Actor Prabhas: ಪ್ರಭಾಸ್ ಜತೆ ರೀಲ್ಸ್ ರಾಣಿ ಇಮಾನ್ ಇಸ್ಮಾಯಿಲ್ ರೊಮ್ಯಾನ್ಸ್‌! - Vistara News

ಟಾಲಿವುಡ್

Actor Prabhas: ಪ್ರಭಾಸ್ ಜತೆ ರೀಲ್ಸ್ ರಾಣಿ ಇಮಾನ್ ಇಸ್ಮಾಯಿಲ್ ರೊಮ್ಯಾನ್ಸ್‌!

Actor Prabhas:ಸುದೀಪ್ ಚಟರ್ಜಿ ಐಎಸ್‌ಸಿ ಛಾಯಾಗ್ರಹಣ, ವಿಶಾಲ್ ಚಂದ್ರಶೇಖರ್ ಸಂಗೀತ, ಕೋಟಗಿರಿ ವೆಂಕಟೇಶ್ವರ ರಾವ್ ಸಂಕಲನ ಚಿತ್ರಕ್ಕಿದೆ. ಶೀಘ್ರದಲ್ಲಿಯೇ ಪ್ರಭಾಸ್ ಹಾಗೂ ಹನು ರಾಘವಪುಡಿ ಹೊಸ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ.

VISTARANEWS.COM


on

Prabhas-Hanu Iman Esmail Trending
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ‘ಸೀತಾರಾಮಂ’ (Seetharamam) ಡೈರೆಕ್ಟರ್ ಹನು ರಾಘವಪುಡಿ ಜೊತೆ ಪ್ರಭಾಸ್ (Prabhas) ಕೈಜೋಡಿಸಿದ್ದಾರೆ. ಈ ಚಿತ್ರಕ್ಕೆ ರೀಲ್ಸ್ ರಾಣಿ ಇಮಾನ್ ಇಸ್ಮಾಯಿಲ್ (Iman Esmail) ನಾಯಕಿಯಾಗಿದ್ದಾರೆ. ಸೋಷಿಯಲ್ ಮೀಡಿಯಾ ಸ್ಟಾರ್ ಆಗಿರುವ ಇಮಾನ್ ಅವರು ಪ್ರಭಾಸ್‌ಗೆ ಹೀರೋಯಿನ್ ಆಗಿ ಆಯ್ಕೆಯಾಗಿದ್ದಾರೆ. ಮೈತ್ರಿ ಮೂವೀ ಮೇಕರ್ಸ್ ಮುಹೂರ್ತ ನೆರವೇರಿಸಿದೆ.

ಇಮಾನ್ ಇಸ್ಮಲ್ ಅವರು ನಾಯಕಿಯಾಗಿ ನಟಿಸಲಿದ್ದಾರೆ.ಹನು ರಾಘವಪುಡಿ ನಿರ್ದೇಶನದ ಮೂಲಕ ಅವರು ಟಾಲಿವುಡ್‌ಗೆ ಪದಾರ್ಪಣೆ ಮಾಡುತ್ತಿದ್ದಾರೆ. ಹೈದರಾಬಾದ್ ಪ್ರಭಾಸ್ ನಟನೆಯ ‘ಫೌಜಿ’ ಸಿನಿಮಾದ ಮುಹೂರ್ತ ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿದೆ. ಈ ವೇಳೆ, ಇಮಾನ್ವಿ (Imanvi) ಎಂದೇ ಫೇಮಸ್ ಆಗಿರುವ ರೀಲ್ಸ್ ರಾಣಿ ಕೂಡ ಭಾಗಿಯಾಗಿದ್ದರು. ಇದು ಅನೇಕರ ಗಮನ ಸೆಳೆದಿದೆ. ರೀಲ್ಸ್ ರಾಣಿ ಇಮಾನ್ವಿ ಮೊದಲ ಸಿನಿಮಾನೇ ಪ್ರಭಾಸ್ ಜೊತೆ ನಟಿಸುತ್ತಿರುವ ಬಗ್ಗೆ ಫ್ಯಾನ್ಸ್ ಮೆಚ್ಚುಗೆ ಸೂಚಿಸಿದ್ದಾರೆ. ಈಕೆಯ ಹಿನ್ನೆಲೆ ಬಗ್ಗೆಯೂ ಆಸಕ್ತಿ ತೋರಿಸುತ್ತಿದ್ದಾರೆ.

ಯೂಟ್ಯೂಬ್ ಚಾನೆಲ್‌ನಲ್ಲಿ 1.81 ಮಿಲಿಯನ್ ಸಬ್‌ಸ್ಕೈಬರ್ ಹೊಂದಿದ್ದಾರೆ. ಇನ್ನೂ ತಂದೆಯ ಪ್ರೋತ್ಸಾಹದೊಂದಿಗೆ ಕೆಲಸ ಬಿಟ್ಟು ಯೂಟ್ಯೂಬ್ ಚಾನೆಲ್ ಆರಂಭಿಸಿದ್ದರು. ಈಗ ನಾಯಕಿಯಾಗಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. 1940ರ ದಶಕದ ಕಥೆಯನ್ನು ಆಧರಿಸಿರುವ ಐತಿಹಾಸಿಕ ಕಾಲ್ಪನಿಕ ಚಿತ್ರ ಇದು ಎನ್ನಲಾಗಿದ್ದು, ಶೀಘ್ರದಲ್ಲೇ ಚಿತ್ರೀಕರಣ ಪ್ರಾರಂಭವಾಗುತ್ತದೆ.

ಸುದೀಪ್ ಚಟರ್ಜಿ ಐಎಸ್‌ಸಿ ಛಾಯಾಗ್ರಹಣ, ವಿಶಾಲ್ ಚಂದ್ರಶೇಖರ್ ಸಂಗೀತ, ಕೋಟಗಿರಿ ವೆಂಕಟೇಶ್ವರ ರಾವ್ ಸಂಕಲನ ಚಿತ್ರಕ್ಕಿದೆ. ಶೀಘ್ರದಲ್ಲಿಯೇ ಪ್ರಭಾಸ್ ಹಾಗೂ ಹನು ರಾಘವಪುಡಿ ಹೊಸ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ.

