Pushpa 3: ʻಪುಷ್ಪʼ ರೂಲ್‌ಗೆ ಕಥೆ ಮುಗಿಯಲ್ಲ, ಆ ಬಳಿಕ ‘ರೋರ್’ ಕೂಡ ಇದೆಯಂತೆ! - Vistara News

ಟಾಲಿವುಡ್

Pushpa 3: ʻಪುಷ್ಪʼ ರೂಲ್‌ಗೆ ಕಥೆ ಮುಗಿಯಲ್ಲ, ಆ ಬಳಿಕ ‘ರೋರ್’ ಕೂಡ ಇದೆಯಂತೆ!

Pushpa 3: ʻಪುಷ್ಪ ದಿ ರೈಸ್‌ʼನ ಯಶಸ್ಸಿನ ನಂತರ, ಎರಡನೇ ಭಾಗ, ಪುಷ್ಪ 2: ದಿ ರೂಲ್ ಬಿಡುಗಡೆಗೆ ಸಜ್ಜಾಗುತ್ತಿದೆ. ಇದಾದ ಬಳಿಕ ‘ಪುಷ್ಪ: ದಿ ರೋರ್’ ಬರಲಿದೆ ಎಂದು ಹೇಳಲಾಗುತ್ತಿದೆ.

VISTARANEWS.COM


on

Pushpa allu arjun
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: `ಪುಷ್ಪ’ (Pushpa Movie) ಕೇವಲ ಪ್ಯಾನ್-ಇಂಡಿಯಾ ಮಟ್ಟದಲ್ಲಿ ಮಾತ್ರ ಬ್ಲಾಕ್‌ಬಸ್ಟರ್ ಆಗಿಲ್ಲ, ಅಲ್ಲು ಅರ್ಜುನ್ ಮತ್ತು ಸುಕುಮಾರ್ ಅವರ ವೃತ್ತಿಜೀವನದಲ್ಲಿ ಅತಿದೊಡ್ಡ ಬ್ಲಾಕ್‌ಬಸ್ಟರ್ ಸಿನಿಮಾವಾಗಿ ಆಗಿ ಹೊರಹೊಮ್ಮಿತು. ʻಪುಷ್ಪ ದಿ ರೈಸ್‌ʼನ ಯಶಸ್ಸಿನ ನಂತರ, ಎರಡನೇ ಭಾಗ, ಪುಷ್ಪ 2: ದಿ ರೂಲ್ ಬಿಡುಗಡೆಗೆ ಸಜ್ಜಾಗುತ್ತಿದೆ. ಇದಾದ ಬಳಿಕ ‘ಪುಷ್ಪ: ದಿ ರೋರ್’ ಬರಲಿದೆ ಎಂದು ಹೇಳಲಾಗುತ್ತಿದೆ.

ಪುಷ್ಪ 2: ದಿ ರೂಲ್ ಚಿತ್ರ 2024ರ ಆಗಸ್ಟ್ 15ರಂದು ಥಿಯೇಟರ್‌ಗೆ ಬರಲು ಸಿದ್ಧವಾಗಿದೆ. ರಿಲೀಸ್​ ಡೇಟ್​ (Pushpa 2 Release Date) ಬಗ್ಗೆ ಚಿತ್ರತಂಡದಿಂದ ಅಧಿಕೃತ ಘೋಷಣೆ ಈ ಮುಂಚೆಯೇ ಮಾಡಿದೆ. ಹೊಸ ಪೋಸ್ಟರ್​ ಹಂಚಿಕೊಳ್ಳುವ ಮೂಲಕ ನಿರ್ಮಾಣ ಸಂಸ್ಥೆಯಾದ ‘ಮೈತ್ರಿ ಮೂವೀ ಮೇಕರ್ಸ್​’ ಸಿಹಿ ಸುದ್ದಿ ನೀಡಿತ್ತು.

ಮೊದಲ ಭಾಗದಲ್ಲಿ ರಕ್ತಚಂದನ ಕಳ್ಳಸಾಗಣೆ ಬಗ್ಗೆ ಇದೆ. ಪುಷ್ಪರಾಜ್ ಕೂಲಿ ಮಾಡಿಕೊಂಡಿರುವ ಸಾಮಾನ್ಯ ವ್ಯಕ್ತಿ. ಆತ ಬೆಳೆದು ಬಂದ ಹಾದಿಯನ್ನು ತೋರಿಸಲಾಗಿದೆ. ಎರಡನೇ ಭಾಗದಲ್ಲಿ ಹೆಸರೇ ಹೇಳುವಂತೆ ಆತನ ಆಡಳಿತದ ಬಗ್ಗೆ ತೋರಿಸಲಾಗುತ್ತದೆ. ಇನ್ನು ಮೋರನೇ ಭಾಗ ‘ಪುಷ್ಪ: ದಿ ರೋರ್’ ಎಂದು ಶೀರ್ಷಿಕೆ ಇಡುವ ಆಲೋಚನೆ ಚಿತ್ರತಂಡಕ್ಕೆ ಇದೆ ಎನ್ನಲಾಗಿದೆ. ಕಥೆಯ ಬಗ್ಗೆ ಮಾಹಿತಿ ಇನ್ನು ತಿಳಿದು ಬಂದಿಲ್ಲ.

ಸದ್ಯ ಪುಷ್ಪ 2 ಜಪಾನ್‌ನಲ್ಲಿ ಚಿತ್ರೀಕರಣಗೊಳ್ಳುತ್ತಿದೆ ಎಂದು ವರದಿಯಾಗಿದೆ. ಕೆಲವು ದಿನಗಳ ಹಿಂದೆಯಷ್ಟೇ ಅಲ್ಲು ಅರ್ಜುನ್‌ ಸೀರೆಯುಟ್ಟ ಫೋಟೊ ವೈರಲ್‌ ಆಗಿತ್ತು. ಪುಷ್ಪ-2 ಸಿನಿಮಾದಲ್ಲಿ ಅಲ್ಲು ಅರ್ಜುನ್‌ಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದು, ಫಹಾದ್ ಫಾಸಿಲ್, ಅನುಸೂಯ, ಸುನಿಲ್ ಮತ್ತು ಇತರರು ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ಪ್ರೊಡಕ್ಷನ್ ನಡಿ ಮೂಡಿಬರುತ್ತಿರುವ ಪುಷ್ಪ-2 ಸಿನಿಮಾಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.

ಇದನ್ನೂ ಓದಿ: Pushpa 2: ಪುಷ್ಪ 2 ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದ ಅಲ್ಲು ಅರ್ಜುನ್‌!

