Raj Tarun: ಟಾಲಿವುಡ್‌ ಯುವ ನಟ ʻರಾಜ್ ತರುಣ್ʼ ಪ್ರೀತಿ ಪ್ರೇಮದ ಹೆಸರಿನಲ್ಲಿ ಮೋಸ: ದೂರು ದಾಖಲಿಸಿದ ಪ್ರೇಯಸಿ! - Vistara News

ಟಾಲಿವುಡ್

Raj Tarun: ಟಾಲಿವುಡ್‌ ಯುವ ನಟ ʻರಾಜ್ ತರುಣ್ʼ ಪ್ರೀತಿ ಪ್ರೇಮದ ಹೆಸರಿನಲ್ಲಿ ಮೋಸ: ದೂರು ದಾಖಲಿಸಿದ ಪ್ರೇಯಸಿ!

Raj Tarun: ಸಿನಿಮಾ ಚೂಪಿಸ್ತಾ ಮಾವ’, ‘ಪವರ್ ಪ್ಲೇ’, ‘ನಾ ಸಾಮಿ ರಂಗ’, ‘ಒರೇ ಬುಜ್ಜಿಗಾ ಸೇರಿದಂತೆ ಇನ್ನೂ ಹಲವಾರು ರೊಮ್ಯಾಂಟಿಕ್ ಕಾಮಿಡಿ ಸಿನಿಮಾಗಳಲ್ಲಿ ಅಭಿನಯಿಸಿದ್ದರು ರಾಜ್‌ ತರುಣ್‌. ಇದೀಗ ನರಸಿಂಗಿ ಪೊಲೀಸ್ ಠಾಣೆಯಲ್ಲಿ ಲಾವಣ್ಯ ಹೆಸರಿನ ಯುವತಿ ದೂರು ದಾಖಲಿಸಿದ್ದು, ತಮಗೆ ನಟ ರಾಜ್ ತರುಣ್ ವಂಚನೆ ಮಾಡಿದ್ದಾನೆಂದು ಆರೋಪಿಸಿದ್ದಾರೆ. 

VISTARANEWS.COM


on

Raj Tarun Police complaint filed by live-in partner
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ‘ಉಯ್ಯಾಲ ಜಂಪಾಲ’, ‘ಕುಮಾರಿ 21 ಎಫ್’, ‘ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ಟಾಲಿವುಡ್​ನ ಜನಪ್ರಿಯ ಯುವ ನಟ ರಾಜ್ ತರುಣ್ (Raj Tarun) ವಿರುದ್ಧ ಅವರ ಪ್ರೇಯಸಿಯೇ ವಂಚನೆ ಪ್ರಕರಣ ದಾಖಲಿಸಿದ್ದಾರೆ. ಸಿನಿಮಾ ಚೂಪಿಸ್ತಾ ಮಾವ’, ‘ಪವರ್ ಪ್ಲೇ’, ‘ನಾ ಸಾಮಿ ರಂಗ’, ‘ಒರೇ ಬುಜ್ಜಿಗಾ ಸೇರಿದಂತೆ ಇನ್ನೂ ಹಲವಾರು ರೊಮ್ಯಾಂಟಿಕ್ ಕಾಮಿಡಿ ಸಿನಿಮಾಗಳಲ್ಲಿ ಅಭಿನಯಿಸಿದ್ದರು ರಾಜ್‌ ತರುಣ್‌. ಇದೀಗ ನರಸಿಂಗಿ ಪೊಲೀಸ್ ಠಾಣೆಯಲ್ಲಿ ಲಾವಣ್ಯ ಹೆಸರಿನ ಯುವತಿ ದೂರು ದಾಖಲಿಸಿದ್ದು, ತಮಗೆ ನಟ ರಾಜ್ ತರುಣ್ ವಂಚನೆ ಮಾಡಿದ್ದಾನೆಂದು ಆರೋಪಿಸಿದ್ದಾರೆ. 

ಅಲ್ಲದೆ, ರಾಜ್ ತನ್ನ ಜೀವನದಿಂದ ದೂರವಾಗದೇ ಇದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಲಾವಣ್ಯ ದೂರಿನಲ್ಲಿ ತಿಳಿಸಿದ್ದಾರೆ. ನಟ ರಾಜ್ ತರುಣ್ ಗೆಳತಿ ಎಂದು ಹೇಳಿಕೊಳ್ಳುವ ಲಾವಣ್ಯ, ರಾಜ್ ತರುಣ್ ವಿರುದ್ಧ ಸೆನ್ಸೇಷನಲ್ ಆರೋಪ ಮಾಡಿದ್ದು ಹೀಗೆ. “ರಾಜ್ ತರುಣ್ ನನ್ನನ್ನು ನಂಬಿ, ಪ್ರೀತಿಸಿ, ದೈಹಿಕವಾಗಿಯೂ ಬಳಸಿಕೊಂಡಿದ್ದಾರೆ. ಇದಕ್ಕೆ ಕಾರಣ ಒಬ್ಬ ಯುವತಿ . ಹಾಗಾಗಿಯೇ ಆಕೆಯ ಹಾಗೂ ಆಕೆಯ ಸಹೋದರನ ವಿರುದ್ಧ ನರಸಿಂಗಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದೇನೆ. ನಾನು ರಾಜ್‌ತರುಣ್ ಜತೆ 11 ವರ್ಷಗಳಿಂದ ಸಂಬಂಧ ಹೊಂದಿದ್ದೆ. ದೇವಸ್ಥಾನದಲ್ಲಿ ಮದುವೆ ಕೂಡ ಮಾಡಿಕೊಂಡಿದ್ದೇವು. ಆದರೆ ಆಕೆಯೊಂದಿಗೆ ಸಂಬಂಧ ಹೊಂದಿದ್ದ ಕಾರಣ 3 ತಿಂಗಳ ಹಿಂದೆ ರಾಜ್ ಮನೆ ಬಿಟ್ಟು ನನ್ನಿಂದ ದೂರ ಉಳಿದಿದ್ದರು’’ ಎಂದು ಲಾವಣ್ಯ ಹೇಳಿಕೆ ನೀಡಿರುವುದಾಗಿ ವರದಿಯಾಗಿದೆ. ಲಾವಣ್ಯ ಹೇಳುತ್ತಿರುವಂತೆ ಇದೀಗ ಮುಂಬೈ ಮೂಲದ ನಟಿ, ಲಾವಣ್ಯಗೆ ಬೆದರಿಕೆಗಳನ್ನು ಹಾಕಿದ್ದು, ರಾಜ್ ತರುಣ್ ಇಂದ ದೂರ ಇರುವಂತೆ ಒತ್ತಾಯಿಸಿದ್ದಾರೆ. 