ಇದನ್ನೂ ಓದಿ: Prabhas New Film: ಹೊಸ ಯುದ್ಧ ಶುರು; ಪ್ರಭಾಸ್ ಅಭಿನಯದ ಮುಂದಿನ ಚಿತ್ರ ಸುಳಿವು!

ಈ ಐತಿಹಾಸಿಕ ಚಿತ್ರದಲ್ಲಿ ಪ್ರಭಾಸ್ ಜೊತೆಗೆ ಹನು ರಾಘವಪುಡಿ, ಮಿಥುನ್ ಚಕ್ರವರ್ತಿ ಮತ್ತು ಮಾನ್ವಿ ಕೂಡ ನಟಿಸಲಿದ್ದಾರೆ. ಈ ಕುರಿತು ಮೈತ್ರಿ ಮೂವಿ ಮೇಕರ್ಸ್ ತನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದೆ.ಜೂನ್ 27ರಂದು ಬಿಡುಗಡೆಯಾದ ಕಲ್ಕಿ 2898ಎಡಿಯಲ್ಲಿ ಪ್ರಭಾಸ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮತ್ತು ಅಮಿತಾಭ್ ಬಚ್ಚನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರವು ಪ್ರೇಕ್ಷಕರಿಂದ ಅಗಾಧವಾದ ಪ್ರತಿಕ್ರಿಯೆಯನ್ನು ಗಳಿಸಿತು. ವಿಶ್ವಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 1000 ಕೋಟಿ ರೂಪಾಯಿಗಳನ್ನು ಬಾಚಿಕೊಂಡಿತ್ತು. ಈ ಬಗ್ಗೆ ಹಿಂದೆ ಬಿಗ್ ಬಿ ಕೂಡ ತಮ್ಮ ಸಾಮಾಜಿಕ ಜಾಲತಾಣದಲ್ಲಿ ವಿಷಯವನ್ನು ಹಂಚಿಕೊಂಡು ಚಿತ್ರದ ಯಶಸ್ಸಿಗೆ ಕೃತಜ್ಞತೆಯನ್ನು ಸಲ್ಲಿಸಿದ್ದರು. ಅಲ್ಲದೇ ಕಲ್ಕಿಯ ಸಾರವು ಒಳಗೆ ಮತ್ತು ಹೊರಗೆ ಪ್ರತಿಧ್ವನಿಸುತ್ತಿದೆ. ರೆ. ಕಲ್ಕಿ ಚಿತ್ರದ ಸೀಕ್ವೆಲ್‌ಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ ಎಂದು ಹೇಳಿಕೊಂಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Prabhas New Film: ಹೊಸ ಯುದ್ಧ ಶುರು; ಪ್ರಭಾಸ್ ಅಭಿನಯದ ಮುಂದಿನ ಚಿತ್ರ ಸುಳಿವು!

ಕಲ್ಕಿ 2898ಎಡಿ ಚಿತ್ರದ ಯಶಸ್ಸಿನ ಬಳಿಕ ಪ್ರಭಾಸ್ ಅಭಿನಯದ ಮುಂದಿನ ಚಿತ್ರದ (Prabhas New Film) ಘೋಷಣೆಯಾಗಿದೆ. ಶೀಘ್ರದಲ್ಲೇ ಇದರ ಚಿತ್ರೀಕರಣ ಪ್ರಾರಂಭವಾಗಲಿರುವುದಾಗಿ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳಲಾಗಿದೆ. ಇನ್ನೂ ಹೆಸರಿಡದ ಈ ಚಿತ್ರದಲ್ಲಿ ಪ್ರಭಾಸ್ ಜೊತೆಗೆ ಹನು ರಾಘವಪುಡಿ, ಮಿಥುನ್ ಚಕ್ರವರ್ತಿ ಮತ್ತು ಮಾನ್ವಿ ಕೂಡ ನಟಿಸಲಿದ್ದಾರೆ ಎನ್ನುವ ಸುಳಿವು ನೀಡಲಾಗಿದೆ.

VISTARANEWS.COM


on

By

Prabhas New Film
Koo

ಕಲ್ಕಿ 2898ಎಡಿ (Kalki 2898 AD) ಬೃಹತ್ ಯಶಸ್ಸಿನ ಬಳಿಕ ಇದೀಗ ಪ್ರಭಾಸ್ (actor prabhas) ಅಭಿನಯದ ಮುಂದಿನ ಚಿತ್ರದ (Prabhas New Film) ಘೋಷಣೆಯಾಗಿದೆ. ಇನ್ನೂ ಹೆಸರಿಡದ ಈ ಐತಿಹಾಸಿಕ ಚಿತ್ರದಲ್ಲಿ ಪ್ರಭಾಸ್ ಜೊತೆಗೆ ಹನು ರಾಘವಪುಡಿ, ಮಿಥುನ್ ಚಕ್ರವರ್ತಿ ಮತ್ತು ಮಾನ್ವಿ ಕೂಡ ನಟಿಸಲಿದ್ದಾರೆ. ಈ ಕುರಿತು ಮೈತ್ರಿ ಮೂವಿ ಮೇಕರ್ಸ್ ತನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದೆ.

ʼಪ್ರಭುತ್ವಕ್ಕಾಗಿ ಯುದ್ಧ ನಡೆದಾಗ ಒಬ್ಬ ಯೋಧ ಯಾವುದಕ್ಕಾಗಿ ತಾವು ಹೋರಾಡಬೇಕು ಎಂಬ ಬಗ್ಗೆ ಹೊಸ ಭಾಷ್ಯ ಬರೆದʼ ಎಂಬರ್ಥದ ಶೀರ್ಷಿಕೆಯೊಂದಿಗೆ ಈ ಪೋಸ್ಟ್ ಅನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳಲಾಗಿದೆ. 1940ರ ದಶಕದ ಕಥೆಯನ್ನು ಆಧರಿಸಿರುವ ಐತಿಹಾಸಿಕ ಕಾಲ್ಪನಿಕ ಚಿತ್ರ ಇದು ಎನ್ನಲಾಗಿದ್ದು, ಶೀಘ್ರದಲ್ಲೇ ಚಿತ್ರೀಕರಣ ಪ್ರಾರಂಭವಾಗುತ್ತದೆ ಎನ್ನುವ ಸುಳಿವನ್ನು ಪೋಸ್ಟ್ ನಲ್ಲಿ ಹಂಚಿಕೊಳ್ಳಲಾಗಿದೆ.


