Pawan Kalyan: ಪವನ್‌ ಕಲ್ಯಾಣ್‌ ಗೆದ್ದ ಬಳಿಕ ತಲೆಗೂದಲಿಗೆ ಕತ್ತರಿ ಹಾಕಿದ ಡೈ ಹಾರ್ಡ್​ ಫ್ಯಾನ್! - Vistara News

ಟಾಲಿವುಡ್

Pawan Kalyan: ಪವನ್‌ ಕಲ್ಯಾಣ್‌ ಗೆದ್ದ ಬಳಿಕ ತಲೆಗೂದಲಿಗೆ ಕತ್ತರಿ ಹಾಕಿದ ಡೈ ಹಾರ್ಡ್​ ಫ್ಯಾನ್!

Pawan Kalyan: ತೋಟ ನರೇಂದ್ರ ಉರು ತೆನಾಲಿ ಸಮೀಪದ ಕೊಳಕಲೂರು. 2019ನೇ ಚುನಾವಣೆಯಲ್ಲಿ ತಮ್ಮ ನೆಚ್ಚಿನ ನಟ ಪವನ್ ಕಲ್ಯಾಣ್ ಅವರು ಸ್ಪರ್ಧಿಸಿದ್ದ ಎರಡೂ ಕ್ಷೇತ್ರಗಳಲ್ಲಿ ಸೋತಿದ್ದರು. ಇದರಿಂದ ನರೇಂದ್ರ ತೀವ್ರ ಖಿನ್ನತೆಗೆ ಒಳಗಾಗಿದ್ದರು. ಎರಡು ಕಡೆ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದ ನರೇಂದ್ರ ಅವರಿಗೆ ಪವನ್‌ ಕಲ್ಯಾಣ್‌ ಸೋಲು ಭಾರಿ ನೋವುಂಟು ಮಾಡಿತ್ತು.

VISTARANEWS.COM


on

Pawan Kalyan Fan Narendra cut hairs after Five Years
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಇತ್ತೀಚೆಗೆ ನಡೆದ ಆಂಧ್ರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ (Telugu Desam Party), ಬಿಜೆಪಿ ಮತ್ತು ಪವನ್‌ ಕಲ್ಯಾಣ್‌ ನೇತೃತ್ವದ ಜನಸೇನಾ ಪಾರ್ಟಿ (Jana Sena Party)ಯ ಎನ್‌ಡಿಎ (NDA) ಒಕ್ಕೂಟ ಭರ್ಜರಿ ಬಹುಮತ ಪಡೆದು ಅಧಿಕಾರಕ್ಕೆ ಬಂದಿದೆ. ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಇಂದು (ಜೂನ್‌ 12) ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದೇ ವೇಳೆ ಉಪ ಮುಖ್ಯಮಂತ್ರಿಯಾಗಿ ಪವನ್‌ ಕಲ್ಯಾಣ್‌ (Pawan Kalyan) ಅಧಿಕಾರ ವಹಿಸಿಕೊಂಡರು. 2019ರ ಚುನಾವಣೆಯಲ್ಲಿ ಪವನ್‌ ಕಲ್ಯಾಣ್‌ ಎರಡೂ ಕ್ಷೇತ್ರಗಳಲ್ಲಿ ಸೋತು ನಗೆಪಾಟಲಿಗೀಡಾಗಿದ್ದರು. ಆ ಸಮಯದಲ್ಲಿ ಪವನ್‌ ಅವರ ಫ್ಯಾನ್‌ ತೋಟ ನರೇಂದ್ರ ಅವರು ಪವನ್ ಗೆದ್ದೇ ಗೆಲ್ಲುತ್ತಾರೆಂದು ಸವಾಲು ಹಾಕಿ, ಪವನ್ ಗೆಲ್ಲುವವರೆಗೂ ತಲೆಗೂದಲು ಕತ್ತರಿವುದಿಲ್ಲ ಎಂದು ಪ್ರಮಾಣ ಮಾಡಿದ್ದರು. ಇದೀಗ ಕೂದಲಿಗೆ ಕತ್ತರಿ ಹಾಕಿದ್ದಾರೆ.

ತೋಟ ನರೇಂದ್ರ ಉರು ತೆನಾಲಿ ಸಮೀಪದ ಕೊಳಕಲೂರು. 2019ನೇ ಚುನಾವಣೆಯಲ್ಲಿ ತಮ್ಮ ನೆಚ್ಚಿನ ನಟ ಪವನ್ ಕಲ್ಯಾಣ್ ಅವರು ಸ್ಪರ್ಧಿಸಿದ್ದ ಎರಡೂ ಕ್ಷೇತ್ರಗಳಲ್ಲಿ ಸೋತಿದ್ದರು. ಇದರಿಂದ ನರೇಂದ್ರ ತೀವ್ರ ಖಿನ್ನತೆಗೆ ಒಳಗಾಗಿದ್ದರು. ಎರಡು ಕಡೆ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದ ನರೇಂದ್ರ ಅವರಿಗೆ ಪವನ್‌ ಕಲ್ಯಾಣ್‌ ಸೋಲು ಭಾರಿ ನೋವುಂಟು ಮಾಡಿತ್ತು. ಹಾಗಾಗಿ ಆ ಸಮಯದಲ್ಲಿ ನರೇಂದ್ರ ಅವರು ಪ್ರಮಾಣ ಮಾಡಿದರು. ಪವನ್ ಕಲ್ಯಾಣ್ ಗೆದ್ದು ವಿಧಾನಸಭೆಗೆ ಕಾಲಿಡುವವರೆಗೂ ಕೂದಲಿಗೆ ಕತ್ತರಿ ಹಾಕಲ್ಲ ಎಂದು. ಇದೀಗ ಉಪ ಮುಖ್ಯಮಂತ್ರಿಯಾಗಿ ಪವನ್‌ ಕಲ್ಯಾಣ್‌ (Pawan Kalyan) ಅಧಿಕಾರ ವಹಿಸಿಕೊಂಡಿದ್ದಾರೆ. ಐದು ವರ್ಷಗಳ ಕಾಲ ಕೂದಲು ಬೆಳೆಸುತ್ತಲೇ ಪಕ್ಷಕ್ಕಾಗಿ ದುಡಿದ ನರೇಂದ್ರ ಕೊನೆಗೂ ಕೂದಲಿಗೆ ಕತ್ತರಿ ಹಾಕಿದ್ದಾರೆ.

