Site icon Vistara News

Actor Sharwanand: ಖ್ಯಾತ ಟಾಲಿವುಡ್‌ ನಟ ಪ್ರಯಾಣಿಸುತ್ತಿದ್ದ ಕಾರು ಅಪಘಾತ, ಮದುವೆ ಮುಂದೂಡಿಕೆಯಾಗುತ್ತಾ?

Actor Sharwanand injured

ಹೈದರಾಬಾದ್‌: ಟಾಲಿವುಡ್ ನಟ ಶರ್ವಾನಂದ್ (Actor Sharwanand) ಅಪಘಾತಕ್ಕೀಡಾಗಿರುವುದು ವರದಿಯಾಗಿದೆ. ಮೇ 27ರ ರಾತ್ರಿ ಹೈದರಾಬಾದ್‌ನಲ್ಲಿ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಇತ್ತೀಚೆಗೆ ರಕ್ಷಿತಾ ರೆಡ್ಡಿ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಜೂನ್ 2ರಂದು ಶರ್ವಾನಂದ್ ಮದುವೆ ನಿಶ್ಚಯವಾಗಿತ್ತು. ಹೈದರಾಬಾದ್‌ನ ಫಿಲ್ಮ್ ನಗರ್‌ ಜಂಕ್ಷನ್ ಬಳಿ ಶರ್ವಾನಂದ್ ಅವರ ರೇಂಜ್ ರೋವರ್ ಕಾರು ಪಲ್ಟಿಯಾಗಿದೆ. ಅಪಘಾತ ಸ್ಥಳದಿಂದ ಶರ್ವಾನಂದ್ ಅವರ ಕಾರನ್ನು ಕುಟುಂಬ ಸದಸ್ಯರು ತೆಗೆದುಕೊಂಡು ಹೋಗಿದ್ದಾರೆ.

ಶರ್ವಾನಂದ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ. ನಟನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ. ಈ ವರ್ಷದ ಆರಂಭದಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ರಕ್ಷಿತಾ ರೆಡ್ಡಿ ಜತೆ ಶರ್ವಾನಂದ್ ನಿಶ್ಚಿತಾರ್ಥ ನೆರವೇರಿತ್ತು. ರಾಜಸ್ಥಾನದ ಜೈಪುರದಲ್ಲಿರುವ ಲೀಲಾ ಪ್ಯಾಲೇಸ್‌ನಲ್ಲಿ ಜೂನ್ 2 ಮತ್ತು 3ರಂದು ಇಬ್ಬರ ಡೆಸ್ಟಿನೇಷನ್‌ ವೆಡ್ಡಿಂಗ್ ಪ್ಲ್ಯಾನ್ ನಡಿಯುತ್ತಿದೆ ಎನ್ನಲಾಗಿತ್ತು. ಇದೀಗ ಕಾರು ಅಪಘಾತದ ಸುದ್ದಿ ಕೇಳಿ ಅವರ ಅಭಿಮಾನಿಗಳಲ್ಲಿ ಆತಂಕ ಮೂಡಿದೆ. ಕಾರು ಸುರಕ್ಷತೆ ಇದ್ದಿದ್ದರಿಂದ ಹೆಚ್ಚಿನ ಅನಾಹುತ ಸಂಭವಿಸಿಲ್ಲ ಎನ್ನಲಾಗಿದೆ.

ಜನವರಿಯಲ್ಲಿ ಜೋಡಿ ನಿಶ್ಚಿತಾರ್ಥ ಮಾಡಿಕೊಂಡಿತ್ತು. ಇತ್ತೀಚೆಗೆ ಜೋಡಿಯ ಮದುವೆ ಮುರಿದು ಬಿದ್ದಿದೆ ಎಂಬ ಸುದ್ದಿ ವೈರಲ್‌ ಆಗಿತ್ತು. ವರದಿಯ ಪ್ರಕಾರ, ರಕ್ಷಿತಾ ಟೆಕ್ಕಿಯಾಗಿದ್ದು,. ತಂದೆ ಮಧುಸೂಧನ್ ರೆಡ್ಡಿ ಆಂಧ್ರಪ್ರದೇಶ ಹೈಕೋರ್ಟ್‌ನಲ್ಲಿ ವಕೀಲರಾಗಿದ್ದಾರೆ.

ಇದನ್ನೂ ಓದಿ: Actor Sharwanand: ನಿಶ್ಚಿತಾರ್ಥ ಮುರಿದುಬಿದ್ದ ಸುದ್ದಿ ಬೆನ್ನಲ್ಲೇ ಮದುವೆಗೆ ಸಜ್ಜಾದ ನಟ ಶರ್ವಾನಂದ್!

ಶರ್ವಾನಂದ್ ಮದುವೆಗೆ ರಾಮ್ ಚರಣ್ ಮತ್ತು ಉಪಾಸನಾ ಹಾಜರಾಗುವ ಸಾಧ್ಯತೆಯಿದೆ. ಚಿರಂಜೀವಿ ಕೂಡ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಿದ್ಧಾರ್ಥ್ ಮತ್ತು ಅದಿತಿ ರಾವ್ ಹೈದರಿ ನಿಶ್ಚಿತಾರ್ಥದಲ್ಲಿ ಭಾಗವಹಿಸಿದ್ದರಿಂದ, ಅವರು ಮದುವೆಗೆ ಅತಿಥಿಗಳಾಗಿ ಬರುವ ಸಾಧ್ಯತೆಯಿದೆ.

ಶರ್ವಾನಂದ್ ತಮ್ಮ 35ನೇ ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಶ್ರೀರಾಮ್ ಆದಿತ್ಯ ನಿರ್ದೇಶನ ಮಾಡುತ್ತಿರುವ ಶೂಟಿಂಗ್‌ನಲ್ಲಿ ನಿರತರಾಗಿದ್ದಾರೆ. ಈಗ ತಾನೇ 40 ದಿನಗಳ ಕಾಲ ಲಂಡನ್‌ನಲ್ಲಿ ಶೂಟಿಂಗ್ ಮುಗಿಸಿ ಭಾರತಕ್ಕೆ ಮರಳಿದ್ದಾರೆ. ಮದುವೆಗೂ ಮುನ್ನವೇ ಈ ಸಿನಿಮಾವನ್ನು ಮುಗಿಸಲು ನಿರ್ಧರಿಸಿದ್ದಾರೆ. ಈ ಸಿನಿಮಾ ಈ ವರ್ಷದ ಕೊನೆಯಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ.

Exit mobile version