ಬಿಡುಗಡೆಯಾದ ಸುಮಾರು ಎರಡು ತಿಂಗಳ ಬಳಿಕ ಕಲ್ಕಿ 2898ಎಡಿ ಈಗ ಅದರ ಒಟಿಟಿಯಲ್ಲಿ ಬಿಡುಗಡೆಗೆ ಸಿದ್ಧವಾಗಿದೆ. ಶೀಘ್ರದಲ್ಲೇ ಪ್ರೈಮ್ ವಿಡಿಯೋ ಮತ್ತು ನೆಟ್‌ಫ್ಲಿಕ್ಸ್‌ನಲ್ಲಿ ಇದು ಪ್ರದರ್ಶನ ಕಾಣಲಿದೆ ಎಂದು ಬಹಿರಂಗ ಪಡಿಸಲಾಗಿದೆ. ಒಟಿಟಿಯಲ್ಲಿ ನಾಗ್ ಅಶ್ವಿನ್ ಅವರ ನಿರ್ದೇಶನದ ತೆಲುಗು ಆವೃತ್ತಿಯನ್ನು ಮೊದಲು ಸ್ಟ್ರೀಮ್ ಮಾಡಿದರೆ ಬಳಿಕ ಹಿಂದಿ ಆವೃತ್ತಿ ಪ್ರೇಕ್ಷಕರಿಗೆ ಲಭ್ಯವಾಗಲಿದೆ.

2898 ಎಡಿಯಲ್ಲಿ ಅವಕಾಶ ಕೊಟ್ಟ ಚಿತ್ರ ನಿರ್ದೇಶಕ ನಾಗ್ ಅಶ್ವಿನ್ ಅವರನ್ನು ಶ್ಲಾಘಿಸಿರುವ ಪ್ರಭಾಸ್, ನಾಗ್‌ನಂತಹ ದೂರದೃಷ್ಟಿಯ ನಿರ್ದೇಶಕ ಮತ್ತು ಅಸಾಧಾರಣ ಪಾತ್ರವರ್ಗದೊಂದಿಗೆ ಕಲ್ಕಿಯಲ್ಲಿ ಕೆಲಸ ಮಾಡುವುದು ನಿಜವಾಗಿಯೂ ಹರ್ಷದಾಯಕವಾಗಿದೆ. ಚಲನಚಿತ್ರವು ಪುರಾಣ ಮತ್ತು ಭವಿಷ್ಯದ ಅಂಶಗಳ ಮಿಶ್ರಣದೊಂದಿಗೆ ಕಥೆ ಹೇಳುವುದು ಮಾತ್ರವಲ್ಲದೆ ಮಾನವ ಸ್ವಭಾವದ ಸಂಕೀರ್ಣತೆಗಳನ್ನು ಆಳವಾಗಿ ಪರಿಶೀಲಿಸುತ್ತದೆ. ಶಕ್ತಿ ಮತ್ತು ನಂಬಿಕೆಯಿಂದ ಪ್ರೇರಿತವಾಗಿರುವ ಭೈರವನ ಪಾತ್ರವು ರೋಮಾಂಚಕವಾಗಿದೆ. ಕಲ್ಕಿ 2898ಎಡಿ ಥಿಯೇಟರ್‌ಗಳಲ್ಲಿ ಪ್ರೇಕ್ಷಕರಿಂದ ಪಡೆದ ಎಲ್ಲಾ ಪ್ರೀತಿಯ ಅನಂತರ ಪ್ರೈಮ್ ವಿಡಿಯೋದಲ್ಲಿ ಅದರ ಜಾಗತಿಕ ಪ್ರೀಮಿಯರ್‌ಗಾಗಿ ಇನ್ನು ಕಾಯಲು ಸಾಧ್ಯವಿಲ್ಲ. ನಾವು ಅದನ್ನು ಮಾಡುವುದನ್ನು ಆನಂದಿಸಿದಂತೆ ವೀಕ್ಷಕರು ಅದನ್ನು ನೋಡಿ ಆನಂದಿಸುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.


ಜೂನ್ 27ರಂದು ಬಿಡುಗಡೆಯಾದ ಕಲ್ಕಿ 2898ಎಡಿಯಲ್ಲಿ ಪ್ರಭಾಸ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮತ್ತು ಅಮಿತಾಭ್ ಬಚ್ಚನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರವು ಪ್ರೇಕ್ಷಕರಿಂದ ಅಗಾಧವಾದ ಪ್ರತಿಕ್ರಿಯೆಯನ್ನು ಗಳಿಸಿತು. ವಿಶ್ವಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 1000 ಕೋಟಿ ರೂಪಾಯಿಗಳನ್ನು ಬಾಚಿಕೊಂಡಿತ್ತು.

