Kannapp Teaser : ವಿಷ್ಣು ಮಂಚು ನಾಯಕನಾಗಿ ನಟಿಸಿರುವ `ಕಣ್ಣಪ್ಪ' ಚಿತ್ರದ ಟೀಸರ್‌ ಬಿಡುಗಡೆ - Vistara News

ಟಾಲಿವುಡ್

Kannapp Teaser : ವಿಷ್ಣು ಮಂಚು ನಾಯಕನಾಗಿ ನಟಿಸಿರುವ `ಕಣ್ಣಪ್ಪ’ ಚಿತ್ರದ ಟೀಸರ್‌ ಬಿಡುಗಡೆ

Kannapp Teaser: ಟೀಸರ್‌ ಲಾಂಚ್‌ ವೇಳೆ ಮಾತನಾಡಿದ ಮೋಹನ್ ಬಾಬು, ಪರಮೇಶ್ವರನ ಒಪ್ಪಿಗೆಯ ಮೇರೆಗೆ ನಾವು ಈ ಕಣ್ಣಪ್ಪ ಸಿನಿಮಾ ಮಾಡಿದ್ದೇವೆ. ಅಚ್ಚು ಕಟ್ಟಾಗಿ ಸಿನಿಮಾ ಮೂಡಿ ಬಂದಿದೆ. ಬಹುಭಾಷೆಯ ತಾರೆಯರು ನಮ್ಮ ಸಿನಿಮಾದಲ್ಲಿ ನಟಿಸಿದ್ದಾರೆ. ಅದ್ಧೂರಿಯಾಗಿ ಈ ಸಿನಿಮಾ ನಿರ್ಮಾಣ ಮಾಡಿದ್ದೇನೆ. ಇಡೀ ತಂಡಕ್ಕೆ ನಿಮ್ಮೆಲ್ಲರ ಆಶೀರ್ವಾದವಿರಲಿ ಎಂದರು.

VISTARANEWS.COM


on

Kannappa Teaser Kannada Vishnu Manchu Mohan Babu
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಷ್ಣು ಮಂಚು ಅವರ ಕನಸಿನ ಯೋಜನೆಯಾದ ‘ಕಣ್ಣಪ್ಪ’ (Kannappa Movie) ಎವಿಎ ಎಂಟರ್‌ಟೈನ್‌ಮೆಂಟ್ಸ್ ಮತ್ತು 24 ಫ್ರೇಮ್ಸ್ ಫ್ಯಾಕ್ಟರಿ ಬ್ಯಾನರ್‌ಗಳಲ್ಲಿ ಅದ್ಧೂರಿಯಾಗಿ (Kannapp Teaser) ಚಿತ್ರೀಕರಣಗೊಳ್ಳುತ್ತಿದೆ. ಈ ಚಿತ್ರವನ್ನು ಡಾ.ಮೋಹನ್ ಬಾಬು ನಿರ್ಮಿಸಿದ್ದಾರೆ ಮತ್ತು ಮುಖೇಶ್ ಕುಮಾರ್ ಸಿಂಗ್ ನಿರ್ದೇಶಿಸಿದ್ದಾರೆ. ಶುಕ್ರವಾರ ಈ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಟೀಸರ್‌ ಲಾಂಚ್ ಕಾರ್ಯಕ್ರಮವನ್ನು ಅಷ್ಟೇ ಅದ್ಧೂರಿಯಾಗಿ ಚಿತ್ರತಂಡ ಆಯೋಜಿಸಲಾಗಿತ್ತು.

ಟೀಸರ್‌ ಲಾಂಚ್‌ ವೇಳೆ ಮಾತನಾಡಿದ ಮೋಹನ್ ಬಾಬು, ಪರಮೇಶ್ವರನ ಒಪ್ಪಿಗೆಯ ಮೇರೆಗೆ ನಾವು ಈ ಕಣ್ಣಪ್ಪ ಸಿನಿಮಾ ಮಾಡಿದ್ದೇವೆ. ಅಚ್ಚು ಕಟ್ಟಾಗಿ ಸಿನಿಮಾ ಮೂಡಿ ಬಂದಿದೆ. ಬಹುಭಾಷೆಯ ತಾರೆಯರು ನಮ್ಮ ಸಿನಿಮಾದಲ್ಲಿ ನಟಿಸಿದ್ದಾರೆ. ಅದ್ಧೂರಿಯಾಗಿ ಈ ಸಿನಿಮಾ ನಿರ್ಮಾಣ ಮಾಡಿದ್ದೇನೆ. ಇಡೀ ತಂಡಕ್ಕೆ ನಿಮ್ಮೆಲ್ಲರ ಆಶೀರ್ವಾದವಿರಲಿ ಎಂದರು.

ವಿಷ್ಣು ಮಂಚು ಹೇಳಿದ್ದೇನು?

“ಮೊದಲ ದಿನದಿಂದ ಇಲ್ಲಿಯವರೆಗೆ ‘ಕಣ್ಣಪ್ಪ’ ಚಿತ್ರವನ್ನು ಪ್ರತಿಯೊಬ್ಬ ಪ್ರೇಕ್ಷಕ ಕುತೂಹಲದಿಂದಲೇ ನೋಡುತ್ತಿದ್ದಾನೆ. ಸಾಮಾಜಿಕ ಜಾಲತಾಣಗಳಲ್ಲಿ ಸಿನಿಮಾಕ್ಕೆ ಸಿಗುತ್ತಿರುವ ಬೆಂಬಲ ನೋಡಿದ್ದೇನೆ. ಇದೀಗ ಆ ಕನಸು ನಿಮ್ಮೆಲ್ಲರ ಮುಂದೆ ತೆರೆದಿಡುವ ಹಂತಕ್ಕೆ ಬಂದಿದೆ. ಕಣ್ಣಪ್ಪ ಸಿನಿಮಾ ಪಯಣ 2014 -15ರಲ್ಲಿ ಶುರುವಾಗಿತ್ತು. ತಂದೆ ಮೋಹನ್ ಬಾಬು, ವಿನ್ನಿ ಮತ್ತು ಸಹೋದರ ವಿನಯ್ ಅವರ ಪ್ರೋತ್ಸಾಹದಿಂದಾಗಿ ಇದೀಗ ಅದು ಸಿದ್ಧವಾಗುತ್ತಿದೆ”

