Kannappa Movie: ಕಣ್ಣಪ್ಪ ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಮೋಹನ್‌ ಬಾಬು ಮೊಮ್ಮಗ ಅವ್ರಾಮ್ ಮಂಚು - Vistara News

ಟಾಲಿವುಡ್

Kannappa Movie: ಕಣ್ಣಪ್ಪ ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಮೋಹನ್‌ ಬಾಬು ಮೊಮ್ಮಗ ಅವ್ರಾಮ್ ಮಂಚು

ಕಣ್ಣಪ್ಪ ಚಿತ್ರದ ನಾಯಕ ವಿಷ್ಣು ಮಂಚು ಅವರ ಮಗ ಮತ್ತು ಮೋಹನ್ ಬಾಬು ಅವರ ಮೊಮ್ಮಗ ಅವ್ರಾಮ್ ಮಂಚು ಇದೀಗ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡುತ್ತಿದ್ದಾನೆ. ಈ ಮೂಲಕ ಮೋಹನ್‌ ಬಾಬು ಕುಟುಂಬದ ಮೂರನೇ ತಲೆಮಾರು ಟಾಲಿವುಡ್‌ ಅಂಗಳಕ್ಕೆ ಕಾಲಿಡುತ್ತಿದೆ. ಅದೂ ಅಪ್ಪನ ಸಿನಿಮಾದಲ್ಲಿ ಎಂಬುದು ವಿಶೇಷ. ಕಣ್ಣಪ್ಪ ಚಿತ್ರದಲ್ಲಿ (Kannappa movie) ನಾಯಕನ ಬಾಲ ಪಾತ್ರಧಾರಿಯಾಗಿ ಅವ್ರಾಮ್‌ ಕಾಣಿಸಿಕೊಳ್ಳಲಿದ್ದಾನೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Kannappa movie
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಣ್ಣಪ್ಪ ಸಿನಿಮಾದಿಂದ ಹೊಸ ಅಪ್‌ಡೇಟ್‌ ಬಂದಿದೆ. ಕಣ್ಣಪ್ಪ ಚಿತ್ರದ ನಾಯಕ ವಿಷ್ಣು ಮಂಚು ಅವರ ಮಗ ಮತ್ತು ಮೋಹನ್ ಬಾಬು ಅವರ ಮೊಮ್ಮಗ ಅವ್ರಾಮ್ ಮಂಚು ಇದೀಗ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಈ ಮೂಲಕ ಮೋಹನ್‌ ಬಾಬು ಕುಟುಂಬದ ಮೂರನೇ ತಲೆಮಾರು ಟಾಲಿವುಡ್‌ ಅಂಗಳಕ್ಕೆ ಕಾಲಿಡುತ್ತಿದೆ. ಅದೂ ಅಪ್ಪನ ಸಿನಿಮಾದಲ್ಲಿ ಎಂಬುದು ವಿಶೇಷ. ಕಣ್ಣಪ್ಪ ಚಿತ್ರದಲ್ಲಿ (Kannappa Movie) ನಾಯಕನ ಬಾಲ ಪಾತ್ರಧಾರಿಯಾಗಿ ಅವ್ರಾಮ್‌ ಕಾಣಿಸಿಕೊಳ್ಳಲಿದ್ದಾನೆ.

ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಚಿತ್ರತಂಡ ಕಣ್ಣಪ್ಪ ಚಿತ್ರದಿಂದ ಅವ್ರಾಮ್‌ ಮಂಚುವಿನ ಫಸ್ಟ್‌ ಲುಕ್‌ ಬಿಡುಗಡೆ ಮಾಡಿದೆ . ಅಪ್ಪ ವಿಷ್ಣು ಮಂಚು ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಂಡು, ಹ್ಯಾಪಿ ಜನ್ಮಾಷ್ಟಮಿ, ಕಣ್ಣಪ್ಪ ಚಿತ್ರದ ಮೂಲಕ ನನ್ನ ಮಗನನ್ನು ಲಾಂಚ್‌ ಮಾಡುತ್ತಿರುವುದಕ್ಕೆ ಹೆಮ್ಮೆ ಎನಿಸುತ್ತಿದೆ ಎಂದು ಫಸ್ಟ್‌ ಲುಕ್‌ ಸಮೇತ ಪೋಸ್ಟ್‌ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Bengaluru Power Cut: ಆ.28 ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ಮುಖೇಶ್‌ ಕುಮಾರ್‌ ಸಿಂಗ್‌ ನಿರ್ದೇಶನದ ಈ ಚಿತ್ರದಲ್ಲಿ ಮೋಹನ್‌ಲಾಲ್, ಪ್ರಭಾಸ್, ಅಕ್ಷಯ್ ಕುಮಾರ್, ಮೋಹನ್ ಬಾಬು, ಶರತ್‌ಕುಮಾರ್, ಬ್ರಹ್ಮಾನಂದಂ ಮತ್ತು ಕಾಜಲ್ ಅಗರ್ವಾಲ್ ಸೇರಿದಂತೆ ದೊಡ್ಡ ತಾರಾಗಣವಿದೆ. 24 ಫ್ರೇಮ್ಸ್ ಫ್ಯಾಕ್ಟರಿ ಮತ್ತು ಎವಿಎ ಎಂಟರ್‌ಟೈನ್‌ಮೆಂಟ್ ಬ್ಯಾನರ್‌ನಲ್ಲಿ ಕಣ್ಣಪ್ಪ ಸಿನಿಮಾವನ್ನು ನಿರ್ಮಾಣ ಮಾಡಲಾಗುತ್ತಿದೆ. ಬಿಗ್‌ಬಜೆಟ್‌ನ ಈ ಸಿನಿಮಾದ ಬಹುಪಾಲು ಚಿತ್ರೀಕರಣವನ್ನು ನ್ಯೂಜಿಲೆಂಡ್‌ನಲ್ಲಿ ಶೂಟ್‌ ಮಾಡಲಾಗಿದೆ.

