Kalki 2898 AD: ಅಮಿತಾಭ್‌, ಪ್ರಭಾಸ್‌ಗೆ ಲೀಗಲ್ ನೋಟಿಸ್ ಕಳುಹಿಸಿದ ಕಾಂಗ್ರೆಸ್ ಮಾಜಿ ನಾಯಕ! - Vistara News

ಟಾಲಿವುಡ್

Kalki 2898 AD: ಅಮಿತಾಭ್‌, ಪ್ರಭಾಸ್‌ಗೆ ಲೀಗಲ್ ನೋಟಿಸ್ ಕಳುಹಿಸಿದ ಕಾಂಗ್ರೆಸ್ ಮಾಜಿ ನಾಯಕ!

Kalki 2898 AD: ಚಿತ್ರದಲ್ಲಿ ದೇವರನ್ನು ತಪ್ಪಾಗಿ ಚಿತ್ರಿಸಲಾಗಿದೆ ಮತ್ತು ಹಿಂದೂ ಪುರಾಣಗಳಿಗಿಂತ ವಿಭಿನ್ನವಾಗಿ ಚಿತ್ರಿಸಲಾಗಿದೆ ಎಂದು ಆರೋಪಿಸಿದ್ದಾರೆ. ‘ಕಲ್ಕಿ 2898 ಎಡಿ’ ಚಿತ್ರ ತೆಲುಗು, ತಮಿಳು, ಮಲಯಾಳಂ, ಕನ್ನಡ, ಹಿಂದಿ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ರಿಲೀಸ್ ಆಗಿದೆ. ವೈಜಯಂತಿ ಮೂವಿಸ್ ಮೂಲಕ ಅಶ್ವಿನಿ ದತ್ ಸಿನಿಮಾ ನಿರ್ಮಾಣ ಮಾಡಿದ್ದಾರೆ.

VISTARANEWS.COM


on

Kalki 2898 AD makers served legal notice Kalki Dham Peethadheeshwar Acharya Pramod Krishnam
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಾಜಿ ಕಾಂಗ್ರೆಸ್ ನಾಯಕ ಮತ್ತು ಕಲ್ಕಿಧಾಮ ಪೀಠಾಧೀಶ್ವರ ಆಚಾರ್ಯ ಪ್ರಮೋದ್ ಕೃಷ್ಣಂ ಅವರು ಹಿಂದೂ ಧಾರ್ಮಿಕ (Kalki 2898 AD) ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಬ್ಲಾಕ್ ಬಸ್ಟರ್ ಚಿತ್ರ ಕಲ್ಕಿ 2898 ಚಿತ್ರದ ನಿರ್ಮಾಪಕರು ಮತ್ತು ನಟರಿಗೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ಚಿತ್ರದಲ್ಲಿ ದೇವರನ್ನು ತಪ್ಪಾಗಿ ಚಿತ್ರಿಸಲಾಗಿದೆ ಮತ್ತು ಹಿಂದೂ ಪುರಾಣಗಳಿಗಿಂತ ವಿಭಿನ್ನವಾಗಿ ಚಿತ್ರಿಸಲಾಗಿದೆ ಎಂದು ಆರೋಪಿಸಿದ್ದಾರೆ.

ʻʻ”ನಿಮ್ಮ ಚಲನಚಿತ್ರವು ಭಗವಾನ್ ಕಲ್ಕಿಯ ಪರಿಕಲ್ಪನೆಯನ್ನು ಬದಲಾಯಿಸಿರುವಂತೆ ಇದೆ, ಹಿಂದೂ ಪುರಾಣ ಗ್ರಂಥಗಳಲ್ಲಿ ಬರೆದ ಮತ್ತು ವಿವರಿಸಿದ ಕಾರಣಗಳಿಗಾಗಿ, ಭಗವಾನ್ ಕಲ್ಕಿಯ ಕಥೆಯ ಚಿತ್ರಣ ಮತ್ತು ಚಿತ್ರಣವು ಸಂಪೂರ್ಣವಾಗಿ ತಪ್ಪಾಗಿದೆ. ಹಾಗಾಗಿ ಈ ಪವಿತ್ರ ಗ್ರಂಥಗಳಿಗೆ ಅಗೌರವವಾಗಿದೆ. ಕಲ್ಕಿಯ ಕಥೆಯನ್ನು ಸಂಪೂರ್ಣವಾಗಿ ತಪ್ಪಾಗಿ ನಿರೂಪಿಸಲಾಗಿದೆ. ಇದು ಪವಿತ್ರ ಗ್ರಂಥಗಳಿಗೆ ಅಪಮಾನ ಮಾಡಿದಂತಾಗುತ್ತದೆ.” ಎಂದು ನೋಟಿಸ್ ನೀಡಿದ್ದಾರೆ.

ಆಚಾರ್ಯ ಪ್ರಮೋದ್ ಕೃಷ್ಣಂ ಈ ಬಗ್ಗೆ ಮಾತನಾಡಿ “ಕಲ್ಕಿ ಅವತಾರವು ವಿಷ್ಣುವಿನ ಕೊನೆಯ ಅವತಾರವಾಗಿದೆ. ನಮ್ಮ ಹಲವಾರು ‘ಪುರಾಣ’ಗಳು ಆತನಿಗೆ ಸಮರ್ಪಿತವಾಗಿವೆ. ಪ್ರಧಾನಿ ಮೋದಿ ಅವರು ಫೆಬ್ರವರಿ 19 ರಂದು ಯುಪಿಯ ಸಂಭಾಲ್‌ನಲ್ಲಿ ಶ್ರೀ ಕಲ್ಕಿ ಧಾಮ್ ದೇವಾಲಯದ ಉದ್ಘಾಟನೆ ಮಾಡಿದರು. ಅಲ್ಲಿ ಭಗವಾನ್ ಕಲ್ಕಿ ಜನಿಸಲಿದ್ದಾರೆ. ಇಡೀ ಜಗತ್ತು ಅವನಿಗಾಗಿ ಕಾಯುತ್ತಿದೆ. ಆದರೆ ಈ ಚಿತ್ರವು ಜನರಿಗೆ ತಪ್ಪು ಸಂದೇಶವನ್ನು ನೀಡುತ್ತಿದೆʼʼಎಂದು ಎಂದು ಮಾಜಿ ಕಾಂಗ್ರೆಸ್ ನಾಯಕ ಹೇಳಿಕೆ ನೀಡಿದರು. ಆಚಾರ್ಯ ಪ್ರಮೋದ್ ಕೃಷ್ಣಂ ಪರವಾಗಿ ಸುಪ್ರೀಂ ಕೋರ್ಟ್ ವಕೀಲ ಉಜ್ಜವಲ್ ಆನಂದ್ ಶರ್ಮಾ ಅವರು ನೋಟಿಸ್ ನೀಡಿದ್ದಾರೆ.