ಇದನ್ನೂ ಓದಿ: Actor Darshan: ಎಷ್ಟೇ ದಿನ ಆದರೂ ಚಂದ್ರಣ್ಣನ ಶವ ಎತ್ತಲ್ಲ; ಅನು ತಂದೆ ನಿಧನಕ್ಕೆ ಸಂಬಂಧಿಕರ ಕಣ್ಣೀರು

“ಕಣ್ಣಪ್ಪ ಸಿನಿಮಾ ಬರೀ ಇತಿಹಾಸವಲ್ಲ, ಇದು ಎರಡನೇ ಶತಮಾನದ ಚೋಳರ ಕಾಲದ ಕಥೆ ಎಂದು ಶಂಕರಾಚಾರ್ಯರು ಹೇಳಿದ್ದರು. 14 ನೇ ಶತಮಾನದಲ್ಲಿ ಕವಿ ಧೂರ್ಜಟಿ ಈ ಬಗ್ಗೆ ಬರೆದಿದ್ದಾರೆ. 18ನೇ ಶತಮಾನದಲ್ಲಿ ಬ್ರಿಟಿಷರೂ ಇಂಗ್ಲಿಷ್‌ನಲ್ಲಿ ಇದನ್ನು ಉಲ್ಲೇಖಿಸಿದ್ದಾರೆ. ಇದೆಲ್ಲವನ್ನು ಅಧ್ಯಯನ ನಡೆಸಿ ಈ ಸಿನಿಮಾ ಮಾಡಿದ್ದೇವೆ. ಅಷ್ಟೇ ಎಚ್ಚರಿಕೆಯಿಂದ ಈ ಸಿನಿಮಾ ಮಾಡಿದ್ದೇವೆ” ಎಂದರು ವಿಷ್ಣು ಮಂಚು.

ನಿರ್ದೇಶಕ ಮುಕೇಶ್ ಕುಮಾರ್ ಸಿಂಗ್ ಮಾತನಾಡಿ, ʻʻಕಣ್ಣಪ್ಪ ಚಿತ್ರದ ನನ್ನ ಶಕ್ತಿಯೇ ನನ್ನ ಕಲಾವಿದರು. ವಿಷ್ಣು ಅವರ ನಟನೆ ಮತ್ತು ಅವರು ಎದುರಿಸಿದ ಕಷ್ಟಗಳ ಬಗ್ಗೆ ನಾನು ಹೇಳಲಾರೆ. ಕೊರೆಯುವ ಚಳಿಯಲ್ಲೂ ಇಡೀ ತಂಡ ಶ್ರಮಿಸಿದೆ. ವಿಷ್ಣು, ಶರತ್ ಕುಮಾರ್, ಮೋಹನ್ ಬಾಬು ನನ್ನ ನಿರೀಕ್ಷೆಗೂ ಮೀರಿದ ಬೆಂಬಲ ನೀಡಿದ್ದಾರೆʼʼ ಎಂದರು.

ʻಶರತ್ ಕುಮಾರ್ ಮಾತನಾಡಿ ʻʻ, ಕಣ್ಣಪ್ಪ ಕೇವಲ ಸಿನಿಮಾ ಅಲ್ಲ; ಇದು ನಮ್ಮ ಇತಿಹಾಸ. ಪ್ರತಿಯೊಬ್ಬರೂ ತಮ್ಮ ತಮ್ಮ ಪಾತ್ರಗಳನ್ನು ಜೀವಿಸಿದ್ದಾರೆ. ಈಗಲೂ ನಾವು ಆ ಪಾತ್ರಗಳಲ್ಲಿ ಉಳಿದಿದ್ದೇವೆ. ಅಷ್ಟೊಂದು ಅಚ್ಚುಕಟ್ಟಾಗಿ ಸಿನಿಮಾ ಮೂಡಿಬಂದಿದೆ. ಎಲ್ಲರೂ ಇತಿಹಾಸವನ್ನು ಮರೆಯುತ್ತಿದ್ದಾರೆ. ನಾವು ನಮ್ಮ ಇತಿಹಾಸವನ್ನು ಹೇಳಬೇಕು. ಎಲ್ಲರೂ ಕಣ್ಣಪ್ಪನನ್ನು ನೋಡಬೇಕು” ಎಂದು ಹೇಳಿದರು.

ಮಧುಬಾಲಾ ಮಾತನಾಡಿ, “ಕಣ್ಣಪ್ಪನಂಥ ಪ್ರಾಜೆಕ್ಟ್‌ನಲ್ಲಿ ನಟಿಸಲು ನನಗೆ ಸಂತೋಷ ಮತ್ತು ಹೆಮ್ಮೆ ಇದೆ. ನನಗೆ ಇಂತಹ ಒಳ್ಳೆಯ ಅವಕಾಶ ನೀಡಿದ ಮೋಹನ್ ಬಾಬು ಮತ್ತು ವಿಷ್ಣು ಅವರಿಗೆ ಧನ್ಯವಾದಗಳು. ವಿಷ್ಣು ಮಂಚು ಅವರಿಗೆ ಸಿನಿಮಾ ನಿರ್ಮಾಣದಲ್ಲಿ ಸಾಕಷ್ಟು ಜ್ಞಾನವಿದೆ. ವಿಷ್ಣು ಅವರಂತಹವರು ಈ ಸಿನಿಮಾ ಮೂಲಕ ದೊಡ್ಡ ರಿಸ್ಕ್‌ ತೆಗೆದುಕೊಂಡಿದ್ದಾರೆ. ಒಂದು ದೊಡ್ಡ ಯಜ್ಞದಲ್ಲಿ ಪಾಲ್ಗೊಂಡಂತೆ ಭಾಸವಾಯಿತು” ಎಂದಿದ್ದಾರೆ.

