Ram Gopal Varma: ʻದಿ ಕೇರಳ ಸ್ಟೋರಿʼ ನಾನು ನೋಡಿದ ಅತ್ಯುತ್ತಮ ಚಲನಚಿತ್ರಗಳಲ್ಲಿ ಒಂದು ಎಂದ ರಾಮ್ ಗೋಪಾಲ್ ವರ್ಮಾ! - Vistara News

ಟಾಲಿವುಡ್

Ram Gopal Varma: ʻದಿ ಕೇರಳ ಸ್ಟೋರಿʼ ನಾನು ನೋಡಿದ ಅತ್ಯುತ್ತಮ ಚಲನಚಿತ್ರಗಳಲ್ಲಿ ಒಂದು ಎಂದ ರಾಮ್ ಗೋಪಾಲ್ ವರ್ಮಾ!

Ram Gopal Varma: ಕೇರಳದಿಂದ ಕಾಣೆಯಾದ ಹುಡುಗಿಯರ ನಿಜ ಜೀವನದ ಅನುಭವವನ್ನು ಆಧರಿಸಿದೆ ಈ ಸಿನಿಮಾ. ನರ್ಸ್ ಆಗುವ ಕನಸು ಹೊತ್ತ ಶಾಲಿನಿ ಉನ್ನಿಕೃಷ್ಣನ್ ಎಂಬ ಗ್ರಾಮೀಣ ಹುಡುಗಿ, ವಿದೇಶದಲ್ಲಿರುವ ಐಸಿಸ್ ಭಯೋತ್ಪಾದಕ ಶಿಬಿರಕ್ಕೆ ಸೇರಿಹೋದ, ಅಲ್ಲಿಂದ ಹೊರಬರಲಾಗದೆ ಪರಿತಪಿಸುವ ಕತೆಯನ್ನು ಕೇರಳ ಸ್ಟೋರಿ ಹೊಂದಿದೆ. ಕೇರಳದ ಹಿಂದು ಯುವತಿಯರನ್ನು ಕಳ್ಳಸಾಗಣೆ ಮಾಡಿ, ಮತಾಂತರಿಸಿ, ಭಯೋತ್ಪಾದಕ ಶಿಬಿರಗಳಿಗೆ ಕಳುಹಿಸಲಾಗುತ್ತಿದೆ ಎಂಬ ಸುದ್ದಿಗಳು ಸಾಕಷ್ಟಿವೆ. ಅಂಥ ನೈಜ ಪ್ರಕರಣಗಳೂ ವರದಿಯಾಗಿವೆ. ಅದೇ ಹಿನ್ನೆಲೆಯಲ್ಲಿ ಈ ಚಿತ್ರ ಹುಟ್ಟಿಕೊಂಡಿದೆ ಎನ್ನಲಾಗಿದೆ.

VISTARANEWS.COM


on

Ram Gopal Varma calls The Kerala Story one of the best films
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಳೆದ ವರ್ಷ ಥಿಯೇಟರ್‌ಗಳಲ್ಲಿ ಬಂದ ಅದಾ ಶರ್ಮಾ ಅಭಿನಯದ `ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ (The Kerala Story) ಹಲವಾರು ವಿವಾದಗಳ ನಡುವೆ ಚಿತ್ರಮಂದಿರಗಳಿಗೆ ಅಪ್ಪಳಿಸಿತು. ಕೇರಳದಿಂದ ಕಾಣೆಯಾದ ಹುಡುಗಿಯರ ನಿಜ ಜೀವನದ ಅನುಭವವನ್ನು ಆಧರಿಸಿದೆ ಈ ಸಿನಿಮಾ (Ram Gopal Varma). ಇದೀಗ ಸಂದರ್ಶನದಲ್ಲಿ, ರಾಮ್ ಗೋಪಾಲ್ ವರ್ಮಾ ಅವರು ಈ ಸಿನಿಮಾವನ್ನು ಶ್ಲಾಘಿಸಿದರು. ಬಾಕ್ಸ್‌ ಆಫೀಸ್‌ನಲ್ಲಿ ‘ದಿ ಕೇರಳ ಸ್ಟೋರಿ ₹ 300 ಕೋಟಿ ಗಳಿಸಿದೆ’ ಎಂದು ಅವರು ಹೇಳಿದರು.

ರಾಮ್ ಗೋಪಾಲ್ ವರ್ಮಾ ಮಾತನಾಡಿ ʻʻ ಬಹಳ ಹಿಂದೆ, (ಸಂಗೀತ ಸಂಯೋಜಕ) ಎಆರ್ ರೆಹಮಾನ್ ಅವರು ಟ್ಯೂನ್ ಮಾಡುವಾಗ, ಅದು ವರ್ಷದ ಬ್ಲಾಕ್ಬಸ್ಟರ್ ಆಗಲಿದೆ ಎಂದು ಜನ ಭಾವಿಸುತ್ತಾರೆ. ಆದರೆ ಹಾಡು ಬಂದಾಗ ಜನ ನಿರ್ಲಕ್ಷಿಸುತ್ತಾರೆ. ಆದರೆ ಆಹಾಡನ್ನು ಕೆಟ್ಟದ್ದಾಗಿದೆ ಎಂದು ಕರೆಯುವುದಿಲ್ಲ. ಇದನ್ನು ಸಾಬೀತುಪಡಿಸಲು ಹಲವಾರು ಉದಾಹರಣೆಗಳಿವೆ. ನನ್ನ ಎಲ್ಲಾ ಹಿಟ್ ಚಿತ್ರಗಳು , ನನ್ನ ಫ್ಲಾಪ್‌ಗಳು ಉದ್ದೇಶಪೂರ್ವಕವಾಗಿವೆʼʼಎಂದರು.