ಇದನ್ನೂ ಓದಿ: Rakshit Shetty: ಕಾಪಿ ರೈಟ್ ಉಲ್ಲಂಘನೆ; ರಕ್ಷಿತ್ ಶೆಟ್ಟಿಗೆ 20 ಲಕ್ಷ ರೂ. ಠೇವಣಿ ಇಡುವಂತೆ ದೆಹಲಿ ಹೈಕೋರ್ಟ್ ಆದೇಶ

ಈ ಬಗ್ಗೆ ಹಿಂದೆ ಬಿಗ್ ಬಿ ಕೂಡ ತಮ್ಮ ಸಾಮಾಜಿಕ ಜಾಲತಾಣದಲ್ಲಿ ವಿಷಯವನ್ನು ಹಂಚಿಕೊಂಡು ಚಿತ್ರದ ಯಶಸ್ಸಿಗೆ ಕೃತಜ್ಞತೆಯನ್ನು ಸಲ್ಲಿಸಿದ್ದರು. ಅಲ್ಲದೇ ಕಲ್ಕಿಯ ಸಾರವು ಒಳಗೆ ಮತ್ತು ಹೊರಗೆ ಪ್ರತಿಧ್ವನಿಸುತ್ತಿದೆ. ರೆ. ಕಲ್ಕಿ ಚಿತ್ರದ ಸೀಕ್ವೆಲ್‌ಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ ಎಂದು ಹೇಳಿಕೊಂಡಿದ್ದರು.

Continue Reading

ಟಾಲಿವುಡ್

Vicky Kaushal: ವಿಕ್ಕಿ ಕೌಶಲ್ `ಛಾವಾ’ ಟೀಸರ್‌ ಔಟ್‌!

Vicky Kaushal: ರಶ್ಮಿಕಾ ಈಗಾಗಲೇ ಧ್ವನಿ ತರಬೇತಿಯನ್ನು ಪಡೆದಿದ್ದಾರೆ. ಕತ್ತಿ ಕಾಳಗ, ಕುದುರೆ ಸವಾರಿ ಮತ್ತು ಬಿಲ್ಲುಗಾರಿಕೆಯಲ್ಲಿ ಪ್ರವೀಣನಾಗಲು ನಾಲ್ಕು ತಿಂಗಳ ಕಾಲ ತರಬೇತಿಯನ್ನು ವಿಕ್ಕಿ ಅವರು ಪಡೆದುಕೊಂಡಿದ್ದಾರೆ. ಈ ಪ್ರಾಜೆಕ್ಟ್‌ ಅನ್ನು ದೊಡ್ಡದಾಗಿ ಮಾಡಲು ತಾಂತ್ರಿಕವಾಗಿಯೂ ಪಳಗಿದವರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ವರದಿಯಾಗಿದೆ.

VISTARANEWS.COM


on

Vicky Kaushal Chhava teaser released
Koo

ವಿಕ್ಕಿ ಕೌಶಲ್ (Vicky Kaushal) ತಮ್ಮ ಮುಂದಿನ ಚಿತ್ರ `ಛಾವಾ’ದ ಟೀಸರ್‌ ಬಿಡುಗಡೆಗೊಂಡಿದೆ. ತೀವ್ರವಾದ ಯುದ್ಧದ ದೃಶ್ಯಗಳಿಂದ ತುಂಬಿದೆ. ಛತ್ರಪತಿ ಶಿವಾಜಿ ಮಹಾರಾಜರ ಮಗ ಛತ್ರಪತಿ ಸಂಭಾಜಿ ಮಹಾರಾಜ್ ಲುಕ್‌ ಕಂಡು ಫ್ಯಾನ್ಸ್‌ ಫಿದಾ ಆಗಿದ್ದಾರೆ.

ಮರಾಠಾ ರಾಜ ಛತ್ರಪತಿ ಶಿವಾಜಿ ಮಹಾರಾಜರ ಹಿರಿಯ ಮಗ ಛತ್ರಪತಿ ಸಂಭಾಜಿ ಮಹಾರಾಜನ ಪಾತ್ರವನ್ನು ವಿಕ್ಕಿ ನಿಭಾಯಿಸಿದ್ದಾರೆ. ಚಿತ್ರವು ಪ್ರಾಥಮಿಕವಾಗಿ ಸಂಭಾಜಿ ಮಹಾರಾಜರ ಶೌರ್ಯ ಅವರ ತ್ಯಾಗ ಮತ್ತು ಯುದ್ಧಗಳನ್ನು ಗೆಲ್ಲುವ ತಂತ್ರಗಳ ಬಗ್ಗೆ ಇದ್ದರೂ, ಗಂಡ ಮತ್ತು ಹೆಂಡತಿಯ ನಡುವಿನ ಭಾವನಾತ್ಮಕ ಪ್ರೇಮಕಥೆಯನ್ನು ಸಹ ಒಳಗೊಂಡಿದೆ. ಮರಾಠ ಸಾಮ್ರಾಜ್ಯದಿಂದ ಸಂಭಾಜಿ ದೂರ ಇದ್ದಾಗ ಅವರ ಹೆಂಡತಿ ಎಲ್ಲವನ್ನೂ ನಿರ್ವಹಿಸುತ್ತಿದ್ದರು ಎನ್ನುವುದು ವಿಶೇಷ. ಈ ವಿಚಾರ ಕೂಡ ಸಿನಿಮಾದಲ್ಲಿ ಹೈಲೈಟ್ ಆಗಲಿದೆ.

ರಶ್ಮಿಕಾ ಈಗಾಗಲೇ ಧ್ವನಿ ತರಬೇತಿಯನ್ನು ಪಡೆದಿದ್ದಾರೆ. ಕತ್ತಿ ಕಾಳಗ, ಕುದುರೆ ಸವಾರಿ ಮತ್ತು ಬಿಲ್ಲುಗಾರಿಕೆಯಲ್ಲಿ ಪ್ರವೀಣನಾಗಲು ನಾಲ್ಕು ತಿಂಗಳ ಕಾಲ ತರಬೇತಿಯನ್ನು ವಿಕ್ಕಿ ಅವರು ಪಡೆದುಕೊಂಡಿದ್ದಾರೆ. ಈ ಪ್ರಾಜೆಕ್ಟ್‌ ಅನ್ನು ದೊಡ್ಡದಾಗಿ ಮಾಡಲು ತಾಂತ್ರಿಕವಾಗಿಯೂ ಪಳಗಿದವರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: Thangalaan Movie: ಚಿಯಾನ್ ವಿಕ್ರಂ ‘ತಂಗಲಾನ್’ ಸಿನಿಮಾಗೆ ಮೆಚ್ಚುಗೆಯ ಮಹಾಪೂರ!