 ‘ಕಣ್ಣಪ್ಪ’ ಸಿನಿಮಾವು ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು ಹಲವು ಭಾಷೆಗಳಲ್ಲಿ ಬಿಡುಗಡೆ ಆಗಲಿದೆ. ಕಾಳಹಸ್ತಿಯಲ್ಲಿ ಸಿನಿಮಾದ ಮುಹೂರ್ತ ಮಾಡಲಾಗಿತ್ತು. ತೆಲುಗಿನಲ್ಲೂ ಕೃಷ್ಣಂರಾಜು ‘ಭಕ್ತ ಕಣ್ಣಪ್ಪ’ ಚಿತ್ರದಲ್ಲಿ ನಟಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Kalki 2898 AD: ʼಕಲ್ಕಿ 2898 ADʼ ಚಿತ್ರದ ಭೈರವ ಆಂಥಮ್‌ ರಿಲೀಸ್‌!

Kalki 2898 AD: ಪ್ರಭಾಸ್‌, ಅಮಿತಾಭ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ನಟಿಸಿರುವ ‘ಕಲ್ಕಿ 2898 AD’ ಚಿತ್ರದ ಟ್ರೈಲರ್ ಬಿಡುಗಡೆಯ ಬಳಿಕ ಇದೀಗ ಇದೇ ಚಿತ್ರದ ಭೈರವ ಆಂಥಮ್‌ ಬಿಡುಗಡೆಯಾಗಿದೆ. ವೈಜಯಂತಿ ಮೂವೀಸ್‌ ಯೂಟ್ಯೂಬ್‌ ಚಾನಲ್‌ನಲ್ಲಿ ಹಾಡು ರಿಲೀಸ್‌ ಆಗಿದೆ. ನಟ ಪ್ರಭಾಸ್‌ ನಟಿಸಿರುವ ಈ ಚಿತ್ರದ ಹಾಡಿಗೆ ಮೊದಲ ಸಲ ಪಂಜಾಬಿ ಗಾಯಕ ದಿಲ್ಜಿತ್‌ ದೋಸಾಂಜ್‌ ಧ್ವನಿ ನೀಡಿದ್ದಾರೆ. ಸಂತೋಷ್‌ ನಾರಾಯಣನ್‌ ಈ ಹಾಡಿಗೆ ಸಂಗೀತ ನೀಡಿದ್ದಾರೆ.

VISTARANEWS.COM


on

Kalki 2898 AD Movie Bhairava Anthem Released
Koo

ಬೆಂಗಳೂರು: ಪ್ರಭಾಸ್‌, ಅಮಿತಾಭ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ನಟಿಸಿರುವ ‘ಕಲ್ಕಿ 2898 AD’ ಚಿತ್ರದ ಟ್ರೈಲರ್ ಬಿಡುಗಡೆಯ ಬಳಿಕ ಇದೀಗ ಇದೇ ಚಿತ್ರದ ಭೈರವ ಆಂಥಮ್‌ ಬಿಡುಗಡೆಯಾಗಿದೆ. ವೈಜಯಂತಿ ಮೂವೀಸ್‌ ಯೂಟ್ಯೂಬ್‌ ಚಾನಲ್‌ನಲ್ಲಿ ಹಾಡು ರಿಲೀಸ್‌ ಆಗಿದೆ. ನಟ ಪ್ರಭಾಸ್‌ ನಟಿಸಿರುವ ಈ ಚಿತ್ರದ ಹಾಡಿಗೆ ಮೊದಲ ಸಲ ಪಂಜಾಬಿ ಗಾಯಕ ದಿಲ್ಜಿತ್‌ ದೋಸಾಂಜ್‌ ಧ್ವನಿ ನೀಡಿದ್ದಾರೆ. ಸಂತೋಷ್‌ ನಾರಾಯಣನ್‌ ಈ ಹಾಡಿಗೆ ಸಂಗೀತ ನೀಡಿದ್ದಾರೆ.

ಪಕ್ಕಾ ಮಾಸ್‌ ಅವತಾರದಲ್ಲಿ ನಟ ಪ್ರಭಾಸ್‌ ಈ ಹಾಡಿನಲ್ಲಿ ಎದುರಾಗಿದ್ದಾರೆ. ತಲೆಗೆ ಟರ್ಬನ್‌ ಧರಿಸಿ ಮತ್ತು ಪಂಚೆಯಲ್ಲಿ ಮಿಂಚಿದ್ದಾರೆ. ಈಗಾಗಲೇ ಟ್ರೇಲರ್‌ ಮೂಲಕ ಎಲ್ಲರ ಗಮನ ಸೆಳೆದ ಈ ಸಿನಿಮಾ, ಇದೀಗ ಭೈರವ ಆಂಥಮ್‌ ಮೂಲಕ ಕಿಕ್‌ ಹೆಚ್ಚಿಸುತ್ತಿದೆ. ತೆಲುಗು ಮಾತ್ರವಲ್ಲದೆ ಹಿಂದಿ, ತಮಿಳು, ಮಲಯಾಳಂ, ಕನ್ನಡ ಮತ್ತು ಇಂಗ್ಲಿಷ್ ಸೇರಿದಂತೆ ಬಹು ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆಯಾಗಲಿದೆ.

ಇದನ್ನೂ ಓದಿ: Job Recruitment: ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ 586 ಹುದ್ದೆಗಳಿಗೆ ಅರ್ಜಿ ಆಹ್ವಾನ

ಈ ವರ್ಷದ ಅತೀ ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಲ್ಕಿ 2898 AD’ ಚಿತ್ರದಲ್ಲಿ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ಪ್ರಭಾಸ್,‍ ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್‌ನಡಿ ಅಶ್ವಿನಿ ದತ್‍ ನಿರ್ಮಿಸಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ. ‘ಕಲ್ಕಿ 2898 AD’ ಚಿತ್ರವು ಜಗತ್ತಿನಾದ್ಯಂತ ಜೂನ್‍ 27ರಂದು ಬಿಡುಗಡೆ ಆಗಲಿದೆ.

Continue Reading

Latest

Actress Nayanathara: ‘ಬಾಹುಬಲಿ’ ಸಿನಿಮಾ ದೃಶ್ಯದ ಮರುಸೃಷ್ಟಿಯಲ್ಲಿ ವಿಘ್ನೇಶ್ ಶಿವನ್ ಪುತ್ರರು!