ಇದನ್ನು ಉದಾಹರಣೆಯೊಂದಿಗೆ ವಿವರಿಸಿದ ರಾಮ್ ಗೋಪಾಲ್ ವರ್ಮಾ ʻʻಕೇರಳ ಸ್ಟೋರಿ ವರ್ಷಗಳಲ್ಲಿ ನೋಡಿದ ಅತ್ಯುತ್ತಮ ಚಲನಚಿತ್ರಗಳಲ್ಲಿ ಒಂದಾಗಿದೆ. ಆದರೆ ಅದೇ ತಂಡ ಮತ್ತೊಂದು ಸಿನಿಮಾ ಮಾಡಿ ಪ್ಲಾಪ್‌ ಆಯ್ತು ಎಂದು ತಿಳಿದು ಆಘಾತವಾಯಿತುʼʼಎಂದರು.

“ಈ ಚಿತ್ರವು ಕೇರಳದ ಕಥೆ ಎಂದು ನನಗೆ ತುಂಬಾ ಸಂತೋಷವಾಯಿತು. ಹಲವು ವರ್ಷಗಳಿಂದ ನಾನು ನೋಡಿದ ಅತ್ಯುತ್ತಮ ಚಿತ್ರಗಳಲ್ಲಿ ಇದೂ ಒಂದು. ನಾನು ನಿರ್ದೇಶಕ (ಸುದೀಪ್ತೋ ಸೇನ್) ಜೊತೆ ಮಾತನಾಡಿದೆ, ನಾನು ನಿರ್ಮಾಪಕ (ವಿಪುಲ್ ಶಾ), ನಟಿ (ಆದಾ ಶರ್ಮಾ) ಜೊತೆ ಮಾತನಾಡಿದೆ. ನಂತರ, ಮುಂದಿನ ಚಿತ್ರ (ಬಸ್ತರ್: ದಿ ನಕ್ಸಲ್ ಸ್ಟೋರಿ) ಬಂದಿತು. ಬಿಡುಗಡೆಯಾಯಿತು ಮತ್ತು ಹೋಯಿತು. ಅದರ ಬಗ್ಗೆ ನನಗೆ ತಿಳಿದಿರಲಿಲ್ಲʼʼಎಂದರು.

ಇದನ್ನೂ ಓದಿ: Wayanad Tragedy: ವಯನಾಡ್ ಭೂಕುಸಿತ; ದಕ್ಷಿಣ ಭಾರತದ ಸಿನಿಮಾ ನಟರಿಂದ ಸಂತ್ರಸ್ತರಿಗೆ ನೆರವಿನ‌ ಮಹಾಪೂರ

ಕೇರಳದಿಂದ ಕಾಣೆಯಾದ ಹುಡುಗಿಯರ ನಿಜ ಜೀವನದ ಅನುಭವವನ್ನು ಆಧರಿಸಿದೆ ಈ ಸಿನಿಮಾ. ನರ್ಸ್ ಆಗುವ ಕನಸು ಹೊತ್ತ ಶಾಲಿನಿ ಉನ್ನಿಕೃಷ್ಣನ್ ಎಂಬ ಗ್ರಾಮೀಣ ಹುಡುಗಿ, ವಿದೇಶದಲ್ಲಿರುವ ಐಸಿಸ್ ಭಯೋತ್ಪಾದಕ ಶಿಬಿರಕ್ಕೆ ಸೇರಿಹೋದ, ಅಲ್ಲಿಂದ ಹೊರಬರಲಾಗದೆ ಪರಿತಪಿಸುವ ಕತೆಯನ್ನು ಕೇರಳ ಸ್ಟೋರಿ ಹೊಂದಿದೆ. ಕೇರಳದ ಹಿಂದು ಯುವತಿಯರನ್ನು ಕಳ್ಳಸಾಗಣೆ ಮಾಡಿ, ಮತಾಂತರಿಸಿ, ಭಯೋತ್ಪಾದಕ ಶಿಬಿರಗಳಿಗೆ ಕಳುಹಿಸಲಾಗುತ್ತಿದೆ ಎಂಬ ಸುದ್ದಿಗಳು ಸಾಕಷ್ಟಿವೆ. ಅಂಥ ನೈಜ ಪ್ರಕರಣಗಳೂ ವರದಿಯಾಗಿವೆ. ಅದೇ ಹಿನ್ನೆಲೆಯಲ್ಲಿ ಈ ಚಿತ್ರ ಹುಟ್ಟಿಕೊಂಡಿದೆ ಎನ್ನಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Adivi Sesh: ʻಗೂಢಚಾರಿʼಗೆ ಆರು ವರ್ಷದ ಸಂಭ್ರಮ; ನಟ ಅಡಿವಿ ಶೇಷ್ ಹೇಳಿದ್ದೇನು?

Adivi Sesh: ಸೂಪರ್ ಹಿಟ್ ಸಿನಿಮಾ ಗೂಢಚಾರಿ ಸೀಕ್ವೆಲ್‌ಗೆ ಸ್ವತಃ ಅಡಿವಿ ಶೇಷ್ ಕಥೆ ಬರೆದಿದ್ದು, ‘ಕಾರ್ತೀಕೇಯ- 2’, ‘ಮೇಜರ್’ ಹಾಗೂ ‘ಕಾಶ್ಮೀರಿ ಫೈಲ್ಸ್’ನಂತ ಸೂಪರ್ ಹಿಟ್ ಸಿನಿಮಾ ನಿರ್ಮಾಣ ಮಾಡಿರೋ ದೊಡ್ಡ ನಿರ್ಮಾಣ ಸಂಸ್ಥೆಗಳು ‘ಗೂಢಚಾರಿ- 2’ಗೆ ಬಂಡವಾಳ ಹೂಡುತ್ತಿವೆ. ಪೀಪಲ್ ಮೀಡಿಯಾ ಫ್ಯಾಕ್ಟರಿ, ಅಭಿಷೇಕ್ ಅಗರ್ವಾಲ್ ಆರ್ಟ್ಸ್ ಮತ್ತು AK ಎಂಟಟೈನ್ಮೆಂಟ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಬ್ಯಾನರ್ ನಡಿ ಟಿಜಿ. ವಿಶ್ವಪ್ರಸಾದ್ ಮತ್ತು ಅಭಿಷೇಕ್ ಅಗರ್ ವಾಲ್ ಜಂಟಿಯಾಗಿ ಈ ಚಿತ್ರವನ್ನು ತೆರೆಗೆ ತರುತ್ತಿದ್ದಾರೆ.