ಇದನ್ನೂ ಓದಿ: Pawan Kalyan: ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿಯಾಗಿ ಪವನ್‌ ಕಲ್ಯಾಣ್‌ ಆಯ್ಕೆ; ಇಂದು ಪ್ರಮಾಣ ವಚನ ಸ್ವೀಕಾರ

ಪವನ್ ಕಲ್ಯಾಣ್ ಸೇರಿದಂತೆ ಜನಸೇನಾದ 21 ಅಭ್ಯರ್ಥಿಗಳು ಈ ಬಾರಿ ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡಿದ್ದರು. ಪವನ್ ಕಲ್ಯಾಣ್ ಪೀಠಾಪುರಂ ಕ್ಷೇತ್ರದಿಂದ ಚುನಾವಣೆ ಎದುರಿಸಿದ್ದರು. ಎದುರಾಳಿ ವೈಸಿಪಿ ಅಭ್ಯರ್ಥಿ ವಂಗಾ ಗೀತ ವಿರುದ್ಧ ಭಾರಿ ಅಂತರದ ಜಯವನ್ನು ಪವನ್ ಕಲ್ಯಾಣ್ ಪಡೆದಿದ್ದಾರೆ. 

ವಿಜಯವಾಡದಲ್ಲಿರುವ ಮೇಧಾ ಐಟಿ ಪಾರ್ಕ್‌ ಬಳಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಎನ್‌.ಚಂದ್ರಬಾಬು ನಾಯ್ಡು ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇದಾದ ಬಳಿಕ ಮೋದಿ ಅವರು ನಾಯ್ಡು ಅವರಿಗೆ ಶುಭ ಕೋರಿದರು. ನಂತರ ಪವನ್‌ ಕಲ್ಯಾಣ್‌ ಅವರು ತಮ್ಮ ಸಹೋದರ ಚಿರಂಜೀವಿ ಕೂಡ ಇಲ್ಲೇ ಇದ್ದಾರೆ ಎಂದು ಮೋದಿ ಅವರಿಗೆ ಹೇಳಿದರು. ಆಗ ಮೋದಿ ಅವರು ಚಿರಂಜೀವಿ ಬಳಿ ಹೋಗಿ, ಅವರ ಹಾಗೂ ಪವನ್‌ ಕಲ್ಯಾಣ್‌ ಕೈ ಹಿಡಿದು ವೇದಿಕೆಗೆ ಕರೆತಂದರು. ಬಳಿಕ ಮೂವರೂ ಕೈ ಎತ್ತಿದರು. ಆ ಮೂಲಕ ಒಗ್ಗಟ್ಟಿನ ಬಲ ಪ್ರದರ್ಶನ ಮಾಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Kalki 2898 AD: ‘ಕಲ್ಕಿ 2898 AD’ ಚಿತ್ರದ ಫೈನಲ್‌ ಟ್ರೇಲರ್‌ ಹೀಗಿದೆ ನೋಡಿ! ಜೂ.27ರಂದು ಚಿತ್ರ ರಿಲೀಸ್

Kalki 2898 AD: ‘ಕಲ್ಕಿ 2898 AD’ ಚಿತ್ರದ ಬಹು ನಿರೀಕ್ಷಿತ ಬಿಡುಗಡೆಯ ಟ್ರೈಲರ್ ಅಂತಿಮವಾಗಿ ಅನಾವರಣಗೊಂಡಿದೆ. ಮೊದಲ ನೋಟವು ಭಾರತೀಯ ಪುರಾಣಗಳಲ್ಲಿ ಬೇರೂರಿರುವ ಅಸಾಧಾರಣ ‘ಕಲ್ಕಿ 2898 AD’ ಸಿನಿಮೀಯ ಬ್ರಹ್ಮಾಂಡವನ್ನು ಪ್ರೇಕ್ಷಕರಿಗೆ ಪರಿಚಯಿಸಿದರೆ, ಇದೀಗ ಬಿಡುಗಡೆ ಆಗಿರುವ ಟ್ರೇಲರ್ ಚಿತ್ರದೊಳಗಿನ ಇನ್ನಷ್ಟ ಆಳವನ್ನು ನೋಡುಗನಿಗೆ ಪರಿಚಯಿಸಿದೆ. ಇದು ಮಹಾಕಾವ್ಯದ ಇನ್ನೊಂದು ಹಂತದ ಬಗ್ಗೆ ಸುಳಿವು ನೀಡುತ್ತದೆ.

VISTARANEWS.COM


on

Kalki 2898 AD Final Trailer Released
Koo

ಬೆಂಗಳೂರು: ವೈಜ್ಞಾನಿಕ ಮತ್ತು ಕಾಲ್ಪನಿಕ ಸಮ್ಮಿಶ್ರಣದ ದೃಶ್ಯಕಾವ್ಯ ‘ಕಲ್ಕಿ 2898 AD’ ಚಿತ್ರದ ಬಹು ನಿರೀಕ್ಷಿತ ಬಿಡುಗಡೆಯ ಟ್ರೈಲರ್ ಅಂತಿಮವಾಗಿ ಅನಾವರಣಗೊಂಡಿದೆ. ಮೊದಲ ನೋಟವು ಭಾರತೀಯ ಪುರಾಣಗಳಲ್ಲಿ ಬೇರೂರಿರುವ ಅಸಾಧಾರಣ ‘ಕಲ್ಕಿ 2898 AD’ (Kalki 2898 AD) ಸಿನಿಮೀಯ ಬ್ರಹ್ಮಾಂಡವನ್ನು ಪ್ರೇಕ್ಷಕರಿಗೆ ಪರಿಚಯಿಸಿದರೆ, ಇದೀಗ ಬಿಡುಗಡೆ ಆಗಿರುವ ಟ್ರೇಲರ್ ಚಿತ್ರದೊಳಗಿನ ಇನ್ನಷ್ಟ ಆಳವನ್ನು ನೋಡುಗನಿಗೆ ಪರಿಚಯಿಸಿದೆ. ಇದು ಮಹಾಕಾವ್ಯದ ಇನ್ನೊಂದು ಹಂತದ ಬಗ್ಗೆ ಸುಳಿವು ನೀಡುತ್ತದೆ.