ಇದನ್ನೂ ಓದಿ: Kalki 2898 AD: ನೀವಿಲ್ಲದೆ ನಾನು ಶೂನ್ಯ ಎಂದು ಅಭಿಮಾನಿಗಳಿಗೆ ಧನ್ಯವಾದ ಹೇಳಿದ ನಟ ಪ್ರಭಾಸ್‌!

ನಾಗ್ ಅಶ್ವಿನ್ ಅವರು ‘ಕಲ್ಕಿ 2898 ಎಡಿ’ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. 2ಡಿ ಜೊತೆಗೆ 3ಡಿಯಲ್ಲೂ ಸಿನಿಮಾ ವೀಕ್ಷಣೆಗೆ ಲಭ್ಯವಿದೆ. ಈ ಚಿತ್ರದ ಬಜೆಟ್ 600 ಕೋಟಿ ರೂಪಾಯಿ ಎನ್ನಲಾಗಿದೆ. ಈ ಕಾರಣದಿಂದಲೇ ಸಿನಿಮಾ ದೊಡ್ಡ ಮೊತ್ತದ ಗಳಿಕೆ ಮಾಡೋ ಅವಶ್ಯಕತೆ ಇತ್ತು. ಸದ್ಯ ಆಗಿರೋ ಗಳಿಕೆಯಿಂದ ನಿರ್ಮಾಪಕರಿಗೆ ಇನ್ನೂ ದೊಡ್ಡ ಲಾಭವೇನು ಆಗಿಲ್ಲ. ‘ಕಲ್ಕಿ 2898 ಎಡಿ’ ಚಿತ್ರ ತೆಲುಗು, ತಮಿಳು, ಮಲಯಾಳಂ, ಕನ್ನಡ, ಹಿಂದಿ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ರಿಲೀಸ್ ಆಗಿದೆ. ವೈಜಯಂತಿ ಮೂವಿಸ್ ಮೂಲಕ ಅಶ್ವಿನಿ ದತ್ ಸಿನಿಮಾ ನಿರ್ಮಾಣ ಮಾಡಿದ್ದಾರೆ.

ಸಲಾರ್’ ನಂತರ ಬಿಡುಗಡೆಯಾದ ಕಲ್ಕಿ ಸಿನಿಮಾ ಮೂಲಕ, ಪ್ರಭಾಸ್ ಚಿತ್ರೋದ್ಯಮದಲ್ಲಿ ಮತ್ತೊಂದು ಹೊಸ ಮೈಲಿಗಲ್ಲು ತಲುಪಿದ್ದಾರೆ. ಗಲ್ಲಾಪೆಟ್ಟಿಗೆಯಲ್ಲಿ ದೊಡ್ಡ ಮಟ್ಟದ ಓಪನಿಂಗ್ ಪ್ರಭಾಸ್‌ ಸಿನಿಮಾಗಳಿಗೆ ಸಿಗುತ್ತಿವೆ. ಇದೀಗ ‘ಕಲ್ಕಿ 2898 AD’ ಸಿನಿಮಾ ಸಹ ಇದಕ್ಕೆ ಹೊರತಾಗಿಲ್ಲ, ಇದು ಭಾರತೀಯ ಚಿತ್ರರಂಗದಲ್ಲಿ ಅವರ ಮೂರನೇ ಅತಿದೊಡ್ಡ ಕಲೆಕ್ಷನ್‌ ಮಾಡಿದ ಸಿನಿಮಾವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Tollywood Films: ಹಾಲಿವುಡ್‌ಗೆ ಸೆಡ್ಡು ಹೊಡೆದ ಟಾಲಿವುಡ್‌ನ 4 ಪೌರಾಣಿಕ ಕಥೆಯ ಸಿನೆಮಾಗಳಿವು

ಭಾರತೀಯರು ಹೆಚ್ಚಾಗಿ ಪೌರಾಣಿಕ ಪರಿಕಲ್ಪನೆಗಳನ್ನು ಹೊಂದಿರುವ ಸಿನಿಮಾಗಳನ್ನು ಇಷ್ಟಪಡುತ್ತಾರೆ. ಯಾಕೆಂದರೆ ಅದು ಅವರಿಗೆ ತಮ್ಮ ಹಿರಿಯರ, ತಾವು ಬೆಳೆದು ಬಂದ ದಾರಿಯ ನೆನಪು ಮಾಡಿಕೊಡುತ್ತದೆ. ಪ್ರೇಕ್ಷಕರಿಗೆ ಹೆಚ್ಚು ಇಷ್ಟವಾದ ಕೆಲವು ಟಾಲಿವುಡ್ ಪೌರಾಣಿಕ ಕಥಾ ಹಂದರವನ್ನು ಒಳಗೊಂಡ ಚಿತ್ರಗಳ (Tollywood Films) ಕುರಿತು ಮಾಹಿತಿ ಇಲ್ಲಿದೆ. ನಿಮಗೆ ಅವಕಾಶ ಸಿಕ್ಕಾಗ ನೋಡುವುದನ್ನು ಮಿಸ್ ಮಾಡಿಕೊಳ್ಳಬೇಡಿ.

VISTARANEWS.COM


on

By

Tollywood Films
Koo

ತೆಲುಗು ಚಿತ್ರರಂಗದಲ್ಲಿ (Tollywood Films) ಪೌರಾಣಿಕ ಕಥೆಗಳು (mythological concepts) ತನ್ನದೇ ಆದ ಪ್ರೇಕ್ಷಕ ಬಳಗವನ್ನು ಹೊಂದಿವೆ. ಕೆಲವರಿಗೆ ಥ್ರಿಲರ್, ಇನ್ನು ಕೆಲವರಿಗೆ ಆಕ್ಷ್ಯನ್ ಮತ್ತೆ ಕೆಲವರಿಗೆ ರೋಮ್ಯಾಂಟಿಕ್, ಹಾಸ್ಯ ಚಿತ್ರಗಳು ಇಷ್ಟವಾಗುತ್ತವೆ. ಇವೆಲ್ಲದರ ಸಮ್ಮಿಶ್ರಣದೊಂದಿಗೆ ಮೂಡಿ ಬರುವ ಪೌರಾಣಿಕ ಕಥೆಗಳನ್ನು ಬಹುತೇಕ ಪ್ರೇಕ್ಷಕ ವರ್ಗ ಇಷ್ಟ ಪಡುತ್ತದೆ ಎಂಬುದನ್ನು ಇತ್ತೀಚೆಗೆ ತೆರೆ ಕಂಡಿರುವ ಹಲವು ಚಿತ್ರಗಳು ಸಾಬೀತುಪಡಿಸಿದೆ.