VISTARANEWS.COM


on

Adivi Sesh Goodachari Turns 6 unveils six stunning looks
Koo

ಬೆಂಗಳೂರು: ತೆಲುಗು ಚಿತ್ರರಂಗದಲ್ಲಿ ದಾಖಲೆ ಬರೆದ ಸೂಪರ್ ಹಿಟ್ ಸಿನಿಮಾ ‘ಗೂಢಚಾರಿ’ಗೆ ಆರು ವರ್ಷದ ಸಂಭ್ರಮ. ಶಶಿ ಕಿರಣ್ ಟಿಕ್ಕಾ ನಿರ್ದೇಶನದ ಈ ಸ್ಪೈ ಆಕ್ಷನ್ ಥ್ರಿಲ್ಲರ್ ಚಿತ್ರದಲ್ಲಿ ಅಡಿವಿ ಶೇಷ್ (Adivi Sesh) ಹೀರೊ ಆಗಿ ನಟಿಸಿದ್ದರು. ಯಾವುದೇ ನಿರೀಕ್ಷೆ ಇಲ್ಲದೇ ಬಂದ ಸಿನಿಮಾ ಬಾಕ್ಸಾಫೀಸ್ ಕೊಳ್ಳೆ ಹೊಡೆದಿತ್ತು. ಅಂದಾಜು 6 ಕೋಟಿ ರೂ. ಬಜೆಟ್ ಸಿನಿಮಾ 25-30 ಕೋಟಿ ರೂ. ದೋಚಿತ್ತು. ಈಗ ‘ಗೂಢಚಾರಿ’-2 ಸಿನಿಮಾ ನಿರ್ಮಾಣವಾಗುತ್ತಿದೆ. ಈ ಚಿತ್ರ 40ರಷ್ಟು ಮುಕ್ತಾಯಗೊಂಡಿದೆ. ಬಹಳ ಅದ್ಧೂರಿಯಾಗಿ ಗೂಢಚಾರಿ 2 ನಿರ್ಮಾಣ ಮಾಡಲಾಗುತ್ತಿದೆ. ಗೂಢಚಾರಿಗೆ ಆರು ವರ್ಷದ ಸಂಭ್ರಮದಲ್ಲಿ ಗೂಢಚಾರಿ 2 ಸಿನಿಮಾದ ಆರು ಸ್ಟನ್ನಿಂಗ್ ಲುಕ್ ಬಿಡುಗಡೆ ಮಾಡಲಾಗಿದೆ.

ಗೂಢಚಾರಿ 2 ಬಗ್ಗೆ ಮಾತಾನಾಡಿದ ನಾಯಕ ಅಡಿವಿ ಶೇಷ್, ʻʻಗೂಢಚಾರಿ ಹಲವು ಕಾರಣಗಳಿಂದ ವಿಶೇಷ ಚಿತ್ರವಾಗಿದೆ. ಕಳೆದ ಆರು ವರ್ಷಗಳಲ್ಲಿ ನಾನು ಮೆಚ್ಚುಗೆ ಕೇಳದ ಒಂದು ವಾರವೂ ಇರಲಿಲ್ಲ. ಸದ್ಯ ಗೂಢಚಾರಿ 2 ದೊಡ್ಡ ಮಟ್ಟದಲ್ಲಿ ಮೂಡಿ ಬರುತ್ತಿದೆ. G2 ಅಭಿಮಾನಿಗಳಿಗೆ ಸಖತ್ ಟ್ರೀಟ್ ನೀಡಲಿದೆʼʼ ಎಂದು ತಿಳಿಸಿದರು.

ಸೂಪರ್ ಹಿಟ್ ಸಿನಿಮಾ ಗೂಢಚಾರಿ ಸೀಕ್ವೆಲ್‌ಗೆ ಸ್ವತಃ ಅಡಿವಿ ಶೇಷ್ ಕಥೆ ಬರೆದಿದ್ದು, ‘ಕಾರ್ತೀಕೇಯ- 2’, ‘ಮೇಜರ್’ ಹಾಗೂ ‘ಕಾಶ್ಮೀರಿ ಫೈಲ್ಸ್’ನಂತ ಸೂಪರ್ ಹಿಟ್ ಸಿನಿಮಾ ನಿರ್ಮಾಣ ಮಾಡಿರೋ ದೊಡ್ಡ ನಿರ್ಮಾಣ ಸಂಸ್ಥೆಗಳು ‘ಗೂಢಚಾರಿ- 2’ಗೆ ಬಂಡವಾಳ ಹೂಡುತ್ತಿವೆ. ಪೀಪಲ್ ಮೀಡಿಯಾ ಫ್ಯಾಕ್ಟರಿ, ಅಭಿಷೇಕ್ ಅಗರ್ವಾಲ್ ಆರ್ಟ್ಸ್ ಮತ್ತು AK ಎಂಟಟೈನ್ಮೆಂಟ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಬ್ಯಾನರ್ ನಡಿ ಟಿಜಿ. ವಿಶ್ವಪ್ರಸಾದ್ ಮತ್ತು ಅಭಿಷೇಕ್ ಅಗರ್ ವಾಲ್ ಜಂಟಿಯಾಗಿ ಈ ಚಿತ್ರವನ್ನು ತೆರೆಗೆ ತರುತ್ತಿದ್ದಾರೆ.