ಇದನ್ನೂ ಓದಿ: Rashmika Mandanna: ಧನುಷ್‌ ನಟನೆಯ ʻಕುಬೇರʼ ಸಿನಿಮಾದ ರಶ್ಮಿಕಾ ಫಸ್ಟ್‌ ಲುಕ್‌ ಪೋಸ್ಟರ್‌ ಔಟ್‌!

ʻʻರಾಜ್‌ ಈ ರೀತಿ ಮೋಸ ಮಾಡುತ್ತೇನೆ ಎಂದು ಅಂದುಕೊಂಡಿರಲಿಲ್ಲ. ಈಗ ನನಗೆ ಜೀವ ಭಯವಿದೆ. ಆ ಹುಡಗಿ ನನ್ನನ್ನು ಏನು ಮಾಡುತ್ತಾಳೋ ಎಂಬ ಭಯದಿಂದ ನಾನು ಪೊಲೀಸ್ ದೂರು ದಾಖಲಿಸಿದೆ. ಅವಳು ನನಗೆ ಸಾಕಷ್ಟು ಬಾರಿ ಕರೆ ಮಾಡಿ ನನಗೆ ಜೀವ ಬೆದರಿಕೆ ಹಾಕಿದ್ದಾಳೆ. ಈ ವಿಚಾರದಲ್ಲಿ ಭದ್ರತೆ ನೀಡುವಂತೆ ಪೊಲೀಸರನ್ನೂ ಕೇಳಿದ್ದೇನೆ,’’ ಎಂದು ಲಾವಣ್ಯ ಹೇಳಿದ್ದಾರೆ.

ಲಾವಣ್ಯಗೆ ನಟಿಯಿಂದ, ಆಕೆಯ ಸಹೋದರನಿಂದ ಬೆದರಿಕೆಗಳು ಬಂದಿವೆಯಂತೆ. ಕೆಲ ತಿಂಗಳ ಹಿಂದೆ ಸಹ ಲಾವಣ್ಯ, ರಾಜ್ ಅನ್ನು ಮದುವೆಯಾಗಲು ನಿಶ್ಚಯಿಸಿದ್ದರಂತೆ. ಆ ಸಮಯದಲ್ಲಿ ಆ ನಟಿಗೆ ಕರೆ ಮಾಡಿ ರಾಜ್​ ಇಂದ ದೂರ ಇರುವಂತೆ ಬೇಡಿಕೊಂಡಿದ್ದಾಗಿಯೂ ಲಾವಣ್ಯ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ರಾಜ್ ಸದ್ಯ ‘ತಿರಗಬಡರಾ ಸ್ವಾಮಿ’ ಹೆಸರಿನ ಹೊಸ ಸಿನಿಮಾ ಪ್ರಾರಂಭಿಸಿದ್ದು ಚಿತ್ರೀಕರಣ ನಡೆಯುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Kalki 2898 AD: ನಾಲ್ಕೇ ದಿನಕ್ಕೆ 500 ಕೋಟಿ ರೂ. ಗಳಿಕೆ ಮಾಡಿದ ʻಕಲ್ಕಿ 2898 ಎಡಿʼಸಿನಿಮಾ!

Kalki 2898 AD:  ಕಲ್ಕಿ ವಿಶ್ವ ಬಾಕ್ಸ್ ಆಫೀಸ್​ನಲ್ಲೂ ಮಿಂಚುತ್ತಿದೆ. ಅಮೆರಿಕ, ಆಸ್ಟ್ರೇಲಿಯಾ ಮೊದಲಾದ ಕಡೆಗಳಲ್ಲಿ ಸಿನಿಮಾ ಮೆಚ್ಚುಗೆ ಪಡೆಯುತ್ತಿದೆ. ಈ ಚಿತ್ರ ವಿಶ್ವಾದ್ಯಂತ 800 ಕೋಟಿ ರೂಪಾಯಿ ಗಳಿಸಿದೆ. ಶೀಘ್ರವೇ ಚಿತ್ರ 1000 ಕೋಟಿ ರೂಪಾಯಿ ಕ್ಲಬ್ ಸೇರುವ ಸಾಧ್ಯತೆ ಇದೆ.

VISTARANEWS.COM


on

Kalki 2898 AD box office collection weekend 2
Koo

ಬೆಂಗಳೂರು: ‘ಕಲ್ಕಿ 2898 ಎಡಿ’ ಸಿನಿಮಾ ಭಾರತದ ಬಾಕ್ಸ್ ಆಫೀಸ್​ನಲ್ಲಿ 500 ಕೋಟಿ ರೂಪಾಯಿ ಕ್ಲಬ್ ಸೇರಿದೆ. ಕೇವಲ 11 ದಿನಕ್ಕೆ ಈ ಸಿನಿಮಾ ಇಷ್ಟು ದೊಡ್ಡ ಮೊತ್ತದ ಕಲೆಕ್ಷನ್ ಮಾಡಿದೆ. ಫಿಲ್ಮ್ ಟ್ರೇಡ್ ಪೋರ್ಟಲ್ ಸ್ಯಾಕ್‌ನಿಲ್ಕ್ ಪ್ರಕಾರ, ಚಿತ್ರವು ತನ್ನ ಎರಡನೇ ಭಾನುವಾರದಂದು 500 ಕೋಟಿ ಮೈಲಿಗಲ್ಲನ್ನು ದಾಟಿದೆ.

ಕಲ್ಕಿ 2898 AD ತನ್ನ ಮೊದಲ ವಾರದಲ್ಲಿ ಒಟ್ಟು ರೂ 414.85 ಕೋಟಿ ಗಳಿಸಿತು. ಕಲ್ಕಿ ವಿಶ್ವ ಬಾಕ್ಸ್ ಆಫೀಸ್​ನಲ್ಲೂ ಮಿಂಚುತ್ತಿದೆ. ಅಮೆರಿಕ, ಆಸ್ಟ್ರೇಲಿಯಾ ಮೊದಲಾದ ಕಡೆಗಳಲ್ಲಿ ಸಿನಿಮಾ ಮೆಚ್ಚುಗೆ ಪಡೆಯುತ್ತಿದೆ. ಈ ಚಿತ್ರ ವಿಶ್ವಾದ್ಯಂತ 800 ಕೋಟಿ ರೂಪಾಯಿ ಗಳಿಸಿದೆ. ಶೀಘ್ರವೇ ಚಿತ್ರ 1000 ಕೋಟಿ ರೂಪಾಯಿ ಕ್ಲಬ್ ಸೇರುವ ಸಾಧ್ಯತೆ ಇದೆ.