Actress Nayanathara: ಬಾಹುಬಲಿ…. ಈ ಸಿನಿಮಾದ ಹೆಸರು ಕೇಳುತ್ತಲೇ ಮೈ ನವಿರೇಳುತ್ತದೆ. ಜನಮಾನಸದಲ್ಲಿ ಹಾಸುಹೊಕ್ಕಾಗಿರುವ ಸಿನಿಮಾವಿದು. ದಕ್ಷಿಣ ಭಾರತದ ಹಿಟ್ ಚಲನಚಿತ್ರಗಳಲ್ಲಿ ಒಂದಾದ ಬಾಹುಬಲಿ ಚಿತ್ರ ಜನರ ಮೆಚ್ಚುಗೆಯನ್ನು ಪಡೆದ ಸೂಪರ್ ಹಿಟ್ ಚಿತ್ರವಾಗಿತ್ತು. ಅದರ ಒಂದೊಂದು ದೃಶ್ಯವು ಅಮೋಘವಾಗಿ ಮೂಡಿಬಂದಿತ್ತು. ಈ ಸೂಪರ್ ಹಿಟ್ ಚಿತ್ರದ ದೃಶ್ಯವೊಂದನ್ನು ನಯನತಾರಾ ಹಾಗೂ ವಿಘ್ನೇಶ್ ಪುತ್ರರು ಮರುಸೃಷ್ಟಿ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದ ಫೋಟೊವನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುವ ಮೂಲಕ ನಟಿ ನಯನತಾರಾ ವಿಘ್ನೇಶ್ ಶಿವನ್ ಅವರಿಗೆ ತಂದೆಯ ದಿನದ ಶುಭಾಶಯ ತಿಳಿಸಿದ್ದಾರೆ.

VISTARANEWS.COM


on

Actress Nayanathara
Koo

ಬೆಂಗಳೂರು: ಕಾಲಿವುಡ್ ನಟಿ ನಯನತಾರಾ(Actress Nayanathara) ಹಾಗೂ ನಿರ್ಮಾಪಕ ವಿಘ್ನೇಶ್ ದಂಪತಿ ಉಯಿರ್ ಮತ್ತು ಉಲಗ್ ಎಂಬ ಅವಳಿ ಮಕ್ಕಳನ್ನು ಹೊಂದಿರುವ ವಿಚಾರ ಎಲ್ಲರಿಗೂ ತಿಳಿದಿದೆ. ಈ ದಂಪತಿ ಇತ್ತೀಚಿಗೆ ತಮ್ಮ ಮುದ್ದಿನ ಮಕ್ಕಳೊಂದಿಗೆ ಖುಷಿ ಖುಷಿಯಾಗಿ ಸಮಯವನ್ನು ಕಳೆಯುತ್ತಿದ್ದಾರೆ. ಈ ನಡುವೆ ಈ ದಂಪತಿ ಸೂಪರ್ ಹಿಟ್ ಸಿನಿಮಾವೊಂದರ ದೃಶ್ಯವನ್ನು ತಮ್ಮ ಮಕ್ಕಳ ಮೂಲಕ ಮರು ಸೃಷ್ಟಿ ಮಾಡಿದ್ದಾರೆ.

ದಕ್ಷಿಣ ಭಾರತದ ಹಿಟ್ ಚಲನಚಿತ್ರಗಳಲ್ಲಿ ಒಂದಾದ ಬಾಹುಬಲಿ ಚಿತ್ರ ಜನರ ಮೆಚ್ಚುಗೆಯನ್ನು ಪಡೆದ ಸೂಪರ್ ಹಿಟ್ ಚಿತ್ರವಾಗಿತ್ತು. ಅದರ ಒಂದೊಂದು ದೃಶ್ಯವು ಅಮೋಘವಾಗಿ ಮೂಡಿಬಂದಿತ್ತು. ಹಾಗಾಗಿ ಅದು ಹೆಚ್ಚಿನ ಪ್ರೇಕ್ಷಕರನ್ನು ಆಕರ್ಷಿಸಿತ್ತು. ಇಂತಹ ಸೂಪರ್ ಹಿಟ್ ಚಿತ್ರ ದೃಶ್ಯವೊಂದನ್ನು ನಯನತಾರಾ ಹಾಗೂ ವಿಘ್ನೇಶ್ ಪುತ್ರರು ಮರುಸೃಷ್ಟಿ ಮಾಡಿದ್ದಾರೆ.

ಈ ಚಿತ್ರದಲ್ಲಿ ರಮ್ಯಕೃಷ್ಣರವರು ಶಿವಗಾಮಿ ಪಾತ್ರದಲ್ಲಿ ನೀರಿನಲ್ಲಿ ಮುಳುಗುತ್ತಿರುವಾಗ ಬಾಹುಬಲಿಯನ್ನು ಕೈಯಲ್ಲಿ ಎತ್ತಿ ಹಿಡಿದಿರುವ ದೃಶ್ಯ ಇಂದಿಗೂ ಎಲ್ಲರ ಮನದಲ್ಲಿ ನೆಲೆಯೂರಿದೆ. ಅಂತಹ ದೃಶ್ಯವನ್ನು ಇದೀಗ ವಿಘ್ನೇಶ್‌ ಅವರು ಮರುಸೃಷ್ಟಿ ಮಾಡಿದ್ದಾರೆ. ತಮ್ಮ ಮಕ್ಕಳಿಗೆ ಬಾಹುಬಲಿ ಸಾಂಪ್ರದಾಯಿಕ ಉಡುಗೆಯನ್ನು ತೊಡಿಸಿ, ವಿಘ್ನೇಶ್ ಅವರು ನೀರಿನಲ್ಲಿ ಮುಳುಗಿಕೊಂಡು ತಮ್ಮ ಮಕ್ಕಳನ್ನು ಕೈಯಲ್ಲಿ ಎತ್ತಿ ಹಿಡಿದಿದ್ದಾರೆ. ಹಾಗೇ ಇದಕ್ಕೆ ಸಂಬಂಧಿಸಿದ ಫೋಟೊವನ್ನು ನಯನತಾರಾ ಅವರು ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡು “My dear Baahubali 1&2 cos of U 2. It’s a Happy Father’s Day. Life with U boys sooo sooo amazingly satisfying. Love you my uyir & ulag @nayanathara(sic)” ಎಂಬ ಶೀರ್ಷಿಕೆ ನೀಡಿದ್ದಾರೆ.