ಟ್ರೇಲರ್‌ನಲ್ಲಿ ಒಂದಕ್ಕಿಂತ ಒಂದು ಮೀರಿಸುವ ಪಾತ್ರಗಳೇ ಹೈಲೈಟ್.‌ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ‘ಅಶ್ವತ್ಥಾಮ’ ಆಗಿ ಧೈರ್ಯಶಾಲಿ ಸಾಹಸಗಳನ್ನು ಪ್ರದರ್ಶಿಸುತ್ತಾರೆ. ಉಳಗನಾಯಗನ್ ಕಮಲ್ ಹಾಸನ್ ಗುರುತಿಸಲಾಗದ ಇನ್ನೂ ಮಾರಣಾಂತಿಕ ಅವತಾರದಲ್ಲಿ ‘ಯಾಸ್ಕಿನ್’ ಆಗಿ ಕಾಣಿಸಿಕೊಂಡಿದ್ದಾರೆ. ಪ್ರಭಾಸ್ ಭೈರವನಾಗಿ, ದೀಪಿಕಾ ಪಡುಕೋಣೆ ‘ಸುಮತಿ’ ಪಾತ್ರದಲ್ಲಿ ಎದುರಾಗಿದ್ದಾರೆ. ದಿಶಾ ಪಟಾನಿ ‘ರಾಕ್ಸಿ’ ಖಡಕ್‌ ಆಗಿಯೇ ಮಿಂಚು ಹರಿಸಿದ್ದಾರೆ.

ಇದನ್ನೂ ಓದಿ: Rishabh Pant : ವಿಶ್ವ ಕಪ್​ನಲ್ಲಿ ವಿನೂತನ ವಿಕೆಟ್​ಕೀಪಿಂಗ್​​ ದಾಖಲೆ ಬರೆದ ರಿಷಭ್​ ಪಂತ್​

ʼಕಲ್ಕಿ 2898 ADʼ ಚಿತ್ರದ ಟ್ರೇಲರ್‌ನಲ್ಲಿ ಬಗೆಬಗೆ ವಿಭಿನ್ನ ಪ್ರಪಂಚಗಳನ್ನು ಕಾಣಬಹುದು. ಒಂದು ಕಾಶಿ, ಅದರ ಉಳಿವಿಗಾಗಿ ಹೋರಾಡುತ್ತಿರುವ, ಕೊನೆಯದಾಗಿ ಉಳಿದ ನಗರವೆಂದು ಬಿಂಬಿಸಲಾಗಿದೆ. ದೃಶ್ಯ ವೈಭವವೇ ಇಡೀ ಟ್ರೇಲರ್‌ನ ಜೀವಾಳ. ಊಹೆಗೂ ನಿಲುಕದ ಒಂದಷ್ಟು ಅಚ್ಚರಿಗೆ ದೂಡುವ ದೃಶ್ಯಗಳೇ ಇಲ್ಲಿನ ಹೈಲೈಟ್.‌

ಅತ್ಯುತ್ತಮ ಹಿನ್ನೆಲೆ ಸ್ಕೋರ್, ಹೈ ಕ್ಲಾಸ್ VFX ಮತ್ತು ರೋಮಾಂಚನಗೊಳಿಸುವ ದೃಶ್ಯಗಳೊಂದಿಗೆ, ಈ ಸಿನಿಮಾ ಮೂಡಿಬಂದಿದೆ. ತೆಲುಗು, ಹಿಂದಿ, ತಮಿಳು, ಮಲಯಾಳಂ, ಕನ್ನಡ ಮತ್ತು ಇಂಗ್ಲಿಷ್ ಸೇರಿದಂತೆ ಬಹು ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ.

‘ಕಲ್ಕಿ 2898 AD’ ಚಿತ್ರದಲ್ಲಿ ನಿರ್ದೇಶಕ ನಾಗ್ ಅಶ್ವಿನ್ ಅವರ ದೂರದೃಷ್ಟಿಯ ವಿಧಾನವು ಭಾರತೀಯ ಸಿನಿಮಾವನ್ನು ಅದರ ನೆಲದ ದೃಶ್ಯಗಳು ಮತ್ತು ಕಥೆ ಹೇಳುವ ಮೂಲಕ ಮರುವ್ಯಾಖ್ಯಾನಿಸುವ ಭರವಸೆ ನೀಡುತ್ತದೆ. ‘ಕಲ್ಕಿ 2898 AD’ ನಿಜವಾದ ಪ್ಯಾನ್-ಇಂಡಿಯನ್ ಸಿನಿಮಾ ಎನಿಸಿಕೊಂಡಿದೆ.

ಇದನ್ನೂ ಓದಿ: Pralhad Joshi: ಕಿಮ್ಸ್‌ಗೆ ಅತ್ಯಾಧುನಿಕ “ವೈರಾಣು ಸಂಶೋಧನೆ, ರೋಗ ನಿರ್ಣಯ ಪ್ರಯೋಗಾಲಯ” ಮಂಜೂರು

ತಾರಾಗಣದಲ್ಲಿ ಅಮಿತಾಬ್ ಬಚ್ಚನ್, ಕಮಲ್ ಹಾಸನ್, ಪ್ರಭಾಸ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ಪ್ರಮುಖ ಪಾತ್ರಗಳಲ್ಲಿದ್ದಾರೆ. ನಾಗ್ ಅಶ್ವಿನ್ ನಿರ್ದೇಶಿಸಿದ್ದಾರೆ ಮತ್ತು ವೈಜಯಂತಿ ಮೂವೀಸ್ ಬಂಡವಾಳ ಹೂಡಿದೆ. ಈ ಬಹುಭಾಷಾ, ಪುರಾಣ- ಪ್ರೇರಿತ ವೈಜ್ಞಾನಿಕ ಕಥೆಯುಳ್ಳ ಸಿನಿಮಾ, ಜೂನ್ 27ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ‌

Continue Reading

ಬಾಲಿವುಡ್

Amitabh Bachchan: ಅಶ್ವಿನಿ ದತ್ ಕಾಲಿಗೆ ನಮಸ್ಕರಿಸಿದ ಅಮಿತಾಭ್‌; ʻಬಿಗ್‌ ಬಿʼ ಕೊಂಡಾಡಿದ ರಾಮ್ ಗೋಪಾಲ್ ವರ್ಮಾ!