ತೆಲುಗು ಪ್ರದರ್ಶನಗಳಲ್ಲಿ 242.85 ಕೋಟಿ ರೂಪಾಯಿಗಳನ್ನು ಮತ್ತು ಹಿಂದಿ ಪ್ರದರ್ಶನಗಳಲ್ಲಿ 211.9 ಕೋಟಿ ರೂಪಾಯಿಗಳನ್ನು ಗಳಿಸಿದೆ. ಚಿತ್ರದ ತಮಿಳು ಶೋಗಳು 30.1 ಕೋಟಿ, ಮಲಯಾಳಂ ಶೋ 18.2 ಕೋಟಿ ಮತ್ತು ಕನ್ನಡ ಪ್ರದರ್ಶನಗಳು ರೂ 3.95 ಕೋಟಿ ರೂ. ಆಗಿದೆ.

ನಾಗ್ ಅಶ್ವಿನ್ ಅವರು ‘ಕಲ್ಕಿ 2898 ಎಡಿ’ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. 2ಡಿ ಜೊತೆಗೆ 3ಡಿಯಲ್ಲೂ ಸಿನಿಮಾ ವೀಕ್ಷಣೆಗೆ ಲಭ್ಯವಿದೆ. ಈ ಚಿತ್ರದ ಬಜೆಟ್ 600 ಕೋಟಿ ರೂಪಾಯಿ ಎನ್ನಲಾಗಿದೆ. ಈ ಕಾರಣದಿಂದಲೇ ಸಿನಿಮಾ ದೊಡ್ಡ ಮೊತ್ತದ ಗಳಿಕೆ ಮಾಡೋ ಅವಶ್ಯಕತೆ ಇತ್ತು. ಸದ್ಯ ಆಗಿರೋ ಗಳಿಕೆಯಿಂದ ನಿರ್ಮಾಪಕರಿಗೆ ಇನ್ನೂ ದೊಡ್ಡ ಲಾಭವೇನು ಆಗಿಲ್ಲ. ‘ಕಲ್ಕಿ 2898 ಎಡಿ’ ಚಿತ್ರ ತೆಲುಗು, ತಮಿಳು, ಮಲಯಾಳಂ, ಕನ್ನಡ, ಹಿಂದಿ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ರಿಲೀಸ್ ಆಗಿದೆ. ವೈಜಯಂತಿ ಮೂವಿಸ್ ಮೂಲಕ ಅಶ್ವಿನಿ ದತ್ ಸಿನಿಮಾ ನಿರ್ಮಾಣ ಮಾಡಿದ್ದಾರೆ.

ಸಲಾರ್’ ನಂತರ ಬಿಡುಗಡೆಯಾದ ಕಲ್ಕಿ ಸಿನಿಮಾ ಮೂಲಕ, ಪ್ರಭಾಸ್ ಚಿತ್ರೋದ್ಯಮದಲ್ಲಿ ಮತ್ತೊಂದು ಹೊಸ ಮೈಲಿಗಲ್ಲು ತಲುಪಿದ್ದಾರೆ. ಗಲ್ಲಾಪೆಟ್ಟಿಗೆಯಲ್ಲಿ ದೊಡ್ಡ ಮಟ್ಟದ ಓಪನಿಂಗ್ ಪ್ರಭಾಸ್‌ ಸಿನಿಮಾಗಳಿಗೆ ಸಿಗುತ್ತಿವೆ. ಇದೀಗ ‘ಕಲ್ಕಿ 2898 AD’ ಸಿನಿಮಾ ಸಹ ಇದಕ್ಕೆ ಹೊರತಾಗಿಲ್ಲ, ಇದು ಭಾರತೀಯ ಚಿತ್ರರಂಗದಲ್ಲಿ ಅವರ ಮೂರನೇ ಅತಿದೊಡ್ಡ ಕಲೆಕ್ಷನ್‌ ಮಾಡಿದ ಸಿನಿಮಾವಾಗಿದೆ.

ಇದನ್ನೂ ಓದಿ: Kalki 2898 AD: “ಕಲ್ಕಿ 2898 ಎಡಿ” ಸಿನಿಮಾ ನೋಡಲು ಜಪಾನ್‌ನಿಂದ ಹೈದರಾಬಾದ್‌ಗೆ ಬಂದ ಫ್ಯಾನ್ಸ್‌!

‘ಬಾಹುಬಲಿ’ಯಿಂದ ‘ಸಲಾರ್’, ‘ಕಲ್ಕಿ 2898 AD’ ವರೆಗೆ ಪ್ರಭಾಸ್ ತಮ್ಮ ಸ್ಟಾರ್ ಪವರ್‌ಗೆ ಸಾಟಿಯಿಲ್ಲ ಎಂಬುದನ್ನು ಸಾಬೀತುಪಡಿಸುತ್ತಲೇ ಬಂದಿದ್ದಾರೆ. ಸಮಕಾಲೀನ ಸಿನಿಮಾರಂಗದಲ್ಲಿ ಅತ್ಯಂತ ಅಪ್ರತಿಮ ಮತ್ತು ಪ್ರಭಾವಶಾಲಿ ನಟರಲ್ಲಿ ಒಬ್ಬರಾಗಿ ಹೊರಹೊಮ್ಮುತ್ತಿದ್ದಾರೆ ಪ್ರಭಾಸ್.‌ ಅಂದಹಾಗೆ ನಾಗ್ ಅಶ್ವಿನ್ ನಿರ್ದೇಶಿಸಿದ, ‘ಕಲ್ಕಿ 2898 AD’ 2898 AD ವರ್ಷದಲ್ಲಿ ಹಿಂದೂಗಳ ಮಹಾಕಾವ್ಯ ಮಹಾಭಾರತದಿಂದ ಸ್ಫೂರ್ತಿ ಪಡೆದು ನಿರ್ಮಿಸಲಾಗಿದೆ. ಈ ವೈಜ್ಞಾನಿಕ ಆಕ್ಷನ್ ಸಿನಿಮಾದಲ್ಲಿ ಅಮಿತಾಭ್ ಬಚ್ಚನ್ ಮತ್ತು ಕಮಲ್ ಹಾಸನ್ ಅವರಂತಹ ಲೆಜಂಡರಿ ಕಲಾವಿದರಿದ್ದಾರೆ. ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ಸೇರಿ ಸಾಕಷ್ಟು ಕಲಾವಿದರು ಬಣ್ಣ ಹಚ್ಚಿದ್ದಾರೆ.

Continue Reading

ಟಾಲಿವುಡ್

Raj Tarun: ಯುವ ನಟ ರಾಜ್ ತರುಣ್ ಮಾಜಿ ಪ್ರೇಯಸಿ ವಿರುದ್ಧ ದೂರು ದಾಖಲಿಸಿದ ನಟಿ!