ಇದನ್ನೂ ಓದಿ: Wayanad Tragedy: ವಯನಾಡ್ ಭೂಕುಸಿತ; ದಕ್ಷಿಣ ಭಾರತದ ಸಿನಿಮಾ ನಟರಿಂದ ಸಂತ್ರಸ್ತರಿಗೆ ನೆರವಿನ‌ ಮಹಾಪೂರ

‘ಗೂಢಚಾರಿ’ ಚಿತ್ರದಲ್ಲಿ ಅಡಿವಿ ಶೇಷ್ ಜೊತೆ ಶೋಬಿತಾ ಧೂಲಿಪಾಲ, ಜಗಪತಿ ಬಾಬು, ಪ್ರಕಾಶ್ ರಾಜ್ ಸೇರಿದಂತೆ ಸಾಕಷ್ಟು ಕಲಾವಿದರು ನಟಿಸಿದ್ದರು. ಸೂಪರ್ ಸಿನಿಮಾ ಸೀಕ್ವೆಲ್‌ನಲ್ಲೇ ನಟಿಸಿ ಮತ್ತೊಮ್ಮೆ ಗೆಲ್ಲುವ ಉತ್ಸಾಹದಲ್ಲಿ ಅಡಿವಿ ಶೇಷ್ ಇದ್ದಾರೆ. ಅಡಿವಿ ಶೇಷ್ ನಟನೆಯ ‘ಮೇಜರ್’ ಚಿತ್ರದ ಎಡಿಟರ್ ವಿನಯ್ ಕುಮಾರ್ ಸಿರಿಗಿನೀದಿ ಈ ಚಿತ್ರದ ಮೂಲಕ ನಿರ್ದೇಶಕನಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. 2025ರಲ್ಲಿ ಗೂಢಚಾರಿ 2 ಸಿನಿಮಾವನ್ನು ತೆರೆಗೆ ತರಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

Continue Reading

ಟಾಲಿವುಡ್

Jr NTR -Janhvi Kapoor: ರೊಮ್ಯಾಂಟಿಕ್​ ಆಗಿ ಕಾಣಿಸಿಕೊಂಡ ಜ್ಯೂನಿಯರ್‌ ಎನ್‌ಟಿಆರ್- ಜಾಹ್ನವಿ; ಆ.5ಕ್ಕೆ ಚಿತ್ರತಂಡದಿಂದ ಗಿಫ್ಟ್‌!​

Jr NTR -Janhvi Kapoor: ಜ್ಯೂನಿಯರ್‌ ಎನ್‌ಟಿಆರ್‌, ಸೈಫ್ ಅಲಿ ಖಾನ್ ಮತ್ತು ಜಾನ್ವಿ ಕಪೂರ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ದೇವರ’ ಚಿತ್ರವನ್ನು ಕೊರಟಾಲ ಶಿವ ನಿರ್ದೇಶಿಸಿದ್ದಾರೆ. 2016ರಲ್ಲಿ ಇವರು ಜನತಾ ಗ್ಯಾರೇಜ್ ಎಂಬ ಸಿನಿಮಾವನ್ನು ನಿರ್ದೇಶಿಸಿದ್ದರು.

VISTARANEWS.COM


on

Jr NTR -Janhvi Kapoor Devara Song take centre stage
Koo

ಬೆಂಗಳೂರು: ಟಾಲಿವುಡ್‌ ನಟ ಜ್ಯೂನಿಯರ್‌ ಎನ್‌ಟಿಆರ್ (Jr NTR -Janhvi Kapoor) ಜತೆ ದೇವರ ಸಿನಿಮಾಗಾಗಿ ಜಾಹ್ನವಿ ಕಪೂರ್‌ ತೆರೆ ಹಂಚಿಕೊಂಡಿರುವುದು ಗೊತ್ತೇ ಇದೆ. ಇದೀಗ ‘ದೇವರ: ಪಾರ್ಟ್​ 1’ ಸಿನಿಮಾ (Devara: Part 1) ʼಎರಡನೇ ಹಾಡಿನಲ್ಲಿ ಜೂನಿಯರ್ ಎನ್​ಟಿಆರ್​ ಮತ್ತು ಜಾಹ್ನವಿ ಕಪೂರ್‌ ಅವರು ರೊಮ್ಯಾಂಟಿಕ್​ ಆಗಿ ಕಾಣಿಸಿಕೊಳ್ಳಲಿದ್ದಾರೆ. ಇದರ ಝಲಕ್​ ತೋರಿಸಲು ಹೊಸ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ. 

ಹೊಸದಾಗಿ ಅನಾವರಣಗೊಂಡ ಪೋಸ್ಟರ್‌ನಲ್ಲಿ ಜೋಡಿ ರೊಮ್ಯಾಂಟಿಕ್‌ ಆಗಿ ಕಂಡಿದೆ. ಕಾಡಿನ ಹಿನ್ನೆಲೆ, ಬಿಳಿ ಧರಿಸಿನಲ್ಲಿ ಕ್ಯೂಟ್‌ ಆಗಿ ಕಂಡಿದೆ ಜೋಡಿ. ಜ್ಯೂನಿಯರ್‌ ಎನ್‌ಟಿಆರ್ ಅವರು ಜಾಹ್ನವಿಯನ್ನು ಹಿಡಿದುಕೊಂಡಿದ್ದಾರೆ. ಇದರಲ್ಲಿ ಅವರಿಬ್ಬರ ಜೋಡಿಯನ್ನು ನೋಡಿ ಅಭಿಮಾನಿಗಳ ನಿರೀಕ್ಷೆ ದುಪ್ಪಟ್ಟು ಆಗಿದೆ. ಇದು ಆ್ಯಕ್ಷನ್​ ಸಿನಿಮಾ ಆಗಿದ್ದರೂ ಕೂಡ ಜಾನ್ವಿ ಕಪೂರ್​ ಜೊತೆ ಜೂನಿಯರ್​ ಎನ್​ಟಿಆರ್​ ಅವರ ರೊಮ್ಯಾಂಟಿಕ್​ ಕೆಮಿಸ್ಟ್ರಿ ಹೇಗಿರಲಿದೆ ಎಂಬುದನ್ನು ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ.ಅನಿರುದ್ಧ್ ರವಿಚಂದರ್​ ಅವರು ‘ದೇವರ: ಪಾರ್ಟ್​ 1’ ಸಿನಿಮಾಗೆ ಸಂಗೀತ ನೀಡಿದ್ದಾರೆ. ಇದು ಪ್ಯಾನ್​ ಇಂಡಿಯಾ ಸಿನಿಮಾ. ತೆಲುಗಿನ ಜೊತೆ ಕನ್ನಡ, ಹಿಂದಿ, ತಮಿಳು ಮುಂತಾದ ಭಾಷೆಯಲ್ಲಿ ಈ ಚಿತ್ರ ರಿಲೀಸ್​ ಆಗಲಿದೆ. ಆಗಸ್ಟ್​ 5ರಂದು ಈ ಸಿನಿಮಾದಿಂದ ಎರಡನೇ ಹಾಡು ರಿಲೀಸ್​ ಆಗಲಿದೆ.