Amitabh Bachchan: ಅಮಿತಾಭ್‌ ಅವರು ಅಶ್ವಿನಿ ದತ್ ಅವರ ಕಾಲಿಗೆ ನಮಸ್ಕರಿಸಿದ್ದು. ಅಮಿತಾಭ್‌ (Amitabh Bachchan) ಅವರೇ ಅಶ್ವಿನಿ ದತ್ ಅವರಿಗೆ ಕಾಲಿಗೆ ನಮಸ್ಕರಿಸಿದ್ದು ಹಲವರಿಗೆ ಅಚ್ಚರಿ ತಂದಿದೆ. ಬಿಗ್​ ಬಿ ಕೂಡ ತಮ್ಮ ವೃತ್ತಿಜೀವನದಲ್ಲಿ ಬೇರೆ ನಿರ್ಮಾಪಕರ ಕಾಲಿಗೆ ನಮಸ್ಕರಿಸಿದ್ದನ್ನು ನಾನು ನೋಡಿಲ್ಲ’ ಎಂದು ರಾಮ್​ ಗೋಪಾಲ್​ ವರ್ಮಾ ಟ್ವೀಟ್​ ಮಾಡಿದ್ದಾರೆ.

VISTARANEWS.COM


on

Amitabh Bachchan touched Aswini Dutt feet
Koo

ಬೆಂಗಳೂರು: ನಾಗ್ ಅಶ್ವಿನ್ ಅವರ ಕಲ್ಕಿ 2898 ADಯ (Kalki 2898 AD) ಪ್ರೀ-ರಿಲೀಸ್ ಈವೆಂಟ್ ಮುಂಬೈನಲ್ಲಿ ನಡೆಯಿತು. ಪ್ರಭಾಸ್, ದೀಪಿಕಾ ಪಡುಕೋಣೆ, ಕಮಲ್ ಹಾಸನ್ ಮತ್ತು ರಾಣಾ ದಗ್ಗುಬಾಟಿ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಒಂದು ಕ್ಷಣ ಎಲ್ಲರ ಗಮನ ಸೆಳೆದಿದ್ದು, ಅಮಿತಾಭ್‌ ಅವರು ಅಶ್ವಿನಿ ದತ್ ಅವರ ಕಾಲಿಗೆ ನಮಸ್ಕರಿಸಿದ್ದು. ಅಮಿತಾಭ್‌ (Amitabh Bachchan) ಅವರೇ ಅಶ್ವಿನಿ ದತ್ ಅವರಿಗೆ ಕಾಲಿಗೆ ನಮಸ್ಕರಿಸಿದ್ದು ಹಲವರಿಗೆ ಅಚ್ಚರಿ ತಂದಿದೆ.

ನಿರ್ಮಾಪಕ ಅಶ್ವಿನ್‌ ವೇದಿಕೆಗೆ ಬಂದಾಗ, ಅಮಿತಾಭ್‌ ಅವರ ಬಗ್ಗೆ ಮಾತನಾಡಿ, “ಅಶ್ವಿನಿ ದತ್ ಹಾಗೂ ಅವರ ಇಬ್ಬರು ಪುತ್ರಿಯರು (ಸ್ವಪ್ನಾ, ಪ್ರಿಯಾಂಕಾ) ವೈಜಯಂತಿ ಫಿಲ್ಮ್ಸ್ ಮಾಲೀಕರಾಗಿದ್ದಾರೆ. ಅಶ್ವಿನಿ ದತ್ ತುಂಬ ಸರಳ, ವಿನಮ್ರ ವ್ಯಕ್ತಿ. ಪ್ರತಿ ಬಾರಿ ಶೂಟಿಂಗ್‌ ಸೆಟ್‌ಗೆ ಅವರು ಮೊದಲು ಬರುತ್ತಾರೆ. ವಿಮಾನ ನಿಲ್ದಾಣಕ್ಕೆ ಬಂದು ನಿಮ್ಮನ್ನು ಸ್ವಾಗತಿಸುತ್ತಾರೆ. ನಿಮ್ಮ ಸುರಕ್ಷತೆಯನ್ನು ನೋಡಿಕೊಳ್ಳುತ್ತಾರೆ. ಯಾರೂ ಕೂಡ ಅವರ ರೀತಿ ಆಲೋಚನೆ ಮಾಡುವುದಿಲ್ಲʼʼ ಎಂದು ಅಶ್ವಿನ್‌ ಅವರ ಪಾದಕ್ಕೆ ನಮಸ್ಕರಿಸಿದರು ಅಮಿತಾಭ್‌.

ರಾಮ್ ಗೋಪಾಲ್ ವರ್ಮಾ ಈ ಬಗ್ಗೆ ಟ್ವೀಟ್‌ ಮಾಡಿ ʻಅಮಿತಾಭ್​ ಬಚ್ಚನ್​ ಅವರಿಂದ ಈ ಗೌರವ ಪಡೆದಿದ್ದು ಅಶ್ವಿನಿ ದತ್​ ಅವರ ಸಾಧನೆ. ಎನ್​ಟಿಆರ್​ ಅವರಿಂದ ಆರಂಭಗೊಂಡು, ಇಂದಿನ ಯುವ ಹೀರೋಗಳ ತನಕ ಯಾರೂ ಕೂಡ ಈ ರೀತಿ ಮಾಡಿಲ್ಲ . ಬಿಗ್​ ಬಿ ಕೂಡ ತಮ್ಮ ವೃತ್ತಿಜೀವನದಲ್ಲಿ ಬೇರೆ ನಿರ್ಮಾಪಕರ ಕಾಲಿಗೆ ನಮಸ್ಕರಿಸಿದ್ದನ್ನು ನಾನು ನೋಡಿಲ್ಲ’ ಎಂದು ರಾಮ್​ ಗೋಪಾಲ್​ ವರ್ಮಾ ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ: Kalki 2898 AD: ʼಕಲ್ಕಿ 2898 ADʼ ಚಿತ್ರದ ಭೈರವ ಆಂಥಮ್‌ ರಿಲೀಸ್‌!