ಫಹಾದ್ ಫಾಸಿಲ್ ʻಭನ್ವರ್ ಸಿಂಗ್ ಶೇಖಾವತ್ʼ ಪಾತ್ರದಲ್ಲಿ ನಟಿಸಿದ್ದಾರೆ. ಪುಷ್ಪ ಸಿನಿಮಾವನ್ನು ಸುಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣ ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Actor Darshan: ದರ್ಶನ್‌ ಅಣ್ಣ ಕನಸಿನಲ್ಲೂ ಯಾರಿಗೂ ತೊಂದರೆ ಕೊಡುವವರಲ್ಲ ಎಂದ ಟಾಲಿವುಡ್‌ ಸ್ಟಾರ್‌ ನಾಗ ಶೌರ್ಯ!

Actor Darshan: ದರ್ಶನ್ ಅವರನ್ನು ಬೆಂಬಲಿಸುವ ನಾಗಶೌರ್ಯ ನಿರ್ಧಾರವು ಮೂರ್ಖತನ ಎಂದು ಅನೇಕರು ಕಮೆಂಟ್‌ ಮಾಡಿದ್ದಾರೆ. ಒಬ್ಬ ಕೊಲೆಗಾರನನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ನೆಟ್ಟಿಗರು ನಾಗ ಶೌರ್ಯ ಬಗ್ಗೆ ಆಕ್ರೋಶ ಹೊರಹಾಕುತ್ತಿದ್ದಾರೆ. ಇದೀಗ ನಟನ ಈ ಪೋಸ್ಟ್‌ಗಾಗಿ ಛೀಮಾರಿ ಹಾಕುತ್ತಿದ್ದಾರೆ. 2024ರ ಜೂನ್ 7ರಂದು ರೇಣುಕಾಸ್ವಾಮಿಯನ್ನು ದರ್ಶನ್ ಸಹಚರ ರಘು ಅಪಹರಿಸಿದ್ದ. ಕೆಲವು ವರದಿಗಳ ಪ್ರಕಾರ, ದರ್ಶನ್ ಸಂತ್ರಸ್ತನನ್ನು ಬೆಲ್ಟ್ ನಿಂದ ಹೊಡೆದರು ಮತ್ತು ಆರೋಪಿಸಲಾಗಿದೆ. ಅವರ ಕುಟುಂಬವು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಕಾಣೆಯಾದ ಬಗ್ಗೆ ದೂರು ನೀಡಿತು. ಜೂನ್ 9, 2024 ರಂದು, ದರ್ಶನ್ ತಮ್ಮ ಇತ್ತೀಚಿನ ಚಿತ್ರ “ಡೆವಿಲ್: ದಿ ಹೀರೋ” ಸೆಟ್​​ನಲ್ಲಿದ್ದಾಗ ಪವಿತ್ರಾ ಗೌಡ ಅವರೊಂದಿಗೆ ವಿಚಾರಣೆಗೆ ಕರೆದೊಯ್ಯಲಾಗಿತ್ತು.

VISTARANEWS.COM


on

Actor Darshan incident Naga Shaurya support
Koo

ಬೆಂಗಳೂರು: ನಟ ದರ್ಶನ್ (Actor Darshan) ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 14 ದಿನ ನ್ಯಾಯಾಂಗ ಬಂಧನಲ್ಲಿದ್ದಾರೆ. ಇಷ್ಟಾದರೂ ದರ್ಶನ್‌ಗೆ ಕೆಲವು ಅಭಿಮಾನಿಗಳು ಹಾಗೂ ನಟ ನಟಿಯರು ಬೆಂಬಲ ನೀಡಿದ್ದಾರೆ. ದಿನ ಕಳೆದಂತೆ ತನಿಖೆಯಿಂದ ಬೆಚ್ಚಿ ಬೀಳಿಸುವ ಸತ್ಯಗಳು ಹೊರಬೀಳುತ್ತಿವೆ. ಕಲೆವರು ಅಂದಿನಿಂದ ದರ್ಶನ್‌ಗೆ ಜೀವಾವಧಿ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ. ಈ ಸಾರ್ವಜನಿಕ ಆಕ್ರೋಶದ ನಡುವೆ, ಟಾಲಿವುಡ್ ಹೀರೊ ನಾಗ ಶೌರ್ಯ ದರ್ಶನ್‌ಗೆ ಬೆಂಬಲ ನೀಡಿದ್ದಾರೆ. ʻದರ್ಶನ್ ಅಣ್ಣ ತಮ್ಮ ಕೆಟ್ಟ ಕನಸಿನಲ್ಲೂ ಯಾರಿಗೂ ತೊಂದರೆ ಕೊಡುವವರಲ್ಲ. ನಾನು ಈ ಸುದ್ದಿಯನ್ನು ಒಪ್ಪಿಕೊಳ್ಳಲಾರೆʼʼಎಂದು ಬರೆದುಕೊಂಡಿದ್ದಾರೆ.

ನಾಗ ಶೌರ್ಯ ಬರೆದುಕೊಂಡಿದ್ದು ಹೀಗೆ ʻ“ಘಟನೆ ಕೇಳಿದಾಗ ಮೃತರ ಕುಟುಂಬಕ್ಕೆ ನನ್ನ ಹೃದಯ ಮರಗುತ್ತದೆ. ಈ ಕಷ್ಟದ ಸಮಯದಲ್ಲಿ ಅವರಿಗೆ ಶಕ್ತಿಯನ್ನು ನೀಡಬೇಕೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಈ ವಿಷಯದಲ್ಲಿ ಜನರು ಈಗಾಗಲೇ ತೀರ್ಮಾನಗಳಿಗೆ ಬರುತ್ತಿರುವುದನ್ನು ನೋಡುವುದು ಕಷ್ಟವಾಗುತ್ತದೆ. ದರ್ಶನ್ ಅಣ್ಣ ತಮ್ಮ ಕೆಟ್ಟ ಕನಸಿನಲ್ಲೂ ಯಾರಿಗೂ ತೊಂದರೆ ಕೊಡುವವರಲ್ಲ. ದರ್ಶನ್‌ ಅವರ ಉದಾರತೆ, ಸಹೃದಯ ಸ್ವಭಾವ ಮತ್ತು ಇತರರಿಗೆ ಸಹಾಯ ಮಾಡುವ ಬದ್ಧತೆಯನ್ನು ಅವರನ್ನು ಚೆನ್ನಾಗಿ ಬಲ್ಲವರು ತಿಳಿದುಕೊಂಡಿದ್ದಾರೆ. ಅನೇಕರಿಗೆ ಶಕ್ತಿಯ ಆಧಾರಸ್ತಂಭವಾಗಿದ್ದಾರೆʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Actor Darshan : ನಟ ದರ್ಶನ್‌ಗಾಗಿ ಊಟ ಬಿಟ್ಟು ಜೈಲಿನ ಹೊರಗೆ ವಿಶೇಷಚೇತನ ಯುವತಿ ಗೋಳಾಟ