ಇದನ್ನೂ ಓದಿ: Uttarkashi Tour: ಪ್ರವಾಸ ಪ್ರಿಯರಿಗೆ ಸ್ವರ್ಗ ಉತ್ತರಕಾಶಿಗೆ ಹೋಗಲು ಉತ್ತಮ ಸಮಯ ಯಾವುದು?

ಈ ಕುರಿತು ಮಾತನಾಡಿದ ವಿಷ್ಣು, “ಬಾಲ ಕಣ್ಣಪ್ಪನಾಗಿ ಅವ್ರಾಮ್ ಹೆಜ್ಜೆ ಹಾಕುವುದನ್ನು ನೋಡುವುದು ನನಗೆ ಭಾವನಾತ್ಮಕ ಅನುಭವವಾಗಿದೆ. ಈ ಚಿತ್ರವು ನಮ್ಮ ಕುಟುಂಬದಲ್ಲಿ ತಲೆಮಾರುಗಳ ಕನಸಾಗಿದೆ. ಅದರಲ್ಲೂ ಈ ಚಿತ್ರದ ಮೂಲಕ ಅವ್ರಾಮ್ ಅವರನ್ನು ಜಗತ್ತಿಗೆ ಪರಿಚಯಿಸಲು ನನಗೆ ಹೆಮ್ಮೆ ಇದೆ. ಅಪ್ರತಿಮ ಪಾತ್ರ. ಪರದೆಯ ಮೇಲೆ ಅವನ ಮ್ಯಾಜಿಕ್ ಅನ್ನು ನೋಡಲು ಎಲ್ಲರಂತೆ ನಾನೂ ಕಾತರದಲ್ಲಿದ್ದೇನೆ” ಎಂದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Samantha Ruth Prabhu: ನೀವು ಪರಿಪೂರ್ಣ ತಂದೆಯಾಗುತ್ತೀರಿ; ನಾಗಚೈತನ್ಯ ಬಗ್ಗೆ ಸಮಂತಾ ಹೇಳಿದ ವಿಡಿಯೊ ವೈರಲ್

ಶ್ರೇಷ್ಠ ವ್ಯಕ್ತಿಯಾಗಿರುವ ನೀವು ಒಂದು ದಿನ “ಪರಿಪೂರ್ಣ” ತಂದೆಯಾಗುತ್ತೀರಿ ಎಂದು ನಾಗಚೈತನ್ಯ ಅವರನ್ನು ಉದ್ದೇಶಿಸಿ ಸಮಂತಾ ರುತ್ ಪ್ರಭು (Samantha Ruth Prabhu) ಹೇಳಿರುವ ವಿಡಿಯೋ ಒಂದು ಮತ್ತೆ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದೆ. ನಾಗ ಚೈತನ್ಯ ಮತ್ತು ಸಮಂತಾ ಅವರ ವಿವಾಹದ ಹಳೆಯ ವಿಡಿಯೋದ ತುಣುಕು ಇದಾಗಿದೆ.

VISTARANEWS.COM


on

By

Samantha Ruth Prabhu
Koo

ಸಮಂತಾ ರುತ್ ಪ್ರಭು (Samantha Ruth Prabhu) ಮತ್ತು ನಾಗ ಚೈತನ್ಯ (Naga Chaitanya) ಅವರ ವಿವಾಹದ ಹಳೆಯ ವಿಡಿಯೋವೊಂದು (Viral Video) ಸಾಮಾಜಿಕ ಜಾಲತಾಣದಲ್ಲಿ (social media) ಮತ್ತೆ ಕಾಣಿಸಿಕೊಂಡಿದೆ. ಇಬ್ಬರೂ ಕ್ರಿಶ್ಚಿಯನ್ ಸಂಪ್ರದಾಯದ ಪ್ರಕಾರ ವಿವಾಹ ಪ್ರತಿಜ್ಞೆ ( taking vows) ಮಾಡುವುದನ್ನು ಇದರಲ್ಲಿ ಕಾಣಬಹುದು. ಸಮಂತಾ ಸುಂದರವಾದ ಬಿಳಿ ಗೌನ್ ಧರಿಸಿ ನಾಗ ​​ಚೈತನ್ಯನ ಬಗ್ಗೆ ಮಾತನಾಡಿದ್ದಾರೆ.

ಶ್ರೇಷ್ಠ ವ್ಯಕ್ತಿಯಾಗಿರುವ ನೀವು ಒಂದು ದಿನ “ಪರಿಪೂರ್ಣ” ತಂದೆಯಾಗುತ್ತೀರಿ ಎಂದು ನಾಗಚೈತನ್ಯ ಅವರನ್ನು ಉದ್ದೇಶಿಸಿ ಸಮಂತಾ ಹೇಳಿದ್ದಾರೆ.

ಹೇಗೆ ಸ್ವರವನ್ನು ಬದಲಾಯಿಸದೆಯೇ ಎಲ್ಲಾ ವಾದಗಳನ್ನು ಪರಿಹರಿಸಲಾಗುತ್ತದೆಯೋ ಮತ್ತು ಅಳುವುದನ್ನು ಬಿಟ್ಟು ಬೇರೆ ಯಾವುದನ್ನೂ ಪಡೆಯುವುದನ್ನು ತಪ್ಪಿಸಲು ನನಗೆ ಎಂದಿಗೂ ಅನುಮತಿಸುವುದಿಲ್ಲ. ನಿಮ್ಮಿಂದಾಗಿ ನಾನು ನಿಧಾನವಾಗಿ ಮತ್ತು ಖಚಿತವಾಗಿ ನಾನು ಆಗಬೇಕೆಂದು ಕನಸು ಕಂಡಿದ್ದೇನೆ ಎಂದು ಭಾವಿಸುತ್ತೇನೆ ಎಂದು ತಿಳಿಸಿದ್ದಾರೆ.