ಜ್ಯೂನಿಯರ್‌ ಎನ್‌ಟಿಆರ್‌, ಸೈಫ್ ಅಲಿ ಖಾನ್ ಮತ್ತು ಜಾನ್ವಿ ಕಪೂರ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ದೇವರ’ ಚಿತ್ರವನ್ನು ಕೊರಟಾಲ ಶಿವ ನಿರ್ದೇಶಿಸಿದ್ದಾರೆ. 2016ರಲ್ಲಿ ಇವರು ಜನತಾ ಗ್ಯಾರೇಜ್ ಎಂಬ ಸಿನಿಮಾವನ್ನು ನಿರ್ದೇಶಿಸಿದ್ದರು. ಅದರಲ್ಲಿ ಕೂಡ ಜ್ಯೂನಿಯರ್ ಎನ್​ಟಿಆರ್ ನಾಯಕನಾಗಿದ್ದರು. ಅದಾದ ಮೇಲೆ ಕೊರಟಾಲ ಶಿವ ಅವರೊಟ್ಟಿಗೆ ಜ್ಯೂ.ಎನ್​ಟಿಆರ್ ಯಾವುದೇ ಸಿನಿಮಾವನ್ನೂ ಮಾಡಿರಲಿಲ್ಲ.

ಇದನ್ನೂ ಓದಿ: Kannada New Movie: ʻಟೆನೆಂಟ್’ ಸಿನಿಮಾದ ಫಸ್ಟ್‌ ಲುಕ್‌ ಪೋಸ್ಟರ್‌ ಔಟ್‌; ಸೋನು ಗೌಡ ನಾಯಕಿ!

ವರ ಸಿನಿಮಾದಲ್ಲಿ ಜ್ಯೂನಿಯರ್ ಎನ್​ಟಿಆರ್​ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ವದಂತಿಯೂ ಇದೆ. ಅಪ್ಪ-ಮಗ ಎರಡೂ ಪಾತ್ರದಲ್ಲಿ ಇವರೇ ಅಭಿನಯ ಮಾಡಲಿದ್ದಾರಂತೆ. ಇದೊಂದು ಪಕ್ಕಾ ಆ್ಯಕ್ಷನ್​ ಚಿತ್ರದಂತೆ ಕಾಣಿಸುತ್ತಿದೆ. ಯುವಸುಧಾ ಆರ್ಟ್ಸ್ ಮತ್ತು ಜ್ಯೂನಿಯರ್‌ ಎನ್‌ಟಿಆರ್‌ ಆರ್ಟ್ಸ್ ಈ ಚಿತ್ರವನ್ನು ನಿರ್ಮಿಸಿದ್ದು, ನಂದಮೂರಿ ಕಲ್ಯಾಣ್ ರಾಮ್ ಅವರು ಪ್ರಸ್ತುತಪಡಿಸಿದ್ದಾರೆ.

ಈ ಚಿತ್ರದ OTT ಹಕ್ಕುಗಳನ್ನು ಸ್ಟ್ರೀಮಿಂಗ್ ಕಂಪನಿ ನೆಟ್ಫ್ಲಿಕ್ಸ್ ಭಾರಿ ಬೆಲೆಗೆ ಪಡೆದುಕೊಂಡಿದೆ. ಮಾಹಿತಿಯ ಪ್ರಕಾರ, ನೆಟ್ಫ್ಲಿಕ್ಸ್ 155 ಕೋಟಿ ರೂಪಾಯಿ ನೀಡಿ ಈ ಚಿತ್ರದ OTT ಹಕ್ಕುಗಳನ್ನು ಪಡೆದುಕೊಂಡಿದೆ ಎಂಬ ಚರ್ಚೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

Continue Reading

ಟಾಲಿವುಡ್

Vijay Deverakonda: ವಿಜಯ್ ದೇವರಕೊಂಡ ಲುಕ್‌ಗೆ ರಶ್ಮಿಕಾ ಮಂದಣ್ಣ ಫಿದಾ; ರಗಡ್‌ ಲುಕ್‌ಗೆ ಬೆರಗಾದ್ರು ಫ್ಯಾನ್ಸ್!

Vijay Deverakonda: ಜುಲೈ 12 ರಂದು, ಚಿತ್ರದ ಪ್ರೊಡಕ್ಷನ್ ಹೌಸ್, ಸಿತಾರಾ ಎಂಟರ್ಟೈನ್ಮೆಂಟ್ಸ್, ಚಿತ್ರದ ಬಗ್ಗೆ ಅಪ್ಡೇಟ್ ಅನ್ನು ಹಂಚಿಕೊಂಡಿದೆ. ವಿಜಯ್ ದೇವರಕೊಂಡ ಅವರ ಈ ಫೋಟೋಗೆ ರಶ್ಮಿಕಾ ಮಂದಣ್ಣ, ರಾಶಿ ಖಾನ್ ಸೇರಿ ಅನೇಕರು ಫೈಯರ್ ಎಮೋಜಿ ಪೋಸ್ಟ್ ಮಾಡಿದ್ದಾರೆ. ಈ ಮೂಲಕ ಅವರ ಸಿನಿಮಾಗೆ ಆಲ್​ ದಿ ಬೆಸ್ಟ್ ಹೇಳಿದ್ದಾರೆ.