ನಮ್ಮ ನ್ಯಾಯಾಂಗ ವ್ಯವಸ್ಥೆಯಲ್ಲಿ ನನಗೆ ನಂಬಿಕೆ ಇದೆ. ಸತ್ಯವು ಶೀಘ್ರದಲ್ಲೇ ಹೊರಬರುತ್ತದೆ. ಇನ್ನೊಂದು ಕುಟುಂಬವು ಸಹ ಬಹಳವಾಗಿ ನರಳುತ್ತಿದೆ ಎಂಬುದನ್ನು ನಾವು ನೆನಪಿನಲ್ಲಿ ಇಟ್ಟುಕೊಳ್ಳಬೇಕು. ಹಾನುಭೂತಿಗೆ ಹೆಸರುವಾಸಿಯಾದ ಅಣ್ಣ ಅವರು ನಿರಪರಾಧಿ ಎಂಬುದು ಸಾಬೀತಾಗುತ್ತದೆ. ನಿಜವಾದ ಅಪರಾಧಿ ಯಾರೆಂಬುದು ಗೊತ್ತಾಗುತ್ತದೆ’ ಎಂದಿದ್ದಾರೆ.

ದರ್ಶನ್ ಅವರನ್ನು ಬೆಂಬಲಿಸುವ ನಾಗಶೌರ್ಯ ನಿರ್ಧಾರವು ಮೂರ್ಖತನ ಎಂದು ಅನೇಕರು ಕಮೆಂಟ್‌ ಮಾಡಿದ್ದಾರೆ. ಒಬ್ಬ ಕೊಲೆಗಾರನನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ನೆಟ್ಟಿಗರು ನಾಗ ಶೌರ್ಯ ಬಗ್ಗೆ ಆಕ್ರೋಶ ಹೊರಹಾಕುತ್ತಿದ್ದಾರೆ. ಇದೀಗ ನಟನ ಈ ಪೋಸ್ಟ್‌ಗಾಗಿ ಛೀಮಾರಿ ಹಾಕುತ್ತಿದ್ದಾರೆ.

2024ರ ಜೂನ್ 7ರಂದು ರೇಣುಕಾಸ್ವಾಮಿಯನ್ನು ದರ್ಶನ್ ಸಹಚರ ರಘು ಅಪಹರಿಸಿದ್ದ. ಕೆಲವು ವರದಿಗಳ ಪ್ರಕಾರ, ದರ್ಶನ್ ಸಂತ್ರಸ್ತನನ್ನು ಬೆಲ್ಟ್ ನಿಂದ ಹೊಡೆದರು ಮತ್ತು ಆರೋಪಿಸಲಾಗಿದೆ. ಅವರ ಕುಟುಂಬವು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಕಾಣೆಯಾದ ಬಗ್ಗೆ ದೂರು ನೀಡಿತು. ಜೂನ್ 9, 2024 ರಂದು, ದರ್ಶನ್ ತಮ್ಮ ಇತ್ತೀಚಿನ ಚಿತ್ರ “ಡೆವಿಲ್: ದಿ ಹೀರೋ” ಸೆಟ್​​ನಲ್ಲಿದ್ದಾಗ ಪವಿತ್ರಾ ಗೌಡ ಅವರೊಂದಿಗೆ ವಿಚಾರಣೆಗೆ ಕರೆದೊಯ್ಯಲಾಗಿತ್ತು.

ಸ್ವಾಮಿಯನ್ನು ಕೋಲುಗಳಿಂದ ಥಳಿಸಿ ವಿದ್ಯುತ್ ಆಘಾತಗಳನ್ನು ನೀಡಲಾಗುತ್ತು. ಈ ವೇಳೆ ಪವಿತ್ರಾ ಗೌಡ ಸ್ವಲ್ಪ ಸಮಯದವರೆಗೆ ಶೆಡ್ ನಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ತೂಗುದೀಪ ಅವರು ಮಾಡಿದ ಪೋಸ್ಟ್​ಗಳಿಗೆ ಸ್ವಾಮಿಯನ್ನು ಶಿಕ್ಷಿಸಲು ಶ್ರೀ ತೂಗುದೀಪ ಅವರನ್ನು ಪ್ರಚೋದಿಸಿದ್ದು ಎಂ.ಎಸ್.ಗೌಡ ಎಂದು ಹೇಳಲಾಗಿದೆ. ಇದೇ ರೀತಿಯ ಹಲವಾರು ಮಾಹಿತಿಗಳ ನೀಡಲಾಗಿದೆ.

Continue Reading

South Cinema

Kalki 2898 AD: ‘ಕಲ್ಕಿ 2898 ಎಡಿ’ಗೆ ವೀಕ್ಷಕರಿಂದ ಬಹುಪರಾಕ್ ; ಹರಿದ ಚಪ್ಪಲಿ ಫೋಟೊ ಹಂಚಿಕೊಂಡ ನಿರ್ದೇಶಕ !

Kalki 2898 AD: ಪ್ರಭಾಸ್‌ ಅವರ ಬಹುನಿರೀಕ್ಷಿತ ಈ ಸಿನಿಮಾವನ್ನು ನಿರ್ದೇಶನ ಮಾಡಿರುವುದು ನಾಗ್ ಅಶ್ವಿನ್ . ಈ ಸಿನಿಮಾ ಸೆಟ್ಟೇರಿ ಮೂರು ವರ್ಷ ಕಳೆದಿತ್ತು. ಈ ಚಿತ್ರದ ಜರ್ನಿ ಹೇಗಿತ್ತು ಎಂದು ಫೋಟೊ ಮೂಲಕ ವಿವರಣೆ ನೀಡಿದ್ದಾರೆ. ಚಿತ್ರವು ಮೊದಲ ದಿನ ವಿಶ್ವದಾದ್ಯಂತ 180 ಕೋಟಿ ರೂ ಗಳಿಸಿದೆ. ಸಿನಿಮಾವನ್ನು ಜನರು ಹಾಡಿ ಹೊಗಳುತ್ತಿದ್ದಾರೆ.