ಭಾರತೀಯರು ಹೆಚ್ಚಾಗಿ ಪೌರಾಣಿಕ ಪರಿಕಲ್ಪನೆಗಳನ್ನು ಹೊಂದಿರುವ ಸಿನಿಮಾಗಳನ್ನು ಇಷ್ಟಪಡುತ್ತಾರೆ. ಯಾಕೆಂದರೆ ಅದು ಅವರಿಗೆ ತಮ್ಮ ಹಿರಿಯರ, ತಾವು ಬೆಳೆದು ಬಂದ ದಾರಿಯ ನೆನಪು ಮಾಡಿಕೊಡುತ್ತದೆ. ಪ್ರೇಕ್ಷಕರಿಗೆ ಹೆಚ್ಚು ಇಷ್ಟವಾದ ಕೆಲವು ಟಾಲಿವುಡ್ ಪೌರಾಣಿಕ ಕಥಾ ಹಂದರವನ್ನು ಒಳಗೊಂಡ ಚಿತ್ರಗಳ ಕುರಿತು ಮಾಹಿತಿ ಇಲ್ಲಿದೆ. ನಿಮಗೆ ಅವಕಾಶ ಸಿಕ್ಕಾಗ ನೋಡುವುದನ್ನು ಮಿಸ್ ಮಾಡಿಕೊಳ್ಳಬೇಡಿ.


ಕಲ್ಕಿ 2898ಎಡಿ

ಸಾಕಷ್ಟು ನಿರೀಕ್ಷೆಗಳನ್ನು ಹೊಂದಿದ್ದ ಪ್ರಭಾಸ್ ಅಭಿನಯದ ಚಿತ್ರ ಕಳೆದ ತಿಂಗಳು ಬಿಡುಗಡೆಯಾಗಿತ್ತು. ಗಲ್ಲಾಪೆಟ್ಟಿಗೆಯ ಕಲೆಕ್ಷನ್‌ಗಳನ್ನು ಗಮನಿಸಿದರೆ ಚಿತ್ರವು ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಬ್ಲಾಕ್‌ಬಸ್ಟರ್ ಹಿಟ್ ಆಯಿತು. ನಾಗ್ ಅಶ್ವಿನ್ ನಿರ್ದೇಶನದ ಈ ಚಿತ್ರದಲ್ಲಿ ಅಮಿತಾಬ್ ಬಚ್ಚನ್, ದೀಪಿಕಾ ಪಡುಕೋಣೆ, ಕಮಲ್ ಹಾಸನ್ ಮತ್ತು ದಿಶಾ ಪಟಾನಿ ಗಮನಾರ್ಹ ಪಾತ್ರಗಳ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.


ಹನುಮಾನ್

ಈ ವರ್ಷದ ಆರಂಭದಲ್ಲಿ ಬಿಡುಗಡೆಯಾದ ಹನುಮಾನ್ ಈ ವರ್ಷದ ಅತಿದೊಡ್ಡ ಭಾರತೀಯ ಚಲನಚಿತ್ರಗಳಲ್ಲಿ ಒಂದಾಗಿದೆ. ಚಿತ್ರದಲ್ಲಿ ತೇಜ ಸಜ್ಜ, ಅಮೃತಾ ಅಯ್ಯರ್, ವರಲಕ್ಷ್ಮಿ ಶರತ್‌ಕುಮಾರ್, ಸಮುದ್ರಕಣಿ, ವಿನಯ್ ರೈ ಮತ್ತು ವೆನ್ನೆಲ ಕಿಶೋರ್ ನಟಿಸಿದ್ದಾರೆ. ಪ್ರಶಾಂತ್ ವರ್ಮಾ ಅವರ ನಿರ್ದೇಶನದಲ್ಲಿ ನಿರ್ಮಾಣವಾಗಿರುವ ಈ ಚಿತ್ರ ಭಗವಾನ್ ಹನುಮಾನ್ ಕಥೆಯಿಂದ ಪ್ರೇರಿತವಾಗಿದೆ.


ಅಖಂಡ 2

2021ರ ಸೂಪರ್‌ಹಿಟ್ ಅಖಂಡದ ಮುಂದುವರಿದ ಭಾಗ ಅಖಂಡ 2ನಲ್ಲಿ ನಂದಮೂರಿ ಬಾಲಕೃಷ್ಣ ನಾಯಕನಾಗಿ ನಟಿಸಿದ್ದಾರೆ. ಇನ್ನೂ ಬಿಡುಗಡೆಯಾಗಬೇಕಿರುವ ಈ ಚಿತ್ರವನ್ನು ಅನಿಲ್ ರವಿಪುಡಿ ಅವರು ನಿರ್ದೇಶಿಸುತ್ತಿದ್ದು, ಹರೀಶ್ ಪೆದ್ದಿ ನಿರ್ಮಾಪಕರಾಗಿದ್ದಾರೆ. ಇದು ಎಸ್ ಜೆ ಸೂರ್ಯ, ಜಗಪತಿ ಬಾಬು, ಕಾವ್ಯ ಥಾಪರ್, ಪ್ರಜ್ಞಾ ಜೈಸ್ವಾಲ್ ಮತ್ತು ಇತರರ ಹಲವು ಪ್ರಮುಖ ನಟನಟಿಯರನ್ನು ಒಳಗೊಂಡಿದೆ. ವರದಿಗಳ ಪ್ರಕಾರ ಈ ಚಿತ್ರವು ವರ್ಷಾಂತ್ಯಕ್ಕೆ ಥಿಯೇಟರ್‌ಗಳಿಗೆ ಬರಬಹುದು ಎನ್ನಲಾಗಿದೆ.