VISTARANEWS.COM


on

Vijay Deverakonda VD 12 looks fierce in first poster
Koo

ಬೆಂಗಳೂರು: ವಿಜಯ್ ದೇವರಕೊಂಡ (Vijay Deverakonda) ಅವರ ಮುಂಬರುವ ಚಿತ್ರ ‘ವಿಡಿ 12’ ರ (VD 12) ಬಹುನಿರೀಕ್ಷಿತ ಫಸ್ಟ್‌ ಲುಕ್‌ ಪೋಸ್ಟರ್‌ ಔಟ್‌ ಆಗಿದೆ. ಆಗಸ್ಟ್ 2 ರಂದು ಬಿಡುಗಡೆಯಾದ ಪೋಸ್ಟರ್‌ನಲ್ಲಿ ನಟ ಸಖತ್‌ ರಗಡ್‌ ಆಗಿ ಕಾಣಿಸಿಕೊಂಡಿದ್ದಾರೆ. ಚಿತ್ರವು 2025ರ ಮಾರ್ಚ್ 28 ರಂದು ಬಿಡುಗಡೆಯಾಗಲಿದೆ.  ‘ವಿಡಿ 12’ ಚಿತ್ರದ ಮೂಲಕ ಮತ್ತೊಂದು ಬಿಗ್ ಬಜೆಟ್ ಸಿನಿಮಾ ಒಪ್ಪಿಕೊಂಡಿದ್ದಾರೆ. ಮೊದಲ ಲುಕ್​ನಲ್ಲಿ ಅವರ ಗೆಟಪ್ ಸಖತ್ ರಗಡ್ ಆಗಿದೆ.

ಕೂದಲನ್ನು ಕಟ್ ಮಾಡಿಸಿದ್ದಾರೆ. ‘ಅವನ ಡೆಸ್ಟಿನಿ ಅವನಿಗೆ ಕಾಯುತ್ತಿದೆ’ ಎಂದು ವಿಜಯ್ ದೇವರಕೊಂಡ ಬರೆದುಕೊಂಡಿದ್ದಾರೆ. ಇತ್ತೀಚೆಗಷ್ಟೇ ‘ವಿಡಿ 12’ ಚಿತ್ರದ ವಿಜಯ್ ಅವರ ಲುಕ್ ಸೋಷಿಯಲ್ ಮೀಡಿಯಾದಲ್ಲಿ ಲೀಕ್ ಆಗಿತ್ತು. ಕೆಲವು ದಿನಗಳ ಹಿಂದೆ, ವಿಜಯ್, ಗೌತಮ್ ಮತ್ತು ಚಿತ್ರದ ತಂಡವು ಚಿತ್ರೀಕರಣಕ್ಕಾಗಿ ಶ್ರೀಲಂಕಾಕ್ಕೆ ತೆರಳಿತ್ತು. ಶ್ರೀಲಂಕಾದ ಗಾಲೆ ಕೋಟೆಯಲ್ಲಿ ಕೆಲವು ದೃಶ್ಯಗಳನ್ನು ಚಿತ್ರೀಕರಿಸಲಾಗಿದೆ.

ಜುಲೈ 12 ರಂದು, ಚಿತ್ರದ ಪ್ರೊಡಕ್ಷನ್ ಹೌಸ್, ಸಿತಾರಾ ಎಂಟರ್ಟೈನ್ಮೆಂಟ್ಸ್, ಚಿತ್ರದ ಬಗ್ಗೆ ಅಪ್ಡೇಟ್ ಅನ್ನು ಹಂಚಿಕೊಂಡಿದೆ. ವಿಜಯ್ ದೇವರಕೊಂಡ ಅವರ ಈ ಫೋಟೋಗೆ ರಶ್ಮಿಕಾ ಮಂದಣ್ಣ, ರಾಶಿ ಖಾನ್ ಸೇರಿ ಅನೇಕರು ಫೈಯರ್ ಎಮೋಜಿ ಪೋಸ್ಟ್ ಮಾಡಿದ್ದಾರೆ. ಈ ಮೂಲಕ ಅವರ ಸಿನಿಮಾಗೆ ಆಲ್​ ದಿ ಬೆಸ್ಟ್ ಹೇಳಿದ್ದಾರೆ. ಇತ್ತೀಚೆಗೆ ಈ ಚಿತ್ರದ ಪೋಸ್ಟರ್ ಲೀಕ್ ಆಗಿತ್ತು.) ʻಜೆರ್ಸಿʼ ಸಿನಿಮಾ ಖ್ಯಾತಿಯ ನಿರ್ದೇಶಕ ಗೌತಮ್ ತಿನ್ನನೂರಿ ನಿರ್ದೇಶನ ಸಿನಿಮಾವಿದು.

ಇದನ್ನೂ ಓದಿ: Vijay Deverakonda: ಸಿನಿಮಾಗಳ ಸತತ ಸೋಲಿನ ಬೆನ್ನಲ್ಲೆ ಹೊಸ ಸಿನಿಮಾ ಅನೌನ್ಸ್‌ ಮಾಡಿದ ವಿಜಯ್‌ ದೇವರಕೊಂಡ!

‘ವಿಡಿ 12’ ಅನ್ನು ಸಿತಾರಾ ಎಂಟರ್‌ಟೈನ್‌ಮೆಂಟ್ಸ್ ಮತ್ತು ಫಾರ್ಚೂನ್ ಫೋರ್ ಸಿನಿಮಾಸ್ ಜಂಟಿಯಾಗಿ ನಿರ್ಮಿಸಿದ್ದು, ಶ್ರೀಕರ ಸ್ಟುಡಿಯೋಸ್ ಪ್ರಸ್ತುತಪಡಿಸುತ್ತಿದೆ. ಪಾತ್ರವರ್ಗವನ್ನು ಇನ್ನೂ ಘೋಷಿಸಬೇಕಾಗಿದೆ. ಈ ಚಿತ್ರದಲ್ಲಿ ವಿಜಯ್ ಗೆ ಜೋಡಿಯಾಗಿ ಭಾಗ್ಯಶ್ರೀ ಬೊರಸೆ ನಟಿಸಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಸಂಯೋಜಕ ಅನಿರುದ್ಧ ರವಿಚಂದರ್ ಚಿತ್ರಕ್ಕೆ ಸಂಗೀತ ನೀಡಲಿದ್ದಾರೆ.