VISTARANEWS.COM


on

Kalki 2898 AD Nag Ashwin Torn Slippers Dedication Behind
Koo

ಬೆಂಗಳೂರು: ನಾಗ್ ಅಶ್ವಿನ್ ನಿರ್ದೇಶಿಸಿದ ಕಲ್ಕಿ 2898 AD (Kalki 2898 AD:), ಎಲ್ಲಾ ಭಾಷೆಗಳಲ್ಲಿ ಮೊದಲ ದಿನದಲ್ಲಿ ಭಾರತದಲ್ಲಿ ಸುಮಾರು 95 ಕೋಟಿ ರೂಪಾಯಿ ಗಳಿಸಿದೆ, ಆದರೆ ಅದರ ಒಟ್ಟು ಸಂಗ್ರಹವು ಸುಮಾರು 115 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಒಟ್ಟಾರೆಯಾಗಿ, ಚಿತ್ರವು ಮೊದಲ ದಿನ ವಿಶ್ವದಾದ್ಯಂತ 180 ಕೋಟಿ ರೂ ಗಳಿಸಿದೆ. ಸಿನಿಮಾವನ್ನು ಜನರು ಹಾಡಿ ಹೊಗಳುತ್ತಿದ್ದಾರೆ. ಈ ಚಿತ್ರದ ಜರ್ನಿ ಹೇಗಿತ್ತು ಎಂಬುದನ್ನು ಒಂದೇ ಒಂದು ಫೋಟೋ ಮೂಲಕ ನಿರ್ದೇಶಕ ನಾಗ್ ಅಶ್ವಿನ್ ಅವರು ವಿವರಿಸಿದ್ದಾರೆ. ಸಿನಿಮಾ ರಿಲೀಸ್ ಸಂದರ್ಭದಲ್ಲಿ ನಾಗ್ ಅಶ್ವಿನ್ ಅವರು ಹರಿದ ಚಪ್ಪಲಿ ಫೋಟೋ ಹಂಚಿಕೊಂಡಿದ್ದಾರೆ.

ಪ್ರಭಾಸ್‌ ಅವರ ಬಹುನಿರೀಕ್ಷಿತ ಈ ಸಿನಿಮಾವನ್ನು ನಿರ್ದೇಶನ ಮಾಡಿರುವುದು ನಾಗ್ ಅಶ್ವಿನ್ . ಈ ಸಿನಿಮಾ ಸೆಟ್ಟೇರಿ ಮೂರು ವರ್ಷ ಕಳೆದಿತ್ತು. ಈ ಚಿತ್ರದ ಜರ್ನಿ ಹೇಗಿತ್ತು ಎಂದು ಫೋಟೊ ಮೂಲಕ ವಿವರಣೆ ನೀಡಿದ್ದಾರೆ. ನಾಗ್ ಅಶ್ವಿನ್ ಅವರು ಇದೇ ಮೊದಲ ಬಾರಿಗೆ ಬಿಗ್ ಬಜೆಟ್ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ರಿಲೀಸ್ ಸಂದರ್ಭದಲ್ಲಿ ನಾಗ್ ಅಶ್ವಿನ್ ಅವರು ಹರಿದ ಚಪ್ಪಲಿ ಫೋಟೋ ಹಂಚಿಕೊಂಡಿದ್ದಾರೆ. ‘ಇದು ತುಂಬಾನೇ ದೀರ್ಘ ರಸ್ತೆ’ ಎಂದು ಬರೆದುಕೊಂಡಿದ್ದಾರೆ. ಈ ಚಪ್ಪಲಿ ಒಂದಷ್ಟು ಕಡೆಗಳಲ್ಲಿ ಹರಿದು ಹೋಗಿದೆ. ಈ ಮೂಲಕ ತಮ್ಮ ಶ್ರಮದ ಬಗ್ಗೆ ಹೇಳಿಕೊಂಡಿದ್ದಾರೆ. ಇದೀಗ ಈ ಫೋಟೊ ಶೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ಅನೇಕರು ನಾಗ್ ಅಶ್ವಿನ್ ಅವರ ಕೆಲಸವನ್ನು ಮೆಚ್ಚಿಕೊಂಡಿದ್ದಾರೆ.

ಇದನ್ನೂ ಓದಿ: Kalki 2898 AD: ಮೊದಲ ದಿನವೇ ಗಳಿಕೆಯಲ್ಲಿ ದಾಖಲೆ ಬರೆದ ‘ಕಲ್ಕಿ 2898 ಎಡಿ’ ಸಿನಿಮಾ; ಕಲೆಕ್ಷನ್‌ ಎಷ್ಟು?

ನಾಗ್ ಅಶ್ವಿನ್ ನಿರ್ದೇಶಿಸಿದ ಕಲ್ಕಿ 2898 AD, ಎಲ್ಲಾ ಭಾಷೆಗಳಲ್ಲಿ ಮೊದಲ ದಿನದಲ್ಲಿ ಭಾರತದಲ್ಲಿ ಸುಮಾರು 95 ಕೋಟಿ ರೂಪಾಯಿ ಗಳಿಸಿದೆ, ಆದರೆ ಅದರ ಒಟ್ಟು ಸಂಗ್ರಹವು ಸುಮಾರು 115 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಒಟ್ಟಾರೆಯಾಗಿ, ಚಿತ್ರವು ಮೊದಲ ದಿನ ವಿಶ್ವದಾದ್ಯಂತ 180 ಕೋಟಿ ರೂ ಗಳಿಸಿದೆ. ಕಲ್ಕಿ 2898 ಎಡಿ ಸಿನಿಮಾ ಹಲವು ಚಿತ್ರಗಳನ್ನು ಹಿಂದಿಕ್ಕಿದೆ. ಅದರಲ್ಲಿ ಕೆಜಿಎಫ್ 2 (ರೂ. 159 ಕೋಟಿ), ಸಲಾರ್ (ರೂ. 158 ಕೋಟಿ), ಲಿಯೋ (ರೂ. 142.75 ಕೋಟಿ) ಸಿನಿಮಾಗಳ ಜಾಗತಿಕ ಆರಂಭಿಕ ದಾಖಲೆಗಳನ್ನು ಹಿಂದಿಕ್ಕಿದೆ. ಆದರೆ, ಮೊದಲ ದಿನದ ಗಳಿಕೆಯಲ್ಲಿ ‘ಆರ್​ಆರ್​ಆರ್’ (223) ಹಾಗೂ ‘ಬಾಹುಬಲಿ 2’ (217) ಚಿತ್ರವನ್ನು ಹಿಂದಿಕ್ಕಲು ಈ ಸಿನಿಮಾ ಬಳಿ ಸಾಧ್ಯವಾಗಿಲ್ಲ.

ಕಲ್ಕಿ 2898 AD ಜೂನ್ 27 ರಂದು ವಿಶ್ವಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಯಿತು. ಚಲನಚಿತ್ರವು ಈಗಾಗಲೇ ತನ್ನ ಮುಂಗಡ ಬುಕಿಂಗ್‌ನಲ್ಲಿ ಎಲ್ಲಾ ಭಾಷೆಗಳಲ್ಲಿ 20 ಲಕ್ಷಕ್ಕೂ ಹೆಚ್ಚು ಟಿಕೆಟ್‌ಗಳನ್ನು ಮಾರಾಟ ಮಾಡಿದೆ.