ಸ್ತ್ರೀ’, ‘ಭೇಡಿಯಾ’ ಮೊದಲಾದ ಸಿನಿಮಾಗಳಿಗೆ ಬಂಡವಾಳ ಹೂಡಿದ ಮ್ಯಾಡಾಕ್ ಫಿಲ್ಮ್ಸ್ ನಿರ್ಮಾಣ ಸಂಸ್ಥೆಯ ಅಡಿಯಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ʻಛಾವಾʼ ಸಿನಿಮಾ ಈ ಪ್ರೊಡಕ್ಷನ್ ಹೌಸ್‌ನ ಮೊದಲ ಐತಿಹಾಸಿಕ ಯೋಜನೆಯಾಗಿದೆ. ಈ ಯೋಜನೆ ವಿಕ್ಕಿ ಮತ್ತು ರಶ್ಮಿಕಾ ಅವರ ಮೊದಲ ಸಹಯೋಗವಾಗಿದೆ. ಈ ಹಿಂದೆ ಒಳಉಡುಪುಗಳ ಜಾಹೀರಾತಿಗಾಗಿ ಒಟ್ಟಿಗೆ ಕೆಲಸ ಮಾಡಿದ್ದರು.

Continue Reading

ಟಾಲಿವುಡ್

Thangalaan Movie: ಚಿಯಾನ್ ವಿಕ್ರಂ ‘ತಂಗಲಾನ್’ ಸಿನಿಮಾಗೆ ಮೆಚ್ಚುಗೆಯ ಮಹಾಪೂರ!

Thangalaan Movi e:ವಿಜಯ್ ಅಭಿಮಾನಿಯೊಬ್ಬ ಟ್ವೀಟ್ ಮಾಡಿ, ‘2024ರಲ್ಲಿ ಈವರೆಗೆ ಬಿಡುಗಡೆ ಆದ ಸಿನಿಮಾಗಳಲ್ಲಿ ಇದು ಅತ್ಯುತ್ತಮ ಸಿನಿಮಾ. ಈ ಸಿನಿಮಾದ ನಟನೆಗೆ ಚಿಯಾನ್ ವಿಕ್ರಂಗೆ ಪ್ರಶಸ್ತಿ ನೀಡಬೇಕು. ಜಿವಿ ಪ್ರಕಾಶ್ ಸಂಗೀತ ಅತ್ಯದ್ಭುತ. ಎಲ್ಲ ಕ್ರೆಡಿಟ್ ಹೋಗಬೇಕಿರುವುದು ನಿರ್ದೇಶಕ ಪಾ ರಂಜಿತ್​ಗೆ. ಎಂದಿನಂತೆ ಪಾ ರಂಜಿತ್ ನಿರ್ದೇಶನ ಅದ್ಭುತವಾಗಿತ್ತು. ದ್ವಿತೀಯಾರ್ಧ ನನಗೆ ಹೆಚ್ಚು ಇಷ್ಟವಾಯ್ತು’ ಎಂದಿದ್ದಾರೆ. ಸಿನಿಮಾ ನೋಡಿರುವ ಬಹುತೇಕ ನೆಟ್ಟಿಗರು ‘ತಂಗಲಾನ್’ ಸಿನಿಮಾವನ್ನು ಮೆಚ್ಚಿಕೊಂಡಿದ್ದಾರೆ. 

VISTARANEWS.COM


on

Thangalaan Movie Review Pa Ranjith's Thangalaan
Koo

ಜ್ಞಾನವೇಲ್ ರಾಜ್ ನಿರ್ಮಾಣದ,‌ ಪಾ ರಂಜಿತ್ ನಿರ್ದೇಶನದ ಹಾಗೂ ಚಿಯಾನ್ ವಿಕ್ರಮ್‍ ಅಭಿನಯದ ‘ತಂಗಲಾನ್ʼ ಚಿತ್ರವು (Thangalaan Movie) ಇಂದು ಆಗಸ್ಟ್ 15 ಜಗತ್ತಿನಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆಯಾಗಿದೆ. 2011 ರಲ್ಲಿ ನಟ ವಿಕ್ರಮ್ ಅಭಿನಯದ ‘ದೈವತಿರುಮಗಳು’ ಚಿತ್ರದ ನಂತರ ಗುಣಮಟ್ಟದ ಬ್ರೇಕ್ ನೀಡುವ ಚಿತ್ರಗಳು ಬಂದಿಲ್ಲ. ಏಕೆಂದರೆ ಈ ಚಿತ್ರದ ನಂತರ ಬಿಡುಗಡೆಯಾದ ಐ, ಇರುಮುಗನ್, ಕೋಬ್ರಾ, ಸಾಮಿ ಸ್ಕ್ವೇರ್ ಮುಂತಾದ ಬಿಗ್ ಬಜೆಟ್ ಚಿತ್ರಗಳು ಮಿಶ್ರ ವಿಮರ್ಶೆಗಳನ್ನು ಕಂಡವು. ಆದರೆ, ನಿರ್ದೇಶಕ ಮಣಿರತ್ನಂ ನಿರ್ದೇಶನದಲ್ಲಿ ಎರಡು ಭಾಗಗಳಲ್ಲಿ ತೆರೆಕಂಡ ‘ಪೊನ್ನಿಯಿನ್ ಸೆಲ್ವನ್’ ಚಿತ್ರ ವಿಕ್ರಮ್ ಗೆ ಮತ್ತೆ ಹಿಟ್ ಆಯಿತು.ಇದೀಗ ‘ತಂಗಾಲನ್’ ಅದ್ಭುತವಾದ ಸಿನಿಮಾ, ಕೆಲವು ಅದ್ಭುತ ದೃಶ್ಯಗಳನ್ನು ಪಾ ರಂಜಿತ್ ಕಟ್ಟಿಕೊಟ್ಟಿದ್ದಾರೆ’ ಎಂದು ಟ್ವೀಟ್ ಮಾಡಿದ್ದಾರೆ ಸಿನಿ ರಸಿಕರು.