Raj Tarun: ರಾಜ್ ತರುಣ್​ಗೆ ಅವರು ನಟಿಸುತ್ತಿರುವ ಸಿನಿಮಾದ ನಾಯಕ ನಟಿಯೊಂದಿಗೆ ಸಂಬಂಧವಿದ್ದು ಆಕೆಯ ಕಾರಣಕ್ಕೆ ನನಗೆ ಮೋಸ ಮಾಡಿದ್ದಾರೆ ಎಂದು ಲಾವಣ್ಯ ದೂರಿನಲ್ಲಿ ಉಲ್ಲೇಖಿಸಿದ್ದರು. ಇದೀಗ ರಾಜ್ ತರುಣ್​ರ ಹೊಸ ಸಿನಿಮಾದ ನಾಯಕ ನಟಿ, ರಾಜ್​ರ ಪ್ರೇಯಸಿ ಲಾವಣ್ಯ ವಿರುದ್ಧ ದೂರು ನೀಡಿದ್ದಾರೆ.

VISTARANEWS.COM


on

Raj Tarun’s Heroine Malvi Malhotra Files Complaint
Koo

ಬೆಂಗಳೂರು: ಉಯ್ಯಾಲ ಜಂಪಾಲ’, ‘ಕುಮಾರಿ 21 ಎಫ್’, ‘ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ಟಾಲಿವುಡ್​ನ ಜನಪ್ರಿಯ ಯುವ ನಟ ರಾಜ್ ತರುಣ್ (Raj Tarun) ವಿರುದ್ಧ ಅವರ ಪ್ರೇಯಸಿಯೇ ವಂಚನೆ ಪ್ರಕರಣ ದಾಖಲಿಸಿದ್ದರು. ಪೊಲೀಸ್ ಠಾಣೆಯಲ್ಲಿ ಲಾವಣ್ಯ ಹೆಸರಿನ ಯುವತಿ ದೂರು ದಾಖಲಿಸಿದ್ದು, ತಮಗೆ ನಟ ರಾಜ್ ತರುಣ್ ವಂಚನೆ ಮಾಡಿದ್ದಾನೆಂದು ಆರೋಪಿಸಿದ್ದರು. ಮಾತ್ರವಲ್ಲ ರಾಜ್ ತರುಣ್​ಗೆ ಅವರು ನಟಿಸುತ್ತಿರುವ ಸಿನಿಮಾದ ನಾಯಕ ನಟಿಯೊಂದಿಗೆ ಸಂಬಂಧವಿದ್ದು ಆಕೆಯ ಕಾರಣಕ್ಕೆ ನನಗೆ ಮೋಸ ಮಾಡಿದ್ದಾರೆ ಎಂದು ಲಾವಣ್ಯ ದೂರಿನಲ್ಲಿ ಉಲ್ಲೇಖಿಸಿದ್ದರು. ಇದೀಗ ರಾಜ್ ತರುಣ್​ರ ಹೊಸ ಸಿನಿಮಾದ ನಾಯಕ ನಟಿ, ರಾಜ್​ರ ಪ್ರೇಯಸಿ ಲಾವಣ್ಯ ವಿರುದ್ಧ ದೂರು ನೀಡಿದ್ದಾರೆ.

”ಲಾವಣ್ಯ ನನ್ನ ವಿರುದ್ಧ ಮಾಡಿರುವ ಆರೋಪಗಳು ಸುಳ್ಳು. ನಾನು ರಾಜ್ ತರುಣ್‌ ಜತೆ ಸಂಬಂಧ ಹೊಂದಿಲ್ಲ ಮತ್ತು ನಮ್ಮಿಬ್ಬರ ಮಧ್ಯೆ ಇರುವುದು ಕೇವಲ ಫ್ರೆಂಡ್‌ಶಿಪ್‌. ನಮ್ಮ ನಡುವೆ ಯಾವುದೇ ರೀತಿಯ ಸಂಬಂಧವಿಲ್ಲ” ಎಂದು ಹೇಳಿಕೊಂಡಿದ್ದಾರೆ. “ತಿರಗಬ್ಯಾಡರ ಸಾಮಿ” ಚಿತ್ರದಲ್ಲಿ ನಟಿಸಿದ್ದರು ಮಾಳವಿ ಮಲ್ಹೋತ್ರಾ.

ಇದೀಗ ಲಾವಣ್ಯ ಈಗ ಇದೇ ಮಾಳವಿ ಅವರು ರಾಜ್ ತರುಣ್​ರ ಪ್ರೇಯಸಿ ಲಾವಣ್ಯ ವಿರುದ್ಧ ದೂರು ದಾಖಲಿಸಿದ್ದಾರೆ. ಹೈದರಾಬಾದ್​ ಡಿಸಿಪಿ ಅವರನ್ನು ಭೇಟಿ ಆಗಿರುವ ಮಾಳವಿ ಮಲ್ಹೋತ್ರಾ, ʻʻಹಿಮಾಚಲ ಪ್ರದೇಶದಲ್ಲಿ ವಾಸಿಸುತ್ತಿರುವ ತನ್ನ ಕುಟುಂಬಕ್ಕೆ ಲಾವಣ್ಯ ಬೆದರಿಕೆ ಹಾಕಿದ್ದಾಳೆ. ಮತ್ತು ತನ್ನ ಸಹೋದರನಿಗೆ ಕರೆ ಮಾಡಿ ಪ್ರಾಣ ತೆಗೆಯುವುದಾಗಿ ಬೆದರಿಕೆ ಹಾಕಿದ್ದಾಳೆ. ಲಾವಣ್ಯ ಯಾರು ಹಾಗೇ ಅವರ ಮುಖವನ್ನು ಇನ್ನೂ ನಾನು ನೋಡಿಲ್ಲ. ರಾಜ್ ತರುಣ್ ಅವರು ನನ್ನ ಮಾಜಿ ಎಕ್ಸ್‌ ಎಂದು ಹೇಳಿದ್ದರಿಂದ ನಾನು ಅವಳನ್ನು ಬ್ಲಾಕ್ ಮಾಡಿದ್ದೇನೆ ರಾಜ್ ತರುಣ್ ಬಳಿಯೂ ನನ್ನ ಅಪ್ಪನ ಫೋನ್ ನಂಬರ್ ಇರಲಿಲ್ಲ. ಆದರೆ ಲಾವಣ್ಯ ಅವಳ ಬಳಿ ಇದೆ. ನನ್ನ ಖಾಸಗಿ ಜೀವನದ ಮೇಲೆ ಆಕೆ ನಿಗಾ ಇರಿಸಿದ್ದಾಳೆ. ನನ್ನ ಖಾಸಗಿ ಜೀವನದಲ್ಲಿ ಮೂಗು ತೂರಿಸಿದ್ದಾಳೆ ಅದು ಅಪರಾಧ. ಪೊಲೀಸರು ಈ ವಿಷಯವಾಗಿ ಕೂಡಲೇ ಕ್ರಮ ಕೈಗೊಳ್ಳಬೇಕುʼʼ ಎಂದಿದ್ದಾರೆ. 