ಅವರು ತಮ್ಮ ಮಾತನ್ನು ಮುಂದುವರಿಸುತ್ತಾ, ನೀವು ನನಗೆ ತಿಳಿದಿರುವ ಅತ್ಯಂತ ಶ್ರೇಷ್ಠ ವ್ಯಕ್ತಿ ಮತ್ತು ಒಂದು ದಿನ ನೀವು ನಮ್ಮ ಸುಂದರ ಮಗುವಿಗೆ ಪರಿಪೂರ್ಣ ತಂದೆಯಾಗುತ್ತೀರಿ ಎಂದು ನನಗೆ ತಿಳಿದಿದೆ. ನಾನು ನಿಮ್ಮನ್ನು ನೂರು ಜೀವನ, ನೂರು ಪ್ರಪಂಚ ಮತ್ತು ಯಾವುದೇ ಪರಿಸ್ಥಿತಿಯಲ್ಲೂ ಆಯ್ಕೆ ಮಾಡುತ್ತೇನೆ. ನಾನು ನಿಮ್ಮನ್ನೇ ಆರಿಸುತ್ತೇನೆ ಎಂದು ಹೇಳಿದ್ದಾರೆ.


ಸಮಂತಾ ರುತ್ ಪ್ರಭು ಮತ್ತು ನಾಗ ಚೈತನ್ಯ ಅವರು 2017ರ ಅಕ್ಟೋಬರ್‌ನಲ್ಲಿ ವಿವಾಹವಾದರು. 2021ರಲ್ಲಿ ಇಬ್ಬರೂ ತಮ್ಮ ವಿಚ್ಛೇದನದ ಬಗ್ಗೆ ಘೋಷಿಸಿ ಅಭಿಮಾನಿಗಳಿಗೆ ಆಘಾತ ನೀಡಿದರು.

ಇತ್ತೀಚೆಗೆಷ್ಟೇ ನಾಗಚೈತನ್ಯ ಶೋಭಿತಾ ಧೂಳಿಪಾಲ ಅವರೊಂದಿಗೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ಬಳಿಕ ಸಮಂತಾ ಮತ್ತು ನಾಗಚೈತನ್ಯ ಅವರ ವಿವಾಹದ ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ: Actor Darshan: ನಟಿ ರಚಿತಾ ರಾಮ್‌ ಜೈಲಿಗೆ ಎಂಟ್ರಿ ಕೊಟ್ಟ ದಿನವೇ ನಡೀತಾ ದರ್ಶನ್ ಸಿಗರೇಟ್ ಪಾರ್ಟಿ?

ನಾಗ ಚೈತನ್ಯ ಅವರ ತಂದೆ ಸೂಪರ್‌ಸ್ಟಾರ್ ನಾಗಾರ್ಜುನ ಅವರು ಮಗ ನಾಗ ಚೈತನ್ಯ ಮತ್ತು ಶೋಭಿತಾ ಅವರ ನಿಶ್ಚಿತಾರ್ಥವನ್ನು ಕುರಿತು ಮಾಹಿತಿ ಹಂಚಿಕೊಂಡು, ಶೋಭಿತಾ ಧೂಳಿಪಾಲ ಅವಳನ್ನು ನಮ್ಮ ಕುಟುಂಬಕ್ಕೆ ಸ್ವಾಗತಿಸಲು ನಾವು ತುಂಬಾ ಸಂತೋಷಪಡುತ್ತೇವೆ. ದಂಪತಿಗೆ ಅಭಿನಂದನೆಗಳು, ಅವರಿಗೆ ಜೀವನಪೂರ್ತಿ ಪ್ರೀತಿ ಮತ್ತು ಸಂತೋಷವನ್ನು ಹಾರೈಸುತ್ತೇನೆ ಎಂದು ಹೇಳಿದ್ದರು. ವರದಿಗಳ ಪ್ರಕಾರ ನಾಗಚೈತನ್ಯ ಮತ್ತು ಶೋಭಿತಾ ಮುಂದಿನ ವರ್ಷ ಡೆಸ್ಟಿನೇಶನ್ ವೆಡ್ಡಿಂಗ್‌ಗೆ ಯೋಜನೆ ಮಾಡುತ್ತಿದ್ದಾರೆ ಎನ್ನಲಾಗಿದೆ.

Continue Reading

ಸಿನಿಮಾ

Samantha Ruth Prabhu: ಪ್ರೀತಿ ಒಂದು ತ್ಯಾಗ! ಮಾರ್ಮಿಕ ಸಂದೇಶ ಪೋಸ್ಟ್‌ ಮಾಡಿದ ಸಮಂತಾ ರುತ್ ಪ್ರಭು ಪೋಸ್ಟ್

ಗೆಳೆಯ ಅಥವಾ ಸಂಗಾತಿಯಲ್ಲಿ ಒಬ್ಬ ಹೆಚ್ಚು ನೀಡುವ ಸ್ಥಾನದಲ್ಲಿ ಇಲ್ಲದಿದ್ದಾಗ ಇನ್ನೊಬ್ಬ ಹೇಗೆ ಹೆಚ್ಚಿನ ಪ್ರಯತ್ನವನ್ನು ಮಾಡಬೇಕಾಗುತ್ತದೆ ಎಂಬುದರ ಕುರಿತು ನಟಿ ಸಮಂತಾ ರುತ್ ಪ್ರಭು (Samantha Ruth Prabhu) ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಈ ಮೂಲಕ, ತಮ್ಮಲ್ಲಿ ಇಲ್ಲದೇ ಇರುವುದನ್ನು ನೀಡಿ ಸಮಾನವಾಗಿರಲು ಪ್ರಯತ್ನಿಸುವಂತೆ ಮಾಡಿರುವವರಿಗೆ ‘ಕೃತಜ್ಞತೆ’ಯನ್ನು ಅವರು ಹೇಳಿದ್ದಾರೆ.