ಕಲ್ಕಿ 2898 ಎಡಿ’ ಚಿತ್ರ ಜೂನ್ 27ರಂದು ರಿಲೀಸ್ ಆಗಿದೆ. ಮೊದಲ ದಿನ ಈ ಚಿತ್ರದ ಲಕ್ಷಾಂತರ ಟಿಕೆಟ್​ಗಳು ಮಾರಾಟ ಆಗಿವೆ. ಜನರು ಚಿತ್ರಕ್ಕೆ ಪಾಸಿಟಿವ್ ಆಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಮಹಾಭಾರತದಿಂದ ಸಿನಿಮಾದ ಕಥೆ ಆರಂಭ ಆಗಲಿದೆ. ನಾಗ್ ಅಶ್ವಿನ್ ನಿರ್ದೇಶನದ ಈ ಚಿತ್ರಕ್ಕೆ ಅಶ್ವಿನಿ ದತ್ ಬಂಡವಾಳ ಹೂಡಿದ್ದಾರೆ.

ವಿಶ್ವದಾದ್ಯಂತ (world) ತೆರೆಗೆ ಬಂದ ಅತ್ಯಂತ ದುಬಾರಿ ಚಿತ್ರ (film) ʼಕಲ್ಕಿ 2898 ಎಡಿʼ (Kalki 2898AD) ಈಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಇದಕ್ಕೆ ಮುಖ್ಯ ಕಾರಣ ಇದು ಹಿಂದೂ ಧರ್ಮದ (hindu dharma) ವಿಷಯದ ಮೇಲೆ ಕೇಂದ್ರೀಕೃತವಾಗಿರುವುದು. ಭಗವಾನ್ ವಿಷ್ಣುವಿನ (baghavan vishnu) 10ನೇ ಅವತಾರ ಕಲ್ಕಿ (kalki). ಸದಾಚಾರ ಮತ್ತು ನೈತಿಕ ನಡವಳಿಕೆಯನ್ನು ಉತ್ತೇಜಿಸುವ ಕಲ್ಕಿ, ಕಲಿಯುಗವನ್ನು ಕೊನೆಗೊಳಿಸಿ ಮತ್ತೆ ಸತ್ಯಯುಗದ ಸುವರ್ಣ ಯುಗವನ್ನು ಪ್ರಾರಂಭಿಸುತ್ತಾನೆ ಎಂದು ನಂಬಲಾಗಿದೆ.

Continue Reading

ಟಾಲಿವುಡ್

Kalki 2898 AD: ಮೊದಲ ದಿನವೇ ಗಳಿಕೆಯಲ್ಲಿ ದಾಖಲೆ ಬರೆದ ‘ಕಲ್ಕಿ 2898 ಎಡಿ’ ಸಿನಿಮಾ; ಕಲೆಕ್ಷನ್‌ ಎಷ್ಟು?

Kalki 2898 AD: ಕಲ್ಕಿ 2898 AD ಜೂನ್ 27 ರಂದು ವಿಶ್ವಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಯಿತು. ಕಲ್ಕಿ 2898 ಎಡಿ ಸಿನಿಮಾ ಭಾರತೀಯ ಚಿತ್ರರಂಗದಲ್ಲಿ ಮೂರನೇ ಅತಿದೊಡ್ಡ ಓಪನರ್ ಕಂಡ ಸಿನಿಮಾವಾಗಿ ಹೊರಹೊಮ್ಮಿದೆ. ಆರಂಭಿಕ ದಿನದಂದು 180 ಕೋಟಿ ರೂ. ಗಳಿಕೆ ಕಂಡಿದೆ. ಕಲ್ಕಿ 2898 ಎಡಿ’ ಚಿತ್ರಕ್ಕೆ ಭಾರತದಲ್ಲಿ ಪಾಸಿಟಿವ್ ಪ್ರತಿಕ್ರಿಯೆ ವ್ಯಕ್ತವಾಗಿದೆ.

VISTARANEWS.COM


on

Kalki 2898 AD Box Office Day Prabhas Film Indian Opener Earns 180 Crore
Koo

ಬೆಂಗಳೂರು: ಪ್ರಭಾಸ್, ಅಮಿತಾಭ್ ಬಚ್ಚನ್, ದೀಪಿಕಾ ಪಡುಕೋಣೆ (Kalki 2898 AD) ಮತ್ತು ಕಮಲ್ ಹಾಸನ್ ಅಭಿನಯದ ಕಲ್ಕಿ 2898 ಎಡಿ ಸಿನಿಮಾ ಭಾರತೀಯ ಚಿತ್ರರಂಗದಲ್ಲಿ ಮೂರನೇ ಅತಿದೊಡ್ಡ ಓಪನರ್ ಕಂಡ ಸಿನಿಮಾವಾಗಿ ಹೊರಹೊಮ್ಮಿದೆ. ಆರಂಭಿಕ ದಿನದಂದು 180 ಕೋಟಿ ರೂ. ಗಳಿಕೆ ಕಂಡಿದೆ. ಕಲ್ಕಿ 2898 ಎಡಿ’ ಚಿತ್ರಕ್ಕೆ ಭಾರತದಲ್ಲಿ ಪಾಸಿಟಿವ್ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೀಗಾಗಿ, ಸಿನಿಮಾ ಭಾರತದಲ್ಲಿ 95 ಕೋಟಿ ರೂಪಾಯಿ ಬಾಚಿಕೊಂಡಿದೆ. ಗ್ರಾಸ್ ಕಲೆಕ್ಷನ್ ಲೆಕ್ಕಾಚಾರ ಕೊಟ್ಟರೆ 115 ಕೋಟಿ ರೂಪಾಯಿ ಆಗುತ್ತದೆ.