ಇದನ್ನೂ ಓದಿ: Dolly Dhananjay: ಐತಿಹಾಸಿಕ ‘ಹಲಗಲಿ’ ಸಿನಿಮಾದಲ್ಲಿ ‘ಡಾಲಿ’ ಧನಂಜಯ ಹೀರೊ!

ಲಾವಣ್ಯ ಈ ಹಿಂದೆ ದೂರು ನೀಡಿದ್ದೇನು?

ನಟ ರಾಜ್ ತರುಣ್ ವಂಚನೆ ಮಾಡಿದ್ದಾನೆಂದು ಆರೋಪಿಸಿದ್ದರು. . “ರಾಜ್ ತರುಣ್ ನನ್ನನ್ನು ನಂಬಿ, ಪ್ರೀತಿಸಿ, ದೈಹಿಕವಾಗಿಯೂ ಬಳಸಿಕೊಂಡಿದ್ದಾರೆ. ಇದಕ್ಕೆ ಕಾರಣ ಒಬ್ಬ ಯುವತಿ . ಹಾಗಾಗಿಯೇ ಆಕೆಯ ಹಾಗೂ ಆಕೆಯ ಸಹೋದರನ ವಿರುದ್ಧ ನರಸಿಂಗಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದೇನೆ. ನಾನು ರಾಜ್‌ತರುಣ್ ಜತೆ 11 ವರ್ಷಗಳಿಂದ ಸಂಬಂಧ ಹೊಂದಿದ್ದೆ. ದೇವಸ್ಥಾನದಲ್ಲಿ ಮದುವೆ ಕೂಡ ಮಾಡಿಕೊಂಡಿದ್ದೇವು. ಆದರೆ ಆಕೆಯೊಂದಿಗೆ ಸಂಬಂಧ ಹೊಂದಿದ್ದ ಕಾರಣ 3 ತಿಂಗಳ ಹಿಂದೆ ರಾಜ್ ಮನೆ ಬಿಟ್ಟು ನನ್ನಿಂದ ದೂರ ಉಳಿದಿದ್ದರು’’ ಎಂದು ಲಾವಣ್ಯ ಹೇಳಿಕೆ ನೀಡಿರುವುದಾಗಿ ವರದಿಯಾಗಿತ್ತು.

Continue Reading

ಟಾಲಿವುಡ್

Shruti Haasan: ಮದುವೆ ಯಾವಾಗ ಎಂದು ಕೇಳಿದ್ದಕ್ಕೆ ತಾಳ್ಮೆ ಕಳೆದುಕೊಂಡ ಶ್ರುತಿ ಹಾಸನ್‌!

Shruti Haasan: ಮೈಕಲ್ ಕೋರ್ಸೆಲ್ ಅವರಿಂದ ದೂರವಾದ ನಂತರ, ಶ್ರುತಿ ಹಾಸನ್ ಬದುಕಿನಲ್ಲಿ ಬಂದ ವ್ಯಕ್ತಿ ಶಂತನು ಹಜಾರಿಕಾ. ಶಂತನು ಹಜಾರಿಕಾ ಜತೆ ಎರಡು ವರ್ಷಗಳ ಪ್ರೀತಿಯಲ್ಲಿ ಇದ್ದಿದ್ದರು ಶ್ರುತಿ ಹಾಸನ್. ಅನೇಕ ಸಲ ತಮ್ಮ ಈ ಪ್ರೇಮ ಕಥೆಯನ್ನ ಹೆಮ್ಮೆಯಿಂದ ಹೇಳಿಕೊಂಡಿದ್ದರು.ಶ್ರುತಿ ಹಾಸನ್‌ ಮತ್ತು ಶಂತನು ಹಜಾರಿಕಾ ಸುಮಾರು 5 ವರ್ಷಗಳಿಂದ ಡೇಟಿಂಗ್‌ ನಡೆಸುತ್ತಿದ್ದಾರೆ.

VISTARANEWS.COM


on

Shruti Haasan responds to netizens’ marriage questions in style
Koo

ಬೆಂಗಳೂರು: ಕಾಲಿವುಡ್‌ ಸೂಪರ್‌ ಸ್ಟಾರ್‌ ಮಲ್‌ ಹಾಸನ್‌ (Kamal Hassan) ಅವರ ಪುತ್ರಿ ನಟಿ ಶ್ರುತಿ ಹಾಸನ್‌ (Shruti Haasan) ಪ್ರಿಯತಮ ಶಂತನು ಹಜಾರಿಕಾ (santanu hazarika) ಜತೆ ಬ್ರೇಕಪ್‌ ಮಾಡಿಕೊಂಡಿರುವ ವಿಚಾರ ಗೊತ್ತೇ ಇದೆ.  ಇದೀಗ ಅಭಿಮಾನಿಯೊಬ್ಬ, ನಿಮ್ಮ ಮದುವೆ (Wedding) ಯಾವಾಗ ಎಂದಿದ್ದಕ್ಕೆ ನಟಿ ಗರಂ ಆಗಿದ್ದಾರೆ. ಖಡಕ್ ಆಗಿ ಶ್ರುತಿ ಉತ್ತರ ನೀಡಿದ್ದಾರೆ. ಹುಡುಗಿಯರಿಗೆ ಇಂತಹ ಸಿಲ್ಲಿ ಪ್ರಶ್ನೆಗಳನ್ನು ಕೇಳಬೇಡಿ ಎಂದು ಖಾರವಾಗಿಯೇ ಉತ್ತರಿಸಿದ್ದಾರೆ.