ನಯನತಾರಾ ಈ ಫೋಟೊವನ್ನು ಹಂಚಿಕೊಳ್ಳುವ ಮೂಲಕ ವಿಘ್ನೇಶ್ ಶಿವನ್ ಅವರಿಗೆ ತಂದೆಯ ದಿನದ ಶುಭಾಶಯ ತಿಳಿಸಿದ್ದಾರೆ. ಹಾಗೇ ಮಕ್ಕಳ ಆಗಮನದಿಂದ ಅವರ ಜೀವನ ಎಷ್ಟು ತೃಪ್ತಿಕರವಾಗಿದೆ ಎಂಬುದನ್ನು ವಿವರಿಸಿದ್ದಾರೆ.
ನಯನತಾರಾ ಹಾಗೂ ವಿಘ್ನೇಶ್ ತಮ್ಮ ಅವಳಿ ಗಂಡುಮಕ್ಕಳಾದ ಉಯಿರ್ ಮತ್ತು ಉಲಗ್ ಅವರನ್ನು ಅಕ್ಟೋಬರ್ 2022ರಲ್ಲಿ ಬಾಡಿಗೆ ತಾಯ್ತನದ ಮೂಲಕ ಸ್ವಾಗತಿಸಿದರು. ಅಂದಿನಿಂದ ಅವರು ತಮ್ಮ ಮುದ್ದಾದ ಮಕ್ಕಳೊಂದಿಗಿನ ಫೋಟೊಗಳು ಮತ್ತು ವಿಡಿಯೊಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇತ್ತೀಚಿಗೆ ಅವರು ತಮ್ಮ ಮಕ್ಕಳೊಂದಿಗೆ ಮೋಜು ಮಸ್ತಿ ಮಾಡಲು ಹಾಂಗ್‌ಕಾಂಗ್‌ಗೆ ಹೋಗಿದ್ದರು.

ಇದನ್ನೂ ಓದಿ: Viral Video: ನಾಯಿ ಜತೆ ವಾಕಿಂಗ್ ನೋಡಿರುತ್ತೀರಿ, ಹುಲಿ ಜತೆ? ಈ ವಿಡಿಯೊ ನೋಡಿ!

ಪ್ರಸ್ತುತ ನಯನತಾರಾ ಅವರು ನಿವಿನ್ ಪೌಲಿ ಅವರೊಂದಿಗೆ ‘ಡಿಯರ್ ಸ್ಟೂಡೆಂಟ್ಸ್’ ಚಿತ್ರದ ಚಿತ್ರೀಕರಣದಲ್ಲಿದ್ದಾರೆ. ಹಾಗೇ ಟೆಸ್ಟ್’ ಮತ್ತು ‘ಮನ್ನಂಗಟ್ಟಿ 1960’ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ನಿರ್ಮಾಪಕ, ನಿರ್ದೇಶಕ ವಿಘ್ನೇಶ್ ಅವರು ಪ್ರದೀಪ್ ರಂಗನಾಥನ್, ಕೃತಿ ಶೆಟ್ಟಿ ಮತ್ತು ಎಸ್.ಜೆ ಸೂರ್ಯ ಅಭಿನಯದ ‘ಲವ್ ಇನ್ಶೂರೆನ್ಸ್ ಕಾರ್ಪೊರೇಷನ್’ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ.

Continue Reading

ಟಾಲಿವುಡ್

Ram Pothineni: ರಾಮ್ ಪೋತಿನೇನಿ ಅಭಿನಯದ ʻಡಬಲ್ ಇಸ್ಮಾರ್ಟ್ʼ ಬಿಡುಗಡೆಗೆ‌ ಮುಹೂರ್ತ ಫಿಕ್ಸ್!

Ram Pothineni: ಈ‌ ಮೊದಲ ಬಂದ ಈ ಚಿತ್ರದ ಮೊದಲ ಸರಣಿ ಸಿನಿಮಾ 2019 ರಲ್ಲಿ ರಿಲೀಸ್ ಆಗಿತ್ತು. ಇದರಲ್ಲಿ ಕನ್ನಡತಿ ನಭಾ ನಟೇಶ್ ಅಭಿನಯಿಸಿದ್ದರು. ಆಗ ಈ ಸಿನಿಮಾ ಕರ್ಮಷಿಯಲಿ ಸಕ್ಸಸ್ ಆಗಿತ್ತು. ಆದರೆ ಈ ಸಿನಿಮಾ ಬಂದು 5 ವರ್ಷದ ಬಳಿಕ ಪಾರ್ಟ್-2 ಡಬಲ್ ಇಸ್ಮಾರ್ಟ್ ಸಿನಿಮಾ ಬರ್ತಿದೆ.

VISTARANEWS.COM


on

Double iSmart to release on August 15
Koo

ಬೆಂಗಳೂರು: ನಿರ್ದೇಶಕ ಪುರಿ ಜಗನ್ನಾಥ್ ಹಾಗೂ ನಟ ರಾಮ್ ಪೋತಿನೇನಿ (Ram Pothineni) ಕಾಂಬಿನೇಷನ್ ಮೇಲೆ ಸಿನಿಪ್ರಿಯರಿಗೆ ಭಾರಿ ನಿರೀಕ್ಷೆ ಇದೆ. ಪ್ರೇಕ್ಷಕರ ನಿರೀಕ್ಷೆಗೆ ತಕ್ಕಂತೆಯೇ ‘ಡಬಲ್ ಇಸ್ಮಾರ್ಟ್’ ಚಿತ್ರದ ಟೀಸರ್​ ಮೂಡಿಬಂದಿದೆ. ಇದೀಗ ಈ ಚಿತ್ರದ ಬಿಡುಗಡೆ ದಿನಾಂಕ‌ ನಿಗದಿಯಾಗಿದೆ. ಆಗಸ್ಟ್ 15ಕ್ಕೆ ಡಬಲ್ ಇಸ್ಮಾರ್ಟ್ ಚಿತ್ರ ತೆರೆಗೆ ಬರಲಿದೆ.