ಅಶ್ವಿನಿ ದತ್ ಟಾಲಿವುಡ್‌ನ ಅತಿ ದೊಡ್ಡ ನಿರ್ಮಾಣ ಸಂಸ್ಥೆ ಹೊಂದಿದ್ದಾರೆ. ಅವರ ವೃತ್ತಿಜೀವನದಲ್ಲಿ, ಎನ್‌ಟಿಆರ್, ಎಎನ್‌ಆರ್, ಕೃಷ್ಣ, ಸೋಭನ್ ಬಾಬು, ಕೃಷ್ಣಂ ರಾಜು, ಚಿರಂಜೀವಿ, ವೆಂಕಟೇಶ್, ಬಾಲಕೃಷ್ಣ, ನಾಗಾರ್ಜುನ, ಮಹೇಶ್ ಬಾಬು, ಅಲ್ಲು ಅರ್ಜುನ್, ಜೂನಿಯರ್ ಎನ್‌ಟಿಆರ್ ಮತ್ತು ರಾಮ್ ಚರಣ್ ನಟಿಸಿದ ಸಿನಿಮಾಗಳಿಗೆ ಬಂಡವಾಳ ಹೂಡಿದ್ದಾರೆ.

ಈ ವರ್ಷದ ಅತೀ ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಲ್ಕಿ 2898 AD’ ಚಿತ್ರದಲ್ಲಿ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ಪ್ರಭಾಸ್,‍ ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಹಾಗೂ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್‌ನಡಿ ಅಶ್ವಿನಿ ದತ್‍ ನಿರ್ಮಿಸಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ. ‘ಕಲ್ಕಿ 2898 AD’ ಚಿತ್ರವು ಜಗತ್ತಿನಾದ್ಯಂತ ಜೂನ್‍ 27ರಂದು ಬಿಡುಗಡೆ ಆಗಲಿದೆ.

ಟ್ರೇಲರ್‌ನಲ್ಲಿ ಸಿನಿಮಾದ ಪಂಚ್‌ ಡೈಲಾಗ್‌, ಫೈಟ್ಸ್‌ ನೋಡಿ ಅಭಿಮಾನಿಗಳು ದಶಕದ ಟ್ರೇಲರ್‌ ಎಂದು ಹೇಳುತ್ತಿದ್ದಾರೆ. ಚಿತ್ರದ ಟ್ರೇಲರ್‌ ನೋಡುವವರಿಗೆ ಇದು ಯುಗಗಳ ಕಥೆ ಎಂಬುದು ಸ್ಪಷ್ಟವಾಗುತ್ತದೆ. ರೆಕಾರ್ಡ್‌ನಲ್ಲಿ ಇಲ್ಲಿಯವರೆಗೂ ಒಂದೇ ಒಂದು ಫೈಟ್‌ ಸೋತಿಲ್ಲ ಎಂದು ಟಾಲಿವುಡ್‌ ಯಂಗ್‌ ರೆಬಲ್‌ ಸ್ಟಾರ್‌ ಪ್ರಭಾಸ್‌ ಹೇಳುವ ಡೈಲಾಗ್‌ ಟ್ರೇಲರ್‌ನ ಹೈಲೆಟ್‌ ಆಗಿದೆ.


Continue Reading

ಟಾಲಿವುಡ್

Aishwarya Arjun: ಪತಿ ಜತೆ ಭರ್ಜರಿಯಾಗಿ ಕುಣಿದು ಕುಪ್ಪಳಿಸಿದ ಐಶ್ವರ್ಯಾ ಸರ್ಜಾ!

Aishwarya Arjun: ಐಶ್ವಯಾ ಅರ್ಜುನ್​ 2018ರಲ್ಲಿ ‘ಪ್ರೇಮ ಬರಹ’ ಚಿತ್ರದಲ್ಲಿ ನಟಿಸಿದ್ದರು. ಮಗಳ ಚಿತ್ರಕ್ಕೆ ಅರ್ಜುನ್ ಸರ್ಜಾ ನಿರ್ದೇಶನ ಮಾಡಿದ್ದರು. ಸಿನಿಮಾ ಚಿತ್ರ ಕನ್ನಡ ಮತ್ತು ತಮಿಳಿನಲ್ಲಿ ತೆರೆಕಂಡಿತ್ತು. ಉಮಾಪತಿ ಅವರು ತಮಿಳಿನ ಖ್ಯಾತ ಹಾಸ್ಯನಟ ರಾಮಯ್ಯ ಅವರ ಪುತ್ರ ಹಾಗೂ ಇವರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇವರಿಬ್ಬರು ಹಲವಾರು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು.

VISTARANEWS.COM


on

Aishwarya Arjun best evening with umapathy ramaiah
Koo

ಬಹುಭಾಷಾ ನಟ ಅರ್ಜುನ್ ಸರ್ಜಾ ಅವರ ಮಗಳು ಐಶ್ವರ್ಯಾ ಸರ್ಜಾ (Aishwarya Arjun) ಅವರ ವಿವಾಹ ನಟ ಉಮಾಪತಿ ರಾಮಯ್ಯ ಅವರೊಂದಿಗೆ ಚೆನ್ನೈನಲ್ಲಿ ಸೋಮವಾರ (ಜೂನ್​ 10ರಂದು) ನಡೆದಿತ್ತು. ಇದೀಗ ಮದುವೆ ಬಳಿಕ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಪತಿ ಜೊತೆ ಭರ್ಜರಿಯಾಗಿ ಡ್ಯಾನ್ಸ್ ಮಾಡಿದ್ದಾರೆ.