ವಿಶ್ವಂಭರ

ಫ್ಯಾಂಟಸಿ ಎಂದು ಡಬ್ ಮಾಡಲಾಗಿರುವ ವಿಶ್ವಂಭರ ಚಿತ್ರ ಕೂಡ ಶೀಘ್ರದಲ್ಲಿ ಬಿಡುಗಡೆಯಾಗಲಿದೆ. ಮೆಗಾಸ್ಟಾರ್ ಚಿರಂಜೀವಿ ಅವರು ದೊರಬಾಬು ಪಾತ್ರದಲ್ಲಿ ಕಾಣಿಕೊಂಡಿದ್ದಾರೆ. ಈ ಚಿತ್ರವನ್ನು ಮಲ್ಲಿಡಿ ವಸಿಷ್ಟ ಅವರು ನಿರ್ದೇಶಿಸುತ್ತಿದ್ದು, ಇವರೇ ಇ6ದರ ಬರಹಗಾರರಾಗಿಯೂ ಗುರುತಿಸಿಕೊಂಡಿದ್ದಾರೆ. ತಾರಾಗಣದಲ್ಲಿ ತ್ರಿಶಾ ಕೃಷ್ಣನ್, ಮೀನಾಕ್ಷಿ ಚೌಧರಿ, ಸುರಭಿ ಪುರಾಣಿಕ್, ಹರ್ಷ ವರ್ಧನ್ ಸೇರಿದಂತೆ ಹಲವರು ಇದ್ದಾರೆ.

ಇದನ್ನೂ ಓದಿ: Bhama Kurup: ಡಿವೋರ್ಸ್‌ ಆದ ಬೆನ್ನಲ್ಲೇ ಹೆಣ್ಣು ಮಕ್ಕಳಿಗೆ ಮದುವೆ ಬೇಕಾ? ಎಂದು ಪೋಸ್ಟ್‌ ಮಾಡಿದ ʻಶೈಲೂʼ ನಟಿ!

ಯುವಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ವಿ. ವಂಶಿ ಕೃಷ್ಣಾ ರೆಡ್ಡಿ, ಪ್ರಮೋದ್ ಉಪ್ಪಲಪತಿ ಮತ್ತು ವಿಕ್ರಮ್ ರೆಡ್ಡಿ ನಿರ್ಮಿಸಿದ್ದಾರೆ. ಮುಂದಿನ ವರ್ಷ ಜನವರಿಯಲ್ಲಿ ಚಿತ್ರ ಬಿಡುಗಡೆಯಾಗುವ ನಿರೀಕ್ಷೆಯಿದೆ.

Continue Reading

ಟಾಲಿವುಡ್

Ram Pothineni: `ಡಬಲ್ ಇಸ್ಮಾರ್ಟ್’ ಸಿನಿಮಾದ ಎರಡನೇ ಹಾಡು ರಿಲೀಸ್!

Ram Pothineni: ಇಸ್ಮಾರ್ಟ್ ಶಂಕರ್ ಸಿನಿಮಾದ ಮುಂದುವರೆದ ಭಾಗವೇ ಈ ಡಬಲ್ ಇಸ್ಮಾರ್ಟ್ ಚಿತ್ರ. ಈ ಮೂಲಕ ಡೈರೆಕ್ಟರ್ ಪೂರಿ ಜಗನ್ನಾಥ್ ಹೊಸ ರೀತಿಯಲ್ಲಿಯೆ ಶಂಕರ್‌ನ ಕಥೆ ಹೇಳಲು ಹೊರಟ್ಟಿದ್ದಾರೆ. 2019ರಲ್ಲಿ ‘ಇಸ್ಮಾರ್ಟ್ ಶಂಕರ್’ ಸಿನಿಮಾ ರಿಲೀಸ್ ಆಗಿತ್ತು. ಇದರಲ್ಲಿ ಕನ್ನಡತಿ ನಭಾ ನಟೇಶ್ ಅಭಿನಯಿಸಿದ್ದರು.

VISTARANEWS.COM


on

Ram Pothineni double ismart second song out
Koo

ಬೆಂಗಳೂರು: ʻಡಬಲ್ ಇಸ್ಮಾರ್ಟ್ʼ ಸಿನಿಮಾದ ಸ್ಟೆಪ್ಪಮಾರ್ ಹಾಡಿಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಇದೀಗ ಚಿತ್ರತಂಡ ಎರಡನೇ ಹಾಡನ್ನು ಬಿಡುಗಡೆ ಮಾಡಿದೆ. ʻಮಾರ್ ಮುಂತಾ ಚೋಡ್ ಚಿಂತಾʼ ಎಂಬ ಗಾನಬಜಾನಕ್ಕೆ ನಾಯಕ ಉಸ್ತಾದ್ ರಾಮ್ ಪೋತಿನೇನಿ ಹಾಗೂ ನಾಯಕಿ ಕಾವ್ಯಾ ಥಾಪರ್ (Ram Pothineni) ಸಖತ್ ಆಗಿ ಕುಣಿದು ಕುಪ್ಪಳಿಸಿದ್ದಾರೆ. ಕಾಸರ್ಲ ಶ್ಯಾಮ್ ಸಾಹಿತ್ಯದ ದೇಸಿ ನಂಬರ್ ಗೆ ಮಣಿ ಶರ್ಮಾ ಟ್ಯೂನ್ ಹಾಕಿದ್ದು, ರಾಹುಲ್ ಸಿಪ್ಲಿಗುಂಜ್ ಮತ್ತು ಕೀರ್ತನಾ ಶರ್ಮಾ ಧ್ವನಿಯಾಗಿದ್ದಾರೆ. ಮಾರ್ ಮುಂತಾ ಚೋಡ್ ಚಿಂತಾ ಲಿರಿಕಲ್ ವಿಡಿಯೋದ ಜೊತೆಗೆ ಮೇಕಿಂಗ್ ವಿಡಿಯೋ ಕೂಡ ಇರೋದು ವಿಶೇಷವಾಗಿದೆ.