ಸೌತ್​ ಸಿನಿಮಾಗಳಲ್ಲಿ ಖಳನಾಗಿ ಅಬ್ಬರಿಸುತ್ತಿರುವ ಸಂಜಯ್ ದತ್ ಅವರು ‘ಡಬಲ್​ ಇಸ್ಮಾರ್ಟ್​’ ಚಿತ್ರದಲ್ಲೂ ವಿಲನ್​ ಆಗಿ ಅಭಿನಯಿಸಿದ್ದಾರೆ. ನಾಯಕಿಯಾಗಿ ಕಾವ್ಯಾ ಥಾಪರ್ ನಟಿಸಿದ್ದಾರೆ.

ತೆಲುಗು ಮಾತ್ರವಲ್ಲದೇ ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ‘ಡಬಲ್​ ಇಸ್ಮಾರ್ಟ್​’ ಸಿನಿಮಾ ಬಿಡುಗಡೆ ಆಗಲಿದೆ. ಮಣಿ ಶರ್ಮಾ ಅವರು ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ‘ಪುರಿ ಕನೆಕ್ಟ್ಸ್​’ ಬ್ಯಾನರ್ ಮೂಲಕ ಪುರಿ ಜಗನ್ನಾಥ್, ಚಾರ್ಮಿ ಕೌರ್ ಅವರು ಈ ಸಿನಿಮಾವನ್ನು ನಿರ್ಮಿಸಿದ್ದಾರೆ.

ಈ‌ ಮೊದಲ ಬಂದ ಈ ಚಿತ್ರದ ಮೊದಲ ಸರಣಿ ಸಿನಿಮಾ 2019 ರಲ್ಲಿ ರಿಲೀಸ್ ಆಗಿತ್ತು. ಇದರಲ್ಲಿ ಕನ್ನಡತಿ ನಭಾ ನಟೇಶ್ ಅಭಿನಯಿಸಿದ್ದರು. ಆಗ ಈ ಸಿನಿಮಾ ಕರ್ಮಷಿಯಲಿ ಸಕ್ಸಸ್ ಆಗಿತ್ತು. ಆದರೆ ಈ ಸಿನಿಮಾ ಬಂದು 5 ವರ್ಷದ ಬಳಿಕ ಪಾರ್ಟ್-2 ಡಬಲ್ ಇಸ್ಮಾರ್ಟ್ ಸಿನಿಮಾ ಬರ್ತಿದೆ. ಟಾಲಿವುಡ್‌ನಲ್ಲಿ ಈಗಲೇ ಒಂದು ನಿರೀಕ್ಷೆಯನ್ನು ಕೂಡ ಹುಟ್ಟುಹಾಕಿದೆ ಅಂತ ಹೇಳಬಹುದು.

ಇದನ್ನೂ ಓದಿ: Ram Pothineni: ಡೈನಾಮಿಕ್ ಸ್ಟಾರ್ ರಾಮ್‌ – ಸಂಜಯ್ ದತ್ ಭರ್ಜರಿ ಜುಗಲ್ಬಂದಿ: `ಡಬಲ್ ಇಸ್ಮಾರ್ಟ್‘ ಟೀಸರ್‌ ಔಟ್‌!

ಕಾವ್ಯಾ ಥಾಪರ್ ನಾಯಕಿಯಾಗಿ ನಟಿಸಿದ್ದು, ಸಂಜಯ್ ದತ್ ಖಳನಾಯಕನಾಗಿ ತೊಡೆ ತಟ್ಟಿದ್ದಾರೆ. ತೆಲುಗು, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಚಿತ್ರ ಮೂಡಿ ಬರುತ್ತಿದೆ. ಮಣಿ ಶರ್ಮಾ ಸಂಗೀತ ಚಿತ್ರಕ್ಕಿದೆ. ಕ್ರೇಜಿ ಪ್ಯಾನ್ ಇಂಡಿಯನ್ ಪ್ರಾಜೆಕ್ಟ್ ಡಬಲ್ ಇಸ್ಮಾರ್ಟ್ ಸಿನಿಮಾವನ್ನು ಪುರಿ ಕನೆಕ್ಟ್ ಬ್ಯಾನರ್ ನಡಿ ಪೂರಿ ಜಗನ್ನಾಥ್, ಚಾರ್ಮಿ ಕೌರ್ ನಿರ್ಮಾಣದಲ್ಲಿ ಚಿತ್ರ ಅದ್ಧೂರಿಯಾಗಿ ಮೂಡಿಬರುತ್ತಿದೆ.

Continue Reading

Latest

Akira Nandan: ಅಕಿರಾ ನಂದನ್‌; ಆರೂವರೆ ಅಡಿ ಎತ್ತರದ ಪವನ್ ಕಲ್ಯಾಣ್ ಪುತ್ರನಿಗೆ ಭಾರಿ ಡಿಮ್ಯಾಂಡ್‌!

Akira Nandan: ಪವನ್ ಕಲ್ಯಾಣ್ ಪುತ್ರ ಅಕಿರಾ ನಂದನ್ ಇಂಟರ್ನೆಟ್ ನಲ್ಲಿ ಭಾರೀ ಸಂಚಲನ ಮೂಡಿಸಿದ್ದಾನೆ. ಅಕಿರಾ ನಂದನ್ ಯಾರು ಎನ್ನುವುದರ ಕುರಿತು ಜನರು ಸಿಕ್ಕಾಪಟ್ಟೆ ಹುಡುಕುತ್ತಿದ್ದಾರೆ. ಪವನ್ ಕಲ್ಯಾಣ್ ಹಾಗೂ ರೇಣು ದೇಸಾಯಿ ಪುತ್ರನಾದ ಅಕಿರಾ ನಂದನ್‌ಗೆ ಕ್ರಿಕೆಟ್, ಡ್ಯಾನ್ಸ್ ಬಗ್ಗೆ ವಿಪರೀತವಾದ ಒಲವಿದೆಯಂತೆ. ಹಾಗೇ ಪಿಯಾನೋ ಕೂಡ ಇವನ ಇಷ್ಟದ ಪಟ್ಟಿಯಲ್ಲಿದೆ. ವಿಧಾನ ಸಭಾ ಚುನಾವಣೆಯಲ್ಲಿ ಗೆಲುವಿನ ನಗೆ ಬೀರಿದ ಪವನ್ ಕಲ್ಯಾಣ್ ತಮ್ಮ ಮಗ ಅಕಿರಾ ನಂದನ್ ಹಾಗೂ ತನ್ನ ಮೂರನೇ ಪತ್ನಿ ಅನ್ನಾ ಲೆಜ್ನೋವಾ ಅವರೊಂದಿಗೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.