VISTARANEWS.COM


on

By

Samantha Ruth Prabhu
Koo

ನಟಿ ಸಮಂತಾ ರುತ್ ಪ್ರಭು (Samantha Ruth Prabhu ) ಅವರು ಇನ್‌ಸ್ಟಾಗ್ರಾಮ್‌ನಲ್ಲಿ (Instagram) ಹಂಚಿಕೊಂಡಿರುವ ಪೋಸ್ಟ್ ಒಂದು ಈಗ ಸಾಮಾಜಿಕ ಜಾಲತಾಣದಲ್ಲಿ (social mideia) ಚರ್ಚೆಗೆ ಕಾರಣವಾಗಿದೆ. ಇದರಲ್ಲಿ ಅವರು ಹಂಚಿಕೊಂಡಿರುವ ಪೋಸ್ಟ್ ನೋಡಿ ‘ಪ್ರೀತಿ ಒಂದು ತ್ಯಾಗ’ (Love Is A Sacrifice) ಅದು ಹೇಗೆ ಎಂಬುದರ ಕುರಿತು ಹೆಚ್ಚಿನ ನೆಟ್ಟಿಗರು ಚರ್ಚೆ ಮಾಡಲು ಪ್ರಾರಂಭಿಸಿದ್ದಾರೆ.

ಗೆಳೆಯರು, ಸಂಗಾತಿಯಲ್ಲಿ ಒಬ್ಬ ಹೆಚ್ಚು ನೀಡುವ ಸ್ಥಾನದಲ್ಲಿ ಇಲ್ಲದಿದ್ದಾಗ ಇನ್ನೊಬ್ಬ ಹೇಗೆ ಹೆಚ್ಚಿನ ಪ್ರಯತ್ನವನ್ನು ಮಾಡಬೇಕಾಗುತ್ತದೆ ಎಂಬುದರ ಕುರಿತು ಪೋಸ್ಟ್‌ನಲ್ಲಿ ಉಲ್ಲೇಖಿಸಲಾಗಿದೆ. ಈ ಮೂಲಕ ತಮ್ಮಲ್ಲಿ ಇಲ್ಲದೇ ಇರುವುದನ್ನು ನೀಡಿ ಸಮಾನವಾಗಿರಲು ಪ್ರಯತ್ನಿಸುವಂತೆ ಮಾಡಿರುವವರಿಗೆ ‘ಕೃತಜ್ಞತೆ’ಯನ್ನು ಅವರು ಹೇಳಿದ್ದಾರೆ.

ಬಹಳಷ್ಟು ಜನರು ಸ್ನೇಹ ಮತ್ತು ಸಂಬಂಧಗಳನ್ನು ಪರಸ್ಪರವಾಗಿ ನೋಡುತ್ತಾರೆ ಮತ್ತು ನಾನು ಒಪ್ಪುತ್ತೇನೆ. ನೀನು ಕೊಡು, ನಾನು ಕೊಡುತ್ತೇನೆ. ಆದರೆ ಕೆಲವೊಮ್ಮೆ ಪ್ರೀತಿಯು ಇತರ ವ್ಯಕ್ತಿಯು ಹಿಂತಿರುಗಿಸುವ ಸ್ಥಿತಿಯಲ್ಲಿಲ್ಲದಿದ್ದರೂ ಸಹ ನೀವು ನೀಡಲು ಕಾರಣವಾಗುತ್ತದೆ ಎಂದು ನಾನು ವರ್ಷಗಳಲ್ಲಿ ಕಲಿತಿದ್ದೇನೆ. ನೀವು ಕೊಡುವುದರಿಂದ ಅದು ಹೋಗುತ್ತದೆ, ನಾನು ಕೊಡುತ್ತೇನೆ.. ನೀವು ಹಿಂತಿರುಗಿಸಲು ಸಾಧ್ಯವಾಗುವವರೆಗೆ ಪ್ರತಿಯಾಗಿ ನಾನು ಕೊಡುತ್ತೇನೆ ಎಂಬುದಾಗಿ ಸಮಂತಾ ಮಾರ್ಮಿಕವಾಗಿ ಪೋಸ್ಟ್‌ನಲ್ಲಿ ಹೇಳಿದ್ದಾರೆ.


“ಪ್ರೀತಿ ಒಂದು ತ್ಯಾಗ. ಒಂದು ಋತುವಿಗಾಗಿ ಸಮತೋಲಿತ ಸಲಹೆ ಕೂಡ. ಅಭಿಮಾನಿಗಳು ಕೂಡ ಅಷ್ಟೆ. ನಾನು ಪ್ರತಿಯಾಗಿ ಕೃತಜ್ಞತೆ ಸ್ಪುರಿಸಲು ಸಾಧ್ಯವಾಗುತ್ತಿಲ್ಲ ಎಂದಾಗಲೂ ಜನ ಅಭಿಮಾನ ಸುರಿಸುತ್ತಲೇ ಇರುತ್ತಾರೆʼʼ ಎಂದು ಸಮಂತಾ ಹೇಳಿಕೊಂಡಿದ್ದಾರೆ. ಬಿಳಿ ಬಣ್ಣದ ಹೃದಯದ ಇಮೊಜಿಯೊಂದಿಗೆ ಸಮಂತಾ ಇದನ್ನು ಪೋಸ್ಟ್ ಮಾಡಿದ್ದಾರೆ.

ಈ ನಡುವೆ ಸಮಂತಾ ರುತ್ ಪ್ರಭು ಗುರುವಾರ ರಾತ್ರಿ ಮುಂಬಯಿನಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡರು. ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ಈ ವಿಡಿಯೋದಲ್ಲಿ ಅವರು ಕಾರ್ಯಕ್ರಮವೊಂದಕ್ಕೆ ಆಗಮಿಸುತ್ತಿದ್ದಂತೆ ಪಾಪರಾಜಿಗಳಿಗೆ ಪೋಸ್ ನೀಡುತ್ತಿರುವುದು ಕಂಡುಬಂದಿದೆ.