ನಾಗ್ ಅಶ್ವಿನ್ ನಿರ್ದೇಶಿಸಿದ ಕಲ್ಕಿ 2898 AD, ಎಲ್ಲಾ ಭಾಷೆಗಳಲ್ಲಿ ಮೊದಲ ದಿನದಲ್ಲಿ ಭಾರತದಲ್ಲಿ ಸುಮಾರು 95 ಕೋಟಿ ರೂಪಾಯಿ ಗಳಿಸಿದೆ, ಆದರೆ ಅದರ ಒಟ್ಟು ಸಂಗ್ರಹವು ಸುಮಾರು 115 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಒಟ್ಟಾರೆಯಾಗಿ, ಚಿತ್ರವು ಮೊದಲ ದಿನ ವಿಶ್ವದಾದ್ಯಂತ 180 ಕೋಟಿ ರೂ ಗಳಿಸಿದೆ. ಕಲ್ಕಿ 2898 ಎಡಿ ಸಿನಿಮಾ ಹಲವು ಚಿತ್ರಗಳನ್ನು ಹಿಂದಿಕ್ಕಿದೆ. ಅದರಲ್ಲಿ ಕೆಜಿಎಫ್ 2 (ರೂ. 159 ಕೋಟಿ), ಸಲಾರ್ (ರೂ. 158 ಕೋಟಿ), ಲಿಯೋ (ರೂ. 142.75 ಕೋಟಿ) ಸಿನಿಮಾಗಳ ಜಾಗತಿಕ ಆರಂಭಿಕ ದಾಖಲೆಗಳನ್ನು ಹಿಂದಿಕ್ಕಿದೆ. ಆದರೆ, ಮೊದಲ ದಿನದ ಗಳಿಕೆಯಲ್ಲಿ ‘ಆರ್​ಆರ್​ಆರ್’ (223) ಹಾಗೂ ‘ಬಾಹುಬಲಿ 2’ (217) ಚಿತ್ರವನ್ನು ಹಿಂದಿಕ್ಕಲು ಈ ಸಿನಿಮಾ ಬಳಿ ಸಾಧ್ಯವಾಗಿಲ್ಲ.

ಕಲ್ಕಿ 2898 AD ಜೂನ್ 27 ರಂದು ವಿಶ್ವಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಯಿತು. ಚಲನಚಿತ್ರವು ಈಗಾಗಲೇ ತನ್ನ ಮುಂಗಡ ಬುಕಿಂಗ್‌ನಲ್ಲಿ ಎಲ್ಲಾ ಭಾಷೆಗಳಲ್ಲಿ 20 ಲಕ್ಷಕ್ಕೂ ಹೆಚ್ಚು ಟಿಕೆಟ್‌ಗಳನ್ನು ಮಾರಾಟ ಮಾಡಿದೆ.

ಇದನ್ನೂ ಓದಿ: Vinay Gowda: ʻಡೆವಿಲ್ʼ ಸಿನಿಮಾದಲ್ಲಿ ನಾನೇ ವಿಲನ್, ಪ್ರಾಜೆಕ್ಟ್‌ ಏನಾಗುತ್ತೋ ಗೊತ್ತಿಲ್ಲ ಎಂದ ʻಬಿಗ್ ಬಾಸ್ʼ ಆನೆ ವಿನಯ್ ಗೌಡ!

‘ಕಲ್ಕಿ 2898 ಎಡಿ’ ಚಿತ್ರ ಜೂನ್ 27ರಂದು ರಿಲೀಸ್ ಆಗಿದೆ. ಮೊದಲ ದಿನ ಈ ಚಿತ್ರದ ಲಕ್ಷಾಂತರ ಟಿಕೆಟ್​ಗಳು ಮಾರಾಟ ಆಗಿವೆ. ಜನರು ಚಿತ್ರಕ್ಕೆ ಪಾಸಿಟಿವ್ ಆಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಮಹಾಭಾರತದಿಂದ ಸಿನಿಮಾದ ಕಥೆ ಆರಂಭ ಆಗಲಿದೆ. ನಾಗ್ ಅಶ್ವಿನ್ ನಿರ್ದೇಶನದ ಈ ಚಿತ್ರಕ್ಕೆ ಅಶ್ವಿನಿ ದತ್ ಬಂಡವಾಳ ಹೂಡಿದ್ದಾರೆ.

ವಿಶ್ವದಾದ್ಯಂತ (world) ತೆರೆಗೆ ಬಂದ ಅತ್ಯಂತ ದುಬಾರಿ ಚಿತ್ರ (film) ʼಕಲ್ಕಿ 2898 ಎಡಿʼ (Kalki 2898AD) ಈಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಇದಕ್ಕೆ ಮುಖ್ಯ ಕಾರಣ ಇದು ಹಿಂದೂ ಧರ್ಮದ (hindu dharma) ವಿಷಯದ ಮೇಲೆ ಕೇಂದ್ರೀಕೃತವಾಗಿರುವುದು. ಭಗವಾನ್ ವಿಷ್ಣುವಿನ (baghavan vishnu) 10ನೇ ಅವತಾರ ಕಲ್ಕಿ (kalki). ಸದಾಚಾರ ಮತ್ತು ನೈತಿಕ ನಡವಳಿಕೆಯನ್ನು ಉತ್ತೇಜಿಸುವ ಕಲ್ಕಿ, ಕಲಿಯುಗವನ್ನು ಕೊನೆಗೊಳಿಸಿ ಮತ್ತೆ ಸತ್ಯಯುಗದ ಸುವರ್ಣ ಯುಗವನ್ನು ಪ್ರಾರಂಭಿಸುತ್ತಾನೆ ಎಂದು ನಂಬಲಾಗಿದೆ.

ಲ್ಕಿಯ ಆಗಮನವು ಹಿಂದೂಗಳಲ್ಲಿ ಹೆಚ್ಚು ಚರ್ಚೆಯ ವಿಷಯವಾಗಿದೆ. ಈತ ಕಲಿಯುಗದ ಅಂತ್ಯದಲ್ಲಿ ಕಾಣಿಸಿಕೊಳ್ಳುತ್ತಾನೆ ಎಂದೇ ಭಾವಿಸಲಾಗಿದೆ. ಕಲಿಯುಗ ವಂಚನೆ, ಪಾಪ ಮತ್ತು ಅನೈತಿಕತೆಯಿಂದ ತುಂಬಿರುವ ಯುಗವಾಗಿದೆ. ಇದೀಗ ತೆರೆಗೆ ಬಂದಿರುವ ‘ಕಲ್ಕಿ 2898 ಎಡಿ’ ಈ ಕುರಿತು ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕಿದೆ. ತೆಲುಗು ಸೂಪರ್‌ಸ್ಟಾರ್ ಪ್ರಭಾಸ್, ಬಾಲಿವುಡ್ ತಾರೆಗಳಾದ ಅಮಿತಾಬ್ ಬಚ್ಚನ್, ದೀಪಿಕಾ ಪಡುಕೋಣೆ ಮತ್ತು ತಮಿಳಿನ ಹಿರಿಯ ನಟ ಕಮಲ್ ಹಾಸನ್ ಒಳಗೊಂಡ ಈ ಚಿತ್ರದಲ್ಲಿ ಪೌರಾಣಿಕ ಕಥೆ ಮತ್ತು ವಿಜ್ಞಾನವನ್ನು ಹದವಾಗಿ ಬೆರೆಸಿ ಅದ್ಭುತವಾಗಿ ನಿರ್ಮಿಸಲಾಗಿದೆ. ನಾಗ್ ಅಶ್ವಿನ್ ನಿರ್ದೇಶನದ ಬಹುತೇಕ ಎಲ್ಲಾ ಪ್ರಮುಖ ಪಾತ್ರಗಳನ್ನು ಹಿಂದೂ ಧರ್ಮಗ್ರಂಥಗಳಲ್ಲಿ ಗುರುತಿಸಬಹುದು. ಟ್ರೇಲರ್‌ನಲ್ಲಿ ಭವಿಷ್ಯ ನುಡಿದ ಕಲ್ಕಿಯ ಗುರುತಿನ ಬಗ್ಗೆ ಅಶ್ವಿನ್ ಯಾವುದೇ ಸುಳಿವು ನೀಡಲಿಲ್ಲ.