ಇಸ್ಮಾರ್ಟ್ ಶಂಕರ್ ಸಿನಿಮಾದ ಮುಂದುವರೆದ ಭಾಗವೇ ಈ ಡಬಲ್ ಇಸ್ಮಾರ್ಟ್ ಚಿತ್ರ. ಈ ಮೂಲಕ ಡೈರೆಕ್ಟರ್ ಪೂರಿ ಜಗನ್ನಾಥ್ ಹೊಸ ರೀತಿಯಲ್ಲಿಯೆ ಶಂಕರ್‌ನ ಕಥೆ ಹೇಳಲು ಹೊರಟ್ಟಿದ್ದಾರೆ. 2019ರಲ್ಲಿ ‘ಇಸ್ಮಾರ್ಟ್ ಶಂಕರ್’ ಸಿನಿಮಾ ರಿಲೀಸ್ ಆಗಿತ್ತು. ಇದರಲ್ಲಿ ಕನ್ನಡತಿ ನಭಾ ನಟೇಶ್ ಅಭಿನಯಿಸಿದ್ದರು. ಆಗ ಈ ಸಿನಿಮಾ ಕರ್ಮಷಿಯಲಿ ಸಕ್ಸಸ್ ಆಗಿತ್ತು. ಆದರೆ ಈ ಸಿನಿಮಾ ಬಂದು 5 ವರ್ಷದ ಬಳಿಕ ಪಾರ್ಟ್-2 ಡಬಲ್ ಇಸ್ಮಾರ್ಟ್ ಸಿನಿಮಾ ಬರುತ್ತಿದೆ. ಟಾಲಿವುಡ್‌ನಲ್ಲಿ ಈಗಾಗಲೇ ನಿರೀಕ್ಷೆಯನ್ನು ಕೂಡ ಹುಟ್ಟುಹಾಕಿದೆ.

ತೆಲುಗು ಮಾತ್ರವಲ್ಲದೇ ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ‘ಡಬಲ್ ಇಸ್ಮಾರ್ಟ್’ ಸಿನಿಮಾ ಬಿಡುಗಡೆ ಆಗಲಿದೆ. ಮಣಿ ಶರ್ಮಾ ಅವರು ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ‘ಪುರಿ ಕನೆಕ್ಟ್ಸ್’ ಬ್ಯಾನರ್ ಮೂಲಕ ಪುರಿ ಜಗನ್ನಾಥ್, ಚಾರ್ಮಿ ಕೌರ್ ಅವರು ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಈ ಚಿತ್ರದಲ್ಲಿ ರಾಮ್‌ ಪೊತೀನೇನಿಗೆ ನಟಿ ಕಾವ್ಯಾ ಥಾಪರ್ ಜೋಡಿ ಆಗಿದ್ದಾದೆ. ಸಂಜಯ್ ದತ್ ಈ ಸಿನಿಮಾದಲ್ಲಿ ಖಡಕ್ ವಿಲನ್ ಆಗಿಯೇ ಕಾಣಿಸುತ್ತಿದ್ದಾರೆ. ಇವರ ಈ ಸಿನಿಮಾ ಬಗ್ಗೆ ಕೂಡ ನಿರೀಕ್ಷೆ ಇದ್ದೇ ಇದೆ.

ಇದನ್ನೂ ಓದಿ: The Birthday Boy: ಹೆಸರು ಬದಲಾಯಿಸಿ ಕದ್ದು ಮುಚ್ಚಿ ಸಿನಿಮಾ ಮಾಡಿ, ಮಾಸ್ಕ್‌ ಧರಿಸಿ ಬಂದ ನಿರ್ದೇಶಕ! ಏನು ಕಥೆ?

ಡಬಲ್ ಇಸ್ಮಾರ್ಟ್ ಸಿನಿಮಾದ ಶೂಟಿಂಗ್ ಇನ್ನು ನಡೆಯುತ್ತಿದೆ. ಭರದಿಂದಲೇ ಚಿತ್ರೀಕರಣ ನಡೆಯುತ್ತಿರೋ ಈ ಸಿನಿಮಾ ರಿಲೀಸ್ ಡೇಟ್ ಕೂಡ ಫಿಕ್ಸ್ ಆಗಿದೆ. ಆಗಸ್ಟ್-15 ರಂದು ಚಿತ್ರ ಎಲ್ಲೆಡೆ ರಿಲೀಸ್ ಮಾಡಲಾಗುತ್ತಿದೆ. ವಿಶ್ವದಾದ್ಯಂತ ಬರ್ತಿರೋ ಈ ಚಿತ್ರದ ಪ್ರಚಾರ ಕೂಡ ಈಗಾಗಲೇ ಶುರು ಆಗಿದೆ.

Continue Reading

ಟಾಲಿವುಡ್

Tharun Sudhir: ದರ್ಶನ್‌ಗೆ ಮದುವೆ ಇನ್ವಿಟೇಶನ್‌ ಕಾರ್ಡ್‌ ಕೊಟ್ಟು, ಆಶೀರ್ವಾದ ಪಡೆಯಲು ಜೈಲಿಗೆ ಭೇಟಿ ಕೊಡಲಿದ್ದಾರಂತೆ ತರುಣ್ ಸುಧೀರ್

Tharun Sudhir: ದರ್ಶನ್ ಜೈಲು ಪಾಲಾದ ನಂತರ ಮೊದಲ ಬಾರಿಗೆ ತರುಣ್ ಸುಧೀರ್ ಭೇಟಿ ಮಾಡುತ್ತಿದ್ದಾರೆ. ತರುಣ್ ಸುಧೀರ್ ಲವ್ ಸ್ಟೋರಿ ಟ್ರ್ಯಾಕ್‌ಗೆ ತಂದಿದ್ದೆ ದರ್ಶನ್. ಸದ್ಯ ಭೇಟಿಯ ವೇಳೆ ಮದುವೆ ವಿಚಾರ ಬಹಿರಂಗ ಪಡಿಸಲಿದ್ದಾರಂತೆ ತರುಣ್‌. ತರುಣ್ ಹಾಗೂ ನಟಿ ಸೋನಲ್ ಮದುವೆಗೆ ದರ್ಶನ್ ಮುದ್ರೆ ಒತ್ತಿದ್ದರು.

VISTARANEWS.COM


on

Tharun Sudhir gives Darshan a wedding invitation card and visits Jail
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ಪರಪ್ಪನ (Actor Darshan) ಅಗ್ರಹಾರ ಜೈಲು ಸೇರಿರುವ ನಟ ದರ್ಶನ್‌ (Tharun Sudhir) ಹಾಗೂ ಗ್ಯಾಂಗ್‌ಗೆ ನ್ಯಾಯಾಂಗ ಬಂಧನ ವಿಸ್ತರಣೆ ಆಗಿದೆ. ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ನೀಡಿದೆ. ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ನ್ಯಾಯಾಧೀಶ ವಿಶ್ವನಾಥ‌ ಸಿ ಗೌಡರ್ ಆದೇಶವಾಗಿದೆ. ಇದೀಗ ಕೊಲೆ ಪ್ರಕರಣದಲ್ಲಿ ಜೈಲನಲ್ಲಿರುವ ದರ್ಶನ್ ಅವರನ್ನು ʻಕಾಟೇರʼ ನಿರ್ದೇಶಕ ತರುಣ್ ಸುಧೀರ್ ಭೇಟಿ ಮಾಡಲಿದ್ದಾರೆ.