ನಟಿ ಶ್ರುತಿ ಹಾಸನ್, ತಮ್ಮ ದೀರ್ಘಕಾಲದ ಗೆಳೆಯ ಶಂತನು ಹಜಾರಿಕಾ ಅವರೊಂದಿಗೆ ಬ್ರೇಕಪ್‌ ಮಾಡಿಕೊಂಡು ಕೆಲವು ತಿಂಗಳುಗಳಾಗಿವೆ. ಇದರ ಹೊರತಾಗಿಯೂ, ಅವರು ತಮ್ಮ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ಇನ್‌ಸ್ಟಾದಲ್ಲಿ ಅಭಿಮಾನಿಗಳ ಜತೆ ಮಾತುಕತೆ ನಡೆಸಿದ್ದಾರೆ ನಟಿ. ಈ ವೇಳೆ ಹಲವರು ನಟಿಗೆ ಮಾದುವೆ ಯಾವಾಗ? ಎಬ ಪ್ರಶ್ನೆ ಇಟ್ಟಿದ್ದಾರೆ. ಅದಕ್ಕೆ ನಟಿ, ಇದು 2024 ಹುಡುಗಿಯರಿಗೆ ಇಂತಹ ಸಿಲ್ಲಿ ಪ್ರಶ್ನೆಗಳನ್ನು ಕೇಳಬೇಡಿ ಎಂದು ಖಾರವಾಗಿಯೇ ಉತ್ತರಿಸಿದ್ದಾರೆ. ಮತ್ತೊಬ್ಬ ಅಭಿಮಾನಿ, ನೀವು ಮದುವೆ ಯಾವಾಗ ಆಗ್ತೀರಾ ಎಂದು ಕೇಳಿದ್ದಾರೆ. ʻನಾನು ಮದುವೆ ಆಗುವುದಿಲ್ಲ ಎಂದು ಖಡಕ್ ಆಗಿ ಕಮಲ್ ಹಾಸನ್ (Kamal Haasan) ಪುತ್ರಿ ಉತ್ತರಿಸಿದ್ದಾರೆ. ಈ ಮೂಲಕ ನಾನು ಸಿಂಗಲ್ ಆಗಿಯೇ ಇರುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ: Shruti Haasan: ಎರಡನೇ ಬಾಯ್‌ಫ್ರೆಂಡ್‌ ನಿಂದಲೂ ಕಮಲ್‌ ಹಾಸನ್‌ ಪುತ್ರಿ ಬ್ರೇಕಪ್?

ಮೈಕಲ್ ಕೋರ್ಸೆಲ್ ಅವರಿಂದ ದೂರವಾದ ನಂತರ, ಶ್ರುತಿ ಹಾಸನ್ ಬದುಕಿನಲ್ಲಿ ಬಂದ ವ್ಯಕ್ತಿ ಶಂತನು ಹಜಾರಿಕಾ. ಶಂತನು ಹಜಾರಿಕಾ ಜತೆ ಎರಡು ವರ್ಷಗಳ ಪ್ರೀತಿಯಲ್ಲಿ ಇದ್ದಿದ್ದರು ಶ್ರುತಿ ಹಾಸನ್. ಅನೇಕ ಸಲ ತಮ್ಮ ಈ ಪ್ರೇಮ ಕಥೆಯನ್ನ ಹೆಮ್ಮೆಯಿಂದ ಹೇಳಿಕೊಂಡಿದ್ದರು.ಶ್ರುತಿ ಹಾಸನ್‌ ಮತ್ತು ಶಂತನು ಹಜಾರಿಕಾ ಸುಮಾರು 5 ವರ್ಷಗಳಿಂದ ಡೇಟಿಂಗ್‌ ನಡೆಸುತ್ತಿದ್ದಾರೆ. ಇವರು 2018ರಲ್ಲಿ ಮೊದಲ ಬಾರಿ ಭೇಟಿಯಾಗಿದ್ದರು. ಆಗಾಗ ಶ್ರುತಿ ಹಾಸನ್‌ ಶಂತನು ಹಜಾರಿಕಾ ಜತೆ ಇರುವ ಫೋಟೊಗಳನ್ನು ಶೇರ್‌ ಮಾಡಿಕೊಳ್ಳುತ್ತಲೇ ಇರುತ್ತಿದ್ದರು. ಮೊದಲು ಪ್ರಪೋಸ್ ಮಾಡಿದ್ದು ಕೂಡ ಶ್ರುತಿ ಹಾಸನ್‌ ಅಂತೆ. ಸಲಾರ್ (Salaar) ಬಳಿಕ ಸಲಾರ್ 2, ಡಕಾಯಿತ್, ಚೆನ್ನೈ ಸ್ಟೋರಿ ಸಿನಿಮಾಗಳಲ್ಲಿ ಶ್ರುತಿ ಹಾಸನ್ ಬ್ಯುಸಿಯಾಗಿದ್ದಾರೆ.

Continue Reading

ಟಾಲಿವುಡ್

Samantha Ruth Prabhu: ಸಮಂತಾಗೆ ಜೈಲಿಗೆ ಕಳಿಸಿ ಎಂದ ವೈದ್ಯ ; ನಟಿ ಹೇಳಿದ್ದೇನು?

Samantha Ruth Prabhu: ಆರೋಗ್ಯದ ಬಗ್ಗೆ ಬೇಕಾ ಬಿಟ್ಟಿ ಸಲಹೆಯನ್ನು ನೀಡುತ್ತಿರುವ ಸಮಂತಾ ಅವರ ವಿರುದ್ಧ ಸಾರ್ವಜನಿಕ ಆರೋಗ್ಯಕ್ಕೆ ಅಪಾಯವನ್ನುಂಟು ಮಾಡುವ ಆರೋಪದಡಿ ಜೈಲಿಗೆ ಹಾಕಬೇಕು ಎಂದು ಕೂಡ ಆಗ್ರಹಿಸಿದ್ದಾರೆ ವೈದ್ಯರು. ಕಳೆದೆರಡು ವರ್ಷಗಳಲ್ಲಿ ನಾನು ಎದುರಿಸಿದ ಮತ್ತು ಕಲಿತ ಎಲ್ಲದರಿಂದ ನಾನು ಕೇವಲ ಒಳ್ಳೆಯ ಉದ್ದೇಶದಿಂದ ಸಲಹೆ ನೀಡಿದ್ದೇನೆ ಎಂದು ಕೂಡ ಸಮಂತಾ ಹೇಳಿದ್ದಾರೆ.