Continue Reading

ಟಾಲಿವುಡ್

Rashmika Mandanna: ರಶ್ಮಿಕಾ ಇದೀಗ ಟಾಲಿವುಡ್‌ಗೆ ಬೈ ಬೈ; ಬಾಲಿವುಡ್‌ನಲ್ಲಿಯೇ ಬಿಡಾರ!

Rashmika Mandanna: ಇತ್ತ ರಶ್ಮಿಕಾ ಮಂದಣ್ಣ ಪುಷ್ಪ 02 ಚಿತ್ರದ ಬಾಕಿ ಕೆಲಸ ಮುಗಿಸಿ, ಸಿಕಂದರ್ ಚಿತ್ರದ ಚಿತ್ರೀಕರಣಕ್ಕೆ ತೆರಳಲಿದ್ದಾರೆ. ಮತ್ತೊಂದೆಡೆ, ರಶ್ಮಿಕಾ ಅವರು ಪುಷ್ಪ 2 ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದ್ದಾರೆ. ಡಿಸೆಂಬರ್ 6 ರಂದು ಸಿನಿಮಾ ಬಿಡುಗಡೆಯಾಗಲಿದೆ.

VISTARANEWS.COM


on

Rashmika Mandanna Ayushmann Khurrana Team Up For Horror Comedy
Koo

ಬೆಂಗಳೂರು: ನ್ಯಾಶನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ (Rashmika Mandanna) ಬಾಲಿವುಡ್‌ನಲ್ಲಿ ಮಿಂಚುತ್ತಿದ್ದಾರೆ. ಹಿಂದಿಯಲ್ಲಿ ಈಗಾಗಲೇ ಗುಡ್ ಬೈ, ಮಿಶನ್ ಮಜ್ನು, ಛಾವಾ ಚಿತ್ರಗಳನ್ನು ಮಾಡಿರುವ ರಶ್ಮಿಕಾ, ಸಲ್ಮಾನ್ ಖಾನ್ ಜತೆ ಕೂಡ ತೆರೆ ಹಂಚಿಕೊಳ್ಳುತ್ತಿದ್ದಾರೆ. ಸಲ್ಮಾನ್ ಅಭಿನಯದ `ಸಿಕಂದರ್’ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಇದರ ನಡುವೆ ರಶ್ಮಿಕಾ ಮಂದಣ್ಣ ಮತ್ತೊಂದು ಹಿಂದಿ ಚಿತ್ರಕ್ಕೆ ಗ್ನೀನ್ ಸಿಗ್ನಲ್ ನೀಡಿದ್ದಾರೆ, ಬಾಲಿವುಡ್‌ನ ಪ್ರತಿಭಾವಂತ ಹೀರೋ ಆಯುಷ್ಮಾನ್ ಖುರಾನಾಗೆ ನಾಯಕಿಯಾಗಿದ್ದಾರೆ ಎಂದು ವರದಿಯಾಗಿದೆ. ಆಯುಷ್ಮಾನ್ ಖುರಾನ ಮತ್ತು ರಶ್ಮಿಕಾ ಅಭಿನಯಿಸಲಿರುವ ಈ ಚಿತ್ರಕ್ಕೆ ʻವ್ಯಾಂಪೈರ್ಸ್‌ ಆಫ್ ವಿಜಯ್ ನಗರʼ ಎಂದು ಹೆಸರಿಡಲಾಗಿದೆ.

ʻಸ್ತ್ರೀʼ. ʻಬೇಡಿಯಾʼ.. ʻಮುಂಜ್ಯಾʼನಂತಹ ಹಾರರ್ ಕಾಮಿಡಿ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ದಿನೇಶ್ ವಿಜನ್ ಆಯುಷ್ಮಾನ್ ಕುರಾನಾ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಈ ಚಿತ್ರಕ್ಕೆ ಬಂಡವಾಳ ಹೂಡಲಿದ್ದಾರೆ.

ಈ ವರ್ಷದ ನವೆಂಬರ್‌ನಿಂದ ಚಿತ್ರ ಆರಂಭವಾಗಲಿದೆ ಎಂದು ಮೂಲಗಳು ತಿಳಿಸಿವೆ. “ಇದು ಆಯುಷ್ಮಾನ್ ಖುರಾನಾ ಮತ್ತು ರಶ್ಮಿಕಾ ಮಂದಣ್ಣ ಒಟ್ಟಿಗೆ ತೆರೆ ಹಂಚಿಕೊಳ್ಳುತ್ತಿರುವ ಮೊದಲ ಸಿನಿಮಾ. ಪ್ರಸ್ತುತ ಸಿನಿಮಾ ಸ್ಕ್ರಿಪ್ಟ್ ಆಗುತ್ತಿದೆ. ಶೀಘ್ರದಲ್ಲೇ ಪ್ರೀ-ಪ್ರೊಡಕ್ಷನ್ ಹಂತ ಮುಗಲಿದೆʼ ಎಂದು ವರದಿಯಾಗಿದೆ.

ಇದನ್ನೂ ಓದಿ: Vinay Gowda: ʻಡೆವಿಲ್ʼ ಸಿನಿಮಾದಲ್ಲಿ ನಾನೇ ವಿಲನ್, ಪ್ರಾಜೆಕ್ಟ್‌ ಏನಾಗುತ್ತೋ ಗೊತ್ತಿಲ್ಲ ಎಂದ ʻಬಿಗ್ ಬಾಸ್ʼ ಆನೆ ವಿನಯ್ ಗೌಡ!