ಇದನ್ನೂ ಓದಿ: Shraddha Kapoor- Shreyas Iyer: ಕ್ರಿಕೆಟಿಗ ಅಯ್ಯರ್​ ಜತೆ ಡೇಟಿಂಗ್ ಆರಂಭಿಸಿದ ನಟಿ ಶ್ರದ್ಧಾ ಕಪೂರ್‌; ಫೋಟೊ ವೈರಲ್​

ಕಪ್ಪು ಉಡುಪನ್ನು ಧರಿಸಿದ್ದ ಅವರ ವಿಡಿಯೋವನ್ನು ನೋಡಿ ಅಭಿಮಾನಿಗಳು, ನಟಿ ಸಾಕಷ್ಟು ತೂಕವನ್ನು ಕಳೆದುಕೊಂಡಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.


ಸಮಂತಾ ರುತ್ ಪ್ರಭು ಶೀಘ್ರದಲ್ಲೇ ʼಸಿಟಾಡೆಲ್: ಹನಿ ಬನ್ನಿʼ ವೆಬ್‌ ಸಿರೀಸ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದು ಭಾರತೀಯ ಸರಣಿಯಾಗಿದ್ದು, ಈ ತಿಂಗಳ ಆರಂಭದಲ್ಲಿ ʼಸಿಟಾಡೆಲ್: ಹನ್ನಿ ಬನ್ನಿʼ ಚಿತ್ರದ ಟೀಸರ್ ಬಿಡುಗಡೆಯಾಯಿತು.

Continue Reading

ಸಿನಿಮಾ

Salman Khan: ನಿಮ್ಮ ಚಿತ್ರವನ್ನು ನಾವು ಒಪ್ಪುತ್ತೇವೆ, ಆದರೆ ನಮ್ಮ ಚಿತ್ರವನ್ನು ನೀವು ಒಪ್ಪುವುದಿಲ್ಲವಲ್ಲ? ಚಿರುಗೆ ಸಲ್ಲು ಹೀಗೆ ಹೇಳಿದ್ದೇಕೆ?

ಕಾರ್ಯಕ್ರಮವೊಂದರ ವೇದಿಕೆಯಲ್ಲಿ ಮೆಗಾ ಸ್ಟಾರ್ ಚಿರಂಜೀವಿ ಮತ್ತು ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಒಟ್ಟಿಗೆ ಕಾಣಿಸಿಕೊಂಡಿದ್ದು, ಈ ಸಂದರ್ಭದಲ್ಲಿ ಸಲ್ಮಾನ್ ಖಾನ್ ಕಠಿಣವಾದ ಧ್ವನಿಯಲ್ಲಿ ದಕ್ಷಿಣದಲ್ಲಿ ಬಾಲಿವುಡ್ ಚಿತ್ರಗಳನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಚಿರಂಜೀವಿಗೆ ಹೇಳಿದ್ದಾರೆ. ಈ ಮಾತನ್ನು ಹೇಳಿದ್ದು ಕೇಳಿ ಚಿರಂಜೀವಿ ಅವರು ಜೋರಾಗಿ ನಕ್ಕಿದ್ದಾರೆ. ಈ ಸಂವಾದದ ತುಣುಕು ರೆಡ್ಡಿಟ್‌ನಲ್ಲಿ ವೈರಲ್ ಆಗಿದೆ.

VISTARANEWS.COM


on

By

Salman Khan
Koo

ನಿಮ್ಮ ಚಿತ್ರವನ್ನು ಬಾಲಿವುಡ್‌ನವರು (bollywood) ಒಪ್ಪಿಕೊಳ್ಳುತ್ತಾರೆ. ಆದರೆ ನಮ್ಮ ಚಿತ್ರವನ್ನು ದಕ್ಷಿಣದವರು ಒಪ್ಪಿಕೊಳ್ಳುವುದಿಲ್ಲ ಎಂದು ಬಾಲಿವುಡ್‌ನ ಸೂಪರ್ ಸ್ಟಾರ್ ಸಲ್ಮಾನ್ ಖಾನ್ (Salman Khan) ಅವರು ಮೆಘಾಸ್ಟಾರ್‌ ಚಿರಂಜೀವಿ (Chiranjeevi) ಅವರಿಗೆ ಹೇಳಿರುವುದು ಈಗ ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ (viral news) ಆಗಿದೆ. ಇದಕ್ಕೆ ನೆಟ್ಟಿಗರಿಂದ ಸಾಕಷ್ಟು ಪ್ರತಿಕ್ರಿಯೆಗಳು ಬರುತ್ತಿವೆ.

ಸಂವಾದ ಕಾರ್ಯಕ್ರಮವೊಂದರ ವೇದಿಕೆಯಲ್ಲಿ ಮೆಗಾ ಸ್ಟಾರ್ ಚಿರಂಜೀವಿ ಮತ್ತು ಬಾಲಿವುಡ್ ನಟ ಸಲ್ಮಾನ್ ಖಾನ್ ಒಟ್ಟಿಗೆ ಕಾಣಿಸಿಕೊಂಡರು. ಈ ಸಂದರ್ಭದಲ್ಲಿ ಸಲ್ಮಾನ್ ಖಾನ್ ಈ ಮಾತನ್ನು ಹೇಳಿದ್ದು ಕೇಳಿ ಚಿರಂಜೀವಿ ಅವರು ಜೋರಾಗಿ ನಕ್ಕರು. ಕಠಿಣವಾದ ಧ್ವನಿಯಲ್ಲಿ ಸಲ್ಮಾನ್ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದು, ದಕ್ಷಿಣದಲ್ಲಿ ಬಾಲಿವುಡ್ ಚಿತ್ರಗಳನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಚಿರಂಜೀವಿಗೆ ಹೇಳಿದ್ದಾರೆ.

ರೆಡಿಟ್‌ನಲ್ಲಿ ವೈರಲ್ ಆಗಿರುವ ಕ್ಲಿಪ್‌ನಲ್ಲಿ ಸಲ್ಮಾನ್ ಖಾನ್ “”ಚಿರುಗಾರು, ನಿಮ್ಮ ಚಿತ್ರಗಳನ್ನು ಉತ್ತರ ಭಾರತದಲ್ಲಿ ಸ್ವೀಕರಿಸಲಾಗಿದೆ. ಆದರೆ ಅಲ್ಲಿಯ ಜನ ನಮ್ಮ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲʼʼ ಎಂದು ಚಿರಂಜೀವಿ ಹೇಳುತ್ತಲೇ ಜೋರಾಗಿ ನಗಲು ಪ್ರಾರಂಭಿಸಿದರು.