ಟಾಲಿವುಡ್ ನಟ ವಿಜಯ್ ದೇವರಕೊಂಡ (Vijay Devarakonda-Mrunal Thakur) ಸಿನಿಕರಿಯರ್‌ಗೆ ಬ್ರೇಕ್ ಕೊಟ್ಟ ಸಿನಿಮಾ ಗೀತ ಗೋವಿಂದಂ. ಪರಶುರಾಮ್ ನಿರ್ದೇಶನದಲ್ಲಿ ಮೂಡಿಬಂದಿದ್ದ ಈ ಚಿತ್ರ ಬಾಕ್ಸ್‌ ಆಫೀಸ್‌ನಲ್ಲಿ ಭಾರಿ ಸದ್ದು ಮಾಡಿತ್ತು. 100 ಕೋಟಿ ರೂ. ಕ್ಲಬ್ ಬಾಚಿದ್ದ ಗೀತ ಗೋವಿಂದಂ ಸಿನಿಮಾಗೆ ಸೌತ್ ಸಿನಿಜಗತ್ತು ಜೈಕಾರ ಹಾಕಿತ್ತು. 

Continue Reading

ಟಾಲಿವುಡ್

Pushpa 2: ಪುಷ್ಪ 2 ಕ್ಲೈ ಮ್ಯಾಕ್ಸ್‌ ದೃಶ್ಯ ಲೀಕ್‌; ಕೋಪ ಹೊರ ಹಾಕಿದ ಅರ್ಜುನ್‌ ಫ್ಯಾನ್ಸ್‌!

Pushpa 2: ಸುಕುಮಾರ್ ಅವರು ‘ಪುಷ್ಪ 2’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಫಹಾದ್ ಫಾಸಿಲ್, ಡಾಲಿ ಧನಂಜಯ್ ಸೇರಿ ಅನೇಕರು ಸಿನಿಮಾದಲ್ಲಿ ಇದ್ದಾರೆ. ಈ ಚಿತ್ರದ ಶೂಟಿಂಗ್​ನಲ್ಲಿ ಫೋನ್ ಬಳಕೆ ನಿಷೇಧಿಸಲಾಗಿದೆ. ಆದಾಗ್ಯೂ ಕೆಲವರು ಮೊಬೈಲ್​ನ ಸೆಟ್​ ಒಳಗೆ ತೆಗೆದುಕೊಂಡು ಹೋಗಿದ್ದಾರೆ.

VISTARANEWS.COM


on

Pushpa 2 Allu Arjun climax leaked Fans urge producers to take action
Koo

ಬೆಂಗಳೂರು: ಸುಕುಮಾರ್ ಅವರ ಪುಷ್ಪ 2 ದಿ ರೂಲ್ (Pushpa 2 ) ಸಿನಿಮಾದಲ್ಲಿ , ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಮತ್ತು ಫಹದ್ ಫಾಸಿಲ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ , ಡಿಸೆಂಬರ್‌ನಲ್ಲಿ ಸಿನಿಮಾ ಬಿಡುಗಡೆಯಾಗಲಿದೆ. ಇದೀಗ ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣದ ವೇಳೆ ತೆಗೆದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದೀಗ ಸಿನಿಪ್ರಿಯರು ಲೀಕ್‌ ಆಗಿರುವ ವಿಡಿಯೊ ಕಂಡು ಈ ಬಗ್ಗೆ ಆಕ್ಷನ್‌ ತೆಗೆದುಕೊಳ್ಳಿ ಎಂದು ಕಮೆಂಟ್‌ ಮಾಡಿದ್ದಾರೆ.

ಸೆಟ್‌ಗಳಲ್ಲಿ ತೆಗೆದ ವಿಡಿಯೊವನ್ನು ಹಂಚಿಕೊಂಡಿರುವ ವ್ಯಕ್ತಿ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ, “ಅಲ್ಲು ಅರ್ಜುನ್ ಕ್ಲೈಮ್ಯಾಕ್ಸ್ ದೃಶ್ಯ.” ಎಂದು ಬರೆದುಕೊಂಡಿದ್ದಾರೆ, ಇದೀಗ ಈ ವಿಡಿಯೊ ಭಾರಿ ವೈರಲ್‌ ಆಗುತ್ತಿದೆ.
ಕೆಲವರು ಮೈತ್ರಿ ಮೂವಿ ಮೇಕರ್ಸ್‌ಗಳಿಗೆ ಕ್ರಮ ತೆಗೆದುಕೊಳ್ಳುವಂತೆ ಕೇಳಿದ್ದಾರೆ. ಒಬ್ಬರು ʻನೀವು ವೀಡಿಯೊವನ್ನು ಏಕೆ ಲೀಕ್ ಮಾಡುತ್ತಿದ್ದೀರಿʼಎಂದು ಕಮೆಂಟ್‌ ಮಾಡಿದ್ದಾರೆ. ಇನ್ನೊಬ್ಬರು ದಯವಿಟ್ಟು ವಿಡಿಯೊವನ್ನು ಡಿಲಿಟ್‌ ಮಅಡಿ ಎಂದು ಕಮೆಂಟ್‌ ಮಾಡಿದ್ದಾರೆ.

ಸುಕುಮಾರ್ ಅವರು ‘ಪುಷ್ಪ 2’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಫಹಾದ್ ಫಾಸಿಲ್, ಡಾಲಿ ಧನಂಜಯ್ ಸೇರಿ ಅನೇಕರು ಸಿನಿಮಾದಲ್ಲಿ ಇದ್ದಾರೆ. ಈ ಚಿತ್ರದ ಶೂಟಿಂಗ್​ನಲ್ಲಿ ಫೋನ್ ಬಳಕೆ ನಿಷೇಧಿಸಲಾಗಿದೆ. ಆದಾಗ್ಯೂ ಕೆಲವರು ಮೊಬೈಲ್​ನ ಸೆಟ್​ ಒಳಗೆ ತೆಗೆದುಕೊಂಡು ಹೋಗಿದ್ದಾರೆ. ಕ್ಲೈಮ್ಯಾಕ್ಸ್ ಹಂತದ ಶೂಟಿಂಗ್​ನ ಕದ್ದು ಚಿತ್ರೀಕರಿಸಿದ್ದಾರೆ. ಸದ್ಯ ವಿಡಿಯೋ ಲೀಕ್ ಆಗಿದೆ.

ಇದನ್ನೂ ಓದಿ: Kannada New Movie: `ನೈಸ್ ರೋಡ್’ ಸಿನಿಮಾಗೆ ನೋಟಿಸ್ ; ಅಷ್ಟಕ್ಕೂ ಆಗಿದ್ದೇನು?