VISTARANEWS.COM


on

Samantha Ruth Prabhu Doctor Calls Health Illiterate
Koo

ಬೆಂಗಳೂರು: ಸಮಂತಾ ರುತ್ ಪ್ರಭು (Samantha Ruth Prabhu) ಇತ್ತೀಚೆಗೆ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಸಾಮಾನ್ಯ ವೈರಲ್ ಸೋಂಕುಗಳಿಗೆ ಚಿಕಿತ್ಸೆ ನೀಡಲು ಪರ್ಯಾಯ ಮಾರ್ಗದ ಬಗ್ಗೆ ಸಲಹೆ ನೀಡಿರುವ ಕುರಿತು ವಿವಾದಕ್ಕೆ ಒಳಗಾಗಿದ್ದಾರೆ. ವೈರಲ್ ಇನ್​ಫೆಕ್ಷನ್ ​ತಡೆಯಲು, ಹೈಡ್ರೋಜ್ ಪೆರಾಕ್ಸೈಡ್ ಹಾಗೂ ಭಟ್ಟಿ ಇಳಿಸಿದ ನೀರನ್ನು ಮಿಕ್ಸ್ ಮಾಡಿ ನೆಬ್ಯುಲೈಸರ್ ಮೂಲಕ ಅದನ್ನು ತೆಗೆದುಕೊಳ್ಳುವಂತೆ ಸಮಂತಾ ಹೇಳಿದ್ದಾರೆ. ಈ ಹೇಳಿಕೆಯ ಬಗ್ಗೆ ವೈದ್ಯರು ತಕರಾರು ತೆಗೆದಿದ್ದಾರೆ. ವಿಜ್ಞಾನ ಹಾಗೂ ವೈದ್ಯ ಲೋಕದಲ್ಲಿ ಸ್ವಲ್ಪವೂ ಜ್ಞಾನವಿಲ್ಲದ ವ್ಯಕ್ತಿ ಎಂದು ಹೇಳಿದ್ದಾರೆ. ಡಾ ಸಿರಿಯಾಕ್ ಅಬ್ಬಿ ಫಿಲಿಪ್ಸ್ ಅವರು ಸಮಂತಾಗೆ “ಆರೋಗ್ಯ ಮತ್ತು ವಿಜ್ಞಾನ ಅನಕ್ಷರಸ್ಥರು” ಎಂದು ಕರೆದಿದ್ದಾರೆ. ಇಂತಹ ಚಿಕಿತ್ಸೆಯನ್ನು ಉತ್ತೇಜಿಸುವ ವ್ಯಕ್ತಿಗಳಿಗೆ ದಂಡ ವಿಧಿಸಬೇಕು ಮತ್ತು ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ. ಈ ಬಗ್ಗೆ ನಟಿ ಪೋಸ್ಟ್‌ ಕೂಡ ಮಾಡಿದ್ದಾರೆ.

ಸಮಂತಾ ಸಲಹೆಗೆ ಪ್ರತಿಕ್ರಿಯಿಸಿದ ವೈದ್ಯರು, “ದುರದೃಷ್ಟವಶಾತ್ ಆರೋಗ್ಯ ಮತ್ತು ವಿಜ್ಞಾನ ಅನಕ್ಷರಸ್ಥರಾಗಿರುವ ಭಾರತೀಯ ನಟಿ ಸಮಂತಾ ರುತ್ ಅವರು ತಮ್ಮ ಲಕ್ಷಾಂತರ ಫಾಲೋವರ್ಸ್‌ಗಳಿಗೆ ವೈರಲ್ ಇನ್​ಫೆಕ್ಷನ್​ತಡೆಯಲು, ಹೈಡ್ರೋಜ್ ಪೆರಾಕ್ಸೈಡ್ ಹಾಗೂ ಭಟ್ಟಿ ಇಳಿಸಿದ ನೀರನ್ನು ಮಿಕ್ಸ್ ಮಾಡಿ ನೆಬ್ಯುಲೈಸರ್ ಮೂಲಕ ಅದನ್ನು ತೆಗೆದುಕೊಳ್ಳುವಂತೆ ಹೇಳಿದ್ದಾರೆ. ಹೈಡ್ರೋಜನ್ ಪೆರಾಕ್ಸೈಡ್ ಅನ್ನು ನೆಬ್ಯುಲೈಸ್ ಮಾಡಬೇಡಿ. ಮತ್ತು ಉಸಿರಾಡಬೇಡಿ. ಏಕೆಂದರೆ ಇದು ಆರೋಗ್ಯಕ್ಕೆ ಅಪಾಯಕಾರಿ. ಅಮೇರಿಕದ ಸೈಂಟಿಫಿಕ್ ಸೊಸೈಟಿ ಅಸ್ತಮಾ ಮತ್ತು ಅಲರ್ಜಿ ಫೌಂಡೇಶನ್ ನವರೇ ಈ ಮಾತನ್ನು ಹೇಳಿದ್ದಾರೆ ಎಂದು ಕೂಡ ಹೇಳಿದ್ದಾರೆ ಡಾಕ್ಟರ್ ಸೈರಿಕ್ ಅಬ್ಬಿ ಫಿಲಿಪ್ಸ್ .

ಆರೋಗ್ಯದ ಬಗ್ಗೆ ಬೇಕಾ ಬಿಟ್ಟಿ ಸಲಹೆಯನ್ನು ನೀಡುತ್ತಿರುವ ಸಮಂತಾ ಅವರ ವಿರುದ್ಧ ಸಾರ್ವಜನಿಕ ಆರೋಗ್ಯಕ್ಕೆ ಅಪಾಯವನ್ನುಂಟು ಮಾಡುವ ಆರೋಪದಡಿ ಜೈಲಿಗೆ ಹಾಕಬೇಕು ಎಂದು ಕೂಡ ಆಗ್ರಹಿಸಿರುವ ವೈದ್ಯರು, ಭಾರತದ ಆರೋಗ್ಯ ಸಚಿವಾಲಯ ಅಥವಾ ಯಾವುದೇ ಆರೋಗ್ಯ ಸಂಸ್ಥೆ ಇವರ ಮೇಲೆ ಕ್ರಮ ಕೈಗೊಳ್ಳುತ್ತದೆಯೇ ಅಥವಾ ಸುಮ್ಮನೆ ಇದ್ದು ಜನರನ್ನು ಸಾಯಲು ಬಿಡುತ್ತಾರಾ ಎಂದು ಪ್ರಶ್ನೆಯನ್ನೂ ಕೂಡ ಮಾಡಿದ್ದಾರೆ.

ಇದಾದ ಬಳಿಕ ಸಮಂತಾ ಈ ಬಗ್ಗೆ ಪೋಸ್ಟ್‌ ಮಾಡಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ವಿವಿಧ ರೀತಿಯ ಔಷಧಿಗಳನ್ನು ತೆಗೆದುಕೊಳ್ಳಬೇಕಾಗಿತ್ತು ಎಂದಿರುವ ಸಮಂತಾ, ಹಲವು ಚಿಕಿತ್ಸೆಗಳು ತುಂಬಾ ದುಬಾರಿಯಾಗಿದ್ದವು. ನಾನು ನಿಭಾಯಿಸಬಲ್ಲೆ. ಆದರೆ ಕೆಲವರಿಗೆ ಅಸಾಧ್ಯ. ಕಳೆದೆರಡು ವರ್ಷಗಳಲ್ಲಿ ನಾನು ಎದುರಿಸಿದ ಮತ್ತು ಕಲಿತ ಎಲ್ಲದರಿಂದ ನಾನು ಕೇವಲ ಒಳ್ಳೆಯ ಉದ್ದೇಶದಿಂದ ಸಲಹೆ ನೀಡಿದ್ದೇನೆ ಎಂದು ಕೂಡ ಸಮಂತಾ ಹೇಳಿದ್ದಾರೆ.

ಇದನ್ನೂ ಓದಿ: Samantha Ruth Prabhu: ಬೆತ್ತಲೆ ಫೋಟೊ ಅಪ್​ಲೋಡ್ ಮಾಡಿದ್ರಾ ಸಮಂತಾ?