ಉಮಾಪತಿ ಅವರು ತಮಿಳಿನ ಖ್ಯಾತ ಹಾಸ್ಯನಟ ರಾಮಯ್ಯ ಅವರ ಪುತ್ರ ಹಾಗೂ ಇವರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇವರಿಬ್ಬರು ಹಲವಾರು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು.  ಐಶ್ವಯಾ ಅರ್ಜುನ್​ 2018ರಲ್ಲಿ ‘ಪ್ರೇಮ ಬರಹ’ ಚಿತ್ರದಲ್ಲಿ ನಟಿಸಿದ್ದರು. ಮಗಳ ಚಿತ್ರಕ್ಕೆ ಅರ್ಜುನ್ ಸರ್ಜಾ ನಿರ್ದೇಶನ ಮಾಡಿದ್ದರು. ಸಿನಿಮಾ ಚಿತ್ರ ಕನ್ನಡ ಮತ್ತು ತಮಿಳಿನಲ್ಲಿ ತೆರೆಕಂಡಿತ್ತು.
ಸಂಗೀತ ಕಾರ್ಯಕ್ರಮದಲ್ಲಿ ಉಮಾಪತಿ ಮತ್ತು ನಟಿ ಐಶ್ವರ್ಯಾ ಲೈಟ್ ಬಣ್ಣದ ಉಡುಗೆಯಲ್ಲಿ ಮಿಂಚಿದ್ದಾರೆ. ಮಸ್ತ್ ಆಗಿ ಹೆಜ್ಜೆ ಹಾಕಿದೆ ಜೋಡಿ. ಪಾರ್ಟಿ ಫೋಟೋ ಶೇರ್ ಮಾಡಿ ಸುಂದರ ಸಂಜೆ ಎಂದು ನಟಿ ಅಡಿಬರಹ ನೀಡಿದ್ದಾರೆ.

ಇದನ್ನೂ ಓದಿ: Dolly Dhananjay: ಮೈಸೂರಿನಲ್ಲಿ ಡಾಲಿ ಧನಂಜಯ್‌ ಅಭಿನಯದ ‘ಕೋಟಿ’ ಸಿನಿಮಾ ವೀಕ್ಷಿಸಲಿರುವ ಪ್ರತಾಪ್ ಸಿಂಹ!

ಜೂನ್ 14ರಂದು ಆರತಕ್ಷತೆ ಕಾರ್ಯಕ್ರಮ ಚೆನ್ನೈನಲ್ಲಿ ಅದ್ಧೂರಿಯಾಗಿ ಮಾಡಲಾಯ್ತು. ಈ ಸಮಾರಂಭದಲ್ಲಿ ಅಶ್ವಿನಿ ಪುನೀತ್ ರಾಜ್‌ಕುಮಾರ್, ಉಪೇಂದ್ರ, ರಜನಿಕಾಂತ್, ಶಿವಕಾರ್ತಿಕೇಯನ್, ನಟಿ ಸ್ನೇಹಾ, ವಿಜಯ್ ಸೇತುಪತಿ, ಪ್ರಭುದೇವ ಸೇರಿದಂತೆ ಅನೇಕರು ಭಾಗಿಯಾಗಿ ಶುಭಕೋರಿದ್ದರು.

2023ರ ಅಕ್ಟೋಬರ್ 27 ರಂದು ಈ ಇವರಿಬ್ಬರ ಎಂಗೇಜ್​ಮೆಂಟ್​ ಇದೇ ದೇವಸ್ಥಾನದ ಆವರಣದಲ್ಲಿ ನಡೆದಿತ್ತು. ಇವರಿಬ್ಬರು ಹಲವಾರು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು. ಮದುವೆಯಾಗಲು ನಿರ್ಧರಿಸಿದ ಅವರು ಕಳೆದ ವರ್ಷ ಎಂಗೇಜ್​ಮೆಂಟ್ ಮಾಡಿಕೊಂಡು ಇದೀಗ ಮದುವೆಯಾಗಿದ್ದಾರೆ. ಐಶ್ವರ್ಯಾ ಮತ್ತು ಉಮಾಪತಿ ಪ್ರೀತಿಗೆ ಎರಡು ಕುಟುಂಬದ ಸಮ್ಮತಿಯಿತ್ತು. ಬಳಿಕ ಅದ್ಧೂರಿಯಾಗಿ ಎಂಗೇಂಜ್‌ಮೆಂಟ್ ನಡೆದಿತ್ತು. ಐಶ್ವಯಾ ಅರ್ಜುನ್​ 2018ರಲ್ಲಿ ‘ಪ್ರೇಮ ಬರಹ’ ಚಿತ್ರದಲ್ಲಿ ನಟಿಸಿದ್ದರು. ಮಗಳ ಚಿತ್ರಕ್ಕೆ ಅರ್ಜುನ್ ಸರ್ಜಾ ನಿರ್ದೇಶನ ಮಾಡಿದ್ದರು.
Continue Reading

ಟಾಲಿವುಡ್

Ram Charan: ರಾಮ್ ಚರಣ್- ಉಪಾಸನಾ ಪುತ್ರಿಗೆ ಮೊದಲ ಹುಟ್ಟುಹಬ್ಬ!

Ram Charan: ಮದುವೆಯಾಗಿ 11 ವರ್ಷಗಳ ಬಳಿಕ ರಾಮ್‌ ಚರಣ್‌ (Ram Charan)-‌ ಉಪಾಸನಾ ದಂಪತಿ ಹೆಣ್ಣು ಮಗುವಿಗೆ ಪೋಷಕರಾದರು. ಮಗುವಿನ ಹೆಸರು ‘ಕ್ಲೀಂಕಾರ ಕೊನಿಡೆಲಾ’ (Klin Kaara konidela). ಲಲಿತಾ ಸಹಸ್ರನಾಮ ನಾಮದಿಂದ ತೆಗೆದುಕೊಳ್ಳಲಾಗಿದೆ. ಉಪಾಸನಾ ಹಾಗೂ ರಾಮ್ ಚರಣ್ ತಮ್ಮ ಮಗಳಿಗಾಗಿ ವಿಶೇಷವಾಗಿ ಕೋಣೆಯನ್ನು ಡಿಸೈನ್ ಮಾಡಿಸಿದ್ದರು.

