬೈ ಮತ್ತು ಕೊಚ್ಚಿಗೆ ತೆರಳಲಿದೆ.

ರಿಷಬ್ ಶೆಟ್ಟಿ ಪ್ರಸ್ತುತ ‘ಕಾಂತಾರ’ ಪ್ರೀಕ್ವೆಲ್‌ನ ಚಿತ್ರೀಕರಣದಲ್ಲಿದ್ದಾರೆ, ಇದು ಡಿಸೆಂಬರ್ 2024 ರಲ್ಲಿ ಬಿಡುಗಡೆಯಾಗಲಿದೆ. ಚಿಯಾನ್ ವಿಕ್ರಮ್ ‘ತಂಗಲಾನ್’ ಬಿಡುಗಡೆಗೆ ಸಜ್ಜಾಗುತ್ತಿದ್ದಾರೆ. ಆಗಸ್ಟ್ 15 ರಂದು ಬಹು ಭಾಷೆಗಳಲ್ಲಿ ಥಿಯೇಟರ್‌ಗಳಲ್ಲಿ ಬರಲಿದೆ.

ಇದನ್ನೂ ಓದಿ: Martin Trailer: ಪ್ಯಾನ್‌ ವರ್ಲ್ಸ್‌ ಮಾರ್ಟಿನ್‌ ಸಿನಿಮಾ ಟ್ರೈಲರ್‌ ಔಟ್;‌ ಪಾಕ್‌ನಲ್ಲಿ ಧ್ರುವ ಸರ್ಜಾ ಆ್ಯಕ್ಷನ್‌ಗೆ ಫ್ಯಾನ್ಸ್‌ ಫಿದಾ!

ಚಿತ್ರದಲ್ಲಿ ಹಾಲಿವುಡ್ ನಟ ಡೇನಿಯಲ್ ಕ್ಯಾಲ್ಟಗಿರೋನ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.ಕೋಲಾರದ ಚಿನ್ನದ ಗಣಿ ಕಾರ್ಮಿಕರ ಜೀವನದ ಸುತ್ತ ಸುತ್ತುವ ನೈಜ ಘಟನೆಗಳಿಂದ ಪ್ರೇರಿತವಾದ ʻʻತಂಗಲಾನ್‌ʼʼನಲ್ಲಿ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ ಚಿಯಾನ್‌ ವಿಕ್ರಮ್‌. ಪಾ ರಂಜಿತ್ ನಿರ್ದೇಶನದ ಚಿತ್ರದಲ್ಲಿ ವಿಕ್ರಮ್‌ ಬುಡಕಟ್ಟಿನ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ತಂಗಲಾನ್‌ನಲ್ಲಿನ ಈ ಪಾತ್ರಕ್ಕಾಗಿಯೇ ವಿಕ್ರಮ್ ತೂಕವನ್ನು ಕಡಿಮೆ ಮಾಡಿಕೊಂಡಿದ್ದರು. ಬ್ರಿಟಿಷರು ಹಾಗೂ ಬುಡಕಟ್ಟು ಸಮಾಜದ ನಡುವೆ ನಡೆಯುವ ಸಂಘರ್ಷವನ್ನು ʻತಂಗಲಾನ್‌ʼʼ ಹೇಳುತ್ತಿದೆ ಎನ್ನಲಾಗುತ್ತಿದೆ. ಈ ಚಿತ್ರದಲ್ಲಿ ನಟ ಚಿಯಾನ್ ವಿಕ್ರಮ್ ಜತೆ ಪಾರ್ವತಿ ಮೆನನ್‌, ಮಾಳವಿಕಾ ಮೋಹನ್‌ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಕೆಜಿಎಫ್‌ ಚಿತ್ರದಲ್ಲಿ ನಿರ್ದೇಶಕ ಪ್ರಶಾಂತ್‌ ನೀಲ್‌ ಕಾಲ್ಪನಿಕ ಕಥೆಯನ್ನು ಕಟ್ಟಿಕೊಟ್ಟರೆ, ಕೆಜಿಎಫ್‌ನ ನಿಜವಾದ ಕಥೆಯನ್ನು ನಿರ್ದೇಶಕ ಪಾ. ರಂಜಿತ್‌ ಹೇಳಲು ಹೊರಟ್ಟಿದ್ದಾರೆ ಎಂದು ಈ ಮುಂಚೆ ಸುದ್ದಿಯಾಗಿತ್ತು. ಇದೀಗ ಈ ಚಿತ್ರದ ಮೂಲಕ ಹೊಸ ಕಥೆಯನ್ನು ಹೇಳಲು ಹೊರಟ್ಟಿದ್ದಾರೆ ರಂಜಿತ್‌.

ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಚಿತ್ರ ಬಿಡುಗಡೆಯಾಗುತ್ತಿದೆ. ಸ್ಟುಡಿಯೋ ಗ್ರೀನ್ ಮತ್ತು ನೀಲಂ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ‘ತಂಗಲಾನ್’ ಸಿನಿಮಾ ಸಿದ್ಧವಾಗಿದೆ. ಈ ಚಿತ್ರದಲ್ಲಿ ಪಾರ್ವತಿ ತಿರುವೋತ್ತು, ಮಾಳವಿಕಾ ಮೋಹನನ್, ಪಶುಪತಿ, ಡೇನಿಯಲ್ ಕಾಲ್ಟಗಿರೋನ್ ಮತ್ತು ಇನ್ನೂ ಅನೇಕರು ಇದ್ದಾರೆ. ಜಿವಿ ಪ್ರಕಾಶ್ ಕುಮಾರ್ ಚಿತ್ರಕ್ಕೆ ಸಂಗೀತವನ್ನು ರಚಿಸಿದ್ದಾರೆ.

Exit mobile version