2021ರಲ್ಲಿ ತೆರೆಕಂಡು ಬಾಕ್ಸ್‌ ಆಫೀಸ್‌ನಲ್ಲಿ ಮ್ಯಾಜಿಕ್‌ ಮಾಡುದ್ದ ಪ್ಯಾನ್‌ ಇಂಡಿಯಾ ಸಿನಿಮಾ ʼಪುಷ್ಪʼದ ಮುಂದುವರಿದ ಭಾಗ ಇದು. ಸುಕುಮಾರ್ ನಿರ್ದೇಶನದ ‘ಪುಷ್ಪ 2’ ಚಿತ್ರದ ಮೊದಲ ಹಾಡು ಈಗಾಗಲೇ ರಿಲೀಸ್‌ ಆಗಿ ಧೂಳೆಬ್ಬಿಸುತ್ತಿದೆ. ಅದರಲ್ಲಿಯೂ ಯೂಟ್ಯೂಬ್‌ನಲ್ಲಿ ದಾಖಲೆಯ ವೀಕ್ಷಣೆ ಕಂಡಿದೆ. ʻಪುಷ್ಪ ಪುಷ್ಪʼ ಎಂದು ಶುರುವಾಗುವ ಹಾಡಿಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ನೀಡಿದ್ದು, ಇದರಲ್ಲಿನ ಹುಕ್ ಸ್ಟೆಪ್ ವೈರಲ್‌ ಆಗಿದೆ. ಎರಡನೇ ಹಾಡು ಕೂಡ ಔಟ್‌ ಆಗಿದ್ದು, ಅಲ್ಲು ಅರ್ಜುನ್‌ ಜತೆ ರಶ್ಮಿಕಾ ಹೆಜ್ಜೆ ಹಾಕಿದ್ದಾರೆ. ಹಾಡು ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ವೀಕ್ಷಣೆ ಪಡೆದುಕೊಂಡಿದೆ.

Continue Reading
Advertisement
Kannada New Movie powder cinema trailer release date announce
ಸ್ಯಾಂಡಲ್ ವುಡ್2 mins ago

Kannada New Movie: ದಿಗಂತ್ ನಟನೆಯ `ಪೌಡರ್’ ಚಿತ್ರದ ಟ್ರೈಲರ್‌ ರಿಲೀಸ್‌ ಡೇಟ್‌ ಅನೌನ್ಸ್‌!

Ishan Kishan
ಕ್ರೀಡೆ10 mins ago

Ishan Kishan: ಮತ್ತೆ ದೇಶೀಯ ಕ್ರಿಕೆಟ್​ ಆಡಲು ಮುಂದಾದ ಇಶಾನ್​ ಕಿಶನ್​

Abu Salem
ವೈರಲ್ ನ್ಯೂಸ್10 mins ago

Abu Salem: ಮುಂಬೈ ಸ್ಫೋಟದ ಪ್ರಮುಖ ಆರೋಪಿ, ಭೂಗತ ಪಾತಕಿ ಅಬು ಸಲೇಂನನ್ನು ಮನ್ಮಾಡ್‌ಗೆ ರೈಲಿನಲ್ಲಿ ಕರೆತಂದ ಪೊಲೀಸರು

Leopard attack
ಚಾಮರಾಜನಗರ12 mins ago

Leopard Attack : ಮೈಸೂರಲ್ಲಿ ರೈತನ ಮೇಲೆ ಚಿರತೆ ದಾಳಿ; ಚಾಮರಾಜನಗರದಲ್ಲಿ ಬೋನಿಗೆ ಬಿದ್ದ ಚಿರತೆ

Actor Darshan Gang Use of new technology by the police
ಸ್ಯಾಂಡಲ್ ವುಡ್15 mins ago

Actor Darshan: ದರ್ಶನ್​ & ಗ್ಯಾಂಗ್​ಗೆ ಸಂಕಷ್ಟ; ಪೊಲೀಸರಿಂದ ಹೊಸ ತಂತ್ರಜ್ಞಾನ ಬಳಕೆ!

ದೇಶ24 mins ago

Wall collapsed: ದೇಗುಲದ ಗೋಡೆ ನೆಲಸಮ; ಎಂಟು ಮಕ್ಕಳು ದಾರುಣ ಸಾವು

IND vs SL
ಕ್ರೀಡೆ1 hour ago

IND vs SL: ದ್ವಿತೀಯ ಏಕದಿನ ಪಂದ್ಯಕ್ಕೂ ಮುನ್ನ ಲಂಕಾ ತಂಡಕ್ಕೆ ಆಘಾತ; ಸರಣಿಯಿಂದ ಹೊರಬಿದ್ದ ಸ್ಟಾರ್​ ಆಟಗಾರ

BJP-JDS Padayatra
ರಾಜಕೀಯ1 hour ago

BJP-JDS Padayatra: ರಾಜ್ಯದ ಹಣ ಲೂಟಿ ಮಾಡಿ ಗಾಂಧಿ ಕುಟುಂಬಕ್ಕೆ ಕಪ್ಪ ಕಾಣಿಕೆ: ಕಾಂಗ್ರೆಸ್‌ ವಿರುದ್ಧ ವಿಜಯೇಂದ್ರ ವಾಗ್ದಾಳಿ

Road Accident
ಬೆಂಗಳೂರು1 hour ago

Road Accident : ಇನ್ನೊಂದು ವಾರದಲ್ಲಿ ಮಗಳ ಮದುವೆ ಅಂತ ಓಡಾಡುತ್ತಿದ್ದ ಅಪ್ಪ.. ಅಪಘಾತದಲ್ಲಿ ಸಾವು

KEA
ಬೆಂಗಳೂರು2 hours ago

KEA : ವೈದ್ಯಕೀಯ ಅರ್ಹತಾ ಪಟ್ಟಿ ಪ್ರಕಟಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ; ಪದ್ಮನಾಭ ಮೆನನ್‌ಗೆ ಮೊದಲ ಸ್ಥಾನ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka rain
ಮಳೆ24 hours ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ5 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ5 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ6 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ6 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ6 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

ಟ್ರೆಂಡಿಂಗ್‌