VISTARANEWS.COM


on

Pawan Kalyan
Koo

ಹೈದರಾಬಾದ್ : ಖ್ಯಾತ ಟಾಲಿವುಡ್ ನಟ ಪವನ್ ಕಲ್ಯಾಣ್ (Akira Nandan) ಅವರು ಸಿನಿಮಾ ರಂಗದಲ್ಲಿ ಹೆಸರು ಮಾಡಿ ನಂತರ ರಾಜಕೀಯಕ್ಕೆ ಕಾಲಿಟ್ಟಿದ್ದಾರೆ. ಇದೀಗ ಅವರು 2024ರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ತಮ್ಮ ಆಡಳಿತವನ್ನು ಕೈಗೆ ತೆಗೆದುಕೊಂಡಿದ್ದಾರೆ. ಚುನಾವಣೆಯ ನಂತರ ಅವರು ತಮ್ಮ ಹಿರಿಯ ಪುತ್ರ ಅಕಿರಾ ನಂದನ್ ಜೊತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ್ದಾರೆ. ಹಾಗಾಗಿ ಇದೀಗ ಅಕಿರಾ ನಂದನ್ ಇಂಟರ್‌ನೆಟ್ ನಲ್ಲಿ ಭಾರೀ ಸಂಚಲನ ಮೂಡಿಸಿದ್ದಾನೆ. ಅವನು ಯಾರು ಎನ್ನುವುದರ ಬಗ್ಗೆ ಜನರು ಹುಡುಕಾಟ ಮಾಡುತ್ತಿದ್ದಾರೆ, ಹಾಗಾಗಿ ಅಕಿರಾ ನಂದನ್ ಬಗ್ಗೆ ಇಲ್ಲಿದೆ ಮಾಹಿತಿ.

ಅಕಿರಾ ನಂದನ್, ಪವನ್ ಕಲ್ಯಾಣ್ ಅವರ ಮೊದಲ ಪುತ್ರ. ಅಕಿರಾ ನಂದನ್ ಏಪ್ರಿಲ್ 8, 2004ರಲ್ಲಿ ಪವನ್ ಕಲ್ಯಾಣ್ ಮತ್ತು ಅವರ ಮಾಜಿ ಪತ್ನಿ ರೇಣು ದೇಸಾಯಿ ದಂಪತಿಯ ಪುತ್ರನಾಗಿ ಜನಿಸಿದ್ದ. ಅವನಿಗೆ ಆಧ್ಯಾ ಕೊನಿಡೆಲಾ ಎಂಬ ತಂಗಿಯೂ ಇದ್ದಾಳೆ. ಇನ್ನು ಅಕಿರಾ ನಂದನ್ ಬಣ್ಣದ ಲೋಕದಲ್ಲೂ ಕಾಣಿಸಿಕೊಂಡಿದ್ದಾನೆ. ತನ್ನ ತಾಯಿ ನಿರ್ದೇಶನದ ‘ಇಷ್ಕ್ ವಾಲಾ ಲವ್’ (2014) ಚಿತ್ರದಲ್ಲಿ ನಟಿಸಿದ್ದ. ಆತ ನಟನೆಯಲ್ಲಿ ಮುಂದುವರಿಯುತ್ತಾನೆ ಎಂಬ ಊಹಾಪೋಹಗಳು ಕೇಳಿ ಬಂದ ಕಾರಣ ತಾಯಿ ರೇಣು ದೇಸಾಯಿ ತಮ್ಮ ಮಗನಿಗೆ ಈಗ ನಟನೆಯಲ್ಲಿ ಆಸಕ್ತಿ ಇಲ್ಲ ಎಂದು ತಿಳಿಸಿದ್ದಾರೆ.

ಅಕಿರಾಗೆ ಕ್ರಿಕೆಟ್‌, ಡ್ಯಾನ್ಸ್ ಬಗ್ಗೆ ವಿಪರೀತವಾದ ಒಲವಿದೆಯಂತೆ. ಹಾಗೆಯೇ ಪಿಯಾನೋ ಕೂಡ ಇವನ ಇಷ್ಟದ ಪಟ್ಟಿಯಲ್ಲಿದೆ. ಹಾಗಾಗಿ ಅಕಿರಾ ಮುಂದೆ ಯಾವುದರಲ್ಲಿ ತನ್ನನ್ನು ತೊಡಗಿಸಿಕೊಳ್ಳುತ್ತಾನೆ ಎಂಬುದನ್ನು ನೋಡಬೇಕಿದೆ.
ಅಕಿರಾ ನಂದನ್ ಆಗಾಗ ತಂದೆ ಪವನ್ ಕಲ್ಯಾಣ ಜೊತೆ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿದ್ದು, ವಿಧಾನ ಸಭಾ ಚುನಾವಣೆಯಲ್ಲಿ ಪವನ್ ಕಲ್ಯಾಣ್ ಅವರ ಐತಿಹಾಸಿಕ ಗೆಲುವಿನ ನಂತರ ಅವರು ತಮ್ಮ ಮಗ ಅಕಿರಾ ನಂದನ್ ಹಾಗೂ ತನ್ನ ಮೂರನೇ ಪತ್ನಿ ಅನ್ನಾ ಲೆಜ್ನೋವಾ ಅವರೊಂದಿಗೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲು ಇತ್ತೀಚೆಗೆ ನವದೆಹಲಿಗೆ ತೆರಳಿದ್ದರು. ಅಂದ ಹಾಗೆ ಅಕಿರಾ ನಂದನ್‌ 6 ಅಡಿ 4 ಇಂಚು ಎತ್ತರ ಇದ್ದಾನೆ.