ʻʻಈ ಚಿತ್ರವನ್ನು ಹಾಲಿವುಡ್ ಗುಣಮಟ್ಟದಲ್ಲಿ ಚಿತ್ರೀಕರಿಸಲಾಗಿದೆ. ನಿರ್ದೇಶಕ ಪಾ.ರಂಜಿತ್ ಬಗ್ಗೆ ಹೇಳಲು ಪದಗಳಿಲ್ಲ. ಅದೇ ರೀತಿ ನಟ ವಿಕ್ರಮ್ ಕೂಡ ತಮ್ಮ ಸಂಪೂರ್ಣ ಸಾಮರ್ಥ್ಯವನ್ನು ತೋರಿಸಿದ್ದಾರೆʼ ಎಂದು ಅಭಿಮಾನಿಯೊಬ್ಬರು ಬರೆದುಕೊಂಡಿದ್ದಾರೆ.

ವಿಜಯ್ ಅಭಿಮಾನಿಯೊಬ್ಬ ಟ್ವೀಟ್ ಮಾಡಿ, ‘2024ರಲ್ಲಿ ಈವರೆಗೆ ಬಿಡುಗಡೆ ಆದ ಸಿನಿಮಾಗಳಲ್ಲಿ ಇದು ಅತ್ಯುತ್ತಮ ಸಿನಿಮಾ. ಈ ಸಿನಿಮಾದ ನಟನೆಗೆ ಚಿಯಾನ್ ವಿಕ್ರಂಗೆ ಪ್ರಶಸ್ತಿ ನೀಡಬೇಕು. ಜಿವಿ ಪ್ರಕಾಶ್ ಸಂಗೀತ ಅತ್ಯದ್ಭುತ. ಎಲ್ಲ ಕ್ರೆಡಿಟ್ ಹೋಗಬೇಕಿರುವುದು ನಿರ್ದೇಶಕ ಪಾ ರಂಜಿತ್​ಗೆ. ಎಂದಿನಂತೆ ಪಾ ರಂಜಿತ್ ನಿರ್ದೇಶನ ಅದ್ಭುತವಾಗಿತ್ತು. ದ್ವಿತೀಯಾರ್ಧ ನನಗೆ ಹೆಚ್ಚು ಇಷ್ಟವಾಯ್ತು’ ಎಂದಿದ್ದಾರೆ. ಸಿನಿಮಾ ನೋಡಿರುವ ಬಹುತೇಕ ನೆಟ್ಟಿಗರು ‘ತಂಗಲಾನ್’ ಸಿನಿಮಾವನ್ನು ಮೆಚ್ಚಿಕೊಂಡಿದ್ದಾರೆ. 

ಖ್ಯಾತ ಚಿತ್ರ ವಿಮರ್ಶಕ ಕ್ರಿಸ್ಟೋಫರ್ ಕನಕರಾಜ್ ನಿನ್ನೆಯಿಂದ ‘ತಂಗಳನ್’ ಚಿತ್ರದ ಬಗ್ಗೆ ತಮ್ಮ ನಿರೀಕ್ಷೆಗಳನ್ನು ವ್ಯಕ್ತಪಡಿಸಿದ್ದಾರೆ, ಇದು ನಕಾರಾತ್ಮಕ ವಿಮರ್ಶೆಗಳನ್ನು ಪಡೆಯುತ್ತಿದೆ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: Physical Abuse : ಭೀಮಾ ಸಿನಿಮಾ ನೋಡಲು ಬಂದು ಲೇಡಿಸ್‌ ವಾಶ್‌ ರೂಂನಲ್ಲಿ ಮೊಬೈಲ್ ಇಟ್ಟ ಅಪ್ರಾಪ್ತ!

ಕನ್ನಡದಲ್ಲಿ ‘ಕೃಷ್ಣಂ ಪ್ರಣಯ ಸಖಿ’, ‘ಗೌರಿ’, ತೆಲುಗಿನಲ್ಲಿ ‘ಮಿಸ್ಟರ್ ಬಚ್ಚನ್’ ಮತ್ತು ‘ಡಬಲ್ ಇಸ್ಮಾರ್ಟ್’ ಇನ್ನು ತಮಿಳಿನಲ್ಲಿ ಚಿಯಾನ್ ವಿಕ್ರಂ ನಟನೆಯ ‘ತಂಗಲಾನ್’ ಸಿನಿಮಾ ತೆರೆಗೆ ಬಂದಿದೆ. 

ಈ ಚಿತ್ರದ ಪಾತ್ರಕ್ಕಾಗಿ ವಿಕ್ರಮ್‍ ಆರು ತಿಂಗಳ ತಯಾರಿ ನಡೆಸಿದ್ದಾರಂತೆ ಹಾಗೂ ತುಂಬಾ ತೂಕವನ್ನು ಕಳೆದುಕೊಂಡಿದ್ದಾರಂತೆ. ದೈಹಿಕವಾಗಿ ಬದಲಾಗುವುದಕ್ಕಿಂತ ಮಾನಸಿಕವಾಗಿ ಬದಲಾಗುವುದು ಬಹಳ ಕಷ್ಟವಾಗಿತ್ತು. ಪ್ರತಿ ದಿನ ನಾಲ್ಕೈದು ಗಂಟೆಗಳ ಕಾಲ ಮೇಕಪ್‍ ಹಾಕಿಕೊಳ್ಳಬೇಕಿತ್ತು ಎಂದು ಚಿತ್ರೀಕರಣ ಸಮಯದ ಅನುಭವವನ್ನು ವಿಕ್ರಮ್ ಈ ಹಿಂದೆ ಹಂಚಿಕೊಂಡಿದ್ದರು.

Continue Reading

ಬಿಗ್ ಬಾಸ್

Bigg Boss Telugu 8: ಬಿಗ್​ಬಾಸ್ ತೆಲುಗು ಸೀಸನ್‌ 8ರ ಪ್ರೋಮೊ ಔಟ್‌; ಸಂಭಾವ್ಯರ ಪಟ್ಟಿಯಲ್ಲಿ ಇಬ್ಬರು ಕನ್ನಡತಿಯರು!