ʼರೆಡ್ಡಿಟರ್‌ʼಗಳು ಸ್ಟಾರ್ ಗಳ ಈ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ಒಬ್ಬ, ಇದು ತಪ್ಪಾದ ಹೇಳಿಕೆಯಾಗಿದೆ. ಹಿಂದಿ ಸಿನಿಮಾಗಳ ಪ್ರಾದೇಶಿಕ ಡಬ್ಬಿಂಗ್ ಗೆ ದಕ್ಷಿಣದಲ್ಲಿ ಅಷ್ಟಾಗಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿಲ್ಲ. ಆದರೆ ಹಿಂದಿ ಚಲನಚಿತ್ರಗಳ ಹಿಂದಿ ಆವೃತ್ತಿಗಳು ದಕ್ಷಿಣದಲ್ಲಿ ಉತ್ತಮ ವ್ಯಾಪಾರವನ್ನು ಮಾಡುತ್ತವೆ ಎಂದು ಹೇಳಿದ್ದಾರೆ.

ಮತ್ತೊಬ್ಬರು ಬಾಲಿವುಡ್ ಚಿತ್ರಗಳನ್ನು ಉತ್ತರದಲ್ಲಿ ಸ್ವೀಕರಿಸಲಾಗುತ್ತಿದೆಯಂತೆ ಎಂದು ಹೇಳಿದ್ದಾರೆ. ಅವರ ಚಿತ್ರಗಳು ಇಲ್ಲಿ ಸಾರ್ವಕಾಲಿಕ ಉತ್ತಮ ವ್ಯಾಪಾರವನ್ನು ಮಾಡುತ್ತವೆ ಎಂಬುದು ತಪ್ಪು ಹೇಳಿಕೆಯಾಗಿದೆ. ಉತ್ತರ ಭಾರತದಲ್ಲಿ ಸೌತ್ ಚಿತ್ರಗಳು ಹಿಟ್ ಅಂಡ್ ಮಿಸ್ ಆಗಿವೆ. ಅವು ಫ್ಲಾಪ್ ಆಗಿರಲೂಬಹುದು. ಅಪರೂಪಕ್ಕೆ ಹಿಟ್ ಆಗುತ್ತೆ. ಹಿಟ್ ಆಗಿದ್ದು ಕೂಡ ಸಾಮಾನ್ಯವಾಗಿ ಪ್ಯಾನ್ ಇಂಡಿಯಾ ಚಿತ್ರಗಳು ಎಂದಿದ್ದಾರೆ. ಇನ್ನೊಬ್ಬರು ಶಾರುಖ್ ಚಲನಚಿತ್ರಗಳನ್ನು ದಕ್ಷಿಣದಲ್ಲಿ ಚೆನ್ನಾಗಿ ಸ್ವೀಕರಿಸಲಾಗಿದೆ. ಕೇರಳದ ಜನರು ವಿಶೇಷವಾಗಿ ಅವರನ್ನು ಮತ್ತು ಅವರ ಪಾತ್ರಗಳನ್ನು ತುಂಬಾ ಇಷ್ಟಪಡುತ್ತಾರೆ ಎಂದಿದ್ದಾರೆ.


ಇತ್ತೀಚೆಗೆ ಗಮನ ಸೆಳೆದಿರುವ ಪ್ರಭಾಸ್ ಕುರಿತ ಅರ್ಷದ್ ವಾರ್ಸಿ ಅವರ ಕಾಮೆಂಟ್‌ಗಳ ನಡುವೆ ಸಲ್ಮಾನ್ ಅವರ ಈ ವಿಡಿಯೋ ಮರುಕಳಿಸಿದೆ. ಕಲ್ಕಿ 2898 ಎಡಿಯಲ್ಲಿ ಪ್ರಭಾಸ್ ‘ಜೋಕರ್’ನಂತೆ ಕಾಣುತ್ತಿದ್ದರು ಎಂದು ಅರ್ಷದ್ ವಾರ್ಸಿ ಹೇಳಿದ್ದರು. ನಾಗ್ ಅಶ್ವಿನ್ ನಿರ್ದೇಶನದ ಈ ಚಿತ್ರದಲ್ಲಿ ಅಶ್ವತ್ಥಾಮ ಪಾತ್ರದಲ್ಲಿ ಅಮಿತಾಭ್ ಬಚ್ಚನ್ ಅವರನ್ನು ನೋಡಲು ಇಷ್ಟವಾದರೂ ಪ್ರಭಾಸ್ ಅವರು ಪ್ರಭಾವಿತರಾಗಲಿಲ್ಲ ಎಂದು ಅರ್ಷದ್ ಹೇಳಿದ್ದರು.

ಇದನ್ನೂ ಓದಿ: Rishab Shetty : ಕಂಬಳ ಬಳಿಕ ಕಾಂತಾರ- 2ನಲ್ಲಿ ಕಳರಿ ಪಯಟ್ಟು ಪ್ರದರ್ಶನಕ್ಕೆ ಸಜ್ಜಾದ ಡಿವೈನ್‌ ಸ್ಟಾರ್‌ ರಿಷಬ್‌ ಶೆಟ್ಟಿ

ಅರ್ಷದ್ ಅವರ ಈ ಹೇಳಿಕೆಯು ಪ್ರಭಾಸ್ ಅಭಿಮಾನಿಗಳನ್ನು ಕೆರಳಿಸಿತ್ತು. ಸಾಕಷ್ಟು ಮಂದಿ ಇದಕ್ಕೆ ಕಾಮೆಂಟ್ ಮಾಡಿ ಅರ್ಷದ್ ಅವರನ್ನು ದೂಷಿಸಿದ್ದಾರೆ.