ದರ್ಶನ್ ಜೈಲು ಪಾಲಾದ ನಂತರ ಮೊದಲ ಬಾರಿಗೆ ತರುಣ್ ಸುಧೀರ್ ಭೇಟಿ ಮಾಡುತ್ತಿದ್ದಾರೆ. ತರುಣ್ ಸುಧೀರ್ ಲವ್ ಸ್ಟೋರಿ ಟ್ರ್ಯಾಕ್‌ಗೆ ತಂದಿದ್ದೆ ದರ್ಶನ್. ಸದ್ಯ ಭೇಟಿಯ ವೇಳೆ ಮದುವೆ ವಿಚಾರ ಬಹಿರಂಗ ಪಡಿಸಲಿದ್ದಾರಂತೆ ತರುಣ್‌. ತರುಣ್ ಹಾಗೂ ನಟಿ ಸೋನಲ್ ಮದುವೆಗೆ ದರ್ಶನ್ ಮುದ್ರೆ ಒತ್ತಿದ್ದರು. ದರ್ಶನ್ ಇಲ್ಲದೆ ಮದುವೆಯನ್ನು ಮುಂದಕ್ಕೆ ಹಾಕಲು ತರುಣ್ ಸಜ್ಜಾಗಿದ್ದರು ಎನ್ನಲಾಗಿತ್ತು. ಹಿರಿಯರ ಸಲಹೆ ನಂತರ ತರುಣ್‌ ಮುದುವೆಗೆ ಮುಂದಾಗಿದ್ದಾರೆ. ಅಗಸ್ಟ್ 10,11ಕ್ಕೆ ತರುಣ್ ,ಸೋನಾಲ್ ಮದುವೆಗೆ ಮುಹೂರ್ತ ಫಿಕ್ಸ್ ಆಗಿದೆ.

ಮದುವೆಯ ಮೊದಲ ಆಮಂತ್ರಣ ಪತ್ರಿಕೆಯನ್ನ ದರ್ಶನ್‌ಗೆ ಕೊಡಲು ತರುಣ್ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಇಂದು 11 ಗಂಟೆ ವೇಳೆಗೆ ಪರಪ್ಪನ ಅಗ್ರಹಾರದ ಜೈಲಿಗೆ ಭೇಟಿ ನೀಡಲಿದ್ದಾರಂತೆ ತರುಣ್‌. ಜೈಲಿನಲ್ಲೆ ದರ್ಶನ್ ಗೆ ಮದುವೆ ಇನ್ವಿಟೇಶನ್‌ ಕೊಟ್ಟು, ಆಶೀರ್ವಾದ ಪಡೆಯಲಿದ್ದಾರಂತೆ. ಸೋನಲ್‌ ಕೂಡ ಬರುವರಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Tharun Sudhir: ಮದುವೆ ಬಗ್ಗೆ ಬಿಗ್‌ ಅಪ್‌ಡೇಟ್‌ ಕೊಟ್ಟ ತರುಣ್ ಸುಧೀರ್; ಹುಡುಗಿ ಹೇಗಿರಬೇಕು ಅಂದ್ರೆ….

ನಟಿ ಸೋನಾಲ್ ಮಂಥೆರೊ (sonal monteiro) ಹಾಗೂ ನಿರ್ದೇಶಕ ತರುಣ್ ಸುಧೀರ್ (Tharun Sudhir) ಮದುವೆಯಾಗಲಿದ್ದಾರೆ ಎಂದು ಬಹಳ ದಿನಗಳಿಂದ ಸುದ್ದಿ ಆಗುತ್ತಲೇ ಇದೆ. ಈ ಮುಂಚೆ ತರುಣ್‌ ಸುಧೀರ್‌ ಅವರ ತಾಯಿ ಮದುವೆಯ ದಿನಾಂಕ ಇನ್ನೂ ನಿಗದಿಯಾಗಿಲ್ಲ ಎಂದಿದ್ದಾರೆ. ಈಗ ಆಷಾಢ ಬಂತು. ಮಾತಾಡಲು ಆಗಲ್ಲ. ಆಷಾಢ ಮುಗಿದ್ಮೇಲೆ ಮಾತುಕತೆ ಮಾಡಬೇಕು ಅಂದಿದ್ದರು. 

ರಾಬರ್ಟ್’ ಚಿತ್ರದಲ್ಲಿ ಸೋನಲ್ ಕಾಣಿಸಿಕೊಂಡಿದ್ದರು. ಈ ಸಿನಿಮಾ ಶೂಟಿಂಗ್ ಸಮಯದಲ್ಲೇ ತರುಣ್- ಸೋನಲ್ ನಡುವೆ ಪ್ರೀತಿ ಹುಟ್ಟಿತ್ತು ಎಂದು ಹೇಳಲಾಗುತ್ತಿದೆ. ಇನ್ನು ದರ್ಶನ್‌ ಕೂಡ ಆಗಾಗ ತರುಣ್‌ಗೆ ಮದುವೆ ಮಾಡಿಸಬೇಕು ಎನ್ನುತ್ತಿದ್ದರಂತೆ. ಹಾಗಾಗಿ ಶೂಟಿಂಗ್‌ ಸೆಟ್‌ನಲ್ಲಿ ತರುಣ್- ಸೋನಲ್ ಇಬ್ಬರನ್ನು ತಮಾಷೆಯಾಗಿ ರೇಗಿಸುತ್ತಿದ್ದರು, ಇದೇ ಸಮಯದಲ್ಲಿ ಇಬ್ಬರ ನಡುವೆ ಪ್ರೀತಿ ಮೂಡಿರಬಹುದು ಎನ್ನಲಾಗಿದೆ.

ಚೌಕ’ ಚಿತ್ರದ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದ ತರುಣ್ ಮುಂದೆ ಒಂದರ ಹಿಂದೆಯಂತೆ ಎರಡು ಹಿಟ್ ಸಿನಿಮಾಗಳನ್ನು ಕೊಟ್ಟರು. ಇದೀಗ ತರುಣ್ 4ನೇ ಸಿನಿಮಾ ತಯಾರಿಯಲ್ಲಿದ್ದಾರೆ. 