ಮಾತ್ರವಲ್ಲ ಜೈಲಿಗೆ ಕಳುಹಿಸಿ ಎಂದು ನನಗೆ ಹೇಳುವ ಬದಲು, ನನ್ನ ಪೋಸ್ಟ್‌ನಲ್ಲಿ ಟ್ಯಾಗ್ ಮಾಡಿರುವ ನನ್ನ ಡಾಕ್ಟರನ್ನು ಅವರು ಕೇಳಬೇಕಿತ್ತು ಎಂದಿದ್ದಾರೆ. ಆಗ ಇಬ್ಬರು ವೃತ್ತಿಪರ ವೈದ್ಯರ ನಡುವೆ ಚರ್ಚೆಯಾಗುತ್ತಿತ್ತು. ಆ ಚರ್ಚೆಯಿಂದ ನಾನು ಇನ್ನೂ ಹೆಚ್ಚು ಕಲಿಯಬಹುದಿತ್ತು ಎಂದು ಕೂಡ ಸಮಂತಾ ಹೇಳಿದ್ದಾರೆ. . ಇನ್ನು ಮುಂದೆ ತಾನು ಹಂಚಿಕೊಳ್ಳುವ ವೈದ್ಯಕೀಯ ಸಲಹೆಯ ಬಗ್ಗೆ ‘ಹೆಚ್ಚು ಜಾಗರೂಕರಾಗಿರುತ್ತೇನೆ’ ಎಂದು ಹೇಳಿದ್ದಾರೆ ಸಮಂತಾ.

ಈ ಮುಂಚೆಯೂ ನಟಿ ಲಿವರ್‌ ಡೆಟಾಕ್ಸಿಫಿಕೇಶನ್‌ (liver detoxification) ಬಗ್ಗೆ ತಪ್ಪು ಮಾಹಿತಿ ನೀಡಿದ್ದರು ಎಂದು ಹಲವರು ಆರೋಪಿಸಿದ್ದರು. ಅಲ್ಲಿ ಸಮಂತಾ ಅವರು ಲಿವರ್‌ ಆರೋಗ್ಯಕ್ಕಾಗಿ ʻದಂಡೇಲಿಯನ್‌ʼನಂತಹ ಗಿಡಮೂಲಿಕೆಗಳ ಬಳಕೆ ಬಗ್ಗೆ ಚರ್ಚಿಸಿದ್ದರು. ಈ ಬಗ್ಗೆ ಸುಳ್ಳು ಮಾಹಿತಿಯನ್ನು ಪ್ರಚಾರ ಮಾಡಿದ್ದಕ್ಕಾಗಿ ವೈದ್ಯರೊಬ್ಬರು ಸಮಂತಾ ಅವರನ್ನು ಟೀಕಿಸಿದ್ದರು.

Continue Reading
Advertisement
Karnataka weather Forecast
ಮಳೆ9 mins ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜುಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

Deepika Padukone
Latest12 mins ago

Deepika Padukone: 1.92 ಲಕ್ಷ ರೂ. ಬೆಲೆಯ ʼಹುಕುಮ್‌ ಕಿ ರಾಣಿʼ ಸೀರೆಯಲ್ಲಿ ಮಿಂಚಿದ ದೀಪಿಕಾ ಪಡುಕೋಣೆ!

CM Siddaramaiah
ಕರ್ನಾಟಕ13 mins ago

CM Siddaramaiah: ಡಿಸಿಗಳು ಮಹಾರಾಜರಲ್ಲ; ಬೀದಿಗಿಳಿದು ಡೆಂಗ್ಯು ನಿಯಂತ್ರಿಸದಿದ್ದರೆ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

Sourav Ganguly
ಪ್ರಮುಖ ಸುದ್ದಿ32 mins ago

Sourav Ganguly : ಸೌರವ್​ ಗಂಗೂಲಿಗೆ 52ನೇ ಜನ್ಮದಿನ; ದಾದಾನ ಅಭೂತಪೂರ್ವ ವೃತ್ತಿ ಜೀವನದ ಬಗ್ಗೆ ಇಲ್ಲಿದೆ ಸಂಕ್ಷಿಪ್ತ ವಿವರ

Riteish Deshmukh Genelia Deshmukh Pledge To Donate Their Organ
ಬಾಲಿವುಡ್34 mins ago

Riteish Deshmukh: ಅಂಗಾಗ ದಾನ ಮಾಡುವ ಘೋಷಣೆ ಮಾಡಿದ  ರಿತೇಶ್- ಜೆನಿಲಿಯಾ ದಂಪತಿ!

Mumbai hit and run
ದೇಶ1 hour ago

Mumbai Hit And Run: ಮುಂಬೈ ಹಿಟ್‌ ಆ್ಯಂಡ್‌ ರನ್‌ ಕೇಸ್‌; ಘಟನೆಗೂ ಮುನ್ನ ಬಾರ್‌ಗೆ ಹೋಗಿದ್ದ ಆರೋಪಿ, 18 ಸಾವಿರ ಬಿಲ್‌!

Actor Darshan Will Attend The Court Hearing From Online
ಕ್ರೈಂ1 hour ago

Actor Darshan: ಆರೋಪಿಗಳಿಗೆ ಗಂಟಲು ಮುಳ್ಳಾದ ಗುರುತು ಪತ್ತೆ ಪರೇಡ್‌, ಬೆಟ್ಟು ಮಾಡಿ ತೋರಿಸಿದ ಸಾಕ್ಷಿಗಳು

Vicky Pedia I love you sanjana song trend
ವೈರಲ್ ನ್ಯೂಸ್1 hour ago

Vicky Pedia: ಸಂಜನಾ..ಸಂಜನಾ …`I Love You’ ಸಂಜನಾ; ಬಾಲಕನ ಹಾಡಿಗೆ ಹೊಸ ಟಚ್ ಕೊಟ್ಟ ವಿಕಾಸ್ ವಿಕ್ಕಿಪಿಡಿಯ! 

Murder case
ಬೆಂಗಳೂರು1 hour ago

Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

Poonam Pandey bold photo with shadow and light
ಬಾಲಿವುಡ್2 hours ago

Poonam Pandey: ಕತ್ತಲೆಯಲ್ಲಿ ಬೆತ್ತಲೆಯಾಗಿ ಮೈಮಾಟ ಪ್ರದರ್ಶಿಸಿ, ಫ್ಯಾನ್ಸ್‌ಗೆ ಕಚಗುಳಿ ಇಟ್ಟ ಪೂನಂ ಪಾಂಡೆ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ9 mins ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜುಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

karnataka weather Forecast
ಮಳೆ17 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ19 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ20 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ1 day ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ2 days ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ2 days ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು2 days ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ2 days ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

ಟ್ರೆಂಡಿಂಗ್‌