VISTARANEWS.COM


on

Ram Charan wife Upasana on daughter Klin Kaara 1st birthday
Koo

ಬೆಂಗಳೂರು: ರಾಮ್ ಚರಣ್ (Ram Charan) ಮತ್ತು ಉಪಾಸನಾ ಕಾಮಿನೇನಿ (Upasana on daughter ) ಕೊನಿಡೇಲಾ ಅವರ ಪುತ್ರಿ ಕ್ಲೀಂಕಾರ (Klin Kaara) ಕೊನಿಡೇಲಾಗೆ ಇಂದು ಜನುಮದಿನದ ಸಂಭ್ರಮ. ಕ್ಲೀಂಕಾರ ಮೊದಲ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾಳೆ. ಉಪಾಸನಾ ಅವರು ಮಗಳ ನಾಮಕರಣ ದಿನದ ಫೋಟೊವನ್ನು ಹಂಚಿಕೊಂಡು ʻʻನಮ್ಮ ಜೀವನದಲ್ಲಿ ಸಂತೋಷ ತಂದಿದ್ದಕ್ಕಾಗಿ ಧನ್ಯವಾದಗಳುʼʼಎಂದು ಕ್ಯಾಪ್ಷನ್‌ ನೀಡಿ ವಿಶ್‌ ಮಾಡಿದ್ದಾರೆ.

“ಮೊದಲ ವರ್ಷದ ಜನ್ಮದಿನದ ಶುಭಾಶಯಗಳು, ನನ್ನ ಪ್ರಿಯತಮೆ ಕ್ಲಿನ್ ಕಾರಾ ಕೊನಿಡೆಲಾ. ನಮ್ಮ ಜೀವನದಲ್ಲಿ ತುಂಬಾ ಸಂತೋಷವನ್ನು ತಂದಿದ್ದಕ್ಕಾಗಿ ಧನ್ಯವಾದಗಳು. ನಾನು ಈ ವೀಡಿಯೊವನ್ನು ಮಿಲಿಯನ್ ಬಾರಿ ನೋಡಿದ್ದೇನೆʼʼಎಂದು ಪೋಸ್ಟ್‌ ಶೇರ್‌ ಮಾಡಿಕೊಂಡಿದ್ದಾರೆ.

ಮದುವೆಯಾಗಿ 11 ವರ್ಷಗಳ ಬಳಿಕ ರಾಮ್‌ ಚರಣ್‌ (Ram Charan)-‌ ಉಪಾಸನಾ ದಂಪತಿ ಹೆಣ್ಣು ಮಗುವಿಗೆ ಪೋಷಕರಾದರು. ಮಗುವಿನ ಹೆಸರು ‘ಕ್ಲೀಂಕಾರ ಕೊನಿಡೆಲಾ’ (Klin Kaara konidela). ಲಲಿತಾ ಸಹಸ್ರನಾಮ ನಾಮದಿಂದ ತೆಗೆದುಕೊಳ್ಳಲಾಗಿದೆ. ಉಪಾಸನಾ ಹಾಗೂ ರಾಮ್ ಚರಣ್ ತಮ್ಮ ಮಗಳಿಗಾಗಿ ವಿಶೇಷವಾಗಿ ಕೋಣೆಯನ್ನು ಡಿಸೈನ್ ಮಾಡಿಸಿದ್ದರು. ಹಲವಾರು ಸ್ಟಫ್ಡ್ ಆಟಿಕೆಗಳು ಮತ್ತು ವಿಶೇಷವಾಗಿ ಕ್ಯುರೇಟೆಡ್ ವಾಲ್‌ಪೇಪರ್ ಹೊಂದಿದೆ ಈ ಕೋಣೆ. ಉಪಾಸನಾ ಹಾಗೂ ರಾಮ್ ಚರಣ್ ಇಬ್ಬರಿಗೂ ಅರಣ್ಯವೆಂದರೆ ಬಹಳ ಪ್ರೀತಿಯಾದ್ದರಿಂದ ಅದೇ ಥೀಮ್ ಇರಿಸಿ ಮಗಳ ಕೋಣೆಯನ್ನು ಡಿಸೈನ್ ಮಾಡಿಸಿದ್ದಾರೆ. ಮರ, ಗಿಡಗಳ ಭಿನ್ನ ರೀತಿಯ ಚಿತ್ರಗಳು ಇಡೀ ಕೋಣೆಯ ತುಂಬೆಲ್ಲ ಇವೆ.‘ಕ್ಲೀಂಕಾರ’ ಪ್ರಕೃತಿಯ ಸಾಕಾರವನ್ನು ಪ್ರತಿನಿಧಿಸುತ್ತದೆ. ದೈವಿಕ ತಾಯಿಯಾದ ‘ಶಕ್ತಿ’ಯ ಪರಮೋಚ್ಚ ಶಕ್ತಿ ಎಂದು ಅರ್ಥ.

ಇದನ್ನೂ ಓದಿ: Ram Charan: ರಾಮ್‌ಚರಣ್‌ ಮಗಳಿಗೆ ಸಿಕ್ತು ಪ್ರಭಾಸ್‌ರಿಂದ ಪುಟಾಣಿ ಬುಜ್ಜಿ!

ಸಿನಿಮಾ ವಿಚಾರಕ್ಕೆ ಬಂದರೆ ರಾಮ್ ಚರಣ್ ನಿರ್ದೇಶಕ ಶಂಕರ್ ಅವರ ‘ಗೇಮ್ ಚೇಂಜರ್’ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಸೆಪ್ಟೆಂಬರ್‌ನಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ. ಆದರೆ, ಅಧಿಕೃತ ಘೋಷಣೆಗೆ ಇನ್ನೂ ಕಾಯಬೇಕಾಗಿದೆ. ‘ಗೇಮ್ ಚೇಂಜರ್’ ನಂತರ, ಚರಣ್ ನಿರ್ದೇಶಕ ಬುಚ್ಚಿ ಬಾಬು ಸಾನಾ ಅವರ ಮುಂಬರುವ ಚಿತ್ರದ ಚಿತ್ರೀಕರಣವನ್ನು ಪ್ರಾರಂಭಿಸಲಿದ್ದಾರೆ.