ಇದನ್ನೂ ಓದಿ: Baby Death: ಆಟವಾಡುತ್ತ 7ನೇ ಮಹಡಿ ಬಾಲ್ಕನಿಯಿಂದ ಕೆಳಗೆ ಬಿದ್ದ ಮಗು; ವಿಡಿಯೊ ಇದೆ

ಪವನ್ ಕಲ್ಯಾಣ್ ಅವರ ಮಾಜಿ ಪತ್ನಿ, ಅಕಿರಾ ನಂದನ್ ತಾಯಿ ರೇಣು ದೇಸಾಯಿ ಇತ್ತೀಚೆಗೆ ತಮ್ಮ ಎರಡನೇ ಮದುವೆ ಬಗ್ಗೆ ಪ್ರಸ್ತಾಪ ಮಾಡಿದ್ದರು. ತಾವು ಎರಡನೇ ಮದುವೆಯಾಗುವ ಬಗ್ಗೆ ಸಂದರ್ಶನವೊಂದರಲ್ಲಿ ಸ್ಪಷ್ಟನೆ ನೀಡಿದ್ದರು. ಇಷ್ಟು ವರ್ಷಗಳ ಕಾಲ ಮಕ್ಕಳ ಆರೈಕೆಗಾಗಿ ಮದುವೆಯಾಗಿಲ್ಲ. ಈಗ ಮಕ್ಕಳು ಬೆಳೆದು ದೊಡ್ಡವರಾದ ಕಾರಣ ತಾನು ಎರಡನೇ ಮದುವೆ ಮಾಡಿಕೊಳ್ಳುವುದಾಗಿ ಬಹಿರಂಗಪಡಿಸಿದ್ದರು. ಇದಕ್ಕೆ ತಮ್ಮ ಮಕ್ಕಳ ಒಪ್ಪಿಗೆ ಕೂಡ ಇದೆ ಎಂಬುದಾಗಿ ತಿಳಿಸಿದ್ದರು.

Continue Reading
Advertisement
Woman having headache. stressed, Migraine, World Brain Tumor day
ಆರೋಗ್ಯ5 mins ago

Migraine Problem: ಮೈಗ್ರೇನ್‌ ಉಪಶಮನಕ್ಕೆ ರೋಸ್‌ಮೆರಿ ಸುಗಂಧ ತೈಲ ಮದ್ದು!

Indian Women
ವಿದೇಶ19 mins ago

ಭಾರತದಿಂದ ಅಮೆರಿಕಕ್ಕೆ ತೆರಳಿ, 29 ವರ್ಷದ ಯುವತಿಯನ್ನು ಕೊಂದ ಪಂಜಾಬ್‌ ವ್ಯಕ್ತಿ; ಇಷ್ಟೇಕೆ ಸೇಡು?

Pavithra Gowda
ಪ್ರಮುಖ ಸುದ್ದಿ21 mins ago

Pavithra Gowda: ಪೊಲೀಸ್ ಕಸ್ಟಡಿಯಲ್ಲಿದ್ದ ಪವಿತ್ರಾ ಗೌಡ ಅಸ್ವಸ್ಥ; ಆಸ್ಪತ್ರೆಗೆ ಶಿಫ್ಟ್‌

International Yoga Day 2024
ಫ್ಯಾಷನ್36 mins ago

International Yoga Day 2024: ಯುವತಿಯರ ಯೋಗಾಭ್ಯಾಸಕ್ಕೆ ಸಾಥ್‌ ನೀಡುವ 3 ಶೈಲಿಯ ಫ್ಯಾಷನ್‌ವೇರ್ಸ್

wild animals Attack
ಕೊಡಗು41 mins ago

Wild Animals Attack : ಮನೆಯಂಗಳವನ್ನು ಧ್ವಂಸ ಮಾಡಿದ ಆನೆಗಳು; ಗ್ರಾಮಕ್ಕೆ ಓಡೋಡಿ ಬಂದ ಕರಡಿ

Viral Video
ಕ್ರಿಕೆಟ್55 mins ago

Viral Video: ಅಭಿಮಾನಿ ಮೇಲೆ ಹಲ್ಲೆಗೆ ಯತ್ನಿಸಿದ ಪಾಕ್​ ವೇಗಿ; ತಡೆದು ನಿಲ್ಲಿಸಿದ ಪತ್ನಿ

Kempegowda Jayanti
ಕರ್ನಾಟಕ1 hour ago

Kempegowda Jayanti: ಬೆಂಗಳೂರಲ್ಲಿ ಜೂನ್ 27ಕ್ಕೆ ಕೆಂಪೇಗೌಡ ಜಯಂತಿ: ಡಿಸಿಎಂ ಡಿ.ಕೆ.ಶಿವಕುಮಾರ್‌

Train Accident
ದೇಶ1 hour ago

Train Accident: ಸಿಬ್ಬಂದಿ ನಿರ್ಲಕ್ಷ್ಯ, ಸಿಗ್ನಲ್‌ ದೋಷ; ಬಂಗಾಳ ರೈಲು ಅಪಘಾತಕ್ಕೇನು ಕಾರಣ?

Mumbai News
ದೇಶ2 hours ago

‘ಯಾಕ್‌ ಹೀಗ್‌ ಮೋಸ ಮಾಡ್ದೆ’ ಎನ್ನುತ್ತಲೇ ಪ್ರೇಯಸಿಯನ್ನು ನಡು ರಸ್ತೆಯಲ್ಲಿ ಬಡಿದು ಕೊಂದ ಪ್ರೇಮಿ; Video ಇದೆ

prajwal revanna case test
ಪ್ರಮುಖ ಸುದ್ದಿ2 hours ago

Prajwal Revanna Case: ʼಮತ್ತೆ ಮತ್ತೆ ಅದನ್ನು ತೋರಿಸೋಕೆ ಮುಜುಗರ….ʼ ಜಡ್ಜ್‌ ಮುಂದೆ ಅಲವತ್ತುಕೊಂಡ ಪ್ರಜ್ವಲ್!‌

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು1 day ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 day ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ3 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ4 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ4 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