Continue Reading

ಸಿನಿಮಾ

Kalki 2898AD: ಎರಡು ಪ್ರಮುಖ ಒಟಿಟಿಗಳಲ್ಲಿ ಹಲವು ಭಾಷೆಗಳಲ್ಲಿ ಲಗ್ಗೆ ಇಟ್ಟ ಕಲ್ಕಿ 2898 ಎಡಿ!

ಪ್ರಭಾಸ್, ಅಮಿತಾಭ್ ಬಚ್ಚನ್, ದೀಪಿಕಾ ಪಡುಕೋಣೆ, ಕಮಲ್ ಹಾಸನ್ ಅಭಿನಯದ ಬಹುಜನರ ಮೆಚ್ಚುಗೆ ಗಳಿಸಿದ ಚಿತ್ರ ಕಲ್ಕಿ 2898 ಎಡಿ (Kalki 2898AD) ವಿಭಿನ್ನ ಭಾಷೆಗಳಲ್ಲಿ ಎರಡು ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆಯಾಗಲಿದೆ. ಹಿಂದಿ, ತಮಿಳು, ತೆಲುಗು, ಕನ್ನಡ, ಮಲಯಾಳಂ ಭಾಷೆಯ ಆವೃತ್ತಿಯಲ್ಲಿ ಬಿಡುಗಡೆಯಾಗಿರುವ ಈ ಚಿತ್ರವನ್ನು ಎಲ್ಲಿ ನೋಡಬಹುದು ಎನ್ನುವ ಕುರಿತು ಇಲ್ಲಿದೆ ಮಾಹಿತಿ.

VISTARANEWS.COM


on

By

Kalki 2898 AD
Koo

ಕಲ್ಕಿ 2898 ಎಡಿ (Kalki 2898AD) ಈ ವರ್ಷದ ಅತೀ ದೊಡ್ಡ ಬಜೆಟ್‌ನ ಚಿತ್ರಗಳಲ್ಲಿ ಒಂದಾಗಿದೆ. ಗಲ್ಲಾಪೆಟ್ಟಿಗೆಯಲ್ಲಿ ಹೆಚ್ಚು ಸದ್ದು ಮಾಡದೇ ಇದ್ದರೂ ಐದು ಭಾಷೆಗಳಲ್ಲಿ ಚಿತ್ರ ಥಿಯೇಟರ್‌ಗಳಲ್ಲಿ ಬಂದಾಗ ಭಾರಿ ಮೆಚ್ಚುಗೆಗೆ ಪಾತ್ರವಾಯಿತು. ಅಮಿತಾಭ್ ಬಚ್ಚನ್ (Amitabh Bachchan ), ದೀಪಿಕಾ ಪಡುಕೋಣೆ (Deepika Padukone), ಪ್ರಭಾಸ್ (Prabhas), ಕಮಲ್ ಹಾಸನ್ (Kamal Haasan) ನಟಿಸಿರುವ ಈ ಚಿತ್ರವನ್ನು ನಾಗ್ ಅಶ್ವಿನ್ ನಿರ್ಮಿಸಿದ್ದಾರೆ.

ವಿಶ್ವಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾದ ಕಲ್ಕಿ 2898 ಎಡಿ ಸಿನಿಮಾ ಭಾರತೀಯ ಚಿತ್ರರಂಗದಲ್ಲಿ ಮೂರನೇ ಅತಿದೊಡ್ಡ ಓಪನರ್ ಕಂಡ ಸಿನಿಮಾವಾಗಿ ಹೊರಹೊಮ್ಮಿತ್ತು. ಆರಂಭಿಕ ದಿನದಂದು 180 ಕೋಟಿ ರೂ. ಗಳಿಕೆ ಕಂಡ ಚಿತ್ರಕ್ಕೆ ಭಾರತದಲ್ಲಿ ಉತ್ತಮ ಪ್ರತಿಕ್ರಿಯೆಯು ವ್ಯಕ್ತವಾಯಿತು.

ಕಲ್ಕಿ 2898 ಎಡಿ ಜೂನ್ 27ರಂದು ವಿಶ್ವಾದ್ಯಂತ ಬಿಡುಗಡೆಯಾಗಿ ಸುದೀರ್ಘವಾಗಿ ಚಿತ್ರ ಮಂದಿರಗಳಲ್ಲಿ ಓಡಿ ಸಂಭ್ರಮ ಪಟ್ಟ ಈ ಚಿತ್ರ ಆಗಸ್ಟ್ 22ರಿಂದ ಒಟಿಟಿಯಲ್ಲಿ ಪ್ರದರ್ಶನ (OTT releases) ಕಾಣಲಿದೆ. ನೆಟ್‌ಫ್ಲಿಕ್ಸ್ (netflix) ಮತ್ತು ಅಮೆಜಾನ್ ಪ್ರೈಮ್ (amazon prime) ಎರಡರಲ್ಲೂ ವಿವಿಧ ಭಾಷೆಗಳಲ್ಲಿ ಲಭ್ಯವಿದೆ.

Kalki 2898 AD
Kalki 2898 AD


ಚಲನಚಿತ್ರದ ಹಿಂದಿ ಆವೃತ್ತಿಯು ನೆಟ್‌ಫ್ಲಿಕ್ಸ್‌ನಲ್ಲಿ ಪ್ರದರ್ಶನವನ್ನು ಪ್ರಾರಂಭಿಸಿದೆ. ಇನ್ನು ತಮಿಳು, ತೆಲುಗು, ಕನ್ನಡ ಮತ್ತು ಮಲಯಂ ಆವೃತ್ತಿಗಳು ಅಮೆಜಾನ್ ಪ್ರೈಮ್ ನಲ್ಲಿ ಲಭ್ಯವಿದೆ.