Bigg Boss Telugu 8: ಈಗಾಗಲೇ ಮೂರು ಪ್ರೋಮೋಗಳು ಬಿಡುಗಡೆಯಾಗಿದ್ದು, ಸೀಸನ್ 8ಕ್ಕೆ ಯಾರೆಲ್ಲ ಬರುತ್ತಾರೆ ಎಂಬ ಬಗ್ಗೆ ಕುತೂಹಲ ಕೂಡ ಹೆಚ್ಚಿದೆ. ಕನ್ನಡದವರು ಕೂಡ ಈ ಬಾರಿ ಇರಲಿದ್ದಾರೆ ಎಂದು ವರದಿಯಾಗಿದೆ.

VISTARANEWS.COM


on

Bigg Boss Telugu 8 Confirmed Contestants nagarjuna akkineni host
Koo

ಬಿಗ್​ಬಾಸ್ ತೆಲುಗು (Bigg Boss Telugu 8) ಮತ್ತೆ ಪ್ರಾರಂಭವಾಗುತ್ತಿದೆ. ಸ್ಟಾರ್ ಮಾ ಜನಪ್ರಿಯ ಟಿವಿ ರಿಯಾಲಿಟಿ ಶೋ ಬಿಗ್ ಬಾಸ್ ತೆಲುಗು ಸೀಸನ್ 8 ರ ಹೊಸ ಪ್ರೋಮೊವನ್ನು ಭಾನುವಾರ ಬಿಡುಗಡೆ ಮಾಡಿದೆ. ,ಈ ಶೋಗೆ ಸ್ಪರ್ಧಿಗಳು ಯಾರೆಂಬುದರ ಬಗ್ಗೆ ಚರ್ಚೆಗಳು ಶುರುವಾಗಿವೆ. ಈಗಾಗಲೇ ಮೂರು ಪ್ರೋಮೋಗಳು ಬಿಡುಗಡೆಯಾಗಿದ್ದು, ಸೀಸನ್ 8ಕ್ಕೆ ಯಾರೆಲ್ಲ ಬರುತ್ತಾರೆ ಎಂಬ ಬಗ್ಗೆ ಕುತೂಹಲ ಕೂಡ ಹೆಚ್ಚಿದೆ. ಕನ್ನಡದವರು ಕೂಡ ಈ ಬಾರಿ ಇರಲಿದ್ದಾರೆ ಎಂದು ವರದಿಯಾಗಿದೆ.

ಸಂಭಾವ್ಯ ಅಭ್ಯರ್ಥಿಗಳ ಹೆಸರು ವೈರಲ್ ಆಗುತ್ತಿದೆ. ಅದರಂತೆ ಜ್ಯೋತಿಷ್ಯ ವೇಣುಸ್ವಾಮಿ, ಯೂಟ್ಯೂಬರ್ ಬರೆಲ್ಲಕ್ಕ, ಯೂಟ್ಯೂಬರ್ ಯಾದಂ ರಾಜು ರಿತು ಚೌಧರಿ, ಕಿರುತೆರೆ ತಾರೆಯರಾದ ಅಂಜಲಿ, ಯಶ್ಮಿ ಗೌಡ, ತೇಜಸ್ವಿನಿ ಗೌಡ, ಹಿರಿಯ ನಟಿ ಸನಾ, ನಟ ಅನಿಲ್ ಗೀಲಾ, ಹಾಸ್ಯನಟ ಬುಂಚಿಕ್ ಬಬ್ಲು, ಕಿರಾಕ್ ಆರ್‌ಪಿ, ರಿಂಗ್ ರಿಯಾಜ್, ನಿರೂಪಕಿ ವಿಂಧ್ಯಾ ವಿಶಾಖ, ಪಾಗಲ್ ಪವಿತ್ರಾ ಹೀಗೆ ಹಲವು ಜನರ ಹೆಸರಿದೆ. ಇದರ ಜೊತೆಗೆ ಸುದ್ದಿ ವಾಚಕಿ ಕಲ್ಯಾಣಿ, ನಟಿ ರೇಖಾ ಬೋಜ್, ಸಾವಯವ ಕೃಷಿ ತಜ್ಞ ನೇತ್ರಾ ರೆಡ್ಡಿ, ಧಾರಾವಾಹಿ ನಟ ಇಂದ್ರನೀಲ್ ಸೇನ್‌ಗುಪ್ತ, ನಟ ಅಬ್ಬಾಸ್, ನಟ ರೋಹಿತ್, ಗಾಯಕ ಸಾಕೇತ್ ಕೊಮಂದೂರಿ, ಫೆಮಿನಾ ಮಿಸ್ ಇಂಡಿಯಾ ತೆಲಂಗಾಣ 2023 ರ ಊರ್ಮಿಳಾ ಚೌಹಾಣ್ ಅವರ ಹೆಸರು ಕೂಡ ಇದೆ.

ಇದರಲ್ಲಿ ಯಶ್ಮಿ ಗೌಡ ಕನ್ನಡದಾಕೆ, ಇದರ ಜೊತೆಗೆ ತೇಜಸ್ವಿನಿ ಗೌಡ ಕೂಡ ಕನ್ನಡದವರೇ ಆಗಿದ್ದಾರೆ. ಮೂಲತಃ ಕನ್ನಡದವರಾದ ಇವರು ತೆಲುಗಿನ ಧಾರವಾಹಿಗಳಲ್ಲಿ ಫೇಮಸ್ ಆಗಿದ್ದಾರೆ. . ಬಿಗ್ ಬಾಸ್ ಸೀಸನ್ 8 ಸೆಪ್ಟೆಂಬರ್ 8 ರ ಭಾನುವಾರ ಸಂಜೆ 6 ರಿಂದ ಪ್ರಾರಂಭವಾಗಲಿದೆ. ನಂದಮೂರಿ ಕುಟುಂಬದಿಂದ ತೆಲುಗು ಸಿನೆಮಾ ರಂಗಕ್ಕೆ ನಾಯಕನಾಗಿ ಕಾಲಿಟ್ಟಿರುವ ಚೈತನ್ಯ ಕೃಷ್ಣ ಅವರು ಬಿಗ್‌ಬಾಸ್‌ ಗೆ ಬರಲಿದ್ದಾರೆಂದು ಸುದ್ದಿ ಹಬ್ಬಿದೆ.