Continue Reading

ಟಾಲಿವುಡ್

The Birthday Boy: ಹೆಸರು ಬದಲಾಯಿಸಿ ಕದ್ದು ಮುಚ್ಚಿ ಸಿನಿಮಾ ಮಾಡಿ, ಮಾಸ್ಕ್‌ ಧರಿಸಿ ಬಂದ ನಿರ್ದೇಶಕ! ಏನು ಕಥೆ?

The Birthday Boy: ವಿಸ್ಕಿ ನಿರ್ದೇಶನದ ಸಿನಿಮಾಗಳನ್ನು ಅವರ ಮನೆಯವರು ಇಷ್ಟಪಡುವುದಿಲ್ಲ. ಹೀಗಾಗಿ ಅವರಿಗೆ ಗೊತ್ತಾಗದಂತೆ ವೇಷ ಬದಲಿಸಿ ತಿರುಗಾಡುತ್ತಿದ್ದಾರೆ. ನನಗೆ ಪ್ರಚಾರದ ಅವಶ್ಯಕತೆಯಿಲ್ಲ. ನಾನು ಬರೀ ಸಿನಿಮಾ ನಿರ್ದೇಶನ ಮಾಡಿ ಹೋಗೊಕೆ ಬಂದೆ ಅಷ್ಟೆ. ನನಗೆ ಕ್ಯಾಮೆರಾ ಮುಂದೆ ಬಂದು ಮಾತನಾಡುವುದಕ್ಕೆ ಇಷ್ಟವಿಲ್ಲ.

VISTARANEWS.COM


on

The Birthday Boy Director Whisky Real Life Story
Koo

ಬೆಂಗಳೂರು: ಸಾಮಾನ್ಯವಾಗಿ ಅನೇಕರು ಸಿನಿಮಾ ನಿರ್ದೇಶನದ ಮೂಲಕವೇ ಜನಪ್ರಿಯರಾಗಬೇಕೆಂದು ಯೋಚಿಸುತ್ತಾರೆ. ಆದರೆ ತೆಲುಗು (The Birthday Boy) ಚಿತ್ರರಂಗದ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ನಿರ್ದೇಶಕರೊಬ್ಬರು ತಮ್ಮ ಹೆಸರನ್ನು “ವಿಸ್ಕಿ’ ಎಂದು ಬದಲಾಯಿಸಿಕೊಂಡು ಸಿನಿಮಾ ನಿರ್ದೇಶಿಸಿದ್ದಾರೆ. ಪ್ರತಿ ಸಿನಿಮಾದ ಪ್ರಚಾರ ವೇಳೆ ಮುಖ ಕಾಣದಂತೆ ಮಾಸ್ಕ್‌ ಧರಿಸುತ್ತಾರೆ. ನಿರ್ದೇಶಕ ಈ ರೀತಿ ಇರೋದ್ಯಾಕೆ ಎಂದು ತಿಳಿಯಲು ಮುಂದೆ ಓದಿ.

ವಿಸ್ಕಿ ನಿರ್ದೇಶನದ ಸಿನಿಮಾಗಳನ್ನು ಅವರ ಮನೆಯವರು ಇಷ್ಟಪಡುವುದಿಲ್ಲ. ಹೀಗಾಗಿ ಅವರಿಗೆ ಗೊತ್ತಾಗದಂತೆ ವೇಷ ಬದಲಿಸಿ ತಿರುಗಾಡುತ್ತಿದ್ದಾರೆ. ನನಗೆ ಪ್ರಚಾರದ ಅವಶ್ಯಕತೆಯಿಲ್ಲ. ನಾನು ಬರೀ ಸಿನಿಮಾ ನಿರ್ದೇಶನ ಮಾಡಿ ಹೋಗೊಕೆ ಬಂದೆ ಅಷ್ಟೆ. ನನಗೆ ಕ್ಯಾಮೆರಾ ಮುಂದೆ ಬಂದು ಮಾತನಾಡುವುದಕ್ಕೆ ಇಷ್ಟವಿಲ್ಲ. ನಿಜ ಹೇಳಬೇಕು ಅಂದರೆ ನಾನು ಚಿತ್ರರಂಗಕ್ಕೆ ಬಂದಿರುವುದು ನಮ್ಮ ಮನೆಯವರಿಗೆ ಗೊತ್ತಿಲ್ಲ. ಕದ್ದು ಮುಚ್ಚಿ ಬಂದಿದ್ದೀನಿ. ಆ ವಿಚಾರ ಅವರಿಗೆ ಗೊತ್ತಾದರೆ ನೋವಾಗುತ್ತದೆ ಎನ್ನುತ್ತಿದ್ದಾರೆ. ಮಾಸ್ಕ್ ಹಾಕಿಕೊಂಡು ಸಿನಿಮಾ ಸುದ್ದಿಗೋಷ್ಠಿ, ಸಂದರ್ಶನದಲ್ಲಿ ಭಾಗಿ ಆಗುತ್ತಿದ್ದಾರೆ.

ಇದೀಗ ರ‌ವಿಕೃಷ್ಣ, ಸ‌ಮೀರ್ ಮ‌ಲ್ಲಾ ಮುಖ್ಯಭೂಮಿಕೆಯಲ್ಲಿರುವ ‘ದಿ ಬರ್ತ್‌ಡೇ ಬಾಯ್‌’ ತೆಲುಗು ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಚಿತ್ರಕ್ಕೆ ವಿಸ್ಕಿ ಎಂಬುವವರು ಆಕ್ಷನ್ ಕಟ್ ಹೇಳಿದ್ದಾರೆ. ಅಂದಹಾಗೆ ಇದು ಅವರ ನಿಜವಾದ ಹೆಸರಲ್ಲ, ಚಿತ್ರಕ್ಕಾಗಿ ಬದಲಿಸಿಕೊಂಡಿದ್ದಾರೆ.