ಆದಿತ್ಯ ಸತ್ಪೋದರ್ ಈ ಚಿತ್ರವನ್ನು ನಿರ್ದೇಶಿಸಲಿದ್ದಾರೆ. ಸದ್ಯಕ್ಕೆ ದಿನೇಶ್ ವಿಜನ್ ತಮ್ಮ ಸ್ತ್ರೀ 2 ಚಿತ್ರದ ಬಿಡುಗಡೆಯ ಕೆಲಸದಲ್ಲಿದ್ದಾರೆ. ಇತ್ತ ರಶ್ಮಿಕಾ ಮಂದಣ್ಣ ಪುಷ್ಪ 02 ಚಿತ್ರದ ಬಾಕಿ ಕೆಲಸ ಮುಗಿಸಿ, ಸಿಕಂದರ್ ಚಿತ್ರದ ಚಿತ್ರೀಕರಣಕ್ಕೆ ತೆರಳಲಿದ್ದಾರೆ.ಆಯುಷ್ಮಾನ್ ಖುರಾನಾ ಸದ್ಯಕ್ಕೆ ಕರಣ್ ಜೋಹರ್ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಇನ್ನೂ ಆಯುಷ್ಮಾನ್ ಕೈಯಲ್ಲಿ ʻಬಾರ್ಡರ್ʼ ಚಿತ್ರದ ಸಿಕ್ವೆಲ್ ಕೂಡ ಇದೆ. ಮತ್ತೊಂದೆಡೆ, ರಶ್ಮಿಕಾ ಅವರು ಪುಷ್ಪ 2 ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದ್ದಾರೆ. ಡಿಸೆಂಬರ್ 6 ರಂದು ಸಿನಿಮಾ ಬಿಡುಗಡೆಯಾಗಲಿದೆ.

ʻಸಿಖಂದರ್’ ಸಿನಿಮಾ ಆಕ್ಷನ್ ಥ್ರಿಲ್ಲರ್ ಚಿತ್ರವಾಗಿರಲಿದೆ. 400 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿನಿಮಾ ಸಿದ್ಧವಾಗುತ್ತಿದೆ ಎಂದು ವರದಿಯಾಗಿದೆ. ಸಲ್ಮಾನ್ ಖಾನ್ ಕೊನೆಯದಾಗಿ ‘ಟೈಗರ್ 3’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.ತಮಿಳು, ತೆಲುಗಿನಲ್ಲಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಎಆರ್ ಮುರುಗದಾಸ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವನ್ನು ಸಾಜಿದ್ ನಾಡಿಯಾವಾಲ ನಿರ್ಮಾಣ ಮಾಡುತ್ತಿದ್ದು, ದೊಡ್ಡ ಬಜೆಟ್​ನಲ್ಲಿ ಸಿದ್ಧವಾಗುತ್ತಿದೆ. ಮುರುಗದಾಸ್ ಅವರು ಈ ಮೊದಲು ‘ಗಜಿನಿ’, ‘ಸ್ಟಾಲಿನ್’, ‘ಸೆವೆಂತ್ ಸೆನ್ಸ್’, ‘ತುಪ್ಪಾಕಿ’, ‘ಸ್ಪೈಡರ್’ ಸೇರಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ಕೊಟ್ಟಿದ್ದರು. ಮುರುಗದಾಸ್ ಅವರು ಆಮಿರ್ ಖಾನ್ ನಟಿಸಿದ್ದ ‘ಗಜಿನಿ’ ಚಿತ್ರವನ್ನು ಅವರೇ ನಿರ್ದೇಶನ ಮಾಡಿದ್ದರು.

Continue Reading
Advertisement
Assam Tour
ಪ್ರವಾಸ8 mins ago

Assam Tour: ಅಸ್ಸಾಂನ ಪೆಲ್ಲಿಂಗ್‌ನಲ್ಲಿ ಮೋಡಿ ಮಾಡುವ 8 ಆಕರ್ಷಕ ಸಂಗತಿಗಳಿವು

Ashada Month
ಧಾರ್ಮಿಕ23 mins ago

Ashada Month: ಆಷಾಢವನ್ನು ಅಶುಭ ತಿಂಗಳು ಅನ್ನುವುದೇಕೆ? ಇದಕ್ಕಿದೆ ವೈಜ್ಞಾನಿಕ ಕಾರಣ!

Mango Storage
ಆಹಾರ/ಅಡುಗೆ23 mins ago

Mango Storage: ಮಾವಿನ ಹಣ್ಣಿನ ಸೀಸನ್‌ ಮುಗಿದರೇನಂತೆ? ತಿಂಗಳ ಕಾಲ ಇದನ್ನು ಶೇಖರಿಸಿ ಇಡುವ ವಿಧಾನ ಇಲ್ಲಿದೆ

Rahul Gandhi
ದೇಶ26 mins ago

Rahul Gandhi: ರಾಹುಲ್‌ ಗಾಂಧಿ ಈಗ ಪ್ರತಿಪಕ್ಷ ನಾಯಕ; ಅವರಿಗಿರುವ ಅಧಿಕಾರ ಯಾವವು? ಸಂಬಳ ಎಷ್ಟು?

karnataka weather Forecast
ಮಳೆ53 mins ago

Karnataka Weather : ಕರಾವಳಿಯಲ್ಲಿ ಮುಂಗಾರು ಪ್ರಬಲ; ಮುಂದುವರಿಯಲಿದೆ ಮಳೆ ಅಬ್ಬರ

Bridge Collapse
ದೇಶ56 mins ago

Bridge Collapse: ಬಿಹಾರದಲ್ಲಿ ಮತ್ತೊಂದು ನಿರ್ಮಾಣ ಹಂತದ ಸೇತುವೆ ಕುಸಿತ; 9 ದಿನದಲ್ಲಿ 5ನೇ ಪ್ರಕರಣ!

Muhammad Usman
ಪ್ರಮುಖ ಸುದ್ದಿ2 hours ago

Muhammad Usman : ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಯುಎಇ ಕ್ರಿಕೆಟಿಗ ಉಸ್ಮಾನ್​

Dina Bhavishya
ಭವಿಷ್ಯ2 hours ago

Dina Bhavishya : ಈ ದಿನ ಆತ್ಮೀಯರೊಂದಿಗೆ ಕಾಲ ಕಳೆಯುವಿರಿ

UGC NET Exam
ದೇಶ7 hours ago

UGC NET Exam: ರದ್ದಾಗಿದ್ದ ಯುಜಿಸಿ ನೆಟ್‌ ಪರೀಕ್ಷೆಗೆ ಹೊಸ ದಿನಾಂಕ ಘೋಷಣೆ; ಪರೀಕ್ಷೆಗೆ ಹೊಸ ವಿಧಾನ, ಇಲ್ಲಿದೆ ವಿವರ‌

Vodafone Idea
ದೇಶ7 hours ago

Vodafone Idea: ಜಿಯೋ, ಏರ್‌ಟೆಲ್‌ ಬೆನ್ನಲ್ಲೇ ವೋಡಾಫೋನ್‌ ಐಡಿಯಾ ಪ್ಲಾನ್‌ ಬೆಲೆ ಏರಿಕೆ; ಹೀಗಿದೆ ವಿವರ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ13 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ20 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

ಟ್ರೆಂಡಿಂಗ್‌