2019ರಲ್ಲಿ ಬಿಡುಗಡೆಯಾದ ವಿನಯ ವಿಧೇಯ ರಾಮ ಚಿತ್ರದ ನಂತರ ರಾಮ್ ಚರಣ್ ಮತ್ತು ಕಿಯಾರಾ ಆಡ್ವಾಣಿ ಈ ಸಿನಿಮಾದಲ್ಲಿ ಮತ್ತೆ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ಜಯರಾಮ್, ಅಂಜಲಿ ಸುನೀಲ್, ಶ್ರೀಕಾಂತ್, ನವೀನ್ ಚಂದ್ರ ಮುಂತಾದವರು ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಎಸ್ ಥಮನ್ ಚಿತ್ರದ ಹಾಡುಗಳು ಮತ್ತು ಹಿನ್ನೆಲೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ತಿರು ಮತ್ತು ಆರ್.ರತ್ನವೇಲು ಛಾಯಾಗ್ರಹಣ, ಶಮೀರ್ ಮಹಮ್ಮದ್ ಸಂಕಲನ ಚಿತ್ರಕ್ಕಿದೆ.ಈ ಪ್ರಾಜೆಕ್ಟ್ ಅನ್ನು ಪ್ಯಾನ್-ಇಂಡಿಯಾ ಬಿಡುಗಡೆಗಾಗಿ ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ದಿಲ್ ರಾಜು ಮತ್ತು ಶಿರೀಶ್ ಗಾರು ಜಂಟಿಯಾಗಿ ನಿರ್ಮಿಸಿದ್ದಾರೆ. ಗೇಮ್ ಚೇಂಜರ್ ತೆಲುಗು, ತಮಿಳು ಮತ್ತು ಹಿಂದಿ ಮೂರು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

Continue Reading
Advertisement
Kalki 2898 AD Final Trailer Released
ಕರ್ನಾಟಕ1 hour ago

Kalki 2898 AD: ‘ಕಲ್ಕಿ 2898 AD’ ಚಿತ್ರದ ಫೈನಲ್‌ ಟ್ರೇಲರ್‌ ಹೀಗಿದೆ ನೋಡಿ! ಜೂ.27ರಂದು ಚಿತ್ರ ರಿಲೀಸ್

Sonakshi Sinha
ಬಾಲಿವುಡ್2 hours ago

Sonakshi Sinha: ಸೋನಾಕ್ಷಿ ಸಿನ್ಹಾ-ಜಹೀರ್‌ ಇಕ್ಬಾಲ್‌ ಮದುವೆ; ಮೆಹಂದಿ ಶಾಸ್ತ್ರದ ವೇಳೆ ಪತಿ ಜತೆ ನಟಿ ಮಿಂಚಿಂಗ್!

T20 World Cup 2024
ಪ್ರಮುಖ ಸುದ್ದಿ2 hours ago

T20 World Cup 2024 : ಇಂಗ್ಲೆಂಡ್ ವಿರುದ್ಧ ದಕ್ಷಿಣ ಆಫ್ರಿಕಾ ತಂಡಕ್ಕೆ 7 ರನ್ ಜಯ

Suryakumar Yadav
ಪ್ರಮುಖ ಸುದ್ದಿ3 hours ago

Suryakumar Yadav : ವಿಶ್ವದ ಬೆಸ್ಟ್​ ಟಿ20 ಆಟಗಾರ ಸೂರ್ಯಕುಮಾರ್​ ಯಾದವ್​ ಎಂದ ಅಂಬಾಟಿ ರಾಯುಡು

Central Government monitoring wheat price stability: Union Minister Pralhad Joshi
ಕರ್ನಾಟಕ3 hours ago

Pralhad Joshi: ಗೋಧಿ ಬೆಲೆ ಸ್ಥಿರತೆಗೆ ಕೇಂದ್ರ ಸರ್ಕಾರದ ಕ್ರಮ; ಪ್ರಲ್ಹಾದ್‌ ಜೋಶಿ

regional Laboratory sanctioned to Kims Hubballi
ಕರ್ನಾಟಕ3 hours ago

Pralhad Joshi: ಕಿಮ್ಸ್‌ಗೆ ಅತ್ಯಾಧುನಿಕ “ವೈರಾಣು ಸಂಶೋಧನೆ, ರೋಗ ನಿರ್ಣಯ ಪ್ರಯೋಗಾಲಯ” ಮಂಜೂರು

Hinduja Family
ವಿದೇಶ3 hours ago

Hinduja Family: ಮನೆಗೆಲಸದವರ ಮೇಲೆ ದೌರ್ಜನ್ಯ; ಹಿಂದುಜಾ ಕುಟುಂಬದ ನಾಲ್ವರಿಗೆ 4.5 ವರ್ಷ ಜೈಲು!

Gautam Gambhir
ಪ್ರಮುಖ ಸುದ್ದಿ3 hours ago

Gautam Gambhir : ಕೋಚ್​ ಹುದ್ದೆ ಅಂತಿಮವಾಗಿಲ್ಲ; ವರದಿಗಳಿಗೆ ವ್ಯತಿರಿಕ್ತ ಹೇಳಿಕೆ ನೀಡಿದ ಗಂಭೀರ್​!

Rishabh Pant
ಪ್ರಮುಖ ಸುದ್ದಿ4 hours ago

Rishabh Pant : ವಿಶ್ವ ಕಪ್​ನಲ್ಲಿ ವಿನೂತನ ವಿಕೆಟ್​ಕೀಪಿಂಗ್​​ ದಾಖಲೆ ಬರೆದ ರಿಷಭ್​ ಪಂತ್​

Parking Complex
ಬೆಂಗಳೂರು4 hours ago

Parking Complex: ಬೆಂಗಳೂರಿನಲ್ಲಿ ಸುಸಜ್ಜಿತ ಪಾರ್ಕಿಂಗ್‌ ಕಾಂಪ್ಲೆಕ್ಸ್;‌ ಶುಲ್ಕದ ಕುರಿತ ಮಾಹಿತಿ ಇಲ್ಲಿದೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ7 hours ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ13 hours ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 day ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು5 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು5 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ5 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ5 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ6 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ7 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