ಏಕಕಾಲಕ್ಕೆ ಎರಡು ಸ್ಟ್ರೀಮಿಂಗ್ ದೈತ್ಯ ಒಟಿಟಿಯಲ್ಲಿ ಚಲನಚಿತ್ರದ ಡ್ಯುಯಲ್ ಪ್ಲಾಟ್‌ಫಾರ್ಮ್ ಬಿಡುಗಡೆ ತಂತ್ರವು ‘ಕಲ್ಕಿ 2898 ಎಡಿ’ ಚಿತ್ರವನ್ನು ವಿವಿಧ ಪ್ರದೇಶಗಳು ಮತ್ತು ಭಾಷೆಗಳಲ್ಲಿ ವ್ಯಾಪಕವಾಗಿ ಪ್ರೇಕ್ಷಕರನ್ನು ತಲುಪುವ ಗುರಿಯನ್ನು ಹೊಂದಿದೆ. ಈ ವಿಧಾನವು ವೀಕ್ಷಕರನ್ನು ಹೆಚ್ಚಿಸುವುದು ಮಾತ್ರವಲ್ಲದೆ ವೈವಿಧ್ಯಮಯ ಭಾಷಾ ಆದ್ಯತೆಗಳನ್ನು ಸಹ ಒದಗಿಸುತ್ತದೆ. ಇದು ಅಪರೂಪವಾಗಿ ಕಂಡುಬರುತ್ತದೆ.

ಇದನ್ನೂ ಓದಿ: Actress Kangana Ranaut : ಬಾಲಿವುಡ್ ಪಾರ್ಟಿಗಳಲ್ಲಿ ನಡೆಯೋದೇನು? ಅಸಲಿ ಕತೆ ರಿವೀಲ್‌ ಮಾಡಿದ ಕಂಗನಾ!

‘ಕಲ್ಕಿ 2898 ಎಡಿ’ ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 1050 ಕೋಟಿ ರೂ. ಗಳಿಸಿತ್ತು. ಭಾರತದಲ್ಲಿ ಎಲ್ಲಾ ಭಾಷೆಗಳಲ್ಲಿ 700 ಕೋಟಿ ರೂ. ಗಿಂತ ಹೆಚ್ಚು ಗಳಿಸಿದೆ. ಚಿತ್ರದ ಒಟಿಟಿ ಆವೃತ್ತಿಯು ಚಿತ್ರಮಂದಿರಗಳಲ್ಲಿ ಚಿತ್ರವನ್ನು ನೋಡಲಾಗದ ಹೆಚ್ಚಿನ ಪ್ರೇಕ್ಷಕರನ್ನು ತಲುಪುವಂತೆ ಮಾಡಲಿದೆ ಎನ್ನುವುದು ಚಿತ್ರ ತಂಡದ ನಿರೀಕ್ಷೆಯಾಗಿದೆ.

Continue Reading
Advertisement
Hair Combing
ಆರೋಗ್ಯ3 hours ago

Hair Combing: ಕೂದಲು ಬಾಚುವ ಅಭ್ಯಾಸವಿಲ್ಲವೇ? ಹಾಗಾದರೆ ಇದನ್ನೊಮ್ಮೆ ಓದಿ!

dhavala dharini column Hanuman's setubandha to meet Sugriva in ramayana by narayana yaji
ಅಂಕಣ3 hours ago

ಧವಳ ಧಾರಿಣಿ ಅಂಕಣ: ಸುಗ್ರೀವನ ಭೇಟಿಗೆ ಹನುಮಂತನ ಸೇತುಬಂಧ ಹೇಗಿತ್ತು?

karnataka weather Forecast
ಮಳೆ4 hours ago

Karnataka Weather : ಬೆಂಗಳೂರಿನಲ್ಲಿ ಘಳಿಗೆವೊಂದು ವಾತಾವರಣ; ಕರಾವಳಿಗೆ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ5 hours ago

Dina Bhavishya: ಈ ದಿನ ಆತ್ಮೀಯರೊಂದಿಗೆ ಕಾಲ ಕಳೆಯುವಿರಿ; ಆದ್ರೆ ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ

Murder Case
ಬೆಂಗಳೂರು13 hours ago

Murder Case: ಶೀಲ ಶಂಕೆ; ಪತ್ನಿಯನ್ನು ಕುರ್ಚಿಗೆ ಕಟ್ಟಿಹಾಕಿ ಚಿತ್ರಹಿಂಸೆ ಕೊಟ್ಟು ಭೀಕರ ಹತ್ಯೆ

Actor Darshan
ಬೆಂಗಳೂರು14 hours ago

Actor Darshan: ಪವಿತ್ರಾಗೌಡ ಜಾಮೀನು ಅರ್ಜಿಯ ಭವಿಷ್ಯ ಆ.31ಕ್ಕೆ ನಿರ್ಧಾರ

Fashion Trend
ಫ್ಯಾಷನ್15 hours ago

Fashion Trend: ಕಟೌಟ್‌ ಪ್ಯಾಂಟ್‌ ಸೂಟ್‌; ಗ್ಲಾಮರಸ್‌ ಯುವತಿಯರ ಲೇಟೆಸ್ಟ್ ಆಯ್ಕೆ!

Stray Dogs Attack
ಕ್ರೈಂ15 hours ago

Stray Dogs Attack: ಬೆಂಗಳೂರಿನಲ್ಲಿ ಬೀದಿ ನಾಯಿಗಳ ದಾಳಿಗೆ ಬಲಿಯಾದ ನಿವೃತ್ತ ಶಿಕ್ಷಕಿ

R Ashok
ಬೆಂಗಳೂರು15 hours ago

R Ashok: ರಾಜ್ಯ ಸರ್ಕಾರದಿಂದ ದ್ವೇಷ ರಾಜಕಾರಣ; ನ್ಯಾಯಕ್ಕಾಗಿ ಹೋರಾಟ ಮುಂದುವರಿಯಲಿದೆ ಎಂದ ಆರ್‌. ಅಶೋಕ್‌

karnataka weather Forecast
ಮಳೆ15 hours ago

Karnataka Weather : ನಿರಂತರ ಮಳೆಗೆ ಮನೆ ಗೋಡೆ ಕುಸಿತ; ಮಹಿಳೆ ಆಸ್ಪತ್ರೆ ಪಾಲು

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

ಮಳೆ5 days ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ4 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ4 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

ಟ್ರೆಂಡಿಂಗ್‌