ಇದನ್ನೂ ಓದಿ: Bigg Boss Telugu 8: ಬಿಗ್‌ ಬಾಸ್‌ ಮನೆಗೆ ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ ಎಂಟ್ರಿ?

ಸೆಪ್ಟೆಂಬರ್ 3 ರಂದು ತೆಲುಗು ಬಿಗ್​ಬಾಸ್ ಸೀಸನ್ 7 ಆರಂಭವಾಗಿತ್ತು. 19 ಮಂದಿ ಸ್ಪರ್ಧಿಗಳು ಶೋನಲ್ಲಿ ಭಾಗಿಯಾಗಿದ್ದರು. ಅವರಲ್ಲೇ ಇಬ್ಬರು ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಮತ್ತೆ ಮನೆಗೆ ಬಂದಿದ್ದರು. ಅಲ್ಲಿಗೆ ಒಟ್ಟು 21 ಸ್ಪರ್ಧಿಗಳು ಈ ಬಾರಿಯ ಬಿಗ್​ಬಾಸ್ ತೆಲುಗು ಸೀಸನ್ 7ರಲ್ಲಿ ಆಡಿದರುಪಲ್ಲವಿ ಪ್ರಶಾಂತ್ ವಿನ್ನರ್ ಆಗಿದ್ದು, ಹಲವರಿಗೆ ಖುಷಿ ನೀಡಿತ್ತು. ಆದರೆ ಮೊದಲಿನಿಂದಲೂ ಶಿವಾಜಿ ವಿನ್ನರ್ ಎಂದುಕೊಂಡಿದ್ದ ಹಲವರಿಗೆ ಬೇಸರವಾಗಿತ್ತು.

Continue Reading
Advertisement
CM Siddaramaiah
ಕರ್ನಾಟಕ55 mins ago

CM Siddaramaiah: ಆ.23ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿಗೆ; ಕಾನೂನು ಹೋರಾಟಕ್ಕೆ ಹೈ ‌ಕಮಾಂಡ್ ಬೆಂಬಲ ಕೋರಲು ಭೇಟಿ

zika Virus
ಬೆಂಗಳೂರು ಗ್ರಾಮಾಂತರ1 hour ago

Zika Virus : ಆನೇಕಲ್‌ನಲ್ಲಿ ಆರು ಮಂದಿಗೆ ಝಿಕಾ ವೈರಸ್ ಪತ್ತೆ; 3 ಕಿ.ಮೀ ರೇಡಿಯಸ್ ಕಂಟೋನ್ಮೆಂಟ್ ಜೋನ್‌

Food Poisoning
ದೇಶ1 hour ago

Food Poisoning: ಶಾಲೆಯಲ್ಲಿ ಕೊಟ್ಟ ಬಿಸ್ಕೇಟ್‌ ಸೇವಿಸಿ ಬರೋಬ್ಬರಿ 80 ವಿದ್ಯಾರ್ಥಿಗಳು ಅಸ್ವಸ್ಥ

Govt Employees
ಕರ್ನಾಟಕ2 hours ago

Govt Employees: ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ; ಕ್ರೀಡಾ ಮನೋಭಾವದಿಂದ ಭಾಗವಹಿಸಲು ಸಿ.ಎಸ್. ಷಡಾಕ್ಷರಿ ಮನವಿ

Kolkata Doctor Murder Case
ದೇಶ2 hours ago

Kolkata Doctor murder case: ಟ್ರೈನಿ ವೈದ್ಯೆ ಕೊಲೆ ಪ್ರಕರಣ; ಸ್ವಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್‌

Karnataka weather Forecast
ಮಳೆ3 hours ago

Karnataka Weather : ಭಾರಿ ಮಳೆ ಎಫೆಕ್ಟ್‌; ಹಳ್ಳ ದಾಟಲು ಹೋಗಿ ಕೊಚ್ಚಿ ಹೋದ 20ಕ್ಕೂ ಹೆಚ್ಚು ಕುರಿಗಳು

U19 Women’s T20 World Cup
ಕ್ರೀಡೆ3 hours ago

U-19 Women’s T20 World Cup; ಅಂಡರ್-19 ಮಹಿಳಾ ಟಿ20 ವಿಶ್ವಕಪ್ ವೇಳಾಪಟ್ಟಿ ಪ್ರಕಟ; ಭಾರತಕ್ಕೆ ವಿಂಡೀಸ್​ ಮೊದಲ ಎದುರಾಳಿ

Prabhas-Hanu Iman Esmail Trending
ಟಾಲಿವುಡ್3 hours ago

Actor Prabhas: ಪ್ರಭಾಸ್ ಜತೆ ರೀಲ್ಸ್ ರಾಣಿ ಇಮಾನ್ ಇಸ್ಮಾಯಿಲ್ ರೊಮ್ಯಾನ್ಸ್‌!

Indian origin family killed
ವಿದೇಶ3 hours ago

Indian origin family killed: ಟೆಕ್ಸಾಸ್‌ನಲ್ಲಿ ಭೀಕರ ಅಪಘಾತ; ಭಾರತೀಯ ಮೂಲದ ದಂಪತಿ, ಮಗಳು ದುರ್ಮರಣ

CM Siddaramaiah
ಕರ್ನಾಟಕ3 hours ago

CM Siddaramaiah: ಪ್ರಾಸಿಕ್ಯೂಷನ್‌ ಸಂಕಷ್ಟ; ಸಿಎಂ ನಾಳಿನ ಬಳ್ಳಾರಿ, ಮಂತ್ರಾಲಯ ಪ್ರವಾಸ ರದ್ದು

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