ಈ ಚಿತ್ರ ಇದೇ ತಿಂಗಳ 19 ರಂದು ಬಿಡುಗಡೆಯಾಗಲಿದೆ. ಭರತ್ ಇಮ್ಮಲರಾಜು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ರವಿಕೃಷ್ಣ ಮತ್ತು ರಾಜೀವ್ ಕಣಕಾಲ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. “ವಿಸ್ಕೀ” (ನಿರ್ದೇಶಕ ವಿಸ್ಕಿ) ಎಂಬ ಹೆಸರನ್ನು ಇಟ್ಟುಕೊಳ್ಳಲು ಕಾರಣವೆಂದರೆ ಅವರು ಒಂದು ನಾಯಿಮರಿಯನ್ನು ಸಾಕಿದ್ದರು. ನಾಯಿ ಕರೋನಾ ಸಮಯದಲ್ಲಿ ಸತ್ತು ಹೋಯ್ತು. ಅವರು ಅದಕ್ಕೆ ವಿಸ್ಕಿ ಎಂದು ಹೆಸರಿಟ್ಟಿದ್ದರು. ಹೀಗಾಗಿ ತಮ್ಮನ್ನು ಈ ರೀತಿ ಪರಿಚಯಿಸಿಕೊಂಡಿದ್ದಾರೆ.

ಇದನ್ನೂ ಓದಿ: Kannada New Movie: ಹೊಸಬರ ತಂಡ ಸಿದ್ದಪಡಿಸಿರುವ ಹೊಸತನದ ಸಿನಿಮಾ; ಲೈಫ್ ಆಫ್ ಮೃದುಲ ಹಾಡು ಬಿಡುಗಡೆ!

ಐವರು ಅನಿವಾಸಿ ಭಾರತೀಯರ ಬದುಕಿನ ಮೂಲ ಕಥೆಗೆ ಸಿನಿಮಾ ಅಂಶಗಳನ್ನು ಸೇರಿಸಿ ಸಿನಿಮಾ ಮಾಡಲಾಗಿದೆ. ನನ್ನ ಎರಡು ಸಿನಿಮಾಗಳು ಫ್ಲಾಪ್ ಆದರೆ ಚಿತ್ರರಂಗ ಬಿಟ್ಟುಬಿಡುತ್ತೇನೆ ಎಂದು ನಿರ್ದೇಶಕ ವಿಸ್ಕಿ ಹೇಳಿದ್ದಾರೆ. ಸದ್ಯ ಮಾಸ್ಕ್ ಹಾಕಿಕೊಂಡು ಆತ ಸಿನಿಮಾ ಪ್ರಚಾರ ಮಾಡುತ್ತಿರುವುದು ವೈರಲ್ ಆಗುತ್ತಿದೆ.


Continue Reading
Advertisement
theft case
ಚಿತ್ರದುರ್ಗ21 seconds ago

Theft Case : ಅಡ್ಡಗಟ್ಟಿದ ಪೊಲೀಸ್‌ ಜೀಪ್‌ ಮೇಲೆ ಕಲ್ಲು ತೂರಿ ಆಂಧ್ರದ ಡೆಡ್ಲಿ ಕಳ್ಳರ ಗ್ಯಾಂಗ್‌ ಎಸ್ಕೇಪ್‌!

Niveditha Shivarajkumar Fire fly rachana inder Heroine
ಸ್ಯಾಂಡಲ್ ವುಡ್6 mins ago

Niveditha Shivarajkumar: ʻಫೈರ್ ಫ್ಲೈ’ ಸಿನಿಮಾಗೆ ‘ಹೆಂಗೆ ನಾವು’ ಹುಡುಗಿ ನಾಯಕಿ! ಯಾವಾಗ ತೆರೆಗೆ?

Kanwar Yatra
ದೇಶ11 mins ago

Kanwar Yatra: ಮುಸ್ಲಿಮರ ವಿರುದ್ಧ ಬಿಜೆಪಿಯ ದ್ವೇಷದ ರಾಜಕೀಯ ಎಂದ ಓವೈಸಿ; ಜಿನ್ನಾರಂತೆ ವರ್ತನೆ ಎಂದು ಬಿಜೆಪಿ ಟಾಂಗ್‌

Gold Rate Today
ಚಿನ್ನದ ದರ16 mins ago

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಇಂದಿನ ಬೆಲೆ ತಿಳಿದುಕೊಳ್ಳಿ

Om shiva, Kannada movie team song out
ಸಿನಿಮಾ24 mins ago

Kannada New Movie: ಭಾರ್ಗವ್ ಕೃಷ್ಣ ಅಭಿನಯದ `ಓಂ ಶಿವಂ’ ಚಿತ್ರದ ಲಿರಿಕಲ್ ಸಾಂಗ್ ಬಿಡುಗಡೆ

Paris Olympics 2024
ಕ್ರೀಡೆ51 mins ago

Paris Olympics 2024: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಮೊದಲ ಬಾರಿ ನೇರಳೆ ಬಣ್ಣದ ಟ್ರ್ಯಾಕ್; ಏನಿದರ ವಿಶೇಷತೆ?

Karnataka HC
ಕರ್ನಾಟಕ55 mins ago

Karnataka HC: ನ್ಯಾಯಮೂರ್ತಿಗಳು ಕೂಡ ಮನುಷ್ಯರೇ; ಮಕ್ಕಳ ಅಶ್ಲೀಲ ದೃಶ್ಯ ವೀಕ್ಷಣೆ ಅಪರಾಧವಲ್ಲ ಆದೇಶ ಹಿಂಪಡೆದ ಹೈಕೋರ್ಟ್

Dr Bro shreenaval kishori Craze social media stars
ವೈರಲ್ ನ್ಯೂಸ್59 mins ago

Dr Bro: ಸೋಷಿಯಲ್​ ಮೀಡಿಯಾ ಸ್ಟಾರ್‌ಗಳ ಮೇಲೆ ಹೆಚ್ಚಾಯ್ತು ಕ್ರೇಜ್‌! ನಿಮಗ್ಯಾರಿಷ್ಟ?

Kanwar Yatra
ದೇಶ1 hour ago

Kanwar Yatra: “ಹೆಸರು ಬಹಿರಂಗ ಪಡಿಸುವಲ್ಲಿ ರಾಮನಿಗಿಲ್ಲದ ಸಮಸ್ಯೆ ರೆಹಮಾನ್‌ಗೆ ಏಕೆ?”-ಬಾಬಾ ರಾಮ್‌ ದೇವ್‌ ಪ್ರಶ್ನೆ

karnataka Rain
ಮಳೆ1 hour ago

Karnataka Rain : ಭಾರಿ ಮಳೆಗೆ ಮುಂದುವರಿದ ಸಾವು-ನೋವು; ಮನೆ ಗೋಡೆ ಕುಸಿದು ವ್ಯಕ್ತಿ ಸಾವು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ23 hours ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ1 day ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ2 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ2 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ3 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ5 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ6 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ6 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